ಒಟ್ಟು 2981 ಕಡೆಗಳಲ್ಲಿ , 118 ದಾಸರು , 2249 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಶಿಮುಖಿ ಜಾನಕಿ ರಮಣ ವಸುಧೆಯೊಳಗೆ ನಿಮ್ಮ ಭಜನೆಯ ಮಾಡುವರ ಶಿಶುವುಯೆಂದು ತಿಳಿದು ಶೀಘ್ರದಿ ರಕ್ಷಿಸೊ ಪ ಪಶುಪತಿ ರಕ್ಷಕ ಪಾವನ ಮೂರ್ತಿ ಪಶುಪಾಲಕನಾದ ಪರಮಾತ್ಮ ಕುಸುಮಜನನು ಅತಿಕರುಣದಿ ನೀನು ಕುಶಲದಿ ಪಡೆದ ಗುಣವಂತಾ ಹಸ ಮೀರಿನಡೆವಂತ ಅನೇಕ ದುಷ್ಟ ಅಸುರರ ಛೇದಿಸಿದ ಬಲವಂತಾ ದಶದಿಕ್ಕಿನೊಳಗೆ ದಾರನು ಕಾಣೆನೊ ದಶವಂತನು ನಿನಗಾರು ಸರಿಹಾರೊ 1 ಪಿತೃವಾಕ್ಯ ಪರಿಪಾಲನೆ ಮಾಡಿದ ಪುತ್ರನು ಅನಿಸಿದ ಪುಣ್ಯನಿಧಿ ಪತಿ ಧರ್ಮವ ಸರ್ವದಾ ನಡೆಸುವ ಸತ್ಯಮೂರ್ತಿ ಸೌಭಾಗ್ಯನಿಧಿ ಶತದ್ರೋಹಿಯಾಗಿ ಸೀತೆಯ ಒಯ್ದನ ಶತಮುಖನಯ್ಯನ ಸಂಹರಿಸಿದಿ ಸತತ ವಿಭೀಷಣ ಭಕ್ತಿಯಿಟ್ಟ ಸಲುವಾಗಿ ಲಂಕೆಯ ಧಾರೆಯನೆರದೀ 2 ಯಾದವ ಕುಲಪತಿ ಯಶೋದೆನಂದನ ವ್ಯಾಧನ ರಕ್ಷಿಸಿದಿ ವಿಶ್ವೇಶ ಬಾಧಕ್ಕೆ ಒಳಗಾಗಿ ಕರಿಕೂಗಲು ಮಕರಿ ಬಾಧೆಯ ತಪ್ಪಿಸಿದ ಪರಮೇಶಾ ಸಾಧು ಸಜ್ಜನ ಸರ್ವರ ಸಲಹುವ ಸಾಧು ಗುಣಾನಂದ ಸರ್ವೇಶಾ ಮಾಧವ `ಸಿರಿಹೆನ್ನೆ ವಿಠಲ' ನಿನ್ನಯ ಮೋದವ ತೋರೋ ಜಗದೀಶಾ 3
--------------
ಹೆನ್ನೆರಂಗದಾಸರು
ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶಿವ ಕರುಣಿಸಯ್ಯ ಚಂದ್ರಶೇಖರ ನೀನೆನ್ನೊಳೊಲಿದು ಪ ತಾಪ ಹರಣ ಮಾಡು ನಿನ್ನ ದಿವ್ಯಚರಣಗಳಿಗೆ ನಮಿಪೆನುರಗಾಭರಣ ಶರಣು ಶರಣು ಶರಣು ಅ.ಪ. ಕಾಳಭೈರವ ಶಂಭು ಶಂಕರ ಗಿರಿಜೆಯಾಣ್ಮಕೇಳು ಕೇಳು ನಿನ್ನ ಕಿಂಕರಹೂಳಿ ಷಡ್ರಿಪುಗಳನು ಮನದಲಿಊಳಿ ನಿಜಜ್ಞಾನವನು ಸಜ್ಜನರೋಳಿಯಲಿ ನಿಲಿಸುತ್ತ ನಿತ್ಯದಿಬಾಳಿ ತಾಳಿ ಎನುವಂತೆ 1 ನಂಟನಯ್ಯ ಭಕ್ತ ಜನಕೆ ಇನ್ನು ಮಿತಿಯುಂಟೆ ನಿನ್ನಯ ಕರುಣಲಹರಿಂಗೆಎಂಟು ದಿಕ್ಕನು