ಒಟ್ಟು 190 ಕಡೆಗಳಲ್ಲಿ , 48 ದಾಸರು , 173 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೆಂಗಳೆಯರು ನಾವು ರಂಗೈಯ್ಯ ಮಾನಂಗಳ ಕಾಯಬೇಕೋ ಭಂಗ ಬಡುವೆವು ಮಂಗಚೇತನದಂಬಿಗನು ವಾಸಂಗಳನು ನೆರೆ ಸೆಳೆದಿಹಾನು ಪ ಗೋಪಿವೃಂದವು ಕೂಡಿ ಚಿತ್ತದ ಸಂತಾಪ ನೀಗಲು ಮಾಡಿ ತೋಷಗೊಳಿಸಲು ಪಾಪಿಯಂಬಿಗ 1 ಬಯಕೆಯಾ ಹಾರವನು ನಾವೆಲ್ಲರು ವಯನಾಗಿ ಕಟ್ಟಿದ್ದೆವೋ ಮಾಡ್ದೆವು ಮತಿಯು ಪೋದುದು ನಯನದಿಂದವುಗಳನೆ ನೋಡದೆ ಬಯಲುಮಾಡಿದೆವಿತ್ತೀಕಂಗೆ 2 ಎಷ್ಟು ಬಳಲುತಿಹೆವೊ ಶ್ರೀಕೃಷ್ಣ ನಿನ್ನಿಷ್ಟಕ್ಕೆ ಬಂದುದೇನೋ ಇಷ್ಟು ಪರಿಯಲ್ಪರಿವುದೇತಕೆ ಇಷ್ಟ ಮೂರುತಿ ಕೃಷ್ಣನೀಗಲೆ ದುಷ್ಟ ಅಂಬಿಗನಂಗ ತೊಲಗಿ ಶಿಷ್ಟ ನರಸಿಂಹ ವಿಠ್ಠಲಾದ 3
--------------
ನರಸಿಂಹವಿಠಲರು
ಹೆಚ್ಚುಕಡಿಮೆಯೆಂದು ಹೆಣಗಾಡಬೇಡಿ ಸಚ್ಚಿದಾನಂದ ಬ್ರಹ್ಮನ ಗುಟ್ಟು ನೋಡಿ ಪ ಪರಮಾತ್ಮ ಕಾಯದೊಳಿರುತಿರ್ಪತನಕಾ ಪರಿಪರಿ ಹೆಸರಿಂದ ಕರಿವರು ಅನಕಾ ಶರೀರ ಭೋಗವ ತೀರಿಸಿಕೊಂಡು ಹೋಹಾಗೆ ಲ್ಲರಿಗೊಂದೆ ಪೆಸರಿಂದ ಕರೆಯುವರಾಗಾ 1 ಅರಸು ಮಂತ್ರಿ ಕರಣೀಕ ತಳವಾರಾ ಕವಿ ಶಾಸ್ತ್ರಿ ಉದಾರಾ ಪರಿಯ ನಾಮಗಳಿಂದ ಉಪಾಧಿಯೋಗಾ ಪರಮಾತ್ಮ ತೊಲಗಲು ಹೆಣವೆಂಬರಾಗಾ 2 ಪರಮಾತ್ಮನಾಟದ ಲೀಲೆ ಇದೆಲ್ಲಾ ಗುರುಪುತ್ರನಾದ ಮಹಾತ್ಮನೆ ಬಲ್ಲಾ ಗುರು ವಿಮಲಾನಂದ ಶರಧಿಯೊಳಾಡಿ ಹಿರಿದು ಕಿರಿದು ಯಾವಲ್ಯುಂಟೆಂದು ನೋಡಿ 3
--------------
ಭಟಕಳ ಅಪ್ಪಯ್ಯ
ಹೊನ್ನು ಹೆಣ್ಣು ಮಣ್ಣು ಮೂರನು ಬಿಟ್ಟು ಚರಿಸುವವ ಯೋಗಿ ಬಣ್ಣ ಸಣ್ಣ ಸರ್ವಾಭರಣವಿಟ್ಟು ಮೆರೆವನು ಬೋಗಿ ಪ ನಾರಿಯರದನು ಕಂಡು ಥೂ ಎಂದುಗುಳಿ ತೊಲಗುವಯೋಗಿ ಭೋಗಿ ಘೋರ ತಪವ ಚರಿಸಿ ಅಡವಿಸೇರಿ ಕೊಂಬನು ಯೋಗಿ ಭೋಗಿ 1 ಮಾಯೆಯಳಿದು ವಸ್ತುವರಿತು ಚರಿಸುತಿಹನು ಯೋಗಿ ಜಾಯೆ ಸುತರ ಸಿರಿಯ ನೆಚ್ಚಿ ಹಿಗ್ಗುತಿಹನು ಭೋಗಿ ಬಾಯ ಬಿಡದೆ ಮೌನಿಯಾಗಿ ಜಪಿಸುತಿಹನು ಯೋಗಿ ಭೋಗಿ 2 ಕುಲದಲಾವನೆಂದು ಜನಕೆ ತಿಳಿಯ ಬಾರದವನು ಯೋಗಿ ಹೊಳಲಿನೊಳಗೆ ಸುಳಿದು ಸುಳಿದು ನಲಿಯುತಿಹನು ಭೋಗಿ ಚಲನ ಭವನ ಕೋಣೆ ಲಕ್ಷ್ಮೀರಮಣನು ತಾನೆಯಾಗಿ ಒಳಗು ಹೊರಗು ಬೆಳಗುತಿಹನು ಯೋಗಾನಂದನಾಗಿ 3
--------------
