ಒಟ್ಟು 250 ಕಡೆಗಳಲ್ಲಿ , 59 ದಾಸರು , 239 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುದ್ದು ಮೋಹನದಾಸರೆ | ಎನ್ನನು ಬೇಗ ಉದ್ಧರಿಸಿರಿ ಪ್ರೀತರೆ ಪ. ಬಿದ್ದಿಹೆ ದುರ್ವಿಷಯಾಂಧ ಕೂಪದೊಳೀಗ ಶುದ್ಧ ಜ್ಞಾನವನಿತ್ತು ಪದ್ಮನಾಭನ ತೋರಿ ಅ.ಪ. ಪರಮಯತಿಚರ್ಯರೆ | ಈ ಜಗದೊಳು ವರ ಭಕ್ತಿವೆಗ್ಗಳರೆ ತರಳತನದಲಿ ಪಾದಚಾರಿಗಳಾಗಿ ಧರೆಯ ಕ್ಷೇತ್ರವನೆಲ್ಲ ಚರಿಸಿರ್ಪ ವಶಗೈದು ಹರಿಯ ಮೆಚ್ಚಿಸಿ ದಾಸಭಾವದಿ ಪರಿಪರಿಯ ಅಂಕಿತದಿ ಶಿಷ್ಯರ ಪರಮ ಸಂಭ್ರಮಗೊಳಿಸಿ ಮೆರೆಯುತ ಸಿರಿವರನ ಪದಸಾರಿದಂಥ 1 ಶೀಲವಂತರೆ ನಿಮ್ಮನು | ಕೊಂಡಾಡೆ ಈ ಸ್ಥೂಲಮತಿಗೆ ಸಾಧ್ಯವೆ ಕಾಲಕಾಲದಿ ಹರಿಲೀಲೆಯ ಪಾಡುತ ನೀಲವರ್ಣನ ಹೃದಯಾಲಯದಿ ಕಂಡು ಮೂಲರೂಪಿಯ ಪಾದಕಮಲದಿ ಲೋಲುಪಡುತಲಿ ಓಲ್ಯಾಡಿದ ಬಹು ಶೀಲಗುಣಗಣಪಾಲರೆ ಎನ್ನ ಪಾಲಿಸಿರಿ ಸಿರಿಲೋಲನ ತೋರಿ 2 ಸಂದೇಹವಿನ್ಯಾತಕೆ | ಮಂತ್ರದ ಮನೆ ಮಂದಿರದೊಳಗಿರೆ ಬಂದಿರಿ ದಾಸತ್ವದಿಂದ ಧರೆಯೊಳು ನಂದಕಂದನ ಲೀಲೆ ಅಂದ ಪಾಡುತಲಿ ಅಂದು ಗ್ರಂಥಗಳನೋದಿ ಪದವನು ಒಂದು ರಚಿಸಿ ಸಾಲದೆ ಮು- ಕುಂದನಾ ಗುಣವೃಂದ ಪೊಗಳಲು ಚಂದದಿಂದ ವಸುಂಧರೆಯೊಳು 3 ವರತತ್ವ ಅಂಶದಲಿ | ಶ್ರೀ ಗುರುವಿಗೆ ತಾರಕರೆನಿಸಿದಿರಿ ಸಾರಿರೆ ನಿಮ್ಮ ಪದ ಸ್ವಪ್ನದೊಳು ತೋರಿ ತೀರುಥವನೆ ಕೊಟ್ಟು ಸುಮ್ಮನಿರಲು ಗುರು ಸಾರಿ ಬಂದು ಬದಿಯಲಿ ನಿಂದು ಭೂರಿ ಕರುಣವ ಮಾಡಬೇಕೆಂದು ತೋರಿ ಪೇಳಲು ಹರಿ ನಿರ್ಮಾಲ್ಯ ಅಪಾರ ಕರುಣದಿ ಕೊಟ್ಟು ಪೊರೆದಿರಿ 4 ಸ್ತುತಿಸಲಳವೆ ನಿಮ್ಮನು | ಈ ಜಡಮತಿ ಕೃತಕವಲ್ಲವು ಇದಿನ್ನು ಅತಿಪ್ರೇಮ ಗುರುಗಳ ಹಿತದಿಂದ ನುಡಿದುದು ಚ್ಯುತದೂರ ಗೋಪಾಲಕೃಷ್ಣವಿಠ್ಠಲನ ಸತತ ಸ್ತುತಿಸುವ ಮತಿಯ ಪಾಲಿಸಿ ಪಥವ ತೋರಿರಿ ಕರ್ಮಜರೆ ಬೇಗ ಸತತ ಶ್ರೀ ಗುರು ವ್ರತವ ಪಾಲಿಪ ಮತಿಯ ದೃಢದಲಿ ಹಿತದಿ ಕರುಣಿಸಿ 5
--------------
ಅಂಬಾಬಾಯಿ
ಯಾಕೆಮ್ಮನಗಲಿ ಪರಲೋಕ ಸೇರಿದೆ ಗುರು ಐಕೂರು ನರಸಿಂಹಾರ್ಯ ಪ ಲೌಕಿಕವ ಬಿಟ್ಟು ಸುವಿವೇಕ ನಡೆವ ವಾಕು ಪೇಳ್ವರ ಕಾಣೆ ಲೋಕದೊಳು ನಿನ್ಹೊರತು ಅ.