ಒಟ್ಟು 6439 ಕಡೆಗಳಲ್ಲಿ , 132 ದಾಸರು , 3726 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ತೋರೆಂದು ಪಗುರುಸರ್ವಭೌಮರ ಅಖಂಡ ಸೇವೆಯ ಮಾಡಿವರಸುಮಂತ್ರಾಲಯದಿ ವಾಸಮಾಡಿಸುರಪನಾಲಯವು ಮಂತ್ರಾಲಯವು ಎಂಬಂತೆಹರಿದಾಸರಾಶಯವ ನಿಜಮಾಡಿ ತೋರಿಸಿದ 1ಉಡುಪಿಯೊಳು ಗುರುಸಾರ್ವಭೌಮರ ವೃಂದಾವನವಚತುರತನದಿಂದ ಪ್ರತಿಷ್ಠಾಪನೆಯ ಮಾಡಿಭರತಖಂಡದ ತೀರ್ಥಕ್ಷೇತ್ರಗಳ ಸಂಚರಿಸಿಭಕುತರಿಗೆ ಶ್ರೀ ಮಠದ ಮ'ಮೆ ತೋರಿದ ಗುರು2ಶ್ರೀ ಸ'ುೀರ ಸಮಯ ಸಂವರ್ಧಿನಿ ಸಭೆಯಸಂಸ್ಥಾಪನೆಯ ಮಾಡಿ ಪಂಡಿತರಿಗೆಭೂರಿ ಸಂಭಾವನೆ ಮೃಷ್ಟಾನ್ನ ಭೋಜನದಿತ್ಟುಗೊಳಿಸುತ ದೇಶ ದಿಗ್ವಿಜಯ ಮಾಡಿದ 3ಶ್ರೀ ಮಠದ ಕೀರ್ತಿಯನು ಶಿಖರಕ್ಕೆ ಮುಟ್ಟಿಸಿಸ್ವರ್ಣಮಂಟಪರಚಿಸಿ ವೈಭವವ ಬೆಳೆಸಿಶ್ರೀಮೂಲರಾಮ ದಿಗ್ವಿಜಯ ಜಯರಾಮರನುಭಕ್ತಿುಂದ ಪೂಜಿಸಿದ ಭಾಗ್ಯಶಾಲಿ 4ಗುರುಸಾರ್ವಭೌಮರಿಗೆ ಪರಮ ಪ್ರೀತಿಯ ಕಂದವರಮಧ್ವಮತ ಸುಧಾಂಬುಧಿಗೆ ಚಂದ್ರಪರಮಾತ್ಮ ಭೂಪತಿ'ಠ್ಠಲನ ಪೂಜಿಸುವಪರಮ ಪ್ರಶಾಂತ ಧೀರೆಂದ್ರ ಸನ್ನಿಧಿವಾಸ 5
--------------
ಭೂಪತಿ ವಿಠಲರು
ಪಾದ ನಂಬೋ ಸಿದ್ಧಾಂತ ಸಾರವ ಹೃದಯದಿ ತುಂಬೋಪ ಶತಕೋಟಿ ಜನ್ಮ ಸುಕೃತದಿ ಅತುಳ ವೈಷ್ಣವಜನ್ಮ ದೊರಕಿತು ನಿಜದಿ ಪಾದ ರಜದಿ ಮುಣುಗುತ ದುರ್ವಿಷಯಗಳನು ನಿಗ್ರಹಿಸೊ ನೀ ತ್ವರದಿ 1 ಈತನ ವಾಕ್ಯವೆ ವೇದವಾಕ್ಯಗಳೆಂದರಿಯೊ ಜಿಷ್ಣು ಸರ್ವೇಶ ಧಾತೃಗಳೊಂದೆಂಬ ದು ರ್ವಾದಿ ದುರ್ಗಜಕೆ ಕೇಸರಿಯಾಗಿರುವ 2 ವಟು ವೃಷ್ಟಿವಂಶ ಲಲಾಮ ತಟಿತಾಭ ಜಗನ್ನಾಥ ವಿಠಲಗೆ ಪ್ರೇಮಾ ಸ್ಫುಟರೂಪತ್ರಯನೆ ನಿಷ್ಕಾಮಾ ನಿ ಷ್ಕುಟಿಲ ಭಾರತಿರಮಣ ಹನುಮಂತ ಭೀಮ 3
--------------
ಜಗನ್ನಾಥದಾಸರು
