ಒಟ್ಟು 2391 ಕಡೆಗಳಲ್ಲಿ , 102 ದಾಸರು , 1342 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇವನಾ ನೆಲೆಗಾಣೆ ನಮ್ಮಯ್ಯಾ ಸಣ್ಣವನೇ ಪ ಒರಳವನೆಳೆದೊಯ್ದು ಮರಗಳ ಕೆಡೆಹಿಡಿದ| ಭರದಿ ಪೂತನಿಯಸುವ ಹೀರಿದಾ ನಮ್ಮಯ್ಯಾ 1 ಬೇರಳಲಿ ಗಿರಿಯೆತ್ತಿ ತುರುಗಳ ಕಾಯ್ದಾ| ತೆರೆದು ಬಾಯೊಳು ಜಗವ ತೋರಿದ ನಮ್ಮಾಯ್ಯಾ 2 ವೇಣುನಾದ ಮಾಡಿ ತೃಣಪಶು ಮೊದಲಾದ| ಏಣಾಕ್ಷಿಯರ ಮನವಾ ಭ್ರಮಿಸಿದಾ ನಮ್ಮಯ್ಯಾ 3 ಕಾಳಿ ಮಡುವ ಹೊಕ್ಕು ಕಾಳಿಂಗನೆಳೆತಂದಾ| ಲೀಲೆ ತೋರಲು ಹರಿ ಉದಿಸಿದ ನಮ್ಮಯ್ಯಾ 4 ಗುರುಮಹಿಪತಿ ಸ್ವಾಮಿ ಸುರುತರು ಎನಗಾದಾ| ನರನೆಂಬವರ ಬಾಮಾ ಬಿಗಿಸಿದ ನಮ್ಮಯ್ಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವರೇ ನಮ್ಮವರೂ ಇದು ಭಾಗ್ಯವುನಮಗ್ಹಗಲಿರಳೂ ಪ ಭವ ಸಮುದ್ರದಲಿ ಮುಳುಗಿಸಿ ಕಡೆಯಲಿ ಜವನಾಳ್ಗಳ ಕೈಗೊಪ್ಪಿಸಿ ಕೊಡುವ ಅ.ಪ ಧನಯೌವನ ಬಲವು | ದೇಹದ ಅನುಬಂಧಗಳಿರುವು ಮನೆಮಕ್ಕಳುವನಿತಾದಿಗಳೊಲಿವರೊ 1 ಕೇಳಿದ್ದಿಲ್ಲೆನಲೂ | ಇವನ ಹೀ- ಯಾಳಿಪರ್ ಸ್ವಜನಗಳೂ ಕಾಲಕಾಲದಿ ಬಾಡಿಗೆ ಎತ್ತಿನ ಪರಿ ಆಳಾಗಿದ್ದರೆ ಹಾ ಎಂದು ನಗುವ 2 ಇವರಾಸೆಯ ಮಾಡೀ | ನಾವುನ- ಮ್ಮವರನು ಹೋಗಾಡಿ ಕವಳಕೆ ಗತಿಯಿಲ್ಲದೆ ಪರಿಯಾಯಿತು ಕಡೆಹಾಯಿಸು ಗುರುರಾಮವಿಠ್ಠಲನೆ 3
--------------
ಗುರುರಾಮವಿಠಲ
ಇಸ್ಪೀಟಾಡಬೇಕು ನಮ್ಮಯ ತಸ್ಪೀರ್ ನೋಡಬೇಕು ಪ ನಿಸ್ಪøಹರಾಗದ ಜನರಿಗೆ ಕಡೆಯಲಿ ಸಸೆÀ್ಪಂಟಾದೀತೆಂದು ತಿಳಿದು ಅ.