ಒಟ್ಟು 2825 ಕಡೆಗಳಲ್ಲಿ , 118 ದಾಸರು , 1964 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ಹದಿನಾಲ್ಕು ಲೋಕದ ದೊರೆಯೆ ಪ ಕಮಲ ಷಟ್ ಚರಣನೆನಿಸಿ ಎನ್ನ ಪೊರೆವುದು ಸಂತತ ಅ.ಪ ವೀರಭಕ್ತ ಪ್ರಹ್ಲಾದ ವರದ ಕರುಣಾರಸ ಪರಿಪೂರ್ಣ ಭವ ಸನ್ನುತ ಚಾರ ಚರಣನಳಿನ ಸಾರಿದ ಪ್ರಣತ ಜನಾರ್ತಿನಿವಾರಣ ಘೋರದುರಿತ ಮದಗಜ ಪಂಚಾನನ ನಾರದ ಮುನಿವರ ಸೇವಿತ ಚರಣ ಸಾರಸಾಕ್ಷಿ ಶ್ರೀ ಕರಿಗಿರಿ ನಿಕೇತನ 1
--------------
ವರಾವಾಣಿರಾಮರಾಯದಾಸರು
ಹರಿಯೇ ನಿನ್ನಯ ಸಿರಿಯನು ಬಣ್ಣಿಸೆ ನರನಾದೆನಗಳವೇ ಪ ಕರುಣಾಳುವೆ ನಾಂ ಕರಗಳ ಮುಗಿವೆ ಪÀರವಾಸುದೇವ ಪರಮಾತ್ಮಾ ಅ.ಪ ಸತಿಶ್ರೀದೇವಿಯು ನುತಚತುರಾನನ ಪತಿತೋದ್ಧರೆ ಗಂಗೆಯು ಮಗಳು ಸ್ತುತಿಗೈಯುವವೇದ ತತಿಯಿಂ ನಿತ್ಯ ಭೃತ್ಯರು ಸುರಗಣ ಸರ್ವೇಶಾ 1 ಸಾಗರ ಮಧ್ಯದಿ ಭೋಗಿಯನೊರಗಿ ಯೋಗೀಜನರ ಹೃದಯದಿ ನೆಲಸಿ ಆಗಮ ಪೂಜೆಯ ರಾಗದಿ ಪಡೆವ 2 ಶಂಖಸುದರ್ಶನ ಪಂಕಜಧರಶ್ರೀ ವೆಂಕಟವರದ ಶೀರಂಗ ಕಿಂಕರ ಪಾಲಕ ಜಾಜೀಶಾ 3
--------------
ಶಾಮಶರ್ಮರು
ಹರಿಲೀಲೆ ಹರಿಲೀಲೆ ಪ ಜಗದೊಳು ಸುಜನರು ಬಳಲುತಲಿರುವುದು ಅ.ಪ ಉಚ್ಚಕುಲದಿ ಪುಟ್ಟಿ ಸ್ವಚ್ಛ ಜ್ಞಾನದಿಂದ ಅಚ್ಯುತನಂಘ್ರಿಯ ಪೂಜಿಸುತಿರಲು ತುಚ್ಛ ಜನರುಗಳು ಸ್ವೇಚ್ಭೆಯಿಂದಲಿ ಹುಚ್ಚು ಹರಟೆಗಳ ಹರಟುವುದೆಲ್ಲವು 1 ಪಂಡಿತರೆಲ್ಲ ಅಖಂಡ ಕಲೆಗಳಿಗೆ ಮಂಡನರೆನಿಸಿ ಭೂಮಂಡಲದಿ ಭಂಡಿ ಭಂಡಿ ಧನರಾಶಿಗಳಿರಲಾಗಿ ಪಿಂಡಕ್ಕಿಲ್ಲದೆ ತಿರುಗುತಲಿರುವುದು 2 ಮನವ ತೊರೆಯುತ ಕಾಮಿನಿಯರುಗಳು ಗಾನವ ಮಾಡಲು ಆನಂದಿಪರು ಜ್ಞಾನಿ ದಾಸರುಗಳು ಭಕುತಿಯಿಂದ ಹರಿ ಗಾನವ ಮಾಡಲು ಮಾನಸದಿರುವುದು 3 ಪನ್ನಗಶಯನನು ತನ್ನ ಭಕುತರಿಗೆ ಹೆಣ್ಣು ಹೊನ್ನು ಮಣ್ಣಿನ ಆಸೆ ಯನ್ನು ಬಿಡಿಸಿ ಅವರನ್ನು ಉದ್ಧರಿಸಿ ಪ್ರ ಸನ್ನನಾಗುವೆ ನಾನೆನ್ನುತ ಪೇಳ್ವುದು 4
--------------
ವಿದ್ಯಾಪ್ರಸನ್ನತೀರ್ಥರು
ಹರಿವಾಯುಗಳು ಮೂರಕ್ಕರದ ದೇವ ಮೂರು ವಸ್ತುವ ಬೆರಸಿ ಮೂರು ಮೂರಾಗಿಸೆಯೆ ಪಾಲಿಸುವ ನಮ್ಮ ಎರಡು ವಸ್ತುವು ಸೇರಿ ದೇಹಕ್ಕೆ ಚಲನೆಯದು ಹರಿವಾಯುಗಳ ಒಲುಮೆ ದೇಹ ರಕ್ಷಕವು4 ಅವ್ಯಾಕೃತಾಕಾಶ ರೂಪದಲಿ ತಾನಿಹನು ವಿಶ್ವಂಭರಾತ್ಮಕನು ದೇವ ನಿಜದಿಂದ ಸೃಷ್ಟಿಗವನೇ ಮೂಲ ವಾಸುದೇವಾತ್ಮಕನು ಮಧ್ವಹೃದಯನಿವಾಸಿ ಸರ್ವಮೂಲನವ 5 ಪೃಥಿವಿಯಪ್ ತೇಜಸ್ಸು ಮೂರು ಭೂತಾಣುಗಳು ತುಂಬಿಯಾಗಸದಲ್ಲಿ ವ್ಯಾಕೃತವದಹುದು ತುಂಬಿ ವಾಯುವಿನಣುಗಳ್ ಒಂದೆಡೆಯೆ ತಾನಹುದು ವ್ಯಾಕೃತಾಕಾಶ 6 ಆಗಸದಿ ವಾಯುವಿನ ಪರಮಾಣು ಒತ್ತಡವೆ ದೃಶ್ಯವಾಯುವು ತಾನೆ ಹರಿವುದಾಗಸದಿ ದೃಶ್ಯವಾಯುವಿನ ಪರಮಾಣುವೊತ್ತಡದಿ ನಿಜ ತೇಜವುದಯಿಸುವುದದರಲ್ಲಿ ಮೂರಿಹವು 7 ತೇಜದಿಂದಲೆ ನೀರು ಜಗಕೆಯಾಧಾರವದು ನೀರಿನಿಂದಲೆ ಭೂಮಿ ಉದಯಿಸುವದದರಿಂ ಪಂಚಭೂತಂಗಳಿವು ಭೂಮಿಯಲಿ ತೋರುವವು ಪಂಚಭೂತಾತ್ಮದ ಪ್ರಕೃತಿಯಿದು ಸತ್ಯ 8 ಇವುಗಳಿಗೆ ಒಡತಿಯಾ ಪ್ರಕೃತಿದೇವಿಯು ಸತ್ಯ ಪ್ರಕೃತಿಯೆದೆಯಲ್ಲಿರುವ ದೇವರೂ ಸತ್ಯ ಪ್ರಕೃತಿ ಪುರುಷರ ಲೀಲೆ ಮಧ್ವಮತದಾ ತಿರುಳು ಮಧ್ವ ಸದ್ಗ್ರಂಥಗಳು ಸರ್ವಮೂಲಗಳು 9 ಭೂತಕೃತ್ತೂ ಅವನೆ ಭೂತಪಾಲಕನವನೆ ಭೂತಭಾವದಲಿದ್ದು ಪ್ರೇರಕನು ಅವನೆ ಆತ್ಮಾಂತರಾತ್ಮವೆಂದೆರಡು ರೂಪಗಳವಗೆ ಹೃದಯದಾಕಾಶದಲಿ ವಾಸವಾಗಿಹನು 10 ಪಂಚಭೂತಗಳು ಪಂಚೇಂದ್ರಿಯಗಳು ಪಂಚ ಕರ್ಮೇಂದ್ರಿಯಗಳ ರಚಿಸಿ ಹರಿಯು ಪಂಚಾತ್ಮಕನು ದೇವ ಪಂಚವಾಯುಗಳಿಂದ ಪಂಚತನ್ಮಾತ್ರಗಳ ಜ್ಞಾನವೊದಗಿಪನು11 