ಒಟ್ಟು 3720 ಕಡೆಗಳಲ್ಲಿ , 121 ದಾಸರು , 2734 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತೀ ನೀ ಪರಿಪಾಲಿಸೇ ಪ ನಾರಿ ಶಿರೋಮಣಿ | ನಿರುತ ನಿನ್ನಯ ಪದವಾರಿಜ ಭಕುತಿಯ | ಗಾರು ಮಾಡದೆ ಕೊಡು ಅ.ಪ. ಉರು ವಿಕ್ರಮನಲಿ | ವರ ಭಕ್ತ್ಯುದಯಕೆಪರಮ ಕಾರಣಳೆಂ | ದರಿತು ನಿನ್ನ ಪದ |ಸರಸಿಜ ಭಜಿಸುವೆ | ಪರಮ ಕೃಪಾಕರೆತ್ವರ ಹರಿ ಭಕುತಿಯ | ಪಾರಿಪಾಲಿಪುದು 1 ವಿಪರೀತದ ಮತಿ | ಅಪಹರಿಸುತ ಬಲುಕೃಪೆಗೈದೆನ್ನಲಿ | ಅಪ ವರ್ಗದ ಹರಿವಿಪಗಮನನ ಸ | ದ್ದಪರೋಕ್ಷವ ಕೊಡುವಿಪ ಅಹಿಪತಿ ನುತೆ | ಅಪ್ರತಿ ಮಾತೆಯೆ 2 ಭೂವಲಯದಿ ನಿನಗಾವರಿಲ್ಲ ಸಮನೀ ವೊಲಿಯದಲಿ | ನಿನ್ನಾವರ ಕಾಣೆನುಮಾ ವಿನೋದಿ ಗುರು | ಗೋವಿಂದ ವಿಠಲನಪಾವನ ಪದವನು | ತೀವರ ತೋರಿಸು 3
--------------
ಗುರುಗೋವಿಂದವಿಠಲರು
ಭಾರತೀ ಮಜ್ಜನನಿಯ ಭಾರತೀ ಪ ಭಾರತೀ ಭರತನಾರ್ಧಾಂಗಿ ಕರು ಣಾರಸ ಪೂರಿತಾಪಾಂಗಿ ಅಹ ತಾರಕ್ಷ್ಯ ಪ್ರಮುಖ ವೈಕಾರಿಕ ದೇವಗ ಣಾರಾಧಿತಾಂಘ್ರಿ ಸರೋರುಹೆ ಪಾಲಿಸೆ ಅ ವಿದ್ಯುನಾಮ್ನಮಕೆ ವಿಧಿಜಾತೆ ಕೃತಿ ಪ್ರದುಮ್ನ ಜಠರಸಂಭೂತೆ ಅನ ವದ್ಯ ಸದ್ಗುಣಗಣವ್ರಾತೆ ಬ್ರಹ್ಮ ವಿದ್ಯವ ಪಾಲಿಸು ಮಾತೆ ಅಹ ಬುಧ್ಯಾಭಿಮಾನಿಯೆ ಸದ್ಯೋಜಾತನ ಪೆತ್ತ ಶ್ರದ್ಧಾ ನಾಮಕೆ ಅನಿರುದ್ಧನ ತೋರಿಸೆ 1 ಗುಣತ್ರಯಾತ್ಮಕವಾದ ಲಿಂಗದೊಳು ಅಣರೂಪಳಾಗಿ ತುರಂಗ ಮುಖ ಅನಿಲಾಂತರ್ಗತ ಪಾಂಡು ರಂಗನಂಘ್ರಿ ಭೃಂಗ ಆಹ ಅನಿರುದ್ಧ ದೇಹಸ್ಥ ಅನಿಮಿಷರೊಳು ಪೊಕ್ಕು ದ್ವಿನವರೂಪದಿ ಮಾಳ್ಪೆ 2 ಕಾಳಿದ್ರೌಪದಿ ಶಿವಕನ್ಯಾ ಮನ್ಮ ನಾಲಯದೊಳು ನಿಲ್ಲೆ ಘನ್ನ ಪ್ರಾಜ್ಞ ನಿತ್ಯ ಎನ್ನ ಪರಿ ಪಾಲಿಸು ನಂಬಿದೆ ನಿನ್ನ ಆಹ ಶೈಲಜೆ ಶ್ಯಾಮಲೆÉ ಪೌಲೋಮಿ ಉಷೇರಿಂದ ಓಲಗ ಕೈಕೊಂಬ ಕಾಲಾಬ್ಧಿ ಮಾನಿಯೆ 3 ವಂದಿಪೆ ನಿನಗಿಂದ್ರಸೇನಾ ನಳ ನಂದಿನಿ ಕರುಣಿಸು ಜ್ಞಾನ ಶ್ರೀ ಮು ಕುಂದನ ಪರಮ ಕಲ್ಯಾಣ ಗುಣ ಸಿಂಧುವಿನೊಳಗೆ ಪಾಠೀನ ಆಹ ನಂದದಿ ಚರಿಸುವ ಗಂಧವಾಹನ ರಾಣಿ ಸಿಂಧೂರ ಗಮನೆ ಪುರಂದರಾರಾಧಿತೆ 4 ನಿಗಮತತಿಗಳಭಿಮಾನಿ ನಿನ್ನ ಪೊಗಳಲೆನ್ನೊಳವೆ ಕಲ್ಯಾಣಿ ಆ ಪ ನ್ನಗರಾಜ ಸಹಸ್ರ ವಾಣಿಯಿಂದ ಬಗೆ ಬಗೆ ತುತಿಪ ಸುಶ್ರೋಣೆ ಆಹ ಮುಗಿವೆ ಕರಗಳೆನ್ನವಗುಣಗಳೆಣಿಸದೆ ಜಗನ್ನಾಥವಿಠಲನಂಘ್ರಿಗಳ ಧ್ಯಾನವನೀಯೆ 5
--------------
ಜಗನ್ನಾಥದಾಸರು
ಭಾರತೀಪತಿ ಮೂರುತಿ ಮಾರುತಿ ಕಾಯೊ ಪ ಘೋರದುರಿತೌಘ ಪರಿಹಾರ ಸುಸಮೀರ ಧೀರಾ ಅ.ಪ ಸತ್ತ್ವ್ವ ಸತ್ತ್ವಾತ್ಮಕ ತತ್ತ್ವದೇವತೆಗಳ ನಿತ್ಯ ನಿಯಾಮಕ ಗುರು 1 ಪಟುತರಾಂಗನೆ ಧೂರ್ಜಟಿಯ ಸೇವೆಗೆ ಮಚ್ಚಿ ಪರಮೇಷ್ಠಿ ಪದ 2 ನಂಜಯನಾಗ್ರಜನೆ ಮೂರ್ಜಗ ಗುರು 3 ಶ್ರೇಷ್ಠಮೂರುತಿ ಜಗಚ್ಚೇಷ್ಟಾಪ್ರದಾಯಕ ಪ್ರವಿಷ್ಠ ಸರ್ವಸೃಷ್ಟಿಕಾರ್ಯ ತೊಟ್ಟಿರುವೆ4 ಮುಖ್ಯವಾಚ್ಯನು ದೇವ ಅಮುಖ್ಯವಾಚ್ಯನು ನೀನು ಮುಖ್ಯ ಜೀವಕೋಟಿಯೊಳು ಪ್ರಮುಖನಯ್ಯ ಮುಖ್ಯಪ್ರಾಣ5 ಶ್ವಾಸನಿಯಾಮಕ ನಿಶೆಯೊಳು ನಿದ್ರೆಯೊಳು ಅಸುರಾದಿ ಜೀವರೊಳು ಶ್ವಾಸಭೂರ್ಭುವನೆನಿಸುವೆ 6 ಸರ್ವನಿಯಾಮಕ ಶರ್ವರೊಂದಿತಪಾದ ಸರ್ವೋತ್ತಮ ಶ್ರೀ ವೇಂಕಟೇಶನೋರ್ವನೆ ಮುಖ್ಯನೆಂದೆ7
--------------
ಉರಗಾದ್ರಿವಾಸವಿಠಲದಾಸರು
ಭಾರತೀರÀಮಣನೆ ಸಾರಿದೆನು ಚರಣ ತೋರು ಮನ್ಮನದಲಿ ಭೂರಿಸುಕÀರುಣ ಪ ನಾರಾಯಣಾಂಕದಿ ಕುಳಿತಿಹ ಶೂರಾ ಸೂರಿಸ್ತೋಮತೇಜೊರಂಜಿಪುದಾರಾ ಮಾರಮಣನಾಙÁ್ಞದಿಂ ಬ್ರಹ್ಮಾಂಡಧಾರಾ ಧಾರಕಾನಂದ ವಿಠಲನ್ನಚಾರಾ 1 ದುರುಳರಕ್ಕಸತತಿಯ ದ್ವಿರದ ವಿದಾರ ಹರಿರಘುವರನಪಾದ ಶರಧಿಜ ಚಕೋರ ಹರಮುಖ್ಯ ಸುರಸರಸಿರುಹಕೆ ದಿನಕರ ವರದೇಶವಿಠ್ಠಲನ ಸ್ಮರಿಪÀ ಸಮೀರ 2 ಕುರುಕುಲ ಸಂಜಾತ ದ್ರುಪದಜಾನಾಥ ದುರಿಯೋಧನನ ಊರುತರಿದ ನಿರ್ಭೀತ ಪರಮ ಭಗವದ್ಭಕÀ್ತವೃಂದ ಸುಪ್ರೀತ ವರದೇಂದ್ರ ವಿಠ್ಠಲನ ಪ್ರೀಯ ಸುತನೀತ 3 ಅದ್ವೈತ ಮತತಿಮಿರ ಧ್ವಂಸÀನ ಧಿರ ಶುದ್ಧವೈಷ್ಣವ ಮತಸ್ಥಾಪನಾಪಾರ ಸದ್ವಾಕ್ಯದಿಂದಲಿ ಹರಿಪಾರವಾರ ಮಧÀ್ವಸುಂದರ ವಿಠ್ಠಲನ ಸುಕುಮಾರ 4 ವರದೇಶವಿಠ್ಠಲ ವರದೇಂದ್ರ ವಿಠಲ ಸುಂ - ದರ ವಿಠಲ ಆನಂದ ವಿಠ್ಠಲನ್ನ ಪರಿಪರಿ ವಿಧದಲ್ಲಿ ಕರುಣವ ಪಡೆದಿಹ ಗುರುಜಗನ್ನಾಥ ವಿಠ್ಠಲನ ನಿಜದೂತ 5
--------------
ವರದೇಶವಿಠಲ
ಭಾಳೆ ಗಾಬರಿಗೊಂಡಳು ಇಂದಿರಾದೇವಿಭಾಳೆ ಗಾಬರಿಗೊಂಡಳು ವ್ಯಾಲಾಶಯನನು ಇವಳ ಪೇಳಿದಂತಿರಲುಏನು ಬಾಳು ಯಾತಕೆ ಎಂದಳು ಪ. ಸಂಡಿಗೆ ಹಪ್ಪಳ ಮಂಡಗಿ ಗುಳ್ಳೋರಿಗೆ ದಿಂಡು ಸೂರಣವು ಮೊದಲಾಗಿದಿಂಡು ಸೂರಣವು ಮೊದಲಾಗಿ ಬಡಿಸೋರುದುಂಡು ಮುತ್ತುಗಳು ಉದುರುತ1 ಅಪಾರ ಮಹಿಮಗೆ ರೂಪಸುಂದರಿಯರು ಸೂಪ ಪರಮಾನ್ನ ಮೊದಲಾಗಿಸೂಪÀ ಪರಮಾನ್ನ ಮೊದಲಾಗಿ ಬಡಿಸುವವರಭಾಪುರಿ ಮುತ್ತು ಉದುರುತ 2 ಘೃತ ಘೃತ ಮೊದಲಾಗಿ ಬಡಿಸುವವರತೋರ ಮುತ್ತುಗಳು ಉದುರುತ 3 ನಗಧರನ ಪುರದೊಳಗೆ ಹಗಲು ರಾತ್ರಿಯು ಬಂದೆಝಗ ಝಗಿಸುವ ಮಣಿಯು ಖಚಿತದಝಗ ಝಗಿಸುವ ಮಣಿಯು ಖಚಿತವಾದುದರಿಂದಹಗಲು ರಾತ್ರಿಗಳು ತಿಳಿಯವು4 ಮಂದ ಗಮನೆಯರೆಲ್ಲ ಮಿಂದು ಮಡಿಯುಟ್ಟು ಇಂದಿರಾಪತಿಯ ಸರಿಯಾಗಿಇಂದಿರಾಪತಿಯ ಸರಿಯಾಗಿ ಊಟಕ್ಕೆ ಬಂದುಕುಳಿತವರು ಕಡೆಯಿಲ್ಲ5 ಪುಂಡರಿಕಾಕ್ಷÀನು ಉಂಡು ಕೈತೊಳೆದನು ದುಂಡುಮಲ್ಲಿಗೆಯ ಸೆಳಿಮಂಚದುಂಡು ಮಲ್ಲಿಗೆಯ ಸೆಳಿ ಮಂಚವನೇರಿದ ಪಾಡವಪ್ರಿಯ ಹರುಷದಿ 6 ಹದಿನಾರುಸಾವಿರ ಚದುರೆಯರು ಒಂದಾಗಿಚಲುವ ರಾಮೇಶನ ಉಪಚಾರಚಲುವ ರಾಮೇಶನ ಉಪಚಾರ ಮಾಡುವ ಸುದತೆಯರ ಸುಖಕೆ ಎಣೆಗಾಣೆ7
--------------
ಗಲಗಲಿಅವ್ವನವರು
ಭಿಕ್ಷೆ ನೀಡೋ ಹರಿಯೇ ಮುಕ್ತಿಗೊಡೆಯನೇ ಪ ಹಗಲು ಇರಳು ಎಡೆಬಿಡದಲೆ ಪೊಗಳುತ ತವ ನಾಮ ಮಹಿಮೆಯ ಜಗದೀಶನೆ ನಿನ್ನ ಚರಣ ಯುಗಳಲಿ ಬಹು ಭಕ್ತಿ ಮನ ಬಗಿ ಬಗಿಯಲಿ ನಲಿದಾಡುವ 1 ನಿತ್ಯನೆ ಸರ್ವೋತ್ತಮನೇ ಮುಕ್ತಿಪ್ರದನೇ ಪರಮಾತ್ಮನೇ ಉತ್ತಮ ವೃತ್ತಿಯಾನಿತ್ತು ನೇತ್ರದಿ ತವ ನೋಡುತ ವರ ಸ್ತೋತ್ರ ದಿನಾ ಪಾಡುತಿರುವೆ 2 ಎನ್ನಪರಾಧಗಳನ್ನು ಮನ್ನಿಸಿ ಸಲಹಯ್ಯಾ ಜೀಯಾ ಹನುಮೇಶವಿಠಲರಾಯಾ ನಿನ್ನ ಸ್ಮರಣೆಯಲ್ಲಿ ಕಾಲ ವನ್ನು ಕಳೆಯುತಿರುವ ದಿವ್ಯ 3
