ಒಟ್ಟು 3814 ಕಡೆಗಳಲ್ಲಿ , 122 ದಾಸರು , 2565 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ವರಾಯರಿಗೆ ನಮೋ ನಮೋ ಪ ಮಾಯವಾದಿಗಳ ಮತವ ಸೋಲಿಸಿ ಸುಯತಿಗಳಿಗೆ ಸದ್ಗತಿ ಮಾರ್ಗವ ತೋರಿದ ಅ.ಪ ದೈತ್ಯ ರಾವಣಗೆ ಹಲವು ಭೀತಿ ತೋರಿಸಿ ಮಾತೆ ಜಾನಕಿಯಿಂದ ಖ್ಯಾತಿ ಪಡೆದ ಗುರು 1 ಮಂದ ಜರಾಸಂಧನಂಗವ ಸೀಳಿ ತಂದ ಕಪ್ಪವನ್ನು ಬಂದು ಧರ್ಮಗಿತ್ತ 2 ಕುಜನಾದಿಗಳ ನಿಜವಚನದಿ ಸೋಲಿಸಿ ವಿಜಯ ರಾಮಚಂದ್ರವಿಠಲ ಸರ್ವೋತ್ತಮನೆನಸಿದ 3
--------------
ವಿಜಯ ರಾಮಚಂದ್ರವಿಠಲ
ಮನ ಬಲಿಯದನಕ ಅನುಕೂಲಾಗದನುಭವ ಧ್ರುವ ಮನವೇ ಮರೆಯ ಮಾಡೇದೆ ನೆನವಿಗೆ ತಾಂ ತಂದು ತೋರದೆ ಹೆಣ್ಣ ಹೊನ್ನದಾಶೆ ಹಚ್ಚ್ಯಾದೆ ಘನತನಗರಸದೆ 1 ಹುಚ್ಚಮಾಡಿಬಿಟ್ಟದೆ ಎಚ್ಚರ ಎಡಿಯಗೊಡದೆ ಕಚ್ಚಿ ವಿಷಯಕೆ ಬಿದ್ದದೆ ಬೆಚ್ಚಿ ಬೆದರದೆ 2 ಮನಸಿಗೆ ಮನಸಿನಿಂದ ಅನುಭವವಾಗಬೇಕಾನಂದ ಘನ ಗುರುವಿನ ಕೃಪೆಯಿಂದ ಮನ ಬಲಿವುದು ಚೆಂದ 3 ಮನೋನ್ಮನವಾಗಿ ತಾ ಘನ ಬೆರೆದು ಸ್ವಹಿತ ಙÁ್ಞನಕಿದೇ ತಾ ಸನ್ಮತ ಮುನಿಜನರ ಸುಪಥ 4 ಮನಬಲಿದು ನೀ ನೋಡೋ ಘನಸುಖ ಮಹಿಪತಿಗೊಡೊ ಅನುಭವಾಮೃತ ಸೂರ್ಯಾಡೊ ಅನುಮಾನೀಡ್ಯಾಡೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನಕಧೀಶನೆನಿಪ ಗುರುವರಾ | ನಿನ್ನ ಪಾದನೆನೆವೆ ಕಳೆಯೊ ಮಲಿನ ಸತ್ವರಾ ಪ ಅನಿಲ ಸುತನು ಎನಿಸಿ ನೀನು | ಅನಿಲ ನೆನಿಸಿ ಪಾಪತೂಲಘನ ಸುಮೇರುವನ್ನೇ ದಹಿಸೊ | ಅನಲ ಈಕ್ಷಣಾನೆ ಶಿವನೆ ಅ.ಪ. ಅನುದಿನ ಪಾದ | ವನಜ ಭಜಿಪ ಶರಣರೀಗೆತೃಣವು ತೆರನು ಪಾಪ ನಿ5iÀು | ಎಣಿಸಿ ಪೊರೆವುದುಚಿತ5É್ಲ 1 ಗೌರಿಧವನೆ ವಿಷಯ ಮೋಹನ | ಕಳೆದು ವೇಗಸೂರಿ ಜನರ ಸಂಗ ಮಾಡುವ ||ಸಾರ ಮನವವಿತ್ತು ಸಲಹೊ | ಕ್ರೂರಿ ಜನರ ದೂರಮಾಡೊಘೋರಾಘೋರ ರೂಪಿ ಹರನೆ | ಮಾರಪಿತನ ಸಖನೆ ರುದ್ರ 2 ಶುಕ ವಿಭೂತಿ 3
