ಒಟ್ಟು 273 ಕಡೆಗಳಲ್ಲಿ , 62 ದಾಸರು , 240 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲೋಕನೀತಿಯ ಪದಗಳು 448 ಅನ್ನದಾನವನ್ನೆ ಮಾಡು ಕನ್ಯದಾನವನ್ನೆ ಮಾಡುನಿನ್ನ ನಂಬಿದರ ಪೊರೆದುನ್ನತ ಹರ್ಷದಿ ಬಾಳುಸನ್ನುತ ಸರ್ವಲೋಕಗಳನ್ನು ರಕ್ಷಿಸುವನಾಗ ಪ್ರ-ಸನ್ನ ಮೂರುತಿಯಾಗುರನ್ನದ ರಾಶಿಗಳನ್ನು ಚಿನ್ನದ ಆಭರಣಗಳನ್ನುಭೂಸುರರಿಗಿತ್ತು ಮನ್ನಿಸು ಉದಾರನಾಗುಮನ್ನೆಯರೆಲ್ಲರು ಬಂದುನಿನ್ನನೋಲೈಸಲೆಂದು ಅಪರ್ಣೆಪರಿಸಿದಳು 1 ಕೋಟಿ ಗೋದಾನವ ಮಾಡು ಸಾಟಿಯಿಲ್ಲದಂಥಾ ಪಂಚಕೋಟಿ ಗಜದಾನ ಶತಕೋಟಿಯಶ್ವದಾನಗಳಮೀಟಾದ ಬ್ರಾಹ್ಮರಿಗಿತ್ತು ಕೀರ್ತಿವಂತನಾಗು ಕಿ-ರೀಟ ಶೌರ್ಯದೊಳಾಗು ಮೀಟಾದ ಮಂತ್ರಿಗಳ ಕಿ-ರೀಟ ರತ್ನಕಾಂತಿಗಳ ಕೋಟಿ ನಿನ್ನ ಪಾದದಲ್ಲಿಧಾಟಿಯಾಗಿರುವನಾಗುಲೂಟಿಸಿ ವೈರಿಗಳನು ಗೋಟುಗೊಳಿಸುವ ಶಶಿಜೂಟ ಭಕ್ತನಾಗು 2 ಇತ್ತೆರದೆ ಬೀಸುತಿಹ ಮುತ್ತಿನ ಚಾಮರ ಶ್ವೇತಛ್ಛತ್ರ ಸೀಗುರಿಗಳ ಮೊತ್ತದ ಸಾಲೊಳಗೆ ಒ-ಪ್ಪುತ್ತಲಿರುವವನಾಗು ಸತ್ಯವಂತನಾಗು ಸುವ್ರತ ನೀನಾಗುಪೆತ್ತವರ ನೋಡಿ ನಲಿವುತ್ತಿರಲು ಭೂಸುರರುಮುತ್ತಿನಕ್ಷತೆಯನಾಂತುಪೃಥ್ವಿಯ ವೊಳಗೆಲ್ಲಾ ಸ-ರ್ವೋತ್ತಮ ಪುರುಷನಾಗೆನುತ್ತಮಸ್ತಕದಿ ತಳಿವುತ್ತ ಪರಸಿದರು 3 ಇಂದ್ರನಾಗು ಭೋಗದೊಳು ಸತ್ಯವಾಕ್ಯದೊಳು ಹರಿ-ಶ್ಚಂದ್ರನಾಗು ಪಾಲನೆಯ ಮಾಡುವುದರೊಳಗೆ ಉ-ಪೇಂದ್ರನಾಗು ಬುದ್ಧಿ ಕೌಶಲದೊಳು ತಿಳಿಯಲು ನಾ-ಗೇಂದ್ರ ನೀನಾಗುಚಂದ್ರನಾಗು ಶಾಂತಿಯೊಳಗೆಂದು ವಂದಿಮಾಗಧರವೃಂದ ಕರವೆತ್ತಿ ಜಯವೆಂದು ಪೊಗಳುತ್ತಿರಲಾ-ಚಂದ್ರಾರ್ಕವು ಸೌಖ್ಯದಿ ಬಾಳೆಂದು ಸಾನಂದದೊಳಾಗಇಂದಿರೆ ಪರಸಿದಳು4 ಧೀರನಾಗುದಾರನಾಗು ಸೂರಿಜನವಾರಕೆ ಮಂ-ದಾರನಾಗು ಸಂಗರ ಶೂರನಾಗು ವೈರಿ ಜ-ಝ್ಝೂರನಾಗು ಮಣಿಮಯ ಹಾರನಾಗುವೀರಾಧಿವೀರ ನೀನಾಗುಭೂರಮಣನಾಗು ಮಂತ್ರಿವಾರ ಸಂರಕ್ಷಕನಾಗುಕಾರುಣ್ಯಸಾಗರನಾಗು ಕಾಮಿತಫಲಿದನಾಗುಶ್ರೀ ರಾಮೇಶನಪಾದಾಬ್ಜ ವಾರಿಜ ಭಕ್ತನಾಗೆಂದುಶಾರದೆ ಪರಸಿದಳು5
