ಒಟ್ಟು 11213 ಕಡೆಗಳಲ್ಲಿ , 138 ದಾಸರು , 6168 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಶಕೆ ನಮೋ ಎಂಬೆ ನಮ್ಮ ಶ್ರೀ ಮದಾನಂದತೀರ್ಥ ಪದ್ಮನಾಭರಿಗೆ | ರಾಮದೇವರ ಕಂದ ನರಹರಿಗೆ || ಕಾಮಿತ ಫಲವೀವ ಮಾಧವಕ್ಷೋಭ್ಯರಿಗೆ | ಆ ಮಹಾಮಹಿಮ ಜಯತೀರ್ಥ ರಾಯರಿಗೆ 1 ವಿದ್ಯಾಧಿರಾಜರಿಗೆ ವಿಜಯ ಕವೀಂದ್ರ ಸು | ಸದ್ಗುಣ ವಾಗೀಶ ರಾಮಚಂದ್ರರಿಗೆ || ವಿದ್ಯಾನಿಧಿ ರಘುನಾಥ ರಘುವರ್ಯತೀರ್ಥರಿಗೆ | ಅದ್ವೈತಮತ ಖಂಡ ರಘೋತ್ತರಾಯರಿಗೆ 2 ವೇದವ್ಯಾಸ ವಿದ್ಯಾಧೀಶ ವೇದನಿಧಿ ಮುನಿಗೆ | ನಿತ್ಯ ವತ್ರರಿಗೆ || ಮೇದಿನಿಯಲಿ ಮೆರೆದ ಸತ್ಯನಿಧಿತೀರ್ಥರಿಗೆ | ವಾದಿಗಜಕೆ ಸಿಂಹ ಸತ್ಯನಾಥರಿಗೆ 3 ಯತಿಶ್ರೇಷ್ಠ ಸತ್ಯಾಭಿನವತೀರ್ಥರಿಗೆ | ಸತತ ಸಜ್ಜನಪಾಲ ಸತ್ಯಪೂರ್ಣರಿಗೆ || ಅತಿಶಯವಾನಂದ ಸತ್ಯ ವಿಜರಿಗೆ | ಮತ ಉದ್ಧಾರಕ ಶ್ರೀ ಸತ್ಯಪ್ರಿಯರಿಗೆ4 ಇಂತು ಗುರುಗಳ ಸಂತರೆ ಕೊಂಡಾಡಿ ಇಂತು ಸುತಾಪವನುರುಹಿ ಬಿಟ್ಟು || ಸಂತೋಷಿ ನಾನಾದೆ ವಿಜಯವಿಠ್ಠಲನ್ನ ಚಿಂತಿಯ ಮಾಡುವೆ ದಾಸರ ದಯದಿಂದ 5
--------------
ವಿಜಯದಾಸ
ಗುರುವಾದಿರಾಜ ತವ | ಚರಣಗಳಿಗಭಿನಮಿಪೆದೊರಕಿಸೆನಗ್ಹರಿಪಾದ | ಸರಸಿರುಹ ಗುರುವೇ ಅ.ಪ. ಯತಿ ಕುಲಾಗ್ರಣಿ ದ್ವೈತ | ಮತ ಜನರ ಉದ್ಧಾರಸತತ ನೀ ನೆಸಗುತಲಿ | ಪ್ರತಿರಹಿತ ನೆನಿಸೀ |ಮತ ಗ್ರಂಥ ವಿಸ್ತರಿಸಿ | ಯುಕ್ತಿಗಳ ಬೋಧಿಸುತಹಿತದಿಂದ ಸಜ್ಜನಕೆ | ಗತಿ ತೋರಿ ಮೆರೆದ 1 ಪಾದ ಪೂಜೆಯನುಹವಣೆಗಳ ತಿಳಿಯೊ ನಾ | ದೈವಗತಿಯಂತೋ 2 ಭಾವಿ ಮಾರುತ ನಿಮ್ಮ | ಭಾವ ತಿಳಿವರು ಯಾರುಓವಿ ನಿಮ್ಮಡಿಗಳನು | ಸ್ತವನ ಗೈದೂ |ಗೋವಳರ ಪ್ರೀಯ ಗುರು | ಗೋವಿಂದ ವಿಠ್ಠಲನಭಾವದಲಿ ಕಾಣ್ವಂಥ | ಭಾವ ಕೊಡು ಸಂತ 3