ಪ ಅತಿಮಂದರಾದೆಮಗೆ | ಶ್ರುತಿ ಶಾಸ್ತ್ರ ಪುರಾಣ ಕಥೆ ದಾಸ ಕವಿತೆ ಸತತ ಪೇಳಿ ಮತಿವಂತರೆನಿಸಿ ಸ್ಪÀತ್ವಥ ಪಡಿಸಿ ಮುಂದೆ ಸ ದ್ಗತಿ ಕಾಣಿಸದೆ ಜಗದಿ ಹತಭಾಗ್ಯರನು ಮಾಡಿ 1 ಸಾಧುವರ್ಯನೆ ನಿಮ್ಮ ಪಾದವೇ ಗತಿ ಎಂದು ಸಾದರದಿ ನಿರುತ ನೆರೆನಂಬಿದಂಥ ಸೋದರಿಯರು ಪಂಚ ಭೇದ | ತರತಮಜ್ಞಾನ ಬೋಧಿಸುವರಿಲ್ಲೆಂದು ಖೇದದಿಂದಿರುತಿಹರು 2 ಸೂರಿವರ ನಿನ್ನಗಲಿದಾರಭ್ಯ ಧರೆಯೊಳಗೆ ನೀರಿಂದ ದೂರಾದ ಮೀನಿನಂತೆ ಘೋರ ದುಃಖದಿ ಮುಳುಗಿ ಪಾರುಗಾಣದೆ ದಿಕ್ಕು ತೋರದಾಗಿಹುದೀಗ ಬಾರೋ ಮನಮಂದಿರದಿ 3 ತನುವು ತ್ಯಜಿಸಿದರೇನು | ಅನಿಮಿಷಾಂಶನೆ ನಮ್ಮ ಕನಸು ಮನನಿನೊಳಗೆ ಸುಳಿದಾಡುತ ಕೊನೆಯಲ್ಲಿ ಹರಿನಾಮ | ಅನುಗ್ರಹಿಸುವೆವು ಎಂಬ ಘನ ಅಭಯ ನೀಡೆಂದು ಮಣಿದು ಪ್ರಾರ್ಥಿಪೆನಯ್ಯ 4 ಪುಣ್ಯಪುರುಷನೆ ನಮಗೆ ಇನ್ನಾವ ಬಯಕಿಲ್ಲ ಜನ್ಮ ಜನ್ಮಕೆ ನಿನ್ನ ಚರಣಾಬ್ಜವ ಚನ್ನಾಗಿ ಸೇವಿಸುವ ಘನ್ನ ಸುಖಗರಿಯೆಂದು ನಿತ್ಯ 5 ನಿನ್ನಿಂದ ಸತ್‍ಶ್ರವಣ | ನಿನ್ನಿಂದ ಅಘಹರಣ ನಿನ್ನಿಂದ ಶ್ರೀವಾಯು ಹರಿಯಕರುಣ ನಿನ್ನಿಂದ ಉಪದೇಶ \ ನಿನ್ನಿಂದ ಭವನಾಶ ನಿನ್ನಿಂದ ಬಿಂಬ ದರ್ಶನವು ನಮಗಿನ್ನು 6 ಪಾಮರರ ಅಪರಾಧ ನೀ ಮನಕೆ ತಾರದಲೆ ಹೇಮ ಕಾಮಿನಿ ಭೂಮಿ ಈಮೂರರ ವ್ಯಾಮೋಹವನೆ ಬಿಡಿಸಿ | ಶಾಮಸುಂದರ ಭಕ್ತ ಸ್ತೋಮ ಸಂಗದೊಳಿಟ್ಟು ಪ್ರೇಮದಲಿ ಪಿಡಿಕೈಯ್ಯ 7
--------------
ಶಾಮಸುಂದರ ವಿಠಲ
ಯಾತರ ಭಯ ಶ್ರೀನಾಥನ ಪರಮ ಸುಪ್ರೀತಿಯ ಪಡೆದವಗೆ ಪ ವಿಧಿ ನಿಜಸುಖದಾತ ನೆಂದರಿತವಗೆ ಅ.ಪ ಬಂಧು ಜನರು ತನಗೊಂದಿಸಿದಾಕ್ಷಣ ಬಂದ ಭಾಗ್ಯವೇನೊ ಹಿಂದೆ ಮುಂದೆ ತನ್ನ ನಿಂದಿಸಿ ನುಡಿಯಲು ಕುಂದಾದದ್ದೇನೊ ಮಂದಿರದಲಿ ತಂದಿಟ್ಟಿರುವವಗೆ 1 ದುಸುಮುಸುಗುಟ್ಟುವ ಸತಿಸುತರಿಂದಲಿ ಹಸಗೆಟ್ಟದ್ದೇನೋ ಅಶನಾಚ್ಛಾದನ ತರಲಿಲ್ಲವೆನುತಲಿ ವ್ಯಸನ ಪಡುವುದೇನೊ ವಸುದೇವನಸುತನೊಶದೊಳಗಿರುವವಗೆ 2 ಘಾಸಿಯಿಂದಲಾಯಾಸ ಪಡುತ ಅವಾಸದೊಳಿದ್ದೇನೋ ಕಾಶಿ ಕಂಚಿ ಕಾಳಹಸ್ತಿ ಮೊದಲಾದ ದೇಶ ತಿರುಗಲೇನೋ ಸಂತೋಷದಲ್ಲಿರುವವನಿಗೆ 3
--------------
ಜಗನ್ನಾಥದಾಸರು
ಯಾಯಾ ವಾರವ ನೀಡಿ ಪ್ರೀಯದಿಂದಲಿ ಜನರು ಸ್ತ್ರೀಯರು ಮುದದಿಂದ ಪ ಸಾರುತ ಹರಿದಾಸ ಕೇರಿಯೊಳಗೆ ಬರಲು ಚೋರತನವ ಮಾಡಿ ಚುದಗು ಬುದ್ಧಿಯಲಿಂದ ದ್ವಾರವನಿಡದಿರಿ 1 ಬಂದಾ ಹರಿದಾಸನ ವಂದಿಸಿ ನಿಮ್ಮಯ ಮಂದಿರದೊಳು ಕರೆದು ತಂದಿಗಳೆಂದು ನಲು ವಿಂದಲಿ ಉಪಚರಿಸಿ 2 ಪರಲೋಕ ಬಂಧುಗಳೆ ಕರುಣವ ಮಾಡಿದಿರಿ ಕರ್ಮ ಪರಿಹರವೆಂದು ನಾ ಸಿರ ಬಗೆ ಕೊಂಡಾಡುತಾ 3 