--------------
ಹನುಮೇಶವಿಠಲ
ಭಿಕ್ಷೆ ನೀಡೆನಗೆ ಪಕ್ಷಿಗಮನ ನಿಮ್ಮ ನಾಮ ಭಿಕ್ಷೆನೀಡಿ ರಕ್ಷಿಸೆನ್ನ ಮೋಕ್ಷಪದಕಧ್ಯಕ್ಷ ನಾಮ ಪ ಅಂಬರೀಷನ ಕಾಯ್ದ ನಾಮ ಇಂಬು ಇವಗಿತ್ತ ನಾಮ ಶಂಭು ಕುಣಿದು ಕುಣಿದು ಪೊಗಳ್ವ ಕುಂಭಿನಿಯೊಳು ಮೆರೆವ ನಾಮ 1 ಕರಿಯ ಕಷ್ಟಕ್ಕಾದ ನಾಮ ತರಳನ್ನೆತ್ತಿ ಪೊರೆದ ನಾಮ ಪರಮಪಾವನೆ ಪರಮೇಶ್ವರಿ ಅರಸಿ ಶಿರವದೂಗ್ವ ನಾಮ 2 ಯಮನ ಬಾಧೆ ಗೆಲಿಪ ನಾಮ ಸುಮನಸರೊಳಾಡಿಸುವ ನಾಮ ಅಮಿತ ಶ್ರೀರಾಮ ನಿಮ್ಮಾನಂದ ನಾಮ 3
--------------
ರಾಮದಾಸರು
ಭಿಡೆ ಇನ್ನ್ಯಾತಕೆ ಹೊಡಿ ಹೊಡಿ ಡಂಗುರ ಪೊಡವಿ ತ್ರಯದಿ ಹರಿ ಅಧಿಕೆಂದು ಪ ಅಡಿಯ ದಾಸರ ಕರದ್ಹಿಡಿದು ಬಿಡದೆ ಬಲು ಸಡಗರದಾಳುವ ನಿಜಧಣಿಯೆಂದು ಅ.ಪ ನಂದಕಂದ ಗೋವಿಂದ ಮುಕ್ಕುಂದ ಭಕ್ತ ಬಂಧು ಎಂದು ಕೈತಾಳವಿಕ್ಕುತ ತಂದೆ ತನ್ನ ಪಾದನ್ಹೊಂದಿ ಭಜಿಪರ ಬಂಧ ಛಿಂದಿಪ ಪರದೈವವೆಂದು ನಲಿಯುತ 1 ಸ್ಮರಿಪ ಜನರ ಮಹದುರಿತಪರ್ವತವ ತರಿದು ಪೊರೆವ ಸಿರಿದೊರೆಯೆಂದೊದರುತ ನೆರಳುಯೆಂದು ಮೈಮರೆದು ಕೂಗುತ 2 ಶರಣಾಗತರ ತನ್ನ ಹರಣದಂತೆ ಕಾಯ್ವ ಕರ ಮೇಲಕೆತ್ತಿ ಮರೆಯ ಬಿದ್ದವರ ಪರಮ ಬಡತನವ ಭರದಿ ಕಳೆದನೆಂದು ಒರೆದು ಸಾರುತ 3 ಸಾಗರಶಾಯಿ ತನ್ನ ಬಾಗಿ ಬೇಡುವರ ಬೇಗ ಕ್ಷೇಮನೀಯ್ವ ಭಾಗ್ಯದರಸನೆಂದು ನೀಗದ ಕಷ್ಟದಿ ಕೂಗಲು ತಡೆಯದೆ ಸಾಗಿ ಬರುವ ಭವರೋಗವೈದ್ಯನೆಂದು 4 ಅಚ್ಯುತಗಿಂ ಭಕ್ತರಿಚ್ಛೆ ಪೂರೈಸಲು ಹೆಚ್ಚಿನವಿರಲ್ಲೆಂದು ಬಿಚ್ಚಿ ಹೇಳುತ ಇಚ್ಛಜಪಿತ ಮಹಸಚ್ಚಿದಾನಂದ ಸರ್ವಕ್ಹೆಚ್ಚು ಹೆಚ್ಚು ಶ್ರೀರಾಮನೆ ಎನ್ನುತ 5
--------------
ರಾಮದಾಸರು
ಭೀಮ ಶೈನನೆ ಸತ್ಯಭಾಮಾ ಪ್ರಿಯನ ಪರಮ ಪ್ರೇಮ ಪಾತ್ರನೆ ಪಾಹಿಮಾಂ ಪ ಭೂಮಿಯೊಳು ಶೇವಿಸುವರಿಗೆ ಸುರ ಭೂಮಿರುಹ ವೆಂದೆನಿಸಿ ಪೊರೆಯಲು ಗ್ರಾಮ ಮೋತಂಪಲ್ಲಿ ಕ್ಷೇತ್ರ ಸುಧಾಮರಿಪುಕುಲ ಭೀಮನೆನಿಸಿದ ಅ.ಪ ರಾಮಕಾರ್ಯವನು ನಿಷ್ಕಾಮದಿ ಸಾಧಿಸಿ ಧಾಮ ಕಿಂಪುರುಷದಲ್ಲಿ ಭೂಮಿಜಾವಲ್ಲಭನ ಶುಭಗುಣ ಸ್ತೋಮಗಾನದಿ ರಮಿಸುತಿರೆ ಬಡ ಭೂಮಿದೇವನ ಪ್ರಾರ್ಥನದಿ ಬಂದೀ ಮಹಾ ಶಿಲೆ ಯೊಳಗೆ ನೆಲಸಿಹ 1 ರಾಜಕುಲಜ ಪಾಂಡುರಾಜ ನಾತ್ಮಜ ಧರ್ಮರಾಜನನುಜನೆನಿಸಿ ರಾಜ ಸೂಯಾಗವನೆ ಮಾಡಿಸಿ ಪೂಜಿಸಿದಿ ಸಿರಿಕೃಷ್ಣನಂಘ್ರಿಯ ರಾಜ ಕೌರವ ಬಲವ ಮದಿಸಿ ವಿರಾಜಿಸಿದ ಸುರರಾಜ ನಮೋ ನಮೋ 2 ಪುಟ್ಟಿಮೇದಿನಿ ಸುರಸದ್ಮದಿ ಗಜ ಪಂಚಾಸ್ಯನೆನಿಸಿಸು ಜನಕತಿ ಮೋದನೀಡಿದ 3 ಗಣಕೆ ಗಂಧವಾಹನನೆನಸಿ ಶೇಷ ಗಿರೀಂದ್ರಯಾತ್ರೆಗೆ ವೃಂದ ಸಲಹುವಿ 4 ಶೇರಿದವನೆ ಧನ್ಯನೋ ಭಜಿಸಿ ವಿಮುಕ್ತನಾದನು ಸುರಋಷಿಯ ಪದವನು 5 ಸುವಿಶಾಲ ಮಂಟಪ ಮಧ್ಯದಿ ಕೈಕೊಳುತ ಭಕುತರ ಗುರುವರ ಪಾಲಿಸೆನ್ನನು 6 ಬಂಗಾರದಾಭರಣಂಗಳಿಂದೊಪ್ಪುತ ಶೃಂಗಾರದಿಂ ಶೋಭಿತ ಸರ್ವೇಷ್ಟದಾಯಕ ಪ್ರಥಮಾಂಗನೆನಿಸಿದ 7
--------------
ಕಾರ್ಪರ ನರಹರಿದಾಸರು
ಭೀಮಶೇನಾರ್ಯರು | ಭೂಮಿತ್ಯಜಿಸಿ ಪರಂ ಧಾಮವ ಸೇರಿದರು || ಶ್ರೀಮತ್ ಕಾರ್ಪರ ಕ್ಷೇತ್ರ | ಸ್ವಾಮಿಯ ಸಂಪೂರ್ಣ ಪ್ರೇಮ ಪಡೆದವರು | ಕೇಳಿದವರು ಪ ಪರಿಮಳ ಗಾತ್ರರ ಕರುಣ ಪ್ರಸಾದದಿ ಧರೆ ಸುರಾಗ್ರಣಿ ಎನಿಪ ವರ ಜಯಾರ್ಯರ ಪತ್ನಿ | ನರಸಾಂಬೆಯಗರ್ಭ ಶರಧಿಗೆ ಹರಿಣಾಂಕರು ಸುಶಾಂತರು 1 ಎಡರೇಸು ಬಂದರೂ ಬಿಡದೆ ಸ್ವಧರ್ಮವ ಕಡುಭಕ್ತಿ ಪೂರ್ವಕದಿ ಹುಡುಗನ ಮಾತಿಗೆ | ಒಡೆದುಸ್ತಂಭದಿ ಬಂದ ಒಡೆಯನರ್ಚಿಸಿದವರು | ಕೋವಿದರು 2 ಪಂಚಬಾಣನ ಗೆದ್ದು | ಪಂಚ ಭೇದವನರಿತು ಪಂಚಾಸ್ಸನುತ ಮಾನವ ಪಂಚಾಶ್ಯದಯದಿ ಪ್ರಪಂಚ ಸಾಗಿಸುವಂಥ ಪಾಂಚಾಲಿಪತಿ ಪ್ರಿಯರು | ನಿಷ್ಕಿಂಚನರು 3 ವತ್ಸರ ಪರಿಯಂತ ನಿಷ್ಟೆಯಲಿ ನಿರುತ ತಪ ಚಳಿ ಮಳೆ ಸಹಿಸಿ ಪರಮೇಷ್ಟಿ ಜನಕನ ನಿರುತ ಸೇವಿಸಿದವರು | ನಿರ್ಮಮರು 4 ವಿನಯ ಸುಶೀಲ ಸದ್ಗುಣದಿ ಭೂಷಿತರಾದ ತನಯರೀರ್ವರ ಕರೆದು ರಿಣವಿನು ತೀರಿತು ಎನುತ ಪೇಳುತ ದ್ವಿಜಗಣಿಕೆ ದಕ್ಷಿಣೆ ನೀಡಿ ನಮನ ಮಾಡಿ 5 ಹರುಷ ಭರಿತರಾಗಿ ಸರ್ವಜಿತು ನಾಮದ ವರುಷದೊಳ್ ಯುಗ ಮಾಸದಿ | ಶರದಪಕ್ಷ ಪ್ರತಿಪದ ಪ್ರಥಮ ಕಾಯ 6 ವರುಷಂ ಪ್ರತಿ ತಪ್ಪದೆ | ಚರಿಸುತ ದೇಶದೋ ಳಿರುವ ಸದ್ಭಕ್ತರಿಗೆ | ವರಶಾಮ ಸುಂದರ ನರಹರಿದರುಶನ | ಗರೆದ ಪಾಲಿಸಿದವರು ಪಾವನ್ನರು 7
--------------
ಶಾಮಸುಂದರ ವಿಠಲ
ಭೀಮಾತಟ ಹರಿ ವಿಠಲ | ಪೊರೆಯ ಬೇಕಿವಳಾ ಪ ಸಾಮಸನ್ನುತ ಹರಿಯೆ | ನಿಸ್ಸೀಮ ಮಹಿಮಾ ಅ.ಪ. ಗುರು ಕರುಣ ಇವಳಿಗಿದೆ | ಮರಳಿ ಹರಿ ಗುರುಭಕ್ತಿನೆರೆ ವೃದ್ಧಿ ಗೈಸುತಲಿ | ಪೊರೆಯೊ ಇವಳಾ |ಕರುಣನಿಧಿ ನೀನೆಂದು | ಆರು ಮೊರೆಯ ನಿಡುವೆನಾಪರಿ ಪರಿಯಲಿಂದಿವಳ | ಕೈ ಪಿಡಿಯೆ ಹರಿಯೇ 1 ಸಜ್ಜನರ ಸಂಗ ಕೊಡು | ದುರ್ಜನರ ದೂರಿರಿಸುಅರ್ಜುನನ ಸಾರಥಿಯೆ | ಮೂರ್ಜಗಕೆ ಒಡೆಯಾ |ಬೊಜ್ಜೆಯಲಿ ಬ್ರಹ್ಮಾಂಡ | ಸಜ್ಜು ಗೊಳಿಸಿಹ ಹರಿಯೆ |ಅರ್ಜುನಾಗ್ರಜ ವಂದ್ಯ | ಸಜ್ಜನರ ಪಾಲಾ 2 ತರತಮದ ಸುಜ್ಞಾನ | ಹರಿಯ ಸರ್ವೋತ್ತಮತೆಕರುಣಿಸೋ ಇವಳೀಗೆ | ಪರಮ ಪಾವನ್ನಾ |ಗರುಡ ಗಮನನೆ ಗುರೂ | ಗೋವಿಂದ ವಿಠ್ಠಲನೆಮೊರೆಯ ಲಾಲಿಸಿ ಇವಳ | ಪೊರೆಯೊ ಶ್ರೀ ಹರಿಯೇ 3
--------------
ಗುರುಗೋವಿಂದವಿಠಲರು
ಭುವನವಿಖ್ಯಾತೆ|| ಪಾಲಿಸು ಪರತರ| ಪಾವನೆ ಮಾತೆ ಪ ಕಾಳಿಯೆ ಕರುಣಿಯೆ| ಶೀಲಸಂಪನ್ನೆಯೆ|| ಖಳಕುಲನಾಶಿನಿ | ಜಲಜಾಂಬಿಕೆಯೆ ಅ.ಪ ಸುರ ನರ ಕಿನ್ನರ| ಉರಗರು ಸೇವೆಯ|| ನಿರುತವು ಸಲಿಸುವ| ಪರಮೇಶ್ವರಿಯೆ 1 ಚರಣವ ಭಜಿಸುವ| ಶರಣರ ಪೊರೆವ|| ಬಿರುದನು ಪಡೆದ| ಕರುಣಾಕರೆಯೆ2 ಶಂಕರಿ ಶುಭಕರಿ|| ಶಂಕರಪ್ರಿಯಕರಿ|| ಕಿಂಕರಪಾಲಯೆ| ಪಂಕಜಮುಖಿಯೆ 3 ಕರಿವರಗಮನೆಯೆ| ಕರಿಮುಖಜನನಿಯೆ|| ಕರುಣದಿ ಪಾಲಿಸು| ಕಟಿಲೇಶ್ವರಿಯೆ4