--------------
ಕೆಳದಿ ವೆಂಕಣ್ಣ ಕವಿ
ವರದರಾಜ ಪಾಲಿಸೆನ್ನ ಧರಣಿಯೊ- ವರದರಾಜ ಪಾಲಿಸೆನ್ನ ಪ ಕಾಂತೆಯ ಕಾಂತಿಯೊಳಿರುವೆ ನಿನ್ನಯ ಭಾವವರಿಯದ ರಸಿಕರಾರಿಹರು ಪರಮ ಪುರುಷ ನಿನ್ನ ಚರಣ ಸೇರಿದ ಭಕ್ತ ಜನರೆಲ್ಲ ರಸಿಕರಾಗಿಹರು 1 ದ್ವಿಜವರರಿಗಿಷ್ಟವ ಪಾಲಿಸಿರುವಿ ಅಜನ ನೀನೆಂದು ತೋರಿಸುವಿ ಯಜ್ಞಭೋಜನವನ್ನು ಮಾಡುತಿರುವಿ 2 ಚೇತನಾಚೇತನಗಳಿಗೆ ಶ್ರೇಷ್ಠನರಸೂತ ರಾಜೇಶ ಹಯಮುಖ ನಿನ್ನ ವಾತವಿಧಿ ಹರ ಮುಖ್ಯರು ಭಜಿಸುತಲಿ ನಿತ್ಯ ಮುಕ್ತರಾದರು ಎಂದೊರೆಯುವುದು ಶ್ರುತಿಯು 3
--------------
ವಿಶ್ವೇಂದ್ರತೀರ್ಥ
ವರ್ಣಿಸಲರಿಯೆ ನಿನ್ನ | ವರ್ಣಿಸಲರಿಯೆ ಗು | ಣಾರ್ಣವ ಹರಿಯೆ ಸೂ | ವರ್ಣ ಗಿರೀಶ ಸು | ಗಮನ ರಂಗಾ ಪ ಕುಂಡಲ ಮಿನುಗುವ ಹಸ್ತ ಕಂಕಣ ಬೆರಳುಂಗರ | ಕೌಸ್ತುಭ ಕಂಬು ಸೂದರು | ಶನ ಭುಜಕೀರ್ತಿ ಭೂ | ಷಣವಾದ ಶಿರ ಉರುವ ಒಪ್ಪಲು ಕಿಂ | ಕಿಣಿ ಕನಕಾಂಬರವ ಪೂಸಿದ ಗಂಧ | ಪುನುಗು ಜವ್ವಾದಿಯಿಂದೆಸೆವ ಸುರತರುವೆ 1 ಕಾಂಚಿದಾಮ ಥಳಿ | ಥಳಿಸುವ ಪದಕ ನ್ಯಾ | ತುಂಬಲು ಸೂಸುತಿರೆ ದಂತಾ | ಮಾತಾರಗಿಳಿಯಂತೆ ಶೋಭಿಸಿ | ಕಪೋಲ ಸುತ್ತಲು ಬೆಳಗುವ ಕಂಗಳ ನಾಸಕಾಂತಿ | ಸಿರಿ ತಿರುವೆಂಗಳಾ2 ಕಟಿ ಕರ ಎರಡೇಳು ಲೋಕ ಜಠರದೊಳಡಗಿರೆ | ಕರಿ ಪಲ್ಲಿನಂತೆ ಸುಂದರ ಜಂಘೆ ಗುಲ್ಫ ವಿ | ಪಾದ ನಖ ಪರಿ ಪರಿ ರೇಖೆಗಳ ಕಾಲಿಂದಿಗೆ | ನಿತ್ಯ ಮಂಗಳಾ 3 ನಿರಯ ತ್ತಮ ಜನ ಮನೋರಥ | ಗಮ ಸಿದ್ಧಾಂತನೆ ವಿ | ಕ್ರಮದಾನವ ಹರ | ಕೋಟಿ ಪ್ರಕಾಶಾ | ವೆಂಕಟೇಶಾ | ಅಪ್ರಾಕೃತ | ಪ್ರಮೆಯಭರಿತನಾದ | ಕುರುವಂಶ ವಿನಾಶಾ 4 ಭೂಗೋಳದೊಳಗಿದರಾಗಮ ತಿಳಿ | ದುರಗ ಗಿರಿ ಯಾತ್ರಿಗೆ | ಭೋಗದಾಶೆಯ ಬಿಟ್ಟು | ವೇಗದಿಂದಲಿ ನಿಜ | ಭವ ಸಾಗಿ ಬರಲು ಚನ್ನಾಗಿ ಜ್ಞಾನವ ನೀವುತ್ತ ಸಾಕುವಂಥ | ಶ್ರೀ ಗುರು ವಿಜಯವಿಠ್ಠಲ ಭಕ್ತರ ದಾತಾ5
--------------