ಸುಖ ರತಿ ಪ್ರೇರಕನು ತಾನಾಗಿ ಸಿರಿವರನು ಶಾರೀರ ಪುರದಲ್ಲಿ ನೆಲೆಯಾಗಿ ಇಹನು ಬೆಳಗುತ್ತ ದೇಹವನು ಬೆಳಗಿಸುವ ದೇವತೆಗ ಳವನ ಬಳಿಯಿದ್ದು ಸೇವೆಯ ಗೈಯುತಿಹರು 12 ವಿಶ್ವ ದರ್ಶನಕಾಗಿ ವಿಶ್ವಜನರೊಳು ಕಣ್ಣಿನಲ್ಲಿ ನೆಲೆನಿಂತು ವಿಶ್ವಸಾಕ್ಷಿಯು ಸೂರ್ಯನಲ್ಲಿಯೂ ತಾನಿದ್ದು ವಿಶ್ವವನು ಬೆಳಗಿಸುತ ಜ್ಞಾನವೊದಗಿಪನು 13 ಸೂರ್ಯನೊಂದೆಡೆಯಿದ್ದು ತಾನ್ ಬೆಳಗಿ ಲೋಕವನು ತನ್ನ ಕಿರಣಂಗಳಿಂ ಬೆಳಗಿಸುವ ತೆರದಿ ಕಣ್ಣು ಮೊದಲಾದಿಂದ್ರಿಯಗಳಲಿ ತಾನಿದ್ದು ಅವುಗಳನು ಬೆಳಗಿಸುತ ರಕ್ಷಿಪನು ನಮ್ಮ14 ತೈಜಸದ ದೇವನವ ತೇಜದಾರೂಪದಲಿ ಕಂಠಗತನಾಗಿದ್ದು ದೇಹದಲಿ ಬೆಳಗಿ ಹುಲಿ ಕರಡಿ ಮೊದಲಾದ ಜಂತುಗಳ ಸೃಷ್ಟಿಸುತ ಸ್ವಪ್ನಲೋಕವನು ಮಾನಸಕೆ ತೋರಿಸುವ 15 ಪ್ರಾಜ್ಞರೂಪದ ದೇವನಪ್ಪಿ ಜೀವಾತ್ಮನನು ಮಾಯೆಯಾ ಮುಸುಕಿನಿಂದಜ್ಞಾನಬರಿಸಿ ಜೀವನಿಗೆ ತೋರದುದರಿಂದ ಪ್ರಾಜ್ಞನದಾಗಿ ಜಗಕೆ ತನ್ನಯ ಮಾಯೆಯನು ತೋರಿಸುವನು 16 ನಾಲ್ಕನೆಯ ರೂಪವದು ತುರ್ಯ ನಾಮದಲಿಹುದು ಮುಕ್ತರಿಗೆ ಮಾತ್ರವೇ ತೋರುವುದು ಪೇಳ್ವೆ ಜಾಗರಾದಿಯವಸ್ಥೆಗಳ ನಾಲ್ಕು ಪೇಳಿದನು ಮಾಯಾವಿ ಪರಮಾತ್ಮನದು ಲೀಲೆಗಳಿವು 17
--------------
ನಿಡಂಬೂರು ರಾಮದಾಸ
ಹರಿವಾಸರದುಪವಾಸದ ಫಲವು ಕಂಡವರಿಗೆ ದೊರಕುವುದೆ ಪ. ಹಿರಿದು ಜನ್ಮಗಳಲಿ ಹರಿಯನಾರಾಧಿಪ ಪರಮ ಭಾಗವತರ ಭಕ್ತರಿಗಲ್ಲದೆ ಅ.ಪ. ಸ್ನಾನಸಂಧ್ಯಾನವು ಮೊದಲಾದ ಕರ್ಮ ನ್ಯೂನದ ಪಾಪಂಗಳು ದೀನತ್ವದಿಂದ ತುಚ್ಛರಕೈಯ ಹಿಡಿದ ದು ರ್ದಾನದ ಪಾಪಂಗಳು ಭಾನುಬಿಂಬವ ಕಂಡ ಹಿಮದಂತೆ ಚಿದಾನಂದವಾದ ವ್ರತಕೆ ಸರಿ ಬಾರದು 1 ಪರಸತಿಯರ ನೋಡಿ ಮನವಿಟ್ಟ ಪಾಪವು ಪರದೂಷಣೆಯ ಪಾಪವು ಪರಮಾತ್ಮನ ಹೊಗಳುವ ನಾಲಗೆಯಲ್ಲಿ ನರರ ಹೊಗಳುವ ಪಾಪವು ಪರ ವಸ್ತುಗಳನಪ- ಹರಿಸುವ ಪಾಪಂಗಳು ಕರಿ ಓಡುವಂತೆ ದುರಿತ ಕೋಟಿಗಳನು ಪರಿಹರಿಸುವ ಶ್ರೀ 2 ಆಡುವ ಅನೃತವಾಕ್ಯಗಳಿಂದ ಸಂಭವವಾಗುವ ಪಾಪಂಗಳು ನೋಡಿಕೊಳ್ಳದೆ ದುರಾನ್ನವನುಂಬ ದುರ್ದಾನದ ಪಾಪಂಗಳು ಮಾಡಬಾರದ ದಿನದಲಿ ಸ್ತ್ರೀಗೋಷ್ಠಿಯ ಮಾಡಿದ ಪಾಪಂಗಳು ಓಡುವುದಘಸಂಘ ಉತ್ತಮವಾಗಿಹ3 ಮತ್ತೆ ಈ ಬಹಳ ಪಾಪಗಳಿಗೆಲ್ಲ ತಾ ಪಕ್ಷ ಪ್ರಾಯಶ್ಚಿತ್ತವು ಉತ್ತಮವಾದ ವ್ರತಗಳಿಗೆಲ್ಲ ತಾ ಉತ್ತಮವೆನಿಸುವುದು ಚಿತ್ತಶುದ್ಧಿಯನಿತ್ತು ಜ್ಞಾನವೈರಾಗ್ಯದಿ ಭಕ್ತಿ ಮಾರ್ಗವನೀವುದು ಮುಕ್ತಿಗೆ ಸೋಪಾನವಾಗಿ ಭವಾಭ್ಧಿಯ ದಾಟಿಸಿ ಹರಿಯ ಸನ್ನಿಧಿಗೆ ದಾರಿಯನೀವ 4 ತೋರುವ ದಶಮಿ ದ್ವಾದಶಿಗಳು ಸಂಪುಟಾಕಾರದಿ ಹರಿದಿನವು ಮೂರುದಿನದ ವ್ರತ ನಾಲ್ಕು ಹೊತ್ತಿನ ಆಹಾರಗಳು ವರ್ಜಿತವು ಊರುದಾರಿಗಳ ನಡೆಯದೆ ತಾಂಬೂಲ ಚರ್ವಣಂಗಳೊರ್ಜಿತವು ಜಾಗರ ಮಾಡಿ ವ್ರತವಾಚರಿಸುವ 5 ಅತಿಶಯವಾದ ಶ್ರೀಹರಿದಿನದಿ ಪಿತೃತರ್ಪಣಗಳು ವಜ್ರ್ಯವು ಪ್ರತಿವರುಷದಲಿ ಆಚರಿಸುವ ತಾಯಿತಂದೆ ತಿಥಿಗಳೆಲ್ಲ ವಜ್ರ್ಯವು ಸತತವು ಮಾಡುವ ಯಜ್ಞಪುರುಷಗೆ ಆಹುತಿಗಳೆಲ್ಲ ವಜ್ರ್ಯವು ಇತರ ಭೋಗ ಕೃತ್ಯಗಳನೆಲ್ಲ ವರ್ಜಿತಮಾಡಿ ಈ ವ್ರತವನಾಚರಿಸುವ 6 ಹಲವು ವ್ರತಗಳಾಚರಿಸಿ ದಾನಂಗಳ ಹಲವು ಮಾಡಿದರೇನು ಹಲವು ಪುಣ್ಯತೀರ್ಥನದಿಯಲ್ಲಿ ಸ್ನಾನವÀ ಮುದದಿ ಮಾಡಿದರೇನು ಹಲವು ಪುರಾಣಂಗಳ ಹಲವು ಶಾಸ್ತ್ರಂಗಳ ಹಲವು ಕೇಳಿದರೇನು ಶ್ರೀಹಯವದನನ್ನ ದಿನಕೆ ಸರಿಬಾರದು 7
--------------
ವಾದಿರಾಜ
