ಒಟ್ಟು 366 ಕಡೆಗಳಲ್ಲಿ , 66 ದಾಸರು , 298 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವ ವನಧಿಗೆ ನವಪೋತ | ಪಾಲಿಸು ವಿಖ್ಯಾತ ಪ ವಿಯದಧಿಪನೆ ಎನ್ನ ಕೈಯ್ಯನು ಪಿಡಿಯೋ | ಜ್ಞಾನ ಭಿಕ್ಷ ಈಯೋ ಅ.ಪ. ಮಾಯಾಪತಿ ಪದ ಪದ್ಮಯುಗಳ ಭಜಿಪಾ | ಉತ್ತಮ ಪಥತೋರ್ಪಾಶ್ರೇಯಸು ಸಾಧನ ವೆನಿಸಿ ಮೆರೆಯುರ್ತಿರ್ಪಾ | ಹರಿಪರಮನು ಎನಿಪಾ ||ಮಾಯಾಮತ ತಮ ಸೂರ್ಯನೆನಿಸಿ ಮೆರೆವಾ | ಸುಜನಸುರದ್ರುಮವಾನ್ಯಾಯ ಸುಧೆಯನೇ ತಾರಚಿಸಿರುವಾ | ಮುಕುತಿ ಮಾರ್ಗ ತೋರ್ವಾ 1 ಕಾಕು ವೃತ್ರನಿಂದಾವೃತ ಜಗವಿರಲೂ | ಜ್ಞನರಹಿತ ವಿರಲೂಲೋಕ ಮಹಿತ ಮಂತ್ರವು ನಿನಗಿರಲೂ | ಜಪಿಸುತಾಸ್ತ್ರ ಬಿಡಲೂ ||ಆ ಕುಯೋನಿಗತ ಚಿತ್ರಕೇತು ಮೋಕ್ಷ | ಆಯಿತು ಸುರರಾಧ್ಯಕ್ಷಲೋಕಾಮಯವನು ಹರಿಸಿ ಜಗದಿ ಮೆರೆದೇ | ಮಹಾನ್ನು ಎನಿಸೀದೇ2 ಚಾಪ ಜೇತಾಕುಕ್ಷಿಯೊಳಗೆ ಬಲು ಬಲು ವಿಖ್ಯಾತಾ | ಕಾಗಿನಿ ತಟದಿಸ್ಥಿತ ||ಅಕ್ಷರೇಡ್ಯ ಗುರುಗೊವಿಂದ ವಿಠ್ಠಲನಾ ತನ ಹೃದ್ಗನಾಗಿರುವವನ ||ಅಕ್ಷಿಯೊಳಗೆ ಕಂಡು ಮೋಕ್ಷ ಪಧವ ಸೇರ್ದ | ಆನಂದವ ಬೀರ್ದ 3
--------------
ಗುರುಗೋವಿಂದವಿಠಲರು
ಭವ ಹರಿಸೊ ಕರುಣಾ ಜಲಧಿ ನೆಂಟ ನೀನಾಗಿ ಹೃನ್ಮಂಟಪದೊಳಗೆ ಪ. ಎಂಟಕ್ಷರ ನುತನೆ ಎಂಟು ರೂಪಾತ್ಮಕನೆ ಎಂಟು ಮೂರು ತತ್ವ ನಿರ್ಮಿಸಿಹನೆ ಎಂಟು ದಳದಲಿ ನಿಂತು ಎಂಟು ವಿಧ ಪ್ರೇರಿಸುತ ಎಂಟು ದಿಕ್ಪತಿಗಳಿಂ ಸೇವೆ ಕೊಳುತಿಹನೆ 1 ಎಂಟು ವಿಧ ಕರ್ತೃವೆ ಎಂಟು ಭಾಗ್ಯಯುತನೆ ಎಂಟು ಬಾಹು ಎಂಟು ಆಯುಧಧರನೆ ಎಂಟು ಪತ್ನಿಯರಿಂದ ಎಂಟನೇ ಅವತಾರಿ ನೆಂಟರೊಡನೆ ಜಗದ ಕಂಟಕರ ಸದೆದನೆ 2 ಎಂಟೆರಡು ಕಲೆಪೂರ್ಣ ವೆಂಕಟರಮಣನೆ ಎಂಟು ವಿಧ ಮದಗಳನು ಭೇದಿಸುತಲಿ ಎಂಟೆರಡು ಒಂದು ಇಂದ್ರಿಯ ನಿನ್ನ ಕಡೆ ಮಾಡಿ ಭಂಟನೆನಿಸೆನ್ನ ಶ್ರೀ ಗೋಪಾಲಕೃಷ್ಣವಿಠಲ3
--------------
ಅಂಬಾಬಾಯಿ
ಭಾಸ್ಕರಗುರುದಯ ಭಾಸುತದೆ ವಿಜಯ ಧ್ರುವ ಕಂಗಳಿಗೆದುರಿಟ್ಟಾನಂದ ಮಂಗಳಕರದೋರುತಲ್ಯದೆ ಚೆಂದ ಸಂಗ ತೋರಿತು ನಿಜವಂದ ಹಿಂಗಿಸಿ ಭವಬಂಧ 1 ಮನಸಿಗೆ ತೋರಿತು ಊರ್ಜಿತ ನೆನೆವಿಗೆ ಕೈಗೊಟ್ಟಿತು ಆಯತ ಜನವನದೊಳುಗುದಿತಾ ಘನವೆ ಸಾಕ್ಷಾತ 2 ಸೋಹ್ಯದೋರಿ ಸಮರಸ ಸಾಹ್ಯಮಾಡಿದ ಸರ್ವೇಶಮಹಿಪತಿಗಿದೆ ಸಂತೋಷ ಇಹಪರ ಉಲ್ಲಾಸ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಮನವೇ ಸುಮ್ಮನೆ ಇರಬೇಡ ಅರೆನಿಮಿಷವಾದರುಮನವೇ ಸುಮ್ಮನೆ ಇರಬೇಡಪ ಕನಸಿನಂತಿಹ ಸಂಸಾರವ ನೆಚ್ಚಿಘನತರ ಪಾಪಕೆ ಗುರಿಯಾಗಬೇಡ ಅ ರೊಕ್ಕದಾಸೆಯ ಬಿಡಬೇಕು ಸ್ತ್ರೀ ಮೋಹಕೆಸಿಕ್ಕದೆ ನಡಕೊಳಬೇಕುಅಕ್ಕರು ದೇಹದೊಳಿರದಿರಬೇಕುಶಕ್ತಿಯ ಮೀರಿ ಧರ್ಮವ ಮಾಡಬೇಕುಮುಕ್ಕಣ್ಣ ಹರನ ಪೂಜಿಸಬೇಕುಮುಕ್ತಿ ಮಾರ್ಗವ ಪಡಕೊಳಬೇಕು 1 ಸರ್ವನಿಸ್ಪøಹನಾಗಬೇಕು ಸಂಸಾರದಿಚರಿಸುತಲೂ ಇರಬೇಕುಗುರುಹಿರಿಯರ ಕಂಡು ನಡೆಯಲು ಬೇಕುಪರರ ನಿಂದಿಸಿ ನುಡಿಯದೆ ಇರಬೇಕುಬರೆ ಸುಖ ದುಃಖವು ಸಮಗಾಣಬೇಕುಇರುಳು ಹಗಲು ಶಿವ ಶಿವ ಎನ್ನಬೇಕು2 ತನ್ನ ತಾನೆ ತಿಳಿಯಬೇಕು ತೋರುವ ಲೋಕವನ್ನು ದೃಶ್ಯವೆಂದಿರಬೇಕುತನ್ನಂತೆ ಸಕಲರ ನೋಡಲು ಬೇಕುಮಾನ್ಯರ ಕಂಡರೆ ಮನ್ನಿಸಬೇಕುಅನ್ಯನಾದರು ಹಿತವನೆ ಮಾಡಬೇಕುಪ್ರಸನ್ನ ರಾಮೇಶನನೆನಹಿರಬೇಕು 3 ವಣಗಿದ ಕಂಭದೊಳೊಗೆದುಬಣಗು ದಾನವನ ಗೆಲಿದುಕುಣಿಕುಣಿದಾಡಿದೆಯಂತೆ ಯಾಕಯ್ಯ ಶ್ರೀಕೃಷ್ಣಸೆಣಸಿದ ರಾಕ್ಷಸನ ಗೆಲಿದುವಿನಯದೆ ಪ್ರಹ್ಲಾದಗೊಲಿದುಅಣಿಯರ ಲೋಕವ ಕಾಯ್ದೆ ಎಲೆಸತ್ಯಭಾಮೆ 4 ಬಲು ಚಂದವಾಯಿತಯ್ಯ ಲೋಕಾ-ವಳಿಯೊಳು