--------------
ಗುರುಗೋವಿಂದವಿಠಲರು
ಮನದಲಿ ಸಕಲಾರ್ಥ | ಜಗದೊಳು ಪ ಮನ ನೆಲೆಗೊಂಡರೆ ಮೋಕ್ಷದ ಹಾದೀ | ಮನ ಚಲಿಸಲು ಬಾಧೀ 1 ಮನವೇ ತಾಹದು ನಾನಾಜನ್ಮ | ಮನ ಹರಿವುದು ಕರ್ಮಾ 2 ಯೋಗಿ ಮಹಂತಾ | ಮನಮೀರಲು ಭ್ರಾಂತ 3 ಭವ ದೂರಾ | ಮನದೊಳು ಸಂಸಾರಾ 4 ಮನ ಗುರುವರ ಮಹಿಪತಿ ಪ್ರಭು ನಾಮಾ | ನೆನಿಯಲು ಸುಖಧಾಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನವು ಕರಗದೇನೋ ಸಿರಿಹರಿ ಮುನಿಸದೇಕೆ ಪೇಳೋ ಪ ತನು ಮನ ಧನಗಳ ನಿನಗೊಪ್ಪಿಸುತ್ತಲಿ ಮುನಿವರರೊಲು ನಿನ್ನ ನೆನೆಯಲಿಲ್ಲವುಯೆಂದು ಅ.ಪ ಬಾಲತನದೆ ನಿನ್ನ ನೆನೆಯದೆ ಕಾಲಕಳೆದೆ ಯೌವನದೊಳು ಲೋಲುಪನಾದೆನ್ನ ಕಾಲದೂತರು ಬಂದು ನೂಲಿಂದಚಿಳೆದರೂ 1 ಜಗವು ಚಿರವೆಂದು ಸತತವು ಬಗೆದು ಭ್ರಾಂತನಾದೆನ ಅಗಣಿತ ನೀಲಮಣಿ | ಖಗಪತಿವಾಹನ [ಪೊರೆಯಲಿನ್ನು] 2 ಗಂಗಾಧರ ರಂಗಾ ನೀನೆನ್ನಂತರಂಗದೆ ನಿಲಲಿನ್ನು3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮನವೆ ನಿನಗೇಕಿನ್ನು ಲಜ್ಜೆದೋರದು ಬಳಿಕಕನಲಿ ನಿಂದಿಸುವೆ ಜನರನಿತರಾ ಪಘನಘೋರಮಲಜನಿತ ತನುವಿನೊಳುನೀನಿರುತಲನವರತ ತೊಳಲಬಹುದೇ ಬರಿದೆ ಅ.ಪಓದಿ ಗ್ರಂಥಗಳನು ಪಠಿಸಿಯದರರ್ಥವನುಬೋಧಿಸುವೆ ಪರರಿಗೆಲ್ಲಾ ಸೊಲ್ಲಾಸಾದರದಿ ತನ್ನಿಷ್ಠೆಯಲಿ ನಡೆಯುತನುಭವವನೀದಿನಕು ತಂದುದಿಲ್ಲವಲ್ಲಾಬೋಧೆವಡದಿಹ ಯೋಗಿಗಳ ಜರೆವ ಬಗೆಯಲ್ಲಿನೀ ದೊಡ್ಡ ಜಾಣನಲ್ಲಾ ಬಲ್ಲಸಾಧಿಸಿದ ವಿದ್ಯವನು ವಾದದಲಿ ನೀಗಾಡಿಬೀದಿಯಲಿ ನಿಂತೆಯಲ್ಲಾ ನಲ್ಲಾ 1ಧನಧಾನ್ಯ ದಾಸ ಕತಿಯೊಳಗೊಂದಿಕೊಂದಿರುವಜನರಲವಿವೇಕ ವಿಡಿದೂ ಜರಿದೂತನು