ಒಟ್ಟು 1074 ಕಡೆಗಳಲ್ಲಿ , 105 ದಾಸರು , 887 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕನಕಮುನಿ ಕರಕಮಲ ಪೂಜಿತಾಂಘ್ರಿ ಮನುಜಮೃಗವೇಷ ಮಾರಮಣ ನಿನಗಾನಮಿಪೆ ಪ ನಿರವದ್ಯ ನಿರವಧಿಕ ಮಹಮಹಿಮ ಸ್ವರ್ದುನಿ ಪಿತನೆ ಸಮಭ್ಯಧಿಕ ಶೂನ್ಯ ವರ್ಧಿಸಲಿ ನಿನ್ನಲ್ಲಿ ಸದ್ಭಕ್ತಿ ಖಳಸಂಪ್ರ ಮರ್ದನ ಮಮಸ್ವಾಮಿ ಸರ್ವರಂತರ್ಯಾಮಿ 1 ತೀರ್ಥಪದ ನಿನ್ನ ಸತ್ಕೀರ್ತಿ ಸರ್ವತ್ರ ಕೀರ್ತಿಸುವ ಭಕ್ತರ ಭವಾಬ್ಧಿಹರನೆ ಪಾರ್ಥಸಖ ಸರ್ವದಾ ಪ್ರಾರ್ಥಿಸುವೆ ನಿನ್ನ ಚಿ ನ್ಮೂರ್ತಿ ಮನದಲ್ಲಿ ಸ್ಪೂರ್ತಿಸಲಿ ಸರ್ವದಾ 2 ಸೂತ್ರನಾಮಕ ಪ್ರಾಣಮಿತ್ರ ಭಾರತ ಪಂಚ ರಾತ್ರಾದಿ ಆಗಮಸೂತ್ರಪ್ರಿಯ ಕ್ಷೇತ್ರಜ್ಞ ಶ್ರೀ ಜಗನ್ನಾಥವಿಠ್ಠಲ ಅಹೋ ರಾತ್ರಿಯಲಿ ನಿನ್ನವರ ಸಹವಾಸ ಕೊಡು ಎನಗೆ3
--------------
ಜಗನ್ನಾಥದಾಸರು
ಕಮಲನಾಭ ಹರುಷದಿಂದ ಖಗವಾಹನನ್ಹೆಗಲನೇರಿ ಬಗೆಬಗೆ ಶೃಂಗಾರವಾಗಿ ಬಂದ ರಂಗನು 1 ಅಂಬರ ಜರನಿರಿಗಳಲಿ ಕುಂದಣದುಡಿದಾರವ ಕಟ್ಟಿ ಚÉಂದುಳ್ಳ ಭುಜಕೀರ್ತಿ ಕರ್ಣಕುಂಡಲನಿಟ್ಟು2 ಶಂಖ ಚಕ್ರ ಕರಗಳಲ್ಲಿ ಕಂಕಣ ಭೂಷಣಗಳಿಂದ ಕಿಂಕಿಣಿ ನೂಪುರಗಳಿಂದ ಅಲಂಕಾರವಾಗಿ 3 ಕಸ್ತೂರಿ ಕೇಸರಿಯು ಗಂಧ ಬುಕ್ಕಿ ್ಹಟ್ಟು ಪರಿಮಳದ ಚೆಂದ ಕರ್ಪೂರ ತಾಂಬೂಲ ಬಾಯಲೊಪ್ಪುವ ರಂಗ 4 ನಿತ್ಯ ಸೂರ್ಯ ಪ್ರಕಾಶ ಮಲ್ಲಿಗೆ- ಮಾಲೆ ಮುಡಿದು ಹೊರಟ ಜಗದಮೋಹನ ರಂಗ5 ಸಾಲು ಸಾಲು ಮನೆಗಳಲಿ ಮೇಲು ಮೇಲುಪ್ಪರಿಗೆನೇರಿ ಬಾಲಕೃಷ್ಣ ಬರುವ ಭರವ ನೋಡುತ್ತಿದ್ದರು 6 ವಾರಿಗೆ ಸತಿಯೇರ ತನ್ನ ವಾರೆನೋಟದಿ ನೋಡುತ ಮಾರನಯ್ಯನು ಬಂದನು ತಾ ಬಜಾರ ಮಧ್ಯದಿ 7 ಚೆಲ್ವೆಯರೆಲ್ಲರು ಅರಳುಮಲ್ಲಿಗೆ ಕರದಲ್ಲಿ ಪಿಡಿದು ಫುಲ್ಲಾಕ್ಷನ ಮ್ಯಾಲೆ ನಗುತ ಚೆಲ್ಲುತಿದ್ದರು 8 ಯಾದವರೇಶನೆ ನಿನಗೆ ಭೇದವ್ಯಾಕೆನ್ನ ಮ್ಯಾಲೆ ನೀ ದಯಮಾಡೆನ್ನ ಮನೆಗೆನುತ ರಾಧೆ ಕರೆದಳು 9 ವಜ್ರದ ಗೊಂಬೆಯಂದದಿ ವೈಯಾರಿ ಮೆಲ್ಲನೆ ಬಂದು ಪದ್ಮನಾಭ ಬಾ ನಮ್ಮನೆಗೆನುತ ಭದ್ರೆ ಕರೆದಳು 10 ಅಂತರಂಗದಲ್ಲಿ ಕೋಟಿ ಪಂಥವ್ಯಾತಕೆನ್ನಮ್ಯಾಲೆ ಸಂತೋಷದಿ ಬಾರೆನುತ ಜಾಂಬವಂತಿ ಕರೆದಳು 11 ಸತ್ಯಭಾಮೆ ರುಕ್ಮಿಣಿದೇವಿ ಮಿತ್ರೆನೀಲಾ ಜಾಂಬವಂತಿ ಲಕ್ಷಣಾ ಕಾಳಿಂದಿ ಭದ್ರೆ ಕರೆಯುತಿದ್ದರು 12 ಇಷ್ಟುಮಂದಿ ಸತಿಯರೊಳಗೆ ನಿಷ್ಠುರವಾಗುವೆನೆಂದು ಎತ್ತ ಕಡೆಗೆ ಪೋಗಲೆಂದು ಶ್ರೀಕೃಷ್ಣ ನುಡಿದನು 13 ಹರಿಯ ಮಾತುಗಳನೆ ಕೇಳಿ ಸರುವರು ಸುಮ್ಮನೆ ನಿಲ್ಲೆ ಕರದಿ ವೀಣೆಯ ಪಿಡಿದು ಬಂದನು ಭರದಿ ನಾರದ 14 ಭಂಗ ಬಂದಿತೇನೊ ನಿನಗೆ ಇಂದೆನ್ನ ಹಿಂದೆ ಬಾರೆನುತ ನಾರಂದ ಕರೆದನು 15 ಕೇಳಿ ನಾರದರ ಮಾತು ತಾಳಲಾರದೆ ರುಕ್ಷ್ಮಿಣಿಯು ದಾನ ಒಯ್ದು ದಕ್ಕಿಸಿಕೊಂಡಿರೆಂದು ನುಡಿದಳು 16 ಅಕ್ಕನ ಮಾತಿನ ಬಾಣ ನೆಟ್ಟಿತು ಎನ್ನೆದೆಗೆ ಬಂದು ಕೃಷ್ಣ ನೀ ಕೇಳೊ ಕೇಳೆಂದು ನುಡಿದಳು ಭಾಮೆ 17 ಬಿಟ್ಟು ಬಾಣವ ಮಾಡಿ ಯುದ್ಧ ದಿಟ್ಟಳೆನಿಸುವುದೆ ಸಿದ್ಧ ಪೃಥಿವಿಯೊಳಗೆ ಬಾಣನಂದಿ ಎಂದು ಪ್ರಸಿದ್ಧಿ 18 ದಾರಿಗೆ ತೆಗೆಸಿದೆ ನೀನು ಮೋರೆಗಡ್ಡ ಮಂಡಿ ಪನ್ನಿ ಹೀನ ಕಾರ್ಯವ ಮಾಡಲು ನೀ ಅರಿಯೇನೆ ರುಕ್ಮಿಣಿ 19 ಗುಣನಿಧಿ ಗೋಪಾಲ ಹರಿಗೆ ಮಡದಿ ಎನಿಸುವುದೆ ಸರಿಯೆ ಮಣಿಯ ಕಳವು ಇಟ್ಟದ್ದು ನಿಮ್ಮ ಗುಣವ ನಾನರಿಯೆ 20 ಮಾಯಕಾರ್ತಿ ಮಾತುಗಳ ಅನ್ಯಾಯವೊ ನ್ಯಾಯವೊ ನಾನು ಬಾಯಬಿಟ್ಟರೇನುಳಿದೀತೆ ನಿನ ಮಾರ್ಯಾದೆ ರುಕ್ಮಿಣಿ 21 ಸಾಕು ಸತ್ಯಭಾಮೆ ನಿನಗೆ ಯಾಕೆ ಕೋಪ ಬಂದಿತೆಂದು ನಾಲ್ಕು ತೋಳಿಂದಪ್ಪಿಕೊಂಡನು ಶ್ರೀಕಾಂತ ನಗುತ 22 ಎಲ್ಲ ಸತಿಯರನು ತಾನಿದ್ದಲ್ಲಿಗೇ ಕರೆಸಿದ ಕೃಷ್ಣ ವಲ್ಲಭೆ ರುಕ್ಮಿಣಿಯ ಚರಣಕ್ಕೆ ಎರಗಿಸಿದನಾಗ 23 ರುಕ್ಮಿಣಿದೇವೇರ ತೊಡೆಯ ವಿಚಿತ್ರದ್ಹಲಿಗೆ ಮಂಚಮಾಡಿ ನಕ್ಷತ್ರದೊಳು ಚಂದ್ರನಂತೆ ಹೊಳೆಯುತ್ತಿದ್ದನು 24 ಆರ್ಯಳು ಎನ್ನ ಪಟ್ಟದ ಭಾರ್ಯಳು ರುಕ್ಮಿಣಿಯ ಮಾತು ಮೀರಬ್ಯಾಡಿರೆಂದೆನುತ ಸಾರಿ ಹೇಳಿದ 25 ಹಚ್ಚಿದ್ಹಗಲು ಬತ್ತಿಯಂತೆ ಹದಿನಾರು ಸಾವಿರ ಮಂದಿ ಭೀಮೇಶ ಕೃಷ್ಣನ ಚರಣಕ್ಕೆರಗಿ ನಗುತ ಕುಳಿತಿರಲು 26
--------------
ಹರಪನಹಳ್ಳಿಭೀಮವ್ವ