ಪತಿಮತೈಕ್ಯವಾಗಿ ಅತಿಶಯ ಭಕುತಿಯಲಿ ಗತಿಗೆ ಸಾಧನವೆಂದು ತಿಳಿದು ಈ ಧರ್ಮಕ್ಕೆ ಪ್ರತಿಕೂಲವಾಗದಲೆ 4 ವಕ್ಕಡತಿ ತಂಡುಲವ ಚಕ್ಕನೆ ನೀಡಲು ಮಕ್ಕಳು ಮರಿಗಳು ಸಹಿತ ನಿತ್ಯಾ ಸುಖವಕ್ಕು ಸಟಿಯಲ್ಲಾ 5 ಇಲ್ಲವೆಂದು ನುಡಿದರೆ ಪುಲ್ಲಲೋಚನವಪ್ಪಾ ಎಲ್ಲ ಕಾಲದಲಿ ನಿಮ್ಮಂಗಣದೊಳು ಇಲ್ಲವೆ ನಿಂತಿಪ್ಪದು 6 ಹಸ್ತು ಹರಿದಾಸ ಬಂದು ಹೊಸ್ತಿಲಿಂದಲೆ ತಿರಿಗಿ ವಿಸ್ತರಿಸುವೆ ಕೇಳು ಹರಿ ತೊಲಗುವಾ ದ್ವಿ ಮಸ್ತಕ ಭುಂಜಿಸುವಾ 7 ಒಂದೊಂದು ಕಾಳಿಗೆ ಒಂದೊಂದು ಕುಲಗೋತ್ರ ಮುಂದೆ ಉತ್ತಮ ದೇಹದಲಿ ಬಂದು ಸುಜ್ಞಾನದಿಂದಲೆ ಲೋಲಾಡುವರು 8 ಹಲವು ಪೇಳುವದೇನು ಸುಲಭಾವೆನ್ನು ಧರ್ಮ ಅಳಿದು ಹೋಗುವದಲ್ಲ್ಲ ಇದನು ವಿಜಯವಿಠ್ಠಲ ಬಲ್ಲ ಮಹಾಫಲವ9
--------------
ವಿಜಯದಾಸ
ರಕ್ಷಿಸೋ ಶ್ರೀಶ ಶ್ರೀ ಶ್ರೀನಿವಾಸ ಅಕ್ಷಯ ಗುಣಪೂರ್ಣ ಪಕ್ಷಿವಾಹನ ದೇವ ಅಕ್ಷರೇಶಾತ್ಮಕ ಮೋಕ್ಷ ದಾತನೆ ಹರಿ ಪ ರಕ್ಷಿಸೀಕ್ಷಣ ಲಕ್ಷ್ಮೀರಮಣ ಈಕ್ಷಿಸೀಗಲೆ ರಕ್ಷಿಸೆಮ್ಮನು ಕುಕ್ಷಿಯೊಳು ಜಗ ರಕ್ಷಿಸುವ ಹರಿ ಸೂಕ್ಷ್ಮ ಸ್ಥೂಲದೊಳಿರುವ ದೇವ ಅ.ಪ ಇಂದಿರೆರಮಣ ಗಜೇಂದ್ರವರದ ಹರಿ ಮಂದಹಾಸದಿ ಭಕ್ತವೃಂದವ ಪಾಲಿಪ ನಂದಕಂದನೆ ಬಂದು ರಕ್ಷಿಸು ಇಂದಿರಾ ಭೂದೇವಿ ರಮಣನೆ ಸುಂದರಾಂಗನೆ ಸುಮನ ಸರ ಹೃ- ನ್ಮಂದಿರದಿ ಶೋಭಿಸುವ ದೇವ 1 ನಂದನಕಂದ ಮುಕುಂದ ಹರೇ ಕೃಷ್ಣ ಕಂದರ್ಪ ಜನಕನೆ ಕರುಣಾನಿಧೆ ಹರಿ ಮದನ ಜನಕÀ ಸುಂದರಾಂಗ ಶ್ರೀಸುಮನಸರ ಪ್ರಿಯ ಬಂಧಮೋಚಕ ಭವವಿದೂರನೆ ಸಿಂಧುಶಯನ ಸರ್ವೇಶ ಶ್ರೀಹರಿ 2 ಕನಕ ಗರ್ಭನ ಪಿತ ಕರುಣಿಸೊ ನಿನ್ನಧ್ಯಾನ ಕನಸುಮನಸಲಿ ನಿನ್ನ ಸ್ಮರಣೆ ಎನಗಿತ್ತು ಕನಲಿಕೆಯ ಕಳೆದೆಮ್ಮ ಕ್ಷಣ ಬೆಂ- ಬಿಡದೆ ಕಾಪಾಡೆನ್ನುತ ಪ್ರಾರ್ಥಿಪೆ ಕಮಲನಾಭವಿಠ್ಠಲನೆ ಕರುಣದಿಕಮಲ ಮುಖಿಯೊಡಗೂಡಿ ಹರುಷದಿ 3
--------------
ನಿಡಗುರುಕಿ ಜೀವೂಬಾಯಿ
ರಂಗವಲಿದರಾಯಾ ನೀ ಸತ್ಸಂಗ ಪಾಲಿಸಯ್ಯಾ ಪ ಮಂಗಳಪ್ರದ ಪ್ರಥಮಾಂಗಾ ಪ್ರಥಮಾಂಗ ಮತಾಂಬುಧಿ ಕವಿ ಜಂಗುಳಿಗೆ ಅ.ಪ ಬುಧಜನನುತ ಮನುಜಾ ಪಂಚವದಾನಾರ್ಯರ ತನುಜಾ ಪಾದ ಪದುಮವ ಭಜಿಸದೆ ಅಧಮನಾದೆ ನಾ ಸದಮಲ ಕಾಯಾ1 ಕ್ಷಿತಿಯೊಳು ಪೂರ್ವದಿ ಪತಿತರ ಸಲಹಲು ಶತಕ್ರತುರಾಯರ ಸುತನೆನಿಸಿದ ಗುರು 2 ವೃಂದಾರಕ ಸ್ತೋಮಾ ವಂದಿತ ನಂದನಂದನ ಶಾಮ ಸ್ತಂಬ ಸು ಮಂದಿರದೊಳು ಘನ ಸಿಂದು ಮೆರೆವ ಗುರು 3