--------------
ಗುರುಗೋವಿಂದವಿಠಲರು
ಗುರುವಿನ ಕಾಣದೆ ಪರಗತಿ ದೊರೆಯದು ಪ ವೇದ ಶಾಸ್ತ್ರಗಳ ನೋದಿ ಭೇದಿಸದೆ | ವಾದದಿಂದ ಜನಗೆದ್ದನು | ಕೊಂಡ ಗಾದಿಯಂತೆ ನಿಜ | ಸಾಧುರ್ಹಾದಿಯನೆ ಮರೆತನು 1 ಕರ್ಮ ಧರ್ಮ ಸಾರಯಜ್ಞದಿ | ಭೂರಿಯಶವನೆ ಪಡೆದನು | ಏರಿ ಸ್ವರ್ಗದಿ ಜಾರಿ ಬಿದ್ದ ಸಂ | ಸಾರ ವಾರಿಧಿಯ ಸೇರಿದನು 2 ರಂಜನಿಂದ ವಣಭಂಜನ್ಯಾತರೆದು | ಕಂಜನಾಭನ ನೆರೆ ನಿಲುಕನು | ಅಂಜಲೆತ್ತಿದರ ಗುರು ಮಹಿಪತಿ | ಪ್ರಾಂಜಳಾಗಿ ಘನದೋರುವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವಿನ ಚರಣವ ನೆನೆವುತಲನುದಿನ ಪರದೊಳು ದೈವದ ನೆಲೆ ನೋಡು ಪ ಗುರುವಿನ ಕರುಣಕಟಾಕ್ಷವದಲ್ಲದೆ ನರರಿಗೆ ದೊರಕದು ಪರಸುಖವು ಹಿರಿಯರ ಅಭಿಮತವಿಲ್ಲದ ಗೃಹದೊಳು ಕರೆಕರೆಯಾಗಿದೆ ಕೌತುಕವು 1 ಸ್ಥಿರವಾಗಿ ನಿಲ್ಲದ ಮನವು ಭ್ರಮೆಯೊಳು ನೆರೆವುದು ತನ್ನೊಳು ಘಾತಕವು ಸೆರೆವಿಡಿಯಲು ಹರಿವಿಡಿದಿಹನಾತನ ತೊರೆವುದು ಭವಭಯ ಸೂತಕವು 2 ಯೋಗಿಯ ಹೃದಯದಿ ಸಕಲಾಗಮ ಸಮ ನಾಗಿಯೆ ತೋರ್ಪುದು ಧೃಢವಾಗಿ ಸಾಗರ ಸುತ್ತಿದ ಭೂಭಾಗದ ಸರಿ ಯೋಗಿಯ ದೃಷ್ಟಿಯೆ ಘನವಾಗಿ 3 ಬಾಗಿದ ಕಬ್ಬಿನ ಕೋಲೊಳು ರುಚಿಕರ ವಾಗಿಯೆ ತೋರುವ ಪರಿಯಾಗಿ ರಾಗಿಯ ಶಿಲೆ ತಾ ಬಳಲಿದೆನೆನುತಲೆ ಭಾಗೆಯ ಕೊಂಬುದೆ ಸಮವಾಗಿ 4 ನಂಬದಿರಂಬರ ವಾದಿಯ ಅಂಶಕ ತುಂಬಿದ ಕುಂಭ ದೃಢದಿಂದ ಅಂಬರದೊಳಗಣ ಮೇಘಕೆ ವಾಯುವು ಬೆಂಬಲವಾಗಿಹ ದಯದಿಂದ 5 ಸಂಭ್ರಮದಿಂದಲಿ ಗರ್ಜಿಸಿ ನಾಲ್ದೆಸೆ ಅಂಬಿಸಿ ಪೋಗುವ ಪರಿಯಿಂದ ಅಂಬುಜಭವ ಬರೆದಕ್ಷರ ಮಾಸಲು ಅಂಬರ ಬಯಲಹ ತೆರದಿಂದ 6 ಶುದ್ಧವಶುದ್ಧವು ಆಗಿಹ ಪೃಥಿವಿಯ ಬದ್ಧವಾಗಿಯೆ ತೊಳೆದವರಾರು ಅಬ್ಧಿಯ ಮಧ್ಯದಿ ಎದ್ದ ವಾರಿಗಳನು