ವಿಜಯದಾಸ
ವಾಸುದೇವ ಎನ್ನ ಘಾಸಿಗೊಳಿಸದೆ ನೀ ಸಲಹಲಿ ಬೇಕೊ ಪ. ಈ ಶರೀರದೊಳು ಮಾಯಾಸಹಿತ- ದಿ ಶ್ವಾಸನಾಡಿಯೊಳು ವಾಸವಾಗಿಹ ಅ.ಪ. ಅನಿರುದ್ಧ ನಾಮದಿ ಅನುದಿನ ಸಲಹುತಲಿ ದನುಜನಾದ ಪಾಪಾತ್ಮನ ನಾಭಿಯೊಳ್ ಅನಿಲನಿಂದಲಿ ಶೋಷಿಸುವೆ ಪ್ರದ್ಯುಮ್ನ 1 ಹೃದಯದಿ ರಕ್ತವರ್ಣದಲಿ ನೀನಿರುತಲಿ ಸಂಕರ್ಷಣನೆನಿಸಿ ಪದೋಪದಿಗೆ ಪಾಪಾತ್ಮಕನನು ಸುಟ್ಟು ಸದಮಲ ಹೃದಯವ ಶುದ್ಧಿಗೈಯ್ಯುವ 2 ಮಧ್ಯದಿ ನಾಡಿಯ ಮಧ್ಯದ ಹೃದಯ ಪದ್ಮ ಮಧ್ಯ ಎಂಟು ದಳದಿ ವಿದ್ಯಮಾನನಾಗಿ ಬಿಂಬನೆನಿಸಿ ನಿನ್ನ ಪೊದ್ದಿಹ ಜೀವರ ಭಾವನೆಯಂತೆ ಕಾಂಬೆ 3 ಕೊಳಲನೂದುವ ನಿನ್ನ ಚಲುವರೂಪದ ಕಾಂತಿ ಪೊಳಲೆಲ್ಲ ತುಂಬುವುದೊ ನಳಿನಾಕ್ಷಿಯರ ಕೂಡಿ ಥಳಥಳಪ ನಿನ್ನ ಬಲು ಸಂಭ್ರಮದೊಳು ಸುರರೆಲ್ಲ ಸ್ತುತಿಪರೊ 4 ಸಿರಿ ಸಹಿತದಿ ಇರುವೆ ವರನಾಡಿ ಮಾರ್ಗದಿ ಅರಿತು ಭಜಿಸೆ ಮುಕ್ತಿ ಪೊರೆಯುವ ಬಿರುದುಳ್ಳ ಗೋಪಾಲಕೃಷ್ಣವಿಠ್ಠಲ5
--------------
ಅಂಬಾಬಾಯಿ
ವಿಜಯವಿಠ್ಠಲ ಶ್ರೀ ವಿಜಯವಿಠ್ಠಲ ಪ ವನಚರ ನಗಧರ ಅವನಿಯ ಉದ್ಧಾರ ಕಾನನ ವೇಗದಿ ಭು- ವನ ದಾನದ ನೆವನನು ಮಾಡಿ ಗಂಗೆಯ ಹ - ವಣದಿ ಪಡದೋ ಶ್ರೀ ವಿಜಯವಿಠ್ಠಲಾ 1 ಛಲದಿಂದ ಕುಲ ಕೋಲಾಹಲ ಮಾಡಿಸಿ ನೀ ತರಿದೆ ಬಾಲೆಯರ ಬಾಲರ ಬಿಡದೆ ಸುಲಭದಿ ಕರ್ಣಗೆ ಒಲಿದು ಪೇಳಿದೆ ಆ ಸುಲಲಿತಾ ಭಾರ್ಗವ ವಿಜಯವಿಠ್ಠಲ2 ಶತಮಖರಿಪು ಲೋಕಪಿತನೊರವಿನಿಂದಲಿ ಖತಿ ಸಕಲರಿಗೆ ನೀವು ತರಿದಿರಲು ಪತಿತಪಾವನ ರಾಮ ಅತಿ ವೇಗ ದನುಜನ ಹತವ ಮಾಡಿದೆಯೊ ಶ್ರೀ ವಿಜಯವಿಠ್ಠಲ3 ಬಕಮುಖ ದನುಜರ ಹಕ್ಕಲಗೊಳಿಸಿ ಬಲು ಯುಕುತಿಯಿಂದಲಿ ಭಕುತರ ಪೊರದೆ ವಿಕಸಿತ ಕಮಲನಯನ ಕಂಜನಾಭನೆ ಸಕಲ ಸುರರ ಪಾಲ ವಿಜಯವಿಠ್ಠಲಾ 4 ರಕ್ಕಸ ಮರ್ದನ ದಿಕ್ಕು ಮೋಹಿಪ ಕೃಷ್ಣ ರುಕ್ಮಿಣಿ ಪತಿಯಾದಾ ಚಕ್ರಪಾಣಿ ಉಕ್ಕಿದ ಮಗಧನ ಸೊಕ್ಕು ಮುರಿದು ಕಪಿ ರೆಕ್ಕ ಆಳ್ವನಿಗೆ ಒಲಿದೆ ವಿಜಯವಿಠ್ಠಲಾ 5 ಘನವಾದ ವಿಶ್ವರೂಪವ ತೋರಿದೆ ದಿನಮಣಿ ಕೋಟಿ ಅಧಿಕ ಕಾಂತಿ ನರಹರಿ ವನಜ ಸಂಭವನಯ್ಯ ವಿಜಯವಿಠ್ಠಲಾ 6 ವನಿತೆಯರ ವ್ರತ ಭಂಗವ ಮಾಡಿ ದಾನವರ ಮೋಹಿಸಿದೆಯೊ ಪವನನೊಡಿಯಾ ಉನುಮತ ಜನ ಕುಲ ಸನುಮತ ಶಾಸ್ತ್ರವ ವ- ದನದಲಿ ಮೆದ್ದಿಯೊ ವಿಜಯವಿಠ್ಠಲಾ 7 ರಜೋತಮ ಗುಣವನು ಭುಂಜಿಸುತ ವ್ರಜ ಭೂಮಿ ನಿಜವಾಗಿ ವ್ಯಾಪಿಸಿರೆ ಸುಜನಪಾಲ ನೀನು ವದಗಿ ವಾಜಿಯನೇರಿ ಭಜನಗೈಸಿದ ವೇಗ ವಿಜಯವಿಠ್ಠಲಾ 8 ಗೋಕುಲದಲಿ ಅನೇಕ ಲೀಲೆಯ ತೋರಿ ಬೇಕಾದ ವರ ಪುಂಡರೀಕಗಿತ್ತೆ ಸಾಕಾರ ಗುಣ ಪೂರ್ಣ ವೇಣುಗೋಪಾಲ ವಿ ವೇಕವ ಕೊಟ್ಟ ಕಾಯನ್ನ ವಿಜಯವಿಠ್ಠಲಾ9
--------------
ವಿಜಯದಾಸ
ವಿಠಲ ಓಡಿ ಬಾರೊ ತೊಟ್ಟಿಲನೇರೊ ಪುಟ್ಟ ಕಮಲದಂಥ ಬಟ್ಟ ಮುಖವ ತೋರೊ ಪ. ಜಟ್ಟಿಯಂದದಿ ಭುಜ ತಟ್ಟಿ ಹುಂಕರಿಸುತ ಅ- ರಿಷ್ಟ ವೃಷಭನನ್ನು ಮೆಟ್ಟಿ ಮಡುಹಿದಂಥ 1 ಹೇಷಿಕ ಭೀಷಣ ಕೇಶಿಯಂಬಸುರನ ಘಾಸಿಮಾಡಿದ ತೋಳ ಬೀಸುತ ಭರದಿಂದ 2 ಮಂದಹಾಸದಿ ಶರದಿಂದು ಕಾಂತಿಯ ಗೆಲ್ವ ಸುಂದರ ಮುಖ ಪೂರ್ಣಾನಂದ ಗೋಪಿಯ ತಂದ 3 ಮೀಸಲ ನೊರೆಹಾಲ ಕಾಸಿ ಸಕ್ಕರೆ ಕೂಡಿ ವಾಸ ಚೂರ್ಣವನಿಕ್ಕಿ ಶ್ರೀಶನಿನ್ನೊಶಕೀವೆ 4 ನಿತ್ಯ ಸುಖಾಂಬುಧೆ ನಿರವಧಿ ಫಲದ ಸ- ರ್ವೋತ್ತಮ ಶೇಷಾದ್ರಿ ಶಿಖರೀಶ ಶ್ರೀನಿವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
ವೇದಾಂತ ಸಾಮ್ರಾಜ್ಯ ರಾಜಾಧಿರಾಜ ತೇಜೋಮಯರ ಪಾದಾಬ್ಜನೇ ಶರಣಪ ರಾಜಾಧಿರಾಜ ಕರಾರ್ಚಿತ ಚರಣ ಪ್ರಾಜ್ಯಪ್ರಜ್ಞರ ಶುದ್ಧಕುಲ ದಿವ್ಯಾಭರಣ ಅ.ಪ ಭ್ರಾಂತಿಗೆ ನಿಧನ ಸುಖಶಾಂತಿಗೆ ಸದನವೇ ದಾಂತಿಯ ಮಾನಸ ಕಾಂತಿಗೆ ಸಾಧನ 1 ಇಂದಿರಾಪತಿಯ ಆನಂದಾದಿ ಸದ್ಗುಣ ವೃಂದ ತೋರಿದ ಶೇಷಚಂದ್ರಿಕಾಚಾರ್ಯ 2 ಹಿರಿದು ನಿಮ್ಮಯ ವ್ಯಾಪ್ತಿ ಕಿರಿದು ಎಮ್ಮಯ ಶಕ್ತಿ ಪರಮ ಪ್ರಸನ್ನ ಶ್ರೀಗುರು ಸಾರ್ವಭಾಮ 3
--------------
ವಿದ್ಯಾಪ್ರಸನ್ನತೀರ್ಥರು
ವ್ಯಾಸರಾಯರ ಸೇವೆ ಲೇಸಾಗಿ ಮಾಡಲು ದಾಸನೆಂದೆನಿಸಿಕೊಂಬ ಪ ಸಾಸಿರನಾಮದ ವಾಸುದೇವನ ಭಕ್ತ ಕಾಷಾಯ ವಸ್ತ್ರಧರಅ.ಪ ತಾ ಸಹಗಮನದಿ ಪತಿಸಹ ಪೋಗುವ ಆ ಸ್ತ್ರೀಯು ಬ್ರಹ್ಮಣ್ಯತೀರ್ಥರಲ್ಲಿಗೆ ಪೋಗೆ ಶ್ರೀಶ ಬದರಿಯಲ್ಲಿ ಪೇಳಿದ ಮಹಿಮೆಯ ಆ ಸುಮಹಿಮ ಪ್ರಹ್ಲಾದನ್ನ ಸ್ಮರಿಸುತ್ತ ಮೋಸ ಬರುವುದೆಂದಾಲೋಚನೆ ಇಲ್ಲದೆ ಸತಿ ವಂದಿಸೆ ಸುಮಂಗಲ್ಯವನಿತ್ತು ಆ ಸಮಯದಿ ಮಂತ್ರಾಘ್ರ್ಯಾವನೆ ಕೊಂಡು ತಾ ಸುಮ್ಮಾನದಿ ಬನ್ನೂರಿಗೆ ಪೋಗ್ಯತಿ ಯಾ ಸತಿಪತಿಯ ಪ್ರಾಣವನುಳಿಹಿ ರನ್ನ ತಾ ಸಮೀಪದಿ ಮಠದಲ್ಲಿ ವಾಸಮಾಡಿಸಿ ಕುಸುಮಾಕ್ಷತೆ ಫಲ ಮಂತ್ರಿಸಿ ಆಕೆಗೆ ಕೊಟ್ಟು ಆ ಸುಮಂಗಲಿಯಲ್ಲಿ ಪ್ರಹ್ಲಾದ ಪುಟ್ಟಿದ ಆ ಸಮಯದಿ ಚಿನ್ನದ ಹರಿವಾಣದಲಿ ಶಿಶು ತಾನು ಬಿಡದೆ ಕಣ್ವ ನದಿಯಲ್ಲೀ ಶಿಷ್ಯರಿಗೆ ತೊಳಸಿ ತಂದು ಮಠಕೆ ಆಗ ವಾಸುದೇವನಭಿಷೇಕ ಕ್ಷೀರವನ್ನು ಆ ಸುರಭಿಯ ಕರೆದಭಿಷೇಕÀವನೆ ಕೊಂಡ ಲೇಸಿನಿಂದಲಿ ಮೊಲೆಯುಂಡು ಬೆಳೆದನು ವಾಸವನುತ ದೇವೇಶನ ಪಾಡುತ ವಾಸವಾದರು ಮಳೂರಿನಲಿ1 ಆ ಶಂಕುಕÀರ್ಣನೇ ಶೇಷಾವೇಶದಲ್ಲಿ ಶ್ರೀಶನ ಕÀಂಭದಿ ತೋರಿಸಿದಾತನೆ ತಾ ಸುಮ್ಮಾನದಿ ನರಸಿಂಹನ ಪೂಜೆಗೆ ತಾಸು ಬಿಡದೆ ಆಸೆ ತೀರಿಸಿದಾತನೆ ಈಸು ಮಹಿಮೆಗೆ ವ್ಯಾಸ ನಾಮಕರಣವು ಆ ಸುಮನೋಯತಿ ಆಶೀರ್ವಾದವಮಾಡೆ ತಾ ಸುಮ್ಮನಿರದಲೆ ಕೃಷ್ಣನ್ನ ಸ್ಮರಿಸುತ್ತ ಈ ಶಿಶುಬೆಳೆಯೆ ಆಭರಣದಿ ಶೋಭಿತ ವೀ ಸುಮತಿಯ ಮಂಗುರುಳಿಗೆ ಮುತ್ತಿನ ಗೊಂಡೆ ಆ ಸುಮನೋಹರಗಳೆಲೆ ಮಾಗಾಯಿ ಭೂಸುರ ನಿಕರವ ಮೋಹಿಪ ಬಗೆವಂಟಿ ಭೂಸುರ ಕರ್ಣಕೆ ಚಳತುಂಬು ಬಾವಲಿ ನಾಸಿಕಛಂದವು ಪದ್ಮವಿಕಸಿತ ಮುಖನೇತ್ರ ಸೂರ್ಯ ಕಾಂತಿಯ ಮುಖ ಫಣೆ ತಿಲಕನ ನೃ ಕೇಸರಿ ಪ್ರಾಯಗೆ ಹಾರಪದಕÀವಿಟ್ಟು ಆ ಸುಕರಗಳಲಿ ಉಂಗುರ ಪೊಳೆಯುತ ಆ ಸುಕಾಂತಿಯ ಕಡಗ ಸರಪಳಿ ವಂಕಿಯೂ ಲೇಸು ವಡ್ಯಾಣವ ನಡುವಿಗೆ ಧರಿಸಿ ಆ ಸಣ್ಣ ಪಾದಕ್ಕೆ ಗೆಜ್ಜೆ ಕಾಲ್ಗಡಗವು ಈ ಶಿಶುವಿನ ಹರಿ ಆಡಿಸುವಾ 2 ವರ್ಷವೈದಕೆ ಚೌಲ ಅಕ್ಷರಾಭ್ಯಾಸ ವತ್ಸರ ಉಪನಯನ ಮಾಡಿ ಧೀರಗೆ ಸಪ್ತ ವರ್ಷಕೆ ತುರ್ಯಾಶ್ರಮ ಕಾರುಣ್ಯದಿಂದ ಶ್ರೀಪಾದರಾಯರಲ್ಲಿ ಅರುಹಿಸಲು ವೇದಶಾಸ್ತ್ರ ನಿಗಮಪಾಠ ಸಾರವ ತರ್ಕತಾಂಡವ ಚಂದ್ರಿಕೆಯ ಮಾಡಿ ಸೂರಿಶಿಷ್ಯ ವಾದಿರಾಜನ್ನ ಪಡೆದೆಯೋ ಶೂರಕೇಸರಿಯಂತೆ ವಾದಿದಿಗ್ಗಜಗಳ ಧಾರಿಣಿಯಲ್ಲಿ ತಲೆ ಎತ್ತದಂತೆ ಮಾಡಿ ನೂರೆಂಟು ಮಂದಿ ಶೂರವಾದಿಗಳಿಂದ ವಾರಿಧಿ ಕಟ್ಟಿ ಮಾರುತಿಯನು ಪ್ರತಿಷ್ಠೆಯ ತಾಮಾಡಿ ಶ್ರೀ ರುಕ್ಮಿಣಿಪತಿ ಗೋಪಾಲ ಕೃಷ್ಣನ ಸಾರಸಾಕ್ಷನ ಸೇವೆ ಅನುದಿನವು ಮಾಡಿ ಪುರಂದರ ದಾಸರಿಗಂಕಿತಾ ಪಾರ ಕುಹುಯೋಗವ ನೂಕಿ ಭೂಷತಿಯನು ಕಾಯ್ದ ಪಾರ ಮಹಿಮೆ ಫಾಲ್ಗುಣ ಬಹುಳ ಚೌತಿಯು ಶ್ರೀ ರಮಣನ ಪುರಿಯಾತ್ರೆಗೆ ರಥವೇರಿ ತೋರಿದ ವರದ ವಿಜಯವಿಠ್ಠಲನಾ ಪಾ ಸೇರೀದರಿವರು ಆನಂದದಿ * 3 * ಈ ಕೀರ್ತನೆ ವರದ ವಿಜಯವಿಠಲಾಂಕಿತದಲ್ಲಿ ದಾವಣಗೆರೆಶ್ರೀನಿವಾಸದಾಸಕೃತ ವ್ಯಾಸರಾಜ ಚರಿತೆಯಲ್ಲಿ ಉಪಲಬ್ಧವಿದೆ.
--------------
ವಿಜಯದಾಸ
ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶಾಂತಿಯೆಂಬುದು ಸಕಲ ಸದ್ಗುಣಂಗಳ ಮುಕುಟ ಶಾಂತಿಯೊಂದಿರಲು ಕೃತಾಂತನಂಜಿಕೆಯಿಲ್ಲ ಪ ಶಾಂತಿಯೆ ಪ್ರದ್ವೇಷ ಕಾಂತಾರ ಪಾವಕವು | ಶಾಂತಿ ಕಾಂತಿಯು ದುರಿತಧ್ವಾಂತ ಓಡಿಸುವದು ಚಾಪ | ಮೊದಲಾದ ದು | ರಂತ ಶಸ್ತ್ರಾಯುಧಗಳು ಶಾಂತಿ ಖಡ್ಗಕೆ ಶರಣು ಹೊಡೆಯುತಿಹವು 1 ಶಾಂತಿಗೊಪ್ಪದ ಕುರುಪ ಭ್ರಾಂತಿಯಲಿ ತನ್ನ ಸಂತತ ಸಹಿತವಾಗಿ ಸಂಗರದಿ ಹತನಾದ ಶಾಂತಿಯಿಂದಲಿ ಧರ್ಮ ಚಿಂತೆಯನು ನೀಗಿದನು ಶಾಂತಿಯಿಂದಲಿ ಸತ್ಯ ಹರಿಶ್ಚಂದ್ರಗಾಧಿಪ ಜನ ಪೌರುಷÀವೆಲ್ಲ ನಿಸ್ತೇಜಗೊಳಿಸಿದನು 2 ಶಾಂತಿಯಲಿ ಭಕ್ತಿ ಮುಕ್ತಿ ಇಂತೆಂದು ವೇದಗಳು ಅಂತ್ಯದಲಿ ತ್ರೈವಾರ ಘೋಷಿಸುತಲಿಹವು ಶಾಂತಮೂರುತಿಯಾದ ಶ್ರೀ ಶಾಮಸುಂದರನು ಶಾಂತಿಗೆ ಮೆಚ್ಚಿ ಅಚ್ಯುತಪದವೀವಾ 3
--------------
ಶಾಮಸುಂದರ ವಿಠಲ
ಶಿವಮಂಗಳಂ ಸದಾಶಿವ ಮಂಗಳಂಮಂಗಳಂ ರಜತಾದ್ರಿ ಮುಖ್ಯನಿಲಯಾಯ ಪಹಿಮಕರಾವತಂಸಾಯ ಹಿಮರುಚಿರಕಾಯಾಯಹಿಮರೂಪಗಿರಿಚಿತ್ತ ಹಾರಕಾಯಹಿಮಹರಾಮಿತಕಾಂತಿ ಸದೃಶಾಯ ಸೌಮ್ಯಾಯಹಿಮತಾಪರಹಿತಾಯ ಹೇಮವರ್ಣಾಯ 1ವರಜಟಾಮಕುಟಾಯ ವಾರಿಯುತಕೇಶಾಯಸ್ಫುರದಿನಾನಲಸೋಮಲೋಚನಾಯಗರನೀಲಕಂಠಾಯ ಕದ್ರುಸುತ ಹಾರಾಯಪರಶು ಮೃಗ ಶೂಲಾದಿ ಪರಮಾಯುಧಾಯ2ನಾಗೋಪವೀತಾಯ ನಾಗೇಶ ವಲಯಾಯನಾಗಧವಳಾಂಗಾಯ ನಾಯಕಾಯನಾಗವಾಹನ ಮುಖ್ಯ ನಾಕಜನನಾಥಾಯನಾಗಪರ್ಯಂಕಸ್ಥ ನಿತ್ಯಮಿತ್ರಾಯ 3ಗೌರೀಧೃತಾಂಗಾಯ ಗಂಧರ್ವಸೇವ್ಯಾಯಭೂರಿ ಗುಣಬ್ರಹ್ಮಾಂಡ ಭೂತಾಯಚಾರು ಕಟಿ ಶುಭ ಜಂಘಾಯನೀರಜಾಮಲ ಪೀಠ ನಿಹಿತ ಪಾದಾಯ 4ಮೃಗಚರ್ಮವಸನಾಯ ಮಂಜುಳ ಮಯೂಖಾಯಜಗದೇಕನಾಥಾಯ ಜೀವನಾಯಸುಗಮ ತಿರುಪತಿ ನಾಮ ಸದ್ಮಾಧಿನಾಥಾಯಗಗನಧುನಿ ಗಿರಿ ವಾಸ ಗಂಗಾಧರಾಯ 5 ಓಂ ನವನೀತನವಾಹಾರಾಯ ನಮಃ
--------------
ತಿಮ್ಮಪ್ಪದಾಸರು
ಶುಭ ವಾಸುದೇವ ಮೂರುತಿಗೆ ಪಕುಂದಣಕೆ ಸರಿಯಾದ ಕಾಯದತಿ ಕಾಂತಿಗೆಸಿಂಧುವನು ಪೋಲ್ವ ಗಂಭೀರ ರಸಕೆಇಂದುಬಿಂಬವ ಜರೆವ ಮುಖದ ಸೊಂಪಿನ ಸಿರಿಗೆಕಂದರ್ಪ ಕೋಟಿ ಲಾವಣ್ಯ ನಿಧಿಗೆ 1ಅಭಯದಾನವ ಕೊಡುವ ಕರಗಳತಿ ಚೆಲು'ಕೆಗೆಶುಭಗಳಿಗೆ ನೆಲೆಯಾದ ನೇತ್ರಗಳಿಗೆ'ಭವಗಳಿಗೆಡೆಬಿಡದ ಮುಗುಳುನಗೆಯೊಗು'ುಗೆಗೆತ್ರಿಭುವನಂಗಳನಳೆದ ಪದ ನಳಿನಗಳಿಗೆ 2ಜ್ಞಾನಮುದ್ರೆಯ ಕರದಿ ಜ್ಞಾನೋಪದೇಶವನುತಾನೆ ಕರೆದಿತ್ತು ಭಕ್ತರ ಸಲಹುತಾ ಮಾನವನು ಕಡೆಗೊತ್ತಿ ಮಾನ್ಯ ತಾನೆಂದೆನಿಪಶ್ರೀನಿಕೇತನ ನಿಜದ ಚಿನ್ಮಯಾತ್ಮಕಗೆ 3ಕಾವೇರಿ ಗಂಗೆಯೊಲು ಕಮಲನಾಭನ ಕಥೆಯ ಪಾವನದ ತೀರ್ಥದಲಿ ಪಾಪವಳಿದು ಜೀವಭಾವವ ಬಿಟ್ಟು ಬ್ರಹ್ಮ ತಾನೇಯಾಗಿಯಾವಗವು ಸುಖಶರಧಿಯಾದ ಚಿನ್ಮಯಗೆ 4ರಾಗಾದಿರ'ತನಿಗೆ ರಾಗಿಗಳ ಸಂಸಾರಸಾಗರವ ದಾಟಿಸುವ ಬೋಧ ಘನಗೆಯೋಗಿಗಳ ಸಂಮತಗೆ ಗುರು ವಾಸುದೇವಗೆಯೋಗೇಶ ತಿರುಪತಿಯ ವೆಂಕಟೇಶ್ವರಗೆ 5ಓಂ ಶ್ರೀವತ್ಸಕೌಸ್ತುಭಧರಾಯ ನಮಃ
--------------
ತಿಮ್ಮಪ್ಪದಾಸರು
