ಒಟ್ಟು 3955 ಕಡೆಗಳಲ್ಲಿ , 115 ದಾಸರು , 2389 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗನ ಮೇಲೆ ಚಲುವೆಯರು ಬುಕ್ಕಿಟ್ಟು ಪ. ಸುಂದರೆಯರು ಇಂದಿರೇಶಗೆ ಎರಗಿ ಬಂದು ಪ್ರಾರ್ಥನೆಮಾಡಿ ಆನಂದವ ಸೂಸುತ 1 ಒಪ್ಪ ಹೇಳಿ ಪ್ರಾರ್ಥನೆಮಾಡಿ ಬಹಳ ಉತ್ಸುಕದಿಂದ 2 ಹಸ್ತಗಳ ಮುಗಿದು ಮಾತುಗಳನ್ನಾಡಿದರು3 ಹರದಿ ರುಕ್ಮಿಣಿ ಭಾವೆಗೆ ಎರಗಿ ದ್ರೌಪತಿ ಭದ್ರಾ ಆದರದಿ ಮಾಡಿದರು ಪ್ರಾರ್ಥನೆ ಕರಗಳ ಮುಗಿದು 4 ಚಲುವ ರಾಮೇಶನ ವಲ್ಲಭೆಯರಿಗೆ ಭದ್ರಾಅಲ್ಲೆ ಪ್ರಾರ್ಥನೆ ಮಾಡಿ ಎಲ್ಲರ ಕರೆಯಲು 5
--------------
ಗಲಗಲಿಅವ್ವನವರು
ರಂಗನಂಗದ ಸಂಗ ಸುಖ ನೋಡ ಅಂಗನೆಲಕುಮಿಯ ಸಂಗದುರ್ಲಭವೆಈಅಂಗನೆಯರು ಮಾಡಿದ ಸುಕೃತವಂತೆ ಪ. ಗುಂಗುರಗೂದಲ ಮ್ಯಾಲೆ ಭೃಂಗದ ಮರಿಗಳು ರಂಗನ ಮುಖದ ರಸವನೆರಂಗನ ಮುಖದ ರಸವನೆ ಸÀವಿದುತಮ್ಮಂಗವ ಮರೆತು ಕುಳಿತಾರೆ ಬ್ರಹ್ಮಾದಿ ವಂದ್ಯ1 ಪಂಕಜನಾಭಗೆ ವಂಕಿ ಬಾಪುರಿ ಇಟ್ಟುಕಂಕಣ ಕಡಗ ಮೊದಲಾಗಿಕಂಕಣ ಕಡಗ ಮೊದಲಾಗಿ ರಂಗಗೆಅಲಂಕಾರ ಮಾಡಿ ಕೆಲದೆಯರು2 ಪಂಚಬೆರಳಿಗೆ ತಕ್ಕ ಮಿಂಚು ಮುದ್ರೆಗಳಿಟ್ಟುಪಂಚರತ್ನದಲಿ ರಚಿಸಿದಪಂಚರತ್ನದಲಿ ರಚಿಸಿದ ವಡ್ಯಾಣಕೆಂಚೆಯರು ಇಟ್ಟು ನಡುವಿಗೆ 3 ಶ್ರೀದೇವಿ ಅರಸಗೆ ಕ್ಯಾದಿಗೆ ಮುಡಿಸುತಊದಿನ ಕಡ್ಡಿಪರಿಮಳಊದಿನ ಕಡ್ಡಿಪರಿಮಳ ಮೂಸುತಮೋದ ಬಡುವವರು ಕಡೆಯಿಲ್ಲ4 ನೀಲವರ್ಣನ ಮುಂದೆ ಸಾಲು ದೀವಿಗೆಯಿಟ್ಟುಮ್ಯಾಲೆ ಚಾಮರವ ಸುಳಿಸುತಮ್ಯಾಲೆ ಚಾಮರವ ಸುಳಿಸುತಶಿರಮ್ಯಾಲೆ ಪೂಮಳೆಯ ಗರೆದಾರು 5 ಚಲ್ವ ರಂಗನ ಮುಂದೆ ಜಲಪಾತ್ರೆಯನ್ನಿಟ್ಟುಎಲೆಅಡಕಿ ತಬಕ ಫಲಗಳು ಎಲೆಅಡಕಿ ತಬಕ ಫಲಗಳ ತಂದಿಟ್ಟುಕೆಲದೆಯರು ಕೈಯ ಮುಗಿದಾರು 6 ಅಪಾರ ಮಹಿಮಗೆ ಧೂಪಾರತಿಯನೆತ್ತಿಭೂಪರಾಮೇಶ ಸಲುಹೆಂದುಭೂಪರಾಮೇಶ ಸಲುಹೆಂದುಗೋಪಾಲಕೃಷ್ಣಯ್ಯನ ಎದುರಲಿ ನಿಂತಾರು 7
--------------
ಗಲಗಲಿಅವ್ವನವರು
ರಂಗನಂಘ್ರಿಯಂಗುಷ್ಠೆ ಸಂಗೆ ಭವಭಂಗೆ ಪ ಉಪೇಂದ್ರ ಭಗವಂತ ಪಟುರೂಪ ಧರಿಸಿ ಚಂದ್ರಮಂಡಲ ಮೀರಿ ಬೆಳದಜಾಂಡವನೊಡಿಯೆ ಸಾಂದ್ರಗುಣದಿಂದ ಉದ್ಭವಿಸಿದೆ ಜನನಿ 1 ಕಮಲವನು ತೊಳಿಯಲಾವೇಗದಿಂದ ವಿಮಲಗತಿಯಲಿ ಬಂದು ಮಂದಾಕಿನಿ ಎನಿಸಿ ಸುಮನ ಸಾವನಿಯಲ್ಲಿ ಪರಿದೆ ಸ್ವರ್ಣನದಿಯೇ2 ಧ್ರುವಲೋಕಕಿಳಿದು ಅಮರಾಲಯವ ಸಾರಿದೆ ತವಕದಿಂದಲಿ ಧುಮುಕಿ ಚತುರಭಾಗವಾದೆ ಭವ ಪರಿಹರಿಸಿ ಭಾಗೀರಥಿ ಎನಿಸಿದೆ 3 ಭವದೊರೆ ಭಗೀರಥಗೆ ಒಲಿದು ಬರುತ ಜವನ ಮನಿಯ ಕೊಡ ಮಣಿಕರ್ಣಿಕೆ ನೆರದೆ4 ಅಳಕನಂದನೆ ನಿನ್ನ ಸ್ಮರಣೆ ಮಾಡಿದ ಜನಕೆ ಕುಲಕೋಟಿ ಉದ್ಧಾರ ನಿಃಸಂದೇಹಾ ಮಜ್ಜನ ಪೊಳೆವ ವೈಕುಂಠಪುರ ಅವನ ಹೃದಯದಲಿ5 ಕುಲಪ್ರವಹವಾಗಿದ್ದ ಜೀವರ ಪುಣ್ಯವನು ಹೇಳಿ ಕೇಳುವವನಾರು ಮೂಲೋಕದಿ ಸೀಲಗುಣ ಸಂಪನ್ನೆ ವರುಣನರ್ಧಾಂಗಿನಿ ಕಾಲ ಕಾಲಕೆ ನಿನ್ನ ಧ್ಯಾನದಿಂದಲ್ಲಿರಿಸು 6 ದೇಶದೇಶದಲಿಂದ ಬಂದ ಸುಜನರ ಪಾಪ ಮಾಧವ ಚಲುವ ಶ್ರೀನಿವಾಸ ಯದುಪತಿ ವಿಜಯವಿಠ್ಠಲನ ಸುತೆ ಖ್ಯಾತೇ 7
--------------
ವಿಜಯದಾಸ