ಪಾದ ನಿಜವಾಗಿ ಕಂಡೆನು ಪ್ರೇಮದಿಂದಲಿಯೆನ್ನ ಸೇರಿ ಕೊಂಡಾಡೋ ಪ ನಿತ್ಯ ನಲಿಯುತ್ತಲಿರುವದು ಕಾಲಕಾಲಕೆ ಮತ್ತೆ ಸೇವೆಗೊಳುವದು ಬಾಲರು ಪಿಡಿದರೆ ಇಷ್ಟವ ಕೊಡುವದು ಓಲೈಸಿ ಭಕ್ತಗೆ ವರವನೀಯುವÀದು 1 ಪಾದ ಮಧ್ಯದಿ ಪದ್ಮ ರೇಖೆಯ ಕಂಡೆನು ಸಾಧು ಸಜ್ಜನರು ಪೂಜೆಯ ಮಾಡುವುದನು ಖೇದವ ನೀಗುವ ಬೆರಳನು ಕಂಡೆನು ಆದ್ಯಂತವಿಲ್ಲದೆ ನಿರುತವಾದುದನು2 ಮನದಣಿ ನೋಡಿದೆ ಪಾದಯುಗ್ಮಗಳನ್ನು ಮನಲೇಪ ಮಾಡಿದೆ ಹರಿಪಾದಗಳಿಗೇ ಅನುದಿನ ದೂರ್ವಾಪುರದಿ ನೆಲೆಸಿರುವಂಥ ಘನಕೋಟಿ ತೇಜದ ಕೇಶವ ಪದವ 3
--------------
ಕರ್ಕಿ ಕೇಶವದಾಸ
ಪಾದ ಪದ್ಮದಲಿಮಾಯೆ ದಾಟಿತು ಮಹಿಮಳೇ ದೇವಿ ಪಕಾಯ ಕರ್ಮಗಳೆಂಬ ಕಾತ್ಯ ಸಮುದಾಯವನುದಾಯದಿಂದಳವಡಿಸಿದೆ ದೇವಿ ಅ.ಪಆಜಸುರಾದಿಗಳಿಂಗೆ ಅಮರಿಸಿಹೆ ಭಾಗ್ಯವನುಭಜಿಸುತಿಹರನವರತವೂ ದೇವಿನಿಜದಿರವನೂ ಕೊಟ್ಟು ನಿಲಿಸಿರಲು ನೀನವರತ್ರಿಜಗ ವಂದಿತರಾದರು ದೇವಿಸುಜನ ವಂದಿತನಾದ ಶ್ರೀಹರಿಯೆ ನೀನಾಗಿರುಜುಕರದಲಾಳುತಿರುವೆ ದೇವಿಕುಜನನಾದರು ನಾನು ಕರವಿಡಿದು ನೀ ಕಾಯ್ದುದ್ವಿಜಜನ್ಮದೆಣಿಕೆದೋರ್ದೆ ದೇವಿ 1ಅಣುಮಾತ್ರವಿರಲಿಲ್ಲ ವಿಷಯ ಭೋಗಕೆ ಬೀಜದಣಿಸಿದುದು ದಾರಿದ್ರವು ದೇವಿಕಣುಗಾಣದಿದ್ದವಗೆ ಕೊಟ್ಟಿಯನ್ನವ ನೀನೆಮಣಿವದನು ಮಾಡ್ದೆ ನೀನೆ ದೇವಿಪ್ರಣತ ರಕ್ಷಾಮಣಿಯೆ ಪರತತ್ವವನ್ನಿತ್ತೆಎಣಿಪುದೆಂತೀ ಮಹಿಮೆಯಾ ದೇವಿಕ್ಷಣಮಾತ್ರ ಪೂಜೆಯನು ಕ್ರಮದಿ ಮಾಡ್ದವನಲ್ಲಭಣಿತೆುದ ಬಗೆವರಾರು ದೇವಿ 2ಪರಿತೃಪ್ತಳಾಗಿರುವೆ ಪರಮಭಾಗ್ಯವನೀವೆನೆರೆ ನೀನೆ ನಿರ್ಮಿಸಿರಲು ದೇವಿಇರಿಸಿದಂತಿರುವರಿಂದೇನಹುದು ಕೊಡುವದಕೆಅರಿಯಲಖಿಳವು ನಿನ್ನದೇ ದೇವಿಮರುಗಿ ನೀನೇ ಕಾಯ್ವೆ ಮಾತೃ ರೂಪಹುದಾಗಿಸುರತರುವಿನುಪಮಾನಳೇ ದೇವಿವರದ ತಿರುಪತಿ ವಾಸ ವೆಂಕಟೇಶನ ರೂಪಧರಿಸಿಹಳೆ ದಿವ್ಯ ಲಕ್ಷ್ಮೀದೇವಿ 3ಕಂ||ಸ್ಥಿರವಾರವಿಂದು ಕೇಶವಸ್ಥಿರವಹುದಿತ್ತಭಯವೆನಗೆ ಭಯವನು ಬಿಡಿಸೈಸ್ಥಿರವಲ್ಲದ ಸಂಸಾರವಸ್ಥಿರವೆಂದೇ ನೊಂದೆನೈಯ ವೆಂಕಟರಮಣಾಓಂ ನಾರಾಯಣಾಯ ನಮಃ
--------------
ತಿಮ್ಮಪ್ಪದಾಸರು