ಶೌನಕಾದಿ ಮುನಿಗಳಿಗೆ ಸಾನುರಾಗದಲಿ ಪೇಳಿದರು 1 ಕೈಲಾಸಶಿಖರ ಮೆರೆವುದು ಮೇಲಾದ ರತ್ನಕಾಂತಿಗಳಿಂ2 ಜಂಬುಕೇತಕಿ ಪನಸ ಪುನ್ನಾಗ ಸರ್ವಾತಿಶಯದಲಿ ತೋರುವದು 3 ಸಿದ್ಧಿದಾಯಕ ವೆಂದಿಲ್ಲಿ ಪದಧ್ಯಾನದಿ ಕುಳಿತಿಹರು 4 ದಿವಿಜ ಅವನಿಧರಾಗ್ರಣಿಯಾಗಿ ಭುವನೋದರತ್ವದಿ ಭುವನಜನಾಭ ಶ್ರೀಧವನಂತೆ ಗಿರಿಯು ಮೆರೆಯುವುದು5 ಪಾರ್ವತಿಯೊಡನೆ ಸತಿ ನಮಿಸಿ ನುಡಿದಳು 6 ನುಡಿಯ ಲಾಕ್ಷಣದಿ ನಾಕರುಣಿಸುವೆ ಕೇಳೆಂದ7 ವರಮಹಾಲಕ್ಷ್ಮಿಯ ವೃತವು ದೊರೆವುದು ಸಕಲಸೌಭಾಗ್ಯ 8 ಶ್ರಾವಣ ಪೂರ್ಣ ಮಾಸಿಯ ದಿನದಿ ಪೂಜಿಪದು ವಿಶ್ವಾಸದಿಂದಾರಾಧಿಸುತಲಿ 9 ಪಕ್ವಾನ್ನ ಲೇಹ್ಯಾದಿ ನೈವೇದ್ಯ ತತ್ತನ್ನಿಯಾಮಕರ ಚಿಂತಿಪುದು 10 ಕೃಪಾಪಯೋನಿಧೆಯ ಪೂಜಿಪುದು ಬಿಂಬಾಪರೋಕ್ಷಿಗಳು ಪೂಜಿಪರು 11 ಕಾಮಿತ ಪಡೆದವರ್ಯಾರು ಮಹಾಮಹಿಮೆಯನು ಚನ್ನಾಗಿ12 ಮಡದಿ ತಾನಿರಲು ಕರೆಯುವರೆಲ್ಲಾರು ಪುರದಿ 13 ವನಜನಾಭನ ಶೇವೆಯೆಂದು ಗುಣದಿ ಭೂಷಿತಳು 14 ಬಂದಳು ವರಮಹಾಲಕ್ಷ್ಮಿ ಪರಮ ಸಂಭ್ರಮದಿ 15 ನಿರ್ಮಿಸುವನು ಜಗವೆಲ್ಲ ನೀ ಕರುಣಿಸು ಮಾತೆ 16 ಶ್ರಾವಣ ಹರುಷದಿಂದೆನ್ನಯ ವೃತವ ವರಗಳನಿತ್ತಳು ದಯದಿ 17 ಸಂತೋಷದಲಿ ಪೇಳಲವರು ಚಿಂತಿತ ಫಲವೀವುದೆಂದು 18 ಸಿಂಗರಿಸಿದಳಾದಿನದಿ ವಿಪ್ರಾಂಗನೆಯರನು ಕರೆದಳು 19 ಶಿರಿದೇವಿ ಪೂಜಾಸಾಧನವ ನೆರೆದರಾ ದ್ವಿಜನಮಂದಿರದಿ 20 ಕುಂಭಗಳಿಟ್ಟಘ್ರ್ಯಾದಿಗಳಿಂ ಸುರರ ಸಮ್ಮುಖದಿ 21 ಇಂದಿರ ದೇವಿಗಾರುತಿಯ ಬಂಧÀ£ವÀನÉ ಮಾಡುತಿಹರು 22 ಪೂಜಿಸುತಿರಲಾಗೃಹವು ಸೋಜಿಗವಾಯ್ತು ನೋಳ್ಪರಿಗೆ 23 ಕೊರಳೊಳುನವರತ್ನಹಾರ ಸಿರಿದೇವಿ ಕರುಣವಿದೆಂದು 24 ಇತ್ತರು ಬಾಗಿಣಗಳನು ಪೋದರು ತಮ್ಮ ಮನೆಗೆ 25 ಪುಣ್ಯದಿಂದೆಲ್ಲರು ನಾವೆಂ ಧನಧಾನ್ಯ ಸಂಪದಾಗಮನ 26 ಪಾಲಿಸುವಳು ಸಿರಿಯೆಂದು ಶಿವನು ಹೀಗೆಂದು ||27| ಕಾಯಜ ಜನನಿಯ ಕಾಯುವದೆಂದು ನೀ ತಿಳಿಯೆ 28 ನಿರ್ಮಲ ಭಕ್ತಿಜ್ಞಾನ ವೈರಾಗ್ಯ ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ ಒಲಿವನು ನಿರುತ ಪಠಿಸಲು30
--------------
ಕಾರ್ಪರ ನರಹರಿದಾಸರು