ಒಟ್ಟು 11458 ಕಡೆಗಳಲ್ಲಿ , 137 ದಾಸರು , 6242 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗದಾಖ್ಯ ವೃಕ್ಷ ಚಿಂತಿಪುದು ಬುಧರು ಪ ಭಗವಂತನೆಂಬ ಆಗಸದಲಿ ಪಸರಿಸಿದಅ.ಪ. ಚತುರಾಸ್ಯ ವಾಣಿ ಈರ್ವರು ಬೀಜ ಚಿತ್ಪ್ರ ಕೃತಿ ಪೃಥವಿ ಕರ್ಮವು ಬೇರು ತ್ರಿಗುಣತ್ವ - ವು ಕ್ಷಿತಿ ಜಲಾನಲ ವಾಯು ಗಗನ ಶಾಖೆಗಳಿಂದಕೆ ಶತಕಿರಣ ಉಪಕೊಂಬೆಯೆನಿಸಿ ಕೊಂಬವು ಇದಕೆ 1 ಅಹಂಕಾರ ಬಲದಿಂದ ಅಭಿವೃದ್ಧಿ ಐದುವುದು ಕುಸುಮ ತನ್ಮಾತ್ರ ರಸದಿ ಸಹಿತವಾರ ಪ್ರವೃತ್ತಿ ನಿವೃತ್ತಿ ಕರ್ಮಫಲ ಅಹರಹರ್ ಭುಂಜಿಪವು ತನ್ನಾಮ ಜೀವಖಗ 2 ನಾನು ನನ್ನದು ಎಂಬ ನೀಡ ದ್ವಯಗಳಿದಕೆ ಹೀನ ವಿದ್ಯಾದಿ ಪಂಚಕವೆ ಸರ್ಪಗಳಲ್ಲಿ ಶ್ರೀನಿಧಿ ಜಗನ್ನಾಥವಿಠಲ ಸಂರಕ್ಷಕನು 3
--------------
ಜಗನ್ನಾಥದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗನ್ನಾಥ ಸಮುದ್ರ ತೀರದಿ ಜಗನ್ನಾಥ ಸಮಗ್ರ ಸೇವೆಯ ಕೊಡುವಾತ ಪ ಸಮರ್ಥ ಫಲ್ಗುಣ ರಥಸೂತ ಸಮಸ್ತಲೋಕವ ಪೊರೆವಾತ ಅ.ಪ ಬಲಭದ್ರಾನುಜೆಯರನೊಡವೆರಸಿ ಜಲನಿಧಿ ಮಧ್ಯದಿ ದ್ರೋಣದಿಂದಿಳಿಸಿ ಒಲಿದು ವೈಕುಂಠಕೆ ಅವದಿರ ಕಳಿಸಿ ಸಲೆ ನಿಂದೆಯಾ ಜಗನ್ನಾಥನೆಂದೆನಿಸಿ 1 ಪಾಂಡವರಕ್ಷಕ ನೀಲಾಂಗಾ ಪುಂಡರೀಕಾಂಬಕಾ ಮದನಾಂಗಾ ಅಂಡಜವಾಹನ ರಿಪುಮದಭಂಗ ಕಂಡೆ ನಿನ್ನನಾ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಗನ್ನಾಥದಾಸರ ಸ್ತೋತ್ರ ಅಂಬುಜಾಕ್ಷಿ ಸ್ತಂಭದಿಹನ್ಯಾರೇ - ಸಾರೇ ಪ ನಂಬಿ ಭಜಿಸುವ ಭಕುತರ ಮನದಹಂಬಲ ನೀಡುವರೆ - ನೀರೇ ಅ.