ಒಟ್ಟು 1206 ಕಡೆಗಳಲ್ಲಿ , 105 ದಾಸರು , 969 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಲಯ್ಯ ಬಯಲಾಸೆ ಬಿಡದು ಪ ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ಅ ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನುಕಾತರಿಸಿ ಬೀಳುವ ಪತಂಗದಂದದಲಿಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ 1 ಅಂದವಹ ಸಂಪಗೆಯ ಅರಳ ಪರಿಮಳವುಂಡುಮುಂದುವರಿಯದೆ ಬೀಳ್ವ ಮಧುಪನಂತೆಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂಗಂಧ ವಾಸಿಸುವ ಘ್ರಾಣೇಂದ್ರಿಯಕೆ 2 ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡುಪ್ರಾಣಾಹುತಿಯೆಂದು ಸವಿವ ಮೀನಿನಂತೆಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದುಜಾಣತನದಲಿ ನಲಿವ ಜಿಹ್ವೇಂದ್ರಿಯಕೆ 3 ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ-ಣಮವೆಂದು ತೋಷಿಸುವ ಕರ್ಣೇಂದ್ರಿಯಕೆ 4 ತ್ವಕ್ಕು ಮೊದಲಾದ ಪಂಚೇಂದ್ರಿಯಗಳೊಳು ಸಿಕ್ಕಿಕಕ್ಕುಲಿತೆಗೊಂಬುದಿದ ನೀನು ಬಿಡಿಸೊಸಿಕ್ಕಿಸದಿರು ಸಿಕ್ಕಿಗೆ ಆದಿಕೇಶವರಾಯದಿಕ್ಕಾಗಿ ನಿನ್ನಂಘ್ರಿಯೊಳೆನ್ನ ಮನವನಿರಿಸೊ 5
--------------
ಕನಕದಾಸ
ಏನು ಮಾಡಲಿ ವಿಠಲ ಏನು ತಿಳಿಯದು ವಿಠಲ ಏನಿತ್ತು ಮೆಚ್ಚಿಸಲಿ ವಿಠಲಾ ಪ. ಜ್ಞಾನ ಮೊದಲೇ ಇಲ್ಲ ಧ್ಯಾನ ಮಾಡುವುದರಿಯೆ ನೀನಾಗೆ ವಲಿದೆನ್ನ ಸಲಹಯ್ಯ ವಿಠಲಯ್ಯ ಅ.ಪ. ತಂದೆತಾಯಿಯು ನೀನೆ ಬಂಧು ಬಳಗವು ನೀನೆ ತಂದವನುಭವದಲ್ಲಿ ಎನ್ನ ನೀನೆ ಮುಂದೆ ಪೊರೆವವ ನೀನೆ ಹಿಂದೆ ಪೊರೆದವ ನೀನೆ ಇಂದು ಪೊರೆಯುವನು ನೀನೇ ಒಂದರಿಯೆ ತವ ಪದದ್ವಂದ್ವವೆ ಗತಿ ಎಂದು ಇಂದು ಚರಣದಿ ಬಿದ್ದೆ ಪೊರೆಯಯ್ಯ ವಿಠಲಯ್ಯ 1 ಹಿಂದಿನಾ ಭಕ್ತರನು ಪೊರೆದ ಕೀರುತಿ ನೋಡೆ ಒಂದು ನಿಜವೆಂದರಿಯೆ ವಿಠಲಾ ಇಂದೆನ್ನ ಕರಪಿಡಿದ ಮುಂದಕ್ಕೆ ಕರೆದು ನೀ ಒಂದು ಮಾತನಾಡೆ ವಿಠಲಾ ಅಂದಿನಾ ಭಕ್ತವತ್ಸಲನೆಂಬ ಕೀರ್ತಿ ನಿಜ ವೆಂದು ತಿಳಿಯುತಲಿ ಆನಂದಿಸುವೆ ವಿಠಲಯ್ಯ 2 ಸಿರಿವಂತರಿಗೆ ವಲಿವ ಬಿರುದೊಂದು ಘನವೆ ಕೇಳ್ ಪರಿ ವಿಠಲಾ ಪರಿಪರಿಯಲಿ ನಿನ್ನ ಚರಣ ಪಿಡಿದಾಲ್ಪರಿಯೆ ಥರವೆ ಗರುವಿಕೆ ಪೇಳು ವಿಠಲಾ ತೆರದು ನೋಡದೆ ನೇತ್ರ ಕರದಭಯ ಪೇಳದಲೆ ಪರಿ ಕರುಣೆಗೆ ಸರಿಯೆ ಪೇಳ್ ವಿಠಲಯ್ಯ3 ಹಿಂದೆ ಕೆಲವರ ಕಾಯ್ದುದೊಂದೆ ಕೀರ್ತಿಯು ಜಗದಿ ಮಂದಿ ಹೊಗಳುವರದನೆ ಮತ್ತೆ ಮತ್ತೆ ಇಂದು ಮುಂದೆ ಅಂಥ ಬಂದ ಭಕ್ತರು ಇಲ್ಲೆ ಇಂದಿಲ್ಲವೇ ನಿನಗೆ ಆ ಶಕ್ತೀ ಇಂದಿನವರಲಿ ಅಂಥ ಭಕುತಿ ಇಲ್ಲವೆ ಪೇಳು ಇಂದಿರೇಶನೆ ಎನಗೆ ವಲಿಯದಿಹೆ ವಿಠಲಯ್ಯ 4 ಅಂತರಂಗದಿ ನಿಂತು ಶಾಂತತ್ವ ಕೊಡುವುದಕೆ ಚಿಂತೆ ಏತಕೆ ಪೇಳು ವಿಠಲಾ ಸಂತತದಿ ನಿನಧ್ಯಾನ ಚಿಂತನೆಯ ಕೊಡು ಎನಗೆ ಚಿಂತಿತಾರ್ಥಪ್ರದನೆ ವಿಠಲಾ ಕಂತುಪಿತ ಗೋಪಾಲಕೃಷ್ಣವಿಠ್ಠಲ ಗುರುಗ ಕರ ಪಿಡಿದು 5
--------------
ಅಂಬಾಬಾಯಿ
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಏನು ಹಾವಳಿ ಮಾಡುತಿಹನಮ್ಮ ಗೋಪಮ್ಮ ಕೇಳೆಏನು ಹಾವಳಿ ಮಾಡುತಿಹನಮ್ಮ ಪ ಏನು ಹಾವಳಿ ಮಾಡುತಿಹಮನೆ ಓಣಿಯಲಿ ಕ್ರೀಡಿಸುವ ಮಕ್ಕಳನುತಾನು ಅಳಿಸುವ ಹಿಡಿಯ ಪೋಗಲುವೇಣುನೂದುತ ಮೋಹಿಸುವನು ಅ.ಪ. ಮನಿಯೊಳು ತಾ ಪೊಕ್ಕು ನೋಡುವನೆ ಪಾಲ್ಮೊಸರ ಕೊಡಗಳಮನಸಿನಂದದಿ ತಿಂದು ಒಡೆಯುವನೆತಿನಿಸಿ ಬೆಕ್ಕಿಗೆ ಕ್ಷಣವು ತಡೆಯದೆ ವನಿತೆರೆಲ್ಲರು ಹಿಡಿಯ ಕೂಸಿನತನುವು ಧರಿಸಿ ನಿಂತ ಕಟಿಯಲಿ ಸ್ತನವ ತಿಂಬುವ ವನರುದೇಕ್ಷಣ1 ತರುಗಳಾಲಯದಲ್ಲಿ ತಾ ಬರುವಕರೆಸದಲೆ ಮುಂಚಿತ ತೊರಿಸಿ ಮೊಲೆಗಳ ಪಾಲ ತಾ ಕುಡಿದಕರಸಿಕೊಳ್ಳದೇ ಸುರಭಿ ತಿರುಗಲು ಸರಣಿಯೊಳು ತಾ ನಿಂತು ನಗುತಲಿ ತರುಣಿಯರ ಹೆರಳ್ಹಿಡಿದುಜಗ್ಗುತ ಕರದಿ ಸಿಗದಲೆ ಭರದಿ ಓಡುವ 2 ಕೂಸಿನಂದದಿ ತೊಡೆಯೊಳಾಡುವನೆ ಕ್ಷಣದೊಳಗೆ ಪತಿಗಳವೇಷಧರಿಸಿ ಮೋಸ ಮಾಡುವನೆತಾಸು ಘಳಿಗೆ ಬಿಡದೆ ನಮ್ಮ ನಿವಾಸ ಮಾಡುತ ಕಾಡುತಿಹಇಂದಿರೇಶವಚ್ಛವ ಸಾಕು ಮಾಡು ಹೇ ಶುಭಾಂಗಿ3