ಪ ಆಸೆಂಬುವದಾತ್ಮ | ರಾಜಾ ತಾಸಗುಣ ಬ್ರಹ್ಮ ಲೇಸಾಗಿ ರಾಣಿಯು ಮೂಲ ಪ್ರಕೃತಿ ಗುಲಾಮನೆಂಬುದು ಚತುರ್ಮಖನೆನ್ನುತ 1 ದಹಿಲವೆಯಿಂದ್ರಿಯಗಳು | ದ್ವಾರವು ನಹಿಲವಿದು ಭುವಿಯೋಳು ಅಹಹಾ ಅಟ್ಟವು ಮದಗಳು ನೋಡಲು ವಿಹಿತವೇಳನೆ ಬಂದು ವೆಸನಗಳು 2 ನಿಜವಿದು ಮೂರನೆ ಬಂದು ತ್ರಿಕಾಲಗಳ್ 3 ಯಿಲ್ಲದಿಹದು ಮರ್ಮ ತುರುಫೆಗುಣರಾಶಿಗಳೆಂದೀಪರಿ ಅರಿತಾಡಲದೆ ಪರಮಾರ್ಥವಹದು 4 ಕ್ಳಾವ್ರಿಸ್ಪೀಟಾಟೀನ್ | ಡೈಮಂಡ್ ಈ ವಿಧ ಪೆಸರಿರಲೇನ್ ಭಕ್ತರ ಗುರುರಾಮ ವಿಠಲ ಕೈಬಿಡ 5
--------------
ಗುರುರಾಮವಿಠಲ
ಇಸ್ಪೀಟಾಡಬೇಕು ನಮ್ಮಯ ತಸ್ಪೀರ್ ನೋಡಬೇಕು ಪ ನಿಸ್ಪøಹರಾಗದ ಜನರಿಗೆ ಕಡೆಯಲಿ ಸಸೆÀ್ಪಂಟಾದೀತೆಂದು ತಿಳಿದು ಅ.ಪ ಆಸೆಂಬುವದಾತ್ಮ | ರಾಜಾ ತಾಸಗುಣ ಬ್ರಹ್ಮ ಲೇಸಾಗಿ ರಾಣಿಯು ಮೂಲ ಪ್ರಕೃತಿ ಗುಲಾಮನೆಂಬುದು ಚತುರ್ಮಖನೆನ್ನುತ 1 ದಹಿಲವೆಯಿಂದ್ರಿಯಗಳು | ದ್ವಾರವು ನಹಿಲವಿದು ಭುವಿಯೋಳು ಅಹಹಾ ಅಟ್ಟವು ಮದಗಳು ನೋಡಲು ವಿಹಿತವೇಳನೆ ಬಂದು ವೆಸನಗಳು 2 ನಿಜವಿದು ಮೂರನೆ ಬಂದು ತ್ರಿಕಾಲಗಳ್ 3 ಯಿಲ್ಲದಿಹದು ಮರ್ಮ ತುರುಫೆಗುಣರಾಶಿಗಳೆಂದೀಪರಿ ಅರಿತಾಡಲದೆ ಪರಮಾರ್ಥವಹದು 4 ಕ್ಳಾವ್ರಿಸ್ಪೀಟಾಟೀನ್ | ಡೈಮಂಡ್ ಈ ವಿಧ ಪೆಸರಿರಲೇನ್ ಭಕ್ತರ ಗುರುರಾಮ ವಿಠಲ ಕೈಬಿಡ 5
--------------
ಗುರುರಾಮವಿಠಲ
ಈ ಭಾಗ್ಯ ನೋಡ ಒಯ್ಯಾರಿನಮ್ಮ ಸೌಭಾಗ್ಯ ಶ್ರೀ ಕೃಷ್ಣ ಕೈ ಸೇರಶೌರಿ ಪ. ಅರಳು ಅರಳು ಮೊದಲಾಗಿ ಏ ನಾರಿಸಕ್ಕರೆಯ ತಂದಿಟ್ಟು ಮಾರುವವರು ಕಡೆಯಿಲ್ಲ 1 ಕುಂಕುಮ ಅರಿಷಿಣ ಅಲಂಕಾರ ದ್ರವ್ಯವಅಂಕ ಅಂಕಣಕ ನೆರವ್ಯಾವ ಏನಾರಿ ಅಂಕ ಅಂಕಣಕ ನೆರವ್ಯಾವ ಬೆಲೆ ಮಾಡೊಕಂಕಣದ ಕೈಯ ಕೆಲದೆಯರು ಕಡೆಯಲ್ಲಾ ಏ ನಾರಿ 2 ಬುಕಿಟ್ಟು ಪÀರಿಮಳ ದ್ರವ್ಯ ಪೊಟ್ಟಣ ಕಟ್ಟಿತರಹತರಹ ಏ ನಾರಿಪೊಟ್ಟಣವ ಕಟ್ಟಿ ತರಹತರದ ದ್ರವ್ಯವ ಕೊಟ್ಟು