ಪ ಸುರರೊಡೆಯನೋಲ್ ಪರಿಪರಿಯಲೈ- ಶ್ವರ್ಯದಿಂ ರಾಜಿಸುವರ್ಯಾರೇಹರಿಕಥಾಮೃತ ಗ್ರಂಥ ವಿರಚಿಸಿಧರಣಿ ಸುರರುದ್ಧರಿಸಿದವರೆ 1 ಫುಲ್ಲಲೋಚನೆ ಬಲ್ಲೆಯಾ ಇವ -ರಿಲ್ಲಿರುವ ಕಾರಣವಿದೇನೆಫುಲ್ಲನಾಭನ ಪುಡುಕುತಲೀಪ್ರಹ್ಲಾದನನುಜ ಸಹ್ಲಾದರಿವರೆ 2 ಜಲಜ ತುಳಸಿಮಣಿ ಸುಮಾಲಿಕೆಗಳದಿ ಧರಿಸಿಹನ್ಯಾರೆ - ನೀರೇಕಲಿಯುಗದಿ ಕಮಲಾಪತಿ ವಿ- ಠಲನ ಒಲಿಸಿದಿಳೆಯೊಳಗೆ ಮೆರೆವರೆ 3
--------------
ಕಮಲಪತಿವಿಠ್ಠಲರು
ಜಗನ್ನಾಥದಾಸರು ರಕ್ಷಿಸೋ-ಗುರುವರ-ರಕ್ಷಿಸೋ ಪ ಈಕ್ಷಿಸೊ ಕರುಣ ಕಟಾಕ್ಷದಲಿನ್ನ ಶಿಕ್ಷಿಸು ಮಧ್ವಾಗಮವ ಮುನ್ನ ಉಕ್ಕಿಸು ಭಕ್ತಿ ವಿರಕ್ತಿ ಚೆನ್ನ | ಆಹ ಲಕ್ಷ್ಮೀಕಾಂತನ ಅಪರೋಕ್ಷದಲಿ ಕಂಡು ಪ್ರ- ತ್ಯಕ್ಷ ಔತಣ ಉಂಡ ದಕ್ಷ ಶ್ರೀ ಜಗನಾಥ ವಿಠಲನ ದೂತ ಅ.ಪ. ನರಸಿಂಹದಾಸರ ಕುವರಾ-ಧರಿಸಿದೆ ಶ್ರೀನಿವಾಸನಪೆಸರ ವರಕವಿತಾ ಹುಟ್ಟಿನ ಸಾರ-ಮೆರೆಯಿತು ಕೀರ್ತಿ ಅಪಾರ \ಆಹ ವರದೇಂದ್ರನ್ನ ಅಶುಕವಿತಿಯಲಿಪೊಗಳಿ ವರಶಿಷ್ಯನಾಗುತ ಮೂರೊಂದು ಶಾಸ್ತ್ರದಿ ಕಡುಹುಲಿ ಎನಿಸಿದೆ 1 ನ್ಯಾಯಶಾಸ್ತ್ರದಿ ಜಗಜ್ಜಟ್ಟೀ-ವೇದಾಂತರಸಗಳ ಭಟ್ಟಿ ಮಾಯಾವಶಿರ ಮೆಟ್ಟಿ-ಅಹಂಕಾರ ಶಿರದಲಿಟ್ಟಿ ಆಹ ಶ್ರೇಷ್ಠವಿಜಯದಾಸರು ಮನೆ ಮುಟ್ಟಿ ಕರೆದರು ನಿನ್ನ ಬಹು ಬಹು ಕಂಗೆಟ್ಟೀ ಬತ 2 ಹೋಯಿತು ಕಳೆಮುಖದಿಂದ ಕಚ್ಚಿತು ಭರದಿಂದ ಆಹ ಭರದಿ ಹರಿಯ ಕರುಣ ಜರುಗಿ ಪೋದುದಕಂಡು ಕೊರಗಿ ಕೊರಗುತ ಕ್ಷೇತ್ರ ತಿರುಗುತ ಕೊನೆಗೆ ಗುರು ರಾಘವೇಂದ್ರರ ಪುರವ ಸೇರುತ ಬಹಳ ಕಾಯ ದೆರಗಿ ಸೇವೆಯಗೈದೆ 3 ಕರುಣಾಮಯನು ಸ್ವಪ್ನದಿ ಗುರುವು- ಗುರು ದ್ರೋಹ ಕಾರಣ ವರುಹಿ ಸುರಿಸಿ ಆಶೀರ್ವಾದವ ಶಿರದಿ- ತೆರಳೆಂದ ವಿಜಯದಾಸರ ಬಳಿ ಆಹ ತೆರೆದು ಕಂಗಳು ಒಡನೆ ತರಿದು ಮದಮಾತ್ಸರ್ಯ ಕರೆದು ಕುಡಿಯುತ ಶಿಷ್ಯ- ವರನು ಎನಿಸುತ ಚರಣಸಾರುವ ಬಿಡದೆ ಗೋಪಾಲದಾಸರ 4 ಸ್ವಗುರುಭಾವವತಿಳಿದು ತನ್ನಾಯುವನೆ ಇತ್ತ ಆಹ ಕೊಂಡು ಆಯುರ್ದಾನ ತೊಂಡನೆಂದಡಿಗೆರಗಿ ಕೊಂಡು ಶ್ರೀಹರಿದಾಸ ಗಂಡುದೀಕ್ಷೆಯ ಒಡನೆ ತಾಂಡವಾಡುತ ಪೋಗಿ ಪಾಂಡುರಂಗನ ಪುರದಿ ಮಂಡೆ ಮುಳುಗಿಸೆ ನದಿಲಿ ಕಂಡೆ ಅಂಕಿತ ಶಿರದಿ 5 ಪಂಡಿತನಾನೆಂಬ ಹೆಮ್ಮೆ ಬರಿ-ಪುಂಡತನವಲ್ಲದೆ ಹರಿಯ ನಿಜ ನಿನ್ನ ಚರಿತೆ ಆಹ ತಂಡತಂಡದ ಕವನ ದಂಡೆ ಹಾರಲು ಹರಿಗೆ ಕೊಂಡು ಔಡಣ ನಡಿಸೆ ಉಂಡು ಸಂತಸದಿಂದ ತುಂಡುಗೈಯುವ ಭವವ ಕಂಡೆ ನಾಕವ ಭುವಿಲಿ 6 ದೇಶದೇಶಗಳ ಸಂಚರಿಸಿ-ಹೇಸಿ ಮತಗಳ ನಿರಾಕರಿಸಿ ಪೊರೆದೆ ಹರೆಸಿ ಆಹ ಭಾಷಾದ್ವಯ ಯೋಜನೆ ಮೀಸಲು ನಿನಗೆಂಬೆ ವ್ಯಾಸ ರಾಜಾದಿಗಳ ಆಶೆಯಂದದದಿ ತತ್ವ- ರಾಶಿ ತುಂಬುತ ಗ್ರಂಥರಾಜ ರಚಿಸುತ ಜಗಕೆ ತೋಷ ತಂದಿತ್ತಿಯೊ ದಾಸಜನರುಲ್ಲಾಸ 7 ಶ್ರೀಮದ್ಧರಿಕಥಾಮೃತಸಾರ-ನೇಮ ದಿಂದೋದುವನೆ ಧೀರ ತಾಮಸರಿಗಿದು ಬಹಳದೂರ- ನೀಮಾಡಿದೆ ಮಹೋಪಕಾರ ಆಹ ಕಾಮವರ್ಜಿತವಾಗಿ ಪ್ರೇಮದಿ ನರಹರಿಯ ಭಾಮಸಹ ಸಂತತ ನೇಮದಿಂ ಧ್ಯಾನಿಸುತ ನಿತ್ಯ ಸಕಲೇಂದ್ರಿಯ ವ್ಯಾಪಾರ ಧೂಮಕೇತುವು ಎನಿಸುತ ನಮ್ಮಘಕಾನನಕೆ 8 ಪ್ರಾಣೇಶ ಕರ್ಜಗಿ ದಾಸಾರ್ಯರವೃಂದ- ನೀನಾಗಿ ಪೂರೆದಂತೆ ಘನ ಅಭಿಮಾನದಿಂದ ದೀನರೆಮ್ಮಯವೃಂದ ಕಾಯೆಂಬೆ ಮುದದಿಂದ- ತಾಣ ನಿಮ್ಮದೆ ನಮಗೆ ದಾಸಪಂಥ ಸ್ತಂಭ ಆಹ ಕೃಷ್ಣಾಗ್ರಜ ಶಲ್ಯ ಸಹ್ಲಾದ ಮತ್ತಾ ಪುರಂದರ ದಾಸಾತ್ಮಜನೀನಂತೆ ದೀನಜನೋದ್ಧಾರಗೈಯ್ಯೆ ಮುಂದೇಳುಬಾರಿ ಜನ್ಮಯೆತ್ತು ವಿಯಂತೆ ಶರಣು ಕರುಣಾಮಯ 9 ಕನ್ನಡಕೆ ಮುಳ್ಳು ಕುವರ ನೀಮುದ್ದು ಆಹ ಶರ್ಕರಾಕ್ಷಸಗೋಸ್ಥ ಅನುಸಂಧಾನ ಕ್ರಮ ಸು ನೀಕವಡಗಿಸಿ ಕವನ ಕಡಲೊಳು ಸಾಕಿಹೆ ಹರಿ ಭಕ್ತಸಂಘವ ಹಿರಿಯ ದಾಸರ ಪಥವನನುಸರಿಸಿ ಶಕ್ತನಾವನು