ಒಟ್ಟು 191 ಕಡೆಗಳಲ್ಲಿ , 58 ದಾಸರು , 180 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸ್ಮರಿಸುವೆ ಮುರಹರನ | ಪರಮ ಪುರುಷನ ಧುರದಿ ಸುರಪ ನರನ | ಪೊರೆದ ದೇವನ ಪ ವನಜ ಸನ್ನಿಭ ಲೋಚನ | ಜನಕಜೆ ಮನ ವನಜ ಭಾಸ್ಕರ ಕೇಶವನ | ದನುಜ ಕಾಲನ 1 ಭಕುತ ಪಾಲಕ ಅಜೀತ ಮುಕುತಿ ಪ್ರದಾತ ಲಕುಮಿ ಸುರವರ ಪೂಜಿತ | ವಿಖಿನನ ಪಿತ2 ಸಾಮಜ ಪಾಲಾ ಸನ್ನುತ ಗೋಪಾಲಾ ಭೂಮಿಜೆ ಲೋಲಾ 3
--------------
ಶಾಮಸುಂದರ ವಿಠಲ
ಹರಿಯು ಕರ್ತನೆಂದರಿತವನೇ ಮುಕ್ತ ಮಿಕ್ಕಮಾತೆಲ್ಲಾ ವ್ಯರ್ಥ ಪ ಸರಸಿಜಭವ ರುದ್ರಾದ್ಯರಿಗೆಲ್ಲ ಅ.ಪ ದೊರಕುವುದೆಂದಿಗೂ ಶಾಶ್ವತ ನಿಜಮುಕ್ತಿ ಅರಿಯದ ವಾದಗಳೆಲ್ಲ ಕುಯುಕ್ತಿ ಸರ್ವಜೀವರಲಿ ಹರಿಯೆ ವ್ಯಾಪ್ತಿ1 ತೇನವಿನಾ ತೃಣಮಪಿನಚಲತಿ ಎಂಬ ಶ್ರುತ್ಯರ್ಥವ ಗುರುಬೋ- ಧಾನುಸಾರ ತಿಳಿಯಲು ತನ್ನಯ ಬಿಂಬಾ ಮಾನಸ ಪೀಠದಿ ಹೊಳೆಯಲು ದರುಶನ- ದಾನಂದ ಸುಖಾಮೃತ ತಾನುಂಬಾ 2 ಗುಣಕರ್ಮಗಳನು ಒಂ- ಪವನಾಂತರ್ಗತ ಗುರುರಾಮವಿಠಲ ಜವನವರಿಗೆ ಒಪ್ಪಿಸನು ತನ್ನವರನು 3ಸಂಪ್ರದಾಯದ ಹಾಡುಗಳು
--------------
ಗುರುರಾಮವಿಠಲ
ಹಸೆಗೆ ಬಾರೈ ಶ್ರೀರಾಮ ಹನುಮ ಪ್ರೇಮ ಪ ದಶರಥ ಕುಮಾರ ದಶವಿಧ ಶರೀರ ಅ.ಪ ಪರಮಾತ್ಮ ಶುಭಚರಿತ ಸೂರ್ಯವಂಶಾ ಶರಧೀಗೆ ಚಂದ್ರಮನೆ ಕರುಣದಿ ಬೇಗನೆ 1 ಅಗಣಿತ ಚಿತ್ಸುಖಾಪ್ರದಾತ ಜಾನಕೀ ಸಮೇತಾ 2 ದುರಿತಾನಲಸಲಿಲ ದೈತ್ಯನಿಕರ ಕಾಲ ತರಣಿಜ ಪಾಲ 3
--------------
ಗುರುರಾಮವಿಠಲ
ಹ್ಯಾಂಗೆ ಮೆಚ್ಚಿದೆ ಹೆಂಗಳರನ್ನೆ ಹಲವುರೂಪ ತಾಳಿದವನ ಪ. ರಾಗ ಮಿಗಿಲು ಲಕುಮಿರಮಣ ಭೋಗಿರಾಜಶಯನನ ಅ.ಪ. ಜಲದಿ ಚರಿಸುತಿಹನು ಸತತ ಒಲಿದು ಶಿರವ ನೆಗಹಿ ನೋಡ ಸಲೆವಿಕಾರ ಕೋರೆಹಲ್ಲ ಚಲ ಮಹೋಗ್ರ ರೂಪನ ನೆಲವನಳೆದು ತಾಯಿತಲೆಯ ತರಿದು ಕರಡಿ ಕಪಿಯೊಳಾಡಿ ಒಲಿದು ಗೋವುಕಾಯ್ದು ಬತ್ತಲೆತೊಳಲಿ ತುರಗವೇರ್ದನ 1 ಸೊಗಡುಗಂಧವೆಸೆವ ತನುವು ತೆಗೆದ ಬಾಯಿ ಕುಗ್ಗಿದ ಬೆನ್ನು ಅಗೆದು ನೆಲವ ಬಗೆದು ರೌದ್ರ ಹೊಗೆಯತೋರ್ವ ವದನನ ವಿಗಡವಿಪ್ರ ರಾಜವೈರಿ ಬಗೆಯಬಡದಾರಣ್ಯವಾಸಿ ನಗವ ಬೆರಳ ತುದಿಯಲೆತ್ತಿ ಜಗದ ಲಜ್ಜೆಯ ತೊರೆದ ಕಲ್ಕಿಯ 2 ಮಿಡಿದು ಹೊಳೆವ ಚಂಚಲಚಿತ್ತ ಕಡುಕಠಿಣ ದೇಹದವನ ಹಿಡಿದ ರೋಮಮಯ ಶರೀರ ಕಿಡಿಯನುಗುಳ್ವ ನಯನನ ಬಿಡದೆ ದಾನಬೇಡಿ ಕೊಡಲಿಪಿಡಿದು ಮೃಡನ ಧನುವ ಮುರಿದು ಜಡಿದು ಅಗ್ರಪೂಜೆಗೊಂಡ ಕಡುನಿರ್ವಾಣ ಹಯವದನನ3 ಸಂಪ್ರದಾಯದ ಹಾಡುಗಳು
--------------
ವಾದಿರಾಜ
(ಈ) ಲೋಕನೀತಿ ಮತ್ತು ಕ್ಷೇತ್ರ ಸ್ತುತಿಗಳು108(1) ತಿರುಪತಿಶರಣು ವಕುಳಾಭರಣ ಪೋಷಿತಶರಣು ಯಾಮುನ ಪೂಜಿತ ಪಶರಣು ಯತಿಪತಿ ನಿತ್ಯವಂದಿತಶರಣು ಕ್ಷಮಾಭರಿತಾ ಅ.ಪಶರಣುದೇಶಿಕಹೃದಯ ಸದನಾಶರಣು ಪರಿಪೂರ್ಣೇಂದುವದನಶರಣು ಸುಂದರ ಕೋಟಿ ಮದನಾಶರಣು ಹಯವದನಾ 1ಶರಣು ಭಕ್ತಫಲಪ್ರದಾಯಕ ಶರಣು ತಿರುಮಲನಾಯಕಾಶರಣು ಅಸ್ಮತ್ಪರಮದೇಶಿಕ ಶರಣು ಅಸ್ಮಾದ್ದೇಶಿಕಾ 2
--------------
ತುಳಸೀರಾಮದಾಸರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಮಂಗಳೂರಿನ ಗಣೇಶನನ್ನು ನೆನೆದು)ಶ್ರೀ ಗಜವಕ್ತ್ರ ಪವಿತ್ರ ನಮೋ ಮನುಮಥಜಿತಸುತನಯ ಪ.ಬಾಗುವೆ ಶಿರ ಶರಣೌಘಶರಣ್ಯ ಸು-ರೌಘಸನ್ನುತ ಮಹಾಗುಮ ಸಾಗರ ಅ.ಪ.