ಒಟ್ಟು 12958 ಕಡೆಗಳಲ್ಲಿ , 134 ದಾಸರು , 6175 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋಟಿ ಪೂಜೆಗೆ ಸಮವು ಸ್ತೋತ್ರವು ಸಾಟಿಯಿಲ್ಲ ಮನಾಲಯಕ್ಕೆ ಭ ವಾಟವಿಯ ದಾಟುವರು ಸುಲಭದಿ ಪರಮ ವೈಷ್ಣವರು 1 ಕರಿ ಕನಕಕಶಿಪುಸುತಜಾಮಿಳ ನರಪ ರುಕ್ಮಾಂಗದನು ದ್ರೌಪದಿ ದುರುಳ ರಾವಣನನುಜ ಮನು ಪೌತ್ರನು ವಶಿಷ್ಠ ಮುನಿ ಸುರನದೀಸುತ ಶುಕನು ಶೌನುಕ ಬಲಿ ಕಿರೀಟಿಗಳು 2 ಇವರು ಮೊದಲಾದವರು ಭಕ್ತ ತವಕದಲಿ ಸಂಪಾದಿಸಿದರಿವರಂಘ್ರಿಯ ಸ್ಮರಣೆ ತವತವಗೆ ಕೊಡುತಿಹುದು ನಿತ್ಯದಿ ಕವಿವಿನುತ ಗುರುರಾಮ ವಿಠಲನ ದಯೆ ಪಡೆಯಬಹುದು 3
--------------
ಗುರುರಾಮವಿಠಲ
ಕೋಣ ಕೇಳಲೋ ಕೋಣ ನೀನು ಕೋಣನಲ್ಲವು ಬ್ರಹ್ಮ ಕೋಣ ಪ ಶಾಸ್ತ್ರ ಪುರಾಣವ ಕೋಣ ನೀನು ವಿಸ್ತರವೋದಿದೆ ಕೋಣವಸ್ತು ತಿಳಿಯಲಿಲ್ಲ ಕೋಣ ನಿನ್ನ ಪುಸ್ತಕ ಬಟ್ಟೆಯಲ್ಲೋ ಕೋಣ 1 ಎಲ್ಲವನೋದಿದೆ ಕೋಣ ನಾನು ಬಲ್ಲೆನೆನುತಿಹೆ ಕೋಣಬಲ್ಲೆನು ನಿನ್ನ ಕೋಣ ನೀನು ಬಲ್ಲಿಡೆ ಬಲ್ಲೆಯೋ ಕೋಣ2 ಹೆಂಡಿರು ಮಕ್ಕಳು ಕೋಣ ಪ್ರಪಂಚ ಯಮನಾಳು ಕೋಣಖಂಡಿಸಿ ತಿಳಿ ನೀನು ಕೋಣ ಪ್ರಾಣ ಕೊಂಡವರವರೀಗ ಕೋಣ3 ಎಲ್ಲಿಂದ ಬಂದೆಯೋ ಕೋಣ ನೀನೆಲ್ಲಿಗೆ ಹೋಗುವೆ ಕೋಣಬಲ್ಲವಿಕೆ ನಿನಗಿಲ್ಲ ಕೋಣ ನೀ ಎಲ್ಲರ ಹೊಡೆಗೆಡೆ ಕೋಣ 4 ಅರಿ ಕೋಣ ಇನ್ನು ಚಿದಾನಂದನರಿಯದಿದ್ದಡೆ ಕೋಣ5
--------------
ಚಿದಾನಂದ ಅವಧೂತರು
ಕೋಪ ಮಾಡುವರೆ - ಕೃಪಾಳು ನೀನು ಕೋಪ ಮಾಡುವರೆ ಪ ಕೋಪ ಮಾಡುವರೇನೋ ಸಂಸøತಿ ಕೂಪದೊಳು ಬಿದ್ದ್ಹೊರಳುತಿಹನ ನೀ ಪರಾಮರಿಸಿನ್ನು ಕೀರ್ತಿ ಕ- ಲಾಪವನು ಕಾಪಾಡಿಕೊಳ್ಳದೆ ಅ.ಪ. ನಾಥನು ನೀನು ಎಂದೆಂದಿಗೂ ದೂತನು ನಾನು ಸಿದ್ಧಾಂತವು | ನೀತವಿದಿನ್ನು ಕೋತಿ ಕುಣಿವುದು ಕೊರವ ಕುಣಿಸಿದ ರೀತಿಯಲಿ ಜಗತೀತಳದಿ - ವಿ ಖ್ಯಾತಿಯಲ್ಲವೆ ಮಾತು ಪುಸಿಯೇ ನೀ ತಿಳಿದು ಕರುಣಿಸದೆ ಬರಿದೆ 1 ಅರಿತವ ನೀನು - ಷಡ್ವರ್ಗದಿ ಬೆರತವ ನಾನು - ಚರಣಂಗಳಿಗೆರಗುವೆನಿನ್ನು ಅರಿತು ನೆನೆಯೆ ಪ್ರಪನ್ನರೊಮ್ಮೆಗೆ ಎರವು ಮಾಡದೆ ಪೊರೆವೆನೆಂಬುವ ಬಿರುದನುಳಿದು ಕರುಣವಿಲ್ಲದೆ ಮರೆಯ ಹೊಕ್ಕವರೊಡನೆ ಕೆರಳಿ 2 ಏನಾದರೇನು - ನೀನಲ್ಲದೆ ಪ್ರಾಣ ಸತಿಸುತ ದ್ರವ್ಯ ಮಾನಪ- ಮಾನ ಅಭಿಮಾನಗಳು ನಿನ್ನವು ದೀನ ಜನ ಮಂದಾರ ಗುಣಗಳ ಪೂರ್ಣ ಲಕ್ಷ್ಮೀಕಾಂತ ಪ್ರಭುವೆ 3
--------------
ಲಕ್ಷ್ಮೀನಾರಯಣರಾಯರು
ಕೋಪದೊಳು ಜಮದಗ್ನಿ ತಾಪದೊಳು ಮಾರ್ತಾಂಡ ಭೂಪರೊಳು ರಘುನಾಥನೆನ್ನ ನಾಥ ದ್ವೇಷದೊಳು ಭಾರ್ಗವನು ರೋಷದೊಳು ದೂರ್ವಾಸ ಮೋಸದೊಳ್ ಶ್ರೀಕೃಷ್ಣ ಮುದ್ದು ಕೃಷ್ಣ ಭೋಗದೊಳು ದೇವೇಶ ರಾಗದೊಳು ಗಿರಿಜೇಶ ತ್ಯಾಗದೊಳು ಶಿಬಿರಾಯ ಮದನಕಾಯ ಜ್ಞಾನದೊಳು ಜನಕನು ಧ್ಯಾನದಲಿ ದತ್ತರ್ಷಿ ಸೂನೃತದಿ ಹರಿಶ್ಚಂದ್ರ ಮಾನನಿಧಿಯು ಧನಿಕನೆಂದೆನಲಷ್ಟಸಿದ್ಧಿದಾತಂದೆ ಘನವಂತನೆನೆ ಪ್ರಣವಸ್ವರೂಪಗೆ ಧಣಿಯೆನಲು ಮೂಜಗಕ್ಕೊಡೆಯನಿವÀನೆ ಎಣೆಯುಂಟೆ ಶೇಷಾದ್ರಿವಾಸನಿವಗೆ
--------------
ನಂಜನಗೂಡು ತಿರುಮಲಾಂಬಾ
ಕೋಪವೇನೋ ಕೃಷ್ಣ ಕೋಪವೇನೊ ಪಾಪಿ ಜನಗಳಿಗೆ ನಿನ್ನ ರೂಪವÀ ತೋರಿದೆನೆಂದು ಪ ಪೇಳು ಕೃಷ್ಣ ನಿನ್ನ ಕೇಳುವೆನೊ ಗಾಳಿ ಚಳಿಮಳೆಗಳಲಿ ನಿನ್ನ ಧಾಳಿಯ ಮಾಡಿದೆನೆಂದು 1 ಸುಳ್ಳಿದಲ್ಲ ಕೃಷ್ಣ ಒಲ್ಲೆನೆಲ್ಲ ಹಳ್ಳ ಕೊಳ್ಳಗಳಲಿ ನುಗ್ಗಿ ಹಳ್ಳಿ ಹಳ್ಳಿಗೆ ತೋರಿದೆನೆಂದು 2 ಗುಟ್ಟಿದಲ್ಲ ಕೃಷ್ಣ ಬಿಟ್ಟಿದ್ದಲ್ಲ ಹೊಟ್ಟೆಪಾಡಿಗಾಗಿ ನಿನ್ನ ರಟ್ಟುಮಾಡಿ ದಣಿಸಿದೆನೆಂದು 3 ನಿನ್ನ ತ್ಯಾಗ ಕೃಷ್ಣ ಎನ್ನ ಯೋಗ ಮನ್ನಿಸಲಾರೆಯ ದಯದಿ ಚಿನ್ಮಯ ಪ್ರಸನ್ನ ಕೃಷ್ಣ 4
--------------
ವಿದ್ಯಾಪ್ರಸನ್ನತೀರ್ಥರು
ಕೋಪವ್ಯಾತಕೊ ಕರುಣಾನಿಧೆ ಭೂಪನೆಂದು ನಿನ್ನ ನಂಬಿದೆ ಶ್ರೀಪತೇ ಶರಣಾಗತ ಮೇಲಾಪದ್ಗಣ ತರಬಾರದು ಬರಿದೆ ಪ. ಆವ ಕಾಲಕು ನಿನ್ನ ಸೇವೆ ಮಾಡುವುದೆನ್ನ ಪಾವನವಂತಿರಲು ನೋವನು ಪೊಂದಿಪುದ್ಯಾವ ಘನತೆ ಭದ್ರನಾವನೆ ನಿನಗೆ 1 ಹಸ್ತಪಾದಾದಿಗಳನಿತ್ತುದೆ ಸೇವನಗೆಂದುತ್ತಮ ಭಾವವಿಡ- ಪರಿ ಚಿತ್ತಜ ಜನಕ 2 ನಿತ್ಯ ನೇಮಂಗಳನು ತಕ್ಕಕಾಲದಿ ನಡೆಸುತ ಶಕ್ತಿಯನಿತ್ತು ಸಲಹು ಪುರುಷೋತ್ತಮ ನಿರುಪದಿ 3 ಮುನ್ನಿನ ಭವಗಳನೆಲ್ಲ ಕಳೆದ ಮ- ಹೋನ್ನತಿಯನು ತವ ಕರುಣದಿ ಸೇರಿದೆ4 ತಪ್ಪುಗಳೆಷ್ಟಿದ್ದರೂ ಒಪ್ಪಿಕೊ ಮುನಿಸದಿರು ಅಪ್ಪ ನೀನೆಂಬುವಶ್ರುತಿ ಕೃತ ಬಿರುದನು ತಪ್ಪಿಸಿಕೊಳದಿರು ಸರ್ಪ ಗಿರೀಶನೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಕೋಪಿಸದಿರು ಸ್ವಾಮಿ ಶ್ರೀ ನರಸಿಂಹ ಪ. ಕೋಪಿಸದಿರು ಕರುಣಾಪಯೋನಿಧಿಯೆ ಮ- ಹಾಪರಾಧಗಳನು ಲೇಪಗೊಳಿಸದಿರು ಅ.ಪ. ಮಧ್ವ ವಲ್ಲಭ ನಿನ್ನ ಸೇವೆಯ ನಡಸುವ ಮಧ್ಯ ಮಧ್ಯದೊಳೆದ್ದು ಹೋದ ತಪ್ಪು ಶುದ್ಧಿಯಿಲ್ಲದ ತಪ್ಪು ಸೂಕ್ತಿ ಪಾಠಗಳೊಳಾ- ಬದ್ಧ ಬರುವ ತಪ್ಪೆನಿದ್ದರು ಕ್ಷಮಿಸಿನ್ನು 1 ಸಂಸಾರ ಲಂಪಟನಾಗಿ ಬಳಲುವೆನು ಕಂಸಾರಿ ನಿನಗಿನ್ನು ಪೇಳ್ವದೇನು ಹಂಸವಾಹನ ಪೀಠ ಹಲಧರನನುಜನೆ ಸಂಶಯಿಸದೆ ಎನ್ನ ಕಾಯೊ ಕಮಲನಾಭ 2 ಪತಿತಜನರಿಗಧಿಪತಿಯಾಗಿರುವೆ ನಾನು ಮತಿಹೀನನೆಂಬುದ ಬಲ್ಲಿ ನೀನು ಪಾದ ಪದ್ಮವೆ ಇನ್ನು ಗತಿ ಎಂದು ನಂಬಿದನ ಮೇಲೆ ಮುನಿಸಿನ್ನೇನು 3 ಪಾತಕ ಕಡಲೊಳು ಪೊರಳುತ ನೆರಳುತ ಯಾತರಿಂದಲು ಏಳಲಾರದಿನ್ನು ಶ್ರೀ ತರುಣಿಯವರ ನಿನ್ನ ಸೇರಿದ ಜಗ ನ್ನಾಥ ದಾಸರ ಪಾದದವಲಂಬಗೊಂಡೆನು 4 ಶ್ರೀಶ ಶೇಷಗಿರೀಂದ್ರ ವಾಸ ನಿನ್ನನೆ ನಂಬಿ ದಾಸ ಕೂಟದಿ ಸೇರಿಕೊಂಡಿಹೆನು ಣಾ ಸಮುದ್ರನೆ ಎನ್ನ ಕಾವದುಚಿತವಿನ್ನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕೋಮಲಾಂಗಿಯೆ ಸಾಮಗಾಯನ ಪ್ರಿಯೆ ಪ ಹೇಮಗರ್ಭ ಕಾಮಾರಿ ಶಕ್ರಸುರ ಬಟ್ಟುಕುಂಕುಮ ನೊಸಲೋಳೆ ಮುತ್ತಿನ ಹೊಸ ಕಟ್ಟಾಣಿ ತ್ರಿವಳಿ ಕೊರಳೋಳೆ ಇಟ್ಟ ಪೊನ್ನೋಲೆ ಕಿವಿಯೋಳೆ ಪವಳದ ಕೈಯ ಕಟ್ಟ ಕಂಕಣ ಕೈಬಳೆ ತೊಟ್ಟ ಕುಪ್ಪಸ ಬಿಗಿದುಟ್ಟ ಪೀತಾಂಬರ ಘಟ್ಟಿ ವಡ್ಯಾಣ ಕಾಲಂದಿಗೆ ರುಳಿಗೆಜ್ಜೆ ಬೆಟ್ಟಿಲಿ ಪೊಳೆವುದು ವೆಂಟಿಕೆ ಕಿರುಪಿಲ್ಲಿ ಇಟ್ಟು ಶೋಭಿಸುವ ಅಷ್ಟಸಂಪನ್ನೆ 1 ಸಕಲ ಶುಭಗುಣಭರಿತಳೆ ಏಕೋದೇವಿಯೆ ವಾಕುಲಾಲಿಸಿ ನೀ ಕೇಳೆ ನೋತನೀಯನ್ನ ಮಹಲೀಲೆ ಕೊಂಡಾಡುವಂಥ ಏಕಮನವ ಕೊಡು ಶೀಲೆ ಪತಿ ಪಾದಾಬ್ಜವ ಏಕಾಂತದಿ ಪೂಜಿಪರ ಸಂಗವ ಕೊಡು ಲೋಕದ ಜನರಿಗೆ ನಾ ಕರವೊಡ್ಡದಂತೆ ನೀ ಕರುಣಿಸಿ ಕಾಯೆ ರಾಕೇಂದುವದನೆ 2 ಇಂದಿರೆ ಯೆನ್ನ ಕುಂದು ದೋಷಗಳಳಿಯೆ ಅಂದ ಸೌಭಾಗ್ಯದ ಸಿರಿಯೆ ತಾಯೆ ನಾ ನಿನ್ನ ಕಂದನು ಮುಂದಕ್ಕೆ ಕರೆಯೆ ಸಿರಿ ವಿಜಯವಿಠ್ಠಲರೇಯ ಎಂದೆಂದಿಗೊ ಮನದಿಂದಗಲದೆ ಆ ನಂದದಿಂದಲಿ ಬಂದು ಮುಂದೆ ಕುಣಿಯುವಂತೆ ವಂದಿಸಿ ಪೇಳಮ್ಮ ಸಿಂಧುಸುತೆಯಳೆ3
--------------
ವಿಜಯದಾಸ
ಕೋಮಲೆ ರಮಾದೇವಿಯನ್ನ ನೋಡಬನ್ನಿರೆಕಮಲಾರಿ ಸಹೋದರಿಯನೀಗ ಬೇಡಬನ್ನಿರೆ ಪ. ಇಂದುನಿಭದ ಸುಂದರಿಯರು ಬಂದು ನೋಡಿರೆ ಈಕುಂದರದನೆ ಮಂದರೋದ್ಧರನರ್ಧಾಂಗಿಯೆ1 ಭಕ್ತಿಯಿಂದ ಭಜಿಪರಿಗೆ ಮುಕ್ತಿಕೊಡುವಳೆಶಕ್ತಿಯುಕ್ತಿಗಳನೆ ಕೊಟ್ಟು ಅರ್ತಿಮಾಳ್ಪಳೆ 2 ದಾಸಿಯಾದರೆ ಶ್ರೀಶನರಾಣಿ ಪೋಷಿಸುವಳೆಗೋಪಾಲವಿಠಲ ಘಾಸಿಮಾಡದೆ ಪೋಷಿಸೆನುವಳೆ 3
--------------
ಗೋಪಾಲದಾಸರು
ಕೋರಬೇಡ ದುರ್ವಿಷಯಸುಖಗಳನು ಕೋತಿಮನವೆ ನೀನು ||ಪ|| ಯಾರಿದ್ದರೇನು ನಿನ್ನ ಯೋಗ್ಯತೆಯ ಮೀರಿನಡಯಲಸಾಧ್ಯ ಶತಕಲ್ಪಕು ಅ.ಪ ಕಷ್ಟ ಒದಗಲಿ ನಿಷ್ಠುರ ನುಡಿಯಲಿ ಕೆಟ್ಟವನಿವನೆನಲಿ ಇಷ್ಟ ಬಂಧುಗಳು ಶತ್ರುಗಳಾಗಲಿ ಇಲ್ಲದೆ ನಿಂದಿಸಲಿ ಹೊಟ್ಟೆತುಂಬ ಆಹಾರವಿಲ್ಲದಿರಲಿ ಹುಚ್ಚನೆಂದು ಬೈಯಲಿ ಸಂಕಲ್ಪವು 1 ಬನ್ನ ಅನ್ಯರಂತೆ ತಾನಿರಬೇಕೆಂದಾಯಾಸ ಹೊಂದಬೇಡ ತತ್ವನಂಬಬೇಡ | ಮೂಢಾ 2 ಪರಿಪರಿ ಸಂಕಟ ಬಂದರೂ ನೊಂದು ಪರರ ದೂಷಿಸಬೇಡ ಸ್ಥಿರವೀ ಶರೀರವೆಂದು ನಂಬಿ ಛೀ ಎನಿಸಿಕೊಳ್ಳಬೇಡ ತಿಳಿಯಲೊ ಮೂಢಾ 3