ಪಾದ ಪರಮಭಕ್ತಿಲಿ ಎನ್ನ ಶಿರದ ಮೇಲ್ಪೊತ್ತು ಬಿಡದಿರುವೆನನವರತ ಪ ತಾಳಿ ವಿಮಲಭಕ್ತಿ ತಾಳದಂಡಿಗೆ ಸ ಮ್ಮೇಳದೊಡನೆ ತ್ರಿಕಾಲವು ಬಿಡದೆ ನೀಲವರ್ಣನ ಭಜನೆ ಮೇಲಾಗಿ ಮಾಡುವ ರಾಲಯದಿ ನಲಿದಾಲಿಸಾನದಿಂದಪ 1 ನಿಲಯದಂಗಳದೊಳು ತುಲಸಿವನವ ರಚಿಸ ನಿತ್ಯ ಜಲಜನಾಭಂಗೆ ಮಲತ್ರಯಂಗಳ ನೀಗಿ ಮಲಿನಗುಣವ ಕಳೆದು ಸಲಿಸಿ ಶ್ರೀಪಾದಮಂ ಒಲಿಸಿ ಸುಖಿಸುತಿರ್ಪ 2 ತಿಳಕೊಂಡು ಸಂಸಾರ ಕಳವಿನಿಂದುಳಕೊಂಡು ಹೊಳೆವ ಜ್ಞಾನಜ್ಯೋತಿ ಬೆಳಗಿನೋಳ್ನಲಿಯುತ ನಿಲಿಸಿ ಹರಿಪಾದದಿ ಚಲಿಸದೆ ಮನ ಹಂ ಬಲಿಸಿ ತಪವ ಶೇಷಾಚಲಯಾತ್ರೆ ಮಾಳ್ಪಂಥ 3 ಮರೆವು ಮಾಯವ ನೀಗಿ ಅರಿವಿನಾಲಯದೊಳು ಸಿರಿಯರರಸನ ನಿಜ ಚರಿತಂಗಳರಸುತ ಪರಮಸಾಲಿಗ್ರಾಮದ್ವರಮಹಿಮೆಯನರಿತು ನಿರುತದಿಂ ಪೂಜಿಸಿ ಪರಮಪಾವನರೆನಿಪ 4 ಕಾಮಿತಂಗಳ ನೀಗಿ ಕೋಮಲ್ಹøದಯರಾಗಿ ಪ್ರೇಮಪಿಡಿದು ಸರ್ವಭೂಮಿ ಜೀವಂಗಳೊಳ್ ನೇಮನಿತ್ಯದಿ ನಿಸ್ಸೀಮರಾಗಿ ಸತತ ಸ್ವಾಮಿ ಶ್ರೀರಾಮನಾಮಾಮೃತ ಸುರಿಯುವ 5
--------------
ರಾಮದಾಸರು
ಪಾದ ವಂದಿಸುವ ಎನ್ನ ಮಂದಿರದಲ್ಲಿ ನಿಲ್ಲೆ ಕೇಳುವದೆನ ಸೊಲ್ಲೆ ಪ ಭವ ಸಿಂಧೂವಿನೊಳು ಬಹು ನೊಂದು ನಿನ್ನ ಬೇಡಿಕೊಂಬೆ ಪಾಲಿಸು ಜಗದಂಬೆ1 ಇಂದಿರೇಶನರಾಣಿ ಮಂದಭಾಗ್ಯನ ಕರುಣ - ದಿಂದಲಿ ಎನ್ನ ನೋಡೆ ನೀ ನಲಿದಾಡೆ 2 ಮಂದಜಾಸನ ಜನನಿ ಸುಂದರ ಸುಗುಣಿ ನಿನ್ನ ಕಂದನು ನಾನಮ್ಮ ಶಿರಿಯೆ ನೀ ಸುಖ ಸುರಿಯೆ 3 ಎಂದಿಗು ಎನ್ನನು ಪೊಂದಿದ ಈ ಭವ ಬಂಧನ ಬಿಡಿಸೆಂದೆ ನಿನ್ನನು ಬೇಡಿಕೊಂಡೆ 4 ದಾತ ಗುರುಜಗನ್ನಾಥ ವಿಠಲನ ಪ್ರೀತಿಯಿಂದ ಎನಗೆ ತೋರೆ, ನೀ ಎನ್ನ ಮನೆಗೆ ಬಾರೆ 5
--------------
ಗುರುಜಗನ್ನಾಥದಾಸರು
ಪಾದ ವನಜ | ಸೂಸಿ ಭಜಿಸಿರೋ |ವ್ಯಾಸ ತೀರ್ಥ ಶಿಷ್ಯರೆಂದು | ಭಾಸಿಸಿದ್ದರೋ ಪ ಪುರಂದರ ಗಡದಿ | ವಾಸರಿದ್ದರಾಪರಮ ಲೋಭಿ ನವ ಕೋಟಿ | ದ್ರವ್ಯವಿದ್ದರಾ 1 ಬಂದ ಕಾರ್ಯ ಮರೆತನೆಂದು | ಹರಿಯು ಚಿಂತಿಸೀಇಂದಿರೇಶ ದ್ವಿಜನಾಗಿ | ಹುಡುಗನಾವೆರಸೀ ||ಬಂದು ಮಗನ ಮುಂಜಿಗಾಗಿ | ಧನವನು ಬಯಸೀ ||ನಂದ ಕಂದ ತಿರುಗುತ್ತಿದ್ದ | ಅಂಗಲಾಚಿಸೀ 2 ಭಿಕ್ಷುಕನ್ನ ಬಿಡದಂತೆ | ಅಂಗಡಿಯಲ್ಲಿಶಿಕ್ಷಿಸೀದ ಆಳುಗಳ | ಲೋಭಿ ತಾನಲ್ಲಿ ||ತ್ರ್ಯಕ್ಷಸೇವ್ಯ ತಿಂಗಳಾರು | ತಿರುಗಿದನಲ್ಲೀಲಕ್ಷಿಸಾದೆ ಮೆರೆಯುತಿದ್ದ | ಕಾಣದಂತಲ್ಲಿ3 ಕಟ್ಟಕಡೆಗೆ ಸವೆದ ನಾಣ್ಯ | ಚೀಲ ವೆಸೆಯುತ್ತಕಟ್ಟು ಮಾಡ್ದ ದುಡ್ಡೊಂದನ್ನು | ಕೊಳ್ಳೆಂದೆನುತ್ತ ||ಅಟ್ಟುಗಳಿಗೆ ಬೇಸರಿಸಿ | ಮುಂದೆ ಹೋಗುತ್ತ |ಥಟ್ಟನ್ಹೋದ ಹಿತ್ತಲಿನ | ಕದವ ಸಾರುತ್ತ 4 ಅಲ್ಲಿನಿಂತ ಲೋಭಿ ಸತಿಯ | ಬಳಿಗೆ ಪೋಗುತ್ತಬಲ್ಲ ಹರಿಯ ಧನವ ಬೇಡ್ದ | ಮುಂಜಿಗೆನ್ನುತ್ತ ||ನಲ್ಲ ಬೈವನೆಂದು ಬೆದರಿ | ಇಲ್ಲವೆನ್ನುತ್ತಚೆಲ್ವ ಸತಿಯು ಪೇಳೆ ಅವಳ | ಮೂಗ್ತಿ ನೋಡುತ್ತ 5 ತವರು ಮನೆಯ ದ್ರವ್ಯದಾನ | ಮಾಡು ನೀನೆಂದಅವಳು ತನ್ನ ಮೂಗುತಿಯ | ಕೊಟ್ಟುದೆ ಛಂದ ||ಇವನು ಅದನ ಸಾಹುಕಾರ್ನ | ಮುಂದಾಕಿ ಅಂದಜವದಿ ನಾನೂರ್ಪಾಕಿ ಹಣ | ತನಗೆ ಬೇಕೆಂದ 6 ನಾಯಕನು ಕೈಲಿ ತೆಗೆದು ನೋಡುತ್ತಲಿರೇಶ್ರೀಯರಸ ಪೋದತಾನು | ಕಣ್ಣಿಗೆ ಮರೇ ||ಕಾಯುತ್ತಿದ್ದ ಆಳು ಹಿಡುಕಿ | ಸಿಗದೆತಾಬರೇನಾಯಕನದ ಭದ್ರಮಾಡಿ | ಸತಿಬಳಿಗೆ ಬರೇ 7 ಬರಿಯ ನಾಸಿಕವ ನೋಡಿ | ಮೂಗ್ತಿ ಎಲ್ಲೆನಲುಸರಿಯ ಪಡಿಸಲಿಕ್ಕೆ ಕೊಟ್ಟು | ಇರುವೆ ನೆನ್ನಲುತ್ವರದಿ ತೋರದಿರೆ ನಿನ್ನ | ಅರೆವೆ ನೆನ್ನಲು |ಬರುವೆ ಬೇಗ ಎಂದು ಪೋಗಿ | ಗರದ ಬಟ್ಟಲು 8 ಕರದಿ ಪಿಡಿದು ತುಳಸಿ ಮುಂದೆ | ಮೊರೆಯ ನಿಡುತಿರೇಗರದ ಬಟ್ಟಲೊಳು ಬಿದ್ದ | ಶಬ್ದವು ಬರೇ ||ಹರುಷದಿ ದಿಗ್ಗನೆ ಎದ್ದು | ಪತಿಗೆ ತಾತೋರೇಗರ ಹೊಡೆದಂತವನಾಗಿ | ಮೋರೆಯ ತೋರೇ 9 ಹೆಂಡತಿಯ ಕೇಳಿ ತಿಳಿದ | ಆದ ಪರಿಯಾಮಂಡೆ ಬಾಗಿ ತಾನು ಆದ | ಹೊಸ ಪರಿಯಾ ||ಕೊಂಡಾಡಿದ ಪತ್ನಿ ಚರ್ಯ | ಹರಿಯ ಭಕ್ತಿಯಬಂಡುಣಿ ಹರಿಪಾದಾಬ್ಜದಿ | ತೊರೆದ ಮನೆಯ 10 ಪಾದ ನಮಿಸೀಬಾರಿ ಬಾರಿ ಹರಿಯ ತತ್ವ | ಕೇಳಿ ಸುಖಿಸೀ 11 ಪುರಂದರ ಸಾರ ಭಾಷೆ | ಪ್ರಾಕೃತ ವೆನಿಸೀ 12 ಮೂರ್ತಿ ಸುಂದರತೊಂಡನಾದ ಮೇಲೆ ತನ್ನ | ಹೃದಯ ಮಂದಿರ ||ಪಿಂಡ ಅಂಡದೊಳಗೆ ಕಂಡು | ಹಿಗ್ಗಿದ ವಿವರ |ಕಂಡವನೆ ಪೇಳ ಬಲ್ಲ | ಅದರ ವಿಸ್ತಾರ 13 ಪೊಂದಿ ಅಪರೋಕ್ಷವನ್ನು | ಸುಜನರುದ್ಧಾರಛಂದದಿಂದ ಮಾಡಿದಂಥ | ದಾಸವರ್ಯರ ||ಅಂದ ಚರಿತೆ ಕೇಳಿ ತೋಷ | ಪೊಂದಿದವರನಂದ ಕಂದ ಪಾಲಿಸುವ | ಬಿಡದೆ ಅವರಾ 14 ಗೋವ ಕಾವ ಗೊಲ್ಲರೊಡೆಯ | ಗೋಪಿಯ ಬಾಲತಾವಕ ಭಕ್ತರ ಪೊರೆವ | ಪಾಂಡವ ಪಾಲಆವ ದಾಸರ ಪೊರೆದಂತೆ ಮೈದುನ ಪಾಲದೇವ ದೇವ ಪೊರೆವ ಗುರು | ಗೋವಿಂದ ವಿಠಲ 15
--------------
ಗುರುಗೋವಿಂದವಿಠಲರು
ಪಾದ ಕ್ಕೆರಗಿ ಯಾಚಿಸುತಲೆ ಮುಗಿವೆನು ಕೈಯ್ಯಾನೆರೆ ನಂಬಿದವರನು ಎರವು ಮಾಡಲು ನಿನಗೊಳತೇನಯ್ಯಾ ಪಿಡಿ ಬೇಗನೆ ಕೈಯ್ಯ ಕರದಶಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವೆಂಕಟ ಪ ಆಪಾರ ಮಹಿಮಾ ಆಪದ್ಬಂಧೋ ಆಪನ್ನರ ಪಾಲಿಪ ವ್ಯಾಪಾ ನಿನಗಲ್ಲದೆ ಮತ್ತೊಂದು ಕಾಣೆನೊ ಜಗದೀ ಭೂಪಾನೆ ಭೂಮ್ನ ಗುಣಗಣಸಿಂಧೋ ಸ್ವಾಮಿಯೆ ಎನಗಿಂದು ಪರಿಪಾಲಿಸು ಶ್ರೀಪತಿ ಅಂಜನ ಗಿರಿರಾಜ 1 ಕಲಿಯುಗದೊಳಗೀ ಪರ್ವತಕೆಲ್ಲಿ ಸರಿಗಾಣೆನು ಯೆಂದು ನೆಲಸಿದೀ ನೀನೆ ಈ ಸ್ಥಳದಲ್ಲಿ ವೈಕುಂಠಕಿಂತ ನೆಲೆಯು ವೆಗ್ಗಳವೆಂದು ನೀ ಬಲ್ಲೀ ಅದಕಾರಣ ಇಲ್ಲೀ ತಲೆಯಾಗುವರಯ್ಯಾ ಭಳಿರೆ ಕಾಂಚನ 2 ತರುಜಾತಿ ಮೃಗಪಕ್ಷಿಗಳಾಕಾರ ಮೊದಲಾದ ರೂಪದಿ | ನೂರಾರು ಕಿನ್ನರು ತಮ್ಮ ಪರಿವಾರ ಒಡಗೂಡಿ ನಿನ್ನ ಚರಣಾರಾಧನೆ ಮಾಡಿದ ವಿಸ್ತಾರ ಈ ಬಗೆ ಶೃಂಗಾರ ಸರಿಗಾಣೆನೊ ಹೇ ತಿರುಪತಿ ವೆಂಕಟ ಗಿರಿರಾಜ3 ಹದಿನಾಲ್ಕು ಲೋಕದ ಭಾಗ್ಯಗಳಲ್ಲಿ ಅಮರತತಿಗೆ ಕೊಟ್ಟ ವಿಧವೆಲ್ಲಾ ಪ್ರತ್ಯಕ್ಷವು ಪುಸಿಯಲ್ಲ ನಾನವರ ನೋಡೆ ಅಧಮಾಧಮನು ನೀನೆ ಬಲ್ಲೆಲ್ಲಾ ಎನ್ನ ಯೋಗ್ಯತಯ ಫಣಿ 4 ಸುವರ್ಣ ಮುಖರಿತೀರ ನಿವಾಸ ನವರಾತ್ರಿಯಲ್ಲೀ ಆವ ಬ್ರಹ್ಮೋತ್ಸವ ನೋಡಲು ಶ್ರೀಶ ಸಂಪದವನಿತ್ತು ಪೊ ರವಾನು ಕಲುಷದ ಭಯ ಬರಲೀಸ ಶ್ರೀನಿವಾಸ ಭೂದೇವರ ವರದ5
--------------
ವಿಜಯದಾಸ
