ಒಟ್ಟು 4671 ಕಡೆಗಳಲ್ಲಿ , 110 ದಾಸರು , 2562 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾವವೇ ಕಾರಣವೊ ಭವಕೆ ದೇವ ಪ ಭಾವಜಾಪಿತ ನಿನ್ನ ಭಾವ ಬಿಡದವ ಧನ್ಯ ಅ.ಪ. ಭಾವಸೂತ್ರದಿ ಸಿಕ್ಕ ಬರಿ ಬೊಂಬೆ ಜಗವಯ್ಯ ಭಾವಧಾರಕ ನೀನು ಎನ್ನಿಂದಲೇನಹುದೊ 1 ಎಂತು ನೀ ಕುಣಿಸಿದರೆ ಅಂತು ಕುಣಿವುದೊ ಜಗವು ತಂತ್ರ ನಿನ್ನದು ದೇವ ಜಾವ ಜಾವದಿ ಭ್ರಾಂತಿ ರೋಗವ ನೀಗಿ ಶಾಂತಿ ಪಾಲಿಸು ಹರಿಯೆ ಸ್ವಾಂತರದಿ ಸಂತತ ದರುಶನವ ಕೊಟ್ಟೆನಗೆ 2 ವಿಷಯ ಸಂಗವ ಬಿಡಿಸು ಹೃಷಿಕೇಶ ಮೃಡಮಿತ್ರ ವಿಷಮಗತಿ ಪರಿಹರಿಸು ಪ್ರಾಣಮನದ ವೃಷಭಾದ್ರಿಪಸಖ ಜಯೇಶವಿಠಲನೆ ಕರುಣಾಬ್ಧಿ ವೃಷ್ಟಿ ಮದ್ಬಿಂಬಗಿದು ವಿಹಿತ 3
--------------
ಜಯೇಶವಿಠಲ
ಭಾವೀ ಸಮೀರ ಶ್ರೀವಾದಿರಾಜರು ಕಾಯ ಕಾಯ ಬೇಕಯ್ಯ ಪ ಕಾಯ ಬೇಕೈ | ವಿಪ ಅಹಿಪ ಸುರಪಾದಿ ವಂದ್ಯವೆ |ವಿಪುಲ ಪಾಪಾಳಿಗಳ ಹರಿಸೀ | ಸುಪಥ ಸದ್ಗತಿಗೆನ್ನ ಒಯ್ದು ಅ.ಪ. ಗೌರಿದೇವಿಯ ಉದರಸಂಭವನೆ | ಹಯಾಸ್ಯನಂಘ್ರಿಸರಸಿರುಹದಲಿ ಮಧುಪ ನೆನಿಸಿದನೆ ||ದ್ವಾರಕಾದಿ ಕ್ಷೇತ್ರ ಚರಿಸುತ | ಥೋರ ಹಿಮಗಿರಿ ಸೇತುಯಾತ್ರೆಯಸಾರಿ ಸತ್ತೀರ್ಥ ಪ್ರಬಂಧವ | ಧೀರ ನೀ ರಚಿಸುತ್ತ ಮೆರೆದೆಯೊ 1 ಲಕ್ಷಿಸುತ್ತಲಿ ಮಾತೆ ಬಿನ್ನಪವ | ಮಹ ಭಾರತಸ್ಥಲಕ್ಷಪದ ಬಹು ಕ್ಲಿಷ್ಟವೆನಿಸೂವ ||ಲಕ್ಷಣದಿ ಸದ್ಯುಕ್ತ ಪದಗಳ | ಈಕ್ಷಿಸುತ ಅವಕರ್ಥ ಪೇಳುತಲಕ್ಷಸದ್ದಾಭರಣ ಮಾಲಿಕೆ | ಲಕ್ಷ್ಮಿಪತಿ ಹಯಾಸ್ಯಗರ್ಪಿತ 2 ಸೇವಿಸುತ್ತಿಹ ವಿಪ್ರನಾದವನ | ಕೌಟಿಲ್ಯ ಕಂಡುತೀವ್ರದಿಂದಲಿ ಶಾಪವಿತ್ತವನ ||ಭಾವ ತಿಳಿದು ಬೊಮ್ಮರಾಕ್ಷಸ | ಭಾವತಾಳೆಂದೆನುತ ಪೇಳಲುತೀವ್ರ ಯಾಚಿಸೆ ಕ್ಷಮೆಯ ಮಂತ್ರವ | ಆವ ಆಕಾಮ್ಮೈವ ನೊರೆದೆ 3 ಮರಳಿ ಉತ್ತರ ಯಾತ್ರೆಯಲ್ಲಿರಲು | ಗುರು ವಾದಿರಾಜರಅರಿಯದಲೆ ತನ್ಮಂತ್ರ ಪೇಳಲು ||ಒರೆದರೂ ರಂಡೇಯ ಮಗ ನೀ | ನಿರುತಿರುವೆನ ಸ್ನಾತ ಕಾರ್ತಿಕಮರಳಿ ಮಾಘಾಷಾಢ ವಿಶಿಖದಿ | ಹರಿಯಿತೂ ನಿನ ಶಾಪವೆಂದರು 4 ಆತುಗುರುಪದ ಕ್ಷಮೆಯ ಪ್ರಾರ್ಥಿಸಲು | ಗುರುರಾಜರಾಗಭೂತ ರಾಜನು ನೀನೆ ಎನ್ನುತಲು ||ಖ್ಯಾತಿ ಪೊಂದುತ ಭಾವಿರುದ್ರನೆ | ಪೊತ್ತು ಎನ್ನಯ ಮೇನೆ ಮುಂಗಡೆಕೌತುಕವ ತೋರುತ್ತ ಮೆರೆವುದು | ಪೋತ ಭಾವದಿ ತಮಗೆ ಎಂದರು 5 ಕಾಕು ಶೈವನ ಖಂಡಿಸುತ್ತಲಿಆಕೆವಾಳರ ಪೊರೆದು ದಶಮತಿ | ತೋಕನೆಂದೆನಿಸುತ್ತ ಮೆರೆದೇ 6 ಭೂವಲಯದೊಳು ಕಾರ್ಯ ಪೂರೈಸಿ | ಬದರಿಯಿಂದಲಿಭಾವಿ ಶಿವನಿಂ ಪ್ರತಿಮೆ ರಥತರಿಸೀ ||ದೇವ ಗೃಹ ಸಹ ವಿರುವ ವಿಗ್ರಹ | ತ್ರೈವಿಕ್ರಮನ ಸಂಸ್ಥಾಪಿಸುತ್ತಭಾವ ಭಕ್ತಿಯಲಿಂದ ಉತ್ಸವ | ತೀವರದಿ ರಚಿಸುತ್ತ ಮೆರೆದೆ 7 ಹಂಚಿಕಿಂದಲಿ ಪೂರ್ವರಚಿತೆನ್ನ | ವೃಂದಾವನಂಗಳುಪಂಚ ಸಂಖ್ಯೆಯಲಿಂದ ಮೆರೆವನ್ನೆ ||ಮುಂಚೆಯೇ ಸ್ಥಾಪಿತವು ಎನ್ನುವ | ಪಂಚರೂಪೀ ವ್ಯಾಸ ಸಮ್ಮುಖಸಂಚುಗೊಳಿಸೀ ಸ್ಥಾಪಿಸುತ್ತ | ಕೊಂಚವಲ್ಲದ ಕಾರ್ಯ ರಚಿಸಿದೆ 8 ಯುಕ್ತಿಮಲ್ಲಿಕೆ ರುಕ್ಮೀಣೀಶ ಜಯ | ಗುರ್ವರ್ಥ ದೀಪಿಕೆಮತ್ತೆ ಪರಿಪರಿ ಶಾಸ್ತ್ರ ಗ್ರಂಥಗಳ ||ವಿಸ್ತರಿಸಿ ಭುವನದಲಿ ಮೆರೆದೆ | ಉತ್ತಮೋತ್ತಮ ದೇವ ದೇವನುಕರ್ತೃ ಶ್ರೀಹಯ ಮುಖನು ಎನ್ನುತ | ವತ್ತಿ ಪೇಳುತ ವ್ಯಾಪ್ತಿಸಾರಿದೆ 9 ಶಿಷ್ಟ ಜನ ಸಂಸೇವ್ಯ ಧೀವರನೆ | ಶಮದಮಾನ್ವಿತಕಷ್ಟಹರ ಕಾರುಣ್ಯ ಸಾಗರನೇ ||ಕುಷ್ಟ ಅಪಸ್ಮಾರ ರೋಗದ | ಅಟ್ಟುಳಿಯ ಕಳೆಯುತ್ತ ಮೃತ್ತಿಕೆಸುಷ್ಠುಸೇವನೆಯಿಂದ ಭಕ್ತರ | ಇಷ್ಟವನೆ ಸಲಿಸುತ್ತ ಮೆರೆವೆ 10 ಹಯಾಸ್ಯ ವಾಹನ | ಬಿಡದೆ ಏರುತ ಸಾರ್ದೆ ಹರಿಯನು 11
--------------
ಗುರುಗೋವಿಂದವಿಠಲರು