ಸುಡುವ ವಿಷವನುಕಂಠದಲಿ ಧರಿಸಿ ಜಗತ್ತಿನಕಂಟಕವನು ಪರಿಹರಿಸಿದಂಥಬಂಟ ನೀನೈ ಮಹಾದೇವಾ 2 ಮೂರು ಊರುಗಳನು ಸಂಹಾರಾಮಾಡಿ ಉಳಿಸಿದಿಘೋರ ಸಂಕಟದಿಂದ ಜಗಪೂರಸೂರಿ ಬೊಮ್ಮನ ಮತ್ತೆ ಗದುಗಿನವೀರನಾರಾಯಣನ ಕೂಡಿನಾರಿ ಸತಿಯನಸೂಯಳನ್ನುದ್ಧಾರ ಮಾಡಿದ ರೀತಿಯಲ್ಲಿ 3
--------------
ವೀರನಾರಾಯಣ
ಶಿವ - ಪಾವ9ತಿಯರು ಪರಮೇಶ್ವರಾ ಮಹದೇವಾ | ಗಿರಿಜಾವರ ಶಿವ ಶಂಭೋ | ಪರಮೇಶ್ವರ ಮಹದೇವಾ ಪ ಹರಶವ9 ಕಾಲಕಾಲ | ವಿರೂಪಾಕ್ಷ ರುಂಡಮಾಲಾ | ಶರಣು ಜನರಪಾಲಾ | ಗಿರಿ ಶೋಭಾವಾ ನೀ ಲೋಲಾ 1 ಭೂತೇಶ ವ್ಯೊಮಕೇಶಾ | ಶಿತಿಕಂಠ ಕೃತ್ತಿವಾಸಾ | ಕ್ರತು ಧ್ವಂಸಿ ದುಷ್ಟ ನಾಶಾ 2 ಈಶಾನ್ಯ ಭಗ9ರುದ್ರಾ | ಪಶುಪತೇ ವೀರಭದ್ರಾ | ಕೃಶಾನು ರೇತಸ್ ರೌದ್ರಾ | ಶಶಿಧರಾ ಯೋಗನಿದ್ರಾ 3 ಪಿನಾಕಿ ಮೃತ್ಯುಂಜಯನೇ | ನಾ ನಿನ್ನ ಮರತಿಹನೇ| ದೀನರ ಪಾಲಿಸುವನೇ | ನೀನೆನ್ನ ಕಾಯೋ ಭವನೇ 4 ಗಜಮುಖ ತಾತ ಬಾರೋ | ಭಜಿಸುವೆನೀ ಮೈದೋರೋ | ನಿಜದಾ ಸದಾನಂದ ಬಾರೋ | ರಜತಾದ್ರಿವಾಸ ತೋರೊ 5
--------------
ಸದಾನಂದರು
ಶಿವಮಂಗಳಂ ಸದಾಶಿವ ಮಂಗಳಂಮಂಗಳಂ ರಜತಾದ್ರಿ ಮುಖ್ಯನಿಲಯಾಯ ಪಹಿಮಕರಾವತಂಸಾಯ ಹಿಮರುಚಿರಕಾಯಾಯಹಿಮರೂಪಗಿರಿಚಿತ್ತ ಹಾರಕಾಯಹಿಮಹರಾಮಿತಕಾಂತಿ ಸದೃಶಾಯ ಸೌಮ್ಯಾಯಹಿಮತಾಪರಹಿತಾಯ ಹೇಮವರ್ಣಾಯ 1ವರಜಟಾಮಕುಟಾಯ ವಾರಿಯುತಕೇಶಾಯಸ್ಫುರದಿನಾನಲಸೋಮಲೋಚನಾಯಗರನೀಲಕಂಠಾಯ ಕದ್ರುಸುತ ಹಾರಾಯಪರಶು ಮೃಗ ಶೂಲಾದಿ ಪರಮಾಯುಧಾಯ2ನಾಗೋಪವೀತಾಯ ನಾಗೇಶ ವಲಯಾಯನಾಗಧವಳಾಂಗಾಯ ನಾಯಕಾಯನಾಗವಾಹನ ಮುಖ್ಯ ನಾಕಜನನಾಥಾಯನಾಗಪರ್ಯಂಕಸ್ಥ ನಿತ್ಯಮಿತ್ರಾಯ 3ಗೌರೀಧೃತಾಂಗಾಯ ಗಂಧರ್ವಸೇವ್ಯಾಯಭೂರಿ ಗುಣಬ್ರಹ್ಮಾಂಡ ಭೂತಾಯಚಾರು ಕಟಿ ಶುಭ ಜಂಘಾಯನೀರಜಾಮಲ ಪೀಠ ನಿಹಿತ ಪಾದಾಯ 4ಮೃಗಚರ್ಮವಸನಾಯ ಮಂಜುಳ ಮಯೂಖಾಯಜಗದೇಕನಾಥಾಯ ಜೀವನಾಯಸುಗಮ ತಿರುಪತಿ ನಾಮ ಸದ್ಮಾಧಿನಾಥಾಯಗಗನಧುನಿ ಗಿರಿ ವಾಸ ಗಂಗಾಧರಾಯ 5 ಓಂ ನವನೀತನವಾಹಾರಾಯ ನಮಃ