ಕವಿ ಪರಮದೇವದಾಸರು
ಹ್ಯಾಂಗೆ ಉದ್ದರಿಸುವಿ ಎನ್ನ ಕೃಷ್ಣ ಕರುಣ ಸಂಪನ್ನ ಪ ಹೋಗಿ ಹೊಗಿ ವಿಷಯ ಕೂಪದಲ್ಬೀಳ್ವವನಾಅ.ಪ. ದಾಸನು ಎಂದೆನಿಸಿ ಮೆರೆವೆ ಮನದೀ ಲೇಶಾ ಭಕುತಿಯನಾನೊಂದರಿಯೇ ವೇಷಹಾಕಿದೆ ಧನಕೆ ಬರಿದೇ ಆಶೆ ಇಟ್ಟು ಭವದಿ ವಂಚಕನೆನಿಸಿದವನಾ1 ಮಂದಿ ಜನರ ಮುಂದೆ ವೈರಾಗ್ಯನಟನೆ ಮಂದಿರದೊಳು ಬಹು ಕಾಮದ ಭಜನೆ ಬಂಧು ಬಳಗ ಕೂಡೆ ಬಹಳ ಭಕ್ತಿ ಇಂದಿರೇಶನ ಧ್ಯಾನ ದೋಳ್ವಿರಕ್ತಿ2 ಗುರುಹಿರಿಯರ ಜರಿವೊದೆ ಜಪವು ದುರುಳರ ಸಂಗ ದೋಳ್ಮೆರೆವೋದೆ ವ್ರತವು ಪರಿಸರನ ಶಾಸ್ತ್ರದೋಳ್ಮೌನ ನರನಾರಿ ಸ್ತವ ದೋಳ್ಧ್ಯಾನ 3 ವೇದ ಓದಿದೆ ನಾನು ಆದರೇನು ಮೋದತೀರ್ಥರ ಮರ್ಮ ಸಿಗಲಿಲ್ಲವು ಇನ್ನು ವಾದಕ್ಕನುಕೂಲ ವಾಯ್ತದು ಅಷ್ಟೆ ಖೇದ ತೊಲಗದೆ ಮನದಿ ಬಹುಕಷ್ಟಪಟ್ಟೇ 4 ಭುಕ್ತಿ ಪಡೆಯೆ ಕಾಲಕಳೆದೆನಲ್ಲಾ ಯುಕ್ತಿಯಿಂದಲಿ ನೀನು ಒಲಿವೋನು ಅಲ್ಲಾ ಭಕ್ತ ಜನರ ಸಂಗ ನಾ ಪಿಡಿಯಲಿಲ್ಲ ಮುಕ್ತಿಗಾಗುವ ಭಾಗ್ಯ ಎನ್ನಲಿಲ್ಲವಲ್ಲಾ 5 ಸ್ವೋತ್ತುಮರ ನೋಡೆ ಮಾತ್ಯರ್ಯ ಎನಗೇ ವಾತ್ಯಲ್ಯ ತೋರೆನು ಸ್ಧಾವರ ಜನಕೇ ಕುತ್ಸಿತ ಪಾವಡ ಬೀರುವೆ ಜಗಕೆ ತಾತ್ಸಾರ ತೋರುವೆ ಭಕ್ತರ ಗುಣದೀ6 ಈಷಣ ತ್ರಯಗಳ ಬಿಡಲಿಲ್ಲ ಲೇಶಾ ಭಾಷಣದಿ ತೋರ್ಪೆಜ್ಞಾನ ಪ್ರಕಾಶ ಈಶ ನೀನೊಬ್ಬನೆ ಸರಿಯೆಂಬೆ ಹರಿಯೆ ದಾಸನಾಗಿ ಬಾಳ್ವೆ ಬಹು ನೀಚ ಜನಕೆ 7 ನಾನು ನಾನೆಂಬುದು ತುಂಬಿದೆ ಮನದಿ ನೀನು ನಿನ್ನಾಧೀನ ವೆಂತ್ಹೇಳಿ ದೃಢದಿ ಜ್ಞಾನವಿದ್ದರು ಇಲ್ಲ ಎನಚರ್ಯೆ ನೋಡೆ ಮಾನಿನಿಯರ ಬೊಂಬೆ ಗುಣಗಣನೆ ಮಾಡೆ 8 ಮೂರೊಂದು ಹರಿತ್ಯಾಗ ತೊರೆಯಲಿಲ್ಲ ವೈರಿ ಆರರ ಬೇರು ನಾಕೀಳಲಿಲ್ಲ ವೀರ ವೈಷ್ಣವನಾಗಿ ಬಾಳಲಿಲ್ಲಾವಲ್ಲ ಗಾರು ಮನ್ನಿಸದಿರೆ ಗತಿಯೊಬ್ಬರಿಲ್ಲಾ 9 ವ್ರತನೇಮ ಉಪವಾಸ ಸಾಧನೆಯಿಲ್ಲ ರತಿಯಿಂದ ಸಲಹೆಂದು ನಾಕೂಗಲಿಲ್ಲ ಮತಿ ಮತದಿ ಪುಟ್ಟಿದರು ಫಲವಾಗಲಿಲ್ಲ ಗತಿ ನೀನೆ ಕೈ ಪಿಡಿಯೊ ಕೇಳುತ ಸೊಲ್ಲ 10 ಡಂಭಕ ತನದಿಂದ ಬಹುಕಾಲ ಕಳೆದೇ ತುಂಬಿ ಭಕ್ತಿಯ ಬೇಗ ನೀ ಕಾಯೋಮುಂದೆ ಜಂಭಾರಿ ಜಯತೀರ್ಥ ವಾಯ್ವಾಂತರ್ಗತನಾದ ಕಂಬುಕಂಧರಧಾರಿ “ಶ್ರೀ ಕೃಷ್ಣವಿಠಲ” 11
--------------
ಕೃಷ್ಣವಿಠಲದಾಸರು
