ಒಟ್ಟು 4961 ಕಡೆಗಳಲ್ಲಿ , 127 ದಾಸರು , 3302 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮಾನುಗ್ರಹ ಮಾಡು -ಈ ತರಳನ ದಯದಿಂ ನೋಡು ಪ ನರಹರಿ ನೀನಲ್ಲವೆ ಕರುಣಾಳು ಅ.ಪ ಅನ್ನ ಸೇರಲಿಲ್ಲವಂತೆ -ಮಲಗಿ ನಿನ್ನಿಂದಲಿ ಹೀಗಿಹನಂತೆ ಘನ್ನಮಹಿಮ ನಿನ್ನವರಿಗೆಲ್ಲ -ಈ ಬನ್ನ ನ್ಯಾಯವೆ ಪ್ರಸನ್ನ ನೃಸಿಂಹ 1 ತುಡುಗಾಟಗಳಾಡಿ ಬಳಲಿ -ಈ ಹುಡುಗ ಮನೆ ಮನೆಯ ತೊಳಲಿ ಕಡುಭೀತಿಯ ಹೊಂದಿರುವ ನಾವು ನಿ- ನ್ನೊಡವೆಯಲ್ಲವೆ ಒಡೆಯ ನರಹರಿಯೆ 2 ಔಷಧ ಪಥ್ಯಗಳೇಕೆ -ನಿ ರ್ದೋಷ ನೀನೊಳಗಿರಲಿಕ್ಕೆ ಶೇಷಶಯನ ಗುರುರಾಮವಿಠಲ ಪÉೂೀಷಿಸುವನು ನೀನೆ ನೀನೆ ನಿಜ3
--------------
ಗುರುರಾಮವಿಠಲ
ಪರಶಿವಾತ್ಮ ಲಿಂಗವೆನ್ನ ಕರತಳಾಮಳಕವಾಗಿ ಶರೀರದೊಳಗೆ ಬೆಳಗುವುದು ಶ್ರೀ ಗುರು ವಚನದಿ ಕಂಡೆನು ಪ ಏನು ಬೇಕು ಎನಗೆ ಇನ್ನು ಮಾನವತ್ವ ಅಳಿದು ಸರ್ವ ತಾನೆ ಅಂಗದಿರವೆಯಾಗಿ ಸ್ವಾನುಭವದ ಸುಖದೊಳು ಧ್ಯಾನಿಸುತ್ತ ಒಳಹೊರಗಿಹ ಭಾನುಕೋಟಿ ತೇಜವನ್ನು ತೋರಿದಾ ಪರಶಿವಾತ್ಮ 1 ವಿಂಗಡಿಸಿದ ಷಟ್‍ಸ್ಥಳಗಳ ಸಂಗವಿಡಿದು ಚರಿಸುತ್ತಿರಲು ಲಿಂಗವೇ ಸರ್ವಾಂಗವಾಗಿ ಇಂಗಿತವ ತಿಳಿದವನು ಮಂಗಲಾತ್ಮನಾದ ಶ್ರೀಗುರು ಪುಂಗನು ಎನಗೊಲಿದು ದಿವ್ಯ ಕಂಗೊಳಿತ್ತುಧರಣಿ ಗಗನ ಡಂಗದ ಘನಲಿಂಗವಾ ಪರಶಿವಾತ್ಮ 2 ಒಂದರಂಕೆಯನ್ನು ಬರೆದು ಹೊಂದಿದಷ್ಟು ಲೆಖ್ಖ ಬೆಳೆವ ಅಂದದಂತೆ ಉಳಿದು ಅಳಿದು ನಿಂದ ನಿಜದ ನಿಲುವಿಗೆ ಬಂಧು ವಿಮಲಾನಂದ ಶ್ರೀಗುರು ಬಂದು ಎನ್ನ ಹೃದಯದಿ ಪರಶಿವಾತ್ಮ 3
--------------
ಭಟಕಳ ಅಪ್ಪಯ್ಯ
ಪರಶುರಾಮ ದೇವರು ಬೆಳಗಿರಾರುತಿಯನು ಜಲಜ ನೇತ್ರರೆ ನೀವುಛಲವ ಸಾಧಿಸಿದಂಥ ಚೆಲುವರಾಯನಿಗೆ ಪ ರೇಣುಕಾಸುತ ಕ್ಷೋಣಿಪಾಲಕರ ಕೊಂದುಕಾಮಧೇನುವಿನ ಆಶ್ರಮ ಸ್ಥಾನದಿ ತಂದಾ 1 ಹತ್ತೇಳು ಒಂದು ಅಕ್ಷೋಹಿಣೀ ಸೈನ್ಯಹತ್ಯೆ ಮಾಡುತ್ತ ರಕ್ತದ ನದಿಯನು ಸುತ್ತಹರಿಸಿದವಗೆ 2 ವಂದ್ಯ ಮಹಿಮನೆ ಇಪ್ಪತ್ತೊಂದು ಬಾರಿಲೆ ಕ್ಷಾತ್ರವೃಂದವನಳುಹಿದ ಇಂದಿರೇಶನಿಗೆ 3