ರಂಗನಟ್ಟುಳಿ ಕೇಳಿ ಗೋಪೆಮ್ಮಾ ರಸಗನಾಹಲ ವಂಗದಿಂದ ಕಾಡುವನಮ್ಮಾ ಬಾಲನೇ ಗೊಪಾಲನೇ ಪ ಹಾಲು ಮೊಸರು ಬೆಣ್ಣೆ ಮಾರಲು ಬಂದರಾ ಚಿಕ್ಕ ಬಾಲೆರ ನೋಡುತ ಮೊಗಚಂದಿರಾ ಅವರಾ ಶಾಲೆಯ ಸೆಳೆದು ಸುಮ್ಮನೇ ನಿಂದಿರಾ ಬಟ್ಟ ಮೊಲೆಯನು ಚಂಡು ಕುಡೆಂಬಾ ಮಂದರಾಧರ ಸುಂದರಾ 1 ನಾರೇರಾ ಸೀರೆಯಾ ಕದ್ದಾ ಪುಂಡನೇ ಮರ ನೇಚಾಳಿಸಿ ನುಡಿದ ಪ್ರಚಂಡನೇ ಕೈಯ್ಯ ದೋರಿಯರಡು ಎಂದು ಲಜ್ಜೆಯ ಕೊಂಡನೇ ಬಲು ಭಂಡನೇ 2 ಕಂಸನರಮನೆ ಬಲಗುಂದಿತೇ ನಂದ ನಂಶಕ ವಡೆತನ ಬಂದಿತೇ ಮುರ ದುರುಳ ತನವು ಸಂದಿತೇ ಇನ್ನು ಸಂಶಯಾತಕ ಮಹಿಪತಿ ಸುತ ವಂದಿತೇ ಮನಕ ಬಂದಿತೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಂಗನಾಥ ಪಾಲಿಸೆನ್ನ ಮಂಗಳಾಂಗ ಶ್ರೀಶ ಬೇಗ ಪ ನಿನ್ನ ಭಜನೆಯನ್ನು ಗೈವೆ ಪನ್ನಗಾರಿವಾಹ ಹರೆ ಸ್ವರ್ಣವಸನ ಭೂಷಿತಾಂಗ ಸನ್ನುತಾಂಗ ಧೀರಶೂರ 1 ದುಷ್ಟರನ್ನು ಶಿಕ್ಷಿಸುತ್ತ ಸೃಷ್ಟಿಗೊಡೆಯನೆನಿಸಿ ನೀನು ಇಷ್ಟ ವರಗಳನ್ನು ಕೊಟ್ಟು ಶ್ರೇಷ್ಟನೆನಿಸು ನಂಬಿದೆನು 2 ಕಾಮಿತಾರ್ಥ ಫಲಗಳೀವ ಕಾಮ ಜನಕ ದೇವನೆ ಧೇನುನಗರದಲ್ಲಿ ನೆಲಸಿ ನೇಮದಿಂದ ಪೂಜೆಗೊಂಬೆ 3
--------------
ಬೇಟೆರಾಯ ದೀಕ್ಷಿತರು
ರಂಗನಾಥ ಮಾಂ ಗಂಗಾಜನಕ ತುಂಗ ಮಹಿಮ ಮಂಗಳಾಂಗ ಪಾಹಿ ಪ ತಿಂಗಳ ತೇಜದಲಿ ಪೊಳೆಯುತ ಕಂಗೊಳಿಸುವ ಮುಕುಟ ಮಂಡಿತ ಬಂಗಾರದಾಭರಣ ಭೂಷಿತ ಶೃಂಗಾರದಿ ರಥವನೇರುತ ಮಂಗಳ ವಾದ್ಯಂಗಳುಲಿಯೆ ರಂಗನಾಥ ಪ್ರತಿವರ್ಷದಿ ತುಂಗಛತ್ರ ಚಾಮರ ವ್ಯಜ- ನಂಗಳ ವಿಭವದಿ ಬರುತಿರೆ ಕಂಗಳಿಂದ ನೋಳ್ಪ ಭಕ್ತ ಜಂಗುಳಿ ಪಾಲಿಸಲೋಸುಗ ಮಂಗಳಸಿರಿ ಜಾಲಹಳ್ಳಿ ಪುರನಿಲಯ ಪೊರೆ ಎನ್ನ1 ಹಿಂದಕೆ ಮುದಗಲ್ಲು ಪುರದಿ ಬಂದಿಹ ಉಪ್ಪಾರ ಜನದಿ ಬಂದು ಗೋಣಿಯೊಳಗೆ ಮುದದಿ ನಿಂದಿಯೊ ಪದಮೆಟ್ಟೆ ಬೆಟ್ಟದಿ ಅಂದಿನ ರಾತಿಯ ಸ್ವಪ್ನದಿ ಸಂದರ್ಶನವಿತ್ತು ಪುರದಿ ಮಂದಿರಕಾರ್ಯವ ಸೂಚಿಸ- ಲಂದು ರಾಯಗೌಡನಿಂದ ಬಂಧುರದಲಿ ನಿರ್ಮಿತ ಆ- ನಂದನಿಲಯ ಮಂದಿರ ಮು ಕುಂದನಂದ ಕಂದನೆ ಮದ್ ಹೃದಯದಲಿ ಸದಾತೋರೋ2 ವಾರಿಚರ ಮಂದರಧರ ಭೂ ಚೋರಮಥನ ಘೋರರೂಪನೆ ಚಾರು ಬ್ರಹ್ಮಚಾರಿ ವಾಮನ ಶೂರ ಪರಶುರಾಮನೆ ನಮೊ ಧಾರುಣಿ ಜಾವಲ್ಲಭ ಕಂ- ಸಾರಿ ವಸನದೂರನೆ ಹಯ ವೇರಿ ದುಷ್ಟ ದಿತಿಜರ ಭಯ ದೂರ ಮಾಡಿ ಕಾವದೇವ ಧಾರುಣಿಸುರ ಪರಿಪಾಲಕ ವಾರಿಜಭವ ನುತ ಕಾರ್ಪರಾ- ಗಾರವೀರ ನಾರಸಿಂಹ ನಮಿಸುವೆನು ರಮಾರಮಣ3
--------------
ಕಾರ್ಪರ ನರಹರಿದಾಸರು
ರಂಗನಾಥನ ನೋಡುವ ಬನ್ನಿ ಶ್ರೀ- ಪ ರಂಗನ ದಿವ್ಯ ವಿಮಾನದಲ್ಲಿಹನಅ.ಪ. ಕಮನೀಯಗಾತ್ರನ ಕರುಣಾಂತರಂಗನಕಾಮಿತಾರ್ಥವೀವ ಕಲ್ಪವೃಕ್ಷನಕಮಲದಳನೇತ್ರನ ಕಸ್ತೂರಿ ರಂಗನಕಾಮಧೇನು ಕಾವೇರಿ ರಂಗನ1 ವಾಸುಕಿಶಯನನ ವಾರಿಧಿನಿಲಯನವಾಸುದೇವ ವಾರಿಜನಾಭನವಾಸವಾದಿ ಭಕ್ತ ಹೃದಯಾಂಬುಜದಲ್ಲಿವಾಸವಾಗಿರುತಿಹ ವಸುದೇವಸುತನ2 ಮಂಗಳಗಾತ್ರನ ಮಂಜುಳಭಾಷನಗಂಗಾಜನಕ ಅಜಜನಕನಸಂಗೀತಲೋಲನ ಸಾಧುಸಮ್ಮತನರಂಗವಿಠಲ ರಾಜೀವನೇತ್ರನ 3
--------------
ಶ್ರೀಪಾದರಾಜರು
ರಂಗನಾಥನೆ ನೀಲಘನಂಗ ದೇವರದೇವ ಗು-ಣಂಗಳ ಖಣಿಯೆ ನಿನ್ನ ಪದಂಗಳು ಗತಿಯೆಮಗೆ ಪ. ಉಭಯಕಾವೇರಿ ಮಧ್ಯದಲಭಯನೀವುತ ಪವಡಿಸಿದಬುಜಲೋಚನನೆ ನಿನ್ನ ವಿಭವಕ್ಕೆ ನಮೋಯೆಂಬೆ 1 ದೋಷದೂರನೆ ಭೂಮಿಗೆ ಭೂಮೋಹನನೆ ರಂಗಶ್ರೀಶ ನಿನ್ನ ನಂಬಿದೆ ಶೇಷÀಶಯನ ಕಾಯೊ 2 ಚೆಲುವ ನಿನ್ನನು ಪೋಲುವರಿಲ್ಲ ಮೂಜಗದೊಳು ಲಕುಮಿಯನಲ್ಲ ನಿನ್ನನು ಬಣ್ಣಿಸಲಳವಲ್ಲವೋ ಹಯವದನ 3