--------------
ತಿಮ್ಮಪ್ಪದಾಸರು
ಶಿವಶಿವ ಜಯಜಯ ಶಿವ ಸರ್ವೋತ್ತಮಕಾಯ ಶಿವ ದೂರಿಕೃತಮಾಯ ಶಿವಶರಣಾಗತಪ್ರಿಯ ಪ ಸನಕಾದಿ ಮುನಿಹೃದಯ ವನಜಸ್ಥಾಪಿತಸೂರ್ಯ ದನುಜ ವಿಮರ್ದನ ವೀರ್ಯ ಸುಗುಣನಿರಾಕೃತ ಕೋಪ 1 ಚಾಪ ನಿಗಮಾಗೋಚರ ರೂಪ ಜಗದಂತಃಸ್ಥಿತದೀಪ ಸುಗುಣನಿರಾಕೃತ ಕೋಪ 2 ಪರಮಪಾವನ ಕಾಮಹರ ಕಕುದ್ಗಿರಿಧಾಮವರ ಗಂಗಾಧರನಾಮ ತಿರುಪತೀಶ್ವರ ಪ್ರೇಮ 3
--------------
ತಿಮ್ಮಪ್ಪದಾಸರು
ಶುಭ ಪ ಬ್ರಹ್ಮರೂಪದಿ ಜಗವನು ಪುಟ್ಟಿಸಿ ಬ್ರಹ್ಮಜನಕನ ನೆತ್ತಿಲಿ ರಕ್ಷಿಸಿ ಬ್ರಹ್ಮ ಮೂರುತಿ ಬಾಲಬ್ರಹ್ಮದಿ ಚರಿಸಿದಾತಂಗೆ ಮಹಾ | ಬ್ರಹ್ಮಾಂಡಕೋಟಿ ಉದರದೊಳಿರಿಸಿ | ಬ್ರಹ್ಮನ ಸ್ತುತಿಗೆ ನಿಲುಕದ ಅವಿನಾಶಿ ಬ್ರಹ್ಮಾದಿ ಸುರವಂದಿತ ರುದ್ರನಾಗಿ ಸಂಹರಿಸಿ 1 ಜಗವನುದ್ಧರಿಸಲು ದೇಹವನು ಜಗದೀಶ್ವರನು ಅವತರಿಸಿ ಬಂದಿಹನು | ಜಗ ಮೃಗಜಲವೆಂದು ತಿಳಿದಿರೆ ಜಗದೊಳಾಡುವಗೆ || ಬಗೆ ಬಗೆಯಲಾಡುತ ಗಗನ ಗಟ್ಟಿಹನು | ನಿಗಮಕೆ ನಿಲ್ಕದೆ ನಿತ್ಯನೆನಿಸುವನು ಝಗಝಗಿಸುವ ಆರತಿಯ ಬೆಳಗಿರೆ ಜಗದ ಜನಕನಿಗೆ 2 ಛಪ್ಪನ್ನ ದೇಶಕೆ ಶೋಭಿಸುವ ಒಪ್ಪುವ ಕೋಳಕೂರೆಂದೆನಿಸುವ ದಿಕ್ಕು ದಕ್ಷಿಣಾ ಭೀಮಾತೀರದಿ ಥಳಥಳದಿ ಹೊಳೆವ |ಶ್ರೀ ಮಹಾಗುರು ಇಪ್ಪತ್ತೊಂದು ಸಮಾಧಿಯೊಳಿರುವತಪ್ಪದೆ ರಾಮಾತ್ಮಜನಾಗಿರುವ | ಸೊಪ್ಪೆರಾಯನು ಸಹಜಾನಂದ ತಾ ಯೋಗಿಯಾಗಿ ಮೆರೆವ 3
--------------
ಭೀಮಾಶಂಕರ
