ಒಟ್ಟು 3655 ಕಡೆಗಳಲ್ಲಿ , 116 ದಾಸರು , 2523 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೇಲ್ ಮೇಲ್ ಮೇಲ್ ಮೇಲ್ ಹರಿನಾಮ ಮೇಲು ಮೂಜಗಸೂತ್ರ ಹರಿನಾಮ ಪ ಕಾಲಕುಜನಕುಲ ಹರಿನಾಮ ಪಾಲಸುಜನಗಣ ಹರಿನಾಮ ಜಾಲಮಾಯ ದರ್ಪಣ್ಹರಿನಾಮ ವಿಶ್ವ ಹರಿನಾಮ ಅ.ಪ ಶರನಿಧಿಮಂದಿರ ಹರಿನಾಮ ಶರಧಿಮಥನ ಮುರಹರಿನಾಮ ಪುರತ್ರಯಸಂಹರ ಹರಿನಾಮ ಸುರಗಣಭೋಜನ ಹರಿನಾಮ ಶರಣರ ಸಿರಿತಾನ್ಹರಿನಾಮ ಪರತರ ಪಾವನ ಹರಿನಾಮ1 ಶಾಪವಿಮೋಚನ ಹರಿನಾಮ ತಾಪತ್ರಯಗಳ್ಹರ ಹರಿನಾಮ ಗೋಪೇರಾನಂದ ಲೀಲ ಹರಿನಾಮ ಕಪಾಲಧರನುತ ಹರಿನಾಮ ಗೌಪ್ಯಕೆ ಗೌಪ್ಯದ ಹರಿನಾಮ 2 ದುರಿತ ದಾರಿದ್ರ್ಯ ದೂರ್ಹರಿನಾಮ ಪರಿಹರ ಜರಾಮರಣ್ಹರಿನಾಮ ನರನ ಸಿರಿಯ ಭಾಗ್ಯ ಹರಿನಾಮ ಸುರತರು ಹರಿನಾಮ ಅರಿವಿನ ಅರಮನೆ ಹರಿನಾಮ ಪರಕ ಪರಮಸಿರಿ ಹರಿನಾಮ 3 ನಿಜಮತಿ ಭಂಡಾರ ಹರಿನಾಮ ಕುಜಮತಿ ಖಂಡನ ಹರಿನಾಮ ಭಜಕರನಿಜಧೇನ್ಹರಿನಾಮ ಭುಜಗಾದ್ರಿ ಪರ್ಯಂಕ ಹರಿನಾಮ ದ್ವಿಜರಿಗಮೃತನಿಧಿ ಹರಿನಾಮ ಅಜನಿಗುತ್ಪತ್ತಿ ಮಂತ್ರ ಹರಿನಾಮ 4 ವೇದಗಳಾಧಾರ ಹರಿನಾಮ ಸಾಧುಸಂತ ಪ್ರೇಮ ಹರಿನಾಮ ಭೇದವಾದÀರಹಿತ್ಹರಿನಾಮ ಸಾಧಿಸಲಸದಲ ಹರಿನಾಮ ಆದಿ ಅನಾದಿವಸ್ತು ಹರಿನಾಮ ಭೋಧ ಸ್ವಾದಸಾರ ಹರಿನಾಮ 5 ಕಾಲ ಹರಿನಾಮ ಕೀಳರ ಎದೆಶೂಲ್ಹರಿನಾಮ ಶೀಲರ ಜಪಮಾಲ್ಹರಿನಾಮ ಲೋಲಗಾನಪ್ರಿಯ ಹರಿನಾಮ ಕೀಲಿ ವೇದಾಂತದ ಹರಿನಾಮ ಫಾಲನೇತ್ರಗೆ ಶಾಂತಿ ಹರಿನಾಮ 6 ಪ್ರಳಯಕೆ ಅಳುಕದ ಹರಿನಾಮ ಪ್ರಳಯ ಪ್ರಳಯಗೆಲುವ್ಹರಿನಾಮ ಮಲಿನದಿ ಸಿಲುಕದ ಹರಿನಾಮ ಚಲಿಸದ ನಿರ್ಮಲ ಹರಿನಾಮ ಬೆಳಗಿನ ಬೆಳಗೀ ಹರಿನಾಮ ಕುಲಮುನಿ ಪಾವನ ಹರಿನಾಮ 7 ವಿಷಮಸಂಸಾರಖಡ್ಗ ಹರಿನಾಮ ವ್ಯಸನಕಾಷ್ಠಕಗ್ನಿ ಹರಿನಾಮ ವಿಷಕೆ ಮಹದಮೃತ ಹರಿನಾಮ ಮಸಣಿಮಾರಿಧ್ವಂಸ ಹರಿನಾಮ ಅಸಮಸುಖದ ಋಣಿ ಹರಿನಾಮ ವಸುದೇಜೀವಜೀವಳ್ಹರಿನಾಮ8 ಧರ್ಮಶಾಸ್ತ್ರದ ಗುಟ್ಟು ಹರಿನಾಮ ಮರ್ಮ ತಿಳಿಸುವ ರಟ್ಟು ಹರಿನಾಮ ಕರ್ಮ ಕಡಿಯುವ ಶಸ್ತ್ರ ಹರಿನಾಮ ನಿರ್ಮಲಾನಂದ ಪದವೀ ಹರಿನಾಮ ನಿರ್ಮಾಣ ನಿಜಜ್ಞಾನ ಹರಿನಾಮ ಬ್ರಹ್ಮಕಿಟ್ಟಿಗುರಿ ಹರಿನಾಮ 9 ಭವಗುಣಮರ್ದನ ಹರಿನಾಮ ಭವನಿಧಿ ಸೇತುವೆ ಹರಿನಾಮ ಭವನ ಭೀತಿಹರ ಹರಿನಾಮ ರವಿಕುಲ ಪಾವನ ಹರಿನಾಮ ಬುವಿತ್ರಯ ಪವಿತ್ರ ಹರಿನಾಮ ಸಾಯುಜ್ಯಪದಸ್ಥಾನೀ ಹರಿನಾಮ 10 ಸತ್ಯಕ್ಕೆ ಬಹು ನಿರ್ಕು ಹರಿನಾಮ ಮಿಥ್ಯಕ್ಕೆ ಅನರ್ಥ ಹರಿನಾಮ ನಿತ್ಯಕ್ಕೆ ಮಹಸುರ್ತು ಹರಿನಾಮ ಚಿತ್ತಕ್ಕೆ ಚಿಜ್ಜ್ಯೋತಿ ಹರಿನಾಮ ಅರ್ತವರಿಗೆ ಗುರ್ತು ಹರಿನಾಮ ಭೃತ್ಯಜನರ ಮತ್ತು ಹರಿನಾಮ 11 ಮಾಯಕ್ಕೆ ಪ್ರತಿಮಾಯ ಹರಿನಾಮ ಮಾಯ ಕತ್ತಲುನಾಶ ಹರಿನಾಮ ಕಾಯಕ್ಕೆ ಶೋಭಾಯ ಹರಿನಾಮ ಭಾವಕ್ಕೆ ಪರಿಶುದ್ಧ ಹರಿನಾಮ ತಾಯಿತಂದೆ ಜೀವಕ್ಹರಿನಾಮ ಅಮೃತ ಹರಿನಾಮ 12 ಪುಣ್ಯ ಶರಧಿಗೆ ಚಂದ್ರ್ಹರಿನಾಮ ಮನ್ನಣೆ ಮೂಲೋಕದ್ಹರಿನಾಮ ಧನ್ಯರಿಗೆ ಧನ್ಯ ಹರಿನಾಮ ಉನ್ನತ ಸಾಮ್ರಾಜ್ಯ ಹರಿನಾಮ ಮುನ್ನ ಕೈವಲ್ಯಪದ ಹರಿನಾಮ ಸನ್ನಿಧಿ ವೈಕುಂಠ ಹರಿನಾಮ 13 ನಿಗಮಕೆ ಸೊಬಗಿನ ಹರಿನಾಮ ಸುಗುಣರೊಳ್ನೆಲೆಗೊಂಡು ಹರಿನಾಮ ಅಗೋಚರ ಆಗಮಕ್ಹರಿನಾಮ ಸೊಗಸುವ ಭಕ್ತರಲ್ಹರಿನಾಮ ಅಗಜೇಶ ಪೊಗಳುವ ಹರಿನಾಮ ಅಗಜೆಯು ಒಪ್ಪಿದ ಹರಿನಾಮ 14 ವಿಮಲ ಗುಣಗಣ ಹರಿನಾಮ ದಮೆ ದಯಾನ್ವಿತ ಹರಿನಾಮ ಶಮೆ ಶಾಂತಿಮಂದಿರ ಹರಿನಾಮ ಸುಮನಸ ಕಲ್ಪದ್ರುಮ ಹರಿನಾಮ ನಮಿತ ಸುರಾದ್ಯರಖಿಲ ಹರಿನಾಮ ಅಮಿತ ವಿಶ್ವರೂಪ ಹರಿನಾಮ 15 ಮೂರು ಕಾಲದರಿವದ್ಹರಿನಾಮ ಮೂರಾರಿಕ್ಕಡಿಗೈವುದ್ಹರಿನಾಮ ಪಾರಪಂಚ ಪರುಷ್ಹರಿನಾಮ ಸಾರಸೌಖ್ಯಾಂಬುಧಿ ಹರಿನಾಮ ದಾರಿ ವೈಕುಂಠಕ್ಕೆ ಹರಿನಾಮ ಸೇರಿ ದಾಸರನಗಲದ್ಹರಿನಾಮ 16 ಭಕ್ತವತ್ಸಲ ಜಯ ಹರಿನಾಮ ಮುಕ್ತಿದಾಯಕ ಜಯ ಹರಿನಾಮ ಹತ್ತಾವತಾರ ಜಯ ಹರಿನಾಮ ಸತ್ಯ ಶೀಲ ಜಯ ಹರಿನಾಮ ನಿತ್ಯ ನಿರುಪಮ ಜಯ ಹರಿನಾಮ ಕರ್ತು ಶ್ರೀರಾಮ ಜಯ ಹರಿನಾಮ 17
--------------
ರಾಮದಾಸರು
ಮೈಹೋಳು ನೀ ಬಂದು ಮೈಯ ಮರಿಯ ಬ್ಯಾಡವೋ ಮಹಿಮಾನಂದನಂಘ್ರಿಯ ಬಿಡಬ್ಯಾಡವೋ ಧ್ರುವ ಮಾಯಾ ಮೋಹದೊಳು ಸಿಲ್ಕಿ ದೇಹ್ಯ ಭ್ರಮೆಯಗೊಂಡು ಕಾಯ ಸೌಖ್ಯಕೆ ಬಾಯಿದೆರಿಯಬ್ಯಾಡವೋ 1 ಹೊನ್ನು ಹೆಣ್ಣು ಮಣ್ಣಿಗಾಗಿ ಬಣ್ಣ ಪರಿಯಲಿನ್ನು ಕಣ್ಣು ಗೆಟ್ಟು ಕರುಡನಂತೆ ದಣಿಯಬ್ಯಾಡವೋ 2 ನಾನು ನೀನು ಎಂಬ ಭಾವ ಮಹಿಪತಿಗಳೆದು ಭಾನುಕೋಟಿತೇಜನಂಘ್ರಿ ಬೆರೆದು ಮನಕೂಡವೂ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಮೊದಲಿಂದ ನೀ ಕೆಟ್ಟೆ ಮನುಜ ಪ ಬುಧರಾಡುತಿಹ ನುಡಿಯನು ಕೇಳದೆ ಅ.