ಒಟ್ಟು 260 ಕಡೆಗಳಲ್ಲಿ , 54 ದಾಸರು , 254 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳವೆನ್ನಿರೆ ಮದನಗೋಪಾಲನಿಗೆ ಮಂಗಳವೆನ್ನಿರೆ ಮಾಧವಗೆ ಪ ಮಂಗಳವೆನ್ನಿರೆ ಮಾಮನೋಹರನಿಗೆ ಮಂಗಳವೆನ್ನಿರೆ ಮುರಹರಗೆ ಅ.ಪ ಭುವನಮೋಹನ ಶಾಮಲಸುಂದರಾಂಗಗೆ ಅಮಿತಪರಾಕ್ರಮ ಅಚ್ಚುತಗೆ ನವನವಲೀಲೆಯ ತೋರಿದ ದೇವಗೆ ಸುವಿನಯದಿಂದ ಶ್ರೀ ಶ್ರೀಧರಗೆ1 ಶಂಖು ಚಕ್ರಪೀತಾಂಬರಧಾರಿಗೆ ಬಿಂಕದಿಂದ ಮುರಳಿಯನೂದಿದಗೆ ಶಂಕರಾದಿ ಸುರಸೇವಿತಗೆ ನಿಷ್ಕ- ಳಂಕದಿ ಭಜಿಪರ ಪೊರೆದವಗೆ2 ಪರಿಪರಿ ವಿಧದಲಿ ಹರಿ ಸ್ಮರಣೆಯ ಮಾಡೆ ಪರಾಭವನಾಮ ಸಂವತ್ಸರದಿ ದುರಿತಗಳೆಲ್ಲವ ಪರಿಹರಿಸುತ ಕಾಯ್ವ ಸಿರಿವರ ಕಮಲನಾಭ ವಿಠ್ಠಲನಿಗೆ3
--------------
ನಿಡಗುರುಕಿ ಜೀವೂಬಾಯಿ
ಮಹಾಬಲಿಪುರ ಮಹಾಬಲೇಶ್ವರ ಮಾವಳಿಪುರ ಮಿಹಿರಾ ಸುರುಚಿರ ಪರಾತ್ಪರಾ ಪ ಮಹೀಸುರಾರ್ಚಿತ ಸದಾಕೃಪಾಕರ ವಿಹಂಗವಾಹನ ಪೀತಾಂಬರ ಅ.ಪ ಮಧುಸೂದನ ತವಪಾದುಕಾ ಸಾರದ ಮಾಧವಿ ಸುಮದಲಿ ಪೂದತ್ತರುದಿಸಿ ಮೇದಿನಿಯೊಳು ತವಾರಾಧನ ತತ್ವವ ಬೋಧಿಸುವಂತೆ ನೀಗೈದೆ ಕೃಪಾನಿಧೆ 1 ಶ್ರೀಮದನಂತ ದಿವ್ಯಾಸನಮಂಡಿತ ಶ್ರೀಮಹೀಸಂಯುತ ಲೋಕವಿಖ್ಯಾತಾ ಪ್ರೇಮಸುಧಾನ್ವಿತ ಕಾಮಿತದಾತಾ ಶ್ರೀ ಮಾಂಗಿರಿಪತಿ ಶರಣಸಂಪ್ರೀತಾ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾತೆ ಸರಸ್ವತಿ ಮಂಜುಳ ಮೂರುತಿ ಚೇತನಾತ್ಮಕಿ ಭಾರತಿ ಪ. ಪ್ರೀತಿಯಿಂದೀವುದು ಪೀತಾಂಬರಧರನ ಸಾತಿಶಯದ ಭಕುತಿ ಅ.ಪ. ಗುರುಹಿರಿಯರ ಕಂಡು ಬಿರುನುಡಿ ನುಡಿಸದೆ ಕರುಣಿಸೆನಗೆ ಸನ್ಮತಿ ಪರಮಪಾವನ ವೈಷ್ಣವರ ಪಾದಾಂಬುಜ ಮಧು- ಕರದಂತಿರಲಿ ಮದ್ರತಿ 1 ಮೂರ್ತಿ ತಾರೇಶನಂದದಿ ಹೃದಯಾ- ಕಾಶದೊಳು ಕಾಣುತಿ ದೂಷಣ ಕಾಮಾದಿ ಕ್ಲೇಶವ ಬಿಡಿಸುತ್ತ ಗೈಸಮ್ಮ ಹರಿಯ ಸ್ತುತಿ 2 ಮನುಜರ ರೂಪದಿ ದನುಜರು ಭೂಮಿಯೊಳ್ ಜನಿಸಿದರ್ಜಲಜನೇತ್ರಿ ಅನಘ ಲಕ್ಷುಮಿನಾರಾಯಣನ ದಾಸರಿಗೆಲ್ಲ ಜನನಿಯೆ ನೀನೆ ಗತಿ 3 ಭಾರತಿದೇವಿಯ ಸ್ತುತಿ
