ಒಟ್ಟು 5751 ಕಡೆಗಳಲ್ಲಿ , 125 ದಾಸರು , 4114 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮ್ಮ ದೈವ ದೇವನೀತನು ಧ್ರುವ ನಮ್ಮ ದೈವ ದೇವನೀತ ನಮ್ಮ ಜೀವ ಪ್ರಾಣದಾತ ನಮ್ಮ ಕಾವ ಕರುಣ ಶ್ರೀದೇವನೀತ ನೋಡಿರೊ 1 ನಿರ್ವಿಕಲ್ಪ ನಿರ್ಗುಣೀತ ನಿರ್ವಿಕಾರ ನಿಷ್ಟ್ರತೀತ ನಿರ್ವಿಶೇಷನಾದ ನಿರಾಳನೀತ ನೋಡಿರೊ 2 ನಿತ್ಯ ಏಕಶ್ಯಾಂತನೀತ ನಿತ್ಯನಿರಂಜನೀತ ನಿತ್ಯನಿಜ ಮಹಿಪತಿಯ ವಸ್ತುಗತಿಯ ನೋಡಿರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನರಕಾಂತಕ ವರದೇವನೆ ಕರುಣಾಕರ ಗೋವಿಂದಾ ಪ ಮರೆವೆಯೇತಕೋ ಲೋಲ ಬಾರೋ ಬಾರೋ ಗಾನಲೋಲ ಅ.ಪ ಪರಿಪರಿಯಾ ಜನುಮಾಂತರ ಸರಣಿಯೊಳಾನು ಜನಿಸಿ ಸೊರಗಿ ಸೊರಗಿ ಮರುಗಿ ತಿರುಗಿದೆ 1 ನೆಲೆಸಲಿಕೆ ಸ್ಥಳವು ಇಲ್ಲವೋ [ಕಲಿ]ಕಾಲಪಾಶ ಬದ್ಧನಾದೆನೊ 2 ಜನುಮಕೋಟಿಯೊಳಾದು ಪೋಪುದು ನಾಮ ಸ್ಮರಣೆಯೊಂದಿರಲೋ 3 ರಾಮದಾಸವಿನುತ ಕೇಶವಾ [ಉದ್ಧರಿಸೋ] ಆವ ಸುಖವು ಬೇಡವೆನಗೆ ಜೀವ ಪೋಗುವಂದು ನಿನ್ನ ಸೇವೆಗೈವ ವರವು ಸಾಕೆಲೈ ಮಾವಿನಕೆರೆಯರಸ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನರದೇಹ ನಿತ್ಯವಲ್ಲ ನಾಳೆ ಮೃತ್ಯು ಬಿಡುವದಲ್ಲ ಪ ಮರುಳುಮನವೆ ಕೇಳು ಸೊಲ್ಲ ಹರಿಯ ಮರೆವುದುಚಿತವಲ್ಲ ಅ.