--------------
ವೆಂಕಟ್‍ರಾವ್
ಭೃಂಗ ಜಯ ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ ಗುರು ಪುರಂದರದಾಸರೆ ನಿಮಗೆ ಪ ಪಾಕಶಾಸನಪುರದ ಚಿನಿವಾರ ವರದಪ್ಪ ನಾ ಕುಮಾರನಾಗಿ ಜನಿಸಿ ಸಂಸಾರದೊಳು ಸಂಚರಿಸಿ ಲೌಕಿಕವನ್ನೆ ತೊರೆದು ಈ ಕಲಿಯುಗದಲ್ಲಿ ತುಂಗಾತೀರ ಪಂಪಾ ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ 1 ಕಾಮಕ್ರೋಧ ಲೋಭ ಮದ ಮತ್ಸರ ಡಂಭ ಈ ಮರಿಯಾದಿಗಳ ಮರ್ಮವನೆ ಕಡಿದು ನಿ ಸಿರಿ ಕೈಕೊಂಡು ಆ ಮಹಾ ರಚನೆಯಲ್ಲಿ ಸೀಮೆಯೊಳು ಪ್ರಾಕೃತದ ಗೀತೆಯಲಿ ಕೊಂಡಾಡಿ ತಾಮರಸ ಸದೆ ಬಡಿದು ಮಧ್ವಸಿದ್ಧಾಂತ ಲ ಹುಯಿಸಿ ಕಾವನೈಯನ ಕುಣಿಸಿದ 2 ಸಿರಿ ವಿಠ್ಠಲನ್ನ ಮೃದು ಪದ್ಮಗಂಧವನು ಮಧುಪÀನಂತೆ ಸೇವಿಸುತ್ತ ಬುದ್ಧಿ ಪೂರ್ವಕದಿಂದಲಿ ಶುದ್ಧ ಮಂದರನೆಲ್ಲ ಎಂದೆಂದಿಗೂ ಬಿಡದೆ ಪೊದ್ದರ್ದ ಪಾಪಗಳು ತಿರುಗಗೊಡದಲೆ ಕಾಲಿ ಮಾರ್ಗದ ಪದ್ಧತಿಯ ಸ್ಥಿತಿ ಪೇಳಿದ 3 ವರದಪ್ಪನೇ ಸೋಮ ಗುರುರಾಯ ದಿನಕರನು ಗುರು ಮಧ್ವಪತಿಯೆ ಭೃಗು ಅಭಿನವನೆ ಜೀವ ಉಪದೇಶಿಸಿ ಪರಮ ಜ್ಞಾನಿಗಳ ಮಾಡಿ ಶರಧಿ ತೆರೆಯಂತೆ ಹರಿಗುಣಗಳನ್ನು ಪೊಗಳುತಿಹ ತರಳರನು ನೋಡಿ ಗುರು ವ್ಯಾಸಮುನಿರಾಯರಿಗೆ ಕರಣ ಚರಿತೆಯಲಿ ನಲಿದಾಡಿದ 4 ಫೃತದ ಬಿಂದಿಗೆ ತಂದ ಅತಿಥಿಯ ವೋಗರನುಂಡ ಸತಿಯಳೆಂದಾ ನುಡಿಗೆ ಚತುರ ಭಾಗ್ಯವನಿತ್ತ ಹಿತನಾಗಿ ದೃಢನೋಡಿದ ಯತಿಯ ಪಂಕ್ತಿಗೆ ಭಾಗೀರಥಿ ನದಿಯ ತರಸಿದ ಸುತನಾಗಿ ನೀರು ನಿಶಿತದಲಿ ತಂದ ಅ ಪ್ರತಿ ದೈವತಾ ಕಿಂಕರ 5 ವಜ್ರ ಪ್ರಹರವಿದು ಸಜ್ಜನರ ದಿವ್ಯ ಚರಣಾಬ್ಜಕ್ಕೆ ಭೃಂಗವಿದು ಹೆಚ್ಚು ಲಜ್ಜೆಯನು ತೊರೆದು ನಿತ್ಯ ಹೆಜ್ಚ್ಚಿ ಹೆಜ್ಚಿಗೆ ಬಿಡದೆ ದಾಸರ ಕರುಣವೆಂಬ ವಜ್ರ ಕವಚವ ತೊಟ್ಟು ನುಡಿದವನ ನುಡಿ ಸತ್ಯ ಅಬ್ಜಭವನೊಡನೆ ಗತಿಗೆ 6 ಎಂತು ವರ್ಣಿಸಲಿ ಎನಗಳವಲ್ಲ ಧರೆಯೊಳಗೆ ಸಂತತಿ ನೆಲಸಿದಂತೆ ಕಾವ್ಯವನೆ ಸ್ಥಾಪಿಸಿ ದಾಸರನ ಸಂತರಿಸಿ ಧರೆಗೆ ತೋರಿ ಸಿರಿ ವಿಠಲನ ಸ್ಮರಿಸುತ ಸು ಪಂಥವನು ಹಿಡಿದು ಸದ್ಗತಿಯಲ್ಲಿ ಸೇರಿದರು ಚಿಂತೆಯೊಳಗಿಟ್ಟ ಗುರುವೆ 7