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಧವ ಜಯ ಜಯ ರಾಘವ ರಾಮ ಖರಾರೇ ಪ ಜಯತು ಸೀತಾಧವ ಪಾವನ ಶೌರೇ ಅ.ಪ ಜಯತು ಪೀತಾಂಬರಧರ ಶಕಟಾರಿ ಜಯ ಕನಕಾಂಬರಧರ ವಿಕಟಾರಿ ಜಯ ಜಯ ಮುರಳೀಧರ ಕಂಸಾರಿ ಜಯ ಜಯ ಶರಧರ ದಶಶಿರವೈರಿ 1 ಜಯತು ಗೋಪೀಜನಪ್ರಿಯ ಗೋಪಾಲ ಜಯತು ತಪೋಬಲ ಮುನಿಜನಪಾಲ ಜಯತು ಜಯತು ಕೌಸ್ತುಭಮಣಿಮಾಲ ಜಯ ಜಯತು ಭೂಪಾಲ ಸುಶೀಲಾ 2 ಸನ್ನುತ ನಾಮ ಜಯ ಜಯಾನತ ಮುನಿಜನ ಪ್ರೇಮಾ ಜಯತು ಜಯತು ರಾಮ ಮಾಂಗಿರಿಧಾಮಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾನವಾತ್ಮರೆ ನಿಮ್ಮ ಮಾನಸ ಪೂಜೆಯಿಂಮಾನವನಿಗೆ ಮೋಕ್ಷ ಸಾಧಿಸೀರಿ ಪ ರತ್ನ ನಿರ್ಮಿತ ಸುಚರಿತ್ರ ಮಂಟಪವನ್ನುಸತ್ಯಭಾಮೆಯ ಪತಿಗಿತ್ತು ಪೂಜಿಸುವೆ1 ಆಸನ ನೀಡುವೆ ಶೇಷಶಯನನೆ ಇಲ್ಲಿವಾಸ ಮಾಡಿ ಎನ್ನ ಸೇವೆ ಸ್ವೀಕರಿಸು2 ಧ್ಯಾನ ಮಾಡುವೆ ನಿನ್ನ ಗಾನ ಮಾಡುವೆ ನಿನ್ನಜ್ಞಾನ ಭೂಷಣ ಶೋಭಿತಾನನಾಂಬುಜ 3 ಧೃತ ವೇಣುಗೋಪಾಲ ಬಾರೋ ಮನಸಿಗೆ ತೋರೊಮೂರುತಿ ನಿನ್ನಯ ಸಮೀರ ಸಂಸ್ತುತನೆ 4 ಅಘ್ರ್ಯ ನೀಡುವೆ ನಾನು ಅನಘ್ರ್ಯ ವಸ್ತುಗಳಿಂದಸ್ವಘ್ರ್ಯಗ್ರಹಣ ಮಾಡೋ ಭರ್ಗ ಸೇವಿತನೆ 5 ಪಾದ್ಯ ನೀಡುವೆ ವೇದ ವೇದ್ಯ ಮಹಿಮನೇ ಮುನ್ನಾವದ್ಯ ಕಳೆದು ಭವದಿಂದ ಉದ್ಧರಿಸೆನ್ನ 6 ಆಚಮನವ ನೀಡುವೆ ಹೇ ಚತುರಾನನೇಶವಾಚಾಮಗೋಚರ ಮೋಚಕ ಹೇತು 7 ಸುದತಿ ಮೋಹನ ತವಮಧುಪರ್ಕವನೀವೆ ಮುದದಿ ಸ್ವೀಕರಿಸು 8 ಮತ್ತೆ ಆಚಮನವನಿತ್ತು ಪೂಜಿಪೆ ಕರವೆತ್ತಿ ಮುಗಿವೆ ಸರ್ವಭಕ್ತ ಪೋಷಕನೆ 9 ಗಂಗೆ ಯಮುನೆ ಗೋದಾ ತುಂಗೆ ಜಲವ ತಂದಿಹೆ ಅ-ನಂಗ ಜನಕ ಮಾಡೋ ಅಭ್ಯಂಗ ಸ್ನಾನ 10 ನಿರಿಗೆಗಳನೆ ಹಾಕಿ ಜರದ ಪೀತಾಂಬರ ಗ-ರುಡವಾಹನ ನೀನು ಧರಿಸು ಮಧ್ಯದಲಿ 11 ಹಾರ ಕಿರೀಟ ಕಾಂಚಿ ನೀರ ನೂಪುರ ಸು-ಕೇಯೂರ ನೂಪುರನೀವೆ ಧಾರುಣಿಪತಿಗೆ 12 ಸ್ವರ್ಣ ರಚಿಸಿದ ಸೂತ್ರವನು ಕೊಡುವೆ ಲಕ್ಷ್ಮೀರನ್ನ ಸೌರಭ ಗಂಧವನು ಸ್ವೀಕರಿಸು 13 ವಾಸುದೇವನೆ ದಿವ್ಯ ನಾಸಿಕೇಂದ್ರಿಯದಿಂದಈಸು ಧೂಪದ ಗಂಧ ವಾಸನೆ ಗ್ರಹಿಸೋ 14 ಮರುಗು ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸುಮಗಳ ಪರಿಮಳ ಧರಿಸೋ ಮಧ್ಯದಲಿ 15 ಹತ್ತು ಅಂಗಗಳಿಂದ ಉತ್ತಮ ಸುಧೂಪವಎತ್ತುವೆ ನಿನಗೆ ಸರ್ವೋತ್ತಮ ಹರಿಗೆ16 ಆಕಳ ಘೃತದ ಅನೇಕ ದೀಪಗಳ್ಹಚ್ಚಿಶ್ರೀಕರ ತವ ಮುಖಾವಲೋಕಿಸುತ್ತಿಹೆನು 17 ಏಕಾರತಿ ಗೋಪಿಪ್ರೀತನೆ ಬೆಳಗುವೆನಾಕ ನಾಯಕ ಸುರಲೋಕ ಸೇವಿತನೆ 18 ಆರು ವಿಧದ ಅನ್ನ ಸಾರು ಪಾಯಸ ಭಕ್ಷ್ಯಭೂರಿ ಶಾಕಗಳೀವೆ ನೀರಜಾಂಬಕನೆ 19 ಮಾರಜನಕನೆ ಮುತ್ತಿನಾರತಿ ಬೆಳಗುವೆಶ್ರೀರಾಮನೆ ನಿನ್ನ ಮೋರೆಯ ತೋರೊ20 ಛತ್ರ ಚಾಮರ ವ್ಯಜನ ದರ್ಪಣ ಪರ್ಯಂಕಕರ್ಪುರ ತಾಂಬೂಲವಿತ್ತು ಪೂಜಿಸುವೆ 21 ಹತ್ತಾರು ಉಪಚಾರ ಚಿತ್ರ ಚರಿತನೆ ನಿನಗೆಅರ್ಥಿಯಲಿ ಕೊಡುವೆನು ಮುಕ್ತಿ ನೀಡೆನಗೆ 22 ಇಂದಿರೇಶನೆ ನಿನ್ನ ಮುಂದೆ ತುತಿಪನೆ ನಿಂತುನಂದಬಾಲನೆ ಕೃಪೆಯಿಂದ ನೋಡೆನ್ನ 23
--------------
ಇಂದಿರೇಶರು
ಮಾವಿನಕೆರೆ 8 ರಂಗಗಿರಿಯನೇರಿಬರುವಾ ತಂಗಿ ಬರುವೆಯಾ ಪ ಅಂಗನೆಯರು ಕುಣಿದು ಮಣಿವ ಸಂಗದೊಳಿರುವಾ ಅ.ಪ ಅವನ ಪಾದದ ನಡಗೆ ಚಂದ | ಧವಳಹಂಸ ಮನಕಾನಂದಾ ಅವನ ನಲಿವು ನವಿಲಿಗಂದ | ಅವನ ಉಲಿವು ಕೋಗಿಲೆಯಂದಾ 1 ಅವನ ಕರದ ವೇಣುಗಾನ ಭುವನಕೆಲ್ಲ ಅಮೃತಪಾನ ಅವನ ನಗೆಯ ತೋರ್ಪ ಭವವ ಕಳೆವ ಪುಣ್ಯಸದನ 2 ವಾರಿವಾಹ ವರ್ಣದವನು ಹಾರಪದಕ ಧರಿಸಿದವನು ಚಾರುಸುಂದರ ಪೀತಾಂಬರನು 3 ಹಿಂದೆ ನೀನು ನೋಡಲಿಲ್ಲ ಮುಂದೆ ನಾನು ಕರೆವುದಿಲ್ಲ ಇಂದು ಬಂದೆಬರುವನಲ್ಲ ಸಂದೇಹ ಎಳ್ಳಷ್ಟೂ ಇಲ್ಲ 4 ಬೊಮ್ಮನಪ್ಪನವನೆ ನೀರೆ ನಮ್ಮ ಮಾಂಗಿರಿಗೊಪ್ಪುವ ತಾರೆ ಹೊಮ್ಮಿದಾ ಸಂಪ್ರೀತಿಯ ಬೀರೆ ಸುಮ್ಮನೆ ನನ್ನೊಡನೆ ಬಾರೆ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುಟ್ಟದಿರಿಗೋಪವನಿತೆಯರು ಗಲಭೆಯದೇನುತೊಲಗಿರೇ ತೊಟ್ಟಿಲಂ ತೂಗದಿರಿ ಕೃಷ್ಣನೆದ್ದರೆ ಕಾಡದಿರನೆನ್ನಾ ಪ ಮಿಸುನಿದೊಟ್ಟಿಲೊಳಂತೆ ದುಪ್ಪದುಪ್ಪಳಿನ ಹಾಸಿನಲಿ ಮಂದಾರ ಕುಸುಮಗಳ ಜಾಜಿ ಮಲ್ಲಿಗೆ ಸೇವಂತಿಗೆ ಪಂಕೇರುಹದಾ ಎಸಳುಗಳ ಪಸರಿಸಿಯೆ ಮಲಗಿಸಿದೆ ಪಾಲೆರದು ಮೊಲೆಯೂಡಿ ಪೀತಾಂಬರವನೆ ಹೊದ್ದಿಸೀ | ಹಸುಳೆಯನಮಲ ಕೋಮಲಾಂಗನನಂಗಕೋಟಿಗಳ ನಾ ಚಿಸಿ ಚಿತ್ತಿನ ಪುತ್ಥಳಿಯ ಸಚ್ಚಿದಾನಂದ ಮೂರುತಿಯಾ ಬಿಸಜಾಕ್ಷನಂ ಕೃಷ್ಣನಂ ಬಲದೇವಸಹಜಾತನಂ ಕುಸುಮನಾಭನಂ ಜಲದನೀಲನಂ ದಿವಿಜಪಾಲನಂ 1 ಬಿಡದೊತ್ತಿಯಪ್ಪಿ ಪರಮಾನಂದ ಜಲಧಿಯೊಳಗೋಲಾಡಿ ಸಂತುಷ್ಟಿಯಿಲ್ಲವಲ್ಲಾ ಒಡೆಯನೋ [ಇವ]ಯೆಮ್ಮೊಡನೆ ಪೊಡವಿಗೆ ಜೀವಂಗಳಿಗೆ ಒಡೆಯನೆಂಬಿರಿ ಪರಲೋಕದಾನಂದಕ್ಕೆ ಒಡೆಯನೇ ನಿಮಗೆನ್ನ ಕಂದ ಮುದ್ದು ಭಾಗ್ಯದ ಬೆಳಸು ಮಡಗಿ ತೊಟ್ಟಿಲೊಳಚ್ಯುತನನಂತನಂ ಮುಕುಂದನ 2 ನೋಡಲಿಹೆವೆಂತು ಲಾವಣ್ಯಸಿಂಧುವನೊಲಿದು ಸರವೆತ್ತಿ ನಾಡ ಹೆಂಗಳ ದೃಷ್ಟಿದೋಷದಿಂ ಪಾಲ್ಗುಡಿದು ನಲವಿಂದ ಲಾಡಲೊಲ್ಲನು ವಸುಂಧರೆಯ ತೊಟ್ಟಿಲಶಿಶುಗಳಂದದಿ ಮೊಲೆಯ ನೂಡಿದರೆ ಬಾಯ್ದೆರೆಯಲೊಲ್ಲ ಮಂತ್ರದಿಯಂತ್ರದಿಂದೊಮ್ಮೆ ಯೂಡಿ ಮಲಗಿಸಿದೆ ವಿಶ್ವನಂ ತ್ರೈಜಗಪ್ರಾಜ್ಞಮೂರುತಿಯಂ3 ರವಿಯಹುದು ಬಿಸಿಗದಿರದೆಲ್ಲಿ ಚಂದಿರನಹುದು ಹಿಮವೆಲ್ಲಿ ನವದೆಲ್ಲಿ ಇಂದುಧರನಹುದು ಫಣೆಗಣ್ಣೆಲ್ಲಿಯೆಂದು ಬರಿದೇಕೆ ಮರುಳಾಗುವಿರಿ ಅವಿರಳನದ್ವಯನನಾದಿಮಧ್ಯಾಂತರಹಿತನ ಧರ್ಮಸ್ಥಾಪನಾಚಾರ್ಯ ನ[ವಂ] ಮಹೀಭಾರವ ತವಿಸಲೆಂದವÀತರಿಸೆ ಜನನವಂ ಪಡೆದ ತಂದೆಯಂ ಭುವನಪಾವನ ಸುಪ್ರಗಧಾಮೂರ್ತಿಯಂ ಶ್ರವಣಮಂಗಳಸತ್ಕೀರ್ತಿಯಂ4 ನಿಗಮವೀ ಹರಿಯ ಮಹಿಮಾ ಸಮುದ್ರದ ತಡಿಯ ತೆರೆಗಳಲಿ ಮಿಗೆ ಸಿಲುಕಿ ಮುಳುಗಲರಿಯದೆ ಬೀಳುತೇಳುತಾಳುತಲಿವೇಕೋ ಮೊಗನಾಲ್ಕನಯ್ಯನ ಸಾಸಿರದೈವವಂ ಪಡೆದ ತಂದೆಯಂಅದೆಂತಲೆಂದಾರರಿವರೂ ಸುಗುಣ ಸರ್ವಜ್ಞನಂ ಸರ್ವಭೂತರಾತ್ಮಕನಂ ಜಗದೊಳ್ ಹೊರಗೆ ಪೂರ್ಣನಾಗಿ ಭುವನವ ಜಠರದೊಳಗಿಟ್ಟ ಅಗಣಿತನ ವೈಕುಂಠ ಪತಿಯ ಘನತೆಯನರಿತು ಪೊಗಳುವರೇ ಮುಗುದೆಯರು ನೀವೆತ್ತ ಮಾಯೆಯ ಕುಣಿಸಿ ನಗುವ ಹರಿಯೆತ್ತಾ 5
--------------
ಬೇಲೂರು ವೈಕುಂಠದಾಸರು
ಮುರುಳಿಯ ನೂದಿದನಾಗ ಹರಿ ವಿಧವಿಧರಾಗದೊಳೀಗ ಪ ತುರುಗಳ ಕಾಯುತ ತರಳರ ಒಡಗೂಡಿ ಸುರಮುನಿವಂದಿತ ಸರಸಿಜನಾಭನು ಅ.ಪ ಚಂದದ ಪಾಡಗರುಳಿಯು ಕಾ- ಲಂದುಗೆ ಕಿರುಗೆಜ್ಜೆ ಧ್ವನಿಯು ಹಿಂಡುಗೋವ್ಗಳ ವೃಂದದಿ ನಲಿಯುತ ಮಂದರೋದ್ಧರ ಗೋವಿಂದ ಮುಕುಂದನು1 ಉಟ್ಟ ಪೀತಾಂಬರ ಹೊಳೆಯೆ ನಡು ಕಟ್ಟಿದ ಚಲ್ಲಣ ಹೊಳೆಯೆ ಪರಮೇಷ್ಟಿ ಪಿತನು ತನ್ನ ಪುಟ್ಟ ಕರದಲಿ ಉತ್ತಮನಾದದ 2 ವಿಧವಿಧಹಾರಗಳಿಂದ ರನ್ನ ಪದಕದ ಮುತ್ತುಗಳಿಂದ ಹೃದಯದಿ ಶ್ರೀ ಭೂ ಸಹಿತದಿ ಮೆರೆಯಲು ಪದುಮನಾಭ ಶ್ರೀ ಚಲ್ವ ಮದನಗೋಪಾಲನು 3 ಕೋಟಿಸೂರ್ಯರಂದದಲಿ ಬಹು ಮಾಟದ ಮುಖಕಾಂತಿಯಲಿ ನೋಟದಿ ಜಗವನೆ ಮೋಹವಗೊಳಿಪ ಕಿರೀಟಿಯ ಪೊರೆದ ವೈರಾಟನು ಹರುಷದಿ 4 ಕರ್ಣದಿ ಬಾವುಲಿ ಹೊಳಪು ನವ- ರನ್ನ ಕಿರೀಟದ ಬೆಳಕು ಕನ್ನಡಿಯಂದದಿ ಕದುಪಿನ ಝಳಪು ಮೋ- ಹನ್ನ ಮಾಲೆನಿಟ್ಟ ಸೊಗಸಿನ ವಲಪು 5 ಮುಖದಲಿ ಮುಂಗುರುಳೊಲಿಯೆ ಪ್ರಿಯ ಸಖಿಯರು ಹರುಷದಿ ನಲಿಯೆ ಅಕಳಂಕ ಮಹಿಮನು ಗುಪಿತದಿ ಗೆಳೆಯರ ಸುಖವ ಪಡಿಸುತಲಿ ಸಖ್ಯದಿಂದ ಪ್ರಿಯನು 6 ತುರು ವೃಂದದಲಿ ಗೋ- ವಿಂದನು ಕುಣಿಕುಣಿಯುತಲಿ ಅಂಬರದಲಿ ದೇವದುಂದುಭಿ ಮೊಳಗಲು ಕಂಬು ಕಂಧರ ಹರಿ ಸಂಭ್ರಮ ಸೂಸುತ 7 ವಾಸವ ವಂದಿತ ಹರಿಯೆ ಸರ್ವೇಶ ಕೃಪಾಕರ ದೊರೆಯೆ ವಾಸುದೇವ ಸರ್ವೇಶನೆ ಭಕುತರ ಸಾಸಿರನಾಮದಿ ತೋಷಪಡಿಸುತಲಿ 8 ಪಾಹಿ ಪಾಹಿ ಶ್ರೀಶ ನಮೋ ಪಾಹಿ ಪಾಹಿ ಬ್ರಹ್ಮೇಶ ಪಾಹಿ ಪಾಹಿ ಪರಿಪಾಲಿಸು ನಮ್ಮನುಪಾಹಿ ಕಮಲನಾಭವಿಠ್ಠಲ ದಯಾನಿಧೆ 9
--------------
ನಿಡಗುರುಕಿ ಜೀವೂಬಾಯಿ
ಮೋಸ ಪೋದೆಯಲ್ಲೇ ಭಾಸುರಾಂಗಿ ನೀನು ಪ ಕಾಶಿ ನಿವಾಸಿ ವಿಶ್ವೇಶ್ವರನಹುದೆಂದು ಅ.ಪ. ವಿಶ್ವೇಶ್ವರನವನಲ್ಲ ತಿಳಿದು ನೋಡು ನೀನು ವಿಶ್ವಪತಿಯಾ ವಿಷ್ಣುವಿನಡಿಯಾಳು ಅವನು ಸುಸ್ವಭಾವದ ಸರಳ ಹೃದಯಾನ್ವಿತಳು ನೀನು ಕಪಟ ಕಿರಾತನವನು 1 ತ್ರಿಪುರ ಸುಂದರಿಯೆಂಬ ಬಿರುದು ಪೊತ್ತಿಹೆ ನೀನು ಕಪಟ ವೇಷದೊಳು ಬಂದ ವಿಷಕಂಠನವನು ಚಪಲಾಕ್ಷಿಯೆ ನಿಜಸ್ಥಿತಿ ಅರಿಯಲಿಲ್ಲ ನೀನು ಗುಪಿತದಲಿ ನಿನ ಕಂಡು ಮರುಳು ಮಾಡ್ದನವನು 2 ರಾಜರಾಜೇಶ್ವರಿಯಾಗಿ ರಾಜಿಸುವೆ ನೀನು ಭೋಜನಕಾಗಿ ಭಿಕ್ಷ ಬೇಡುವನಲ್ಲೆ ಅವನು ಮೂಜಗವು ಮೋಹಿಸುವ ಕೋಮಲಾಂಗಿಯು ನೀನು ಈ ಜಗವರಿಯೆ ಸರ್ವದ ಭಸ್ಮಾಂಗನವನು 3 ಕನಕ ಮಣಿಮಯದಂತಃಪುರವಾಸಿಯು ನೀನು ಶುನಕ ಗೋಮಾಯ್ಗಳೆಡೆ ಮಸಣವಾಸಿಯವನು ಘನ ವಿಶಾಲಾಕ್ಷಿಯೆ ಮಂದಹಾಸಮುಖಿ ನೀನು ಮಿನುಗುವ ಬೆಸಗಣ್ಣಿನುರಿಮೊಗದೊಳಿಹನವನು 4 ಚಾರು ಪೀತಾಂಬರ ಧರಿಸಿ ಶೋಭಿಸುವೆ ನೀನು ಕೋರಿ ಗಜಚರ್ಮಧರಿಸುವ ಭಿಕಾರಿಯವನು ಭೂರಿ ಸುಖಭೋಗಂಗಳನನುಭವಿಸುವೆ ನೀನು ನಾರಸಿಂಹ ಮಂತ್ರ ಜಪಿಪ ವಿರಾಗಿಯವನು5 ಕರುಣಾ ಕಟಾಕ್ಷದಿಂ ಜಗವ ಪೊರೆದಪೆ ನೀನು ಕರುಣವಿಲ್ಲದೆ ಮೂಜಗವನುರುಹುವನವನು ಪರಮ ಭಕತರಿಗೆ ಮುಕುತಿಪಥ ತೋರುವೆ ನೀನು ನರನಾದ ಭಕ್ತನೊಳು ಹೋರಾಡಿದವನು 6 ಮಂಗಳಪ್ರದೆಯೆಂದು ಖ್ಯಾತಿಗೊಂಡಿರುವೆ ನೀನು ಜಂಗಮ ಜೋಗಿಗಳಿಗೆ ನೆಲೆಯಾಗಿಹನವನೂ ಗಂಗಾಜನಕನ ಪ್ರಿಯತಮ ಸೋದರಿಯು ನೀನು ರಂಗೇಶವಿಠಲನ ಚರಣ ಸೇವಕನವನು 7
--------------
ರಂಗೇಶವಿಠಲದಾಸರು
ಮೋಸಹೋದೆವೈ ಸಖಿ _ ವಾಸುದೇವನ ತಿಳಿಯದೆ ಪ ಮೋಸಹೋದೆವೈ ಸಖಿ _ ಮೂಸಿತು ಮನವಮ್ಮ ದೋಷದೂರ ಜಗದೀಶನ ಈ ಲೋಕಶಿಶುವೆಂದರಿಯುತ ಅ.ಪ. ಪುಟ್ಟಿದ ಶಿಶು ಮೊಲೆ ಕೊಟ್ಟವಳಳಿದನೆ ಸುಟ್ಟಾನು ದೈತ್ಯರ ಗೋಷ್ಠಿಗಳೆಲ್ಲವ ಬೆಟ್ಟವನೆತ್ತುತ ವೃಷ್ಟಿಯ ತಡೆದನೆ ಮೆಟ್ಟುತ ಕಾಳಿಯ ತುಷ್ಟಿಯ ನೀಡಿದನೆ ಇಷ್ಟಾದರುನಾವು ತಿಳಿಯದೇ ಸೃಷ್ಟಿಗೊಡೆಯ ಬಹು ದುಷ್ಟನು ಎಂದೇವೆ ಪಟ್ಟೆ ಪೀತಾಂಚರ ಕದ್ದವನೆಂದೇವೇ ಇಟ್ಟನು ಕಣ್ಣನು ನಮ್ಮಲೆಂದೇವೇ ಜೇಷ್ಠ ಶ್ರೇಷ್ಠ ಪರಾತ್ಪರ ಹರಿ ಸಂ- ತುಷ್ಟ ಗುಣಾರ್ಣವ ನಿರುಪಮ ಸುಖಿ ಜಗ- ಚೇಷ್ಟೆಯ ನಡೆಸುವ ಶಿಷ್ಯರ ಧೂರೆ ಪರ- ಮೇಷ್ಠಿಯ ಪಿತ ನೆಂದರಿಯದೆ ಕೃಷ್ಣನಾ 1 ಮೆಲ್ಲನೆ ಬಾಯಲಿ ಲೋಕವ ನೆಲ್ಲವ ತಾಯಿಗೆ ತೋರಿದನೆ ಬಲ್ಲಿದನಿವ ತಾ ಬೆಂಕಿ ಜ್ವಾಲೆಯನುಂಗುತ ತಾಪೊರೆದನೆ ಗೊಲ್ಲರಪತಿ ಮುಳುಗಲು ಪಾತಾಳದಿ ತಂದನೆ ತಂದೆಯನು ಬಾಲರ ಗುಂಪಿಗೆ ಲೋಕಗಳೆಲ್ಲವ ನೀರೋಳು ತೋರಿದನೆ ಮೆದ್ದನು ಎಂದೇವೇ ನಿಲ್ಲದೆ ನಿಶಿಯೊಳು ನಮ್ಮನು ಕೆಡಿಸಿದನೆಂದೇವೆ ಸುಳ್ಳನು ಹೇಳುವ ಜಾಣ ಗೋಪಾಲನು ಎಂದೇವೇ ಸಲ್ಲದ ನುಡಿಗಳ ನಾಡುತ ಕಾಲವ ಕಳೆದೇವೇ ಎಲ್ಲರ ಹೃದಯದಿ ಮತ್ತೆ ಬ್ರಹ್ಮಾಂಡದಿ ಒಳಹೊರ- ನೆಲ್ಲಿಯು ತುಂಬಿಹಏಕನು ಬಲ್ಲನು ಎಲ್ಲವ ಎಲ್ಲವ ಮಾಡುತ ಮಾಡಿಸಿ ಪೊರೆವನು ದೋಷಗಳಿಲ್ಲದ ಸ್ವರತ ರಮಾಧವ ಕೃಷ್ಣನು ಎನ್ನದೇ 2 ತಿಂಗಳ ಬೆಳಕಲಿ ರಂಗನು ಬಂದಾನೇ ಅಂಗಜತಾಪವ ಹರಿಸುವೆನೆಂದಾನೆ ಕಂಗಳಿಗ್ಹಬ್ಬವ ನೀಡುತ ಪೊರೆದಾನೇ ಹಿಂಗದೆ ತನುಮನ ಎಲ್ಲವ ಸೆಳೆದಾನೇ ಮಂಗಳಕಾಯನು ನೀಡಲು ನಮಗಾ ಲಿಂಗನ ಸುಖವನು ಬಹುಮುಡಿ ಆದಾನೇ ಅಂಗವ ಮರೆಸುತ ಮಹದಾನಂದ ತ- ರಂಗದಿ ಒಯ್ಯುತ ಚೆಲುವನು ಕೂಡಿದನೇ ಅಂಗನೆ ಬುದ್ಧಿಲಿ ಇವನನು ತಿಳಿಯದೇ ರಾಗ ವಿಹೀನನ ನಮ್ಮೊಡನಾಡಿಯು ಎಂದೇವೇ ಸಾಗುತ ಬಂದಿಹ ನಮ್ಮಯ ರೂಪಕೆ ಎಂದೇವೇ ನಮ್ಮನು ಕೂಡುತ ಭೋಗವ ಪಡೆಯುವನೆಂದೇವೇ ಗಾಗ್ರ್ಯರು ಮುಂಚೆಯೆ ಪೇಳಿದ ನುಡಿಗಳ ಮರೆತೇವೇ ಭೋಗಿಶಯನ ಜಗದೇಕವೀರ ಸಕಲಾಗಮ ವಂದಿತ ಸಾಗಿಸೆ ದಿತಿಜರ ಕೃಷ್ಣನು ಬಂದಿಹ ದೇವಕಿ ಜಠರದಿ ಬಾಗುತ ಜಯಮುನಿ ವಾಯ್ವಂತರ್ಗತ ಶ್ರೀ ಕೃಷ್ಣವಿಠಲನು ಭಾಗವತgಶ್ರಯ ಪೂರ್ಣಾನಂದನ ಲೀಲೆಯ ತಿಳಿಯದೇ 3
--------------
ಕೃಷ್ಣವಿಠಲದಾಸರು
ಯಾಕೆಲೊ ರಂಗ ನಿನಗಿಂತು ನಟನೆಯ ಮಾತು ಪ ಮಾಕಾಂತ ಕರೆಸಿದರೆ ಬಾರದಿಹ ಪೊಗರುಅ ತಸ್ಕರ ಬುದ್ಧಿ ಕಡೆಗೆ ಇರಿಸಿಬಾಲಕನ ವಂದರಿಸಿ ಬಹುಭಾಗ್ಯವಂತನೆನಿಸಿಎಲ್ಲರೊಳು ಸಲಿಗೆ ನಿಲಿಸಿದಳೊ ನಿಮ್ಮರಸಿ 1 ಕೆಸರ ಚೊಗೆಯಂ ಬಿಡಿಸಿ ಗುಂಜ ಸರವಂ ತೆಗೆಸಿಬಿಸರುಹ ಮಣಿಮಾಲೆ ಕಡೆಗೆ ಇಡಿಸಿಪೊಸ ಪೀತಾಂಬರ ಉಡಿಸಿ ನವರತ್ನವಂ ತೊಡಿಸಿವಸುಧೆಯೊಳು ಮಿಗಿಲಾಗಿ ನಿಲಿಸಿದಳೊ ನಮಿಸಿ 2 ಎನ್ನ ಮಾತನು ಕೇಳು ಮುನಿಸು ಕೃತ್ಯವ ಸೀಳುಇನ್ಯಾಕೆ ಯೋಚನೆ ಫಲವ ಪೇಳುಬಿನ್ನಹವನು ಕೇಳು ನೆರೆಗೂಡಿ ಸುಖಬಾಳುಚೆನ್ನ ಬಾಡದಾದಿಕೇಶವ ದಯಾಳು 3
--------------
ಕನಕದಾಸ
ಯಾವ ಪರಿಯಲಿ ಒಲಿಸಿ ಪಡೆವೆ ಹರಿಯೊಲವನು ಭೂವಿವರವನು ಪೊತ್ತ ಮಹಶೇಷಗರಿದು ಪ ಸುರನದಿ ಜಲದೊಳಭಿಷೇಕವ ಮಾಡುವರೆ ಚರಣದಲಿ ಜನಿಸಿಹಳು ದೇವಗಂಗೆ ಮೆರೆವ ದಿವ್ಯಾಸನವನೀಯೆ ವಿಶ್ವಾಧಾರ ಧರಿಸಿ ಕೊಡಲಿಕೆ ವಸ್ತ್ರ ಪೀತಾಂಬರ 1 ಹೇಮರಚಿತಾಭರಣದಿಂದ ಮೆಚ್ಚಿಸಲವಗೆ ಕಾಮಿನಿಯೆ ಶ್ರೀಮಹಾಲಕ್ಷ್ಮಿದೇವಿ ಪ್ರೇಮದಿಂ ಶಾಲ್ಯಾನ್ನದಿಂದ ತೃಪ್ತಿ ನಿತ್ಯ ತೃಪ್ತ 2 ಕ್ಷೀರದಿಂ ಮೆಚ್ಚಿಸಲಿಕವಗೆ ಪಾಲ್ಗಡಲೆಮನೆ ಮಾರುತಾತ್ಮಜ ಕೋಣೆ ಲಕ್ಷ್ಮೀಶ ನಂಘ್ರಿಗೆ ನಮಸ್ಕಾರದಿಂ ಮೆಚ್ಚಿಸಲಿಕವ ಜಗದ್ವಂದ್ಯಾ 3
--------------
ಕವಿ ಪರಮದೇವದಾಸರು
ಯೇನಾದರೇನು ಜ್ಞಾನವಿಲ್ಲದೆ ಮೋಕ್ಷವಿಲ್ಲಾ ಪ ವೇದವನೋದಿದರೇನು | ಶಾಸ್ತ್ರವ ನೋಡಿದರೇನು | ಕಾದಿ ಕಾದಾಡಿದರೇನು || 1 ಕಾಶಿಗೆ ತಾ ಹೋದರೇನು | ಕಾನನವ ಸೇರಿದರೇನು | ಕಾಶಿ ಪೀತಾಂಬರ ಉಟ್ಟರೇನು 2 ಜಪ ತಪವ ಮಾಡಲೇನು | ಜಾಣತನದೊಳ್ ಮೆರೆದರೇನು | ವಿಜಯವಿಠ್ಠಲನ್ನ ಸಾರಿದರೇನು 3
--------------
ವಿಜಯದಾಸ
