ಒಟ್ಟು 8641 ಕಡೆಗಳಲ್ಲಿ , 130 ದಾಸರು , 5054 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಇ) ಗುರುಸ್ತುತಿಗಳು ಅತಿಮಧುರವದನ ಪಂಕೇಜ ದ್ವಿಜರಾಜ ಶ್ರೀ ಪತಿ ಪದಾಂಬುಜ ಮಧುಕರವಾದಿ ವಾದಿರಾಜಾ ಪ ಸಾರತರವಹ ವೇದಶಾಸ್ತ್ರದರ್ಥಗಳ [ನೆಲ್ಲ ಸೋರಿ] ಕ್ಕಿ ತದರ್ಥವನೆಲ್ಲ ಕೆಡಿಸೀ ಧಾರುಣಿಯ ಜನರಮತಿಗುಂದಿಸುವ ಖಳ ಮತ್ತ ವಾರಣ ಮೃಗೇಂದ್ರ ಭಳಿರೇ ವಾದಿರಾಜಾ 1 [ಚರಿತ]ವರ್ಣ ಧರ್ಮಾಶ್ರಯಗಳೆನಿಪ ಯೀ ಪರಿ ತಾರತಮ್ಯವನೆಲ್ಲ ಕೆಡಿಸೀ ಶೂನ್ಯ ಜನನಿಕರ ನಿರು[ತಪಾಲಿಪ] ಭಾಪುರೇ ವಾದಿರಾಜಾ 2 ನಿಖಿಳ ಜಗ ದೊಡೆಯ ವೈಕುಂಠ ಲಕ್ಷ್ಮೀ[ಕೇಶವ] ಉಡುಪಿಯಧಿಪತಿಕೃಷ್ಣನಂಘ್ರಿ ಪಂಕೇರುಹವ ವಿಡಿದೆ ದೃಢವಾಗಿ ಮಝರೇ ವಾದಿರಾಜಾ 3
--------------
ಬೇಲೂರು ವೈಕುಂಠದಾಸರು
(ಇ) ದಶಾವತಾರ ಅಂಜಿ ಬಿಡಲಿ ಬ್ಯಾಡೋ ಮುಂದಕೆ ಮುಂದೆ ಅಂಜಿ ಕೂಡಲಿ ಬೇಕೋ ಹಿಂದಕೆ ಪ ಅನಿಮಿಷಾಗತ ರೂಪ ನೋಡಿದ್ಯಾ ಮತ್ತೆ ಘನ ಕಮಲೇಶನೆಂದಾಡಿದ್ಯಾ ಒಳ್ಳೆ ವನಚದರೆಪಿ [?] ಯೆಂದೋಡಿದ್ಯಾ ಮತ್ತೆ ಮನುಜ ಮೃಗನ ಕಂಡಂಜಿದ್ಯಾ ನರ- ಸನುಮತದೀಕ್ಷಿಸು ಮತ್ಸ್ಯಕಚ್ಛಪ ರೂಪಾ ಧನುಜ ಸಂಹಾರಕಾಗಿ ವರನರಸಿಂಹರೂಪ 1 ವಟುರೂಪದಿ ದಿಟವೆಂದಾಡಿದ್ಯಾ ಮತ್ತೆ ಕಠಿಣಪರಷು ಕಂಡೋಡಿದ್ಯಾ ನರ- ವಟುರಾವಣಾದಿ ಕಂಡಂಜಿದ್ಯಾ ಮತ್ತೆ ಭಟ ಮುಷ್ಠಿಹರನಂದಾಡಿದ್ಯಾ ನರ- ಧಟ ಹರವಾಮನ ಪರಶುರಾಮರೂಪ ಸಟೆಯಿಲ್ಲ ತಿಳಿ ಶ್ರೀ ರಾಮಕೃಷ್ಣರೂಪ 2 ನನ್ನ ರೂಪವ ಕಂಡಂಜಿದ್ಯಾ ಮತ್ತೆ ಸುಜ್ಞ ಹಯವದನನೆಂದಾಡಿದ್ಯಾ ಕರಿ ವಿಘ್ನನಾಶಕ ಬೌದ್ಧಕಲಿಕೆಯು ಧ್ಯಾನ ಮಗ್ನನಾಗೆವರನ್ನು ಕಂಡಿದ್ಯಾ ನರ ಪ್ರಜ್ಞವಿರಲಿ ಪತ್ತುಪಾವನ ರೂಪನ ಸುಜ್ಞ ನರಸಿಂಹವಿಠ್ಠಲನಾಣೆ ಸಾರುವೆ 3