ಅರಿಯಧಮನ ಸಂಗ ಕರಗಿದ್ದ ಹಿತ್ತಾಳೆಒರೆದು ನೋಡಲು ಬಣ್ಣ ಬರುವುದೇ ಹೇಳಿ ಪ.ಮಂಜುನೀರನೆ ತಂದು ತಂದನವ ಹದಮಾಡಿಒಂದಾಗಿ ಕೂಡಿ ಪರಿಮಳವ ಬೇಗಹಂದಿಯನು ಕರೆದು ಸೆಲೆ - ಪೊಸಲು ಅದು ತನ್ನಗಂಜಲವ ನೆನೆನೆನೆದು ಹೋಹಂತೆ ರಮಣಿ 1ಚೀನಿಕೋಲನೆ ತಂದು ಕೊರೆದು ತುಂಡನೆ ಮಾಡಿಶ್ವಾನನನು ಕರೆದು ಬಾಯೊಳಗಿರಿಸಲುತಾನದನು ಸವಿಸವಿದು ನೋಡಲರಿಯದ ತನ್ನದನದ ಮೂಳೆಯ ನೆನೆದು ಹೋಹಂತೆ ರಮಣಿ 2ಅಂತರವನರಿಯದಲೆ ಮಿಯಾ ಹೋಗುವುದರಿಂದಅಂತೆ ಇರುವುದೇ ಲೇಸು ಬಹು ಪ್ರೌಢರುಚಿಂತಿತಾರ್ಥವನೀವ ಸುಗುಣ ಪುರಂದರವಿಠಲನೆಂತೆಂತು ಭಜಿಸಿದರೆ ಅಂತಂತೊಲಿವನಲ್ಲರೆ 3
--------------
ಪುರಂದರದಾಸರು
ಆಚ್ಯುತಾನಂತ ಗೋವಿಂದ-ಹರಿ |ನಾರಾಯಣ ನಿನ್ನ ನಾಮ-ಎನ್ನ |ಮಾಧವಮಂಗಳಗಾತ್ರ-ಸ್ವಾಮಿ |ಗೋವಿಂದ ಗೋಪಾಲ ಬಾಲ-ಸೋಳ |ವಿಷ್ಣುಚಕ್ರವು ಬಂದು ಸುತ್ತಿ-ಮೂರು |ಮಧುಸೂದನ ಮಾರಜನಕ-ನೀನು |ತ್ರಿವಿಕ್ರಮ ತ್ರೈಲೋಕ್ಯನಾಥ-ದೇವ |ವಾಮನರೂಪದಿ ಬಂದು-ಬಲಿಯ |ಶ್ರೀಧರ ಶೃಂಗಾರಾಧಾರ-ದಿವ್ಯ |ಹೃಷೀಕೇಶ ವೃಂದಾವನದಲಿ-ನೀ |ಪದ್ಮನಾಭನೆ ಕೇಳೊ ಮುನ್ನ-ಎನ್ನ |ದಾಮೋದರ ದನುಜಹರಣ-ಹರಿ |ಸಂಕರ್ಷಣ ಸರುವಾಭರಣ-ಇಟ್ಟು |ವಾಸದೇವ ಕೇಳೊ ನಿನ್ನ-ದಿವ್ಯ |ಪ್ರದ್ಯುಮ್ನ ನೀನೆಂದು ಕರೆಯೆ-ದುರ್ |ಅನಿರುದ್ದ ಗೋಕುಲದಲ್ಲಿ-ನೀಪುರುಷೋತ್ತಮಗಾರು ಸಾಟಿ?-ಶ್ರೀ |ಅಧೋಕ್ಷಜಅಸುರಸಂಹಾರಿ-ದೇವ |ನರಸಿಂಹರೂಪವ ತಾಳಿ-ಬಂದೆ |ಅಚ್ಯತ ನೀನಲೆ ಮುದ್ದು-ಗೋಪಿ |ಜನಾರ್ಧನ ಕೇಳೊ ಬನ್ನಪವ-ನೀ |ತೊಲಗಿಸು ಬಂದೆನ್ನ ಮನದ ಕಲುಷವ ||ಉಪೇಂದ್ರನುರಗನ ತುಳಿಯೆ-ಆಗ |ಹರಹರಿ ಎಂದರೆ ಪಾಪ-ರಾಶಿ |ಕೃಷ್ಣ ಕೃಷ್ಣನೆಂಬ ಸೊಲ್ಲ-ಕೇಳಿ |
--------------
ಪುರಂದರದಾಸರು
ಇನ್ನಾದರೂ ಹರಿಯ ನೆನೆಯೊ ನೀ ಮನುಜಾ |ಮುನ್ನಾದ ದುಃಖಗಳು ನಿಜವಾಗಿ ತೊಲಗುವುವು ಪ.ಊರೂರ ನದಿಗಳಲಿಬಾರಿ ಬಾರಿಗೆ ಮುಳುಗಿ |ತೀರದಲಿ ಕುಳಿತು ನೀ ಪಣೆಗೆನಿತ್ಯ ||ನೀರಿನಲಿ ಮಟ್ಟಿಯನು ಕಲಸಿ ಬರೆಯುತ ಮೂಗು - |ಬೇರನ್ನು ಪಿಡಿದು ಮುಸುಕಿಕ್ಕಲೇನುಂಟು 1ನೂರಾರು ಕರ್ಮಂಗಳನ್ನು ಡಂಭಕೆ ಮಾಡಿ |ಆರಾರಿಗೋ ಹಣದ ದಾನಕೊಟ್ಟು |ದಾರಿದ್ರ್ಯವನು ಪಡೆದು ತಿರಿದಿಂಬುವುದಕೀಗ |ದಾರಿಯಾಯಿತೆ ಹೊರತು ಬೇರೆ ಫಲವುಂಟೇ? 