ಶುಭ ಯೋಗಿ ಪುಂಗಗೆ | ಮಂಗಳಂ ಪಾಪೌಘ ಭಂಗಗೆ | ಮಂಗಳಂ ಯಾಳಗಿಯ ದೊರೆ ರಾಮಲಿಂಗನಿಗೆ ಪ ಮೋದದಲಿ ದತ್ತಾವಧೂತನು ಪೇಳಿದನು ಶ್ರೀಕಪಿಲ ಮುನಿವರ |ಗಾಧಿಯಂ ಮಣಿಚೂಲ ಶೈಲದ ಗುಹದಿ ತಪಮಾಡಿ ||ಮೇದಿನಿಯ ಜನರಿಂಗೆ ಸಹಜದಿ ವೇದ ವೇದಾರ್ಥವನು ಬೋಧಿಸಿ |ಭೇದ ಬುದ್ಧಿಯ ಬಿಡಿಸಿ ಕೃಪೆಯನು ಮಾಡಿ ಪೊರೆ ಎಂದು 1 ಕಪಿಲಮುನಿ ಲಿಂಗಾಂಬಿಕೆಗೆ ತಾ ಸ್ವಪ್ನದಲಿ ಪೇಳಿದನು ನಿಶ್ಚಯ |ಅಪರಿಮಿತ ವರ ಕೊಡುವ ಬೆಟ್ಟದ ರಾಮಲಿಂಗೇಶ ||ತಪವು ಮಾಡಲು ಕೊಡುವ ನೀ ತಪವು ಮಾಡೆಂದು ಪೇಳಿದ |ಗುಪಿತ ಮೂಲವ ತೋರಿ ಬೋಧಿಸಿ ಸುಖವ ಪಡೆ ಎಂದ 2 ಮೊದಲು ಲಿಂಗಾಂಬಿಕೆಯು ಮನದಲಿ ನೆನೆದು ಬೆಟ್ಟದ ರಾಮಲಿಂಗನ | ಪದುಳದಿಂ ಸೇವಾ ಪ್ರದಕ್ಷಿಣೆ ಭಕ್ತಿಭಾವದಲಿ |ಮುದದಿ ಪ್ರಾರ್ಥಿಸೆಗೈದು ಎನ್ನಗೆ ಸುತನ ಕೊಡಬೇಕೆಂದು ಪ್ರಾರ್ಥಿಸೆ | ಸದಮಲಾತ್ಮರಾಮಲಿಂಗನು ಜನಿಸುತಿಹನೆಂದ 3 ಸತಿ ಲಿಂಗಾಂಬೆ ಗರ್ಭದೊಳುಪಾವನಾತ್ಮಕ ಜನಿಸಿ ಬೆಳೆದುದ್ದಾಮ ಆನಂದಾಭ್ಧಿಯೊಳು ಸ- |ದ್ಭಾವದಿಂ ಮಣಿಚೂಲ ಶೈಲದಿ ತಪವನೆಸಗಿದಗೆ 4 ಕೆಲವು ದಿನ ಮಣಿಚೂಲ ಶೈಲದ ಗುಹೆಯೊಳಗೆ ತಪಗೈಯುತಿರೆ ಶ್ರೀಮಲಹರಿಯು ಪ್ರತ್ಯಕ್ಷರೂಪದಿ ಮಂತ್ರ ಬೋಧಿಸಿದ ||ಚೆಲುವ ರಾಮಪ್ಪಯ್ಯ ಮನದಲಿ ಹರುಷವಂ ಕೈಕೊಂಡು ಸಿದ್ಧಿಯಫಲವ ಪಡೆದನು ಮಂತ್ರ ಮಹಯೋಗಾದಿ ಸಿದ್ಧಿಗಳ 5 ಗೌತಮಾನ್ವಯದಲ್ಲಿ ಜನಿಸಿ ಸುಕೀರ್ತಿ-ಪಡೆದಪ್ಪಯ್ಯ ಗುರುವರ |ಮಾತು ಮಾತಿಗೆ ರಾಮಲಿಂಗನ ನೆನೆ ನೆನೆದು ಮನದಿ ||ಸಾತಿಶಯ ಮಣಿಚೂಲ ಶೈಲವ ಸೇರಿ ಕಂಡಿಹ ರಾಮಲಿಂಗನ |ಮಾತು ತಿಳುಹಿಸಿ ಗ್ರಹಕೆ ಕರಕೊಂಡು ಬಂದಿಹಗೆ 6 ಪರಮ ತಾರಕ ಮಂತ್ರ ಕರ್ಣದೊಳೊರೆದ ಗುರು ಅಪ್ಪಯ್ಯ ಮೂರ್ತಿಯ | ಚರಣವನು ಧ್ಯಾನಿಸುತೆ ಮಹಾ ವಾಕ್ಯಾರ್ಥ ಶೋಧಿಸಿದ | ಪರಿಪರಿಯ ವೇದಾರ್ಥವನು ಬಹು ಹರುಷದಿಂ ಶಿಷ್ಯರಿಗೆ ಬೋಧಿಸಿ | ನಿರುತ ಬ್ರಹ್ಮಾಕಾರ ವೃತ್ತಿಯೊಳಿರುವ ಶರಣಂಗೆ 7 ಪಂಚಲಿಂಗವು ಪಂಚ ತೀರ್ಥಗಳುಳ್ಳ ಯಾಳಗಿ ಕ್ಷೇತ್ರದಲಿ ಪ್ರ- |ಪಂಚವನು ಪರಮಾರ್ಥ ಬುದ್ಧಿಯಲಿಂದ ನೆರೆಗೈದು ||ವಂಚನಿಲ್ಲದ ರಾಮಲಿಂಗ ವಿರಂಚಿ ಭಾವದೊಳಿರ್ದು ಜನರಿಗೆಹಂಚಿಕೆಯ ಪೇಳಿದನು ಇಲ್ಲಿಗೆ ಗಂಗೆ ಬರುತಿಹಳು 8 ಇಂದು ವೇದ ರಸೈಕ ಶಕದ ವಿಕಾರಿವತ್ಸರ ದಕ್ಷಿಣಾಯನ |ಛಂದದಾಶ್ವೀನ ಶುದ್ದ ಸಪ್ತಮಿ ಸೌಮ್ಯ ವಾಸರದಿ ||ಸುಂದರದ ಜ್ಯೇಷ್ಠರ್ಕ ವೃಶ್ಚಿಕ ರಾಶಿ ಶುಭದಿನ ತೃತಿಯ ಪ್ರಹರದಿಹೊಂದಿದನು ಸುಸಮಾಧಿ ಸುಖವನು ರಾಮಗುರುವರನು 9 ಸುರರು ಅಂಬರಕೇರಿ ಪುಷ್ಪದ ಮಳೆಯ ಸುರಿದರು ಹರುಷದಿಂದಲಿಪರಮ ವಿಸ್ಮಯವಾಗೆ ಸುರದುಂದುಭಿಯ ಧ್ವನಿಕೇಳಿ || ಹರುಷ ದಿಂದಲಿ ಶಿರವ ನಲಿಯುತ ದೇವ ಗಣಿಕೆಯರು ನೃತ್ಯ ಮಾಡುತ ತರ ತರದಿ ಜಯ ಘೋಷ ಮಾಡುತ ಜನ ಸಹಿತವಾಗಿ 10|| ಜಯ ಜಯತು ಜಯ ನಿರ್ವಿಕಾರಗೆ ಜಯ ಜಯತು ಜಯ ನಿರ್ವಿಶೇಷಗೆ | ಜಯ ಜಯತು ನಿಃಸೀಮ ಪರಮಾನಂದ ರೂಪನಿಗೆ || ಜಯ ಜಯತು ಭಕ್ತಾಭಿಮಾನಿಗೆ ಜಯ ಜಯತು ಮಹ ಸಿದ್ಧ ವರದಗೆ | ಜಯ ಜಯತು ಸಿಂಧಾಪುರದ ಸಖರಾಮ ಗುರುವರಗೆ 11
--------------
ಗುರುರಾಮಲಿಂಗ
ಶುಭ ವಾಸುದೇವ ಮೂರುತಿಗೆ ಪಕುಂದಣಕೆ ಸರಿಯಾದ ಕಾಯದತಿ ಕಾಂತಿಗೆಸಿಂಧುವನು ಪೋಲ್ವ ಗಂಭೀರ ರಸಕೆಇಂದುಬಿಂಬವ ಜರೆವ ಮುಖದ ಸೊಂಪಿನ ಸಿರಿಗೆಕಂದರ್ಪ ಕೋಟಿ ಲಾವಣ್ಯ ನಿಧಿಗೆ 1ಅಭಯದಾನವ ಕೊಡುವ ಕರಗಳತಿ ಚೆಲು'ಕೆಗೆಶುಭಗಳಿಗೆ ನೆಲೆಯಾದ ನೇತ್ರಗಳಿಗೆ'ಭವಗಳಿಗೆಡೆಬಿಡದ ಮುಗುಳುನಗೆಯೊಗು'ುಗೆಗೆತ್ರಿಭುವನಂಗಳನಳೆದ ಪದ ನಳಿನಗಳಿಗೆ 2ಜ್ಞಾನಮುದ್ರೆಯ ಕರದಿ ಜ್ಞಾನೋಪದೇಶವನುತಾನೆ ಕರೆದಿತ್ತು ಭಕ್ತರ ಸಲಹುತಾ ಮಾನವನು ಕಡೆಗೊತ್ತಿ ಮಾನ್ಯ ತಾನೆಂದೆನಿಪಶ್ರೀನಿಕೇತನ ನಿಜದ ಚಿನ್ಮಯಾತ್ಮಕಗೆ 3ಕಾವೇರಿ ಗಂಗೆಯೊಲು ಕಮಲನಾಭನ ಕಥೆಯ ಪಾವನದ ತೀರ್ಥದಲಿ ಪಾಪವಳಿದು ಜೀವಭಾವವ ಬಿಟ್ಟು ಬ್ರಹ್ಮ ತಾನೇಯಾಗಿಯಾವಗವು ಸುಖಶರಧಿಯಾದ ಚಿನ್ಮಯಗೆ 4ರಾಗಾದಿರ'ತನಿಗೆ ರಾಗಿಗಳ ಸಂಸಾರಸಾಗರವ ದಾಟಿಸುವ ಬೋಧ ಘನಗೆಯೋಗಿಗಳ ಸಂಮತಗೆ ಗುರು ವಾಸುದೇವಗೆಯೋಗೇಶ ತಿರುಪತಿಯ ವೆಂಕಟೇಶ್ವರಗೆ 5ಓಂ ಶ್ರೀವತ್ಸಕೌಸ್ತುಭಧರಾಯ ನಮಃ