--------------
ಶಾಮಸುಂದರ ವಿಠಲ
ರಮಾವಿನುತ ವಿಠಲ ಪೊರೆಯಬೇಕೊ ಇವಳ ಪ ಕ್ರಮಾನುಸಾರ ತವದಾಸ್ಯ ಕಾಂಕ್ಷಿಪಳ ಅ.ಪ. ಪತಿಸುತರು ಹಿತರಲ್ಲಿ ವ್ಯತಿರೇಕ ಮತಿ ಕೊಡದೆಅತುಳ ಪ್ರೀತಿಯಲಿ ಅವರಂತರಾತ್ಮಕನಾ |ಹಿತ ಸೇವೆಯೆಂಬ ಸನ್ಮತಿಯನೇ ಕರುಣಿಸುತಕೃತ ಕಾರ್ಯಳೆಂದೆನಿಸೊ ಕ್ಷಿತಿರಮಣ ಹರಿಯೇ 1 ಭವಶರಧಿ ದಾಟಿಸುವ ಪ್ಲವವೆನಿಪ ತವನಾಮಸ್ತವನಗಳ ಸರ್ವತ್ರ ಸರ್ವಕಾರ್ಯದಲಿಹವಣಿಸುತ ನೀನಾಗಿ ಪ್ರವರ ಸಾಧನಗೈಸೊಪವಮಾನ ಸನ್ನಿಹಿತ ಭುವನ ಮೋಹನನೇ 2 ಪ್ರಾಚೀನ ಕರ್ಮಗಳ ಯೋಚಿಸಲು ಎನ್ನಳವೇಕೀಚಕಾರಿಪ್ರೀಯ ಮೋಚಕೇಚ್ಛೆಯನುಸೂಚಿಸುವುದೋ ಸವ್ಯಸಾಚಿಸಖ ಶ್ರೀಹರಿಯೆನೀಚೋಚ್ಚ ತರತಮವ ತಿಳಿಸಿ ಪೊರೆ ಇವಳಾ 3 ನಂದ ಗೋಪನ ಕಂದ ಇಂದಿರೇಶನೆ ಹೃದಯಮಂದಿರದಿ ತವರೂಪ ಸಂದರುಶನಾ |ನಂದವನೆ ಇತ್ತಿವಳ ಅಂದದಲಿ ಸಲಹೆಂದುಕಂದರ್ಪಪಿತ ನಿನ್ನ ವಂದಿಸುತ ಬೇಡ್ವೆ4 ಅನಿರುದ್ಧ ರೂಪಾತ್ಮಮಧ್ವಗುರು ಗೋವಿಂದ ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ರಾಮ ರಾಮ ರಾಮ ಶ್ರೀರಾಮನೆನ್ನಿರೊ ಪ್ರೇಮದಿಂದ ಶ್ರೀ ಜಾನಕಿ ಪ್ರೇಮನನೆನೆಯಿರೊ ಪ ಅಂದದಿಂದ ಈ ದಶರಥನಂದನೆಂದು ---- ಚಂದದಿಂದ ಚಲನೆಯಿಲ್ಲದೆ ಚಿತ್ತಸ್ವಸ್ಥದಿ ಕಾಲ ಕಳೆಯ ಹೊಂದಿ ದೇವರ ಚರಣ ಕಮಲಾ ನಂದ ಅರ್ಚಿಸುವ ಮಂದಿರದಿ ಭಜಿಸಿರೊ 1 ಕಾಮನಯ್ಯನ ಕಡಲೊಳಾಳ್ದÀ್ದನ ಕೂರ್ಮರೂಪ ವರಾಹನಾದನ ಸ್ವಾಮಿ ನರಹರಿ ವಾಮನ ಪರಶುರಾಮನಾದನಾ ರಾಮಕೃಷ್ನ ಬೌದ್ಧಕಲ್ಕಿ ನಾಮವುಳ್ಳ ನಾರಾಯಣನ ನೇಮದಿಂದ ನಿತ್ಯದಲ್ಲಿ ನಾಮ ಸ್ಮರಿಸಿರೊ 2 ಪಿತೃವಾಕ್ಯ ಪಾಲಿಸಿದವನು ಸತತ ಭಕ್ತರ ಸಲಹುತಿಹನು ಕ್ಷಿತಿಗೆ ಒಡೆಯನಾದ ದೇವನು 'ಶ್ರೀ ಹೊನ್ನ ವಿಠ್ಠಲಾ’ ನತಿಶಯದಿಂದಲಿ ಹೃದಯನಂಬಿ ಇರುವ ನರರಿಗೆ--------ಸದ್ಗತಿಯ ತೋರುವನಧಿಕ ಸಂಪನ್ನ 3
--------------
ಹೆನ್ನೆರಂಗದಾಸರು
ರಾಮನ ನೋಡಿರೈ ಮಂಗಳ ನಾಮನ ಪಾಡಿರೈ ಪ ಪೂಜಿತನ ಸೀತಾನ್ವಿತನ ಅ.