2ಕಾಡುದೈವಗಳನ್ನು ಚಿನ್ನ - ಬೆಳ್ಳಿಗಳಿಂದೆ |ಮಾಡಿಕೊಂಡವರ ಪೂಜೆಯನೆ ಮಾಡಿ |ಕಾಡುಕಳ್ಳರು ಬಂದು ಅವುಗಳನು ಕೊಂಡೊಯ್ಯೆ |ಮಾಡಿಕೊಂಡಿರ್ದುದಕೆ ಬಾಯಬಡಕೊಳ್ಳುವೆ 3ಮಗನ ಮದುವೆಯು ಎಂದು ಸಾಲವನು ಮಾಡಿ ನೀ |ಸುಗುಣಿಯೆನ್ನಿಸಿಕೊಳಲು ವ್ಯಯ ಮಾಡಿದೆ ||ಹಗರಣವ ಪಡಿಸಿದರೆ ಸಾಲಗಾರರು ಬಂದು |ಬಗೆಬಗೆಯೊಳವರ ಕಾಲ್ಗೆರಗಿ ಬಿದ್ದಿರುವೆ 4ಕೆಟ್ಟುವೀ ಕೆಲಸಗಳ ಮಾಡಿದರೆ ಫಲವೇನು ? |ತಟ್ಟನೇ ಶ್ರೀಹರಿಯ ಪದವ ನಂಬಿ ||ದಿಟ್ಟ ಪುರಂದರವಿಠಲನೆ ಎಂದರೆ |ಸುಟ್ಟು ಹೋಗುವುವಯ್ಯ ನಿನ್ನ ಕಷ್ಟಗಳು 5
--------------
ಪುರಂದರದಾಸರು
ಈ ಸಿರಿಯ ನಂಬಿ ಹಿಗ್ಗಲಿ ಬೇಡ ಮನವೇ ಪ.ವಾಸುದೇವನ ಭಜಿಸಿ ಸುಖಿಯಾಗು ಮನವೇ ಅಪಮಡದಿ ಮಕ್ಕಳು ಕಡೆಗೆ ತೊಲಗುವರೊ ಮರುಳೆ 1ವೈಕುಂಠನ ಭಜಿಸು ನೀ ಭ್ರಷ್ಟ ಮನವೆ 2ನಿಷ್ಠೆಯಿಂದಲಿ ಭಜಿಸು ದುಷ್ಟಮನವೆ* 3
--------------
ಪುರಂದರದಾಸರು
ಎಂದಿಗೆ ಬಹನೆ ಕೃಷ್ಣ ಮಂದಸ್ಮಿತಾನನೆ |ಅಂದದಿಂದಿರುವ ತನ್ನಯ ವೃಂದಾವನ ಬಿಟ್ಟಿಲ್ಲಿಗೆ ತವಕದಿ ಪತರುಣೀ, ಗೋಕುಲದೊಳಗಿಹ ಸಖಿಯರು ಎಂಥಾ ಧನ್ಯರೆ |ಪರಮಾತ್ಮನ ಪೊಂದಿ ಇತರ ಕರಕರಿ ಅರಿಯಳೆ ||ಹರಿಯಿಂತೊಲಿದಿರಲವರೇನು ಸುರಲೋಕದ ಸ್ತ್ರೀಯರೇ |ಪರಿಪರಿ ಸುಖ ಸಾಗರದೊಳಗಿರುವರುಜರಿದುಮಧುರೆಯಲ್ಲಿಹದೆಂದು 1ಅಮ್ಮೆಏನೊಳ್ಳೆವರವರಾಳ್ವರು ಸಮ್ಮಾತಾಂತಲ್ಲವೆ |ನಮ್ಮನೆಯವರವರಂತೆ ಸುಮ್ಮನೆ ಇರುವರೆ ||ಬೊಮ್ಮನ ಜನಕೆಮೊಲಿಸಿದರೆ ಒಮ್ಮೆಗೆ ಪೇಳಿರೆ |ಸಮ್ಮಸಿ ಕೊಳ್ಳಲು ಮನದಿ ಸುಕರ್ಮದ ಪ್ರಬಲಿಗೆ ಘಮ್ಮನೆ ಬಹಸಖಿ 2ಅಲ್ಲೀ ಸ್ತ್ರೀಯರಕಿಂತಿತಿಶಯ ಚಲ್ವೆರ್ನಾವಲ್ಲವೆ |ಸುಳ್ಳಲ್ಲಿಂತಾಭರಣಾಂಬರವೆಲ್ಲಿ ಕಂಡಿಹರೆ ||ಗೊಲ್ಲಿತಿಯರು ನಮ್ಮಂದದಿ ಸೊಲ್ಲಿಸಬಲ್ಲರೆ |ಮಲ್ಲಮರ್ದನ ಪ್ರಾಣೇಶ ವಿಠಲೆಮ್ಮನು ಬಿಟ್ಟೆಲ್ಲಿ ಪೋಗನು 3
--------------
ಪ್ರಾಣೇಶದಾಸರು
ಏನೆಂತೊಲಿದೆ ಇಂತವರಂತೆ ಕೆಡುಬುದ್ಧಿ - ಎನ್ನೊಳಿಲ್ಲಗುಣ |ಹೀನರಲ್ಲದ ದೀನ ಜನರ ಪಾಲಿಪ ಬುದ್ಧಿ ನಿನ್ನೊಳಿಲ್ಲ ಪತರಳ ಪ್ರಹ್ಲಾದನಂದದಿ ನಿನ್ನಯರೂಪ ಕೆಡಿಸಲಿಲ್ಲನರನಂತೆ ತನ್ನ ಬಂಡಿಯ ಬೋವನ ಮಾಡಿ ಹೊಡಿಸಲಿಲ್ಲ ||ಸುರನದೀಸುತನಂತೆ ಪಣೆಯೊಳು ಬಾಣವ ಸಿಡಿಸಲಿಲ್ಲದೊರೆ ಅಂಬರೀಷನಂದದಿ ಈರೈದು ಜನ್ಮವ ಪಡಿಸಲಿಲ್ಲ 