ದೊಡ್ಡವನಯ್ಯಬಲಿಯ ಕೂಡೆ ದಾನವ ಬೇಡುವರೆ ಕೃಷ್ಣಬಲಿಯ ದಾನವನ್ನೇ ಬೇಡಿಇಳೆಯ ಮೂರಡಿಯ ಮಾಡಿಸಲಹಿದೆ ಸರ್ವಸುರರ ಎಲೆ ಸತ್ಯಭಾಮೆ 5 ಧರಣೀಪಾಲಕರ ಗೆಲಿದಗರ್ವವಿರಲಿ ಹೆತ್ತತಾಯಶಿರವನರಿದ ದುರುಳರುಂಟೆ ಹೇಳಯ್ಯ ಕೃಷ್ಣಗುರುವಚನವನ್ನು ಮೀರೆನರಕಲೋಕವೆಂದು ಕಾಯಶಿರವನರಿದು ಮರಳಿ ಪಡೆದ ಎಲೆ ಸತ್ಯಭಾಮೆ6 ಮೂರು ಲೋಕವರಿಯೆ ಸೀತಾನಾರಿಯ ಕಳೆದುಕೊಂಡುಊರೂರ ತಿರುಗಿದೆಯಂತೆ ಯಾಕಯ್ಯಾ ಕೃಷ್ಣನೀರೊಳು ಸೇತುವ ನಿಲಿಸಿವೀರ ರಾವಣನ ಜಯಿಸಿವಾರಿಜಾಕ್ಷಿಯ ತಂದೆನೆ ಎಲೆ ಸತ್ಯಭಾಮೆ 7 ದುರುಳ ಪರಮಹಂಸರಂತೆಕರದಿ ನೇಗಿಲ ಹಿಡಿದೆಶರಖಡ್ಗಗಳಿಲ್ಲವೇನೋ ಶ್ರೀಕೃಷ್ಣರಾಯಸುರರಿಪು ಪ್ರಲಂಬಾದಿಗಳಶಿರವನರಿದು ಜೈಸಿದಂಥಾಗುರುತಿನ ಆಯುಧ ಕಾಣೆ ಎಲೆ ಸತ್ಯಭಾಮೆ8 ಮಂದಿಯ ಮುಂದೆ ಬತ್ತಲೆನಿಂದು ಓಡಾಡಿದೆಯಂತೆಚಂದವಾಯ್ತು ನಿನ್ನ ನಡತೆ ಹೇಳೆಲೋ ಕೃಷ್ಣಹಿಂದೆ ತ್ರಿಪುರದ ನಾರೀವೃಂದವ ಮೋಹಿಸಿ ಸರ್ವವೃಂದಾರಕರ ಪೊರದೆ ಎಲೆ ಸತ್ಯಭಾಮೆ 9 ದೊರೆತನವು ನಿನ್ನದೆಂದುಧರಣೀದೇವತೆಯು ಬಂದುಮೊರೆಯಿಟ್ಟಳದೇಕೋ ಪೇಳೋ ಶ್ರೀಕೃಷ್ಣರಾಯತುರಗವನೇರಿ ಖಡ್ಗವಧರಿಸಿ ಯವನ ಸೈನ್ಯವನ್ನುಮುರಿದು ಧರೆಯ ಪೊರೆದೆ ಕಾಣೆ ಎಲೆ ಸತ್ಯಭಾಮೆ 10 ಇಂತು ಕೇಳ್ದ ಸತ್ಯಭಾಮಾಕಾಂತೆಯ ಮಾತಿಗೆ ಮೆಚ್ಚಿಕಾಂತೆಯರೊಳು ಕಟ್ಟಾಣಿ ಬಾರೆಂದು ಕರೆದುಕಂತುಜನಕ ಕೆಳದಿಪುರದಕಾಂತ ಗೋಪಾಲಕೃಷ್ಣನುಸಂತಸವ ಮಾಡಿದನಿನ್ನೆಂತು ಪೇಳ್ವೆನೆ11
--------------
ಕೆಳದಿ ವೆಂಕಣ್ಣ ಕವಿ
ಮನಸಿನ ಮಲಿನವ ಮನಸೀಜನೈಯನೆ ಹನನ ವೈದಿಸದಿರೆ ಬದುಕುವ ದೆಂತೊ ಪ ವನಜ ಸಂಭವ ಜನಕ ತನುಮನ ಪ್ರೇರಕ ಮಾನವ ನಾನು ಶರಣುಹೊಕ್ಕೆನೈಯ ಅ.ಪ ಸ್ನಾನ ಸಂಧ್ಯಾನುಷ್ಠಾನ ವೇನು ಗೈದವನಲ್ಲ ಹೀನ ಸ್ತ್ರೀಯರ ಧ್ಯಾನ ಘಳಿಗೆ ಬಿಟ್ಟವನಲ್ಲ ಧಾನ ಧರ್ಮಗಳೊಂದು ಮಾಡಿಕೊಂಡವನಲ್ಲ ಗಾನದಿಂದಲಿ ಹರಿನಾಮವಾದರು ಪಾಡಲಿಲ್ಲ ದೀನಜನಮಂದಾರ ಕರುಣೋದಾರ ಮಹಿಮನೆ ಮಾನಮತ್ತವಮಾನ ನಿನ್ನಾಧೀನ ವಲ್ಲವೆ ತನುಮನೇಂದ್ರಿಯ ನಾಥ ನಾಯಕ ನೀನೇ ಆಗಿರೆ ಎನ್ನ ದೇನಿದೆಬರಿದೆ ದೂರದೆ ಸಾನುರಾಗದಿ 1 ನೋಡಬಾರದ ನೋಟ ನೋಡಿ ಆಯಿತು ಜೀಯ ಮಾಡಬಾರದ ಬಯಕೆ ಮಾಡಿದ್ದಾಯಿತು ಸ್ವಾಮಿ ಕೂಡಬಾರದ ಕೂಟ ಕೂಡಿದ್ದಾಯಿತು ತಂದೆ ಈಡುಕಾಣೆನು ನನ್ನ ಕೇಡು ಕರ್ಮಕೆ ಇಂದು ಗಾಡಿಕಾರ ನಿಗೂಢ ಹೃದಯಗ ಬೇಡಿ ಕೊಂಬೆನು ಪ್ರೌಡ ಭಕ್ತರಗಾಢ ಪ್ರೇಮದಿ ಕೂಡಿಸುತ ತಿಳಿ ಗೇಡಿಯೆನಿಸದೆ ವೇದ ಸಮ್ಮತ ಗಾನ ಜೋಡಿಸಿ ಹಾಡಿ ಹಾಡಿಸೆ ಭಾಢ ಮಹಿಮೆ ವಿಶೇಷ ನಿನ್ನದು 2 ಮುಂದು ಮಾಡುತ ಹಿಂದೆ ಇಂದು ಕಂದನಲ್ಲವೆ ನಾನು ಎಂದೆಂದು ನಿನಗೆ ಇಂದಿರೇಶನೆ ನಿನ್ನಮೀರಿಕರ್ಮವಮಾಡೆ ಎಂದಿಗಾದರು ಸಾಧ್ಯವಾಹುದೆ ನನಗೆ ತಂದೆ ಜಯಮುನಿವಾಯು ಹೃದಯಗ ನಂದಮಯ ಶ್ರೀ ಕೃಷ್ಣವಿಠಲ ನಿಖಿಳ ವಿಶ್ವಕೆ ಕುಂದುಮಯ ಅಭಿಮಾನ ಮನಸಿಗೆ ತಂದಿಡದೆಯೆಂದೆಂದು ಸಲಹುತ ಕುಂದು ಗೈದವನೆಂದು ನುಡಿಯದೆ ಪಥ 3
--------------
ಕೃಷ್ಣವಿಠಲದಾಸರು
ಮನಸಿನ ಮಾಯವೆ ಗೂಢದೋರದು ನಿಜ ಗೂಢ ಧ್ರುವ ಮರವಿನೊಳಾಡಲು ಆಯಿತು ಮನವು ಅರಿವಿನೊಳಾಡಲು ತೋರಿತುನ್ಮನವು ಅರಹು ಮರುಹ ಎರಡನೆ ಮೀರಿದರೆ ಆಯಿತು ತನ್ನೊಳು ತಾನೆ ಚಿದ್ಘನವು 1 ಅರುಹಿತು ಸ್ಥೂಲಕೆ ಜಾಗ್ರತಿಯಾಗಿ ಬ್ಯಾರೆದೋರಿತು ಸ್ವಪ್ನ ಸೂಕ್ಷ್ಮಕೆ ಹೋಗಿ ಕಾರಣದಲಿ ಸಷುಪ್ತಿಯು ಆಗಿ ತೋರಿತು ತಾನೆ ಮೂರು ಪರಿಯಾಗಿ 2 ದೊರಕುದು ಬ್ರಹ್ಮಾಧಿಕರಿಗೆ ಖೂನ ಮರುಳ ಮಾಡ್ಹೆಚ್ಚಿತು ವಿಷಯದ ಧ್ಯಾನ ತರಳ ಮಹಿಪತಿಗಾಯಿತುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಲಗಿದನು ಶ್ರೀರಂಗ ಶ್ರೀರಂಗ ಪ ಕಲಿಜನರ ನೋಡುತಲಿ ಅಳುಕಿದಾಮನದಿಂದ ಅ.