ಪಾಶ ಬದ್ದದಲಿ ನರಕ ಭಾಜನರಾಗಿದಿನವ ಕಳೆಯುತ್ತಲಿಹರೂ ುವರೂಎನುತಲನುತಾಪದಲಿ ನೀ ಮತ್ತೆಯನವರತಧನಿಕರಿದ್ದೆಡೆಗೆ ಬಂದೂ ನಿಂದೂಧನವ ಕೊಡಿ ಸತ್ಪಾತ್ರನಾನೆಂದು ವೊಂದುವರೆಹಣವ ಕೈಯೊಡ್ಡಿ ಕೊಂಡೂ ಉಂಡೂ2ತೋರುವ ಜಗತ್ತಿದುವೆ ಪರಮಾತ್ಮನಿಂದಲೆತೋರುವದು ಭ್ರಮೆಗೆ ಹಲವೂ ಕೆಲವೂತೋರದಡಗದ ನಿತ್ಯ ವಸ್ತುವೆ ತಾನೆÀಂದುಧೀರತನದಿಂದಲಿರವೂ ಅರಿವೂಈ ರೀತಿಯಲಿ ತಿಳಿದು ಮುಕ್ತನಾಗದೆ ಬರಿಯಕ್ರೂರ ಬುದ್ದಿಯಲಿ ುರವೂ ಮರವೂದಾರಿಗಾಣದೆ ನಿನ್ನ ಅನುಭವವ ನೀ ಮತ್ತೆಹೊರುವುದೆ ನಿನಗೆ ಮತವೂ ದೃಢವೂ 3ಇಂದ್ರಿಯಂಗಳ ಸುಖವನೆ ಮೆಚ್ಚಿ ನೀನವರಹಿಂದುಗೊಂಡೆರಗಿ ಬಿಡದೆ ಪಡೆದೆಸಂದ ಭೋಗದ ಸವಿಯನೆನನೆನದು ಮತ್ತದನುಮುಂದು ಬೇಕೆಂದು ಹೊರೆದೆ ಬೆರೆದೆಕಂದಿ ಕಾಮಕ್ರೋಧದಗ್ನಿಯಲಿ ನೀ ಬೆಂದುಹೊಂದಿ ನೀಂ ಜನ್ಮಪಿಡಿದೆ ಮರೆದೆಹಿಂದುಗಳೆವಾತ್ಮನನು ಹಿತವೆಂದು ಮಿಥ್ಯವನುನೊಂ[ದು] ನೋಡದೆ ಬರಿದೆ 4ಚದುರ ವಿದ್ಯವ ಕಲಿತೆನೆಂಬುದೊಂದೇ ಘನತೆಸುದತಿ ಸಂಪತ್ತಿನಲ್ಲೆ ರಮತೆಒದಗಿ ಬಹಳೋದ್ಯೋಗಗಳ ಮಾಡಿ ಬಹುದಿವಸಬದುಕಿದವ ನೆಂಬುದರಲೆ ುರತೆಇದ ನಾನು ಸಂಪಾದಿಸಿದೆನೆನ್ನ ಶೌರ್ಯತೆಗೆಇದಿರಿಲ್ಲವೆಂದು ಇದಕೆ ಬೆರತೆಮುದದಿ ಗುರು ವಾಸುದೇವಾರ್ಯವೆಂಕಟರಮಣನೊಡಮೂಡದಿತರ ನಡತೆ ಜಡಕೆ 5
--------------
ತಿಮ್ಮಪ್ಪದಾಸರು
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು
ಮನವೆ ಮಾಧವನೊಳು ಮಮತೆಯಿರಲಿ ತನು ಮನ ಧನಗಳು ತನವಾ ನೀಡಿದ ಮ್ಯಾಲೆ ಅನುದಿನ ಪೊರೆವ ಪ ಕಾಮ ಜನಕನು ಪ್ರೇಮದಿ ನೆನದರೆ ಮಾಮನೋಹರ ತನ್ನ ಧಾಮವ ಕೊಡುವ1 ಸಂತತ ನಿನ್ನನು ಚಿಂತಿಸುವಂ- ತೆನ್ನಂತ ಮಂಗಳ ಮತಿಯು ನೀಡು ನೀ ಮನವೆ 2 ಅಜಭವನುತ ವಿಜಯ ಸಖನ ಯಜಿಸುವ ಜನರಿಗೆ ನಿಜಪದವನೆ ಕೊಡುವಾ ವಿಜಯವಿಠ್ಠಲನಾ 3