ಗುಣಿಸೆ ನಿನ್ನುಪಕಾರ ಜಗಕೆ 10 ಸಣ್ಣವನು ನಾ ನಿನ್ನು ಗುರುವೇ-ನಿನ್ನವ ಸತ್ಯ ಮನ್ಮನ ಪ್ರಭುವೆ ಮನ್ನಿಸಪರಾಧ ಕಲ್ಪ ಧ್ರುಮವೆ-ಚಿಣ್ಣರ ಸಲಹೆ ಪಿತಗೆ ಶ್ರಮವೆ ಆಹ ಘನ್ನ ಜಯತೀರ್ಥ ವಾಯ್ವಂತರ್ಗತ ಶ್ರೀ ಕೃಷ್ಣವಿಠಲ ತದ್ವನನೆಂದು ಭಜಿಸುವ ಭಾಗ್ಯ ಜನ್ಮಜನ್ಮಂತರ ಕೊಟ್ಟು ಕಾಪಾಡುವಂಥ ನಿನ್ನಭಯಕರವೆನ್ನ ಶಿರದಲಿಡುವಲಿ ಸತತ 11
--------------
ಕೃಷ್ಣವಿಠಲದಾಸರು
ಜಗನ್ನಾಯಕ ಗುರುಪಾಹಿಮಾಂ | ಅಘನಾಶಕ ವರದಾಯಕಾ | ಪ ವರಮಾನವಿ ಪುರ ಮಂದಿರ ಕರುಣ ಭರಣ ಶಾಂತ ಮೂರುತಿ1 ನಿರುತ ನಿನ್ನಯ ಚರಣನಂಬಿದೆ ದುರಿತ ತರಿದು ತೋರೋ ಸತ್ವಥ 2 ಭೂಮಿಜಾವರ ಶಾಮಸುಂದರ ನಾಮಗರಿಯೋ ಪ್ರೇಮಸಾಗ 3
--------------
ಶಾಮಸುಂದರ ವಿಠಲ
ಜಗವಿದು ಪುಸಿಯೈ ಬಗೆವೊಡೆ ಮನುಜಾ ತೋರುತಿಹ ಕನಸಿನಂತೆ ಇರುವೆ ಪ ನನಸಿನ ಅರಿವದು ದೊರಕುವ ತನಕ ಕನಸಿದು ಎನ್ನುವ ಕಲ್ಪನೆ ಇಹುದೆ ? ನನಸಿನ ನನಸಾಗಿಹ ಪರವಸ್ತುವೆ ತಾನೆ ನಿಜವು ಎಂಬರಿವಾಗುತಲಿರೆ 1 ನಿರುತದಿ ಸಮನಾಗಿರಲರಿಯದ ಈ ತೋರಿಕೆ ಅನಿಸಿಕೆಗಳು ನಿಜವಲ್ಲವು ಪರಿಕಿಸೆ ಸತತದಿ ಸಮನಾಗಿರುತಿಹ ಪರಮ ಪದವೆ ತಾನೆಂದರಿಯುತಲಿರೆ 2 ಅಳಿಯುವ ಜಗವಿದು ಬೆದರುವಿ ಏತಕೆ ತಿಳಿಯುತಲೀಪರಿ ನಿಜವಸ್ತುವನು ಗಳಿಸಿಕೊಂಡು ನೀ ನಿನ್ನಯ ಮುಕುತಿಯ ಕಲುಷರಹಿತಶಂಕರನಡಿಯರಿಯಲು 3
--------------
ಶಂಕರಭಟ್ಟ ಅಗ್ನಿಹೋತ್ರಿ
ಜಡಮತಿಗಡ ಕಡಿದೀಡ್ಯಾಡಿ ಪಡಿರೋ ಸನ್ಮಾರ್ಗವ ಹುಡುಕ್ಯಾಡಿ ಪ ಗಡಗಡಸದೃಢದಯಿಡುತೋಡೋಡಿ ಪಡಿರೋ ಕಡು ಅನಂದ್ವೊಯ್ಕುಂಠ ನೋಡಿ ಅ.