ಒಟ್ಟು 347 ಕಡೆಗಳಲ್ಲಿ , 41 ದಾಸರು , 339 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರೇರೆಲ್ಲ ಮುತ್ತಿನಾರತಿ ಬೆಳಗಿರೆ ಶ್ರೀ ಕೃಷ್ಣಮೂರುತಿಗೆ ಪ ನಾರೀಮಣಿ ಶ್ರೀ ರುಕ್ಮಿಣೀದೇವಿಗೆ ಮತ್ತು ಭೂಮಾಮಣಿಗೆ ಅ.ಪ ಪನ್ನಗಪತಿ ಫಣಿಯನ್ನು ತುಳಿಯುತಲಿ ಚನ್ನಾಗಿ ಕುಣಿದವಗೆ ಸನ್ನುತ ನಿಜ ಜನರನ್ನು ಸಲಹುವ ಮನ್ಮಥ ಜನಕನಿಗೆ 1 ಪಾರ್ಥಗೆ ಸಖನಾಗಿ ಧಾರ್ತರಾಷ್ಟ್ರನ ಹಠ ವ್ಯರ್ಥ ಮಾಡಿದವಗೆ ಆರತಿ ಎತ್ತಿರೆ ಶುಭಕೀರ್ತನೆ ಮಾಡುತ ಪಾರ್ಥಸಖನ ಸತಿಗೆ 2 ಚಂಡಮುನಿಯು ಬೇಡಿಕೊಂಡ ವರವನಿತ್ತ ಪಾಂಡವರ ಕಾಯ್ದವಗೆ ಪುಂಡರೀಕದಳಲೋಚನಗೆ ಜಗದಂಡಪತಿಯ ಸತಿಗೆ3 ವಾಮಲೋಚನರೆಲ್ಲಾ ನಾಮಗಿರೀಶ ಶ್ರೀ ನರಸಿಂಹ ಮೂರುತಿಗೆ ಪ್ರೇಮ ಮಾಡುವನೆಂದು ಕಾಮಿನಿಯರೇ ಸತ್ಯ ಭಾಮಾಸಹಿತನಿಗೆ 4
--------------
ವಿದ್ಯಾರತ್ನಾಕರತೀರ್ಥರು
ನಿಗಮ ಸನ್ನುತ ಪ ವೀತ ಶೋಕ ಭಯ ವಿದೂರ ಮದನ ಜನಕ ಅ.ಪ. ಆದಿಮಧ್ಯಾಂತರಹಿತ - ವೇದ ಪೀಠನ ಜನಕನೀತ ಅಚ್ಯುತ ಅಪ್ರಮೇಯ ಅಮರವಂದಿತ 1 ನಿತ್ಯತೃಪ್ತ ನಿಖಿಲವ್ಯಾಪ್ತ ಸತ್ಯಸಂಕಲ್ಪ ಸ್ವರತ ಹಸ್ತಿವರದನಾದಪರ ವಸ್ತುವೆನಿಸಿದ ಖ್ಯಾತ 2 ಸೃಷ್ಟಿಸ್ಥಿತಿಲಯಾದಿಕರ್ತ, ದುಷ್ಟದಮನ ಗೈಯುತಲೀತ ಕೃಷ್ಣರೂಪದಿಂದಲೆಸೆವ ಶ್ರೇಷ್ಠದೈವ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ನಿತ್ಯ ಸುಖಕರ ನೀರಜಾಕ್ಷರ ಭೃತ್ಯರಾಗುವ ಬನ್ನಿರಿ ಎತ್ತುವನು ಸಂಶಯವಿಡದೆ ಕೃತಕೃತ್ಯರಾಗುವವೆನ್ನಿರಿ ಪ. ಮೋದಮಯನ ಪ್ರಸಾದವನು ಕೊಂಡಾದರದಿ ಸೇವಿಪುದು ಪಾದಪದ್ಮಾಮೋದಯುತಾ ತುಳಸೀದಳಗಳನು ಮುಡಿವುದು ತೇದ ಗಂಧವ ಮಾಧವನಿಗಿರಿಸಾದನಂತರ ಕೊಳುವುದು