ತಿದ್ದಿಯೆ ಪಸರಿಸುವವರಾರು 7 ಇದ್ದರೆ ಸರ್ವರ ಭವನದೊಳಗ್ನಿಯ ಮೆದ್ದವ ಶುದ್ದವೆಂಬವರಾರು ಹೊದ್ದಿದ ಮೂರುತಿ ನಾಲ್ದೆಸೆಯೊಳಗಿರೆ ಬದ್ಧವಾಗಿಯೆ ಕಟ್ಟಿಕೊಳಲ್ಯಾರು 8 ಬಯಲೊಳಗಿರುತಿಹ ಬಹು ಝೇಂಕಾರವ ನಯದೊಳು ನೋಡಿದರೇನುಂಟು ಬಯಲೊಳು ಮೂರಕ್ಷರವನೆ ಬಿತ್ತಲು ಮೈಲಿಗೆ ತಳಿಸುವ ಬೆಳೆಯುಂಟು 9 ಸಿರಿ ಸೊಬಗನು ಜಯಿಸುವ ಹಯವನು ಏರುವ ಬಗೆಯುಂಟು ದಯದೊಳು ಶ್ರೀ ಗುರು ವಿರಚಿಸಿಯಿತ್ತರೆ ಕ್ರಮವಿಕ್ರಯದೊಳು ಫಲವುಂಟು 10 ಬೇಡನು ಸಲಹಿದ ಆಡು ತಾ ಯಾಗಕೆ ಬೇಡವೆಂಬವರಾರು ಶಾಸ್ತ್ರದಲಿ ಕಾಡಿನೊಳಿರುತಿಹ ಮೃಗವಾಲದ ಸಿರಿ ನೋಡು ನೀ ನಿತ್ಯದಿರಾಸ್ತ್ರದಲಿ 11 ಕೋಡಗನಾದರು ನೋಡಿಯೆ ಭಜಿಸಲು ಕೂಡುಗು ಹರಿಯ ಪರತ್ರದಲಿ ಕೂಡಿಕೊಂಡರೆ ಪರಬೊಮ್ಮನ ಮನದಲಿ ಆಡದು ಮಾಯದ ಸೂತ್ರದಲಿ 12 ಮೃಗ ಗೋರೋಚನ ಸಹ ಉತ್ತಮವಾಗಿಹ ಮುತ್ತುಗಳು ನಿತ್ಯದಿ ಕ್ರಯಗಟ್ಟಿ ಉಣ್ಣದೆ ಹುಲ್ಲನು ಕಿತ್ತು ಮೆದ್ದಾಡುವ ಅವಸ್ಥೆಗಳು13 ಮೃತ್ಯುವ ಕಾಣದೆ ಬೊಮ್ಮವನಡಗಿಸಿ ಎತ್ತಲಾದರು ಪೋದ ವಸ್ತುಗಳು ಭಕ್ತರಿಗಲ್ಲದೆ ಮನವಪರೋಕ್ಷದ ವಸ್ತುವ ಕಾಣದು ನಿತ್ಯದೊಳು 14 ಜ್ಯೋತಿರ್ಮಯವಾಗಿಹ ವಸ್ತುವಿನೊಳು ಸೂತಕ ಹೊದ್ದುವುದೇನುಂಟು ಜಾತಿವಿಜಾತಿಯೊಳೊಲಿದಿಹ ಶಿವನವ ದೂತರ ನಂ[ಬ]1ದರಾರುಂಟು 15 ಓತು ಆಶುದ್ದವನುಂಡರು ಕವಿಲೆಯೊ ಳ್ಮಾತಿನ ವಾಸಿಯದೇನುಂಟು ನೀತಿ ವಿಹೀನರೊಳುದಿಸಿದ ಲವಣದ ಧಾತು ಕೂಡದೆ ಸವಿಯೇನುಂಟು 16 ಧಾರುಣಿ ಭಾರವ ಮಿತಿಗಟ್ಟಿ ತಕ್ಕಡಿ ಗೇರಿಸಿ ತೂಗಲು ಬಹುದೀಗ ವಾರಿಧಿಯನು ಮುಕ್ಕುಳಿಸಿಯೆ ಬತ್ತಿಸಿ ತೋರಿಸಲಪ್ಪುದು ಬಹು ಬೇಗ 17 ಧಾರುಣಿಯೊಳು ಗುರುಕರುಣದ ಅಳತೆ ಮು ರಾರಿಗು ಸಿಲುಕದು ಅದು ಈಗ ತೋರಿತು ಅಲ್ಲಿ ವರಾಹತಿಮ್ಮಪ್ಪ ಕು ಮಾರರು ವಾಜಿಯ ತಡೆದಾಗ 18