ಪ ಚಿಂತೆ ಭ್ರಾಂತಿಗಳ ದೂರಮಾಡಿ ನಿ ಶ್ಚಿಂತರಾಗಿರೋ ಮನ ಮಡಿಮಾಡಿ ಶಾಂತಿತೈಲ್ಹೊಯ್ದು ಜ್ಞಾನಜ್ಯೋತಿಕುಡಿ ಚಾಚಿ ನಿಂತು ನೋಡಿರೋ ಹರಿಪುರದಕಡೆ ಅಂತ್ಯ ಪಾರಿಲ್ಲದಾತ್ಯಂತ ಪ್ರಕಾಶದಿಂ ನಿಂತು ಬೆಳಗುತಾರೋ ಆನಂತಸೂರ್ಯರು ಕೂಡಿ 1 ಬೋಧಾದಿಮಯ ಮಹದ್ವಾರಗಳು ಮತ್ತು ವೇದ ನಿರ್ಮಯ ಪುರಬೀದಿಗಳು ಆದಿಅಂತಿಲ್ಲದಷ್ಟ ಭೋಗಗಳು ವಿ ನೋದ ಮುಕ್ತಿ ಕಾಂತೇರಾಟಗಳು ವೇದವೇದಾಂತ ಅಹ್ಲಾದದಿಂ ಪೊಗಳುವ ಸುಜನ ಮಹದಾದಿಪದವಿಗಳು2 ಸೇವಿಪ ಸುರಮುನಿಗಣಗಳು ಕೋವಿದ ನಾರದಾದಿ ಗಾನಗಳು ರಂಭೆ ನಾಯಕಿಯರ ಮಹನರ್ತನಗಳು ಸಾವಿರಮುಖಪೀಠದ್ಹೊಳೆವ ಶ್ರೀರಾಮನ ಪಾವನಪಾದಕಂಡು ಸಾವ್ಹುಟ್ಟು ಗೆಲಿರೆಲೋ 3
--------------
ರಾಮದಾಸರು
ಜನನಿ ರುದ್ರಾಣಿ ರಕ್ಷಿಸು ಎನ್ನ ಜಗದೀಶನ ರಾಣಿ ಪ. ವನಜಭವಸುರಮುನಿಕುಲಾರ್ಚಿತೆ ಕನಕವರ್ಣಶರೀರೆ ಕಮಲಾ- ನನೆ ಕರುಣಾಸಾಗರೆ ನಮಜ್ಜನ- ಮನಮುದಾಕರೆ ಮಾನಿತೋದ್ಧರೆ ಅ.ಪ. ಆದಿಕೃತಾಯುಗದಿ ಪ್ರತಿಷ್ಠಿತ- ಳಾದೆ ಧರಾತಳದಿ ಆದಿತೇಯರ ಬಾಧಿಸುವ ದಿತಿ- ಜಾಧಮರ ಭೇದಿಸಿದೆ ಸಜ್ಜನ- ರಾದವರ ಮನ್ನಿಸಿದೆ ತ್ರೈಜಗ- ದಾದಿಮಾಯೆ ವಿನೋದರೂಪಿಣಿ 1 ಖಂಡ ಪರಶುಪ್ರೀತೆ ನಿಖಿಲಬ್ರ- ಹ್ಮಾಂಡೋದರಭರಿತೆ ಚಂಡಮುಂಡವೇತಂಡದಳನೋ- ದ್ದಂಡಸಿಂಹೆ ಅಖಂಡಲಾರ್ಚಿತೆ ಪಾಂಡುತನುಜ ಕೋದಂಡ ವಿತರಣೆ ಚಂಡಿಕೇ ಕರದಂಡಲೋಚನಿ2 ಸಿಂಧೂರ ಸಮಯಾನೆ ಸರಸ ಗುಣ- ವೃಂದೆ ಕೋಕಿಲಗಾನೆ ಸುಂದರಾಂಗಿ ಮೃಗೇಂದ್ರವಾಹಿನಿ ಚಂದ್ರಚೂಡಮನೋಜ್ಞೆ ಸತತಾ- ನಂದಪೂರ್ಣೆ ಮುನೀಂದ್ರನುತೆ ಸುಮ- ಗಂಧಿ ಗೌರಿ ಶಿವೇ ಭವಾನಿ 3 ಲಂಬೋದರಮಾತೆ ಲಲಿತ ಜಗ- ದಂಬಿಕೆ ಗಿರಿಜಾತೆ ಕಂಬುಕಂಠಿ ಕಾದಂಬನೀಕು- ರುಂಬಜಿತಧಮ್ಮಿಲ್ಲೆ ತವ ಪಾ- ದಾಂಬುಜವ ನಾ ನಂಬಿದೆನು ಎನ- ಗಿಂಬು ಪಾಲಿಸೆ ಶುಂಭಮರ್ದಿನಿ 4 ಘನವೇಣುಪುರವಾಸೆ ಸರ್ವಾರ್ಥದಾ- ಯಿನಿ ತ್ರೈಜಗದೀಶೆ ಸನಕನುತೆ ಶ್ರೀಲಕ್ಷುಮಿನಾರಾ- ಯಣಭಗಿನಿ ಶ್ರೀಮಹಿಷಮರ್ದಿನಿ ಮನಮಥಾಮಿತರೂಪೆ ಕಾತ್ಯಾ- ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಜನರ ಪಾಲಿಸುವ ಷಣ್ಮುಖನ ನಾಮಾ ಪ ಪರಕೆ ಪರತತ್ವವಾಗಿಹ ದಿವ್ಯನಾಮ 1 ತಾರಕ ಬ್ರಹ್ಮವಾಗಿಹ ದಿವ್ಯನಾಮ 2 ಶಂಭುಪುತ್ರನೆ ನಿನ್ನ ದಿವ್ಯನಾಮ 3 ನಿಚ್ಚ ಸಚ್ಚಿದಾನಂದ ಚಿನ್ಮಯ ನಿನ್ನ ನಾಮ 4 ಅನುದಿನ ಅಘ ಕಳೆವ ನಾಮ ||5||
--------------
ಬೆಳ್ಳೆ ದಾಸಪ್ಪಯ್ಯ
ಜನುಮ ಜನುಮದಲ್ಲಿ ಕೊಡು ಕಂಡ್ಯ ಹರಿಯೆ ಪ ಅನಿಮಿತ್ತ ಬಂಧು ಕೃಷ್ಣ ದಯದಿಂದಲೆನಗೆ ಅ.ಪ ಮೆರೆವ ಊಧ್ರ್ವ ಪುಂಡ್ರ ಎರಡಾರು ನಾಮವುಕೊರಳೊಳು ತುಲಸಿಯ ವನಮಾಲೆಯುಮೆರೆವ ಶಂಖಚಕ್ರ ಭುಜದೊಳೊಪ್ಪುತ ನಿಮ್ಮಸ್ಮರಿಸುತ್ತ ಹಿಗ್ಗುವ ವೈಷ್ಣವ ಜನುಮವ 1 ಹರಿಯೆ ಸರ್ವೋತ್ತಮ ರಾಣಿ ಲಕುಮಿ ಬೊಮ್ಮಹರ ಇಂದ್ರಾದ್ಯಖಿಳರು ತವ ಸೇವಕರುವರ ತಾರತಮ್ಯ ಪಂಚ ಭೇದ ಸತ್ಯವೆಂದುನೆರೆ ಪೇಳುವ ವಾಯುಮತದ ಸುಜ್ಞಾನವ 2 ಸಿರಿ ಕೃಷ್ಣ ನಿನ್ನಲ್ಲಿಅಕಳಂಳವಾದ ನವವಿಧ ಭಕುತಿಯನು 3
--------------
ವ್ಯಾಸರಾಯರು
ಜನುಮ ಸಾರ್ಥಕವ ಮಾಡಿಸು ತಂದೇ ನೆನೆವರ ಕಾವನು ನೀನೆಂದು ಬಂದೇ ಪ ನಾನಿರುವುದು ಲೌಕಿಕರ ಸಮೂಹ ಏನ ಗೈವುದೋ ಪ್ರಪಂಚದ ಮೋಹ 1 ಅಜ್ಞನು ನಾ ನನ್ನದೆಂಬುದ ಬಿಡಿಸು ಸುಜ್ಞಾನದೀಪ ಕೊಟ್ಟು ಪ್ರಜ್ವಲಿಸು 2 ಅಜ್ಞನಾ ಯೆನ್ನಪರಾಧಾವ ಕ್ಷಮಿಸು ವಿಜ್ಞಾಪಿಸಿಕೊಂಬೇ ನೀ ಮನಸ್ಕರಿಸು 3 ಹಗಲಿರಳು ಯನ್ನ ಹೆಗಲೊಳು ಕುಳಿತು ಮಿಗಿಲಾಗಿಸು ದಿನ್ಯ ಸೇವೆಗಳನಿತು 4 ನಾಲಗೆ ಮಧ್ಯದಿ ನೀ ನಲಿದಾಡಿ ಬಾಳುವೆಯೆಲ್ಲವು ಭಜಿಪುದ ಮಾಡಿ 5 ಕಣ್ಣೆಲ್ಲಿ ಸುಳಿದರೆ ಅಲ್ಲಿನೀ ಕಂಡು ಉನ್ನತವೈಭವ ತೋರು ಮನಗೊಂಡು 6 ಜಾಜೀಕೇಶವ ಜಯ ಪದವಿತ್ತು ರಾಜೀವಾಂಬಕ ಪೊರೆ ಭಾರಪೊತ್ತು 7