ಪ ಹಗಲಿರುಳು ದುರ್ವಿಷಯದಲಿ ಬಿದ್ದು ಮಿಗೆ ದುರಿತಗಳ ಗಳಿಸಿ ಮುಂದೆ ಯ- ಮಗೆ ನಿರುತ್ತರನಾದೆಯಲೊ 1 ಹೆಣ್ಣು ಹೊನ್ನು ಮಣ್ಣುಗಳ ಬಯ ಸಿನ್ನು ದುರ್ಜನ ಸೇವೆಯಿಂ ಜನ್ಮವ ನಿರರ್ಥಕವ ಗೈಯುತಾ ರಣ್ಯದೊಳಿಹ ಪಿಶಾಚದೋಲ್ 2 ನಿರತವು ಸಜ್ಜನರಡಿಯ ಕಿಂ- ಕರನೆನಿಸಿ ನೀ ಬಾಳೆಲೊ ಕರುಣದಲಿ ಗುರುರಾಮ ವಿಠ್ಠಲ ಕಾಯುವನು ಸಂದೇಹ ಬಿಡು 3
--------------
ಗುರುರಾಮವಿಠಲ
ಮೊರೆ ಕೇಳು ಭಕುತಬಂಧು ಮರೀಬೇಡ ಕರುಣಾಸಿಂಧು ಪ ಮರೆಯಬಿದ್ದು ಸೆರಗನೊಡ್ಡಿ ನಿರುತ ನಿಮ್ಮ ಚರಣ ಭಜಿಪೆ ಶರಣಾಗತರ ವರಪ್ರದಾತ ನಿರುತ ಪರಿಪಾಲಿಸಭವ 1 ಶುದ್ಧ ನಿಮ್ಮ ಭಕ್ತನೆನಿಸೊ ಬದ್ಧನೆನಿಸಿಬೇಡ ದೇವ ಬಿದ್ದು ಬೇಡ್ವೆ ನಿಮ್ಮ ಪದಕೆ ತಿದ್ದಿಕಾಯೋ ಎನ್ನ ತಪ್ಪ 2 ತರಳನ್ಹೊರೆದಿ ಭರದಿ ಬಂದು ನರನ ಕಾಯ್ದಿ ಧುರದಿ ನಿಂದು ಪರಮಸಿದ್ಧಿ ನೀಡು ಈಗ ಚರಣದಾಸಗೆ ವರ ಶ್ರೀರಾಮ 3
--------------
ರಾಮದಾಸರು
ಮೊರೆಯ ಹೊಕ್ಕೆನು ನಿನ್ನಾ | ಚರಣ ಕಮಲಕ ಸಿರಿಪತಿ ಭವರೋಗ ವೈದ್ಯ ನೆಂಬದು ಕೇಳಿ ಪ ಅನ್ಯವಾರ್ತೆಯ ಕೇಳಿ ಕಿವಿಬಧಿರಾಗದೆ ನಿನ್ನ ಕಥಾಶ್ರವಣದ ರಸದೀ ಇನ್ನು ಕೇಳುವ ಪರಿಮಾಡೋ ಅವಿದ್ಯದಾ ಕಣ್ಣಿನ ಪರಿಗೆ ಜ್ಞಾನಾಂಜನವಿಡೋದೇವಾ 1 ವಿಷಯನಂಜಲಿ ತಾಪವೆಡಗೋಂಡದೇಹಕೆ ಅಸಮಸತ್ಸಂಗ ಕಷಾಯಕೊಟ್ಟು ಹುಸಿ ನುಡಿ ಪರನಿಂದೆಯಾಡಿದ ರೋಗದಿ ಹಸಗೆಟ್ಟ ನಾಲಿಗೆ ನಾಮಾಮೃತವ ನೀಡೋ 2 ನಾಸಿಕ ಕೊರಡಾಯಿತಿಭೋಗ ದ್ರವ್ಯದಿ ವಾಸನೆ ಕೊಡು ತುಳಸಿಯಾರ್ಪಿತವಾ ಧ್ಯಾಸತೈಲದಿ ಮನಸಿನ ಕರ್ಮವಾತವಾ ದೋಷಬಿಡಿಸಿ ಕಾಯೋ ಗುರು ಮಹಿಪತಿ ಸ್ವಾಮಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೋಕ್ಷ ಪುಣ್ಯ ಫಲಾ ಮದನ ಗೋವಿಂದನ ಕರುಣವು ಪ ಆಕಾರಾಮೊದಲಾ ದಕ್ಷರದಲಿ ನೇಕಾ ಪರಿಯಲಿ ಕರೆದು ಸುವರ್ತಡದನಿಂದಾದಾ ಆದಿಮುನಿ ಗಣಸಹಿತಾ ಶ್ರೀ ಕರದಿಂದಾಲಾಶ್ರಿತ ಜನ ಪೋಷಕನ ನೀ ಕಾಮನಾದಿ ಪೂಜಿಸಿ ನಿಜಭಕುತಿ ಆಕಾಲದಲ್ಲಿ ಮಾಡಿದವರಿಗೆ ಎಲ್ಲಾ ಮುಕುತಿ ಲೋಕನಾಯಕನನುಗ್ರಹದಿಂದಲೇ 1 ನಾಯಕ ಪೂಜಿತನಾ ಸಾಸಿರನಾಮದ ಸರ್ವೇಶನ ದಾಸೋತ್ತುಮರಾದ ವರಿಗೆಲ್ಲಾ ವಾಸುದೇವಾನು ತನ್ನವರು ಎಂದು ಪಾಲಿಸಿ ಈಸು ಜನರಿಗಿತ್ತಾ ಇಹಪರವು 2 ಅಂದು ಚಂದ್ರಗೆ ಬಂದ ಶಾಪವು ಕಳೆದಾ ಅಜಮಿಳನಂತ್ಯ ಕಾಲಕೆ ಕಾಯ್ದ ಕಂದಾ ಕೂಗಲು ನೇರ ಕಂಭದೊಳಗೆ ಬಂದಾ ಮುಂದಾ ದನುಜನ ಸೀಳಿ ಮಗನಕಾಯ್ದ ಸಿಂಧುಶಯನ ತನ್ನ ಹೊಂದಿದವರನೆಲ್ಲಾ ಬಂಧು ಬಳಗ ಆಗಿಪೊರೆವಂಥಾ ಸ್ಮರಿಸುವ ಶರಣರಿಗೆ 3
--------------
ಹೆನ್ನೆರಂಗದಾಸರು
ಮೋದ ವಿಠಲ | ಪೊರೆ ಇವಳಾ ಪ ದಾನವಾಂತಕ ಕೃಷ್ಣ | ದೀನರುದ್ಧಾರೀ ಅ.ಪ. ದುರಿತಗಳ ಅಟ್ಟಳಿಯ | ಪರಿಹರಿಸಿ ಸಲಹಯ್ಯಕರುಣಾಳು ನರಹರಿಯೆ | ಮರು ತಂತರಾತ್ಮಶರಣಜನ ವತ್ಸಲನೆ | ಅರಿಗಳನೆ ಪರಿಹರಿಸಿಪೊರೆಯ ಬೇಕೀ ಶಿಶುವೆ | ಕಾರುಣ್ಯ ನಿಧಿಯೇ 1 ಪತಿ ಪ್ರಿಯ ಹರಿಯೆಹದ್ದುವಾಹನದೇವ | ಮಧ್ವಾಂತರಾತ್ಮ 2 ಭಾವಶುದ್ದದಿ ನಾಮ | ಓವಿಭಜಿಸುವಂಥಭಾವಭಕ್ತಿಯನಿತ್ತು | ಕಾಯೊ ಶ್ರೀ ಹರಿಯೇಶ್ರೀ ವರನೆ ಸರ್ವತ್ರ | ತವಸ್ಮರಣೆ ಇತ್ತಿವಳನೀವೊಲಿಯ ಬೇಕಯ್ಯ | ದೇವ ಹಯವದನಾ 3 ಬೋಧ ಮೋದ ಮೋದ ನರಹರಿಯೇ 4 ಭಾರ ನಿನದಿಹುದಯ್ಯಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮೋಸಗೊಳ್ಳದಂತೆ ಕಾಯೊ ಶ್ರೀಶ ಕರುಣಾಳೊ ಆಶಾಮಗ್ನಮನವ ಹೃಷೀಕೇಶ ನಿನ್ನ ಪದದಲ್ಲಿರಿಸು ಪ. ಹಾದಿ ಬೀದಿಯಲ್ಲಿ ತಿರುಗಿ ಬಾಧೆಗೊಂಡು ಬಳಲಿ ಕಡೆಗೆ ಬೂದಿಯ ಮೇಲೊರಗಿ ಶಾಂತವಾದ ಶ್ವಾನವದು ಕಾದುಕೊಂಡು ಬಾಗಿಲಲ್ಲಿ ಕಾದಲುದರ ತುಂಬುವುದಕೆ ಸಾದರ ಕೊಂಡನ್ಯದಿ ರಸಾಸ್ವಾದನ ಗೈವಂತಾಗಿಹುದು 1 ಕರ್ಣಧಾರರಹಿತ ನಾವೆ ಅರ್ಣವದಿ ಭ್ರಮಿಸುವಂತೆ ದುರ್ನಿವಾರ ಮನಸಿನಿಂದ ಶೀರ್ಣನಾದೆನು ಸ್ವರ್ಣಗರ್ಭಪಾಲಕನು ಪರ್ಣವರವಾಹನ ಹೃದಯಾ- ಕರ್ಣಿಕಾದರಲ್ಲಿ ನಿಂತು ನಿರ್ಣಯವ ತಿಳಿಸು ಬೇಗ 2 ಆಸೆಗೊಂಡು ದುರ್ವಿಷಯದಿ ಬೇಸರದೆ ಭ್ರಾಂತಿಯಿಂದ ದೋಷ ದುರಿತಂಗಳಿಗವಕಾಶನಾದೆನು ದಾಸನೆಂಬ ದೃಷ್ಟಿಯಿಂದ ಕ್ಲೇಶವೆಲ್ಲ ಓಡಿಸಯ್ಯ ಶೇಷಗಿರಿವರ ಶಿಖರಾವಾಸ ನೀನೆ ಶರಣ ಜೀಯಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮೋಸಹೋದೆವೈ ಸಖಿ _ ವಾಸುದೇವನ ತಿಳಿಯದೆ ಪ ಮೋಸಹೋದೆವೈ ಸಖಿ _ ಮೂಸಿತು ಮನವಮ್ಮ ದೋಷದೂರ ಜಗದೀಶನ ಈ ಲೋಕಶಿಶುವೆಂದರಿಯುತ ಅ.ಪ. ಪುಟ್ಟಿದ ಶಿಶು ಮೊಲೆ ಕೊಟ್ಟವಳಳಿದನೆ ಸುಟ್ಟಾನು ದೈತ್ಯರ ಗೋಷ್ಠಿಗಳೆಲ್ಲವ ಬೆಟ್ಟವನೆತ್ತುತ ವೃಷ್ಟಿಯ ತಡೆದನೆ ಮೆಟ್ಟುತ ಕಾಳಿಯ ತುಷ್ಟಿಯ ನೀಡಿದನೆ ಇಷ್ಟಾದರುನಾವು ತಿಳಿಯದೇ ಸೃಷ್ಟಿಗೊಡೆಯ ಬಹು ದುಷ್ಟನು ಎಂದೇವೆ ಪಟ್ಟೆ ಪೀತಾಂಚರ ಕದ್ದವನೆಂದೇವೇ ಇಟ್ಟನು ಕಣ್ಣನು ನಮ್ಮಲೆಂದೇವೇ ಜೇಷ್ಠ ಶ್ರೇಷ್ಠ ಪರಾತ್ಪರ ಹರಿ ಸಂ- ತುಷ್ಟ ಗುಣಾರ್ಣವ ನಿರುಪಮ ಸುಖಿ ಜಗ- ಚೇಷ್ಟೆಯ ನಡೆಸುವ ಶಿಷ್ಯರ ಧೂರೆ ಪರ- ಮೇಷ್ಠಿಯ ಪಿತ ನೆಂದರಿಯದೆ ಕೃಷ್ಣನಾ 1 ಮೆಲ್ಲನೆ ಬಾಯಲಿ ಲೋಕವ ನೆಲ್ಲವ ತಾಯಿಗೆ ತೋರಿದನೆ ಬಲ್ಲಿದನಿವ ತಾ ಬೆಂಕಿ ಜ್ವಾಲೆಯನುಂಗುತ ತಾಪೊರೆದನೆ ಗೊಲ್ಲರಪತಿ ಮುಳುಗಲು ಪಾತಾಳದಿ ತಂದನೆ ತಂದೆಯನು ಬಾಲರ ಗುಂಪಿಗೆ ಲೋಕಗಳೆಲ್ಲವ ನೀರೋಳು ತೋರಿದನೆ ಮೆದ್ದನು ಎಂದೇವೇ ನಿಲ್ಲದೆ ನಿಶಿಯೊಳು ನಮ್ಮನು ಕೆಡಿಸಿದನೆಂದೇವೆ ಸುಳ್ಳನು ಹೇಳುವ ಜಾಣ ಗೋಪಾಲನು ಎಂದೇವೇ ಸಲ್ಲದ ನುಡಿಗಳ ನಾಡುತ ಕಾಲವ ಕಳೆದೇವೇ ಎಲ್ಲರ ಹೃದಯದಿ ಮತ್ತೆ ಬ್ರಹ್ಮಾಂಡದಿ ಒಳಹೊರ- ನೆಲ್ಲಿಯು ತುಂಬಿಹಏಕನು ಬಲ್ಲನು ಎಲ್ಲವ ಎಲ್ಲವ ಮಾಡುತ ಮಾಡಿಸಿ ಪೊರೆವನು ದೋಷಗಳಿಲ್ಲದ ಸ್ವರತ ರಮಾಧವ ಕೃಷ್ಣನು ಎನ್ನದೇ 2 ತಿಂಗಳ ಬೆಳಕಲಿ ರಂಗನು ಬಂದಾನೇ ಅಂಗಜತಾಪವ ಹರಿಸುವೆನೆಂದಾನೆ ಕಂಗಳಿಗ್ಹಬ್ಬವ ನೀಡುತ ಪೊರೆದಾನೇ ಹಿಂಗದೆ ತನುಮನ ಎಲ್ಲವ ಸೆಳೆದಾನೇ ಮಂಗಳಕಾಯನು ನೀಡಲು ನಮಗಾ ಲಿಂಗನ ಸುಖವನು ಬಹುಮುಡಿ ಆದಾನೇ ಅಂಗವ ಮರೆಸುತ ಮಹದಾನಂದ ತ- ರಂಗದಿ ಒಯ್ಯುತ ಚೆಲುವನು ಕೂಡಿದನೇ ಅಂಗನೆ ಬುದ್ಧಿಲಿ ಇವನನು ತಿಳಿಯದೇ ರಾಗ ವಿಹೀನನ ನಮ್ಮೊಡನಾಡಿಯು ಎಂದೇವೇ ಸಾಗುತ ಬಂದಿಹ ನಮ್ಮಯ ರೂಪಕೆ ಎಂದೇವೇ ನಮ್ಮನು ಕೂಡುತ ಭೋಗವ ಪಡೆಯುವನೆಂದೇವೇ ಗಾಗ್ರ್ಯರು ಮುಂಚೆಯೆ ಪೇಳಿದ ನುಡಿಗಳ ಮರೆತೇವೇ ಭೋಗಿಶಯನ ಜಗದೇಕವೀರ ಸಕಲಾಗಮ ವಂದಿತ ಸಾಗಿಸೆ ದಿತಿಜರ ಕೃಷ್ಣನು ಬಂದಿಹ ದೇವಕಿ ಜಠರದಿ ಬಾಗುತ ಜಯಮುನಿ ವಾಯ್ವಂತರ್ಗತ ಶ್ರೀ ಕೃಷ್ಣವಿಠಲನು ಭಾಗವತgಶ್ರಯ ಪೂರ್ಣಾನಂದನ ಲೀಲೆಯ ತಿಳಿಯದೇ 3
--------------
ಕೃಷ್ಣವಿಠಲದಾಸರು
ಮೋಹನ ನವ ಭವನ ಪರೇಶನ ಪ ದುರಿತ ಭವ ಭಯ ವಿಮೋಚನನ ನೇಹದ ಗೇಹವು ಸಕಲ ಭುವನ ಸನ್ ಅ.ಪ. ಮಣಿ ಸ್ತಂಭಗಳು ಲಲಿತಕಾಂತಿಗಳ ಬೀರುತಲಿರ್ಪ 1 ನಿರುಪಮಾದ್ಭುತ ಶರೀರವಾಂತಿಹ ಉರಗಾಧಿಪನಿರವು ಕಾಣುವ ತ್ರಿಜಗನ್ 2 ಭೋಗಿರಾಜಶಯನೆ ವರಮೇಘಕಾಯನೆನಿಸಿ ಯೋಗಿವಿನುತ ನಿಜ ಲೀಲೆಯ ಪಾರ್ಥನಿ ಗಾಗಿ ತೋರಿಸಿದ ಶ್ರೀ ಕರಿಗಿರೀಶನ 3
