ಒಟ್ಟು 3758 ಕಡೆಗಳಲ್ಲಿ , 119 ದಾಸರು , 2292 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷುಮಿ ನಾರಾಯಣ ಸಂರಕ್ಷಿಸು ಎನ್ನನು ಬೇಗ ಪ. ಪಕ್ಷ್ಮ(?)ಗಳಕ್ಷಿಗಳನು ಕಾವಂದದೊಳಕ್ಷಯ ನಿಧಿಯ ಸ- ಮಕ್ಷದಿ ತೋರುತ ಅ.ಪ. ಅರ್ಭಕನಾ ಮೋರೆ ಕೇಳಿ ಕರ್ಬುರ ಚರ್ಮನ ಸೀಳಿ ಗರ್ಭೀತ ಕರುಳ ಮಹಾರ್ಭಟದಿಂ ತೆಗದುರ್ಬಿಗೆ ಬೀರಿದ ನಿರ್ಭಯಕಾರಿ 1 ಮಣಿಗರ್ಭ ಮೂರ್ತಿಗೆ ನೀ ಎಣೆಯಾಗಿಲ್ಲಿಗೆ ಬಂದು ಕುಣಿಯಲು ನಿಧಿ ಸಂದಣಿಗೊಳದಿರೆ ಲಕ್ಷಣಕೆ ಕೊರತೆಯಂ- ದೆಣಿಸರೆ ಸುಜನರು 2 ಶಕ್ರ ಚತುಷ್ಕರ ಸಿರಿಯು ಚಕ್ರಗದಾಬ್ಜರ ಪರಿಯು ವಕ್ರ ಮತಿಯ ರಿಪುಚಕ್ರವ ತರಿವ ಪರಾಕ್ರಮ ಕರುಣೋ- ಪಕ್ರಮ ತೋರುತ 3 ಅಂಬುಜನಾಭನೆ ನಿನ್ನ ನಂಬಿದ ಭಾವನೆಯೆನ್ನ ತುಂಬಿದ ಜಗದೊಳಗಿಂಬುಗೊಂಡಿಹ ನಿನಗೆಂಬುದೇನು ಪೀ- ತಾಂಬರ ಧಾರಿ4 ಎರಡೊಂದು ಋಣಬಂಧ ಪರಿಹರಿಸೊ ಗೋವಿಂದ ಸುರತರು ಕರುಣಾರಸವಿರಿಸು ಶೇಷಗಿರಿ- ವರ ತ್ವರೆಯಿಂದ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀ ಮನೋಜ್ಞ ವಿಠಲ | ಕಾಪಾಡೊ ಇವಳಾ ಪ ಪಕ್ಷೀಂದ್ರವಹ ಹರಿಯೆ | ಇಕ್ಷುಶರ ಪಿತನೇ ಅ.ಪ. ಸುಕೃತ | ದಿಂದ ಫಲ ತೊರೆತಿಹುದುಮಂದಾಕೀನಿ ಜನಕ | ಇಂದಿವಳ ಪೊರೆಯೆ 1 ಹರಿಯೆ ಪರತರನೆಂಬ | ಸುರರ ಮನೊ ಭಾವದಲಿಹರಿ ಗುರು ಹಿರಿಯರಲಿ | ವರಭಕ್ತಿಯುತಳೂತರತಮದ ಸುಜ್ಞಾನ | ವರಭೇದ ಪಂಚಕದಅರಿವಿತ್ತು ಪೊರೆ ಇವಳ | ಮರುತಾಂತರಾತ್ಮ 2 ಕಂಸಾರಿ ಪೂಜೆ ಎಬಂಶವನು ತಿಳಿಸುತ್ತ | ಕಾಪಾಡೊ ಹರಿಯೇಸಂಶಯವುರಹಿತ ತ | ತ್ವಾಂಶ ದರಿವಿತ್ತು ವಿಪಾಂಸಗನು ಹರಿಯಪದ | ಪಾಂಸುವನೆ ತೊಡಿಸೋ 3 ಅಕ್ಷಯ ಫಲದಾತಈಕ್ಷಿಸೋ ಇವಳ ಕರು | ಣೇಕ್ಷಣದಿ ಹರಿಯೇ 4 ಗೋವತ್ಸ ದನಿಕೇಳಿ | ಧಾವಿಸುವ ಪರಿಯಂತೆಶ್ರೀವರನೆ ನೀನಾಗಿ | ಓವಿ ಪೊರೆ ಎಂಬಾಆವ ಈ ಬಿನ್ನಪವ | ನೀವೊಲಿದು ಸಲಿಸುವುದುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ವೆಂಕಟೇಶ ವಿಠಲ | ರಕ್ಷಿಸೋ ಇವಳಾ ಪ ವಿಶ್ವ ವ್ಯಾಪಕನೇ ಅ.