ಒಟ್ಟು 386 ಕಡೆಗಳಲ್ಲಿ , 71 ದಾಸರು , 334 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನೊಳು ನೀನೆ ನಿನ್ನೊಳು ನೀನೆ ನಿನ್ನೊಳು ನೀನೆ ನೋಡಿ ಪೂರ್ಣ ಚನ್ನಾಗೇನಾರೆ ಮಾಡು ಪ್ರಾಣಿ ಧ್ರುವ ಕಾಯಕ ವಾಚಕ ಮಾನಸದಿಂದ ಸ್ಥಾಯಿಕನಾಗಿ ನೋಡಿ ಸ್ಥಾಯಿಕನಾಗಿ ನೋಡಿ ಮಾಯಿಕಗುಣದೋರುದು ಬಿಟ್ಟು ನಾಯಕನಾಗಿ ಕುಡು ಪ್ರಾಣಿ 1 ಸೆರಗ ಬಿಟ್ಟು ಮರಗಬ್ಯಾಡ ಕರಗಿ ಮನ ಕೂರು ಕರಗಿ ಮನ ಕೂಡು ಎರಗಿ ಗುರು ಪಾದಕ್ಕಿನ್ನು ತಿರುಗಿ ನಿನ್ನ ನೋಡು ಪ್ರಾಣಿ 2 ಮರೆವು ಮಾಯ ಮುಸುಕ ಬಿಟ್ಟು ಅರುವಿನೊಳು ಕೂಡು ಅರುವಿನೊಳು ಕೂಡು ತರಳ ಮಹಿಪತಿ ನಿನ್ನ ಗುರುತು ನಿಜ ಮಾಡು ಪ್ರಾಣಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನೊಳು ನೋಡಾನಂದವ ಎನ್ನ ಮನವೆ ಚೆನ್ನಾಗಿ ಚಿನ್ಮಯವ ಇನ್ನೊಂದಿಹವೆಂಬನ್ಯ ಪಥವಳಿದು ಉನ್ಮನಿಯೊಳು ಘನಸುಖ ಅನುಭವಿಸುತ ಧ್ರುವ ಕಂಗಳ ಕೊನೆಯ ಮೆಟ್ಟಿ ಮುಂಗಡಿಯಲಿಹ ಮಂಗಳಾತ್ಮಕನ ನೋಡಿ ಲಂಘಿಸಿ ಮೂಲಸ್ಥಾನವ ತುಂಗ ವಿಕ್ರಮನ ಸಂಗ ಸುಖವನರಿದು ಅನುದಿನ ಇಂಗಿತವಾಗಿ ನೀ ಗಂಗೆಯೊಳು ಜಲ ಬೆರೆದಾ ಸುಸಂಗದಿ 1 ನಾನು ನಾನೆಂಬದಳಿದು ನಿನ್ನೊಳು ನೀನೆ ಏನೆಂದು ತಿಳಿದು ನೋಡು ಆನಂದೋ ಬ್ರಹ್ಮದಾಟವು ತಾನೆ ತಾನಾಗಿ ತನುವಿನೊಳು ತೋರುವದು ಘನಗುರುವಚನಾನುಭವದಲಿ ಸೇವಿಸಿ ಸ್ವಾನುಭವದ ಸುಖದಲಿ ಲೋಲ್ಯಾಡುತ 2 ಮರೆದು ಮಾಯದ ಮಾಟವ ಅರಿತು ನೋಡು ಬೆರೆದು ದಾಂಟಿ ತ್ರಿಕೂಟವ ತೋರುವ ದಿವ್ಯಭಾವವ ತಾರಕಗುರು ಸಾರುವ ಕರುಣ ನೋಟವ ಅರವಿನೊಳಿರು ಮಹಿಪತಿ ಗುರುಪಾದದಿ ಪರಮಾನಂದದಿ ಸುಖ ಸೂರ್ಯಾಡುತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ಪ ನೀ ದೇಹದೊಳಗೊ ನಿನ್ನೊಳು ದೇಹವೊ ಹರಿಯೆಅ ಬಯಲೊಳಗೆ ಆಲಯವೊ ಆಲಯದೊಳಗೆ ಬಯಲೊಬಯಲು ಆಲಯವೆರಡು ನಯನದೊಳಗೊನಯನ ಬುದ್ಧಿಯ ಒಳಗೊ ಬುದ್ಧಿ ನಯನದ ಒಳಗೊನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ1 ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೊಸವಿಯು ಸಕ್ಕರೆ ಎರಡು ಜಿಹ್ವೆಯೊಳಗೊಜಿಹ್ವೆ ಮನಸಿನ ಒಳಗೊ ಮನಸು ಜಿಹ್ವೆಯ ಒಳಗೊಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ 2 ಕುಸುಮದಲಿ ಗಂಧವೋ ಗಂಧದಲಿ ಕುಸುಮವೋಕುಸುಮ ಗಂಧಗಳೆರಡು ಆಘ್ರಾಣದೊಳಗೊಅಸಮಭವ ಕಾಗಿನೆಲೆಯಾದಿಕೇಶವರಾಯಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ ಹರಿಯೆ 3