1ನಾರದನಂತೆ ಕಂಡವರ ಕೊಂಡೆಯವ ನಾ ಪೇಳಲಿಲ್ಲ |ಪರಾಶರನಂತೆ ನದಿಯೊಳಂಬಿಗ ಹೆಣ್ಣ ಕೊಡಲಿಲ್ಲ ||ಆ ರುಕುಮಾಂಗದನಂತೆ ಸುತನ ಕೊಲ್ಲಲು ಧೃಢಮಾಡಲಿಲ್ಲಮಾರುತನಂತೆ ನೀನುಣುತಿದ್ದ ಎಡೆಯ ಕೊಂಡೋಡಲಿಲ್ಲ 2ವಿದುರನಂತೆ ನನ್ನ ಸದನವ ಮುರಿದು ನಾ ಕುಣಿಯಲಿಲ್ಲಮದಕರಿಯಂತೆ ಮಕರಿಯ ಬಾಯೊಳು ಸಿಕ್ಕಿ ಒದರಲಿಲ್ಲ ||ಹೆದರದೆ ಬಲಿಯಂತೆ ಭೂಮಿಯ ಧಾರೆಯನೆರೆಯಲಿಲ್ಲಸದರ ಮಾತುಗಳಾಡಿ ಶಿಶುಪಾಲನಂತೆ ನಾ ಜರೆಯಲಿಲ್ಲ3ಸನಕಾದಿ ಮುನಿಯಂತೆಅನುದಿನ ಮನದೊಳು ಸ್ಮರಿಸಲಿಲ್ಲಇನಸುತ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲ ||ಬಿನುಗು ಬೇಡತಿಯಂತೆ ಸವಿದುಂಡ ಹಣ್ಣ ನಾ ತಿನಿಸಲಿಲ್ಲಘನ ಅಜಾಮಿಳನಂತೆ ಸುತನ ನಾರಗನೆಂದು ಕರೆಯಲಿಲ್ಲ4ವರ ಶೌನಕನಂತೆನಿತ್ಯ ಸೂತನ ಕಥೆ ಕೇಳಲಿಲ್ಲಪಿರಿದು ತುಂಬುರುನಂತೆ ನಾಟ್ಯ - ಸಂಗೀತವ ಪೇಳಲಿಲ್ಲ ||ಉರಗಾಧಿಪತಿಯಂತೆ ಉದರದೊಳಿಟ್ಟು ನಾ ತೂಗಲಿಲ್ಲಪಿರಿದು ಕುಚೇಲನ ತೆರನಂತೆ ಅವಲಕ್ಕಿ ಈಯಲಿಲ್ಲ 5ಭೃಗುಮುನಿಯಂತೆ ಗರ್ವದಿ ನಿನ್ನ ಎದೆಯನು ಒದೆಯಲಿಲ್ಲಅಗಣಿತ ಮಹಿಮ ನೀನಹುದೆಂದು ಧ್ರುವನಂತೆ ಪೊಗಳಲಿಲ್ಲ ||ಖಗರಾಜನಂತೆ ನಿನ್ನನು ಪೊತ್ತು ಗಗನದಿ ತಿರುಗಲಿಲ್ಲಅಗಜೆಯರಸನಂತೆ ಮಸಣದಿ ರಾಮನ ಸ್ಮರಿಸಲಿಲ್ಲ 6ಅವಹಿತದಲಿ ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲಯುವತಿ ದ್ರೌಪದಿಯಂತೆ ಪತ್ರಶಾಕವನುಣಬಡಿಸಲಿಲ್ಲ ||ತವೆ ಪುಂಡಲೀಕನಂದದಿ ಇಟ್ಟಿಗೆಯ ಮೇಲೆ ನಿಲಿಸಲಿಲ್ಲ ದೇವಇವರಂತೆಪುರಂದರ ವಿಠಲ ನಿನ್ನಯ ಕೃಪೆಯೆನ್ನೊಳಿಲ್ಲ7ಅಂಕಿತದಲ್ಲೂ ಇವೆ.)
--------------
ಪುರಂದರದಾಸರು
ತೊಲ ತೊಲಗೆಲೊ ಕಲಿಯೆ ನಿಲ್ಲದಿಲ್ಲಿ ಪ.ತೊಲ ತೊಲಗೆಲೊ ಕಲಿಯೆ ಸಲೆಸಲುಗೆಯ ಬಿಡು ಸಲಿಲಜಾಕ್ಷನ ದಾಸರ ಅ.ಪ.ರಮೆರಮಣನ ಸಿರಿರಮಣೀಯ ನಾಮವಿರೆಯಮಗಿಮನಂಜಿಕೆ ಎಮಗುಂಟೆತಮ ತಮ ಮಹೋತ್ತಮ ಕುಲಗಳು ಮಹೋತ್ತ್ತಮತಮರೊಲುಮೆ ಮತ್ತವನ ಆಶ್ರಯವುಂಟು 1ಮನ ಮನೋಸಂಭವನ ಮನೆ ಹೊಕ್ಕರೆ ಸೈರಿಸಘನಜ್ಞಾನಿ ಪೂರ್ಣಗುರು ಜ್ಞಾನಿರಾಯತನು ತನಯಾಂಗನೇರು ತನ್ನವಸರಕಾರಿಲ್ಲಈ ನಯನ ಹರಿನಾರಾಯಣನಲ್ಲಿ ತೊಡಗಿರೆ 2ಬಿಡಬಿಡ ಭಟನೆಂದು ಬೇಡಿದಂತಾಭಯವೀವಪಡಿಪೊಡವಿಲಿ ಕೊಟ್ಟು ಪಿಡಿದ ಎನ್ನಒಡಒಡನೆ ರಕ್ಷಿಪ ಒಡೆಯ ಪ್ರಸನ್ವೆಂಕಟೇಶಅಡಿಯೆಡೆ ಸೇರಿದೆ ಬಾರೊ ಅಡಗಡಗೆಲೆಲೊ 3