ಪ ಜೀವ ಜಗಬಿಂಬನಿಗೆ ಯಾವುದೈ ಆಯಾಸ ಕಾವ ಸಚರಾಚರವ ಶ್ರೀವರನಿಗುಂಟೆ ನಿದ್ರೇ ಸಾರ್ವಭೌಮನಿಗೆ ಕ್ಷುದ್ರಜೀವ ಸಮರೆಂತೆಂಬ ಕೋವಿದಾಭಾಸಗಣ ಸೇವೆಕೊಳ್ಳನು ಎಂದು 1 ವೈದೀಕರೆನ್ನುತಲಿ ವೇದಮರ್ಮವ ತಿರುಚಿ ಬೌದ್ಧಮತವನೆ ಮತ್ತೆ ಬೊಧಿಪರೆ ಈ ಜನರು ಸಾಧು ಸಮ್ಮತ ಮಧ್ವವಾದ ನೋಡದೆ ಬರಿದೆ ಸಾಧು ವೇಷದಿ ತಿರಿಪ ಗರ್ದಭರ ಕಂಡಂಜಿ 2 ನಾಮಜಪವೇನಿಲ್ಲ ನೇಮ ನಿಷ್ಠೆಗಳಿಲ್ಲ ನಾಮ ಹಾಕುವ ದೊಡ್ಡ ನೇಮವಂದೇಯಿಹುದೆ ಹೇಮಗೋಸುಗ ತತ್ವ ಹೋಮಮಾಡುವ ಎಲ್ಲ ಕಾಮ ಕಾಮಿನಿ ಜನರ ವಾಮಗುಣಗಣನೆನೆದು 3 ಅನ್ನದೇವನ ತೊರೆದು ಅನ್ನಕೊಂಬರೆ ಕ್ರಯಕೆ ಅನ್ಯರೆನ್ನದೆ ಹರಿಗೆ ಇನ್ನು ಘಳಿಪರೆ ನಿರಯ ಹುಣ್ಣಂತಮವಿಪರೀತ ಕಣ್ಣಿಂದ ನೊಡದವ ಧನ್ಯಧನ್ಯನು ಎಂದು ಕಣ್ಣುಗಳ ಮುಚ್ಚುತಲಿ 4 ಶ್ರೀಲೊಲ ಮಲಗಿದಡೆ ಏಳುವುದು ಜಗವೆಂತು ವ್ಯಾಳಗುರುಹೃಸ್ಥ “ಶ್ರೀ ಕೃಷ್ನವಿಠಲ”ನೆ ತಾಳಿ ಕೃಪೆ ಹೃದಯದಲಿ ಶೀಲರೂಪವ ತೋರೊ ಕಾಲ ವಾಲಗವ ಕೈಕೊಂಡು 5
--------------
ಕೃಷ್ಣವಿಠಲದಾಸರು
ಮಾನವ ನೀನುವಾದಿರಾಜರ ಪೂಜಿಸೋ ಪ ಶಾರ್ವರಿ ವತ್ಸರದೀ | ಜನಿಸಿ ಗೌರಿಗರ್ಭ ಸುಧಾಂಬುಧಿಲೀ ||ಪುರಬಾಹ್ಯ ಪುಟ್ಟಿದ | ಕಾರಣದಿಂದಲಿವರಯತಿ ವಾಗೀಶ | ಕರಜನೆನಿಸಿ ಮೆರೆದ 1 ವಿನುತ ಸಿರಿ ಹರಿಯ ಪೂಜಿಸಿದ 2 ವಾಲಿ ಭಂಡಾರವನೂ | ಶೋಧಿಸೆ ಅಲ್ಲಿಶೀಲ ಇನಜಾರ್ಚಿಸಿದ ||ಲೀಲ ವಿಗ್ರಹ ರಾಮ | ವಿಠಲ ಮೂರ್ತಿಗಳನ್ನಕೋಲಾಹಲದಿ ತಂದು | ಭಾಳ ಪೂಜಿಸಿದ 3 ವ್ಯಾಸರಾಜಾರ್ಚಿತನಾ | ದೇವನವೇದವ್ಯಾಸರಿಂದಲಿ ಗಳಿಸಿದಾ |ವ್ಯಾಸಮುಷ್ಠಿಕೆಯ ವಿ | ಶ್ವಾಸದಿಂದಲಿ ಪೊಂದಿಶ್ರೀಶ ಉಡುಪಿನ ಕೃಷ್ಣ | ವಾಸ ಸ್ಥಾನಕೆ ಬಂದ 4 ಕವಿಕುಲ ಸಭೆಯೊಳಗೇ | ಪೂಣೆಯ ಪುರದಿನವರಸಲಂಕಾರದೀ ||ಕವನ ರಚಿಸಿ ರುಕ್ಮಿ | ಣೀಶ ವಿಜಯ ಗ್ರಂಥಕವಿ ಕುಲೋತ್ತಂಸ | ತಾನೆನಿಸುತ್ತ ಮೆರೆದಂಥ 5 ಪಂಢರಿ ಪುರ ಮಾರ್ಗವ | ಸವೆಸುತ ಬರೆಪುಂಡು ಸೈನಿಕರ್ ಬರಲೂ ||ಪುಂಡಲೀಕಗೆ ವರದ | ಪುಂಡರೀಕಾಕ್ಷನಹಿಂಡು ಶ್ವೇತಾಶ್ವಗಳಿಂದ ವಾರಿಸಿದಾ 6 ಹರಿವಾಣ ಪೂರಣವ ||ಹಯವದನನು ಬಂದು | ಜಯ ಘೋಷದಲಿ ಮೆದ್ದುದಯ ದೃಷ್ಟಿ ತೋರಿದ | ಭಾವಿ ಮಾರುತರ 7 ಪಾದ | ಬಿಸಜವ ಕಂಡರ 8 ಬೊಮ್ಮ ರಕ್ಕಸನಾಗೀ 9 ಸಕಲ ಶಿಷ್ಯರವೆರಸಿ | ರಾಜರು ಬರೆರಕ್ಕಸ ಕರೆದ ವಾದಕ್ಕೇ ||`ಆಕಾಮವೈ` ಕೋ ನಸ್ನಾತನೆಂದೆನೆ ಅವಕಾಕು ರಂಡೆಯ ಪುತ್ರ | ತೋಕ ನೀನೆಂದ 10 ಮೇನೆ ಪಾಲಕಿ ಹೊರುವ | ನರೆಯಣ ಭೂತಯಾನ ವಾಹಕನಾದನೂ ||ಆನೆಂತು ಬಣ್ಣಿಪೆ | ಮುನಿಕುಲ ದಿನಮಣಿವೇಣುಗಾನ ಪ್ರಿಯ | ಕೃಷ್ಣ ಸೇವಕರಾ 11 ಆ ಮಹ ನೇತ್ರಾವತಿ | ಸಂಗಮವೆನ್ನಕೌಮಾರ ನದಿ ಸನಿಯದಿ ||ಈ ಮಹಾ ಮಹಿಮರು | ಸಾಸಿರ ಲಿಂಗದನೇಮದ ಪೂಜೆಗೆ | ನಿರ್ಮಿಸಿದರು ತೀರ್ಥ 12 ಪಾದ್ಯ | ಸ್ವರ್ಣ ಗರ್ಭನ ಪಿತಪೂರ್ಣಗೆ ಸುಪ್ರೀಯ | ಗಸದಳವೇನಿದು13 ಗರಳ ಮಿಶ್ರಿತ ನೈವೇದ್ಯ | ಪಾಚಕತೆರೆಹರಿಗೆ ಸಮರ್ಪಿಸಿದಾ ||ಸಿರಿಪತಿ ಕಂಠದೋಳ್ | ಕರಿಯ ವರ್ಣವ ಕಂಡುಅರಿತು ಸೇವಿಸಿದನು | ಹರಿಯ ಪ್ರಸಾದವ 14 ಸಿರಿ ಕೃಷ್ಣ | ನಂಘ್ರಿಗರ್ಪಿಸಿದ 15 ಅರಿಯು ಮುತ್ತಲು ಪುರವ | ಸೋದಾಧಿಪಮೊರೆಯ ಹೊಕ್ಕನು ರಾಜರ ||ಭರದಿ ನಾರಾಯಣ | ವರ ಭೂತನನ ಕಳುಹಿಅರಿಭಯ ವಾರಿಸಿ | ಪೊರೆದ ನಾಯಕನಾ 16 ಸೋದೆಯಲ್ಲೋರ್ವ ಶೈವ | ಬಲುಗರ್ವದಿವಾದ ಮಾಡುತಲವನೂ ||ವೇದ ಮತವ ಬಲು | ವಿಧದಿ ದೂಷಿಸಿ ಕಡುಬಾಧೆ ಪಡಿಸುತಲಿದ್ದ | ಬುಧಜನ ವೃಂದವ 17 ಭೃತ್ಯ ಭಾವದಿ | ವಿಜಯ ಪತ್ರವನಿತ್ತುನಿಜ ಬಿರುದುಗಳವರ | ಪದಕೆ ಅರ್ಪಿಸಿದ 18 ತ್ರಿವಿಕ್ರಮಾಲಯ ಸ್ಥಾಪನೆ | ರಚಿಸಿ ಮೆರೆದ ದಿವ್ಯ ಶಾಲೀವಾಹನ್ನ ||ಸಾವಿರೈನೂರ್ನಾಲ್ಕು | ಚಿತ್ರ ಭಾನುವಿನಲ್ಲಿರವಿಯು ಮೇಷಾರ್ಧದಿ | ಚರಿಸುವ ದಿನದಿ 19 ರಥದಿಮೂರ್ತಿಯ ಸೇರಿಸಿ | ಬದರಿಯಿಂದಭೂತ ನರೆಯಣ ಬರುತಿರೆ ||ಪಥದಿ ರಕ್ಕಸ ಸೆಣೆಸೆ | ಪೃಥುಕು ಆಯುಧ ಬಿಟ್ಟುರಥದ ಗಾಲಿಯಲಿಂದ | ಹತಗೈದನವನ 20 ವೇದಾರ್ಥ ಬೃಂಹಿತದ | ಬಹು ಗ್ರಂಥಗಳ್‍ಪದ ಪದ್ಯ ಸೂಳ್ಹಾದಿಯ ||ಸೋದೆ ಮಠದಿ ನಿಂದು | ವಾದಿರಾಜರು ರಚಿಸಿಬುಧರಿಗಾನಂದವ | ಮುದದಿ ಪಾಲಿಸಿದ 21 ತ್ರಿವಿಕ್ರಮ ರಥೋತ್ಸವದಿ | ಕರೆಯಲು ಬಂದದಿವಿರಾಜ ಜನರು ಕಳುಹಿ ||ಭವ್ಯ ಸು ಪಂಚ ವೃಂದಾವನಗಳ ರಚಿಸಿದಿವಿರಾಜ ಗರುಹಿದರ್ ತಮ್ಮಯ ಬರವನು 22 ಶಾರ್ವರಿ ವತ್ಸರದೀ | ಫಾಲ್ಗುಣ ವದ್ಯಮೂರನೆ ದಿವಸದಲ್ಲೀ ||ವರ ವೃಂದಾವನ ಪೊಕ್ಕು | ಗುರು ಗೋವಿಂದ ವಿಠಲನನಿರುತ ಧ್ಯಾನದೊಳಲ್ಲಿ | ವರವ ಪಾಲಿಸುತಿಹರ 23
--------------
ಗುರುಗೋವಿಂದವಿಠಲರು
ಮಾಸ ನಿಯಾಮಕ ದೇವತೆಗಳ ವರ್ಣಿಸುವೆನು ಪ ಶ್ರೀಶನಾಜ್ಞೆಯಲಿ ಸಕಲ ಸುಜನರಿದ ಕೇಳಿ ಅ.ಪ. ಸಹವೆಂಬ ಮಾರ್ಗ ಶಿರದಿ ಪುತ್ರ ನಾಮಕ ಸವಿತೃ ಮಹಾ ವಿಶಾಲಾಕ್ಷಿರಮಣ ಕೇಶವ ನಿಯಾಮಕನು ಸಹಸ್ಯವೆನಿಪ ಪುಷ್ಯದೊಳು ವಿಷ್ಣುವೆನಿಪನು ಮಹಲಕುಮಿರಮಣ ನಾರಾಯಣನಿದಕೆ ಕರ್ತೃ 1 ತಪವೆನಿಪ ಮಾಘದೊಳು ಅರುಣನಾಮಕ ಸವಿತೃ ಚಪಲಾಕ್ಷಿ ರುಕ್ಮಿಣೀರಮಣ ಮಾಧವನು ದೊರೆಯು ತಪಸ್ಯವೆನಿಪ ಫಾಲ್ಗುಣದಿ ಸೂರ್ಯನೆನಿಪನು ಸುಪವಿತ್ರೆ ಧಾತ್ರೀಪತಿ ಗೋವಿಂದನಧಿದೇವತೆ2 ಮಧುಮಾಸವಾದ ಚೈತ್ರದೊಳು ವೇದಾಂಗನು ಪದುಮಾಕ್ಷ ಮಾ ರಮಾರಮಣ ವಿಷ್ಣು ನಿಯಾಮಕನು ಮಾಧವನೆನಿಪ ವೈಶಾಖದಿ ಭಾನುವೆಂದೆನಿಸುವನು ಮಧುಸೂದನ ನಾಮಕ ಮೋಹಿನೀ ಪತಿಯು 3 ಶುಕ್ರವೆನಿಪ ಜ್ಯೇಷ್ಠದೊಳು ಇಂದ್ರನೆನಿಪ ಸವಿತೃ ತ್ರಿ ವಿಕ್ರಮನಿದಕಧಿಪತಿಯು ಪದುಮಾಕ್ಷಿರಮಣ ಅಕ್ಕರದಿ ಶುಚಿಯೆನಿಪಾಷಾಡದಿ ರವಿಯೆನಿಪನು ಚಕ್ರಧರ ವಾಮನನಿದರಧಿಪತಿ ಕಮಲಾರಮಣ 4 ನಭವಾದ ಶ್ರಾವಣದಿ ಗಭಸ್ತಿಯೆನಿಸುವನು ತ್ರಿಭುವನದಧಿಪತಿ ಶ್ರೀಧರನು ಕಾಂತಿಮತಿರಮಣ ನಭಸ್ಯವೆನಿಪ ಭಾದ್ರಪದದಿ ಯಮನೆನಿಸುವನು ಇಭವರದ ಹೃಷಿಕೇಶ ಅಪರಾಜಿತಾ ರಮಣ 5 ಒದಗಿಹ ಇಷವೆನಿಪಾಶ್ವೀಜದೊಳು ಸ್ವರ್ಣರೇತಾ ಇದಕಭಿಮಾನಿ ಪದಮಾವತಿಪತಿ ಪದುಮನಾಭ ಉದಯಿಸುತಿಹ ಊರ್ಜಿಯೆನಿಪ ಕಾರ್ತಿಕದಿ ದಿವಾಕರ ರಾಧಾರಮಣ ದಾಮೋದರನಿದರಭಿಮಾನಿ 6 ಆಯಾಯ ಮಾಸದಲಿ ಮಾಳ್ಪ ಸಕಲ ಕರ್ಮಗಳನು ಆಯಾಯಭಿಮಾನಿ ದೇವರುಗಳಿಗರ್ಪಿಸಿ ಮಾಯಾರಮಣ ಶ್ರೀ ರಂಗೇಶವಿಠಲನ ನೆನೆಯುತ ಆಯಾಸವಿಲ್ಲದೆ ಪರಮಪದವನು ಪಡೆಯಿರೊ 7
--------------
ರಂಗೇಶವಿಠಲದಾಸರು
ಮುರಳಿ ವಿನೋದ ವಿಠಲ | ಪೊರೆಯ ಬೇಕಿವನಾ ಪ ದುರಿತ ದುಷ್ಕøತವೆಲ್ಲ | ದೂರ ಸಾಗಿಸುತಾ ಅ.ಪ. ಚಾರು ಯೌವನದಲ್ಲಿ | ಪರಿಪರಿಯ ಲೌಕಿಕದಿಮಾರಮಣ ಸ್ಮøತಿ ರಹಿತ | ಕರ್ಮವೆಸಗೀಜಾರಿ ಪೋಗಲು ಆಯು | ಆರಾಧ್ಯ ದೇವತೆಯಚಾರುತರ ಪೂಜಿಸಲು | ಸಾರಿ ಬಂದಿಹನಾ 1 ಹಿಂದೆ ಮಾಡಿರುವ ಬಹು | ಮಂದಿ ಜನಗಳ ಸೇವೆಇಂದಿರೇಶನೆ ನಿನ್ನ | ಸೇವೆ ಎಂದೆನಿಸೀಇಂದಿರಾರಾಧ್ಯ ಪದ | ಚೆಂದದಿಂ ಪೊರೆ ಇವನಮಂದರೋದ್ಧಾರಿ ಹರಿ | ಕಂದರ್ಪಪಿತನೇ2 ಧ್ಯಾನ ಯೋಗದಿ ಮನವ | ಸಾನುಕೂಲಿಸು ಇವಗೆಮಾನನಿಧಿ ಮಧ್ವಪದ | ರೇಣುನಾಶ್ರಯಿಸೀಗಾನದಲಿ ತವ ಮಹಿಮೆ | ಪೊಗಳಿಕೆಯನೆ ಇತ್ತು ಪ್ರಾಣಾಂತರಾತ್ಮಕನೆ | ಪಾಲಿಸೈ ಹರಿಯೆ 3 ದೇವಧನ್ವಂತರಿಯೆ | ಪಾವನಾತ್ಮಕ ನಿನ್ನಸೇವೆ ಗಯ್ಯುವವಗಿ | ನ್ನಾವ ದುರಿತಗಳೋಭಾವದಲಿ ಮೈದೋರಿ | ನೀವೊಲಿದು ತೋದರಂತೆದೇವ ತವ ದಾಸ್ಯವನು | ಇತ್ತಿಹೆನು ಹರಿಯೇ 4 ನಾರಸಿಂಹಾತ್ಮಕನೆ | ಕಾರುಣ್ಯದಲಿ ಹೃದಯವಾರಿರುಹ ಮಧ್ಯದಲಿ | ತೋರಿ ತವ ರೂಪ |ಪಾರುಗೈ ಭವವ ಗುರು | ಗೋವಿಂದ ವಿಠಲನೆಸಾರಿ ತವ ಪಾದವನು | ಪ್ರಾರ್ಥಿಸುವೆ ಹರಿಯೇ5