--------------
ವಾದಿರಾಜ
ರಂಗನಾಥನ್ನ ಈ ಕಂಗಳಿಂದಲಿ ಕಂಡು ಹಿಂಡು ಪ. ಮಂಗಳಾತ್ಮಕ ದೇವ ಮಮ ಸ್ವಾಮಿ ಸಲಹೆಂದು ಅಂಘ್ರಿಗಳಿಗೆರಗಿ ನುತಿಪೇ ಸ್ತುತಿಪೇ ಅ. ಮಾಂಡವ್ಯರಿಗೆ ವಲಿದು ಶ್ರೀನಿಕೇತನ ದೇವ ಗಂಡಕೀಶಿಲೆ ರೂಪದಲ್ಲಿ ಅಂಡಜವಾಹನನು ಉದ್ಭವಿಸಿ ಸ್ವರ್ಣಾದ್ರಿ ಎಂಬ ಸುಕ್ಷೇತ್ರದಲ್ಲೀ ಹಿಂಡುಭಕ್ತರ ಸೇವೆ ಕೈಯಕೊಳುತ ಬದಿಯಲ್ಲಿ ನಿಂದು ವಿಗ್ರಹ ರೂಪದಲ್ಲೀ ಕಂಡು ಪುಳಕಾಂಕಿತದಿ ಕರುಣ ಮೂರ್ತಿಯ ನುತಿಸಿ ಕೊಂಡಾಡಿ ದಣಿದೆ ನಿಂದೂ ಇಂದೂ 1 ಶಂಖಚಕ್ರಾಂಕಿತದ ಚತುರ್ಭಜವು ಶ್ರೀವತ್ಸ ಪಂಕಜಾಕ್ಷಿಯರುಭಯದಿ ಶಂಕೆಯಿಲ್ಲದ ಭಕ್ತರಿಗೆ ವಲಿವ ಸೌಂದರ್ಯಾ ಲಂಕಾರ ಉಡಿಗೆ ಮುದದಿ ಪಂಕಜಾಸನ ಮುಖ್ಯದಿವಿಜಗಣ ಸೇವಿತನು ಕಿಂಕರರಿಗೊಲಿವ ದಯದೀ ವಂಖಿ ಬಾಪುರಿ ತೋಳು ಕಡಗ ಕಾಲ್ಗೆಜ್ಜೆಗಳು ಕಂಕಣ ಕಿರೀಟ ನಿಟ್ಟಾ ದಿಟ್ಟಾ 2 ಆಗಮವ ಅಜಗಿತ್ತು ಸುರರಿಗಮೃತವಿತ್ತು ಭೂದೇವಿ ಭಯ ಬಿಡಿಸಿದಾ ಬೇಗ ಕಂಬದಿ ಬಂದು ಮಗುವ ರಕ್ಷಿಸಿ ಬಲಿಯ ಯಾಗದಲ್ಲಿ ಭೂ ಬೇಡಿದಾ ನೀಗಿ ಕ್ಷತ್ರಿಯ ಕುಲ ದಶಶಿರಿನ ಸಂಹರಿಸಿ ಮಾಗಧನ ಬಲವ ಮುರಿದಾ ಅಂಬರ ಕಲ್ಕಿ ಗೋಪಾಲಕೃಷ್ಣವಿಠಲಾ ಮಾಗಡಿ ತಿರುಮಲೇಶಾ ಶ್ರೀಶಾ 3
--------------
ಅಂಬಾಬಾಯಿ