--------------
ಶಾಮಶರ್ಮರು
ಜನ್ಮ ಸಫಲ ಕಾಣಿರೋ ನಮ್ಮ ಗುರು ವಾದಿರಾಜರಾಯರ ಕಂಡು ಜನ್ಮ ಸಫಲ ಕಾಣಿರೋ ಪ ಯುಕ್ತಿ ಮಲ್ಲಿಕೆಯೆಂಬ ಗ್ರಂಥ ಮಾಡಿಹರು ಮತ್ತೆ ಮುತ್ತಿನ ಸಿಂಹಾಸನವನೇರಿಹರು ಮತ್ತೆ ದುರ್ವಾದೀಭಗಳಿಗೆ ಮೃಗೇಂದ್ರರು ಸೂತ್ರನಾಮದಿ ಮುಂದೆ ಮೆರೆವರು 1 ದಾಸಕೂಟಗಳಲ್ಲಿ ರತ್ನದಂತಿಹರು ಭಾಸುರಕಾಯದಿ ನೂರ ಇಪ್ಪತ್ತು ವರ್ಷಗಳೊಳಗಿದ್ದು ಮೆರೆದವರು 2 ಮೂಜಗದೊಳಗಿಂಥ ಗುರುಗಳೆಲ್ಲಿಹರು ಕಂಜಸುತನ ಪದವೇರುವವರು ರಾಜೇಶ ಹಯಮುಖ ಕಿಂಕರಾಗ್ರಣಿಗಳು ರಾಜಿಪ ಶ್ರೀಸೋದಾಪುರದೊಳಗಿಹರು 3
--------------
ವಿಶ್ವೇಂದ್ರತೀರ್ಥ
ಜನ್ಮ ಸಫಲವಾಯಿತು ಪ. ಆದಿ ಅನಂತ ಜನಾರ್ದನನ ಕಂಡುಎನ್ನ ಜನ್ಮ ಸಫಲವಾಯಿತು ಅ.ಪ. ಬ್ರಹ್ಮಾನಂದ ಸುಗುಣ ನಿಮ್ಮ ಮಹಿಮೆಯ ಅ-ಗಮ್ಯಗೋಚರನೆಂದು ಸ್ತುತಿಸುತಿರೆಬ್ರಹ್ಮರುದ್ರಾದಿಗಳು ಇಂದ್ರ ಚಂದ್ರಾದಿಗಳುನಿರ್ಮಲಮೂರುತಿ ನಿಮ್ಮ ನಿಜವ ತೋರಿದಮ್ಯಾಲೆ 1 ಒಡ್ಡಿ ನಿಂತದ್ದು ಕಂಡು 2 ಮಕರಕುಂಡಲ ಕೌಸ್ತುಭ ಕೊರಳವೈಜಯಂತೀ ಮಾಲಿಕೆಗಳ ಕಂಡು ಎನ್ನ 3 ನಡುವಿನ [ಬಾಗಿಲಲಿ]ನಾಭಿಕಮಲ ಕಂಡೆಉದ್ಭವಿಸಿ ಮೆರೆವ ವಿರಿಂಚಿಯ ಕಂಡೆಜಡಿವೊ ಪೀತಾಂಬರ ನಡುವಿನೊಡ್ಯಾಣವಉಡಿಗೆಜ್ಜೆ ಮೇಲಿನ ಕಿರುಗೆಜ್ಜೆಗಳ ಕಂಡು 4 ಮೂರನೆ ಬಾಗಿಲಲಿ ಮುದ್ದು ಶ್ರೀಚರಣವುಶ್ರೀದೇವಿ ಭೂದೇವಿ ಸೇವೆಮಾಳ್ಪುದ ಕಂಡೆಸುರರು ಮಾನವರ ಕಂಡೆ ಸ್ತೋತ್ರಮಾಳ್ಪುದ ಕಂಡೆಉರಗಶಯನ ಮ್ಯಾಲೆ ಹಯವದನನ ಕಂಡು ಎನ್ನ 5
--------------
ವಾದಿರಾಜ