--------------
ಪ್ರಸನ್ನವೆಂಕಟದಾಸರು
ದಾಟುವೆನೆಂದರೆ ದಾಟು ಹೊಳೆಯುಕೈಟಭಾಂತಕ ಭಟರಿಗೆ ಭವಜಲವು ಪ.ಪೂರ್ವಯಾಮದಿ ಹರಿಗುಣಕರ್ಮನಾಮನಿರ್ವಚನದಿ ಕೀರ್ತನೆ ಮಾಡುವ ಮಹಿಮಉರ್ವಿಯ ಮೇಲಿದ್ದು ಒಲಿಸಿಕೊಂಡನು ಸುರಸಾರ್ವಭೌಮನ ಸೀತಾರಾಮನ 1ಜಲದಲಿ ಮಿಂದೂಧ್ರ್ವ ತಿಲಕಿಟ್ಟು ನಲಿದುತುಲಸಿಕುಸುಮಗಂಧ ಅಗ್ರದ ಜಲದಿನಳಿನೇಶನಂಘ್ರಿಗರ್ಪಿಸಿ ಸಹಸ್ರನಾಮಾವಳಿಯಿಂದ ಧೂಪದೀಪಾರತಿ ಬೆಳಗಿ 2ಪರಮಾನು ಯೋಗಾವಾಹನೆ ವಿಸರ್ಜನೆಯುಸ್ಮರಣೆ ವಂದನೆ ಪ್ರದಕ್ಷಿಣೆ ನರ್ತನವುವರಗೀತಪಠಣೆ ಭಾಗವತಾ ಶ್ರವಣವುತ್ವರಿಯದಿ ಭೂತಕೃಪೆಯಲ್ಲಿ ಮನವು 3ಗುರುಪಾದಪದ್ಮದಿ ಬಲಿದು ವಿಶ್ವಾಸಗುರುಕೃಪೆಯಿಲ್ಲದ ಪುಣ್ಯ ನಿಶ್ಯೇಷಗುರುಬೆನ್ನಟ್ಟಿದ ಕರಿಗಡ್ಡಹಾಸ ಹಾಸಗುರುಗಳ ಮರೆದು ಕಳೆಯನೊಂದುಶ್ವಾಸ4ಈಪರಿಹರಿಪುರ ದಾರಿಯ ತೊಲಗಿಕಾಪುರುಷರುಭವಮಡುವಲಿ ಮುಳುಗಿಆಪತ್ತು ಪಡುವರ ನೋಡಿ ಬೆರಗಾಗಿಶ್ರೀ ಪ್ರಸನ್ವೆಂಕಟಪತಿ ನಕ್ಕನಾಗಿ 5
--------------
ಪ್ರಸನ್ನವೆಂಕಟದಾಸರು
ನಂಬಬೇಡ ನಾರಿಯರನುಹಂಬಲಿಸಿ ಹಾರಯಿಸಬೇಡಅಂಬುಜಾಕ್ಷಿಯರೊಲುಮೆ ಬಯಲುಡಂಬಕವೆಂದು ತಿಳಿಯಿರೊ ಪ.ನೋಟವೆಲ್ಲ ಪುಸಿಯು - ಸತಿಯರಾಟವೆಲ್ಲ ಸಂಚು - ಸನ್ನೆಕೂಟವೆಲ್ಲ ಗನ್ನ - ಘಾತುಕನೋಟವೆಲ್ಲ ವಂಚನೆವಾತಬದ್ಧ ಹೆಂಗಳಲ್ಲಿಕೋಟಲೆಗೊಂಡು ತಿರುಗಬೇಡಮಾಟಗಾತಿಯರೊಲುಮೆ ಬಯಲುಬೂಟಕವೆಂದು ತಿಳಿಯಿರೊ 1ಸೋತನೆಂದು ವಿಟಗೆ ದೈನ್ಯಮಾತನಾಡಿ ಮರುಳಗೊಳಸಿಕಾತರವ ಹುಟ್ಟಿಸಿ ಆವನಮಾತೆ - ಪಿತರ ತೊಲಗಿಸಿಪ್ರೀತಿ ಬಡಿಸಿ ಹಣವ ಸೆಳೆದುರೀತಿಗೆಡಿಸಿ ಕಡೆಯಲವನಕೋತಿಯಂತೆ ಮಾಡಿ ಬಿಡುವಚಾತಿಕಾರ್ತಿ ಹೆಂಗಳೆಯರ 2ಧರೆಯ ಜನರ ಮೋಹಕೆಳಸಿಭರದಿ ನೆಟ್ಟು ಕೆಡಲುಬೇಡಎರೆಳೆಂಗಳ ಹೆಂಗಳೊಲುಮೆಗುರುಳೆ ನೀರ ಮೇಲಿನಮರೆಯಬೇಡ ಗುರುಮಂತ್ರವಸ್ಥಿರವಿಲ್ಲದ ಜನ್ಮದಲ್ಲಿಕರುಣನಿಧಿ ಪುರಂದರವಿಠಲನಚರಣಸ್ಮರಣೆ ಮಾಡಿರೊ3
--------------
ಪುರಂದರದಾಸರು
ಮನುಜ ಕೇಳೋ ಮನುಜ ಕೇಳೋಮನುಜ ಕೇಳೆನ್ನ ಮಾತನು ಮುಕ್ತನಾಗುವಿಪವೇಸಿಯ ಮೇಲಿಹವಾಸನೆತೊಲಗಿಸುಮೀಸಲ ಮನವಿಡು ಈಶ ನೀನಾಗುವಿ1ವಿಷಯಂಗಳಲಿ ನೀ ಬಯಸಿ ಬಿದ್ದ ತೆರಹುಸಿಯದೆನ್ನನು ಹೊಂದುಹರನು ನೀನಾಗುವಿ2ಸುದತಿಯ ಸುತರನುನಿತ್ಯನೀ ನೀ ನಂಬದೆಚಿದಾನಂದನ ಹೊಂದುಮುಕ್ತನೀನಾಗುವಿ3