ಪ ಹಿಂದಿನವರು ಪಟ್ಟಪಾಡು ಇಂದು ನೀನು ತಿಳಿದು ನೋಡು ಸಂದೇಹಗಳೀಡಾಡು ಒಂದೇ ಮನದಿ ಹರಿಯ ಕೊಂಡಾಡು 1 ಹರಿ ನಮಗನಾದಿ ಮಿತ್ರ ವರಶೋಭನ ಚಾರಿತ್ರ ಪೊರೆವದೇನು ನಮ್ಮ ಚಿತ್ರ ಕರುಣಿಸುವನು ಕಮಲನೇತ್ರ 2 ಹೊನ್ನು ಹೆಣ್ಣು ಮಣ್ಣು ಮೂರು ನಿನ್ನದೆಂದು ಹಿಗ್ಗದಿರು ಬೆನ್ನು ಹೊಡೆವರು ಯಮನವರು 3 ಏನು ಸುಖವು ಕಾಣಲೇಶ ಜೋಕೆ ಬಿಡುಬಿಡು ದುರಾಶಾ ಬೇಕು ಸುಜನರ ಸಹವಾಸ 4 ಗುರುರಾಮವಿಠಲ ಮುಕುಂದ 5
--------------
ಗುರುರಾಮವಿಠಲ
ನರಸಿಂಗಪುರ ವಾಸ | ಕಯಾಧು ಶಿಶುಪೋಷಕರುಣಾಮಯ ಸುವಪುಷ | ಪರಿಪಾಲಿಸು ಮೇಶ ಪ ಶರಧಿಜೆ ಲಕುಮೀಶ ಮೃತ್ಯುಂಜಯಗೆ ಬಿಂಬಶರಣ ಜನಾಬ್ದಿ ಭೇಶ | ಸರಸಿಜ ಭವಾದೀಶ ಅ.ಪ. ಕೃಷ್ಣಾತೀರ ವಾಸ | ಕೃಷ್ಣೆಯ ಮಾನ ಪೋಷಜಿಷ್ಣು ಸಾಹಸ ಭಾಸ | ವೃಷ್ಣಿ ಕುಲಕೆ ಭೂಷ 1 ಕೋಳ ನೃಹರಿ ಕಾಯಿ 2 ಶುಭ ಕಾಯ ಹೇಮ ಕಶಿಪು ಕಾಯನೇಮದೊಳಗೆ ಶೀಳ್ದ | ಕಾಮಿತ ಫಲಪ್ರದ 3 ಕಾಡುವ ರಕ್ಕಸನ | ಒಡಲ ಶೀಳಲು ಬಾಹುಷೋಡಶ ಧರಿಸಿದ | ಗಾಢ ಕಾರಣವೇನೊ 4 ದರ್ಶದಿನದೊಳಾ | ದರ್ಶ ದಾಸರ ದಿನ ದರ್ಶನ ನೀನಿತ್ತು | ಸ್ಪರ್ಶ ಪೂಜೆಯ ಕೊಂಡೆ5 ಜ್ವಾಲಾ ನೃಕೇಸರಿ | ಹಾಲಾಹಲವು ಭವಜಾಲ ದೊಳ್ಹಾಕದಿರು | ಕೇಳುವೆ ವರ ನಿನ್ನ 6 ಗೋವರ್ಧನೋದ್ದರ | ಗೋವ್ಗಳ ಪಾಲ ಗುರುಗೋವಿಂದ ವಿಠಲನೆ | ಭಾವದೊಳಗೆ ತೋರೊ 7
--------------
ಗುರುಗೋವಿಂದವಿಠಲರು
ನರಸಿಂಹ ಪಾಹಿ ಲಕ್ಷ್ಮೀ ನರಸಿಂಹ ಪ ನರಸಿಂಹ ನಮಿಪೆ ನಾ ನಿನ್ನ ಚಾರುಚರಣಕಮಲಕೆ ನೀ ಎನ್ನ ಕರವ ಪಿಡಿದು ನಿಜ ಶರಣನೆಂದೆನಿಸೊ ಭಾ ಸುರ ಕರಣಾಂಬುಧೆ ಗರುಡವಾಹನ ಲಕ್ಷ್ಮೀ ಅ ತರಳ ಪ್ರಹ್ಲಾದನ್ನ ನುಡಿಯಾ ಕೇಳಿ ತ್ವರಿತದಿ ಬಂದ್ಯೊ ಎನ್ನೊಡೆಯ ನಾನು ಕರುಣಾಳೊ ಭಕ್ತರ ಭಿಡೆಯ ಮೀರ ಲರಿಯೆ ಎಂದೆಂದು ಕೆಂಗಿಡಿಯ ಅಹ ಭರದಿಂದುಗುಳುತ ಬೊಬ್ಬಿರಿದು ಬೆಂಬತ್ತಿಕ ರ್ಬುರ ಕಶ್ಯಪುವಿನ ಹಿಂಗುರುಳ ಪಿಡಿದೆ ಲಕ್ಷ್ಮೀ 1 ಪ್ರಳಯಾಂಬುನಿಧಿ ಘನಘೋಷದಂತೆ ಘುಳಿ ಘುಳಿಸುತಲಿ ಪ್ರದೋಷ ಕಾಲ ತಿಳಿದು ದೈತ್ಯನ ಅತಿರೋಷದಿಂದ ಪ್ಪಳಿಸಿ ಮೇದಿನಿಗೆ ನಿದೋಷ ಅಹ ಸೆಳೆಸೆಳೆಯುತ ಚರ್ಮಸುಲಿದು ಕೆನ್ನೆತ್ತರೋ ಕುಳಿಯನಾಡಿದೆ ದಿಶಾವಳಿಗಳೊಳಗೆ ಲಕ್ಷ್ಮೀ 2 ಕ್ರೂರ ದೈತ್ಯನ ತೋರಗರುಳಾ ತೆಗೆ ದ್ಹಾರ ಮಾಡಿದೆ ನಿಜಕೊರಳ ಕಂಡು ವಾರಿಜಾಸನ ಮುಖದಯರ್ಕಳ ಪುಷ್ಪ ಧಾರಿಗೆರೆದು ವೇಗ ತರಳಾ ಆಹ ಸೂರಿ ಪ್ರಹ್ಲಾದಗೆ ತೋರಿ ತವಾಂಘ್ರಿ ಸ ರೋರುಹಾವನು ಕಾಯ್ದೆ ಕಾರಣ್ಯನಿಧಿ 3 ಜಯಜಯ ದೇವವರೇಣ್ಯ ಮಹ ದ್ಭಯ ನಿವಾರಣನೆ ಅಗಣ್ಯ ಗುಣಾ ಶ್ರಯ ಘೋರ ದುರಿತಾರಣ್ಯ ಧನಂ ಜಯ ಜಗದೇಕ ಶರಣ್ಯ ಅಹ ಲಯವಿವರ್ಜಿತ ಲೋಕ ತ್ರಯ ವ್ಯಾಪ್ತ ನಿಜಭಕ್ತ ಪ್ರಿಯ ಘೋರಮಯ ಹರ ದಯ ಮಾಡೆನ್ನೊಳು ಲಕ್ಷ್ಮೀ 4 ಕುಟಲ ದ್ವೇಷದವನು ನೀನಲ್ಲ ನಿನ್ನಾ ರ್ಭಟಕಂಜಿದರು ಸುರರೆಲ್ಲ ನರ ನಟನೆ ತೋರಿದ್ಯೋ ಲಕ್ಷ್ಮೀನಲ್ಲ ನಾ ಪಾ ಸಟಿ ಕಾಣೆನಪ್ರತಿಮಲ್ಲ ಅಹ ವಟಪತ್ರಶಯನ ಧೂ ರ್ಜಟಿವಂದ್ಯ ಜಗನ್ನಾಥ ವಿಠಲ ಕೃತಾಂಜಲಿಪುಟದಿ ಬೇಡುವೆ ಲಕ್ಷ್ಮೀ5
--------------
ಜಗನ್ನಾಥದಾಸರು
