ಒಟ್ಟು 2659 ಕಡೆಗಳಲ್ಲಿ , 115 ದಾಸರು , 2043 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಕೃಷ್ಣಪರಬ್ರಹ್ಮ ನಮೊ ಶೇಷತಲ್ಪಶಯಶೌರಿ ನಮೊಪ್ರಾಕೃತರ'ತಾನಂತ ನಮೊ ಪರಮಪುರುಷ ಭವದೂರ ನಮೊ 1ಮದನಾರ್ವಧುಸುರಸ್ತೌತ್ಯ ನಮೊ ಮಧುಕೈಟಭದೈತ್ಯಾರಿ ನಮೊಯದುಕುಲಾಂಬುಧಿಸುಧಾಂಶ ನಮೊ ವಾಸುದೇವ ಪರಮಾತ್ಮ ನಮೊ 2ದೇವಕಿದೇ'ಕಿಶೋರ ನಮೊ ದ್ವಿಜಸುತಪ್ರಾಣಸುರಕ್ಷ ನಮೊಭಾವಜಪಿತ ಜಗನ್ನಾಥ ನಮೊ ಭಕ್ತಪ್ರಿಯಗೋಂ'ದ ನಮೊ 3ಅಷ್ಟಮಗರ್ಭಸಂಜಾತ ನಮೊ ಅ'ುತಧೈರ್ಯಗಾಂಭೀರ್ಯ ನಮೊದುಷ್ಟಪೂತನಧ್ವಂಸ ನಮೊ ಧೇನುಕಶಕಟ'ದೂರ ನಮೊ 4ಗೋವರ್ಧನಗಿರಿಧಾರಿ ನಮೊ ಗೋಪಗೋಪಿಕಾಲೋಲ ನಮೊಶ್ರೀವಸುದೇವಾನಂದ ನಮೊ ಸಾಂದೀಪಪ್ರಿಯಬೋಧ ನಮೊ 5ಯಶೋದನಂದೋತ್ಸಾಹ ನಮೊ ವೇಣುಗಾನ'ನೋದ ನಮೊಶಿಶುಪಾಲಶಿರಚ್ಛೇದ ನಮೊ ಶಂಖಚಕ್ರಕರಧಾರಿ ನಮೊ 6ಕೌರವಗರ್ವ'ದಾರಿ ನಮೊ ಕುಬ್ಜಪಾಲಕಮಲಾಕ್ಷ ನಮೊಪಾರಿಜಾತಮಪಹಾರಿ ನಮೊ ಪಾವನತೀರ್ಥಪದಾಯ ನಮೊ 7ತೃಣಾವರ್ತನಾಶಾಯ ನಮೊ ದ್ವಾರಕಾಪುರ'ಹಾರಿ ನಮೊಮೌನಿಮಾನಸೊಲ್ಲಾಸ ನಮೊ ಮಧುರಾಪುರಿನಾಥಾಯ ನಮೊ 8'ದುರ ಅಕ್ರೂರಸ್ತೌತ್ಯ ನಮೊ ವೃಷಭ ಮ್ಟುಕ ಮುರಾರಿ ನಮೊ (?) 9ಶ್ರೀರುಕ್ಮಣಿಹೃದಯೇಶ ನಮೊ ಸಿಂಧುಶಯನ ಕಂಸಾರಿ ನವನೀತ ನಮೊ ಜಂಭಭೇದಿಸುತಪ್ರೇಮ ನಮೊ 10ವೈಜಯಂತಿವನಮಾಲ ನಮೊ ವನದಶ್ಯಾಮಲವರ್ಣ ನಮೊವಜ್ರಸ್ಥಗಿತಕಿರೀಟ ನಮೊ ವರಮಣಿಕುಂಡಲಧರಣ ನಮೊ 11ಭುಜಕಿರೀಟಶುಭಗಾತ್ರ ನಮೊ ಭುವನಮೋಹನಾಕಾರ ನಮೊಅಜಪಿತಕನಕಸುಚೇಲ ನಮೊ ಆರ್ತಶರಣ್ಯೋದ್ಧಾರ ನಮೊ 12ಕಾಲಯವನಮದಖಂಡ ನಮೊ ಕೋಟಿರ'ಪ್ರಭಾಭಾಸ ನಮೊಮಾಲಾಕಾರುಪಕಾರ ನಮೊ ಲೀಲಾಮಾನುಷವೇಷ ನಮೊ 13ದ್ರೌಪತಿಕಭಯೋದ್ಧಾರ ನಮೊ ಧನಂಜಯಾದಿಸುಪಕ್ಷ ನಮೊಶ್ರೀಪತಿಸಕಲಾಧಾರ ನಮೊ ಸರ್ವಭೂತಹೃದಯಾತ್ಮ ನಮೊ 14ನಿಖಿಲಚರಾಚರದೂಪ ನಮೊ ನಾಮರೂಪಕ್ರಿಯರ'ತ ನಮೊಅಖಂಡಮಚಲಾಕಾರ ನಮೊ ಅದ್ಭುತಮ'ಮಾಪಾರ ನಮೊ 15ಸಗುಣನಿರ್ಗುಣಾತೀತ ನಮೊ ಸತ್ಯಾಸತ್ಯಸುಬೋಧ ನಮೊನಿಗಮಾಗನಶೃತಿಸಾರ ನಮೊ ನಿರ್ವಿಷಯಾಭವಪ್ರಣವ ನಮೊ 16ಅಜಪಸೂತ್ರಸಂಕೇತ ನಮೊ ಹಂಸತತ್ವಸುಪ್ರಕಾಶ ನಮೊತ್ರಿಜಗಾಂತರ್ಬ'ವ್ಯಾಪ್ತ ನಮೊ ತ್ರಿಗುಣಾಪ್ರತಿಭಾಗಮ್ಯ ನಮೊ 17ತುಳಸಿರಾಮ ಗುರುಸ್ತೌತ್ಯ ನಮೋ ತಾಕ್ಷ್ರ್ಯಾಚಲವರವಾಸ ನಮೊಮುಳಬಾಗಿಲಪುರಿಪಾಲ ನಮೋ ಮಹಾನುಮಪ್ರಿಯ ವಂದ್ಯ ನಮೋ 18ಮಂಗಳಮಘಚಯಭಂಗ ನಮೋ ಮಂಗಳಂ ಪಾ' ಪಾ' ನಮೋರಂಗಸ್ವಾ'ುದಾಸ ಪೋಷ ನಮೋ ಮಂಗಳಾಂಗ ಶ್ರೀಕೃಷ್ಣ ನಮೋ 19
--------------
ಮಳಿಗೆ ರಂಗಸ್ವಾಮಿದಾಸರು
ಶ್ರೀಗುರು ಜಯೇಶವಿಠಲನೆ ಪಾಲಿಸಯ್ಯ ಈ ಸತಿಯ ಕರಪಿಡಿದು ಪ ಮೂರ್ತಿ ಸರ್ವೇಶ ಶರ್ವಸಖ ಸರ್ವತ್ರ ಒಡನಿದ್ದು ಸಲಹು ಸತತ ಉರ್ವಿಯಲಿ ಸತ್ಕೀರ್ತಿ ಸಂಪದದಿ ನಿಲಿಸಿವಳ ನಿತ್ಯ ತೃಪ್ತ 1 ಗುಣವಂತಳನು ಮಾಡು ಗುಣ ಗಣಾಂಬುಧಿ ದೇವ ಘನವೆನಿಸು ಈ ಸತಿಯ ಸಂಸಾರವೆಲ್ಲ ಅನಿಲ ಜನರಲಿ ನಿಲಿಸು ಅನುಕೂಲ ನೀನಾಗಿ ದನುಜಾರಿ ಸಂಪದವ ಹರುಷದಲಿ ಬೆಳೆಸುವುದು 2 ಶೀಲ ಭಕ್ತಿ ಜ್ಞಾನ ಸತತ ಸಜ್ಜನ ಸಂಘ ಮೇಲಾಗಿ ನೀಡುವುದು ಮೈದುನನ ಸೂತ ಪಾಲುಸಾಗರದೊಡೆಯ ಜಯೇಶವಿಠಲನೆ ಕೊರತೆ ಇಲ್ಲದೆ ನೀಡು ಕಲ್ಯಾಣ ಈ ಸತಿಗೆ 3
--------------
ಜಯೇಶವಿಠಲ
