ಒಟ್ಟು 3655 ಕಡೆಗಳಲ್ಲಿ , 119 ದಾಸರು , 2543 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರುಳು ಜೀವ ಏನು ಕಾಣುವೆ ಕೊನೆಗೆ ಪ ಸರ್ವಸಮರ್ಪಣೆ ಮಾಡದೆ ಇದರೊಳು ಅ.ಪ ಯಮನವರೆಳೆಯದೆ ಬಿಡುವರೆ ಛೀ ಹುಚ್ಚಾ 1 ಇಂದ್ರಿಯಂಗಳು ನಿನ್ನಾಧೀನವಲ್ಲ ಬಂದಮಾರ್ಗ ಸುಖ ಮರೆತು ಹೋದೆಯಲ್ಲ ಮುಂದಿನ ಗತಿ ಗೋತ್ರ ಮೊದಲಿಗೆ ಇಲ್ಲ ಮುಪ್ಪುತನವು ಹತ್ತಿರೇ ಬಂದಿತಲ್ಲ 2 ಕರ್ಮವೆಂಬುವುದೊಂದು ಅನಾದಿಯಾಗಿ ಧರ್ಮವ ಗಳಿಸುವವನೆ ಪರಮತ್ಯಾಗಿ ನಿರ್ಮಲ ಮನದಿ ದುರಾಶೆಯ ನೀಗಿ ಮರ್ಮವನರಿತುಕೊಂಡವನೇ ಮಹಾಯೋಗಿ3 ಭೋಗದಾಸೆಯ ಬಿಡು ಮೂರುದಿನದ ಬಾಳು ಕೂಗುತಿಹವು ಶೃತಿ ಸ್ಮøತಿಪುರಾಣಗಳು 4 ಸತಿಸುತರನು ನಾನೆ ಸಾಕುವೆನೆಂದು ಮತಿಗೆಟ್ಟು ಭ್ರಾಂತಿ ಹೊಂದುವೆ ನೀ ಮುಂದು ಮಿತಿಯ ಬರಹ ತಪ್ಪುವುದಿಲ್ಲ ಎಂದು ಪತಿ ಗುಣಸಿಂಧು 5 ಆಹಾರ ನಿದ್ರೆಯಲ್ಲವೆ ನಿನ್ನ ಆಟ ಸಾಹಸ ನೋಡೆ ಮಾಳಿಗೆಯ ಓಡ್ಯಾಟ ಮೋಹದಿಂದಲಿ ಮುಂದೆ ಬರುವುದು ಗೂಟ ಮೂಜಗದೊಳಗೆಲ್ಲಾ ಇದು ಗೊಂಬೆ ಆಟ 6 ಕಾಮಕ್ರೋಧಗಳು ಬಿಡಲಾರೆಯೇನೊ ಪಾಮರ ಜೀವ ಅಸ್ವಾತಂತ್ರಾ ನೀನೊ ಯಾಮಯಾಮಕೆ ಗುರುರಾಮವಿಠಲನಂಘ್ರಿ ನೇಮದಿಂದಲಿ ಭಜಿಸಿ ಸುಖವಾಗುವುದು ಕಾಣೊ7
--------------
ಗುರುರಾಮವಿಠಲ
ಮರುಳೆ ಸುಖ ನೀನೆನು ಪಡೆದಿ ನರಜನುಮ ತಾಳಿ ಇಹ್ಯದಿ ಪ ಪರಿಪರಿ ಜನುಮ ತಾಳಿ ಪರಮ ಬಂಧದೊಳೊರಲ ಉರುಳಿ ವರಮುಕ್ತಿ ದೊರೆವ ಕೀಲಿ ಸ್ಮರಿಸಿ ಬಂದಿ ಹರಿಯ ಬಳಲಿ 1 ಅರಿಯದೆ ಮತ್ತು ಭವಮಾಲೆ ಕೊರಳಿಗ್ಹಾಕಿಕೊಂಡಿ ದುರುಳ ಮರೆಯಮೋಸ ಕಾಂಬೋದೆಲ್ಲ ಹರಿದು ಪೋಗ್ವುದು ಸ್ಥಿರವಲ್ಲ 2 ಸಮಯ ಮಿಂಚಿಪೋದ ಬಳಿಕ ಕ್ರಮದಿ ಮತ್ತೆ ಸಿಗುವುದೆ ಮೂರ್ಖ ವಿಮಲ ಶ್ರೀರಾಮ ಪಾದಕಮಲ ನಮಿಸಿ ಪಡಕೊ ಮುಕ್ತಿಮಾಲಾ 3
