ಒಟ್ಟು 319 ಕಡೆಗಳಲ್ಲಿ , 74 ದಾಸರು , 283 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮದೇವರ ಸ್ತೋತ್ರ* ಮಟ್ಟತಾಳ ಕಂಬು ವಿಹಂಗ ಗಮನ ವಿಭುವೆನಂಬಿದವರ ಪೊರೆವ ವ್ಯಾಸವಿಠಲ ನೀ-ನೆಂಬುವರನ ನಂಬಿದ ನೀಚನ ಮರಿಯಾದಿರು 2 ತ್ರಿವಿಡಿತಾಳ ಜಿಹ್ವೆ ನುಡಿಯದುಸವಿಯದ ನಾನಾ ರಸವನುಂಡು ಬಹುಕಾಲಸವೆದು ಪೋದವು ನಟ್ಟ ಮನವು ಇನ್ನು ತಿರಗದುತವ ವಿಸ್ಮøತಿಯಲಿಂದ ಭೂ ವನದೊಳಿದ್ದ ಮಾ-ನವರ ಚರಿಯದಲಿ ಕೋಪವೆ ತಗ್ಗದುಎವೆ ಇಡುವಿನಿತು ಕಾಲವಾದರು ಪೂಜಾವಿವರದಲ್ಲಿಗೆ ಚಿತ್ತವು ನಿಲ್ಲದು ಭವವಿದೂರನೆ ಕೇಳುಕವಲ ಬುದ್ಧಿಯಲಿಂದ ನವನವ ರೂಪದ ಯುವತಿಯರನಿವಹದ ಅನುಭವ ದ್ವಿವಿಧವಿಂದಿಗೇ ಕಾ-ಯವ ನೋಡಲಿದ್ದಂತೆ ಇಲ್ಲದಂತೆಧ್ರುವದಲಿ ನುಡಿವೆ ಎನ್ನವಗುಣವಿನ್ನೊಂದುಭವಸಾಗರವ ದಾಟಿಸುವ ಜ್ಞಾನಿಗಳ ಪ್ರೀತಿಯನೆ ತ-ಗ್ಗುವಂತೆ ಚತುರ ತೋರುವೆಇವುಗಳಿಂದಾಗುವ ಜನನ ಬಾಧಿಯ ಬಲ್ಲೆಜೀವರಲ್ಲಿ ಹೀನ ಜನ್ಮವ ಬರುವದು ಬಲ್ಲೆಸ್ಥಾವಿರಾಯ ವ್ಯಾನಾದಿ ನೆಗುವವು ಪುಣ್ಯಾಖ್ಯಗಿರಿಗೆಪವಿಯಂಬದನುಗಾಲ ಪಠಿಸಬಲ್ಲೆಪವನನಂತರ್ಯಾಮಿ ಶ್ರೀವ್ಯಾಸವಿಠಲ ಇಂಥಅವಿವೇಕ ಮನುಜಂಗೆ ಆವಗತಿಯಾಗುವದೊ 3 ಅಟ್ಟತಾಳ ಅನ್ಯಾಯ ನಡತಿಗಳ ಚರಿಸುತಲಿಪ್ಪಮನುಜಾಧಮನಿಗೆ ಮಹಿಯೊಳಗೆ ವಿಪ್ರಜನ್ಮವ ನೀನಿತ್ತದಾವ ಬಗೆಯ ಕಾಣೆಇನ್ನೀಗ ಮಾಡುವ ಅನ್ಯಾಯ ನಡತಿಯುತಣ್ಣನ ಕಿಡಿಯಂತೆ ತತ್ಕಾಲಕಿಪ್ಪದುಘನ್ನ ಬವಣೆ ಮುಂದೆ ಅನುಭವವೇ ನಿಜಪನ್ನಗ ಶಯನ ಶ್ರೀ ವ್ಯಾಸವಿಠ್ಠಲ ಸುಪ್ರಸನ್ನ ವದನ ದೇವ ನಿನ್ನ ಪಾದವೆ ಗತಿ 4 ಆದಿತಾಳ ಪಾದ ಚೆನ್ನಾಗಿ ಪೊಂದಿಸಿನಿನ್ನವನಿವನೆಂದು ಮನುಜರಿಂದ ನುಡಿಸಿನಿನ್ನ ಕೀರ್ತನೆಯ ವದನದಿಂದ ಪೇಳಿಸಿಇನ್ನು ಈ ಬಗೆ ಮಾಳ್ಪರೆ ಘನ್ನದಯಾಂಬುಧೇಮನ್ನ ವಾಚ ಕಾಯದಿ ಅನ್ಯಾಯ ಪೆಚ್ಚಿಸದೆಎನ್ನ ಬೆಳವಿಗೆಯಂತೆ ಬೆಳಸದಂತೆ ಮಾಡಿದೆಮನ್ನಣಿಸುವ ಜನರಿಂದ ಮಾಂದ್ಯವ ಮಾಡಿಸಿದೆಸನ್ಯಾಯವಲ್ಲ ಧೊರಿಯೆ ನಿನ್ನ ಚಿತ್ತವೊ ಸ್ವಾಮಿಸನ್ಮುನಿಗಣ ಪ್ರೀಯ ವ್ಯಾಸವಿಠ್ಠಲರೇಯಾನಿನ್ನವರವನೊ ನಿನ್ನ ಸರಿ ಬಂದ ಬಗೆ ಮಾಡೊ 5 ಜತೆ ವೇಣುಗೋಪಾಲ ದಾಸರ ಮನ ಮಂದಿರಾ |ಪ್ರಾಣ ನಿನ್ನದೊ ವ್ಯಾಸವಿಠ್ಠಲ ಗೋಪಾಲಕೃಷ್ಣ ||
--------------
ವ್ಯಾಸವಿಠ್ಠಲರು
ಭಜಿಸಿದ್ಯಾ | ವೆಂಕಟನಾ ನೀ | ಭಜಿಸಿದ್ಯಾ ಪ ಭಜಿಸಿದ್ಯ ಈ ಭಾಗ್ಯನಿಧಿಯ | ನೋಡು | ತ್ರಿಜಗವಂದಿತ ಗುಣಾಂಬುಧಿಯಾ ||ಆಹ|| ಪಂಕಜ ಕರ್ಣಿಕೆ ವಾಸ | ಅಜ ಸುರಾರ್ಚಿತ ಪಾದರಜ ತಮದೂರನ್ನ ಅ.ಪ. ಮನ ಸೋಲಿಸುವ ಸುಲಲಾಟ | ಚನ್ನ | ಫಣಿಗೆ ಕಸ್ತೂರಿನಾಮ ಮಾಟ | ನ ಮ್ಮನು ಪಾಲಿಸುವ ವಾರೆನೋಟ |ಆಹ| ಕನಕ ಮೋಹನ ಕುಂಡಲಾ ಕರ್ಣ ಮಿನುಗುವ ಕದವು ಆವಿನ ಸೋಲಿಪ ನಿತ್ಯಾ1 ಭೃಂಗಕುಂತಳ ನೀಲಕೇಶ | ಹುಬ್ಬು | ಚಾಪ ವಿಲಾಸ | ಉ | ತ್ತುಂಗ ಚಂಪಕ ಕೋಶನಾಸ | ರಸ ರಂಗು ತುಟಿ ಮಂದಹಾಸ || ಆಹ || ತಿಂಗಳು ಯೆಳೆ ಬೆಳೆದಿಂಗಳು ಮೀರಿ ಭೂ ಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳವೀಳ್ಯ ಕರ್ಪೂರ | ಇಟ್ಟು | ಜಲಧಿ ಗಂಭೀರ | ದಂತ ಪರಿಪಜ್ಞೆ ಸಮ ವಿಸ್ತಾರ ||ಆಹ || ಮಿನುಗುವನಂತ ಚಂದೀರ ತೇಜಾಧಿಕ ಮುಖ ಪರಿಪರಿ ವೇದ ಉಚ್ಚರಿಸುವ ಚತುರಾರ 3 ಬಕುಳಾರವಿಂದ ಮಲ್ಲೀಗೆ | ಅದು | ಕುರುವಕ ಪನ್ನೀರು ಸಂಪಿಗೆ | ಭೂಚಂಪಕ ಜಾಜಿ ಯಿರುವಂತಿಗೆ | ಪೂಕೇತಕಿ ಮರುಗ ಶಾವಂತಿಗೆ ||ಆಹ|| ಸಕಲ ಪೂತರುವಿರೆ ವಿಕಸಿತ ಮುಕುಳಿತ ಮಕರಂದ ಮೊರದ್ವಂದ್ವ ಕಸ್ತೂರಿಯ ನಿಂದು4 ಕರತಾಳರೇಖೋಪರೇಖ | ಕಾಂತಿ | ಅರುಣಸಾರಥಿ ಮಯೂಖ | ಬೇರೆ | ಪರಿ ಶೊಭಿತ ಹಸ್ತ ಶಂಖ | ಗದೆ | ಧರಿಸಿದ ಚಕ್ರ ನಿಶ್ಶಂಕ || ಆಹ | ಸರಿಗೆ ಕೌಸ್ತಭಮಣಿ ಸಿರಿವತ್ಸವನ ಮಾಲೆ ವೈಜಯಂತಿ ಮಂಜರಹೀರ ಹಾರನ್ನ5 ಕಡಗ ಕಂಕಣ ಮುದ್ರೆ ಬೆರಳ | ಪಾಣಿ | ನಿಡಿತೋಳ ಕಕುಭುಜಿ ಕೊರಳ ಸ್ಕಂಧ ವಿಡಿ ಸಪ್ತವರಣ ವಿಸರಳ | ಬೆನ್ನು | ಮುಡಿಯವಿಟ್ಟ ಮಣಿಹವಳ ||ಆಹ | ಝಡಿತದ ಪವಳ ವಡಸೀದ ಕೇಯೂರ ವಡನೆ ಕಾಯಿಕ ಕೀರ್ತಿ ವಡಲೀಲಿ ಮೆರೆವನ್ನ6 ಮುತ್ತು ವೈಢೂರ್ಯ ಪ್ರವಾಳ | ಪಚ್ಚೆ | ಕೆತ್ತಿದ ಪದಕನ್ಯಾವಳ ಸುತ್ತ ಸುತ್ತಿದ ಸನ್ಮುಡಿವಾಳ | ಇತ್ತ ತುತಿಪ ಜನಕೆ ಜೀವಾಳ ||ಆಹ || ಪ್ರತ್ಯೇಕವಾಗಿ ತೂಗುತ್ತಿಹ ಸರಗಳ ಸುತ್ತುಲಸಿಯ ಮಾಲೆ ಚಿತ್ರವಾಗಿರೆ ಬಹಳ 7 ಕೇಸರಿ ಅಂಬರ | ಗೋರೋ ಚನ ನಖಚಂದ ನಗಾರು | ಪೆಚ್ಚಿ | ತೆನೆ ಮೃಗನಾಭಿ ಪನ್ನೀರ | ವೆಳ | ಘನಪರಿಮಳ ಗಂಧಸಾರ ||ಆಹ || ಸೊಗಸು ಸಲಿಸುತ್ತ ಒಪ್ಪುವ ಘನರುಹ ತ್ರಿವಳಿಯಾ 8 ತ್ರಿವಳಿ ಉಪಗೂಢ ಜಠರ | ಅಖಿ | ಳಾವನೀ ಧರಿಸಿದಾ ಧೀರಾ | ಮೇಲೆ | ಕುಸುಮ ಮಂದಿರಾ | ಮೃಗದೇವ ಉಡಿನಡು ಧಾರಾ ||ಆಹ || ಭಾವ ಕಿಂಕಿಣಿ ತೋಳಲಿವಾಸನಾ ಬಿರು ದಾವಳಿಕೊಂಡರು ದೈತ್ಯಾವಳಿ ಹಾರನ್ನಾ 9 ಊರು ಜಾನು ಜಂಘ ಗುಲ್ಫ | ವಿ ಚಾರ ಶಕ್ರ ಮಾತು ಅಲ್ಪ | ಎನ್ನ ತೋರುನೆಯ ಅಗ್ರ ಸ್ವಲ್ಪ | ಗುಣ | ಸಾರಮಾಡಿಪ್ಪ ಸಂಕಲ್ಪ ||ಆಹ || ವಾರಣಕರದಂತೆ ಹಾರೈಸು ಈ ತನೂ ಪುರ ಕಡಗಾ ಗೆಜ್ಜೆ ಚಾರುಚರಣ ಪೆಂಡ್ಯಾ10 ಪಾದ | ಪಾಪ ಪಾದ | ಕಾಮ ಪಾದ | ಬಹು ಪಾದ ||ಆಹಾ|| ಅನಂತ ಚಿನ್ಮಯ ಒಮ್ಮೆ ನೀನೇ ಗತಿಯೆಂಬ ಮಾನವಗೆ ಬಂದು ಕಾಣಿಸಿಕೊಂಬನ11 ಮೃದುತಾಳಾಂಗುಲಿನಿಸಿ ಭಾಸ | ರಕ್ತ ಪದತಳ ಧ್ವಜ ವಜ್ರಾಂಕುಶ | ಚಕ್ರ ಪದುಮ ಚಿಹ್ನೆ | ನಿರ್ದೋಷ | ಸುಧಿ ಸುಧ ಕಥಾಪಾಠ ಸರಸÀ ||ಆಹ|| ತ್ರಿದಶನಾಯಕ ಶಿವ ವಿಧಿಗಮುಗುಟ ಪಾದದಲಿ ಸಮರ್ಥವಾದರು ನೋಡು ತರುವಾಯ 12 ಆಪದ್ರಕ್ಷಕ ಸುರಾಧ್ಯಕ್ಷ | ಜಗ | ದ್ವ್ಯಾಪಕ ಕರುಣಾಕಟಾಕ್ಷ | ಜಾಗ್ರತ್ | ಸ್ವಪ್ನದಲಿ ನೀನೆ ದಕ್ಷಾ | ನಗೆ | ಆಪನ್ನರಿಗೆ ನೀನೆ ವೃಕ್ಷಾ ||ಆಹ || ರೂಪರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ಮೌಳಿ ಪರಿಯಂತರ ನೀನು 13 ಹಿಂದಾಣ ಅನುಭವ ಧಾನ್ಯ | ಲೋಹ | ತಂದು ಸಂಪಾದಿಸೋ ಜ್ಞಾನ | ಭಕ್ತಿ | ಯಿಂದ ಮುಂದಕೆ ನಿಧಾನ | ಚಿತ್ತ | ಯಿಂದು ಕೊಂಡಾಡೋ ಮುನ್ನೀನ ||ಆಹ|| ಬಂಧನ ಹರಿಸಿ ಆನಂದಾವ ಕೊಡುವ ಮು- ಕುಂದ ಅನಿಮಿತ್ತ ಬಂಧು ವೆಂಕಟನಾ ನೀ14 ನಿತ್ಯ | ನೀಲ | ಪುಣ್ಯ | ವ್ರಜವ ಪಾಲಿಸುವ ವಿಶಾಲ | ವಿತ್ತು | ನಿಜದೊಳಗಿಡುವ ಈ ಕೋಲ ||ಆಹ|| ವ್ರಜದಲ್ಲಿ ಪುಟ್ಟಿದ ಸುಜನಾರಾಂಬುಧಿ ಸೋಮ | ವಿಜಯವಿಠ್ಠಲರೇಯ ಗಜರಾಜವರದನ್ನ 15