--------------
ಚಿದಾನಂದ ಅವಧೂತರು
ಮುಕ್ಕೋಟ ದ್ವಾದಶಿಯ ದಿವಸ(ಮಾರ್ಗಶಿರ ಶುದ್ಧ ದ್ವಾದಶಿಯ ಉತ್ಸವ)ವ್ರತತಿಯಧಿಪನಂತೆ ನೀರೆ ತೋರ್ಪಅತಿಶಯಾಗಮ ಬಗೆ ಬ್ಯಾರೆ ರತ್ನದ್ಯುತಿಯಾಭರಣವ ಶೃಂಗಾರ ಆಹಾಶ್ರುತಗೊಲಿಸೆನಗೆ ಆಶ್ರಿತ ರಕ್ಷಾರ್ಥಿತನ ಸಂ-ಗತಿಸ್ಮøತಿತತಿಗಳ ಮತಿಗಗೋಚರನಂತೆ1ಲೋಲಲೋಚನನ ನಾಟಕ ಸತ್ಕಥನವಮೇಲಾಗಿ ಜಗದಿ ಶೋಭಿಪ ಶೇಷಾದ್ರಿಯಲಿಬಾಲಾರ್ಕಸದೃಶನೀತನು ಇರ್ಪನಲ್ಲಿನೀಲನಿಭಾಂಗನು ನೆನೆವರ ಪಾಪವಘೋಲುಘಡಿಸಲೆಂದೆನುತಲಿಭಾರ್ಗವಕೋಲಿಂದೆಸಗಿದ ಧರಣಿಗೆ ಬಂದು ಸ-ಲೀಲೆಗಳೆಸಗುವ ಜಾಲವಿದೆಲ್ಲ 2ಸರಸಿಜಗಂಧಿ ಕೇಳ್ ದಿಟದಿ ತನ್ನಅರಮನೆಯಿಂದ ಸದ್ವಿಧದಿ ಈರ್ವ-ರರಸಿಯರ್ ಸಹಿತ ಮಿನಿಯದಿ ಅತಿಭರದಿಂದ ಸೂರ್ಯನುದಯದಿ ಆಹಾಉರುತರ ಹೇಮಪಲ್ಲಂಕಿಯೊಳಡರಿತ್ವರಿತದಿ ಪೋಗುವ ಭರವಿದೆಲ್ಲಿಗೆ ಪೇಳೆ 3ಬದ್ಧನೀ ಪೇಳ್ದ ಮನದ ಶಂಕಾವ್ರಾತತಿದ್ದಿಪೆ ಕೇಳು ಮಾರ್ಗಶಿರ ಮಾಸದೊಳುಶುದ್ಧ ದ್ವಾದಶಿಸೂರ್ಯಉದಯ ಕಾಲದೊಳುಭದ್ರಭವನವನು ಪೊರಟು ವಿನೋದದಿಅದ್ರಿಧರನು ಸಜ್ಜನರೊಡಗೂಡಿ ಉ-ಪದ್ರಿತ ಪಾಪವ ಛಿದ್ರಿಪ ಸ್ನಾನಕೆರೌದ್ರಿತ ರಾಮಸಮುದ್ರದ ಬಳಿಗೆ 4ರಂಭೆ : ಆರರೆ ಆಶ್ಚರ್ಯವಾಯ್ತೆನಗೆ ಅತಿಪರಮಮಹಿಮೆನೆಂದ ಮೇರೆಗೆ ಘನ-ತರ ಸ್ನಾನವೇನಿದು ಕಡೆಗೆ ವೃತದಿರವೋ ಉತ್ಸವವೋ ಪೇಳೆನಗೆ ಆಹಾತರುಣಿ ರನ್ನಳೆ ನಿನ್ನ ಚರಣಕ್ಕೆ ನಮಿಪೆ ಈಪರಿಗಳ ಸಾಂಗದಿಂದರುಹಬೇಕೆನಗಿನ್ನು 5ಸಕಲಾಂತರ್ಯಾತ್ಮನೀತನು ಸತ್ಯಶೀಲೆ-ಪ್ರಕಟ ವ್ರತವಿದಲ್ಲ ಅಂಜನಾದ್ರಿಯಲಿಭಕುತವತ್ಸಲನು ಉತ್ಸವಿಸುವನಲ್ಲಿವಿಕಳಹೃದಯ ನರನಿಕರಕಸಾಧ್ಯವೆಂದ್ಯುಕುತದಿ ಈ ಧರೆಯಲ್ಲಿ ಪ್ರತ್ಯೇಕದಿಅಖಿಳೋತ್ಸವ ಮಸ್ತಕಕಿದುವೆಗ್ಗಳಮುಕುಟೋತ್ಸವವೆಂದೆನುತಲಿ ರಚಿಸುವ 6ರಂಭೆ : ನಳಿನಾಕ್ಷಿ ಲಾಲಿಪುದಿನ್ನು ಸ್ನಾನವೊಲವಿಂದ ಗೈದ ಮೇಲಿವನು ತನ್ನರಮಣಿಯರ್ಸಹಿತಂದಣವನು ಏರಿನಿಲುನಿಲುತ್ಯಾಕೆ ಬರುವನು ಆಹಾಪೊಳಲೊಳಗಿಹ ಜನನಿಳಯದ ದ್ವಾರದಿಕಳಕಳವೇನಿದ ತಿಳುಪೆನಗೀ ಹದ 7ಮಿಂದು ತೋಷದಿ ಅಂದಣವನ್ನೇರಿ ತಾನುಇಂದೀ ಪುರದೊಳಿರ್ಪ ಜನರ ದೋಷಗಳಕುಂದಿಸಲೆಂದವರವರ ದ್ವಾರದೊಳುನಿಂದಿರುತಲ್ಲಿಯದಲ್ಲಿ ಆರತಿಗಳಚಂದದಿ ಕೊಳುತೊಲವಿಂದಕಾಣಿಕೆಜನ-ವೃಂದದಿ ಕೊಡುತಾನಂದ ಸೌಭಾಗ್ಯವಒಂದಕನಂತವ ಹೊಂದಿಸಿ ಕೊಡುವ 8ರಂಭೆ : ಸರಸಿಜಾನನೆ ಮತ್ತೇನಿದನು ತನ್ನಅರಮನೆಯಲ್ಲಿ ಭೂದ್ವಿಜನರನು ಸರ್ವಪುರಜನ ಸಹಿತೊಳಗಿವನು ನಾನಾತರದಿ ಮೆರೆವ ಭೋಜನವನು ಆಹಾ-ಕರಿಸಿ ಆಮೇಲೆ ರಾತ್ರಿಯಲಿ ಸಾಲಿನಲಿ ವಿ-ಸ್ತರದ ಲಾಜದ ರಾಸಿಗಿರದೆ ಪೂಜಿಪುದ್ಯಾಕೆ 9ಗಂಗಾಜನಕತನ್ನ ಗೃಹದಿ ವಿಪ್ರರನುಹಿಂಗದೆ ಕರೆಸಿ ವಿಪ್ರರನೆಲ್ಲ ಬರಿಸಿಸಂಗಾತದಲಿ ಆರೋಗಣೆ ಗೈದು ಮೆರೆಸಿಅಂಗಣದಲಿ ರಾತ್ರೆಯಲಿ ವಿನೋದದಿಕಂಗೊಳಿಸುವ ಉರಿದರಳ ಸಮೂಹಕೆರಂಗಪೂಜೆಯನುತ್ತಂಗವಿಸುವ ನಿಗ-ಮಂಗಳೊಡೆಯನು ವಿಹಂಗಮಾರೂಢ 10ರಂಭೆ : ಅಮಮ ಮತ್ತೇನಿದ ಪೇಳು ಶ್ವೇತ-ಕುಮುದಾಪ್ತ ಠಾವಿನ ವೋಲು ಬಂದುಆದರಿಸಲಿದರ ಮಧ್ಯದೊಳು ತನ್ನರಮಣಿಯರ್ ಸಹಿತ ತೋಷದೊಳು ಆಹಾವಿಮಲವನ್ನೇರಿನ್ನೆಲ್ಲಿಗೈದುವನೆಂಬಾ-ಗಮವ ಪೇಳೆನೆಗೆ ನೀ ನಮಿಪೆ ನಿನ್ನಂಘ್ರಿಯ 11ಶ್ರೀ ರಮಾರಮಣ ಪೂಜೆಯಗೊಂಡಾ ಮೇಲೆಚಾರುಈ ಹೂವಿನ ತೇರನೇರುತಲಿಕೇರಿ ಕೇರಿಯೊಳಾರತಿಗೊಳ್ಳುತಲಿಭೋರಿಡುತಿಹ ವಾದ್ಯಧ್ವನಿ ಘನತರಭೇರಿಮೃದಂಗಾದ್ಯಖಿಳ ವಿನೋದದಿಸ್ವಾರಿಗೆ ತೆರಳುವ ಕ್ರೂರ ನರರ ಆ-ಘೋರಪಾಪ ಜರ್ಝರಿಸಲೆಂದು12ರಂಭೆ : ಅರವಿಂದಾಕ್ಷಿಯೆ ಮತ್ತೇನಿದನು ತನ್ನಅರಮನೆಯಿದಿರು ರಥವನು ತಾನುಭರದೊಳಗಿಳಿದಂದಣವನು ಏರಿಮೆರೆವಾಲಯದ ಸುತ್ತುಗಳನು ಆಹಾತಿರುಗುವನ್ಯಾಕೆ ಭೂದ್ವಿಜರ ಘೋಷದಿ ವಾದ್ಯ-ಭರಿತ ಗಾಯನಭೇರಿಧ್ವನಿಗಳೇನಿದ ಪೇಳೆ13ದುಷ್ಟಮರ್ದನ ರಥವಿಳಿವುತ್ತಲಾಗೇಅಷ್ಟದಿಗ್ಭಾಗದಿ ಗೃಹಸುತ್ತಿನೊಳಗೆಅಷ್ಟಾವಧಾನವ ರಚಿಸುತ್ತ ಕಡೆಗೆಶ್ರೇಷ್ಠನು ರತ್ನಾಸನದಿ ಗ್ರಹದಿಪರಮೇಷ್ಟಜನಕೆ ಸಂತೋಷಾನಂದದಿಸೃಷ್ಟಿಯ ಜನರ ಅನಿಷ್ಟವ ತ್ಯಜಿಸುತಇಷ್ಟವನೀವ ಯಥೇಷ್ಟ ದಯಾಬ್ಧ 14ರಂಭೆ : ಅರಿತೆನಾ ಸ್ವಚ್ಛ ಚಿತ್ತದಲಿ ಇನ್ನುಹರಿಏಕರೂಪನೆನ್ನುತಲಿ ಲಕ್ಷ್ಮೀಕರವೆನಿಸುವ ಕಾರ್ಕಳದಲಿ ಭಾಗ್ಯೋ-ದಯ ದೇವಾಲಯದ ಮಧ್ಯದಲಿ ಆಹಾತ್ವರಿತದಿ ನುತಿಸಿರೊಗುರುನಾರಸಿಂಹ ಶ್ರೀ-ಕರವೆಂಕಟೇಶನ ಚರಣಕಮಲಗಳ15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