ರಂಗನಾಥಾ ಅಂಗಜಾಪಿತಾ [ಮಾ] ವಂದಿತ ಪ ಜಗದಾದಿ ಮೂಲಕಾರಣ ನಗಧರಾಘ ನಿವಾರಣ ಖಗನುತಾ ಭಕ್ತಕಂಕಣ 1 ದೀನಪಾಲ ಸ್ವರ್ಣಮೇಖಲಾ | ಗಾನಲೋಲಾನುಪಮಲೀಲಾ ಕರುಣಾಲವಾಲ 2 ತಾಮಸನಿಕರಮಾನಿತಾ ಶ್ಯಾಮಲಾಂಗಾ ಪೊರೆ ಶ್ರೀಯುತಾ ರಾಮದಾಸಾರ್ಚಿತ [ಮಾಂಗಿರೀಶ] 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಂಗನಾಯಕ----ತ್ತುಂಗನಾದ ಧೊರಿಯೆ ಪ ಮೂರುತಿ ಮಹಾಮಹಿಮನಾದ ಅಂಗಜ ಜನಕ ಕೃಪಾಂಗ ದೇವೋತ್ತುಂಗ ಅ.ಪ ಸಿಂಧು ಶಯನ ದೇವ ಭಕುತರ ಬಂಧು ಮಹಾನುಭಾವ ಇಂದಿರಾ ಹೃದಯ ಧೀರಾ ಈ ಜನರಿಗಾನಂದನಾಗಿ ತೋರಾ ಮಂದರಧರ ಮುಕುಂದ ಮಾಧವ ಸುಜನ ಪೋಷಕ ಕಂದನ ಸಲಹಿದ ಕರುಣಸಾಗರ ಇಂದು ನಿಮ್ಮ ಚರಣ ದ್ವಂದ್ವಗಳ ತೋರು 1 ವೆಂಕಟಗಿರಿವಾಸ--- ಕಿಂಕರ ನಾ ಅಣುದಾಸ ಶಂಕೆಯಿಲ್ಲದ ದೋಷಾ ಮಾಡಿದಂಥ---- ಸಂಕಟಗಳೆಂಬೀ---- ಕರಗಳೆನ್ನ ಇರಲೂ ಕೊಂಕುಗಳ ಪರಿಹರಿಸ ----ದರ ಪರಮಪಾವನಾ 2 ವೇಣುಗಾನ ವಿನೋದಾ ನೀಹಿತ--ಮೂಲನಾದ ಶ್ರೀನಿವಾಸ ಗೋವಿಂದಾ ಶ್ರೀತಜನ ರಕ್ಷಣಾನಂದ ನಿಲಯನಾದ ಭಾನುಕೋಟಿ ಪ್ರಕಾಶದೇವ---- ಸೂಸುತಿರುವ ದಾನವಾಂತಕ 'ಹೆನ್ನೆ ವಿಠ್ಠಲ’ ಧೇನುರಕ್ಷಕ ದೀನಪೋಷಕ 3
--------------
ಹೆನ್ನೆರಂಗದಾಸರು
ರಂಗನಾಯಕಿಗಾರತೀ ಅಂಗನೆಯರು ಬೆಳಗಿರೆ ಅಂಗಜನಜನನಿಗೆ ಮಂಗಳಗಾತ್ರೆಗೆ ಮಂಗಳವೆನ್ನಿರೆ ಪ. ಪ್ರೇಮಮಯ ಸ್ವರೂಪೆಗೆ ರಾಮಣೀಯಕ ಮೂರ್ತಿಗೆ ಪ್ರೇಮತಳೆದಾಮೋದದಿಂ ಕಾಮಿತವೀಯೆನುತಾ ನಮಿಸುತ 1 ಮಾತೆಯೇ ಪರದೈವವು ನೀತಿತಾನಿದು ಸತ್ಯವು ವಾತಾತ್ಮಜ ಸಂಸೇವಿತೆ ಸೀತೆಯ ಜಗನ್ಮಾತೆಯೆನ್ನುತ 2 ಕಾಂತ ಶೇಷಗಿರೀಶನ ಅಂತರಂಗದ ದಯೆಯೆನೆ ಇಂತೆಮ್ಮ ಸುಸ್ವಾಂತರ್ಕಳೆಂದಂತೆಸಗುವಂತ ಶ್ರೀಕಾಂತೆಯೆ ತಾನೆನೆ3
