ಒಟ್ಟು 376 ಕಡೆಗಳಲ್ಲಿ , 65 ದಾಸರು , 300 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭದ್ರ ಮೂಜಗದಂತರ್ಯಾಮಿ ಪ ಸಾರ ಸಾಕ್ಷಿಯರೆಲ್ಲಾ ಮುದ್ದು ಸೀತೆ ಸಹಿತ ಹುವ್ವಿನ ಮಂಚದಿ ಮಲಗಿ ಅ.ಪ ಪೋಗಿ ನಿಮ್ಮಯ ಸದನಗಳಿಗೇ | ಉದಯ ವಾಗೋದು ಬನ್ನಿ ಸನ್ನಿಧಿಗೇ ಯೋಗೀ ಜಾಣರು ಪರಮ ಭಾಗವತೋತ್ತಮರು ಸಾಗಿ ಪೋದರು ನಿಜಾಶ್ರಮಗಳಿಗೆಲ್ಲರು 1 ತುಂಬುರಾ ನಾರದಾದಿಗಳು | ವೀಣೆ ತಂಬೂರಿ ದಿವ್ಯನಾದದೊಳು ಗಂಭೀರಾ ಸ್ವರದಿಂದಾಗಾಯನಗಳ ಮಾಡೆ ಸಂಭ್ರಮದಲಿ ಇತರ ಹಂಬಲ ಮರೆತೀಗ 2 ಹದಿನಾಲ್ಕು ಲೋಕಾವನಾಳಿ | ತಾದ- ಣಿದೆನೆಂದು ಜನರಿಗೆ ಪೇಳಿ ಸದಮಲಾತ್ಮಕ ಶ್ರೀ ಗುರುರಾಮ ವಿಠಲ ನಂ-ಬಿದವರಿಗಭಯವ ಕೊಡುವ ಇಚ್ಛೆಯಿಂದ 3
--------------
ಗುರುರಾಮವಿಠಲ
ಭವ ಪಾಶದಲಿ ನಾನು ಹರಿಯೆ ಕಿಲಿಕಿಲಿ ನಗುವರೆ ಸಲಹುವದು ದೊರೆಯೆ ಪ ಕೆಲರ ಮಾತಿಗೆ ಪೋಗಿ ಬಲವಾಗಿ ಅವರ ಕೆಲಸ ಮಾಡುವೆ ನಿಜ ಕೆಲಸವ ಮರೆದೆ ನಾ 1 ಧರಣಿಯ ಪತಿಯೇವೆ ಶರಣೆಂದು ತಿಳಿದು ಪಾದ ಸಿರಿಯ ರಮಣನೆ2 ಉದರಗೋಸುವಾಗಿ ಮರೆದವರ ವಶದಿ ಹದನವ ಕಳಕೊಂಡು ಮದಡ ನಾನಾದೆನೊ 3 ಉಣವೆನೊ ಪರರನ್ನ ದಣಿವೆನೊ ಅದಕ್ಕೆ ಕುಣಿವೆನೊ ಅವರಂತೆ ಗುಣವೇನು ಎನಗೆ 4 ಈಸು ಪರಿಯಲೆನ್ನ ಶ್ರೀಶ ದಾಸರ ವಶದಿ ವಾಸವಿತ್ತು ಬದುಕಿಸೊ ವಾಸುದೇವವಿಠಲ 5
--------------
ವ್ಯಾಸತತ್ವಜ್ಞದಾಸರು
ಭಳಿರೆ ವಾಗೀಶ ತೀರ್ಥಾಖ್ಯ ಮುನಿವರ್ಯ ಇಳೆಯೊಳು ನಿನಗೆಣೆÂ ಕಾಣೆ ನಾ ಯತಿವರ್ಯ ಪ ಜಗದೊಳು ದುರ್ವಾದಿ ಮತವ ಖಂಡಿಸಿದ ನಿಗಮಾರ್ಥವನು ಜಗದಿ ಸಾರಿದಾ ಕುಜನೇಭ ಮೃಗರಾಜ ವಾದಿರಾಜರಿಗೆ ಗುರುವೆನಿಸಿದೆ 1 ಭಾವೀ ಸಮೀರ ಶ್ರೀವಾದಿರಾಜರ ಜನ್ಮೋ- ತ್ಸವ ಕಾಲವರಿತಾಗ ಸುಮಪುರಕೆ ನೀನು ತವಕದಿಂದಲಿ ಪೋಗಿ ಬಾಲಕನ ರಕ್ಷಿಸಿ ಅವನನೆ ಯತಿರಾಜ ಪಟ್ಟದೊಳಿರಿಸಿದಿರಿ 2 ಗುರು ಮಧ್ವರಂತೆ ನೀ ಸರ್ವಶಾಸ್ತ್ರವ ಮಾಡಿ ಧರಣಿಯೊಳು ರಾಜೇಶ ಹಯಮುಖನ ಚರಣ ಸ್ಮರಿಸಿ ನೂರಿಪ್ಪತ್ತು ವತ್ಸರದ ಕಾಲದಲಿ ಇರುವಿರೆನುತಲಿ ಅವರ ಹರಸಿದಿರಿ ದೊರೆಯೆ 3
--------------
ವಿಶ್ವೇಂದ್ರತೀರ್ಥ
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಭಾರ ನಮ್ಮಪ್ಪನಿಗೀ ಸಂಸಾರ ಉಪ್ಪಿನ ಹೇರಂತಿದು ಬಹುಕ್ಷಾರ ಕೈ- ತಪ್ಪಿದರೆ ಬಾರದು ಸಣ್ಣ ಚೂರಾ ಪ. ಅಗಳಿನಾಶೆಗೆ ಪೋಗಿ ನಿಗಳ ಕಂಠಗೆ ಸಿಲುಕಿ ನೆಗೆದು ಬೀಳ್ವ ಮಚ್ಛ್ಯಗಳಂದದಿ ಬಹು ಹಗರಣಗೊಳ್ಳುತ ಮರುಳಾಗಿಹೆನು 1 ಬಾಲಬುದ್ಧಿಯೊಳೆರಡು ಶಾಲೆ ಕೊಂಡರೆ ಪರರ ಮೇಲೊಡ್ಡುತ ಬಹು ಸಾಲಗಾರನೋಲೆ ಕೋಳುಗೊಂಬನು ಪಂಚಗೋಲ ಸುಖತಿಯಲಿ 2 ಪುಣ್ಯಕರ್ಮವ ಮಾಡಿ ತನ್ನದೆಂದರೆ ನಿಲದು ದಾನವರೊಯ್ವರು ಘನಪಾತಕಗಳು ಬೆನ್ನ ಬಿಡವು ಮಕ್ಷಿಕಾನ್ನದಂತಿಹವು 3 ಕರ್ಮಶಾಸ್ತ್ರವ ಗಹನ ಮರ್ಮವ ತಾಳದ ನರನಾ ನಿರ್ಮಲ ಮಾಡಲು ಚವರ್i ತೊಳಿಯೆ ದು- ಷ್ಕರ್ಮ ಕಲುಷವನು ನಿರ್ಮೂಲಗೊಳಿಸದೆ 4 ಹೇಸಿಕೆ ಜೊಲ್ಲಿನ ಮುಸುಡಾ ಹಾಸಿಕೆಯಿಂದೆತ್ತುತಲಿ ದೂಷಿಸುತನ್ಯರ ಮೀಸೆಯ ತಿರುಹುತ ಲೇಸಗಾಣದೆ ಬಹು ಮೋಸಗೊಂಡಿಹೆನು 5 ಹಸ್ತಪಾದಾದಿಗಳ ಮೃತ್ತಿಕೆಯಿಂದಲಿ ತೊಳೆವ ತತ್ವ ನೋಡಲು ಕಣ್ಣು ಕತ್ತಲೆ ಬರುವುದು ಕತ್ತೆಗೆ ಷಡ್ರಸವೆತ್ತಲು ದೊರೆಯದು 6 ಸ್ನಾನದ ರೀತಿಯನಿನ್ನೇನೆಂದು ವರ್ಣಿಪೆನು ಮಾನವರಿದಿರು ನಿಧಾನದಿ ನಡೆವುದು ಮಾನಸ ವೈಶಿಕಧಾನಿಯಾಗಿಹುದು 7 ಮಡಿಯೆಂದು ಕೂತಿರಲು ಮಡದಿ ಹತ್ತಿರ ಬರಲು ಒಡವೆಯ ನೋಡುತ ಅಡಿಗೆಯ ಪಣ್ಕೆಯ ನುಡಿಯಲ್ಲದೆ ಜಪಗೊಡವೆಯೇನಿರದು 8 ಪಾಕ ಪೂರಣವಾಗೆ ಈಗ ಸಾಕೆಂಬೆ ಹರಿಪೂಜೆ ಶಾಕಾದಿಗಳು ವಿವೇಕವಾಗದಿರೆ ಭೀಕರಿಸುತ ಅವಿವೇಕನಾಗುವೆನು 9 ತದನಂತರದಿ ಪರರ ಕದನವನೆಬ್ಬಿಸುತಲಿ ಒದಗುತ ನಾನಾ ವಿಧದಲಿ ಎನ್ನಯ ವದನ ತುಂಬುವ ಮಾರ್ಗದಿ ದಿನ ಕಳೆವೆನು 10 ಇಂತು ದಿವಾಯುಷವನ್ನು ಸಂತರಿಸುತ ನಿಶೆಯೊಳ್ ಕಂತು ಕಲಾಪದ ಭ್ರಾಂತಿಗೊಂಡು ಮರ ದಂತೆ ಬೀಳಲು ನಿಮಿಷಾಂತರ ದೊರೆಯದು 11 ಪಾರಾವಾರದಕಿಂತ ಘೋರವಾಗಿರುವೀ ಸಂ- ಸಾರದಿ ಸಿಲುಕಿದರ್ಯಾರು ಕಾವರಿಲ್ಲ ಶ್ರೀರಮಾಪತಿ ಚರಣಾರವಿಂದವೆ ಗತಿ 12 ಈ ವಿಧ ದುಷ್ಕøತದಿಂದ ಕಾವನು ನೀ ಗೋವಿಂದ ಪಾವನಾತ್ಮಕ ಶೇಷಾವತಾರ ಗಿರಿ ಭವ ನಾವ ಮುಕುಂದ 13
--------------
ತುಪಾಕಿ ವೆಂಕಟರಮಣಾಚಾರ್ಯ
ಭಾರತೀಶ ಹರಿದಾಸನಾದನಿಲ್ಲೀ ವೀಣೆಯ ಧರಿಸುತಲೀ ಪ. ಭಾರಿಭಾರಿಗವತಾರ ಮಾಡಿ ಬಳಲೀ ಆನಂದದಲ್ಲೀ ಅ.ಪ. ತ್ರೇತೆಯಲ್ಲಿ ಶ್ರೀ ರಾಮದೂತನಾಗಿ ತನುಸುಖವ ನೀಗಿ ಪ್ರೀತಿ ಭಕ್ತಿಯಲಿ ರಾಮ ಕಾರ್ಯಕಾಗಿ ತನುವಪ್ಪಿಸಿ ಬಾಗಿ ಖ್ಯಾತಿ ಪಡೆದು ಶರಧಿಯ ಲಂಘಿಸಿ ಪೋಗಿ ಸೀತೆಯ ಕಂಡೆರಗಿ ವೀಹೋತ್ರಗೆ ಪುರವಪ್ಪಿಸಿ ತಿರುಗೀ ರಾಮರ ಕಂಡೆರಗಿ 1 ಕುಂತಿಯ ಜಠರದಿ ಜನಿಸಿ ಭೀಮನೆನಿಸೀ ಬಕಮುಖರನೆ ಜೈಸಿ ಸಂತೋಷದಿ ಸೌಗಂಧ ಸತಿಗೆ ಸಲಿಸೀ ಕೌರವರ ಸಂಹರಿಸೀ ಅಂತರಂಗದಲಿ ಕೃಷ್ಣನಂಘ್ರಿ ಭಜಿಸಿ ಪಾಂಡವರನೆ ಮೆರಸೀ ಕಂತುಪಿತನ ಕಡುಕೃಪೆಯ ಪಡೆದು ಸುಖಿಸೀ ಮೇಲ್ತೋರದೆ ಸ್ಮರಿಸೀ 2 ಮೂರನೆ ರೂಪದಿ ಮುನಿಯಾಗವತರಿಸೀ ದುರ್ಮತಗಳ ಜೈಸೀ ಸಾರತತ್ವಮತ ಸಜ್ಜನರಿಗೆ ತಿಳಿಸೀ ಸರ್ವೋತ್ತಮ ಹರಿ ಎನಿಸೀ ಆರು ಅರಿಯದಂತೆ ದಾಸತ್ವವಚರಿಸೀ ದುರ್ಮತಗಳ ಜೈಸೀ ತೋರಿ ತೋರದಂತೆ ಸದ್ಗ್ರಂಥದಿ ತಿಳಿಸೀ ಯತಿ ಕುಲಜರೋಳ್ ನಿಲಿಸೀ 3 ಮೀಸಲ ದಾಸ್ಯವ ಮೂರವತಾರದಲ್ಲಿ ಚರಿಸಲು ಕಲಿಯಲ್ಲೀ ವ್ಯಾಸ ಮುನಿಯು ಬಹಿರಂಗಪಡಿಸೆ ಚಲ್ಲೀ ನಾರದ ಮುನಿಯಲ್ಲೀ ಪುರಂದರ ಗುರುವೆನಿಸುತಲೀ ಮೆರೆಯಲು ಜಗದಲ್ಲೀ ಮೀಸಲು ಉಳಿಯದೆ ಪೋಯಿತೆಂದು ಇಲ್ಲೀ ದಾಸ ತಾನಾಗುತಲೀ 4 ದಾಸತನದ ಆನಂದವನನುಭವಿಸೇ ದೇವತೆಗಳು ಬಯಸೇ ಭೂಸುರ ಜನ್ಮದಿ ಭೂಮಿಯಲವತರಿಸೇ ಹರಿದಾಸರಾಗಿ ಸುಖಿಸೇ ವಾಸುದೇವಗೆ ತಾ ನಿಜದಾಸನು ಎನಿಸೇ ಮಾರುತಿ ಇದ ಬಯಸೇ ಶ್ರೀಶ ಗೋಪಾಲಕೃಷ್ಣವಿಠಲದಾಸಾ ಬೆಳಗಾವಿ ವಾಸಾ 5
--------------
ಅಂಬಾಬಾಯಿ
ಭ್ರಮೆಯಿಂದ ಎರಡಾಯ್ತು ಇದ್ದುದೊಂದೆ ವಸ್ತುಭ್ರಮೆಯಳಿದ ಬಳಿಕ ಮುನ್ನಿಹುದೆ ನಿಜವಸ್ತು ಪ ಸ್ಥಾಣುವೆಂಬುದು ಪೋಗಿ ಮನುಜ ರೂಪಾದಂತೆಕಾಣಿಸಿತು ರಜ್ಜುವದು ಸರ್ಪದಂತೆ 1 ಕೆಂಪು ಎಂಬುದು ಪೋಗಿ ಕನಕರೂಪಾದಂತೆಇಂಪು ಕಾಣಿಸಿ ಶುಪ್ತಿ ರಜತದಂತೆ2 ಒಬ್ಬನಿರುತಿಹ ಆತ್ಮ ಜೀವತ್ವವದುಭ್ರಾಂತಿ ಒಬ್ಬನೆ ಚಿದಾನಂದ ತಾನೆ ಸತ್ಯ3
--------------
ಚಿದಾನಂದ ಅವಧೂತರು
