ಒಟ್ಟು 11785 ಕಡೆಗಳಲ್ಲಿ , 132 ದಾಸರು , 6311 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಸ್ತುತಿ ಪ್ರೇಮದಿಂದೊಂದಿಸುವೆ ಗುರುವೃಂದಕೇ ಕಾಮಧೇನುವಿನಂತೆ ಕೊಡಲೆಮಗಭೀಷ್ಟವನು ಪ ಸತಿಯ ಬೇಡುವನಲ್ಲ ಸುತರ ಬೇಡುವನಲ್ಲ ಅತಿಶಯದ ಭಾಗ್ಯವನು ಕೇಳ್ವನಲ್ಲ ರತಿಪತಿ ಆಟವನು ಖಂಡಿಸಿ ಬೇಗದಲಿ ಮತಿ ತಪ್ಪಲೆನಗೆ ದುರ್ವಿಷಯದೊಳಗೆಂದು 1 ಶಕ್ತಿ ಬೇಡುವನಲ್ಲ ಯುಕ್ತಿ ಬೇಡುವನಲ್ಲ ಭುಕ್ತಿ ಎನಗಿಲ್ಲೆಂದು ಕೇಳ್ವನಲ್ಲ ಮುಕ್ತಿದಾಯಕ ನಮ್ಮ ವಿಟ್ಠಲನ ಚರಣದಲಿ ಭಕ್ತಿ ದೃಢವಾಗೆನಗಿತ್ತು ರಕ್ಷಿಸಲೆಂದು 2 ಮಾನ ಬೇಡುವನಲ್ಲ ದಾನ ಬೇಡುವನಲ್ಲ ಹೀನತನ ಬ್ಯಾಡೆಂದು ಕೇಳ್ವನಲ್ಲ ಮಾನನಿಧೀಶ ನಮ್ಮ ಶ್ರೀ ನರಹರಿಯ ಚರಣವನು ಕಾಣಿಸುವ ಜ್ಞಾನವನು ದಾನಮಾಡಲಿ ಎಂದು3
--------------
ಪ್ರದ್ಯುಮ್ನತೀರ್ಥರು
ಗುರುಸ್ತುತಿ ಬಾರಯ್ಯ ಗುಣನಿಧಿಯೆ ಗುರುಭಾನುಕೋಟ್ಯುದಯ ಧ್ರುವ ಗುರುವರ ಶಿರೋಮಣಿಯೆ ಕರುಣಾನಂದ ಖಣಿಯೆ ಸುರತರು ಚಿಂತಾಮಣಿಯೆ 1 ಸುಪಥದ ಸಾಧನಿಯೆ ಭಕ್ತಜನಭೂಷಣಿಯೆ ಜಗತ್ರಯ ಜೀವನಿಯೆ 2 ಮಹಾನುಭವದ ಜಾಗ್ರತಿಯೆ ಮಹಿಮರ ಘನ ಸ್ಫೂರುತಿಯೆ ಮಹಿಪತಿ ಸ್ವಾಮಿ ಶ್ರೀಪತಿಯೆ ಸಹಕಾರ ಸುಮೂರುತಿಯೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಸ್ತುತಿ ರಾಘವೇಂದ್ರ ಸಲಹೊ ಗುಣಸಾಂದ್ರ ಪ ಭಗವದ್ಗೀತಾ ವಿವರಣ ತಂತ್ರದೀಪ ನಿಗಮತತಿಗೆ ಖಂಡಾರ್ಥವ ರಚಿಸಿ ಖಗರ್ಥಗಳನು ಅತಿ ಸ್ಫುಟವಾಗಿ ವಿವರಿಸಿ ಖಗವಾಹನ ತೋರಪಡಿಸಿದ ಧೀರ 1 ಧರಣಿ ವಿಜರರಿಗೆ ವರಗಳ ಕೊಡುವಂಥ ಸುರತರುವೆ ನಿಂಗೆ ಕರಗಳ ಮುಗಿದು ಪರಮಪುರುಷ ಹರಿಚರಣ ಕಮಲದಲಿ ಸ್ಥಿರವಾದ ಭಕುತಿಯ ಬೇಡುವೆ ಧೀರ 2 ಚಂಡ ಕುಮತಗಳ ಖಂಡಿಸಿ ಬುಧಜನ ಮಂಡಲದೊಳಗೆ ಪ್ರಚಂಡನೆಂದೆನಿಸಿ ಕುಂಡಲಿಶಯನ ಪಾದಮಂಡಿತ ಹೃದಯ ಭೂ ಮಂಡಲದೊಳಗೆ ಅಖಂಡಲನಾದ 3 ಶ್ರದ್ಧೆಯಿಂದಲಿ ವರ ಮಧ್ವಾಚಾರ್ಯರ ಮತ ಪದ್ಧತಿ ಬಿಡದಂತ ಬುದ್ಧಿಯನಿತ್ತು ಉದ್ಧರಿಸಯ್ಯ ಕೃಪಾಬ್ಧಿಯೇ ಬುಧಜನಾ ರಾದ್ಯಚರಣ ಪರಿಶುದ್ಧ ಚರಿತ್ರ 4 ಕಾಮಜನಕನಾದ ನಾಮಗಿರೀಶ್ವರಿ ಸ್ವಾಮಿ ನೃಹರಿಪಾದ ತಾಮರಸಂಗಳ ಪ್ರೇಮದಿ ಪೂಜಿಪೆನೆಂಬೊ ಕಾಮಿತವರ ನೀಡೊ ಶ್ರೀ ಮತ್ಸುಧೀಂದ್ರಕರ ತಾಮರಸಭವನೆ 5
--------------
ವಿದ್ಯಾರತ್ನಾಕರತೀರ್ಥರು
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಗುರ್ವಂತರ್ಗತ ಗೋಪಾಲ ಪಾಹಿ ಸರ್ವಪಾಲಕ ಶಿರಿಲೋಲ ಪ ಶರ್ವಸುರಗಂಧರ್ವ ಮುನಿಕುಲ Àಸರ್ವಸೇವಿತ ಗರ್ವರಹಿತನೆ ಅ.ಪ ರಾಮಾಕೃಷ್ಣ ವ್ಯಾಸರೂಪದಿಂದಾ ಮಾಮನೋಹರ ಮಾಡೆಕೃಪಾ ಶ್ರೀಮಧ್ವ ಮೊದಲಾದ ಆ ಮಹಾಮುನಿಗಳ ಸ್ತೋಮಸಂತತ ಮಹಾಪ್ರೇಮಮನದಲಿದ್ದು ಭೂಮಿತಳದೊಳಗಖಿಳಜನರಿಗೆ ಕಾಮಿತಾರ್ಥವ ಸಲಿಸಿ ತಾ ನಿ ಸ್ಸೀಮ ಮಹಿಮೆಯ ತೋರಿ ಇವರಿಗೆ ಆ ಮಹತ್ತರ ಕೀರ್ತಿಕೊಡುತಿಹ 1 ಆವಾವಜನುಮಗಳಲ್ಲಿ ಜಗಕೆ ಜೀವನಪ್ರದನಾಗಿ ಇಲ್ಲೀ ಶ್ರೀವರ ಸರ್ವೇಶ ಜೀವೇಶ ಸುರವಂದ್ಯ ದೇವ ನಿನ್ನಯ ಪಾದಸೇವಾವ ಸಲಿಸೆಂದೆ ಕೋವಿದರ ಕುಲಮಣಿಗಳೊಳಗೆ ಭಾವಿಪುದು ಸನ್ಮನವನಿತ್ತು ಗೋವಿದಾಂಪತೆ ಙÁ್ಞನಗಮ್ಯನೆ ಪಾವನಾತ್ಮಕ ಪರಮ ಪಾಲಿಸೋ 2 ದಾತ ಶ್ರೀ ಗುರುಜಗನ್ನಾಥವಿಠಲ ನೀ ಧಾತನಾಂಡಕೆ ಮುಖ್ಯನಾಥಾ ಧಾತಪ್ರಮುಖಸುರವ್ರಾತಸನ್ನುತಪಾದ ಪಾಥೋಜಯುಗಳ ಸಂಭೂತ ರಜೋದಿಂದ ಧೂತಪಾಪನ ಮಾಡುವದು ಅ ದ್ಭೂತ ಙÁ್ಞನ ವಿರಕುತಿ ಸಂಪ ದ್ಪ್ರಾತ ಪಾಲಿಸೊ ಹೇ ಮಹದ್ಭುತ ದಾತ ಎಂಬೆನೊ ನಮೋ ನಮೋ 3