ಕಮಲಾಲಯ ಕೈಹಿಡಿದೆನ್ನ ಪಾಲಿಸುಮುನ್ನ ಕರುಣ ಕಟಾಕ್ಷದಿ ಎನ್ನಕಮಲಾಲಯ ಪ ಸ್ವಾಮಿ ಭೃತ್ಯನ್ಯಾಯ ಅರಿಯದೆ ನಾ ನಿನ್ನಪರವÀು ಪಾಮರನೆಂದು ನುಡಿದೆನು ಪರಮ ಪಾಮರನೆಂದು ನುಡಿದ ಅಪರಾಧವ ಸ್ವಾಮಿ ಚಿತ್ತದಲೆ ಹಿಡಿಬ್ಯಾಡ 1 ಗುಣನಿಧಿ ನೀ ಎಂದು ಗುಣಕೆ ಕೀರ್ತನೆ ಗೈದೆಎಣಿಸದಿರೆನ್ನ ಅಪರಾಧಎಣಿಸದಿರೆನ್ನ ಅಪರಾಧ ಎನುತಲೆ ಮಣಿದು ಸಾಷ್ಟಾಂಗ ಕ್ಕೆರಗಿದಳು2 ನಿನ್ನವರ ಅಪರಾಧ ಇನ್ನೇನು ನೋಡದೆಮನ್ನಿಸ ಬೇಕೊ ಕಮಲಾಕ್ಷಮನ್ನಿಸ ಬೇಕೊ ಕಮಲಾಕ್ಷ ಎನುತಲಿ ಕನಿದ್ರೌಪತಿ ನುಡಿದಳು3 ಬಡನಡ ಬಳಕುತ ಕುಚಗಳಲ್ಲಾ ಡುತ ಮುಡಿದಿದ್ದ ಪುಷ್ಪ ಉದುರುತಮುಡಿದಿದ್ದ ಪುಷ್ಪ ಉದುರುತ ಸುಭದ್ರೆಅಣ್ಣನ ಅಡಿಗೆರಗಿದಳು4 ಹೆಣ್ಣು ಕೊಟ್ಟ ಮ್ಯಾಲೆ ಹಿತವ ಚಿಂತಿಸಬೇಕು ಇನ್ನು ನುಡಿದಲ್ಲಿ ಫಲವೇನೊಇನ್ನು ನುಡಿದಲ್ಲಿ ಫಲವೇನೊ ಅಣ್ಣಯ್ಯಎನ್ನ ಮುಖವ ನೋಡಿ ಕರುಣಿಸೊ 5 ಎನ್ನವ್ವ ಸುಭದ್ರಾ ಈ ನುಡಿನಿನಗ್ಯಾಕೆ ನೀನು ನಿಮ್ಮಿಂದ ನಿಮ್ಮವರುನೀನು ನಿಮ್ಮಿಂದ ನಿಮ್ಮವರಿಗೆ ಪ್ರಾಣವ ನಾನು ಕೊಡುವೆನು 6 ಮೊದಲೆ ಅತ್ತೆಯ ಮಗ ಆದರದಿಂದ ನಿನ್ನ ಕೊಟ್ಟೆ ಹೆದರೋನೆ ಅವನು ನಮಗಿನ್ನುಹೆದರೋನೆ ಅವನು ನಮಗಿನ್ನು ಎನುತಲೆಮುದದಿ ರಾಮೇಶ ನುಡಿದನು7
--------------
ಗಲಗಲಿಅವ್ವನವರು
ಕರವ ಮುಗಿದು ಗುರುವಿನ ನೀ ಅರಿಯೊ ಸುಹಿತಾರ್ಥಿಯ ನೆರೆಯೊ ದೀರ್ಘದಂಡಹಾಕಿ ತರಣೋಪಾಯ ಮೂರ್ತಿಯ ಬೆರಿಯೋ ಕುರುವ್ಹ ತಿಳಿವ ಪರಮಭಕ್ತಿ ಮನೆಮೂರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 1 ಕರೆವ ಮಳೆಯು ಕರುಣಿಸಿನ್ನು ಪರಮದಯ ವೃತ್ತಿಯ ಶರಣ್ಹೋಕ್ಕಾಶ್ರೈಸೊ ನೀನು ತ್ವರಿತ ಶ್ರೀಪತಿಯ ಮರಿಯದೆ ಕೊಂಡಾಡಬೇಕು ಧರೆಯೊಳಿದೆ ಕೀರ್ತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 2 ಯರಕವಾಗಿ ಸರಕನಿನ್ನು ನೀನು ಕರಕೊ ದೃಢಭಕ್ತಿಯಾ ಅರಕಕೋಟಿ ತೇಜನಂಘ್ರಿ ಹರಿಕಿಸೊ ನೀ ಪೂರ್ತಿಯಾ ಗರಕನೆವೆ ಅರಿಕೆಮಾಡಿಕೊಂಡು ಸುಸಂಗತಿಯ ತರಕೈಸಿಕೊಳ್ಳು ಶ್ರೀಪಾದ ಪೂರ್ಣಗುರುಮೂರ್ತಿಯ 3 ಏರು ಅರು ಚಕ್ರ ನೋಡಿ ತಾರಿಸುವ ಸ್ಥಿತಿಯ ಅರವೆ ಅರವೆ ಆಗಿ ದೋರುತದೆ ಸುಜಾಗ್ರತಿಯ ಎರಗಿ ಹರುಷದಿಂದ ಪಡೆಯೊ ಪರಮ ವಿಶ್ರಾಂತಿಯ ಸ್ಮರಿಸೊಮನವೆ ಚರಣಕಮಲ ಪೂರ್ಣ ಗುರುಮೂರ್ತಿಯ 4 ಸುರರ ವಂದ್ಯ ಪರಮಭೇದ್ಯ ಅರಿಯಾ ಪರಗತಿಯ ಸಾರತಿಹ ಶ್ರುತಿವಾಕ್ಯ ಕೇಳೊ ಇಟ್ಟು ಪ್ರೀತಿಯ ತ್ಯರನೆ ತಿಳುಹಿಸಿಕೊಟ್ಟ ಗುರುವಿಗೆ ನಿತ್ಯಪ್ರತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 5 ಗುರುಮೂತ್ರ್ಯಾಭೇದ್ಯವೆಂಬ ಗುರುತಕೇಳೋ ಅರ್ಥಿಯ ಕುರಹು ದೋರಿಕೊಟ್ಟ ಗುರುವಿಗೆ ನೀ ಮಾಡೊ ಸ್ತುತಿಯ ಮರೆದುಬಿಡೊ ತರಳತನದ ಹರುವಾ ನಿನ್ನಭ್ರಾಂತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ6 ತರತರದಿ ಸಾಂದ್ರವಾಗಿ ದೋರುತಿಹ ದೀಪ್ತಿಯ ಪ್ರಾರ್ಥಿಸಬೇಕೊಂದೆ ಸರ್ವಕಾಲ ವಸ್ತುಗತಿಯ ಪರಿಪರಿಸುಖ ದೋರುವ ಕರುಣಾನಂದ ಯತಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 7 ಸರ್ವಸುಖದೋರ್ವದೊಂದೆ ಸರ್ವಫÀಲ ಶ್ರುತಿಯ ಸರ್ವದಾವೆಂಬುವದು ನವರತ್ನಮಾಲೆ ಸ್ತುತಿಯ ಪೂರ್ವಕರ್ಮ ಹರಿಸುವ ಸದ್ಗುರು ಸಾಮಥ್ರ್ಯಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 8 ಶರಣಜನರಾಭರಣವಿದೆ ಅರಿಯಬೇಕೀವಾರ್ತೆಯ ತರಳ ಮಹಿಪತಿ ನೀ ಮಾಡೊ ಇರುಳ ಹಗಲ ಆರ್ಥಿಯ ಕರವ ಪಿಡಿದು ಪಾರಗೆಲಿಸುವ ನಿನ್ನ ಸಾರ್ಥಿಯ ಸ್ಮರಿಸೊ ಮನವೆ ಚರಣಕಮಲ ಪೂರ್ಣಗುರುಮೂರ್ತಿಯ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರಿಸು ಬೇಗಿಲ್ಲಿಗೆ ಹರಿಯೆ ನಿನ್ನವರ ಅರಸಿಕ ದೇಶದಿ ಬಳಲಿಕೊಂಡಿಹನ ಪ. ಸರ್ವಜ್ಞ ನಿನಗರಿಪುವದೇಸು ವಿವರ ಸರ್ವ ಪ್ರಕಾರದಿ ಕಾವೆ ನಿನ್ನವರ ಪೂರ್ವದಂದದಿ ಪರಿಚಾರಕ ಜನರ ಇರ್ವಲ್ಲಿ ತಂದು ಕೂಡಿಸು ದೇವ ಪ್ರವರ 1 ವೇಳೆ ವೇಳೆ ನಿನ್ನ ಪೂಜಾದಿಗಳನು ತಾಳ ಮೃದಂಗಾದಿ ಸನ್ನಹಗಳನು ಮೇಳೈಸಿ ಕೀರ್ತನೆಗೈವ ದಾಸನನು ನಾಳೆ ನಾಡದು ಎಂದು ತಾತ್ಸಾರ ಮಾಡದೆ 2 ಶಕ್ತಿಹೀನ ನಾನೆಂಬುದ ಬಲ್ಲೆ ನೀನು ಭಕ್ತವತ್ಸಲ ನೀನೆಂದರಿತು ನಂಬಿಹೆನು ನಿತ್ಯ ಚಿಂತನೆಯನು ತಪ್ಪಿಸು ಸುರಧೇನು ಶಕ್ತ ವೆಂಕಟರಾಜ ಸಂಶಯವಿನ್ನೇನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣವ ಮಾಡಿ ಶರಣು ಹೋ | ಶರಣು ಹೋಗುವೆ ನಿಮ್ಮ ಚರಣ ಕಮಲಕೆ | ಎರವು ಮಾಡಿದೆ ನಿರುತಾ ಪ ನಗರ ದಹನಾ | ತಾರಕ್ಷ ವಾಹನಾ | ತರುಣ ಚರ್ಮಾಂಬರ ಪೀತಾಂಬರಧರ ಶ್ರೀ ಸತಿರಮಣಾ | ಶೌರಿ ಕೌಸ್ತುಭಮಾಲಾ | ಮಾರಜನಕ ಕು | ಮಾರನಪಿತ ಗಂಗಾಧರ ಧರ ಧರ1 ಶೂಲ ಡಮರುಗ ಹಸ್ತ | ಮೂಲೋಕ ಮೀರಿದವಸ್ತಾ | ಕಾಲ ನಿಯಾಮಕ | ನಿತ್ಯ | ಪಾಲಸಾಗರಶಾಯಿ ನಂದಿಗಮನ ಕಾ | ಪಾಲಿ ಅಭಯ ಪಾಣಿ 2 ವಿಷಧರ ಭೂಷಣ ಕಸ್ತೂರಿ ತಿಲಕ ರಂ | ಪಶುಪತಿ ಪಿನಾಕಿ ಅಸುರಾರಾತಿ ವಿವೇಕಿ | ಅಸಮ ಸುದರುಶನ ರುಂಡಮಾಲಾಧೀಶ ಪಾಲ ಗೋಪಾಲ 3 ಭೂತ ಪ್ರಮಥರೊಡೆಯಾ | ಭೂತೇಶಾದಿಗಳೊಡೆಯಾ | ನೀಲ | ಗಾತುರ ಸದ್ಯೋಜಾತಾ ಜಾತರಹಿತಾ | ಶೂನ್ಯ ಪ್ರತಾಪಾ | ಶ ತಾಮಸ ಖ್ಯಾತಿ ಮಂಗಳಕೀರ್ತಿ 4 ತಂತ್ರ ಮಂತ್ರಕ್ಕೆ ಸಿಲುಕಾ | ಅಂತರಂಗ ನಿಯಾಮಕಾ | ಎಂತೆಂತು ತಿಳಿದರೆ | ಅಂಥಂಥ ಗತಿಯನ್ನು | ಸಂತತ ಕೊಡುವನೆ ಚಿಂತಿಪೆ ವರಹನ್ನ | ದಂತಜ ತೀರದಲ್ಲಿ | ಕಾಂತಾರ ನಿವಾಸಾ 5
--------------
ವಿಜಯದಾಸ
ಕರುಣಾರಸಮಾರ್ಜಿತ ಸಂತಾಪಂ ಪ ಮುನಿಮಾನಸ ಪೂಜಿತ ನಿರ್ಲೇಪಂ ವನರುಹಾಸನ ಮುಖ್ಯ ವಂದಿತ ಗೌರವಂ ನರ ಪುಂಗವಂ ಮನುಕುಲಾರ್ಚಿತ ಪಾದಪಂಕಜ ರಾಘವಂ ಸುರಧೇನುವಂ 1 ಶೋಭಿತ ಪಾವನ ಕೀರ್ತಿಯುತಂ ಪಶುಪತಿ ಪ್ರಿಯಮವ್ಯಯಂ ಸುರಪೂಜಿತ ಗುಣಭೂಷಿತಂ ಶಶಧರಾನನೆ ಜಾನಕೀ ಪ್ರಿಯ ಭಾಸುರಂ ಕರುಣಾಕರಂ 2 ಖರದೂಷಣ ಶಾಸಕ ದೇವಂ ಶರಣಾಗತ ಸಂರಕ್ಷಣ ನಿರತಂ ಚರಣಪಲ್ಲವನುನ್ನ ದುಂದುಭಿಕಾಯಂ ಅಕ್ಷಯಂ ಅದ್ವಯಂ ಸುರವರಂ ವರಧೇನುನಾಮಕ ನಗರನಾಯಕಂ ಹಾಯಕಂ 3
--------------
ಬೇಟೆರಾಯ ದೀಕ್ಷಿತರು
ಕರುಣಿಸಬಾರದೆ ಕಂಜನಾಭನೆ ಕೈಯ ಮುಗಿವೆನಯ್ಯಾಪ. ವರ ಫಣಿಗಿರಿ ಸುಸ್ಥಿರಮಂದಿರ ಶ್ರೀ ಗುರು ಜನಾರ್ದನಾಮರಗಣ ಪಾಲಕಅ.