--------------
ಗುರುರಾಮವಿಠಲ
ಕೋಲ ಕೋಲನ್ನ ಕೋಲ ಕೋಲ ಕೋಲನ್ನ ಕೋಲಕೋಲ ಹೊಯ್ದುಪಾಡಿ ನಮ್ಮ ಜಾಣರಂಗಗೆ ಪ. ಲೋಕನಾಯಕ ವ್ಯಾಸ ಮುನಿಗಳಿಗೆ ಏಕೋ ಭಾವದಿಂದ ನಮಿಸಿಹಾಕಿರೆಮ್ಮ ಕೋಲ ಹೊಯ್ದುವಾಕ್ಯಗೆಲಿಸೆಂದು1 ಮಿತ್ರೆ ರುಕ್ಮಿಣಿದೇವಿ ಕರೆದುಮಿತ್ರಾದಿಗಳಿಗೆ ಹೇಳಿದಳುಮುತ್ತಿನ ಕೋಲ ತೊಳಿಯಿರವ್ವಉತ್ತಮ ಜಲದೊಳು 2 ರಾಸ ಕ್ರೀಡೆಯಲ್ಲಿ ವನಿತೆಯರುವಾಸುದೇವ ಪಿಡಿದ ಕೋಲ ಸೋಸಿಲೆ ಪೂಜಿಸಿರಮ್ಮಲೇಸು ಕೊಡಲೆಂದು 3 ಮಂದಗಮನೆಯರೆಲ್ಲ ಕೋಲಿಗೆ ಗಂಧ ಅಕ್ಷತೆ ಏರಿಸಿರೆ ಮುಂದಾಗಿ ಬಲಗೊಳ್ಳಿರೆಲ್ಲವೃಂದಾರಕರನ್ನ4 ನಲ್ಲೆಯರು ಮುತ್ತಿನ ಕೋಲಿಗೆ ಮಲ್ಲಿಗೆ ಸಂಪಿಗೆ ಏರಿಸಿರೆಎಲ್ಲಾ ಫಲಗಳಿಟ್ಟು ಕೈಯ್ಯನಲ್ಲೆಯರು ಮುಗಿದಿರೆ 5 ಜಾಣೆಯರು ನೀವೆಲ್ಲ ಮೊದಲೆವಾಣಿಯ ಬಲಗೊಳ್ಳಿರೆ ಕಲ್ಯಾಣವಾಗಲೆಂದು ಕೈಯ್ಯಮಾಣಗೆ ಮುಗಿದಿರೆ 6 ಮೃಡನ ಮಗನ ಮೊದಲೆ ನೆನೆದುಪಿಡಿಯಿರಮ್ಮ ಕೋಲ ನಿಮ್ಮನುಡಿಯಗೆಲಿಸಲೆಂದು ದ್ರವ್ಯವಕೊಡಿರೆ ದಾನವ 7 ಇಂದು ಗೆಲಿಸೆಂದು 8
--------------
ಗಲಗಲಿಅವ್ವನವರು
ಕೋಲ ಕೋಲೆನ್ನ ಕೋಲ ಕೃಷ್ಣ ನೀಮದನಗೋಪಾಲನಾಗಿಮೆರೆದಿಯಲೊ ಕೃಷ್ಣ ಪ. ಅಂಬರ ತಕ್ಕ ಸುರುಳಿಯ ಮುಂಡಾಸಮುರಿಗಿಯವಂಕಿ ನಡುವಿಟ್ಟುಮುರಿಗಿಯವಂಕಿ ನಡುವಿಟ್ಟು ರುಕ್ಮಿಣಿಯವರಪುತ್ರ ಪ್ರದ್ಯುಮ್ನಗೆ ಉಡುಗೊರೆ1 ಮುತ್ತಿನಾಭರಣ ಹೆಚ್ಚಿನ್ಹೆಚ್ಚಿನ ಜವಳಿಮತ್ತೆ ಕೃಷ್ಣಯ್ಯನ ಸಭೆಯೊಳು ಮತ್ತೆ ಕೃಷ್ಣಯ್ಯನ ಸಭೆಯೊಳು ಇಟ್ಟೆವಪಾರ್ಥನು ಕೊಟ್ಟ ಉಡುಗೊರೆ 2 ಬೆಳಕಿನಂತೊಪ್ಪುವ ಥಳಥಳಿಸುವ ಜವಳಿ ನಳಿನಾಕ್ಷಿಯರು ಕುಳಿತ ಸಭೆಯಾಳು ನಳಿನಾಕ್ಷಿಯರು ಕುಳಿತ ಸಭೆಯಾಳಗೆ ಇಟ್ಟೆವಕುಳಿತ ಜನಕೆಲ್ಲ ಉಡುಗೊರೆ 3 ಅಂದವಾದ ಬಲು ಚಂದ ಚಂದದ ಜವಳಿ ತಂದೆ ಕೃಷ್ಣಯ್ಯನ ಸಭೆಯೊಳು ತಂದೆ ಕೃಷ್ಣಯ್ಯನ ಸಭೆಯೊಳಗೆ ಇಟ್ಟೆವಬಂದ ಜನಕೆಲ್ಲ ಉಡುಗೊರೆ 4 ಸಾಸಿವೆ ಬಣ್ಣದ ಸೀರೆ ಕುಸುಬೆ ಬಣ್ಣದ ಕುಪ್ಪುಸ ಲೇಸಾದ ಅಡಿಕೆ ನಡುವಿಟ್ಟುಲೇಸಾದ ಅಡಿಕೆ ನಡುವಿಟ್ಟು ರುಕ್ಮಿಣಿಯದಾಸಿಯರಿಗೆಲ್ಲ ಉಡುಗೊರೆ 5 ಹತ್ತೆಂಟು ಸಾವಿರ ಸುತ್ತುವ ಮುಂಡಾಸ ಮತ್ತ ಬೆಟ್ಟಡಕಿ ನಡುವಿಟ್ಟುಮತ್ತ ಬೆಟ್ಟಡಕಿ ನಡುವಿಟ್ಟು ರಂಗಯ್ಯನ ಭೃತ್ಯರಿಗೆಲ್ಲ ಉಡುಗೊರೆ6 ಸುಳಿಬಳ್ಳಿಯಂತೊಪ್ಪುವ ಬಿಳಿ ಚೀಟಿನ ಜೂಲು ಎಳೆ ಮಾವುಗಳ ನಡುವಿಟ್ಟುಎಳೆ ಮಾವುಗಳ ನಡುವಿಟ್ಟು ರಂಗಯ್ಯನ ಗಿಳಿಗಳಿಗೆಲ್ಲ ಉಡುಗೊರೆ 7 ಅಕ್ಕರದಿಂದ ಹೊಸ ಚಿಕ್ಕ ಚೀಟಿನ ಜೂಲುತಕ್ಕ ಕುಲಾಯಿ ಮುರುವಿಟ್ಟುತಕ್ಕ ಕುಲಾಯಿ ಮುರುವಿಟ್ಟು ರುಕ್ಮಿಣಿಯ ಬೆಕ್ಕಿಗೆ ಕೊಟ್ಟ ಉಡುಗೊರೆ 8 ಅಷ್ಟೂರಿಗೆ ಉಡುಗೊರೆ ತಕ್ಕಷ್ಟು ಕೊಟ್ಟೆವಕೃಷ್ಣಯ್ಯನ ಮನಕೆ ಬರಲಿಲ್ಲಕೃಷ್ಣಯ್ಯನ ಮನಕೆ ಬರಲಿಲ್ಲ ಕುಬ್ಚಿಎಂಬೊ ಸೊಟ್ಟ ಸ್ತ್ರೀಯಳ ಕರೆಸಿಲ್ಲ9 ಎಲ್ಲರಿಗುಡಗೊರೆ ಬಲ್ಲಷ್ಟು ಕೊಟ್ಟೆವಚಲುವನ ಮನಕೆ ಬರಲಿಲ್ಲಚಲುವನ ಮನಕೆ ಬರಲಿಲ್ಲ ಗೋಕುಲದಗೊಲ್ಲ ನಾರಿಯರ ಕರೆಸಿಲ್ಲ10 ತರಹ ತರಹದ ಜವಳಿ ದುಂಡು ಮುತ್ತಿನ ಪದಕಪೆಂಡಿ ಸರಗಳ ನಡುವಿಟ್ಟುಪೆಂಡಿ ಸರಗಳ ನಡುವಿಟ್ಟು ರಾಮೇಶನಿನ್ನ ಪಂಡಿತರಿಗೆಲ್ಲ ಉಡುಗೊರೆ 11
--------------
ಗಲಗಲಿಅವ್ವನವರು
ಕೋಲ ಕೋಲೆನ್ನ ಕೋಲ ಕೃಷ್ಣಯ್ಯನ ನೆನೆದೇವ ಕೋಲ ಪ. ಶಿರವ ದೂಗಿದನೆ ಬ್ರಹ್ಮ ದೂಗಿದನೆಮಂದಗಮನೆಯರ ಭಾಗ್ಯ ಚಂದ್ರ ಸೂರ್ಯರಿಗಿಲ್ಲಇಂದ್ರಗೆ ಇಲ್ಲವೆಂದು 1 ಲೋಕನಾಯಕಗೆ ಏಕಾರತಿಯನೆತ್ತಿ ಗೋಕುಲಾಧೀಶ ಸಲುಹೆಂದುಗೋಕುಲಾಧೀಶ ಸಲುಹೆಂದು ಕೈಮುಗಿದುಏಕೋಭಾವದಲಿ ಕೆಲದೆಯರು2 ಭೂಮಂಡಲಪತಿ ಮುಂದೆ ಮಂಡಲ ಮಾಡಿಅನ್ನಭಾಂಡವ ತಂದು