ಪ. ಪುಟ್ಟಿ ಸತ್ಕುಲದಲ್ಲಿ | ತೊಟ್ಟು ಸತ್ಸಿದ್ಧಾಂತ ಇಷ್ಟ ಪಡುತಿಹಳಯ್ಯ | ಕಷ್ಟದಾಸತ್ವಾಇಷ್ಟ ಮೂರುತಿ ನೀನು | ತೈಜಸೀ ರೂಪದಲಿಸ್ಪಷ್ಟ ತೋರಿದ ಹರಿಯೆ | ಇತ್ತೆ ಉಪದೇಶಾ 1 ಮರುತ ಮತದಲಿ ದೀಕ್ಷೆ | ಹಿರಿಯರನು ಸರಣೆಯಲಿನಿರುತ ಆಸಕ್ತಿಯನು | ಕರುಣಿಸುತ ಭವದಾಶರಧಿಯನೆ ದಾಟಿಸುವ | ಮಾರ್ಗವನೆ ತೋರೊ ಹರಿಕರುಣಾಂಬುನಿಧಿಯೆಂದು | ಮೊರೆ ನಿನಗೆ ಇಡುವೇ 2 ಕಷ್ಟ ನಿಷ್ಠೂರಗಳ | ಸುಷ್ಠುಸಮತೆಲಿ ಉಂಬಶ್ರೇಷ್ಠ ಮತಿಯನೆ ಇತ್ತು | ರಕ್ಷಿಸೋ ಇವಳಾ |ಅಷ್ಟ ಸೌಭಾಗ್ಯಗಳ | ಕೊಟ್ಟು ಕಾಯಲಿ ಬೇಕೊಕೃಷ್ಣ ಮೂರುತಿ ಹರಿಯೆ | ಭಕ್ತ ವತ್ಸಲ್ಲಾ 3 ಪರಮಾರ್ಥ ಸಾಧನಕೆ | ಗುರು ಕರುಣಬೇಕೆಂಬವರಮತಿಯ ಕರುಣಿಸುತ | ಪೊರೆಯ ಬೇಕಿವಳಾಗರುಡ ಗಮನನೆ ದೇವ | ಸರ್ವಾಂತರಾತ್ಮಕನೆಕರುಣದಿಂ ಕೈ ಪಿಡಿದು | ಉದ್ಧರಿಸೋ ಇವಳಾ 4 ಪಾವಮಾನಿಯ ಪ್ರೀಯ | ಭಾವದಲಿ ಮೈದೋರಿಜೀವಿಯನು ಉದ್ಧರಿಸೋ | ದೇವ ದೇವೇಶಾಗೋವತ್ಸದನಿ ಕೇಳಿ | ಆಪು ಪೊರೆವಂತೆ ತೋರಿಗೋವಿದಾಂಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀಶ ಪಾಲಿಸು ಎನ್ನ ಲಕ್ಷ್ಮೀಶ ಪ. ಲಕ್ಷ್ಮೀಶ ಪಾಲಿಸೊ ಎನ್ನ | ಜಗ ದ್ರಕ್ಷಕ ಪರಮಪಾವನ್ನ ಈಕ್ಷಿಸು ಕರುಣ ಕಟಾಕ್ಷವ ಬೀರುತ ಕುಕ್ಷಿಯೊಳಗೆ ಜಗ ರಕ್ಷಿಸುತಿಪ್ಪನೆ ಅ.ಪ. ನಾಗರಾಜನ ಗಿರಿವಾಸ | ಭೋಗ ಆಗುಮಾಡೆಲೊ ಸರ್ವೇಶ | ನಿನಗೆ ಬಾಗಿ ನಮಿಸುವೆ ಜಗದೀಶ | ಭವ ರೋಗ ಹರಿಸು ಕ್ಲೇಶನಾಶ | ಆಹ ಕೂಗಿದರು ನಿನಗೀಗ ಕೇಳಿಸದೇನೊ ಜಾಗುಮಾಡದೆ ನೀಡೊ 1 ಸೃಷ್ಟಿಗೆ ಎನ್ನನು ಕರೆದೆ | ಭವ ಕಷ್ಟದಿ ಬಂಧಿಸಿ ತಂದೆ | ಇನ್ನು ಘಟ್ಯಾಗಿ ಕಾಪಾಡು ಎಂದೆ | ಮೊರೆ ಮುಟ್ಟದೆ ನಿನಗಿನ್ನು ತಂದೆ | ಆಹ ಎಷ್ಟು ಬೇಡಿದರು ಸೊಟ್ಟ ತಿರುಗಿ ಮೊಗ ಅಟ್ಟಕೆ ಏರುವಿ ಬೆಟ್ಟದೊಡೆಯ ಹರಿ 2 ಕರ್ಮಬಂಧನಗಳ ಕಡಿಯೊ | ಶ್ರೀಶ ನಿರ್ಮಲರೂಪ ಕೈಪಿಡಿಯೊ | ಬೇಗ ಧರ್ಮ ಅಧರ್ಮವ ತಿಳಿಯೊ | ಜಗ ತ್ಕರ್ಮ ಸಾಕ್ಷಿಯೆ ಬೇಗ ಪೊರೆಯೊ | ಆಹ ಧರ್ಮವಲ್ಲವೊ ಹೀಗೆ ಮರ್ಮವ ನುಡಿವುದು ಪೆರ್ಮೆಯಿಂದಲಿ ಅಂತರ್ಮರ್ಮವರಿತು