ಭ್ರಷ್ಟ ಸಂಕಲ್ಪನ್ನ | ಮಾಡದಿರೆಲೋ |ಇಷ್ಟ ದೈವವೆ ಎನ್ನ | ಕಷ್ಟದೊಳು ಹಾಕಿ ಪ ಖಗ ವರಧ್ವಜ ದಾಸಮಿಗಿಲಾಗಿ ಪೇಳ್ವೆನೆಂದ | ವಘಡಿಸೀ ನುಡಿಸೀಹಗರಣದಿ ಹರಿದಿನದಿ | ಸುಗುಣ ತಾ ಬರದಿರಲುಖಗಗಮನ ನಿನ್ವಚನ | ಲಘುವಾಗಲಿಲ್ಲೇ 1 ಅಪ್ಪ ವಿಜಯಾರ್ಯ ಪದ | ವಪ್ಪಿ ಪೂಜಿಸಿ ಪೋಗಿಚಿಪ್ಪಗಿರಿಯಲಿ ನೋಡೆ | ಒಪ್ಪಿದವ ಬರದೇಅಪ್ಪಾರ ಮನನೊಂದು | ಅರ್ಪಿಸಿಹೆ ನಿನ್ನಡಿಗೆಕೃಪ್ಪೆಯಿಂ ಬರಮಾಡೊ | ಗೊಪ್ಪ ಶಿಷ್ಯನ್ನಾ 2 ಮಾನಾಪಮಾನಗಳು | ಯೇನೊಂದು ನಿನ್ನೊಳಗೊಮಾನನಿಧಿಯೆ ಕೇಳೊ | ಮೌನಿ ವರದಾದೀನ ಜನಪಾಲ ಗುರು | ಗೋವಿಂದ ವಿಠ್ಠಲನೆಮಾನ್ಯ ಮಾನದನೆಂಬ | ಸೂನೃತವ ಸಲಿಸೋ 3
--------------
ಗುರುಗೋವಿಂದವಿಠಲರು
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮಂಗಳಂ ನರಹರಿಗೆ ಜಯ ಜಯ ಮಂಗಳ ಮುರಹರಗೆ ಪ ಮಂಗಳ ಮದನಗೋಪಾಲ ಶ್ರೀಕೃಷ್ಣಗೆ ಮಂಗಳ ಮಾಧವಗೆ ಅ.ಪ ವಸುದೇವ ಸುತನಾಗಿ ಗೋಕುಲದೊಳು ಮೊಸರು ಬೆಣ್ಣೆಯ ಕದ್ದು ಶಶಿಮುಖಿಯರ ಕೂಡಿ ನಿಶಿರಾತ್ರಿಯಲಿ ರಾಸ ಕ್ರೀಡೆಯಾಡಿದ ಹರಿಗೆ 1 ನಳಿನಮುಖಿಯರೆಲ್ಲ ನೀರೊಳಗಾಡಿ ಬಳಲಿ ಮೇಲಕೆ ಬರಲು ಲಲನೆಯರ ಕಂಡು ಪರಿಹಾಸ್ಯ ಮಾಡಿದ ಚೆಲುವ ಗೋಪಾಲಕೃಷ್ಣಗೆ2 ಬೆಟ್ಟವ ಬೆರಳಿನಲಿ ಎತ್ತಿದ ಭಕ್ತವತ್ಸಲ ಹರಿಗೆ ಮಿತ್ರೆಯರಿಗೆ ಮೊಸರು ಬುತ್ತಿಯ ಭುಕ್ತಿಯನೆವದಲಿ ಮುಕ್ತಿ ತೋರಿದ ದೊರೆಗೆ 3 ಪುಟ್ಟಬಾಲಕನಾಗಿ ಗೋವ್ಗಳನೆಲ್ಲ ಅಟ್ಟಿಯ ಮನೆಗೆ ಪೋಗಿ ದುಷ್ಟ ಕಾಳಿಂಗನ ಮೆಟ್ಟಿ ತುಳಿದ ಹರಿಗೆ ರತ್ನದಾರತಿ ಎತ್ತಿರೆ 4 ಕೊಂದು ಕಂಸನÀ ಬೇಗ ಮಧುರೆಲಿ ನಿಂತ ಮಹಾನುಭಾವಗೆ ತಂದೆ ಶ್ರೀ ಕಮಲನಾಭವಿಠ್ಠಲಗೆ ಕುಂದಣದಾರತಿಯ 5
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ಶ್ರೀ ಪಾರ್ಥಸಾರಥಿಗೆ ಮಂಗಳಂ ಸಂಕರ್ಷಣನಿಗೆ ಅನಿರುದ್ಧ ಸಾತ್ಯಕೀಸಹ ಬಂದು ನಿಂದವಗೆ ಪ ವಸುಧೆ ಭಾರವನಿಳುಹಲೆಂದು ದೇವಕೀ ವಸುದೇವರುದರದಿ ಶಿಶುವಾಗಿ ಅಸುರ ಪೂತನಿಯಸುವ ನೀಗಿದ ಕುಸುಮನಾಭಗೆ 1 ವಾತಾಸುರನಕೊಂದು ಬಾಯೊಳುಮಾತೆಗೆ ಬ್ರಹ್ಮಾಂಡತೋರ್ದಗೆ 2 ಒತ್ತಿ ಕಾಳಿಯ ಶಿರವನಾಗ ಸುತ್ತಿದಾ ಕಿಚ್ಚನ್ನು ನುಂಗಿ ಎತ್ತಿ ಗೋವರ್ಧನಗಿರಿಯ ಹತ್ತಿ ಗೋಮಂತವನು ಹಾರ್ದಗೆ 3 ಕೇಶಿಯನು ಸಂಹರಿಸಿ ದುಷ್ಟದ್ವೇಷಿಯಾದ ವೃಷಭನನು ಕೊಂದು ದಾಸಿ ತಂದ ಗಂಧವನು ಪೂಸಿ ಮೆರೆದ ಕ್ಲೇಶನಾಶಗೆ 4 ಬಿಲ್ಲು ಮುರಿದು ಬೀದಯಲ್ಲಿ ಎಲ್ಲರಿಗೆ ತಕ್ಕ ರೂಪ ತೋರಿ ಮಲ್ಲರನು ಮರ್ಧಿಸುತ ಮಾವನ ಸೊಲ್ಲನಡಗಿಸಿದ ಪುಲ್ಲನಾಭಗೆ 5 ರುಕ್ಮಿಣೀ ಸತ್ಯಭಾಮೆ ಕಾಳಂದಿ ಜಾಂಬವತಿಯು ಮೊದಲಾದ ಲಕ್ಷ್ಮಣೆ ಸತ್ಯಭದ್ರೆ ಮಿತ್ರವಿಂದೆಯು ತಂದ ಲಕ್ಷ್ಮೀರಮಣಗೆ 6 ಕೊಂದು ನರಕನ ಹದಿನಾರುಸಾವಿರ ಸ್ತ್ರೀಯರನು ಬೇಗ ತಂದು ದ್ವಾರಕಿಯಲ್ಲಿ ಸತಿಸಹ ಆನಂದದಿಂದಲಿ ನಿಂದಕೃಷ್ಣಗೆ 7 ಹೇಮದಾಭರಣವಿಟ್ಟು ರುಕ್ಮಿಣಿ ನೇಮದಿಂದಲೆ ಬೀಸುತಿರಲು ಪ್ರೇಮಕಲಹದಿ ಬೀಳಲಾಕ್ಷಣ ವಿರಾಮವಿಲ್ಲದೆ ಎತ್ತಿದವಗೆ8 ಎತ್ತಿ ಅಂಕದೊಳಿಟ್ಟು ಪ್ರೇಮದಿ ಅರ್ಥಿಯಿಂದಲೆ ಕುರುಳನೇವರಿಸಿ ತತ್ವವಾಕ್ಯವನ್ನು ಹೇಳಿದ ಮುಕ್ತಿದಾಯಕ ಮುದ್ದು ಕೃಷ್ಣಗೆ 9 ಜಾಣತನದಲಿ ಕಾಶಿಯನುಸುಟ್ಟು ಪೌಂಡ್ರಕನಪ್ರಣಾಪಹರಿಸಿದವಗೆ 10 ಮಿಥುಳವಾಸಿಗೆ ಮುಕ್ತಿಯನಿತ್ತು ಸುತನ ತಂದು ವಿಪ್ರನಿಗಿತ್ತು ಹತವಮಾಡಿ ವೃಕಾಸುರನ ಶ್ರುತಿಗಗೋಚರನಾದ ಸ್ವಾಮಿಗೆ 11 ಅರಗಿನಮನೆಯಿಂದ ರಕ್ಷಿಸಿ ದ್ರೌಪದಿ ಸುಭದ್ರೆಯ ಸಾಧಿಸಿತ್ತಗೆ 12 ನೆತ್ತವಾಡಿ ಕೌರವರೊಡನೆ ಅರ್ಥವನು ಸೋಲಲು ಪಾಂಡವರು ಭಕ್ತವತ್ಸಲನೆನ್ನೆ ದ್ರೌಪದಿಗೆ ವಸ್ತ್ರವಿತ್ತು ಕಾಯ್ದ ಕೃಷ್ಣಗೆ 13 ವನವಾಸದಲ್ಲಿ ಪಾಂಡವರು ಉಲ್ಲಾಸದಿಂದಲೆ ಇರುತಿರಲು ಪಾಶುಪತ ವನು ಪಾರ್ಥನಿಗೆ ಈಶನಲಿ ಕೊಡಿಸಿದ ಸರ್ವೇಶಗೆ 14 ವೇಷವನ್ನು ಮರೆಸಿಕೊಂಡು ವಿರಾಟನಗರದಿ ವಾಸ ಮಾಡಲು ಮೋಸದಿಂದಲೇ ಕೀಚಕಾದಿಗಳ ನಾಶಮಾಡಿಸಿದ ವಾಸುದೇವಗೆ 15 ಆನಂದರೂಪವ ತೋರಿದವಗೆ 16 ತೋರಿದವಗೆ 17 ಜಾಹ್ನವೀಸುತನ ಯುದ್ಧವನ್ನು ತಾಳಲಾರದೆ ಜನರ್ಧನಗೆ ಪೇಳೆ ಜಾಣತನದಲಿ ಶಿಖಂಡಿಯನುತೋರಿ ಬಾಣಮಂಚದಿ ಮಲಗಿಸಿದವಗೆ 18 ಸುಭದ್ರೆ ಪುತ್ರನ ಯುದ್ಧದಲ್ಲಿ ಪದ್ಮವ್ಯೂಹವ ಪೋಗಿಸಲಾಗ ಮುದ್ದುಬಾಲಕನ ಕೊಲಿಸಿದವಗೆ 19 ಸಿಂಧುರಾಜನ ಕೊಲ್ಲುವೆನೆಂದು ನರನು ಪ್ರತಿಜ್ಞೆಮಾಡಲು ತಂದಚಕ್ರವ ರವಿಗೆತೋರಿಸಿ ಸೈಂಧವನ ಕೊಲ್ಲಿಸಿದಸ್ವಾಮಿಗೆ 20 ದೃಪತಿಯತೋರಿದವಗೆ 21 ಕರ್ಣನು ಘಟ್ಟಿಯಾಗಿ ರಥವನೊತ್ತಿ ದಿಟ್ಟತನದಲಿ ಶಿರವ ಕಾಯ್ದಗೆ 22 ಮದ್ರರಾಜನ ಕೊಲ್ಲುವೆನೆಂದು ಸಮುದ್ರಶಯನನ ಸಹಾಯದಿಂದ ಭದ್ರಗಜವನು ಏರೆ ಧರ್ಮಜ ಕಾಲರುದ್ರನಂದದಿ ಕೊಲಿಸಿದವಗೆ 23 ಭೀಮ ದುರ್ಯೋಧನರು ಯುದ್ಧದಿ ಹೇಮದ ಗದೆಯನ್ನು ಪಿಡಿದು ಪ್ರೇಮದಿಂದಲೆ ಕಾದುತಿರಲು ನಿರ್ನಾಮವನು ಮಾಡಿಸಿದ ಸ್ವಾಮಿಗೆ 24 ಗೃಧ್ರ ಉಲೂಕದ ವೃತ್ತಿಯ ನೋಡಿ ಭದ್ರೆದ್ರೌಪದಿ ಪುತ್ರನನ್ನು ನಿದ್ರೆಕಾಲದಿ ಕೊರಳಕೊಯ್ಯಲು ಶಿರದಲಿದ್ದ ಮಣಿಯ ತೆಗೆಸಿದವಗೆ 25 ದ್ರೋಣಪುತ್ರನ ಬಾಣದಿಂದಲೆ ತ್ರಾಣಗೆಟ್ಟ ಶಿಶುವ ನೋಡಿ ಜಾಣತನದಲಿ ಚಕ್ರವಪಿಡಿದು ಪ್ರಾಣವನು ರಕ್ಷಿಸಿದ ಸ್ವಾಮಿಗೆ 26 ಏಳುಹನ್ನೊಂದು ಸೇನೆಗಳನೆಲ್ಲ ಹಾಳುಮಾಡಿ ಹದಿನೆಂಟುದಿವಸದಿ ಖೂಳಕೌರವರನೆಲ್ಲ ಕೊಂದು ಧರ್ಮನಲಿ ರಾಜ್ಯವಾಳಿಸಿದಗೆ 27 ಸೌಪ್ತಿಕದಲಿ ಪುತ್ರನ ಕೊಲ್ಲಿಸಿ ಸ್ತ್ರೀಪರ್ವದಿ ಭೂಮಿ ಭಾರವಡಗಿಸಿ ಶಾಂತಿಪರ್ವದಿ ಧರ್ಮರಾಯಗೆ ಪಟ್ಟಾಭಿಷೇಕವ ಮಾಡಿಸಿದಗೆ 28 ಮುಸಲದಲಿ ಯಾದವರನಡುಗಿಸಿ ಅನುಶಾಸನದಿ ಧರ್ಮಪೇಳಿಸಿ ಅಶ್ವಮೇಧ ಮಹಾಪ್ರಸ್ಥ ಸ್ವರ್ಗಾರೋಹಣವ ಮಾಡಿಸಿದಗೆ 29 ಅಂದುಪಾರ್ಥಗೆ ಸಾರಥ್ಯವಮಾಡಿ ಬಂಧುಗಳ ಸ್ವರ್ಗವಾಸಮಾಡಿಸಿ ಬಂದು ಬೃಂದಾರಣ್ಯದಲ್ಲಿ ಇಂದಿರೇ ಸಹನಿಂದ ಸ್ವಾಮಿಗೆ 30 ಅನಿರುದ್ಧ ಸಾತ್ಯಕಿ ರುಕ್ಮಿಣಿ ಸಹಿತಲೆ ಬಂದು ನಿಂದವಗೆ 31 [ವರ] ಕಲಿಯುಗದೊಳಗುಳ್ಳ ದುಷ್ಟಕರ್ಮಿಗಳನೆಲ್ಲ ಸಲಹುವೆನೆಂದು ಕೈರವಿಣಿತೀರದಲಿನಿಂದ ಕರುಣಿ ವೆಂಕಟಕೃಷ್ಣನಂಘ್ರಿಗೆ ಮಂಗಳಂ 32
--------------
ಯದುಗಿರಿಯಮ್ಮ
ಮಂಗಳಂ ಶ್ರೀಕೃಷ್ಣವೇಣಿಗೆ ಜಯ ಮಂಗಳಂ ಜಗದುದ್ಧಾರಳಿಗೆ ಪ ರಂಗನ ಪಾದದಿ ಗಂಗೆ ಉದ್ಧವಿಸಲು ಅಂಗದಿಂದಾಗಲೆ ತಾನುದಿಸಿ ಬಂದು ಗಂಗಾಧರನ ದೇಹದಿ ಬಂದು ವೇಣಿಯ ಸಂಗಮವಾಗಿ ಬಂದ ದೇವಿಗೆ ಅ.