--------------
ವಿಜಯದಾಸ
ಭಜಿಸಿದ್ಯಾ ಈ ಭಾಗ್ಯನಿಧಿಯಾ ನೋಡು ಸುಜನರ ಹೃದಯ ಪಂ ರಜತಮೋ ದೂರನ್ನ ಪ ಮನ ಸೋಲಿಸುವ ಲಲಾಟ ಫಣಿ ನಮ್ಮನು ನೋಡುವ ವಾರೆ ನೋಟಾ ಹಾಹಾ ಮಕರ ಕುಂಡಲ ಕರ್ಣ ಕದಪು ಆವಿನ ಸೋಲಿಸೆ ನಿತ್ಯಾ 1 ಭೃಂಗ ಕುಂತಳ ಕೇಶಾ ಪುಬ್ಬು ಅಂಗಜ ಚಾಪಾ ವಿಲಾಸ ಉ ತ್ತುಂಗ ಚಂಪಕ ಕೋಶಾ ನಾಸಾರಸಾ ರಂಗುದುಟಿಯ ಮಂದಹಾಸಾ ಹಾಹಾ ತಿಂಗಳ ಎಳೆ ಬೆಳ ದಿಂಗಳಾ ಮೀರೆ ಭೂ ಮಂಗಳಾಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳ ವೀಳ್ಯೆ ಕರ್ಪುರಾ ವಿಟ್ಟಾ ಜಲಧಿ ಗಂಭೀರಾ ದಂತ ಪರಿಪಙË್ತ ಸಮ ವಿಸ್ತಾರ ಹಾಹಾ ಮಿರುಗುವಾನಂತ ಚಂ ಚರಿಸುವ ಚತುರನ್ನ 3 ಪನ್ನೇರು ಸಂಪಿಗೆ ಪೊಂಗೇ ಜಾಜಿ ಇರುವಂತಿಗೆ | ಹಾಹಾ | ಮಕರಂದಾ ಮಾರಂದೋದಕ ಸುರಿಯಲಿಂದು4 ನಿಡಿದೋಳು ಕಕುಭುಜಾ ಕೊರಳಾ ಸ್ಕಂಧಾ ಮಣಿ ಹರಳಾ | ಹಾಹಾ| ಒಡನೆ ತಾಯಿತ ಕೀರ್ತಿ ವಡಿವೇಲಿ ಮೆರೆವನ್ನ 5 ಸುರವಿ ಮಯೂಖಾ ಮೇಲು ಧರಿಸಿದ ಚಕ್ರಾದಿ ಶಂಖಾ | ಹಾಹಾ | ಕೌಸ್ತುಭ ಮಣಿ ಸಿರಿವತ್ಸ ವನಮಾಲಾ ಉರವೈಜಯಂತಿ ಮಂದಾರ ಹೀರ ಹಾರನ್ನ6 ಮುತ್ತು ವೈಢೂರ್ಯ ಪ್ರವಳಾ ಪಚ್ಚ್ಚೆ ಕೆತ್ತಿದ ಪದಕ ನ್ಯಾವಳಾ ಸ್ತುತಿಪ ಜನಕೆ ಜೀವಾಳಾ | ಹಾಹಾ | ಪ್ರತ್ಯೇಕವಾಗಿ ತೂಗುತಿಹ ಸರಗಳು ತತ್ತುಲಸಿಧಾಮ ಚಿತ್ರವಾಗಿರೆ ಬಲು 7 ನಖ ಚಂದನಾ ಅಗರಾ ಪಚ್ಚೆ ಘನ ಪರಿಮಳ ಗಂಧ ಸಾರಾ | ಹಾಹಾ | ತನುವಿಗೆ ತನುವು ಲೇಪನವಾದಾ ಸೊಗಸು ವಾ ಸನೆ ಸುತ್ತ ಘಮಘಮ ತನರು ಹಾವಳಿ ತಿಳಿ 8 ತ್ರಿವಳಿ ಉಪಗೂಢ ಜಠರಾ ಅಖಿಳಾವನಿ ಧರಿಸಿದ ಧೀರಾ ನಾಭಿ ಕುಸುಮ ಮೃಗ ದೇವ ಉಡಿ ಉಡದಾರಾ | ಹಾಹಾ | ಭವಕಿಂಕಿಣಿ ತಳಲಾವಿ ವಸನ ಬಿರು ತೊಡರು ದೈತ್ಯಾವಳಿ ಹರನನ್ನಾ 9 ಊರು ಜಾನು ಜಂಘೆ ಗುಲ್ಫಾ ವಿಚಾರಿಸೆ ಕ್ರಮಾತು ಅಲ್ಪಾ ತನ್ನ ಸಂಕಲ್ಪಾ | ಹಾಹಾ| ವಾರಣಾ ಕರದಂತೆ ಹಾರೈಸುಯಿಂತು ನೂ ಚಾರು ಚರಣ ಪೆಂಡೆ10 ನಖ ವಜ್ರಾಂಕುಶ ಚಕ್ರ ಸುಧಿಯಾ ಸುರಿವ ಪೀಠ ಸರಸಾ | ಹಾಹಾ | ತ್ರಿದಶನಾಯಕ ಶಿವ ವಿಧಿಗಳ ಮುಕುಟ ಪಾದದಲಿ ಸಮ್ಮರ್ದವಾದುದು ನೋಡಿ ತರುವಾಯಾ 11 ದಹಿಸುವ ಪಾದಾ ಕಾಮ ಕಾನನ ದಹಿಸುವ ಪಾದಾ | ಹಾಹಾ | ಅನಂತ ದಿನಕ್ಕೊಮ್ಮೆ ನೀನೇ ಗತಿಯೆಂದಾ ಮಾನವಗೆ ಬಂದು ಕಾಣಿಸಿಕೊಂಬನ್ನ12 ಅಪದಕ್ಷ ಸಾರಾಧ್ಯಕ್ಷ ಸರ್ವವ್ಯಾಪಕ ಕರುಣಿಕಟಾಕ್ಷ ಜಾಗ್ರತ್ ಸ್ವಪ್ನದಲ್ಲಿ ಪ್ರಾಜ್ಞಾದಕ್ಷ ನಿಜ ಆಪನ್ನರಿಗೆ ದಾವಾ ವೃಕ್ಷ | ಹಾಹಾ | ರೂಪ ರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ರತುನ ಮೌಳಿಪರಿಯಂತರಾ13 ಸಂಪಾದಿಸು ಜ್ಞಾನಾ ಭಕ್ತಿ ಕೊಂಡಾಡು ಮುನ್ನಿನಾ | ಹಾಹಾ | ಬಂಧನ ಹರಿಸಿ ಆನಂದವ ಕೊಡುವ ಮು ಕುಂದ ಅನಿಮಿತ್ತ ಬಂಧು ವೆಂಕಟನ್ನ 14 ನಿತ್ಯ ಭಜಿಸುವ ಜನರಿಗೆ ಶೀಲಾ ಪುಣ್ಯ ನಿಜರೊಳಗಿಡುವ ಈ ಕೂಲಾ | ಹಾಹಾ | ವ್ರಜದಲಿ ಪುಟ್ಟಿದಾ ಸುಜನಾಂಬುಧಿ ಸೋಮ ವಿಜಯವಿಠ್ಠಲರೇಯಾ ಗಜರಾಜವರದನ್ನಾ 15