ಪ ದಶರಥ ಗೃಹದಿ ಸುಜನರ ಸಲುಹಿ ಬೆಸಗೊಳಲಂದು ಸೀತಾವರನಾ 1 ಚಿಂತಿಸು ರಾಮನ ಶುಭಲಕ್ಷಣಗಳನೇಕ ಕರ್ಮವಿಪಾಕ ದೊಳಗೀ ವಿಷಯಾ- ಖರೆಯ ಯತಿಕುಲವರ್ಯ ಚರಣ ಸುಜನೋದ್ಧರಣ 2 ಕುಂದಣ ಮಣಿಮಯದ ಕಿರೀಟ ಯುಕ್ತಲಲಾಟ ಚಿನ್ಮಯಗಾತ್ರದಿ ಮಿನುಗುವ ರತ್ನಾಭರಣ ಜಿತರವಿ ಕಿರಣ ಹರಣ ಕರುಣಾಪೂರ್ಣ ರಿಪುಕುಲಮಥನಾ 3 ಶುಭಕಾಯಾಕವಿಜನಗೇಯಾ ಹೇಮ ಕೊಳುವ ಮನದೊಳು ಪೊಳೆವ ವೇದಾ ಮನಕತಿಮೋದಾ ಮುನಿ ಸಂಶೇವÀ್ಯ 4 ಶುಭಚರಿಯ ಬಹು ಆ ಮಂದಿರದಿ ಪಾರಾ- ಸುನಾದ ಕೇಳಲು ಮೋದ ಪೊಕ್ಕರು ಗೃಹದಿ 5 ಪೊಂದಿರೆ ಮುದವ ಪುಡಕಿದರಾಗೆ ಬಾಲವ ಹೀಗೆ ಕುಂಡಲಿಶಯನ ಶ್ರೀರಾಮನೆ ದರ್ಶನವಿತ್ತ ಲಕ್ಷ್ಮಣಸಹಿತ6 ಧರೆಯೊಳು ಬಹುಯತಿಕರ ಪೂಜಿತ ಪದಪದುಮಸ- ಧಾಮ ನಿರುತ ಶೇವಿಸುವ ಧರೆಸುರ ನಿಕರಕೆ ಕೊಡುವ ಬೇಡಿದ ವರವ ಶರಣು ಜನಕೆ ಸುರ ತರುವೆನಿಸಿದ ಸುರಪ್ರಿಯ ಕಾರ್ಪರನಿಲಯ ತರು ಪಿಪ್ಪಲಗತ ಶಿರಿನಾರಸಿಂಹನೆ ಈತ ಶ್ರೀರಘುನಾಥಾ7
--------------
ಕಾರ್ಪರ ನರಹರಿದಾಸರು
ರಾಯರೆ ಗತಿಯು ನಮಗೆ | ವಾಯುಮತೋದ್ಧಾರ ಶ್ರೀ ರಾಘವೇಂದ್ರಗುರು ಪ ಯುಕುತ ಮಾಗಿಹ ಚೂತ ಸುಕುಜ ಗತಿಯು | ಅಕಳಂಕ ಶ್ರೀಮಂತ್ರಮಂದಿರದಿ ನೆಲೆಸಿಪ್ಪ 1 ಋಷಿಗಳಿಗೆ ಪ್ರಣವೆಗತಿ ಝಷಗಳಿಗೆ ಜಲವೆ ಗತಿ ಸಸಿಗಳಭಿವೃದ್ಧಿಗೆ ಶಶಿರವಿ ಗತಿಯೊ ಶಿಶುಗಳಿಗೆ ಜನನಿಗತಿ ಪಶುಗಳಿಗೆ ತೃಣವೆ ಗತಿ ಅಸಮ ಮಹಿಮೆಯಲಿ ಮೆರೆವ ಮಿಸುನಿ ಶಯ್ಯಜರಾದ 2 ಕಾಮಿನಿ ಮಣಿಯರಿಗೆ ಕೈಪಿಡಿದ ಕಾಂತಗತಿ ಭೂಮಿ ಬುಧರಿಗೆ ಮಧ್ವಶಾಸ್ತ್ರ ಗತಿಯೊ ಧಾಮ ಭಯ ಪೋಪುದಕೆ ಶಾಮಸುಂದರವಿಠಲ ಸ್ವಾಮಿ ನಾಮವೆ ಗತಿಯೊ 3
--------------
ಶಾಮಸುಂದರ ವಿಠಲ
ರುದ್ರಕುಮಾರನ ಚರಣಕ್ವಂದನೆ ಮಾಡಿ ವಿದ್ಯಾಭಿಮಾನಿ ವಾಣಿಯ ಸು - ಪದ್ಮ ಪಾದಗಳಿಗೆ ಎರಗಿ ನಾ ಪೇಳುವೆ ಶುದ್ಧವಾಗಿ ಕೊಡು ಮತಿಯ 1 ಶ್ರಾವಣಮಾಸ ಶುಕ್ಕುರುವಾರ ಶುಭಮೂರ್ತೆ (ಮುಹೂರ್ತೆ?) ಕಾಲದಿ ಕಮಲಾಕ್ಷಿಯನು ಆಲಯದೊಳಗಿಟ್ಟಾದರದಿಂದ ಪೂಜಿಸೆ ಬೇಡಿದಭೀಷ್ಟ ನೀಡುವಳು 2 ಇರುತಿರಲೊಂದು ಪಟ್ಟಣದಲ್ಲಿ ರಾಜನು ತನಯರಿಲ್ಲದ ಕಾರಣವು ವಿವಹದುತ್ಸವಕೆಂದು ತೆರಳೋ ಪತಿಯ ಕಂಡು ತೆಗೆದಿಟ್ಟಳಾತನಾಯುಧವ 3 ಪಟ್ಟದ ಕತ್ತಿಯ ಬಿಟ್ಟು ಬಂದೆನೆಂದು ಅಟ್ಟಿಹ ತನ್ನ ದೂತರನು ನೆಟ್ಟನೆರಡು ಕಾಲು ಚಾಚಿ ಕುಳ್ಳಿರಲಾಗ ತಟ್ಟನೆ ದಾಟಿ ನಡೆದನು 4 ಮೂರು ತಿಂಗಳು ಗರ್ಭಸಾಕ್ಯಾ (ವಾಸಕ್ಕಾ?)