ಭಿಕ್ಷವ್ಯಾತಕ್ಕೊ ಫಾಲಾಕ್ಷ ನಿನಗೆ ಪ ಲಕ್ಷುಮೀಪತಿಯಂಥ ಸಖನಿದ್ದ ಬಳಿಕ ಅ.ಪ. ರಜತಾದ್ರಿ ಅರಮನೆಯು ಹೇಮನಿಗಿಯೇ ಧನುವುಗಜಗಮನ ಸುರನಿಕರ ಪರಿವಾರವು |ಭುಜಗೇಂದ್ರ ಭೂಷಣ ನಿಜರಾಣಿ ಅನ್ನಪೂರ್ಣೇಗಜಮುಖನು ಕುಮಾರ ಗಂಡುಮಕ್ಕಳು ಇರಲು 1 ಬೇಡುವುದ ಬಿಟ್ಟು ನಿನ್ನೆತ್ತು ಯಮನಿಗೆ ಕೊಟ್ಟುಮಾಡಬಾರದೆ ಮುಯ್ಯ ಅವನ ಕೋಣ |ಜೋಡು ಮಾಡಿಕೊಂಡು ಬಾತಿ ಮುಟ್ಟು ತ್ರಿಶೂಲಬೇಡಿದ್ದು ಬೆಳೆಯದೆ ಬರಿದೆ ಧಾವತಿಗೊಂಬಿ 2 ರೊಕ್ಕ ರೂಪಾಯಿಗಳು ಬೇಕೆಂಬಿಯ ಸಾಲತಕ್ಕೊಬಾರದೆ ಗೆಳೆಯ ಧನಪನಲ್ಲಿ |ಶುಕ್ರ ಒಕ್ಕಣ್ಣ ಮೋಹನ ವಿಠಲ ಇಕ್ಕಣ್ಣಮುಕ್ಕಣ್ಣ ನೀನಾಗಿ ಮುಂಜಿ ಮಂತ್ರವ ಪಿಡಿದಿ 3
--------------
ಮೋಹನದಾಸರು
ಭಿಕ್ಷಾವ ನೀಡ್ವುದು ತಾಕ್ರ್ಯನ ಮಾತೇ | ಹರಿ ಭಕುತಿ ಎಂಬಭಿಕ್ಷಾವ ನೀಡ್ವುದು ತಾಕ್ರ್ಯನ ಮಾತೇ ಪ ತ್ರ್ಯಕ್ಷಸು ಸನ್ನುತೆ | ಮೋಕ್ಷದ ಶ್ರೀಹರಿಶಿಕ್ಷಿಸುಭಕುತಿಯ | ಪಕ್ಷಿಯ ಮಾತೇ ಅ.ಪ. ಪತಿ ಸಿರಿ | ವಸುದೇವ ಸುತನನಯಶವ ನುಡಿ ಪದ | ಬಿಸಜದಿ ಭಕುತಿಯ 1 ಮೂರ್ತಿ | ಕೇಳ್ವುದು ಶರಣಾರ್ತಿಮಾನಾಭಿಮಾನ ನಿನ್ನದು ಗಾಯತ್ರಿ | ನರಹರಿ ಗುರು ಭಕ್ತಿ ||ಕ್ಷೋಣಿಯೊಳಗೆ ಸ | ತ್ತ್ರಾಣಿ ಭಾರತಿಯೆಮಾಣದೆನಗೆ ಜಗ | ತ್ರಾಣನ ಭಕುತಿಯ 2 ಸತಿ ಕಾಳೀ||ಸಾರತ ಮನು ಗುರು | ಗೋವಿಂದ ವಿಠಲನಚಾರು ಚರಣ ಸ | ದ್ಭಕುತಿಯು ಎಂಬ 3
--------------
ಗುರುಗೋವಿಂದವಿಠಲರು
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭುವನ ತ್ರಾಣ ಸದ್ಭವ ಪ್ರವೀಣ ಪ ಶ್ಲೋಕ : ಹೀನಾಹೀನ ವಿವೇಕವಿಲ್ಲದೆಸೆವಾ | ನಾನಾ ವಿಧ ಪ್ರಾಣಿ ಭ | ಜ್ಞಾನಾ ಜ್ಞಾನ ತ್ರಿಕಾಖಿಳ ಕ್ರಿಯೆಗಳು | ಹೇ ನಾಥ ನಿನ್ನಿಂದಲಿ || ನಾನಾ ರೂಪ ವಿಶಿಷ್ಟನಾದಿ ರಿಪುಸ್ಸೇನೇಯ ಸಂಹರಿಸಿದೆ1 ಪದ: ಏನ ಹೇಳಲಿ ನಿಜ ಸಂಶಯ ಜನರಾಸೆಯ | ಉದ್ಧರಿಸುವ ಬಗೆಯಾ ಜ್ಞಾನ ಭಕುತಿ ವಿರಕ್ತಿಯಾ | ಕೋಟಿ ಮುಕ್ತಿಯಾ | ನೀ ಕೊಡುವಿ ಕಾಣಯ್ಯಾ | ಶ್ರೀ ನಾರಸಿಂಹನ ಪದಾಶ್ರಯಾ ಗುಣ ಸಂಚಯ | ಮಾಡೊ ಎನ್ನಲ್ಲಿ ದಯಾ | ಮಾಡಿದೆನಯ್ಯಾ | ಮುಂದೇನೋ ಉಪಾಯ 2 ಶ್ಲೋಕ: ನೀನೊಬ್ಬಾನಲ್ಲದಾವ ದೇವತೆಗಳು | ದಾವಂಗೆ ಬಿಟ್ಟೀರ್ವರು | ಜೀವಾತ್ಮಗೆ ಪೇಳ್ವಿರೊ || ಶ್ರೀ ವತ್ಯಾಂಕÀನ ಆಜ್ಞೆಯಿಂದ ತನು ಬಿಟ್ಟಾವ್ಯಾಳಿಗೆ ಪೋಪಿಯೋ | ಪದ: ಕಂಸಾರಿ ಚರಣವ ಭಜಿಸದೆ | ನಿನ್ನ ನೆನೆಯದೇ | ನಾ ಭ್ರಮಿಸಿದೆ ಬುದ್ಧಿಸಾಲದೇ || ಬಹು ಪಾಮರನಾದೆ | ಸಂಶಯ ಬಿಟ್ಟಿನ್ನು ತಪ್ಪದೇ | ನಿನ್ನ ನಂಬಿದೆ | ಇನ್ನು ಬಿಡುವುದು ಚಂದೇ | ಸಂಸಾರದಲ್ಲಿ ಪದೇ ಪದೇ ದುಃಖಪಡಿಸದೆ | ಉದ್ಧರಿಸೆನ್ನ ತಂದೆ 2 ಶ್ಲೋಕ : ಶ್ರೀಶ ಪ್ರೀತಿಗೆ ಕೀಶನಾದೆ ರವಿಯ | ಗ್ರಾಸಕ್ಕೆ ಬೆನ್ನಟ್ಟಿದೆ | ಈಶಾಧೀಶರು ಆತಗಾಗಿ ನಿನಗೆ | ಕಾಶರಭವನ್ಹಾಕಲು || ಲೇಶಾಯಾಸವು ಆಗಲಿಲ್ಲ ನಿನಗೆ ಶ್ವಾಸಾ ಬಿಡದಾಯಿತೋ | ಆಶಾಪಾಶ ಸಮಸ್ತ ಮೂರುಜಗಕೇ | ಆ ಶಕ್ತಿ ಅತ್ಯದ್ಭುತ 3 ಪದ: ವನಧಿ ಲಂಕಾಪುರವ ನೈದಿದೀ|| ಅಂಜದೆ ಸೀತೆಯಾ ನೋಡಿದಿ | ಮಾತನಾಡಿದಿ | ಚೂಡಾರತ್ನವ ಪಿಡಿದಿ | ಬಂಧಿಸಿ ಮನವ ಸಂಚರಿಸಿದಿ | ಆರ್ಭಟಿಸಿ | ರಕ್ಕಸರ ಸೀಳಿದಿ 3 ಶ್ಲೋಕ : ಕನ್ಯಾ ದೇಶನ ಕಂಡು ಅವನ ಪುರವ | ಹವ್ಯಾದಗೆ ಅರ್ಪಿಸೀ | ಅವ್ಯಾಷ್ಟಾಯೆಂದ ವಿಭೀಷಣಾಲಯವನು | ಅವ್ಯಸ್ತ ನಿರೀಕ್ಷಿಸಿ || ರಘುರಾಮರ ದಿವ್ಯಾಂಘ್ರಿಗೇ ವೊಂದಿಸೀ ಸೇವ್ಯ ನಿಜ ಕೃತ್ಯ ಅರ್ಪಿಸಿದೆಯೊ | ಅವ್ಯಾಜ ಭಕ್ತಾಗ್ರಣೇ 4 ಪದ: ಯೋಗ್ಯವ | ಬದಲು ಕಾಣದೆ ದೇವಾ ಸದ್ಭಾವ | ನೋಡಿ | ಗಂಧಮಾದನವ | ಭವ | ಮೊರೆ ಐದಿವರವ 4 ಶ್ಲೋಕ : ಸಂತುಷ್ಟನಾಗಿ ಸ್ವಯಂ | ನಿಂತ್ಹಾಂಗೆ ನೀ ಹುಟ್ಟಿದಿ | ಸಂತಾಪಪ್ರದನಾಗಿ ದುಷ್ಟ ಮಣಿನ್ಮುಂತಾದ ದೈತ್ಯಾಘಕೇ | ಪದ: ಭೀಮಾಸೇನನೆಂಬುವರು | ಧೃತರಾಷ್ಟ್ರನ್ನ ಸುತರು | ಭೀಮನ್ನ ಕೊಲ್ಲಬೇಕೆಂಬೋರು | ವಿಷವನಿತ್ತರು || ಸರ್ಪಗಳ ಕಚ್ಚಿಸಿದರು | ಕ್ಷೇಮವಾಯಿತು ಏನಾದರು | ಸುರತರು | ಮೋಕ್ಷ ಮಾರ್ಗವ ತೋರು 5 ಶ್ಲೋಕ : ಋಕ್ಷ ಕೇಸರಿ ಮಹಾ | ವೃಕ್ಷಾದಿ ಸಂಹಾರಕಾ | ಲಾಕ್ಷಾಗಾರವು ಬಿಟ್ಟು ನಿನ್ನವರ ನಾ | ಸುಕ್ಷೇಮದಿಂದೈದಿಸಿ | ಭಿಕ್ಷಾರ್ಥಾವಿನಿಯುಕ್ತನಾಗಿ ಬಕನಾ | ಲಕ್ಷಿಲ್ಲದೇ ಕುಟ್ಟಿದೀ | ಸಾಕ್ಷೀ ಮೂರುತಿ ಚಿತ್ರವೇ ನಿನಗದಧ್ಯಕ್ಷಗ್ರ ಸರ್ವೇಶಗಾ 6 ಪದ : ದ್ರುಪದಜೆ ಎನಿಸಿದಳು | ಘೋರ ದುಃಶಾಸನು ಮುಟ್ಟಲು | ಮೊರೆಯಿಟ್ಟಳು ದ್ವಾರರಾದಳು | ಧೀರನೆನವೆ ಹೃದಯದೊಳು ಹಗ ಲಿರುಳು | ಭಜನೆಗಳಿಪ್ಪನಂಘ್ರಿಗಳು || 6 ಶ್ಲೋಕ : ಎಲ್ಲಾ ದೈತ್ಯರು ಹುಟ್ಟಿ ಭೂತಳದಿ ನಿನ್ನಲ್ಲೆ ಪ್ರದ್ವೇಷದಿಂ | ದಿಲ್ಲೇ ಇಲ್ಲ ಮುಕುಂದನಾ ಗುಣಗಳು | ಸುಳ್ಳಷ್ಟು ಈ ವಿಶ್ವವೊ || ಇಲ್ಲೆಂಧೇಳಲು ಸದ್ಗುಣಕ್ಕೆ ಗೊತ್ತಿಲ್ಲಾ ತಾನಾಗ ಈ ತತ್ವವೊ | ಪದ : ಸೂನು | ರಾಜತಾಸನದಲ್ಲಿ ಇದ್ದನು | ಒಬ್ಬ ಯತಿಪನು | ವರ ಪಡೆದನು | ಭಾವೀ ಶಿಷ್ಯ ನಿನ್ನನು | ದ್ವಿಜನಾಗಿ ಬಂದು ಆ ಯತಿಯನು ಪೊಂದಿದಿ ನೀನು | ತುರ್ಯಾಶ್ರಮವನು ಯಿನ್ನು 7 ಶ್ಲೋಕ : ದುರ್ವಾದ್ಯುಕ್ತ ಭಾಷ್ಯ ಸಂಘಗಳನು | ಸರ್ವೇದ್ಯನೀ ಖಂಡಿಸೀ | ಸರ್ವಾನಂದದಿ ದಿವ್ಯ ಶಾಸ್ತ್ರಗಳನು | ವಾಗಾಜಯಂ ನಿರ್ಮಿಸಿ || ಗರ್ವೋಚಿÀಸಲ್ಲೋಕಕೆ | ಚೂಡಾಮಣಿ ಪದ: ರಜತಪೀಠ ಪುರದಲ್ಲಿ | ನೀ ಕಲಿಯುಗದಲ್ಲಿ | ಇರುವಿ ಮತ್ತೊಂದರಲ್ಲಿ | ಪಟ್ಟವಾಳಿದಿ ಅಲ್ಲಿ |ವಿಠ್ಠಲನ ವಿಜಯಪಾದದಲ್ಲಿ ಅನುದಿನದಲ್ಲಿ8
--------------
ವಿಜಯದಾಸ
ಭುವನೇಂದ್ರ ಮುನಿಪ ನಿನ್ನವನೋ ಎನ್ನ ಅವಗುಣಗಳೆಣಿಸದಲೆ ಅನುದಿನದ ಪಾಲಿಪುದು ಪ ಸಾಧುಜನ ಸಂಪೂಜ್ಯ ಸತತ ನೀ ಎನ್ನ ಅಪ ರಾಧಗಳೆಣಿಸದಲೆ ಸಂತೈಪುದು ವೇದ ಪದಯೋಗ್ಯ ಸುಮನಸರ ಗುರು ಶ್ರೀ ಪೂರ್ಣ ಬೋಧ ಮತ ವಾರಿನಿಧಿ ಚಂದ್ರ ಸದ್ಗುಣ ಸಾಂದ್ರ 1 ಶ್ರೀ ಮೂಲದಿಗ್ವಿಜಯರಾಮ ವ್ಯಾಸಾಂಘ್ರಿ ಯುಗ ತಾಮರಸ ಭಜಕ ಈ ಭೂಮಿಯೊಳಿಹ ಪಾಮರನ ಉದ್ಧರಿಸು ರವಿ ಸಾರ್ವ ಭೌಮ ನೀ ಸಂಚರಿಪೆ ಈ ಮಹೀತಳದಿ 2 ಕರ ಕಮಲ ಸಂಜಾತ ನಿರುಪಮ ಜಗನ್ನಾಥ ವಿಠಲ ದೂತ ನೆರೆ ನಂಬಿದೆನೋ ನಿನ್ನ ಪರಿಪಾಲಿಸುವುದೆನ್ನ ಮರೆಯಲಾಗದು ಜಿತಸ್ಮರ ಭೂವರ ಪ್ರವರಾ 3
--------------
ಜಗನ್ನಾಥದಾಸರು
ಭೂತರಾಜರ ಸ್ತೋತ್ರ ಭೂತರಾಜರ ಸ್ತುತಿಸಿ ಖ್ಯಾತಿಗೊಳ್ಳೊ ಪ ಪ್ರೀತಿ ಇವರಲಿ ಅಧಿಕ ವಾದಿರಾಜರಿಗೆ ಅ.ಪ. ಆತನಾಜ್ಞೆಯಿಂದ ಧರಿಸಲುಕೋತಿಯಂತೆ ಹುಬ್ಬು ಏಕೆ ಹಾರಿಸುವೆಜ್ಯೋತಿ ಸ್ವರೂಪಕ್ಕೆ ಬೂದಿಯು ಮುಸುಕಲುಪಾತಕಿಯು ತಾ ಮುಟ್ಟಿ ಬೊಚ್ಬಿ ಬಾರಿಸನೆ 1 ಗುರುಸೇವೆ ಇವರಂತೆ ಮಾಡ್ದವರು ಯಾರುಂಟುಗುರುಕೃಪಾ ಇವರಂತೆ ಪಡೆದವರು ಯಾರೊಅರಿತು ನೋಡಲು ನಿರುತ ರತಿಗೆ ಕಾರಣವುಂಟುನರಕುರಿ ಇದರ ಮರ್ಮವ ತಿಳಿವದುಂಟೆ 2 ಇಂದಿಗೂ ಸೋದೇಲಿ ಇವರದೇ ಗುರುಪೂಜೆಸುದ್ದಿ ಸುಳ್ಳೆಂದವಗೆ ದೆಬ್ಬೆ ಪೂಜಾಸದ್ದಿಲ್ಲದಿವರಡಿ ಸ್ಮರಿಸುವುದೇ ಗುರುಪೂಜಾತಂದೆ ಶ್ರೀ ನರಹರಿ ಒಪ್ಪುವಾ ಪೂಜಾ 3
--------------
ತಂದೆ ಶ್ರೀನರಹರಿ
ಭೂತೇಶನುತ ವಿಠಲ | ಕಾಪಾಡೊ ಇವನಾ ಪ ಓತ ಪ್ರೋತನು ಆಗಿ | ದಾತನೀನಿರುವೇ ಅ.ಪ. ಪಾದ | ದಾಸ್ಯವನೆ ಕಾಂಕ್ಷಿಸುವವಾಲಿಭಂಜನ ರಾಮ | ಪಾಲಿಸೋ ಇವನಾ 1 ತೈಜಸನೆ ನೀನು ಗುರು | ರಾಜರೂಪಿಲಿ ತೋರಿನೈಜೋಪದೇಶವನು | ಪೊಂದುವುದು ಎನುತಾ |ಮಾಜದಲೆ ಪೇಳಿರಲು | ವಾಜಿವದನನೆ ನಿನ್ನಬ್ರಾಜಿಷ್ಣು ನಾಮದಲಿ | ಅಂಕನವ ಗೈದೇ 2 ದಾಸ ದಾಸರ ಗುಣಾ | ದಾಸನೆಂದೆನಿಸುತ್ತಕೇಶವನ ಗುಣನಾಮ | ಸೂಸಿಕೊಂಡಾಡಿ |ಲೇಸಾದ ಆನಂದ | ಭಾಸಿಸುತ್ತಲಿ ಗುಹಾ ವಾಸನನು ಕಾಂಬಂಥ | ಮಾರ್ಗದನು ಆಗೋ 3 ಮಧ್ವಮತ ತತ್ವಗಳು | ಬುದ್ಧಿಯಲ್ಲಿ ಸ್ಛುರಿಸುತ್ತಶುದ್ಧಭಾವದಿ ಮನನ | ಸಿದ್ಧಿಸುತಲಿವಗೇ |ಅದ್ವೈತ ತ್ರಯಜ್ಞಾನ | ಶ್ರದ್ಧೆ ಭಕ್ತಿಯ ಉದಿಸೆಮಧ್ವರಮಣನೆ ಹರಿಯೆ | ಉದ್ಧಾರ ಮಾಡೋ4 ಸರ್ವಜ್ಞಾ ಸರ್ವೇಶ | ಸರ್ವಾಂತರಾತ್ಮಕನೆದರ್ಪಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೇ |ದುರ್ವಿ ಭಾವ್ಯನೆ ಗುರು | ಗೋವಿಂದ ವಿಠ್ಠಲನೆಅವ್ಯಾಜ ಕರುಣನಿಧಿ | ಭಿನ್ನಪವ ಸಲಿಸೋ5
--------------
ಗುರುಗೋವಿಂದವಿಠಲರು
ಭೂರಿ ಮಹಿಮೆಯಾ ಪ ಕಾಲ ಹದಡಮೇಲೆ ವೀಣೆಯ ಶಾಲನ್ಹೊದ್ದು ಹರಿಯಗಾಯ ಲೀಲೆ ಬಾ ಹೊದೊ1 ಕರೆದ ಕ್ಷಣಕೆ ಬರುವಿ ಎನ್ನೊಳುಕರುಣವೇನಿದು ಗುರುತು ತೋರದಂತೆಎನ್ನ ಬಳಿಗೆ ಬರುವುದೋ 2 ನಿನ್ನ ನಂಬಿದೆನ್ನ ಭಾಷೆಯನ್ನು ಲಾಲಿಸೋಇನ್ನು ಇಂದಿರೇಶ ವದನವನ್ನು ತೋರಿಸೋ 3
--------------
ಇಂದಿರೇಶರು
ಭೂಷಣವಿದು ಭೂಷಣ ಕೇಶವಧ್ಯಾನ ಪಭೂಷಣವದನಾ ವಿಭೀಷಣ ಧರಿಸುತೆನಾಶರಹಿತ ಪೌರುಷವಾಂತ ಧರಣಿಯೊಳು ಅ.ಪಶೇಷಶಯನನಾಮ ಭೂಷಣದೋಷರಹಿತ ಶಿರೋಧಿ ಭೂಷಣಶ್ರೀಶ ವಿಠ್ಠಲನಾಮ ಭೂಷಣಶೇಷಫಣಿಮಣಿಧೃತ ಭೂಷಣ1 ಕರಯುಗಗಳ ಭೂಷಣ ಹರಿಪೂಜೆಯುಶಿರಕೆ ವಂದನೆ ಭೂಷಣಹರಿಪಾದದರ್ಶನ ವರನೇತ್ರಭೂಷಣವರಕ್ಷೇತ್ರಸಂಚಾರ ಚರಣಕೆ ಭೂಷಣ 2 ಹರಿಯ ಚರಿತೆಯು ಕರ್ಣಭೂಷಣಹರಿತುಳಸಿ ನಾಸಿಕಕೆ ಭೂಷಣಹರಿಯ ಕೊಂಡಾಡುವುದೆ ರಸನೆಗೆ ಭೂಷಣಹರಿಯ ಭಜನೆಯು [ಜಿಹ್ವಾಭೂಷಣ] 3 ಧರೆಯೊಳು ಜನಿಸಿದ ಮಾನವರಿಗೆಹರಿನಾಮವೆ ಭೂಷಣಾಸಿರಿರಮಣನಾಮ ಕಿರೀಟವಯ್ಯವರದನೆಂಬುವನಾಮ ವರಕರ್ಣಾಭರಣವು 4 ಗಂಗಾಜನಕನೆಂಬ ನಾಮವೆ ಅಂತರಂಗಕೆ ಮಣಿಭೂಷಣಾರಂಗನೆಂಬುವ ನಾಮ ಹಸ್ತಸಿಂಗರದ ಪೀತಾಂಬರವು ತಾಮಾಂಗಿರೀಶನ ನಾಮ ಮಂಗಳಕರ ಭೂಷಣವೈ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭೋಗಿವರನೇ ಪಾಲಿಸೋ ಪ ಆಗಸದೊಳು ನೀನಾಗಮಿಸುತಲಿ ಸ-ದಾಗತಿ ಭೋದವ ಭೋಗಿಸಿ ನಿಂದೇ ಅ.ಪ. ಪರಿ ಪ್ರಾ |ರಬ್ಧವ ಭೋಗವ | ನಾದರದನುಭವಸಾಧನವೀವುದು | ಹೇ ದಯವಂತ 1 ಹೃದಯಾಬ್ಜಾಮಲ | ಸದನದಿ ಸುರತರುಹದುಳ ದೊಳಾಶ್ರಿತ | ಬದಿಗನಿನಾದೆಯೊ |ಸದಮಲ ಶಯ್ಯನೆ | ಇದಿರಾವನು ತವಪದವಿಗೆ ಸುರರೊಳು | ಬುಧಜನ ವಂದ್ಯ 2 ಪತಿ ಗುರುಗೋವಿಂದ ವಿಠಲನ | ಭಾವದಿ ಕಾಣಿಸಿ 3
--------------
ಗುರುಗೋವಿಂದವಿಠಲರು