--------------
ವರಹತಿಮ್ಮಪ್ಪ
ಗುರುವಿನ ಧರ್ಮ ಕೋರಾಣ್ಯದ ಭಿಕ್ಷಅರಿತು ನೀಡಲು ಮೋಕ್ಷ ಪ ಮರೆತು ಬಿಟ್ಟರೆ ಕಪಾಳ ಮೋಕ್ಷಯಮನಲ್ಲಾಹೋದು ಶಿಕ್ಷ ಅ.ಪ. ಖಂಡುಗ ಜೀವವ ಕೈಲ್ಹಿಡಕೊಂಡುಮಂಡೆ ಬಾಗಿ ನಿಮ್ಮಂಗಳದೊಳಗೆಅಂಡಲೆಯಲು ಮೋರೆ ಹಿಂಡಿ-ಕೊಂಡರೆ ಯಮ ದಂಡನೆ ತಪ್ಪದೋ 1 ಜಂಗಮರು ಜಗತ್ಪಾವನರುಲಿಂಗಾಂಗಿಗಳು ನಿಸ್ಸಂಗಿಗಳುಹಿಂಗದೆ ಸೀತಾಂಗನೆ ಭರ್ತನ ಪದಉಂಗುಟ ತೊಳೆದು ಅಗ್ಗಣಿ ಧರಿಸಿರೋ 2 ಐವತ್ತಾರು ದೇಶದ ಒಳಗೆ ಇಪ್ಪತ್ತೊಂದುಸಾವಿರದಾರ್ನೂರುಕೈವಲ್ಯ ಸಾಧನ ನಮಗಿರಲು ಭಯ-ವೆತ್ತಣದೋ ಮೋಹನ್ನ ವಿಠ್ಠಲ 3
--------------
ಮೋಹನದಾಸರು
ಗುರುವಿನರಿಯದೆ ಮರುಳಲೋಕ ಒಂದೊಂದು ಪರಿ ಗುರುಮಾಡಿಕೊಂಡುದರ ಹೊರವುತಿದೆ ಧರೆಯೊಳು ಬರಿದೆ ಭ್ರಮೆಗೊಂಡಿಹ್ಯದು ಪರಗತಿಯ ಜರೆದು ಶ್ರೀ ಗುರುಪಾದವನ್ನರಿಯದೆ 1 ಸತ್ವಧಾತುದ ನೆಲೆಯು ತತ್ವ ಮೋಹಲಾದನು ಮತ್ತೈದು ಮುದ್ರೆಗಳ ವ್ಯಾಪಿಸಿಹ ಪ್ರಾಣವನು ಮುದ್ರಿಸಿದಾತ ಪರಮಗುರುವು 2 ಸತ್ವ ರಜ ತಮವು ಮೊದಲಾದ ಗು- ಣತ್ವಗಳು ಪಂಚಭೂತಾತ್ಮದ ವಸ್ತಿ ವಿವರಣಗಳು ವಿಸ್ತಾರಗತಿಗಳನು ವಿಸ್ತರಿಸಿ ತೋರಿಸಿದಾತ ಸಾಕ್ಷಾತ ಗುರುವು 3 ಸ್ವಪ್ನ ಸುಷುಪ್ತಿ ಜಾಗ್ರತಿ ತ್ರಯವಸ್ಥಿತಿಗಳು ಪ್ರಾಣಪ್ರಣಮ್ಯ ಪ್ರವೃತ್ತಿ ನಿವೃತ್ತಿಗಳು ಶಕ್ತಿ ಉನ್ಮನಿಯ ಉದ್ಬವ ಗತಿಯು ತೋರಿಸಿದಾತ ಸಾಕ್ಷಾತ ಗುರುವು 4 ಹತ್ತು ಮತ್ತೆರಡು ಧ್ವನಿ ವತ್ತಿಗ್ಹೇಳೆನಿಸುವದ ರತ್ನ ಮೂರರ ಪ್ರಭೆಯ ದಾಟಿ ಸಂಜೀವನಿಯ ಸತ್ರಾವಿ ಜೀವನ ಕಳಾ ಮೃತವದೋರಿಸಿದಾತ ಸಾಕ್ಷಾತ ಗುರುವು 5 ಒತ್ತಿ ಆಧಾರ ಬಲದೆತ್ತಿ ಕುಂಡಲಣಿಯ ಕೆತ್ತಿ ಸರ್ಪೆತ್ತಿ ಮುಖ ಮಾಡಿ ಊಧ್ರ್ವ ಗತಿಯು ಮತ್ತೆ ಷಡಚಕ್ರಗಳ ಗತಿಗಳನು