ಕಾಯೊ 3 ಶ್ರೀನಿವಾಸ ಬಾರೊ ಬೇಗ | ನಿನ್ನ ನಾನು ನಂಬಿದೆನೊ ಶ್ರೀ ಭೋಗ | ನೀಗು ನೀನೆ ತ್ರಿಕರ್ಮದ ಭೋಗ | ಬೇಗ ಭವ ರೋಗ | ಆಹ ಪೋಗುತಲಿದೆ ದಿನ ಜಾಗುಮಾಡಲು ಸಲ್ಲ ನಾಗಶಯನ ಎನ್ನ ಬೇಗನೆ ರಕ್ಷಿಸೊ 4 ಕಣ್ಣು ಬಿಟ್ಟಿರುವೆಯೊ ನೀನು | ನಿನ್ನ ಬೆನ್ನ ಭಾರವಿದಿನ್ನೇನು | ಕೋರೆ ಮಣ್ಣು ಆರ್ಭಟಿಸುವೆ ನೀನು | ವಟು ಚಿಣ್ಣ ಭಾರ್ಗವ ನೀನು | ಆಹ ಮನ್ನಿಸಿ ಕಪಿಗಳ ಬೆÉಣ್ಣೆ ಕಳ್ಳನೆನಿಸಿ ಬಣ್ಣಗೆಟ್ಟು ಹಯವನ್ನೇರಿದ ಧೀರ 5 ನಿತ್ಯ ತೃಪ್ತನೆ ಎನ್ನ ಮನದಿ | ಸರ್ವ ತತ್ವಾಧಿಪತಿಗಳು ಮುದದಿ | ಜಗ ತ್ಕರ್ತನೆ ಕಾಯ್ವ ದಯದಿ | ಬೇಗ ಇತ್ತು ಮತಿಯ ಸಲಹೊ ದೃಢದಿ | ಆಹ ಸತ್ಯರೂಪನೊ ನೀ ಸತ್ಯ ಸಂಕಲ್ಪನೊ ನಿತ್ಯ ನಿಂತು ಕಾಯೊ 6 ಗೋಪಾಲಕೃಷ್ಣ ವಿಠ್ಠಲ | ಭವ ಕೂಪದಿಂದೆತ್ತೊ ಶ್ರೀ ನಲ್ಲ | ಎನ್ನ ರಾಪು ಮಾಡುವುದುಚಿತಲ್ಲ | ಜಗ ದ್ವ್ಯಾಪಕ ಭಕ್ತವತ್ಸಲ | ಆಹ ಈ ಪಯೋಜಜಾಂಡದಿ ರೂಪ ರೂಪಾಂತರದಿ ವ್ಯಾಪಾರ ನಡೆಸುವ ಗೋಪಕುವರ ಕಾಯೊ 7
--------------
ಅಂಬಾಬಾಯಿ
ಲಘುವಾವುದೆಂಬುದನು ನಿಜವಾಗಿ ನುಡಿಯುವೆನು ಸುಗುಣವಂತರು ಕೇಳಿ ವಿನಯದಲಿ ಬೇಡುವೆನು ಪ ಲಘುತೃಣವು ತಾನಲ್ಲದಿಟವೆ ಸರಿ ಈ ಮಾತು ಲಘುತೃಣವ ತಾವುಂಡು ಪಾಲ್ಕೊಡವೆ ಗೋವುಗಳು ಅ.ಪ. ನಾರಿಯನು ಸಾಕುವೆಡೆ ಕೈಲಾಗದ ಲಘುವು ಭಾರಿಸಿರಿಯನು ಪತಿಗೆ ತಾರದಾ ಸೊಸೆ ಲಘುವು ನಾರಿಯರ ಕೈಗೊಂಬೆಯಾಗಿರುವ ನರ ಲಘುವು ಸಿರಿವಂತ ನೆಂಟರಲಿ ಬಡವ ಸೇರಲು ಲಘುವು 1 ವಿತ್ತವಿಲ್ಲದ ಪಿತನು ಪುತ್ರನಿಲ್ಲಿರೆ ಲಘುವು ಪುತ್ರವತಿಯರ ನಡುವೆ ಸವತಿ ಬಂಜೆಯು ಲಘುವು ಅತ್ತಿಗೆಗೆ ಬಹು ಲಘುವು ರಿತ್ತ ಮೈದುನ ಮಂದಿ ಭತ್ರ್ಯತಾನತಿ ಲಘುವು ಶ್ರೀಮಂತ ಕನ್ನಿಕೆಗೆ 2 ಮೋದತೀರ್ಥರ ಮತಕೆ ಮಿಕ್ಕುದೆಲ್ಲವು ಲಘುವು ವೇದನುತ “ಶ್ರೀಕೃಷ್ಣವಿಠಲ”ನ ನೆನೆಯದವ ಶುದ್ಧಲಘು ತಮನೈಯ ವೃದ್ಧ ಸಮ್ಮತ ಹೌದು 3
--------------
ಕೃಷ್ಣವಿಠಲದಾಸರು
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ
ಲಾಭವಹುದು ಹರಿಕಥಾಮೃತ ಪ ಪದುಮನಾಭನ ಪದದ ಪಥದಿಅಹುದು ಸಜ್ಜನಗಣಕೆ ಸತ್ಯ ಅ.ಪ ಅರಿಷಡ್ವರ್ಗಂಗಳ ತೊರೆದುಜರಿದು ತಾಪತ್ರಯವ ಕಳೆದುಮುರಹರನ ಪದದ ಪಥದಿಇರಲು ಸಜ್ಜನ ಗಣಕೆ ಸತ್ಯ 1 ಏಳು ದಿನವು ಪರೀಕ್ಷಿತನುವೇಳೆಯರಿತು ಹರಿಯ ಕಥೆಯಕೇಳಿ ಮುಕ್ತನಾದ ಮೇಲೆಕೇಳಿದ ಕಥೆಯ ಕೇಳಬೇಕು2 ಎರಡು ಘಳಿಗೆ ಖಟ್ಟಾಂಗರಾಯಕರಣ ಪುಟದಿ ಕೃಷ್ಣನ ಕಥೆಯಸ್ಮರಿಸಿ ಮುಕ್ತನಾದ ಮೇಲೆನಿರುತ ಕಥೆಯ ಕೇಳಬೇಕು 3
--------------
ವ್ಯಾಸರಾಯರು
ಲಾಲಿ ಆಡಿದ ರಂಗ ಲಾಲಿ ಆಡಿದ ಪ. ಬಾಲೆ ರುಕ್ಮಿಣಿ ದೇವೇರೊಡನೆ ಮೂರು ಲೋಕನಾಳ್ವ ದೊರೆಯುಅ.ಪ. ಸಾಧು ಮಚ್ಚಕಚ್ಚಪರೂಪನಾಗಿ ಭೇದಿಸಿ ತಮನ ಕೊಂದುವೇದವನ್ನು ಮಗನಿಗಿತ್ತು ಭೂದೇವಿಯರೊಡನೆ ಕೃಷ್ಣ 1 ಅಮೃತ ಬಡಿಸಿ ಸತ್ಯಭಾಮೆಯರೊಡನೆ ಕೃಷ್ಣ2 ವರಾಹ ರೂಪನಾಗಿ ಆದಿ ಹಿರಣ್ಯಕನ ಕೊಂದುಮೇದಿನಿಯ ಮೇಲಕೆ ತಂದು ರಾಧೆಯೊಡನೆ ನಗುತ ಕೃಷ್ಣ 3 ಪುಟ್ಟಬಾಲನ ನುಡಿಯ ಕೇಳಿ ಕೆಟ್ಟ ಕಶ್ಯಪನುದರ ಸೀಳಿಅಷ್ಟಮಂಗಳವಾದ್ಯವಾಗಲು ಅಷ್ಟ ಸ್ತ್ರೀಯರೊಡನೆ ಕೃಷ್ಣ 4 ಸುರರು ಲಕುಮಿಯೊಡನೆ ನಗುತ ಕೃಷ್ಣ 5 ಯುದ್ಧದಲಿ ಕೊಡಲಿ ಪಿಡಿದು ಗುದ್ದಿ ಕ್ಷತ್ರೇರ ಶಿರವ ತರಿದುಗೆದ್ದ ಸಿಂಹನೆನಿಸಿಕೊಂಡು ಪದ್ಮಾವತಿಯ ಕೂಡೆ ಕೃಷ್ಣ 6 ಸೇತುಬಂಧನವನ್ನೆ ಮಾಡಿ ಧೂರ್ತರಾವಣನ್ನ ಕೊಂದುಖ್ಯಾತಿಪಡೆದು ಪುರಕೆ ಬಂದು ಸೀತೆಯೊಡನೆ ರಾಮಚಂದ್ರ 7 ಒಂದು ಏಳು ಎಂಟುಸಾವಿರ ಇಂದುಮುಖಿಯರನ್ನು ಕೂಡಿಮಂದಮಾರುತ ಚಂದ್ರ ಬರಲು ನಂದಗೋಕುಲದ ದೊರೆಯು 8 ಅಂಬರವ ತೊರೆದು ದಿಗಂಬರÀ ವೇಷವನ್ನೆ ಧರಿಸಿಮಂಗಳಾಂಗ ಮಾರಜನಕ ರಂಗನಾಯಕಿಯೊಡನೆ ಕೃಷ್ಣ9 ಅಚ್ಚಮುತ್ತಿನಾಭರಣವಿಟ್ಟು ಲಕ್ಷವಿಲ್ಲದೆ ಹಯವನೇರಿಭಕುತರಿಗೆ ಅಭಯಕೊಡುತ ಭಕ್ತವತ್ಸಲ ಹಯವದನ 10
--------------
ವಾದಿರಾಜ
ಲಾಲಿ ರಘುಕುಲತಿಲಕ ಲಾವಣ್ಯ ಗುಣಧಾಮ ಪ. ವಿನುತ ಲಾಲಿ ಸುಜನರ ಪಾಲ ಅ.