--------------
ತಿಮ್ಮಪ್ಪದಾಸರು
ಶುಭ ವೀರಾಂಜನೇಯಾಯ ಜಯ ಮಂಗಳಂ ಪ ಮಣಿ ಪುಂಜ ರಂಜಿತಾಯ ಶುಭಾಂಗಯ ಮಂಜುಳಾಯ 1 ಲಕ್ಷ್ಮಣ ಪ್ರಾಣ ಸಂರಕ್ಷಣಾಯ ಪಕ್ಷೀಂದ್ರ ಗಂಧವಹ ಗತಿ ಲಕ್ಷಿತಾಯ 2 ಪಂಚಾನನಾದಿ ಮುಖ ಪಂಚಕಾಯ ಪಂಚತಾಪ ಹರಾಯ ಪÀಂಚಾಕ್ಷರಾಯ 3 ಕಂದರ್ಪ ನವವರವ್ಯಾಕರಣ ನವಪಂಡಿತಾಯ ನವಪಂಚಕೋಟಿ ಯೂಧಪ ಸೇವಿತಾಯ 4 ಮಹಾಕಾಂಡ ಬೃಂದಾರಕಾಯ ಗಂಧರ್ವವೇದೇಷು ಘನ ಪಂಡಿತಾಯ 5 ಸರ್ವಮಂತ್ರಾವಳೀ ಸನ್ನುತಾಯ ಸರ್ವಭೀತಿ ಹರಾಯ ಸರ್ವಾತ್ಮಕಾಯ 6 ಶತಕೋಟಿ ಭಯವರ್ಜಿತಾಯ ಬೇಟೆರಾಯಾಖ್ಯ ದೀಕ್ಷಿತ ರಕ್ಷರಾಯ 7 ಪರಯಂತ್ರ ವಿದ್ವಂಸಕಾಯ 8
--------------
ಬೇಟೆರಾಯ ದೀಕ್ಷಿತರು
ಶೃಂಗಾರ ಬೇಕಾಯಿತೆ ಶ್ರೀಕಾಂತ ನಿನಗೆ ಶೃಂಗಾರವಾರ್ಧಿ ವೇಲಾಪುರದ ಚೆನ್ನಾ ಪ ಕರದಲ್ಲಿ ದಂಡ ಕೋಲು ಕಮಂಡಲನೀವ ಪರಿ ಹೇಗೆ ದಾಸಾನುದಾಸನಲ್ಲ ಇರಲಿಯಂತದುವೆ ಶ್ರೀಧರನೆಂಬ ಪೆಸರು ಬಿ ಟ್ಟುರದ ಲಕ್ಷ್ಮಿಯನು ಕಡೆಗಿರಿಸು ನೋಡುವೆನೊಮ್ಮೆ 1 ಎನ್ನ ಬಿನ್ನಪವೊಂದುಂಟು ಕೇಳೆಲೊ ಸ್ವಾಮಿ ನಿನ್ನ ಬಾಲಬ್ರಹ್ಮಚಾರಿಯೆಂದು ಸನ್ನುತಿಸುತಿದೆ ವೇದ ಶಾಸ್ತ್ರಾಗಮಗಳೆಲ್ಲ ಇನ್ನದಕುಪಾಯವೇನಯ್ಯ ಚೆನ್ನಿಗರಾಯ 2 ಶೃಂಗಾರಗಳನು ತತ್ವಂಗಳನು ಪೇಳುವಡೆ ಗುಂಗುರುಹಿನೊಳಲ್ಪ ಮನುಜನಲ್ಲ ಮಂಗಳಾತ್ಮಕನೆ ಆಡಿಸಿದೊಡಾಡುವೆ ಎನಗೆ ಭಂಗವೇಕಯ್ಯ ವೈಕುಂಠ ಚೆನ್ನಿಗರಾಯ 3
--------------
ಬೇಲೂರು ವೈಕುಂಠದಾಸರು