ಗಿ ಬಂದಿತು ನೀನೀಗ ದಾಟಿ ಪೋಗುವರೆ ಕೇಳಿ ಸಂಭ್ರಮದಿಂದ ಹೇಳೆ ರಾಜಗೆ ಬಂದು ತಾಳಿದ ಪರಮ ಹರುಷವನು 5 ಸದ್ದು ಮಾಡದೆ ಸೂಲಗಿತ್ತಿ ಕರೆಸಿ ತಾ- ನಿದ್ದ ವಾರ್ತೆಗಳ ಹೇಳಿದಳು ಮುತ್ತಿಲು ತುಂಬ್ಹೊನ್ನು ಕೊಡುವೆ 6 ಹುಡುಕುತ ಬಂದಳು ಕಡೆಯ ಬಜಾರಕ್ಕೆ ಬಡವ ಬ್ರಾಹ್ಮಣನ ಮಂದಿರದಿ ಮಡದಿಗೆ ಮೂರು ತಿಂಗಳು ಗರ್ಭವಾಗಿದೆ ಕÀಡೆಹಾಯ್ಸಲೆನ್ನ ಕರೆಸೆಂದ್ಲು 7 ಮೂರು ತಿಂಗಳ ರಾಜನರಸಿಗೆ ಮೊಗ್ಗೆಯು ಏಳು ತಿಂಗಳು ಹೂವ ಮುಡಿಸಿ ಎಂಟು ತಿಂಗಳಿಗೆ ಶ್ರೀಮಂತದುತ್ಸವ ಮಾಡಿ ಬಂತಾಗ ನವಮಾಸಗಳು 8 ವಿಪ್ರನ ಮಡದಿಗೆ ಒತ್ತಿ ಬಂದವು ಬ್ಯಾನೆ ಕಟ್ಟಿ ಕಣ್ಣುಗಳ ನಿಚ್ಚಣಿಕೆ ಹತ್ತಿ ಇಳಿದು ಹಡೆದಳ ಗಂಡುಕುಮಾರನ ಎತ್ತಿಕೊಂಡೊಯ್ದಳಾಕ್ಷಣವೆ 9 ಕಲ್ಲು ಗುಂಡನೆ ಹಡೆದಿಯೆ ನೀನೆಂಬಂಥ ಸೊಲ್ಲು ಕೇಳುತಲೆ ತಲ್ಲಣಿಸಿ ಎಲ್ಲಿದ್ದರೆನ್ನ ಕುಮಾರನು ಸುಖಬಾಳಲೆಂ- ದಲ್ಲಿ ನೇಮವ ನಡೆಸಿದಳು 10 ಜಾತಕ ಬರೆಸಿ ಸಕ್ಕರೆ ಸಗಟದಿಂದ್ಹಂಚಿ ದಕ್ಷಿಣೆ ತಾಂಬೂಲ ಸಹಿತ ಬ್ರಾಂಬರಿಗೆಲ್ಲ ಇಟ್ಟು ಭೋಜನವ ಮಾಡಿಸಿದ 11 ನಾಮಕರಣ ಜಾವಳ ಜುಟ್ಟು ಉಪÀನಯನ ಪ್ರೇಮದಿಂದ್ವಿದ್ಯವ ಕಲಿಸಿ ಸೋಮನಂದದಿ ಹೊರಗ್ಹೊರಟು ತ- ಮ್ಮಮ್ಮನ ನೋಡಿ ಮೋಹಿಸಿದÀನಾಕ್ಷಣದಿ 12 ಕತ್ತಲೊಳಗೆ ಬರುತಿರಲು ಬಾಗಿಲ ಮುಂದೆ ಕಟ್ಟಿದ ಗೋವು ಕಾಣದಲೆ ವತ್ಸದ ಕಾಲು ತುಳಿಯಲಾಗ ಅದು ಬಾಯಿ ಬಿಟ್ಟೊದರಿತು ಭಯದಿಂದ 13 ಅಮ್ಮ ನೀ ಬಾರೆ ತಮ್ಮಮ್ಮನರಿಯದವ ನಮ್ಮನು ಬಲ್ಲನೆ ಒಮ್ಮ್ಯಲ್ಲದೆರಡುಬಾರ್ಯಾಲಿಸ್ಯದರ ಮಾತು ತಮ್ಮಿ ್ಹರಿಯರನು ಕೇಳಿದನು 14 ಮಂದಾಕಿನಿಯ ಸ್ನಾನವ ಮಾಡಿ ಬಂದರೆ ಸಂದೇಹ ಪರಿಹಾರವಾಗುವುದು ಹಾ- ಗೆಂದು ಹೇಳಿದ ಹಿರಿಯರ ವಾಕ್ಯವ ಕೇಳಿ ಗಂಗಾಯಾತ್ರೆಗೆ ತೆರಳಿದನು 15 ನಡೆದು ಬಂದನು ನಡುಮಾರ್ಗದಿ ಪಟ್ಟಣ ಹಡೆದ ಮನೆಯ ಬಾಗಿಲಲ್ಲಿ ಕೊಡಬೇಕು ನಮಗಿಷ್ಟು ಸ್ಥಳಗಳೆಂದೆನುತಲಿ ನುಡಿದು ಪವಡಿಸಿದ ತಾನಲ್ಲಿ 16 ಹೊರಗಿಂದ ಶೆಟವಿ ಬಂದಳು ಮಹಾಲಕ್ಷುಮಿ ಒಳಗಿಂದ ಬಂದಳು ಎನ್ನ ವರಪುತ್ರ ಇವನ ದಾಟಲು ನಿನ್ನ ಶಿರವು ಸಿಡಿದು ಸಾ(ಸಹ?)ಸ್ರೊ ್ಹೀಳಾಗೋದೆನಲು17 ಅದು ಕೇಳಿ ಶೆಟವಿ ತಾ ತಿರುಗಿ ಪೋಗುತಲಿರೆ ಬದಿಯಲ್ಲಿ ಬದುಕಿದ್ದ ಶಿಶುವು ಇದು ನಿನ್ನ ಪುಣ್ಯದಿಂದುಳಿದಿತೆಂದೆನುತಿರೆ ಅಧಿಕ ಸಂತೋಷವಾಗಿ ಹೊರಟು 18 ಭಾಗೀರಥಿಯ ಸ್ನಾನವಮಾಡಿ ತಾನು ಪ್ರ- ಯಾಗಕೆ ನಡೆತರಲು ಬ್ಯಾಗ ಮಾಡಿದ ದಾನಧರ್ಮಕಾರ್ಯಗಳ ತಾ- ನಾಗ ಕಂಡನು ಚತುರ್ಹಸ್ತ 19 ನಾಲ್ಕು ಹಸ್ತಗಳ ಕಂಡಕಾರಣೇನೆಂದು ವ್ಯಾ- ಕುಲದಿಂದ ಕೇಳಿದನು ಸಾಕಿದವರು ಹಡೆದವರುಂಟು ನಿನಗೆಂದ್ವಿ- ವೇಕಬುದ್ಧಿ ಅವರು ಹೇಳಿದರು 20 ಗೊತ್ತಿಲೆ ಬಂದನು ಪಟ್ಟಣದೊಳಗೊಂಡು ಹೆತ್ತರಂದಿನದ (?) ಮಂದಿರದಿ ಹೊಸ್ತಿಲೊಳಗೆ ಅಡ್ಡಮಲಗಿದ್ದ ಕಾಲಕ್ಕೆ ಮತ್ತಾಗ ಬಂದಳು ಶೆಟವಿ 21 ಚೊಚ್ಚಿಲ ಮಗನ ದಾಟಲು ನಿನ್ನ ಶಿರವು ಬಿಚ್ಚಿ ಸಾಸ್ರೊ ್ಹೀಳಾಗೋದೆನಲು ಲಕ್ಷ್ಮಿ ಮಾತಿಗೆ ತಿರುಗಿದಳೆನ್ನ ತುತ್ತಿಗೆ ಮಿತ್ರ್ಯಾದ ಪಾಪಿ ಎಂದೆನುತ 22 ಸತ್ಯವಂತನೆ ನಿನ್ನ ಪುಣ್ಯದಿಂದಿಬ್ಬರು ಪುತ್ರರು ಉಳುದÀರಂತಿಹರು
--------------
ಹರಪನಹಳ್ಳಿಭೀಮವ್ವ
ಲಕುಮಿವಲ್ಲಭ ಹರಿಯ ಮಂದಿರದಿಂದ ಬಕುಳೆ ಬಂದ ಪರಿಯ ನಗುತ ಸದ್ಯುಕುತಿಯಿಂದಲಿ ಪೇಳ್ದಳು ಪ. ಯಾರು ಬಲ್ಲರಿವನ ಸಂಸ್ಥಿತಿಯನ್ನು ನೀರೆ ನೀ ಪೇಳ್ವದನ ದಾರಿಯ ಪೇಳೆ ಜಾಣೆ 1 ಕ್ಷೀರಾಂಬುಧಿವಾಸನ ಸಕಲಗುಣ ವಾರುಧಿ ವರದೇಶನ ಸಾರಿ ಸಾರಿಗೆ ಸರ್ವ ಸುರಮುನೀಶ್ವರರೆಲ್ಲ ಸೇರಿ ಬಾಳುವರೀತನ 2 ಮಾತಿಗೆ ದೊರೆಯನಂತೆ ಮನೋಗತಿ ನೀತಿಯು ನಡೆಯದಂತೆ ಜಾತಿ ಗೋತ್ರ ಬಂಧು ಜನರಿಲ್ಲದವನಿಗಿನ್ಯಾತಕೆ ಪರಿಣಯವು 3 ಭೂತೇಂದ್ರಿಯ ಮನವು ಬಲಿಷ್ಠ ಮಹಾತತ್ವ ಹಂಕೃತಿಯು ಶ್ರೀ ತರುಣಿಯ ಗುಣ ತ್ರಯಮುಖ ತತ್ವ ಸಂಘಾತವೀತನಿರಲು 4 ಮನೆಯ ಕಟ್ಟಿದನೆಂಬೊರು ನಿಜವಾಗಿ ಪೇಳು 5 ಸಕಲ ಜಗನ್ನಿವಾಸ ಸಾಂಗೋಪಾಂಗ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 6 ಮನೆವಾರ್ತೆಗಳ ಬಿಟ್ಟು ಸಂಚರಿಸುವ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 7 ದಾಸರ ಪಾಲಿಪುದು ಎಂದೆಂದಿಗು ಶ್ರೀಶನ ಮಹಬಿರುದು ದೋಷದೂರನಾದರಿಂದ ಮೌನಿ ಮನೋವಾಸನಾಗಿಹ ನೆರದು 8 ಕುಲಹೀನನಾಗಿ ಕಲ್ಪಾಂತದೊಳಿರುವಗೆ ಲಲನೆಯ ನಿಪ್ಪುದೆಂತೆ 9 ಸುಧೆಯನು ತಾನೆ ತಂದ ಮುದವ ತೋರಿದ ಮುಕುಂದ 10 ಹೊಡದಾಡಿ ಬರುವನಂತೆ ಕೊಡುವದೆಂತೆ 11 ಮಗುವಿನ ಮಾತ ಕೇಳಿ ತಕ್ಷಣ ನರಮೃಗನಾಗಿ ಕೋಪತಾಳಿ ಬಗೆದು ಬಲಿಷ್ಠ ದೈತ್ಯನು ಸುಲಭದಿ ಬೇಗ ತೆಗೆದನು ಕರುಳನಂತೆ 12 ಸಿರಿಯನಾಳುವನಾದರೆ ದೈತ್ಯರ ಮುಂದೆ ತರಿವುದು ಸರಿಯೆ ನೀರೆ ಮರುಳು ಮಾತುಗಳಾಡಲ್ಯಾತಕೆ ಸುಮ್ಮನೆ ಥರವಲ್ಲ ಹಿಂದೆ ಸಾರೆ 13 ಕೃತ್ರಿಮ ದ್ವಿಜನಿವನು ಭೂಭಾರಕ ಕ್ಷತ್ರ ಸಮೂಹವನು ಶಸ್ತ್ರ ಪಿಡಿದು ಬುಡ ಕತ್ತ್ರಿಸಿ ಮಡುಗಳ ನೆತ್ರದಿ ರಚಿಸಿದನು 14 ದಾನವರನು ಗೆಲಲು ಚಪಲ ಬುದ್ಧಿ ವಾನರರನು ಒಲಿಸಿ ಪೇಳ್ವ ಹೀನವಾರ್ತೆಗಳೇನಿದು 15 ಧರೆಯ ಭಾರವನಿಳುಹಿ ಸಕಲ ಸುರವರ ಮುನಿಗಳ ಸಲಹಿ ತೆರವ ತೋರಿದ ಕೃಷ್ಣನು 16 ಜೈನರ ಸಭೆಯೊಳಗೆ ಮೈಯೊಳು ವಸ್ತ್ರಹೀನನಾಗಿರುವ ಬಗೆ ನಾನರಿಯೆನೆ ಬಹು ಮಾನ ಬಿಟ್ಟವನಿಗೆ ಏನೆಂದು ಮಗಳೀವನೆ 17 ಕೊಲುವನು ಖಡ್ಗದಲಿ ನಿಖಿಳ ಕುಲವನುದ್ಧರಿಸುವನು 18 ಏನೆಂದರು ಮನದಿ ನಿರ್ಣಯ ತೋರದೇನು ಮಾಡಲಿ ಕೆಳದಿ ಮಾನಿನಿ ಶಿರೋಮಣಿಯೆ 19 ದೋಷ ಲೇಶಹೀನನು ಸಕಲಗುಣ ಭೂಷಿತ ಶ್ರೀವರನು ಶೇಷ ಗಿರೀಶನೆನಲು ತನ್ನ ಮಗಳೀವ ಭಾಷೆಕೊಟ್ಟಳು ಧರಣಿ 20
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀದೇವಿಯ ಪ್ರಾರ್ಥನೆ ಶ್ರೀನಿವಾಸನ ಕರುಣಾನು ಸಂಸರಣಿ ಜ್ಞಾನ ಭಕ್ತಿಗಳನ್ನು ಪಾಲಿಸಂಭರಣಿ ಪ. ಅಜಭವಾದಿಗಳಿಗೆ ನಿಜಪದದಾಯಿನಿ ವೃಜಿನ ಸಮೂಹ ನಿವಾರಿಣಿ ಕುಜನ ಕುಠಾರಿಣಿ ಕುಂಜರ ಗಮನೆ ಪಾಲು ದಧಿವಾಸನ ಕೂಡಿ ಸದನದಿ ನೆಲೆಗೊಳ್ಳೆ 1 ಆರಿಗೆ ನಿನ್ನ ಕರುಣಾರಸ ದೊರೆವದೊ ನೀರಜಾಲಯೆ ನಿನ್ನ ಸೇರಿಕೊಂಡಿಹ ಎನ್ನ ವೈರಿ ಜನರು ಬೇಗ ಗಾರಾಗದುಳಿವರೆ 2 ನೀನೊಲಿಯಲೂ ಸರ್ವ ಮಾನವರೊಳಗತಿ ಮಾನ ಮಹತ್ವಾದಿ ಸದ್ಗುಣವೂ ತಾನಾಗಿ ಬರುವವಿಂನೇನೆಂದು ನಿನ್ನ ಮಹಿ- ಮಾನು ವರ್ಣನೆ ಮಾಳ್ಪೆ ದೀನ ದಯಾಕಲೆ 3 ಮಂದಿರದೊಳಗೆ ನೀ ನಿಂದು ನಗುತ ನಲಿ ವಂದ ನೋಡುತ ಮಿತ್ರ ಬಂಧುಗಳು ಮಂದರಧರ ತಾನೆ ನಿಂದು ರಕ್ಷಿಸನೆಂದಾ ನಂದ ಪೂರಿತ ಮನದಿಂದ ಸೇರಿರುವರು 4 ಸರಸಿಜನಾಭ ಶ್ರೀಹರಿಯು ನಿನ್ನನ್ನೆ ಮುಂ ದಿರಿಸಿ ಚತುರ್ವಿಧ ಪುರುಷಾರ್ಥವಾ ಕರುಣಿಪೆನೆಂದು ಕಂಠಸರದ ಮಧ್ಯೂರದಲಿ ಧರಿಸಿ ಶೋಭಿಪ ಶೇಷಗಿರಿವರ ಶಿಖರದಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲೀಲೆಯೊಳಾಡಿಸೊ ಹರಿ ನಿನ್ನ ಲೀಲೆಯೊಳಾಡಿಸೊ ಪ ಲೀಲೆಯೊಳಾಡಿಸೊ ಕಾಲಕಾಲದಿ ನಿನ್ನ ಶೀಲನಾಮವೆನ್ನ ನಾಲಗ್ಗೆ ಕರುಣಿಸು ಅ.ಪ ಮಂದಮತಿಯ ಹರಿಸೋ ಮನ ಗೋ ವಿಂದನೊಳೊಡಗೊಡಿಸೊ ಎಂದೆಂದಿಗು ಆ ನಂದನ ಕಂದನ ಪಾದ ಮನಮಂದಿರದಿರಿಸೊ 1 ಶೀಲಗುಣವ ಕಲಿಸೊ ಭವಗುಣ ಜಾಲವ ಪರಹರಿಸೊ ಪಾಲಿಸಿ ನಿಮ್ಮ ಧ್ಯಾನಲೋಲನೆನಿಸಿ ಯಮ ದಾಳಿ ನೀಗಿಸಿ ಭವಮಾಲೆಯ ಗೆಲಿಸೊ 2 ಮೋಸ ಮಾಯ ಹರಿಸೊ ವಿಷಯ ದಾಸೆಯ ಪರಿಹರಿಸೊ ಭಾಸುರಕೋಟಿಪ್ರಭೆ ಸಾಸಿರನಾಮದ ಶ್ರೀಶ ಶ್ರೀರಾಮ ನಿಮ್ಮದಾಸೆನಿಸೊ 3
--------------
ರಾಮದಾಸರು