--------------
ಕನಕದಾಸ
ನೀನೆನಗೆರವೆ ನಾನಿನ್ನೆಂತಗಲುವೆಬಾ ನನ್ನ ತನುವೆ ಸದ್ಗುರುವಿಗೊಂದಿಸುವರೆ ಪಮೊದಲಿಗಮಿತ ದುಷ್ಟತನುಗಳ ಸಂಗದಿಕುದಿದು ಸಂಸಾರಾಗ್ನಿಯೊಳು ಬಳಲಿದೆನುಅದರಿಂದ ನಿನ್ನ ನಿಗ್ರಹಿಸಿದೆನಲ್ಲದೆಪದರದಿರೆನ್ನೊಳು ಪಡೆಯೆ ನಿನ್ನೊಂದನೂ 1ಗುರುಸೇವೆಗಲಸದೆ ಛಳಿಮಳೆಯೆನ್ನದೆಬರಿಯ ಬಯಲ ಸಂಸಾರ ಭೋಗದಲಿಎರಗದಿರೆನ್ನ ದಾರಿಗೆ ಬಾ ನಿನ್ನಾರೈಕೆುರಲೆನ್ನೊಳಿನ್ನು ತಪಿಸಿ ಕಂಗೆಡಿಪುದಿಲ್ಲ 2ಶ್ರವಣ ಸುಖದಿ ನನ್ನ ಬೆರೆದು ಬೇರಾಗದೆಭವಶರಧಿಯ ದಾಂಟುನಂತೆ ನೀ ಮಾಡುವಿವರಿಸಿ ಹರಿಗುಣ ಕಥೆಗಳನೆಮ್ಮೊಳುಕವಿದಿಪ್ಪ ತಮವ ತೊಲಗಿಸಿಕೊಂಬ ನಾವಿನ್ನು 3ನಿನ್ನಿಂದ ಸಂಸಾರ ವಿಷಯ ಸುಖದ ಲಾಭನಿನ್ನಿಂದ ಕೃಛ್ರಾದಿ ತಪಸಿನ ಲಾಭನಿನ್ನಿಂದ ಸತ್ಕರ್ಮತೀರ್ಥಯಾತ್ರೆಯ ಲಾಭನಿನ್ನಿಂದ ವೈರಾಗ್ಯ ಭಾಗ್ಯದ ಲಾಭ 4ನಿನ್ನೊಳಗಿರುವಿಂದ್ರಿಯಂಗಳಿಂದ್ರಿಯಗಳೊಳುಣ್ಣುವ ಮನ ಮನದೊಳು ಕೂಡ್ವ ಜೀವಎನ್ನುವರೆನ್ನನೆನ್ನಿರವನರಿಯೆನಿದನಿನ್ನಿಂದ ಗುರುಕೃಪೆವಡೆದು ತಿಳಿಯಬೇಕೂ 5ನೆವವಿಲ್ಲದುಪಕಾರಗೈವೆ ನೀನೆನಗಾಗಿವಿವಿಧ ಭೋಗದ ಸುಖವೆನಗೆ ನಿನ್ನಿಂದವಿವರಿಸೆ ನಿನಗೆ ಉಂಟು ಲಾಭವು ಮತ್ತೆನವೆವೆಯಲ್ಲದೆ ವೃದ್ಧಿಯಾಗುವೆಯಾ ಪೇಳು 6ನಿನ್ನಿಂದ ಸುಖಬಟ್ಟು ನಿನ್ನ ಬಾಳಿಸಲಾರದೆನ್ನನುಳುಹುವದೆಂತನ್ಯಾಯ ಸುಖವುಉಣ್ಣುವರಾರಿದನುಂಡು ಬದುಕಿರುವಅಣ್ಣನ ತಿಳಿಯಲು ಗುರುವೆ ಗತಿ ಕಂಡ್ಯಾ 7ವಂದಿಸಿಯೂಳಿಗಗೈವಲ್ಲಿಯಲಸದೆದಂದುಗ ಸುಖಕಾಗಿ ದಾರಿದೆಗೆಯದೆಒಂದಾಗಿ ಯೆನ್ನೊಳಿದ್ದರೆ ನನ್ನ ಸುಖವ ನಾಹೊಂದಲು ನಿನಗಾನಂದವಪ್ಪುದೆ ಕೇಳು 8ಮರುಗಿ ಮನದಿ ನಮ್ಮ ಮರವೆಯಾಟವ ಕಂಡುತಿರುಪತಿ ವೆಂಕಟರಮಣನು ತಾನೆಗುರುವಾಸುದೇವಾರ್ಯನಾಗಿಹನಾತನಚರಣವ ಮರೆಯೊಕ್ಕು ಬದುಕುವ ನಡೆಬೇಗ 9ಕಂ||ಜೀವನ ನುಡಿಯನು ಲಾಲಿಸಿಭಾವದಿ ಸರಿಬಂದ ಬಗೆಯ ಕಾಣದೆ ಗರ್ವದಿತಾವೊಲಿವರೆ ಮನಬಾರದುನೀವೊಬ್ಬನೆ ಸಾಧಿಸೆನೆ ಮನ ಕೆರಳಿ ನುಡಿದುದೂ
--------------
ತಿಮ್ಮಪ್ಪದಾಸರು
ನುಡಿದಂತೆ ನಡಿಯಬೇಕು ಪಿಡಿದು ಸುಪಥ ಧ್ರುವ ಸಾಧಿಸಿ ತಿಳಿಯದೆ ತನ್ನೊಳು ಖೂನ ಬೋಧಿಸಿ ಹೇಳುದು ಇನ್ನೊಬ್ಬರಿಗೇನ ಅದಿತತ್ವದ ಗತಿಯ ನಿಜಸ್ಥಾನ ಭೇದಿಸುವುದು ಸದ್ಗುರು ಕೃಪೆ ಙÁ್ಞನ 1 ನಡೆನುಡಿ ಒಂದಾದರೆ ಬಲು ಮೇಲು ದೃಢಭಕ್ತಿಗೆ ಒಂದಿದೆ ತಾ ಕೀಲು ಪಡೆವದು ಮನಮಾಡಿ ಮೀಸಲು ಬಿಡದೆ ಮಾಡುವ ಗುರು ದಯ ಕೃಪಾಳು 2 ಹೇಳಿಕಿಗಿದೆ ಬಿದ್ದದೆ ಬಲುಜನ ತಿಳುಹಿಸಿಕೊಡಲಿಕ್ಕಿಲ್ಲದೆ ಙÁ್ಞನ ತಿಳಿವು ತಿಳಿದರೆ ತನ್ನೊಳು ನಿಧಾನ ಹೊಳವ ಮಹಿಪತಿ ಗುರು ನಿಜ ಚಿದ್ಘನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೊಂದು ಬಂದೆನೊ ಕಾಂತೇಶ | ಕೈಯನೆ ಪಿಡಿಯೊ ಮಂದಭಾಗ್ಯಳ ಜೀವೇಶ ಪ. ಅಂದು ಶ್ರೀ ರಾಮರ ಸಂದೇಶವನ್ನೆ ಭೂ- ನಿಂದನೆಗೆ ಅರುಹುತಲಿ ಬಹು ಆನಂದಪಡಿಸಿದ ವಾನರೇಶ ಅ.ಪ. ಶೌರಿ | ಭಕ್ತರ ಕಾಯ್ವ ದುರಿತದೂರನೆ ಉದಾರಿ ಚರಣಕ್ಕೆ ನಮಿಸುವೆ ಹರಿಗೆ ಪರಮಾಪ್ತನೆ ದುರಿತ ತರಿಯುತ ಪೊರೆಯೊ ಗುರುವರ ರಾಮಕಿಂಕರ 1 ಗುರುಕರುಣದ ಬಲದಿ | ಅರಿತೆನೊ ನಿನ್ನ ಚರಣ ನಂಬಿದೆ ಮನದಿ ಪರಿ ಭವಕ್ಲೇಶ ಪರಿಯ ಬಣ್ಣಿಸಲಾರೆ ಹರಿವರನೆ ದಯಮಾಡು ಶ್ರೀ ಹರಿ ದರುಶನವನನವರವಿತ್ತು 2 ಕಾಂತನ ಅಗಲಿರಲು | ಚಿಂತೆಯಲಿ ಭೂ ಕಾಂತೆ ವನದೊಳಗಿರಲು ಸಂತೋಷದಿಂ ರಾಮನಂತರಂಗವನರುಹಿ ಸಂತಸವಪಡಿಸುತಲವನಿಸುತೆಯ ನಿಂತೆ ರಾಮರಿಗ್ಹರುಷ ತೋರಿ 3 ದ್ರುಪದ ಸುತೆಯಳ ಕೀಚಕ | ದುರ್ಮನದಲಿ ಅಪಮಾನಪಡಿಸೆ ದುಃಖ ತಪಿಸಿ ನಿನ್ನನು ಬೇಡೆ ಆ ಪತಿವ್ರತೆ ಸತಿ ಕುಪಿತದಿಂದಲಿ ಖಳನ ಕೊಂದೆ ಅಪರಿಮಿತ ಬಲಭೀಮ ಪ್ರೇಮ 4 ಮಿಥ್ಯಾವಾದದ ಭಾಷ್ಯಕೆ | ಸುಜ್ಞಾನಿಗಳ್ ಅತ್ಯಂತ ತಪಿಸುತಿರೆ ವಾತಜನಕನಾಜ್ಞೆ ಪ್ರೀತಿಯಿಂದಲಿ ತಾಳಿ ಘಾತುಕರ ಮತ ಮುರಿದ ಮಧ್ವನೆ ಖ್ಯಾತಿ ಪಡೆದೆÀ ಸಿದ್ಧಾಂತ ಸ್ಥಾಪಿಸಿ 5 ಪ್ರಾಣಪಾನವ್ಯಾನ | ಉದಾನ ಸ ಮಾನ ಭಾರತಿ ಕಾಂತನೆ ಜ್ಞಾನಿಗಳಿಗೆ ಪ್ರೀತ ಜ್ಞಾನ ಭಕ್ತಿಪ್ರದಾತ ದೀನಜನ ಮಂದಾರ ಕಾಯೊ ದೀನಳಾಗಿಹೆ ಕೈಯ ಮುಗಿವೆ 6 ನೋಯಲಾರೆನೊ ಭವದಿ | ಬೇಗನೆ ತೋರೊ ಧ್ಯೇಯ ವಸ್ತುವ ದಯದಿ ವಾಯುನಂದನ ನಿನ್ನ ಪ್ರಿಯದಿಂ ನಂಬಿದೆ ಕಮಲ ದ- ಳಾಯತಾಕ್ಷನ ಮನದಿ ತೋರಿ7 ಹರಣ ನಿನಗೊಪ್ಪಿಸಿದೆ | ಸುರವಂದಿತ ಕರೆದು ಮನ್ನಿಸಿ ಕಾಪಾಡೊ ಸಿರಿವರನನು ಹೃತ್ಸರಸಿಜದಲಿ ತೋರೊ ಧರೆಯ ವಸ್ತುಗಳ್ ಮಮತೆ ತೊರೆಸು ಹರಿಯ ನಾಮಾಮೃತವನುಣಿಸು 8 ಈ ಪರಿಬಂದೆ ಅನಿಲ | ನಿನ್ನೊಳು ವಾಸ ಗೋಪಾಲಕೃಷ್ಣವಿಠ್ಠಲ ಶ್ರೀಪತಿ ಕೃಪೆಯಿಂದ ನೀ ಪ್ರೀತನಾಗುತ ಕೈಪಿಡಿದು ಸಂತೈಸು ಕರುಣದಿ ಭಾಪುರೇ ಕದರುಂಡಲೀಶ 9
--------------
ಅಂಬಾಬಾಯಿ