ನರಸಿಂಹಾವತಾರ ಕಮಲ ಸ ಮಾಧಿರೂಢ ಪದಾಬ್ಜ ಪೂರ್ಣ ಸು ಭಂಜನ ಮಾಧವ ಮುರಾರೆ ವ್ಯಾಧಿ ಪೀಡೆಯ ಪರಿಹರಿಸು ಮಹ ದಾದಿ ತತ್ವಯಂತ್ರೆ ನುತ ಪ್ರ ಲ್ಹಾದ ರಕ್ಷಕ ನರಹರಿಯೆ ದಹಿಸಖಿಳ ಶತ್ರುಗಳ 1 ಪ್ರಳಯಕಾಲದ ರವಿ ಸಮೂಹದ ಕಳೆಗು ಮಿಗಿಲಾಗಿರುವ ಮುಖದೊಳ್ ಥಳತಳಿಪ ದಂಷ್ಟ್ರಗಳ ತೋರುತ ಕಳೆದು ವದನವನು ಛಲದಿ ಚೀರುತ ದಾನವನ ಕಂ- ಗಳನು ಮುಚ್ಚಿಸಿ ಪಿಡಿದು ತಿಕ್ಕಿದ ಬಲ ಪಯೋನಿಧಿ ನರಹರಿಯೆ ದಹಿಸಖಿಳ ಶತ್ರುಗಳ 2 ಕಂಭದೊಳಗಂದಾದ ರವ ಕೇ- ದಿವಿಜ ಕ- ದಂಬ ಭಯಗೊಂಡಂಬರದ ಮೇಲಿಂಬುಗೊಂಡಿರಲು ಜಂಭ ವೈರಿಯ ಜರಿದು ಕೆಡಹಿದ ಕುಂಭಿ ಕುಂಭ ಭುಜದ್ವಯನ ಮುರಿ ದಂಬುಜಾಲಯರಮಣ ನರಹರಿ ದಹಿಸಖಿಳ ಶತ್ರುಗಳ 3 ಅಡಿಯಿಡುವ ರಭಸಕೆ ದಿಗಿಭಗಳು ನಡು ನಡುಗಲು ನಿಶಾಮುಖದಿ ಕೆಂ ಗಿಡಿಯನುಗುಳುತಲಾದಿ ದೈತ್ಯನ ಪಿಡಿದು ಖತಿಯಿಂಗ ತೊಡೆಯೊಳಿಕ್ಕೀರೈದು ಖರತರ ಕೊಡಲಿಯಂತಿಹ ನಖಗಳಿಂದ ನೊಡಲ ಬಗೆದಿಹ ನರಹರಿಯೆ ದಹಿಸಖಿಳ ಶತ್ರುಗಳ 4 ವರರಥಾಂಗಾದಿಗಳ ದ್ವಾದಶ ಕರದಿ ಧರಿಸುತಲೆರಡು ಕರದೊ ಳ್ಕರುಳಮಾಲೆಯ ಪಿಡಿದು ಮಿಕ್ಕಾದೆರಡು ಹಸ್ತಗಳ ಬೆರಳ ಕೊನೆಗಳ ತಿರುಹಿ ದಾನವ ಸುರವರನಖ ಮುಖದಿಂದ ಬಿಚ್ಚಿದ ನಿರವಧಿಕ ಬಲಪೂರ್ವ ನರಹರಿ ದಹಿಸಖಿಳ ಶತ್ರುಗಳ 5 ದತ್ತ ಸ್ವಾತಂತ್ರ್ಯವನು ಮೀರ್ದಾ ಪತ್ತು ಘಟಿಸುವ ಕಾಲದಲಿ ಪುರು- ಷೋತ್ತಮನ ನೆನೆದವರ ಕೈಪಿಡಿದೆತ್ತುತಿಹನೆಂದು ನಿತ್ಯ ಶಾಸ್ತ್ರಾದಿಗಳ ಶೋಧಿಸು ತುತ್ತುಮರು ಮೊದಲೆಂದ ಪೌರಾ- ಣೋಕ್ತಿಗಳ ನಿಜದೋರು ನರಹರಿ ದಹಿಸಖಿಳ ಶತ್ರುಗಳ 6 ಶೇಷಶಿಖರನಿವಾಸ ತತ್ಪದ ದಾಸರನು ಕಾಪಾಡಿ ಸಲಹುವ ಭಾಷೆಯನು ನೀ ಮರೆಪರೆ ಮದುಪಾಸ್ಯ ಸರ್ವೇಶ ಈಷದಂಜದ ದ್ವೇಷಿ ದುರ್ಜನ ನಾಶಗೈಸುವುದುಚಿತವೈ ಸವ ಕಾಶವ್ಯಾತಕೆ ನರಹರಿಯೆ ದಹಿಸಖಿಳ ಶತ್ರುಗಳ 7
--------------
ತುಪಾಕಿ ವೆಂಕಟರಮಣಾಚಾರ್ಯ
ನರಹರಿ ದೀನದಯಾಳೊ ನರಹರಿ ಪ ನರಹರಿ ಕಾಯೊ ನೀಯೆನ್ನ | ಮಹಾ ದುರಿತಂಗಳ ಮರಿಯೊ ಮುನ್ನ | ಆಹ ಪರಮ ಭಕುತಿಲಿ ನಿನ್ನ ಚರಣಾರಾಧನೆ ಮಾಳ್ಪೆ ವರಭಯ ಹಸ್ತವೆನ್ನ ಸಿರದಲಿಡುತಲಿ ಅ.ಪ. ಹಿಂದೆ ಪ್ರಹ್ಲಾದದೇವನಂದು | ಪಿತನ ಬಂಧನದೊಳು ಸಿಲ್ಕಿ ಬಹುನೊಂದು | ತಾನು ಸಂಧ್ಯಾಕಾಲದೊಳಾಗ ನಿಂದು ನಿನ್ನ ಒಂದೇ ಮನದಿ ಸ್ತುತಿಸೆ ದಯಸಿಂಧು | ಆಹ ಮಂದಮತಿಯ ಹಿರಣ್ಯಕನುದರವ ಬಗೆದು ಛಂದದಿ ಕರುಳ ಮಾಲೆಯ ಧರಿಸಿದ ಧೀರ 1 ಕಂದು ಕೊರಳನಂತರ್ಗತದೇವ | ಸಕಲ ವೃಂದಾರಕ ವೃಂದವ ಕಾವ | ಭಕುತ ಸಂದಣಿಗೆ ಬೇಡಿದನೀವ | ಭವ ಬಂಧನವೆಂಬ ವಿಪಿನಕೆ ದಾವ | ಆಹ ಎಂದಿಗೆ ನಿನ್ನಯ ಸಂದರುಶನವೀವೆ ಮಂದಮತಿಯಾದೆನ್ನ ಮುಂದಕೆ ಕರೆಯೊ 2 ನೊಂದೆ ಸಂಸಾರದೊಳು ಮಾಲೋಲ | ಕರುಣ ದಿಂದ ನೋಡೆನ್ನ ದೀನಜನಪಾಲ | ದಿವ್ಯ ಸುಂದರ ಮೂರುತಿಯೆ ಗೋಪಾಲ | ಪವನ ವಂದಿತ ಶ್ರೀ ರಂಗೇಶವಿಠಲ | ಆಹ ಬಂದೆನ್ನ ಹೃದಯಮಂದಿರದಿ ನೆಲೆಯಾಗಿ ನೀ ನಿಂದು ಸಲಹೋ ಎನ್ನ ಕುಂದುಗಳೆಣಿಸದೆ 3
--------------
ರಂಗೇಶವಿಠಲದಾಸರು
ನರಹರಿ ಶರಣರಸುರತರು ಶ್ರೀಕರ ಹರಿ ನಿಮ್ಮ ಪಾದಸ್ಮರಣೆ ಮರೆಯಲಾರೆನೆಂದೆಂದು ಪ ಹರಿ ನೀನೆ ಗತಿಯೆಂದು ಮೊರೆಯಿಟ್ಟು ಸ್ಮರಿಪರ ಅರಲವ ಬಿಡದವರ ಸ್ಮರಣೆಯೋಳ್ನೆಲೆಗೊಂಡು ತೆರೆದು ಕರುಣಚಕ್ಷು ಪೊರೆವೆ ಎವೆಯಿಕ್ಕದೆ 1 ವೇದವೇದಾದಿ ನಮಿತ ಸಾಧುಸಜ್ಜನ ವಿನುತ ಪಾದದಾಸರ ಭವಬಾಧೆಗೆಲಿಸಿ ಸು ಹಾದಿ ತೋರಿಸಿ ಬಹು ಮೋದದಿಂ ಸಲಹುವಿ 2 ನೀ ಮಾಡಿದುಪಕಾರ ನಾ ಮರೆಯಲಾರೆ ದೇವ ಈ ಮಹಭವದು:ಖ ಕ್ಷೇಮದಿಂ ಗೆಲಿಸಿದಿ 3
