ಒಟ್ಟು 3030 ಕಡೆಗಳಲ್ಲಿ , 117 ದಾಸರು , 2252 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಂಭೋ ಪಾಲಯ ಮಾಂವಿಭೋ ಶಂಭೋ ಪಾಲಯ ದಂಭೋಳಿಧರಾದಿ ಮೌಳಿಜೃಂಭಿತಾಂಘ್ರಿ ಸರೋರುಹ ಪ ಇಂದಿರಾವಲ್ಲಭ ಮಿತ್ರ ಕಂದರ್ಪಕೋಟಿಭಾಗಾತ್ರ ನಿಂದಿತಾಘ ಸುಪವಿತ್ರ ಬೃಂದಿತ ಭುವನಸೂತ್ರ 1 ಗಂಗೇಂದುಮೌಳೇ ತ್ರಿಣೇತ್ರ ಭೃಂಗೀಶ ನಾಟ್ಯ ವಿಚಿತ್ರ ತುಂಗ ರಜತಗಿರಿತ್ರ ಮಂಗಳಾನಂತಚರಿತ್ರ 2 ವೈಕುಂಠನಿಲಯ ಬಾಣ ಕಾಕೋಲ ಕಂಠಾಭರಣ ಕರ್ಣ ಆಕಲಿತ ಗಜಾಜಿನ 3 ಮಾಲಿತ ಕರೋಟಿಧರ ಪಾಲಿತ ಲೋಕಸಾಕಾರ ಆಲಿಂಗಿತಾಂಗನಾಕಾರ ಶೂಲಾದ್ಯುದಾಯುಧಕರ 4 ರಜತೇತರಾದ್ರೀಷ್ವಾಸ ಭಜಿತ ವೆಂಕಟಾದ್ರೀಶಸುಜನ ಹೃತ್ಪದ್ಮಾಧೀಶ ಅಜಿತ ಕಕುದ್ಗಿರಿವಾಸ 5
--------------
ತಿಮ್ಮಪ್ಪದಾಸರು
ಶಂಭೋ ಸುರಗಂಗಾಧರನೆ ಪಾಲಿಸಂಬಾರಮಣ ಲಿಂಗ ಪ ರಂಭ ಜನಕ ಕರುಣಾಂಬುಧಿ ಗುರುವರ ಅ.ಪ. ಮುರಾರಿ ಮಹದೇವ ನಿನ್ನಯ ಪಾದ ವಾರಿಜದಳಯುಗವ ಸಾರಿದೆ ಸತತ ಸರೋರುಹೇಕ್ಷಣ ಹೃ ದ್ವಾರಿಜದೊಳು ತೋರು ಗಾರುಮಾಡದಲೆನ್ನ ಅಮಿತ ಗುಣಗುಣ ವಾರಿನಿಧಿ ವಿಗತಾಘ ವ್ಯಾಳಾ ಗಾರ ವಿತ್ತಪ ಮಿತ್ರ ಸುಭಗ ಶ ಪಾವಕ 1 ಇಂದು ಮೌಳೀ ಈಪ್ಸಿತಫಲ ಸಲಿಸುವ ಘನತ್ರಿಶೂಲೀ ಸಲೆ ನಂಬಿದೆನೊ ಹಾಲಾ ಹಲಕಂಠ ಎನ್ನ ನೀ ಸಲಹೋ ಸಂತತ ರೌಪ್ಯಾಚಲವಾಸ ವರಪಂಪಾ ನಿರ್ಜರ ಸೇವಿತಾನಲ ನಳಿನಸಖ ಸೋಮೇಕ್ಷಣನೆ ಬಾಂ ದಳಪುರಾಂತಕ ನಿಜಶರಣವ ತ್ಸಲ ವೃಷಾರೋಹಣ ವಿಬುಧವರ 2 ದೃತಡಮರುಗ ಸಾರಂಗ ನಿನ್ನಯಪಾದ ಶತಪತ್ರಾರ್ಚಿಪರ ಸಂಗ ಸತತ ಪಾಲಿಸೊ ಜಗನ್ನಾಥ ವಿಠ್ಠಲನ ಸ ನ್ನುತಿಸುವ ನೆರೆಧೀರ ಕ್ಷಿತಿಧರ ಧೃತಧನ್ವಿ ಶತಮಖನ ಜೈಸಿದನ ಪುತ್ರನ ಪಿತನ ಜನಕನ ಕೈಲಿ ಕೊಲಿಸಿದೆ ಅತುಳ ಭುಜಜಲ ಭೂತಪಡೆ ಪಾ ವನತಿ ಮುಖಾಂಭೋರುಹ ದಿವಾಕರ 3