ನೋಡಬಾರದೆ ಹರಿಯ ಮನವೆ ಧ್ರುವ ಸುಲಲಿತವಾಗಿ ಸುಲ್ಲಭವಾಗ್ಹಾನೆ ನೆಲೆ ನಿಭವಾಗಿ ತನ್ನೊಳು ತುಂಬ್ಹಾನೆ 1 ಹೃದಯಕಮಲದೊಳು (ಕರೆಗುಡು)ತ್ಹಾನೆ ಸದೋದಿತ ಸವಿಸುಖ ಬೀರುತಲ್ಹಾನೆ 2 ಹಲವು ಪರಿಯಲಿ ತಾ ಸಲಹುತಲ್ಹಾನೆ ಕುಲಕೋಟಿ ಬಂಧು ಬಳಗಾಗ್ಹಾನೆ 3 ಕಣ್ಣಿನ ಮುಂದೆವೆ ತಾನೆ ಕಟ್ಹಾನೆ ಬಣ್ಣ ಬಣ್ಣದಲಿ ತಾ ಭಾಸುತಲ್ಹಾನೆ 4 ಸ್ವಹಿತ ಸುಖದ ಸುಮೂರುತಿ ಆಗ್ಹಾನೆ ಮಹಿಪತಿಯೊಳು ಶ್ರೀಪತಿ ಆಗ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದ್ಯ ರಂಗೈಯನ ನೋಡಿದ್ಯ ಪ ನೋಡಿದ್ಯ ಮನವೆ ನೀನಿಂದು ಕೊಂ- ಡಾಡಿದ್ಯ ಎದುರಲ್ಲಿ ನಿಂದು ಆಹ ಮಾ- ತಾಡಿದ್ಯ ವರಗಳ ಬೇಡಿದ್ಯ ನಿನ್ನೊಳು ಕೂಡಿ ನಲಿನಲಿದಾಡುವ ಶ್ರೀ ರೂಪ ಅ.ಪ. ಚರಣತಳದಲ್ಲಿ ಕೆಂಪು- ಶುದ್ದ ಅರವಿಂದ ಧ್ವಜ ವಜ್ರಸೊಂಪು- ಸ್ತುತಿ ಪÀರಿಗೆ ಸುರಂಘ್ರಿಪ ತಂಪು- ನೋಡ- ಲರಸಿ ಕಾಣದೊ ವೇದಗುಂಪು, ಆಹ ಹರಡಿ ಹಿಂಬಳೆ ಸಾಲ್ಬೆರಳೈದರ ಮೇಲೆ ಸುರುಚಿರ ರೇಖೆ ಚಂದ್ರಮನ ಸೋಲಿಪ ನಖ1 ಸರಸ ನೂಪುರ ಗೆಜ್ಜೆ ಪೆಂಡ್ಯ - ಹೊನ್ನ ಸರಪಳಿ ಪಾಡಗ ಕಂಡ್ಯ - ಹಿಂದೆ ಧರೆಗೆ ಮುಟ್ಟಿದ ಜಡೆಗೊಂಡ್ಯ - ಇದು ತರುಣಿ ಎನ್ನದಿರು ಕಂಡ್ಯ - ಆಹ ಬೆರಳಲ್ಲಿ ಇಟ್ಟ ಸುಂದರ ಪಿಲ್ಲಿಮೆಂಟಿಕೆ ಕಿರಿಪಿಲ್ಲಿ ಅಡಿಮೆಟ್ಟು ಮೆರೆವ ಕಾಲುಂಗರ2 ಝಣ ಝಣ ಗೆಜ್ಜೆನಾದ - ವನ್ನು ಎಣಿಸಲಾರದು ನೋಡಿ ವೇದಾ - ನಂತ - ಮೋದ - ಇದು ಅಣುರೇಣು ತೃಣಕಾಷ್ಠ ಭೇದ, ಆಹ ಪ್ರಣತಾರ್ತಿ ಹರವಾದ ಮಿನುಗುವ ಜಾನುದ - ರ್ಪಣ ನಾಚಿಪ ಜಂಘೆ ಎಣೆಗಾಣೆ ಸ್ತ್ರೀರೂಪ 3 ಊರುದ್ವಯಂಗಳು ರಂಭಾ - ಸ್ತಂಭ ಚಾರು ಪೊಕ್ಕುಳ ಸುಳಿಗುಂಭ - ತಂತ್ರಾ - ಸಾರೋಕ್ತದಿ ಪೂಜೆಗೊಂಬ - ವಿ ಸ್ತಾರ ಮಹಿಮೆ ಗುಣತುಂಬ, ಆಹ ನಾರಿ ಲಾವಣ್ಯದ ಪಾರ ಮೀರಿದ ಕಾಂತಿ ಆರಾರ ಮನಸಿಗೆ ತೋರದ ಪೆಣ್ಣಿನ4 ಉದಯರಾಗದ ದಿವ್ಯವಸನ - ಮೇಲೆ ಉದರ ತ್ರಿವಳಿ ಬಂದಿ ಹಸನ - ಕೇಳು ಮುದದಿಂದ ವಡ್ಯಾಣ ಬೆಸನ - ನೋಡು ಯದುಕುಲ ಜಾತ ಮಾನಿಸನ, ಆಹ ಮದಕರಿಯಂದದಿ ವಲಿದೊಲಿದಾಡಲು ಮದನಾರಿ ಮರುಳಾದ ಅದುಭುತ ಚರಿಯನ್ನ 5 ದೋರ್ಯ ಹರಡಿ ಕೈಕಟ್ಟು - ಚೂಡ್ಯ ಈರೈದುಂಗುರವುಳ್ಳ ಬೆಟ್ಟು - ಬಂ - ಗೀರು ಗಂಧವು ಗಂಬೂರ ಕರ್ಪೂರ ಕ- ಸ್ತೂರಿ ಲೇಪನ ಶೃಂಗಾರ ತ್ರಿವಳಿಯ 6 ತಾಯಿತು ಮುತ್ತ ಕಟ್ಟಾಣಿ - ತೋಳ ಮಣಿ - ವಂಕಿ ಕೇಯೂರ ಪಲ್ಲವ ಪಾಣಿ - ಉ ಪಾಯದಲ್ಲಿ ಘಟ್ಟಿ ಕಾಣಿ, ಆಹ ನೋಯದೆ ಸುರರಿಗೆ ಪೀಯೂಷ ವುಣಿಸಿ ದೈ- ತೇಯರ ಮಡುಹಿದ ಮಾಯದ ಕನ್ನಿಕೆ 7 ಸರಿಗೆ ಮುತ್ತಿನ ಚಿಂತಾಕ - ಕುಚ- ಕಂಚುಕ - ತೊಟ್ಟ ಭರದಿ ತೂಗುವ ಪಚ್ಚೆಪದಕ - ಕೆಳಗೆ ಹರಿ ನಡುಕಿಂಕಿಣಿ ಕನಕ, ಆಹ ಹರಳು ಕೆತ್ತಿದ ಚಿತ್ತರ ಮಾಟ ಕಟಿಸೂತ್ರ ಧರೆಗೆ ಶೋಭಿಪ ಸೀರೆ ನೆರೆಯ ವೈಭವವನು 8 ರನ್ನ ಪವಳ ಸರ ಥಳಕು - ಜೋಡು ಕನ್ನಡಿ ಹಾಕಿದ ಮಲಕು - ನೋಡು ಅನ್ನಂತ ಸೂರ್ಯರ ಝಳಕು - ಲೋಕ ಚನ್ನಾಗಿ ತುಂಬಿದ ಬೆಳಕು ಹೇಮ ಸಣ್ಣ ಮುತ್ತಿನ ಮೋ ಹನ್ನ ಏಕಾವಳಿ ಚಿನ್ನದ ಸರಗಳು 9 ಸಿರಿವತ್ಸ ಕೌಸ್ತಭ ಹಾರ-ವೊಪ್ಪೆ ವೈಜಯಂತಿ ಮಂದಾರ - ಮೇಲೆ ತರುಣ ತುಲಸಿ ಜನಿವಾರ - ಇಟ್ಟು ವರಭುಜಕೀರ್ತಿ ಕುಂಜರ, ಆಹ ಕರದಂತೆರಡು ತೋಳು ಎರಡೊಂದಾರು ಸಾ- ವಿರ ರೂಪನಾಗಿ ಶರೀರದೊಳಿಪ್ಪನ 10 ಕೂರ್ಮ ಕದಪು - ಕಣ್ಣಿ- ಗಿಕ್ಕಿದ ಸೊಬಗಿನ ಕಪ್ಪು - ತಲೆ - ಹಿಕ್ಕಿ ಬಾಚಿದ ಕೇಶ ಥಳಪು - ಸರ್ವ ಲಕ್ಕುಮಿ ದೇವಿಯ ಲೆಕ್ಕಿಸದೇ ಮಗನ ಪೊಕ್ಕುಳಿಂದಲಿ ವೆತ್ತ ಅಕ್ಕಜದಬಲೆಯ11 ಸೂಸುವ ದಾಡಿಯ ದಂತ - ಪಙÂ್ತ- ನಾಸ ಮೂಗುತಿಯಿಟ್ಟ ಶಾಂತ - ಸುಖ ಲೇಸು ಹಾಸ ಜಗದಂತ - ರಂಗ ಭಾಸ ಮಿಗಿಲು ಚಂದ್ರಕಾಂತ, ಆಹ ಸುಷುಪ್ತಿಯಲ್ಲಿ ಭೂಶ್ವಾಸ ಬಿಡುವರನ್ನು ಲೇಸಾಗಿ ಸಲಹುವ ದೋಷನಾಶನ ರೂಪ12 ಎಸೆವ ಪಂಜರದೋಲೆ ಕಿವಿಯ-ಹೊನ್ನ ಕುಸುಮ ಕೂಡಿದ ಬಾವಲಿಯ - ತಿದ್ದಿ ಕುಸುರಿಯಿಕ್ಕಿದ ಸರಪಣಿಯ - ಚಿನ್ನ ಸೋಸಲು ಕುಂಕುಮ ರ್ಯಾಕಟೆಯ, ಆಹ ಎಸಳು ಕೇದಿಗೆ ಬಹು ಕುಸುಮವ ಮುಡಿದದ್ದು ವಶವಲ್ಲ ಚೌರಿ ಅರಸಿನ ಪೂಸಿದ ಹೆಣ್ಣ13 ಕಪೋಲ - ಪೊಸ- ಮೌಳಿ ಕೈಯಲ್ಲಿ ಕಡೆÀಗೋಲ - ನೇಣು ಪಾಲಯ ಪಿಡಿದ ಸುಶೀಲ - ಧರೆಯ - ಶೂಲಿಯ ನೆಲೆಸಿದ ಖೂಳನ ಸದೆದು ಹಿ- ಯ್ಯಾಳಿಸಿ ಮೆರೆದ ಗೋಪಾಲನೆಂಬ ಹೆಣ್ಣ14 ರಜತ ಪೀಠ ಪುರಾಧೀಶ - ನಂದ ವ್ರಜದೊಳಾಡಿದ ಸರ್ವೇಶ - ನಮ್ಮ ವಿಜಯವಿಠ್ಠಲ ನಾರಿವೇಷ - ತನ್ನ ನಿಜಭಕ್ತ ಮಧ್ವಮುನೀಶ, ಆಹ ತ್ರಿಜಗ ಮಧ್ಯದಲಿ ನಿಜ ಪದವಿಯನಿತ್ತು ಸುಜನರಿಗೊಲಿದನ್ನ15
--------------
ವಿಜಯದಾಸ
ನೋಡು ಎನ್ನೊಳು ಮಾಡು ದಯವನು ಬೇಡಿಕೊಂಬುವೆ ಮುರಹರ ಪ ರೂಢಿಯೊಳು ಎನ್ನ ಖೋಡಿಮಾಡದೆ ಕಾ ಪಾಡು ಬೇಗ ಭಕ್ತಹಿತಕರ ಅ.ಪ ಪಂಕಜಾಕ್ಷನೆ ಕಿಂಕರನ ಈ ಮಂಕುಗುಣಗಳ ಬಿಡಿಸಯ್ಯ ಶಂಖಸುರಹರ ಶಂಕೆಯಾತಕೆ ಕಿಂಕರನು ನಾಂ ಪಿಡಿ ಕೈಯ 1 ಹಿಂದು ಇಲ್ಲೆನ್ನ ಮುಂದು ಇಲ್ಲಯ್ಯ ತಂದೆ ನಿನ್ಹೊರತ್ಯಾರ್ಯಾರು ಮಂದಮತಿಯನು ಛಿಂದಿಸಿ ಬೇಗ ಕಂದನನು ಪೊರೆ ದಯಾಕರ 2 ತಂದೆ ನೀನೆ ತಾಯಿ ನೀನೆ ಬಂಧು ನೀನೆ ಶ್ರೀಕರ ಬಂದ ದುರಿತದಿಂದ ಕಾಯೊ ಸಿಂಧು ನೀನೆ ದೇವರೊ 3 ಉರಗನ ಬಾಯಲಿರುವ ಮಂಡೂಕ ಸ್ಮರಿಸಿ ನೋಣಕ್ಹವಣಿಸುವ ತೆರದಿ ಶರಧಿಸಂಸಾರ ಸ್ಥಿರವೆಂದರಿಯದೆ ಮರವಿನಿಂ ಬಿದ್ದೆ ದುರಿತದಿ 4 ಕಾಯಜೆಂಬುವ ಮಾಯಕೋರನು ಪಾಯಕೆ ಒಳಪಟ್ಟೆನು ತೋಯಜಾಕ್ಷೇರ ಮಾಯಮೋಹದಿ ಕಾಯದಂದಿಸಿ ಕೆಟ್ಟೆನು 5 ಕುಂಭಿನಿಯೊಳೆನಗಿಂಬುಗೊಟ್ಟು ಬಲು ನಂಬಿದವರಾಸ್ತ್ಯಳಿದೆನೊ ಜಂಬಬಡಿಯುತ ಶುಂಭಗುಣಗಳಿ ಗಿಂಬುಗೊಟ್ಟು ದಿನಗಳೆದೆನೊ 6 ಪ್ರಾಣತಗ್ಗಿಸಿ ದೀನತನದಲಿ ದೈನ್ಯಬಡುವರಿಗ್ಹಾನಿಮಾಡಿದೆ ದಾನಕೊಡುವರ ದಾನಕಡ್ಡಾಗಿ ನಾನಾ ದುರ್ಬೋಧವುಸುರಿದೆ 7 ಜಾನಕೀಶನ ಧ್ಯಾನಯುತರಿಗೆ ಹೀನ ಹಾಸ್ಯವ ಗೈದೆನೊ ಏನು ತಿಳಿಯದೆ ಗಾಣಕೆ ಬಿದ್ದ ಮೀನಿನಂತೆ ನಾನಾದೆನೊ 8 ಶ್ವಾನನಂದದಿ ಖೂನವಿಲ್ಲದೆ ನಾನಾಪಾಪವ ಗೈದೆನೊ ಮಾನವಜನುಮೇನು ಶ್ರೇಷ್ಠಿದ ಜ್ಞಾನದೋಳ್ಹೊತ್ತುಗಳೆದೆನೊ9 ಮಂಗನಂದದಿ ಹಂಗದೊರೆದು ಅಂಗಲಾಚಿ ಪರರನ್ನು ಬೇಡಿದೆ ಅಂಗಜಪಿತ ಮಂಗಳಾಂಗ ಶ್ರೀ ರಂಗ ನಿಮ್ಮ ಮಹಿಮ್ಯರಿಯದೆ 10 ದಾಸ ಮಾಡಿದ ದೋಷ ಮನ್ನಿಸಿ ಪೋಷಿಸು ಶ್ರೀರಾಮನೆ ಶ್ರೀಶ ಶ್ರೀನಿವಾಸ ಎನ್ನಂತ ರಾಸೆ ಪೂರೈಸು ಬೇಗನೆ 11
--------------
ರಾಮದಾಸರು
ನೋಡು ನಿನ್ನೊಳು ನಿನ್ನುಗಮ ಮನವೆ ಧ್ರುವ ನೋಡು ಒಡನೆ ಖೂನ ಬಿಡದೆ ಸಾರುತದೆ ನಿಗಮಾ ದೃಢ ಭಾವದಲಿ ಪಡೆದು ಸದ್ಗುರು ದಯ ವಿಡಿದು ಸೆರಗ ಕುಡುವದಿದು ಸುಗಮ 1 ಉಗಮಸ್ಥಾನದ ಉದ್ಭವ ತಿಳಿಯದೆ ಬಿಗಿದ್ಹೆಮ್ಮಿಲಿಹುದ್ಯಾಕೆ ಬಗೆ ಬಗೆ ಸಾಧನ ಶ್ರಮಗೊಂಡು ಜಗಜಾಲದಿ ಭ್ರಮಿಸುವುದಿದೇಕೆ 2 ನಿರ್ಮಳ ನಿಶ್ಚಳ ನಿಜಘನವರಿತು ಕರ್ಮ ಬಂಧನವ ಗೆಲಿಯಾ ಮರ್ಮಿಲಿ ಮಹಿಪತಿ ಗುರುಯೋಗಧರ್ಮದಿ ನಿರ್ಮನದಲಿ ನಿಜಗೂಡ ಮನವೇ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡು ನಿನ್ನೊಳು ನೀ ನೋಡು | ಸಾಕು ಸಾಕು ಈ ಲೋಕದ ನಡವಳಿ | ಯಾಕಬೇಕು ಪಿನಾಕಿಯ ಭಜಿಸೋ ಪ ಅಗಣಿತ ಸಂಪದ ಕೈಗೂಡುವದೋ ಅದ | ಬೇಡದೆ ಬೇಗನೆ 1 ಘಾಸಿ ಕ್ಲೇಶ ಬಡುವಿ ಜಗದೀಶನು ಒಲಿವನೆ ? 2 ಹಿಂದೆ ಜನ್ಮ ನೊಂದೆ ಸದ್ಗತಿ ಪಡೆಯದೆ | ಮುಂದೆ ಸಾಧಿಸು ಶಿವ ತತ್ತ್ವವ ಒಂದೇ | ತಂದೆ ಸದ್ಗುರು ಭವತಾರಕನಂಘ್ರಿಯ |ಹೊಂದಿ ನಿಜಾನಂದ ಬೋಧದಲಿರು ನೀ3
--------------
ಭಾವತರಕರು