ದೋರಿದಾತ ಸಾಕ್ಷಾತ ಗುರುವು6 ಪತಿತ ಮಹಿಪತಿಯ ಪಾವನ್ನಗೈಸುತ್ತಮದಿ ಉತ್ಪತ್ತಿ ಸ್ಥಿತಿ ಲಯವು ತಾರಿಸಿ ಸ- ದ್ಗತಿಯು ನಿತ್ತಿಹ್ಯಾನಂದ ಘನ ಸತ್ಯ ಸದ್ಗುರು ಮೂರ್ತಿ ಸಾಕ್ಷಾತ ಪರಮಗುರುವು | 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುವು ಗುರುವು ಎಂದು ಜಗದೊಳಗಿಹರುಗುರುವು ಅದ್ಯಾತರ ಗುರುವುನರನನು ತಿಳುಹಿಯೆ ಹರನನು ಮಾಡುವಗುರುವು ಆತನೆ ಸದ್ಗುರುವು ಪ ಜ್ಞಾನವನರುಹಿ ಅಜ್ಞಾನವ ಹರಿಸುವಜ್ಞಾನಿಯಾದವ ಗುರುವುಏನೇನೋ ಭ್ರಾಂತಿಯದೆಲ್ಲವ ನೀಗಿ ನಿ-ಧಾನ ಮಾಡಿದನಾತ ಗುರುವುನೀನೀಗ ನಾನೆಂದು ಸಂಶಯ ಬಿಡಿಸಿಸನ್ಮಾನ ಮಾಡಿದನಾತ ಗುರುವು 1 ಯಮ ನಿಯಮಾಸನ ಎಲ್ಲವನರುಹಿಯೆಎಚ್ಚರಿಸಿದಾತನೆ ಗುರುವುಸಮರಸವಾಯು ಮನವ ಮಾಡಿಕುಂಭಕಕಮರಿಸಿದಾತನೆ ಗುರುವುಘುಮು ಘುಮು ಘುಮು ಎಂಬ ಘಂಟಾಘೋಷವನ್ನೆಬ್ಬಿಸಿ ಅನುವುಮಾಡಿದವ ಗುರುವುದ್ಯುಮಣಿಕೋಟಿ ಕಳೆದೃಷ್ಟಿಗೆ ತುಂಬಿಸಿದೃಢವ ಮಾಡಿದನಾತನೆ ಗುರುವು 2 ದೃಷ್ಟಿಯ ನಿಟ್ಟು ಖೇಚರಿ ಮುದ್ರೆ ನಿಲಿಸಿದಯ ಮಾಡಿದಾತನೆ ಗುರುವುಕಟ್ಟಳಿಲ್ಲದ ತೇಜ ಖವಖವ ನಗಿಸಿಯೆದಿಟ್ಟ ಮಾಡಿದನಾತ ಗುರುವುಮುಟ್ಟಿ ತುಂಬಿದ ಬೆಳದಿಂಗಳ ಖಂಡದಿಮುಳಿಗಿಸಿದಾತನೆ ಗುರುವುಶಿಷ್ಟ ಚಿದಾನಂದ ಸದ್ಗುರುವನಮಾಡಿಸಾಕ್ಷಿ ಮಾಡಿದನಾತ ಗುರುವು 3
--------------
ಚಿದಾನಂದ ಅವಧೂತರು
ಗುರುವೆ ಸಂಸಾರವಿದು ಸ್ಥಿರವೇ ಬರಿದೆ ನಾ ಮೆರೆವೆ ಧರವೇ ವಿಷಯಂಗಳಲಿ ವಿಶ್ವಾಸಾ ವಿರಕ್ತಿಗೆ ಮೋಸಾ ಎಲ್ಲ ಉಪಾಧಿಯೊಳು ಸುಖವಿಲ್ಲ ಅನುಭವಿ ತಾಂ ಬಲ್ಲ ಈ ನುಡಿ ಪುಸಿಯಲ್ಲ ಗುರುವೆ ಆಗ ಈಗೆಂಬ ಶರೀರದ ಭೋಗ ತೀರಿಸಿಕೊಂಡು ಹೋಗಬೇಕೆಂಬ ಚಿಂತೆ ಎನಗೆ ಮುಕ್ತಿಯಮನೆಗೆ ಗುರುವೆ 1 ಆಶಾಪಾಶದಲಿ ಶರೀರದ ಘಾಸಿಯಾಗದಂತೆ ಪ್ರ ನಿನ್ನಂತೆ ಮಾಡೊ ಗುರುವೆ 2 ಹಣವೆ ಮುಂದಿಲ್ಲ ಕೊಟ್ಟ ಋಣವೇ ತೀರಿಸಲಿಕ್ಕೆ ನಾ ಬೆಳಗೆ ಗುರುವೆ 3 ನಿನಗೆ ಎಣೆಯಾದ ವಸ್ತÀು ಎನಗೆ ಸಿಕ್ಕುವುದುಂಟೇ ಬಾರಯ್ಯ ಬಲು ಕೃಪೆಯಿಂದ ಗುರು ವಿಮಲಾನಂದಾ ಗುರುವೆ 4
--------------
ಭಟಕಳ ಅಪ್ಪಯ್ಯ
ಗುರುವೇ ಮಹಾಗುರುವೇ ಚಿದಾನಂದಗುರುವೇ ಕೊಡಿರಿ ಮತಿ ನಮಗೆ ಪ ಅದ್ದಿ ಪಾಪದೊಳು ಸಮೃದ್ಧಿ ನನ್ನದೆಂಬ ಹಮ್ಮುಹೊದ್ದಿ ತುಂಬಿಹುದು ನನಗೆ ದು-ರ್ಬುದ್ಧಿ ನಮಗೆ ಕೊಡಿರಿ ನೀವುಸದ್ಬುದ್ಧಿ ಮಹಾಗುರುವೇ 1 ಅಂತೇ ಸಂಸಾರವು ಸತ್ಯಂತೆ ಇದನು ನಂಬುವನುಕತ್ಯಂತೆ ಮಾಡುವುದೆಲ್ಲ ಭ್ರಾಂತಂತೆ ನಮಗೆ ಕೊಡಿರಿ ಗುರುಚಿಂತೆ ಮಹಾಗುರುವೆ2 ಮಾನ ಉಳಿವುದಿಲ್ಲ ನಿದಾನಾ ಸಂಸಾರವೆ ಬಲುಹೀನ ತೊಳಲಿದೆ ನಾನು ಜನ್ಮನಾನಾ ನಮಗೆ ಕೊಡಿರಿ ಸು-ಜ್ಞಾನ ಮಹಾಗುರುವೇ 3 ಶಕ್ತಿ ಆದರೆಯು ವಿರಕ್ತಿ ಬ್ರಹ್ಮದಲಿ ಆ-ಸಕ್ತಿ ಕೊಡುವುದದು ಬಲುಭಕ್ತಿ ನಮಗೆ ಕೊಡಿರಿ ನೀವುಮುಕ್ತಿ ಮಹಾಗುರುವೇ 4 ಹಾರಿ ಭವದಾರಣ್ಯ ಕುಠಾರಿ ತೋರಿಸುವ ನಿಜದಾರಿ ಸಚ್ಚಿದಾನಂದ ತೋರಿ ನಮಗೆ ಹಿಡಿದು ಕೊ-ಡಿರಿ ಮಹಾಗುರುವೆ5
--------------
ಚಿದಾನಂದ ಅವಧೂತರು
ಗುರುವೇ ರಾಘವೇಂದ್ರ ಪ ಗುರುವೆ ಆಶ್ರಿತ ಸುರತರುವೆನುತಲಿನಿನ್ನ ಚರಣ ನಂಬಿದವರಿಗೆ ಪರಮಾನುಗ್ರಹ ಮಾಳ್ಪ ಅ.ಪ ಮಂತ್ರಾಲಯದಲಿ ನೀನಿಂತುನಿರಂತರ ಸಂತರಿಷ್ಟಾರ್ಥವ ಸಲಿಸುತಲಿರುವೆ 1 ದೃಢ ಮಾಡಿ ಅವರ ಆದರಿಸುವೆ ಸತತ2 ಭವ ದುರಿತವ ತರಿವೆ ಗುರುರಾಮವಿಠಲನ ಶರಣರಗ್ರಣಿಯೆ 3
--------------
ಗುರುರಾಮವಿಠಲ