--------------
ಗುರುಜಗನ್ನಾಥದಾಸರು
ಗುಹ ಕಂದರ್ಪಾನ್ವಿತ ಮುನಿವಂದ್ಯ ಪ ಸದಾನತ ಬಂಧು ಶರಜ ನಿತ್ಯಾನಂದ ಅ ಮುಕ್ಕಿ ತಾರಕನನು ಕೊಂದ 1 ಸತಿ ದುರುಳ ಪದ್ಮನು ಪಡೆವೆರಸಿ ಯುದ್ಧಕೆ ಬರೆ | ಶಿರವ ಕತ್ತರಿಸಿದ ಸ್ಕಂದ 2 ನಾಸ ಪಾವಂಜೆಯೊಳ್ನಿಂದ 3
--------------
ಬೆಳ್ಳೆ ದಾಸಪ್ಪಯ್ಯ
ಗೋಕುಲ ಬಿಟ್ಹ್ಯಾಂಗಿಲ್ಲಿಗೆ ಬಂದೆ ಶಿರಿಕೃಷ್ಣ ರಂಗಾ ವ್ಯಾಕುಲದಲಿ ನೀ ಸಾಗರ ತ್ಯಜಿಸಿ ಜೋಕೆಯಿಂದಲಿ ನಿಜಧಾಮಕೆ ಬಂದೆ ಪ ಬನ್ನವ ಪಡುತಿಹ ಭಕುತನ ನೋಡಿ ಚಿಂತೆಯ ಮಾಡಿ ಎನ್ನಂತರಂಗದ ಬಾಧೆಗಳು ಕಾಡೆ ಬಳಲುವುದಾ ನೋಡೆ ಮನ್ನಿಸಿ ಶರಣನ ಬಾಧಿಸುವ ಪೀಡೆ ಪರಿಹಾರ ಮಾಡೆ ಪನ್ನಗ ಶಯನ ಶ್ರೀಹರಿಯೇ ಓಡೋಡಿ ಬಂದೆ 1 ಪೊಕ್ಕಿಹೆನು ಸಂಸಾರಾರ್ಣವದೊಳಗೆ ಬಹು ದುಃಖದ ಅಲೆಗೆ ಲೆಕ್ಕವಿಲ್ಲದಾ ಜಂತುಗಳದರೊಳಗೆ ಇಂಬಿಲ್ಲಾ ಅಲ್ಲಿಡಿಂಬಕೆ ಸಿಕ್ಕಿ ಬಳಲುವಂಥ ಭಕುತನ ನೋಡಿ ಬಿಡುಗಡೆ ಮಾಡೆ ಅಕ್ಕರದಿಂದಲಿ ಭರದಿ ಕಾಪಾಡಲು ಬಂದೆ 2 ಶರಣರ ಪೊರೆಯುವುದೇ ನಿನ ಗುಟ್ಟು ಬಣ್ಣಿಸಲಿನ್ನೆಷ್ಟು ಕರುಣಿಸಿ ಬರುವಿ ಶಿರಿಯನು ಬಿಟ್ಟು ಭಕುತರೆ ನಿನಕಟ್ಟು ನಿರುಪಮ ನಿನ್ನಯ ದಯಕೇನೆನ್ನಲಿ ಶರಣರ ಪೊರೆಯುವಿ ನರಸಿಂºವಿoಲಾ ಬಂದೆ 3
--------------
ನರಸಿಂಹವಿಠಲರು
ಗೋಕುಲನಂದಾ ಗೋಪಿಯ ಕಂದಾ ಶ್ರೀಪತಿ ನಿಂದಾಡುವ ಚಂದ ನಮ್ಮ ಪ. ರಿಂದಾವನದಿ ನಿಂದು ಮುಕುಂದಾ ನಂದದಿ ಕೊಳಲೂದುವ ಚಂದಾ, ಕೃಷ್ಣಾ ರಂಗಾನಂದದಿ ಎಮ್ಮಯ ಕರೆವುದು, ಬಲು ಚೆಂದಾ 1 ಅರುಣನ ಕಿರಣ ಸೋಲಿಪ ಚರಣದಿ ಕಿರುಗೆಜ್ಜೆಯ ಧರಿಸುತ ಭರದಿ ರಂಗಾ ವರ ನಾಟ್ಯವ ತೋರುವುದಾನಂದಾ, ಬಲುಚೆಂದಾ 2 ಕಸ್ತೂರಿ ತಿಲಕ ಶಿಸ್ತಿಲಿ ಪೊಳೆಯುತಾ ಭಕ್ತವತ್ಸಲ ಶ್ರೀ ಶ್ರೀನಿವಾಸನ್ನ ನೋಡೆ ರಂಗನ ಭಕ್ತರಿಗೆಲ್ಲ ಆನಂದ, ಬಲು ಚೆಂದಾ 3
--------------
ಸರಸ್ವತಿ ಬಾಯಿ
ಗೋದಾವರಿ ಎನಗೆ ಶ್ರೀಧರನ ತೋರೆ ಪ. ನೀ ದಯದಿ ಸಲಹೆನ್ನ ಮಾಧವಗೆ ಪ್ರಿಯೆ ಅ.ಪ. ಸ್ವಚ್ಛವರ್ಣಳೆ ಬಹು ಹೆಚ್ಚಾಗಿ ಪರಿಯುವಳೆ ಮುಚ್ಚಿರುವ ಮಲಗಳನು ದೂರಮಾಡೆ ಅಚ್ಯುತನ ಪದವೀವ ಹೆಚ್ಚಿನಾ ಜ್ಞಾನವನು ಸ್ವಚ್ಛತನದಲಿ ಕೊಟ್ಟು ಮೆಚ್ಚಿ ಎನ್ನನು ಸಲಹೆ 1 ಧರೆಯ ಜನರು ನಿನ್ನೊಳ್ ಬರುತ ಮಲಗಳ ತೊಳೆಯೆ ಅರಿತು ಅದನು ಮನದಿ ಪರಿಹರಿಸಿಕೊಳಲು ಪರಮ ಭಾಗವತರ ವರ ಮಂದಿರಕೆ ಪೋಗಿ ವರಹ ವೆಂಕಟಗಿರಿಯೊಳ್ ಸ್ಥಿರವಾಗಿ ನಿಂತೆ 2 ಬರುತ ದಾರಿಯೊಳೆನಗೆ ಸ್ವಪ್ನದಲಿ ತೋರಿದೆ ವರ ದಿವ್ಯರೂಪವನು ನಾರಿಮಣಿಯೆ ಸರಿಗೆ ಕಂಕಣ ಮುತ್ತಿನಾ ಬುಗುಡಿಯನೆ ಧರಿಸಿ ವರ ಮುತ್ತೈದೆಯರಿಬ್ಬರಂದದಲಿ ತೋರಿದೆ 3 ಮುಕ್ಕೋಟಿ ಗಂಧರ್ವ ದೇವರ್ಕಳೂ ಬರುತಿರಲು ಅಕ್ಕರದಿ ತಂಗಿಯನೆ ಒಡಗೂಡುತ ಲಕ್ಕುಮಿ ಸ್ವಾಮಿ ಶ್ರೀ ಪುಷ್ಕರಣಿ ಸಾರಿರಲು ಉಕ್ಕುವೋ ಉಲ್ಲಾಸದಿಂದ ತೆರಳಿದೆಯೆ 4 ಜಿಷ್ಣು ಸಖನ ದಿವ್ಯ ಪಟ್ಟಣವ ಸೇರಲು ಕೃಷ್ಣವೇಣಿಯ ಒಡಗೂಡಿ ವಿಷ್ಣುಪಾದೋದ್ಭವೆಗೆ ಸರಿಯೆನಿಸಿ ಗೋಪಾಲ ಕೃಷ್ಣವಿಠ್ಠಲನ ಬಹುನಿಷ್ಠೆಯಿಂ ಧ್ಯಾನಿಸುವೆ 5
--------------
ಅಂಬಾಬಾಯಿ
ಗೋಪಗೋಪನೆಂಬಾ ಕೋಗಿಲೆ ನಮ್ಮಶ್ರೀಪತಿಯ ಕಂಡರೆ ಬರಹೇಳೆ ಕೋಗಿಲೆ ಪ . ಕೆಂಗಾವಳೆಯಾಲೆದಲಿ (?) ಪಾಂಡುರಂಗಮಂಗಳ ಮೂರುತಿಪ್ಪಶೃಂಗಾರವಾದ ಸುರತರುವಿನ ನೆರಳೊಳುರಂಗನಾಥನ ಕಂಡರೆ ಬರಹೇಳೆ ಕೋಗಿಲೆ 1 ಮಧುಮಾಸದಲಿ ಮಾಧವನಿರಲುಚದುರೆ ಗೋಪಿಯರಸ ಮೇಳದಲ್ಲಿಮುದದಿ ವನಂತರನಾಡುವ ಭರದಿಂದಪದುಮನಾಭನ ಕಂಡರೆ ನೀ ಬರಹೇಳೆ 2 ಅಟ್ಟಿ ಅರಸುವ ಶ್ರ್ರುತಿಗಳಿಂದ ಸುಖಬಿಟ್ಟೆವೆಂದರವ ಪರಬ್ರಹ್ಮಸೃಷ್ಟಿಯೊಳು ಉಡುಪಿನ ಹಯವದನ ಸ್ವಾಮಿಯದೃಷ್ಟಿಲಿ ಕಂಡರೆ ಬರಹೇಳೆ ಕೋಗಿಲೆ3
