ಒಟ್ಟು 3267 ಕಡೆಗಳಲ್ಲಿ , 121 ದಾಸರು , 2210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಠ್ಠಲನ ಪದವನಜ ತುಂಬೆ ಸೃಷ್ಟಿಯೊಳಗೆ ಎನ್ನ ಬಿಡದೆ ಪೊರೆ ಎಂಬೆ ಪ ಜ್ಞಾನ ಭಕುತಿ ವೈರಾಗ್ಯದಲಿ ಜಾಣ ದಾನ ಮಾಡುವರೊಳಗೆ ಪೂತುರೆ ನೀನೆ ನಿಪುಣ ಮಾನಸದಲಿ ಹರಿಯ ಧ್ಯಾನ ಮಾಡುವ ಆನಂದಮತಿ ವಿಮಲ ಸರ್ವವಿಧಾನ 1 ಮಾತುಮಾತಿಗೆ ನೆನೆಸಿದವರ ಭವದ ಮಾಯಾ ಸೇತುವಿಯ ಕಡಿದು ಸಂತತವಾಗಿ ಸಹಾಯಾ ಪ್ರೀತಿಯಲಿ ಬಂದು ಶ್ರೀ ಹರಿಯ ಪದ ಸೇವಿಯಾ ತಾ ತೋರಿ ತಿಳಿಸುವಾ ಪ್ರಿಯನೆನಿಸುವಾ ಪುರಂದರ ರಾಯಾ 2 ವಜ್ರ ಪಂಜರಾ ಕೂವಾದಿ ಮತಹರ ನಂಬಿದವರಾಧಾರ ಪಾವಮಾನಿಯ ಮತದಲಿಪ್ಪ ಮನೋಹರ ಶ್ರೀ ವಿಜಯನಗರ ಮಂದಿರದೊಳಗುಳ್ಳ ಶ್ರೀ ವಿಜಯವಿಠಲನ್ನ ಪೂಜಿಸುವ ಧೀರ 3
--------------
ವಿಜಯದಾಸ
ವಿತ್ತ ಅಸಾರ್ಥಕತೆಯ ತಿಳಿದು ಪುರುಷಾರ್ಥ ಪ್ರದನು ಶ್ರೀ | ಹರಿಯ ಪ್ರಾರ್ಥಿಸೋ ಪ ಮಡದಿ ಮನೆ ಮಕ್ಕಳೆಲ್ಲ | ಬಿಡದೆ ನಿನ್ನ ಸೇವಿಸೋರುಹಿಡಿಯ ತುಂಬ ಹೊನ್ನು ಹಣವು | ಬಿಡದೆ ಬರುತಿರೇ 1 ಪ್ರಾಣ ಉತ್ಕ್ರಮಣ ಸಮಯ | ಮಾನಿನೀಯು ರೋದಿಪಾಳುಪ್ರಾಣ ಪೋದ ತನುವ ಸೋಕೆ | ತಾನೆ ಒಲ್ಲಳು 2 ಮಂದ ಮಾನವ 3 ಬಿಂಬ ಚಲಿಸೆ ತಾನು ಪ್ರತಿ | ಬಿಂಬ ಚಲಿಪ ಮತಿಯೆ ನಿಜವುಉಂಬು ಕೊಂಬ ಕೊಡುವುದೆಲ್ಲ | ಬಿಂಬದೆನ್ನೆಲೋ 4 ಇಂದಿರೇಶನರ್ಚಿಸೂತ | ಇಂದೆ ಗಳಿಸೊ ಪುಣ್ಯ ದ್ರವ್ಯನಂದ ಕಂದಗರ್ಪಿಸೋದು | ದ್ವಂದ್ವ ಕರ್ಮವ 5 ತನುವು ಮನವು ನಿನ್ನದಲ್ಲ | ಗುಣದ ಕಾರ್ಯ ನಿನ್ನದಲ್ಲನಾನು ನನ್ನದೆಂಬ ಮತಿಯು | ಹೀನ ತಿಳಿಯೆಲೋ 6 ನಿತ್ಯ ಬದ್ಧ ಜೀವಿ ನೀನು | ಸತ್ಯ ಸ್ವಾತಂತ್ರ ಹರಿಯುದತ್ತ ಕರ್ತೃತ್ವವಿಹುದು | ಕೃತ್ಯ ಉಂಬಲು 7 ಹರಿಯ ರೂಪ ಹೃದಯದಲ್ಲಿ | ಪರಿಕಿಸಾದೆ ಗತಿಯು ಇಲ್ಲಕರುಣಿಸಿಹನು ಮನುಜ ದೇಹ | ಹರಿಯ ಕಾಣಲು 8 ಮಧ್ವ ಮತದಿ ಜನ್ಮವಿರಲ | ಅವಿದ್ಯೆಗಳನ ನೀಗಿಕೊಂಡುಮಧ್ವಮುನಿಯ ಕರುಣ ಪಡೆದು | ಸಿದ್ಧನಾಗೆಲೋ 9 ಕಮಲ | ಭಾವದಿಂದ ಪೂಜಿಸಾದೆಸಾವು ಹುಟ್ಟು ತಪ್ಪೊದಿಲ್ಲ | ಕೋವಿದನಾದರು10 ಅಂಶದಿಂದ ಇರುತ ತಾವು | ಹಂಸ ಮಂತ್ರ ಸರ್ವರಲ್ಲಿವಿಂಶತ್ಯೇಕ ಸಾಸಿರಾವು | ಅಂತೆ ಷಟ್ಯತ 11 ದಿನಕೆ ಇಂತು ಜಪವ ಚರಿಸಿ | ವಿನಯದಿಂದನಿರುದ್ದನೀಗೆಎಣಿಕೆ ಮಾಡಿ ಅನಿಲ ಸಹಿತ | ತಾನೆ ಅರ್ಪಿಪ 12 ಪರ್ವಕಾಲದಿದನು ತಿಳಿದು | ಶರ್ವ ವಂದ್ಯ ಶೇಷಶಾಯಿಸರ್ವ ಕಾರ್ಯಗಳನು ಲಾ | ತವ್ಯ ಗಿತ್ತಿಹ 13 ದೈತ್ಯ ಜನರು ಅರಿಯದಂತೆ | ಯುಕ್ತನಾಗಿ ಬ್ರಹ್ಮ ವಾಯುಆಪ್ತ ವಾಕ್ಯ ಮೀರದಂತೆ | ಗುಪ್ತ ಚರಿಸುವ 14 ತತ್ವಕಿದು ವಿರುದ್ಧವಲ್ಲ | ವ್ಯಕ್ತ ವಿಹುದು ಲೋಕದಲ್ಲಿಮತ್ತೆ ಕ್ಷಣಕೆ ಒಪ್ಪೆನೆಂದು | ಇತ್ತು ಸ್ಥಾನವ 15 ಗೊತ್ತು ಮಾಡಿ ಪೋಗುವಂತೆ | ಭ್ರಾತೃ ವಾದಿರಾಜರೀಗೆಇತ್ತು ಪದವಿಗಳನು ತಾವು | ಸೂಕ್ತ ಪೇಳ್ವರು 16 ಭಾರತೀಶ ಕರ್ಮ ವೀಯೆ ಗುರುಗೋವಿಂದ ವಿಠಲ ಗತಿ ಇತ್ತು | ಕಾವ ಬಿಡದಲೆ 17
--------------
ಗುರುಗೋವಿಂದವಿಠಲರು
ವಿರೋಧವ್ಯಾತಕಯ್ಯ ನಿಮಗಿದರೊಳು ಪ ಪರಂಪರದ ಸಂಪ್ರದಾಯಕೆ ನಿಮಗೆ ಅ.ಪ ಈಶ ನಾನೆಂಬುವದೊಂದು ಸರ್ವೇಶ ಹರಿಯಂಬೊದೊಂದು ಲೇಸಾಗಿ ಹೆಚ್ಚು ಕಡಮೆಗಳ ತಿಳಿಯುವದಿನ್ನೊಂದು 1 ಈ ಮೂರು ಮತಗಳಿಗೆ ಪ್ರೇಮವಾದಭಿಪ್ರಾಯಗಳು ನೇಮನೇಮವಾಗಿಟ್ಟು ಕೊಂಡಿರುತಿಹರೆಲ್ಲರು 2 ನಿಮ್ಮ ನಿಮ್ಮ ಮನಗಳಿಗೆ ಸಮ್ಮತವಾಗುವ ಪರಿ ಬ್ರಹ್ಮ ಜ್ಞಾನವೊಂದು ಸಂಪಾದಿಸಿದರೆ ಸಾಕು 3 ಸರಿಯಾದರ್ಥ ತೋರಿ ದಾರಿಯ ಕೊಡುವುದು 4 ಧೀರ ಶ್ರೀಗುರುರಾಮವಿಠ್ಠಲನೊಬ್ಬನೆ 5
--------------
ಗುರುರಾಮವಿಠಲ