ಇಟ್ಟಾರುಅನ್ನಭಾಂಡವ ತಂದಿಟ್ಟು ಕೈಮುಗಿದಾರುಪುಂಡರಿಕಾಕ್ಷ ಕೈಕೊಳ್ಳೊ 3 ತುಪ್ಪ ಸಕ್ಕರಿಯಲಿ ಪಕ್ವಾದ ಭಕ್ಷ್ಯಮಿತ್ರೆಯರು ತಂದು ಇಡುವೋರುಮಿತ್ರೆಯರು ತಂದಿಟ್ಟು ಕೈಮುಗಿದಾರುಭಕ್ತವತ್ಸಲನೆ ಕೈಕೊಳ್ಳೊ4 ಯಾಲಕ್ಕಿ ಕಸಕಸಿ ಮೇಲಾದ ಪಾಯಸ ಬಾಲೆಯರು ತಂದು ಇಡುವೋರುಬಾಲೆಯರು ತಂದಿಟ್ಟು ಕೈಮುಗಿದಿಹರುಬಾಲಗೋಪಾಲ ಕೈಕೊಳ್ಳೊ5 ಕರ ಮುಗಿದಿಹರುಸುಲಭ ಮೂರುತಿಯೆ ಕೈಕೊಳ್ಳೊ6 ಭೇರಿ ಮೊದಲಾದ ಭೋರೆಂಬೊ ತುತ್ತೊರಿವಾರುಜ ಗಂಟೆ ಮೊದಲಾಗಿವಾರುಜ ಗಂಟೆ ಮೊದಲಾಗಿ ರಂಗನಸಾರುತಲಿವೆ ಸಭೆಯೊಳು 7 ಪಟ್ಟಿದರಸಿಯರು ಇಟ್ಟ ಪದಾರ್ಥವದೃಷ್ಟಿಲಿನೋಡಿ ಸುಖಿಸುತದೃಷ್ಟಿಲಿನೋಡಿ ಸುಖಿಸುತ ಅವರಿಗೆಕೊಟ್ಟಾನು ಬ್ಯಾಗ ಕೈವಲ್ಯ8 ನಿತ್ಯ ಪ್ರಕಾಶಗೆ ಮುತ್ತಿನಾರುತಿಯಸತ್ಯಭಾಮೆಯರು ಮೊದಲಾಗಿಸತ್ಯಭಾಮೆಯರು ಮೊದಲಾಗಿ ಬೆಳಗಿದರುಮತ್ತ ರಾಮೇಶ ಸಲುಹೆಂದು9
--------------
ಗಲಗಲಿಅವ್ವನವರು
ಕೋಲ ಕೋಲೆನ್ನ ಕೋಲ ಕೋಲೆನ್ನ ಕೋಲ ಕೋಲ ಶ್ರೀ ಹರಿಯ ನೆನದೇವ ಕೋಲ ಪ. ನಾರಿಯರಿಬ್ಬರಿಗೆ ಹರಿಯು ಕರೆದು ಮಾತಾಡದ್ಹಾಂಗೆ ನೀರೊಳಗೆ ಹೋಗಿ ಅಡಗಿದ ಕೋಲನೀರೊಳಗೆ ಹೋಗಿ ಅಡಗಿದ ರುಕ್ಮಿಣಿಪೋರತನವೆಂದು ಬಿಡಬೇಕು ಕೋಲ 1 ಕೃಷ್ಣ ನಮ್ಮರಮನೆ ಬಿಟ್ಹೋಗ ಬಾರದೆಂದು ಬೆಟ್ಟವ ಮ್ಯಾಲೆ ಹೊರೆಸಿದ ಕೋಲ ಬೆಟ್ಟವ ಮ್ಯಾಲೆ ಹೊರೆಸಿದ ಸತ್ಯಭಾಮೆಗಟ್ಟಿ ಎದೆಯವಳು ಹೌದು ಹೌದು ಕೋಲ 2 ನೀರಜನಯ್ಯಗೆರಡುಕ್ವಾರಿ ಚಿನ್ಹವ ಮಾಡಿ ಮಾರಿಯ ಗುರುತು ಮರೆಸಿದಿ ಕೋಲ ಮಾರಿಯ ಗುರುತು ಮರೆಸಿದಿ ನೀಲಾದೇವಿಧೈರ್ಯ ವಿನ್ನೆಷ್ಟು ಧಮಕೆಷ್ಟು ಕೋಲ 3 ಹರದೆಯರಿಬ್ಬರು ಹರಿಯ ಕರೆದು ಮಾತಾಡದ್ಹಾಂಗೆ ಉರಿಮಾರಿಮಾಡಿ ನಿಲ್ಲಿಸಿದಿ ಕೋಲಉರಿಮಾರಿ ಮಾಡಿನಿಲ್ಲಿಸಿದಿಭದ್ರಾದೇವಿಸರಿಯವರು ನೋಡಿ ನಗುತಾರೆ ಕೋಲ 4 ಕರ ಕರಿಯೆಂದು ಬಿಡಬೇಕು ಕೋಲ 5 ಮಡದಿಯರಿಬ್ಬರು ಹರಿಯ ಕರೆದು ಮಾತಾಡದ್ಹಾಂಗೆ ಕೊಡಲಿಯ ಕೊಟ್ಟು ಬಡವನೆ ಕೋಲ ಕೊಡಲಿಯ ಕೊಟ್ಟು ಬಡವನೆ ಮಾಡಿದ ಕಿಡಿಗೇಡಿತನವ ಬಿಡು ಕಾಳಿ ಕೋಲ 6 ನಲ್ಲೆಯರಿಬ್ಬರು ಹರಿಯ ಎಲ್ಲೆಲ್ಲೂ ಬಿಡದ್ಹಾಂಗೆ ಬಿಲ್ಲನೆ ಕೊಟ್ಟು ನಿಲ್ಲಿಸಿದಿಬಿಲ್ಲನೆ ಕೊಟ್ಟು ನಿಲ್ಲಿಸಿದಿ ಲಕ್ಷಣಾಕಲ್ಲೆದೆಯವಳು ಹೌದ ಹೌದ ಕೋಲ 7 ಒಳ್ಳೆಗುಣಪೂರ್ಣಗೆ ಕಳ್ಳನಂತೆ ಹೆಸರಿಟ್ಟಿಸುಳ್ಳು ನೋಡಿದರೆ ವಿಪರೀತ ಕೋಲ ಸುಳ್ಳು ನೋಡಿದರೆ ವಿಪರೀತ ಜಾಂಬವಂತಿಕೊಳ್ಳಿಯ ಗುಮ್ಮಗುರುವೇನ ಕೋಲ 8 ಮುದ್ದು ಹದಿನಾರು ಸಾವಿರ ಬುದ್ದಿವಂತರ ಕೂಡಿಹದ್ದೆರ್ದಬೌದ್ಧ ಎನುತಲೆ ಕೋಲ ಹದ್ದೆರ್ದಬೌದ್ಧ ಎನುತಲೆ ಬೆನ್ನ ಹತ್ತಲು ಇದ್ದಜನರೆಲ್ಲ ನಗುತಾರೆ ಕೋಲ 9 ನೂರು ಮಂದಿ ಹರಿಯ ದಾರಿಯ ಕಟ್ಟಲು ಹಾರಿದ ಕೃಷ್ಣ ಕುದರಿಯ ಕೋಲ ಹಾರಿದ ಕೃಷ್ಣ ಕುದುರೆ ಏರಿಕೊಂಡುಮಾರಿ ತೋರದಲೆ ಬರಲಿಲ್ಲ ಕೋಲ10 ಚಲ್ವ ರಾಮೇಶ ಎಲ್ಲ ಲಲನೆಯರಿಗೆ ಅಂಜಿಕೊಂಡುಬಲಿಯ ಮನೆ ಮುಂದೆ ಕುಳಿತಾನೆ ಕೋಲ ಬಲಿಯ ಮನೆ ಮುಂದೆ ಕುಳಿತಾನೆ ರುಕ್ಮಿಣಿಕಲಹವ ಬಿಟ್ಟು ಕರೆತಾರೆ ಕೋಲ 11
--------------
ಗಲಗಲಿಅವ್ವನವರು
ಕೋಲ ಕೋಲೆನ್ನ ಕೋಲಕೋಲ ಕೋಲೆನ್ನ ಕೋಲಕೋಲಾಹಲವ ಮಾಡಿ ಬಾಲೆಯರು ಪಾರ್ಥಗೆ ಕೋಲ ಪ ಕಟ್ಟಿ ಜಾನ್ಹವಿಯಲ್ಲಿ ಬಿಟ್ಟು ಬದುಕಲು ಭೀಮ ಥಟ್ಟನೆ ಮಗ್ಗಲ ಹಚ್ಚಿ ಬಿಟ್ಟಿತು ಸರ್ಪಪ್ರಾಣ1 ಕುಸುಮದಂಥವಳಿಗೆ ಸವಳ ಪುರುಷನು ವಿಷದ ಲಡ್ಡಿಗೆ ತಿಂದು ಭಸ್ಮ ಮಾಡಿದ ಭೀಮ2 ಲಜ್ಜೆ ಬಿಟ್ಟು ಅರ್ಜುನ ಖೋಜಾನೆಂದೆನಿಸಿಕೊಂಡಿವಜ್ರ್ಯವಾಯಿತು ಮಾನ ನಿರ್ಜರೋತ್ತಮ ನಕ್ಕ3 ಹೆಣ್ಣಲ್ಲ ಗಂಡಲ್ಲ ಬಣ್ಣ ವಿಷ್ಟ್ಯಾಕೊ ನಿನಗೆ ಸಣ್ಣದಿ ನೆನೆದು ಕೀರ್ತಿ ಅಣ್ಣ ಬಲರಾಮನಕ್ಕನು 4 ಶೂರತನ ವೆಲ್ಲ ನೀಗಿ ಸೀರೆಯನುಟ್ಟುಕೊಂಡಿಬಾರದೆ ನಾಚಿ ನಿಂತೆಶೌರಿ ರಾಮೇಶನಕ್ಕನು ಕೋಲ5
--------------
ಗಲಗಲಿಅವ್ವನವರು