ಒಟ್ಟು 6534 ಕಡೆಗಳಲ್ಲಿ , 130 ದಾಸರು , 4232 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣ ಕೃಷ್ಣವಿಠಲ | ಪೊರೆಯ ಬೇಕಿವನಾ ಪ ಕಾರುಣ್ಯನಿಧಿ ನಿನ್ನ | ಮೊರೆಯ ಹೊಕ್ಕವನಾ ಅ.ಪ. ತೈಜಸ ಸೂಚಿ | ಅಂಕಿತವ ನಿತ್ತೇ1 ಮುಕ್ತಿಗಿವು ಸೋಪಾನ | ಭಕ್ತಿವೈರಾಗ್ಯಗಳುತತ್ವ ತರತಮಜ್ಞಾನ | ಉತ್ತಮರೆ ಸೇವೇಕೃತ್ತಿವಾಸನ ತಾತ | ಇತ್ತು ಪೊರವುದು ಇವನಾಮತ್ತನ್ಯನ ಬೇಡೆ | ಉತ್ತರಿಸೊ ಇವನಾ 2 ಸಾಧನ ಸುಸಾಧ್ಯವೆನೆ | ಶ್ರೀಧರನ ನಾಮಸುಧೆಮೋದದಿಂದುಣಿಸಿವಗೆ | ಮೋದಮುನಿವಂದ್ಯನಾದ ಮೂರುತಿ ಗುರು | ಗೋವಿಂದ ವಿಠಲನೆನೀ ದಯದಿ ಬಿನ್ನಪವ | ಆದರಿಸಿ ಸಲಿಸೋ 3
--------------
ಗುರುಗೋವಿಂದವಿಠಲರು
ನಾರಾಯಣ ತನ್ನ ನಂಬಿದ ಭಕುತರ ಕಾರುಣ್ಯದಿ ಕಾವ ಪ ಮಾರುತಿ ಸಹಿತನಾಗಿ ತಾನೀ ಶರೀರದೊಳಿಹ ದೇವ ಅ.ಪ ಅನಿರುದ್ಧನು ತಾ ಸಕಲ ಚರಾಚರ ಸೃಷ್ಟಿಯ ಗೈವ ವನಧಿಶಯನ ಪ್ರದ್ಯಮ್ನನು ಬ್ರಹ್ಮಾಂಡವ ಪಾಲಿಸುವ ತ್ರಿನಯನನಂತರ್ಗತ ಸಂಕರ್ಷಣ ತಾನು ಲಯವನು ಗೈವ ವಾಸುದೇವ ಸುಜೀವರಿಗೆ ಮೋಕ್ಷವನೀವ 1 ನರಸಿಂಹ ರೂಪದಿ ಹರಿಯು ಭಕುತ ಪ್ರಹ್ಲಾದನ ಕಾಯ್ದ ಸಿರಿ ರಾಮನು ತಾನಾಗಿ ಬಂದು ದಶಶಿರನ ಭಂಜಿಸಿದ ದುರುಳ ಕಂಸನ ನಿಗ್ರಹಿಸಲು ಯದು ವಂಶದೊಳುದಿಸಿ ಬಂದ ಪರಾಶರಾತ್ಮಜನಾಗಿ ವರವೇದ ವಿಭಾಗವ ಗೈದ 2 ವರಾಹ ನರಹರಿರೂಪವ ತಾ ಕೊಂಡ ಇಚ್ಛೆಯಿಂದಲಿ ವಟುವಾಗಿ ಕೊಡಲಿಯ ಪಿಡಿದ ಪ್ರಚಂಡ ಸಿರಿ ಕೃಷ್ಣ ದಿಗಂಬರನಾಗಿ ಕಂಡ ಸ್ವಚ್ಛ ಅಶ್ವವೇರಿದ ರಂಗೇಶವಿಠಲ ಬಿನಗು ದೈವರ ಗಂಡ 3
--------------
ರಂಗೇಶವಿಠಲದಾಸರು
ನಾರಾಯಣ ನರಸಿಂಹ ಲ- ಕ್ಷ್ಮೀರಮಣನೆ ಪರಬ್ರಹ್ಮ ಪ. ಸಾರಭೋಕ್ತನೆ ಸ್ವತಂತ್ರನೆ ದೋಷವಿ- ದೂರ ಪರಿಪೂರ್ಣಕಾಮ ಅ.ಪ. ಸತ್ವಾದಿಗುಣಾತೀತ ವಿತತ ಸ- ರ್ವೋತ್ತಮ ನಿರುಪಮ ಮಹಿಮ ಪ್ರತ್ಯಗಾತ್ಮ ನಿಗಮಾಗಮವೇದ್ಯ ಸು- ಹೃತ್ತಮ ಮಂಗಲಧಾಮ 1 ವಿಧಿಭವೇಂದ್ರಾದಿ ವಿಬುಧಾಶ್ರಿತಪದ- ಪದುಮ ನೀಲಾಂಬುದಶ್ಯಾಮ ಹೃದಯಾಬ್ಜಮಧ್ಯಸದನ ಸಾಮಜವ- ರದ ಯದುವಂಶಲಲಾಮ 2 ಮಾಯಾತೀತ ಮಹೋನ್ನತ ಸುರಜನ- ಪ್ರಿಯ ದ್ಯೆತ್ಯೇಯನಿರ್ನಾಮ ವಾಯುವಾಹನ ಜನಾರ್ದನ ಲಕ್ಷ್ಮೀನಾ- ರಾಯಣ ತೇ ನಮೋ ನಮಃ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಾರಾಯಣ ನರಹರಿಯೆ ನರ ಜನ್ಮದಿ ಸಿಲುಕಿದೆನು ಮರಳಿ ಜನಿಸದಂದಲೆನ್ನ ಕರುಣಿಸೋ ಕ್ಷೀರವಾರಿಧಿಶಯನ ಪ ಮುರಹರ ಮಧುಸೂಧನ ಶ್ರೀಹರಿ ಧರಣೀಧರ ವರಾಹ ನಾರಾಯಣ ವಟು ವಾಮನ ಕೇಶವ ವಾರಿಜದಳನಯನ 1 ನಂದನಂದನ ಹರಿಯೆ ನಾರದವಂದಿತ ಸುರ ಸಂಹಾರಿ ಮಂದಜಾಯತನಯನ 2 ಅರಿಗದೆ ಶಂಖಾಬ್ಜ ಕರದೊಳು ಮೆರೆವ ಪೀತಾಂಬರ ಧಾರಿ ಕರಿವದನನೆ ಕಾಳಿಂಗಮರ್ಧನ ಸರಸಿರುಹದಳನಯನ 3 ಮುಳುಗಿದೆನು ಎತ್ತು ಕಮಲನಯನ 4 ಬಲ್ಲುದೇ ಕರು ಎತ್ತಿಕೋ ಹರಿಯೇ 5
--------------
ಕವಿ ಪರಮದೇವದಾಸರು
ನಾರಾಯಣ ನಾರಾಯಣ ನಾರದನುತ ಮಾಂಪಾಹಿ ಪ ನೀರೇರುಹನಾಭ ಸತ್ಯ [ಪ್ರೀತ] ನಾರಾಯಣ ಮಾಂಪಾಹಿ ನಾರಾಯಣ ವೇದಾಂತ ನಾರಾಯಣ ಮಾಂಪಾಹಿ ಅ.ಪ ಶರಣಾಗತ ಪರಿಪೂಜಿತ ಸರಸೀರುಹಭವವಂದಿತ ಕರುಣಾಕರ ದಿವ್ಯಶೇಷ ನಾರಾಯಣ ಮುನಿಸೇವಿತ ಸುರನಾಯಕ ನಿತ್ಯವಿನುತ ಮುರಳೀರವ ಪರಿತೋಷಿತ ವರದಾಯಕ ಮಾಂಗಿರೀಶ ಪರಿಪಾಲಯ ಪಾರ್ಥಸೂರಿ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ನಾರಾಯಣನಾರಾಯಣ ನಳಿನೋದರ ಪ ನಾರದಪ್ರಿಯನಾಮ ಜಯನಾರಾಯಣ ನರಕಾಂತಕಅ.