--------------
ವರಾವಾಣಿರಾಮರಾಯದಾಸರು
ಯಕ್ಷಿಣೀ ಸರ್ವಲಕ್ಷ್ಮಿಣೀ ರಕ್ಷಿಸು ಮಗನ ಅಪೇಕ್ಷವ ಪೂರೈಸಿ ಪ ಕಂಟಕ ಸಕಲಪೂರ್ಣ ಕರುಣವಿಟ್ಟು ಮಾಡು ಸಫಲ ತ್ರಾಣಿ ಕರುಣದಿ ಬಡತನವಖಿಲ ಜಾಣೆ ಪರಿಹರಿಸಿ ಕೊಡು ಎನಗೆ ಸುಫಲನ ಆಹ ಮೊರೆಯಿಟ್ಟು ಬೇಡುವೆ ಪರಮಪಾವನೆ ಎನ್ನ ಇರವ ತೀರಿಸು ತಾಯಿ ಸರುವ ಸಿದ್ಧಾಂತಳೆ 1 ಮನುಮುನಿಗಳಿಗಾದಿ ಒಲುಮೆ ನೀನು ಘನ ಸಿದ್ಧಿನಿತ್ತು ಸದ್ಧರ್ಮಿ ಜಾಣ ರೆನಿಸಿದಿ ದಯದಿ ಸುಪ್ರೇಮಿ ಮಾಣ ದನುಪಮಮತಿ ನಿಜಮಹಿಮೆ ಆಹ ವನರುಹ ಬ್ರಹ್ಮಾಂಡ ಘನ ಘನ ಎನುವಂಥ ಅನುಪಮಪದದೆನ್ನ ಕನಿಕರದಿಂ ಕಾಯೆ 2 ಸರುವ ಸಿಧ್ದಿಯ ನೀಡಿ ಕರುಣಿ ಎನ್ನ ಸರುವ ಶುದ್ಧವೆನಿಸೆ ಜನನೀ ಪೂರ್ಣೆ ಸರ್ವಜ್ಞೆ ಪಾಲಿಸೆ ನಿಪುಣೆ ವಾಣಿ ಸರ್ವಮಂಗಲಿ ಸುಪ್ರವೀಣೆ ಆಹ ಸರ್ವಶಕ್ತ ಜಗದಾರ್ಯ ಶ್ರೀರಾಮನ ಭಾರ್ಯೆ ಸಕಲ ಐಶ್ಚರ್ಯದಿಂ ಪೊರೆಯೆನ್ನ 3
--------------
ರಾಮದಾಸರು
ಯತಿಗಳು ಶ್ರೀಜಯತೀರ್ಥರು ಕರುಣಿಸೊ ಜಯರಾಯಾ ಗುರುವರ್ಯ ಚರಣವೆ ಗತಿಯಯ್ಯ ಹೇ ಜಿಯಾ ಪ ರಘುನಾಥನ ಪುತ್ರ ಪವಿತ್ರ ರಾಘವನ ಪ್ರೀತಪ್ರಾತ್ರ ಚರಿತ್ರ ಮಘವನಾ ನೀ ನಘದೂರ ಶ್ರೀ ರಘುರಾಮನ ಕಿಂಕರನ ಅಮೋಘ ಸೇವಕನೊ 1 ಕುಕರ್ವಿಣಿಯ ತೀರಾ ಘೋರಕುವಾದಿಗಳ ಕು ಲಕುಠಾರ ಗಂಭೀರ ಸಕಲಶಾಸ್ತ್ರಸತ್ಸಾರ ಟೀಕಕರ ಕುಕವಿಶೃಗಾಲಕುಲಕಾಲಭಯಂಕರ 2 ಎರಗೋಳಾದ್ರಿಯೊಳು ಗುಹೆಯೊಳು ನಿರುತ ಪ್ರವಚನಗಳು ನಿತ್ಯದೊಳು ಮರುತಮತಾಂಬುಧಿಚಂದಿರ ಸುಂದರ ವರಸುಜ್ಞಾನಮಣಿಕಿರಣವ ತೋರಿದೆ 3 ಗುರು ಮಧ್ವಮುನಿ ತತ್ತ್ವಗ್ರಂಥದ ಕ್ಷೀರಶರಧಿಗೆ ಮಂಥಾ ವುನ್ನಂಥಾ ಮರುತನನುಗ್ರಹ ಪ್ರಗ್ರಹದಿಂದಲಿ ವರಮಥನದಿ ಇತ್ತೆ ಅಮೋಘವಸ್ತುಗಳೆಲ್ಲಾ4 ಉತ್ತಮ ಗ್ರಂಥವನಧೀ ಮಥನದಿ ಉತ್ತಮ ವಸ್ತುಗಳನಿತ್ತೆಯೊ ತತ್ತ್ವಪ್ರಕಾಶಿಕಾ ಮಹಾಲಕುಮಿಯು ಚಂದಿರನೇ ಪ್ರಮೇಯದೀಪಿಕಾ ಸುಧೆಯೇ ನ್ಯಾಯಸುಧಾಗ್ರಂಥ ಶ್ರೀ ಕೌಸ್ತುಭದಂತಿಹ ನ್ಯಾಯದೀಪಿಕಾ 5 ದುರುಳ ಮಾಯಾಖಂಡ ನಾಯುಧವೂ ಸರ್ವಜೀಯನೆ ಐರಾವತದಂತೆ ಋ ಗ್ಭಾಷ್ಯಟೀಕಾ ನ್ಯಾಯವಿವರಣವು ಉಚ್ಛೈಶ್ರವಸ್ಸು 6 ಕರ್ಮನಿರ್ಣಯ ಟೀಕಾ ವಜ್ರಾಯುಧ ಆ ಮಹಾಪಾರಿಜಾತ ವಿಖ್ಯಾತಾ ಶ್ರೀಮದ್ವಿಷ್ಣು ತತ್ತ್ವ ನಿರ್ಣಯ ಟೀಕೆಯು ಕಲ್ಪವು ಉಪನಿಷತ್ ಭಾಷ್ಯ ಟೀಕೆಯು 7 ಈಶಾವಾಸ್ಯ ಭಾಷ್ಯ ಟೀಕಾ ಸಂತಾನವೆಂಬೋ ಮಹಾವೃಕ್ಷಾ ಪ್ರ ಬಿಸಜ ಮಂದಾರ ಪ್ರಮಾಣ ಪದ್ಧÀ್ದತಿ ಹರಿಚಂದನಕೆ ಸಮನಾದ ವಾದಾವಳಿ 8 ಪಾಕಶಾಸನಾಂಶಾ ಕರುಣಿಸು ಶ್ರೀಕರಪದಪಾಂಸ ಯತೀಶಾ ನಾರ ಪತಿಯೆ ಶ್ರೀಕಾಗಿನೀ ತೀರದಿ ಏಕಾಂತದಿ ನಿಂದೆ ಲೋಕ ವಂದಿತ ದೇವಾ 9 ಮಂದಭಾಗ್ಯಜನರಾ ಪರಮಾ ನಂದದಿಂದಲಿ ನೋಡಿ ದಯಮಾಡಿ ತಂದೆಯಂದದಿ ಕಾಯ್ದಾನಂದವೀವೆ ನಿತ್ಯಾ10 ಪರಮಪಾತಕಿ ನಾನು ಗುರುವೆ ತವ ಪಾ ದ ರಕ್ಷಕವಚವ ತೊಡಿಸೊ ಉಳಿಸೋ ನಿರುತ ಶರಣರ ಕಾಯ್ವ ಶ್ರೀ ವೆಂಕಟೇಶನ ಪ್ರೀಯಾಉರಗಾದ್ರಿವಾಸವಿಠಲನ ದಾಸಾ 11
--------------
ಉರಗಾದ್ರಿವಾಸವಿಠಲದಾಸರು
ಯತಿಗಳು ಇರುವರ್ಯತಿಗಳ್ಹನ್ನೆರಡು ಮಂದಿ ರಘುವ(ರ) ಅಕ್ಷೋಭ್ಯತೀರ್ಥರ ನಡುವೆ ಕುಳಿತಿದ್ದಂಥ ಟೀಕೆ ಬರೆದ ಜಯ ಮಹರಾಯರಿವರು ಪಾಲಿಸೆನ್ನನು ಜಯರಾಯ ಪ ಎತ್ತಿನ ಜನ್ಮದಿ ಬಂದು ಶ್ರೀಮದಾನಂದತೀರ್ಥರಲ್ಲಿದ್ದು ಶಿಷ್ಯತ್ವ ವಹಿಸಿಕೊಂಡು ಬಿಟ್ಟು ಹರಿದಿನ ಮೇವು ನೀರನೆ ಪುಸ್ತಕದ ಗಂಟ್ಹೊತ್ತು ತಿರುಗುತ ತತ್ವಜ್ಞಾನವ ತಿಳಿದು ದ್ವಾದಶ ಸ್ತೋತ್ರ ಹೇ ಳುತ ಪ್ರಕಟವಾದರು 1 ಗೋವುಸುತನ ಜನ್ಮ ನೀಗಿ ಮಂಗಳವೇಡಿ ಸಾಹುಕಾರನ ಸುತನಾಗಿ ತೇಜಿಯನೇರಿ ಮಾ(ಮಹಾ?) ನದಿ ಮಧ್ಯದಲಿ ಮಂಡಿಬಾಗಿ ನೀರನು ಕುಡಿಯ- ಲಾಕ್ಷಣ ನೋಡಿ ಕರೆತರಲವರ ಗುರುಗಳ ಪಾದಕÀ್ವಂದನೆ ಮಾಡಿ ನಿಂತರು 2 ಅಕ್ಷೋಭ್ಯತೀರ್ಥರು ಆ ಮಹಿಮರ ನೋಡಿ ಕೊಟ್ಟು ಕಾಯ್ಕರದಲಿ ಜುಟ್ಟು ಜನಿವಾರವನು ಕಿತ್ತೆ ಕಾವಿಶಾಟಿಗಳನು ಉಟ್ಟು ದಂಡ ಕಾಷ್ಠವ್ಹಿಡಿದು ಶ್ರೇಷ್ಠಯತಿ ಆಶ್ರಮದಿ ಕುಳಿತಿರೆ ಹೆತ್ತವರು ಹುಡುಕುತ್ತ ಬಂದರು 3 ಕಂಡಕಂಡಂತೆ ಮಾತುಗಳಾಡಿ ಗುರುಗಳಿಗೆ ಧೋಂಡು ರಘುನಾಥನ ಕರಕೊಂಡು ಹಿಂದಕೆ ಹೋಗಿ ಹೆಂಡತಿ ಸಹಿತೆರೆದು ಪ್ರಸ್ತ ಮಂಡಿಗಿ ಮೃಷ್ಟಾನ್ನ ಉಣಿಸಿ ಚೆಂದದ್ವಸ್ತ್ರಾಭರಣ ಕೊಟ್ಟುರುಟಣೆಯ ಮಾಡಿಸ್ಯಾರತಿಯ ಬೆಳಗೋರು 4 ಸುಪ್ಪತ್ತಿಗೆಯು ಮಂಚ ಕುತ್ತಣಿ ಹಾಸಿಕೆಯಲ್ಲಿ ಇಟ್ಟು ತಾಂಬೂಲ ಬು- ಕ್ಕಿ ್ಹಟ್ಟು ಪರಿಮಳ ಗಂಧ ಸಕ್ಕರೆ ಕ್ಷೀರಗಳು ಲಡ್ಡಿಗೆ ಅಚ್ಚಮಲ್ಲಿಗೆ ಮಾಲೆ ಫಲಗಳು ರತ್ನ ಜ್ಯೋತಿ ಪ್ರಕಾಶದೊಳಗುತ್ತಮರು