--------------
ನರಸಿಂಹವಿಠಲರು
(ಇ) ಶ್ರೀಕೃಷ್ಣಲೀಲೆ ಅಂಗಜನೈಯನು ಗೋಕುಲ ಪೋಗುವಾಗಕಂಗಳ್ಹಬ್ಬದ ಉಬ್ಬಿನೇನ ಬಣ್ಣಿಪೆನಾ ಪ ಎಳೆಗರುಗಳ ಝುಂಗುಗಳನ್ನು ಮತ್ತೆಮಲೆವ ಗೂಳಿಗಳ ಗೂರಾಟವನ್ನುಒಲಿವಾವಿನ ಕೆಚ್ಚಲು ಸಂದಣಿಯಲ್ಲಿನಲಿವ ಮರಿಗರುಗಳ ನೋಡುತಲಿ 1 ಆಡಿಸುವ ಮೊಗ ಬದಿಗಳ ತುರಿಸುತ್ತಝಾಡಿಸುವಾಕಾರ ಬೆದರು ನೋಟಏಡಿಸುವ ಹುಬ್ಬಿನ ಗೋವಳರಕೋಡಂಗಿ ಆಟಕ್ಕೆ ಕುಲುಕಿ ನಗುತ 2 ಒಂದು ಹುಬ್ಬೊಂದು ಕಿವಿಯನಲಗಿಸುತಮುಂದಣ ಚಂಡಿಕೆ ತಾಳದ ಗತಿಗೆಚಂದದಿ ಕುಣಿಸುವ ಭೃಂಗಿ ಆಟಕೆ ಗೋಪಸಂದೋಹಕೆ ಮೆಚ್ಚಿ ಬಲಗೆ ತೋರಿಸುತ 3 ಕೆಲರು ಕೋಗಿಲೆಯಂತೆ ಕೆಲರು ನವಿಲಿನಂತೆಕೆಲರು ಹಂಸದಂತೆ ಸಾರಸದಂತೆಗಳರವದಿಂ ಗೋಪರು ಕೂಗೆ ಋತುಗಳುನಳಿನಾಕ್ಷನ ಸೇವೆಗೆ ಕೂಡಿದಂತಿರೆ 4 ಒಂದೊಂದು ತಾಳಕ್ಕೆ ಒಂದೊಂದು ಪದಗತಿಒಂದೊಂದು ರಸಕ್ಕೆ ಮತ್ತೊಂದು ಕೈಗತಿಒಂದೊಂದು ಭಾವಕ್ಕೆ ಒಂದೊಂದು ನೇತ್ರವಾನಂದದಿ ಗೋವರ್ಧನ ನಾಟ್ಯವಾಡೆ 5 ಕಿನ್ನರ ಗಾನ ಗೋಪರ ಗೀತ ದೇವಕನ್ಯೇರ ನಾಟ್ಯ ಗೋಪರನಾಟ್ಯಚೆನ್ನಾರ ಕುಣಿಸುವ ಚಿಣ್ಣರ ಕಣ್ಣುಸನ್ನೆ ಝೇಂಕರಿಸುವ ಗೋಪರ ನೋಡುತ6 ನಾರಂದನ ವೀಣೆ ಗೋಪರ ಕಿನ್ನರಿಗೀರ್ವಾಣದುಂದುಭಿ ಗೋಪರ ಮುರಜಆ ರಂಭೆಯರಾಟ ಗೋಪರ ತಾಂಡವಕ್ಷೀರೋದಕದಂತೆ ಕಲೆಸಿ ಬೆರೆಸಿರೆ 7 ರಸತುಂಬಿ ತುಳುಕುವ ಕೊಳಲ ರವಂಗಳುಹಸುಗಳ ಕೊರಳ ಘಂಟೆಗಳ ನಿನಾದಎಸೆವೆಳಗಂದಿಯ ಅಂಬಾರವಂಗಳು ಪಸರಿಸೆ ಗೋವಳೆಯರು ಸಡಗರಿಸಿ8 ಜಂಗುಳಿ ಗತಿಯರ ಮುಖ ಕನ್ನಡಿ ಊರೋ-ಜಂಗಳೆ ಮಂಗಳ ಪೂರ್ಣ ಕುಂಭಗಳುಕಂಗಳೆ ನೀಲೋತ್ಪಲಂಗಳು ಕರಗಳೆತುಂಗ ಪಲ್ಲವ ತೋರಣದಂತೆಸೆಯೆ 9 ಚೆಂದದ ನೋಟವು ಮಂಗಳಾರತಿಯಾಗೆಮಂದಹಾಸವು ಪೂಮಳೆಯಾಗೆ ಆನಂದ ಪುಳಕಗÀಳೆ ಕೋಡಿಯಾಗೆ ಗೋಪವೃಂದವಿದಿರುಗೊಳ್ಳ ಬಂದರೊಲವಿಲಿ 10 ಕಂಗಳ ಕುಡಿ ನೋಟಂಗಳಿÀಂ ಸೆಳೆದುರಂಗನ ತಮ್ಮಂತರಂಗದೊಳಿಟ್ಟುಹಿಂಗದಾಲಂಗಿಸಿ ಸುಖಾಂಬುಧಿಯ ತ-ರಂಗದಿ ಗೋಪಾಂಗನೆಯರು ಮುಳುಗಿ11 ಗೋಪಿಜನರು ರಂಗಗೆ ಮರುಳಾಗಿರೆನೂಪುರ ಮರಕತ ಪ್ರಭೆ ಸಾರಳೆಯಾಗೆಆ ಪದ್ಮರಾಗವೆ ಕೆಂಪು ಕಾರಳೆಯಾಗೆಶ್ರೀಪದನಖ ಕಾಂತಿ ರಂಗವಲ್ಲಿಯಾಗೆ 12 ಬೃಂದಾರಕರು ಪೂಮಳೆಗರೆಯಲು ಬೇಗಬಂದಾಳಿಗಳು ಬೃಂದಾವನದಲ್ಲಿ ಮಕರಂದವನುಂಡು ಸ್ವರ್ಗವ ಹಳಿದಿಳೆಗೆಬಂದಳಿಂದಿರೆಯೆಂಬ ಸಂಭ್ರಮದಿಂದ 13 ತುರುಗಾತಿಯರ ನೋಟದ ಬೇಟಂಗಳುಹರಿಮುಖೇಂದವಿನಲ್ಲಿ ಚಕೋರಗಳುಹರಿನಾಭಿಸರೋವರದಲ್ಲಿ ಮೀನ್ಗಳುಹರಿಪಾದಪದುಮದಿ ತುಂಬಿಗಳಾಗೆ14 ಇತ್ತ ಗೋವಳರಾಟಕೆ ತಲೆದೂಗುತಅತ್ತ ದೇವತೆಗಳ ಸ್ತುತಿ ಕೇಳುತ್ತಇತ್ತ ಗೋವಳೆಯರ ನಗಿಸುತ್ತ ನಗುತ್ತಅತ್ತಿತ್ತ ಮುನಿಗಳ ಸ್ತುತಿ ಕೇಳುತ್ತ 15 ಕಂಜಾಸನ ನಮಿಸಲು ಕೈಹಿಡಿದೆತ್ತಿ ಮೃ-ತÀ್ಯುಂಜಯ ವಂದಿಸೆ ಬಾ ಯೆನ್ನುತ್ತಅಂಜಲಿ ಪುಂಜದ ಇಂದ್ರಾದಿಗಳನ್ನುಕಂಜನೇತ್ರಗಳ ಸನ್ನೆಯಲಿ ಮನ್ನಿಸುತ16 ಸಿರಿ ವನಿತೆಗೆ ವನಮಾಲೆ ಉಯ್ಯಾಲೆಮೊರೆವಳಿಕುಲಗಳ ರವ ಸಂಗೀತ ವರ ಮುತ್ತಿನ ಹಾರ ಚಾಮರ ಶ್ರೀಕೃಷ್ಣ-ನುರಮಧ್ಯವೆ ಮಂಟಪವಾಗೆಸೆಯೆ 17