ಪ. ಸುರಸಂಚಯ ಸುಖಕಾರಣ ದಿತಿಜಾಂತಕ ದೀನ ಶರಣಪರಾತ್ಪರ ಪಾಂಡವಪ್ರಿಯ ಪರಿಪೂರ್ಣ ಪರಮ ಜಯ1 ಅಘಕುಲವನದಾವಾನಲ ಅಗಣಿತಗುಣಗಣನಿರ್ಮಲತ್ರಿಗುಣಾತೀತ ತ್ರಿಭುವನ ತ್ರಿದಶೇಶ್ವರವಂದ್ಯ ಜಯ2 ಅತಿಮೋಹನಚರಿತ ನಮೋ ಅತಿ ಸದ್ಗುಣಭರಿತ ನಮೋಹತ ಕಲ್ಮಶ ಹಯವದನ ಹರಿ ಹಯರಿಪುಹರಣ ಜಯ 3
--------------
ವಾದಿರಾಜ
ನಾರಾಯಣ ನಿನ್ನ ನಂಬಿದೆ ಲಕ್ಷ್ಮೀ-ನಾರಾಯಣ ನಿನ್ಹೊರತು ಪೊರೆವ ದೈವವೆಲ್ಲಿದೆ ಪ ನಾ ಮೀರಿ ದುಷ್ಕರ್ಮವ ಮಾಡಿದೆಅಪಾರಮಹಿಮ ದಯಾನಿಧೇ ಅ.ಪ ನಾನಾ ಯೋನಿಗಳಿಂದ ಬಂದೆನೋಮಾನತಾಳಲಾರದೆ ಬಲು ನೊಂದೆನೋದೀನರಕ್ಷಕ ಎನ್ನ ಗತಿ ಮುಂದೇನೋಮಾನದಿಂದಲಿ ಪಾಲಿಸುವಂಥ ದೊರೆ ನೀನೋ1 ದಾಸರ ಮನ ಉಲ್ಲಾಸನೆಶ್ರೀಶ ಆಶ್ರಿತ ಜನರ ಪೋಷನೆಸಾಸಿರ ಅನಂತಮಹಿಮನೆಕ್ಲೇಶನಾಶ ಮಾಡಿಸೋ ಶ್ರೀನಿವಾಸನೆ 2 ರಂಗನಗರ ಉತ್ತುಂಗನೆಗಂಗಾಜನಕ ಗರುಡತುರಂಗನೆ ಉ-ತ್ತುಂಗ ಗುಣಗಳಂತರಂಗನೆ ಅ-ನಂಗನ ಪೆತ್ತ ರಂಗವಿಠಲನೆ 3
--------------
ಶ್ರೀಪಾದರಾಜರು
ನಾರಾಯಣ ನಿನ್ನ ಸ್ಮರಣೆಯಲಿ ಮನ ಬೇರು ವೂರಿರುವಂತೆ ಕಾರುಣ್ಯದಲಿ ಕಾಯೊ ಪ ವೇದನಾಲ್ಕರ ಕದ್ದಂಥಾ ದೈತ್ಯನ ಕೊಲ್ವಾ ಶದಿ ಮತ್ಯಾವತಾರ ಧರಿಸಿದೆ ಹರಿಯೇ 1 ಮಂದರ ಪೊತ್ತೆ ಭಾವಕಿಯಳ ಮೋಹಿಸಿ ಮೋಹಿನಿಯಾದೆ 2 ವರಹರೂಪದಿ ಪೋಗಿ ಧರೆಯನು ಧರಿಸಿದೆ ದುರುಳ ಹಿರಣ್ಯಕನಕರದಿಂದ ಸೀಳಿದೆ 3 ಕಂದನ ನುಡಿಕೇಳಿ ಕಂಬದಿಂದುದಿಸಿದೆ ತಂದೆಯ ಬಗೆದವನಾ ಛಂದದಿ ಸಲಹಿದೆ 4 ಬಲಿಯ ದಾನವ ಬೇಡಿ ನೆಲನ ಈರಡಿ ಮಾಡಿ ತುಳಿದು ಆತನ ಮನೆ ಬಾಗಿಲ ಕಾಯ್ದೆಯೊ 5 ತಾತನ ಮಾತನು ಕೇಳಿ ಮಾತೆಯ ಕೊಂದೆ ಖ್ಯಾತಿಯಿಂದಲಿ ಕ್ಷತ್ರಿಯರನು ಸಂಹರಿಸಿದೆ 6 ಮಾತೆಯ ವರ ಕೇಳಿ ನೀತಿಯಿಂದಲಿ ಪೋದೆ ಸೇತುವೆ ಕಟ್ಟಿ ನೀಖ್ಯಾತರಾವಣನಕೊಂದೆ 7 ಪುಟ್ಟ ಶಿಶುವಾಗಿ ಗೋಪಿಗೆ ಮುದ್ದು ತೋರಿದೆ ಬೊಟ್ಟಿಲಿ ಗಿರಿಯನು ನೆಗಹಿದೆ ಶ್ರೀ ಕೃಷ್ಣಾ 8 ತ್ರಿಪುರರ ಸತಿಯರ ವ್ರತವಗೆಡಿಸುವಂಥಾ ಅಪರಿಮಿತದಿ ಮೋಹಿಸುವಾ ಮೂರ್ತಿಯಾದೆ 9 ಭಕ್ತವತ್ಸಲ ದೇವಾ ಯುಕ್ತಿಯಿಂದಲಿ ಕಾಯ್ವ ವ್ಯಕ್ತಿ ಕಲ್ಕ್ಯಾವತಾರ ಧರಿಸಿದ ಹರಿಯೇ 10 ಶಬ್ದವ ನುಡಿಸುವ ಅಬ್ದಿನಿನ್ನದೊ ದೇವಾ ಶಬ್ದವಾಲಿಸದ ನಿಶ್ಯಬ್ದದೊಳಿರಿಸೆನ್ನಾ 11 ಅಂತರದೊಳಗೆನ್ನಾ ಕಂತುನಾರಾಯಣಾ ಸಂತಸದೊಳು ನಿಜ ಶಾಂತಿ ಪಾಲಿಪ ಗುರು 12
--------------
ಶಾಂತಿಬಾಯಿ
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ನಾರಾಯಣ ಪರಿಪಾಹಿ-ನರಹರಿಯೆ ಪ ನಿನ್ನೊಳು ನಿರುತನಾನಪರಾಧಿ ನಾರಾಯಣ ಅ.ಪ ಹೇಸಿಕೆಯಿಂದ ಮನಕಾಸುವೀಸಕೆ ಸೋತು ಮೋಸಹೋದೆ ನಿನ್ನ ನೆನೆಯದೆ ಕೇಶವ 1 ನಿರುತ ನಿನ್ನಯ ನಾಮಸ್ಮರಣೆಯ ಬಿಟ್ಟು ಘೋರನರಕಕ್ಕೆ ಗುರಿಯಾದೆ ಪೊರೆಯೊ ನಾರಾಯಣ2 ಮುದದಿಂದ ನಾ ಹದಿಬದೆಯರ ಮುಖನೋಡಿ ಮದದಿಂದ ನಿನ್ನನು ಮರೆದೆನೊ ಮಾಧವಾ3 ಸವನತ್ರಯದಿ ಅವ್ಯವಹಿತ ಕಾರ್ಯವ ಲವಲೇಶ ಬಿಡದೆ ನಾನೆಸಗಿದೆನೋ ಗೋವಿಂದ 4 ಕ್ಷಣ ಬಿಡದಲೆ ದುಷ್ಕರ್ಮದಿಂದಲಿ ದಣಿದು ತೃಣಕೆಣೆಯಾಗಿ ನಿರ್ವಿಣ್ಣನಾದೆ ಹೇವಿಷ್ಣು 5 ಹೃದಯದೊಳಿಲ್ಲದ ಮಧುರ ನುಡಿಗಳ ಮುದದಿ ನುಡಿದೆನೋ ಮಧುಸೂದನನೇ 6 ಅವನಿಯೊಳಗೆ ಎನಗೆಣೆಯಿಲ್ಲವೆನುತ ಅವಗುಣಪ್ರತಿಮೆ ನಾನಾದೆ ತ್ರಿವಿಕ್ರಮ 7 ಅನುದಿನ ನಿಂದಿಸಿ ಯಮನ ಮಂದಿರದಿ ನಾ ನಿಂದೆನೊ ವಾಮನ8 ಬುಧನೆಂದು ಮೆರೆದು ನಾ ಆಧಮರಸೇವಿಸಿ ಅಂಧತಮಕೆ ಗುರಿಯಾದೆನೋ ಶ್ರೀಧರ 9 ವಿಷಯವೆ ಜೀವನದ ಕೃಷಿಯಾಯಿತೆನಗೆ ತೃಷೆಯ ಮೀರದೆ ನಿನ್ನ ಮರೆದೆನೊ ಹೃಷಿಕೇಶನೆ 10 ಉದುಭವಿಸಿದೆ ಈ ವಸುಧೆ ಭಾರಕ್ಕಾಗಿ ಬಾಧಕನಾದೆನೊ ಪದುಮನಾಭನೆ 11 ತಾಮಸಕೃತ್ಯದಿಂದುದರ ಪೋಷಣೆಗಾಗಿ ಪ್ರೇಮದಿ ತಿರುಗಿದೆ ದಾಮೋದರ ದೇವ 12 ಶಂಕೆಯಿಲ್ಲದ ದುರುಳಕಿಂಕರಸೇವೆಯಿಂದ ಸಂಕಟಪಟ್ಟೆನೊ ಸಂಕುರುಷಣ ದೇವ 13 ಕಾಸಿನಾಶೆಗೆ ನಾ ಹೇಸಿಕಿಲ್ಲದೆ ಮನ ಹೇಸದೆ ಯಾಚಿಸಿದೆ ವಾಸುದೇವನೇ 14 ಸದ್ಯಫಲವೆ ಮುಖ್ಯವು ಉದ್ಯೋಗವೆಂದು ಉಬ್ಬಿ ಒದ್ಯಾಡುತಿಹೆ ಪ್ರದ್ಯುಮ್ನದೇವನೆ15 ಸತಿ ಅನುಗಾಲ ಬಂಧು ಎಂದು ಅನವರತ ನಂಬಿದೆನು ಅನಿರುದ್ಧದೇವನೆ 16 ಪರಿಪರಿ ಕ್ರೀಡೆಯಿಂ ಪರಪೀಡಕನಾಗಿ ಪರರನು ಸ್ತುತಿಸಿ ಬೆಳೆದೆ ಪುರುಷೋತ್ತಮ17 ಸಾಧು ಸಜ್ಜನರೊಳು ಭೇದ ವಂಚನೆ ಮಾಡಿ ಅಧೋಕ್ಷಜ ಮೂರ್ತೇ 18 ಬಾರಿಬಾರಿಗೆ ಪರಾನ್ನವನುಂಡು ಘೊರ ದುರಿತಕ್ಕೆ ಗುರಿಯಾದೆ ಶ್ರೀ ನರಸಿಂಹನೇ19 ಕೆಚ್ಚೆದೆಯಿಂದ ನಾನು ಸ್ವೇಚ್ಛೆಯಿಂದಲಿ ಚರಿಸಿ ಹುಚ್ಚು ಹಿಡಿದಂತಾದೆ ಅಚ್ಯುತಮೂರ್ತೇ20 ಮಾನಿಗಳಿಗೆ ಅವಮಾನ ಮಾಡಿ ನಾ ಜ್ಞಾನಿ ಎಂದೆನಿಸಿದೇ ಜನಾರ್ದನನೇ ಕಾಯೊ 21 ಕೋಪತಾಪಗಳಿಂ ಪಾಪಕೃತ್ಯವೆಸಗಿ ತಾಪ ಪಡುತಲಿಪ್ಪೆನಯ್ಯ ಉಪೇಂದ್ರನೆ 22 ಕರಚರಣಗಳಿಂದ ಕಳ್ಳನಾಗಿಹೆನು ತೊರೆದೆನೊ ಹರಿಗುರು ಯಾತ್ರೆಯ ಶ್ರೀಹರೇ 23 ಶಿಷ್ಟರನ್ನೆಲ್ಲ ನಿಕೃಷ್ಟತನದಿ ನೋಡಿ ಭ್ರಷ್ಟನಾಗೀಜಗದಿ ಮೆರೆದೆ ಶ್ರೀಕೃಷ್ಣನೇ 24 ಸಂಕಟಪಡುತಿಹ ಕಿಂಕರನೊಳಿಹ ಮಂಕು ಹರಿಸಿ ಕಾಯೋ ಶ್ರೀ ವೇಂಕಟೇಶನೇ25
--------------
ಉರಗಾದ್ರಿವಾಸವಿಠಲದಾಸರು
ನಾರಾಯಣ ರಕ್ಷಿಸೊ ನಮ್ಮನು ಲಕ್ಷ್ಮೀನಾರಾಯಣ ರಕ್ಷಿಸೋ ಪ ಭವ ದೂರ ನಿತ್ಯೋದಾರ ಕರುಣದಿ ಅ.ಪ. ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖದಾಶಯನೇ ತೊರೆದೆ ಕಳತ್ರ ನಿವೇಶ ತನುಜ ಮಾಯಾ ನಿಖಿಲಸುರೇಶ ಕಮಲ ಭವ ಭಯ ಪಾಶ ಹರಪರಮೇಶ ವಂದಿತ||ನಾರಾಯಣ|| 1 ದೇಹಾಭಿಮಾನದಲ್ಲಿ ತೀವಿದಭೂತ ದ್ರೊಹವನಾಚರಿಸುತಲಿ ಸಿಲುಕಿ ದಾಸೋಹಮೆನ್ನದೆ ದೈವ ವಿದೇಹ ಜಾವರಿಗೂಹನೋಚಿತದೇಹ ವಿಜಿತವಿದೇಹ ಖಗವರವಾಹ ಶುಭಪರಿವಾಹ ನಿಖಿಲ ನಿರೀಹ ಲೋಕವಿ ಮೋಹನಾಚ್ಯುತ ||ನಾರಾಯಣ|| 2 ಧರ್ಮಾಚರಣೆಯನೆರೆತೊರೆದು ದುರುಳರ ಸಂಗದಿ ಜರಿದು ಸಜ್ಜನರನು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮ ಪುರುಷ ಪರಮ ಪಾವನ ಭವ ಸಂಹರಣ ವಿಶ್ವಂಭರಣ ಪುಲಿಗಿರಿ ವರದ ವಿಠಲ ||ನಾರಾಯಣ|| 3
--------------
ಸರಗೂರು ವೆಂಕಟವರದಾರ್ಯರು
ನಾರಾಯಣ ರಕ್ಷಿಸೋ ನಮ್ಮನು ಲಕ್ಷ್ಮೀ ನಾರಾಯಣ ರಕ್ಷಿಸೋ ಪ ಪಾರರಹಿತ ಭವಪಾರಾವಾರದಿ ಬಲು ಘೋರತಾಪವು ಮೀರಿತೋ ಭವದೂರ ನಿತ್ಯೋದಾರ ಕರುಣದಿ ಅ.