ಶ್ರೀಗುರುವೆ ತಾಯಿ ತಂದೆನಗ ನೀನು ಧ್ರುವ ತಾಯಿ ತಂದೆನಗ ನೀ ಬಾಹ್ಯಾಂತ್ರ ಪರಿಪೂರ್ಣ ಸಾಯೋಜ್ಯ ಸದ್ಗುರುನಾಥ ನೀನೆ ಸಂಜೀವ ಸಾಕ್ಷಾತ ನೀನೆ ಕಾವ ಕರುಣಾಳು ವರದಾತ ನೀನೆ ಇಹಪರದೊಳು ಸಕಳಾರ್ಥ ನೀನೆ 1 ಕರುಣ ಆನಂದದಲಿ ಹೊರೆದು ಸಲಹುವ ಮೂರ್ತಿ ಪರಮ ಜೀವದ ಅತಿ ಮೈತ್ರ ನೀನೆ ಸರ್ವ ಙÁ್ಞನಿಗಳ ಕುಲಗೋತ್ರ ನೀನೆ ದ್ರವ್ಯ ಧನವನು ಸಂಚಿತಾರ್ಥ ನೀನೆ ಪೂರ್ವಪ್ರಾಚೀನ ಪುಣ್ಯಸೂತ್ರ ನೀನೆ 2 ಬಾಲಕನ ಮ್ಯಾಲೆ ದಯಮಾಡಿ ಪಾಲಿಸುತೀಹ್ಯ ಕುಲಕೋಟಿ ಬಂಧುಬಳಗ ನೀನೆ ಮೂಲಪುರಷನ ಋಷಿದೈವ ನೀನೆ ಪರಿ ಬಲವು ಇಳಯೊಳಗೆ ನೀನೆ ಸಲಹುತಿಹ ಮಹಿಪತಿಸ್ವಾಮಿ ನೀನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀಜಗನ್ನಾಥದಾಸರಾಯರಸ್ತೋತ್ರ ದಾಸಾರ್ಯರ ಚರಣ ಕಮಲಕಾನಮಿಪೆ ಶಿರಬಾಗಿ ಬಿನ್ನೈಪೆ ಏಸು ಜನ್ಮದ ದುಷ್ಕøತ ಪರಿಹರಿಪೆ ಕರುಣವನು ಪಡೆದು ಭೂಸುರಜನ್ಮವ ಸಾರ್ಥಕಗೊಳಿಪೆ ಕೃತಕೃತ್ಯನೆಂದೆನಿಪೆ ದೋಷರಾಶಿಗಳ ನಾಶಗೈಸಿ ವಿ ಶೇಷ ಮಹಿಮದಿಂಭೂಷಿತ ಜಗನ್ನಾಥ ಪ ಗಾಂಗೇಯ ವಸನಸಂಜಾತ ಪ್ರಲ್ಹಾದನಭ್ರಾತ ಮತಿಮಾನಸಹ್ಲಾದ ಸುನಾಮಕನೀತ ನರಹರಿಸಂಪ್ರೀತ ದ್ವಿತಿಯ ಶಲ್ಯಾಖ್ಯನೃಪತಿ ವಿಖ್ಯಾತ ಪುರಂದರ ಸುತನೆನಿಸಿದ ದಸ ದ್ಯತಿ ವಾದೇಶ್ವರನ್ಹಿತದಲಿ ವಲಿಸಿದ 1 ನರಸಂಬಂಧಿತ ಪ್ರಾಂತದ ಕ್ಷೇತ್ರದಲಿ ಬÁ್ಯಗವಟದ ಕರಣಿಕ ಜನಿಸಿದ ಬಾಲಾರ್ಕನು ವರದೇಂದ್ರ ಗುರುವರ್ಯರ ಕರುಣದಲಿ ಶಾಸ್ತ್ರಾಖ್ಯಾಗಸದಿ ವರವಸಂತ ಋತತÀರುಣಿ ಕಿರಣದೊಲ್ ಪರಮತಗಳ ಧಿ:ಕರಿಸಿ ಮೆರೆಯುತಿಹ 2 ಮೂರು ಭಾಷಾತ್ಮಕ ವಿದ್ಯಾಧ್ಯಾತ್ಮ ಸಂಪಾದಿಸಲೋಸುಗ ಮಾರಾರಿನಾಮಕದಾಮಹಾತ್ಮರಡಿಯುಗಳನು ಸೇವಿಸಿ ಮೂರು ರೂಪಾತ್ಮಕನ ವಿಙÁ್ಞನಾತ್ಮ ಅಂಶಗಳನು ತೋರಿಪ ಮೂರು ಮೂರು ಮೂರು ಮೂರು ಮೂರು ವಂದುಸಾರವ ಗೃಹಿಸಿದ ಸೂರಿವರಾಗ್ರÀಣಿ 3 ವರದೇಶ ಶಾಸ್ತ್ರಾತ್ಮಕಪಯದಿಂದ ಸಂಪೂರಿತವಾದ ಮರುತಮತ ತತ್ವತರಂಗಗಳಿಂದ ಸಂಶೋಭಿಸುತಿಹ ಶ್ರೀ ಭೂಸುರರನು ಪಾಲಿಪ ಹರಿಯಭಕುತಿಸುರಮಣಿ ತರುವನೀವಪಯ ಶರಧಿಯನಿಪ ಹರಿ 4 ಸೂರ್ಯ ಸದ್ಭುಕುತರೆನಿಸುವ ಶರಣಜನ ಹೃತ್ಸಂತಾಪಹಭಾರ್ಯ ಕಾಮಕ್ರೋಧಾದಿ ಅರಿಷಡ್ವರ್ಗವ ಭರ್ಜಿಪಹರಿ ಶೌರ್ಯ ಸತ್ಕವಿಕುಲವರ್ಯ ವರದೇಶ ವಿಠಲನ ಚರಣಸೇವಕರ ಸುರತರುವಿನ ತೆರಪೊರೆಯುಂತ ಮೆರೆಯುವ 5
--------------
ವರದೇಶವಿಠಲ
ಶ್ರೀಧರಾಕರ ಕಂಜ ಸೇವಿತ ಪಾದ ಪದ್ಮಜ ಪದದ ಪುರು ಕರು- ಣೋದಧಿಯೆ ಲಾಲಿಪುದು ಪಾಮರನೆಂಬ ಬಿನ್ನಪವ ಸೋದರ ಸ್ಥಿತ ಸಕಲ ಬ್ರಹ್ಮಾಂ- ಪತಿ ನೀನರಿವಿಯಾದರು ಮಾಧವನೆ ಮನದಿರವ ಪೇಳ್ವೆನು ಮನುಜಭಾವದಲಿ 1 ಸುಕೃತ ಫಲವೋ ದೋಷದೂರನೆ ನಿನ್ನ ಪದವನು ಮೀಸಲಳಿಯದೆ ಸೇವೆ ಮಾಳ್ವದು ಲೇಸುಲೇಸೆಂದು ದಾಸಕೂಟದಿ ಸೇರಿ ಮನೆಯಲಿ ವಾಸವಾಗಿರಲಿದರ ಮಧ್ಯಮ ರಾಶೆ ಬಲೆಯಲಿ ಸಿಲುಕಿದೆನು ಕರುಣಾ ಸಮುದ್ರಹರಿ 2 ತನ್ನಿಕೃಷ್ಟ ಮನೋವಿಕಾರಗ- ಳಿನ್ನು ಬಿಡದಲೆ ಪೀಡಿಸುವ ಪರಿ ಯನ್ನು ಪರಮ ಕೃಪಾಳು ನೀನೆಂದೊರವೆನಖಿಳೇಶ ಮಾನ್ನವರ ಮಧ್ಯದಲಿ ಮಾನದಿ ಎನ್ನ ಕಾಪಾಡುವದು ಭಾರವೆ ತನ್ನ ಫಲಗಳ ತಾನೆ ಕೆಡಹುವದುಚಿತವೇ ತೆಗೆ 3 ಯುಕ್ತಿಯಲಿ ನಿನ್ನಂಥ ದೇವರ ರೆತ್ತಿ ವೈದಮೃತವನು ಸುಲಭದೊಳಿತ್ತೆ ದಿವಿಜರಿಗೆ ಔತ್ತರೇಯನ ಕಾಯ್ದ ದ್ರೌಣಿಯ ನೆತ್ತಿಯೊಳಗಿನ ರತ್ನ ಭೀಮನಿ ಗಿತ್ತ ಪರಿಯನು ಪಠಿಸಿ ತಿಳಿದೆನು ಪಾವನಾತ್ಮಕನೆ 4 ಬ್ರಹ್ಮತೇಜೋ ವೃದ್ಧಿ ಬಲಿಯೊಳು ಬ್ಯಾಡ ಸಂಗರ ನಮಗೆನುತ ನಿ- ಮ್ಮಮ್ಮನೊಳ್ ನುಡಿದಂದು ಕಶ್ಯಪನಿಂದಲವತರಿಸಿ ಬ್ರಹ್ಮಚಾರಿಯ ರೂಪದಿಂದೀ ಕ್ಷಮ್ಮೆಯನು ಸೆಳೆದಿಂದ್ರಗಿತ್ತಮ- ಹಾನ್ಮಹಿಮ ನಿನಗಾವದಘಟಿತ ನೀರಜಾರಮಣ5 ನಾರದರ ನುಡಿ ನಿಜವೆನುತ ಮೂ- ರಾರು ಭಕ್ತಿಯ ತಾಳ್ದ ಮನುವಿನೊ- ಳಾರುಭಟಿಸುತ ಕಾಶ್ಯಪನು ಮದವೇರಿ ನಿಂದಿರಲು ಯಾರು ತಿಳಿಯದ ತೆರದಿ ಕಂಭದಿ ಮೃಗ ರೂಪವನು ಹೆ- ಮ್ಮಾರಿ ದೈತ್ಯನ ತರಿದು ತ್ವತ್ಪದವಿತ್ತೆ ದಾಸನಿಗೆ 6 ಏನು ಶ್ರಮವಿಲ್ಲದಲೆ ಪಿಡಿದು ದ- ಶಾನನನ ತೊಟ್ಟಿಲಿಗೆ ಕಟ್ಟಿ ಪ್ರ- ವೀಣತೆಯ ತೋರಿಸಿದ ವಾಲಿಯ ಪಕ್ಷವನು ತ್ಯಜಿಸಿ ದೀನ ಬಾಂಧವನೆಂಬ ಬಿರುದನು ದಿಟವೆ ನಿಶಿತದ್ರಾಜ್ಯ ಪದವಿಯ ಭಾನುಜನಿಗೊಲಿದಿತ್ತ ಭಕ್ತಜನಾರ್ತಿ ಭಂಜನನೆ 7 ಶಬ್ದಗೋಚರವಾದ ಕಥೆಗಳು ಬದ್ಧವೆಂಬುದು ಪೂರ್ವದನುಭವ ಸಿದ್ಧವಾಗಿಹುದೆನಗೆ ಸಜ್ಜನಲಬ್ಧಪದ ಪದ್ಮ ಬುದ್ಧಿಹೀನತೆಯಿಂದ ನುಡಿದರು ಮಧ್ವವಲ್ಲಭ ನಿನ್ನ ದಾಸನ- ನುದ್ಧರಿಸು ನೀನಲ್ಲದೆನಗಿನ್ನಾರು ಗತಿ ಹರಿಯೆ8 ಒಡೆಯರೆಂಬರನೆಲ್ಯುಕಾಣದೆ ಉಡುವದುಂಬುದಕೇನು ದೊರೆಯದೆ ಗಿಡವ ನಿಲುಕದ ಬಳ್ಳಿಯಂದದಿ ಬಡುವ ಕಷ್ಟವನು ತಡೆಯಲಾರದೆ ತಳಮಳಿಸುತಿರೆ ಪಿಡಿದು ಕರವನು ಕಾಯ್ದೆಯೆನ್ನನು ನುಡಿವದೇನಖಿಳಾಂಡ ನಾಯಕ ನಿನ್ನ ಮಹಿಮೆಯನು 9 ಮಾರಿಯಂದದಿ ಮಧ್ಯದೊಳಗೊ- ಬ್ಯಾರುವೇನೆಂಬಧಮ ಹೂಣನು ತೀರಿಸುವೆನೆಂದೆನ್ನೊಳಿಲ್ಲದ ದೂರ ಸಂಗ್ರಹಿಸಿ ಗಾರಗೊಳಿಸುವದರಿತು ಕಕ್ಷವ ಹಾರಿಸುತ ಸುರವಂದ್ಯ ಮೂರ್ತಿಯ ತೋರಿ ತಂದಿಲ್ಲಿರಿಸಿ ಪೊರೆದವನ್ಯಾರು ಪೇಳ್ದೊರೆಯೆ 10 ಶ್ರೀಶ ನಿನ್ನ ಪದಾಬ್ಜ ಪೊಗಳುವ ದಾಸ ಕೂಟದಿ ಸೇರಿ ಸೇವೆಯ ಬ್ಯಾಸರದೆ ನಡೆಸುತಿರೆ ಮತ್ತೊಬ್ಬಾಸುರನ ತೆರದಿ ದ್ವೇಷದಿಂದಿರೆ ದೂರ ಓಡಿಸಿ ದುರಿತ ಭಯಗಳ ಪರಿಹರಿಸಿದ ಮ- ದೀಶ ನೀನೆಂದನವರತ ನಂಬಿರುವೆ ಶ್ರೀಪತಿಯ 11 ಇಷ್ಟು ಪರಿಯಿಂದೆನ್ನ ರಕ್ಷಿಸು- ತಿಷ್ಟ ಫಲಗಳನೀವ ವೆಂಕಟ ಬೆಟ್ಟದೊಡೆಯನೆ ಬೇಡಿಕೊಂಬುವೆ ಒಂದು ಕೃತ್ಯವನು ಮಾನವ ನುಡಿಯಕಾಡನು ಸುಟ್ಟು ಸೂರೆಯಗೈದು ನಾ ಮನ ಸಿಟ್ಟ ತೆರದಲಿ ತೋರು ಚಿತ್ತವ ಸೃಷ್ಟಿಕರ ಶ್ರೀಶ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಾಥ ವಿಠಲ ಹರಿ | ನೀನೆ ಪೊರೆ ಇವನಾ ಪ ಮಾನನಿಧಿ ಮಧ್ವಾಖ್ಯ | ವಂದಿತ ಸಂಚರಣಾ ಅ.ಪ. ಯೋನಿ ಆನೇಕದಲಿ | ಜನುಮಗಳ ತಾಪೊತ್ತುಮೌನಿ ಜನ ಸಂಯೋಗ | ಸತ್ಸಂಗಗಳ ಪಡೆದೂಧ್ಯಾನ ಸಾಧನಕಾಗಿ | ಮೌನಿರಾಯರ ಸೇವೆಸಾನುರಾಗದಿ ಗೈಯ್ಯೆ | ಶ್ರೀನಾಥ ಒಲಿದೇ 1 ದಾಸ ಸತ್ಪಂಥಾನು | ವಾಸಿಪೆನು ಎಂದೆನುತವಿೂೀಸಲದ ಸನ್ಮನದಿ | ಪ್ರಾರ್ಥಿಸುತ್ತಿಹಗೇಲೇಸು ತೈಜಸನಾಜ್ಞೆ | ಪೋಷಿಸುತ ವಿಠಲನ ಸಸೂಸಿ ಸೇವಿಸಿ ಇತ್ತೆ | ಅಂಕಿತವನಿವಗೇ 2 ಮಾರಾರಿ ಸದ್ವಿನುತ | ತಾರತಮ್ಯವ ತಿಳಿಸಿಮಾರೆರಡು ಭೇಧಗಳ | ಅರಹುತಲಿ ಇವಗೇಪಾರಗಾಣಿಸು ಭವವ | ನೀರೋಜೋದ್ಭವನಯ್ಯಕಾರುಣಿಕ ಶ್ರೀಹರಿಯೆ | ಕಾರುಣ್ಯ ಮೂರ್ತೇ 3 ಸಖನಾಗಿ ಇವನಲ್ಲಿ | ಸುಖ ಕವನ ಪೇಳಿಸುತ ಪ್ರಕಟ ಗೈ ತವರೂಪ | ನಿಕಟ ಹೃದ್ಗುಹದೀವಿಖನಸಾಂಡದ ಓಡೆಯ | ಸಕಲ ಪ್ರೇರಕ ನಿನ್ನಅಕುಟಿಲದೆ ಮನದಿಂದ | ಪ್ರಾರ್ಥಿಸುವೆ ಹರಿಯೇ 4 ಸಿರಿ ಭೂಮಿ ರಮಣನೇಅರಹಲೇನಿಹುದಿನ್ನು | ಸರ್ವಜ್ಞ ಮಾರ್ತೇಕರುಣ ದೃಷ್ಟಿಲಿ ನೋಡಿ | ಪರಿಹರಿಸೊ ದುಷ್ಕರ್ಮಹರಿಯೆ ಗುರು ಗೋವಿಂದ | ವಿಠಲ ಮಾರುತಿಯೆ 5
--------------
ಗುರುಗೋವಿಂದವಿಠಲರು
ಶ್ರೀನಿವಾಸ ಪಾಹಿಮಾಂ ಸದಾ ಶ್ರಿತಜನಾಮೋದ ಮೌನಿಜನ ಚಾತಕಾಂಭೋದ ಪ ಸಾನುರಾಗ ಯುಗಮುನಿ ಮಾನಿತಾವರಾರವಿಂದ ಭಾನುಕೋಟಿ ತೇಜ ಸಾಮಗಾನಲೋಲ ಶ್ರೀಮುಕುಂದ ಅ.ಪ ವಾರಿಜಾಸನಾರ್ಚಿತ ಪ್ರಭೋ ವಂ ದಾರುಜನ ಪಾರಿಜಾತ ಧೃತಕೌಸ್ತುಭ ಶಾರದೇಂದೀವರನೇತ್ರ ಶ್ಯಾಮಳನೀರದ ಗಾತ್ರ ಸಾರ ಸನ್ಮಣಿ ಕೇಯೂರ ಹಾರ ಭೂಷಾ ಸುಪವಿತ್ರ 1 ಸರ್ವಲೋಕಪಾಲಕೇಶ್ವರಸೇವಿತಸುಪರ್ವಗಣಸದ್ಗುಣಾಕಾರ ಶರ್ವ ಸುರಪತಿ ಮುಖ್ಯ ಸರ್ವದೇವವರವರ್ಯ ಸೂರ್ಯ ಪರ್ವತಾಧಿರಾಜ ಧೈರ್ಯ 2 ಸೃಷ್ಟಿ ರಕ್ಷಣಾಂತಕಾರಕ ಸರ್ವಾತ್ಮಕ ಶಿಷ್ಟದೇವ ದ್ವಿಜರಕ್ಷಕ ಅಷ್ಟಸಿದ್ಧಿಪ್ರದಾ ಸರ್ವೋತ್ಕøಷ್ಟ ಕಷ್ಟನಿವಾರಣ ಅಷ್ಟಮೂರ್ತಿ ಪ್ರಿಯ ಸರ್ವಾಭೀಷ್ಟದ ಗೋಪಾಲಕೃಷ್ಣ 3 ಶ್ರೀಕರ ಶೃಂಗಾರಶೇಖರ ಶ್ರೀಕರಗೃಹ ಶ್ರೀಕರಧಾರಿತ ಮಂದರ ಪಾಕವೈರಿ ಮಣಿನೀಲ ಪಾವನ ಸುಗುಣಶೀಲ ಶೋಕ ಮೋಹ ಸುವಿವೇಕ ನಿತ್ಯೋದಾರ ಶೂರ 4 ಮಾರಜನಕ ಮಂಗಳಾಕಾರ ಮಾರಶತಕೋಟಿ ಸುಂದರ ಸಾರವಸ್ತುಚಯಪರಿಪೂರ ವ್ಯಾಘ್ರಾಧ್ರಿವಿಹಾರ ಧೀರ ವರದವಿಠಲ ಸುರಾಸುರಾರ್ಚಿತಾಂಘ್ರಿಕಮಲ 5
--------------
ವೆಂಕಟವರದಾರ್ಯರು
ಶ್ರೀನಿವಾಸ ಪಾಹಿಮಾಂ ಸದಾ-ಶ್ರಿತಜನಮೋದ ಮೌನಿಜನಜಾತಕಾಂಬೋದ ಪ ಭಾನುಕೋಟಿ ತೇಜ ಸಾಮಗಾನ ಲೋಲ ಶ್ರೀಮುಕುಂದ ಅ.ಪ ವಾರಿಜಾಸನಾರ್ಚಿತ ಪ್ರಭೋ-ವಂದಾರುಜನ ಪಾರಿಜಾತ ಧೃತಕೌಸ್ತುಭ ಶಾರದೇಂದೀವರನೇತ್ರ ಶ್ಯಾಮಳನೀರದ ಗಾತ್ರ ಸಾರ ಸನ್ಮಣಿ ಕೇಯೂರ ಹಾರ-ಭೂಷಿಸುಪವಿತ್ರ 1 ಸರ್ವಲೊಕಪಾಲಕೇಶ್ವರ-ಸೇವಿತಸುಪರ್ವಗಣಸದ್ಗುಣಾಕರ ಗರ್ವಿತದೈತ್ಯಾಂಧಃಸೂರ್ಯ-ಪರ್ವತಾಧಿರಾಜಧೈರ್ಯ 2 ಸೃಷ್ಟಿರಕ್ಷಣಾಂತಕಾರಕ-ಸರ್ವಾತ್ಮಕ-ಶಿಷ್ಟದೇವ ದ್ವಿಜರಕ್ಷಕ ಅಷ್ಟಸಿದ್ಧಿಪ್ರದಾ ಸರ್ವೋತ್ಕøಷ್ಟ ಕಷ್ಟನಿವಾರಣ ಅಷ್ಟಮೂರ್ತಿ ಪ್ರಿಯ ಸರ್ವಾಭೀಷ್ಟದ ಗೋಪಾಲಕೃಷ್ಣ 3 ಧಾರಿತ ಮಂದರ ಪಾಕವೈರಿಮಣಿನೀಲ ಪಾವನ ಸುಗುಣ ಶೀಲ ಶೋಕಮೋಹಸುವಿವೇಕ ನಿತ್ಯೋದಾರ ಶೂರ 4 ಮಾರಜನಕ ಮಂಗಳಾಕಾರ ಮಾರಶತಕೋಟಿ ಸುಂದರ ಸಾರವಸ್ತುಚಯಪರಿ ಪೂರವ್ಯಾಘ್ರಾದ್ರಿ ವಿಹಾರಧೀರ ವರದ ವಿಠಲ ಸುರಾಸುರಾರ್ಚಿತಾಂಘ್ರಿಕಮಲ 5
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸ ವಾಸವಿಸೂನು ಪ ಪತಿ ತ್ಯಜನೆ ತಥ ಚರಣಪಾಣಿ ಪರಮಾನಂದಾ ಚರಣಾಯುಧನಾದವಗೆ ಸೋಕಿದಳ ಚರಣದಿ ಪಾವನಗೈಸಿದೆ ದೇವಾ1 ಪತಿ ಗುರು ಪಿತೃ ಪಿತಾಮಹಾ ದೈ ವತ ಗುರೋರ್ಗುರು ಸ್ವಶುರ ಜಾರಾ ಅತಿಶಯ ಭೂತಿರಭೂತಿ ಎಂದು ಸಂ ತತ ಉಪಾಸ್ಯತನಾಗಿ ಮೆರೆವನೆ 2 ಪಂಚಾದಿಗ್ಬರಸ್ಮಿಗಳಲ್ಲಿ ಪೂಜೆ ಪಂಚ ರೂಪದಿ ಕೊಂಬನಾಡಿಸ್ಥ ಪಂಚಜನ ಪಂಚಮೊಗವೇಶ ತಾಳಿದ ಪಂಚ ಕುಸುಮಸಾರ ಮಧು ವಿದ್ಯಮೂರ್ತಿ 3 ಹೃದಯಾಖ್ಯಪುರ ಪಂಚದ್ವಾರದಲಿ ನೀ ವಿಧಿ ಭವರಿಂದಾರ್ಚನೆ ಗೊಂಬೆ ಪದುಮಾಷ್ಟ ದಳದಲಿ ಪ್ರಹರೇಯ ತಿರುಗುವ ಸುದರುಶನಾಬ್ಜಾದಿ ಅಷ್ಟಬಾಹು ಚನ್ನಾ 4 ಗುಣಪೂರ್ಣ ಐಶ್ವರ್ಯಾನಂತ ಮೋದಾ ಗಾನೆ ತ್ರಾಣ ಕರ್ತೃ ಪ್ರಣವ ತ್ರಿಚರಣಸ್ತಾ ಎಣಿಸುವೆ ಷÀಟುಚತು ತ್ರಿಭಿರೂಪಾತ್ಮಾ5 ಪದ್ದುಮ ಶಾಂತಸಿಂಹ ಅನಿರುದ್ಧ ಪ್ರದ್ಯುಮ್ನ ಸಂಕರುಷಣ ವಾ ಸುದೇವ ನಾರಾಯಣ ರೂಪಗಳಿಂದ ಹೃದ್ಗತನಾಗಿ ಒಪ್ಪುವ ಮಹಾಮಹಿಮಾ 6 ಗೋಕುಲನಾಥ ಗೋವಿಂದ ತಿರುಮಲ ಕಾಕೋದರಾದ್ರಿನಿಲಯ ಸ್ವಾಮಿ ಸಿರಿ ವಿಜಯವಿಠ್ಠಲ ಪ ರಾಕು ಈ ರಥದೊಳು ಕುಳ್ಳಿ ವೇಗಸಾಗಿ7
--------------
ವಿಜಯದಾಸ
ಶ್ರೀನಿವಾಸ-ಶ್ರೀನಿವಾಸ-ಶ್ರೀನಿವಾಸ ಪ ಶ್ರೀನಿವಾಸ ನಾನಿಹೆ ನಿನ್ನ ದಾಸ-ನಿನ್ನ ದಾಸ ನಿನ್ನದಾಸ ಅ.ಪ. ಈಶ, ತರಿಯುವೆ ಕ್ಲೇಶಾ ಕೊಡುಲೇಶ, ಕೊಡುಲೇಶ ಜೀಯ, ಸಡಗರ ದೈವ ಬಡವನು ನಾನು ಕೊಡುವುದು ಏನು, ಅಡಿಗಳನೀಡು, ಇಡುವೆನು ಮೌಳಿ, ಇಡುವೆನು ಮೌಳಿ ಘನಸುಖದಾತ, ಚಿನ್ಮಯಗಾತ್ರ, ವನರುಹ ನೇತ್ರ, ಅನಿಲನಸೂತ್ರ ಅನುದಿನ ತನುಮನನಾಥ ತನುಮನನಾಥ ಕುಂದುಗಳಳಿದು, ಕಂದನ ಸಲಹೋ ಕಂದನ ಸಲಹೋ 1 ವೇದವ್ಯಾಸ, ವಾದಾಗಾರ, ಬೋಧಿಸಿವಿದ್ಯೆ ಸಾಧನೆಗೈಸೋ ವೇಧನ ತಂದೆ ವೇಧನತಂದೆ ಸೋದರ ಪ್ರಜೆಗಳು ದೈತ್ಯರ, ಖೇದವನೀಡ್ಡೆ ಖೇದವನೀಡ್ದೆ ಧೀರವರಾಹ, ಯಾಗಶರೀರ, ಬಹುಗಂಭೀರ ಶೃತಿಗಳಸಾರ ಸಾರ ಸಾರಕೆ ಸಾರ ಕಂಭದಿಬಂದೆ ಕಂದನ ಪೊರೆದೆ ಕಂದನ ಪೊರೆದೆ 2 ಬಲಿಯೆಡೆನಿಂದ ಬೇಡುವೆನೆಂದ ಬೇಡುವೆನೆಂದ ಮೂರಡಿಯಿಂದ ಬೆಳೆಯುತ ಬಂದ ಬೆಳೆಯುತ ಬಂದ ಭೂಮಿಯು ಮುಗಿಯೆ ಶಿರವನ್ನೀಯೆ, ಭಕ್ತನಕಾಯೆ, ಬಾಗಿಲಕಾಯ್ದೆ, ಬಾಗಿಲಕಾಯ್ದೆ ವಿಪ್ರರ ಪೊರೆದ, ವರಸಮರಿಲ್ಲ ವರಸಮರಿಲ್ಲ ಭಾರ್ಗವರಾಮ, ಋಷಿಗಣಸ್ತೋಮ, ದೈತ್ಯವಿರಾಮ, ಸತ್‍ಜನಪ್ರೇಮ, ಮಂಗಳ ನಾಮ ಮಂಗಳನಾಮ 3 ತಾರಕನಾಮ, ಕಲಿಗಿವ ಭೀಮ, ದಶರಥರಾಮ, ಸೀತಾರಾಮ ಜಯಜಯರಾಮ ಜಯಜಯರಾಮ ಲಕ್ಷ್ಮಣನಣ್ಣ, ಸಗುಣಸಂಪನ್ನ, ಜಗಕಿವ ಅನ್ನ, ಬಿಡಬಿಡಬೆನ್ನ ಪ್ರಾಣನೆ ಅನ್ನ, ಕೇವಲನಣ್ಣ, ರವಿಶಶಿಕಣ್ಣ, ಸಿದ್ಧವಿದಣ್ಣ ಆಗಿಸಿ ಯಾಗ, ಸಾಗುತ ಬಂದ ಸಾಗುತ ಬಂದ ಕೊಂದನು ಖಳರ, ಮುಂದಕೆ ನಡೆದ 4 ಮುಟ್ಟಿ, ಕಳ್ಳನ ಮೆಟ್ಟಿ ರಾಜ್ಯವಕೊಟ್ಟ ಜಗಜ್ಜಟ್ಟಿಜಗಜ್ಜಟ್ಟಿ ನಿಜಮುನಿಇವನೆ, ನಿಜವಿಧಿ ಇವನೆ, ಸರ್ವೇಶ, ಸರ್ವೇಶ ಬೆಣ್ಣೆಯ ತಿಂದ ಪೋರನು ಎನಿಸಿ, ಚೋರನು ಎನಿಸಿ ಎನಿಸಿ, ಕ್ರೂರನು ಎನಿಸಿ, ನಾರೇರ ವರಿಸಿ, ಭೂರಿದನೆನಿಸಿ, ಲೀಲೆಯ ತೋರ್ದ 5 ಊರಿಗೆ ಬಂದೆ, ಜರೆಸುತ ಬಂದು, ಬಹುಮಡಿನೊಂದು, ಮರಳಿಯು ಬಂದು ಕದನಕೆ ನಿಂದ, ಬಲುಭಂಢ, ಬಲುಭಂಢ ರಾತ್ರಿಯಲೊಂದು ಸಾಗಿಸಿ ಬಂದು, ವೊಕ್ಕೂ, ತಾಮುಕುಂದ ತಾಮುಕುಂದ, ಸೂತ, ಜಗವಿಖ್ಯಾತ ಕೊಲ್ಲಿಸಿದಾತ ಸರ್ವಸಮರ್ಥ, ಸರ್ವಸಮರ್ಥ ಕಾಲದಿ ಭೇದ ಇಲ್ಲವು ಎಂದು ವಿಭುಶರಣೆಂಬೆ, ವಿಭುಶರಣೆಂಬೆ 6 ವೇದಸುವೃಂದ, ತ್ರಿಪುರರಕೊಂದ, ಬಲ್ಲ, ಎಲ್ಲವ ಬಲ್ಲ ನಿತ್ಯವಿದೆಲ್ಲ, ತಿಳಿದವರಿಲ್ಲ, ಸಾರಿಸಾಕಲ್ಯ ಜಗವನೆಲ್ಲ, ಬಿಗಿದಿಹನಲ್ಲ, ನಾಮದಿನಲ್ಲ, ನಾಮದಿನಲ್ಲ, ಆದಿಯು ಇಲ್ಲ, ಮಧ್ಯವು ಇಲ್ಲ, ಕೊನೆತಾನಿಲ್ಲ, ಖೇದವು ಇಲ್ಲ, ಮೋದವೆ ಎಲ್ಲ, ಭಗನಿಹನಲ್ಲ ಅಪಜಯವಿಲ್ಲ, ಶ್ರೀಗಿವನಲ್ಲ, ಅಪ್ರತಿಮಲ್ಲ, ಪ್ರಕೃತಿಯು ಅಲ್ಲ, ಸ್ವಾಮಿಯು ಇಲ್ಲ, ತಾನೇ ಎಲ್ಲ ಪ್ರೇರಿಪನೆಲ್ಲ, ಭಿನ್ನನು ನಲ್ಲ, ಸರ್ವೋತ್ಕøಷ್ಠ 7 ಕುಜನರ ಮುರಿಯೆ, ಎನಿಸಿ, ಧರ್ಮವನುಳುಹಿ, ಭಕ್ತರಿಗೊಲಿದು, ಪೊರೆವುದು ಸತ್ಯ, ಪೊರೆವುದು ಸತ್ಯ, ಸತ್ಯರ ಸತ್ಯ, ಸಂತರ ಮಿತ್ರ, ಪರಮ ಪವಿತ್ರ, ಲೋಕವಿಚಿತ್ರ ಸುಖಚಾರಿತ್ರ, ಮಂಗಳಗಾತ್ರ, ನಿಖಿಳಸುಭರ್ತ, ಭಕ್ತರ ಭೃತ್ಯ ನತ ಜನಪಾಲ, ವೇದಗಳೆಲ್ಲ, ಶಬ್ದಗಳೆಲ್ಲ, ಘೋಷಗಳೆಲ್ಲ ನಾಮಗಳೆಲ್ಲ, ಇವನನೆ ಎಲ್ಲ, ಪೊಗಳುವವಲ್ಲ, ಮುಕ್ತರಿಗೆಲ್ಲ, ಪ್ರಕೃತಿಯ ಸತ್ತಾ, ಸಕಲವ ನೀತ, ನೀಡುವ ದಾತ, ಸರ್ವಸುವ್ಯಾಪ್ತ, ಸರ್ವಸ್ವತಂತ್ರ8 ವೇದವ್ಯಾಸ, ಬದರೀನಿವಾಸ, ವೇದಸ ಪೀಠ, ಸಾಧಿಸುವಂತ್ಯ ಮೋದಕವೀಂದ್ರ, ಮಧ್ವನಪೋಷ, ಆದರವೀಯೊ ಪಾದಗಳಲ್ಲಿ ವೇದಗಳಳಿಯೆ, ವಿಧಿ ಮುಖಸುರರು, ಪಿಡಿದರು ಪಾದ ಮಾಧವ ನೀನು ಮೇದಿನಿಗಿತ್ತೆ ಸೂತ್ರ ಗೈದ ಮಹೇಶ, ವೇದಕುಮಿಗಿಲು, ಭಾರತಕರ್ತ, ಭಾರತ ಕರ್ತ ಛಂದದಸುಕಾಯ ಕುಡಿಸೈ ಜೀಯ ಹರಿಸುತಮಾಯ, ಹರಿಸುತಮಾಯ, ಹರಿಸುತಮಾಯ 9 ಶ್ರೀ ಇಹವಕ್ಷ, ಜ್ಞಾನಸುಪಕ್ಷ, ಸರ್ವಾಧ್ಯಕ್ಷ, ದಿವಿಜರಪಕ್ಷ ಬೃಹತೀಭಕ್ಷ, ತಾನಿರಪೇಕ್ಷ, ಆಶ್ರಿತರಕ್ಷ, ಕರುಣ ಕಟಾಕ್ಷ, ಕರುಣಿಸು ರಕ್ಷ, ನೀಜಗರಕ್ಷ, ಅಜಗರ ಶೈಯ್ಯ, ಮನ್ಮಥನಯ್ಯ ಭವಬಿಡಿಸಯ್ಯ, ಭಯಹರಿಸಯ್ಯ ದಯಮಾಡಯ್ಯ ಶರಣುಪರೇಶ ಇಚ್ಛೆ ಅನೀಶಾ, ಕಳೆಕಳೆ ಆಶಾ, ಕಡಿಕಡಿಪಾಶಾ, ನಾಬಡದಾಸ, ತೈಜಸ ಶರಣು, ಪ್ರಾಜ್ಞನೆ ಶರಣು, ತುರ್ಯನೆ ಶರಣು, ಕಪಿಲನೆ ಶರಣು ಶರಣು ಅನಂತ, ಶರಣು ಅನಂತ 10 ವೆಂಕಟರಮಣ, ಕಿಂಕರನಾನು, ಸಂಕಟಹರಿನೊ ಶಂಕರತಾತ ತಿದ್ದೊ, ಪಂಕಜನಯನ ದಡ್ಡನು ನಾನು ಭಕ್ತಿಗಡ್ಡೆಗೆಸೇರಿಸು ಪ್ರಾಣನ ಆಣೆ ರಾಜರ ಆಣೆ ಜಯಮುನಿ ಆಣೆ, ಗುರುಗಳ ಆಣೆ, ಉರಗಾದ್ರಿವಾಸ, ಪದ್ಮಜಳೀಶ, ಹರಿಸುತ ದೋಷ, ಚರಣದಿವಾಸ, ನಿರುತಲೀಯೊ, ಕರುಣವ ಸುರಿಸಿ, ಮರುತನ ಮತದ ಅರುಹುತಲೆನಗೆ, ಸಂತತ ವೆಂಬೆ, ಸಂತತವೆಂಬೆ, ಸಂತತವೆಂಬೆ ನಂದದಿ ಪಠಿಸೆ ನಂದವು ಶಾಶ್ವತ, ಜಯಮುನಿಹೃಸ್ಥ, ಮಧ್ಯರಮೇಶ ಶ್ರೀಕೃಷ್ಣವಿಠಲ ವಲಿಯುವ ಸಿದ್ಧ, ವಲಿಯುವ ಸಿದ್ಧ 11
--------------
ಕೃಷ್ಣವಿಠಲದಾಸರು
ಶ್ರೀನಿವಾಸನೆ ಗಾನಲೋಲನೆ ಸಾನುರಾಗದೊಳೀಕ್ಷಿಸೈ ಜ್ಞಾನಪೂರ್ಣನೆ ಸೂನುವೆಂಬಭಿಮಾನದಿಂ ಪರಿಪಾಲಿಸೈ ಪ. ದೀನಪಾಲಕ ದಾನವಾಂತಕ ದೈನ್ಯದಿಂ ಮೊರೆಹೊಕ್ಕೆನೈ ಜ್ಞಾನಗಮ್ಯನೆ ಭಾನುತೇಜನೆ ನೀನೇ ಗತಿಯೆಂದೆಂಬೆವೈ ಅ.ಪ. ಸಾರಸಾಕ್ಷನೆ ಶ್ರೀರಮೇಶನೆ ಸಾರಿ ಬಾ ಭವದೂರನೇ ಗಾರುಗೊಂಡೆವು ಪಾರುಗಾಣಿಸು ನೀರಜೋದ್ಭವ ಜನಕನೆ ಕಾರ್ಯಕಾರಣ ಕರ್ತೃ ನೀನಹುದಾರಯಲ್ ಜಗದೀಶನೆ ಬೇರೆ ಕಾಣೆವದಾರ ನಿನ್ನನೆÉೀ ಸಾರೆ ಬೇಡುವೆ ದೇವನೆ 1 ಸಾರ ಸಂಗ್ರಹ ಮಾಡುತೆ ಆರ್ಯಕೀರ್ತಿಯ ಸಾರಿಪಾಡುತೆ ವೀರನಾದವ ಗೈಯುತೆ ಭೂರಿ ವೈಭವವೆಲ್ಲವಂ ಧೈರ್ಯದಿಂ ನಲವೇರೆ ಕೀರ್ತಿಸಿ ಕಾರ್ಯಸಿದ್ಧಿಯ ಪೊಂದುವೋಲ್2 ನಿರ್ಗುಣಾತ್ಮನೆ ನಿರ್ವಿಕಲ್ಪನೆ ನಿತ್ಯನಿರ್ಮಲಚರಿತನೆ ಮಾರ್ಗದರ್ಶಕನಾಗಿ ನಮ್ಮೊಳಗಾವಗಂ ಕೃಪೆ ಗೈವನೇ ಸಾರ್ವಭೌಮನೆ ಸರ್ವಶಕ್ತನೆ ಶೇಷಶೈಲ ನಿವಾಸನೇ ಸಾರ್ವಕಾಲದೊಳೋವುದೆಮ್ಮನು ಪಾರ್ವತೀಪತಿ ಮಿತ್ರನೆ 3
--------------
ನಂಜನಗೂಡು ತಿರುಮಲಾಂಬಾ
ಶ್ರೀನಿವಾಸನೆ ನಿನ್ನ | ವರ್ಣಿಸಲು ಅಳವೇ ಮಾನನಿಧಿ ಗುಣಪೂರ್ಣ | ನಿನ್ನಂಘ್ರಿ ಭಜಿಪರ ಬನ್ನ ಪ. ವೈನತೇಯನ ವರೂಥ ನಾನಾ ಹಾರ ಪದಕದಿ ಮೆರೆವ ಸುಂದರ ಕಾಮಪೂರ್ಣ ಮುಖಾರವಿಂದನ ನೀ ಮನದಿ ತೋರುತ್ತ ಪೊರೆಯೊ ಅ.ಪ. ಶೇಷಪರ್ವತವಾಸ | ಭಕ್ತರನು ಸಲಹೋ ಈ ಕ್ಷಿತಿತ್ರಯಕೀಶ ಪೋಷಿಸುವೋ ಭಕ್ತರವಾಸಿ ನಿನ್ನದೊ ಶ್ರೀಶ ಲಕ್ಷ್ಮೀನಿವಾಸ ದೋಷದೂರನೆ ಎನ್ನ ಅವಗುಣ ದೋಷಗಳನೆಣಿಸದಲೆ ಸಲಹೊ ಶೇಷವರ ಪರ್ಯಂಕಶಯನ ವಿ- ಭೀಷಣ ಪ್ರಿಯ ಭೀಷ್ಮವರದ1 ಮಾಘ ಸಪ್ತಮಿ ಕುಂಭ | ಸಂಕ್ರಮಣ ದಿವ್ಯ ಯೋಗ ಶುಕ್ಲದಿ ಎಂಬ | ಸ್ಥಿರವಾರದಲ್ಲಿ ಆಗ ರಥದಲ್ಲಿ ಬಿಂಬ | ಭಕುತರಿಗೆ ಕಾಂಬ ಜಾಗು ಮಾಡದೆ ಸೂರ್ಯಮಂಡಲ ಬೇಗ ಬಿಗಿದಿಹ ಸಪ್ತ ಹಯಗಳ ಬಾಗಿ ಭಜಿಸಲು ಭಕ್ತವರ್ಗವು ನೀ ಜಗದಿ ಮೆರೆಯುತ್ತ ಪೊರೆದೆ 2 ವಿೂನನಾಗಿ ಮತ್ತೆ ವೇದವನೆ | ತಂದು ಆ ನಳಿನಭವಗಿತ್ತೆ ಅಲ್ಲಿಂದ ಸುರರಿಗೆ ಪ್ರಾಣದಾನವನಿತ್ತೆ ಮೇದಿನಿಯ ಪೊತ್ತೆ ನಾನೆ ಜಗಕೆಂಬ ದಾನವನ ಕೊಂದು ದಾನ ಬೇಡಿ ಭೂಮಿ ಅಳೆದು ಮಾನಿನಿ ಶಿರ ತರಿದು ಸೀತಾ ಮಾನಿನಿಗೆ ಅಂಬುಧಿಯ ಬಿಗಿದೆ 3 ಮಾನಿನಿಯರಿಗೆ ಕಾಣದೆ | ಬೆಣ್ಣೆಯನು ಕದ್ದು ಮಾನವೆಲ್ಲವ ಕಳೆದೆ ಅಲ್ಲಿಂದ ಮುಂದೆ ಮಾನವ ಬಿಟ್ಟು ನಿಂದೆ ಏನ ಹೇಳಲಿ ಹಯವನೇರಿ ದಾನವರ ಸಂಹರಿಸಿ ಮೆರೆದೆ ನಾನಾ ರೂಪ ನಾಟಕಧರ ನೀನೀ ಪರ್ವತದಲಿ ನಿಂದಿಹೆ 4 ದೇಹವ್ಯಾಪ್ತಕ ನೀನೆ | ದೇಹಗಳ ಕೊಟ್ಟು ಮೋಹಗೊಳಿಸುವ ನೀನೆ ದೇಹಸ್ಥನಾಗಿ ತೋರುವ ಬಿಂಬ ನೀನೆ | ಜೀವಾಕಾರನೆ ಈ ಹದನ ಎನಗಿನ್ನು ತಿಳಿಯದೊ ಮೋಹ ಹರಿಸಿ ಸುಜ್ಞಾನ ನೀಡೊ ಸ್ನೇಹ ಗೋಪಾಲಕೃಷ್ಣವಿಠ್ಠಲ ಶ್ರೀ ಹರಿಯೆ ಹೃದಯದಲಿ ನಿಲಿಸೊ 5
--------------
ಅಂಬಾಬಾಯಿ
ಶ್ರೀನಿವಾಸಾರ್ಯರ ಶೃಂಗಾರ ಗುಣಂಗಳಆನೆಂತು ವರ್ಣಿಸುವೆನು ಪ ದಾನವಾಂತಕ ಹರಿಯ ಮಾನಸಾರ್ಚನೆ ಮಾಳ್ಪಮಾನಿಸಾ ವೇಷಧರರ ಇವರ ಅ.ಪ. ನಿರ್ಜರ ಪತಿಯ ಚಿತ್ತ ಸಂಪಾದಿಸುವರಮತ್ತು ಗಜವೆಂಬ ದುರ್ವಾದಿಗಳನೇ ಮುರಿದು ಹತ್ತು ದಿಕ್ಕಿಲಿ ಮೆರೆವರ ಇವರ 1 ಪಾದ ಅಂಗಾರ ಕರಮುಟ್ಟಿ ಪಾಲಿಸುತ್ತಿಹರ ||ವರ ಮಂತ್ರಾಕ್ಷತೆಯನ್ನಿತ್ತು ಮುದದಿಂದ ಪಾ-ಮರರನ್ನೆ ಪೊರೆವರ ಇವರ2 ಲಕ್ಷ್ಮೀಪತಿ ಶ್ರೀನಿವಾಸಾರ್ಯರೆಮ್ಮನು ಬಿಡದೆ ರಕ್ಷಿಸಲೆಂತೆಂಬೆನೊಅಕ್ಷರ ಪುರುಷ ಅಪ್ರಾಕೃತನ ತೋರಿ ಮದ ಮತ್ಸರವ ಬಿಡಿಸೆಂಬೆನೊ ||ಸೂಕ್ಷ್ಮಾಂಬರಧರ ಮೋಹನ ವಿಠಲನಈ ಕ್ಷಣದಿ ತೋರಿಸೆಂಬೆನೊ ನಾನು 3
--------------
ಮೋಹನದಾಸರು
ಶ್ರೀನಿವಾಸಾಷ್ಟಕ ಪಾಹಿಮಾಮರೇಂದ್ರ ವಂದಿತ ಪಾಹಿಮಾಮ ಜರಾವೃತಪಾಹಿಮಾಮಿಭರಾಜ ಪೂಜಿತ ಪಾಹಿ ಪಾಂಡವ ಕಾಮಿತ ಪ ಶ್ರೀನಿವಾಸ ಸರೋಜ ಶೋಭಿತ ಪಾಣಿ ಕಾಂಚನ ಕಂಕಣಜ್ಞಾನ ವೀರ್ಯ ಬಲ ಪ್ರಮೋದ ಮುಖೋರು ಸದ್ಗುಣ ಕಾರಣವೇಣುನಾದ ವಿಮೋಹ ಗೋಕುಲ ಕಾಮಿನೀ ಸುಖ ಸಾಧನಸಾನುರಾಗ ಕಟಾಕ್ಷ ಸುಸ್ಮಿತ ಭಾನು ಕೋಟಿ ಸಮಾನನ 1 ವಕ್ತ್ರ ಸುಮಂದಹಾಸ ವಿಮೋಹನಮಂದರೋದ್ಧರ ಮಾಧವಾವರ ವೃಂದಪಾಲನ ಭಾವನಇಂದ್ರ ಮುಖ್ಯ ಸುರೇಂದ್ರ ಶತ್ರು ಬಲೀಂದ್ರ ದಾನವ ಬೋಧನಸಿಂಧು ಸಂಭವ ಸುಂದರಾಮೃತ ಭೋಜನಾಮರ ಮೋದನ 2 ಕಂಸಕಾಲ ಜರಾಸುತಾದ್ಯ ಸುರಾಂಶ ಸಂಘ ನಿಷೂದನಸಂಶಿತವೃತ ಕಾಮಿನೀ ವರ ಹಿಂಸಿತಾಸುರ ಕಾಮನಹಂಸನಾಶ ಭವಾಂಶ ತೋಷ ಸುಧಾಂಶು ಬಿಂಬ ನಿಕೇತನಕಂಸಚಾಪ ವಿನಾಶನಾಮರ ಸಂಶಯಾಂಕುರ ಮೋಚನ 3 ಕೂರ್ಮ ವರಾಹ ವಾಮನ ವತ್ಸ ಭಾಷಿತ ಪಾಲನಕತ್ಸಿತಾವನಿಪಾಲನ ಶತೃದಚ್ಚುತಾತ್ಮ ಸುಬೋಧನವತ್ಸವಾಟ ಚರೋರು ರಾಕ್ಷಸ ಭತ್ರ್ಸನಾಮೃತ ಸಾಧನಸ್ವೇಚ್ಛಯಾತ್ತ ಸಮಸ್ತ ವಿಗ್ರಹ ಮತ್ ಶರೀರ ಸುಖಾಸನ 4 ಪಂಕಜ ಚಾರು ಸೂನು ದಯಾಕರ 5 ಮಂದಹಾಸ ಮುಖೇಂದು ಮಂಡಲ ಸುಂದರಾಮೃತ ಭಾಷಣನಂದ ಚಿದ್ಭನ ವೃಂದ ಭೂಷಣ ನಂದಗೋಪ ಸುನಂದನಸಿಂಧುತೀರ ವಿಹಾರ ಗೋಕುಲ ಕಾಮಿನಿ ಸುಂದರೀಕರ ಪೂಜನನಂದ ಚಿದ್ಭನ ದೇವ ಭಾಸ್ಕರ ನಂದಿನೀ ರತಿ ಸಾಧನ 6 ಸಾರಥಿ ವೃಷ್ಣಿವಂಶ ಸಮುಜ್ವಲಪ್ರೇಷ್ಠ ಸಂಸದಿ ಸೇವಿತಾಮರ ಸರ್ವದಿವೌಕ ಸಾಮುರು ಮುಷ್ಟಿಕಾದ್ಯ ಸುರಾನಳಮುಷ್ಟಿಧಾನ್ಯದ ಕಷ್ಟ ನಾಶನ ವೃಷ್ಣಿವರ್ಯ ಮಹಾಬಲ ತುಷ್ಟದಾಶ್ರಿತ ಸತ್ಫಲವಿಷ್ಣುರೂಪಮಮೇಷ್ಟ ದೋಹವಶಿಷ್ಠ ಸೇವಿತ ವಿಠ್ಠಲ 7 ವಕ್ತ್ರ ನಿಷೇವಣಬಂಧನಂ ಪರಿಹೃತ್ಯ ಮಾಮವ ಸುಂದರಾಂಬರ ಭೂಷಣ 8
--------------
ಇಂದಿರೇಶರು
ಶ್ರೀಪತಿಯ ನೈವೇದ್ಯ ಕೊಡುವದು ಧೂಪದಾಂತರ ಭೂಮಿಶೋಧನ ಆಪದಿಂ ಮಂಡಲವ ಮಾಡುತ ರಂಗವಲಿ ಹಾಕಿ ಸೂಪ ಅನ್ನವು ಅಗ್ನಿಕೋಣದಿ ಆ ಪರಮ ಅನ್ನವನು ಈಶಾ ನ್ಯಾಪೆಯಾಲೇಹಗಳ ನೈರುತದಲಿ ಇಟ್ಟು ತಥಾ 1 ವಾಯುದಿಶದಲಿ ಉಪಸುಭೋಜ್ಯವು ವಾಯಸಾನ್ನದ ಮಧ್ಯ ಘೃತಸಂ ಸ್ತೂಯಮಾನ ನಿವೇದನವು ಈ ಕ್ರಮದಿ ಹೀಂಗಿಟ್ಟು ಬಾಯಿಯಿಂದಲಿ ದ್ವಾದಶ ಸ್ತುತಿ ಗಾಯನದಿ ನುಡಿಯುತಲಿ ಈ ಕಡೆ ಆಯಾ ಅಭಿಮಾನಿಗಳು ದೇವತೆಗಳನು ಚಿಂತಿಸುತ 2 ಓದನಕ ಅಭಿಮಾನಿ ಶಶಿಪರ ಮೋದನಕ ಅಭಿಮಾನಿ ಭಾರತಿ ಆದಿವಾಕರ ಭಕ್ಷ ಕ್ಷೀರಾಬ್ಧೀಜೆ ಸರ್ಪಿಯಲಿ ಸ್ವಾದುಕ್ಷೀರಕ ವಾಣಿ ಮಂಡಿಗಿ ಲೀ ದ್ರುಹಿಣನವನೀತ ಪವನಾ ದಾದಧಿಗೆ ಶಶಿವರುಣ ಸೂಪಕೆ ಗರುಡ ಅಭಿಮಾನಿ 3 ಶಾಕದಲಿ ಶೇಷಾಮ್ಲ ಗಿರಿಜಾ ನೇಕನಾಮ್ಲದಿ ರುದ್ರಸಿತದಲಿ ಪಾಕಶಾಸನ ಶೇಷುಪಸ್ಕರದಲ್ಲಿ ವಾಕ್ಪತಿಯೂ ಈ ಕಟು ಪದಾರ್ಥದಲಿ ಯಮ ಬಾ ಹ್ಲೀಕ ತಂತುಭದಲ್ಲಿ ಮನ್ಮಥ ನೇಕ ವ್ಯಂಜನ ತೈಲ ಪಕ್ವದಿ ಸೌಮ್ಯನಾಮಕನೂ 4 ಕೂಷುಮಾಂಡದ ಸಂಡಿಗಿಲಿ ಕುಲ ಮಾಷದಲಿ ದಕ್ಷ ಪ್ರಜಾಪತಿ ಮಾಷ ಭಕ್ಷದಿ ಬ್ರಹ್ಮಪುತ್ರನು ಲವಣದಲಿ ನಿಋತಿ ಈ ಸುಫಲ ಷಡ್ರಸದಿ ಪ್ರಾಣ ವಿ ಶೇಷ ತಾಂಬೂಲದಲಿ ಗಂಗಾ ಆ ಸುಕರ್ಮಕೆ ಪುಷ್ಕರನು ಅಭಿಮಾನಿ ದೇವತೆಯೂ 5 ಸಕಲ ಭಕ್ಷ್ಯಗಳಲ್ಲಿ ಉದಕದಿ ವಿಶ್ವ ಮೂರುತಿ ಮುಖದಲೀ ನುಡಿ ಅಂತಿಲೀ ಶ್ರೀ ಕೃಷ್ಣ ಮೂರುತಿಯ ನಖ ಚತು ಪದಾರ್ಥದಲಿ ಆ ಸ ಮ್ಯಕು ಚತುರವಿಂಶತಿ ಅಭಿಮಾ ನಿಕರ ಚಿಂತಿಸಿ ಸರ್ಪಿ ಸಹ ಶ್ರೀ ತುಳಸಿಯನು ಹಾಕಿ6 ಕ್ಷೀರ ದÀಧಿ ಕರ್ಪೂರ ಸಾಕ ರ್ಜೀರ ಪನಸ ಕಪಿಥ್ಥ ಪಣ್ಕದ ಳೀರಸಾಲ ದ್ರಾಕ್ಷ ತಾಂಬೂಲದಲಿ ಚಿಂತನೆಯೂ ಪೂರ ಶಂಖದಿ ಉದಕ ಓಂ ನಮೊ ನಾರೆಯಣಾ ಅಪ್ಟಾಕ್ಷರವು ತನ ಮೋರೆ ಮುಚ್ಚಿ ಶತಾಷ್ಟವರ್ತಿಲಿ ಮಂತರಿಸಿ ತೆರೆದೂ7 ಸೌರಭೀ ಮಂತ್ರದಲಿ ಪ್ರೇಕ್ಷಿಸಿ ಮೂರೆರಡು ಮೊದಲಾಗಿ ಶಂಖವು ಅಂತಿಮಾಡಿ ತಥಾ ಪೂರ್ವ ಆಪೋಶನವು ಹೇಳಿ ಅ ಪೂರ್ವ ನೈವೇದ್ಯವು ಸಮರ್ಪಿಸಿ ಸಾರ್ವಭೌಮಗ ಉತ್ತರಾಪೋಶನವು ಹೇಳಿ ತಥಾ 8 ಪೂಗ ಅರ್ಪಿಸಿದಂತರದಿ ಅತಿ ಬ್ಯಾಗದಲಿ ಲಕ್ಷ್ಯಾದಿ ನೈವೇ ದ್ಯಾಗ ಅರ್ಪಿಸಿ ತಾರತಮ್ಯದಿ ಉಳಿದ ದೇವರಿಗೆ ಸಾಗಿಸೀ ಶ್ರೀ ಹರಿಯ ಸಂಪುಟ ದಾಗ ನಿಲ್ಲಿಸಿ ವೈಶ್ವದೇವವು ಸಾಗಿಸೀ ಶ್ರೀ ವಿಜಯವಿಠಲನ ಧೇನಿಸುತ ಮುದದಿ9
--------------
ವಿಜಯದಾಸ