--------------
ವ್ಯಾಸರಾಯರು
(ಇ) ಶ್ರೀಕೃಷ್ಣಸ್ತುತಿಗಳು ಜಯಕೃಷ್ಣ ಜಗದೀಶ ಜಯ ಶಶಿಕುಲಾಧೀಶ ವಿನುತ ವಾಣೀಶ ಜಯಣೀಶ ಜಯ ಜಯ ಪ ಕಮಲಭವನುತಿಪಾತ್ರ ಕಮಲಸಖನಿಭಗಾತ್ರ ಕಮಲರಿಪುಸಮವಕ್ತ್ರ ಕಮಲದಳನೇತ್ರ ಕಮಲಕರಧೃತಗೋತ್ರ ಕಮನೀಯ ಸುಚರಿತ್ರ ಕಮಲಾರಿಧರಮಿತ್ರ ಕಮಲಾಕಲತ್ರ 1 ನಂದಗೋಪಕುಮಾರ ನವನೀತದಧಿಚೋರ ಸುಂದರೀ ಕುಲಜಾರ ಸ್ಮರಸಮರ ಶೂರ ಕಂದರ್ಪಸಹಕಾರ ಕಾಮಿನೀವಾರ ಬೃಂದಾವನವಿಹಾರ ಭಕ್ತ ಮಂದಾರ 2 ಧರಣೀಧರಾಸ್ಫಾಲ ಮನಕರ ನಿಜಲೀಲ ನರಪೌತ್ರ ಪರಿಪಾಲ ನವ್ಯವನಮಾಲಾ ವರವ್ಯಾಘ್ರಗಿರಿಲೋಲ ವರದಾರ್ಯವಿಠಲ 3
--------------
ವೆಂಕಟವರದಾರ್ಯರು
(ಈ) ದೇವತಾ ಸ್ತುತಿ ಎಂಥ ಧನ್ಯಳೇ ಯಶೋದೆಎಂಥ ಧನ್ಯಳೇ ಪ ಎಂಥ ಧನ್ಯಳಮ್ಮ ನೀನುಎಂಥ ಪುಣ್ಯವಮ್ಮ ನಿನ್ನದುಕಂತುಪಿತನು ಕುವರನಾಗಿಸಂತೋಷವ ಪಡಿಸಿದನು 1 ಕಷ್ಟಪಟ್ಟು ಮುನಿಗಳೆಲ್ಲಎಷ್ಟು ತಪವ ಮಾಡಿದರುಇಷ್ಟು ಪುಣ್ಯ ಪಡೆಯಲಿಲ್ಲಸೃಷ್ಟಿಯೊಳಗೆ ಸ್ಪಷ್ಟವಿಹುದು 2 ಒಡಲೊಳಗೆ ಹೊರೆಯಲಿಲ್ಲಪಡೆಯಲಿಲ್ಲ ಅವನ ಪರರಒಡಲೊಳ್ಹುಟ್ಟಿ ಬಂದು ನಿನ್ನಹುಡುಗನಾಗಿ ಮೆರೆದ ನಮ್ಮ 3 ಇಡಿಯ ಜಗವನುದರದಲಿಹಿಡಿದು ಬಾಲನಾಗಿ ಗದುಗಿನೊಡೆಯ ವೀರನಾರಾಯಣತೊಡೆಯ ಮೇಲೆ ಆಡಿದನು 4
--------------
ವೀರನಾರಾಯಣ