ಭ್ರಮಮೂಲಮಿದಂ ಜಗತು ನೇಮದ ನಿಜಮಾತು ಧ್ರುವ ಭ್ರಮೆಯಿಂದಲಿ ಭ್ರಮಣ್ಹತ್ಯದ ನೋಡಿ ಭ್ರಮೆ ನೆಲೆಗೊಳಿಸದು ಮನ ಸ್ಥಿರಮಾಡಿ ಭ್ರಮಿಸೇದನೇಕ ಜನ್ಮ ತಿರುಗಾಡಿ ಭ್ರಮಿಯಲಿ ಬಾರದು ನಿಜ ಕೈಗೊಡಿ 1 ಭ್ರಮೆಯಕ ಭ್ರಮೆ ಹತ್ತೇದ ಬಲು ಬಹಳ ಭ್ರಮಯು ಮಾಡೇದ ಸಂಸಾರದ ಮೇಳ ಭ್ರಮೆ ಇಲ್ಲದ್ಯಾತಕೆ ಏನ್ಹೇಳ ನೇಮದಿ ಹೊಳೆವುದು ವಸ್ತು ಅಚಲ 2 ನಾ ನೀನೆಂಬುದು ಭ್ರಮೆಯದ ಮೂಲ ಅನುದಿನ ಬೆನ್ನಟ್ಟಿದೆ ಬಹುಕಾಲ ಖೂನಕೆ ಬಾರದೆ ಆತ್ಮಾನುಕೂಲ ತಾನೆ ಮುಸುಕ್ಯದೆ ಭ್ರಮಿ ಸಕಲ 3 ನಿಶ್ಚಲವಾಗದೆ ಜ್ಞಾನದ ಉಗಮವು ಹೆಚ್ಚು ಕುಂದಿಗೆ ಹೊಡೆದಾಡುದು ಭ್ರಮೆಯು ಹುಚ್ಚುಮಾಡೇದ ವಿಷಯ ಭ್ರಮೆಯು ಎಚ್ಚರಿಸುವ ಸದ್ಗುರು ದಯಕ್ರಮವು 4 ನಾ ಮವನಿಷ್ಟರೊಳಾಡಿದ ಮಾತು ನಿಮಿಷಾರ್ಧದಲಿ ಭ್ರಮೆಯಗಳೆಯಿತು ಸ್ವಾಮಿಸದ್ಗುರು ಕೃಪೆಯಲಿ ತಿಳದೀತು ನೇಮಿಸಿ ತಿಳಿಕೊ ಮಹಿಪತಿನಿವಾಂತು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭ್ರಮೆ ಬೇಡಲೆ ಮನ ತಿಳಿ ಜವದಿ ಹರಿ ವಿಮಲಚರಣಕಮಲ್ಹಿಡಿ ದೃಢದಿ ಪ ಸುಮನಸರಗೂಡಿ ನೀ ಸುಮಶರ ಪಿತನಂ ಸಮಯ ತಿಳಿದು ಭಜಿಸನುದಿನದಿ ಅ.ಪ ಸಾರವಿಲ್ಲದ ಸಂಸಾರ ಇದು ಮೇರೆನಿಲ್ಲದ ಸಾಗರ ಆರಿಗೆ ನಿಲುಕದೆ ಮೂರುಲೋಕವದ್ದಿ ಮೀರಿಬಡಿಸುವುದು ಬಲುಘೋರ 1 ಹೆಂಡರು ಮಕ್ಕಳೆಂದು ನಂಬಿದಿ ನಿನ್ನ ಹಿಂಡಿನುಂಗುವುದು ಅರಿಯದ್ಹೋದಿ ಕಂಡಕಂಡವರಿಗೆ ಮಂಡೆಬಾಗಿಸಿ ನಿನ್ನ ದಂಡನೆಗೆಳಪುದು ಅಂತ್ಯದಿ 2 ಕಾಕುಜನರ ಸಂಗ್ಹಿಡಿದಿದ್ದಿ ನೀ ಲೋಕನೆಚ್ಚಿ ನೂಕುನುಗ್ಗಾದಿ ಲೋಕಗೆಲಿದು ಭವನೂಕಿ ನಲಿಯುವರ ಸಾಕಾರಗಳಿಸದೆ ಕೆಟ್ಟ್ಹೋದಿ 3 ಧರೆಯ ಭೋಗವನು ಸ್ಥಿರ ತಿಳಿದಿ ನೀ ಹರಿದು ಹೋಗುವದಕೊಲಿತಿದ್ದಿ ಮರೆಮೋಸದಿ ಬಿದ್ದರು ಮೈಯಮರೆದು ಸ್ಥಿರಸುಖ ಪಡೆಯದೆ ದಿನಗಳೆದಿ 4 ಭೂಮಿಸುಖಾರಿಗೆ ನಿಜವಲ್ಲ ಇದು ಕಾಮಿಸಬೇಡೆಲೊ ಶೂಲ ಕಾಮಿತಗಳನಿತ್ತು ಕ್ಷೇಮದಿ ಸಲಹುವ ಸ್ವಾಮಿ ಶ್ರೀರಾಮನ ತಿಳಿಮಿಗಿಲ 5
--------------
ರಾಮದಾಸರು
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