ಭಾಗವತ ಕೇಳುತ 1 ಭೀಕರಿಪ ಮಹ ದುರಿತಗಣ ನಿರಾಕರಿಸುವನು ನಿಮಿಷದಿ ಕುಯುಕ್ತಿ ಶಕ್ತಿಯ ದೂಕುವನು ದುಷ್ಕೂಪದಿ ವಾಕುಗಳ ತಪ್ಪುಗಳನೆಣಿಸದೆ ಸಾಕುವನು ಸಂತಸದಲಿ ಒಡಗೂಡಿ ನಲಿವನು 2 ಶ್ರೀಶನನು ಭಜಿಸುವದಕೇನಾಯಾಸವಿರುವುದು ಹೇಳಿರಿ ವಾಸವಾಗಿಹ ಸಕಲ ಹೃದಯಾಕಾಶ ಪದ್ಮದಿ ಕೇಳಿರಿ ವಾಸುದೇವನ ವರ್ಣನಾಂಶವ ಲೇಶವಾದರು ತಾಳಿರಿ ಶೇಷ ಗಿರೀಶನ ದಾಸಕೂಟ ಸಮಾಶ್ರಯಣ ಸಂಗ್ರಹಿಸಿ ಬಾಳಿರಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿನ್ನ ಬಿಟ್ಟಿರಲಾರೆ ನೀರಜಾಕ ್ಷ ಪ ಘನ್ನ ಮಹಿಮನೆ ನಿನ್ನ ಸನ್ನಿಧಾನವನೀಯೊ ಅ.ಪ. ಸರ್ವಧರ್ಮಗಳಿಗೆ ನೀನಿಲ್ಲದಿನ್ನಿಲ್ಲ ಉರ್ವಿಕರಿಗೆ ನೀನೆ ಉರ್ವೀಶನೆ ನಿರ್ವಿಕಾರ ಮಹಾತ್ಮ ನಿಖಿಲಾಂತರಾತ್ಮಕನೆ ಪಾದ ಸೇವೆಯೆನಗೀಯೊ 1 ತಡವ್ಯಾಕೆ ಬರಲಿನ್ನು ಪೊಡವೀಶ ಯನ್ನೊಡನೆ ತಡೆಯಲಾರೆನು ನಿನ್ನ ವಿರಹವನ್ನು ನುಡಿಯಬೇಡವೋ ಎನ್ನ ನೀ ಪೋಗು ಎಂದೆನುತ ಕಡು ದಯಾನಿಧಿ ನಿನ್ನ ನಾ ಬಿಡೆನೊ 2 ಆನಂದ ಪರಿಪೂರ್ಣ ಶ್ರೀನಾಥ ನಿನಗೇಕೆ ಕಾನನಾ ವಾಸವು ಕಮಲನಯನ ಜ್ಞಾನದಾಯಕ ನಿನ್ನ ಚರಣ ಶರಣನೊ ನಾನು ದೀನರಕ್ಷಕ ಸ್ವಾಮಿ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ನಿನ್ನದೇ ಸಕಲ ಸೌಭಾಗ್ಯ ಸಾಧನವು ಹರಿಯೆ ಪ ನಿನ್ನದೆಂಬಭಿಮಾನ ಲವಲೇಶ ಸಲ್ಲದಯ್ಯಾ ಅ.ಪ. ನಿನ್ನ ಪ್ರೇರಣೆ ಹೊರತು ತೃಣವೊಂದು ಚಲಿಸದು ನಿನ್ನಿಚ್ಛೆಗನುಸಾರ ಸಕಲ ಜಗವು ನಿನ್ನ ಚಿತ್ತಕೆ ಬಾರದಿಹುದೇನು ನಡೆಯುವುದೋ ನಿನ್ನ ನಂಬಿದವರನು ನೀನಾಗೆ ಸಲಹುವೆಯೊ 1 ಸರ್ವತಂತ್ರ ಸ್ವತಂತ್ರ ಸರ್ವಾಂತರಾತ್ಮಕನೆ ಸರ್ವಜಗದಾಧಾರ ಸರ್ವೇಶನೆ ಅಘ ದೂರ ಸರ್ವಕಾಲದಲೆನ್ನ ಗರ್ವರಹಿತನ ಮಾಡೊ 2 ಸತ್ಯಚಿತ್ತನೆ ನಿನ್ನ ಚಿತ್ತವೆನ್ನಯ ಭಾಗ್ಯ ಕರ್ತೃತ್ವದಭಿಮಾನ ಕಳೆದು ಕಾಯೊ ಮತ್ತೇನು ಬೇಡುವೆನು ಪರತಂತ್ರ ನಾನಯ್ಯ ಮುಕ್ತಿದಾಯಕ ಶ್ರೀಶ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ನಿನ್ನೊಳೇನ ಬೇಡಿಕೊಂಬೆನೋ ನಾ ಸನ್ನುತಾಂಗ ಪ ನಿನ್ನ ಪಾದವನ್ನು ಭಜಿಪ ಮನದ ಹೊರತು ಅ.ಪ ಮನೆಯು ಬೇಡ ಮಠವು ಬೇಡ ಧನವು ಬೇಡ ಕನಕ ಬೇಡ ಮನದ ಶುದ್ಧಿಯಿಂದ ನಿನ್ನ ನೆನೆವ ಮನದ ಭಾವ ಹೊರತು1 ಸತಿಯು ಸುತರು ಗತಿಯು ಮತಿಯು ಹಿತರು ಸಖರು ನೀನೇ ಎಂಬ ಮತವನಾಂತು ನಿನ್ನ ಪೂಜೆ ವ್ರತವು ಸಾಕು ಎನ್ನದೇ 2 ಸಿಂಧು ಯಮುನೆ ಕೃಷ್ಣೆ ತುಂಗಭದ್ರೆ ತಪತಿ ಕಪಿಲೆ ಮಂಗಳ ಕಾವೇರಿ [ಹೇವiವತಿಯ] ಮಾಂಗಿರೀಶ ನೀನೆ ಎನ್ನದೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀತಿಯೇನಿದು ಕಾಂತೆ ಮಾತಿನೊಳ್ ಬಿರುಸೆನಿತೆ ಘಾತಿಸುವುದಿದೊಳ್ಳಿತೇ ಪ್ರಾಣದಾತೆ ಈಕಾಲದಬಲೆಯರ ಕಾಕಲಾಪಕೆ ಸೋತು ಸಾಕಾರನೊಳಗಿಂತು ಕೇಣಮಾಂತು ನೀನೆರೆವೆÉ ವಸ್ತುಗಳ ನಾನಿತ್ತೆನಾದರೆ ಕಾನನದ ವಾಸವು ಎನಗೆ ನಿಜವು ಇದನರಿತು ನೀನೆನ್ನ ಪದುಳದಿಂ ಸುಖಿಯಪ್ಪ ಹದನನರಿಯದೆ ಬರಿದೆ ಜರಿದೆ ಮುಗುದೆ ಪ್ರೇಮ ಗೌರವ ಭಕ್ತಿ ಭಾವ ಶುದ್ಧಿ ನೇಮನಿರತಿಶಯ ಸುಸ್ನೇಹದಿಂದ ಕೋಮಲತೆಯಯಾಂತೆಸೆವ ಬಗೆಯ ತಾಳ್ದು ಭಾಮೆಯೆನ್ನಿಸು ಶೇಷಗಿರೀಶಗೊಲಿದು
--------------
ನಂಜನಗೂಡು ತಿರುಮಲಾಂಬಾ