--------------
ವಿಜಯದಾಸ
ಮನವೆ ಶ್ರೀನಾರಾಯಣನನು ಸ್ಮರಿಸದೆ ಮಾಯಾಪಾಶಕೆ ಸಿಲುಕುವರೇ ಪ. ವನಜನಾಭನ ಪದ ವನರುಹಯುಗ್ಮವ ಅನುದಿನ ನೆನೆಯದೆ ಒಣಗುವರೇ ವನಿತಾಲಂಪಟನಾಗುತ ಸಂತತ ಮನಸಿಜಯಂತ್ರಕೆ ಮನಮರಗುವರೇ ಅ.ಪ. ತುಂಡು ಸೂಳೆಯರ ದುಂಡುಕುಚವ ಪಿಡಿದು ಗಂಡಸುತನವನು ಕೆಡಿಸುವರೆ ದಂಡಧರನ ಬಾಧೆ ಹೆಂಡತಿಯನು ಪಡ ಕೊಂಡು ವೇದನೆಯನು ತಾಳುವರೆ ಕಂಡು ಕಂಡು ನೀ ಗುಂಡಿಗೆ ಬಾಳ್ವರೆ ಹೆಂಡಿರ ಸುಖರಸ ಉಂಡರು ಸಾಲದೆ 1 ಬಂದ ಸುಖಕೆ ನೀ ಮುಂದುವರೆಯುತಲಿ ಮಂದ ಅಸಮ ದುಃಖ ತಾಳುವರೇ ಬಂದುದೆನ್ನ ಕಣ್ಣ ಮುಂದೆಯನುಭವಿಪೆ ಎಂದಿಗೆನ್ನಾಜ್ಞೆಯು ಬಂದಪುದೋ ನಿಜ 2 ಇಷ್ಟು ದಿನದಿ ನೀ ಭ್ರಷ್ಟೆಯರಲಿ ಮೋಹ ಪಟ್ಟ ಭಾಗ್ಯವನೆಲ್ಲ ತೋರೊ ನೀನು ಕಷ್ಟ ಮಾನಧನ ನಷ್ಟವಲ್ಲದೆ ಎಳ್ಳಿ- ನಷ್ಟು ಸುಖವನ್ನು ಕಾಣೆನಿನ್ನು ಇಷ್ಟಾರ್ಥಗಳೆಲ್ಲ ದೊರೆಕುವುದೈ ಪರ ಮೇಷ್ಠಿ ಪಿತನ ಮನಮುಟ್ಟಿ ನೀವ್ ಭಜಿಸಿರೊ 3 ವಿಷಯ ಪಳಂಚಿತನಾಗುವ ಸಂತತ ಪಂಚಡಕೀರನು ಆಗುವರೇ ಕರ್ಮ ಸಾಲದೆಂದೆನುತಲಿ ಸಂಚಿತ ಪಾಪವ ಸಂಗ್ರಹಿಸುವರೇ ಚಂಚಲಾಕ್ಷಿಯರ ಚಪಲದ ಮಾತನು ವಂಚನೆ ಎಂಬುದು ತಿಳಿಯದೆ ಇರುವರೆ 4 ಸಾರಿಸಾರಿ ಕೈ ಮುಗಿದು ಬೇಡುವೆನು ವಿ- ಕಾರ ದುರ್ಬುದ್ಧಿಯ ಬಿಡು ಎಂದು ಭಾರಿ ತಪ್ಪುಗಳ ಕ್ಷಮಿಸಿ ಕಾವ ಲಕ್ಷ್ಮೀ ನಾರಾಯಣ ನೀನೇ ಗತಿಯೆಂದು ಪಾರಮಾರ್ಥಿಕ ವಿಚಾರವ ಮಾಡುತ ಶ್ರೀ ರಮೇಶನ ಚರಣಾರವಿಂದವ ಸೇರೋ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮನವೆ ಸದಾ ಚಿಂತಿಸುವೆ ವನಜನಾಭನ ನಂಬದೆ ಪ ಕೊನೆಗಾಣುವದೇನೊ ಫಲವೇನೊ ಅ.