ಶೇಷ ಅತಿ ಶೋಭಿಸುತಿದೆ ಶ್ರೀಪತಿವಾಹನ ಪ ಚತುರದಶ ಲೋಕದಲಿ ಅಪ್ರತಿವಾಹನ ಅ.ಪ. ವಿನುತಕಶ್ಯಪ ಮುನಿಗೆ ತನಯನೆನಿಸಿದ ವಾಹನ ಅನುಜರನು ಕದ್ದೊಯ್ದ ಅತ್ಯಾಢ್ಯ ವಾಹನ ವನಧಿ ಮಧ್ಯಧಿ ನಾವಿಕರ ಭಕ್ಷಿಸಿದ ವಾಹನ ಜನಪನಾಜ್ಞದಿ ಕೂರ್ಮಾಗಜರ ನುಂಗಿದ ವಾಹನ1 ಕುಲಿಶಪಾಣಿಯ ಕೂಡೆ ಕಲಹ ಮಾಡಿದ ವಾಹನ ಒಳಹೊಕ್ಕು ಪೀಯೂಷ ತಂದ ವಾಹನ ಮಲತಾಯಿ ಮಕ್ಕಳನು ಮರುಳುಗೊಳಿಸಿದ ವಾಹನ ವಾಹನ 2 ಕಾಲನಾಮಕನಾಗಿ ಕಮಲಭವನಲಿ ಜನಿಸಿ ಕಾಲಾತ್ಮಹರಿಯ ಸೇವಿಪ ವಾಹನ ಕಾಳಗದಿ ಕಪಿವರರ ಕಟ್ಟುಬಿಡಿಸಿದ ವಾಹನ ವಾಲಖಿಲ್ಲರ ಪಿಡಿದ ವರವಾಹನ 3 ವಾಹನ ನಿಜ ರೂಪದಿ ಹರಿಸೇವೆಗೈವ ವಾಹನ ಆ ಪಿತೃಗಳಿಗಮೃತ ಪ್ರಾಪ್ತಿಸಿದ ವಾಹನ ವಾಹನ 4 ಪನ್ನಗಾಶನವಾಹನ ಪತಿತ ಪಾವನ ವಾಹನ ಸನ್ನುತಿಪ ಭಕ್ತರನು ಸಲಹುವ ವಾಹನ ಪನ್ನಗಾದ್ರಿನಿವಾಸ ಜಗನ್ನಾಥ ವಿಠ್ಠಲಗೆ ಉನ್ನತ ಪ್ರಿಯವಾದ ಶ್ರೀ ಗುರುಡವಾಹನ 5
--------------
ಜಗನ್ನಾಥದಾಸರು
ಶೇಷ ಗೀರೀಶ ವಿಠಲ | ಪೋಷಿಸೊ ಇವಳಾ ಪ ಕಾಸು ವೀಸಕ್ಕೆ ಮನ | ಕ್ಲೇಶಗೊಳಿಸದಂತೆ ಅ.ಪ. ಪಥ ಮಾರ್ಗಕ್ಕೆ | ಸದ್ಗುರು ಕಟಾಕ್ಷವೆಉತ್ತಮೋತ್ತಮ ಹಾದಿ | ಎಂದು ಪೇಳಿದರೂ 1 ಹರಿಗುರೂ ಸದ್ಭಕ್ತಿ | ತರತಮ ಜ್ಞಾನವನುಕರುಣಿಸೀ ಕಾಪಾಡೊ | ಕರಿವರದ ಹರಿಯೇಕರುಣಾಳು ನಿನ್ಹೊರತು | ಆರಿಯೆ ನಾ ಅನ್ಯರನುಮರುತಾಂತರಾತ್ಮಕನೆ | ಆನಂದ ನಿಲಯಾ2 ಎರಡು ಮೂರರಿಗಳನು | ಪರಿಹರಿಸಿ ವೈರಾಗ್ಯವರಜ್ಞಾನ ಸಂಪದವ | ಕರುಣಿಸುತ ಹರಿಯೇಕರಪಿಡಿದು ಉದ್ಧರಿಸೊ | ಶರಣ ಜನ ಕಾರುಣ್ಯಮರುತಾಂತರಾತ್ಮ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಶೇಷ ಪರ್ಯಂಕ ಶಯನ ವಿಠಲ ಪೊರೆ ಇವಳ ಪ ವಾಸುದೇವನೆ ನಿನ್ನ | ದಾಸಿ ಎಂದೆನಿಸಿ ಭವಪಾಶವನೆ ಕಳೆಯೊ ಸುವಿ | ಶೇಷ ಹರಿಯೇ ಅ.