ಹರಿಸರ್ವೋತ್ತಮನೆಂದರಸುವರು ಪ ಹರಿದಾಸರಿವರು ಧರೆಯೊಳಿವರಿಗೆ ಸರಿಗಾಣೆ ಕೇಳಮ್ಮ ಜಾಣೆ ಅ.ಪ ಸಾಧುಸಜ್ಜನರಿಗೆ ಬಾಗುವರು ವೇದಕೆ ನಮಿಸುವರು ವಾದವಾಂಛಲ್ಯವ ತೊಡದಿಹ್ಯರು ಭೇದಿಲ್ಲದಿವರು 1 ಕಾಮ ಕ್ರೋಧಾದಿಗಳು ಜೈಸಿಹ್ಯರು ತಾಮಸಬಿಟ್ಟಿಹರು ಭೂಮಿ ಮೋಹಾದಿಗಳನಳಿದಿಹ್ಯರು ಸ್ವಾಮಿನ ಭಜಿಸುವರು 2 ಕ್ಲೇಶಪಂಚಕದಿಂದುಳಿದಿಹ್ಯರು ಮೋಸಕೆ ಒಳಪಡರು ಅಶಪಾಶಗಳೆಲ್ಲ ತುಳಿದಿಹ್ಯರು ವಾಸನೆ ತೊಳೆದಿಹ್ಯರು 3 ಮೆಚ್ಚದೆ ಸಂಸಾರ ತುಚ್ಛೀಕರಿಸಿಹ್ಯರು ಎಚ್ಚರಗೊಂಡಿಹ್ಯರು ಅಚ್ಚುತಾನಂತನೆ ಗತಿಯೆಂಬುವರು ಬಚ್ಚಿಟ್ಟು ನೆನೆಯುವರು 4 ಹರಿಯೆ ಪರದೈವವೆಂದರಿತಿಹ್ಯರು ಹರಿಯ್ಹೊರತಿಲ್ಲೆಂಬುವರು ಸರುವ ಜಗಭರಿತನೆಂದವರು ಸಿರಿರಾಮನ್ನ ತಿಳಿದಿಹ್ಯರು 5
--------------
ರಾಮದಾಸರು
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹಾದಿಯ ಕೊಡುಹರಿ ಪರಗತಿಯಾ ಸಾಧಿಸಿ ಬಂದೇ ಕೇಳಿ ಕೀರುತಿಯಾ ಪ ಕ್ಷಿತಿಯೊಳು ಭರತ-ಖಂಡದ ದೇಶದ ಪತಿತರ ತಾಂಡೆಯದ ನಾಯಕನು ಮತಿ ಹೀನ ಕಾಮಕ್ರೋಧರಾಗಿಹ ಪುಂಡರು ಪಥ ನಡೆಗುಡಿಸರು ಅತಿಬಲರು 1 ಆದಿಲಿ ಅಜಮಿಳಾ ತಾಂಡ್ಯ ಹೋದ ಬಳಿಕಾ ಹಾದಿ ಮುಗ್ಗಿತಿ ಕಡೆ ಬಹುದಿನದೀ | ಸಾದರಲೆನಗನಿ ಅಭಯವ ಕೊಟ್ಟರ | ಭೇದಿಸಿ ಜನರನು ನೆರಹುವೆನು 2 ಏನಾರೆ ಗೋಣಿಗೆ ಭಾವದ ಲಹರೆ ಕÉೂಂಡು ಮಾನು ಭಾವರ ಪ್ಯಾಟಿ ಹೋಗಿಸುವುದು ಘನಗುರು ಮಹಿಪತಿ ನಂದನ ಸಾರಥೀ ದೀನ ವತ್ಸಲನೆಂಬ ಬಿರುದಹುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಾರಶೋಭಿತ ಮುಖ ಸಾರಸ ಲೋಚನ ಪ ತೋರ್ಪ ಸುಂದರ ಬಾಹುಯುಗ ಬಂದು ಕಂದನ ಪೊರೆಯೈ 1 ಪಂಕಜಾಸನ ಮುಖ್ಯ ಶಂಕರಪೂಜಿತ ಸಂಕಟ ಪರಿಹರಿಸೈ ಶಂಕೆಯಿಲ್ಲದೆ ಸ್ಥಿರ ಲಂಕಾ ರಾಜ್ಯವನಿತ್ತೆ 2 ಜನನ ಮರಣಗಳ ಘನಪರಿವಾಹದಿ ನೆನೆದು ಶೋಕಿಪೆ ದೇವನೆ ವಿನಯದೊಳೀವುದೈ ಧೇನು ಪುರಪತೆ 3
--------------
ಬೇಟೆರಾಯ ದೀಕ್ಷಿತರು
ಹಿಗ್ಗದಿರು ಹಿಗ್ಗದಿರು ಮನುಜಪಶುವೆ | ಮುಗ್ಗಿತಗ್ಗುವುದು ಮುಂದರಿಯದಲೆ ಮರುಳಾದೆ ಪ ಆಯುದಲಿ ದ್ರೋಣಸುತ ಕೃಪ ವಿಭೀಷಣನೇನೊ | ಶ್ರೇಯದಲಿ ದಶರಥ ನಹುಷನೇನೊ || ಈಯುದ್ದಕೆ ಮಯಾರ ಧ್ವಜ ಶಿಬಿ ಬಲಿಯೇನೊ | ಮಾಯಾ ಬಿಡುವಲ್ಲಿ ಜಡ ಭರಿತ ನೀನೇನೊ 1 ಶೂರತ್ವದಲಿ ಭೀಷ್ಮ ಅಭಿಮನ್ಯು ನೀನೇನೊ | ಘೋರ ತಪಸಿನಲಿ ವಿಶ್ವಾಮಿತ್ರನೇನೊ || ವಿರುಕುತಿಯಲಿ ಸುರಸೈನ್ಯ ನಾಯಕನೇನೊ | ಹಾರುವ ಬಿಂಕದಲಿ ಗರುಡ ನೀನೇನೊ 2 ಬಲದಲ್ಲಿ ಬಲರಾಮ ಶಲ್ಯ ಕೀಚಕನೇನೊ | ತಿಳಿವಳಿಕೆಯಲಿ ವಿದುರ ಸಂಜಯನೇನೊ || ಒಲಿದು ಪಾಡುವಲಿ ನಾರದ ತುಂಬುರನೇನೊ | ಛಲ ಮಾಡುವಲ್ಲಿ ಧ್ರುವರಾಯ ನೀನೇನೊ 3 ಭಕುತಿಯಲಿ ಪ್ರಹ್ಲಾದ ಪುಂಡರೀಕನೇನೊ | ಭುಕುತಿಯಲಿ ಅಗಸ್ತ್ಯ ಬಕ ನೀನೇನೊ || ಉಕುತಿಯಲಿ ಸೂತ ಸಹದೇವ ಶೌನಕನೇನೊ | ಶಕುತಿಯಲಿ ವಾಲಿ ಯಮರಾಯ ನೀನೇನೊ 4 ಶುಕ ಜನಕ ಸನಕಾದಿಗಳೇನೊ | ಕರ್ಣ ನೀನೇನೊ || ಭೋಗ ಬಡುವಲ್ಲಿ ಮಹಾಭಾಗ ಇಂದ್ರನೇನೊ | ವೇಗದಲಿ ಪುರುಷ-ಮೃಗನು ನೀನೇನೊ 5 ಸಖತನ ಮಾಡುವಲ್ಲಿ ಶ್ವೇತವಾಹನನೇನೊ | ನಿಖಿಳ ಕಥೆ ಕೇಳುವಲ್ಲಿ ಪರೀಕ್ಷಿತನೇನೊ || ಅಖಿಳರನು ಗೆಲುವಲ್ಲಿ ಕಾರ್ತವೀರ್ಯನೇನೊ | ಸುಖದಲ್ಲಿ ಇಪ್ಪದಕೆ ಪವನ ನೀನೇನೊ 6 ವಿತ್ತದಲಿ ನೀನು ವೈಶ್ರವಣನೇನೊ | ಮತ್ತೆ ಕ್ಷಮೆಯಲಿ ಹರಿಶ್ಚಂದ್ರನೇನೊ | ಭೃತ್ಯತನ ಪಡೆವಲ್ಲಿ ಅಕ್ರೂರ ನೀನೇನೊ | ಸುತ್ತವಲಿ ಪ್ರಿಯವ್ರತ ರಾಯನೇನೊ 7 ವ್ರತದಲ್ಲಿ ಅಂಬರೀಷ ರುಕುಮಾಂಗದನೇನೊ | ಸ್ತುತಿಯಲ್ಲಿ ಮುಚುಕುಂದರಾಯನೇನೊ || ಅತಿ ಚೆಲುವತನದಲ್ಲಿ ಮನ್ಮಥ ನಕುಲನೇನೊ | ಕ್ರತು ಮಾಡುವಲ್ಲಿ ಧರ್ಮಪುತ್ರ ನೀನೇನೊ8 