(ಈ) ಲೋಕನೀತಿ-ತಾತ್ವಿಕ ಕೃತಿಗಳು ಕರ್ಮತ್ಯಾಜ್ಯವ ಮಾಡಿರೊ ಸನ್ಮಾರ್ಗದೋಳ್ ಕರ್ಮತ್ಯಾಜ್ಯವ ಮಾಡಿರೊ ಪ ನಿರ್ಮಲ ಮನಮೂಡಿ ಮರ್ಮಜ್ಯೋತಿಯ ಕೂಡಿ ಅ.ಪ ಕಾಮಕ್ರೋಧಗಳ ಸುಟ್ಟು ಸಂಸೃತಿಯಳಿದು ತಾಮಸಮತಿಯ ಬಿಟ್ಟು ಹೇಮದಾಸೆಗೆಮನ ಪ್ರೇಮಮಾಡದೆ ಭಿನ್ನ ನಾಮರೂಪವ ನೂಂಕಿ ರಾಮನೊಳ್ಮನ ನೆಟ್ಟು 1 ಪರಮಪಾವನಮಾದ ಶ್ರೀಹರಿಯಲ್ಲಿ ಬೆರೆಯುತಾನಂದದಿಂದ ಅರಿಗಳಾರರಸಂಗ ಕರಿಗಳೆಂಟರ ಭಂಗ ಕಿರಿದುಎಂಟರ ಅಂಗ ಭರದಿ ತರಿದು ಈಗ 2 ಧರೆಯೊಳ್ದುಷ್ಟರ ಮರದು ಮಹನೀಯರ ಚರಣಸೇವೆಯೊಳ್ಬೆರದು ವರಮಹದೇವನಪುರದ ಶ್ರೀರಂಗನ ನಿರುತ ನಂಬಿಯೆ ಸದ್ಗುರುವ ಸೇವಿಸಿ ದುಷ್ಟ 3
--------------
ರಂಗದಾಸರು
(ಈ) ಶ್ರೀರಾಮ ಏನು ಕಾರಣ ಮಲಗಿದಿಯೊ ಶ್ರೀನಾಥ ರಘುಕುಲೋದ್ಭವ ದರ್ಭಶಯನಾ ಪ ಸೀತೆ ಪೋದಳು ಎಂದು ಚಿಂತೆಯಲಿ ಮಲಗಿದೆಯೊ ಕೋತಿಗಳ ಕೈಯಲೆ ರಣವಾಗದೆಂದು ಮಲಗಿದೆಯಾ ಪಾತಕ ಹರದೈತ್ಯ ಭಂಜಾ ತಿಳುಪುವದು ಜ್ಯೋತಿರ್ಮಯರೂಪ ದರ್ಭಶಯನಾ1 ವನವಾಸ ತಿರಗಲಾರೆನೆಂದು ಮಲಗಿದೆಯೊ ವನಧೀಶ ಮಾರ್ಗವನು ಕೊಡನೆಂದು ಮಲಗಿದೆಯೊ ದನುಜ ಬಲ್ಲಿದನೆಂಬೊ ವ್ಯಾಕುಲದಿ ಮಲಗಿದೆಯೊ ಜನನ ಮರಣರಹಿತ ರಾಮ ತಿಳುಹುವದು ಪಾದ ಶ್ರೀದರ್ಭಶಯನಾ 2 ಅನಿಲಾರಿ ಅಹರಗೆ ಕರುಣಿಸಿ ಮಲಗಿದೆಯೊ ವನಜ ಸಂಭವಗೆ ನೀ ಒಲಿಯ ಬಂದು ಮಲಗಿದಿಯೊ ಮುನಿಗಳು ಸ್ತೋತ್ರವ ಮಾಡಲು ಹಿಗ್ಗಿ ಮಲಗಿದೆಯೊ ಜನನಾಥ ಜಾನಕಿಕಾಂತ ತಿಳುಪುವದು ಎನಗೊಲಿದ ವಿಜಯವಿಠ್ಠಲ ದರ್ಭಶಯನಾ 3
--------------
ವಿಜಯದಾಸ