ಪಾದ ಚಿಂತನವು ಕ್ಷಣದಲಿ ಶೋಧಿಪುದು ಮತಿಯ ತಾರಕ ಪ ಮೋದತೀರ್ಥರ ಭೇದಮತ ಅನು ವಾದ ಮಾಡಿದ ಶ್ರೀಜಯತೀರ್ಥರ ಅ.ಪ ಈ ಜಗದೊಳಗಿನ ರಾಜಕೀಯದ ಸೋಜಿಗ ಜೀವನವನೆ ತೊರೆದು ರಾಜೀವೋದ್ಭವನಯ್ಯನ ಚರಣಾಂ ಬೋಜ ನಿರತ ಯತಿರಾಜರ ತಾರಕ 1 ಕಾಕುಮತಗಳನೇಕಗಳನು ನಿ ರಾಕರಿಪ ಗ್ರಂಥಗಳನು ರಚಿಸಿ ಲೋಕೋತ್ತರನಿಗೆ ನ್ಯಾಯಸುಧೆಯಭಿ ಷೇಕವ ಮಾಡಿದ ಟೀಕಾಚಾರ್ಯರ 2 ವಿಧಿ ಫಾ ಲಾಕ್ಷನುತ ಶ್ರೀಕೃಷ್ಣನ ಪೂಜಕ ದುಷ್ಟ ಪಕ್ಷ ನಿರಾಸದಲಿ ಅತಿ ದಕ್ಷ ದೀಕ್ಷ ಅಕ್ಷೋಭ್ಯರ ಕುವರರ 3
--------------
ವಿದ್ಯಾಪ್ರಸನ್ನತೀರ್ಥರು
ಪಾದ ನಂಬಿದೆ ಜನಕೆ ಪಾರುಗಾಣಿಪ ಪರಮ ಕರುಣಿ ಶ್ರೀ ಧೀರೇಂದ್ರವರ್ಯಾ ಪ ನಿತ್ಯ ಅನವರತ ಭಕ್ತಿಯನೆ ಇತ್ತೆನ್ನ ಕಾಯೆಯ್ಯ ಕರುಣಾನಿಧೆ ಅ.ಪ. ವಸುಧೀಂದ್ರ ಕರಕಮಲ ಸಂಜಾತ ವಸುಧೆಯೊಳು ವಾಸವಾಗಿಹ ಭಕ್ತ ಜನಕೆಲ್ಲಾ ವಾಸವಾನುಜ ಶ್ರೀ ವಾಸುದೇವನ ಸರ್ವಜಗಕೆಲ್ಲಾಪಾಯನೆಂಬಾ ವಾಸುದೇವನ ಮತವ ಬೋಧಿಸುತೆ ಸಾತಾರಾ ಪುನಯಾದಿ ನಗರದ ವಾದಿಗಳನೆಲ್ಲಾ ವಾದದಿಂದಲಿ ಗೆದ್ದು ಬಹುಮಾನವನೆ ಪಡೆದು ಮಹಿಯೊಳಗೆ ಬಹು ಖ್ಯಾತಿ ಪಡೆದ ಮಹಾಮಹಿಮ 1 ಭೂರಮಣ ಶ್ರೀಕಾಂತ ಬಹುಕೋಪದಿಂದಲಿ ಕೋದಂಡಪಾಣಿಯಾಗಿ ಭವಜನಕೆ ಮೋಹವನೆ ಬೀರುವಾ ಸಮಯದಲಿ ಬಹು ಭ್ರಾಂತಿಗೊಂಡು ಇರಲು ಭಾರತೀಶನ ದಯದಿ ಭಾಗೀರಥಿಯ ಕೂಡಿ ಬಹುಭಕ್ತಿಯಿಂದ ಒಲಿಸಿ ಭೂಮಿಜೆಯ ಕಳ್ಳನನೆ ಸಂಹರಿಪ ಕಾರ್ಯದಲಿ ಬಹುಸೇವೆಗೈದಂಥ ಪುಣ್ಯಶಾಲಿ 2 ಶ್ರೀರಮಣನಾಜ್ಞೆಯಲಿ ಭಜಿಪ ಭಕ್ತರಿಗೆಲ್ಲ ಬೇಡಿದಿಷ್ಟಾರ್ಥಗಳ ಸಲಿಸುತ್ತಲೀ ಶ್ರೀಕೃಷ್ಣಭಕ್ತರಿಗೆ ಕೃಷ್ಣವಾಗಿಹ ಮನವ ಉತ್ಕøಷ್ಟಗೈಯ್ಯುತ್ತಲೇ ಶ್ರೀಸುರಪನಾಯಕೆ ಸರಿಮಿಗಿಲು ಎಂದೆನಿಪ ಬಹುಭಾಗ್ಯವನ್ನೆ ಪಡೆದು ಶ್ರೀಗುರುತಂದೆವರದ-ಗೋಪಾಲ ಅಸಿ ಬಿಟ್ಟು ಬಿಡದಲೆ ಭಕ್ತಿಯಿಂ ಭಜಿಪ ಗುರುವರ್ಯ 3
--------------
ಸಿರಿಗುರುತಂದೆವರದವಿಠಲರು