ಶಾಪಗಳ ಕೊಡುವಲ್ಲಿ ಬ್ರಹ್ಮಪುತ್ರನೇನೊ | ತಾಪ ತೋರುವಲ್ಲಿ ರವಿ ಅನಳನೇನೊ | ಕೋಪ ಮಾಡುವಲ್ಲಿ ಗಿರಿಜಾರಮಣನೇನೊ | ತಾಪಸಿರ ನಡುವೆ ವಸಿಷ್ಠ ನೀನೇನೊ9 ಉನ್ನತದಲಿ ನೀನು ಮೇರು ಪರ್ವತನೇನೊ | ಘನ ಮದದಲಿ ಧೃತರಾಷ್ಟ್ರನೇನೊ || ಇನ್ನು ಮತಿಯನ್ನು ಕೊಡುವಲಿ ಗಜಮೊಗನೇನೊ | ಮುನ್ನೆ ಕವನದಲ್ಲಿ ಶುಕ್ರದೇವನೇನೊ 10 ಹಮ್ಮಿನಲಿ ಬಾಳದಿರು ಹಿತವಾಗದೊ ನಿನಗೆ | ಆ ಮಹಿಮರ ಸರಿ ನೀನಲ್ಲವೊ || ಸಿರಿ ವಿಜಯವಿಠ್ಠಲರೇಯನ್ನ | ನೆಮ್ಮಬೇಕಾದರೆ ಸೋಹಂ ನಿರಾಕರಿಸು11
--------------
ವಿಜಯದಾಸ
ಹಿಂಡು ಕರ್ಮಗಳ್ಯಾಕೆ | ಬಂಡಿ ದೈವಗಳ್ಯಾಕೆಪಂಡರಿ ದೊರೆಯು ಇರಲು ಪ ಪುಂಡರೀಕಾಕ್ಷ ಪದಬಂಡುಣಿಯವೋಲ್ ತುತಿಸಲಿಲ್ಲಾ | ಬಲ್ಲಾ 1 ಕಂಬು ಸಾರಥಿ ಕೃಷ್ಣಚರಿತೆಗಳ ಪೊಗಳುತಿರಲೋ | ಕೇಳೋ 2 ಇಂದು ಭಾಗದಿ ಭಕ್ತಸಂದಣೀಯಲಿ ಸೇರುತಾ |ತಂದೆ ತಾಯಿಯ ಸೇವೆ | ಮುಂದು ಮಾಡಿದಗೊಲಿದುನಿಂದು ಇಟ್ಟಿಗೆ ಮೆಟ್ಟಿಹಾ |ನಂದ ನಂದನ ಗುರೂ ಗೋ | ವಿಂದ ವಿಠಲನವಂದಿಸೆಲೊ ಮುದದಿ ಸತತಾ | ವಿತತಾ 3
--------------
ಗುರುಗೋವಿಂದವಿಠಲರು
ಹಿತ ನೋಡಿ ಸಂತರ ಕೂಡೀ ಪ ಹಿತ ನೋಡಿ ಸಂತರ ಕೂಡೀ | ಮತಿ ನಿಜ ಮಾಡಿ | ಶ್ರೀ ಪತಿಯ ಕೊಂಡಾಡಿ 1 ದುರಿತ ವಿಭಂಗಾ | ನೆರೆ ಕರುಣಾಂಗದಿ | ಹೊರೆವನು ರಂಗಾ 2 ಪರಿ | ರಂಜಿಸುತಿಹ ತೇಜಃ | ಪುಂಜನ ನೋಡಿ 3 ಕಂಡಪದಕ ಹರಿದಂಡಲಿಯದೆ ನೆಲೆ | ಗೊಂಡ ವಿವೇಕದ | ಪಂಡಿತರಾಗಿ 4 ತಂದೆ ಮಹಿಪತಿನಂದನು ಸಾರಿದಾ | ಬಂದ ಜನುಮಕಿದು | ಛಂದದು ನೋಡಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಿರಣ್ಯಕಶ್ಯಪವೈರಿ ಮುರದಾನವವಿದಾರಿ ದುರಿತರೋಗ ನಿವಾರಿ ಪಾಹಿ ನೃಹರಿ ನಖಮುಖಮಹಾಯುಧ ಅಖಿಲ ಸಂಪತ್ಪ್ರದ ನಿಖಿಲ ಲೋಕಾಧೀಶ ಭಕ್ತಪೋಷ | ನೃಪಂಚಮುಖದೇವ ಸುಪವಿತ್ರ ಶ್ರೀಧವ | ಕೃಪಾರ್ಣವ ಕೇಶವ ಸುಪ್ರಭಾವ | ಘೋರ ವಿಕ್ರಮರೂಪ ವೈರಿ ಭಂಜನಕೋಪ | ಸಾರಸುಗುಣ ಕಲಾಪ ವಿಜಿತತಾಪ ವೇದವೇದ್ಯಸುಭದ್ರ ತರಳೆವರದ ಸಾಧುಸಮ್ಮತಚರಿತ ಸಿದ್ಧಿದಾತ ಕ್ಷುದ್ರದೈದ್ಯವಿನಾಶ ಚಿದ್ವಿಲಾಸ ಭದ್ರಶೇಷಾದ್ರೀಶ ಶ್ರೀನಿವಾಸ
--------------
ನಂಜನಗೂಡು ತಿರುಮಲಾಂಬಾ
ಹೀಂಗರಿದವ ಜ್ಞಾನಿ ಪ ಅವ್ಯಕ್ತದಲುದಿಸುದು ಪ್ರತಿಮೆಗಳು | ವ್ಯಕ್ತದಲಡಗುವದೀ ಸಕಲು | ಈ ವ್ಯವಹಾರದ ಭ್ರಮೆ ಮಾತುಗಳು 1 ಥೆರೆ ನೆರೆ ಬೊಬ್ಬುಳಿ ತಾ ದಿಟವಲ್ಲಾ | ತೋರಿಕರಿಗಿದರೇನು ಯಲ್ಲಾ | ನೀರಿಗೆ ಜನ್ಮ ಮರಣವಿಲ್ಲಾ 2 ಕಿರಣದಿ ದೋರಿತು ನದಿಗಡ ಪೂರಾ | ಹೊರತಾಗಿರದು ಕಿರಣಕ ದೂರಾ | ಕಿರಣೇ ಆಯಿತು ತಾ ಮೃಗನೀರಾ 3 ಕದಳಿಯ ಗಿಡರೂಪದ ಪದರೆಲ್ಲಾ | ಬಿದರಿಸಿ ನೋಡಲು ಏನುಳಿಲಿಲ್ಲಾ | ಪರಿ ಪ್ರಪಂಚದ ಸೊಲ್ಲಾ 4 ಗುರುವರ ಮಹಿಪತಿಸ್ವಾಮಿಯ ಕಂಡು | ಅರ್ಹವಿಕೆ ಮಾತ್ರವನೇ ಪಡಕೊಂಡು | ಚರಿಸುವಾ ಅನುಭವ ನೆಲೆಗೊಂಡು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೀನ ಬುದ್ಧಿಯ ಹಿಂದೆ ದೂಡುವ ಪ ಕಲಿಮಲಾಪಹನೆಂದು ಪಾಡುವ ಕಲುಷರಾಶಿಯ ಕಳೆದುಕೊಳ್ಳುವ ಹಲವು ಭವದಲಿ ಬಳಲದಂದದಿ ನಳಿನನಾಭನ ನಂಬಿಕೊಳ್ಳುವ 1 ದೇಹ ಗೇಹ ವ್ಯಾಮೋಹ ಭಾರದಿ ಚೋದಗೊಂಡರೆ ಚಕ್ರಿವೊಲಿವನೆ ನಾಹಮೀಶ್ವರೊ ಎಂದು ತಿಳಿದು ದಾ- ಸೋಹಮೆಂಬ ಸನ್ನಾಹಗೊಳ್ಳುವ 2 ಪಂಕಜಾಪತೇ ಪತಿತ ಪಾವನ ವೆಂಕಟೇಶದಾಸೌಘ ಜೀವನ ಕಿಂಕರಾರ್ತಿಹ ಕರುಣದಿಂದಲಾ- ತಂಕವಿಲ್ಲದೆ ಸ್ವಾಂಕ ಕೊಡುವನು 3
--------------
ತುಪಾಕಿ ವೆಂಕಟರಮಣಾಚಾರ್ಯ