ಕುಳಿತಿರಲರ್ಥಿಯಿಂದಲಿ 5 ಮಡದಿ ಮಂಚಕೆ ಬಂದ ಸಡಗರವನು ನೋಡಿ ಹೆಡೆಯ ತೆಗೆದು ಕಣ್ಣು ಬಿಡುತ ವಿಷನಾಲಿಗೆಯ ಚಾಚುತಾರ್ಭಟಿಸಿ ಬರುತಿರಲ- ಸಾಧ್ಯಸರ್ಪವು ಕಡಿವುದೆನುತೆದೆ ಒಡೆದು ಕೂಗಲು ಹಡೆದವರು ಬಾಯ್ಬಿಡುತ ಬಂದರು 6 ಹಾವಾಗ್ಹರಿದು ಹುತ್ತವ ಸೇರಿಕೊಂಬುವೋದೀಗ ನಾವು ಮಾಡಿದಪರಾಧ ಕ್ಷಮಿಸಬೇಕೆನುತಲಿ ಬೇಡಿಕೊಂಡಾಕ್ಷಣದಿ ಮಗನ ನೋಡಿ ಕರೆತಂದಾಗ ಅಕ್ಷೋಭ್ಯರಾಯರಂಘ್ರಿಚರಣಕೊಪ್ಪಿಸಿ ನಾವು ಧನ್ಯರಾದೆವೆಂದರು 7 ಅತಿ ಬ್ಯಾಗದಿಂದವರಿಗ್ಯತಿ ಆಶ್ರಮವಕೊಟ್ಟು ದೇ- ವತಾ ಪೂಜೆಗಧಿಕಾರ ಮಾಡಲು ಗುರುಗಳು ಪಾಂಡಿತ್ಯದಿ (ಇ)ವರಿಗೆ ಪ್ರತಿಯು ಇಲ್ಲ- ವೆಂದೆನಿಸಿ ಮೆರೆವರು ಪತಿತರನೆ ಪಾವನವ ಮಾಡಿ ಸದ್ಗತಿಯ ಕೊಡುವ ಸಜ್ಜನ ಶಿರೋಮಣಿ 8 ಮಧ್ವರಾಯರು ಮಾಡಿದಂಥ ಗ್ರಂಥಗಳಿಗೆ ತಿದ್ದಿ ಟೀಕೆ ಟಿಪ್ಪಣಿ ಮಾಡಿ ಪದ್ಮನಾಭ ಭೀಮೇಶಕೃಷ್ಣಗೆ ಪರಮ ಭಕ್ತರೆನಿಸಿ ಮೆರೆವರು ವಿದ್ಯಾರಣ್ಯನ ಗರುವ ಮುರಿದು ಪ್ರಸಿದ್ಧರೆನಿಸೋರು ಸರುವ ಲೋಕದಿ 9
--------------
ಹರಪನಹಳ್ಳಿಭೀಮವ್ವ
ಯತಿಗಳು (ಶ್ರೀ ಬ್ರಹ್ಮಣ್ಯತೀರ್ಥರು) ಕೈಪಿಡಿದು ಪಾಲಿಸೈ ಬ್ರಹ್ಮಣ್ಯಗುರುವೇ ಪ ಅಯ್ಯನೀನೆಂದು ನಿನ್ನಡಿಗೆ ವಂದಿಸುವೇ ಅ.ಪ ಮೂಢವiತಿಗಳು ಬಂದು ಬೇಡಿ ಕೊಳ್ಳಲು ಕರುಣ ನೀಡಿ ನಿನ್ನವರನ್ನು ಕಾಯ್ದರೀತಿ ಗಾಢದಿಂದಲಿ ಬಂದು ಮೂಢನಾದೆನ್ನನು ಗೂಢದಿಂದಲಿ ಕಾಯೊ ಗುಣನಿಧಿಯೆ ಗುರುವೇ . . 1 ಪುರುಷೋತ್ತಮಾರ್ಯರ ವರಪುತ್ರನೆಂದೆನಿಸಿ ಹರುಷದಿಂದಲಿ ಬಂದ ಭಕ್ತಜನರ ಮೊರೆಯಲಾಲಿಸಿ ಸ್ವಾಮಿ ಸ್ಮರಣೆಯ ಕೊಟ್ಟೆನ್ನ ಹರುಷಪಡಿಸುವ ಗುರುವು ನೀನೆಂದು ನಾ ಬಂದೆ 2 ವರಕಣ್ವನದಿ ಕೂಲದಲಿ ಕಲ್ಮಷ ತೊಳೆದು ಸಾರ್ವಭೌಮನ ಗುಣವ ಸರ್ವದಾ ಪಾಡುತಲಿ ಸರ್ವಜನರನು ಕಾವೆ ಸರ್ವಕಾಲದಲಿ 3 ಸರ್ವಗುಣ ಪೂರ್ಣ ಬ್ರಹ್ಮಣ್ಯಪುರ ವಾಸ ನರಹರಿಯ ಪಾದವನು ಸ್ಮರಿಸಿನಿತ್ಯ ಸರಸದಲಿ ಅಬ್ಬೂರು ಪುರವಾಸಿಗಳನೆಲ್ಲ ಅರ್ಭಕರ ತೆರನಂತೆ ರಕ್ಷಿಸುವ ಗುರುವರ್ಯ 4 ಮಣಿದು ಬೇಡುವೆ ನಿನ್ನ ಚರಣದಾಶ್ರಯವಿತ್ತು ಅಣುಗನೆಂದೆನಿಸೆನ್ನ ಸಲಹಬೇಕೊ ಗುಣನಿಧಿ ಶ್ರೀ ಪ್ರಾಣನಾಥ ವಿಠ್ಠಲನ ಘನ ಚರಣ ಸ್ಮರಣೆಯ ನೀಯೊ ಗುರುವೆ 5
--------------
ಬಾಗೇಪಲ್ಲಿ ಶೇಷದಾಸರು