--------------
ರಾಮದಾಸರು
ಮರೆತು ಹೋದೆನೊ ದೇವ ರಂಗಯ್ಯ ರಂಗ ಸಿರಿದೇವಿ ರಮಣನೆ ಪರನೆಂದು ತಿಳಿಯದೆ ಪ ನೀರೊಳು ಮುಳುಗುತ್ತ ಮೀನಮತ್ಸ್ಯನು ಎಂದು ವೇದವ ತಂದಿತ್ತೆ ದೇವೇಶನೆ ವಾರಿಧಿಶಯನನೆ ವಾರಿಜಾಕ್ಷನು ಎಂದು ಸಾರಸಾಕ್ಷನ ಗುಣ ಸ್ಮರಿಸದೇ ಮನದಲಿ 1 ಬೆಟ್ಟ ಬೆನ್ನಿಲಿ ಪೊತ್ತು ಪೊಕ್ಕು ನೀರೊಳು ಬೇಗ ಭಕ್ತರನುದ್ಧರಿಸಿದ ದೇವನ ಪೃಥ್ವಿಯ ಕೋರೆಯಿಂದೆತ್ತಿ ಅಸುರನ ಕೊಂದ ಸಿಸ್ತು ತೋರಿದ ಪರವಸ್ತುವ ಸ್ಮರಿಸದೆ 2 ಘುಡು ಘುಡಿಸುತ ಬಂದು ಒಡಲ ಸೀಳಲು ಖಳನ ಅಡವಿ ಮೃಗವು ಎಂದು ಬೆರಗಾದೆನೊ ಹುಡುಗನಂದದಿ ಪೋಗಿ ಪೊಡವಿಪಾಲಕನ ಬೇಡಿ ಕೊಡಲಿಯ ಪಿಡಿಯುತ್ತ ತಾಯತರಿದನ ಸ್ಮರಿಸದೆ 3 ನಾರಿಯನರಸುತ ವನವ ಚರಿಸಿದಿ ನಾರಿಚೋರನ ಕೊಂದೆ ವಾನರ ಸಹಿತ ನವನೀತ ಚೋರನೆ ಮನೆಮನೆಗಳ ಪೊಕ್ಕು ಗಾರು ಮಾಡಿದ ಕೃಷ್ಣ ಹರಿಯೆಂದು ಸ್ಮರಿಸದೆ 4 ಬೆತ್ತಲೆ ನಿಂತರು ಉತ್ತಮ ನೆನಿಸಿದಿ ಸತ್ಯಮೂರುತಿ ಪುರುಷೋತ್ತಮನೆ ಕತ್ತಿ ಕಯ್ಯಲಿ ಪಿಡಿದು ಮತ್ತೆರಾವುತನಾಗಿ ಸುತ್ತಿ ಸುತ್ತಿದ ಸರ್ವೋತ್ತಮನರಿಯದೆ 5 ಭಕ್ತವತ್ಸಲಸ್ವಾಮಿ ಭಯನಿವಾರಣನೆಂದು ಭೃತ್ಯರು ನೃತ್ಯದಿ ಕುಣಿಯುವರೊ ಸತ್ಯ ಸಂಕಲ್ಪನೆ ಸತ್ಯಭಾಮೆಯ ಪ್ರಿಯ ಭಕ್ತರೊಡೆಯ ಪರವಸ್ತುವ ಸ್ಮರಿಸದೆ6 ಕರುಣವಾರಿಧಿಯೆಂದು ಸ್ಮರಿಸುವ ಭಕುತರ ಪರಿ ಅಘಗಳು ಪರಿಹಾರವೊ ಪತಿ ಕಮಲನಾಭ ವಿಠ್ಠಲ ಸ್ಮರಿಸದೆ ಅಪರಾಧ ಸಲಹೆಂದು ಸ್ಮರಿಸದೆ 7