ಪ ಮದಮತ್ಸರ ಕಾಮಕ್ರೋಧ ಲೋ- ಭದಿ ಮಮತಾಸ್ಪದವಾಗಿ ಮರತೋಗಿ 1 ಗುರುಹಿರಿಯರು ನೋಡಿ ವಂದಿಸದೆ ನೀ ಮರುಳಾಟಗಳಾಡಿ ಪರರನಪಹಾಸಿಸಿ ಪಾಪಿ ಇವನೆನಿಸಿ ನರಕಕ್ಕೆ ಗುರಿಯಾಗುವೆ ವೋ ಚಪಲ ಮನವೇ 2 ವೇದಮಾರ್ಗವ ಬಿಟ್ಟು ಯಾವಾಗಲು ದು- ರ್ವಾದಗಳನು ಕೊಟ್ಟು ಆದಿಯನುತಲಿ ಅನಾದಿಯನುತಲಿ ಮುದಗೂಡಿ ಅತಿಭಾಷೆಗಳಾಡಿ 3 ತತ್ವ ತಿಳಿಯಬೇಕು ಜ್ಞಾನವೆಂಬೋ ಸಂ- ಪತ್ತಿನೊಳಿರು ಸಾಕು ನಿತ್ಯಾನಿತ್ಯವಿವೇಕ ಶ್ಯೂನವಾಗಿ ನಿತ್ಯ ಕೆಡಬೇಡೆಲವೋ ಚಪಲಾ 4 ತ್ರಿವಿಧ ಜೀ- ವರೊಳಿರುವನು ಮುಕುಂದ ಗುರುರಾಮವಿಠಲ ನಿಜ ಶರಣರಿಗೆಲ್ಲ ಪರಮಪದವಿ ಈವಾ ದೇವದೇವ 5
--------------
ಗುರುರಾಮವಿಠಲ
ಮನವೇ ಇದೆ ಮರೆಯಾದೆನಮ್ಮಮನಸಿಜನಯ್ಯನ ನೆನೆಸಾದೆ ಹೋದೆ ಪ ವೈಷ್ಣವ ಜನ್ಮವೆ ಬಯಸು ಏಕೋವಿಷ್ಣು ಸದಯದಿ ಷಡ್‍ವರ್ಗವ ಜಯಿಸು ||ಜಿಷ್ಣು ಸಖನ ದಾಸ್ಯ ವಹಿಸು ನೀನೆಶ್ರೇಷ್ಠನೆನ್ನದಲೇ ಶೀತೋಷ್ಣವ ಸಹಿಸು 1 ನವ ವಿಧ ಭಕುತಿಯ ಮಾಡು ಪದ್ಮಭವಾದ್ಯರು ಶ್ರೀಹರಿಗೆ ಎಲ್ಲಿ ಈಡು ||ಪವನಾ ಮತಕೆ ಉಂಟೇ ಜೋಡು ಮಾ-ಧವನ ಮೂರ್ತಿಯ ಮನದಣಿಯ ನೀ ನೋಡು 2 ಅಂಘ್ರಿ ಭಜಿಸು 3
--------------
ಮೋಹನದಾಸರು
ಮನವೇ ಕೊಬ್ಬ ಬ್ಯಾಡ ಉಬ್ಬ ಬ್ಯಾಡಾ ಪ ನೆನುವಿನೊಳಿಟ್ಟು ಮಾನುಭಾವರ ಚರಣ ಕಮಲವನು ಜನುಮ ಸಾರ್ಥಕವನು ಮಾಡು ಕಂಡ್ಯಾ ಅ.ಪ ವಿದ್ಯೆ ವಶವಾದರೆ ನೀ ತಿದ್ದಿ ಕಲಿಸು ಆರ್ತರಿಗೆ | ಬುದ್ಧಿವಂತರ ಕೂಡಾ ತರ್ಕಸ್ಯಾಡ ಬೇಡಾ ನೋಡಬ್ಯಾಡಾ | ಉಧೃತ ಶಕ್ತಿಯ ಬಲದಿಂದ ಸಂತ ಸೇವೆ ಮಾಡು | ಗುದ್ದಿ ಹೆಟ್ಟಿ ಪರರ ಪೀಡಿ ಕುಡಬ್ಯಾಡಾ ಮಾಡಬ್ಯಾಡಾ | ಮುದ್ದಿ ಘನವಾದರ ಸತ್ಪಾತ್ರಕ ನಿವೇದಿಸು | ಮದ್ದು ತಿಂದು ನುಡಿವವನಂತ ಪರರ ದೋಷ ಗುಣಾ | ಬದ್ಧವಚನವ ನುಚ್ಚರಿಸದಿರು 1 ರಾಜಮುದ್ರಿಯ ನೆವದಿ ಉದರ ತುಂಬಲಾಗಿ ನೀತಿ ಬಿಟ್ಟು | ಈ ಜನರನಾ ದಂಡಿಸುವದಲ್ಲಾ ಇದುಸಲ್ಲಾ | ಆ ಜನ ಹೊಟ್ಟೆ ಹಾಕಿ ಬರೆಗೈಯ್ಯ ಹೋಗುವಂತೆ | ನೀ ಜಯಿಸಿ ಬಂದದಲ್ಲಾ ಸಂದದಲ್ಲಾ | ತ್ಯಾಜದಿಂದ ದೊಡ್ಡವ ನೀನೆಂದು ಸೆಜ್ಜಿ ತೆನೆಯಂತೆ | ಸುಜನರೊಳಗ ಗರ್ವ ಹಿಡಿಯದಿರು ಪಡೆಯದಿರು | ವಾಜಿಯಲಿ ನವಣಿ ತೆನೆಯಂತ ಬಾಗಿ ನಡೆದರೆ| ಶ್ರಿ ಜನಾರ್ಧನ ರಕ್ಷೀಸುಚ ಕಂಡ್ಯಾ 2 ಜರಿದು ಕೈಯಲ್ಲಿಂದ ಸಬಕಾರ ನೀರೊಳಗ ಬಿದ್ದ | ತೆರದಿಂದ ತಿರುಗಿ ತಿರುಗಿ ಯಾತಿಗಳನು | ಭರದಿಂದ ಕಡಿಯಲಿ ಪುಣ್ಯ ಫಲ ವಶದಿಂದ| ನರದೇಹವನು ತಾಳಿ ಬಂದಿ ನೀನು ತಿಂದಿ ನೀನು | ತ್ವರಿತ ಸುತಪ್ರಿಯ ಗುರು ಮಹಿಪತಿ ಚರಣಕ | ಮೊರೆ ಹೊಕ್ಕು ಗತಿ ಪಡೆ ಭಾವದಿಂದ ಜೀವದಿಂದ | ಧರೆಯೊಳು ಗಾಳಿಯೊಳಗಿನ ದೀಪ ತೋರುವಂತೆ | ಸ್ಥಿರವಲ್ಲಾ ಆಗಲ್ಹೋ ಈಗಲಿದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನವೇ ನೀ ಬರಿದೆಜನ್ಮ ವ್ಯರ್ಥಗಳೆವರೆ ಬಂಗಾರದಥಾ ಪ ಮನವೇ ನೀ ಬರಿದೇ ಜನ್ಮ ವ್ಯರ್ಥಗಳೆವರೆ ಬಂಗಾರದಂಥಾ | ಮರೆವ ದಿನಗಳ ಜರಿವರೇ ನರದೇಹವಿದು ಅ.ಪ ದೊರೆಯದಿನ್ನು ಮತ್ತ ತರುವರ ಏನಾದರೇನೀ | ಹರಿಯ ಸ್ಮರಣೆಯ ಬಿಡುವರೇ | ಅರಿವ ಪಂಥ ವಿಡಿದು ಜನ್ಮ ಮರಣ ಬಲಿಯಾ ತಪ್ಪಿಸದೇ | ತಿಗಳಿ ಹುಳುವಿನಂತೆ ಸಿಕ್ಕ ತನ್ನ ತಾ ಮರೆವರೇ 1 ಕೇಳೆಲೋ ನೀ ಪೊಡವಿಯೊಳಗಿದ್ದ ಸಾಯಸಾ | ಉದಯದಲೆದ್ದು ಬಿಡುವದೆ ಮಲಮೂತ್ರ ಕೆಲಸಾ | ಮಧ್ಯಾನ್ಹದಲಿ ವಡಲ ತುಂಬುವ ಕೆಲಸಾ | ನಿಶಿಕಾಲದಲ್ಲಿ ವಡನೆ ಮಲಗುವ ಕೆಲಸಾ | ಪಡೆದ ತಾಯಿಯವ್ವನೆಂಬ ದೃಢವನವಾ ಕಡಿಯಲು | ಕೊಡಲಿಯಂತೆ ಹುಟ್ಟಿ ಬಂದೆ ಮಡದಿ ಮಕ್ಕಳುದ್ದೇಶಾ 2 ಮನವೇ ನೀ ಹಿಂದಿನವ ಗುಣ ಜರಿದು ಸದ್ಭಾವ ಭಕು | ತಿಂದ ನಡುವಳಿ ಬಿರಿದು | ಸದ್ಗುರುವೀನ | ದ್ವಂದ್ವ ಪಾದಗಳ ವಿಡಿದು | ಅವರ ದಯ | ದಿಂದ ಗತಿ ಮುಕ್ತಿ ಪಡೆದು | ಇಂದು ಧನ್ಯನಾಗೆಲೋ ಮುಕುಂದ ನಾಮ ನೆನೆದು ನೀ | ತಂದೆ ಮಹಿಪತಿ ನಿಜನಂದನುಸುರಿದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನವೇ ಸುಮ್ಮನೆ ಇರಬೇಡ ಅರೆನಿಮಿಷವಾದರುಮನವೇ ಸುಮ್ಮನೆ ಇರಬೇಡಪ ಕನಸಿನಂತಿಹ ಸಂಸಾರವ ನೆಚ್ಚಿಘನತರ ಪಾಪಕೆ ಗುರಿಯಾಗಬೇಡ ಅ ರೊಕ್ಕದಾಸೆಯ ಬಿಡಬೇಕು ಸ್ತ್ರೀ ಮೋಹಕೆಸಿಕ್ಕದೆ ನಡಕೊಳಬೇಕುಅಕ್ಕರು ದೇಹದೊಳಿರದಿರಬೇಕುಶಕ್ತಿಯ ಮೀರಿ ಧರ್ಮವ ಮಾಡಬೇಕುಮುಕ್ಕಣ್ಣ ಹರನ ಪೂಜಿಸಬೇಕುಮುಕ್ತಿ ಮಾರ್ಗವ ಪಡಕೊಳಬೇಕು 1 ಸರ್ವನಿಸ್ಪøಹನಾಗಬೇಕು ಸಂಸಾರದಿಚರಿಸುತಲೂ ಇರಬೇಕುಗುರುಹಿರಿಯರ ಕಂಡು ನಡೆಯಲು ಬೇಕುಪರರ ನಿಂದಿಸಿ ನುಡಿಯದೆ ಇರಬೇಕುಬರೆ ಸುಖ ದುಃಖವು ಸಮಗಾಣಬೇಕುಇರುಳು ಹಗಲು ಶಿವ ಶಿವ ಎನ್ನಬೇಕು2 ತನ್ನ ತಾನೆ ತಿಳಿಯಬೇಕು ತೋರುವ ಲೋಕವನ್ನು ದೃಶ್ಯವೆಂದಿರಬೇಕುತನ್ನಂತೆ ಸಕಲರ ನೋಡಲು ಬೇಕುಮಾನ್ಯರ ಕಂಡರೆ ಮನ್ನಿಸಬೇಕುಅನ್ಯನಾದರು ಹಿತವನೆ ಮಾಡಬೇಕುಪ್ರಸನ್ನ ರಾಮೇಶನನೆನಹಿರಬೇಕು 3 ವಣಗಿದ ಕಂಭದೊಳೊಗೆದುಬಣಗು ದಾನವನ ಗೆಲಿದುಕುಣಿಕುಣಿದಾಡಿದೆಯಂತೆ ಯಾಕಯ್ಯ ಶ್ರೀಕೃಷ್ಣಸೆಣಸಿದ ರಾಕ್ಷಸನ ಗೆಲಿದುವಿನಯದೆ ಪ್ರಹ್ಲಾದಗೊಲಿದುಅಣಿಯರ ಲೋಕವ ಕಾಯ್ದೆ ಎಲೆಸತ್ಯಭಾಮೆ 4 ಬಲು ಚಂದವಾಯಿತಯ್ಯ ಲೋಕಾ-ವಳಿಯೊಳು ದೊಡ್ಡವನಯ್ಯಬಲಿಯ ಕೂಡೆ ದಾನವ ಬೇಡುವರೆ ಕೃಷ್ಣಬಲಿಯ ದಾನವನ್ನೇ ಬೇಡಿಇಳೆಯ ಮೂರಡಿಯ ಮಾಡಿಸಲಹಿದೆ ಸರ್ವಸುರರ ಎಲೆ ಸತ್ಯಭಾಮೆ 5 ಧರಣೀಪಾಲಕರ ಗೆಲಿದಗರ್ವವಿರಲಿ ಹೆತ್ತತಾಯಶಿರವನರಿದ ದುರುಳರುಂಟೆ ಹೇಳಯ್ಯ ಕೃಷ್ಣಗುರುವಚನವನ್ನು ಮೀರೆನರಕಲೋಕವೆಂದು ಕಾಯಶಿರವನರಿದು ಮರಳಿ ಪಡೆದ ಎಲೆ ಸತ್ಯಭಾಮೆ6 ಮೂರು ಲೋಕವರಿಯೆ ಸೀತಾನಾರಿಯ ಕಳೆದುಕೊಂಡುಊರೂರ ತಿರುಗಿದೆಯಂತೆ ಯಾಕಯ್ಯಾ ಕೃಷ್ಣನೀರೊಳು ಸೇತುವ ನಿಲಿಸಿವೀರ ರಾವಣನ ಜಯಿಸಿವಾರಿಜಾಕ್ಷಿಯ ತಂದೆನೆ ಎಲೆ ಸತ್ಯಭಾಮೆ 7 ದುರುಳ ಪರಮಹಂಸರಂತೆಕರದಿ ನೇಗಿಲ ಹಿಡಿದೆಶರಖಡ್ಗಗಳಿಲ್ಲವೇನೋ ಶ್ರೀಕೃಷ್ಣರಾಯಸುರರಿಪು ಪ್ರಲಂಬಾದಿಗಳಶಿರವನರಿದು ಜೈಸಿದಂಥಾಗುರುತಿನ ಆಯುಧ ಕಾಣೆ ಎಲೆ ಸತ್ಯಭಾಮೆ8 ಮಂದಿಯ ಮುಂದೆ ಬತ್ತಲೆನಿಂದು ಓಡಾಡಿದೆಯಂತೆಚಂದವಾಯ್ತು ನಿನ್ನ ನಡತೆ ಹೇಳೆಲೋ ಕೃಷ್ಣಹಿಂದೆ ತ್ರಿಪುರದ ನಾರೀವೃಂದವ ಮೋಹಿಸಿ ಸರ್ವವೃಂದಾರಕರ ಪೊರದೆ ಎಲೆ ಸತ್ಯಭಾಮೆ 9 ದೊರೆತನವು ನಿನ್ನದೆಂದುಧರಣೀದೇವತೆಯು ಬಂದುಮೊರೆಯಿಟ್ಟಳದೇಕೋ ಪೇಳೋ ಶ್ರೀಕೃಷ್ಣರಾಯತುರಗವನೇರಿ ಖಡ್ಗವಧರಿಸಿ ಯವನ ಸೈನ್ಯವನ್ನುಮುರಿದು ಧರೆಯ ಪೊರೆದೆ ಕಾಣೆ ಎಲೆ ಸತ್ಯಭಾಮೆ 10 ಇಂತು ಕೇಳ್ದ ಸತ್ಯಭಾಮಾಕಾಂತೆಯ ಮಾತಿಗೆ ಮೆಚ್ಚಿಕಾಂತೆಯರೊಳು ಕಟ್ಟಾಣಿ ಬಾರೆಂದು ಕರೆದುಕಂತುಜನಕ ಕೆಳದಿಪುರದಕಾಂತ ಗೋಪಾಲಕೃಷ್ಣನುಸಂತಸವ ಮಾಡಿದನಿನ್ನೆಂತು ಪೇಳ್ವೆನೆ11
--------------
ಕೆಳದಿ ವೆಂಕಣ್ಣ ಕವಿ
ಮನಸಿಗೆ ಬಂದ ಧನ್ವಂತ್ರಿ ವೈದ್ಯನೇ ಮನಸಿನ ರೋಗವ ಪರಿಹರಿಸೊ ಪ ಧನ ಲೇಶ ಕೇಳಾ ಬಡವರ ಪೊರೆಯೊ ನೀ ಮನೆಗೆ ಬಂದರೆ ತನು ರೋಗಗಳೋಡೋವು ನೆನಹ ಮಾರ್ಗಕೆ ಬೇಗ ತಡಿಯದೆ ಈ ಮನ ಕುನರ ಸೂಲಿವುಳ್ಳ ವಾತವ ಹರಿಸೊ 1 ನಾಮವ ನುಡಿವಲ್ಲಿ ಅರುಚಿ ಇದಕಿದೆ ಭಾಮೆಯ ಕಂಡರೆ ತಲ್ಲಣವಾಹದೊ ಶ್ರೀ ಮನೋಹರನ ಸ್ಮರಣೆ ಹಾರುತಿದೆ ಈ ಮಹಾದೋಷವುಳ್ಳ ಪಿತ್ತವ ಬಿಡಿಸೊ 2 ಪಿರಿಯರು ನೋಡಲು ಗುರುಗುರುಯೆನುತಿದೆ ಪರಿಪರಿ ವಿಷಯದ ನಂಜಿಲಿಂದ ಪರಿಹರಿಸೊ ಶ್ಲೇಷ್ಮ ಮೊರೆಹೊಕ್ಕೆನು ನಾನು ಪರಿಹರಿಸೊ ವಾಸುದೇವವಿಠಲರೇಯ 3
--------------
ವ್ಯಾಸತತ್ವಜ್ಞದಾಸರು