ಗುರುಸಂತತಿಗೆ ನಮೊ ನಮೊ ಶ್ರೀ ಹರಿಶರಣರಿಗೆ ನಮೋ ನಮೋ ಪ ಧರಣೀಸುರರಿಗೆ ನಮೋ ನಮೋ ಅ.ಪ ವಿಜಯರಾಮದಾಸಗುರುವೆ ನಮೋ ನಮ ಭಜಕಜನರಸುರತರುವೆ ನಮೋ ವೃಜಿನ ಕಳೆವ ಭಾಗ್ಯನಿಧಿದಾಸ ನಮೋ ವಂದೇ ಸುಪ್ರೇಮದಾಸ ನಮೋ 1 ತಿರುಮಲಾಖ್ಯದಾಸರಿಗೆ ನಮೋ ನಮ ಗುರುಗೋಪಾಲರಾಯರಿಗೆ ನಮೋ ವರ ಭಾಗಣ ವಿಜಯರಾಯರಿಗೆ ನಮೋ ಪುರಂದರಾಖ್ಯ ಸುರಮುನಿಗೆ ನಮೋ 2 ವ್ಯಾಸಾಭಿಧಮೌನೀಶನಮೋ | ಹರಿ ದಾಸಶ್ರೀಪಾದರಾಯರಿಗೆ ನಮೋ ಭೂಸುರ ಪ್ರಿಯಹನುಮತೇ ನಮೋ ಸೀತೇಶ ಶ್ರೀಗುರುರಾಮ ವಿಠಲ ನಮೋ 3
--------------
ಗುರುರಾಮವಿಠಲ
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗುರುಸೇವೆ ನಿರತರಿಗೆ ನಮೋ ನಮೋ ಪ ಅರಿವು ನಿಲ್ಲಿಸಿ ಪರಸಾಧನದಿರುತಿಹ್ಯ ಪರಮಪಾವನರಿಗೆ ನಮೋ ನಮೋ ಅ.ಪ ತಾಪಸಾರ್ಯರಿಗೆ ನಮೋ ನಮೋ ಮಹ ಪಾಪ ದೂರರಿಗೆ ನಮೋ ನಮೋ ಕೋಪಲೋಪರಿಗೆ ನಮೋ ನಮೋ ಇಹ ವ್ಯಾಪಾರರಿತವರಿಗೆ ನಮೋ ನಮೋ ತಾಪತ್ರಯವ ನೀಗಿ ಶ್ರೀಪತಿ ಚರಣವ ಗೌಪ್ಯದಿ ನೆನೆವರ್ಗೆ ನಮೋ ನಮೋ 1 ವೇದ ಸಂಪನ್ನರಿಗೆ ನಮೋ ನಮೋ ಭವ ಬಾಧೆ ಗೆಲಿದವರಿಗೆ ನಮೋ ನಮೋ ಸಾಧನ ಚತುಷ್ಟರಿಗೆ ನಮೋ ನಮೋ ಮಹ ಸಾಧುಸಂತರಿಗೆ ನಮೋ ನಮೋ ವಾದಿ ಮೂರ್ಖರೊಳು ವಾದಿಸದಂಥ ಸು ಬೋಧ ಗುರುವರಗೆ ನಮೋ ನಮೋ 2 ಭಾಗವತರಿಗೆ ನಮೋ ನಮೋ ಇಹ ಭೋಗನಿರಾಸ್ಯರಿಗೆ ನಮೋ ನಮೋ ಯೋಗಸಾಧಕರಿಗೆ ನಮೋ ನಮೋ ಮಹ ಯೋಗಿ ಮಹಾತ್ಮರಿಗೆ ನಮೋ ನಮೋ ಆಗಯೀಗೆನ್ನದೆ ಸಾಗರನಿಲಯನನ್ನ ಬಾಗಿಭಜಿಪರಿಗೆ ನಮೋ ನಮೋ 3 ಭಕ್ತಜನರಿಗೆ ನಮೋ ನಮೋ ವಿ ರಕ್ತ ಪುರುಷರಿಗೆ ನಮೋ ನಮೋ ಸತ್ಯಶೀಲರಿಗೆ ನಮೋ ನಮೋ ತಮ್ಮ ಗುರ್ತು ಅರ್ತವರಿಗೆ ನಮೋ ನಮೋ ಭಕ್ತಿಯುಕ್ತಿ ವಹಿಸೆತ್ತಗಲದಂಥ ಚಿತ್ತಶುದ್ಧರಿಗೆ ನಮೋ ನಮೋ 4 ನಿತ್ಯ ನಿರ್ಮಲರಿಗೆ ನಮೋ ನಮೋ ಭವ ಮರ್ತ ನಿರ್ತರಿಗೆ ನಮೋ ನಮೋ ತ ತ್ವರ್ಥಿಕರಿಗೆ ನಮೋ ನಮೋ ಮಹ ಮುಕ್ತಿ ಸಾಧ್ಯರಿಗೆ ನಮೋ ನಮೋ ಮೃತ್ಯುವ ಗೆಲಿದು ಕರ್ತ ಶ್ರೀರಾಮನ ಅರ್ತವರಿಗೆ ಬಹು ನಮೋ ನಮೋ 5