--------------
ವಾದಿರಾಜ
ಗೋಪಗೋವಿಂದ ವಿಠಲ | ನೀ ಪಾಲಿಸಿವಳಾ |ಸ್ವಾಪಜಾಗ್ರತ್ಸುಪ್ತಿ ಸರ್ವ ಕಾಲದಲೀ ಪ ಪತಿಸುತರು ಭಾಂದವರು | ಹಿತದಿಂದ ಸೇವಿಸುತಕೃತಿಸರ್ವ ನಿನಸೇವೆ | ಮತಿ ನೀಡೊ ಹರಿಯೇ |ಅತುಳ ವೈಭವ ತೋರಿ | ಕೃತಕಾರ್ಯಳೆಂದೆನಿಸುಕ್ಷಿತಿರಮಣ ನಿನಗಿದುವೆ ಪ್ರಾರ್ಥಿಸುವೆ ದೊರೆಯೇ 1 ಮೋದಮುನಿ ಮತ ದೀಕ್ಷೆ | ಸಾದರದಿ ಕೊಟ್ಟೈದುಭೇದಗಳ ತಿಳಿಸುತ್ತ | ಕಾದುಕೊ ಇವಳಾನೀದಯದಲಂಕಿತವ | ಓದಿಸಿಹೆ ತೈಜಸನೆಸಾದಿಸುವೆ ಅದನೀಗ | ಹೇ ದಯಾವರನೇ 2 ಸಂಚಿತ ಕಳೆವ | ಧರ್ಮ ನಿನ್ನದೊ ಸ್ವಾಮಿಭರ್ಮ ಗರ್ಭನ ಪಿತನೆ | ಕರ್ಮನಾಮಕನೇ ನಿರ್ಮಮತೆ ಮನದಿ ನಿ | ಷ್ಕಾಮ ಕರ್ಮದಲಿವಳಪೇರ್ಮೆಯಲ್ಲಿರಿಸೆಂದು | ಸ್ವಾಮಿ ಪ್ರಾರ್ಥಿಸುವೇ 3 ಸರ್ವಜ್ಞ ಸರ್ವೇಶ | ಸರ್ವದಾ ತವನಾಮಸರ್ವತ್ರ ಸ್ಮøತಿಯಿತ್ತು | ಸರ್ವಾಂತರಾತ್ಮದುರ್ವಿಭಾವ್ಯನೆ ದೇವ | ದರ್ವಿ ಜೀವಿಯ ಕಾವಸರ್ವ ಕರ್ತೃವು ನೀನೆ | ಶರ್ವ ಸನ್ನುತನೇ 4 ಸೃಷ್ಟಿಕರ್ತನೆ ದೇವ | ಕಷ್ಟಗಳ ಪರಿಹರಿಸಿಶಿಷ್ಟಳ್ಹøತ್ಕಂಜದಲಿ | ಇಷ್ಟ ಪ್ರದನಾಗೀಇಷ್ಟ ಮೂರ್ತಿಯ ಕೋರಿ | ಹೃಷ್ಟಳನ ಮಾಡೆಂದುಕೃಷ್ಣ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಗೋಪಸತಿಯರೆಲ್ಲ ಕೇಳೆರೆನ್ನಯ ಮಾತ ಪರಿ ಕೂಸಿನ ಕಂಡೀರ್ಯಾ ಪ ತೊಟ್ಟಿಲೊಳಗಿಟ್ಟು ವತ್ತಿ ಮಾತಾಡದೆ ಮುಟ್ಟದೆ ಉಣಲಿಕ್ಕೆ ಕುಳಿತಿರಲು ಚಿಟ್ಟಕ್ಕಿ ಚೀರೆದ್ದು ಭೇಟಿ ತಾನಳುತಿಹ ಹೊಟ್ಟಿ ತುಂಬಾ ಉಣಲೀಸ ಎಷ್ಟೆಂದೇಳಲೆ ನಾನು 1 ಬಣ್ಣಿಸಿ ಬಣ್ಣಿಸಿ ಪದವ ಪಾಡಿ ತೂಗಿ ಥಣ್ಣಾಗೆ ಬೀಸಿ ಬೀಸಣಿಕೆಯಲಿ ಕಣ್ಣ ಮುಚ್ಚಿಸಿದೆವೆಂದರಿತು ಸುಪ್ಪಾಣಿಸೆ ಅಣ್ಣ ತಾನೇಳುವ ನಿದ್ರೆಗೈಯ್ಯಲೀಸ 2 ಅನಿಮಿಷರಾದೆವೆ ಅನಶನರಾದೆವೆ ಮನಸು ಕೂಸಿನಲ್ಲೆ ನಟ್ಟಿಹುದೆಮಗೆ ಮನೆಕೆಲಸಗಳಲ್ಲ ಎಲ್ಲಿವೆ ನಮಗಿನ್ನು ತನಯ ಪುಟ್ಟಿದ ಪುಣ್ಯದಿಂದಲ್ಲಿನ್ನೇನೆಂಬೆ 3 ಚಿಕ್ಕವರೊಳು ಪೋಗಿ ಮಕ್ಕಳಾಟಿಕೆ ಆಡಿ ಲೆಖ್ಖವಿಲ್ಲದ ದೂರು ಘಕ್ಕನೆ ತರುವ ರಕ್ಕಸರೆನÀಲು ತಾ ಲೆಕ್ಕಿಸದವರ ಸೊಕ್ಕು ಮುರಿವನಿವನಕ್ಕೊಜಾಕ್ಕೇನೆಂಬೆ4 ದೇವತೆಗಳ ಮೀಸಲಾವಾಗ ಮೆಲುವನು ಸೇವಕರಂತಲ್ಲೆ ತಾವಾ ಹೊರೆ ದಾವಾದಿ ಭಯದಿಂದ ಕಾವಾನೀತನೆ ವಾಸು - ದೇವಾವಿಟ್ಠಲನೆಂದು ಭಾವಿಸಿ ತಿಳಿವೆನು 5
--------------
ವ್ಯಾಸತತ್ವಜ್ಞದಾಸರು
ಗೋಪಾಲ ಬಾಲಾ ಏಳು ಏಳೈಯ್ಯಾ | ಶ್ರೀಪತಿ ಪರಮಾನಂದ ಸಜ್ಜನರಿಗೆ ಕೊಡುವೆಸ್ವಹಿತಾಶ್ರಯಾ ಪ ನಾಮವೇದೋಕ್ತದಲಿ | ವಿಮಲತರದಿ ಸ್ತುತಿಗೈಯ್ಯುತಲಿದೇ | ಕರಮುಗಿದು ಆನಂದದಲಿ 1 ಸಂಗದಿ ತುಂಬುರ ನಾ | ಜಾಣತನಗಳಿಂದ ಪಾಡುತಲಿದಕೋ | ಅಣುಗನು ಪದ್ಮಜನಾ 2 ರವಿಯನುದಯಿಸಿದಾ || ನೋಟದಿದಯದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೋಪಾಲ ಬಾಲಾ ತ್ರಿಭುವನ ಪಾಲಾ ಕರುಣಾಲವಾಲ ಗೋಪಾಲ ಬಾಲಾ ಗೋಪೀ ಬಾಲಾ ಭಕುತಾನುಕೂಲ ಪ ಪಾಪಕುಲಾನಲ ತಾಪಸ ಸಂಕುಲ ಶ್ರೀಪತೆ ಮಾಂಗಿರಿನಿಲಯ ಶುಭಾಕುಲ ತಾಪತ್ರಯ ಕುಲಜಾಲ ನಿರ್ಮೂಲ ಗೋಪಗೋಪಿಕಾನಂದದುಕೂಲಾಅ.