ನೀನಾರು ಪೇಳೆನಗೆ ನಿರುಪಮ ಬಲಪೂರ್ಣ ಮಾನವರೊಳೀ ಪರಿಯ ಶೌರ್ಯವುಂಟೆ ಪ ದಾನವಂತಕನೆಂದು ಮಾನಸಕೆ ತೋರುತಿದೆ ಪ್ರಾಣಿಗಳಿಗೆಲ್ಲಾ ನೀ ತ್ರಾಣದಾಯಕನೆ ಅ.ಪ. ಆಕಾರದಲಿ ನೋಡೆ ನರವೇಷಧಾರಿ ಪ ರಾಕ್ರಮದಿ ಪರಿಕಿಸಲು ಪರಮಪುರುಷ ಶ್ರೀಕಂಠಚಾಪವನು ಖಂಡಿಸಿದ ಕಡುಧೀರ ಕಾಕುತ್ಸ್ಥ ಶ್ರೀರಾಮನೆಂದು ತೋರುವುದೆನಗೆ 1 ಕೋದಂಡಧರ ನಿನ್ನ ಕ್ರೋಧಾಗ್ನಿಗಂಜುತ ಮ ಪಥ ಬಿಡಲು ಲಂಕೆಗೈದಿ ಆ ದಶಾಸ್ಯನ ಕಂಠಪಂಕ್ತಿಯನು ಕಳಚಿಸಿದ ಆ ದಾಶರಥಿಯು ನೀನಲ್ಲದೆ ಬೇರಿಲ್ಲ 2 ಲೋಕಕಾರಣ ನೀನೆ ಲೋಕೇಶ ಲೋಕಧರ ಲೋಕಾಂತರಾತ್ಮಕನು ಲೋಕಜನಕ ಲೋಕರಕ್ಷಕ ಸಕಲ ಲೋಕನಿಯಾಮಕನು ಏಕಮೇವಾದ್ವಿತೀಯನು ಕರಗಿರೀಶನು ನೀನೆ 3
--------------
ವರಾವಾಣಿರಾಮರಾಯದಾಸರು
ನೀನಿರುವುದನು ಕಾಣದವನು ಪ ಮಾನವ ನಾನು ಧ್ಯಾನವರಿಯದ ನರನು ನಾನಾಪರಾಧಗಳ ಮಾಡಿದವನು ಅ.ಪ ಬೆಣ್ಣೆ ಹಾಲಿನೊಳುಂಟು ಎಣ್ಣೆ ಎಳ್ಳಿನೊಳುಂಟು ಕಣ್ಣರಿಯದಗ್ನಿಯು ಶಮಿಯೊಳುಂಟು ಮಣ್ಣಿನಲಿ ಜಲವುಂಟು ಜಲದಿ ಲವಣಗಳುಂಟು ನೀನೆಲ್ಲರೊಳಗುಂಟು ಎಂದೆಂಬುದರಿಯದ 1 ವೇದಶಾಸ್ತ್ರಪುರಾಣ ಓದಿದವ ನಾನಲ್ಲ ವಾದ ವಾಕ್ಯಾರ್ಥಗಳ ಮಾಡಿದವನಲ್ಲ ಆದಿ ಕೇಶವಪಾದ ಪೂಜೆಗೈದವನಲ್ಲ ಆದರಿಸಿ ಕಾಯಯ್ಯ ನೀ ಮಾಂಗಿರೀಶ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೆ ಗತಿ ಶ್ರೀಪತಿ ನೀನೆ ಗತಿ ನಿರಾಕೃತ ದಾನವತತಿ ದೀನಾನುಕಂಪಿತ ಮತಿ ಪ. ಏನೆಂಬೆನು ನಿನ್ನಯ ಕರುಣಾ ಪವಮಾನ ಮತಿಯ ಜನಾದರಣಾ ದೀನಬಂಧು ದುರಿತೌಘ ನಿವಾರಣ ಶುಭ ಸಂಚಯ ಕರಣ 1 ನಿರವಧಿ ಸುಖದಾಯಕ ನಿನಗನ್ಯರು ಸರಿಯಂಬರು ನರಕದಿ ಹೊರಳುವರು ಚರಣಯುಗ್ಮಸರಸಿಜವಿಂತಿರಲು ಬರಿದೆ ಭವದಿ ತಿಳಿಯದೆ ಬಳಲುವರು 2 ಸ್ಮರಣೆ ಮಾತ್ರದಿಂದೊಲಿವ ಮನವರಿತು ಪಾಡಿದರೆ ನಲಿವ ಸಿರಿಸಮೇತ ಮಂದಿರದೊಳಗಿರುವ ಉರಗ ಗಿರೀಂದ್ರನ ಶಿರದಲಿ ನಲಿವ 3
--------------
ತುಪಾಕಿ ವೆಂಕಟರಮಣಾಚಾರ್ಯ
ನೀರಜಾಕ್ಷ ರಾಮ ಲೋಕಾಭಿರಾಮ ಪ ನೀರದನಿಭಶ್ಯಾಮ ನಿತ್ಯಮಂಗಳ ನಾಮ ಅ.ಪ. ನಿನ್ನ ಬಿಟ್ಟು ನಾನು ಅನಾಥನು ಸನ್ನುತ ಗುಣರನ್ನ ಸತ್ಕೀರ್ತಿ ಸಂಪನ್ನ 1 ದೇಶಕೊಡೆಯ ನೀನು ದಾಸ ನಿನಗೆ ನಾನು ಕೌಸಲ್ಯವರಪುತ್ರ ಕೋಮಲ ಶುಭಗಾತ್ರÀ 2 ನಿನ್ನ ಸನ್ನಿಧಿವಾಸ ಪುಣ್ಯಫಲವಿಶೇಷ ಘನ್ನ ಕರಿಗಿರೀಶ ಗಂಭೀರ ಗುಣಭೂಷ 3
--------------
ವರಾವಾಣಿರಾಮರಾಯದಾಸರು
ನೀಲ ಗಗನ ನಿಭ ನಿರ್ಮಲಗಾತ್ರನೆ ಪ ಬಾಲಶಶಾಂಕನ ಪೋಲ್ವ ಸ್ವಾಮಿ ಬಾಲಶಶಾಂಕನ ಪೋಲ್ವ ನೀಲಕುಂತಳ ಪರಿಶೋಭಿತ ಫಾಲಕೆ ಕುಂಕುಮವ ಹಚ್ಚುವೆನು 1 ನಳಿನ ನಯನ ಕೋಮಲ ಕಮಲಾನನ ಚಲುವ ಕರಂಗಳ ತೋರೋ ಸ್ವಾಮಿ ನಳಿನವ ಪೋಲುವ ಚಲುವ ಕರಕೆ ನಾ ನರಿಸಿನ ಹಚ್ಚುವೆನೀಗ ಸ್ವಾಮಿ 2 ಅಂಬುಜನಾಭನೆ ಅಂಬುಧಿ ಗಂಭೀರ ಶಂಬರಾರಿ ಶತತೇಜ ಸ್ವಾಮಿ ಕಂಬುಕಂಧರ ತೋರು ಸಂಭ್ರಮದಲಿ ನಾ ಗಂಧವ ಹಚ್ಚುವೆನೀಗ ಸ್ವಾಮಿ 3 ಸುಮಶರ ಜನಕನೆ ಸುವಶರ ವೈರಿಯ ಕಾರ್ಮುಕ ಭಂಜಕ ಸ್ವಾಮಿ ಸಮ ವಿರಹಿತ ನಿನ್ನ ಕೊರಳಿಗ್ಹಾಕುವೆನೀಗ ಕುಸುಮ ಮಾಲೆಯ ನಾನು ಸ್ವಾಮಿ 4 ವಾರಿಧಿ ಚಂದ್ರಮನೆ ಧೀರ ವೀರ ದಿತಿಜಾರಿದೇವ ಶ್ರೀರಘುವೀರ ಶ್ರೀ ಕರಿಗಿರೀಶನೇ ನಿಮ ಗಾರತಿ ಎತ್ತುವೆ ಸ್ವಾಮಿ 5
--------------
ವರಾವಾಣಿರಾಮರಾಯದಾಸರು
ನೆಚ್ಚದಿರು ಸಂಸಾರ ಕಡೆಗೆ ಹಾಕುವುದಲ್ಲ ಮಚ್ಚುಗೊಳಿಸುವುದು ವಿಷಯದಲಿ ಎಚ್ಚತ್ತು ಪ್ರವರ್ತಿಸು ಇನ್ನಾದರೂ ಸಿರಿ- ಅಚ್ಯುತನ ಪಾದವನು ನಂಬೊ ಪ್ರಾಣಿ ಪ ಪುಂಪೆಣ್ಗಳಿಂದ ಪುಟ್ಟಿದ ದೇಹವನು ತಿಳಿ ಕೆಂಪು ಬಿಳಿದಿನ ವರ್ಣ ಮಿಳಿತ ಇಂಪಾಗಿದೆಯೆಂದು ಹಿಗ್ಗದಿರೆಲವೊ ಹೊಲೆ- ಗಂಪು ನಾರುವುದು ಅದ ತೊಳೆಯದೆ ಇರಲು 1 ಜನಿಸಿದಾಕ್ಷಣ ಕಾಯು ಕಡಮೆಂದು