ಪ. ಪತಿಸುತರು ಹಿತರಲ್ಲಿ | ವಿತತವಾಗಿರುವಂಥಅತಿಶಯದ ತವರೂಪ | ಸತತ ಚಿಂತಸುವಾ |ಮತಿಯನೇ ಕರುಣಿಸುತ | ಕೃತ ಕಾರ್ಯಳೆಂದೆನಿಸೊಕ್ಷಿತಿರಮಣ ಭಿನ್ನವಿಪೆ | ಪತಿಕರಿಸೊ ಇದನಾ 1 ಬುದ್ಧಿಯಲಿ ಸನ್ನಿಹಿತ | ವೃದ್ಧಿಗೈಸಿವಳಲ್ಲಿಮಧ್ವಮತ ಸಿದ್ಧಾಂತ | ಪದ್ಧತಿಗಳಾಅಧ್ವರೇಡ್ಯನೆ ಅನಿ | ರುದ್ಧ ಮೂರುತಿ ಹರಿಯೇಕೃದ್ಧಖಳ ಸಂಹಾರಿ | ಪದ್ಮನಾಭಾ 2 ಕೀಚಕಾರಿ ಪ್ರಿಯನೆ | ಮೋಚಕೇಚ್ಛೆಯ ಮಾಡಿಪ್ರಾಚೀನ ಕರ್ಮದಿಂ | ಮೋಚನವ ಗೈಸೋ |ಯಾಚಿಸುವೆನೋ ಸವ್ಯ | ಸಾಚಿಸಖ ನೀನೆಂದುಈಕ್ಷಿಪುದು ಕರುಣ ಕಟಾಕ್ಷದಲಿ ಹರಿಯೇ 3 ಸಾರ ಸುಖಸಾಂದ್ರಾ 4 ಕಾವ ಕರುಣಿಗಳರಸ | ಭಾಮಕರ ಪರಿಪಾಲಾಓವಿತವ ಸಂಸ್ಮರಣೆ | ಸಾರ್ವಕಾಲಿದಲೀಈವುದಿವಳಿಗೆ ಎಂದು | ಭಾವದಲಿ ಭಿನ್ನವಿಪೆಗೋವಿದಾಂ ಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೇಷವಂದ್ಯ ಹರಿ ವಿಠಲ | ನೀ ಸಲಹೊ ಇವಳಾ ಪ ವಾಸುದೇವನೆ ಕೃಷ್ಣ | ಶ್ರೀಶ ಪುರುಷೋತ್ತಮ ಅ.ಪ. ಸೂಕರ ನೀಚ | ಯೋನಿಗಳಲಿ ಜನಿಸಿಜ್ಞಾನಾನು ಸಂಧಾನ | ಕಾಣದಿದ್ದಾಗ್ಯೂಅನೇಕ ಪೂರ್ವವೆನೆ | ಪುಣ್ಯ ಸಂಚಿತದಿಂದಮಾನವ ಸುಜನ್ಮದೊಳು | ಜನುಮ ಪೊತ್ರಿಹಳೊ 1 ತೈಜಸ ಸೂಚಿ | ವರ ಅಂಕಿತವನಿತ್ತೆಮರುತಾಂತರಾತ್ಮಕನೆ | ಮದ್ಬಿಂಜ ಪೊರೆಯಿವಳಾ 2 ವರಸು ಸೌಭಾಗ್ಯವನೆ | ಪರಿಹರಿಸಿ ದುಷ್ಕರ್ಮನಿರುತ ನಿನ್ನಯ ನಾಮ | ಸ್ಮರಣೆ ಸುಖವಿತ್ತೂಮರುತ ಮತ ತತ್ವಗಳ | ಅರಿವಾಗುವಂತೆಸಗೋಕರಿವರದ ಕಮಲಾಕ್ಷ | ಕಾರುಣ್ಯ ಮಾರ್ತೇ 3 ಪತಿಸುತರು ಹಿತರಲ್ಲಿ | ಕೃತಿರಮಣ ಸುವ್ಯಾಪ್ತಮತಿಇತ್ತು ಪೊರೆ ಇವಳ | ಕ್ಷಿತಿರಮಣ ದೇವಾಮತಿಮತಾಂ ವರರಂಘ್ರಿ | ಹಿತಸೇವೆ ದೊರಕಿಸುತಕೃತ ಕೃತ್ಯಳೆಂದೆನಿಸೊ | ಅತಿ ಚಿತ್ರ ಚರಿತಾ 4 ಕಾವ ಕರುಣಿಯೆ ದೇವ | ಭಾವುಕರ ಪರಿಪಾಲನೀವೊಲಿಯ ದಿನ್ನಿಲ್ಲ | ಆವತ್ರೈ ಜಗದೀನೋವುಸುಖ ದ್ವಂದ್ವಗಳ | ಸಮತೆಯು ಉಂಬಂತೆನಿವೊಲಿಯೊ ದೇವ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು