ಒಟ್ಟು 5952 ಕಡೆಗಳಲ್ಲಿ , 127 ದಾಸರು , 3928 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರದ ನುತಿಸುವನಾಮ ನಾರಾಯಣ ಹರಿನಾಮ ಪ ಮಾರವೈರಿಯ ಜಪನಾಮ ನೀರಜನಾಭನ ನಾಮ ಅ.ಪ ತಾಪಸನರಸಿಯ ಶಾಪವನಳಿಸುತೆ ಆ ಪರಮೇಶನ ಚಾಪವ ಮುರಿದು ಭೂಪತಿಯಣುಗಿ ಶ್ರೀರೂಪಿಯ ವ್ಯಾe್ಯದಿ ಪಾಪಿ ರಾವಣನನು ಛೇದಿಸುವಾ ನಾಮ 1 ನಂದ ಯಶೋದ ಕಂದನೆನಿಸಿ ಬಹು ಮಂದಿ ರಕ್ಕಸರ ಕೊಂದು ಗೋಪಿಯರ ವೃಂದದಿ ಮುರಳಿಯಾನಂದವ ನೀಡಿದ ಸುಂದರ ಮಾಂಗಿರಿ ರಂಗನ ನಾಮ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರದ ಪ್ರಿಯ ಕೃಷ್ಣ ನರಾಕಾರ ಜಾರ ಚೋರ ಶೂರ ಧೀರಪ ಘೋರತರವಾದ ಸಂಸಾರ ಸುಖ ದುಃಖಗಳ ಮೀರಿ ಪೊರೆವಂಥ ಬಲು ಭಾರಕರ್ತನೇ ಸೂರಿ ಜನರನು ಸದಾ ಸಾರಸಾಕ್ಷ ಬಿಡದಲೆ ಪಾರುಗಾಣಿಸುವ ದೇವಾ 1 ಮಂದಮತಿಯನಳಿದು ಚಂದದಿ ಸುಮಾರ್ಗವನ್ನು ನಂದದಿಂದ ತೋರ್ಪ ಮುಚುಕುಂದ ವಂದ್ಯನೆ ಎಂದಿಗೆಮ್ಮ ಗತಿಯೆಂದು ಹೊಂದಿ ಬೇಡ್ವ ಭಕುತರ ವÀಂದಿಸುವರ ಭವಬಂಧನ ಬಿಡಿಸುವ ದೇವಾ2 ದಾಶರಥೆ ಎನ್ನ ಕ್ಷೇಶ ನಾಶ ಮಾಡು ದಯದಿ ದಿ ನೇಶ ಶತಕೋಟಿ ಭಾಸ ಸಂಕಾಶ ಶ್ರೀಶ ವಾಸುದೇವ 3
--------------
ಜಗನ್ನಾಥದಾಸರು
ನಾರದನು ನಮರರಶಿಕರ ನಂದನಂದನೆ ಗೋಪಿ ಕಂದನೇ ಪ ಬಾರದೆನಾ ಮನಸು ದುಷ್ಕøತ ಮೀರಲಾಪುದೇ ಸುಕೃತ ದೋರಲಾಪುದೇ ದಾಸ ತುಲಶಿರಾಮ ನಿನ್ನ ದಾಸನಾದೆನೋ ದೋಷರಹಿತನ ಮಾಡೆನ್ನ ಮೋಸಹೋದೆನೋ 1
--------------
ಚನ್ನಪಟ್ಟಣದ ಅಹೋಬಲದಾಸರು
ನಾರದನುತ ಪಾವನನಾಮಾ ನೀರಜಭವಪಿತ ರಣಭೀಮಾ 1 ಸಾರಸಲೋಚನ ಜಗದಭಿರಾಮಾ ಸೂರಿಗಣನುತ ರವಿಕುಲ ಸೋಮಾ 2 ದಶರಥನಂದನ ಮುನಿಮುಖಚಂದನ ನಿಶಿಚರಬಂಧನ ಕಪಿವರಸೇನಾ ದಶಮುಖಭಂಜನ ಬಂಧವಿಮೋಚನ ಪಶುಪತಿಮೋಹನ ಮಾಂಗಿರಿಸದನ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಸಿಂಹನೆ ಎನ್ನ | ದುರಿತೌಘಗಳನು ದೂರಕೈದಿಸಿ ಘನ್ನ | ಕರುಣಾವಲೋಕನ ಭವ ಭಯವನ್ನ | ಬಿಡಿಸಯ್ಯ ಮುನ್ನ ಪ ಧೀರ ಸುಜನೋದ್ಧಾರ ದೈತ್ಯ ವಿ ದೂರ ಘನಗಂಭೀರ ಶೌರ್ಯೋ ಧಾರ ತ್ರಿಜಗಾಧಾರ ಎನ್ನಯ ಭಾರ ನಿನ್ನದೊ ಹೇ ರಮಾವರ ಅ.ಪ. ಏನು ಬಲ್ಲೆನೊ ನಾನು | ಸುಜ್ಞಾನ ಮೂರುತಿ ಮಾನಸಾಬ್ಜದಿ ನೀನು | ನೆಲೆಯಾಗಿ ನಿಂತು ಏನು ನುಡಿಸಲು ನಾನು | ಅದರಂತೆ ನುಡಿವೆನು ಜ್ಞಾನದಾತನೆ ಇನ್ನು | ತಪ್ಪೆನ್ನೊಳೇನು ಸ್ನಾನ ಜಪತಪ ಮೌನ ಮಂತ್ರ ಧ್ಯಾನಧಾರಣ ದಾನ ಧರ್ಮಗ- ಳೇನು ಮಾಡುವುದೆಲ್ಲ ನಿನ್ನಾ- ಧೀನವಲ್ಲವೆ ಶ್ರೀನಿವಾಸನೆ ದಾನವಾಂತಕ ದೀನರಕ್ಷಕ ಧ್ಯಾನಿಪರ ಸುರಧೇನುವೆನ್ನುವ ಮಾನವುಳ್ಳವರೆಂದು ನಂಬಿದೆ ಸಾನುರಾಗದಿ ಕಾಯೊ ಬಿಡದೆ 1 ತಂದೆತಾಯಿಯು ನೀನೆ | ಗೋವಿಂದ ಎನ್ನಯ ಬಂಧು ಬಳಗವು ನೀನೆ | ಮು- ಕುಂದ ಗುರುಸಖ ವಂದ್ಯದೈವವು ನೀನೆ ನೀನೆ | ಆನಂದ ನೀನೆ ಹಿಂದೆ ಮುಂದೆಡಬಲದಿ ಒಳಹೊರ- ಗೊಂದು ಕ್ಷಣವಗಲದಲೆ ತ್ರಿದಶರ ವೃಂದ ಸಹಿತದಿ ಬಂದು ನೆಲಸಿ ಬಂದ ಬಂದಘಗಳನು ಹರಿಸಿ ನಂದವೀಯುತಲಿರಲು ಎನಗಿ- ನ್ನೆಂದಿಗೂ ಭಯವಿಲ್ಲ ತ್ರಿಕರಣ- ಕರ್ಮ ನಿನ್ನರು ಎಂದು ಅರ್ಪಿಸುವೆನು ನಿರಂತರ 2 ಪ್ರೀಯ ನೀನೆನಗೆಂದು | ಮರೆಹೊಕ್ಕು ಬೇಡುವೆ- ನಯ್ಯ ಗುಣಗಣಸಿಂಧು | ಮೈಮರೆಸಿ ವಿಷಯದ ಹುಯ್ಲಿಗಿಕ್ಕದಿರೆಂದು | ಶರಣನ್ನ ಬಿನ್ನಪ ಇಂದು | ಕೈಬಿಡದಿರೆಂದು ತಾಯನಗಲಿದ ತನಯನಂದದಿ ಬಾಯ ಬಿಡಿಸುವರೇನೊ ಚಿನ್ಮಯ ನ್ಯಾಯ ಪೇಳುವರ್ಯಾರೊ ನೀನೊ ಸಾಯಗೊಲುತಿರೆ ಮಾಯಗಾರನೆ ತೋಯಜಾಸನ ಮುಖ್ಯ ಸುಮನಸ ಧ್ಯೇಯ ಶ್ರುತಿ ಸ್ಮøತಿ ಗೇಯ ಕವಿಜನ ಗೇಯ ಚತುರೋಪಾಯ ಭಕ್ತ ನಿ- ಕಾಯ ಪ್ರಿಯ ಶ್ರೀಕಾಂತ ಜಯ ಜಯ
--------------
ಲಕ್ಷ್ಮೀನಾರಯಣರಾಯರು
ನಾರಾಚ ಕೋದಂಡಧರ ಧೀರ ಪಾಹಿ ಪ ಧರಣೀಸುತಾನಂದ ಸುವಿಹಾರಿ ಪಾಹಿ ಅ.ಪ ಸಾಮಿತ್ರಿ ಭರತಾಗ್ರಜಾತ ಮಾಂಪಾಹಿ ಮೌನಿಜನಸಂಪ್ರೀತ ಶ್ರೀಲೋಲ ಪಾಹಿ ಸೇವ್ಯ ಪಾದಾಬ್ಜಪಾಹಿ ಧೀಮಂತ ಘನ ಪುಣ್ಯನಾಮ ಮಾಂಪಾಹಿ 1 ಭುವನಾಭಿರಾಮಾ ತ್ರಿಮುನಿನುತ್ಯಪಾಹಿ ಭವನಾಶ ಸತ್ಕೀರ್ತಿಕಾಮ ಮಾಂಪಾಹಿ ನವಮೋಹನಾಂಗ ರಾವಣವೈರಿ ಪಾಹಿ ಸುವಿಲಾಸದಾತ ಮಾಂಗಿರಿವಾಸ ಪಾಹಿ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ಎನ್ನಿರೋ ನಾರಾಯಣ ಎನ್ನಿ ನಾರದÀಪ್ರಿಯನಿಗೆ ನಂದನ ಸುತ ಮುಕುಂದ ಮುರಾರಿಗೆ ಪ ಕೆಟ್ಟ ಅಜಮಿಳನ ಬಂದು ಕ(ಟ್ಟಲ್ಯ)ಮ ಪಾಶದಿ ತಾ ಕಂ- ಗೆಟ್ಟು ಹರಿನಾಮವ ಕರೆಯೆ ಕೊಟ್ಟ ತನ್ನ ಪಟ್ಟಣ ಪದವಿ 1 ಕಾಲಕಾಲಕೆ ಗೋಪಾಲನ ನೆನೆಯದೆ ಬಿಟ್ಟು ಕಾಲಕಳೆಯಲು ಯಮಭಟರು ಕರೆದÀು ಬಾಧಿಸದೆ ಬಿಡರು 2 ಸ್ನಾನ ಜಪ ತಪವ್ಯಾಕೆ ಮೌನ ಮಂತ್ರವ ಬಿಟ್ಟು ದಾನವಾಂತಕ ಕೃಷ್ಣನ್ನ ಧ್ಯಾನದೊಳಿಟ್ಟರಗಳಿಗೆ 3 ಲೆಕ್ಕವಿಲ್ಲದ ದೇಶ ತುಕ್ಕಿ ತಿರುಗಿದರಿಂದೆ ದುಃಖವಲ್ಲದೆ ಜ್ಞಾನ ಮುಕ್ತಿ ದೊರಕುವುದೇನು 4 ಬಿಟ್ಟು ವಿಷಯವ ಭೀಮೇಶಕೃಷ್ಣನಲ್ಲಿಟ್ಟು ಧ್ಯಾನ ಹತ್ತು ಹರಿಪುರ ಸೋಪಾನ ರಕ್ಷಿಸುವ ಖಗವಾಹನ 5
--------------
ಹರಪನಹಳ್ಳಿಭೀಮವ್ವ
ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ನಾರಾಯಣ ಕೃಷ್ಣನಂದ ಮುಕುಂದಾ ಪ ನಿನ್ನೆತ್ತಿ ಆಡಿಸಲು ನಂದ ಯಶೋದೆಯಲ್ಲಾ ನಿನ್ನೆಂತು ಸೇವಿಸುವೆ ಪೇಳು ಇಂದಿರೆರಮಣಾ1 ನಿನ್ನ ಸಹಪಾರಿ ಸುಧಾಮನಾನಲ್ಲಾ ನಿನ್ನೆಂತು ಸೇವಿಸಲೊ ಯದುಕುಲೋತ್ತಮನೇ2 ಅಗರು ಚಂದನ ಪರಿಮಳದ್ರವ್ಯಗಳನೆ ತಂದು ಅರ್ಪಿಸಲು ಕುಬುಜೆಯಲ್ಲಾ ಆದರದಿ ಪಾಲ ನೀಡೆ ವಿದುರನಲ್ಲಾ ಅನಂತ ಗುಣಪೂರ್ಣನೇ ಶ್ರೀ ಹರಿ3 ಗೋವುಪಾಲನು ತಂದು | ನಿನಗ ಭಿಷೇಕ ಮಾಡುವೆನೆ ವಿಧ ವಿಧ ಪುಷ್ಪಗಳ ತಂದು ಅರ್ಚಿಸಲು ಪೊಕ್ಕಳೊಳು ಪುಷ್ಪವನೆಪಡೆದಿರುವೆ ಹರಿಯೆ 4 ಕರಿರಾಜ ನಿನ್ನ ಕರೆಯೆ ಕರುಣದಿಂದ ಬಂದೆ ಪ್ರಹ್ಲಾದಗೋಲಿದು ಕಂಬದಲಿ ನಿಂತೇ ದ್ರೌಪದೀ ದೇವಿಗಕ್ಷಯಾಂಬರ ವಿತ್ತೆ ಅಂತೆ ಎನ್ನಪಾಲಿಸೊ ಲಕ್ಷ್ಮೀಕಾಂತನೇ 5 ಪರಿಪಯಲಿಭಕ್ತರ ಪಾಲಿಸಿದೆಯೊ ದೇವಾ ಪರಮ ದಯಾಳುವೆಂದೆನಿಸಿಕೊಂಡೇ ಪರಮ ಪುರುಷನು ನೀನು ಪಾಮರನು ನಾನಹುದೊ ದಾರಿ ಕಾಣದೆ ಇರುವೆ ದಯೆತೋರು ಮುರಾರಿ6 ಭಕ್ತವತ್ಸಲ ನೀನೆ ಭಯನಿವಾರಣ ನೀನೇ ಭಾಗವತಜನಪ್ರಿಯ ನೀನೆ ಸರ್ವರಕ್ಷಕ ನೀನೆ ಶ್ರೀ ವೇಂಕಟವಿಠಲಾ 7
--------------
ರಾಧಾಬಾಯಿ
ನಾರಾಯಣ ಗೋವಿಂದ ಹರಿ ಹರಿ ನಾರಾಯಣ ಗೋವಿಂದ ಪ ನಾರಾಯಣ ಗೋವಿಂದ ಮುಕುಂದ ಪರತರ ಪರಮಾನಂದಅ.ಪ. ಮಚ್ಛರೂಪಿಲಿ ಹೆಚ್ಚಿದ ದೈತ್ಯರ ತುಚ್ಛಿಸಿ ವೇದವ ತಂದ ಹರಿ 1 ಕಚ್ಛಪ ವೇಷದಿ ನಿಂದಾ ಹರಿ 2 ಸೂಕರ ರೂಪಿಲಿ ಕೊಂದಾ ಹರಿ 3 ಚಕ್ರಧರ ಕಂಬವ ಭೇದಿಸಿ ಬಂದ ಹರಿ4 ವಾಮನ ರೂಪಿಲಿ ನಿಂದಾ ಹರಿ5 ಕ್ಷತ್ರಕುಲವ ನಿಕ್ಷತ್ರಮಾಡಲು ಭೃಗು ಪುತ್ರನಾಗಿ ತಾ ನಿಂದಾ ಹರಿ 6 ತಂದಾ ಹರಿ 7 ತಾ ನಿಂದಾ ಹರಿ 8 ಅಂಗನೆಯರ ವ್ರತಭಂಗ ಮಾಡಲನಂಗ ಜನಕ ತಾ ಬಂದಾ ಹರಿ 9 ಪರಮೇಷ್ಟಿ ಎನಿಸಿ ತಾ ನಿಂದಾ ಹರಿ 10 ಶ್ರೀದವಿಠಲ ಕರುಣದಿಂದಲಿ ನಂದತತಿ ಸಲಹುವೆನೆಂದಾ ಹರಿ 11
--------------
ಶ್ರೀದವಿಠಲರು