ಪ ಮುನ್ನೂರು ಅರವತ್ತು ನದಿಗಳೆಲ್ಲ ಕೂಡಿ ಕನ್ಯಾರಾಶಿಗೆ ಗುರು ಬಂದಿರಲು ವಾಸವ ಮಾಡಲು ಅವರ ಪಾಪವ ಕಳೆದ ಶ್ರೀ ಕೃಷ್ಣವೇಣಿಗೆ 1 ಇಂದ್ರನ ಪಾಪವ ನದಿಗಳಿಗೆ ಬಿಡಲು ನಿಂದಿತರಾಗಿ ದುಃಖಿಸುತ ಪೋಗಿ ಬಂದ ಕೃಷ್ಣವೇಣಿಗೆ ಗಂಗಾದೇವಿಗೆ 2 ವೇಣುಶೂರ್ಪಗಳಲ್ಲಿ ನಾನಾ ಫಲಗಳ ಇಟ್ಟು ನೇಮದಿಂ ಬಾಗಿನಂಗಳ ಕೊಡಲು ಮಾನಿನಿಯರೆಲ್ಲ ಮೌನದಿಂ ಕೊಡಲು ಮಾಂಗಲ್ಯವಿತ್ತು ಸಲುಹುವ ದೇವಿಗೆ 3 ಕೃಷ್ಣತೀರದಲ್ಲಿದ್ದ ವೃಕ್ಷದೇವತೆಗಳು ಋಷಿಗಳು ಪಾಷಾಣವಾಗಿರಲು ನಕ್ರ ಮೊದಲಾದ ಜಂತುಗಳೆಲ್ಲ ಯಕ್ಷರು ವಾಲೂಕ ಹರಿದ ಧೂಲಿಯಾಗಿಹರು 4 ಇಂದ್ರದಂಡಕ ದಂತ್ರಿಪಾಲ ಸೋಮಕ ಧರ್ಮ ನಂದನ ನಳ ಹರಿಶ್ಚಂದ್ರರೆಲ್ಲ ಬಂದು ಸ್ನಾನವ ಮಾಡೆ ಅವರ ಪಾಪಗಳ ಆ ನಂದದಿಂ ಕಳೆದ ಕೃಷ್ಣವೇಣಿಗೆ 5 ಮಲಾಪಹಾರಿ ಭೀಮೆ ತುಂಗಭದ್ರೆಯು ಮೊ [ಒಲವಿ]ಂದ ಸ್ನಾನಪಾನವ ಮಾಡಿದವರಿಗೆ [ಲೋಲ] ಶ್ರೀನಿವಾಸನ ಪಾದತೋರ್ಪ ಕೃಷ್ಣವೇಣಿಗೆ 6
--------------
ಯದುಗಿರಿಯಮ್ಮ
ಮಂಗಳಾಚರಣ ಜಯ ಜಯ ರಮಾಕಾಂತ ಜಯತು ದೈತ್ಯಕೃಪಾಂತ ಜಯ ಸರ್ವ ವೇದಾಂತ ಜಯತು ನಿಶ್ಚಿಂತಾ ಪ. ಬ್ಯಾಡ ವೇಷವ ತಾಳಿ ಓಡಿಸುತ ತುರಗವನು ಹೂಡೆ ಪದ್ಮಾವತಿಯ ನೋಡಿ ನಸುನಗುತ್ತ ಜೋಡಾತು ತನಗೆಂದು ಗಾಡಿಕಾರನ ಮಾತ- ನಾಡಿ ಕ್ರೋಡಾಲಯಕೆ ಓಡಿ ಬಂದವನೆ 1 ತಾಯಿ ಬಕುಳೆಯ ಕಳುಹಿ ಮಾಯಕದ ಕೊರವಂಜಿ ಕಾಯದಿಂದಾಕಾಶ ರಾಯನರಮನೆಗೆ ಜೋಯೆಂದು ಪೋಗಿಸದುಪಾಯಗಳ ನಡಿಶಿ ತ- ನ್ನಾಯ ಕೈಕೊಂಡು ಕಮನೀಯ ಮೂರುತಿಯೆ 2 ಶುಕಮುನಿಯ ಮುಖದಿಂದ ಸುಖವಾರ್ತೆಯನು ಕೇಳಿ ಸಕಲ ದೇವೋತ್ತಮರ ನಿಕರವನು ನೆರಹಿ ಅಕಳಂಕ ಲಗ್ನದಲಿ ಸುಕವೋಲೆಗೊಲಿದುರಗ ಶಿಖರಿಯಲಿ ನೆಲೆಯಾದ ಲಕುಮಿವಲ್ಲಭನೆ ಜಯ ಜಯ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮತಿತಪ್ಪಿ ನಡೆದೆಯಲ್ಲ ಶ್ರೀಲಕುಮೀ ಪತಿಯನು ನೆನೆಯಲಿಲ್ಲ ಹಿತವಾದ ಪಥವು ಸಂತತ ತೋರದೆ ನೀನು ಖತಿಗೊಂಡು ವೆಂಕಟಪತಿಯನು ನೆನೆಯದೆ ಪ ಕೃತ ತ್ರೇತ ದ್ವಾಪರ ಕಲಿಯುಗ ಚತುರ್ವಿಧ ಜೊತೆಯಾಗಿ ಪೋಗಲು ಸಾವಿರ ಬಾರಿಯು ಚತುರಾಸ್ಯ ಬ್ರಹ್ಮಗೆ ಹಗಲೊಂದು ಸಲುವುದು ಗತಿಯ ಕಾಣೆನು ಶ್ರುತಿಯ ಅಯುತ ಕಾಲದೊಳು 1 ಹಿಂದಣ ಭವದೊಳಗೆ ಬಂದ ಭವದೊಳಗೆ ಸಂ - ಬಂಧವಾಗಿಹ ಸತಿಯರೆಷ್ಟು ಮಂದಿಯೋ ಕಾಣೆ ಕಂದರನು