ವಿಶೇಷ ಆ ಹಣ್ಣು ಈ ಹಣ್ಣು ನೆನಸಿ ಫಲವೇನೆ ಈ ಹುಣಸೇಹಣ್ಣಿಗೆ ಸಮಬಾಹೋದೇನೆ ಪ ಹಡಗಿಂದ ಬಂದಿತು ಉತ್ತತ್ತಿ ಹಣ್ಣು ಬಡವರಿಗೆ ಬೇಕಾದ ಬಾಳೆಯ ಹಣ್ಣು ಕೂತರೆ ಏಳದು ಕುಂಬಳದ್ದಲ್ಲ ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 1 ಮಕ್ಕಳು ಬಯಸುವ ಚಕ್ಕೋತ ಹಣ್ಣು ಸಕ್ಕರೆ ಸವಿಯಾದ ಅನಾಸಿನ ಹಣ್ಣು ರುಚಿ ಹಲಸಿನ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 2 ದಾಹವಡಗಿಸುವದು ದ್ರಾಕ್ಷಿಯ ಹಣ್ಣು ದೊರೆಗಳು ತಿನ್ನುವ ದಾಳಿಂಬೆ ಹಣ್ಣು ಫರಂಗಿಯರು ತಿನ್ನುವ ಪನ್ನೇರಳೆ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 3 ಅತಿಮಧುರವಾದ ಕಿತ್ತಲೆ ಹಣ್ಣು ಯತಿಗಳಿಗಾನಂದ ಸೀತಾಫಲದ್ಹಣ್ಣು ಅತಿರುಚಿಯಾದ ಅಂಜೂರದ ಹಣ್ಣು ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 4 ಮಾನವಂತರು ತಿನ್ನುವ ಮಾವಿನ ಹಣ್ಣು ಜ್ಞಾನಿಗಳಿಗೆ ರಾಮನಾಮದ ಹಣ್ಣು ದೀನಜನರು ತಿಂಬ ಮೂಸುಂಬೆ ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 5 ಅಪರೂಪದಲಿ ಬೆಳೆದ ಮಾದಳದ್ಹಣ್ಣು ಕಪಿಗಳು ತಿನ್ನುವ ಸೀಬೆಯ ಹಣ್ಣು ತಪಸ್ವಿಗಳಾಹಾರ ಜಂಬುನೇರಳೆಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 6 ಪರಿ ಔಪಧಕೆ ಹೆರಳೆಯ ಹಣ್ಣು ಮರ್ಯಾದೆಗೆ ಕೊಡುವ ನಿಂಬೆಯ ಹಣ್ಣು ಪರಮ ರೂಪಿಯಾದ ಕರಬೂಜದ್ಹಣ್ಣು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 7 ಬಡವರಿಗೂ ಈ ಹುಣಸೇ ಹಣ್ಣಿರಬೇಕು ಬಲ್ಲಿದರಿಗೂ ಹುಣಸೇ ಹಣ್ಣಿರಬೇಕು ರುಚಿ ಎಲ್ಲ ಜನರುಗಳು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 8 ಹುಣಸೇಹಣ್ಣಿಲ್ಲದೆ ಭಾಂಡ ಶುದ್ಧಿಗಳಿಲ್ಲ ಹುಣಸೇ ಇಲ್ಲದೆ ಸ್ವಯಂಪಾಕ ರುಚಿಯು ಇಲ್ಲ ಹುಣಸೇ ಮರಕ್ಕಿಂತ ಗಟ್ಟಿ ಮರಗಳಿಲ್ಲ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 9 ಹುಣಸೇಕಾಯಿಯ ಕುಟ್ಟಿ ರಸವ ಮಾಡುವರು ಹುಣಸೇಹಣ್ಣನು ಕುಟ್ಟಿ ಅಣಿಮಾಡಿಡುವರು ಹುಣಸೇಹಣ್ಣಿನ ಬೆಲೆ ಮುಗಿಲಿಗೇರಿರಲು ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 10 ಹರಿಯ ಅಪ್ಪಣೆಯಂತೆ ಹುಣಸೆಯ ಮರಹುಟ್ಟಿ ಪರರಿಗೆ ಉಪಕÀರಿಸುವದಿದು ಹರಿಯಾಜ್ಞೆ ವರದ ಶ್ರೀ ಹರಿ ಕಮಲನಾಭ ವಿಠ್ಠಲನಿಚ್ಛೆ ‌‌ಎಲ್ಲರಿಗೂ ಬೇಕಾದ ಈ ಹುಣಸೇಹಣ್ಣು 11
--------------
ನಿಡಗುರುಕಿ ಜೀವೂಬಾಯಿ
ವಿಶೇಷ ಸಂದರ್ಭ ವಾದಿರಾಜ ಗುರುಗಳನಾ ಪ ಪ್ರೀತಿ ತೋರುವವನಾ ದೂತ ವಾದಿರಾಜನಾ 1 ಸಾಲು ಬೃಂದಾವನಾ ಅನಂತೇಶ್ವರನ ಸನ್ನಿಧಾನಾ 2 ಲೋಕಜನರಿಗೆ ಪ್ರೀತ ಗುರುವರನಾ3 ಸಂಚಿತಾಗಮ ಈ ಡ್ಯಾಡಿ ಅಧಿಕ ವಾದಿರಾಜರ ನೋಡಿ4 ಜನಕೆ ಉಲ್ಲಾಸ ಮಾಡುವ ವಾದಿರಾಜರ 5 ಚಕ್ರ ಶಂಖª Àಧರಿಸಿದಾ | ನಮ್ಮರುಕ್ಮಿಣಿ ಸಹಿತ ಬಂದು ನಿಂತಿಹ ಅಮಿತ ತ್ರಿವಿಕ್ರಮದೇವನಾ6 ಬೇಡುವವರನು | ಬೆನ್ಹತ್ತಿ ಬೀಜಗಳನು ಬಿತ್ತುವರು 7 ಚವಕಿ ಮಠದಿ ದಿವ್ಯಪ್ರಸ್ತ | ಓಡಾಡಿ ಬಡಿಸುವ ಜನಗಳ ಸಿಸ್ತಾ ಯತಿಗಳ ಸಿಸ್ತಾ 8 ಜನರ ಅಲಂಕಾರ ಯತಿಗಳ ಗಂಭೀರಾ 9 ಭೂತಬಲಿಗಳ ನೋಡಿ | ನಮ್ಮ ಭೀತಿ-ಭಯಗಳನ್ನು ಬೀಸಾಡಿ ಭೂತರಾಜನ ನೋಡಿ 10 ಪೀಳಿಗೆ ಪೂಜೆ ಚಂದ ನೋಡಲು ನಂದ 11 ಮುತ ಕೆತ್ತಿಹ ಕಿರೀಟ | ಬಹು ಚಿತ್ರವಾಗಿಹಗದ್ದುಗೆ ಮಾಟ ವಾದಿರಾಜರ ದೊಡ್ಡ ಆಟಾ 12 ಈಕ್ಷಿಸಲಳವೆ ಮಠವಾ ಎನ್ನಕ್ಷಿಗಳಿಂದ ನೋಡಲು ನರಸಿಂಹ ವಿಠಲನ್ನಾ 13
--------------
ಓರಬಾಯಿ ಲಕ್ಷ್ಮೀದೇವಮ್ಮ