ಪ. ಅಸುರ ಕುಲ ಬಾಧಿಸಲು ವಸುದೇವ ಸುತ ರಕ್ಷ ಹಸನಾಗಿ ಪ್ರಾರ್ಥಿಸಲು ನಿನ್ನ ದೇವತೆಗಳಾಗ ವಸುಧೆ ಭಾರವ ಇಳುಹೆ ಶಿಶುವಾಗಿ ದಶರಥಗೆ ದಶ ದಿಗ್ವಲಯ ಬೆಳಗೆ ದಶಮ ಬಲರಾಮ 1 ಶಿವನ ಧನುವನು ಮುರಿಯೆ ಅವನಿಜೆಯು ಹಾರವನು ಜವದಿ ಹಾಕಲು ಪರಶುರಾಮನ ಗರ್ವ ತವಕದಲಿ ಮುರಿದಯೋಧ್ಯೆಯ ಪಾವನ ಮಾಡೆಂ ದವನಿ ಜಾಲವು ಕೂಗೆ ಸವಿಗಾನದಿಂದ 2 ಮಾತೆ ವಾಕ್ಯವ ಕೇಳಿ ಸೀತೆ ಸಹಿತಲೆ ವನಕೆ ಆತ ಲಕ್ಷ್ಮಣನೊಡನೆನೀತನೀ ತೆರಳೆ ದೂತ ರಾವಣನ ಹತವಾತಸುತ ದೂತ ಸಹ ಖ್ಯಾತಿಲಯೋಧ್ಯೆಗೆ ಬಂದ ಶ್ರೀನಾಥ ಶ್ರೀ ಶ್ರೀನಿವಾಸಾ ಲಾಲಿ 3
--------------
ಸರಸ್ವತಿ ಬಾಯಿ
ಲಾವಣಿ ಖೋಡಿಮನಸು ಇದು ಓಡಿ ಹೋಗುತದಬೇಡೆಂದರು ಕೇಳದು ಹರಿಯೆಜೋಡಿಸಿ ಕೈಗಳ ಬೇಡಿಕೊಂಬೆ ದಯಮಾಡಿಹಿಡಿದು ಕೊಡು ನರಹರಿಯೆ ಪ ಗಾಡಿಕಾರ ನಿನ್ನ ಮೋಡಿಯ ಮೂರ್ತಿಯಕೂಡಿಸಿ ಪೂಜಿಸಲಘ ಹರಿಯೆದೂಡುತ ಹೃದಯದ ಗೂಡಿನೊಳಗೆ ಸ್ಥಿರ ಮಾಡಲು ಹದವನು ನಾನರಿಯೆನೋಡಿಂದ್ರಿಯಗಳ ತೀಡಬಲ್ಲೆ ಮನತೀಡುವ ಯತ್ನವು ಬರೆಬರೆಯೆಬೇಡಬೇಡವೆಂದಾಡುವೆನೆ ನಿನ್ನನೋಡುವುದೆಂತೈ ಜಗದೊರೆಯೆಕೋಡಗನಂತಿದು ಕಿಡಿಗೇಡಿ ಜಿಗಿದಾಡಿ ಪೋಗುವುದು ತ್ವರೆಮಾಡಿಕೂಡಿಸದದು ಬಹುಕಾಡಿ ದಿಟಿಸ್ಯಾಡಿ ನೋಡಲದು ಅಡನಾಡಿಕಾಡಿಕಾಡಿ ಬಲು ಪೀಡಿಸುತಿರುವದುಕಾಡುವುದೇನಿದು ಈ ಪರಿಯಾಜೋಡಿಸಿ ಕೈಗಳ 1 ತುಣುಕು ತುಣುಕು ಮನಸು ಇದು ಕ್ಷಣದೊಳು ಹಿಡಿವುದುತಿಣಿಕಿ ತಿಣಿಕಿ ಗಡ ಇದನ್ಹಿಡಿಯೆ ಹೆಣಗಲ್ಯಾತಕೆಂದು ಗೊಣಗುತಿಹರುಜನ ಗುಣ ಗೊತ್ತಿತ್ತಿಲ್ಲಿದೆ ಗುಣ ಖಣಿಯೆಗುಣರಹಿತನೆ ನಿನ್ನ ಗುಣ ನಾಮಂಗಳನೆಣಿಸುತೆ ನಾಲಗೆ ತಾದಣಿಯೆ ಟೊಣೆದು ನಿಮ್ಮನು ಕ್ಷಣಕ್ಷಣಕೊಂದುಕಣಕೆ ಹಾರುವುದು ಸುರಧರಣಿಯೆಇಣಚಿಹಾಂಗೆ ಚಪಲವೋಧಣಿಯೆಅಣಕಿಸಿದ್ಹಾಂಗ ಕುಣಿಕುಣಿಯೆಬಣಗು ಜನರು ನಮಗದು ಹೊಣಿಯೆಒಣ ಮಾತಿದು ಕೇಳ್ ನಿರ್ಗುಣಿಯೆಮಣಿಯದು ದಣಿಯದು ಹಣಿಯದು ತಣಿಯದುಟೊಣಿಯಲು ನಿನ್ನದು ಅದರಣಿಯೆ 2 ಸ್ಪಷ್ಟ ಹೇಳುವೆನು ಚೇಷ್ಟೆಗಳದರದುಯ ಥೇಷ್ಟವಾಗಿ ಕಣಾ ಕಣಾಶಿಷ್ಯರನೆಲ್ಲಾ ಭ್ರಷ್ಟ ಮಾಡುವುದು ದೃಷ್ಟಿ ಇಂದೊಂದೇ ಕಾರಣಎಷ್ಟು ಮಾತ್ರಕಿವರಿಷ್ಟ ನಡೆಸದಿಂದಿಷ್ಟೇ ಇದರದು ಧೋರಣಾಕಷ್ಟದಿ ಹಿಡಿದಿಟ್ಟ ಅಷ್ಟು ಇಂದಿಯಕಿದೆದುಷ್ಟರುಪದೇಶದ ಪ್ರೇರಣಾನಷ್ಟಮಾಡೋ ಈ ಚೇಷ್ಟೆಗುಣ ಸುಪುಷ್ಟ ಮತಿಯ ಕೊಡೊ ಪೂರಣಮುಷ್ಠಿಯೊಳಗಿಸೊ ತನುಹರಣಸೃಷ್ಟಿಸ್ಥಿತಿಲಯ ಕಾರಣಸೃಷ್ಟಿಯೊಳಗೆ ಉತ್ಕøಷ್ಟ ಗದುಗಿನಶ್ರೇಷ್ಠ ವೀರನಾರಾಯಣ 3
--------------
ವೀರನಾರಾಯಣ
ಲಾವಣಿ ಪದ ದೂರ್ ದೂರಲ್ಲ ಕೋಲ್‍ಕಾರ ಕೃಷ್ಣ ಕೇಳು ಬಾಲೆ ದಾರಿಯೋಳ್ ಸುಂಕ ಶೋದಗಳುಂಟೂ ಇದು ಏನ್ ಗಂಟು 1 ಗಂಡನುಳ್ಳ ಬಾಲೆಯರ ದುಂಡಕುಚ ಮುಟ್ಟಲಿಕ್ಕೆ ಪುಂಡತನ ಬುದ್ಧಿಯಿದು ಥರವೇನೋ ಜೀವಯರವೇನೋ ಪುಂಡತನ ಬುದ್ದಿಯಿದು ಥರವೇನೆಂದರೆ ಹೆಂಡತೆಂತ ಮುಟ್ಟಿದಾಗ ಕುಚಯುಗವಾ ಕಾಣದೆ ನಗುವ 2 ಕಾಕು ಮಾತಾಡುತಿದ್ದಿ ಸಾಕು ನಿನ್ನ ಮಾತೀಗ ಸಲುಗೇನೆಂದರೆ ಬೇಕು ಬೇಡಿದ್ದು ನಾ ಕೊಡುತೇನೆ ನಿನ್ನಿಡುತೇನೇ 3 ಕೊಂಡು ಕೊಂಡು ನಡೆಸಲಿಕ್ಕೆ ಶೆಟ್ಟಿಗಾರ ನಾನಲ್ಲ ನೀನಿಟ್ಟುಕೊಂಡ ಸೂಳೆ ನಾನಲ್ಲ ಹೋಗೋ ನೀನಲ್ಲ ಸಾಗೋ ಇಟ್ಟುಕೊಂಡ ಸೂಳೆ ನಾನಲ್ಲ ಹೋಗೆಂದರೆ ಕಟ್ಟಿಕೊಂಡು ಹೋದೇನು ಒಳತನಕಾ ಬೆಳಬೆಳತನಕಾ 4 ಒಳತನಕ್ಯಾತಕೆ ಬೆಳತನಕ್ಯಾತಕೆ ತಾಳಿಯರಿಲ್ಲಾ ಮಾತಿನ ಬೆಡಗಾ ಅಹುದೆಲೊ ಹುಡುಗ ತಿಳಿಯದಿದ್ದರೆ ನಾ ತಿಳಿಯ ಹೇಳಿಕೊಡುವೆನೆಂದು ಸೆಳೆದಪ್ಪಿಕೊಂಡ ಶ್ರೀದವಿಠಲ ಬಹುಬಹು ಧಿಟಲಾ5
--------------
ಶ್ರೀದವಿಠಲರು
ಲೋಕ ನಾಯಕ ಲಕ್ಷ್ಮೀಲೋಲನಾ ಸ್ಮರಣೆ ಬಿಟ್ಟೂ ಪ ವಿದಿ ಮುನ್ನೆ ಬರದಿಷ್ಟಾ ಯಡಿಯಾತಪ್ಪಾದು ತುದಿಮೊದಲಿಂದಾ ಮಾಡಿದ ದೋಷವೆಲ್ಲಾ ಬೆದರಿಸಿದರೆ ಅದು ಬಿಡಲು ಬಲ್ಲುದೆ ಕೇಳೂ ಪಾದ ಭಜನಿಯ ಬಿಟ್ಟು 1 ನಾನಾಪರಿಯ ಮನಸೂ ನಟಿಸುವದಲ್ಲಾದೆ ಏನು ಎಲ್ಲವೂ ವ್ಯರ್ಥಾ ವೇದನೆ ನಿಂದೆ ನೀನು ಮಾಡಿದಾ ಫಲ ನಿನಗುಣಿ ಸದೆ ಬಿಡದೂ ಮಾನವಾಧೀಶನಂಘ್ರಿ ಧ್ಯಾನವೆಂಬುದು ಬಿಟ್ಟು 2 ಸಕಲಕೆ ಕರ್ತನಾಗಿ ಸರ್ವೋತ್ತಮನಿರಲು ಭಕುತಿ ಭಾವನೆಯಿಂದ ಭಜಿಸಾದೆ ನಿ ವಿಕಟಯೋಚನೆಯಿಂದ ಏನುಫಲವು ಇಲ್ಲಾ ನಿಕರ `ಹೊನ್ನೆಯ ವಿಠ್ಠಲನ ' ನಾಮೋಪಾಸನೆ ಬಿಟ್ಟು 3
--------------
ಹೆನ್ನೆರಂಗದಾಸರು