ನೋಡೊ ನೋಡೋ ನಿನ್ನೊಳು ನಿಜಾ ಪ ಮೂಢತನವ ಬಿಟ್ಟು ಕೂಡಿ ಭಾವ ಭಕ್ತಿಯಾ | ಪಾಡಿ ಕೊಂಡಾಡಿ ಸೂರ್ಯಾಡೆಲೋ ಹರಿನಾಮಾ ಅ.ಪ ನಾನು ನನ್ನದು ಯಂದು ಹೀನ ವೃತ್ತಿಗೆ ಬಿದ್ದು | ನಾನಾ ಬವಣೆಯಲ್ಲಿ ತೊಳಲುತ ತೊಳಲುತ | ಗಳೆವರೇ ದಿನವನು 1 ಸನ್ನುತ ಗುರುಪಾದ ಮನ್ನಿಸಿ ಪಡೆಯಲೋ ಬೋಧಾ | ಬನ್ನ ಬಡುವದೇನು ಕಣ್ಣದೆರೆನ್ನಾರೆ ತನ್ನತಾ ಮರೆವರೆ 2 ಗುರುಮಹಿಪತಿ ಸ್ವಾಮಿ ಸುರಮುನಿಜನ ಪ್ರೇಮಿ | ಮೊರೆ ಹೊಕ್ಕವರ ಕೈಯ್ಯಾ ಜರಿಯೂತಾ ಮರಿಯಾ | ನೀ ನರಿಯದೆ ಕೆಡಬ್ಯಾಡಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಕ್ಷಿವಾಹನ ಸತ್ಯಭಾಮೆ ಸದನದ್ವಾರದಿ ನಿಂತು ಸದನದ್ವಾರದಿ ಮಿತ್ರೆ ಎನಗೆ ಕದವ ತೆಗೆಯೆ ಬರುವೆ ತೀವ್ರದಿ 1 ಸಾಕೊ ಸಾಕೊ ನಿನ್ನ ಸಂಗ ಯಾಕೊ ಕೃಷ್ಣನೆ ನಮಗಿನ್ಯಾಕೊ ಕೃಷ್ಣನೆ ಅ- ನೇಕ ಸ್ತ್ರೀಯರಿಂದ ರಮಿಸ್ಹೋಗಾದಿ ಪುರುಷನೆ 2 ವಾಕು ವಾಕು ತಿಳಿಯದೊ ವಿ- ವೇಕದಿಂದ ನಿಂತು ಪೇಳೆ ಮಾತುಯೆನ್ನೊಳು 3 ಎನ್ನ ಬಿಟ್ಟು ಅನ್ಯಸ್ತ್ರೀಯರ ಮನೆಗೆ ಪೋಗುವಿ ಸ್ತ್ರೀಯರ ಮನೆಗೆ ಪೋಗುವಿ ಘನ್ನ ಘಾತಕತನದಿಂದಿಲ್ಲಿಗಿನ್ನು ಬರುವರೆ 4 ನಿನ್ನ ಸರಿಯಸವತೇರೆನಗೆ ಸತಿಯರಲ್ಲವೆ 5 ಅತ್ತಸಾಗೊ ರುಕ್ಮಿಣಿ ಒಲವು ಚಿತ್ತವ್ಹಿಡಿಯದೆ ಆಕೆ ಚಿತ್ತವ್ಹಿಡಿಯದೆ ಲೆತ್ತಪಗಡೆನಾಡದ್ಹೀಗೆ ಇತ್ತ ಬರುವರೆ6 ಕಾಳಕತ್ತಲು ಪ್ರಳಯಜಲದಿ ಕಾದುಕೊಂಡೆನ್ನ ಇರುವೋಳು ಕಾದುಕೊಂಡೆನ್ನ ಆದಿಲಕ್ಷ್ಮಿ ಮುನಿದರೆನಗಿನ್ನಾ ್ಹ್ಯಗೆ ಭಾಮಿನಿ 7 ಜಾಂಬುವಂತೇರ್ಹಂಬಲಬಿಟ್ಟು ಬಂದ ಕಾರಣ ನೀನು ಬಂದ ಕಾರಣ ಆ- ನಂದ ಬಡಿಸುತವರ ಗೃಹದಲ್ ಹೊಂದಿಕೊಂಡಿರು 8 ಜಾಂಬುವಂತೇರಿಂದ ಬಂದ ನಿಂದ್ಯ ಕಳೆದನೆ ನಾ ಅಪನಿಂದ್ಯ ಕಳೆದೆನೆ ತಂದು ರತ್ನತೋರಿ ನಿನ್ನ ತಂದೆ ಭಾಮಿನಿ 9 ಕಮಲನಾಭ ಕಾಳಿಂದಿ ಕಳವಳಿಸುವಳೊ ಕಾಣದೆ ಕಳವಳಿಸುವಳೊ ಕಾಣದೆ ಕಾಲಕಳೆಯೊದ್ಯಾ ್ಹಗಿನ್ನಾಕೆ ಆಲಯಕೆ ಪೋಗೊ 10 ಭಾಳ ತಪಸಿಲ್ವಲಿಸಿ ಭಾರ್ಯಳಾದ ಬಗೆ ನೀ ಅರಿಯದೆ 11 ನೀಲವರ್ಣ ನೀಲಾದೇವಿ ನಿನ್ನ ಕಾಣದೆ ಇರುವಳು ನಿನ್ನ ಕಾಣದೆ ಗಮನ ನಿಲ್ಲದೆ ನೀ ಪೋಗೊ 12 ಸಪ್ತಗೂಳಿ ಕಟ್ಟಿ ನಾ ಸಮರ್ಥನೆನಿಸಿದೆ ಬಲು ಸಮರ್ಥನೆನಿಸಿದೆ ನೀಲ ನನಗೆ ಶ್ರೇಷ್ಠಳಲ್ಲವೆ 13 ಎದ್ದು ಪೋಗಾಕಿದ್ದಸ್ಥಳಕಿಲ್ಲಿರಲು ಸಲ್ಲವೊ 14 ಅರಸರಾಕೆ ಅಗ್ರಜರೈವರು ಕರೆಸಿ ಕೇಳೋರೆ ಎನ್ನ ಕರೆಸಿ ಕೇಳೋರೆ ಹೋಗಿ ಹರುಷ ಬಡಿಸದಿರಲು ಆಕೆನ್ನರಸಿ ಅಲ್ಲವೆ 15 ಆಕೆ ಸಿಟ್ಟಿಲಿಂದ ದೃಷ್ಟಿತೆಗೆದು ಎನ್ನ ನೋಡಳೆ 16 ನಿನಗೆ ಇಷ್ಟು ಕ್ರೋಧ ನಿಷ್ಠೂರ್ವಚನ ಬ್ಯಾಡೆ ಭಾಮಿನಿ 17 ಲಕ್ಷಣ ದೇವೇರಲ್ಲಿ ಭಾಳಾಪೇಕ್ಷವಲ್ಲವೆ18 ನಾನು ಲಕ್ಷಣೆಯನೆ ತಂದೆ ಕೇಳೆ ಸತ್ಯಭಾಮೆ ನೀ 19 ಹತ್ತು ಆರು ಸಾವಿರ-ಶತ ಪತ್ನೇರಿಲ್ಲವೆ ನಿನಗೆ ಪತ್ನೇರಿಲ್ಲವೆ ತಿರುಗಿ ಸುತ್ತಿ ಸುತ್ತಿ ಹಾದಿ ಹೀಗೆ ತಪ್ಪಿಬರುವರೆ 20 ದಾರಮನೆಗೆ ಹೋಗಲೆನ್ನ ದೂರು ಮಾಡೋರೇ ಹೀಗೆ ದೂರು ಮಾಡೋರೇ ಸ್ವಾಮಿ ಪಾರಿಜಾತಕೊಟ್ಟ ಸತಿಯಲ್ಲೊ ್ಹೀಗಿರೆಂಬರೆ 21 ಸರಸವಾಡದಿರೊ ಶ್ರೀರಮಣ ಅರಸೇರ್ಯಾತಕೊ ನಿನಗೆ ಅರಸೇರ್ಯಾತಕೊ ಹರುಷದಿಂದ ಎರಗದೆನ್ನ ಶಿರಸಿದ್ಯಾತಕೊ 22 ಶ್ರೀಶ ಎನ್ನ ಮನದಲಿರೊ ಭೀಮೇಶಕೃಷ್ಣನೆ ಇರೊ ಭೀಮೇಶಕೃಷ್ಣನೆ ನಿನ್ನ ವಿಲಾಸ ಬಯಸದಿರುವರ್ಯಾರೊ ಇಂದಿರೇಶನೆ 23
--------------
ಹರಪನಹಳ್ಳಿಭೀಮವ್ವ
ಪರ ಅಕ್ಷರವ ಧ್ರುವ ಕ್ಷರ ಅಕ್ಷರವ ಸೆÉರಗ ಪಿಡಿಯೋ ಗುರು ಮುಖದಲಿ ನೀ ಪೂರ್ಣ ಪರಮಾನಂದ ಸುಖದೋರುವ ಬಗೆ ಅರಿಯೋ ಕೂಟ ಸ್ಥಳದಲಿ ಪ್ರಾಣಿ 1 ರೇಚಕ ಪೂರ್ವಕದನುಭವ ತಿಳಿದು ಯೋಚಿಸಿ ನೋಡಲಿಂದ ಸೂಚಿಸಿ ತಾನೆ ಭಾಸುವ ಕ್ರಮವಿದು ಅಚರಿಸೋ ಅನುಭವದಲಿ ಪ್ರಾಣಿ 2 ಕ್ಷರ ಅಕ್ಷರವ ತಿಳಿಯದೆ ಬರೆÀವಾ ಅಕ್ಷರದಾ ಖೂನ್ಯಾಕ ಎರಡೇ ಮಾತಿನ ಅರಿವೇ ಅದರೆ ಪರಲೋಕಕ್ಕೆ ಸೋಪಾನವಿದು ಪ್ರಾಣಿ 3 ಇದೇ ಹೇಳಿದ ಗೀತೆಯಲ್ಲಿ ಶ್ರೀಕೃಷ್ಣನೆ ತಾಂ ಅರ್ಜುನಗೆ ಇದರಿಟ್ಟಿದು ಘನಸುಖ ಆ ಮಹಿಮನೆ ಇದರಿಂದಲಿ ತಿಳಿವದು ನೀ ಪ್ರಾಣಿ 4 ಇಡಾ ಪಿಂಗಳ ನಾಡಿ ನಡುವಿದು ಸಾಧಿಸಿ ಮಾತಿನ ಖೂನ ಎಡಬಲ ನೋಡದೆ ಪಡಕೋ ಮಹಿಪತಿ ಒಡನೆ ನಿನ್ನೊಳು ನಿಧಾನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1 ಮಂದರ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2 ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3 ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4 ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5 ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6 ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7 ಕ್ರತು ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8 ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9 ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10 ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11
--------------
ಕನಕದಾಸ