--------------
ನಿಡಗುರುಕಿ ಜೀವೂಬಾಯಿ
ಮರೆಯದಿರು ಮರೆಯದಿರು ಹರಿಯನು ಪಾಪಿ ಪ ಮರೆಯದಿರೆ ನೀ ಮೈಕುಂಠಕೆ ಪೋಪಿಅ.ಪ. ಮೂರು ದಿನ ಬಾಳ್ವ ಸಂಸಾರವ ನೋಡಿ ಬಾರಿ ಹರುಷಿಸದಿರು ನೀನೆಲೊ ಖೋಡಿ 1 ಮತಿವಂತನಾದರೆ ಹರಿಪುರಕೆ ಪೋದಿ ಸತಿಸುತರ ನಂಬೆ ನಿನ ಬಾಯಲಿ ಬೂದಿ 2 ಸಿರಿಯ ನಂಬಿದ ದುರ್ಯೋಧನ ಬಿದ್ದ ಹರಿಯ ನಂಬಿದ ಭೀಮಸೇನನು ಗೆದ್ದ 3 ಆನೆ ಕುದುರೆ ರಥ ಭಂಡಾರವು ನಿಂದೆ ಪ್ರಾಣ ಹೋಗುವಾಗವು ಬಾರವು ಹಿಂದೆ 4 ರಂಗೇಶವಿಠಲನ ನಂಬಿದವ ಜಾಣ ಅಂಗನೆಯರ ನಂಬಿದ ಮನುಜನೆ ಕೋಣ 5
--------------
ರಂಗೇಶವಿಠಲದಾಸರು
ಮರೆಯದಿರು ಹರಿಯಮರೆವರೆ ಮೂರು ಲೋಕದ ದೊರಿಯ ಪ ಮದಗಜ ಹರಿಯೆಂದು ಕರೆಯಲುಒದಗಿ ಆಕ್ಷಣ ಬಂದುಮುದದಿ ನಕ್ರನ ಕೊಂದು ಸಲ-ಹಿದ ಸದ್ಭಕ್ತರ ಬಂಧುಹದುಳ ಪ್ರಹ್ಲಾದನ ಹೆದರಿಸಿದಸುರನಉದರವ ಬಗೆದಂಥದುಭುತ ಮಹಿಮನ1 ನಾರಿಯು ತನ್ನ ಕರೆದ ಮಾತ್ರದಿಸೀರೆಯ ಮಳೆಗರೆದಕ್ರೂರ ಖಳನ ತರಿದು ಆ ಪಾಂಡವರಆರಣ್ಯದಿ ಪೊರೆದಗಾರಾದಜಮಿಳ ನಾರಗ ಎನಲುಪಾರಗಾಣಿಸಿದಪಾರ ಗುಣನಿಧಿಯ 2 ದುರಿತ ಭವ ಪಾಶಾ - ಅವಗೆಂದೆಂದಿಗಿಲ್ಲ ಕ್ಷೇಶಾತಂದೆ ಕದರುಂಡಲಗಿ ಹನುಮಯ್ಯನೊಡೆಯಚಂದಾದಿಕೇಶವನ ನೆನೆದವರೆಂದಿಗು ಧನ್ಯರು3
--------------
ಕನಕದಾಸ
ಮರೆಯದೆ ಸಲಹೊ ಮಾರುತೀಶ ಎನ್ನ ಶರಣೆಂಬೆನು ನಿನ್ನ ಪ ಶರಣಾಗತರನು ಬಿಡದೆ ಪೊರೆವ ಫನ್ನ- ಗಿರಿ ಅಂಜನೆತನಯಅ.ಪ ವನನದಿಗಿರಿಗುಹೆಗಳಲಿ ನಿನ್ನ ರೂಪ ತೋರುವುದೈ ಭೂಪ ಶರಧಿ ಲಂಘಿಸಿ ರಾವಣನಿಗೆ ತಾಪ ಪುಟ್ಟಿಸಿದೆಯೊ ರಘುಪ- ನಡಿಗಳ ಬಿಡದೆ ಸೇವಿಸುವರ ಪಾಪ ಮಾಡುವಿ ನಿರ್ಲೇಪ ಸಡಗರದಲಿ ನಿನ್ನೊಡೆಯನ ತೋರಪ್ಪ ಘನಗಿರಿ ಹನುಮಪ್ಪ 1 ಊರಿನಲಿ ಊರ್ಹೊರಗು ನಿನ್ನ ಮೂರ್ತಿ ಎಷ್ಟ್ಹೇಳಲಿ ಕೀರ್ತಿ ಪಾಡುತ ಪೊಗಳ್ವರು ನಿನ್ನಯ ಸತ್ಕೀರ್ತಿ ವರ್ಣಿಸುವುದೆ ಅರ್ಥಿ ಪಾಮರನೊಮ್ಮೆ ಪಾಡಲು ನಿನ್ನ ವಾರ್ತೆ ಪರಿಹಾರವೋ ಭೀತಿ ನಾಡೊಳು ನಿನ್ನ ಭಜಿಸುವವರ ಸಂಗ ನೀಡು ಕೃಪಾಪಾಂಗ2 ಕಡಲ ಶಯನನ ಅಡಿಗಳ ಸೇವಿಸುತ ಕಡುಹರುಷವ ಪಡುತ ಬಿಡದೆ ನಿನ್ನಯ ಸೇವಕರಿವರೆನುತ ಶ್ರೀಶಗೆ ಪೇಳುತ್ತ ಕೊಡಿಸುವಿ ಮುಕ್ತಿಯ ಧೃಡಭಕ್ತರಿಗೆ ಸತತ ರಾಮರ ಸ್ಮರಿಸುತ್ತ ಕಮಲನಾಭ ವಿಠ್ಠಲನನು ಸೇವಿಸುತಭಕ್ತರ ಸಲಹುತ್ತ3
--------------
ನಿಡಗುರುಕಿ ಜೀವೂಬಾಯಿ
ಮರೆಯುವರಾರೆ ಶ್ರೀ ಮುರಳೀಧರನ ಕಂಡು ವರವ ಬೇಡದವರಾರೆ ಪಡೆಯದವರಾರೆ ಪ ಮುರಳೀದನಿಯ ಕೇಳಿ ಪರಿದೋಡದವರಾರೆ ಅವನೆಡೆ [ಪರಮಸುಖ] ಪಡೆಯದವರಾರೆ ಅ.ಪ ಕಂಜನಾಭನು ಬಂದು ಪುಂಚವನದಿ ನಿಂದು ಮಂಜುಳಗಾನವ ಮಾಡುತಿರೆ ಅಂಜುವರೇನೆ ನಿರಂಜನನವ ಪಾಪ ಭಂಜಕನೇ ತಂಗಿ ಹೋಗೋಣ ಬಾರೆ 1 ಮಂಗಳಮೂರ್ತಿ ಮಾತಂಗವರದ ಭವ ಭಂಗನ ಚರಣವ ನೋಡುವ ಬಾರೆ ಮಂಗಳ ಜಯ ಜಯ ಮಂಗಳ ಮಾಂಗಿರಿ ರಂಗಗೆ ಶುಭವೆಂದು ಪಾಡುವ ಬಾರೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮರೆವರೇನೊ ರಾಮ ನಿನ್ನ ಚರಣ ಸೇವಕನÀನ್ನು ಪರರಿಗೊಪ್ಪಿಸಿ ಹೀಗೆ ಪ ಪರಮ ದಯಾನಿಧಿ ಅಲ್ಲವೆ ಮುನ್ನ ಶರಣರ ಪಾಲಿಸಲಿಲ್ಲವೆ ಇದು ಸರಿಯೇನೊ ಜನ ನಗರೇನೊ ಇನ್ನು ಧರಣಿಯೊಳ್ ನಾನೇನು ಭಾರವೆ ದೂರವೆ ಅ.