ಲೋಕನೀತಿ 1 ಕಾಮಧೇನು ಕಲ್ಪತರು ಕಾಮಿತಾರ್ಥವನೀವ ಹರಿಯೇ ಎನಗಿರೆ ಎನಗ್ಯಾತಕೆ ಚಿಂತೆ ಕಾಮಿತಾರ್ಥವನೀವ ದೊರೆಯಿರಲು ಯನಗ್ಯಾತರ ಕೊರೆತೆ ಹರಿಕಾವದೇವ ನೀನಿರಲು ಕೋಳಿ ತನ್ನ ಮರಿಗೆ ಹಾಲುಕೊಟ್ಟು ಸಾಕುವದೆ ಕಾಳ ರಾತ್ರಿಯು ಕಳೆದು ಹರಿ ಉದಿಸುವನೆಂದು ಕೋಳಿಕೂಗಿದರೂ ಏಳದೆ ಮಲಗಿ ಕಾಲಕಳೆವರು ಮನುಜರುಹರಿಯೆ ಕಾಲಕೂಟ ಸಮ ಕಾಮಿತಾರ್ಥವ ಬೇಡುವರು ಕಾಲದೂತರು ಬರುವ ವ್ಯಾಳೆತನಕ ನಿನಧ್ಯಾನಿಸದೆ ಕಾಲಕಳೆವರು ಮನುಜರು ಕಾಲಮೂರುತಿ ನೀನೆ ಎಂದರಿಯರು ಹರಿ ಕಾಲ ಅಕಾಲ ನಿನಗುಂಟೆ ಎನಗುಂಟೆ ದೇವ ನೀ ಎನಗೆ ಇಂಥಾ ಕೀಳು ಬುದ್ಧಿಯ ಕೊಡದಿರೊ, ಏಳು ಬೆಟ್ಟದ ಒಡೆಯ ಶ್ರೀ ಶ್ರೀನಿವಾಸ 2 ಬೆಳಗೆದ್ದು ಹರಿ ನಿನ್ನ ಧ್ಯಾನಿಸದೆ ಪರಧ್ಯಾನ ಪರನಿಂದೆಯಲ್ಲಿಹರು ನಿತ್ಯ ನಿನ್ನ ಧ್ಯಾನ ಬಿಟ್ಟು ಬೆಳಗಾಗೆ ನಿನ್ನ ಸೂರ್ಯರಶ್ಮಿ ಬಿದ್ದರೂ ಏಳರು ಶಯನ ಬಿಟ್ಟು ಈ ಜಗದಿ ದೇವ ಈ ಕಲಿ ಜನರು ಇಂಥಾ ಬೆಳಗ ಎನಗೀಯದೆ ನೀ ಎನ್ನೊಳಗಿದ್ದು ಬೆಳಗಿನ ಜಾವದಿ ನಿನ್ನ ಕಳೆಕಳೆರೂಪ ಎನಗೆ ತೋರೋ ಘಳಿರನೆ ಶ್ರೀ ಶ್ರೀನಿವಾಸ 3 ಎರಡನೆ ಜಾವದಲಿ ಹುಂಜ ಹರಿಪೂರ್ವದಲಿ ಬರುವ ಏಳಿರೆಂದು ಕೂಗಲು ಸತಿ ಸಹಿತ ಕಾಮಕೇಳಿಯಲಿಹರು ಮೂರನೆ ಝಾವದಲಿ ಹರಿ ಉದಿಸಿ ಬ್ರಾಹ್ಮೀಮುಹೂರ್ತದೊಳು ಹರಿ ಬೆಳಕೀವ ಲೋಕಕೆ ಎಂದು ಕೂಗುವುದು ಕೋಳಿ ಕೇಳಿ ಕರ್ಣದಲಿ ಶಯನ ಬಿಟ್ಟೇಳರೊ ಈ ಜಗದಿ ಮೂರೆರಡು ಶತಶ್ವಾಸ ಜಪ ಮಾಡಿಸುವ ಹರಿಭಕ್ತ ಹನುಮನೆಂದರಿಯದೆ ಮಲಗಿ ಕಾಲ ಎರಗಿ ಬರುವುದು ಆಯುಷ್ಯವೆಂದರಿಯದೆ ಭಾರತೀಪತಿ ಅಂತರ್ಯಾಮಿ ನಿನ್ನಧ್ಯಾನಿಸದೆ ಇಹರಲ್ಲೋ ಈ ಜಗದಿ ಶ್ರೀ ಶ್ರೀನಿವಾಸ ಎನ್ನ ನೀನವರ ಸಂಗ ಸೇರಿಸದೆ ಕಾಯೊ ಹರಿಯೆ ಎನ್ನ ದೊರೆಯೆ 4 ಸೂರ್ಯನಂತರ್ಯಾಮಿ ನೀನಲದೆ ಮತ್ಯಾರಿಹರು ಹರಿ ಸೂರ್ಯಾಂತರ್ಗತ ಸೂರ್ಯನಾರಾಯಣ ಸೂರ್ಯಕೋಟಿ ತೇಜದಿ ಮೆರೆವೆ ಸೂರ್ಯ ಸಹಸ್ರ ಉದಿಸಿದಂತೆ ಬರುವೆ ಕರ್ಮ ನೀ ಮಾಡಿಸಿ ಪೆರ್ಮೆಯಿಂದವರ ಕಾಯ್ವ ಶರ್ವಾದಿವಂದಿತ ಗರ್ವರಹಿತ ವೈಕುಂಠಪತಿ ನೀ ನಿನ್ನವರ ಕಾಯಲು ಸರ್ವದಾ ಅವರಿಗೆ ವಲಿದು ಕಾವೆ ಆದಿನಾರಾಯಣ ಶ್ರೀ ಶ್ರೀನಿವಾಸ ಕಾಯೆನ್ನ ಸೂರ್ಯಾಂತರ್ಗತ ವೆಂಕಟೇಶಾ 5 ಹಗಲಿರುಳು ಎನ್ನದೆ ನಿನ್ನ ಸ್ತುತಿಪರು ಭಕ್ತರು