--------------
ರಾಮದಾಸರು
ಗುರುಸ್ತುತಿ ಭೂರಿ ದಯವ ಸತತ ಪ ಧೀರವರೇಣ್ಯ ಸಮೀರ ಸಮಯಗಳ ಸಾರವನರಿಯುವ ದಾರಿಯ ಕಾಣಲು ಅ.ಪ ವ್ಯಾಸರಾಜಗುರು ದಾಸರೆಂದಿನಿಸಿ ಶ್ರೀಶ ಶ್ರೀಕೃಷ್ಣನ ತೋಷಿಸಲು ಸಾಸಿರ ವಿಧದಲಿ ಸಲಿಸಿ ಸೇವೆಗಳ ಭಾಸುರ ಕೀರುತಿ ಪಡೆದ ಯತಿವರ 1 ಅಂದದ ನವಮಣಿ ಮಂದಿರಗಳಲಿ ನಂದಕುಮಾರನ ಕುಳಿÀ್ಳರಿಸಿ ಚಂದದಿ ದಿನ ದಿನ ಪೂಜೆಯ ಗೈದು ಆನಂದಸಾಗರದಿ ಮಿಂದ ಯತಿವರÀ 2 ಘನ್ನ ಮಹಿಮೆ ಸುಖ ಚಿನ್ಮಯ ರೂಪ ಪ್ರಸನ್ನ ಶ್ರೀಕೃಷ್ಣಗೆ ಹರುಷದಲಿ ಚಿನ್ನಮಯದ ತೊಟ್ಟಿಲನ್ನು ಸೇವೆ ಮಾಡಿ ಅನ್ಯರಿಗಲ್ಲದ ಪುಣ್ಯ ಪಡೆದವರ 3
--------------
ವಿದ್ಯಾಪ್ರಸನ್ನತೀರ್ಥರು
ಗುರುಸ್ತುತಿ ರಾಘವೇಂದ್ರ ಸಲಹೊ ಗುಣಸಾಂದ್ರ ಪ ಭಗವದ್ಗೀತಾ ವಿವರಣ ತಂತ್ರದೀಪ ನಿಗಮತತಿಗೆ ಖಂಡಾರ್ಥವ ರಚಿಸಿ ಖಗರ್ಥಗಳನು ಅತಿ ಸ್ಫುಟವಾಗಿ ವಿವರಿಸಿ ಖಗವಾಹನ ತೋರಪಡಿಸಿದ ಧೀರ 1 ಧರಣಿ ವಿಜರರಿಗೆ ವರಗಳ ಕೊಡುವಂಥ ಸುರತರುವೆ ನಿಂಗೆ ಕರಗಳ ಮುಗಿದು ಪರಮಪುರುಷ ಹರಿಚರಣ ಕಮಲದಲಿ ಸ್ಥಿರವಾದ ಭಕುತಿಯ ಬೇಡುವೆ ಧೀರ 2 ಚಂಡ ಕುಮತಗಳ ಖಂಡಿಸಿ ಬುಧಜನ ಮಂಡಲದೊಳಗೆ ಪ್ರಚಂಡನೆಂದೆನಿಸಿ ಕುಂಡಲಿಶಯನ ಪಾದಮಂಡಿತ ಹೃದಯ ಭೂ ಮಂಡಲದೊಳಗೆ ಅಖಂಡಲನಾದ 3 ಶ್ರದ್ಧೆಯಿಂದಲಿ ವರ ಮಧ್ವಾಚಾರ್ಯರ ಮತ ಪದ್ಧತಿ ಬಿಡದಂತ ಬುದ್ಧಿಯನಿತ್ತು ಉದ್ಧರಿಸಯ್ಯ ಕೃಪಾಬ್ಧಿಯೇ ಬುಧಜನಾ ರಾದ್ಯಚರಣ ಪರಿಶುದ್ಧ ಚರಿತ್ರ 4 ಕಾಮಜನಕನಾದ ನಾಮಗಿರೀಶ್ವರಿ ಸ್ವಾಮಿ ನೃಹರಿಪಾದ ತಾಮರಸಂಗಳ ಪ್ರೇಮದಿ ಪೂಜಿಪೆನೆಂಬೊ ಕಾಮಿತವರ ನೀಡೊ ಶ್ರೀ ಮತ್ಸುಧೀಂದ್ರಕರ ತಾಮರಸಭವನೆ 5
--------------
ವಿದ್ಯಾರತ್ನಾಕರತೀರ್ಥರು