--------------
ಗುರುಗೋವಿಂದವಿಠಲರು
ಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರವಾಸಿ ಗುರುಪಾದ ಯಚ್ಚರಿಕೆ ಯಚ್ಚರಿಕೆ ಪ ಶ್ರೀ ತ್ರಿವಿಕ್ರಮ ಲೋಕನಾಥನ ತಂದೆ ಶ್ರೀಪಾದಯಚ್ಚರಿಕೆ ಯಚ್ಚರಿಕೆ ಅ.ಪ. ಗುರುಹಯವದನ ಮನಮುಟ್ಟಿ ಸ್ಮರಿಸಿ ಪೂಜಿಪಶ್ರೀ ಗುರುಪಾದ ಯಚ್ಚರಿಕೆ ಯಚ್ಚರಿಕೆ 1 ಶತಷಣ್ಣವತಿ ಸಪ್ತ ಬ್ರಹ್ಮ ಕಲ್ಪಗಳಲ್ಲಿ ಶ್ರೀಹರಿಯೆ ಮಹ ಮಾರೆತವ ಚರಿಸಿದ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 2 ತಪಚರಿನಿಯರ ಡೃವತ್ತೂ ಷಣ್ಣವತಿ ಲಿಷ್ಟನೇ ಕಲ್ಪದ-ಲಿಲಾತವ್ಯ ವಾಯುಸಾಧನ ಮಾಡುವಾನಂದ ಜ್ಞಾನ ಯೋಗ ಸಿದ್ಧಿಸಿ ಕೊಡುವ ಉದಾರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 3 ಪ್ರಧಾನ ವಾಯು ಪದ ಸ್ವೀಕರಿಪ ಹಂಸವಾಹನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ4 ಹಿಂದೆ ವಿರಜಸ್ನಾನದಿ ಅಜ್ಞಾನಾತ್ಮಕ ಲಿಂಗದೋಷನಿಶ್ಶೇಷ ಹೊಂದಿದ ಗುರುವಿರಾಜರ ವಾದದ್ವಯ ಯಚ್ಚರಿಕೆ ಯಚ್ಚರಿಕೆ 5 ನಿರ್ಜೀವ ನಿಷ್ಕ್ರಿಯಾ ದಗ್ಧಪಟದಪ್ಪಂತಿರುವ ದೇಹ ಲಿಂಗವ ನಿಮಿತ್ತ ಮಾತ್ರಕೆ ಹರಿಯಿಭಯಿಂ ಧರಿಸಿರುವ ಲಾತವ್ಯ ಗುರುಪಾದ ಯಚ್ಚರಿಕೆ ಯಚ್ಚರಿಕೆ6 ಮುಕ್ತ ಅಮುಕ್ತಿ ಭೇದ ತೋರ್ಪದಕೆ ಶಿರಿಯಿಂದನದಿ ಶಾಲ್ಮಲ ವಾಸಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 7 ದ್ವಸ್ತ ದುರಾಗಮಿ ಶ್ರೀರಾಜಗುರು ಪಾದಕೆಚ್ಚರಿಕೆ 8 ಅಜ್ಞಾನ ಅಹಂಕಾರ ಭಯ ಮೋಹ ವಿಸ್ಮøತಿ ದುಃಖಾದಿಬಂಧನ ಕಳೆವ ಪ್ರಭುವಾದಕೆಚ್ಚರಿಕೆ 9 ಪತಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 10 ತ್ರಿವಿಧ ಜೀವರ ಚತುರ್ವಿಧಶರೀರದಿಯಿದ್ದವರ ಸಾಧನವಾ ಮಾಡಿಸಿ ಜೀವರ ಸುಖದುಃಖಗಳಿಂತಾ ಬದ್ಧರಾಗದೆ ಪೂರ್ಣ ನಿರ್ಲಿಪ್ತರಾಗಿರುವಶ್ರೀಪಾದ ಯಚ್ಚರಿಕೆ ಯಚ್ಚರಿಕೆ11 ತ್ರಿವಾರ ವಿರಜ ಸ್ನಾನವ ಮಾಡ್ವ ಸೌಭಾಗ್ಯ ಪ್ರಾರಬ್ಧಪೊಂದಿರುವ ಗುರು ವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 12 ಸತ್ವ ಜೀವರ ಮೋಕ್ಷ ಪ್ರಾಪ್ತಿಗೆ ವಿರಜ ನದಿಯಲಿಸ್ನಾನ ಮಾಡಿಸಿ ಜೀವಸತ್ವರ ಮೋಕ್ಷಕ್ಕಿಡುವ ನಿವ್ರ್ಯಾಜ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 13 ಸುಜೀವರ ಅನಾದಿ ಲಿಂಗ ಅಜ್ಞಾನ ಸ್ವರೂಪ ದೇಹ-ಭಂಗಿಸುವ ಶ್ರೀರಮಾತ್ಮಕ ವಿರಜ ನದಿಯಲಿ ಸ್ನಾನ-ಮಾಡಿ ಸ್ವಲಿಂಗ ವಿಶಿಷ್ಟವಾದ ಅಜ್ಞಾನದಿಂ-ವಿರಹಿತರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 14 ಆನಂದವ ವೃಷಭಾವಿ ಆನಂದ ತೀರ್ಥ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 15 ತ್ರಿವಿಧ ಜೀವರಲಿಯಿದ್ದು ತ್ರಿವಿಧಸಾಧನ ಮಾಡಿಸುವ ಭಾವಿ ವಾಯುನಾಮಕ ನತ್ತಾ ಪ್ರದ ಲಾತವ್ಯವಾಯು ವಾದಿರಾಜ ಮಧ್ವ ಮುನಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 16 ಆಯಾಯರ ಜೀವರ ಚಲನವಲನಾದಿ ವ್ಯಾಪಾರ ಮಾಡಿಸುವ ಭಾವಿ ಪ್ರಾಣನಾಮಕ ಭೀಷ್ಟಾಪ್ರದ ವಾದಿರಾಜಗುರುಪಾದಯಚ್ಚರಿಕೆ ಯಚ್ಚರಿಕೆ 17 ಚತುರ್ವಿದ ಶರೀರಗಳಲಿದ್ದು ಸಂರಕ್ಷಿಸುವ ಭಾವಿ ಧರ್ಮನಾಯಕಧಾರಣಪ್ರದ ಶ್ರೀ ಗುರುರಾಜರಶ್ರೀಪಾದ ಯಚ್ಚರಿಕೆ ಯಚ್ಚರಿಕೆ 18 ಪ್ರಭುತ್ವವಾರ್ತೈಸಿಜೀರರ ಅವರವರ ಸ್ವರೂಪಯೋಗ್ಯಗತಿ ಕೊಡುವ ಭಕ್ತಿ ಮುಕ್ತಿ ಪ್ರದ ಭಾವಿ ಭಾರತೀ ರಮಣ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 19 ದೇವೋತ್ತಮ ಲಾತ ವಾಯುಸ್ವನಾಮಕೆ ಭಗವಂತಗೇ ನಿತ್ಯನ್ವ ಭಕ್ತರ ಪಾಪ ಮನ್ನಿಸುವಂತೆ ಪ್ರಾರ್ಥಿಸಿ ತಾವು ಮನ್ನಿಸಿ ಕ್ಷಮಿಸುವಲ್ಲಿ ಕ್ಷಮಾ ಸಮುದ್ರರಾದ ಶ್ರೀಗುರುಪಾದಯಚ್ಚರಿಕೆ ಯಚ್ಚರಿಕೆ 20 ಪುಣ್ಯ ಪ್ರದಾನ ಮಾಡುವಲ್ಲಿ ಜೀವರಿಗೆ ಪರಮ ದಯಾಳು ಆರ್ತರಿಗೆ ದಯತೋರುವ ಕೃಪಾನಿಧಿ ಸಜ್ಜನರ ದೋಷ ವಿಚಾರದಿ ಮಹಾ ಸಹಿಷ್ಣುಗಳಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 21 ಶಿಖಾಮಣಿ ಸಕಲ ತಾತ್ವಿಕ ದೇವತಾ ರಂಜಕ ಆಹ್ಲಾದಕರ ದಾನವ ಭಂಜಕ ಸಂಹಾರ ಕರ್ತರಾದ ಕಾರಣ ಭಾವಿ ಪ್ರಭಂಜನ ವರವಾಜ್ಯರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 22 ಸರ್ವದಾ ಅನ್ಯ ಜೀವರು ಕಾಣದಾ ಅಸಾಧಾರಣ ಗುಣ ಕ್ರಿಯಾ ಸ್ವರೂಪರಾದ ವೇದ ಪ್ರತಿಪಾದ್ಯರಾದುದರಿಂದ ಮಹಂತರೆಂದು ಕರೆಸುವ ಭಾವಿ ವಾಯುವಿನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ23 ಅವರವರ ಸಾಧನಗಳ ಪೂರೈಸಿ ಕೊನೆಗವರ ನಿಜಗತಿ ಪ್ರವರಾದ ಸರ್ವ ಜೀವರಂತರ್ಯಾಮಿ ಸಕಲ ಗುಣ ಸದ್ಧಾಮ ಭಾವಿ ಮರುತ ಗುರುವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 24 ಬರುವ ಜಗತ್ತಿನ ಸರ್ವ ಜೀವರಿಗೆಲ್ಲ ಜೀವನ ಪ್ರಾಣ- ವಾಗಿರುವ ಜೀವೋತ್ತಮ ಶ್ರೀ ಭಾವಿ ಬ್ರಹ್ಮ ಮರುತ ವಾದಿರಾಜರ ಶ್ರೀಪಾದದ್ವಯ ಯಚ್ಚರಿಕೆ ಯಚ್ಚರಿಕೆ 25 ಸಕಲ ಜೀವರ ಸಂಜೀವರಾದ ಯಲ್ಲ ಜೀವರ ಜೀವ ಯಲ್ಲಪ್ರಾಣಿಗಳ ಪ್ರಾಣರಾಗಿ ಪ್ರಾಣೆಂದು ಕರೆಸುವ ಭಾವಿ ಮುಖ್ಯ ಪ್ರಾಣ ವಾದಿರಾಜರ ಗುರುಪಾದಕೆಚ್ಚರಿಕೆ 26 ಸದಾಸರ್ವತ್ರ ಭಗವದ್ರಷ್ಟøಗಳಾದ ಬ್ರಹ್ಮದೇವರ ಭೃತ್ಯಣ ಜೀವ ಪರ್ಯಂತ ವ್ಯಾಪ್ತರಾದ ಆಯಾ ಸ್ಥಳದಿದ್ದು ಆಯಾ ಜೀವರ ತಕ್ಕ ವ್ಯಾಪಾರ ಮಾಡುವ ಭಾವಿ ಪೂರ್ಣಪ್ರಜ್ಞರೆನಿಸಿರುವ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 27 ಸಾಕ್ಷಾತ್ರ್ಪತಿಬಿಂಬರಾದ ಕಾರಣ ಭಾವಿ ಮುಖ್ಯ ಪ್ರತಿಬಿಂಬ-ರೆಂದೆನಿಸಿಕೊಂಡ ಗುರುವಾದಿರಾಜ ವಿಭುಪಾದಕೆಯಚ್ಚರಿಕೆ ಯಚ್ಚರಿಕೆ 28 ನಿತ್ಯ ಸಾಯುಜ್ಯ ಸಹ ಭೋಜನದ ಭೋಗ ಹೊಂದುವ ಭಾವಿ ಮರುತ ಶ್ರೀಲಾತವ್ಯ ವಾಯು ಗುರು ಮಧ್ವ ಮುನಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 29 ಸದನ ಪೂರ್ಣ ಚಂದ್ರವದನರು ಮೋಕ್ಷ ಸಾಮ್ರಾಜ್ಯ ನಿರ್ದುಷ್ಟ ಆನಂದ ಸುಖಸ್ವರೂಪರು ಪರಮ ಪುರುಷಾರ್ಥ ಪಾತ್ರಗಳು ಪುಣ್ಯ ಸ್ವರೂಪ ಪಂಚ ರೂಪಾತ್ಮಕ ಹರಿಯೆ ಪಂಚ ವೃಂದಾವನ ಸ್ವರೂಪದಿಯಿರುವ ರಂಜಪುಣ್ಯ ವೃಂದಾವನದಿ ವಿರಾಜಿಸಿ ಪಂಚ ಪುಣ್ಯ ಧಾರೆಯೆರೆವ ಪಂಚಪ್ರಾಣರಾದ ವಾದಿಗಳ ಪಲ್ಮುರಿವ ವಾದಿರಾಜಮಧ್ವ ಮುನಿಯ ಶ್ರೀ ಭಾವೀ ಭಾರತೀದೇವಿ ತನ್ನ ಮೃದು ಕೋಮಲ ತೊಡೆಯ ಮೇಲೆ ಪತಿಯ ಶ್ರೀಪಾದಪದ್ಮದ್ವಯವಿಟ್ಟು ವತ್ತೂವ ಅಜ್ಞಾನ ತಿಮಿರಕೆ ಮಾರ್ತಾಂಡ ವಾದ ಜ್ಞಾನಾನಂದ ದಾಯಕ ಶ್ರೀಗುರುಪಾದ ಯಚ್ಚರಿಕೆ ಯಚ್ಚರಿಕೆ30 ಜಗಜ್ಜೀವನಗಳಿಗೆ ಮುಖ್ಯ ಕಾರಣ ಪ್ರಾಣ ಆ ಪ್ರಾಣವಿಲ್ಲದಿರೆ ಸ್ವತಃ ಚಲಿಸಲು ಅಸಮರ್ಥ ಸರ್ವ ಜಗತ್ತಿಗೆ ಪ್ರಾಣ ವಿಜ್ಞಾನ ಪ್ರಾಣಾಗ್ನಿ ಶಬ್ದವಾಜ್ಯ ಈ ಭಾವಿಮುಖ್ಯ ಪ್ರಾಣ ಜಗಜ್ಜೀವನಗಳಿಗೆ ತಾನೇ ಮುಖ್ಯ ಪ್ರಾಣರೂಪ ಹೀಗೆಂದು ಬಳಿತ್ಥಾ ಸೂಕ್ತ ಅಗ್ನಿ ಸೂಕ್ತದಲಿ ಉಕ್ತ ಈ ಸೂಕ್ತಿಗಳಿಂದ ಪ್ರತಿಪಾದ್ಯರಾದ ಜಗನ್ನೇತ್ರಜಗಜ್ಜೀವನರಾದ ಪಂಚಪ್ರಾಣ-ರೂಪಾತ್ಮಕ ಶ್ವಾಸನಿಯಾಮಕ ಸೋದೆಪುರವಾಸಿ ಭೂತರಾಜರ ಹೃನ್ಮಂದಿರ ವೇದ್ಯ ವೇದ್ಯನುತ ಅಹಿಪ ಖಗಪ ಉಮೇಶಾದಿ ಸುರರಿಗೆ ಚಿಂತಿಸಲು ಅಳವಲ್ಲದ ಅಗಮ್ಯ ಮಹಿಮ ಶ್ರೀ ಪ್ರಭು-ವಾದಿರಾಜರ ನಿರ್ದೋಷ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 31 ಜಿತಣಮ ಸರ್ವಜ್ಞ ಅಶೇಕ್ಷ ಸಂಪದ್ವಿಶಿಷ್ಟ ಸದ್ಗುಣ ಭರಿತ ಪೂರ್ಣ ತೃಪ್ತ ನಿಶ್ಚಲ ಭಕ್ತ ದೃಢವ್ಯೆರಾಗ್ಯಶಾಲಿಚಿರಂಜೀವಿ ಶ್ರೀ ಗುರುವಾದಿರಾಜರ ಶ್ರೀಪಾದ ಪದ್ಮ ನಖರೇಣುಗಳಿಗೆ ಯಚ್ಚರಿಕೆ ಯಚ್ಚರಿಕೆ 32 ಪರಿ ಪರಿ ಕ್ರೀಡೆ-ರಮಿಸಿ ಆ ಆನಂದ ಶ್ರೀ ಹರಿಗೆ ಅರ್ಪಿಪ ಗುರುವಾದಿರಾಜಶ್ರೀಪಾದಂಗಳ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 33 ನಿತ್ಯ ನಿತ್ಯ ಶ್ರೀವರ ಮಾಲೇಶೆಗೆ ಅರ್ಪಿಪ ಭಾವಿಲಾಳೂರ ಶ್ರೀ ಗುರುರಾಜರ ಪಾದಕೆ ಯಚ್ಚರಿಕೆ ಯಚ್ಚರಿಕೆ34 ತನ್ನ ಶ್ರೀಪಾದ ರಜ ಧೆಣಿಯಲಿ ಧರಿಸಿ ಜೀವಿವರ ಹಯವದನ ಪಾದಕರ್ಪಿಸುವೆನೆಂದು ಪಣತೊಟ್ಟು ಜೀವನ್ಮುಕ್ತರನು ಮಾಡಿ ಪರಿಪಾಲಿಪೆನೆಂದು ಧೀರ ವೃಂದಾವನದಿ ಮೆರೆವ ಶ್ರೀಗುರು-ವಾದಿರಾಜರ ಶ್ರೀಪಾದಕೆ ಯಚ್ಚರಿಕೆ ಯಚ್ಚರಿಕೆ 35 ಶ್ರೀ ತ್ರಿವಿಕ್ರಮನ ರಥೋತ್ಸವಕೆ ಬಂದವರಲಿ ಒಂದೊಂದಂಶ ಸುರರ ಪ್ರವೇಶಿಸಿ ಅವರಲ್ಲಿ ತನ್ನೊಂದಂಶದಿಂದ ಸುರರ ಸಾಧನ ಮಾಡಿ ಸುರನರರ ಕೃತ ಕೃತ್ಯರೆನಿಸಿ ಶಿರಿ ಹಯ-ವದನನ ಕಾಣ್ವ ಜ್ಞಾನ ಭಕುತಿ ವೈರಾಗ್ಯ ನಿಷ್ಠಿಯನಿತ್ತು ಬ್ರಹ್ಮ ನಿಷ್ಯ್ಠೆ ಕರೆನು ಮಾಳ್ವ ಶ್ರೀ ಗುರು ಶ್ರೀಪಾದಕೆಯಚ್ಚರಿಕೆ ಯಚ್ಚರಿಕೆ 36 ಶ್ರೀ ಧವಳ ಗಂಗೆಯ ಸ್ನಾನ ಮಾಡುವ ಜ್ಞಾನವೀವ ಶ್ರೀ ಗುರು-ಪಾದಕೆ ಯಚ್ಚರಿಕೆ ಯಚ್ಚರಿಕೆ 37 ವಾಸುದೇವ ಪರಿ ಸ್ತೋತ್ರ ಮಾಡಿರೈ ಜ್ಞಾನಿ-ಗಳಾದವರೆಲ್ಲ ಶ್ರೀ ಗುರುಪಾದದೆಚ್ಚರಿಕೆಯಲಿ ತಂದೆವರದಗೋಪಾಲವಿಠಲ 38
--------------
ಗುರುತಂದೆವರದಗೋಪಾಲವಿಠಲರು
ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ ತುಲಸಿಯ ಸೇವಿಪ ಸುಜನರಿಗೆ ಪ. ಅಮೃತವ ಕೊಡುವ ಹರುಷದೊಳಿರ್ದಕಮಲೆಯರಸನಕ್ಷಿಗಳಿಂದಪ್ರಮೋದಾಶ್ರು ಸುರಿಯೆ ಕ್ಷೀರಾಬ್ಧ್ದಿಯೊಳುಆ ಮಹಾತುಲಸಿ ಅಂದುದಿಸಿದಳು 1 ಪರಿಮಳಿಸುವ ಮಾಲೆಯ ನೆವದಿ ಹರಿಯುದರದಲ್ಲಿಸಿರಿಯೊಲಿಹಳುತÀರುಣಿ ತುಲಸಿ ತಪ್ಪದೆಯವನಚರಣವ ರಮೆ ಭಜಿಸೆ ಭಜಿಪಳು2 ಪೂಜಿಸುವರ ಶಿರದಿ ನಿರ್ಮಾಲ್ಯಗಳವ್ಯಾಜದಿಂದ ಲಕ್ಷ್ಮಿಯ ಕೂಡೆ ಬಹಳುಈ ಜಗದೊಳು ತಾವಿಬ್ಬರಿದ್ದಲ್ಲಿಆ ಜನಾರ್ದನನಾಕ್ಷಣ ತಹಳು 3 ಒಂದು ಪ್ರದಕ್ಷಿಣವನು ಮಾಡಿದವರಹೊಂದಿಪ್ಪುದು ಭೂಪ್ರದಕ್ಷಿಣ ಪುಣ್ಯಎಂದೆಂದಿವಳ ಸೇವಿಸುವ ನರರಿಗೆಇಂದಿರೆಯರಸ ಕೈವಲ್ಯವೀವ 4 ತುಲಸಿಯ ನೆಟ್ಟವನು ಮತ್ತೆ ತನಗೆ ಇಳೆಯೊಳು ಪುಟ್ಟುವ ವಾರ್ತೆಯ ಕಳೆವಜಲವೆÀರೆದು ಬೆಳೆಸಿದ ಮನುಜರಕುಲದವರ ಬೆಳೆಸು ವೈಕುಂಠದಲ್ಲಿ 5 ತುಲಸಿಯೆ ನಿನ್ನ ಪೋಲುವರಾರುಮೂಲದಲ್ಲಿ ಸರ್ವತೀರ್ಥಂಗಳಿಹವುದಳದಲ್ಲಿ ದೇವರ್ಕಳ ಸನ್ನಿಧಾನಚೆಲುವಾಗ್ರದಿ ಸಕಲ ವೇದಗಳು 6 ತುಲಸಿ ಮಂಜರಿಯೆ ಬೇಕಚ್ಚುತಂಗೆದಳಮಾತ್ರ ದೊರಕಲು ಸಾಕವಗೆಸಲುವುದು ಕಾಷ್ಠಮೂಲ ಮೃತ್ತಿಕೆಯುಫಲವೀವನಿವಳ ಪೆಸರ್ಗೊಳಲು 7 ಕೊರಳಲ್ಲಿ ಸರ ಜಪಸರಗಳನ್ನುವರ ತುಲಸಿಯ ಮಣಿಯಿಂದ ಮಾಡಿಗುರುಮಂತ್ರವ ಜಪಿಸುವ ನರರುಹರಿಶರಣರ ನೆಲೆಗೆ ಸಾರುವರು8 ಎಲ್ಲಿ ತುಲಸಿಯ ಬನದಲ್ಲಿ ಲಕ್ಷುಮೀ-ವಲ್ಲಭನು ಸರ್ವಸನ್ನಿಹಿತನಾಗಿನೆಲಸಿಹನಿವಳೆಸಳೊಂದಿಲ್ಲದಿರೆಸಲ್ಲದವಂಗನ್ಯಕುಸುಮದ ಪೂಜೆ 9 ಎಲ್ಲ ಪಾಪಂಗಳೊಮ್ಮೊಮ್ಮೆ ಕೈಮುಗಿಯೆಎಲ್ಲಿ ಪೋಪುದು ದೇಶದೇಶಂಗಳಿಗೆನೆಲ್ಲಿ ಮಲ್ಲಿಗೆ ಮೊದಲಾದ ಸೈನ್ಯಅಲ್ಲೀಗಲು ನಮ್ಮ ಬನದಲೊಪ್ಪಿಹಳು 10 ಹರಿಪಾದಕೆ ಶ್ರೀತುಲಸಿಯೇರಿಸಿದನರರನು ಪರಮ ಪದಕೇರಿಸುವುದುನಿರುತದಿ ತುಲಸಿಯ ಕಂಡರವಗೆನರಕಗಳ ದರುಶನ ಮತ್ತಿಲ್ಲ 11 ಪಡಿ ಆಯಿತು ಗಡನ್ನಿವಳ ವೃಂದಾವನದಲ್ಲಿ ನೆಟ್ಟುಮನೆಮನೆ ಮನ್ನಿಸದವನ್ಯಾವ12 ಕನಸಿನಲಿ ಕಂಡಂತೆ ಇನ್ನೊಂದುಕೊನೆವೆರಸಿದ ಪುಷ್ಪದಿ ಜಪಿಸಿಅನುದಿನ ಹಯವದನನ್ನ ತೀರ್ಥವನು ಕೊಂಡು ನಾ ಧನ್ಯನಾದೆನು 13
--------------
ವಾದಿರಾಜ
ಯಾರು ಇಕ್ಕುವರೆಂದು ಹಾರೈಸುವೈ ಆತ್ಮ ಸೋರುತಿದೆ ಮನೆಯೆಲ್ಲ ನಾರುತಿದೆ ಸ್ಥಳವು ಪ ಒಲೆಯೊಳಗೆ ಉರಿಯಿಲ್ಲ ಜಲವಿಲ್ಲ ಬಾವಿಯೊಳು ಕಲಹ ಮಾಳ್ಪಳು ತನ್ನ ಕುಲವನಿತೆಯು ಹೊಲುಬುದಪ್ಪಿಯೆ ಇಲ್ಲಿ ಬರಬಹುದೆ ನೀನೀಗ ಫಲವುಳ್ಳ ಮನೆಗಳನು ಸೇರೆಲವೊ ಆತ್ಮ 1 ಬಾಗಿಲಿಲ್ಲದ ಮನೆಯು ಬಹಳ ಕಗ್ಗತ್ತಲೆಯು ಕೂಗುವುದು ಹುಲಿ ಕರಡಿ ಇದಿರಿನೊಳಗೆ ಬೇಗದೊಳು ಇಲ್ಲಿಂದ ಸಾಗುವುದೆ ಸೌಖ್ಯಗಳು ನಾಗಶಯನನ ಗುಡಿಯ ಸೇರೆಲವೊ ಆತ್ಮ 2 ಒಟ್ಟೆಗಡಿಗೆಯ ಒಳಗೆ ಇಟ್ಟಿರ್ದ ಬುತ್ತಿಗಳು ಕೆಟ್ಟ ಕ್ರಿಮಿಗಳು ಬಂದು ಬಹಳ ಹಳಸಿದವು ಬಟ್ಟಲಿಡುವವರಿಲ್ಲ ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬುವುದುಂಟೆ ದುಷ್ಟರೊಳು ಆತ್ಮ 3 ಹಾಳು ಮನೆಯನು ನಿನಗೆ ತೋರಿಕೊಟ್ಟವರಾರು ಬೀಳುವುದು ಮೇಲೆ ಹದಿನಾರು ಭಿತ್ತಿಗಳು ಏಳು ಇಲ್ಲಿರಬೇಡ ಕಾಳಸರ್ಪನು ಬಂದು ಕಾಲ ಕಚ್ಚ್ಚುವನಲ್ಲೊ ಎಲೆ ದುಷ್ಟ ಆತ್ಮ 4 ಮೂರು ಮಾತನು ಮೇಲೆ ಯಾರ ಕೂಡಾಡಿದೆಯೊ ಆರು ಪಥದಲಿ ನೀನು ಮೀರಿ ನಡೆದೆ ಕೇರಿಯಾಗಿರ್ದ ಹದಿನೆಂಟು ಅಂಗಡಿಯೊಳಗೆ ಆರ ವ್ಯಾಪಾರವನು ಕೇಳಿದೈ ಆತ್ಮ 5 ಹತ್ತು ತಾಸಿನ ಮೇಲೆ ತುತ್ತು ಕೊಡುವವರಾರು ಬತ್ತುವುದು ಕೈಕಾಲು ಬಳಲಿಕೆಯೊಳು ಮತ್ತೇಳು ಮಂದಿ ತಾವತ್ತತ್ತ ಸಾರುವರು ಕರ್ತುಗಳ ನಾ ಕಾಣೆ ನೀ ಕೇಳೊ ಆತ್ಮ 6 ಎಂಟು ಮಂದಿಯು ತನಗೆ ನೆಂಟರೆಂಬಾಶೆಯೊಳು ಗಂಟ ಕಟ್ಟಿಯೆ ಮನದಿ ಮರುಗುತಿರಲು ಗಂಟಲೊಣಗಿಯೆ ವಾಯು ಕಂಠದೊಳು ಪೋಪಾಗ ನಂಟರನು ನಾ ಕಾಣೆ ಆಲಿಸೈ ಆತ್ಮ 7 ಆಯವಿಲ್ಲದ ಮನೆಯು ಛಾಯೆ ಇಲ್ಲದ ಮಡದಿ ದಾಯವಿಲ್ಲದ ಊರು ಕರಕಷ್ಟವು ಬಾಯ ಹೊಯ್ಯೆಂಬರೊಳು ನ್ಯಾಯ ಸೇರುವುದೆ ಉ- ಪಾಯದಲಿ ಸಾರೆಲೆವೊ ಸಾರಿದೆನು ಆತ್ಮ 8 ಮೂಡಗಿರಿವಾಸನೊಳು ಬೇಡಿಕೊಂಡರೆ ನಿನಗೆ ನೀಡುವನು ಧರ್ಮವನು ಧೈರ್ಯನಾಗಿ ಬೀಡುಬಿಟ್ಟಲ್ಲಿಂದ ಓಡುವುದು ಸುಖದೊಳಗೆ ಕೂಡುವುದು ವರಾಹತಿಮ್ಮಪ್ಪನೊಳು ಆತ್ಮ 9
--------------
ವರಹತಿಮ್ಮಪ್ಪ
ಯಾರೇನು ಮಾಡುವರೋ ಹರಿಯೇ ಯಾರಿಂದಲೇನಹುದು ಪ ವಾರಿಜಾಂಬಕ ಮಾರಜನಕ ಕೌಸ್ತುಭ ವಕ್ಷ ಶ್ರೀಶಾ ಅ.ಪ. ಅಜ ಈ ಜಗ ಸೃಜಿಸಿದನೆ ಶ್ರೀದೇವಿಯು ನಿಜಗುಣ ನೆಲೆಗಂಡಳೆ ಭುಜಗಭೂಷಣ ಆಯಕರ್ತನಾದರೆ ಭಜಕನಾ ಬಯಕೆ ಬಾಯಬಿಡುವದೆ 1 ಸುರಪ ಸುರರೊಡೆಯನೆ ಧರಣಿ ಈ ಉರಗೇಂದ್ರ ಪೊತ್ತಿದನೆ ದುರುಳನ ಭಯಕೆ ಪುರವ ಬಿಟ್ಟೋಡಿದ ಧರಣಿಯ ದುರುಳನೊಯ್ಯೆ ವರಾಹರೂಪದಿ ತಂದೆ ನೀ ತಂದೆ ಹರಿಯೇ 2 ಶ್ರೀಪತಿ ಸುರತತಿಯ ಸೃಜಿಸಿ ಈಪ್ಸಿತಾರ್ಥಗಳನೆಲ್ಲಾ ಅವರಿಗೆ ಸ್ವಾಪ್ನಜಾಗೃತಿಯಲಿ ಪರಿಪಾಲಿಸೆ ಮಹಾನಿಧಿವಿಠಲ ನೀನಲ್ಲದಿನ್ಯಾರೋ 3
--------------
ಮಹಾನಿಥಿವಿಠಲ