ಸಿದ್ಧಸಮೂಹಾರಾಧ್ಯ ಪದದ್ವಯ ಶೋಭ ಸೂರ್ಯಾಭಶುದ್ಧಾತ್ಮ ಫಣಿಪಬದ್ಧಕಟಿವಿಗತಲೋಭಹೃದ್ಯಜನದುರಿತಭಿದ್ಯ ವಿನಾಯಕವಿದ್ಯಾದಿ ಸಕಲ ಬುದ್ಧಿಪ್ರದಾಯಕ 1ಏಕದಂತಚಾಮೀಕರಖಚಿತ ವಿಭೂಷ ಗಣೇಶಪಾಕಹ ಪ್ರಮುಖ ದಿವೌಕಸಪೂಜ್ಯ ವಿಲಾಸಶೋಕರಹಿತ ನಿವ್ರ್ಯಾಕುಲ ಮಾನಸಲೇಖಕಾಗ್ರಣಿ ಪರಾಕೆನ್ನಬಿನ್ನಪ2ವರಮಂಗಲಪುರ ಶರಭಗಣೇಶ್ವರ ಧೀರ ಉದಾರಸುರುಚಿರ ಶುಕ್ಲಾಂಬರಧರ ವಿಘ್ನವಿದಾರಹರಿಲಕ್ಷ್ಮೀನಾರಾಯಣಶರಣರಗುರುಗುಹಾಗ್ರಜ ಮನೋಹರ ಸುಚರಿತ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
6 (ಅ)ಸಂಪ್ರದಾಯದ ಹಾಡುಗಳು424ಆದಿನಾಥಗೆ ಜಯಮಂಗಳಶ್ರೀಧರ ಮೂರ್ತಿಗೆ ಶುಭಮಂಗಳ ಪ.ಧರಿಸಿ ನಾವೆಯ ಸತ್ಯವ್ರತನ ಪಾವನ ಮಾಡಿಚರಿಸದೆ ಮಂದರಗಿರಿಯ ಹೊತ್ತುಧರೆಯ ನೆಗಹಿ ಬಂಗಾರಗಣ್ಣಿನವನಹರಿದು ದೈತ್ಯಜಗೊಲಿದು ಬಂದವಗೆ 1ಸುರಪನಂತಸ್ತಾಪ ತರಿದು ಧರಿತ್ರಿಯಸುರರಿಗೆ ಸಕಲ ಪದವಿಯನಿತ್ತುಶರಧಿಯ ದಾಟಿ ದಶಶಿರನ ತಲೆ ಚಿವುಟಿತುರುಗಾಯ್ದ ಗೋಪೇರ ಅರಸನಿಗೆ 2ಅಂತರಾಳ ಪಟ್ಟಣಕಪಾಯವನು ಮಾಡಿಅಂತ್ಯದಿ ಯವನರ ಸವರಿದಗೆಚಿಂತಿಪ ದಾಸರ ಚಿಂತಾಮಣಿಗೆಸಿರಿಕಾಂತ ಪ್ರಸನ್ವೆಂಕಟದಾಸನಿಗೆ 3
--------------
ಪ್ರಸನ್ನವೆಂಕಟದಾಸರು
ಏನೇನ ದಾನವ ಮಾಡಲು - ಹರಿಯ |ಧ್ಯಾನಕೆ ಸಮವಾದ ದಾನಂಗಳುಂಟೆ ? ಪ.ದಿನಕೊಂದು ಲಕ್ಷ ಗೋದಾನವ ಮಾಡಲು |ಅನುದಿನ ಉದಕದಾನವ ಮಾಡಲು ||ಮನಶುದ್ಧವಾದ ಭೂದಾನವ ಮಾಡಲು |ವನಜನಾಭನ ಧ್ಯಾನಕೆ ಸಮವುಂಟೆ ? 1ಉತ್ತಮವಾದ ವಸ್ತ್ರವ ದಾನಮಾಡಲು |ಮುತ್ತು ಮಾಣಿಕವ ದಾನವ ಮಾಡಲು ||ಅತ್ಯಂತ ವಿದ್ಯಾ ಪ್ರದಾನವ ಮಾಡಲು |ಚಿತ್ತಜಪಿತನ ಧ್ಯಾನಕೆ ಸಮವುಂಟೆ ? 2ಶತಕೋಟಿ ಕನ್ಯಾಪ್ರದಾನವ ಮಾಡಲು |ಶತಶತ ಸುವರ್ಣ ದಾನವ ಮಾಡಲು ||ಮಿತಿಯಿಲ್ಲದೆ ಅನ್ನದಾನವ ಮಾಡಲು |ಕ್ಷಿತಿಪತಿಯ ಪಾದಧ್ಯಾನಕೆ ಸಮವುಂಟೆ ? 3ನಾನಾ ತೀರ್ಥದಲಿ ಸ್ನಾನವ ಮಾಡಲು |ಕಾನನದೊಳಗೆ ತಪವ ಮಾಡಲು |ಜಾÕನಿಯಾಗಿ ಕಾಶೀಯಾತ್ರೆಯ ಮಾಡಲು |ಜಾನಕೀಪತಿಯ ಧ್ಯಾನಕೆ ಸಮವುಂಟೆ ? 4ಧಾರಣಿ ಪಾರಣಿ ಭೀಷ್ಮಪಂಚಕ ಮಾಡಿ |ಹರುಷದಿ ವಿಷ್ಣುಪಂಚಕ ಮಾಡಲು ||ಪರಮ ಕಠಿಣ ಚಾಂದ್ರಾಯಣ ಮಾಡಲು |ಪುರಂದರವಿಠಲನ ಧ್ಯಾನಕೆ ಸಮವುಂಟೆ ? 5