--------------
ವಿಜಯದಾಸ
ಮಗನಿಂದೆ ಗತಿಯುಂಟೆ ಜಗದೊಳಗೆನಿಗಮಾರ್ಥ ತತ್ತ್ವವಿಚಾರದಿಂದಲ್ಲದೆ ? ಪ ತ್ರಿಗುಣರಹಿತ ಪರಮಾತ್ಮನ ಧ್ಯಾನದಿಹಗಲಿರುಳು ನಿತ್ಯಾನಂದದಿಂದತೆಗೆದು ಪ್ರಪಂಚವಾಸನೆಯ ಬಿಟ್ಟವರಿಗೆಮಗನಿದ್ದರೇನು ಇಲ್ಲದಿದ್ದರೇನು ?1 ಶೋಣಿತ ಶುಕ್ಲದಿಮಿಳಿತವಾದ ಪಿಂಡ ತನ್ನ ಪೂರ್ವಕರ್ಮದಿಂದನೆಲಕೆ ಬೀಳಲು ಅದು ಸಲಹಿ ರಕ್ಷಿಪುದೆ ? 2 ಪರಮ ದುಷ್ಟನಾಗಿ ಮರೆತು ಸ್ವಧರ್ಮವಗುರು ಹಿರಿಯರ ಸಾಧುಗಳ ನಿಂದಿಸಿಬೆರೆದನ್ಯ ಜಾತಿಯ ಪರನಾರಿಯ ಕೂಡಿಸುರೆ ಕುಡಿದು ಜೂಜಾಡಿ ನರಕಕ್ಕೆ ಬೀಳುವ 3 ಸತ್ಯನೊಬ್ಬ ಮಗ ಶಾಂತನೊಬ್ಬ ಮಗ ದು-ರ್ವೃತ್ತಿ ನಿಗ್ರಹನೊಬ್ಬ ಸಮಚಿತ್ತನೊಬ್ಬನುಉತ್ತಮರೀ ನಾಲ್ಕು ಮಕ್ಕಳಿದ್ದ ಮೇಲೆಹೆತ್ತರೇನು ಇನ್ನು ಹೆರದಿದ್ದರೇನಯ್ಯ ? 4 ಸುತರಿಲ್ಲದವಗೆ ಸದ್ಗತಿ ಇಲ್ಲವೆಂತೆಂಬಕೃತಕ ಶಾಸ್ತ್ರವು ಲೌಕಿಕಭಾವಕೆಕ್ಷಿತಿಯೊಳು ಕಾಗಿನೆಲೆಯಾದಿಕೇಶವ ಜಗ-ತ್ಪತಿಯ ಭಜಿಪಗೆ ಸದ್ಗತಿಯಿರದೆ ಹೋಹುದೆ ? 5
--------------
ಕನಕದಾಸ
ಮಂಗಲಂ ಗುರುರಾಜಗೆ ಮಂಗಲ ಪರಮಾನಂದಸ್ವರೂಪಗೆ ಪ ಜೀವÀಪರಮರೈಕ್ಯವ ತಿಳುಹಿಸುವಾ ದೇವನೆ ನೀನೆನ್ನುತ ಬೋಧಿಸುವಾ ಸಾವು ಸಂಕಟಗಳ ಮೂಲವ ಕಡಿಯುವಾ ಪಾವನಾತ್ಮ ಘನಜ್ಞಾನರೂಪಗೆ 1 ಶೋಧಿಸಿ ದೇಹತ್ರಯಗಳ ಕಳಹಿ ಬಾಧರಹಿತ ಪರಮಾತ್ಮನ ಅರಿವನು ಬೋಧಿಸಿ ಅನುಭವದಲಿ ನೆಲೆಸಿದಗೆ 2 ತೋರಿಕೆ ಅನಿಸಿಕೆ ಎನಿಸುವ ದ್ವೈತವ ಧೀರತನದಿ ಸುಳ್ಳೆಂದು ತಿಳಿಸುವಾ ನಾರಾಯಣಗುರುವರನ ಕೃಪಾಪ್ರಿಯ ಪೂರಣಬ್ರಹ್ಮಸ್ವರೂಪ ಶಂಕರಗೆ 3
--------------
ಶಂಕರಭಟ್ಟ ಅಗ್ನಿಹೋತ್ರಿ