ಪಾದ ನಿತ್ಯ ನಿತ್ಯ ಸುಖವೇ ಸುಖವು 1ಜ್ಞಾನ ಗಂಗಾ ನದಿಯು ವೈರಾಗ್ಯ ಯಮುನೆಯು ಸದ್ಭಕ್ತಿ ಸರಸ್ವತೀ ಈ ಬಗೆಯ ತ್ರಿವೇಣಿಸಂಗಮವು ಇವರಲ್ಲಿ ಎದ್ದು ಕಾಣುವದು ನಿತ್ಯ 'ಜಯರಾಯರ ನೆರಳಿನಿಂದಲಿ ಸರ್ವದಾ ಅವರಲ್ಲಿ ಇವರವಾಸಗುರುಭಕ್ತಿಯಲಿ ಇವರ ಸರಿ'ುಗಿಲು ಯಾರಿಲ್ಲಭಾಗಣ್ಣದಾಸರಿವರೇ ಅವರು 2ಪಂಢರಾಪುರದ ಶ್ರೀ ಪಾಂಡುರಂಗನು ಇವರ ಭಕ್ತಿಭಾವಕೆ ಮೆಚ್ಚಿದಾಬಹುದಿವಸ ತನ್ನದರುಷನಕೆ ಬರಲಿಲ್ಲೆಂದು ಕಳವಳದಿ ಪಾಂಡುರಂಗಾಕುದುರೆಯನು ಏರಿ ತಾನೆ ಅವರಬಳಿ ಪೋಗಿ 'ಆಲೆ ನಾ'' ಎಂದು ಕರೆದಾಮರುದಿನವೆ ಪಂಢರಿಗೆ ತ್ವರದಿ ಓಡುತ ಹೋಗಿಭೂಪತಿ'ಠ್ಠಲನ ಬಿಗಿದೊಪ್ಪಿಕೊಂಡಾ 3
--------------
ಭೂಪತಿ ವಿಠಲರು
ಪಾದ ಪದುಮವ ನಿತ್ಯದಿ | ಭಜಿಸುವರ ಸತ್ಯಲೋಕೇಶನ ಪೆತ್ತ ಪರಮಾತ್ಮನು | ನಿತ್ಯದಿ ಕರಪಿಡಿವ ತಿಳಿ ಮಾನವಾ ಪ ರವಿಸನ್ನಿಭಾಂಗರು | ಭುವಿ ದಿವಿಜೇಂದ್ರರು | ಕವಿಗಣ ಸನ್ನುತರು | ಭವದೂರರು | ಭುವನದೋಳ್ ಧೃಡಚಿತ್ತದವರಾಗಿ | ತಪದಲ್ಲಿ ಧ್ರುವನಂತೆ ತೋರುವರು ಮಹಾತ್ಮರು1 ಭುಜಗಾಧಿಪನಯಂತೆ ಯೋಗ ಸುಸಾಧಕರು ಭುಜಗ ಭೂಷಣನಂತೆ ವಿಜಯಾನಂದದಿ | ದಿಗ್ವಿಜಯ ಶಾಲಿಗಳಿವರು 2 ನೇಮಪೂರ್ವಕವಾಗಿ | ನಿತ್ಯದಲ್ಲಿ ಶಾಮಸುಂದರ ಸೀತಾ ರಾಮನರ್ಚಿಸುತಲಿ | ಭೂಮಿಯೋಳು ಮೆರೆದಿಹರು ಸುಧೀರರು 3
--------------
ಶಾಮಸುಂದರ ವಿಠಲ
ಪಾದ ವಿಮಲ ಮತಿಯನಿತ್ತು ಅಮಲನ್ನ ಮಾಡಿಸೇ ಪ ಗಜರಾಜ ಗಮನೆಯೆ ತ್ರಿಜಗದ್ವಂದ್ಯಳೆಂದು ಭಜಿಸಿ ನಿನ್ನಯ ಪಾದಾಂಬುಜವ ಆಶ್ರೈಸಿದೇ 1 ಅಷ್ಟ ಸೌಭಾಗ್ಯ ವಿಶಿಷ್ಟವ ಕೊಟ್ಟು ಕಷ್ಟವ ತಿಳಿದು ಸಂತುಷ್ಟನ ಮಾಡಮ್ಮ 2 ಶ್ರೇಷ್ಠನ್ನ ಮಾಡು ಉತ್ಕøಷ್ಟ ಜ್ಞಾನವನಿತ್ತು ಶಿಷ್ಟನೆಂದೆನಿಸಿ ಶ್ರೀಕೃಷ್ಣನ್ನ ರಾಣಿ3 ಅಜಭವ ಮೊದಲಾದ ದ್ವಿಜರಿಂದ ವಂದಿತಳೆ ಭಜಿಸಿ ನಿನ್ನಯ ಪಾದಾಂಬುಜವ ಆಶ್ರೈಸಿದೆ 4 ದ್ವಿಜರಾಜಗಮನಳೆ ಭುಜಗಶಯನನಾದವಿಜಯವಿಠ್ಠಲನಂಘ್ರಿರಜವ ಧರಿಸುವೆ 5
--------------
ವಿಜಯದಾಸ