ಪ ಮುರಳೀಧರ ಘನಸುಂದರ ಭಾವ ದೇವಾದಿದೇವ ಸರಸೀರುಹದಳನಯನ ಸ್ವಭಾವಾ ಜೀವಾದಿಜೀವ ವರದಾಯಕ ಶರಣರ ಸಂಜೀವಾ ಮೃದುಮಧುರಸ್ವಭಾವ ಸ್ವರನಾದದಿ ಘಲು ಘಲ್ಲೆನುತಿರುವಾ ವರನೂಪುರದುಂಗುರ ಝಣ ಝಣರವ ಹರುಷದೊಳೆಲ್ಲೆಡೆಯೊಳು ನಲಿನಲಿದಾಡುವ 1 ಮುದ್ದಾಡಿ ನಲಿಯಳೆ ನಿನ್ನ ಯಶೋದಾ ಅಘರೂಪವಾದ ಮುದ್ದೆ ಬೆಣ್ಣೆಯ ಮೆಲುವಾತುರದಿಂದ ಕರಯುಗಗಳಿಂದ ಕದ್ದು ನೀ ನೋಡುವುದೇ ಅತಿಚೆಂದ ಭಕ್ತರಾನಂದಾ ಮದ್ದುಣಿಸಿದಳ ಒದ್ದು ಸಂಹರಿಸಿದ ಮೆದ್ದು ಉದ್ಧರಿಸೊ ಗೋವಿಂದ ನಂದನಕಂದ 2 ಅಕ್ಕೋ ಬೃಂದಾವನದಾನಂದ ಹೊಂಗೊಳಲಿಂದಾ ಇಕ್ಕೋ ಚೆಂದದ ಗಾನಾನಂದ ಕಿರುನಗೆಯಿಂದ ಕಕ್ಕುಲತೆಯ ಮದದಿಕ್ಕೆಗೆ ಸಿಲುಕದ ಠಕ್ಕುಗಾರ ಸೊಬಗಿಂದ ರಾಧೆಗೆ ಮುದ ವಿಕ್ಕಿ ಮಡುವ ಧುಮ್ಮಿಕ್ಕಿ ನರ್ತನಗೈದ 3 ವೈರಿ ಕಂಸಾರಿ ಶೌರಿ ಬಾ ಬಾರೋ ಪಾಂಡವ ಪಕ್ಷ ವಿಹಾರೀ ಶಿಶುಪಾಲ ಸಂಹಾರೀ ಭವ ಬಂಧನ ಪರಿಹಾರಿ ಶರಣರಿಗುಪಕಾರೀ ಇಭಕುಲಕೇಸರಿ ಘನ ಗಿರಿಧಾರೀ ಅಭಯಪ್ರದ ಹರಿ ಗೂಢಸಂಚಾರಿ ನಭಚರಹರಿ ಮಾಂಗಿರಿ ಸುವಿಹಾರೀ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಾಲಕೃಷ್ಣರಾಯ ತಾಪತ್ರಯಗಳೆಲ್ಲ ನೀ ಪರಿಹರಿಸು ಜೀಯ್ಯಾ ಪ ವಿದ್ಯಾಶ್ರೀ ಸಿಂಧುತೀರ್ಥ ಶುದ್ಧ ಪದ್ಧತಿಯಿಂದ ಶುದ್ಧ ಪೂರ್ವಕ ನಿನ್ನ ಭಜಿಪೆನು ಅನುದಿನ ಮುದ್ದುಮೋಹನ ನೀನು ತಿದ್ದಿ ಸರ್ವರ ಹೃದಯ ಬದ್ಧನಾಗಿರುತಿ ಪ್ರಸಿದ್ಧ ಮೂರುತಿ ವೇಣು 1 ಸುರಪನ ಗರ್ವವ ಹರಣವ ಮಾಡಿ ನೀ ವರವಿತ್ತೆ ಕಾಳಿಂಗ ಉರಗನಿಗೆ ಸುರರ ವೃಂದಗಳೆಲ್ಲ ಪೊರೆವುತ ಸರ್ವದಾ ವರ ಕಲ್ಪತರುವೆಂದು ಮೆರೆಯುವಿ ಧರೆಯೊಳು 2 ಗಿರಿಯನು ಪೊತ್ತು ನೀ ಪೊರೆದಿಹ ತುರುಗಳ ಮರೆಯೋದು ಯನ್ನನು ಸರಿಯೆನೊ ಹರಿಯೆ ಶರಣ ರಕ್ಷಕ ಬೇಗ ಕರುಣಾಳು ಕಾಯಯ್ಯ ಶ್ರೀವತ್ಸಾಂಕಿತನಾದ ವರಜಾರಚೋರ ವೇಣು 3
--------------
ಸಿರಿವತ್ಸಾಂಕಿತರು