ಪ. ಗತಿಹೀನರಿಗೆ ನೀ ಗತಿಯೆಂದು | ನೀನೆ ಪತಿತರ ಪತಿಕರಿಸುವನೆಂದು ಕೇಳಿ ಬಂದೆನೈ ಭವದಿ ನೊಂದೆನೈ ಮುಂದೆ ಗತಿದೋರೆಂದು ಸಾರಿದೆ ಚೀರಿದೆ ದೂರಿದೆ 1 ದೋಷರಾಶಿಗಳೆಲ್ಲ ಅಳಿಸಯ್ಯ ವಿಷಯ ವಾಸನೆ ವಿಷವೆಂದು ತಿಳಿಸಯ್ಯ | ನಿನ್ನ ದಾಸಾನುದಾಸ ದಾಸನು ಎನಿಸಿ | ಪರಿ- ಪೋಷಿಸಬೇಕಯ್ಯ ದಮ್ಮಯ್ಯ ಎಮ್ಮಯ್ಯ 2 ಏನು ಸಾಧನವನ್ನು ನಾ ಕಾಣೆ | ನಿನ್ನಾ- ಧೀನದವನು ನಾ ನಿನ್ನಾಣೆ ದೀನ ಬಂಧುವೆ ದಯಾಸಿಂಧುವೆ ನಿನ್ನ ಪರಮಾನಂದ ಮೂರ್ತಿಯ ತೋರೋ ಶ್ರೀಕಾಂತನೆ 3
--------------
ಲಕ್ಷ್ಮೀನಾರಯಣರಾಯರು
ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ ಕರೆದು ಕಾಮಿತಗಳ ಕರವೆ ನಾ ನಿನಗೆಂದು ಪ ದಾರಿಯ ತಪ್ಪಿ ಪೋಗುವ ಧೀರ ಫೋರನ್ನ ದಾರಿಯ ಪಿಡಿಸಿನ್ನು ಪುರವನ್ನೆ ತೋರಿಸೆ ಊರಿನವೊಳಗೆ ಅವನ ಆಗಾ ದೂರ ನೋಡುವರೆ ದೋಷಗಳ ವಿಚಾರಮಾಡುವರೆ ಧೀರರು ಆವ ಪರಿಯಲವನ ಪಾರಗಾಣಿಪರಲ್ಲದೆ 1 ಹಸಿದು ಪರರ ಕೇಳದ ದ್ವಿಜವರಿಯನ್ನ ಶಿಶುವಿನ ನೋಡಿ ದಯದಿಂದ ಕರದಿನ್ನು ಹಸಿದ್ಯಾಕೊ ಎಂದು ಪಾಕವ ಮಾಡಿ ಹಸನಾಗಿ ತಂದು ಬಡಿಸುವ ಅವಸರದಿ ನಿಂದು,ಅವನ ದೋಷ ಪಸರಿಸಿ ಉಣಿಸಿದ ಜನರುಂಟೆ ಧರೆಯೊಳು 2 ಜಲಪಾನಾತುರನಾಗಿ ಜಲವ ಕೇಳಿದ ವಿಪ್ರ- ಕುಲ ತರಳನನು ನೋಡಿ ಕೃಪೆಯಿಂದ ಸುರನದಿ ಜಲವನೀವೆನೆಂದು ಬ್ಯಾಗನೆ ದಿವ್ಯ ಕಲಶವ ತಂದು ಬಾರೆಲೊ ಬಲು ಆಲಸ್ಯವ್ಯಾಕೆಂದು ನಿನ್ನಯ ಪಂಕ ತೊಳಿಯ ಕೊಡುವೆನೆಂದು ತಡವ ಮಾಡುವರೆ 3 ಸುಶರೀರ ತನುವನು ಮನದಲಿ ಬಯಸಿ ತಾ ಉಸರದ ಮುನಿತನಯನ ಕಂಡು ತಾವಾಗಿ ಕುಶಲವ ಕೇಳಿ, ದೇವತ ವೈದ್ಯ ಅಸಮರೆಂದೇಳಿ, ರಸ ಮಾಡೆಂದೇಳಿ, ಅವಗೆ ದಿವ್ಯ ರಸವನು ಪೇಳಿ, ಪಸಿ ನಿನ್ನಲಿದ್ದಾ ಕಿಸರು ಪೋದರೆ ಕೊಡುವೆವೆಂದು ನಿಲುವರೆ 4 ಅರ್ತಿಯ ಭಕುತನ್ನ ನೋಡೀಗ ನಿನ ದಿವ್ಯ ಕೀರ್ತಿಯ ನೋಡಿಕೊ, ವಾಸುದೇವವಿಠಲನ ಮೂರ್ತಿಯ ಭಜಕ ಭಕ್ತರಾಭೀಷ್ಟ ಪೂರ್ತಿಗೆ ಜನಕ ನಿನ್ನಯ ಗುಣ ಸ್ಫೂರ್ತಿಗೆ ಜನಕ, ನಿನ್ನಯ ಗುಣ ಸ್ಫೂರ್ತಿ ಉಳ್ಳನಕ ಪಾಪದ ಲೇಶ ವಾರ್ತಿ ಎನಗೆ ಇಲ್ಲವೆಂದು ನಿಶ್ಚೈಸಿದೆ 5
--------------
ವ್ಯಾಸತತ್ವಜ್ಞದಾಸರು
ಮರೆವುದೆಂತು ನಿನ್ನ ಪರಮ ದಯವ ಕರುಣಾವಾರಿಧೇ ಪ ಅರಿಯದ ಅಜ್ಞಾನಿ ಎನ್ನ ಹಿರಿಯನೆನಿಸಿ ಪೊರೆದ ಬಗೆಯ ಅ.ಪ ಜ್ಞಾನಿಗೆ ಲಭ್ಯನೆಂದು ನಿನ್ನ ಮಾನತತಿಯು ಪೊಗಳುತಿರಲು ಜ್ಞಾನವೀಯದಿರಲು ನಿನ್ನ ಜ್ಞಾನಿಜನಗಳೇನೆನುವರೋ 1 ರಾಗ ದ್ವೇಷದಿಂದ ಶಿರವ ಬಾಗದಿದ್ದ ಎನ್ನ ದುರಿತ ನೀಗಿ ದಿವ್ಯಯೋಗವೀಯಲು ತ್ಯಾಗ ನಿನ್ನದು ಯೋಗವೆನ್ನದು 2 ಮಡುವಿನಲ್ಲಿ ಬಿದ್ದು ಸುಳಿಯ ಹೊಡೆತದಿಂದ ಮುಳುಗುತಿರಲು ದಡಕೆ ತಂದು ರಕ್ಷಿಸಿದ ಎನ್ನೊಡೆಯ ವರ ಪ್ರಸನ್ನ ಮೂರುತೆ 3
--------------
ವಿದ್ಯಾಪ್ರಸನ್ನತೀರ್ಥರು
ಮರ್ದಳವನಿದ ಮನ್ನಿಸು ಮಾರಮಣವರ್ಧಿಸುವದಾನಂದವಸಿದ್ಧವಹ ಶಬ್ದಗಳನು ಸೂಚಿಸುತಲಿದ್ದು ಪ್ರೇರಿಪುದರ್ಥವ ಪಉಭಯ ಮುಖದಿಂದಲುದಿಸಿ ತಾನಿಂತುಶುಭತರಾಕೃತಿಯೆನ್ನಿಸಿಲಭಿಸುತ್ತ ನರ್ತಕಿಯನು ಲಾಲಿಸುತವಿಭು ನಿನ್ನ ನೋಲೈಪುದು 1ಸ್ಥೂಲತರ ಸ್ವನವಾದರೂ ಕಿಂಕಿಣೀಜಾಲಕಿದು ಜೋಡಾಗುತಪಾಲಿಸುತ ಪದಗತಿಯನು ಮನದ ಬಲಕಾಲಯವದಹುದೆನ್ನಲು2ಮೊದಲ ವರ್ಣವು ರುದ್ರನು