--------------
ನಂಜನಗೂಡು ತಿರುಮಲಾಂಬಾ
ರಂಗನೆ ಬಾ ಮನಮಂದಿರಕೆ ಶೃಂಗಾರದ ಶ್ರೀ ಹರಿ ಶೌರೇ ಪ ನಗುತ ನಗುತ ಬಾ ಖಗವಾಹನ ಹರಿ ಬಗೆ ಬಗೆ ಕ್ರೀಡೆಗಳ ತೋರುತಲಿ ಝಗ ಝಗಿಸುವ ಪೀತಾಂಬರಧಾರಿಯೆ ಅಗಣಿತ ಗುಣನಿಧಿ ಬಾ ಹರಿಯೆ 1 ಪಕ್ಷಿವಾಹನ ಪುರುಷೋತ್ತಮ ಶ್ರೀಹರಿ ರಕ್ಷಿಸಿ ಕಾಪಾಡುವ ಜಗವ ಕುಕ್ಷಿಯೊಳಡಗಿಸಿ ಸಲಹುವ ಸುಜನರ ರಕ್ಷಿಸಿ ಪೊರೆಯಲು ಬಾ ಹರಿಯೆ 2 ಪೊಂಗೊಳಲೂದುತ ಮಂಗಳ ಚರಿತ ಹೃ- ದಂಗಳದೊಳು ನಲಿದಾಡುತಲಿ ಅಂಗಜಜನಕ ಗೋಪಾಂಗನೆ ಲೋಲ ಶ್ರೀ- ಮಂಗಳ ಮೂರುತಿ ಬಾ ಹರಿಯೆ 3 ಗಂಗಾಜನಕಗೆ ಭೃಂಗಕುಂತಳೆಯರು ರಂಗು ಮಾಣಿಕದಾರತಿ ಬೆಳಗೆ ಪೈಂಗಳನಾಮ ಸಂವತ್ಸರದಲಿ ಭವ ಭಂಗವ ಮಾಡಲು ಬಾ ಹರಿಯೆ 4 ಭ್ರಮರ ಕುಂತಳೆಯರು ಘಮಘಮಿಸುವ ಸುಮಮಾಲೆಗಳ ಕಮಲನಾಭ ವಿಠ್ಠಲಗರ್ಪಿಸುವರು ಶ್ರಮ ಪರಿಹರಿಸಲು ಬಾ ಹರಿಯೆ 5
--------------
ನಿಡಗುರುಕಿ ಜೀವೂಬಾಯಿ
ರಂಗನ್ಯಾಕೆ ಬಾರ ತಂಗಿ ಮಂಗಳ ಮಹಿಮನ ದಿವ್ಯಾಂಗವ ಕಾಣದೆ ಎನ್ನಕಂಗಳು ಕಂಗೆಡುತಿವೆಪ. ರಂಗುಮಾಣಿಕದುಂಗುರದಂಗುಲಿಯ ಸನ್ನೆಯಿಂದಪೊಂಗೊಳಲೂದುವನ ತೋರೆ ರಮಣಿ ಅ.ಪ. ತಿಂಗಳು ಮೂಡಿತು ಪಿಕ ಸಂಗೀತವ ತೊಡಗಿತುಭೃಂಗ ತನ್ನಂಗನೆಯರ ಸಂಗಡ ನಲಿದು ಬಂದಶೃಂಗಾರವನದ ಮೃದು ತಂಗಾಳಿ ಬೀಸಿತು ನೋಡಾ-ನಂಗ ನೆಚ್ಚ ಬಾಣಗಳೆಂತೊ ಅಂತರಂಗವ ತಾಕಿದರೆನ್ನ ಇಂಗಿತವರಿತು ದೇವೋ-ತ್ತುಂಗ ಕಾಯದಿರೆ ಉಳಿವಂಗನ ನಾಕಾಣೆ ನಮ್ಮಪೆಂಗಳಿಗೆ ಬಂದ ಬಲುಭಂಗ ತನ್ನದಲ್ಲವೆ ಸಾ-ರಂಗಾಕ್ಷಿ ಬೇಗವನ ತೋರೆ ರಮಣಿ 1 ಕೌಸ್ತುಭ ರತ್ನಕರ್ಣಕುಂಡಲಸರಸಿಜಮುಖದಿ ಕಸ್ತೂರಿ ತಿಲಕವೆಸೆಯೆಪರಿಮಳಿಸುವ ಪೂಮಾಲೆಮೆರೆಯೆ ಪೊಳೆವ ಪೀತಾಂಬರದ ಸುತ್ತಲೊಲೆವಕಿರುಗೆಜ್ಜೆ ಮಣಿಮಯಕಾಂತಿ ಮಿಂಚುತಿರಲುಚರಣನೂಪುರ ಘಲುಘಲುಕೆನೆ ಕುಣಿವÀ ಶ್ರೀಹರಿಯನು ಕರೆದುತಾರೆ ರಮಣಿ 2 ಮಂದಜಾಸನನ ತಂದೆಯೆಂದೆನಿಪ ಗೋವಿಂದನಕಂದರ್ಪ ವೃಂದಾದಿಗಳ ಕಂದಿಸುವ ಕುಂದಿಲ್ಲದಸೌಂದರ್ಯಸಂದೋಹದೊಳಗೊಂದೊಂದನಾರು ಬಲ್ಲರುಎಂದೆಂದಿವನನು ಪೊಂದಿಪ್ಪಇಂದಿರೆ ಇವನ ಗುಣಸಾಂದ್ರ ಕಿರುಬೆರಳಿನಂದವನೋಡುತ್ತ ಆನಂದಸಿಂಧುವಿನೊಳ್ಮುಣುಗಿದಳಿಂದು ಹಯವದನ ಮುಕುಂದನ ತಂದೆನ್ನ ಮುಂದೆಇಂದುಮುಖಿ ಕರೆದುತಾರೆ ರಮಣಿ3
--------------
ವಾದಿರಾಜ
ರಂಗನ್ಯಾಕೆ ಮಮತೆಕೊಟ್ಟು ದಣಿಸುವಿಕೃಷ್ಣ ನೀ ಕರುಣದಿ ಪಾಲಿಸೊ ಪ. ತನುವು ತನ್ನದು ಅಲ್ಲ ....ತನುವಿನ ಸಂಬಂಧಿಗಳೆಂಬೊ ಅವರ್ಯಾರೊನಾನ್ಯಾರೊ ಅವರಿಗೆ ಧನ ಮೊದಲಾದ ವಿಷಯಂಗಳಅನುಭವ ಹಿಂದಿನ ದೇಹದಂತರ ಅರಿಯೆವೊ 1 ನಿನ್ನ ಹಂಬಲಿಸದೆ ಅನ್ಯ ವಿಷಯಗಳಿಗೆನ್ನನೊಪ್ಪಿಸುವದು ನೀತವೆಮನ್ನಿಸಿ ದಯದಿ ನೀ ಯನ್ನ ಪಾಲಿಸಲು ನಾನಿನ್ನ ನೇಮಕೆ ಪ್ರತಿಕೂಲನೆ 2 ಇಂದ್ರಿಯಂಗಳು ವಿಷಯಂಗಳಿಗೆಳೆಯೆ ಗೋ-ವಿಂದಯೆನ್ನ ವಶಕೆ ಬಾರದುಇಂದಿರೆಯರಸ ಬ್ರಹ್ಮೇಂದ್ರವಂದಿತ ಸುಖಸಾಂದ್ರ ಭವಮೋಚಕ ನಮೋ ನಮೋ 3 ಅರಿತು ಅರಿತು ಯನಗರೆಲವವಾದರುವಿರಕುತಿ ವಿಷಯದಿ ಬಾರದುಕರುಣಾಸಾಗರ ನಿಮ್ಮ ದರುಶನವಲ್ಲದೆಮರಳು ನೀಗುವ ಬಗೆ ಕಾಣೆನೊ 4 ಭವ ಮೋಚಕ ನಮೋ ನಮೋ 5
--------------
ಗೋಪಾಲದಾಸರು