--------------
ರಾಮದಾಸರು
ನರಹರಿಯೆ ಪಾಲಿಸೈ ಪ ನರಹರಿಯೆ ಪಾಲಿಸೈ ಕರಿವರದನೆ ಕಲುಷಾಂತಕವರ ಅ.ಪ ಕರಚರಣಗಳೆರಡರ ಪರಮೊದಗಿರೆ ಹರಿಹರಿ ನಿನಗಿದ ನೊರೆವೆಹುದೊ 1 ಭಜಿಪ ಭಜಕ ನಿಜದ್ವಿಜಗುಣಮಣಿ ಹಯಧ ಸಾರಥಿ 2 ಸಿರಿಧರ ಮುರಹರ ಮುನಿಜನ ಭಯ ಹರ ಕರುಣ ತುಲಸೀರಾಮಾ ಗುರುವೆ ತಾನಾದ 3
--------------
ಚನ್ನಪಟ್ಟಣದ ಅಹೋಬಲದಾಸರು
ನರಹರಿಯೇ ಪಾಲಿಸೋ ಪ ಪರಮ ಪುರಷ ಪ್ರಹ್ಲಾದ ವರದ ಅ.ಪ ಕನಲಿ ಕಂಬದಿಂದವತರಿಸಿದ 1 ನಖದಿ ಉದರವನು ಸೀಳುತಲಿ ಹಿರ- ಣ್ಯಕನ ಕೊಂದು ಕರುಳನು ಧರಿಸಿದ 2 ಗುರುರಾಮ ವಿಠಲ ಕಾಮಿತವರಗಳ ಶರಣಗೆ ನೀಡುತ ಆದರಿಸಿದ 3
--------------
ಗುರುರಾಮವಿಠಲ
ನರಿತಿಹರಾರಿಹರು || ಪರತರಪಾವನನು ಪ ಭಗವದ್ರೂಪನು| ತ್ರಿಗುಣಾತ್ಮಕನು| ಜಗದಾಧಾರಕನು || ಜಗನ್ನಿವಾಸನು| ಜಗದಾನಂದನು| ಜಗದೀಶನು ನೀನು 1 ಜಗನಿಯಾಮಕ | ಜಗದುದ್ಧಾರಕ | ತ್ರಿಜಗವಿರಾಜಿತನು|| ಅಗಣಿತಮಹಿಮನು| ನಿಗಮಗೋಚರ | ತ್ರಿಜಗದ್ವಂದಿತನು2 ಭಕ್ತಾನಂದನು| ಭಕ್ತಾಧೀನನು| ಭಕ್ತಪರಾಯಣನು 3 ಶರಣಾಗತಪರಿ | ಪಾಲಕ | ನೀನು| ಕರುಣಾಸಾಗರನು|| ಪರಬ್ರಹ್ಮನು | ಪರಂಜ್ಯೋತಿಯು | ಪರಮಾತ್ಮನು ನೀನು4 ನಿನ್ನಯ ನಾಮೋ| ಚ್ಚರಿಸಿದ ಪಾಮರ | ಪಾವನನಾಗುವನು|| ನಾಮಾಮೃತವನು | ಸೇವಿಸೆ ಬ್ರಹ್ಮಾ| ನಂದವ ಪೊಂದುವನು5