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವಿಶೇಷ ಸಂದರ್ಭದ ಹಾಡುಗಳು ರಂಗನತೇರಿಗೆ ಬನ್ನಿರೋ ತೆಂಗು ಹೂ ಹಣ್ಣುಗಳ ತನ್ನಿರೋ ಬಂಗಾರದ ಗಿರಿಯಪ್ಪ ಎನ್ನಿರೋ ರಂಗ ಪರ್ಸಾದವ ಕೊಳ್ಳಿರೊ 1 ತೆಂಗಿನಮರ್ದುದ್ದ ತೇರೈತೆ ಅಲ್ಲಿ ರಂಗಿನ ಬಾವುಟ ಹಾರೈತೇ ಸಿಂಗಾರದಬಟ್ಟೆಯೇರೈತೇ ಹಂಗೂ ಹಿಂಗೂ ಜನ ಸೇರೈತೇ 2 ಬಾಳೆಕಂಬಗಳನು ಕಟ್ಟವ್ರೇ ತೋಳುದ್ದ ಹೂಸರ ಬಿಟ್ಟವ್ರೇ ತಾಳಮ್ಯಾಳ್ದೋರೆಲ್ಲಾ ನಿಂತವ್ರೇ ಬಾಳತುತ್ತೂರ್ಗೋಳನೂತ್ತವ್ರೇ 3 ತೇರಿನ ಗದ್ದುಗೆ ಬಂಗಾರ ತೋರಗಲ್ದಪ್ಪ ಅಲಂಕಾರ ಹಾರುವರ ಬಾಯಲ್ಲಿ ಓಂಕಾರ ರಂಗಪ್ಪಗಾಗೈತೆ ಸಿಂಗಾರ 4 ಭಟ್ಟರು ಮಂತ್ರವ ಹೇಳ್ತವ್ರೆ ಕಟ್ಟುನಿಟ್ಟಾಗಿ ನಿಂತವ್ರೇ ಬಟ್ಟಂದ ಹೂಗೊಳ ಹಾಕ್ತವ್ರೇ ಸಿಟ್ಟಿಲ್ಲದೆ ರಂಗ ನಗತವ್ನೇ 5 ಇಂಬಾಗಿ ಹೂರ್ಜಿಯ ಹಿಡಿದವ್ರೆ ದೊಂಬರೆಲ್ಲ ಕುಣಿತವ್ರೆ ಹಿಂಬದಿಯಲಿ ತೇರ ನಡೆಸವ್ರೇ 6 ಹಣ್ಣು ಜನ್ನವ ತೇರಿಗೆಸಿತಾರೆ ತಣ್ಣನೆ ಪಾನಕ ಕೊಡುತಾರೆ ಸಣ್ಣೋರೆಲ್ಲ ಕೈಮುಗಿತಾರೆ, ಹಣ್ಣು ಕಾಯ್ಗಳ ಗಾಲಿಗಿಡುತಾರೆ7 ತಕ್ಕೋ ಹಣ್ಕಾಯ ಎಂಬೋರು ಕೆಲವರು ನಕ್ಕು ಕುಣಿಯುವರೆಲ್ಲ ನೂರಾರು ಜನರು 8 ರಂಗಪ್ಪನ ತೆಪ್ಪ ತೇಲುತಿವೆ ಸಂಗೀತ ವಾದ್ಯ ಕೇಳುತಿವೆ ರಂಗುವiತಾಪು ಹೊಳೆಯುತಿವೆ ಮಂಗಳಾರತಿ ದೀಪ ಕಾಣುತಿವೆ 9 ಜೋಮಾಲೆ ಸರಗಳು ಹೊಳೆಯುತಿವೆ ನಾಮ ಮಂತ್ರಗಳೆಲ್ಲ ಮೊಳಗುತಿವೆ 10 ರಂಗಿನದೀಪ ಉರಿಯುವುದಣ್ಣ ಮಾಂಗಿರಿರಂಗನೆ ಬಲುಸೊಗಸಣ್ಣ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಶ್ವಧಾರನೋ ಶ್ರೀಶ ವಿಶ್ವಕಾರನೋ ವಿಶ್ವ ವಿಶ್ವಭರಿತ ವಿಶ್ವರಕ್ಷ ವಿಶ್ವಚರಿತ ಪ ನಾದಭರಿತನೋ ಹರಿ ನಾದಾತೀತನೋ ವೇದಾಧರನೋ ರಂಗ ವೇದ ಗೋಚರನೋ ವೇದವೇದಾಂತ ಸ್ವಾದ ನಿಖಿಲ ಬೋಧರೂಪ ಭೇದರಹಿತ ಆದಿ ಅನಾದಿದಾತ ಸತತ ಸಾಧುಸಜ್ಜನವಿನುತ ಅಮಿತ1 ದೇವದೇವನೋ ಸ್ವಾಮಿ ದಿವ್ಯಚರಿತನೋ ಕಾವ ಕರುಣನೋ ಭಕ್ತಿ ಭಾವಪೂರ್ಣನೋ ಸಾವುಹುಟ್ಟು ಭಯವಿದೂರ ಮಾಯಗೆಲಿದ ಮಹಪ್ರಕಾಶ ಭಾವಜಜನಕ ಭವಭಂಗ ಸೇವಕಜನರ ಜೀವದಾಪ್ತ 2 ದೋಷನಾಶನೋ ಕೃಷ್ಣ ಮೀಸಲಾತ್ಮನೋ ಭಾಸುರಂಗನೋ ಜಗದೀಶ ಗಮ್ಯನೋ ವಾಸುಕಿಶಯನ ವಾಸುದೇವ ಸಾಸಿರನಾಮದೊಡೆಯ ಇಂದಿ ರೇಶ ಗೋವಿಂದ ಪೋಷಿಸೆನ್ನ ಶ್ರೀಶ ಶ್ರೀರಾಮದಾಸಪ್ರಿಯ 3
--------------
ರಾಮದಾಸರು
ವಿಶ್ವೇಶ ವೆಂಕಟೇಶ_ ವಿಶ್ವಾದಿ ಪರರೂಪಿ ಶ್ರೀ ವಿಷ್ಣು ಪರಬ್ರಹ್ಮ_ನಮೋ ನಮೋ ಪ ವಿಶ್ವಾತ್ಮ ಶ್ರೀಗುರು _ ವಿಶ್ವಾನ್ನ ಅನ್ನದ ವಿಶ್ವಸ್ಥ ಶ್ರೀ ಕೃಷ್ಣ _ ನಮೋ ನಮೋ ಅ.ಪ ಕೇಶವಾ ಮಾಧವಾ _ ಗೋವಿಂದ ಅಚ್ಯುತ ವಾಸುದೇವಾನಂತ _ ನಾರಾಯಣಾ1 ಗೋಧರಾ ಶ್ರೀಕರಾ _ ಶ್ರೀಮತ್ಸ್ಯ ಕಚ್ಛಪ ಶುದ್ಧಾನಂದಾತ್ಮಕ _ ನಾರಸಿಂಹ 2 ಶ್ರೀಧರಾ ವಾಮನಾ _ ಪ್ರದುಮ್ನ ಹೃಷಿಕೇಶ ಆದ್ಯಂತ ವರ್ಜಿತ _ ತ್ರಿವಿಕ್ರಮಾ 3 ಭಾರ್ಗವಾ ರಾಘವಾ _ ಶ್ರೀ ಕೃಷ್ಣ ಉಪೇಂದ್ರ ಯೋಗೇಶ ಬುದ್ಧಕಲ್ಕಿ ಜನಾರ್ದನ 4 ಪದ್ಮನಾಭ ಪದ್ಮೇಶ ಅನಿರುಧ್ಧ _ ಸಂಕರ್ಷಣ 5 ದಾಮೋದರಾ ದತ್ತ _ ಕಪಿಲ ಶಿಂಶುಮಾರ ಅಧೋಕ್ಷಜ _ ಸೀಮಾಶೂನ್ಯ 6 ಶ್ರೀ ವಿಷ್ಣುಹರಿಯಜ್ಞ _ ಧನ್ವಂತ್ರಿ ಮಹಿದಾಸ ಶ್ರೀ ವಂದ್ಯ “ಕೃಷ್ಣವಿಠಲ” ಪಾರಾಶರ7
--------------
ಕೃಷ್ಣವಿಠಲದಾಸರು
ವಿಷ್ಣು ಮೂರ್ತಿಯೆ ಪಾಹಿ ಭುಕ್ತಿಪುರೇಶ ಜಿಷ್ಣು ನಂದನಸೂತ ವೃಷ್ಟಿಕುಲೇಶ ಪ ಮೃಷ್ಟಾನ್ನ ಭೋಜನವಿತ್ತ ಸಜ್ಜನರಿಗೆ ಕಷ್ಟವ ಪರಿಹರಿಸೀಷ್ಟವ ಕೊಡುವಿ | ಇಷ್ಟವ ಕೊಡದೇನೆ ದೂರ ಕೂಡಿಸುವಿ 1 ಭಕ್ತರಭೀಷ್ಟವ ಪೂರ್ತಿಗೊಳಿಸುವಿ | ಶಕ್ತ ಅಶಕ್ತನು ಎಂಬ ಭೇದಗಳಿಲ್ಲ ಭಕ್ತನೆಂದರೆ ಸಾಕು ಪಾಲಿಸುತಿರುವಿ 2 ಬಾಲಕನಾದರು ಕೊಟ್ಟ ನೈವೇದ್ಯವ ಬಾಲಕ ಪಿತ ಬಂದು ಪಾತ್ರವ ಕೇಳಲು ಜಲದೊಳಗುಂಟೆಂದು ಸ್ವಪ್ನದಿ ನುಡಿದಿ 3 ಬೇಸಿದ ಮಾವಿನ ಫಲದೊಳು ಪ್ರೇಮವೊ ಬಾಲನ ನುಡಿಯೊಳಗಾಯ್ತೇನೊ ಪ್ರೇಮ | ದಾಸರೊಳ್ನಿನಗಿಪ್ಪ ಪ್ರೇಮವ ಜಗಕೆಲ್ಲ ಬಾಲನಿಂದಲಿ ತೋರ್ದೆ ವಿಷ್ಣುಮೂರುತಿಯೆ 4 ರಾಜೇಶ ಹಯಮುಖಕಿಂಕರಾಗ್ರಣಿ ವಾದಿ- ರಾಜರಾಯರಿಗಿಷ್ಟವಿತ್ತು ಪಾಲಿಸಿದಿ | ಇಷ್ಟದ ಶಿಶುಗಳು ಬೇಡದಿದ್ದರು ಮಾತೆ ಇಷ್ಟವಿತ್ತಂತೆ ನೀ ಪೊರೆಯುವೆ ದೊರೆಯೆ 5
--------------
ವಿಶ್ವೇಂದ್ರತೀರ್ಥ
ವಿಷ್ಣುವೆಂಬುದು ಕೊಂಡಾಡಿ ಧ್ರುವ ಜಿಹ್ವೆಗೊಂಡಿತು ಸುಸ್ವಾದ ದಿವ್ಯನಾಮ ಸುರಸ್ವಾದ ಭವನಾಶಗೈಸಿತು ಗುರುಬೋಧ ಸವಿದೋರಿತು ಗುರುಪ್ರಸಾದ 1 ಸ್ವಾನುಭವದ ಸವಿಸುಖ ಏನೆಂದ್ಹೇಳಲಿ ಕೌತುಕ ಮನಕಾಯಿತು ಹರುಷ ಅನೇಕ ಧನ್ಯ ಧನ್ಯಗೈಯಿತು ಜಿಹ್ವೆಮುಖ 2 ಸುಸ್ಮರಣಿಯ ಮಾಡಿ ನಿತ್ಯ ಮಾಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ
ವೃಂದಾವನಕೈತಂದನು ಆ-ನಂದದಿಂ ಕ್ಷೀರಾಬ್ಧಿಯಿಂದ ಶ್ರೀಕೃಷ್ಣನು ಪ ತೆತ್ತೀಸರೂಪಿ ದೇವತೆಗಳೋಲೈಸಲುಮುತ್ತಿನ ಚಾಮರಗಳನಿಕ್ಕಲುಮುತ್ತೈದೆಯರೆಲ್ಲಾ ಧವಳವ ಪಾಡಲುಅರ್ಥಿಯಿಂದಿಂದಿರೆ ಸಹಿತ ಶ್ರೀಕೃಷ್ಣನು 1 ದ್ವಾರಾವತಿಯಿದ್ದು ಕ್ಷೀರಸಾಗರವಿದ್ದುಸಾರತರ ಶ್ವೇತದ್ವೀಪವಿರ್ದುಶ್ರೀ ವೃಂದಾವನ ಸುಖಮಂದಿರವೆನುತಲಿಕ್ಷೀರಸಾಗರವಾಸಿಯಾದ ಶ್ರೀಕೃಷ್ಣನು 2 ನಂದಗೋಕುಲವಿದ್ದು ಮಂದರಗಿರಿಯಿದ್ದುಚಂದವಾದ ವೈಕುಂಠಲೋಕವಿದ್ದುವೃಂದಾವನಪತಿಸುಖ ಗೃಹವೆನುತಲಿಇಂದಿರಾದೇವಿಯಿಂ ಸಹಿತ ಶ್ರೀಕೃಷ್ಣನು3 ಸುರದುಂದುಭಿ ದಂಧಣರೆಂದು ಮೊಳಗಲುಸುರರು ಹೂವಿನ ಮಳೆಯನು ಕರೆಯತರುಣ ತುಲಸಿಮಾಲೆಯಲುಗಲಿಂದಿರೆ ಸಹಗರುಡನ ಹೆಗಲಿನಿಂದಿಳಿದು ಶ್ರೀಕೃಷ್ಣನು4 ಉರದ ಕೌಸ್ತುಭರತ್ನ ಥಳಥಳಥಳಿಸಲುಕೊರಳ ವೈಜಯಂತಿಯ ಸರವಲುಗೆಸರಸಿಜ ಭವಮುಖ್ಯ ಸುರರೋಲೈಸಲುಪರಮ ಸಂಭ್ರಮದಿಂದ ಶ್ರೀಕೃಷ್ಣರಾಯನು5
--------------
ಕೆಳದಿ ವೆಂಕಣ್ಣ ಕವಿ