ಕೊಂಬುವರು ಕಡೆಯಿಲ್ಲ ಏ ನಾರಿ3 ಸೋಜಿಗವಾಗಿದ್ದ ಜಾಜಿ ಮಲ್ಲಿಗೆ ಹೂ ಸೂಜಿ ಮಲ್ಲಿಗೆ ಸರಗಳು ಸೂಜಿ ಮಲ್ಲಿಗೆ ಸರಗಳ ರಂಗನ ಪೂಜೆಗೊಯ್ವೊ ಪುರುಷರು ಏ ನಾರಿ4 ನಾಲ್ಕು ದಿಕ್ಕಿಗೆ ದಿವ್ಯ ಆಕಳ ಹಿಂಡುಗಳು ಸಾಕುವ ಎರಳೆ ಎಳಿಗಾವು ಏ ನಾರಿಸಾಕುವ ಎರಳೆ ಎಳಿಗಾವು ಹೂಂಕರಿಸಿ ಬಾಹೋ ಚಲ್ವಿಕೆಯ ಏ ನಾರಿ 5 ಎತ್ತೆತ್ತ ನೋಡಿದರೂ ಮುತ್ತಿನ ಪಲ್ಲಕ್ಕಿಉತ್ತಮ ರಥವ ಹಿಡಿದೇಜಿ ಏ ನಾರಿಉತ್ತಮ ರಥವ ಹಿಡಿದೇಜಿ ಮ್ಯಾಲಿನ್ನು ಹತ್ತಿ ಬಾಹುವರು ಕಡೆಯಿಲ್ಲ ಏ ನಾರಿ6 ಬಾಜಾರದೊಳಗಿನ್ನು ರಾಜಸಿಂಹಾಸನ ರಾಜ ರಾಮೇಶ ಕುಳಿತಲ್ಲಿಯೆ ಏ ನಾರಿ ರಾಜ ರಾಮೇಶ ಕುಳಿತು ಪೂಜೆಗೊಂಬೊಮೂರ್ಜಗವು ಮುದದಿಂದ ಏ ನಾರಿ7
--------------
ಗಲಗಲಿಅವ್ವನವರು
ಈ) ರುದ್ರದೇವರು ವೃಷಭನೇರಿದ ವಿಷಧರನ್ಯಾರೆ ಪೇಳಮ್ಮಯ್ಯ ಪ ಹಸುಳೆ ಪಾರ್ವತಿಯ ತಪಸಿಗೆ ಮೆಚ್ಚಿದಜಟಾಮಂಡಲಧಾರಿ ಕಾಣಮ್ಮ ಅ.ಪ. ಕೈಲಾಸಗಿರಿಯ ದೊರೆಯಿವನಮ್ಮ-ಅದು ಅಲ್ಲದೆ ಕೇಳೆಬೈಲು ಸ್ಮಶಾನದಿ ಮನೆಯಿವಗಮ್ಮ-ಸಂಕರ್ಷಣನೆಂದುಕೇಳೆ ಮಹಿಯೊಳು ಜನ ಪೊಗಳುವರಮ್ಮ-ಇದು ನಿಜವಮ್ಮನಾಲಿಗೆ ಸಾಸಿರ ಫಣಿಭೂಷಣ ನಮ್ಮರಮೆಯರಸಗೆ ಇವ ಮೊಮ್ಮಗನಮ್ಮ 1 ಪತಿ ಇವನಮ್ಮ-ಮಾವನ ಯಾಗದಲಿಬ್ಹಾಳ ಕೃತ್ಯಗಳನು ನಡೆಸಿದನಮ್ಮ-ಸಾಗರದಲಿ ಹುಟ್ಟಿದಕಾಳಕೂಟವ ಭಕ್ಷಿಸಿದನಮ್ಮ-ರಾಮನ ದಯವಮ್ಮಮೇಲೆ ಉಳಿಯಲು ಶೇಷಗರಳವುನೀಲಕಂಠನೆಂದೆನಿಸಿದನಮ್ಮ2 ಹರನೊಂದಿಗೆ ವೈಕುಂಠಕೆ ಬರಲು-ತಾತಗೆ ವಂದಿಸುತತರುಣೀರೂಪವ ನೋಡ್ವೆನೆನಲು-ಹರಿ ತಾ ನಸುನಗುತಕರೆದು ಸೈರಿಸಲಾರೆ ನೀ ಎನಲು-ಹಠದಿ ಕುಳ್ಳಿರಲುಕರುಣೆಗಳರಸನು ಹರನ ಮೊಗವ ನೋಡಿಅರುಣೋದಯಕೆ ಬಾರೆಂದು ಕಳುಹಿದ 3 ಅರುಣೋದಯಕೆ ಗಂಗಾಧರ ಬರಲು-ಹದಿನಾರು ವರುಷದ ತರುಣೀರೂಪದಿ ಹರಿ ವನದೊಳಗಿರಲು-ಚರಣನಖಾಗ್ರದಿಧರಣೀ ಬರೆಯುತ್ತ ನಿಂತಿರಲು-ಸೆರಗ ಪಿಡಿಯೆ ಬರಲುಕರದಿ ಶಂಖ ಗದೆ ಚಕ್ರವ ತೋರಲುಹರನು ನಾಚಿ ತಲೆತಗ್ಗಿಸಿ ನಿಂತ4 ಮಂಗಳಾಂಗನೆ ಮಾರಜನಕ-ನಾ ಮಾಡಿದ ತಪ್ಪಹಿಂಗದೆ ಕ್ಷಮಿಸೊ ಯದುಕುಲ ತಿಲಕ-ವಕ್ಷದಲೊಪ್ಪುವ ನಿನ್ನಂಗನೆ ಅರಿಯಳು ನಖಮಹಿಮಾಂಕ-ಹೀಗೆನುತಲಿ ತವಕರಂಗವಿಠಲನ ಪದಂಗಳ ಪಿಡಿದು ಸಾಷ್ಟಾಂಗವೆರಗಿ ಕೈಲಾಸಕೆ ನಡೆದ 5
--------------
ಶ್ರೀಪಾದರಾಜರು
ಈಡಾಡಿದ್ಯಾ ಪಾಪಂಗಳ ಆಹಾ ಪ ಮನಸಿಲಿ ನೋಡಿದ್ಯಾ ಯತಿಗಳನ್ನ ನಾಡಿನೊಳಗೆ ಈಡಿಲ್ಲದಿಹ ಈ ಗುರುಗಳಾ ಅ.ಪ. ಹೊದ್ದ ಕಾವಿಶಾಠಿಯಲ್ಲಿ ಶ್ರೀ ಮುದ್ರೆ ಹಚ್ಚಿದ ದೇಹಕಾಂತಿಯು ಆಹಾ ತಿದ್ದಿದ ಅಂಗಾರದ ನಡುವೆ ಅಕ್ಷತೆಯು ಎದ್ದು ಬರುವಂಥ ಈ ಮುದ್ದು ಗುರುಗಳಾ 1 ನಿಂತ ಎದುರಲ್ಲಿ ಮುಖ್ಯಪ್ರಾಣಾ ಬೇಡಿ- ದಂಥ ವರಗಳ ಕೊಡುವ ಜಾಣಾ ಆಹಾ ಜಗದಂತರದೊಳಗೆ ಪ್ರವೀಣಾ ಸೀತಾ- ಕಾಂತರೊಳಗೆ ಅತಿಪ್ರಾಣಾ2 ಮಂತ್ರಾಲಯದಲ್ಲಿರುವ ಮುದ್ದು ಬೃಂದಾವನದ ನೋಟ ನಮ್ಮಲಿದ್ದ ಪಾಪಗಳೆಲ್ಲ ಓಟಾ ಅಲ್ಲಿ ವಿದ್ವಾಂಸರ ಜಗ್ಯಾಟ ಆಹಾ ಮುದ್ದುವಾಹನನೆ ನೀನು ನರಸಿಂಹವಿಠ್ಠಲ ದೂತ ದಾರಿದ್ರ್ಯಗಳೆಲ್ಲವ ಪರಿಹರಿಸುವಂಥಾ 3
--------------
ನರಸಿಂಹವಿಠಲರು
ಈತನೀಗ ಕೃಷ್ಣನಾಥನು ಶ್ರೀನಾಥನು ಶ್ರೀನಾಥನಮ್ಮಾ ಧ್ರುವ ನಂದಕುಮಾರನೀತ ನಂದಮಹಿಮನೀತ ಕಂದರ್ಪಜನಕನೀತ ಸುಂದರವದನನೀತ 1 ಇಂದಿರೇಶನು ಈತ ವಂದಿತ ತ್ರೈಲೋಕ್ಯನಾಥ ಚಂದವಾಗಿ ಸುಳಿದ ಬಾಲ ಮುಕುಂದನೀತ 2 ಗಿರಿಯ ಬೆರಳಲೆತ್ತಿದಾತ ಕರಿಯ ಸೆರೆಯ ಬಿಡಿಸಿದಾತ ಮೊರೆಯ ಕೇಳಿ ದ್ರೌಪದಿಯ ಕರುಣಿಸಿದಾತ 3 ಅಸುವ ಪೂತನಿ ಹೀರಿದಾತ ಕಂಸನ ಮಡುಹಿದಾತ ವಂಶ ಕೌರವರ ತಾನು ಸಂಹರಿಸಿದಾತ 4 ಬಾಲಕನಹುದೀತ ಮೂಲೋಕ ಪಾಲಕ ನೀತ ಸಲಹುತಿಹ ಮಹಿಪತಿ ಮೂಲಾಗ್ರಜನೀತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಈತನೆನೇ ಹನುಮನು ಈತನೆನೇ ನಮ್ಮಗುರು ಲಂಕೆಯ ಸಖಗ ನಿಶ್ಯಂಕೆಯಲುಣಿಸಿದಾ ಕೌರವ ಬಲದ ಕುಠಾರಿಯಂದೆನಿಸಿದಾ ಮೂರೇಳು ದುರ್ಭಾಷ್ಯ ಹಾರಿಸಿದಾ ಮುನಿ ಹರಿ ಮತ ಸ್ಥಾಪನ ಬಿರುದಾಂಕ ದೇವನು ಗುರುಮಹಿಪತಿ ಜನುದ್ಧರಿಸದ ದೇವನು ||
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಈರೇಳು ಲೋಕದೊಳಗೆ ಇವಗೆಣೆಗಾಣೆ ಗೋವಿಂದರಾಯನಿಗೆಮಾರನ್ನ ಪೆತ್ತ ಮನೋಹರ ಮೂರುತಿ ಗೋವಿಂದರಾಯನಿಗೆ ಪ. ನೀಲನೀರದನಿಭ ನಿರ್ಮಲಕಾಯ ಗೋವಿಂದರಾಯನಿಗೆಪಾಲಸಾಗರದಲ್ಲಿ ಪಡಿಸಿ ಪಾಲಿಪ ಗೋವಿಂದರಾಯನಿಗೆ1 ಕೂರ್ಮ ವರಾಹ ನಾರಸಿಂಹ ವಾಮನ ಗೋವಿಂದರಾಯನಿಗೆಕುತ್ಸಿತರಾಯರ ಕೊಂದÀ ಕೊಡಲಿಯ ಗೋವಿಂದರಾಯನಿಗೆ2 ಕಳೆವ ಶ್ರೀ ಗೋವಿಂದರಾಯನಿಗೆ 3ಕಡೆಗೋಲ ಪಿಡಿದು ನಮ್ಮುಡುಪಿಲಿ ನೆಲೆಸಿದ ಗೋವಿಂದರಾಯನಿಗೆಬಡನಡುವಿನ ಭಾವಕಿಯರೊಡನಾಡುವ ಗೋವಿಂದರಾಯನಿಗೆ 4 ವರ್ಣಿಸಿ ಪೊಗಳುವ ವಾದಿರಾಜಗೊಲಿದÀ ಗೋವಿಂದರಾಯನಿಗೆಚಿನ್ನದ ಚೆಲುವನೆ ಜಯ ಹಯವದನ ಶ್ರೀ ಗೋವಿಂದರಾಯನಿಗೆ 5
--------------
ವಾದಿರಾಜ
ಉಗಾಭೋಗ ಆತ್ಮ ಪರಮಾತ್ಮ ತತ್ವ ನೀ ತಿಳಿಯೋ ಪ್ರಾಣಿ ಈ ತನುವಿನೊಳ್ ದ್ವಯ ಪಕ್ಷಿಗಳಿಪ್ಪುದು ನೀತಿಯರಿತು ಭಜಿಸೆ ಪ್ರೀತಿಯಿಂ ಸಲಹುವ ವಾತ ಜನಕ ನಮ್ಮ ಗೋಪಾಲಕೃಷ್ಣವಿಠಲ
--------------
ಅಂಬಾಬಾಯಿ
ಉಗಾಭೋಗ ಪ್ರಪಂಚದೊಳಗಿದ್ದು ಪ್ರಪಂಚವನೆ ಮೆದ್ದು ಪ್ರಪಂಚವನೆ ಗೆದ್ದು ಪ್ರಪಂಚವನೆ ಒದ್ದು ಪ್ರಪಂಚಾತೀತ ನಮ್ಮ ಗೋಪಾಲಕೃಷ್ಣವಿಠ್ಠಲನ ಪ್ರಪಂಚದೊಳು ಸುಖವ ಪೊಂದುವನೆ ಧನ್ಯ