ಅಘಹರನೆ ನಿನ್ನ ಪ್ರೇರಣೆಯಿಂದಲವರಿರಲು ಬಗೆಬಗೆಯ ರೂಪದಿ ಬಂದವರ ಸಲಹುವೆ ನಗೆ ಮೊಗದ ಶ್ರೀ ರಮೆಯರಸ ಲಕ್ಷ್ಮೀಶ ನಿನ್ನ ಬಗೆ ಅರಿತಿಹರಾರಿರೀಜಗದಿ ಪಗಲಿರುಳೆನ್ನದೆ ನೀನವರಲ್ಲಿದ್ದು ಸಲಹಲು ಬಗೆವರೆ ಅನ್ಯರಿಗೆ ಅಲ್ಪರಿವರೆ ನಿನ್ನವರು ಜಗದಾಖ್ಯ ವೃಕ್ಷನೀನಿರಲು ನಿನ್ನ ಭಕ್ತರು ನಿನಗಲ್ಲದೆ ಜಗದೊಡೆಯ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಲೋಕನೀತಿ ಅಂತರಂಗದ ರೋಗ ಯಾವುದು ಅದುಚಿಂತೆಯಲ್ಲದೆ ಮತ್ತ್ಯಾವುದು ಪ. ಸಂತತ ಶ್ರೀಹರಿನಾಮದಿಂದ್ಹೋಹುದುಅಂತ್ಯಕೊದಗಿತಜಮಿಳನಿಗಿನ್ನಾವುದು ಅ.ಪ. ಶ್ರವಣ ಮನನ ಸಾಧನ ನವವಿಧಭಕ್ತಿಭವಬೇರ ಕಡಿವುದೆಂದರಿಯಬೇಕುರವಿಕುಲಾಂಬುಧಿಸೋಮ ರಾಮನ್ನ ಚಿಂತಿಸಿಭವವಾರಿಧಿಯ ದಾಟುವರೆಲ್ಲರು ಕೇಳಿ 1 ಜರಾಮರಣಾದಿ ದುಃಖಗಳ ಪರಿಹರಿಸಿಪರಿಪರಿಯಾನಂದ ಕೊಡುವುದಿದುಮರೆಯದೆ ಮನದಲಿ ಒಮ್ಮೆ ನೆನೆದು ಪಾಡೆಸರುವಾಭೀಷ್ಟವ ಕೊಡುವುದಿದೊಂದೆವೆ 2 ಭಯಗಳ ಬಿಡಿಸಿ ಅಭಯಗಳ ಕೊಡಿಸುವಭವದೂರ ಗೋವಿಂದನೆಂದರಿತುಹಯವದನನೆ ಎನ್ನ ಉದ್ಧರಿಸೊ ಎಂದುನಯದಿಂದ ಬೇಡುವರ ಭಾಗ್ಯವೆ ಭಾಗ್ಯ 3
--------------
ವಾದಿರಾಜ
ಲೋಕನೀತಿ ಅಧಿಕಾರಿಯಾಗಬೇಕು ಅದಕಾಗಿ ದುಡಿಯಬೇಕು ಪ ಅಧಿಕಾರಿಯಾಗುವುದು ಸುಲಭವಲ್ಲ ಎದೆಚಾಚಿ ಜಗದಿ ಹೆಮ್ಮೆಯ ತೋರುವ ಅ.ಪ ಶಾಶ್ವತವಿರಬೇಕು ಅದನೀಶ್ವರ ಕೊಡಬೇಕು ವಿಶ್ವವಿದ್ಯಾನಿಲಯವ ಸೇರುತಲಿ ಶಶ್ವದಿ ಪರವಿದ್ಯಾಶಾಖೆಯಲಿ 1 ಭೂಷಣವೆನಗೆಂದು ನೀ ಮೋಸ ಹೋಗಬೇಡ ಸಾಸಿರ ಸಾಸಿರ ಸ್ಥಾನಗಳಿಗೆ ನೀ ಆಸೆ ಪಡದೆ ಹರಿಶಾಸನ ಸಭೆಯ 2 ಕಮ್ಮಿಯ ಪ್ರತಿಫಲಕೆ ನೀ ಸಮ್ಮತಿ ಕೊಡದಿರೆಲೊ ಮರ್ಮವರಿತು ಪರಲೋಕವ ಪಡೆಯಲು ಹಮ್ಮನು ಮುರಿಯುವ ಕಾರ್ಮಿಕ ಸಭೆಯ 3 ಕಾಲವರಿತು ಸತತ ನೀ ಮೇಲಕೇಳಬೇಕು ಬಾಲಗೋಪಾಲನು ನೆಲೆಸುವುದಕೆ ಹೃದ ಯಾಲಯ ರಚನೆಯ ಚತುರ ಶಿಲ್ಪಿಯ 4 ಶ್ರವಣ ಮಾಡಬೇಕು ಶಾಸ್ತ್ರವ ಮನನ ಮಾಡಬೇಕು ಶ್ರವಣ ಮನನ ನಿಧಿ ಧ್ಯಾಸನದಿಂದ ಪ್ರ ಸನ್ನ ಹರಿದಯದಿ ಸಿಗುವ ಮುಕುತಿಗೆ 5
--------------
ವಿದ್ಯಾಪ್ರಸನ್ನತೀರ್ಥರು