--------------
ವೆಂಕಟ್‍ರಾವ್
ನಲಿದಾಡಿದಳ್ ನಳಿನಾಂಬಕಿ ಒಲಿದೆಮ್ಮನು ಸಲಹಲೋಸುಗ ಪ. ಸುಲಲಿತ ವೀಣಾಪಾಣಿ ಮಣಿ ಸುಗುಣಿ ಅ.ಪ. ಕೃತೀಶಸುತೆ ಕೃಪಾನ್ವಿತೆ ಶ್ರುತಿಸಮ್ಮತಗೀತೆ ಪ್ರತಿರಹಿತೆ ಸತಿಪೂಜಿತೆ ರತಿಯಾಮಿತ ಶೋಭಿತಳೆ ಧೃತಿ ಸಂಭೃತೆ ಮತಿದಾಯಕಿ 1 ಇಭೇಂದ್ರಗಮೆ ವಿಧುಮಂಡಲ- ನಿಭಮುಖಿ ಶಿಖಿಯಾನೆ ಅಭಯಪ್ರದೆ ಅಖಿಳೇಶ್ವರಿ ಸುಭಜೆ ಶುಭದೆ ವಿಬುಧೆ ಅಭವೆ ಸದ್‍ವಿಭವಾಸ್ಪದೆ 2 ಪರಾಂಬರಿಸು ಪದಾಶ್ರಿತನ ಪ್ರಭಾಕರಶತಾಭೆ ಹರಿ ಲಕ್ಷ್ಮೀನಾರಾಯಣ- ಶರಣೆ ರತುನಾಭರಣೆ ಕರುಣಾರಸವರುಣಾಲಯೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಲಿದೈತಾರೆಂಬೆ ಹೇ ಜಗದಂಬೆ ನಾಂ ಬೇಡಿಕೊಂಬೆ ಪ. ಒಲಿದೈತರೆ ನೀ ನಲವೇರುತ ನಾ ನಲಿದಾರಾಧಿಪೆ ಎನ್ನೊಲಿದಂಬೇ ಅ.ಪ. ಸಿಂಧುನಂದನೆ ಅರವಿಂದನಯನೆ ಇಂದುಸೋದರಿ ಸಿಂಧುರಗಮನೆ ಸುಗುಣಾಭರಣೆ ವಂದಿಪೆ ಶರದಿಂದುವದನೆ ಸುರ ವಂದಿತಚರಣೆ 1 ಅಂದಿಗೆ ಕಾಲುಂಗುರ ಘಲಿರೆನೆ ಇಂದಿರೆ ತವಪದದ್ವಂದ್ವವ ತೋರಿ ವಂದಿಸುವೆನ್ನೀಮಂದಿರ ಮಧ್ಯದಿ ಎಂದೆಂದಿಗು ನೆಲೆಸಿರು ನಂದಿನೀ ಜನನೀ 2 ಕ್ಷೀರಾಂಬುಧಿ ತನಯೆ ಸೌಭಾಗ್ಯದ ನಿಧಿಯೆ ಕ್ಷೀರಾಬ್ಧಿಶಯನನ ಜಾಯೆ ಸಾರಸನಿಲಯೆ ವಂದಿಪೆ ತಾಯೆ ಬಾರೆಂದು ಕೈಪಿಡಿದೆಮ್ಮನು ಕಾಯಿ 3 ಸರಸಿಜಾಸನೆ ಸ್ಮರಮುಖ ಜನನಿಯೆ ಸುರನರಪೂಜಿತೆ ನಾರದ ಗೇಯೆ ಸಾರಗುಣಭರಿತೆ ಸರಸಿಜಪಾಣಿಯೆ ಶ್ರೀರಮಣೀ ಪರಿಪಾಲಿಸು ಜನನಿ 