--------------
ಪುರಂದರದಾಸರು
ಕೃಷ್ಣ ರಕ್ಷಿಸೆನ್ನ ಜಯ ಜಯಪಕ್ಷಿರಾಜಗಮನಾದುಷ್ಟಹನನ ಜಲಜಾಕ್ಷ ಜನಾರ್ದನಶಿಷ್ಟ ಜನರ ಮನದಿಷ್ಟ ಪ್ರದಾಯಕ ಪಗೋಕುಲದೊಳು ನೆಲಸಿ ದೈತ್ಯರ-ನೇಕರನು ಮಥಿಸಿಲೋಕದ ಜನರಿಗೆ ರೀತಿಯ ತೋರುತ-ನೇಕರ ಮನೆ ಮನೆ ಬೆಣ್ಣೆಯ ಭುಜಿಸಿದ 1ದ್ವಾರಕೆಯೊಳು ನಿಂತೆ ಕೌರವವೀರಗಾಯುಧವಿತ್ತೆಸಾರಥಿಯಾಗುತೆ ಧಾರುಣಿ ಗೆಲಿಸಿದೆಧೀರ£Àುನೀ ಗೋವಿಂದನೆ ದಾಸನೆ 2
--------------
ಗೋವಿಂದದಾಸ
ಚರಣಕಮಲವನ್ನು ನೆನೆವೆ ನಾಸುರದ್ವಿಜವೇಷದಿಂದುದಿತನ್ನ ತ್ರಾಣಿಪರಮತಗಳನು ಖಂಡ್ರಿಸಿದನ್ನ ಸತ್ಯಪರಿಪರಿ ವ್ರತಾಚರಿಸಿದನ್ನ ಮನೋಶುದ್ಧಾದ ಸಂಪ್ರದಾಯಕನನ್ನ ತತ್ವಪರಸತಿ ಪರಧನ ತೊರೆದನ್ನ ತನ್ನದೂರದರ್ಶಿ ಸರ್ವಕಂಡನ್ನ ನಿಜವೈಷ್ಣವ ಸಿದ್ಧಾಂತ ಒರೆದನ್ನ ಆತಪಸೆ ಸಂಗರವೆಂದರಿದನ್ನ ತನ್ನವಿಜಯವಿಠಲದಾಸನ್ನ ತನ್ನ
--------------
ಗೋಪಾಲದಾಸರು
ಜನನೀ ತ್ರಿಜಗತಿ ಜನಾರ್ದನೀ ಜನನೀಜಯತು ಶ್ರೀಪದ್ಮಾವತೀ ಪ.ಗುಣಗಣಾರ್ಣವೆ ವಿಶ್ವಪೂಜಿತಜನನಮರಣವಿದೂರೆ ಪದ್ಮಾಸನೆಸನಾಥೆ ಸದಾ ಸುಮಂಗಲೆಘನಗಗನಭೂಪಾಲನಂದಿನಿ ಅ.ಪ.ಶ್ರೀನಿವಾಸನ ರಾಣಿ ಸರ್ವಾರ್ಥ ನಿ-ದಾನಾಂಬುಜಪಾಣಿಭಾನುಕೋಟಿಸಮಾನ ತೇಜೆ ಸ-ದಾನುರಾಗಪ್ರದಾನೆ ವಿಬುಧ-ಶ್ರೇಣಿನುತೆ ಮಹದಾದಿಮಾಯಾ-ಮಾನಿ ಮಾಧವಮನವಿಲಾಸಿನಿ 1ಸುಂದರಿ ಸುಮನೋಹರಿ ಸುಜ್ಞಾನಾ-ನಂದೆ ಸಿಂಧುಕುವರಿಚಂದ್ರವದನೆ ಚರಾಚರಾತ್ಮಕಿವಂದನೀಯೆ ಪರೇಶಪರಮಾ-ನಂದರೂಪೆ ಸನತ್ಸುಜಾತ ಸ-ನಂದನಾದಿಮುನೀಂದ್ರವಂದಿತೆ 2ಅಂಬೆ ಶ್ರೀಹರಿಪ್ರೀತೆಶಂಭುಸಂಭಾವಿತೆ ತ್ರಿಲೋಕಾ-ರಂಭಸೂತ್ರೆ ಪವಿತ್ರೆ ವಿಶ್ವಕು-ಟುಂಬೆ ಕಮಲಯನೇತ್ರೆ ಸಾಧ್ವೀಕ-ದಂಬಮಸ್ತಕಮಣಿಪ್ರಭಾಶಿನಿ 3ಪದ್ಮ ಸರೋವಾಸಿನೀ ಪಾವನಹೃತ್ಪದ್ಮನಿತ್ಯಭಾಸಿನಿಪದ್ಮನವಕ್ರೀಡಾವಿಲಾಸಿನಿ ಮ-ಹನ್ಮನೋಧ್ಯಾನಾಧಿರೂಢೆ ಸು-ಪದ್ಮಹಸ್ತೆ ನಮಸ್ತೆ ಪಾವನೆಪದ್ಮನಾಭನರಮಣಿ ಕರುಣಿ 4ವರಲಕ್ಷ್ಮೀವಾರಾಯಣಿ ಕಲ್ಯಾಣಿ ಶ್ರೀ-ಕರೆ ಕಾಳಾಹಿವೇಣಿಧರೆಯೊಳುತ್ತಮ ಕಾರ್ಕಳದಿ ಸು-ಸ್ಥಿರನಿವಸವ ಗೈದೆ ಕರುಣಾ-ಶರಧಿಭಕ್ತರ ಪ್ರಾರ್ಥನೆಯ ಸ್ವೀ-ಕರಿಸಿ ಪೊರೆವಿಷ್ಟಾರ್ಥದಾಯಿನಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯ ಶ್ರೀಹರಿಪ್ರಿಯೆ ಮಹಾ-ಭಯಹರೆ ಜಗದಾಶ್ರಯೆಲಯವರ್ಜಿತ ನಿತ್ಯಾತ್ಮೆ ಚಿನ್ಮಯೆಜಯಶೀಲೆ ನಿರಾಮಯೆ 1ನಿತ್ಯಮುಕ್ತಿ ನಿರ್ವಿಕಾರೆ ನಿಜ-ಭೃತ್ಯನಿಚಯ ಮಂದಾರೆಪ್ರತ್ಯಗಾತ್ಮ ಹರಿಭಕ್ತಿರಸಪೂರೆಸತ್ವಾದಿಗುಣವಿದೂರೆ 2ಲಕ್ಷ್ಮೀನಾರಾಯಣಿ ಹರಿ-ವಕ್ಷಸ್ಥಲವಾಸಿನಿಅಕ್ಷರರೂಪಿಣಿ ಬ್ರಹ್ಮಾಂಡಜನನಿಸುಕ್ಷೇಮಪ್ರದಾಯಿನಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮೋ ನಮೋ ಭವಗತಿ ಶ್ರೀ ನಾರಾಯಣಿ ಜಗದೀಶ್ವರೀ ಪಸುಮಶರಜನನೀಸೋಮಸಹೋದರಿಕಮಲವಾಸಿನೀ ಸುಂದರೀ ಲಕ್ಷ್ಮೀ ಅ.ಪವಿಮಲಾ ವಿಶ್ವಕುಟುಂಬಿನೀ ವೆಂಕಟಶೈಲ ನಿವಾಸಿನೀಅಮರೇಂದ್ರಾರ್ಚಿತಪಾದಸರಸಿಜಅಘವಿನಾಶಿನಿ ಅಖಿಲಾಪದಹರ 1ಅಮೋಘ ಸಂಪತ್ಪ್ರದಾಯನೀ ಆರ್ತರಕ್ಷ ದೀಕ್ಷಾಮಣೀಪ್ರಮೋದಯಾ ಶ್ರೀರಮಾಭಾರ್ಗವೀಮಮಾಪಚಾರ ಕ್ಷಮಸ್ವಶಾರ್ಚಿಣೀ 2ಹೇಮಕುಧರ ಧಾಮೇಶ್ವರಿತುಲಸಿರಾಮದಾಸನುತ ರಾಜೀವಾಕ್ಷಾಹಿಮಾಂಶು ಮುಖ ಹರಿಹಿತಪ್ರಿಯನಿಸ್ಸೀಮಾನದಾನಿನಿ ಸಜ್ಜನ ಪೋಷಿಣಿ 3
--------------
ತುಳಸೀರಾಮದಾಸರು