ಜನ್ಯಧರ ದೂರ್ವಾಸ ಪ್ರಮುಖ ಮುನಿ ಸ ನ್ಮಾನ ಕರುಣಿ ವಿಲಾಸ ಶ್ರೀ ಶ್ರೀನಿವಾಸ ಪ ಎನ್ನವಗುಣ ಸಹಸ್ರವೆಣಿಸದೆ ನಿನ್ನವರೊಳಗೆಣಿಸಿ ಅನುದಿನ ಮನ್ಮನಾಲಯದೊಳು ನೆಲಸು ಮೈ ಗಣ್ಣನನುಜ ವರಾಭಯ ಶ್ರೀಕರ ಅ.ಪ. ಕಾಮಿತಪ್ರದಕೋಲಾ ಅಂಜನಾಧಿರÀ ಧಾರ ಧಾಮ ಭೂಮಿ ವಿಲೋಲಾ ಶಂಖಣನೃಪವರದ ಹೇಮ ಲೋಚನ ಕಾಲಾ ದ್ವಿಜ ಮಹಿಳೆಯುಳುಹಿದ ಶಾಮಲಾಂಗ ಸುಶೀಲಾ ವೆಂಕಟ ಕುಲಾಲ ಭೀಮಗೊಲಿದ ಮಹಾಮಹಿಮನೆ ಪಿ ತಾಮಹನ ನಾಸೋದ್ಭವನೆ ವಿಯ ಜಾಮಾತ ಕಟಿಸು ತ್ರಾಮಸುತಸೂತ ಪ್ರಮೋದಾಸು ಧಾಮ ಸೌಖ್ಯ ಪ್ರದವರಾಹ ತ್ರಯೀಮಯನೆ ಪ್ರಣತಾರ್ತಿಹರ ಬಲ ಸದನ ಸಹಸ್ರನಾಮ ಸಾಮಜಪತಿ ಪೋಷಕ ರಿಪುವನ ಧೂಮಧ್ವಜ ವಿಧಿಭ ಸೇವಿತ ವ್ಯೋಮಾಳಕಸಖ ಸರ್ವಜ್ಞರ ಮಾಮನೋಹರ ಮನ್ನಿಪುದೆಮ್ಮ 1 ದೀನಜನ ಮಂದಾರ ದೇವಕಿಸುತ ಜಗ ತ್ರಾಣ ಗುಣ ಗಂಭೀರ ಪೃಥ್ವೀಶ ತೋಂಡ ಮಾನವರದ ಉದಾರ ಲುಬ್ದಕನ ವಿಷ್ವ ವೈನತೇಯ ವರೂಥ ಖಳ ಸ್ವ ರ್ಭಾನುವಿನ ತಲೆಗಡಿದು ರವಿಶಶಿ ಕವಿ ಶನಿಗಳ ಶ್ರೇಣಿಯಲಿ ಮಾನಿಗಳ ಮಾಡ್ಡ ಮ ಕಲಿಮಲಾಪಹಾರಿ ಕೃ ಶಾನುಸಖ ಸಂಪೂಜ್ಯ ಸುಮನಸ ಧೇನು ಶರಣ ಜನರ್ಗೆ ಸಂತತ ಆ ನಮಿಸುವೆ ನಳಿನಜಪಿತ ನಿ ನಿರವದ್ಯ ನಿರುಜ ಬ್ರ ಹ್ಮಾಣಿ ಸುರನಿಕರ ನಿಲಯನುಸಂ ಧಾನಕೆ ಕೊಡು ಬಹುವಿಧಕರ್ಮ 2 ಸೇವ್ಯ ದಾರವಿಂದ ಮಹಂತಾ ಸತ್ವಾದಿ ತ್ರಿಗುಣವಿ ದೂರ ದಿತಿಜ ಕೃತಾಂತಾ ಗುಣರೂಪ ಪಾರಾ ವಾರ ವಿಗತಾದ್ಯಂತಾ ಶ್ರೀ ಭೂಮಿಕಾಂತಾ ಕಮಠ ವರಹ ಕ ಕಶಿಪು ವಿದಾರಣನೆ ಭಾ ಗೀರಥಿಯ ಪದನಖದಿಪಡದಂಗಾರ ವರ್ಣನೆ ಭೃಗುಕುಲೋದ್ಭವ ವಾರಿನಿಧಿಬಂಧನ ವನೌಕಸ ವಾರ ಪೋಷಕ ನಂದಗೋಪ ಕು ಮಾರ ತ್ರಿಪುರ ವಿದೂರ ತುರಗವನೇರಿದ ಜಗನ್ನಾಥವಿಠಲ ಸಾರುವೆ ತವÀ ಪದಪಂಕಜ ಜಂ ಭವ ಭಯ ತಾರಕ ನಿನ್ನವರೊಳು ತತ್ವ ವಿಚಾರಕೊಡು ಚಿರಕಾಲದಲಿ 3
--------------
ಜಗನ್ನಾಥದಾಸರು