ಪಡೆದುದಕೆ ಲೆಕ್ಕ ಸಂಖ್ಯೆಗಳಿಲ್ಲ ತಿಂದ ಅನ್ನವು ಮೇರುವಿಗಿಂತ ಇಮ್ಮಡಿಯು 2 ಕಾಯ ಬಿಡಿಸಿಕೊಂಬುದು ಜೀವ ಅಡಿಗಡಿಗೆ ಹುಟ್ಟುತ್ತ ಸಾವಾಗಯೆನ್ನುವನು ಕಾಲ ಮನದಿ ಬೇಸರಗೊಳಲು ಜಡತೆಕಿಕ್ಕದೆ ಮುಂದೆ ಕಡೆ ಹಾಯು ಮನವೆ 3 ಬಲೆಯ ಕಾಣದೆ ಪಕ್ಷಿ ಮೇವಿನಾಸೆಗೆ ಪೋಗಿ ತಲೆ ಸಿಕ್ಕಿ ಪ್ರಾಣವನು ಕಳಕೊಂಬ ತೆರನಂತೆ ಕುಲವೃಕ್ಷದೊಳಗಿರ್ದ ಫಲದ ಮಮತೆಗಳಿಂದ ಜಲಜನಾಭನ ಬಿಟ್ಟು ಹೊಲಬುದಪ್ಪಿತಲ 4 ಸ್ನಾನಕ್ಕೆ ಚಳಿ ಹುಟ್ಟಿ ಧ್ಯಾನಕ್ಕೆ ಮರವೆಯು ಮೌನಕ್ಕೆ ಕೋಪದ ಬೀಜವಂಕುರಿಸಿತು ದಾನಕ್ಕೆ ಲೋಭವು ಮಾನಕ್ಕೆ ಪಿಸುಣರು ಏನ ಮಾಡಿದರಿವರು ಬಿಡರಲ್ಲೊ ಮನವೆ 5 ಸಂಗಡದಿ ಬರುತಿಪ್ಪ ಶುಭಗಳನು ಕಡೆಗಿಟ್ಟು ಅಂಗಸುಖವ ತಾಳ್ದು ಗೊಂಗುಡಿಯ ಹೊದ್ದು ಕಂಗಳಿಗೆ ಚೆಲುವಾದ ಅಂಗನಾಮೋಹದಿ ಶ್ರೀ- ರಂಗನ ನಾಮದ ಅಂಗಿಯ ಸಡಲಿಸಿದೆ 6 ಹರಿಧ್ಯಾನ ಹರಿಪೂಜೆ ಹರಿನಾಮ ಕೀರ್ತನೆಯು ಹರಿಭಕ್ತಿ ನರ್ತನೆಯು ಹರಿಯ ಸೇವೆಗಳು ಎರವುದೋರದೆ ನೀನು ವರಾಹತಿಮ್ಮಪ್ಪನನು ಸ್ಥಿರವಾಗಿ ನಿಲುವಂತೆ ಕರಕೊಳ್ಳೊ ಮನವೆ 7
--------------
ವರಹತಿಮ್ಮಪ್ಪ
ಮನವೆ ನೀ ಸ್ಥಿರವಾಗಿ ಹರಿಯ ಪಾದಾಂಬುಜ_ವನು ಸೇರಿ ಅಲ್ಲಿಯೆ ನಿಲ್ಲಯ್ಯ ಬಿಡದೆ ಪ ಅನುದಿನ ಸೇವಿಸಲನುವಾಗುದಯ್ಯಾಘನ ಚಂಚಲ ನೀನು ಎಚ್ಚರ ಎಚ್ಚರ ಅ.ಪ. ಅಲ್ಲಲ್ಲಿ ಇಲ್ಲೆಂದು ಎಲ್ಲೂ ಹುಡುಕಲು ಬೇಡಎಲ್ಲೆಲ್ಲ್ಯೂ ಇರುವ ಶ್ರೀವಲ್ಲಭನುಬಲ್ಲವರಾಡುವ ಸೊಲ್ಲನು ಲಾಲಿಸುಖುಲ್ಲನೆಂಬುವ ನಿಂದೆಗೀಡಾಗಬೇಡಾ 1 ನಿತ್ಯ 2 ಧ್ಯಾನದ ದಾರದಿಂ ಜಪವೆಂಬ ಗಂಟಿರಲಿಶ್ರೀನಿವಾಸನ ಪಾದವೆಂಬ ಗೂಟಕೆ ಕಟ್ಟಿಮೌನದಿಂ ಕಟ್ಟಿಸಿಕೊಂಡಲ್ಲೇ ಸುಳಿದಾಡುಸ್ಥಾನವ ಬಿಟ್ಟನ್ಯನಿಟ್ಟಿಗೆ ಪೋಗದೆ 3 ಸಕಲರ ಪಾಪವ ತೊಳೆದು ಪಾವನಗೈದುಮುಕುತಿಯ ದಾರಿಯ ತೋರುವ ನದಿಗಂಗೆಪ್ರಕಟವಾಗಿರುವಂತೆ ಚರಣದೊಳುರುಳಾಡುಭಕುತಿಯ ಬೇಡು ನೀ ಪ್ರತಿದಿನ ನೋಡು 4 ಗದುಗಿನ ವೀರನಾರಾಯಣಗೂ ನಿನಗೂ ಹೃದಯವೆ ಮಂದಿರವಲ್ಲವೆ ದೀಪದಕದಿರಂತ ಚಾಚುತ ಪೋಗಿಬರುವದೇತಕೆಸದನವ ಬಿಡದಲ್ಲೇ ಹರಿಯನು ಸೇವಿಸು 5
--------------
ವೀರನಾರಾಯಣ