ಪಾದತೋರೋ ಪದ್ಮಾಕ್ಷ ಬಾರೋ ಪ. ಪಾದಪದ್ಮವ ತೋರೋ ಪದ್ಮಾಕ್ಷ ಬಾರೋ ಆದಿಮಧ್ಯಾಂತ ಸ್ವರೂಪ ಮೈದೋರೋ ಅ.ಪ. ಬಲಿಯನ್ನು ತುಳಿದಂಥ, ಭೂಮಿಯನಳೆದಂಥ ಶಿಲೆಯಾಗಿದ್ದವಳ ಕಲುಷವ ಕಳೆದಂಥ 1 ಶಿಶುರೂಪದಿಂದಲೆ ಶಕಟನ ಒದ್ದಂಥ ಶಶಿಮುಖಿಯಶೋದೆಗೆ ಶಿಶುವೆನಿಸಿ ಮೆರೆದಂಥ 2 ಗೊಲ್ಲರ ಮನೆಮನೆಗೆ ಕಳ್ಳನಂದದಿಪೊಕ್ಕು ನಲ್ಲೆಯರ ಕೈಪಿಡಿಗೆ ನಿಲ್ಲದೋಡುವ ಮುದ್ದು 3 ಕಾಳಿಂಗನ ಫಣೆಯೊಳ್ ಕೋಲಾಹಲದಿ ಕುಣಿದ ಕಾಳಿಂಗನರಸಿಯರಿಗೆ ತಾಲೀ ಭಾಗ್ಯವನಿತ್ತ4 ಕರುತುರುಗಳ ಮರೆಸಿ ದೊರೆ ನಿನ್ನರಸಿದ ಪರಮೇಷ್ಠಿಯೆ ತನ್ನ ಕರದಿಂ ಪೂಜಿಸಿದಂಥ 5 ಮಾವ ಕಂಸನ ಕೊಂದು ತಾಯಿ ದೇವಕಿ ವಸುದೇವಸುತ ವಾಸುದೇವನೆಂದೆನಿಸಿದ 6 ಸಿರಿದೇವಿಯೇ ನಿಜಕರಗಳಿಂದೊತ್ತುವ ಪರಮಪಾವನ ಪದಸರಸೀರುಹ 7 ವರಶೇಷಗಿರಿದೊರೆ ಶರಣರ ಮರೆವರೆ ಶಿರಬಾಗಿ ಬೇಡುವೆ ಭರಿಸೆನ್ನನೆನುವೆ 8
--------------
ನಂಜನಗೂಡು ತಿರುಮಲಾಂಬಾ
ಪಾದಪದ್ಮದೀಕ್ಷಣದ ಸುಖಕಂ||ಅಗಲಲು ಬಾರದೆ ಮನ ದೃಗ್ಯುಗಳವು ಹರಿಪಾದಪದ್ಮದಿ ನೆಲಸೆ ಭಕ್ತರ್‍ತೆಗೆಯದೆ ತಿರುಪತಿ ವೆಂಕಟನಗನಾಥನ ಬೇಡಿಕೊಳ್ಳುತಿಹರೀ ಪರಿುಂಈ ಪಾದಪದ್ಮದೀಕ್ಷಣದ ಸುಖವೇ ಸಾಕುಗೋಪಾಂಗನೆಯರ ಮನಕಮೃತರೂಪಾಗಿರುವ ಪಪದ್ಮವರಳಿದ ಪರಿಯ ಮೃದುವಾಗಿ ತೋರಿಸುವಪದ್ಮಜೆಗೆ ನಿತ್ಯವಾಶ್ರಯವೆನಿಸುವಪದ್ಮಭವ ನೆರೆತೊಳೆದು ಪೂಜಿಸಿದುದೀ ಲೋಕಪದ್ಮಕಾಶ್ರಯವಾಗಿ ತದ್ರೂಪವಾಗಿರುವ 1ಲೋಕಪಾವನ ಗಂಗೆಯನು ಪಡೆದುದೀ ಪಾದಜೋಕೆಯೊಳಗಹಿ ಶಿರದಿ ನೆರೆ ನರ್ತಿಸಿದುದುಬೇಕೆಂದು ಯೋಗಿಗಳ ಹೃದಯಕಮಲದಿ ನೆಲಸಿನೂಕಿ ಭಕ್ತರ ಭವವ ರವಿಯಂತೆ ಹೊಳೆಯುತಿಹ 2ಗೋಪಾಲ ಗೋವುಗಳ ಬಳಿವಿಡಿದು ಸಂಚರಿಸಿಗೋಪಿಯರ ಮನೆಯ ಪಾಲ್ಬೆಣ್ಣೆ ಬಯಸಿಗೋಪ್ಯದಲಿ ನಡೆದವರ ಮನಕಗೋಚರವೆನಿಸಿಗೋಪರೊಡೆಯನ ಮನೆಗೆ ಬಂದು ನೆಲಸುತಲಿರುವ 3ಬಲಿಯ ದಾನವ ಬೇಡಿ ಶಿಲೆಯ ಸತಿಯನು ಮಾಡಿನೆಲನೊತ್ತಿ ಕೌರವನ ಮಕುಟ ಸೋಕಿಥಳಥಳನೆ ಬೆಳಗಿ ತತ್ಸಭೆಯ, ವಿದುರನ ಮನೆಗೆನಲವಿಂದ ನಡೆದವನ ಸಲಹಿದತಿ ಕೋಮಲದ 4ಸುರರು ವಂದಿಸಲವರ ಶಿರದ ಪುಷ್ಪದ ರಾಶಿಸುರಿದು ತಾರಾ ಮಧ್ಯ ಚಂದ್ರನಂತೆನೆರೆಮೆರೆವ ಗುರು ವಾಸುದೇವ ಪಾದ 5ಓಂ ಜಗನ್ನಾಥಾಯ ನಮಃ
--------------
ತಿಮ್ಮಪ್ಪದಾಸರು