--------------
ಇಂದಿರೇಶರು
ಪರಸುಖದಿರವನು ಕರುಣಿಸು ಎನಗೆ ಪರಮಪಾವನ ತವಚರಣಸೇವೆಯೆಂಬ ಪ ಅರಿಷಡ್ವರ್ಗದ ಉರುಬಾಧೆ ತಪ್ಪಿಸಿ ಮೆರೆವೆಂಟುಕೋಣಗಳು ಶಿರತರಿದ್ಹಾರಿಸಿ ಜರೆಮರಣೆಂದೆಂಬ ಉರುಲನು ಜೈಸಿದ ಹರಿಶರಣರ ಮಹ ಕರುಣಕಟಾಕ್ಷವೆಂಬ 1 ಹತ್ತು ಇಂದ್ರಿಯಗಳು ಒತ್ತಿ ಮುರಿದು ನೂಕಿ ಸುತ್ತಿಸುಳಿವ ಕಪಿನ್ಹತ್ತಿರ ಬಂಧಿಸಿ ಭವ ಕತ್ತರಿಸೊಗೆದ ಚಿತ್ತಜತಾತನ ಭೃತ್ಯಂ ನಡೆಯೆಂಬ 2 ಹರಣಪೋದರು ನಿನ್ನ ಚರಣಸ್ಮರಣೆಯನ್ನು ನೆರೆನಂಬಿ ಬಿಡದಂಥ ಪರಮದಟವ ನೀಡೋ ಶಿರದಿ ಹಸ್ತವನಿತ್ತು ವರದ ಶ್ರೀರಾಮ3
--------------
ರಾಮದಾಸರು
ಪರಾಕು ಜೀಯ ವೆಂಕಟರಾಯ ಪರಾಕು ಸರ್ವೋದ್ವøಕ್ತ ನೀನೊಬ್ಬ ಸಾಕು ಉಕ್ತಿಯ ಕೇಳಬೇಕು ಪಾಲಿಸು ಸಾಕು ಪ. ಇಂದಿರಾವರ ದೀನ ಬಂಧು ನಿನ್ನ ಪಾದಾರ- ವಿಂದವೆ ಶರಣವೆಂದು ಹೊಂದಿದೆನಿಂದು ಮಂದ ಭಾವನೆಯ ಕುಂದು ಕ್ಷಮಿಸು ಯೆಂದು 1 ಕಾಲ ಶುಭ ಲೀಲೆಯರಸವೆಂಬ ಪಾಲ ಕುಡಿಸುತೆನ್ನನು ಪಾಲಿಸು ಪದ್ಮ ಲೋಲ ನಿನ್ನಣುಗನನ್ನು ಕೈಪಿಡಿದಿನ್ನು 2 ತಡೆಯದೆ ಸಕಲಾರ್ಥ ಕೊಡುವೆ ಶ್ರೀ ವೆಂಕಟಾದ್ರಿ ಒಡೆಯ ನೀನೊಲಿದಿರಲು ವೈರಿಗಳನ್ನು ಕೆಡವುತ ಸುಖ ಲಾಭವು ಸಿದ್ಧವಾಗಿಹವು 3
--------------
ತುಪಾಕಿ ವೆಂಕಟರಮಣಾಚಾರ್ಯ
ಪರಿ ನಿರ್ದಯಗೈದಿರಿ ತಂದೆ ಶ್ರೀ ಗುರುವೆ ಪೇಳಿ ಪ. ನೊಂದೆನು ಈ ದಿನ ನಿಮ್ಮ ವಾರ್ತೆ ತಿಳಿಯದೆ ಕುಂದೇನು ತೊರಿತೋ ಎನ್ನಿಂದ ಕ್ಷಮಿಸಿರಿ ಅ.ಪ. ಪ್ರತಿದಿನದಲಿ ನಿಮ್ಮ ಹಿತವಾರ್ತೆ ಕೇಳುತ ಅತಿಶಯಾನಂದವ ಪಡುತಲಿದ್ದೆ ಇಂದು ಅತಿಶಯದ ನಿಮ್ಮ ಹಿತವಾರ್ತೆ ತಿಳಿಯದೆ ಮತಿ ಹೀನಳಾಗಿಹೆ 1 ಉಲ್ಲಾಸಗೊಳಿಸುವ ಪುಲ್ಲನಾಭವ ಮಹಿಮೆ ಸೊಲ್ಲು ಸೊಲ್ಲಿಗೆ ನುಡಿಸಿ ಭವದಾಟಿಸಿ ಒಲ್ಲೆನು ನಾನೊಂದು ಇಹಪರ ಸೌಖ್ಯವು ನಿಲ್ಲಲಿ ಎನ್ನಮನ ನಿಮ್ಮ ಪಾದದಿ ನಿರುತ 2 ತನುಮನ ಒಪ್ಪಿಸಿ ಮನದಿ ಧ್ಯಾನಿಸುವುದು ಘನಮನಕಿನ್ನೀಗ ಬರಲಿಲ್ಲವೆ ವನಜಜಾಡಂಡದೊಳಿನ್ನು ಎನ್ನ ರಕ್ಷಿಸುವರ ಮನದಿ ನಾ ಕಾಣೆನು ವನಜಾಕ್ಷ ಬಲ್ಲನು 3 ಮೊರೆಯ ಕೇಳುತಲೀಗ ತ್ವರಿತದಿಂ ಬನ್ನಿರಿ ಸರಸಿಜಾಕ್ಷನ ತೋರಿ ಹರುಷವಿತ್ತು ದುರಿತವ ತೊಲಗಿಸಿ ಕರಕರಗೊಳಿಸದೆ ಪರಮಪ್ರಿಯರು ಎಂಬೊ ಬಿರುದುಳ್ಳ ಶ್ರೀ ಗುರುವೆ 4 ತಡಮಾಡದೆ ಭವಕಡಲ ದಾಟಿಸಿ ಈಗ ಮೃಡಸಖನನು ತೋರಿ ದೃಢ ಮನದಿ ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲ ಜಗಕೆ ಬಿಡದೆ ಪೊರೆಯುವನೆಂಬೊ ದೃಢವೆನಗೆ ಕರುಣಿಸಿ 5
--------------
ಅಂಬಾಬಾಯಿ
ಪರಿ ಪೋಷ ಪ ಇಂದಿರೆಯರಸನ ದ್ವಂದ್ವ ಪಾದದಲಿಅಂದ ಭಕುತಿಯಿತ್ತು ಛಂದದಿ ಸಲಹೋ ಅ.ಪ. ಆರೂ ಕಾಯುವರಿಲ್ಲವೊ ದೊರೆಯೇ | ನಾ ನಿಗೊಂದ್ಹೊರೆಯೇಮೂರು ಜಗಂಗಳ ಪೊತ್ತಿಹೆ ಧೊರೆಯೇ | ನಿನಗಾರೆಣೆಯೇ ||ಅಪಾರ ಗುಣಗಳಿಂದ | ಸಾರಿ ಭಜಿಸುವಂತೆ 1 ತಂದೇ ಮುದ್ದು ಮೋಹನರಿಂದ | ಆರಾಧನೆ ಛಂದದಿಂದ ಕೈಗೊಳ್ಳುತ ಆನಂದ | ತೀರ್ಥರೆ ನಲವಿಂದ ||ಬಂದ ಸುಭಕುತರ | ವೃಂದಕೆ ಪರಮಾನಂದವ ಕೊಡುತಲಿ | ಛಂದದಿ ಮೆರೆವ 2 ತುರು ವ್ರಜ ಜಂಗುಳಿ ಕಳೆದ | ಸರ್ವೋತ್ತಮನಾದ ||ಗುರು ಗೋವಿಂದ ವಿಠಲನ | ಚರಣ ಸರೋಜದಿಉರುತರ ಭಕುತಿಯ | ಕರುಣಿಸಿ ಕಾಯೋ 3
--------------
ಗುರುಗೋವಿಂದವಿಠಲರು
ಪರಿ ಮೋಸ ವಚನಗಳು ನಾಚಿಕೆಯಿಲ್ಲವೇನೊ ಕೃಷ್ಣ ಪ ಯೋಚಿಸುತಿರೆ ನಿನ್ನ ಸತತ ಮನದಲಿ ಯಾಚಿಸುತಿರುವೆಯೋ ಪರರನ್ನು ಅ.ಪ ಚಂಚಲತನದಲಿ ನಿನ್ನ ಸೇವಕಳನು ವಂಚಿಸುತಿರುವುದು ಸರಿಯೇನೊ ಪಂಚಬಾಣನು ತನ್ನ ಜನಕನಾಗಿಹ ನಿನ್ನ ಮಿಂಚಿ ನುಡಿಯುವುದು ಅಚ್ಚರಿಯು 1 ಸಾರಸಲೋಚನೆ ಬೇರೆ ಯೋಚಿಸದಿರು ಮಾರನು ಎನ್ನಯ ಮೀರುವನೆ ಜರನೆಂದರಿಯುವ ನಾರೇರಿಗೆನ್ನ ವಿ ಚಾರವನರುಹಲು ಸೇರಿದೆನು 2 ಅಂಬುಜಮುಖಿಯರ ಸಂಭ್ರಮದಲಿ ನೀ ಹಿಂಬಾಲಿಸುತಿರೆ ನಂಬುವೆನೆ ರಂಭೆಯರವರು ನೀ ಹಿಂಬಾಲಿಸುವೆ ಡಂಭದ ವಚನವ ನಿಲ್ಲಿಸೆಲೊ3 ಪೋತ ನಾನಾಗಿರೆ ಪ್ರೀತಿಯ ನಟಿಸಿದ ಪೂತನಿಯನುಭವವೆನಗಿಹುದೇ ಘಾತಕರವರೊ ನೀತಿವಂತರೊ ಮಾತಿನಂದರಿಯೆ ಹಿಂಬಾಲಿಸಿದೆ 4 ಲಲನೆಮಣಿಯರ ಜಲವಿಹಾರದ ಸ್ಥಳಕೆ ನೀನೇತಕೆ ತೆರಳಿದೆಯೊ ತಿಳಿದು ಇದನು ನಿನ್ನ ಸುಳಿವನು ಅರಿಯಲು ಸುಲಭವೇನೆಲೊ ಶ್ರೀ ಕೃಷ್ಣ 5 ಹೊರಗಿನ ರೂಪದಿ ನರರನು ಸುಲಭದಿ ಮರುಳು ಮಾಡುತಿಹ ತರಳೆಯರು ಸರಳರೊ ಈ ಜನ ದುರುಳರೊ ಇವರ ಅಂ ತರಗಳನರಿಯಲು ತೆರಳಿದೆನು 6 ಅಂತರಂಗಗಳನರಿಯಲು ನಿನ್ನಯ ತಂತ್ರಗಳೆಲ್ಲವು ನಟನೆಗಳು ಚಿಂತೆಯ ಪಡದೆ ಸ್ವತಂತ್ರನಾಗಿರುವೆ ಸಂತಸದಲಿ ಪ್ರಸನ್ನನಾಗೆಲೊ 7
--------------
ವಿದ್ಯಾಪ್ರಸನ್ನತೀರ್ಥರು
ಪರಿಪರಿ ಕೊಂಡಾಡೋ ಹರಿಯನ್ನು ಮರೆದು ನೀ ಕೆಡಬೇಡೋ ಮನವೆ ಪ ಮರವೆ ಮಾಯ ನೀಗಿ ಧರೆಭೋಗ ಮೆಚ್ಚದೆ ನಿರುತ ಭಜಿಪರ ಬಿಟ್ಟು ಅರಲವಗಲ ಹರಿ ಅ.ಪ ಕರುಣಸಾಗರನು ನರಹರಿ ಚರಣದಾಸರನ್ನು ತನ್ನಯ ಹರಣಸಮಾನ ಮಾಡಿ ಕರುಣದಿಂದವರ ಇರವ ಪೂರೈಸುತ ಪೊರೆವ ಪ್ರೇಮದಿಂದ 1 ಚಿಂತೆ ಭ್ರಾಂತಿಗಳನು ಬಿಡಿಸಿ ಸಂತಸ ಕರುಣಿಸಿ ಅವರ ಅಂತರಂಗದಿರ್ದು ಅಂತರ ತಿಳಿಯಿತು ಚಿಂತಿಸಿದ್ದನ್ನಿತ್ತು ಸಂತಸದಿಂ ಕಾಯ್ವ 2 ಸಾರಿಸಾರಿಗೆ ತನ್ನ ಚರಣಸೇರಿ ಭಜಿಪರನ್ನು ಬಿಡದೆ ಆರಭಾರ ಪೊತ್ತು ಸೇರಿ ಅವರ ಬಳಿಯ ಪಾರಸಂಭ್ರಮದಿಂ ಧೀರ ನಲೀತಿಹ್ಯ 3 ಅಮಲರೂಪ ತನ್ನ ನಿರುತ ವಿಮಲಚರಣವನ್ನು ನಂಬಿದ ಸುಮನಸರಹೃದಯಕಮಲದಿ ವಾಸಿಸಿ ನಿಮಿಷಬಿಟ್ಟಗಲದೆ ಕ್ರಮದಿ ಪಾಲಿಸುವ4 ಗೂಢದಿಂದ ಸ್ಮರಿಪ ಭಕುತರ ಗಾಢಮಹಿಮೆ ಕೃಪಾದೃಷ್ಟಿಯಿಂ ಬೇಡಿದ ವರಗಳ ಕಾಡದೆ ನೀಡುತ ರೂಢಿಯೋಳ್ ಬಿಡದೆ ಕಾಪಾಡುವ ಶ್ರೀರಾಮ 5
--------------
ರಾಮದಾಸರು
ಪರಿಭವ ತಾಪಹರಣ ಪ ದಯದಿ ಯುವತಿಯಕುಲ ಉದ್ಧಾರಣ ಜವದಿ ಕರಿಧ್ರುವಬಂಧಮೋಚನ ಯುವತಿಗಕ್ಷಯವಿತ್ತು ಒಲಿದು ಹಯವ ಪಿಡಿದು ರಥವ ನಡೆಸಿದ ಭುವನ ಬ್ರಹ್ಮಾಂಡ ಸೂತ್ರಧಾರಕ ಶಿವಸುರಾರ್ಚಿತ ಪೊರೆ ಸುಹೃದಯ ಅ.ಪ ಪತಿತಪಾವನ ಶ್ರೀಶಕೇಶವ ಸಹಸ್ರಾಕ್ಷಶಯನ ಮಾಧವ ಭೋಗ ಗರುಡಗಮನ ಪತಿತಪಾವನೆ ಇಂದಿರೆಂiÀi ಜೀವ ಜಗದಾದಿದೇವ ಯತಿತತಿನುತ ಪವಿತ್ರನಾಮ ಕ್ಷಿತಿಸುತೆಪತಿ ಪವಿತ್ರ ಮಹಿಮ ಸತಿಯರವ್ರತಹರ ಜಿತಮಹಮುಪ್ಪುರ ಕೃತ್ರಿಮ ಮುರಹರ ಮಥನಸಾಗರ ನುತಿಪರ್ಹಿತಕರ ಸುಪಥರಾಧಾರ ಹಿತದಿ ಪೊರೆಯೆನ್ನ ಕರುಣಾನಿಕರ 1 ನಿರುತ ಜನರ ಕಲ್ಪತರು ನೀನು ಭಯಭಕ್ತಿಯಿಂದ ಸ್ಮರಿಸಿ ಬೇಡ್ವರ ಪರಮಸುರಧೇನು ಸುರಗಂಗಾಜನಕ ಶರಣು ಸಜ್ಜನರಮಿತ ದಯಾ ಪರನು ವಿಶ್ವರಕ್ಷಕನು ಮರಣರಹಿತ ಮದನತಾತ ಶುಭ ಸಚ್ಚರಿತ ದುರುಳ ಸಂಹರ ಶರಣುಮಂದಾರ ಸುಗುಣರೋದ್ಧಾರ ಶರಣಭಜಕರ ವರಸುಖಕರ ಕರಣಿಸಭವನೆ ತ್ವರಿತ ಸುವರ 2 ಕುಸುಮನಯನ ಸ್ವತಂತ್ರ ಮಹಲೀಲ ದಿವಕೋಟಿ ಪ್ರಭಾಕರ ಕುಸುಮಗಾತ್ರ ಮಹತಂತ್ರ ಮಾಯಜಾಲ ಗೋವರ್ಧನೋದ್ಧಾರ ಕುಸುಮಧರ ಕುರುಕುಜನಕುಲಕಾಲ ಗೋಪಾಲಬಾಲ ಕುಸುಮನಾಭ ಕೌಸ್ತುಭಾಂಬರ ಅಸಮ ತುಲಸಿಮಾಲಾಲಂಕಾರ ಒಸೆದು ದಾಸನ ಪುಸಿಯೆಂದೆನಿಸದೆ ಹಸನುಮತಿಯಿತ್ತು ಪೋಷಿಸನುದಿನ ಎಸೆವ ತವಪಾದ ನಂಬಿ ಮರೆಬಿದ್ದ ಅಸಮದಯಾನಿಧಿ ಮಮ ಶ್ರೀರಾಮ 3
--------------
ರಾಮದಾಸರು
ಪಲ್ಲಕ್ಕಿ ಸೇವೆಯವಧಾನ ಆಳಪಲ್ಲಕ್ಕಿಯಲಿ ಮಂಡಿಪುದು ಶಿವ ನಿಧಾನ ಪ ಮದನ ಕೈಗಳ ಸುಭುಜ-ವಲಯದೊಳ್ತಳದ ಪೂರುಷರ ಸರಪಂಸೆಗಳತೊಳಪಗಜಪಕ್ಷಿಯಗ್ರಗಳಾ ದೇವಲಲನೆಯರ ಚಾಮರದ ಕರದ ಚಲನೆಗಳಾ 1 ವಂದಿಮಾಗಧರೆಲ್ಲ ಕರವೆತ್ತಿ ಪೊಗಳುತಿರೆದಾಂಧಣಧಣಾ ಎಂದು ಮೊಳಗೆ ಮಂಗಳವಾದ್ಯಚಂದ್ರಸೂರ್ಯರು ಜಗಜ್ಯೋತಿಯನುಪಿಡಿದಿರಲು ಗಂಧರ್ವತತಿ ಪಾಡುತಿರಲುಮುಂದೆ ರಂಭಾದಿ ಗಣಿಕೆಯರು ನರ್ತಿಸಲು ದೇವೇಂದ್ರ ಮುಕ್ತಾಛತ್ರಮಂ ಪಿಡಿದಿರಲು ಧನದಕುಂದಣದ ಪಾದುಕೆಯ ಪಿಡಿದಿರಲುವಾಯು ನಲವಿಂದ ಸೀಗುರಿಯ ವೀಜಿಸಲುಸುರರು ಮುಂದೆ ಜಯಜಯವೆಂದು ಓಲೈಸುತಿರಲು 2 ಸುರರು ಹೂಮಳೆಗರೆಯೆ ಸುರದುಂದುಭಿಯು ಮೊಳಗೆಪರಮಋಷಿವರರು ವೇದಂಗಳನು ಪಠಿಸೆ ತುಂ-ಬುರನಾರದರು ವೀಣೆಯನು ಬಾಜಿಸಲು ಗಣನಿ-ಕರ ಖಡ್ಗಶರವ ಪಿಡಿದಿರಲುಸರಸಿಜೋದ್ಭವನು ನಿಮ್ಮುನ್ನತಿಯನರುಹುತಿರೆಸುರರಾಜಮಂತ್ರಿ ಸಮಯವ ಸೂಚಿಸುತಿರಲುವರಕೆಳದಿಪುರವಾಸ ರಾಮೇಶ ಜಯವೆಂದುಹರಿ ಹಸ್ತಲಾಘವನು ಕೊಡಲು ಗೌರಿಹರುಷದಿಂ ಮುಂಬಿನೊಳು ರಂಜಿಸುತ್ತಿರಲು 3
--------------
ಕೆಳದಿ ವೆಂಕಣ್ಣ ಕವಿ
ಪವಮಾನ - ಪವಮಾನ - ಪವಮಾನ ಪ ಪ್ರಧಾನ ಮರುತ ನಿ | ನ್ನಾಧೀನವು ಜಗ ನಿನ | ಗೇನು ಬೇಡೆ ಸುಜ್ಞಾನ ವೀವುದೆಂ | ದಾ ನಮಿಸುವೆನೊ |ಗಾನ ಲೋಲ ಹರಿಗಾನಕೆ ಮನ್ಮನ | ಪೋಣಿಸುತನುದಿನ | ಪಾಲಿಸು ಪ್ರಾಣಾ ಅ.ಪ. ಮಣಿ ಭವ ಸಿಂಧು ಇಂದಿರೆ ಲೋಲನಅಂದ ಪದಾಬ್ಜಾನಂದದಿ ತುತಿಪಾನಂದೈಶ್ವರ್ಯವ ಇಂದೆ ಪಾಲಿಸಿ ಪೊರಿಮಂದಜಾಸನ ಸರಿ | ವಂದೇ ಅಸುರಾರಿ 1 ವಜ್ರ ಗರ ಅಧ್ವರ ಕರಿ ಸಿರಿ ಭೃಂಗ ಸಿರಿ ರಂಗನ ತೋರಿಸು ಎಂಬೆನು ಜೀಯಾ | ನಮಿಸುವೆನು ಹರಿಪ್ರಿಯಾ 2 ಕಲಿ ಪ್ರಾಬಲ್ಯ | ದೈತ್ಯರು ಎಲ್ಲ ವೈರಂಗಳೆಲ್ಲಸಾಧಿಸೆ ಬಲ್ಲ | ಮಣಿಮನ ಸೊಲ್ಲ | ಕೇಳುತಲೆಲ್ಲ ಬರುತಿಲ್ಲೆಲ್ಲ | ದುರ್ಮತಗಳ ಬೀರುತ ಬರುತಿರಲು |ಜಗಪುಸಿ ಎನಲು | ದೇವರಿಲ್ಲೆನಲು | ಐಕ್ಯ ಪೇಳಲುಜ್ಞಾನವಳಿಯಲು | ಸಜ್ಜನ ನೋಯಲು | ಮನವು ಕರಗಲುಹರಿಯು ಪೇಳಲು | ನೀ ಬರೊಸೊಲ್ಲು | ಎಲ್ಲೆಲ್ಲು | ಎಲ್ಲೆಲ್ಲು ||ತಪವನು ಮಾಡಲು | ನಡುಮನೆ ದ್ವಿಜನುವರ ಕೊಟ್ಟನು ತಾನನಂತೇಶ್ವರನುಕಂಬದ ಮೇಲೇ ರೋರ್ವ ಪೇಳಿದನುನಿನ್ನವತಾರ ವಿಚಾರವನು |ನೀನರಿದಂದೇ | ನಿನ್ನಿಂದೇ | ನಿನ್ನಿಂದೇ ||ದ್ವಿಜನಲಿ ಬಂದೆ | ಹುರಳಿಯ ತಿಂದೆ | ತಿಂತ್ರಿಣಿಯಿಂದೆ ಋಣ ತೀರಿ ತೆಂದೆ | ಹರಿ ಪ್ರೇಕ್ಷರಿಂದೆ | ಸನ್ಯಾಸ ಪೊಂದೆ ಗಂಗೆಯ ತಂದೆ | ಎನ ತಂದೆ | ಎನ ತಂದೇ ||ವ್ಯಾಸರ ಕಂಡುಪದೇಶವಗೊಂಡೆ | ಹೇ ಸಮೀರ ದು-ರ್ಭಾಷ್ಯವ ಖಂಡಿಸಿ ಶ್ರೀಶ ಸರ್ವೋತ್ತಮಆ ಶಿವ ಮುಖ ಹರಿ | ದಾಸರೆಂದು ಮ |ತೀ ಸಮಸ್ತ ಜಗ ಲೇಸು ಸತ್ಯವೆಂದುಪದೇಶಿಸಿದೆ ಗುರುವರ್ಯ | ಗುರುವರ್ಯ ||ಇಪ್ಪತ್ತು ಒಂದೆ | ಕು ಭಾಷ್ಯವ ಜರಿದೆಮುವತ್ತಾರೊಂದೆ | ಗ್ರಂಥವ ಮಾಡ್ಡೆಶಿಷ್ಯರಿಗ್ಹೇಳ್ದೆ | ಮಾಯವ ಜರಿದೆಉಡುಪಿಗೆ ಬಂದೆ | ಗೋಪಿಯಲಿಂದೆಕೃಷ್ಣನ ತಂದೆ | ಇಲ್ಲೆ ನಿಲಿಸಿದೆಅಷ್ಟ ಯತಿಗಳಿಗೆ | ಪಟ್ಟವಗಟ್ಟುತ | ಕೃಷ್ಣನಪೂಜೆ ನಿರ್ದಿಷ್ಟದಿ ನಡೆಸಿದೆ | ದುಷ್ಟಾದ್ವೈತವಕುಟ್ಟಿ ಸುಜನರುಗ | ಳಟ್ಟುಳಿ ಕಳೆಯೆ ವ |ರಿಷ್ಟರನೆಲ್ಲರ | ಕಟ್ಟಾಳೆನಿಸಿದೆ ||ದಿಟ್ಟ ಮೂರುತಿ ಜಗಜಟ್ಟಿ ಭೀಮಆನಂದತೀರ್ಥ ಗುರು ಗೋವಿಂದ ವಿಠಲನಹೃದದಿಷ್ಟಾನದಿ ತೋರಿಸೆಂದು ತವಪಾದಾಬ್ಜಕೆ ಶಿರ ಇಟ್ಟು ಬೇಡ್ವೆ ಋಜುವರ್ಯಗುರುವರ್ಯ | ಔದಾರ್ಯ | ಔದಾರ್ಯ 3
--------------
ಗುರುಗೋವಿಂದವಿಠಲರು
ಪವಮಾನದೇವ ಪರಿಪಾಲಿಸೋ ತವ ಪಾದವಾ ನೆರೆನಂಬಿದೆ ನಾ ಮೂರು ಕೋಟಿರೂಪ ಮೂರು ನೇತ್ರ ನಮಿತ ಮೂರುವತಾರಿ ಭಾರತಿ ಕಾಂತ 1 ಕೃಷ್ಣಾಚಾರ್ಯರ ನಿಷ್ಟೆಗೊಲಿದು ಜ್ಞಾನವ ಕೊಟ್ಟು ಸಲಹಿದ ಶ್ರೇಷ್ಠ ಮೂರುತಿಯೆ 2 ಅಂಧಕೀವನ ಮಂದಿರಾಂಜನೇಯ ನಂದ ಜಾತ ಶಾಮಸುಂದರಾಂಘ್ರಿಪ್ರಿಯ 3
--------------
ಶಾಮಸುಂದರ ವಿಠಲ
ಪವಿತ್ರೋತ್ಸವ ಗೀತೆ ಪವಿತ್ರ ಉತ್ಸವವನ್ನು ನೋಡುವ ಬನ್ನಿ ಭಕ್ತರೆಲ್ಲಾ ಪ ವರಶುಕ್ಲಪಕ್ಷದ ಏಕಾದಶಿಯಲಿ ಅನೇಕಾ ಭರಣವ ಬಿಟ್ಟು ರಂಗ ವೈದೀಕನಂತೆ ವೈಜಯಂತಿ ಜನಿವಾರ ಕೌಸ್ತುಭಮಣಿಯು ಕೊರಳೊಳು ಹೊಳೆಯೆ ಓಲ್ಯಾಡುತಲೆ ಅರಳಿದಪುಷ್ಪದ ಮೇಲೆ ಯಾಗಶಾಲೆಗೆ ಬಂದರಂಗನ 1 ವೇದಘೋಷಗಳನ್ನು ವಿಪ್ರರು ಮೋದದಿಂ ಮಾಡುತಿರಲು ವೇದಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರುಅರವತ್ತು ಪೂಜೆಯನು ಮಾಡಿ ಮುದ್ದುರಂಗನಿಗೆ ಮಜ್ಜನವ ಮಾಡಿ ನಿಂದು ಹರುಷದಿ ಯಾಗಪೂರ್ತಿಯ ಮಾಡಿದ ರಂಗನ 2 ತಂದ ತಂಡುಲವರವಿಯೆ ಮಧ್ಯದಿ ಭಾಂಡಗಳ ತಂದಿರಿಸಿ ತಂಬಿ ಪವಿತ್ರವನು ಕಲ್ಪೋಕ್ತದಿಂದ ಪ್ರತಿಷ್ಠೆ ಮಾಡಿ ಒಂದು ಪವಿತ್ರವನು ಪ್ರದಕ್ಷಿಣೆಯಿಂದ ತಂದು ಧರಿಸಿ ಚಂದದಿಂ ವೈಯ್ಯಾರ ನಡೆ ಯಿಂದ ಮಂದಿರಕೆ ನಡೆತಂದ ರಂಗನ 3 ದ್ವಾದಶಿ ದಿವಸದಲಿ ಶ್ರೀರಂಗನ ಪೊಗಳೆ ವೇದಪಾಠಕರು ಅನಾದಿಮೂರುತಿ ರಂಗನಾಥಗೆ ಆ ರಾಧನೆ ಮಾಡಿ ಮುನ್ನೂರು ಅರವತ್ತು ಮಂಗಳಾರತಿ ಮು ಕ್ತಿದಾಯಕಗೆತ್ತಿ ಪೂಜೆಗೊಂಡು ಪವಿತ್ರವನು ಧರಿಸಿ ವಿ ನೋದ ಸೇವೆಯ ತೋರಿದ ರಂಗನ 4 ಸಂಧ್ಯಾರಾಗದಿ ಇಂದಿರಾಪತಿ ಬಂದು ಮಂಟಪದಲಿ ಚಂದದಿಂದಲೆ ಪೂಜೆ ನೈವೇದ್ಯವ ಆ ನಂದದಿಂದ ಗ್ರಹಿಸಿ ದಿಂಧಿಮಿತೆಂಬ ವಾದ್ಯದಿ ಗೋ ವಿಂದ ತಾನೆ ಪೊರಟು ಚಂದದಿಂದ ಶಾರ್ದೂಲನಡೆ ಯಿಂದ ಮಂದಹಾಸದಿ ಬಂದ ರಂಗನ 5 ಸಪ್ತದಿವಸದಿ ಪವಿತ್ರದಾಭರಣವಿಟ್ಟು ಭಕ್ತವತ್ಸಲ ಕರ್ಪೂರದ ಚೂರ್ಣಾಭಿಷೇಕವ ಅರ್ಥಿಯಿಂದ ಗ್ರಹಿಸಿ ಪತ್ನಿಯರು ಸಹಜವಾಗಿ ಭತ್ತದಕೊಟ್ಟಿಗೆ ಎದುರೆ ಭತ್ತವಳಿಸಿಯೆ ನಿಂತ ಭಕ್ತವತ್ಸಲ ಮಿತ್ರರಎದುರಲಿ ನಿಂದ ರಂಗನ 6 ಒಂಭತ್ತು ದಿನದಲಿ ಅಂಬುಜನಾಭ ಆನಂದ ದಾಭರಣವಿಟ್ಟು ಕುಂದಣದ ಕೋಳಿಕೆಯನೇರಿ [ತುಂಬು ಚೆಲ್ವನಾ] ಚಂದ್ರಪುಷ್ಕರಿಣಿಯಲಿ ಶುಭ್ರತೀರ್ಥವ ಆನಂದದಿಂದಲಿತ್ತು ಬಂದು ಅವಭೃತ ಮಾಡಿಯೆನಿಂದ ಶ್ರೀನಿವಾಸರಂಗನ 7 ಉತ್ಸವದ ಮರುದಿನದಿ ಶ್ರೀರಂಗನು ತನ್ನ ಏಕಾಂತ ಭಕ್ತರಿಗೆ ಇತ್ತು ಪವಿತ್ರದಾಭರಣ ತೀರ್ಥಪ್ರಸಾದವನ್ನು ಮುಕ್ತಿದಾಯಕ ಮುನಿಗಳ ಮುಂದೆ ಚಂದ್ರನಂತೆ ಬ ರುತ್ತಿರಲು ಸುತ್ತ ತಾರಕೆಯಂತೆ ವೈಷ್ಣವರು ಒತ್ತಿ ಬರುವ ಅಂದಚಂದದ 8
--------------
ಯದುಗಿರಿಯಮ್ಮ
ಪಶುಗಳ ಒಡನಾಡಿ ಪಾಮರನು ನಾನಾದೆ ಪಶುಪತಿಯೆ ನೀ ಬೇಗ ಬಾರೈ ಪ ಎಸೆವ ಆ ಸಮಯನುಣ್ಣಲೋಸುವನೊ ನಾನಿನ್ನು ಶಿಶು ಹಾದು ನಿಜ ಸುಖವು ತೋರೈ ಅ.ಪ ಕಚ್ಚಿ ಕೈಬಾಯಿ ನಿಮ್ಮಿಚ್ಚೆಯಾಗಿರುತಿಹುದೂ ಸಚ್ಚಿದಾನಂದಾತ್ಮ ನೋಡೈ ಉಚ್ಚರಿಸುವಾದಿ ವ್ಯಾಸಚ್ಚರಿತ ನಾಮವನೂ ಅಚ್ಚಳಿಯದಿರದಂತೆ ನೋಡೈ 1 ತೃಷೆಯ ನೀಗಿಸಲಿಂತಾ ಹೊಸಪರಿಯ ಬಿನ್ನಹುವು ಹಸುವಿಗಾಧಾರವನು ತೋರೈ ಪುಸಿಯದಿರು ನೀನಿದಕೆ ಬಿಸನಾಡದಿರುಯೆನ್ನಾ ನೊಸಲ ತಿಲಕವೆ ವೋಡಿಬಾರೈ 2
--------------
ಚನ್ನಪಟ್ಟಣದ ಅಹೋಬಲದಾಸರು