ಪ. ಅಪರಾಧಗಳಾಲೋಚಿಸುವರೆ ಸರೀ- ಸೃಪರಾಜನಿಗಳವೆ ಕೃಪೆಯಿಂದಲಿ ಸಂರಕ್ಷಿಸದಿದ್ದರೀ- ಯಪಕೀರ್ತಿಯು ಶ್ರೀಹರಿ ನಿನಗಲ್ಲವೆ 1 ಪುರಂದರ ಮುಖ್ಯ ದಾಸರಂತೆ ಗುಣವೆನಗಿನಿತಿಲ್ಲ ಜನರ ವಿಡಂಬನಕೆ ದಾಸನಾದರೂ ಘನ ಕೃಪಾರ್ಣವನೆ ಕನಕಾಂಬರಧರ2 ಲಕ್ಷ ಮಾತ್ಯಾತಕೆ ಲಕ್ಷ್ಮೀನಾರಾಯಣ ರಕ್ಷಾಮಣಿ ನೀನೆ ಪಕ್ಷೀಂದ್ರವಾಹನ ಪಾಪವಿಮೋಚನ ತ್ರ್ಯಕ್ಷಮಿತ್ರನೆನ್ನಕ್ಷಿಗೋಚರನಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಿಸು ರಘುನಂದನ ರಾಮಾ ನಿರುತವು ನಿನ್ನನೆ ಸ್ಮರಿಸುವ ಭಾಗ್ಯವ ಪ ಪರಮಮಂಗಳನಾಮಾ ದುರಿತಭಂಜನ ನಾಮ ಗಿರಿಜೆಪಾಡುವ ನಾಮಾ | ಜಾನಕೀರಾಮ ಅ.ಪ ರಾಮನೆನೆ ಪಾಪವು ಲಯವಹುದಂತೆ ರಾಮಾಯೆನೆ ಭಯಗಳು ಪರಿಹರವಂತೆ 1 ರಾಮನೆನೆ ಮಾಯೆಯು ಹರವಂತೆ ರಾಮನ ನುತಿಸೆ ಮನ ಪರವಶವಂತೆ2 ಜಯರಾಮ ಜಯರಾಮ ಎನುತಿರುವಂತೆ] ದಯಮಾಡೊ ಮಾಂಗಿರಿರಂಗ ನೀನಂತೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರುಣಿಸೆನ್ನ ಗುರು ಮಂತ್ರಾಲಯ ನಿಲಯಾ ಶ್ರೀ ನರಹರಿ ಗತಿ ಪ್ರೀಯಾ ಪ. ಹರಿಶಯ ಮರುತರ ಆವೇಶಕೆ ನಿಲಯಾ ನಂಬಿದೆ ಶುಭಕಾಯಾ ಅ.ಪ. ತರಳತನದಿ ಶ್ರೀ ನೃಹರಿ ಶಾಂತನಾಗೇ ಸುರರೆಲ್ಲರು ನಿಮಗೇ ಎರದÀು ಕೀರ್ತಿ ಹಿರೆತನವಹಿಸಿದ ರಾಗೇ ಅದರಂದದಿ ಈಗೇ ವರ ಯತಿಗಳು ಹರಿದಾಸರು ವಂದಾಗೇ ಅಘ ನೀಗೇ ಧರೆ ಕಲ್ಪ ಧ್ರುಮವೆಂದು ನಿಮ್ಮ ಬಳಿಗೇ ವಪ್ಪಿಸುವರು ಅಡಿಗೇ 1 ಎಮ್ಮ ಗುರುಗಳಿಂದ್ಹೇಳಿದ ನುಡಿ ಮರೆದೇ ನಿಮ್ಮಡಿಗೆರವಾದೇ ಸಮ್ಮತದಲಿ ಮೃತ್ತಿಕೆಯನು ಸೇವಿಸದೇ ಹಮ್ಮಿನಲಿ ಮೈಮರೆದೇ ನಿಮ್ಮ ಸುಕೀರ್ತಿಯ ತಿಳಿಸು ತಿಳಿಯದಾದೇ ಅತಿ ಭಕ್ತಿಯ ಜರಿದೇ ನಿಮ್ಮ ಕರುಣವಿರಲದರಿಂದೀಗರಿದೇ ತನುಮನವಪ್ಪಿಸಿದೇ 2 ಕೃತಿ ದ್ವಿದಳಾತ್ಮಕದಪರಾಧ ಪಡಿಸಿತು ಬಹು ಬಾಧ ಸಂದಿತು ಕಾಲವು ಮುಂದರಿಯುವ ಮೋದ ಸಂದಿಸಿತುತ್ಸಹದಾ ನಂದಕೆ ಕಲಿ ಮಲ ತೊಳೆಯಲು ಮೌನದಾ ಪರಿ ಅರಿತೆ ಸುಭೋಧಾ ಕುಂದೆಣಿಸದೆ ಪೊರೆದೆನ್ನ ನಿಮ್ಮಗಾಧಾ ಕೃಪೆತೋರಲು ಬಹು ಮೋದಾ 3 ಎಲ್ಲಿ ನೋಡಲಲ್ಲಲ್ಲಿ ನಿಮ್ಮ ವಾಸಾ ಪುರಗಳು ಜನ ತೋಷಾ ಸೊಲ್ಲು ಸೊಲ್ಲಿಗೇ ನುತಿಪ ಗಾನ ಘೋಷಾ ಮಹಿಮೆಗಳ ಪ್ರಕಾಶ ವಲ್ಲದಾಯಿತ್ಯಾತಕೊ ಎನಗಭಿಲಾಷಾ ಬಲ್ಲವರೀಪರಿ ಮಾಡುವರೇ ಮೋಸಾ ಸದ್ಭಕ್ತರಲಾಭಾಸಾ 4 ಒಂದು ದಿನದ ಮೃತ್ತಿಕೆ ಜಲ ಸೇವಿಂದ ಪೊಂದಿದೆ ನಿಮ್ಮ ಪದಾ ಒಂದಾಗಲಿ ಗುರುವೆನಿಸಿದರೆಲ್ಲರದಾ ಮನವಮ್ಮನ ವಾದಾ ನಂದವು ಶ್ರೀ ನರಹರಿ ತಾ ಪರಿಕಿಸಿದಾ ನಂದವು ಬಹು ಮೋದಾ ಸಂದಲಿ ಗೋಪಾಲಕೃಷ್ಣವಿಠಲನಿಂದಾ ಎಣಿಸದೆ ಬಹು ಕುಂದಾ 5
--------------
ಅಂಬಾಬಾಯಿ
ಕರುಣಿಸೆನ್ನನು ಕರುಣಾನಿಧಿಯೆ ಪ ಹರಿ ಭಜಕರಾಗ್ರಣಿಯೆ ವರಕಪಿಶಿರೋಮಣಿಯೆ ಅ.ಪ ಧರಣಿತಳದಲ್ಲಿ ಪರಿಪೂರ್ಣವಾಗೀ ಇರುವ ವಾರ್ತೆಯ ಕೇಳಿ ಹರುಷ ಮನದಲಿ ನಿನ್ನ ಚರಣ ಪಂಕಜಯುಗ್ಮ ಭರದಿ ಭಜಿಪ ಎನ್ನ 1 ದುರುಳ ದೈತ್ಯನ ಶೀಳಿ ಧರಣಿಸುರಸುತನ ನೀ ಪೊರೆದ ಕೀರುತಿ ಕೇಳಿ ತ್ವರದೀ ಪಾದ ಸರಸಿಜ್ವದಯವನ್ನು ದುರುಳ ಮಾನವ ನಾ 2 ಜನಕ ಮಾಡಿದ ಋಣವ ಹುಣಿಸೆ ಬೀಜಗಳಿಂದ ಋಣಗಳೆದ ಘನ ಮಹಿಮೆ ಕೇಳಿ ಮನದಿ ಯೋಚಿಸಿ ಚರಣವನಜ ಭಜಿಸುವ ಎನ್ನ ಋಣ ಬಿಡಿಸೊ ಗುರುಜಗನ್ನಾಥ ವಿಠಲ ಪ್ರಿಯಾ 3
--------------
ಗುರುಜಗನ್ನಾಥದಾಸರು
ಕರುಣಿಸೊ ಶ್ರೀ ಗುರುರಾಜ ಬರದ್ಯಾಕೆ ಎನ್ನೊಳು ದಯ ಪ ದಯಮಾಡೊ ಶ್ರೀ ಗುರುರಾಜ ಹಯವದನನಿಗತಿ ಪ್ರಿಯ ಅ.ಪ ಒಲಿಸಾದೆ ವಿದ್ಯೆಗಳನ್ನು ಬಾಲತನದಿ ಬಹುಕಾಲ ಕಳೆದೆ ಕುಲೀಲೆಗಳಲ್ಲಿ ಛಲವ್ಯಾಕೆ ಎನ್ನೊಳು ಬಲ್ಲಿ 1 ಜ್ಞಾನರಹಿತ ಪ್ರಾಯದಿ ಮಾನಾಪೇಕ್ಷೆಯನೆ ಮಾಡಿ ಮೌನಿ ವೇಷವನೆ ಧರಿಸಿ ಹೀನಾಚರಣೆಯಲ್ಲಿರುವೆ 2 ಪತಿತಾಗ್ರಣಿಯು ನಾ ಬಲ್ಲಿ ಪತಿತಪಾವನ ನೀ ಬಲ್ಲೆ ಗತಿಪದ ಮತಿಯನಿತ್ತು ರತಿಪತಿಪಿತನ ತೋರಿ3 ಬಲ್ಲವರನು ರಕ್ಷಿಪುದು ಅಲ್ಲ ಬಿರುದು ಘನವಾದ್ದು ಅಲ್ಪನ ಪೊರೆಯಲು ನಿನಗೆ ಒಳ್ಳೆ ಕೀರುತಿ ಬರುವುದು 4 ಸರ್ವಜ್ಞ ನಿನಗೆ ನಾನೆಂತೋ ಉರ್ವೀಭಾರನು ನಾ ಪೇಳ್ವೆ ಪರ್ವ ಪಂಚಕಗಳ ಕಳೆ ಶ್ರೀ ನರಹರಿಯನೆ ಪೊಂದಿಸಿ 5
--------------
ಪ್ರದ್ಯುಮ್ನತೀರ್ಥರು
ಕವಿ ಕವಿದು ಪೊಳೆವ ಭುವನಪಾವನ ಚರಿತ ಇಂದೀವರಾಕ್ಷ ಪ ತವಪೂರ್ಣ ನಿಜ ಒಲಿಮೆ ಪ್ರಭುಪೂರ್ಣ ಕವನದಲಿ ಮೋದ ಕರಿವರದ ಭವಭಂಗ ಪರಿಹಾರ ಕವನ ವೋದಿದ ಮಾತ್ರ ಧವಳ ಕೀರುತಿ ಬೆಳುದಿಂಗಳನು ಮೀರಿಹುದೊ 1 ತವಪೂರ್ಣ ಗುಣ ಕ್ರಿಯೆ ರೂಪ ಘನ ಭಾವಗಳು ಲವಲವಿಕೆ ಎಮ್ಮ ಚೇತನಕೆ ಕೊಟ್ಟು ಭವಭೀತಿಗೆ ಭೀತಿ ತಂದೊಡ್ಡುವುದೊ ಕಮಲೇಶ ಸವಿದುಣ್ಣುವಾ ಜನಕೆ ಜಡದಲ್ಲೂ ನೀ ಬರುವೆ 2 ಶ್ರವಣ ಮಾತ್ರಕೆ ಮೈಮರೆಸುವುದು ಮಹಸಿರಿಯು ಶುಕ ಪಿತ ಸವಿದ ರುಚಿಯು ಇಹುದು ಪವಮಾನ ಕೃಷ್ಣಾರ್ಯ ರಾಮಾರ್ಯರತಿ ವಲುಮೆ | ಶ್ರವಿಸುವುದು ಪಠಿಪರನು ಭಕ್ತಿಮತ್ತರ ಮಾಡಿ 3 ಕವಲುಮತಿಯಲಿ ಮುಳುಗಿ ಚಲಿಸದಿರು ಇದರಿಂದ ಭವಮೂಲಕುನ್ಮೂಲ ಇದರ ಮಹಿವi ಅವಲಿಯನು ತಿಂದವನು ಅಗಲಿರದೆ ಒಡನಿಹನು ಜವನ ದೂತರು ತಲೆಮಣಿದು ಓಡುವರೊ 4 ತತ್ವಾಭಿಮಾನಿಗಳಿಗಾಹಾರವಿದು ಸತ್ಯ ತತ್ವಾರ್ಥ ಬಲು ಸುಲಭದಲ್ಲೆ ಮನಕವಗಾಹ್ಯ ಸತ್ಕøತಿಯ ಮಾಡಿ ಚಿತ್ಸುಖವ ಉಣು ನಿತ್ಯ ವಾತಾತ್ಮ ಗುರು ಶ್ರೀ ಜಯೇಶವಿಠಲನ ನೋಡು 5
--------------
ಜಯೇಶವಿಠಲ
ಕಾಕುತ್ಸ ರಘುನಾಥ ಶ್ರೀರಾಮಚಂದ್ರ ಭೂಕಾಂತೆ ಸಿರಿವಂತೆ ಜನಕಾತ್ಮಜೇಂದ್ರ ಪ ಪಾಕ ಶಾಸನ ಕಾಯ್ದ ದಶರಥ ಕಂದ ಲೋಕನಾಯಕ ಸ್ವಾಮಿ ಭಕ್ತರಾನಂದಾ ನಂಬಿದೆ ಹರಿ ನಿನ್ನ ಚರಣಯುಗ್ಮಗಳ ನಂಬಿದ ಶ್ರೀ ಹರಿ ದಿವ್ಯ ರೂಪಗಳಾ ನಂಬಿದೆ ನಿನ್ನ ಹರಿಲೀಲೆ ಮಹಿಮ ಕೀರ್ತಿಗ¼ À ನಂಬಿದೆ ಪಾಲಿಸೋ ತರಿದು ಕಷ್ಟಗಳ 1 ಸ್ಮರಿಸುವೆ ಭಜಿಸುವೆ ಶುಭ್ರ ನಾಮಗಳ ಪರಿಪರಿ ಪೊಗಳುವೆ ನಮಿಸುವೆ ಹರಿಯ ನಿರುತದಿ ಪಾಡುವೆ ನಿನ್ನ ಸ್ತೋತ್ರಗಳ ವಿರಚಿಸಿ ಮಾಡುವೆ ಹರಿ ಕೀರ್ತನೆಗಳ 2 ಭಕ್ತನ ಲಾಲಿಸೋ ದಾನವಾಂತಕನೇ ಭಕ್ತಿಯ ಪಾಹಿಸೂಕರ ರೂಪಧರನೇ ಭಕ್ತನ ಪಾಲಿಸೋ ದೇವ ನಿರ್ಮಲನೇಮುಕ್ತಿಯ ಪಾಲಿಸೋ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ಕಾಯೊ ಕಾಯೊ ಕಾಮಿತ ಫಲದ ಕಾಯೊ ಕಾಯೊ ಪ ಕಾಯೊ ಕಾಯೊ ಎನ್ನ ಕಾಯಜನಯ್ಯನೆ ಕಾಯದಿದ್ದರೆನ್ನ ಕಾವವರಾರೊ ಅ.ಪ ಎಂದೆಂದಿನ ಕರ್ಮಗಳನೆಣಿಸುತಲಿ ಕಂದಿಸಿ ಕುಂದಿಸಿ ಬಂಧಿಪರೇನೋ 1 ತಾಳಲಾರೆ ಈ ಕಾಲನ ಬಾಧೆಯು ಬೇಳುವೆ ನಿನ್ನಯ ಕಾಲಿಗೆ ಸ್ವಾಮಿ 2 ಆಲಸ ಮಾಡದೆ ಆರ್ತಿಗಳೋಡಿಸಿ ಪಾಲಿಪುದೆನ್ನನು ಪಾವನ ಮೂರ್ತೆ3 ಮಾಡಿದ ಪಾಪಗಳೋಡಿಸಿ ಸುಖದಿಂ ದಾಡಿಸು ಕಣ್ಣಿಗೆ ಕಾಣಿಸಿಕೊಂಡು 4 ವಾಸುದೇವವಿಟ್ಠಲ ನೀ ಎನಗಿನ್ನು ವಾಸಿ ಮಾಡಿಸಿ ಕೀರ್ತಿಯ ಪಡೆಯೊ 5
--------------
ವ್ಯಾಸತತ್ವಜ್ಞದಾಸರು