ತಿಳಿಯದಲೆ ಜನನಿ ಜನಕರು ಸುಖಿಸುತಿಹರು ತನುಭ್ರಮಣವಲ್ಲದೆ ಚಿದ್ರೂಪ ಬಲ್ಲರೆ ಕೊನೆಗೆ ಏನಾಗುವುದೊ ಪ್ರಾಣಿ 2 ಗಳಿಸಿ ಧನ ತರುವಾಗ ಸುತ್ತ ನೆರೆದಿಹರೆಲ್ಲ ಭಳಿರೆ ಇವ ಮಹಾತ್ಮನೆಂದು ಘಳಿಗೆ ತೊಲಗಲು ಧನವು ಕರಗಿ ತಿಂದು ಪೋಗಿ ಹಳಿದು ಹಲ್ತೆರೆದು ಅಣಕಿಪರೋ-ಪ್ರಾಣಿ 3 ಹುಬ್ಬಿನಿಂದಲೆ ಹೊಡೆದು ಹೃದಯದ ಕಗ್ಗಂಟು ಕಬ್ಬು ಕಾರ್ಮುಕನಿಂದ ಬಿಡಿಸಿ ಉಬ್ಬಿಸ್ಯುಕ್ಕಿನ ತಂತಿಯಂತೆ ಮಾತುಗಳಾಡಿ ಉಬ್ಬಸವ ಬಡಿಸುವಳೊ ನಾರಿ ಪ್ರಾಣಿ 4 ಯೌವನವೊದಗಿದಾಗ ಏನೆಂದರೂ ಅಪ್ಪ ಅವ್ವಣ್ಣನೆಂದು ನಸುನಗುತ ಗವ್ವಳಿಕೆ ವೃದ್ಧಾಪ್ಯ ಬಂದೊದಗಲು ಇವನ ಬವ್ವನ ತೆರೆದಲಾಡಿಪರೋ-ಪ್ರಾಣಿ 5 ನಿಷ್ಠಕ್ಕೆ ದೇಹವನು ಮಾಡಿಕೊಂಡಂತೆ ನೀ ದುಷ್ಕರ್ಮಕೊಳಗಾಗದಿರೆಲೋ ನಿಷ್ಕಂಟಕವಾದ ಮಾರ್ಗದಲಿ ನರಹರಿಯ ನಿಷ್ಕಾಮದಲಿ ಭಜಿಸೊ ಮನವೆ ಪ್ರಾಣಿ 6 ಅಂ¨ಲಿಗೆ ಗೃಹಪಾಲ ಮನೆ ಮುಂದೆ ಹಗಲಿರುಳು ಹಂಬಲಿಸಿ ಬಿದ್ದಂತೆ ನೀನು ಕವಿ ಜೋತು ಬಿದ್ದು ಈ ಡಿಂಬವನು ಪೋಷಿಸದಿರೆಲವೊ-ಪ್ರಾಣಿ 7 ದೇಹಕ್ಕೆ ಬಲವಾಗಬೇಕೆಂದು ಎಲ್ಲರೊಳು ಕಂಡಲ್ಲಿ ಸ್ನೇಹಭಾವವನ್ನು ಬಯಸಿ ಕಾಯ ಪುಷ್ಟಿಯಿಂದ ಮೋಹಕ್ಕೆ ಒಳಗಾದೆಯಲ್ಲೋ-ಪ್ರಾಣಿ8 ಸ್ವಲ್ಪ ದಿನವುಳಿಯಿತು ಒಂದು ಸಾಧನ ಕಾಣೆ ಕಲ್ಪಾಯು ನಿನಗಿಲ್ಲವಲ್ಲೊ ಬಲ್ಪಂಥಗಳ ಮಾಡಿ ಭೋಗಪಡದಿರು ನಾಗ- ತಲ್ಪನ್ನ ಮೊರೆಹೋಗಲೋ-ಪ್ರಾಣಿ9 ದೇಶ ದೇಶವ ತಿರುಗಿ ಬಳಲಿ ಬಾಯಾರಿ ನೀ ಕ್ಲೇಶಕೊಳಗಾಗಿ ಹೊನ್ನುಗಳ ಏಸೇಸು ತಂದದ್ದು ಏನಾಯಿತೋ ಒಂದು- ಕಾಸು ನಾಳೆಗೆ ಕಾಣೆಯೋ-ಪ್ರಾಣಿ10 ಎಂದಿಗಾದರೋ ಇದೇ ಸಂಸಾರ ವಿಸ್ತಾರ ಒಂದಕ್ಕೆ ಒಂದೊಂದು ಅಧಿಕ ಬಂಧನವಲ್ಲದಲೆ ಲೇಶ ನಿರ್ಮಲ ಕಾಣೆ ಪೊಂದು ಸಜ್ಜನರಲ್ಲಿ ಮಂದ-ಪ್ರಾಣಿ11 ನಿತ್ಯ ಗಂಡಾಂತರದಿ ಬಿದ್ದು ಸಕಲಕ್ಕೆ ಕರ್ತೃ ನಾನೆಂದು ಕೂಗುವಿಯಲೊ ಮೃತ್ಯು ನಗುವುದು ನಿನ್ನ ಹೆಡತಲೆಯಲಿ ನಿಂದು ಚಿತ್ತದಲ್ಲಿ ತಿಳಿದು ತಲೆ ಬಾಗೊ-ಪ್ರಾಣಿ 12 ದೊಡ್ಡವನು ನಾನು ಎನಗೆಲ್ಲ ಜನರು ಬಂದು ಅಡ್ಡಬೀಳುವರೆಂಬ ಮಾತು ಹೆಡ್ಡತನ ತಾಳದಿರು ಕೊನೆಗೆ ಅನುಭವಕ್ಕು ಕಡ್ಡಿಯಂದದಿ ಮಾಳ್ಪರೋ-ಪ್ರಾಣಿ 13 ಕೋಟಿಯಾದರು ಕೇಳು ಅವರೋಕ್ಷಿಗಾದರೂ ಕೋಟಲೆಯೊಳಿರದೆ ಗತಿಯಿಲ್ಲ ತಾಟತೂಟಕ ಮಾಡಿ ಅವರಂತೆ ನುಡಿದು ಭವ ದಾಟಬೇಕೋ ಬೇಗ ಜಾಣ-ಪ್ರಾಣಿ14 ಆದರಿಸಿ ಸತಿಸುತರು ಬಂಧು ಬಳಗಕ್ಕೆ ಸಂ ಪಾದಿಸಿ ಧನ ಧಾನ್ಯ ತಂದು ಮೋದಪಡಿಸುವೆನೆಂದು ವಾದಿಸುವ ಮನುಜನ್ನ ಪಾದಕ್ಕೆ ಶರಣು ಸಾರೆಲವೋ-ಪ್ರಾಣಿ 15 ವನಧಿಯೊಳು ಸಪ್ತದ್ವೀಪದ ಮೃತ್ತಿಕೆ ಹಾಕೆ ದಣುವಿಕ್ಯಲ್ಲದೆ ಪೂರ್ಣವಹುದೆ ಇನಿತು ತಿಳಿಯೆಲ್ಲೆಲ್ಲಿ ತಂದ ಧನದಿಂದ ಭವ- ವನಧಿ ತುಂಬದು ಕಾಣೊ ಮರುಳೆ-ಪ್ರಾಣಿ 16 ನಿತ್ಯ ಬರೆದ ಲೆಖ್ಖವು ದಿವಾ ರಾತ್ರಿ ನೋಡುತಲಿದ್ದು ನಿನ್ನ ಪತ್ರ ಕರದಲಿ ಪಿಡಿದು ಈ ಮೂರ್ಖ ನರಮಹಿಷ- ಪುತ್ರನೆಂದು ನಸುನಗುವರಲ್ಲೋ-ಪ್ರಾಣಿ 17 ಎನಗೆ ತನಗೆಂದು ಯಮಭಟರು ಕರಗಳ ಹೊಯಿದು ಕಣಿದು ಭುಜ ಚಪ್ಪರುಸುತಿಹರೊ ಅನಿತರೊಳಗೆಚ್ಚರಿಕೆ ಎಚ್ಚತ್ತು ಹರಿಚರಣ ವನಜ ಧಾನ್ಯವ ಒಲವು ಮಾಡೊ-ಪ್ರಾಣಿ 18 ಶ್ರುತಿಗೆ ಅಪ್ರಾಮಾಣ್ಯ ಬಾರದಂತೆ ಮಧ್ವ ಮತಕೆ ವಿರೋಧವಾಗದಂತೆ ಕ್ಷಿತಿಯೊಳಗೆ ಸುಜನರಿಗೆ ಹಿತವಾಗುವಂತೆ ಶ್ರೀ- ಪತಿಯ ಸೇವಿಸಿ ಸುಗತಿ ಪಡೆಯೋ-ಪ್ರಾಣಿ 19 ಅರ್ಥಬಾರದು ನಿನ್ನ ಸಂಗಾತ ಕೇಳ್ ಕೊನೆಗೆ ವ್ಯರ್ಥಧಾವತಿ ಪ್ರಾಪ್ತಕರ್ಮ ತೀರ್ಥಯಾತ್ರೆಯ ಮಾಡಿ ನಿಸ್ಸಂಗನಾಗು ಯ_ ಥಾರ್ಥಾ ಜ್ಞಾನದಿಂದ ಬಾಳೊ ಪ್ರಾಣಿ20 ಶಿಥಿಲವಾಗಿ ಪೋಪ ದೇಹಕೆ ಮಮತಿಂದ ಮಿಥುನ ಭಾವಗಳನ್ನೆ ಬಯಸಿ ವ್ಯಥೆಪಟ್ಟು ಪಥತಪ್ಪಿ ನಡೆದು ನರಹರಿ ಸುಗಣ ಕಥೆಗೆ ವಿಮುಖನಾಗದಿರೆಲೊ-ಪ್ರಾಣಿ 21 ವನಗಿರೀ ನದಿ ಮೆದೆ ಹೊದರು ಗಹ್ವರ ಹುತ್ತ ವನರಾಶಿ ದ್ವೀಪ ಪಾತಾಳ ತನು ಮತ್ರ್ಯ ಸುರಲೋಕ ಜನನಿ ಜಠರದೊಳಿರಲು ಅಣು ಮಾತ್ರ ತಪ್ಪುವುದೆ ಬರಹ ಪ್ರಾಣಿ 22 ಹಲವು ಹಂಬಲ ಸಲ್ಲ ಆದ್ಯಂತಕಾಲದಲಿ ಗಳಿಸಿಕೋ ಪೂರ್ಣಾಯು ವಾಯು ಒಲಿಯದಲೆ ನಿನ್ನೊಳಗೆ ವಿಜಯವಿಠ್ಠಲರೇಯ ಸುಳಿಯ ಜಾಗ್ರತನಾ ಗೆಲೋ ಪ್ರಾಣಿ 23
--------------
ವಿಜಯದಾಸ
ನೇತ್ರ - ತ್ರಯನೇ | ಅಹಿಪದ ಪಾತ್ರಾ ||ಗೋತ್ರಾರಿ ಪಂಕೇರುಹ ಮಿತ್ರಾ | ಸ್ತೋತ್ರ ಪಾತ್ರ ಶತಪತ್ರ ಪ ಚಿತ್ರ ಚರಣ ಭುವನತ್ರಯ ದೊಳಹಂತತ್ವ ವ್ಯಾಪ್ತ ಗೌರವ ಗಾತ್ರಾ ಅ.ಪ. ಸ್ಥಾಣು ವೃಷಭೇಕ್ಷಣ ನೀರಕ್ಷ 1 ಪಾವಕ ಶ್ವೇತ ಗಿರೀಶ ಉಗ್ರೇಶ 2 ಸಿರಿ ಲೋಲನ ತೋರ್ವುದು3
--------------
ಗುರುಗೋವಿಂದವಿಠಲರು
ಪದುಮನಾಭನ ಚರಿತೆಯು ಪರಮಾದ್ಭುತವು ಪ ಯದುಕುಲ ಲೋಲನ ವಿಧ ವಿಧ ಲೀಲೆಯೊ ಪದೇ ಪದೇ ನೆನೆಯಲು ಪರಮಹರುಷ ಮನಕೆ ಅ.ಪ. ದೇವತೆಗಳ ಮೊರೆ ಲಾಲಿಸಿ ಭುವಿಯೊಳು ದೇವಕಿ ಸುತನಾಗಿ ಜನಿಸಿದನು ಗೋವಳರೊಡಗೂಡಿ ಗೋವ್ಗಳ ಕಾಯ್ದ ಬೃಂ ದಾವನ ಲೋಲನು ಶ್ರೀವೇಣುಗೋಪಾಲ 1 ಕಾಮಜನಕ ಸರ್ವಕಾಮಿತದಾಯಕ ಕಾಮಿನಿಯರ ಕೂಡೆ ಕ್ರೀಡಿಸಿದನನಘ ಆ ಮಹಾಭಕ್ತ ಅಕ್ರೂರನಿಗೊಲಿದನು ತಾಮಸ ಕಂಸನ ಧ್ವಂಸಗೈದನು ದೇವ 2 ಕರಿಗಿರೀಶ ಮುಚುಕುಂದ ವರಪ್ರದ ಸರಸಿಜಾಕ್ಷ ಶ್ರೀರುಕ್ಮಿಣಿರಮಣ ಸುರರಿಪು ನರಕಾಸುರ ಸಂಹಾರಕ ಸುರಮಾತೆಗೆ ಕುಂಡಲಿಗಳನಿತ್ತನು 3
--------------
ವರಾವಾಣಿರಾಮರಾಯದಾಸರು