--------------
ಅಂಬಾಬಾಯಿ
ಉಗಾಭೋಗ ಬಡವನಾದವನ ಭವಮಡುವಿನೊಳಗೆನೂಕಿ ಮಿಡುಕಿಸೀನೋಡುವುದು ಥರವೇನೋ ಒಡಲಿಗೋಸುಗ ನಿನ್ನ ಬೇಡ ಬಂದವನಲ್ಲ ದೃಢಭಕ್ತಿ ಜ್ಞಾನಕೊಟ್ಟು ರಕ್ಷಿಸೋಧೊರಿಯೆ ಕಡಲಶಯನ ನಮ್ಮ ಮುದ್ದುಮೋಹನವಿಠಲ ಗಾಢರತಿಯ ಪಾಲಿಸು ಸುಲಭದಿಂದಾ
--------------
ಮುದ್ದುಮೋಹನವಿಠಲದಾಸರು
ಉಗಾಭೋಗ ವಿಕ್ರಮ ಸಂವತ್ಸರದಲ್ಲಿ ನಿನ್ನ ನಿಜ ದಾಸಕೂಟ ಜನಕೆ ಪ- ರಾಕ್ರಮ ಹೆಚ್ಚಲಿ ಅಚ್ಚುತಾನಂತ ಕೃಷ್ಣ ಶಕ್ರಾನುಜನೆ ನಿನ್ನ ದೂತ ಹನುಮನ ಸೇವೆ ವಕ್ರವಿಲ್ಲದೆ ನಡೆದು ನಿನ್ನ ಕೃಪೆಯಾಗಲಿ ಅಕ್ರೂರವರದ ತಂದೆ ಮುದ್ದುಮೋಹನ್ನರ ವಿಕ್ರಮೌದಾರ್ಯ ದಶ ದಿಕ್ಕುಗಳ ಬೆಳಗಲಿ ಶಕ್ರಾನುಜನೆ ಉದರ ಬಗೆದು ತರಳನ ಕಾಯ್ದ ವಕ್ರನಖನೆ ನಮ್ಮ ನೀತ ಶ್ರೀ ಗುರುಗಳಿಗೆ ವಿಕ್ರಮ ಶಾಂತಿ ಆಯುರಾರೋಗ್ಯ ಭಾಗ್ಯವಿತ್ತು ಚಕ್ರಧರನೆ ನಿನ್ನ ಸೇವೆ ಕೈಕೊಂಡೆಮ್ಮ ಭವ- ಚಕ್ರ ತೊಡಕು ಬಿಡಿಸಿ ದಾಸ ಜನರ ಕಾಯೋ ಉ- ರು ಕ್ರಮದೇವ ಜಗಚ್ಚಕ್ರವರ್ತಿಯೆ ನಮೋ ಶಕ್ತಾದ್ಯಮರ ನುತ ಗೋಪಾಲಕೃಷ್ಣವಿಠಲಾ
--------------
ಅಂಬಾಬಾಯಿ
ಉಡಿಯ ತುಂಬಿರೆ ನಮ್ಮ ಉಡುರಾಜಮುಖಿಗೆ ಉಡಿಯ ತುಂಬಿರೆ ನಮ್ಮ ಕಡಲೆ ಕೊಬ್ಬರಿ ಬಟ್ಟಲೊಳು ಬಾಳೆಫಲಗ- ಳ್ವುಡಿಯ ತುಂಬಿರೆ ನಮ್ಮ ಪ ಜಂಬುನೇರಲ ಗೊನೆ ಜಾಂಬೂಫಲಗಳು ನಿಂಬೆ ದಾಳಿಂಬ್ರ ಔದುಂಬ್ರ ಫಲಗಳು 1 ಉತ್ತತ್ತಿ ದ್ರಾಕ್ಷಿ ಕಿತ್ತಳೆ ಸೀತಾಫಲವು ಅಕ್ಕಿ ಅಂಜೂರ ಉತ್ತತ್ತಿ ಫಲಗಳು2 ಶ್ರೇಷ್ಠ ಭೀಮೇಶ ಕೃಷ್ಣನ ಪಟ್ಟದರಸಿ ಗ್ಹಚ್ಚಿ ಕುಂಕುಮ ವೀಳ್ಯ ಕೊಟ್ಟು ರುಕ್ಮಿಣಿಗೆ 3
--------------
ಹರಪನಹಳ್ಳಿಭೀಮವ್ವ