ವೃಂದಾವನದ ಸೇವೆಯ ಪ. ವೃಂದಾವನದ ಸೇವೆಮಾಡಿದವರಿಗೆ ಭೂ-ಬಂಧನ ಬಿಡುಗಡೆಯಾಗುವುದು ಅ.ಪ. ಕರವ ಮುಗಿದು ಬೇಗೀ-ರೇಳು ಲೋಕದ ಮಾತೆಗೆ ನಮೋಯೆಂಬೋದಲ್ಲದೆಏಳು ಪರದಕ್ಷಿಣೆಯನು ಮಾಡಿದವರಿಗೆಏಳು ಜನಮದ ಪಾಪ ಹಿಂಗುವುದು1 ಸಾರಿಸಿ ರಂಗವಲ್ಲಿಯನಿಟ್ಟು ಮೇಲೆ ಪ-ನ್ನೀರನೆರೆದು ಪ್ರತಿದಿವಸದಲ್ಲಿಸಾರಿ ಸೇವೆಯ ಮಾಡಿದವರಿಗೊಲಿದು ಮುನ್ನಸೇರಿಸುವಳು ತನ್ನ ಪದವಿಯನು 2 ಒಡೆಯನ ಮನೆಗೆ ನೀರುತರುತಲೊಬ್ಬಳುಎಡಹಿ ಬಿದ್ದಳು ತನ್ನ ಕೊಡನೊಡೆಯೆಸಿಡಿದು ಶ್ರೀತುಳಸಿಗೆ ತಂಪಾಗಲು ಮುನ್ನಕೊಡಳೆ ಅವಳಿಗೆ ಮೋಕ್ಷಪದವಿಯನು 3 ಕೇಶವ ಎಂಬ ಭೂಸುರಗೆ ಶುಕಯೋಗಿ ಉಪ-ದೇಶಿಸಿದನು ತನ್ನ ಭಾಗವತದಲ್ಲಿಕಾಸುವೀಸ ಹೊನ್ನು ಹಣ ಸವೆಯದಾಮುನ್ನ ನಿ-ರಾಶೆಯಿಂದಲಿ ಮುಕ್ತಿ ದೊರಕುವುದು 4 ಪೊಡವಿಗಧಿಕವಾದ ಸೋದೆ ಪುರದ ತ್ರಿವಿಕ್ರಮಎಡಭಾಗದಲಿ ಲಕ್ಷ್ಮಿದೇವಿಯ ಸಹಿತಸಡಗರದಿಂದಲಿ ಹಯವದನನ ಪಾದಬಿಡದೆ ಪೂಜಿಸಿ ಭಕ್ತಿ ಪಡೆಯಿರಯ್ಯ 5
--------------
ವಾದಿರಾಜ
ವೃಂದಾವನವ ನೋಡಿರೊ - ನೀವೆಲ್ಲಾನಂದವನ್ನೇ ಪೊಂದಿರೊ ಪ ರಾಮಾಚಾರ್ಯರ ಪುತ್ರರೊ - ಅವರುಮಾಮನೋಹರ ನೃಹರಿ ದಾತರೋ |ಜನ್ಮ ಅಷ್ಟಕೆ ಬ್ರಹ್ಮಚರ್ಯ - ಪೊಂದಿಬ್ರಹ್ಮ ವಿದ್ಯೆಯ ಪಡೆದರೋ |ಧೃತ - ಪ್ರೇಮದಿಂದಲಿ ಬಂದು ತಾವ್ ಪುರುಷೋತ್ಮ ತೀರ್ಥರ ಸಾರ್ದರಾ 1 ಕಾಯಜ ಪಿತನ ತಾನ್ವಲಿಸೀ - ದೇಶಂಗಳಪ್ರೀಯದಿಂದಲಿ ಸಂಚರಿಸೀ |ಮಾಯಾರಮಣನು ಜೀವನೂ - ಒಂದೆಂಬಮಾಯಾವಾದೀಗಳ ತರಿದೂ |ಧೃತ - ವಾಯುಮತ ಪ್ರೀತಿಯಲಿ ಅರುಹುತಪ್ರೀಯ ಅಬ್ಬೂರಲ್ಲಿ ನೆಲೆಸಿದ 2 ವಿಠಲ ನೃಹರಿ ಪೂಜೆಗೇ - ನೇಮಿಸಿತಮ್ಮಪಟ್ಟ ಶಿಷ್ಯರು ವ್ಯಾಸತೀರ್ಥರ |ಅಟ್ಟ ಹಾಸದಿ ಸರ್ವಜಿತೂ - ಸಂವತ್ಸರಕೃಷ್ಣೈಕಾದಶಿ ವೈಶಾಖ |ದಿಟ್ಟ ಗುರುಗೋವಿಂದ ವಿಠಲನದೃಷ್ಟಿಸೀ ತನು ಬಿಟ್ಟು ಪೊರಟನ 3
--------------
ಗುರುಗೋವಿಂದವಿಠಲರು