ರಂಗನೆ ಬಾ ಮನಮಂದಿರಕೆ ಶೃಂಗಾರದ ಶ್ರೀ ಹರಿ ಶೌರೇ ಪ ನಗುತ ನಗುತ ಬಾ ಖಗವಾಹನ ಹರಿ ಬಗೆ ಬಗೆ ಕ್ರೀಡೆಗಳ ತೋರುತಲಿ ಝಗ ಝಗಿಸುವ ಪೀತಾಂಬರಧಾರಿಯೆ ಅಗಣಿತ ಗುಣನಿಧಿ ಬಾ ಹರಿಯೆ 1 ಪಕ್ಷಿವಾಹನ ಪುರುಷೋತ್ತಮ ಶ್ರೀಹರಿ ರಕ್ಷಿಸಿ ಕಾಪಾಡುವ ಜಗವ ಕುಕ್ಷಿಯೊಳಡಗಿಸಿ ಸಲಹುವ ಸುಜನರ ರಕ್ಷಿಸಿ ಪೊರೆಯಲು ಬಾ ಹರಿಯೆ 2 ಪೊಂಗೊಳಲೂದುತ ಮಂಗಳ ಚರಿತ ಹೃ- ದಂಗಳದೊಳು ನಲಿದಾಡುತಲಿ ಅಂಗಜಜನಕ ಗೋಪಾಂಗನೆ ಲೋಲ ಶ್ರೀ- ಮಂಗಳ ಮೂರುತಿ ಬಾ ಹರಿಯೆ 3 ಗಂಗಾಜನಕಗೆ ಭೃಂಗಕುಂತಳೆಯರು ರಂಗು ಮಾಣಿಕದಾರತಿ ಬೆಳಗೆ ಪೈಂಗಳನಾಮ ಸಂವತ್ಸರದಲಿ ಭವ ಭಂಗವ ಮಾಡಲು ಬಾ ಹರಿಯೆ 4 ಭ್ರಮರ ಕುಂತಳೆಯರು ಘಮಘಮಿಸುವ ಸುಮಮಾಲೆಗಳ ಕಮಲನಾಭ ವಿಠ್ಠಲಗರ್ಪಿಸುವರು ಶ್ರಮ ಪರಿಹರಿಸಲು ಬಾ ಹರಿಯೆ 5
--------------
ನಿಡಗುರುಕಿ ಜೀವೂಬಾಯಿ
ರಂಗನ್ಯಾಕೆ ಬಾರ ತಂಗಿ ಮಂಗಳ ಮಹಿಮನ ದಿವ್ಯಾಂಗವ ಕಾಣದೆ ಎನ್ನಕಂಗಳು ಕಂಗೆಡುತಿವೆಪ. ರಂಗುಮಾಣಿಕದುಂಗುರದಂಗುಲಿಯ ಸನ್ನೆಯಿಂದಪೊಂಗೊಳಲೂದುವನ ತೋರೆ ರಮಣಿ ಅ.ಪ. ತಿಂಗಳು ಮೂಡಿತು ಪಿಕ ಸಂಗೀತವ ತೊಡಗಿತುಭೃಂಗ ತನ್ನಂಗನೆಯರ ಸಂಗಡ ನಲಿದು ಬಂದಶೃಂಗಾರವನದ ಮೃದು ತಂಗಾಳಿ ಬೀಸಿತು ನೋಡಾ-ನಂಗ ನೆಚ್ಚ ಬಾಣಗಳೆಂತೊ ಅಂತರಂಗವ ತಾಕಿದರೆನ್ನ ಇಂಗಿತವರಿತು ದೇವೋ-ತ್ತುಂಗ ಕಾಯದಿರೆ ಉಳಿವಂಗನ ನಾಕಾಣೆ ನಮ್ಮಪೆಂಗಳಿಗೆ ಬಂದ ಬಲುಭಂಗ ತನ್ನದಲ್ಲವೆ ಸಾ-ರಂಗಾಕ್ಷಿ ಬೇಗವನ ತೋರೆ ರಮಣಿ 1 ಕೌಸ್ತುಭ ರತ್ನಕರ್ಣಕುಂಡಲಸರಸಿಜಮುಖದಿ ಕಸ್ತೂರಿ ತಿಲಕವೆಸೆಯೆಪರಿಮಳಿಸುವ ಪೂಮಾಲೆಮೆರೆಯೆ ಪೊಳೆವ ಪೀತಾಂಬರದ ಸುತ್ತಲೊಲೆವಕಿರುಗೆಜ್ಜೆ ಮಣಿಮಯಕಾಂತಿ ಮಿಂಚುತಿರಲುಚರಣನೂಪುರ ಘಲುಘಲುಕೆನೆ ಕುಣಿವÀ ಶ್ರೀಹರಿಯನು ಕರೆದುತಾರೆ ರಮಣಿ 2 ಮಂದಜಾಸನನ ತಂದೆಯೆಂದೆನಿಪ ಗೋವಿಂದನಕಂದರ್ಪ ವೃಂದಾದಿಗಳ ಕಂದಿಸುವ ಕುಂದಿಲ್ಲದಸೌಂದರ್ಯಸಂದೋಹದೊಳಗೊಂದೊಂದನಾರು ಬಲ್ಲರುಎಂದೆಂದಿವನನು ಪೊಂದಿಪ್ಪಇಂದಿರೆ ಇವನ ಗುಣಸಾಂದ್ರ ಕಿರುಬೆರಳಿನಂದವನೋಡುತ್ತ ಆನಂದಸಿಂಧುವಿನೊಳ್ಮುಣುಗಿದಳಿಂದು ಹಯವದನ ಮುಕುಂದನ ತಂದೆನ್ನ ಮುಂದೆಇಂದುಮುಖಿ ಕರೆದುತಾರೆ ರಮಣಿ3
--------------
ವಾದಿರಾಜ