4 ಸೆರಗೊಡ್ಡಿ ಬೇಡುವೆ ಶ್ರೀನಾರೀ ನಿನ್ನೆಡೆ ಸಾರೀ ಪರತರ ಸುಖ ಸಂಪದವನು ಕೋರೀ ಪೊರೆ ಮೈದೋರಿ 5 ಪರಿಪರಿ ವಿಧದಾ ಸಿರಿಸಂಪತ್ತಿಯೋಳ್ ಗುರುದೈವಂಗಳ ಸೇವಾವೃತ್ತಿಯೋಳಿರೆ ಕರುಣಿಸು ದೃಢತರ ಭಕ್ತಿಯನೆಮಗೀಗಳ್ ವರಶೇಷಗಿರೀಶನ ಮಡದಿಯೆ ಮುದದೋಳ್ 6
--------------
ನಂಜನಗೂಡು ತಿರುಮಲಾಂಬಾ
ನಲಿನಲಿದರು ದ್ವಾರಕಾಪುರದಿ ನಳಿನನಾಭ ಶ್ರೀ ರುಕ್ಮಿಣಿ ಕಲ್ಯಾಣದಿ ಪ. ಜಲರುಹಲೋಚನೆ ಚೆಲುವೆ ಶ್ರೀ ರುಕ್ಮಿಣಿ ಸಲಲಿತಾಂಗನ ನೋಡಿ ವಲುವಿನಲಿ ಕುಳಿತಿರೆ ಅ.ಪ. ಅಂಬರದಲಿ ಭೇರಿ ವಾದ್ಯಗಳೆಸಗೆ ತುಂಬುರು ನಾರದರು ಗಾನವ ಪಾಡೆ ಸಂಭ್ರಮದೊಳು ಮಾಂಗಲ್ಯ ಬಂಧನ ಮಾಡೆ ಅಂಬುಜೋದ್ಭವ ರುಕ್ಮಿಣಿ ಕಂಠದೊಳು 1 ವಿಪ್ರರು ವೇದ ಮಂತ್ರವ ಪಠಿಸೆ ಸ್ವ ಪ್ರಕಾಶ ರುಕ್ಮಿಣಿ ಕರಪಿಡಿಯೆ ಕೃಷ್ಣಾ ಅಪ್ರಮೇಯನೆಂದು ಸ್ತುತಿ ಪಾಠಕರು ಪೊಗಳೆ ಕ್ಷಿಪ್ರದಿ ವಿಪ್ರರಿಗೆ ದಕ್ಷಿಣೆ ತಾಂಬೂಲವೀಯೆ 2 ದೇವಕಿ ವಸುದೇವನಿಗ್ಹರುಷವನಿತ್ತು ದೇವ ಶ್ರೀ ಶ್ರೀನಿವಾಸ ಭಕ್ತ ಜನಾಶ್ರಿತ ಕಾವ ಸಕಲ ಜೀವರ ಹೃದಯನಿವಾಸ ದೇವ ಯಶೋದೆ ನಂದ ಕಂದನ ನೋಡಿ 3
--------------
ಸರಸ್ವತಿ ಬಾಯಿ
ನವನೀತ ಚೋರಾ ಪ ಸಹೋದರಿ ಮಾನಸ ಚಕೋರ ಚಂದ್ರ ಚಂದ್ರ ಕುಲಚಂದ್ರ ಚಂದ್ರಮುಖ ಅ.ಪ ಸೂರಿಜನಪ್ರಿಯ ಸುಗುಣನಿಲಯ ಪಾ- ಕಾರಿಗರ್ವಹರ ಕರುಣಾ ಜಲಧೇ1 ಸದ್ವಿಹಾರ ದೇವ ದ್ವಿಜ ಪೋಷಕ 2 ರಾಮಾನುಜ ಭೃಗು ರಾಮತ್ರಿಜಗದಭಿರಾಮಪಾಹಿ ಗುರುರಾಮವಿಠಲ ಜಯ3
--------------
ಗುರುರಾಮವಿಠಲ