(ಉ) ಆತ್ಮನಿವೇದನಾ ಕೃತಿಗಳು ಅಭಯ ಪ್ರದಾಯಕ ಶ್ರೀರಮೇಶ ಉಭಯವೇದ ಪೂಜಿತ ಪಾದಪದ್ಮ ಪ ಅನುಮಾನಿಸದಿರೊ ಶಿಶುವಾದೆನ್ನೊಳು ಏನತಿ ಕೋಪವೂ ಅಪ್ರಮೇಯದೇವ ಅ.ಪ ಅನ್ನ ವಸ್ತ್ರಗಳನೀವುದೆನಗೆ ಯೆಂದು ಯನ್ನ ತಂದೆ ಜಾಜೀಶನೆಂದು ಬಂದೆನಲ್ಲದೆ 1 ಇನ್ನು ಕಾಯ್ವರಾರಿರುವರಯ್ಯಾ ಮನ್ನಿಸುತ್ತಾ ನೀ ನಿನ್ನಕಂದನಾ ಬಿನ್ನಪವನು ಕೇಳು ಚೆನ್ನಕೇಶವಾ 2
--------------
ಶಾಮಶರ್ಮರು
(ಊ) ಗುರುನಮನ ಮುಳುಗಿ ಮೀಯೊ ಮನುಜ ಪ ದುರಿತ ಹರಿಸಿ ಸುಸ್ಥಿರ ಪದ (ಕರುಣಿಸುವಂಥ) ಅ.ಪ ಸ್ವಾರ್ಥವಾಗದಣ್ಣ || ಮುಕ್ತಿಸಂಪದಗಳ ಅರ್ತಿಯೊಳ್ ಪಡೆಯಲು 1 ಮೂರ್ಜಗಪತಿ ದಯವಿಡನಣ್ಣ || ಅರ್ಜುನ ಸಖನ ಪದಾಬ್ಜವ ಸೇರಲು 2 ಅಕ್ಷಯ ಸುಖವ ತನ್ನಿಚ್ಛೆಯೊಳ್ ಪಡೆದು ಮು-| ಮುಕ್ಷುವಾಗಿ ನಿಜ ಮೋಕ್ಷವ ಪಡೆಯಲು 3 ಸನ್ನಿಧಿ ಭಾಗ್ಯವನುಣ್ಣುತಿರುವರೆ 4 ಆದಿಮಧ್ಯಾಂತವಿಲ್ಲದ ಪದವಿಯೊಳ್ ಸ-| ದಾನಂದನಾಗಿ ವಿನೋದದೊಳಿರುವರೆ 5
--------------
ಸದಾನಂದರು
(ಊ) ಯತಿವರರು ಶ್ರೀ ಜಯತೀರ್ಥರು ಎದುರಾರೊ ಗುರುವೆ ಸಮರಾರೊ ಪ ಮದನ ಗೋಪಾಲನ ಪ್ರಿಯ ಜಯರಾಯ ಅ.ಪ ಕಡು ಗರ್ಜಿಸುವ ಕೇಸರಿಯಂತೆ ನಿಮ್ಮ ವಾದಗಡಣೆಯ ಕೇಳುತ ನುಡಿ ಮುಂದೋಡದೆಗಡಗಡ ನಡುಗುತ ಮಾಯ್ಗೋ ಮಾಯ್ಗಳುಅಡವಿಯೋಳಡÀÀಗೋರು ನಿಮ್ಮ ಭೀತಿಯಲಿ 1 ಕುಟಿಲ ಮತಗಳೆಂಬೊ ಚಟುಲಂಧಕಾರಕ್ಕೆಪಟುತರ ತತ್ವ ಪ್ರಕಾಶಿಕೆಂತೆಂಬಚಟುಲಾ ತಪದಿಂದ ಖಂಡಿಸಿ ತೇಜೋ-ತ್ಕಟದಿ ಮೆರೆದೆ ಬುಧಕಟಕಾಬ್ಜ ಮಿತ್ರ2 ಅಮಿತ ದ್ವಿಜಾವಳಿ ಕುಮುದಗಳರಳಿಸಿವಿಮತರ ಮುಖ ಕಮಲಂಗಳ ಬಾಡಿಸಿಸ್ವಮತರÀ ಹೃತ್ಸಂತಾಪಗಳೋಡಿಸಿವಿಮಲ ಸುಕೀರ್ತಿಯ ಪಡೆದೆಯೊ ಚಂದ್ರ 3 ವೇದ ಶಾಸ್ತ್ರಗಳೆಂಬೊ ಶೃಂಗಗಳಿಂದ ಸು-ಧಾದಿ ಗ್ರಂಥಗಳೆಂಬೊ ಸ್ತನದಿಂದೊಪ್ಪುತ ತತ್ವಬೋಧನೆಯೆಂಬ ದುಗ್ಧ ಶಿಷ್ಯವತ್ಸಂಗಳಿಗೆಆದರದಲಿ ಕೊಟ್ಟ ಯತಿಸುರಧೇನು 4 ವ್ಯಾಸ ಸೂತ್ರಗಳೆಂಬ ಮಂದರವನು ವೇದರಾಸಿಯೆಂಬ ವಾರಾಶಿಯೊಳಿಟ್ಟುಶ್ರೀ ಸರ್ವಜ್ಞರ ವಾಕ್ಯ ಪಾಶದಿ ಸುತ್ತಿಭಾಸುರ ನ್ಯಾಯಸುಧಾ ಪಡೆದೆ ಯತೀಂದ್ರ5 ವನಜನಾಭನ ಗುಣಮಣಿಗಳು ಸರ್ವಜ್ಞಮುನಿಕೃತ ಗ್ರಂಥಗಳವನಿಯೊಳಡಗಿರೆ ಸ-ಜ್ಜನರಿಗೆ ಟೀಕಾಂಜನದಿಂದ ತೋರಿಸಿಘನ ಸುಖಸಾಧನ ಮಾಡಿದ್ಯೊ ಧೀರ 6 ಅರ್ಥಿಮಂದಾರ ವೇದಾರ್ಥ ವಿಚಾರ ಸ-ಮರ್ಥ ಶ್ರೀಕೃಷ್ಣ ಪಾದಾಂಬುಜಲೋಲ ಪ್ರ-ತ್ಯರ್ಥಿ ಮತ್ತೇಭಕಂಠೀರವಕ್ಷೋಭ್ಯ-ತೀರ್ಥಕರ ಜಾತ ಜಯತೀರ್ಥ ಯತೀಂದ್ರ 7
--------------
ವ್ಯಾಸರಾಯರು
(ಊ) ಲೋಕನೀತಿ ಹರೇ ಪಾಹಿ ಮಾಂ ಸದಾ ಪ ಭವದೊಳೆನ್ನ ಬಳಲಿಸಲಿ ತವ ಹಿತವೇನಿಹುದಿದರೊಳು ತವಕದಿಂದ ಕೊಡು ದಯಾಳು ನವವಿಧ ಭಕುತಿ ನಿನ್ನೊಳು 1 ಲೋಕ ಪಾಲಕನೆಂಬೊ ಬಿರುದು ಈ ಕಾಲಕೆ ತೋರೊ ಒಲಿದು ಸಾಕಲಾರೆನೆನಲು ಬಿಡದು ನೀ ಕರುಣಿಸು ದÀಯಾಸಿಂಧು 2 ಧೀರ ಶ್ರೀ ಹನುಮೇಶವಿಠಲಾ ಮೀರಿದ ಕಾರ್ಯವು ಇದಲ್ಲಾ ಸಾರ ಮಾರ್ಗ ತೋರಿ ಸುಫಲಾ ಮಾರಜನಕ ಕೊಡು ಗೋಪಾಲ 3
--------------
ಹನುಮೇಶವಿಠಲ
(ಊ) ಲೋಕನೀತಿಯ ಕೃತಿಗಳು ಕೆಟ್ಟಗುಣಗಳು ನರನ ಅಟ್ಟಿಕೆಡಹುತಲಿಹುವು ಭ್ರಷ್ಟನೆನಿಸದೆ ಬಿಡವು ಇವನ ಪ ಸೃಷ್ಟಿಯೊಳಗಿವುಗಳಿಂದೆಷ್ಟುಜನ ಕೆಟ್ಟಿಹರೋ ಕಟ್ಟುತ್ತ ಮುಸಲದಿಂ ಕುಟ್ಟುತಿಹುವೂ ಅ.