ಮಧ್ಯದಲಿಹುದುಗಿದಕ್ಷರ ವಿಷ್ಣುವುತುದಿಳಕಾರವು ಬ್ರಹನು ಇಷ್ಟಕ್ಕೆಸದನವಾಗ್ಯನುಸರಿಸಲು 3ಮೂರು ಮೂರ್ತಿಗಳಂಗವ ವರ್ಣಗಳುತೋರೆ ನಡುವೆ ದಕಾರವಸೇರಿದ ರಕಾರ ತಾನು ವ್ಯಂಜನದಿತಾರಕಬ್ರಹ್ಮವಾಗೆ 4ಇಂತು ಮರ್ದಳವೆಸೆಯಲು ಇಂದಿರಾವಂತ ನೀ ಕಟ್ಟಿದಂತೆಕಂತುಪಿತ ತಿರುಪತೀಶಾ ಇಲ್ಲಿ ನೀನಿಂತು ಕೇಳ್ವೆಂಕಟೇಶಾ 5ಓಂ ಗೋಪಗೋಪೀಶ್ವರಾಯ ನಮಃ
--------------
ತಿಮ್ಮಪ್ಪದಾಸರು
ಮಲಗು ಮಲಗಮ್ಮ ತಾಯೆ ಶ್ರೀಹರಿಯ ಜಾಯೆ ಮಲಗು ದುಗ್ಧಾಬ್ಧಿನಿಲಯೆ ಸಾಗರನ ತನಯೆ ಜೋ ಜೋ ಪ ಇಂದಿರೆಯೆ ಹರಿ ನಿನ್ನ ಅಂದವನು ನೋಡಿ ಮಂದರಧರ ತನ ವಕ್ಷದಿ ಮಂದಿರವ ಮಾಡಿ ಚಂದದಿ ಮುದ್ದಿಪನು ಗೋವಿಂದ ನಲಿದಾಡಿ ಮಂದಸ್ಮಿತನಾಗಿ ತಾ ನಿಂದಿರುವ ನಿನ ಕೂಡಿ 1 ಮೂರುಕಣ್ಣ ಮೋಹಿಸಿದನೇನೆಂಬೆನಾಗ ಮಾರಮಣನು ಸ್ತ್ರೀ ವೇಷಧರಿಸಿದಾಗ ಆ ರಮೇಶ ಮರುಳಾದನಮ್ಮ ನಿನಗೀಗ ನೀರೆ ನೀ ಮಲಗು ನಿಶ್ಚಿಂತಳಾಗಿ ಬೇಗ 2 ಪನ್ನಗಾರಿಧ್ವಜಗೆ ಛತ್ರ ಚಾಮರವಾದಿ ಉನ್ನಂಥ ವಸ್ತ್ರ ಆಭರಣಗಳು ನೀನಾದಿ ಅನ್ನಪಾನಾದಿಗಳಿತ್ತು ತೃಪ್ತಿಪಡಿಪಳಾದಿ ನಿನ್ನಂತೆ ಸೇವಿಪರ್ಯಾರು ಮೂರು ಭುವನದಿ 3 ಏನು ಸುಕೃತಗೈದಿದ್ದೆ ನಾ ಕಾಣೆನಮ್ಮಾ ಜಾಣೆ ನಿನಗೆಣೆಯ ಕಾಣೆ ಜನನಿ ಕೇಳಮ್ಮಾ ತಾನೆ ತನ್ನಲ್ಲಿ ರಮಿಪನಲ್ಲವೇನಮ್ಮಾ ದಾನವಾಂತಕನು ನಿನ್ನ ಕೈಪಿಡಿದನಮ್ಮಾ 4 ಮಂಗಳಾಂಗಿಯೆ ನಿನಗೆ ಸರಿಸಮರ್ಯಾರಿಲ್ಲ ಭೃಂಗಕುಂತಳೆ ಕೈ ಜೋಡಿಪರು ಸುರರೆಲ್ಲ ಬಂಗಾರದ ಮಂಚವಣಿಯಾಗಿಹುದಲ್ಲ ರಂಗೇಶವಿಠಲ ತಾ ಪವಡಿಸಿರ್ಪನಲ್ಲ 5
--------------
ರಂಗೇಶವಿಠಲದಾಸರು
ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮಹಾಲಕ್ಷ್ಮಿ ಅಮ್ಮಾ ಲಕುಮಿದೇವಿ ನಿಮ್ಮರಸನ ತೋರೆ ಸುಮ್ಮನೆ ಬಿಡುವದು ಸಮ್ಮತವೇ ನಿನಗೆ ಪ ಹೆತ್ತ ಬಾಲರು ಮಂದಮತಿಗಳಾದರೆ ತಾಯಿ ಸತ್ತು ಹೋಗಲಿ ಎಂದು ಎತ್ತದೆ ಬಿಡುವೊಳೆ 1 ನಿಮ್ಮ ಮಾತಿಗೆ ಹರಿ ಸಮ್ಮತನಾಗುವ ಕುಮತಿಗಳೆಣಿಸದೆ ರಾಮ ಮೂರುತಿ ತೋರೆ2 ಸಿಂಧುತನಯೆ ಎನ್ನ ಬಂಧ ಬಿಡಿಸಿ ಬೇಗ ಪಾದ ಪೊಂದಿರುವಂತೆ ಮಾಡೆ 3 ತತ್ವೇಶರೆಲ್ಲರೂ ನಿತ್ಯಾಧೀನರು ನಿಮಗೆ ಭೃತ್ಯಗೆ ನಿಜ ಹರಿ ಭಕ್ತಿ ಕೊಡುವಂತೆ ಪೇಳೆ 4 ಎನ್ನಲಿರುವ ಹೀನರೋಡಿಸಿ ಬೇಗ ಪನ್ನಗಾಚಲವಾಸ ಶ್ರೀ ನರಹರಿ ತೋರೆ 5
--------------
ಪ್ರದ್ಯುಮ್ನತೀರ್ಥರು
ಮಳೆಯ ದಯಮಾಡೊ ರಂಗಯ್ಯ ನಿಮ್ಮ ಕರುಣ ತಪ್ಪಿದರೆ ಉಳಿಯದೀ ಲೋಕ ಪ. ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ ಹಸಿದು ಬಾಯಾರಿ ಬತ್ತಿದ ಕೆÀರೆಗೆ ಬಂದು ತೃಷೆಯಡಗದೆ ತಲ್ಲಣಿಸಿ ಮೂರ್ಛೆಗೊಂಡು ದೆಸೆದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ 1 ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ ಮೊಗೆ ಮೊಗೆದು ಪಾತ್ರೆಯಲಿ ನಾರಿಯರು ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ2 ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ ಬಂದಿದೆ ಭಾದ್ರಪದ ಮಾಸವೀಗ ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ3
--------------
ಹೆಳವನಕಟ್ಟೆ ಗಿರಿಯಮ್ಮ