--------------
ವಿಜಯದಾಸ
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭರ್ತø ಭವನದಿ ಮಗಳೆ ಚಿರಕಾಲ ಸುಖಿಸೌ ಕರ್ತ ಶ್ರೀಹರಿ ಪದವನರ್ಥಿಯಿಂ ಭಜಿಸೌ ಪ ಪತಿಯೆ ಸಿರಿವರನೆಂದು ಅತಿಶಯದಿ ಭಾವಿಸುತ ಸತತ ಸೇವೆಯ ಮಾಡಿ ಗತಿಯೆ ನೀನೆನುತ ಸತಿಶಿರೋಮಣಿಯಾಗಿ ಮಿಗಿಲು ಮೋದವ ಪಡೆದು ಕ್ಷಿತಿಯೊಳಗೆ ನೀ ಬಾಳು ಮತಿವಂತೆಯಾಗಿ1 ಅತ್ತೆಮಾವಂದಿರನು ತಾಯಿತಂದೆಗಳಂತೆ ಅತ್ತಿಗೆ ನಾದಿನಿಯ ಅಕ್ಕತಂಗಿಯರೋಲ್ ಉತ್ತಮಳೆ ಭಾವನಂ ಮೈದುನನ ಸಹಜರೆಂ ದರ್ಥಿಯಿಂದರಿಯುತ್ತ ಉಪಚರಿಸುತಿರು ನೀಂ 2 ಬಂಧುಗಳ ನೀ ಬಹಳ ಪ್ರೇಮದಿಂ ಕಾಣುತ್ತ ವಂದಿಸುವುದೌ ಪರಮಭಾಗವತರಡಿಗೇ ಇಂದಿರಾದೇವಿಯೆಂದೈದೆಯ ಪೂಜಿಸೌ ಸುಂದರ ವಿದ್ವರ ಸುತರಕೂಡ 3 ಸರ್ವತ್ರದಲಿನೀನು ಹಿತವಚನ ಮಾಡುತ್ತ ನಿತ್ಯ ಪಡೆಯುತ್ತ ಗರ್ವವರ್ಜಿತೆಯಾಗಿ ಗುಣಮುಖಿಯು ಎಂದೆನಿಸಿ ಸರ್ವಕಾಲವು ಗೌರವ ಕೀರ್ತಿಯನು ಬೀರೌ 4 ಜಾಜಿಕೇಶವ ನಿನ್ನ ಸೌಭಾಗ್ಯವತಿಯಾಗಿ ಸಾಜದಿಂ ಸಲಹುವನು ಸುಜನವಂದಿತನು ಪೂಜಿಪರ ಮರೆಯದಿಹ ಶ್ರೀಹರಿಯ ಕರುಣದಿಂ ಈ ಜಗದಿ ರಾಜಿಸೌ ಪರಮಮಂಗಳೆಯೇ 5
--------------
ಶಾಮಶರ್ಮರು
ಭವ ಭಯದಾ ಕೊಳೆ ತೊಳೆÉದಾನಂದವೀವ ಸಾರಂಸಂಸಾರ ಸಾರಂ ಪ. ಸುಳಿದು ಯಮಭಟರೆಳೆಯುವ ಕಾಲದಿ ಪರಿ ಸಾರ ಮನುಜರು ಅ.ಪ. ಅಳಿದವರಾರು ಝಳಝಳ ಮನದಿಂ ಕಳೆಗೊಟ್ಟಿಹ ಪುರುಷನಾರುಂ ಸಲೆ ನಾರದರಲ್ಲದೆ ಯಿದನಂ ಸೆಳೆದುರೆ ಭಕ್ತಿಯೊಳ್ ಹರಿಯಂ ಅಳವಲ್ಲದಾನಂದದಿಂ ಹರಿ ಸುಳಿವ ಪೊಳೆವ ಮನದೊಳಗಿಹನೆನುತಂ ಸಾರಿ ಹರಿದನಂ ಸಾರಂ ಸಂಸಾರಂ 1 ಅರ್ಣವದೊಳು ಭವಾರ್ಣ ನಿರ್ಮಾಣನ ಕರ್ನದೊಳಾಲಿಸಿ ಧ್ವನಿಮಾಡಿ ನಿರ್ಣಯದಲಿ ಸ್ವರ್ಣರೂಪನ ಜೀರ್ಣಿಪ ವೀಣಾನಾದದೀ ಸಾರಂ ಕರ್ಣಾನಂದದಿ ಹಾಡಿದನಾರುಂ ವರ್ಣಾಶ್ರಮ ಧರ್ಮ ಮರ್ಮವರಿತು ಚರ್ಮಸುಖವಳಿದು ಪೂರ್ಣಜ್ಞಾನದ ಪುರಂದರದಾಸರಲ್ಲಿದೆ ಈ ಸಾರಂ ಸಂಸಾರಂ 2 ತರಲಾನಂದದಿಂ ಸರಿಗಮ ಪದನಿಸ ಸನಿದಪ ಮಗರಿಸ ಶೋಡಷಕ್ಷರದಿಂ ತರಲಾ ಸಂಗೀತಕೆ ಸರಳಾಗಿಹ ಹರಿ ನಾಮಾಮೃತವಂ ಧರಿಶಿದ ಪುರಂದರರಂ ಶರಣ ಭರಣ ಕರುಣ ಪಡೆವುದು ನಿರುತ ಹರಿ ಶರಣರೆನುತ ಅರುಹಿದ ಸಂಗೀತವೀ ಸಾರಂ ಸಂಸಾರಂ 3 ಈ ತೆರ ಭಜಿಸಿದಗ್ಯಾತರ ಭಯ ಪಾತಕಹರ ಜಗದೀಶ ಮಾನಸ ದಾತುರದೊಳು ಹರಿ ದಾತನೆಂದರಿತು ನೀತಾಚಾರದಿ ಯಾವಾತ ಸ್ತುತಿಸಲು ಜ್ಯೋತಿ ಪ್ರಕಾಶದಿ ತನುಜಾತನಾಗಿ ಬಹ ಪ್ರೀತಿಗೊಡುತ ಖ್ಯಾತ ಭಕ್ತ ಪಾರಿಜಾತನೆಂದು ತಿಳಿದಾತಗೆ ಇದು ಸಾರಂ ಸಂಸಾರಂ 4 ಭಗವಂತನ ಧ್ಯಾನಿಪನ ಪುಡುಕುತ ಮಿಗೆ ಸಂಚರಿಸುತಲಿಹರೀಗಲು ಭಾಗವತರಿದು ಸತ್ಯಂ ಜಗಕೆ ಜಗದೀಶ ಶ್ರೀ ಶ್ರೀನಿವಾಸನೆಂದು ಮಿಗೆ ಜಗದಾನಂದ ಪುಳಕಿತ ತನುವಿನ ಜೀವರ ಸೊಗವಿಲಿ ನಾಲ್ಮೊಗನೈಯ್ಯನು ಸಿಗುವ ಪರಿಯಗೊಡುತಗಣಿತ ಮಹಿಮರು ಕರುಣಿಸಿದೀ ಸಾರಂ ಸಂಸಾರಂ 5
--------------
ಸರಸ್ವತಿ ಬಾಯಿ
ಭವ ಸಂಕಟ ಪರಿಹರಿಸೊ ಕಿಂಕರನೆಂದೆನಿಸೊ ಪ ಶಂಕೆಯಿಲ್ಲದೆ ಪಾದಪಂಕಜ ಪೂಜಿಸಲೂಮಂಕುಮತಿಯ ಕಳೆವಾ ಅಕಳಂಕನೆಂದೆನಿಸುವಾ ಅ.ಪ. ಕಲಿಯುಗದೊಳು ಕಲಿ ಬಾಧೆಗೆ ಒಳಗಾಗಿ ಬಹುವಿಧವಾಗಿಒಲಿಸದೆ ವರಗುರು ಹಿರಿಯರ ನಿಂದಿಸುತಾ ವೇಳೆಗಳೆಯುತಾಗಳಿಸಿದೆ ಪಾಪವ ಚರಿಸುತ ಧರೆಯೊಳಗೆ ತೊಳಲುವೆ ತಮದೊಳಗೇಘಳಿಲನೆ ರಕ್ಷಿಸೊ ಬಾಲಕರನು ದೇವಾ ಎನ್ನಯ ಕುಲದೈವಾ 1 ಸಾಧನೆಗೋಸುಗ ಮೇದಿನಿಗೆ ಬಂದು ಸಾಧಿಸದೆ ಬಂದುಶೋಧಿಸುವೆನು ಪುರುಷಾರ್ಥದ ಮಾರ್ಗವನು ಮೋದವ ಪೊಂದುವೆನುಭೇದವ ತಿಳಿಯದೆ ಹಾದಿಯ ತಪ್ಪಿರುವೆ ಖೇದವ ಪುಡುತಿರುವೆಸಾದರದಲಿ ತವ ಪಾದದಿ ಧ್ಯಾನವನು ಒದಗಿಸಬೇಕಿನ್ನು 2 ಮಂದ ತಾಪ ಬಿಡಿಸೊ ಕರುಣವ ತೋರಿಸೊಆರು ಮೂರು ವಿಧ ಭಕ್ತಿಯನೆ ಈಯೋ ಕರಪಿಡಿದು ಕಾಯೋಸಾರುವ ಭಕುತರ ಧೀರ ವೃಂದದೊಳಗೆ ಸೇರಿಸೊ ಜವದೊಳಗೆಧಾರುಣೀಶ ತಂದೆವರದವಿಠಲನೆ ಶರಣೆಂಬೆನು ನಾನೇ 3
--------------
ಸಿರಿಗುರುತಂದೆವರದವಿಠಲರು
ಭವಭಯಹಾರ ನಮ್ಮ ಭು'ರಂಗಸ್ವಾ'ು ಗುರುವ ಭಜಿಸಿ ಪೂಜಿಪಬನ್ನಿ ಪಭಾಗವತೋತ್ತಮರು ಭಾಗ್ಯದಣ್ಣಯ್ಯಸುತರುಭೋಗತ್ಯಾಗವಮಾಡಿದ ಭಗವತ್ಸ್ವರೂಪರು 1ಸಾಧ್ವೀಗುರ್ರಮ್ಮಾಂಬಾ ಗರ್ಭೋದ್ಭವರಾಗಿಸದ್ವಿವೇಕವಕೊಟ್ಟು ಸರ್ವರ ಪೊರೆಯುವಾ 2ಸದ್ಗುರು ತುಲಸೀರಾಮರ ಸನ್ನಿಧಿಯೊಳ್ ಪ್ರತ್ಠಿಸಿಸದ್ವಿಲಾಸದೊಳು ಸಂಚರಿಸುತಲಿರ್ಪಾ 3ಸಾರತತ್ವಾ'ಚಾರ ಸರಸದಿ ಸದಾಚಾರಸೂರಿಜನಪರಿವಾರ ಸತ್ಯಾನಂದಾಧೀರಾ 4ಸರಳಕ'ತ್ವಧಾರಾ ಸಕಲಶಾಸ್ತ್ರಾ'ಚಾರ ಸರಿಕಾಣದಾುಹದೀ ಸರ್ವಪತಿತೋದ್ದಾರಾ 5ವರಗುರು ತುಲಸೀರಾಮಾ ಚರಿತಾ ಸ'ಸ್ತರಿಸಿಸಿರಿಚನ್ನಪುರಿಯಲ್ಲೀ ವರಕೀರ್ತಿ ಸ್ಥಿರದಿ ವ'ಸಿ 6'ರಾಜಿಸುತಲಿರ್ಪಾ ವರಗುರುನಿಜವೆಂದೂಪುರದಿ ಸರ್ವಜನರೂ ಪರಿಪರಿಪೊಗಳುವರೂ 7ರಾಮನುಪಾಸನೆಯಾ ಪ್ರೇಮದಿಮಾಡಿದಾರಾಮತುಲಸೀಗುರು ಸ್ವಾ'ುಯಂದದಿಬಂದಿಹಾ 8ಪಾಮರನಾದ ರಾಮಕೃಷ್ಣ ದಾಸೋದ್ಧಾರಾುೀ ಮ'ಯಲ್ಲಿ ಪ್ರಖ್ಯಾತಯಶೋಸಾರ* 9
--------------
ಮಳಿಗೆ ರಂಗಸ್ವಾಮಿದಾಸರು
ಭಾಗ್ಯವಂತನು ಇನ್ನು ಯಾರಯ್ಯ ಪ. ಯೋಗ್ಯ ವೈಷ್ಣವಕುಲದ ಭಾಗವತನಲ್ಲದೆ ಅ.ಪ. ಚತುರನೆನಿಸಿ ಲಕ್ಷ ಮನೆಮನೆ ತಿರುಗಿದೆಚತುರಾನನನಾ ಮಾತು ಅನುಸರಿಸಿದೆಸತು ಚಿತು ಆನಂದ ಆತ್ಮ ಹರಿಸ-ರ್ವೋತ್ತಮನ ದಾಸರದಾಸ ಎಂಬುವನಲ್ಲದೆ 1 ತಾರÀತಮ್ಯ ಪಂಚಭೇದವನೆ ತಿಳಿದು ಶ್ರೀಮಾರುತನ ಮತಗಳೇ ಹಾರೈಸುತಕರ್ಮ ವಂಚನೆಯಿಲ್ಲದನುದಿನದಿ ಮಾಡುತಚರಿಸುತ ಸಂಚಿತಾಗಾಮಿ ಕಳೆವವನಲ್ಲದೆÉ2 ಪತಿತಪಾವನ ಶ್ರೀಹರಿಗುರುಗಳನು ಮೋದದಿಕ್ಷಿತಿಯೊಳಗೆ ಭಜನೆಯೆ ಧನವೆನ್ನುತಅತಿಶಯದಿ ಶೇಷಾದ್ರಿ ಹಯವದನನ್ನ ನೆನೆನೆನೆದುಪ್ರೀತಿಯಿಂದಲಿ ಭಜಿಸುವವನಲ್ಲದೆ 3
--------------
ವಾದಿರಾಜ
ಭಾರತೀ ಮಜ್ಜನನಿಯ ಭಾರತೀ ಪ ಭಾರತೀ ಭರತನಾರ್ಧಾಂಗಿ ಕರು ಣಾರಸ ಪೂರಿತಾಪಾಂಗಿ ಅಹ ತಾರಕ್ಷ್ಯ ಪ್ರಮುಖ ವೈಕಾರಿಕ ದೇವಗ ಣಾರಾಧಿತಾಂಘ್ರಿ ಸರೋರುಹೆ ಪಾಲಿಸೆ ಅ ವಿದ್ಯುನಾಮ್ನಮಕೆ ವಿಧಿಜಾತೆ ಕೃತಿ ಪ್ರದುಮ್ನ ಜಠರಸಂಭೂತೆ ಅನ ವದ್ಯ ಸದ್ಗುಣಗಣವ್ರಾತೆ ಬ್ರಹ್ಮ ವಿದ್ಯವ ಪಾಲಿಸು ಮಾತೆ ಅಹ ಬುಧ್ಯಾಭಿಮಾನಿಯೆ ಸದ್ಯೋಜಾತನ ಪೆತ್ತ ಶ್ರದ್ಧಾ ನಾಮಕೆ ಅನಿರುದ್ಧನ ತೋರಿಸೆ 1 ಗುಣತ್ರಯಾತ್ಮಕವಾದ ಲಿಂಗದೊಳು ಅಣರೂಪಳಾಗಿ ತುರಂಗ ಮುಖ ಅನಿಲಾಂತರ್ಗತ ಪಾಂಡು ರಂಗನಂಘ್ರಿ ಭೃಂಗ ಆಹ ಅನಿರುದ್ಧ ದೇಹಸ್ಥ ಅನಿಮಿಷರೊಳು ಪೊಕ್ಕು ದ್ವಿನವರೂಪದಿ ಮಾಳ್ಪೆ 2 ಕಾಳಿದ್ರೌಪದಿ ಶಿವಕನ್ಯಾ ಮನ್ಮ ನಾಲಯದೊಳು ನಿಲ್ಲೆ ಘನ್ನ ಪ್ರಾಜ್ಞ ನಿತ್ಯ ಎನ್ನ ಪರಿ ಪಾಲಿಸು ನಂಬಿದೆ ನಿನ್ನ ಆಹ ಶೈಲಜೆ ಶ್ಯಾಮಲೆÉ ಪೌಲೋಮಿ ಉಷೇರಿಂದ ಓಲಗ ಕೈಕೊಂಬ ಕಾಲಾಬ್ಧಿ ಮಾನಿಯೆ 3 ವಂದಿಪೆ ನಿನಗಿಂದ್ರಸೇನಾ ನಳ ನಂದಿನಿ ಕರುಣಿಸು ಜ್ಞಾನ ಶ್ರೀ ಮು ಕುಂದನ ಪರಮ ಕಲ್ಯಾಣ ಗುಣ ಸಿಂಧುವಿನೊಳಗೆ ಪಾಠೀನ ಆಹ ನಂದದಿ ಚರಿಸುವ ಗಂಧವಾಹನ ರಾಣಿ ಸಿಂಧೂರ ಗಮನೆ ಪುರಂದರಾರಾಧಿತೆ 4 ನಿಗಮತತಿಗಳಭಿಮಾನಿ ನಿನ್ನ ಪೊಗಳಲೆನ್ನೊಳವೆ ಕಲ್ಯಾಣಿ ಆ ಪ ನ್ನಗರಾಜ ಸಹಸ್ರ ವಾಣಿಯಿಂದ ಬಗೆ ಬಗೆ ತುತಿಪ ಸುಶ್ರೋಣೆ ಆಹ ಮುಗಿವೆ ಕರಗಳೆನ್ನವಗುಣಗಳೆಣಿಸದೆ ಜಗನ್ನಾಥವಿಠಲನಂಘ್ರಿಗಳ ಧ್ಯಾನವನೀಯೆ 5
--------------
ಜಗನ್ನಾಥದಾಸರು
ಭಾವೀ ಸಮೀರ ಶ್ರೀವಾದಿರಾಜರು ಕಾಯ ಕಾಯ ಬೇಕಯ್ಯ ಪ ಕಾಯ ಬೇಕೈ | ವಿಪ ಅಹಿಪ ಸುರಪಾದಿ ವಂದ್ಯವೆ |ವಿಪುಲ ಪಾಪಾಳಿಗಳ ಹರಿಸೀ | ಸುಪಥ ಸದ್ಗತಿಗೆನ್ನ ಒಯ್ದು ಅ.ಪ. ಗೌರಿದೇವಿಯ ಉದರಸಂಭವನೆ | ಹಯಾಸ್ಯನಂಘ್ರಿಸರಸಿರುಹದಲಿ ಮಧುಪ ನೆನಿಸಿದನೆ ||ದ್ವಾರಕಾದಿ ಕ್ಷೇತ್ರ ಚರಿಸುತ | ಥೋರ ಹಿಮಗಿರಿ ಸೇತುಯಾತ್ರೆಯಸಾರಿ ಸತ್ತೀರ್ಥ ಪ್ರಬಂಧವ | ಧೀರ ನೀ ರಚಿಸುತ್ತ ಮೆರೆದೆಯೊ 1 ಲಕ್ಷಿಸುತ್ತಲಿ ಮಾತೆ ಬಿನ್ನಪವ | ಮಹ ಭಾರತಸ್ಥಲಕ್ಷಪದ ಬಹು ಕ್ಲಿಷ್ಟವೆನಿಸೂವ ||ಲಕ್ಷಣದಿ ಸದ್ಯುಕ್ತ ಪದಗಳ | ಈಕ್ಷಿಸುತ ಅವಕರ್ಥ ಪೇಳುತಲಕ್ಷಸದ್ದಾಭರಣ ಮಾಲಿಕೆ | ಲಕ್ಷ್ಮಿಪತಿ ಹಯಾಸ್ಯಗರ್ಪಿತ 2 ಸೇವಿಸುತ್ತಿಹ ವಿಪ್ರನಾದವನ | ಕೌಟಿಲ್ಯ ಕಂಡುತೀವ್ರದಿಂದಲಿ ಶಾಪವಿತ್ತವನ ||ಭಾವ ತಿಳಿದು ಬೊಮ್ಮರಾಕ್ಷಸ | ಭಾವತಾಳೆಂದೆನುತ ಪೇಳಲುತೀವ್ರ ಯಾಚಿಸೆ ಕ್ಷಮೆಯ ಮಂತ್ರವ | ಆವ ಆಕಾಮ್ಮೈವ ನೊರೆದೆ 3 ಮರಳಿ ಉತ್ತರ ಯಾತ್ರೆಯಲ್ಲಿರಲು | ಗುರು ವಾದಿರಾಜರಅರಿಯದಲೆ ತನ್ಮಂತ್ರ ಪೇಳಲು ||ಒರೆದರೂ ರಂಡೇಯ ಮಗ ನೀ | ನಿರುತಿರುವೆನ ಸ್ನಾತ ಕಾರ್ತಿಕಮರಳಿ ಮಾಘಾಷಾಢ ವಿಶಿಖದಿ | ಹರಿಯಿತೂ ನಿನ ಶಾಪವೆಂದರು 4 ಆತುಗುರುಪದ ಕ್ಷಮೆಯ ಪ್ರಾರ್ಥಿಸಲು | ಗುರುರಾಜರಾಗಭೂತ ರಾಜನು ನೀನೆ ಎನ್ನುತಲು ||ಖ್ಯಾತಿ ಪೊಂದುತ ಭಾವಿರುದ್ರನೆ | ಪೊತ್ತು ಎನ್ನಯ ಮೇನೆ ಮುಂಗಡೆಕೌತುಕವ ತೋರುತ್ತ ಮೆರೆವುದು | ಪೋತ ಭಾವದಿ ತಮಗೆ ಎಂದರು 5 ಕಾಕು ಶೈವನ ಖಂಡಿಸುತ್ತಲಿಆಕೆವಾಳರ ಪೊರೆದು ದಶಮತಿ | ತೋಕನೆಂದೆನಿಸುತ್ತ ಮೆರೆದೇ 6 ಭೂವಲಯದೊಳು ಕಾರ್ಯ ಪೂರೈಸಿ | ಬದರಿಯಿಂದಲಿಭಾವಿ ಶಿವನಿಂ ಪ್ರತಿಮೆ ರಥತರಿಸೀ ||ದೇವ ಗೃಹ ಸಹ ವಿರುವ ವಿಗ್ರಹ | ತ್ರೈವಿಕ್ರಮನ ಸಂಸ್ಥಾಪಿಸುತ್ತಭಾವ ಭಕ್ತಿಯಲಿಂದ ಉತ್ಸವ | ತೀವರದಿ ರಚಿಸುತ್ತ ಮೆರೆದೆ 7 ಹಂಚಿಕಿಂದಲಿ ಪೂರ್ವರಚಿತೆನ್ನ | ವೃಂದಾವನಂಗಳುಪಂಚ ಸಂಖ್ಯೆಯಲಿಂದ ಮೆರೆವನ್ನೆ ||ಮುಂಚೆಯೇ ಸ್ಥಾಪಿತವು ಎನ್ನುವ | ಪಂಚರೂಪೀ ವ್ಯಾಸ ಸಮ್ಮುಖಸಂಚುಗೊಳಿಸೀ ಸ್ಥಾಪಿಸುತ್ತ | ಕೊಂಚವಲ್ಲದ ಕಾರ್ಯ ರಚಿಸಿದೆ 8 ಯುಕ್ತಿಮಲ್ಲಿಕೆ ರುಕ್ಮೀಣೀಶ ಜಯ | ಗುರ್ವರ್ಥ ದೀಪಿಕೆಮತ್ತೆ ಪರಿಪರಿ ಶಾಸ್ತ್ರ ಗ್ರಂಥಗಳ ||ವಿಸ್ತರಿಸಿ ಭುವನದಲಿ ಮೆರೆದೆ | ಉತ್ತಮೋತ್ತಮ ದೇವ ದೇವನುಕರ್ತೃ ಶ್ರೀಹಯ ಮುಖನು ಎನ್ನುತ | ವತ್ತಿ ಪೇಳುತ ವ್ಯಾಪ್ತಿಸಾರಿದೆ 9 ಶಿಷ್ಟ ಜನ ಸಂಸೇವ್ಯ ಧೀವರನೆ | ಶಮದಮಾನ್ವಿತಕಷ್ಟಹರ ಕಾರುಣ್ಯ ಸಾಗರನೇ ||ಕುಷ್ಟ ಅಪಸ್ಮಾರ ರೋಗದ | ಅಟ್ಟುಳಿಯ ಕಳೆಯುತ್ತ ಮೃತ್ತಿಕೆಸುಷ್ಠುಸೇವನೆಯಿಂದ ಭಕ್ತರ | ಇಷ್ಟವನೆ ಸಲಿಸುತ್ತ ಮೆರೆವೆ 10 ಹಯಾಸ್ಯ ವಾಹನ | ಬಿಡದೆ ಏರುತ ಸಾರ್ದೆ ಹರಿಯನು 11
--------------
ಗುರುಗೋವಿಂದವಿಠಲರು
ಭೀಮಶೇನಾರ್ಯರು | ಭೂಮಿತ್ಯಜಿಸಿ ಪರಂ ಧಾಮವ ಸೇರಿದರು || ಶ್ರೀಮತ್ ಕಾರ್ಪರ ಕ್ಷೇತ್ರ | ಸ್ವಾಮಿಯ ಸಂಪೂರ್ಣ ಪ್ರೇಮ ಪಡೆದವರು | ಕೇಳಿದವರು ಪ ಪರಿಮಳ ಗಾತ್ರರ ಕರುಣ ಪ್ರಸಾದದಿ ಧರೆ ಸುರಾಗ್ರಣಿ ಎನಿಪ ವರ ಜಯಾರ್ಯರ ಪತ್ನಿ | ನರಸಾಂಬೆಯಗರ್ಭ ಶರಧಿಗೆ ಹರಿಣಾಂಕರು ಸುಶಾಂತರು 1 ಎಡರೇಸು ಬಂದರೂ ಬಿಡದೆ ಸ್ವಧರ್ಮವ ಕಡುಭಕ್ತಿ ಪೂರ್ವಕದಿ ಹುಡುಗನ ಮಾತಿಗೆ | ಒಡೆದುಸ್ತಂಭದಿ ಬಂದ ಒಡೆಯನರ್ಚಿಸಿದವರು | ಕೋವಿದರು 2 ಪಂಚಬಾಣನ ಗೆದ್ದು | ಪಂಚ ಭೇದವನರಿತು ಪಂಚಾಸ್ಸನುತ ಮಾನವ ಪಂಚಾಶ್ಯದಯದಿ ಪ್ರಪಂಚ ಸಾಗಿಸುವಂಥ ಪಾಂಚಾಲಿಪತಿ ಪ್ರಿಯರು | ನಿಷ್ಕಿಂಚನರು 3 ವತ್ಸರ ಪರಿಯಂತ ನಿಷ್ಟೆಯಲಿ ನಿರುತ ತಪ ಚಳಿ ಮಳೆ ಸಹಿಸಿ ಪರಮೇಷ್ಟಿ ಜನಕನ ನಿರುತ ಸೇವಿಸಿದವರು | ನಿರ್ಮಮರು 4 ವಿನಯ ಸುಶೀಲ ಸದ್ಗುಣದಿ ಭೂಷಿತರಾದ ತನಯರೀರ್ವರ ಕರೆದು ರಿಣವಿನು ತೀರಿತು ಎನುತ ಪೇಳುತ ದ್ವಿಜಗಣಿಕೆ ದಕ್ಷಿಣೆ ನೀಡಿ ನಮನ ಮಾಡಿ 5 ಹರುಷ ಭರಿತರಾಗಿ ಸರ್ವಜಿತು ನಾಮದ ವರುಷದೊಳ್ ಯುಗ ಮಾಸದಿ | ಶರದಪಕ್ಷ ಪ್ರತಿಪದ ಪ್ರಥಮ ಕಾಯ 6 ವರುಷಂ ಪ್ರತಿ ತಪ್ಪದೆ | ಚರಿಸುತ ದೇಶದೋ ಳಿರುವ ಸದ್ಭಕ್ತರಿಗೆ | ವರಶಾಮ ಸುಂದರ ನರಹರಿದರುಶನ | ಗರೆದ ಪಾಲಿಸಿದವರು ಪಾವನ್ನರು 7
--------------
ಶಾಮಸುಂದರ ವಿಠಲ