ನಾರಾಯಣ ನರಹರಿಯೆ ನರ ಜನ್ಮದಿ ಸಿಲುಕಿದೆನು ಮರಳಿ ಜನಿಸದಂದಲೆನ್ನ ಕರುಣಿಸೋ ಕ್ಷೀರವಾರಿಧಿಶಯನ ಪ ಮುರಹರ ಮಧುಸೂಧನ ಶ್ರೀಹರಿ ಧರಣೀಧರ ವರಾಹ ನಾರಾಯಣ ವಟು ವಾಮನ ಕೇಶವ ವಾರಿಜದಳನಯನ 1 ನಂದನಂದನ ಹರಿಯೆ ನಾರದವಂದಿತ ಸುರ ಸಂಹಾರಿ ಮಂದಜಾಯತನಯನ 2 ಅರಿಗದೆ ಶಂಖಾಬ್ಜ ಕರದೊಳು ಮೆರೆವ ಪೀತಾಂಬರ ಧಾರಿ ಕರಿವದನನೆ ಕಾಳಿಂಗಮರ್ಧನ ಸರಸಿರುಹದಳನಯನ 3 ಮುಳುಗಿದೆನು ಎತ್ತು ಕಮಲನಯನ 4 ಬಲ್ಲುದೇ ಕರು ಎತ್ತಿಕೋ ಹರಿಯೇ 5
--------------
ಕವಿ ಪರಮದೇವದಾಸರು
ನಾರಾಯಣ ನಾರಾಯಣ ಶರಣಾಗತ ಕರುಣಾ ನಾರಾಯಣ ನಾರಾಯಣ ಸರಸೀರುಹ ಚರಣಾ ಪ ನಾರಾಯಣ ನಾರಾಯಣ ಭವಸಾಗರ ತರಣಾ ನಾರಾಯಣ ನಾರಾಯಣ ಶೌರೆ ಮಾರಮಣಾ ಅ.ಪ ಮಾಧವ ಕೇಶವ ಪರಾತ್ಪರ ಸಾನಂದ ಹರೇ ಈಶ ಪರೇಶಾದಿನೇಶಾ ಮುರಾರೇ 1 ಗರುಡಗಮನ ನೀಲಾಂಬುದಗಾತ್ರ ಸುರನಾಯಕನುತ ಪರಮ ಪವಿತ್ರಾ 2 ಸೀತಾ ಮನೋಹರ ಸುರಮುನಿಪ್ರೇಮಾ ಖ್ಯಾತಚರಿತ್ರ ಮಾಂಗಿರಿ ವರಧಾಮಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾರಾಯಣ ನಿನ್ನ ಚರಣ ಸೇವೆಯ ಬಿಟ್ಟು ಸಾರಸಾಕ್ಷನೆ ಪ್ರಾಣದಿರಲಾರೆ ಕ್ಷಣವೂ ಪ ದಾರಿಯೆನಗಿದೊಂದೇ ತೊರ್ಪದು ಸುಖನಿಧಿ ಬಾರಿಬಾರಿಗೂ ಹರಿ ದ್ಯಾನಾನಂದದೊಳಿಗೆ ಅ.ಪ ಅನ್ನವಸ್ತ್ರಂಗಳಿಗಾಗಿ ದುಡಿವದೊಂದು ಚೆನ್ನ ಪುತ್ರರ ರಕ್ಷಣೆಯೊಂದೆಡೆ ತನ್ನ ಮರ್ಯಾದೆ ಕುಂದುಗಳೆಂಬೊ ವ್ಯಸನದಿ ಭಿನ್ನಿಸಿ ತಾಪತ್ರಯ ಪಡುತಿರುವಿಲ್ಲಿ 1 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಪ್ರೇಮ ಬಾಂಧವರಾಗೆನ್ನನಪ್ಪಿಹರೋ ಸ್ವಾಮಿ ನೀಯೆನ್ನನವರ ಧಾಳಿಗಿಡದಂತೆ ಸಾಮಜವರದ ಸಲಹೆಂದು ಸಂತೋಷದಿ 2 ಭಾಗೀರತಿಪಿತ ಭಾಗವತಪ್ರೀತ ಯೋಗಿಜನಂಗಳೊಳತಿ ಹಿತನೇ ಸಾಗರಶಯನನೆ ಭೋಗಿಗಳ ಪುಣ್ಯನೆ ಬಾಗುವ ಶರಣರ ಬಹುಭಾಗ್ಯನೇ 3 ನಾನಿಲ್ಲಿಗೆ ಬಂದ ಕಾರಣ ಕಾಣೆನೋ ದೀನಪಾಲಕ ಕಾರ್ಯಮಾಡಿಸೋಯನ್ನಿಂ ಏನಾದರು ಮಾಡು ತಪ್ಪಹೊರಿಸಬೇಡ ಶ್ರೀನಿಧಿ ಹೆಜ್ಜಾಜಿಕೇಶವ ಪಾಲಿಸು 4
--------------
ಶಾಮಶರ್ಮರು
ನಾರಾಯಣ ಹರಿ ಗೋವಿಂದ ಪ ಸಿರಿಯು ಸಹಿತ ಮೆರೆದಿರುವ ಜಗದ್ಗುರು ಅ.ಪ ಇತ್ತು ವೇದವ ಶತಧೃತಿಯನೆ ಸಲಹಿದೆ 1 ಸುರಿ ಸುರಿದಮೃತವ ದಿವಿಜರಿಗುಣಿಸಿದೆ 2 ಲೋಕೇಶನ ನಾಸಿಕದೊಳಗುದಿಸುತ | ಜೋಕೆಯಿಂದ ತ್ರೈಜಗವನು ಸಲಹಿದೆ 3 ಕುಂಭಿನಿಯೊಳು ನರಹರಿಯೆಂದೆನಿಸಿದೆ 4 ಒಲಿದು ತ್ರಿವಿಕ್ರಮ ವಾಮನನೆನಿಸಿದೆ5 ಅಮಿತ ಪರಾಕ್ರಮಿ ಭಾರ್ಗವನೆನಿಸಿದೆ 6 ಶಶಿಮುಖಿ ಸೀತಾರಾಮನೆಂದೆನಿಸಿದೆ 7 ಅಸುರಾಂತಕ ಶ್ರೀಕೃಷ್ಣನೆಂದೆನಿಸಿದೆ 8 ಅಪರಿಮಿತ ಮಹಿಮ ಬುದ್ಧನೆಂದೆನಿಸಿದೆ 9 ಸಾಸಿರ ನಾಮನೆ ಕ(ಲ್ಕಿ)ಯೆಂದೆನಿಸಿದೆ 10 ಹೃತ್ಕಮಲೇಶ ಸದಾನಂದನೆನಿಸಿದೆ 11
--------------
ಸದಾನಂದರು
ನಾರಾಯಣ ಹರಿ ನಾಮವ ಭಜಿಪಗೆ ನರಕದ ಭಯವುಂಟೆ ನಾರದ ಸನಕ ಸನಂದನ ಸುರನರ ಪಾಲಿತ ಕರುಣಾಕರನರಹರಿ ಎಂದು ಪ ಖಗರಾಜಗಳುಕದ ಉರಗನುಂಟೆ ದೊಡ್ಡ ಮೃಗರಾಜ ಗಳುಕದ ಆನೆಯುಂಟೆ ನಿತ್ಯ ಜಗದುದರನೆ ಜಗದೊಡೆಯ ಜಾಹ್ನವಿಪಿತ ತ್ರಿಗುಣ ನಿರ್ಗುಣನೆಂದು1 ತ್ರಯಂಬಕ ನುರಿಗಣ್ಣ ಲುಳಿದವರುಂಟೆ ಬಲಿಬಂಧನ ನರಹರಿ ಎಂದು 2 ಕುಳಿಶಕಳುಕದ ಪರ್ವತವುಂಟೆ ಚಲುವ ನಳಿನ ಮಿತ್ರನ ಮುಂದೆ ತಮವುಂಟೆ ಕಾಮ ಚೆಲುವ ಜಲಜಮಿತ್ರ ಕುಲಲಲಾಮನೆ ಎಂದು 3 ಹರಿಯೆ ರಕ್ಷಿಸಲು ಕೊಂದವರುಂಟೆ ಮನ ಮುರಿದು ಕೊಂದರೆ ಕಾವವರುಂಟೆ ಮುರಹರ ನಾರಾಯಣ ನರಹರಿ ಕರಿವರದ ಪಾಲಿತ ಸುರನರರ ಸೇವಿತನೆಂದು 4 ಹುತಾಶನನಿಗಳುಕದ ಕಾನನವುಂಟೆ ವನರುಹಾಂಬಕ ವಾಯುತನಯ ಕೋಣೆಯ ಲಕ್ಷ್ಮಿರಮಣ ಸನಕ ಸುತ ಚಿನುಮಯಾತ್ಮಕನೆಂದು 5
--------------
ಕವಿ ಪರಮದೇವದಾಸರು