ಪ ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖ ಕಳತ್ರ ನಿವೇಶ ತನುಜ ಮಾಯಾ ಪಾಶದೊಳಗೆ ಶಿಲ್ಕಿ ಗಾಸಿಯಾದೆನು ಜಗದೀಶ ನಿಖಿಲಸು ರೇಶ ಕಮಲಫಲಾಶನಯನ ದಿ ನೇಶಶತ ಸಂಕಾಶ ವ್ಯಾಘ್ರಗಿರೀಶ ಭವಭಯ ಪಾಶ ಹರಪರಮೇಶ ವಂದಿತ 1 ದೇಹಾಭಿಮಾನದಲ್ಲಿ ತೀವಿದ ಭೂತ ಸೋಹಮೆಂಬುವ ಬಲು ಮೋಹದಿ ಸಿಲುಕಿ ದಾ ಸೋಹಮೆನ್ನದೆ ದೈವ ದ್ರೋಹಿಯಾದೆನು ವಿದೇಹಜಾವರಿ ಗೂಹ ನೋಚಿತದೇಹ ವಿಜಿತ ವಿ ದೇಹ ಖಗವರವಾರಶುಭಪರಿವಾಹ ನಿಖಿಲ ನಿ ರೀಹ ಲೋಕವಿಮೋಹನಾಚ್ಯುತ 2 ಗುರುಹಿರಿಯರ ಮರೆದು ಗರ್ವದಿ ಧರ್ಮಾವ ಚರಣೆಯ ನೆರೆತೊರೆದು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮಪುರುಷ ಪಾವನ ಚರಣ ಸುಗುಣಾ ಭರಣ ದೀನೋ ಭವ ಸಂಹರಣವಿಶ್ವಂ ಭರಣ ಪುಲಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ನಾರಾಯಣ ವಿಠ್ಠಲನೆ ನೀನಿವನ ಕಾಪಾಡೊ ಹರಿಯೆ ಪ ನೀರಜಾಸನವಂದ್ಯ ಪೋರ ನಿನ್ನವನೆಂದುಕಾರುಣ್ಯದಲಿ ಕೈಪಿಡಿದು ಕಾಪಾಡೊ ಹರಿಯೇ ಅ.ಪ. ಜ್ಞಾನಾಯು ರೂಪಕ ಸು | ವಾಯುದೇವನೊಳಿದ್ದುನೀನಿವಗೆ ಜ್ಞಾನಾಯು ಸಂಪದವನೀಯೋ |ಮೌನಿಕುಲ ಸನ್ಮಾನ್ಯ ಪೂರ್ಣಪ್ರಜ್ಞರ ಮತದಿ ಜ್ಞಾನಿ ಎಂದೆನಿಸಿವನ ಕಾಪಾಡೊ ಹರಿಯೆ 1 ಗೋವುಗಳೊಳುದ್ಗೀಥ ಕಾವ ಕರುಣಿಯೆ ದೇವಭಾವದಲಿ ನೀನಿದ್ದು ಉದ್ಧರಿಸೊ ಹರಿಯೇ |ಆವ ಭವವನಧಿ ಲಕ್ಷ್ಮೀ ನರಹರಿಯೇನೋವುಗಳ ಪರಿಹರಿಸೊ ಪವನ ಪ್ರೀಯ 2 ಹೆಂಚು ಹಾಟಕದಲ್ಲಿ ಸಮಬುದ್ಧಿ ನೀನಿತ್ತುಪಂಚ ಪಂಚಿಕೆ ತತ್ವ ತರತಮವ ತಿಳಿಸುತ್ತಮಿಂಚಿನಂತಿವನ ಹೃತ್ಪಂಕಜದಿ ಪೊಳೆಯೊವಾಂಛಿತ ಪ್ರದನೆ ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ನಾರಾಯಣ ಹರಿ ವಿಠಲ | ಪೊರೆಯ ಬೇಕಿವಳಾ ಪ ಕಾರುಣಿಕ ಹರಿಯೇಅ.ಪ. ನಾದ ಮೂರುತಿ ನಿನ್ನ | ಪಾದಾನುವರ್ತಿ ಇಹಸಾಧು ತರುಳೆಯ ಕಾಯೊ | ವೇದ ವೇದ್ಯಾ |ಶೋಧಿಸಿದ ಸಂಸ್ಕಾರ | ಕಾದಿಹುದು ಸತ್ಪುಣ್ಯಬೋಧವಿದು ಸಂಪಿಗೆಯ | ಸ್ವಾದು ದರ್ಶಾ 1 ಭವ | ಸಾಗರವ ದಾಂಟಿಸುವೆಯೋಗಿ ಕುಲ ಸದ್ವಂದ್ಯ | ಅಗಜೆದರ್ಶನದೀ 2 ಭಾವಿ ಬೊಮ್ಮನ ಮತವ | ಭಾವದಲ್ಯಭಿವೃದ್ಧಿಗೈವ ಹವಣೆಯು ನಿಂದು | ದೇವದೇವೇಶಾಭಾವಿ ಕಾರ್ಯವು ಎನ್ನೆ | ಜೀವಗಂಕಿತಸೂಚಿಭಾವದಲಿ ತೋರಿರುವೆ | ಶ್ರೀ ವರನೆ ಹರಿಯೇ 3 ಕೈವಲ್ಯ | ದಿಂತ ತವದಾಸ್ಯವನುಈ ತರಳೆಗಿತ್ತು ಸುಖ | ದಿಂದ ನಾಗುವುದೋ 4 ಸಾರ್ವ ಭೌಮ ಸ್ವಾಮಿ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ದರ್ವಿಜೀವಿಯನೂಕಾವುದೆನೆ ಭಿನ್ನಪವ | ನೀ ವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಾರಾಯಣ ಹರಿಗೋವಿಂದ ನಾರದವರದ ಮುಕ್ಕುಂದಾ ಪ ಸುಜ್ಞಾನಿಗಳಾದವರ ಮಾನಸಾಂತರದಿ ಮಹಿಮೆಯು ತೋರುತ ನಾನಾಪರಿಯಲಿ ನಟನೆಯು ಮಾಡುವಾ 1 ಸುಂದರ ವಿಗ್ರಹ ಸುಜನರ ಪೋಷಕನಂದನಂದನ ವಂದಿತ ಮುನಿಜನಾಮಂದರಧರ ಮಾನದ ಜಗದ್ಭರಿತಾ ಅಮಿತ ಪರಾಕ್ರಮ ಮೂರ್ತಿ ಆಗರ ದ್ವಾರಕ ಹರಿಪುರ ಸ್ಥಳವು ಭಾಗೀರಥಿಪಿತ ಭವ ವಿಮೋಚನ ಕೃಷ್ಣ ನಾಗಶಯನ ಶ್ರೀನಿಲಯನ 2 ಪುಂಡರೀಕಾಕ್ಷ ಶ್ರೀ ಪಾಂಡವ ಪಕ್ಷಕ ಪಂಡಿತ ರಕ್ಷಕ ಪರಮಾತ್ಮನೆ ಹಿಂಡೂ ದೈತ್ಯರ ಕುಲ ಚಂಡಾನೆ ಭೇರಿಸಿ ಭೂಮಂಡಲವನಾ ಳ್ವಂಥ ಮಹಿಮ ಪ್ರಕಾಶ 3 ಅಗಣಿತ ಚರಿತ ಅನಂತನಿನ್ನಾ ಬಗೆಬಗೆಯಿಂದಲಿ ಭಜಿಸುವ ಭಕುತರ ಆಘಗಳ ಖಂಡಿಸುವಾ ಹರಿ 'ಹೊನ್ನವಿಠ್ಠಲ ' 4
--------------
ಹೆನ್ನೆರಂಗದಾಸರು