ಭ್ರಮಮೂಲಮಿದಂ ಜಗತು ನೇಮದ ನಿಜಮಾತು ಧ್ರುವ ಭ್ರಮೆಯಿಂದಲಿ ಭ್ರಮಣ್ಹತ್ಯದ ನೋಡಿ ಭ್ರಮೆ ನೆಲೆಗೊಳಿಸದು ಮನ ಸ್ಥಿರಮಾಡಿ ಭ್ರಮಿಸೇದನೇಕ ಜನ್ಮ ತಿರುಗಾಡಿ ಭ್ರಮಿಯಲಿ ಬಾರದು ನಿಜ ಕೈಗೊಡಿ 1 ಭ್ರಮೆಯಕ ಭ್ರಮೆ ಹತ್ತೇದ ಬಲು ಬಹಳ ಭ್ರಮಯು ಮಾಡೇದ ಸಂಸಾರದ ಮೇಳ ಭ್ರಮೆ ಇಲ್ಲದ್ಯಾತಕೆ ಏನ್ಹೇಳ ನೇಮದಿ ಹೊಳೆವುದು ವಸ್ತು ಅಚಲ 2 ನಾ ನೀನೆಂಬುದು ಭ್ರಮೆಯದ ಮೂಲ ಅನುದಿನ ಬೆನ್ನಟ್ಟಿದೆ ಬಹುಕಾಲ ಖೂನಕೆ ಬಾರದೆ ಆತ್ಮಾನುಕೂಲ ತಾನೆ ಮುಸುಕ್ಯದೆ ಭ್ರಮಿ ಸಕಲ 3 ನಿಶ್ಚಲವಾಗದೆ ಜ್ಞಾನದ ಉಗಮವು ಹೆಚ್ಚು ಕುಂದಿಗೆ ಹೊಡೆದಾಡುದು ಭ್ರಮೆಯು ಹುಚ್ಚುಮಾಡೇದ ವಿಷಯ ಭ್ರಮೆಯು ಎಚ್ಚರಿಸುವ ಸದ್ಗುರು ದಯಕ್ರಮವು 4 ನಾ ಮವನಿಷ್ಟರೊಳಾಡಿದ ಮಾತು ನಿಮಿಷಾರ್ಧದಲಿ ಭ್ರಮೆಯಗಳೆಯಿತು ಸ್ವಾಮಿಸದ್ಗುರು ಕೃಪೆಯಲಿ ತಿಳದೀತು ನೇಮಿಸಿ ತಿಳಿಕೊ ಮಹಿಪತಿನಿವಾಂತು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಗನೆಂದೆಂಬುವ ಇನ್ನು ಮತ್ತಾವನೊ ಜಗದೊಳಗೆ ನಿನ್ನ ವಿನಾ ಕಾಣೆಯೆಲ್ಲಿ ಪ ರಕ್ತ ಶುಕ್ಲ ಮಿಶ್ರವಾದ ಸಮ್ಮಂಧ ವಿಷ_ ಭುಕ್ತನಾಗಿದ್ದ ಸಂಸಾರದೊಳಗಾ ಸಕ್ತತನದಲಿ ಇಪ್ಪ ಎಂದಿಗೆಂದಿಗೆ ಇವನು ಮುಕ್ತಿ ಕೊಡುವನೇನೊ ಮುಂದೊಲಿದು ಕೊಂಡಾಡೆ1 ಪ್ರಕೃತಿ ಬದ್ಧನಾಗಿ ನಾನಾ ಜನುಮಗಳಲ್ಲಿ ವಿಕೃತಿಯ ಮಾಡುವ ಮದದಿಂದಲೀ ಸುಕೃತವನು ಮರೆದು ದೂರಾಗಿ ಸಂಚರಿಸುವ- ನುಕ್ರ ಮವಂದುಮಾಸ ಜನತೆ ಕ್ಯೆಡೆಯಿರದವ 2 ಪುತ್ರ ಉಳ್ಳರೆ ಅವಗೆ ಕಂಡಕಡೆ ತಿರುಗಿ ಉ- ನ್ಮತ್ತನಾಗಿ ಕೆಟ್ಟ ಗ್ರಾಸವನ್ನು ಹೊತ್ತಹೊತ್ತಿಗೆ ತಂದು ಹಾಕಬೇಕು ಸಾಕಿ ನಿತ್ಯದಲ್ಲಿ ಅವಗಾಗಿ ಕ್ಲೇಶಬಡಲಿ ಬೇಕು 3 ನಾಡೊಳಗೆ ನೀನೆ ಮಗನೆಂದವನ ಭಾಗ್ಯಕ್ಕೆ ಈಡುಗಾಣೆನು ಎಲ್ಲಿ ವಿಚಾರಿಸೆ ಕಾಡಿ ಬೇಡುವೆ ಮುನ್ನೆ ಪರಿಪರಿಬಾಧೆಬಡಿಸಿ ಕೂಡಿರುವೆ ಮುಕ್ತರೊಳು ಮುಕ್ತಿಗಳವಲ್ಲಿದೊ 4 ನಿನ್ನಂಥ ಮಗನ ಪಡದಮ್ಯಾಲೆ ಎನಗೆ ಅನ್ಯಚಿಂತೆಗಳಿಲ್ಲ ಚಿಂತಾಮಣೀ ಘನ್ನಮೂರುತಿ ನಮ್ಮ ವಿಜಯವಿಠ್ಠಲರೇಯ ಅನಂತಕಾಲಕ್ಕೆ ವಹಿಸುವ ದೇವ 5
--------------
ವಿಜಯದಾಸ
ಮಂಗಳಂ ಜಯ ಮಂಗಳಂ ರಾಮ ಸಜ್ಜನರ ಪ್ರೇಮ ಮಂಗಳಂ ಲೋಕಾಭಿರಘುರಾಮ ಪಟ್ಟಾಭಿರಾಮ ಪ ಮಂಗಳಂ ಶ್ರೀ ದಶರಥಾತ್ಮಜಗೆ ಮಂಗಳಂ ಅಯೋಧ್ಯವಾಸಿಗೆ ಮಂಗಳಂ ಜನಕಜಾಮಾತೆಗೆ ಮಂಗಳಂ ಶ್ರೀ ರಾಮಚಂದ್ರಗೆ ಅ.ಪ ದೇವದೇವೋತ್ತಮ ವೈಕುಂಠದೊಳಗೆ ಶ್ರೀ ಭೂಮೇರಿಂದ ಸೇವೆಗಳ ಕೈಗೊಳ್ಳುತ ಮಲಗಿರಲು ದೇವಋಷಿ ಬ್ರಹ್ಮೇಂದ್ರಾದಿಗಳು ಸಹಿತ ಶ್ರೀಧರನ ಸ್ತುತಿಸುತ ರಾವಣಾಸುರನುಪಟಳ ವರ್ಣಿಸಲು ಸಂತೈಸಿ ಅವರನು ಭೂಮಿಪತಿ ದಶರಥನ ಪ್ರೇಮ ಕುಮಾರನಾಗುದಿಸುತಲಯೋಧ್ಯದಿ ಪ್ರೇಮ ತೋರುತ ಮೆರೆದವಗೆ ಜಯ1 ದಶರಥನ ಸುತರಾಗಿ ಬೆಳೆಯುತಲಿ ಕೌಶಿಕನÀಯಜ್ಞವ ಕುಶಲದಲಿ ರಕ್ಷಿಸುತ ಹರುಷದಲಿ ಶಶಿಮುಖಿಯ ಕೂಡುತ ಕುಶಲದಲಿ ವನವಾಸ ಚರಿಸುತಲಿ ದಶಶಿರನು ಜಾನಕಿಯ ಕದಿಯಲು ಶಶಿಮುಖಿಯನರಸುತಲಿ ವನವನ ವಸುಧಿಪತಿ ಕಪಿಗಳ ಕಳುಹಿ ಸತಿ ಕುಶಲ ತಿಳಿಯುತ ನಲಿದವಗೆ ಜಯ 2 ಬಂದ ಕಪಿ ಕಟಕವನೆ ನೋಡುತ್ತ ಸಾಗರಕೆ ಸೇತುವೆ ಒಂದೇ ನಿಮಿಷದಿ ರಚಿಸಿ ಶೀಘ್ರದಲಿ ಮಂದಮತಿ ರಾಕ್ಷಸರ ವಧಿಸುತಲಿ ಅಂದಣವ ಕಳುಹಿ ಮಂದಗಮನೆಯ ಕರೆಸಿ ಬೇಗದಲಿ ಬಂದ ರಾಮನು ಎಂದು ಮಾರುತಿ ಮುಂದೆ ಭರತಗೆ ಕುಶಲ ತಿಳಿಸಲು ತಂದೆ ಕಮಲನಾಥ ವಿಠಲ ಮುಂದೆ ಪ್ರಜೆಗಳ ಪೊರೆದವಗೆ ಜಯ 3
--------------
ನಿಡಗುರುಕಿ ಜೀವೂಬಾಯಿ