--------------
ಇಂದಿರೇಶರು
ಏನು ಹೇಳಲಿ ಕೂಸಿನ ಚರ್ಯಮಾನಿನಿ ಉಳಿದದ್ದ ಆಶ್ಚರ್ಯ ಪ ಪುಟ್ಟಿದೇಳನೆಯ ದಿನವೆ ಬಾಲಗ್ರಹ ಬಂದುಎಷ್ಟು ಕಾಡಿದಳು ನಮ್ಮಪ್ಪನಸೃಷ್ಟಿಪಾಲಕ ಸಿರಿವಿಷ್ಣು ದಯದಿಂದಕಷ್ಟ ಕಳೆದು ನಮ್ಮ ಕೂಸು ಉಳಿದಿತೇ 1 ಒಂದು ಮಾಸದ ಕೂಸು ಅಂದು ಬಂಡಿಯ ಕೆಳಗೆಹೊಂದಿಸಿ ಮಲಗಿಸಿದ್ದೆನೇ ನಾನುಅಂದು ಹಸಿದು ಮುಖದಿಂದ ಬೆರಳನೆ ಚೀಪಿಬಂಧ ಕಳೆದು ಹೀಂಗೆ ಬದುಕಿತೇ 2 ದುಷ್ಟತನವು ಬಹಳ ಎಂದು ಒರಳಿಗೆಕಟ್ಟಿಹಾಕಿದೆ ಇವನ ಒಂದಿನಾಬೆಟ್ಟದಂತೆರಡು ಮರಗಳು ಬೀಳಲು ಮಧ್ಯ ಪುಟ್ಟ ನಮ್ಮಪ್ಪ ಹ್ಯಾಂಗೆ ಬದುಕಿತೆ 3 ಅಂಗಳದೊಳಗೆ ಆಡುತ ಕುಳಿತಿದ್ದ ಕೂಸಿನಾ-ಮಂಗಳಾ ಘಾಳಿ ಬಂದೊಯಿತೆಅಂಗನೇರೆಲ್ಲರೂ ಅಳುತ ಕೂತೇವಲ್ಲೆ ನರ-ಸಿಂಗನಾ ಕರುಣದಿಂದುಳಿದಿತೆ 4 ನೀರು ಕುಡಿದು ಯಮುನೆ ಮೇಲೆ ಆಡಲು ಕೂಸುಘೋರ ಪಕ್ಷಿಯು ಬಂದು ನುಂಗಿತೆಪೋರರೆಲ್ಲರು ನೋಡಿ ಗಾಬರಿಯಾಗಲು ಮತ್ತೆಕಾರಿತವನ ಬಕ ಸೋಜಿಗವೆ 5 ಕತ್ತೆಗಳನು ಕೊಂದು ತಾಳಫಲವು ಗೋಪ-ಪುತ್ರರಿಗೆ ಉಣ್ಣ ಕೊಟ್ಟಿಹನಂತೆಚಿತ್ರಚರಿತನ ನಂದಬಾಲನ ಚರಿತೆ ಏಕಾವೃತದಿಂದಲಿ ಪೇಳಲಳವೇನೆ 6 ಕರುಗಳ ಕಾಯುತಿರಲು ವತ್ಸವೇಷದಿದುರುಳನೊಬ್ಬನು ಬಂದಿಹನಂತೆಅರಿಯದಾ ಕೂಸಿನಾ ಕಾಲ್ಪಿಡಿದುಬೆರಳ ಮರದ ಮೇಲಕ್ಕೆ ತೂರಿದನಂತೆ 7 ಏಳೇ ವರ್ಷದವ ಕೇಳೆ ಗೋವರ್ಧನಏಳು ದಿವಸ ಎತ್ತಿದನಂತೆಬಾಳುವ ಗೋಪಿಯರ ಪಾಲನೆ ಮಾಡಿದನೀಲವರ್ಣನ ಎಷ್ಟು ವರ್ಣಿಸಲೆ 8 ಬಾಲನಾದರು ನಿನ್ನ ಹಾಳು ದೈತ್ಯನ ಕೊಂದು ಬ-ಹಳ ಕುತ್ತುಗಳಿವೆ ಕೇಳಿದೇನೆಬಾಲಕರಿಬ್ಬರು ಲೋಲರಿಬ್ಬರು ನಮ್ಮ ಬಾಲಕರೇನೇ ಸ್ವರ್ಗಪಾಲನು ಇಳೆಯೊಳು ಉದಯಿಸಿದನೇ 9 ಮಂದಗಮನೆ ಎನ್ನ ಕಂದನಾಟಗಳನ್ನುಮಂದಿಯ ದೃಷ್ಟಿಯ ಭಯದಿಂದ ನಾನುಒಂದೂ ಹೇಳದೆ ಹೀಗಾನಂದ ಬಡುವೆನು ನಾನುಚಂದ್ರವದನೆ ರೋಹಿಣಿ ಕೇಳೆ 10 ಗೋಪಿ ಸುಖಿಸುತಿಹಳು 11
--------------
ಇಂದಿರೇಶರು
ಏನೂ ತೋಚದೋ ಮುಂದೇನು ಗತಿಯೋ ದೇವಾ ಅಪ್ರಮೇಯ ಸದಾ ಪ ನಾನು ನನ್ನದು ಎಂಬಭಿಮಾನದಿಂದನುದಿನ ಹೀನಕರ್ಮದ ಸುಳಿಯೊಳು ನಾ ನೊಂದು ನಿಂದೆನೊ ಅ.ಪ ಬೋಧೆ ಇಲ್ಲದೆ ನಾನು ಬಾಧೆಪಡುವೆ ಪೂರ್ಣ ಬೋಧರ ಮತತತ್ತ್ವ ಸಾಧಿಸಲಿಲ್ಲವೋ ಸಾಧುಸಜ್ಜನರೆಂದು ಆದರಿಸಲರಿಯೆನೋ ಆಧಾರನಾಗೋ ನಿರಾಧಾರನಾಗಿಹೆ ಬಾಧಿಪರೋ ಬಂಧುಗಳು ಪ್ರತಿದಿನ ನಿಂದಿಪರೋ ಮನಬಂದ ತೆರದಲಿ ಊರೊಳಿತರಜನ ಉದಯಾಸ್ತ ಪರಿಯಂತರದಿ ಎನಗೆ ಉದರದ ಯೋಚನೆ ಆದುದೀಪರಿ ಎನ್ನ ಜೀವನ ಇದಕೆ ಸಾಧನಮಾಡಿ ಮೋಹದ ಮುದದಿ ಮೈಮರೆದೆನನುದಿನ ಪದುಮನಾಭನೆ ಮೊರೆಯಿಡುವೆ ಮುಂದೇನು ಗತಿ ಪಥವಾವುದೋ ದೇವಾ 1 ಯುಕುತಿಯಿಂದಲಿ ಕರ್ಮಮಾಡಿ ಬೆಂಡಾದೆ ಭಕುತಿಮಾತ್ರವು ಏನ್ನೊಳಿನಿತಿಲ್ಲವೋ ಶಕುತಿಯುಕುತಿಗಳೊಳು ನೀನಿದ್ದು ನಡೆಸುವೆ ಭಕುತಿ ಕೊಡದಿರುವೆಯಾ ಮುಕುತರೊಡೆಯಾ ಮಾಕಳತ್ರನೆ ನಿನ್ನ ದಯವೊಂದನವರತ ಇರಲಿ ಅಕುಟಿಲಾಂತಃಕರಣ ಭಕ್ತರ ಸಂಗವೆನಗಿರಲಿ ನಿಖಿಲಗುಣಗಣಪೂರ್ಣ ನಿನ್ನಯ ಸ್ಮರಣೆಯೊಂದಿರಲಿ ಸಾಕು ಇದಕಾನೇನು ಮಾಡಲಿ ವಾಕುಮನಸಿಗೆ ಸಿ- ಲುಕದವ ನಿನ್ನ ಕಾಕುಮನುಜ ನಾನೆಂತು ತಿಳಿಯಲಿ ನೀ ಕರುಣಿಸದಲಿರೆ ಇನ್ನು ಅವಿ- ವೇಕಿ ನಾನಿನ್ನೆಂತುಗೈಯಲಿ 2 ನರಜನುಮದಿ ಬಂದು ಬರಿದೆ ಆಯುವ ಕಳೆದೆ ಹರಿಯೆ ನಿನ್ನಯ ಕರುಣ ದೊರೆಯಲಿಲ್ಲಾ ಕರೆಕರೆಪಡುತಲಿ ಜರೆಯೊಳಾಡುತಿಹೆ ದುರಿತ ಹರೇ ದಾರಿ ಎನಗೇನಿಹುದೋ ಇನ್ನು ಮುಂದೆ ಕ್ಲೇಶ ಕೊಡದಲೆ ಪಾರುಗಾಣಿಸೋ ತಂದೆ ಶರಣಜನರಿಗನವರತ ಸುರಧೇನು ನೀನೆಂದೇ ಅರಿಯದವ ನಾ ನೀ ಪೊರೆಯಲರಿದೇ ಕರುಣಾಶರಧಿಯೇ ನಿನ್ನ ಕೃಪೆಯೊಂದಿರಲು ಉರುತರ ಸಾಧನವು ಅದು ತರವರಿತು ಧೃಢಭಕ್ತಿ ಪಾಲಿಸೊ ಉರಗಗಿರಿ ಶ್ರೀ ವೇಂಕಟೇಶನೆ3
--------------
ಉರಗಾದ್ರಿವಾಸವಿಠಲದಾಸರು
ಏನೂ ಸಾರ್ಥಕವಿಲ್ಲವೋ ಪ ಏನೂ ಸಾರ್ಥಕವಿಲ್ಲ ಜ್ಞಾನಮಾರ್ಗಗಳಿಲ್ಲ ಮಾನಸ ಸ್ಥಿರವಿಲ್ಲ ಶ್ರೀನಾಥನಿದಬಲ್ಲ ಅ.ಪ ಎರಡುಕಂಬದ ಮೇಲೆ ಇರುವ ಪಂಜರವಿದು ಬರಿಯಡಂಭದ ಜಗವು ಸ್ಥಿರವೆಂಬ ತನುವಿನೊಳು 1 ತೈಲವಿಲ್ಲದ ದೀಪ ಮಲಿನವಾಗುವ ತೆರದಿ ಸುಲಭದೊಳಿಹ ಪ್ರಾಣ ತೊಲಗಿದ ಬಳಿಕಿನ್ನು 2 ಸಂತೆಗೈದಿದ ಜನದಂತೆ ಪಂಚೇಂದ್ರಿಯವ ನಾಂತ ದೇಹವು ವ್ಯರ್ಥ ಅಂತರಾತ್ಮನು ಹೋಗೆ 3 ರಸನೆ ತೊದಲುವ ಮೊದಲು ಅಸುವು ಪೋಗುವ ಮೊದಲು ಅಸುರಾರಿ ಎಂಬ ಮಧುವ ರಸನೆಯೊಳಿಡೋ ಮನುಜ4 ದಿನದಿನ ಹರಿಕೃಷ್ಣ ವನಮಾಲಿಯ ನುತಿಸೋ ತನುವ ಪ್ರಾಣವ ಬಿಡುವ ದಿನವನರಿಯೆ ನೀನು 5 ದೇವದೇವನೆ ನಿನ್ನ ಸೇವಕನೆಂದೆನ್ನ ಭಾವಿಸೋ ಮದನಾಂಗ ಮಾವಿನಕೆರೆರಂಗ6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏನೆಂದರು ಸರಿ ಬೀಳ್ವದು ನಮ್ಮ ಶ್ರೀನಿವಾಸನ ಮಹಿಮಾನುಸಂಧಾನದಿಂ ಪ. ಶಯ್ಯದಿಂದೇಳುತ ಶಾರೀರದಾಲಸ್ಯದಿಂ- ದಯ್ಯ ಅಪ್ಪ ಅಮ್ಮನೆಂಬುವರಾ- ಜೀಯನ ಗುಣನಾಮಕನುವಾಗಿ ತಿಳಿದರೆ ಕಯ್ಯ ಪಿಡಿದು ಕಾವ ಕರುಣಾಳು ರಾಜಗೆ 1 ಅಪತತ್ವದಲಿ ನಿಂತು ಅಪ್ಯಾಯನ ಮಾಳ್ಪ ತಪ್ಪನೆಂಬುದಕಿದು ಕಾರಣವು ಮುಪ್ಪುರಹರನಯ್ಯನು ಪೆತ್ತ ದೊರೆಯನು ಒಪ್ಪಲಾರದೆ ಅಮ್ಮ ಅಯ್ಯನೆಂಬುವ ನಾಮ 2 ಕುರಿಯೊ ಮರಿಯೊ ಎಂಬ ದಾತಗೆ ಭಿನ್ನ ಹ- ವರವುದು ಹರಿಗೆ ಮೂಜನವೆಲ್ಲವು ಕುರಿಯಂತೆ ವಶ್ಯವಾಗಿರುವುದು ಭವಬಂಧ ಹರಿದ ಜ್ಞಾನದ ಮುಳ್ಳಮುರಿಯೆಂಬ ಭಾವದಿಂ 3 ಮೂರಾರು ಪುರಾಣ ಮೂಲ ರಾಮಾಯಣ ಭಾರತ ಪಂಚರಾತ್ರಾದಿಗಳು ಸೇರಿ ಪೇಳುವುದೆಲ್ಲ ಸಿರಿಯರಸನ ನಾಮ ವಾರಿಧಿಯೊಳಗಿನ ತೆರೆಗಳಂದದಿ ತೋರ್ಪ 4 ನಾದ ಬಿಂದು ವರ್ಣದಾತನುದಾತ್ತ ಸ್ವ ರಾದಿ ಸಕಲ ಶಬ್ದ ವಾಚ್ಯ- ನಾದ ಶ್ರೀದೇವಿಯರಸ ವೆಂಕಟರಾಜನರಿವಂಥ ಹಾದಿಯ ತಿಳಿದರಗಾಧ ಮಹಿಮಾ ನಿನ್ನ 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನೆಂದು ನುಡಿವೆ ನಿನ್ನವರಂತೆ ಕೇಡು ಬುದ್ಧಿ ಎನ್ನೊಳಗಿಲ್ಲ - ಗುಣಹೀನರಲ್ಲದ ಈ ನರರ ಪಾಲಿಪ ಬುದ್ಧಿ ನಿನ್ನೊಳಗಿಲ್ಲ ಪ ತರಳ ಪ್ರಹ್ಲಾದನಂದದಿ ನಿನ್ನ ರೂಪನು ಕೆಡಿಸಲಿಲ್ಲನರನಂತೆ ಬಂಡಿಬೋವನ ಮಾಡಿ ನಿನ್ನ ದುಡಿಸಲಿಲ್ಲಪರಾಶರನಂತೆ ನದಿಯೊಳಿದ್ದ ಹೆಣ್ಣ ಕೂಡಲಿಲ್ಲಗರುಡನಂದದಿ ನಿನ್ನ ಪೊತ್ತು ತಿರುಗಲಿಲ್ಲ 1 ಅನುದಿನ ಚರಿಸಲಿಲ್ಲಬಿನಗು ಬೇಡತಿಯಂತೆ ಸವಿದುಂಡ ಹಣ್ಣ ತಿನಿಸಲಿಲ್ಲಇನಕುಲ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲಘನ ಪಾತಕದಜಮಿಳನಂತೆ ನಾರಗ ಎನ್ನಲಿಲ್ಲ2 ಕದನದೊಳು ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲವಿದುರನ ತೆರನಂತೆ ಸದನವ ಮುರಿದು ನಿನ್ನ ಬೆರೆಯಲಿಲ್ಲಮದಗಜದಂತೆ ಮಕರಿಗೆ ಸಿಲ್ಕಿ ಒರಲಲಿಲ್ಲಗದರಿ ಶಿಶುಪಾಲನಂದದಿ ನಿನ್ನನುಪೇಕ್ಷಿಸಿ ಜರೆಯಲಿಲ್ಲ3 ಬುವಿಯೊಳು ಬಲಿಯಂತೆ ದಾನವ ನೀಡಲಿಲ್ಲಭವನಂತೆ ಶ್ಮಶಾನದಿ ಮನೆಮಾಡಿ ಸ್ಮರಿಸಲಿಲ್ಲತವ ಪುಂಡರೀಕನಂತೆ ಹಲಗೆಯಿಟ್ಟಿಗೆ ಮೇಲೆ ನಿಲಿಸಲಿಲ್ಲಭುವನದೊಡೆಯ ನೆಲೆಯಾದಿಕೇಶವನ ಮರೆಯಲಿಲ್ಲ4
--------------
ಕನಕದಾಸ
ಏನೆಂದು ಬಣ್ಣಿಪೆ ಶ್ರೀನಾಥ ನಿನ್ನಯ ಆನಂದ ಮಹಿಮೆಗಳಾ ಸ್ವಾಮಿ ಆ ನಾಕು ಶೃತಿಗಳು ಮೌನವ ಹಿಡಿದವು ಅನಿರ್ವಚನೀಯಗಳಾ ಸ್ವಾಮಿ 1 ವಾರಿಧಿ ಪಾತ್ರೆಯು ನೀರನೆ ಮಸಿ ಮಾಡಿ ಧಾರುಣಿ ಹಲಗೆಯಲಿ ಸ್ವಾಮಿ ಮೇರು ಲೇಖಣಿಯಿಂದ ಶಾರದೆ ಬರೆಯಲು ಪಾರ ಗಾಣಲಿಲ್ಲೋ ಸ್ವಾಮಿ 2 ಉರಗೇಂದ್ರ ಸಾಸಿರ ವೆರಡ ನಾಲಿಗೆಯಿಂದ ತೆರವಿಲ್ಲ ಹೊಗಳಲಿಕ್ಕೇ ಸ್ವಾಮಿ ಸಾರಥಿ ನಿನ್ನದಾ ಸರಸ್ತುತಿರತಿ ನೀಡೋಸ್ವಾಮಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂಬೆ ನಿಮ್ಮ ಕರುಣವು ದೇವವರ್ಯ, ಶ್ರೀಮ- ಪ ದಾನಂದತೀರ್ಥಾರ್ಯ ಹರಿಕಾರ್ಯಧುರ್ಯ ಅ.ಪ. ವಾರಿಧಿಯ ಗೋಷ್ಪಾದ ನೀರಂತೆ ದಾಟ್ಯಂದುಮಾರು ಮಲೆತಾಕ್ಷನನು ಮುರಿದು ಮೆರೆದೆಸಾರಿ ಬಹ ರಕ್ಕಸರ ಮುರಿದÉೂಟ್ಟಿ ನೀನಿಂದುಮೇರೆಯಿಲ್ಲದ ಭವಾಂಬುಧಿಯ ದಾಟಿಸಿದೆ 1 ದಾನವನಶೋಕವನ ಕಿತ್ತು ಈಡ್ಯಾಡಂದುಶ್ರೀನಾಥಗೆನುತ ಲಂಕೆಯನುರುಪಿದೆಮಾನವರ ಶೋಕವನ ಬೇರೊರಸೆ ಕಿತ್ತಿಂದುದಾನವರಿಹ ಪುರವ ಪೂರೈಸಿ ಮೆರೆದೆ 2 ಬೇಗ ಸಂಜೀವನವ ತಂದಿತ್ತು ಪೊರೆದ್ಯಂದುನಾಗಪಾಶದಿ ನೊಂದ ಕಪಿಕಟಕವಈಗ ಹರಿಭಕುತಿ ಸುಧೆಯ ನೆರೆದು ಪಾಲಿಸಿದೆರಾಗದಿಂ ಭವಪಾಶಬದ್ಧ ಜನರುಗಳನ್ನು 3 ಭವಾಬ್ಧಿ ಮಗ್ನ ಜನಗಳನಿಂದು 4 ಹತ್ತು ದಿಕ್ಕನು ಗೆಲಿದು ರಾಜಸೂಯದಿ ಅಂದುಚಿತ್ತೈಸಿ ಹರಿಗಗ್ರ ಪೂಜೆಯನು ಮಾಡಿದೆಹತ್ತೆರಡು ಮತ್ತೊಂದು ದುರ್ಭಾಷ್ಯ ಜರಿದಿಂದು ಬಿತ್ತರಿಸಿದೆ ಭಾಷ್ಯದಿಂದಗ್ರಪೂಜೆಯನು 5 ದ್ರೌಪದಿಯ ಸಂತವಿಟ್ಟಂದು ಮುಡಿ ಪಿಡಿದೆಳೆದಪಾಪಿ ದುಶ್ಶಾಸನನ ಬಸುರನ್ನು ಬಗೆದೆಪಾಪಿ ಜನರುಗಳೆಳೆಯೆ ವೇದಾಂತ ದೇವಿಯರಶ್ರೀಪತಿಗೆ ಸೇರಿಸಿದೆ ಭಾವವರಿದಿಂದು 6 ಅಂದು ಕಲಿಯಂಶ ದುರ್ಯೋಧನನ ಸಂದುಗಳಕುಂದದೆ ಮುರಿದೆ ಗದೆಯಿಂದ ಸದೆದುಇಂದು ಕಲಿಯನನೇಕ ಶಾಸ್ತ್ರ ಶಸ್ತ್ರಗಳಿಂದಕೊಂದೆಳೆದೆ ಹರಿಯ ಮನ್ನೆಯದಾಳು ಭಳಿರೆ 7 ಶ್ರುತಿಪಂಕಜಗಳರಳೆ ಅಜ್ಞಾನ ತತಿಯೋಡೆಗತಿಗಳಡಗೆ ಮಿಥ್ಯವಾದಿ ಖಳರಕುಮತಗಳು ಮುರಿಯೆ ಸತ್ಪಥವು ಕಾಣಿಸಲುವಿತತವಾಯಿತು ನಿನ್ನ ಪ್ರಭೆ ಸೂರ್ಯನಂತೆ 8 ಜ್ಞಾನಚಂದ್ರಿಕೆ ಪೊಳೆಯೆ ಭಕ್ತಿವಾರಿಧಿಯುಕ್ಕೆಮನ ಚಕೋರವು ವಿಷ್ಣುಪದದಿ ನಲಿಯೆದೀನ ಜನ ಭಯವಡಗೆ ತಾಪತ್ರಯಗಳೋಡೆಆನಂದತೀರ್ಥೇಂದು ಶ್ರೀ ಕೃಷ್ಣ ತಾ ಮೆಚ್ಚೆ 9
--------------
ವ್ಯಾಸರಾಯರು
ಏನೆಂಬೆನು ಪವಮಾನ ದೇವನಲಿ ಶ್ರೀನಿವಾಸ ಕರುಣಾ ತಾನಾಗೀತನಕಡೆಯಲಿ ಬಹ ಲಕ್ಷ್ಮೀಮಾನ, ದೀನ ಶರಣಾ ಪ. ದುರುಳ ದಶಾಸ್ಯನ ಸೆರೆಯೊಳಗಿಕ್ಕಿದ ಸುರವರನಣುಗನನೂ ನೆರೆಯದೆ ಮಾರುತಿ ಇರುವ ನಿಮಿತ್ತದಿ ಕರಿಸಿದ ರವಿಜನನು ತಿರುಗಿ ದ್ವಾಪರದಿ ಬರಲಾರ ರವಿಜನ ನರನಿಂದೊರಸಿದನು ಎರಡು ಯುಗದೊಳೀ ತೆರದಲಿ ಭಾರತಿ ವರನನು ಸೇರಿದನು 1 ಶ್ರೀಕರ ಜೀವರಿಗೇಕೀ ಭಾವವ ಪೋಕ ಮೃಗಗಳಂದೂ ಕಾಕರಟನದಂತೊರೆವದನರಿತು ದಿ- ವೌಕಸಗಣಬಂದು ಶ್ರೀಕಮಲಾಸನ ವಂದ್ಯನೆ ಸಲಹೆನೆ ಸಾಕುವ ತಾನೆಂದೂ ಈ ಕಲ್ಯಾಣ ಗುಣಾಢ್ಯನ ಭೂಮಿಗೆ ತಾ ಕಳುಹಿದನಂದು 2 ಅದರಿಂ ತರುವಾಯದಲಿ ಸುಖಾಂಭುದಿ ಒದಗಿದ ತ್ವರೆಯಿಂದ ಪದುಮನಾಭ ಮೂರುತಿಯ ಕೆಲದಿ ನಿಂ- ದದುಭುತ ಭರದಿಂದಾ ವಿಧಿಭವ ಲೋಕಾದ್ಯಧಿಕೃತ ಪುಣ್ಯಾ ಸ್ಪದ ತೋರುವೆನೆಂದಾ ವಿಧಿ ಪದ ಯೋಗ್ಯನ ಚದುರತನಕೆ ಮೆಚ್ಚಿ ಪೂರ್ಣಾನಂದ 3 ವರ ವೈಕುಂಠವ ರಜತ ಪೀಠ ಸ- ತ್ಪುರದೊಳಗಿರಿಸಿಹನು ವಿರಜೆಯ ಮುನಿಕಡತ ಸರಸಿಗೆ ಕರೆಸಿದ ಮುರದಾನವಹರನು ಚರಣಾಂಬುಜಕಿಂಕರವರ ಚಂದ್ರೇ- ಶ್ವರನಲಿ ಕರುಣವನು ಇರಿಸಿ ಭಜಿಪ ಸುರತರುವೆನಿಸಿದ ಶ್ರೀ- ವರನ ಮಹಾತ್ಮೆಯನು 4 ಜ್ಞಾನಾನಂದಾಂಬುಧಿ ಶೇಷಾದ್ರಿಯ ಶ್ರೀನಿವಾಸನಿವನು ತಾನಾಗಿಲ್ಲಿಗೆ ಬಂದಿಹ ಭಕ್ತಾ- ಧೀನ ದಯಾಕರನು ಮಾನಸಗತ ಮಾಲಿನ್ಯವ ಕಳೆದನು ಮಾನವ ಬಿಡಿಸುವನು ನಾನಾಭೀಷ್ಟವ ನಿರವಧಿ ಕೊಡುತಿಹ ಮೌನಿ ಜನಾರ್ಚಿತನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಏಳಯ್ಯ ಏಳಯ್ಯ ಬೆಳಗಾಯಿತೂ ಪ ಸುಳಿ | ನಾಭಿ ಸಂಭವ ಸುತನೆ ಅ.ಪ. ಸಾಮಜ ವರದ ಶ್ರೀರಾಮ ಬಂದಿಹನಯ್ಯ | ಭೂಮಿಜೆಯ ಪುಡುಕಲ್ಕೆ |ನೇಮದಿಂದಲಿ ನೀನು | ಶ್ಯಾಮಲಾಂಗನ ಕಂಡುಭೂಮ ಗುಣನಿಧಿ ಸು | ಪ್ರೇಮ ಪಡೆ ಹೊತ್ತಾಯಿತು 1 ತಾಲಸಪ್ತವ ಹಣಿಸು | ವಾಲಿ ಮಥನ ಗೈಸುನೀಲ ಜಾಂಬವ ಸುಷೇ | ಣಾದಿಗಳ ಕರೆ ಕಳಿಸು |ಶ್ರೀಲೋಲನಾಜ್ಞೆಯಲಿ | ಕಾಲಮೀರುವ ಮುನ್ನಲೋಲ ಲೋಚನೆ ವಾರ್ತೆ | ತಿಳುಹ ಬೇಕಯ್ಯಾ 2 ಬಿಂಕ ಮುರಿಯಲಿ ಬೇಕು |ಲಂಕಾಪುರದೊಳು ಮಾತೆ | ಗಂಕವೀಯಲಿ ಬೇಕುಅಂಕಕಾರನು ರಾಮ | ನಂಕೆ ಸಲಿಸಲಿ ಬೇಕು 3 ಶರಧಿ ಬಂಧಿಸಬೇಕು | ಧುರವ ಜೈಸಲು ಬೇಕುವರ ಭೂಮಿ ಜಾಕೃತಿಯ | ತ್ವರ ತರಲಿ ಬೇಕುವರ ವಿಭೀಷಣನಿಗೆ | ಅರಸುತನ ಕೊಡಬೇಕುಮರಳಿ ಅಯೋಧ್ಯಗೆ | ತೆರಳ ಬೇಕಯ್ಯಾ 4 ಉರ ರಕ್ತ ಕುಡಿಬೇಕುಧರಣಿ ಭಾರವ ನಿಳುಹಿ | ತರುಣಿ ಶಿಖೆ ಬಿಗಿಬೇಕು 5 ಅದ್ವೈತ ಗೆಲಬೇಕುಬುದ್ಧಿಪೂರ್ವಕವಾಗಿ | ಸಿದ್ದ ಮುನಿ ಜನರಿಂದಮುದ್ದುಕೃಷ್ಣನ ಪೂಜೆ | ವಿಧಿಸಲೀ ಬೇಕೂ 6 ಸಾರ ಗ್ರಂಥವ ರಚಿಸಿಮೂರ್ಮೂರು ಭಕುತಿಲಿ | ಹರಿಯ ಪೂಜಿಸಬೇಕು |ಮೂರ್ಲೋಕ ದೊರೆ ಗುರು | ಗೋವಿಂದ ವಿಠಲನಸಾರ್ವಕಧಿಪತಿಯೆಂದು | ಸಾರಲೀ ಬೇಕೂ 7
--------------
ಗುರುಗೋವಿಂದವಿಠಲರು
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