--------------
ಜಗನ್ನಾಥದಾಸರು
ಶಂಭೋಶಿವಹರ ತ್ರಿಯಂಬಕ ಶ್ರೀಜಗ - ದಂಬಾರಮಣ ಪರಿಪಾಲಯಾ ಪ ಅಜಿನಾಂಬರಧರ ಭಜಿಪರಾರ್ತಿಹರ ತ್ರಿಜಗಪಾವನ ಗಂಗಾಧರ1 ನಂದಿವಾಹನ ಸುರವೃಂದ ಸುಪೂಜಿತ ಇಂದ್ರ ವಂದಿತ ಗರಕಂಧರ 2 ರುಂಡಮಾಲಧರ ಶÀುಂಡಾಲಮದಹರ ಚಂಡವಿಕ್ರಮ ಉಗ್ರೇಶ್ವರ 3 ದಕ್ಷಾಧ್ವರ ಹರದುಷ್ಟಶಿಕ್ಷಕ ವಿರೂ - ಪಾಕ್ಷನೆ ವೈರಾಗ್ಯನಿಧೆ 4 ವಾಮದೇವನೆ ಭಕ್ತಾಕಾಮಿತ ಫಲದನೆ ಕಾಮಸಂಹರ ಕರುಣಾಕರ 5 ಮೃತ್ಯುಂಜಯನೆ ಯನ್ನಪಮೃಹಾರಕಹರಿ ಭಕ್ತಾಗ್ರೇಸರ ಶಿವಶಂಕರ 6 ರಾಮನಾಮಲೋಲ ತಾಮಸಖಳಕಾಲ ಧಿಮಂತಜನ ಪರಿಪಾಲಕ 7 ಗಿರಿಜಾರಮಣ ನಿನ್ನ ಗುರುವೆಂದು ಮೊರೆಹೊಕ್ಕೆ ಹರಿಭಕ್ತಿಯಲ್ಲಿ ಮನನಿಲ್ಲಿಸೋ 8 ನಂಬಿದೆ ನಿನ್ನ ಪಾದಾಂಬುಜ ಯುಗಳ ಹೇ ರಂಭಜನಕ ಪೊರಿಯನ್ನನು9 ರಜತಾಚಲನಿವಾಸ ರಜನಿಚರ ವಿನಾಶ ಅಜನಸುತನೆ ದಿಗಂಬರ 10 ಸರ್ವಶ್ರೀ ವರದೇಶವಿಠಲನ ಸಖ ಮು - ಪ್ಪುರಹರ ಶ್ರೀ ಮಹಾದೇವ 11
--------------
ವರದೇಶವಿಠಲ
ಶಯನ ಸುಖವೇ ಸುಖವೆ ರಂಗನಾಥ ಭಯಗೊಂಡ ಭಕ್ತರೊಳು ದಯವಿಲ್ಲವೆ ಪ ಶರಣನ ಕೈ ನೀಡಿ ಪೊರೆಯೆಂದು ಪೇಳ್ವಾಗ ದುರಿತಗಳ ಹರಿಸೆಂದು ಬೇಡುವಾಗ ಕರುಣಾನಿಧಿ ನೀನೆಂದು ಹಾಡಿ ಹಂಬಲಿಪಾಗ ಶಿರಬಾಗಿ ಪಾದಕೆ ವಂದಿಸುವಾಗ ರಂಗಾ 1 ಜೀವಿಗಳ ಪಾಲಿಸುವ ಹೊಣೆ ನಿನಗೆ ಸಲುವಾಗ ದೇವ ನೀನೋಬ್ಬನೇ ದಿಕ್ಕೆನುವಾಗ ಭಾವದಲಿ ನಿನ್ನಮೂರ್ತಿಯ ನೆನೆದು ನಲಿವಾಗ ದೇವ ಎನ್ನಪ್ಪ ಬಾಯೆನುವಾಗ ರಂಗಾ 2 ಸ್ವಾಭಿಮಾನದಿ ನೀನು ಲೋಕವನು ಮರೆವಾಗ ಲೋಭಿ ನೀನೆನ್ನದೇ ಜಗವೆಲ್ಲ ರಂಗಾ ಲಾಭವುಂಟೇ ಭಕ್ತಜನಕೆಲ್ಲ ಕ್ಷಯರೋಗ ನಾಭಿಗಂಟದೆ ಪೇಳು ಮಾಂಗಿರಿಯರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶರಣಾಗತ ರಕ್ಷಾಮಣಿಯೆ ಶ್ರೀ ಹರಿಯೆ ಪ ಶರಣಾಗತ ಜನ ವರ ರಕ್ಷಾಮಣಿಯೆಂಬ ಬಿರುದಿನಿಂದಲಿ ಮೆರೆವ ಕರುಣಾ ಭರಣ ಕಾಮಿತ ವರಪ್ರದಾಯಕ ಅ.ಪ. ಜನನ ಮರಣ ರಹಿತ ಜಗದ ಜನ್ಮಾದಿ ಕರ್ತ ಜನುಮ ಜನುಮದಲ್ಲಿ ಜಗದ ಜೀವರಿಗೆಲ್ಲಾ ಅನಿಮಿತ್ತ ಬಂಧುವೆಂದು ನಿನ್ನಯ ಪಾದ ವನಜಗಳನು ನಾವಿಂದು ನಂಬಿಹೆವಿನ್ನು ವನಜನಾಭನೇ ನೀ ಬಂದು ಕಾಯಬೇಕೆಂದು ತನುಮನಂಗಳ ನಿನಗೆ ಒಪ್ಪಿಸಿ ಅನುನಯದಿ ಶಿರ ಮಣಿದು ಬೇಡುವೆ ಅನಘ ಅನುಪಮ ಗುಣಗಣಾಂಬುಧಿ ಅನಿಮಿಷೋತ್ತಮ ಅಪ್ರಮೇಯನೆ 1 ಕಾಮಜನಕ ಪೂರ್ಣಕಾಮ ಆಶ್ರಿತ ಜನ ಕಾಮಧೇನುವೆ ಕೋಟಿ ಕಾಮಲಾವಣ್ಯನೆ ಶ್ರೀ ಮನೋಹರ ಗಂಭೀರ ಸುರುಚಿರ ಘನ ಸನ್ನುತ ಮಹಿಮ ಸಾಮಜನರ ಉದ್ಧಾರ ಭಕ್ತ ಮಂದಾರ ಸಾಮಗಾನ ಪ್ರೇಮ ಜಗದಭಿ ರಾಮ ರಾಕ್ಷಸ ಭೀಮ ಮಂಗಳ ನಾಮ ಸುರಮುನಿ ಸ್ತೋಮ ಸನ್ನುತ ಸ್ವಾಮಿದೇವ ಲಲಾಮ ನಮೊ ನಮೊ 2 ಮಾಧವ ಅರ ವಿಂದಲೋಚನ ಪೂರ್ಣಾನಂದ ಸ್ವರೂಪನೆ ಎಂದೆಂದು ನೀನಲ್ಲದೆ ಗತಿ ಎಮಗಿಲ್ಲ ವೆಂದು ನಿನ್ನನು ಬಿಡದೆ ಕರಿಗಿರೀಶನೆ ತಂದೆ ಯೆಮ್ಮಯ ಕುಂದುಗಳ ನೀ ನೊಂದನೆಣಿಸದೆ ಬಂದು ಸಲಹುವು ಇಂದು ಕರುಣಾ ಸಿಂಧು ನತಜನ ಬಂಧು ನರಹರಿ3
--------------
ವರಾವಾಣಿರಾಮರಾಯದಾಸರು
ಶರಣು ಚಿನ್ಮಯರೂಪ ಅತ್ರಿಮುನಿ ಕುಲದೀಪ ಶರಣು ವಿಶ್ವಂಭರನೇ ದತ್ತ ದಿಗಂಬರನೆ ಶರಣು ನೆನುವರ ಸಾರಿ ಸುಳಿದು ಹೊರೆವ ಉದಾರಿ ಶರಣು ದುರಿತಾಪಹಾರಿ ಶರಣು ಸಿಂಹಾದ್ರೀಶ ಯೋಗ ಮಾರ್ಗ ಪ್ರಕಾಶ ಶರಣು ಸರ್ವರ ಗುರುವೆ ಎನಿಸಿ ಲೋಕದಿ ಮೆರೆವೆ ಶರಣು ಮಹಿಪತಿ ನಂದನನ ನೋಡದವೆ ಕುಂದಾ ಸಲಹು ಪದ ದೋರಿ ದ್ವಂದ್ವಾ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ದೇವರ ದೇವ ಶರಣು ಸುರವರ ಮಾನ್ಯ ಶರಣು ಶತಕೋಟಿ ಲಾವಣ್ಯ | ಲಾವಣ್ಯ ಮೂರುತಿಯೆ ಶರಣೆಂಬೆ ಸ್ವಾಮಿ ಕರುಣೀಸೊ 1 ಆದಿನಾರಾಯಣನು ಭೂದೇವಿ ಮೊರೆ ಕೇಳಿ ಯಾದವರ ಕುಲದಲ್ಲಿ ಜನಿಸೀದ | ಜನಿಸೀದ ಕೃಷ್ಣ ಪಾದಕ್ಕೆ ಶರಣೆಂಬೆ ದಯವಾಗೊ 2 ನಿನ್ನ ವಿಸ್ಮøತಿ ದೋಷ ಜನ್ಮ ಜನ್ಮಕ್ಕೆ ಕೊಡದಿರು ಎನ್ನ ಕುಲ ಬಂಧು ಎಂದೆಂದು |ಎಂದೆಂದು ನಿನಗಾನು ಬಿನ್ನೈಪೆ ಬಿಡದೆ ಸಲಹಯ್ಯ 3 ವಸುದೇವನಂದನನ ಹಸುಗೂಸು ಎನಬೇಡಿ ಶಿಶುವಾಗಿ ಕೊಂದ ಶಕಟನ್ನ | ಶಕಟನ್ನ ವತ್ಸಾಸುರನ ಅಸುವಳಿದು ಪೊರೆದ ಜಗವನ್ನ 4 ವಾತರೂಪಿಲಿ ಬಂದ ಆ ತೃಣಾವರ್ತನ್ನ ಮಡುಹಿ ಮೊಲೆಯುಣಿಸಿದಾ ಪೂತನಿಯ ಕೊಂದ ಪುರುಷೇಶ 5 ನಿನ್ನ ಸ್ಮøತಿಗಿಂತಧಿಕ ಪುಣ್ಯ ಕರ್ಮಗಳಿಲ್ಲ ನಿನ್ನ ವಿಸ್ಮøತಿಗಿಂತ | ಅಧಿಕವಾದ ಮಹಪಾಪಗಳು ಇನ್ನಿಲ್ಲ ಲೋಕತ್ರಯದೊಳು 6 ಅಂಬುಜಾಂಬಕಿಗೊಲಿದ ಜಂಭಾರಿಪುರದಿಂದ ಕೆಂಬಣ್ಣದ ಮರ ತೆಗೆದಂಥ | ತೆಗೆದಂಥ ಕೃಷ್ಣನ ಕ ರಾಂಬುಜವೆ ನಮ್ಮ ಸಲಹಲಿ 7 ದೇವಕೀಸುತನಾಗಿ ಗೋವುಗಳ ಕಾದದೆ ನಲಿವೋನೆ ಮೂರ್ಲೋಕ ಓವ ದೇವೇಂದ್ರ ತುತಿಪೋನೆ 8 ಜಗದುದರ ನೀನಾಗಿ ಜಗದೊಳಗೆ ನೀನಿಪ್ಪೆ ಜಗದಿ ಜೀವರನ ಸೃಜಿಸುವಿ | ಸೃಜಿಸಿ ಜೀವರೊಳಿದ್ದು ಜಗದನ್ಯನೆಂದು ಕರೆಸುವಿ 9 ಕರಣನೀಯಾಮಕನೆ ಕರುಣಾಳು ನೀನೆಂದು ಮೊರೆಹೊಕ್ಕೆ ನಾನಾ ಪರಿಯಲ್ಲಿ | ಪರಿಯಲ್ಲಿ ಮಧ್ವೇಶ ಮರುಳು ಮಾಡುವರೆ ನೀಯೆನ್ನ 10 ಕುವಲಯಾಪೀಡನನು ಲವಮಾತ್ರದಿ ಕೊಂದು ಶಿವನ ಚಾಪವನು ಮುರಿದಿಟ್ಟಿ | ಮುರಿದಿಟ್ಟಿ ಮುಷ್ಟಿಕನ ಬವರದಲಿ ಕೆಡಹಿ ಬಲಿಗೈದೆ 11 ಗಂಧವಿತ್ತಬಲೆಯೊಳ ಕುಂದನೆಣಿಸದೆ ಪರಮ ಸುಂದರಿಯ ಮಾಡಿ ವಶವಾದಿ | ವಶವಾದಿ ನಮ್ಮ ಗೋ ವಿಂದ ನೀನೆಂಥ ಕರುಣಾಳು 12 ವಂಚಿಸಿದ ಹರಿಯೆಂದು ಪರಚಿಂತೆಯಲಿ ಕಂಸ ಮಂಚದ ಮ್ಯಾಲೆ ಕುಳಿತಿದ್ದ | ಕುಳಿತಿದ್ದ ಮದಕರಿಗೆ ಪಂಚಾಸ್ಯನಂತೆ ಎರಗೀದೆ 13 ದುರ್ಧರ್ಷ ಕಂಸನ್ನ ಮಧ್ಯರಂಗದಿ ಕೆಡಹಿ ಜನನೋಡೆ ದುರ್ಮತಿಯ ಮರ್ದಿಸಿದ ಕೃಷ್ಣ ಸಲಹೆಮ್ಮ 14
--------------
ಜಗನ್ನಾಥದಾಸರು
ಶರಣು ವಾಯು ತನುಜ ಶರಣು ಭಾಸ್ಕರÀ ತೇಜ | ಶರಣು ರಾಜಾಧಿರಾಜ | ಶರಣು ಗೋಸಹಜ | ಶರಣಾರ ಸುರಭೋಜ ಪ ಸೂತ್ರನಾಮಕ ದೇವ | ಸ್ತೋತ್ರ ಮಾಳ್ಪರ ಕಾವ | ಚಿತ್ರ ಮಹಿಮರ ಕಾವ ವಿ | ಚಿತ್ರ ಶರೀರ ಸ | ಹೇಮ | ಪಾತ್ರಿಯೊಳಗೆ ಸವಿದು ಶ್ರೀಪತಿಯ ಶತ | ಪತ್ರ ಪಾದವ ಕಾ | ಲತ್ರಯ ನೆನೆಸುವನೆ 1 ಇದೆ ಭಾಗ್ಯ ನಾನಾವದೂ ಒಲ್ಲೆ | ಆ ನಾಮದ ಸೊಲ್ಲೆ ಮೇಣು ಪಾಲಿಪುದು ಮುಖ್ಯ | ಪ್ರಾಣಪಾವನ ಲೀಲ | ದಾನವರ ಕುಲಕಾಲ | ಏನೇನು ಮಾಳ್ಪಾಧಿಷ್ಠಾನದಲಿ | ನೀನೇ ನಾನೆಲ್ಲಿ ಎಣೆಗಾಣೆ2 ವಂದಿಸುವೆ ಜಗದ್ಗುರುವೆ | ಎಂದು ನಿನ್ನನು ಕರೆವೆ | ಮುಂದೆ ಈ ಜನ್ಮವು | ಹಿಂದೆ ಮಾಡಿ ನೇಮವು | ಪೊಂದಿಸು ಮೇಲುಗತಿ | ತಂದೆ ತಾಯಿ ಮಿಕ್ಕ | ನಿತ್ಯ | ವೆಂದೆ ಬಂದೆ ಸತ್ಯ ಕುಂದದೆ ಉದ್ಧರಿಸು 3 ದಾತ | ರೋಮ ರೋಮ ಕೋಟಿ ಕಾಮ ಸಂಹಾರನೇ | ಭೂಮಂಡಲಧರನೆ ಭೀಮಶೈನ | ಭೀಮ ರಿಪು ಗಂಟಲಗಾಣ | ತಾಮಸ ಜ್ಞಾನವಳಿ | ಸುಳಿ | ಶ್ರೀ ಮದಾನಂದತೀರ್ಥ4 ಶ್ರೀ ಸಪುತ ಕುಜನರ | ಭಾಷ್ಯ ಮುರಿದ ಧೀರ | ಭಾಸುರ ಕೀರ್ತಿ ಹಾರಾ | ದೋಷರಾಶಿ ದೂರ | ಹ್ರಾಸವಿಲ್ಲದ ಮಹಿಮ | ಶ್ರೀಶ ವಿಜಯವಿಠ್ಠಲನ್ನ | ದಾಸರೊಳಧಿಕ ನಿನ್ನ ಲೇಶವಾದರು ಬಿಡೆ | ನಾ ಸರ್ವಥಾ ಕರೆ | ತೋಷದಲಿಡುವುದೆನ್ನ 5
--------------
ವಿಜಯದಾಸ
ಶರಣು ಶರಣು ಲಿಂಗಾ | ಶರಣು ಶ್ರೀ ಭಸಿತಾಂಗಾ | ಶರಣು ಗಗನ ಗಂಗಾಧರ ಗೋರಾಜ ತುರಂಗ | ಗುರುಕುಲೋತ್ತುಂಗಾ ಪ ಪುರಹರ | ಸಂತರ ಮನೋಹರ | ಅಂತಕನ ಗೆದ್ದೆ | ದಂತಿ ಚರ್ಮವ ಪೊದ್ದೆ | ಕಂತು ಮುನಿಯ ಗೆಲಿದೆ ಮಂತ್ರಿವಂದಿತ ಶೀಲ | ಸಂತತಿಗಳ ಪಾಲ | ಅಂತರಂಗದಲೆನ್ನ ಗ್ರಂಥಿಯ ಹರಿಸಿ ನಿರಂತರ ಸಂತರಿಸೋ 1 ಶುಕ ಯತಿಯೆ | ವನದೊಳು ರಾಯನ | ವನುತಿಯ ಮಾಡಿದ | ಘನ ಶೌರ್ಯನ ಶಿವನೆ || ಸನಕಾದಿಗಳ ಪರಿಯ | ಅನುದಿನದಲಿ ಗಿರಿಯ | ಫಣಿಭೂಷಣ ಶಂಭೋ 2 ಅಹಂಕಾರಾತ್ಮನೆ ಶರ್ವ | ಮಹಾಕೇಶ ವಿಷಗ್ರೀವ | ಬಹುದೂರ ಕೂಟ | ಮಹಿಧರ ನಿವಾಸನೆ | ಮಹಿಧರ ತೀರದಿ || ಮಹಿಮೆಯ ಬೀರುತ್ತ | ರಹಸ್ಯದಲಿ ಮೆರೆವ | ಶ್ರೀಹರಿ ವಿಜಯವಿಠ್ಠಲ ಸವೋತ್ತಮ | ನಹುದೆಂದು ಧೇನಿಪನೆ3
--------------
ವಿಜಯದಾಸ
ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾ ಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ 1 ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ ಚರಣ ಜನವನ ವಿಜನ ವ್ಯಾಪಕ ಘನ ಅನಸೂಯಾ ನಂದನ ಯೋಗೀಶಾ 2 ತತ್ವಯೋಗ ಸಿದ್ಧಿ ಬುದ್ಧಿ ದಾತಾರಾ ಸತ್ವ ಗುಣಾಲಂ ಕೃತ ಜ್ಞಾನ ಸಾಗರಾ ಸತ್ಯ ಸನಾತನೇ ಮುನಿ ದಿಗಂಬರಾ ಭಕ್ತ ಸಹಕಾರಾ ಅವಧೂತಾ 3 ಕಂದರ್ಪ ಕೋಟಿ ಸುಂದರಾಕಾರಾ ಹೊಂದಿದಾಭರಣಾನೇಕ ಶೃಂಗಾರಾ ಇಂದು ಸೂರ್ಯಾನಳ ತೇಜ ವ್ಯಾಪಾರಾ ಎಂದೆಂದೆಚ್ಚರಾ ಕಂಡು ನಿನ್ನಾ 4 ಮಂದಮತಿ ಬಾಲನ ಬಿನ್ನಾಹದ ಸ್ತುತಿ ಬಂದು ಅರ್ಪಿಸಿಕೋ ದುದಿ ಶ್ರೀಪತಿ ಇಂದು ಮೊರೆ ಹೊಕ್ಕೆನು ಅನನ್ಯಾಗತಿತಂದೇ ಮಹಿಪತಿ ಸುತ ಸ್ವಾಮೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶರಣುಪ. ಶರಣು ಸಕಲೋದ್ಧಾರ ಅಸುರಕುಲ ಸಂಹಾರಅರಸು ದಶರಥಬಾಲ ಜಾನಕಿಯ ಲೋಲವಾಲಿಸಂಹಾರ ವಾರಿಧಿಗೆ ನಟುಗಾರಏಕಪತ್ನಿಯಶೀಲ ತುಲಸಿವನಮಾಲ ಅ.ಪ. ಬಂಟ ಈ ಭಾಗ್ಯಇನ್ಯಾವದೇವರಿಗುಂಟು ಮೂರ್ಲೋಕದೊಳಗೆ1 ಉಟ್ಟಪೀತಾಂಬರವು ಉಡಿಗಂಟೆವೊಡ್ಯಾಣತೊಟ್ಟ ನವರತ್ನದಾಭರಣ ರಸಕರುಣಕೊಟ್ಟ ನಂಬಿಕೆ ತಪ್ಪ ಕರುಣದಲಿ ರಕ್ಷಿಸುವಸೃಷ್ಟಿಯೊಳಗೆಣೆಗಾಣೆ ಕೌಸಲ್ಯರಾಮ 2 ಭಾವಿಸಲು ಅಯೋಧ್ಯಪಟ್ಟಣದ ಪುರವಾಸಬೇಡಿದವರಿಗೆ ವರವÀ ನೀಡುವೆನೆಂದುರೂಢಿಯೊಳಧಿಕ ಚುಂಚನಕಟ್ಟೆಯಲಿ ನೆಲೆಸಿದಸ್ವಾಮಿ ಶ್ರೀ ಹಯವದನ ಪಾಲಿಸೊ ನಿಸ್ಸೀಮ 3
--------------
ವಾದಿರಾಜ
ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶರಣುಶರಣು ದಶರಥ ರಾಮದೂತಗೆ ಪ ಶರಣು ಕುರುಕುಲಾಧೀಶಗೆಶರಣು ವೈಷ್ಣವ ಮತ ವಿಲಾಸಗೆಶರಣು ಮುಖ್ಯಪ್ರಾಣಗೆ ಅ ವಾರಿಧಿಯನು ವೇಗದಿ ದಾಟಿ ವನವ ಕಿತ್ತಿದಾತಗೆಮೇರೆಯಿಲ್ಲದೆ ಅಸುರರ ಸಂಹರಿಸಿದ ರಣಶೂರಗೆವಾರಿಜಾಕ್ಷಿ ಸೀತಾದೇವಿಗೆ ವರದ ಮುದ್ರಿಕೆಯನಿತ್ತಗೆಧೀರತನದಲಿ ಅಕ್ಷಕುಮಾರನ ಪ್ರಾಣವನು ಕೊಂಡಗೆ 1 ರಾಜಸೂಯವ ರಚಿಸಬೇಕೆಂದು ರಾಜರ ಸೀಳಿದಾತಗೆರಾಜಮುಖಿಯಳ ರಕ್ಷಿಸಿ ಮೃಗರಾಜಗೆ ಒಲಿದಾತಗೆತ್ರಿಜಗವಂದಿತ ದೇವಗೆ ಸಜ್ಜನಪ್ರಿಯ ಎನಿಪಗೆರಾಜ ಧರ್ಮಗೆ ಅನುಜನಾದಗೆ ರಾಜಪೂಜಿತ ರಾಜಗೆ2 ಧಾರಿಣಿಯೊಳು ದುರ್ವಾದಿ ದೈತ್ಯರ ಗಂಟಲಗಾಣವಾದಗೆಮೂರೇಳು ಮತವನೆಲ್ಲ ಮುರಿದ ಧೀರ ಮಧ್ವರಾಯಗೆಸಾರ ತತ್ತ್ವಗಳನೆಲ್ಲ ಶೋಧಿಸಿ ಸೂರೆ ಮಾಡಿದಾತಗೆಊರ್ವಿಯೊಳು ವರ ದೇವತಾದಿಕೇಶವ ದೊರೆ ದಾಸಗೆ 3
--------------
ಕನಕದಾಸ
ಶರಣು ಶ್ರೀ ಗಣನಾಥ ಮೂಷಿಕೇಂದ್ರ ವರೂಢ ಶರಣು ವಿದ್ಯದ ಸತ್ರ ಲಂಬೋದರ ಶುಭಗಾತ್ರ ಶರಣು ವರದೋರ್ದಂಡ ಶುಂಡ ಮಂಡಿತ ಗಂಡ ಕುಂಡಲ ವಕ್ರತುಂಡಾ ಶರಣೂ ಸುರನರಧೇಯ ಸಿದ್ದೀಂದಿರಾ - ಪ್ರೀಯ ಶರಣು ವಿಘ್ನವಿನಾಶ ಏಕದಂತ ಪ್ರಕಾಶ ಶರಣು ಮಹಿಪತಿ ನಂದನಗ ನೀಡುವಾನಂದ ಶರಣು ಪಾರ್ವತಿಯ ಕಂದಾ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶ್ರೀ ನಂದನೇಶ್ವರ | ಪಾಲಿಸು ಜಗದೀಶ್ವರ | ಶರಣು ಶ್ರೀ ನಂದನೇಶ್ವರ ಪ ಶರಣು ಶ್ರೀ ಗುರುವರ ಗಂಗಾಧರ | ಕರ ಕಪಾಲಧರ ಹರ ಮೃತ್ಯುಂಜಯ ಅ.ಪ. ತಂದೆ ನಿನ್ನಯ ಪಾದವ | ಮರೆತಿಹುದರಿಂದ | ನಿಂದ ಹಲವಂಗದಲಿ ಭವಭವದಿ || ನೊಂದು ಬಂದೆ ನಾನಿಂದೀ ಭವದೊಳು | ಹೊಂದಿ ತವಾಂಘ್ರಿಯನಂದದಿ ಭಜಿಸುವೆ 1 ಭೇದ ಬುದ್ಧಿಯ ಮಾನವರು | ವೇದ ಶಾಸ್ತ್ರದ| ಹಾದಿಯರಿಯದ ಮತ್ಸರರು || ಸಾಧುಗಳೊಡನೆ ವಿರೋಧವನೆಣಿಸುವ | ಬಾಧಕರಾದರು ಹೇ ದಯಾನಿಧಿಯೇ 2 ತೊಡಕುಗಳನ್ನೆ ಬಿಡಿಸಿ | ಬಾಧೆಗಳ ವಾರಿಸಿ | ಕಡು ದುಷ್ಟಾತ್ಮರ ಶಿಕ್ಷಿಸಿ | ಎಡೆಬಿಡದೆನ್ನ ಮನೋರಥ ಸಲಿಸುತ | ದೃಢತರ ಭಕುತಿಯ ಕೊಡು ಕೃಪೆಯಿಂದಲಿ 3 ಪಾದ | ಮುಕುತಿ ಸಂಪದ ಪಾಲಿಸೊ || ಶಕುತಿಯೊಳಗೆ ನೀ ಯುಕುತಿಯಿಂದ ನಿಜ | ಸುಖದ ಪದವಿಯೊಳು ಪ್ರಕಟದಿ ಪೊರೆಯೈ4 ಯೋಗಿಗಳರಸ ನೀನೆಂಬ | ಬಿರುದುಗಳ ತೋರಿಸು- | ತೀಗೆನ್ನಪರಾಧವ ಕ್ಷಮಿಸೆಂಬ || ರಾಗದ ನುಡಿಯೊಳೆನ್ನಾಗಮನವೊಪ್ಪಿಸು- | ತೀಗ ಸದಾನಂದ ಯೋಗಾಂತರ್ಗತ 5
--------------
ಸದಾನಂದರು