ಪ ಸರಿಧರೆಯ ಸ್ತ್ರೀಯರಂ ಕಾಯಿಸಲು ನರತಾನು ಹರಿಯಿಂದ ಹತನಾಗಿ ಹೋದಾ ವರವಿಪ್ರನಲಿ ಕ್ರೋಧಮಾಡಿದ ಬಕಾಸುರನ ತರಿದನಲ್ಲವೆ ಭೀಮ ತಾನು 1 ದಾಯವನು ಲೋಭದಿಂ ಕೌರವನು ಪಾಂಡವರಿ ಗೀಯದುದಕವನೇನು ಪಡೆದಾ ರಾಯದಶರಥ ತನ್ನ ಸತಿಸುತರ ಮೋಹವಿರೆ ಆಯುವಿಂ ಗತನಾಗಿ ಹೋದಾ 2 ಜಮದಗ್ನಿಯ ಹೋಮಧೇನುವಂ ಮದದಿಂದೆ ಕಾರ್ತಿವೀರ್ಯಾರ್ಜುನನು ಕೊಳಲು ಅಮಿತಬಲನಾಪರಶುಧಾರಿಯು ತಾನು ಸಮರದೊಳೆ ಸವರುತ್ತ ಅವನ ಕಳೆದ3 ಕೃಷ್ಣನನು ಮತ್ಸರದಿ ಶಿಶುಪಾಲ ಬಯ್ಯಲು ವಿಷ್ಣುಚಕ್ರವು ಕೊಂದಿತವನ ಬಾಣ ತಾನೀರ್ಷೆಯಿಂ ಭವಗವಂತನಿದಿರೇಳೆ ಪ್ರಾಣವುಳಿಯುತ ನಾಲ್ಕು ತೋಳ್ಗಳಾಯ್ತು 4 ವಾಸುದೇವನ ಮೇಲಸೂಯೆಯಿಂ ಪೌಂಡ್ರಕ ವಾಸುದೇವನೊಳು ಅಳಿದ ಕಂಡ್ಯಾ ದೂಷಣೆಯು ಡಂಬಗಳು ನಾಶನವ ಗೈಯುವುವು ಈಶ ಸುಜನರಿಗಾಗಿ ಭಾವಿಸುವ ಜಗದೀ5 ದರ್ಪದಿಂ ದಶಶಿರನು ಮರೆಯುತ್ತಲಿರಲಾಗಿ ಅಪಹಾರಗೈದ ಶ್ರೀರಾಮ ತಲೆಯಾ ರಿಪುಗಳಾ ಮಧು ಕೈಟಭರ ಮಮತೆಯನು ಉಪಮೆಯಲ್ಲಿದು ಮಾಯಿ ಮುರಿದ ನೋಡಾ 6 ನಿರ್ವಿಕಾರನ ನೆನೆದು ಗರ್ವವರ್ಜಿತರಾಗಿ ಸರ್ವವೂ ಹೆಜ್ಜಾಜಿ ಕೇಶವಾ ಯೆಂದು ಪರ್ವತೋದ್ಧರನಲ್ಲಿ ಕರ್ಮಾರ್ಪಣೆಯ ಮಾಡಿ ಒರ್ವನೇ ಜಗದೀಶನೆಂದು ನಮಿಸೀ 7
--------------
ಶಾಮಶರ್ಮರು
(ಋು) ಬ್ರಹ್ಮ ಕಂಜಲೋಚನ ಪ್ರಿಯಾ | ಮಧ್ವಾಖ್ಯರಾಯಾ | ಸಂಜೀವಧರಣ ಧನಂಜಯ ಪೂರ್ವಜ | ಅಂಜದ ದುರ್ವಾದಿ ಭಂಜ ಪೂಭಂಜನ ಪ ಯಾಗಾಭಿಮಾನಿಗಳನು | ಯೋಗದಿಂದಲಿ ಪಡೆದಾ | ಆಗಮತತಿ ವಂದ್ಯ ಅನಿಂದ್ಯಾ | ಭಾಗತ್ರಯದಲ್ಲಿ ವಿ | ಪೆತ್ತಾಸೆ ಚಿತ್ತ | ಭಾಗವೆ ನಿನ್ನ ವೈ | ಭೋಗದ ಚರಣಕೆ | ಸಾಗರ ಹಾರಿದ ಹೇ ಗುಣಪೂರ್ಣನೆ | ರಾಗ ಭಕುತಿಯಿಂದ ಭೋಗದೊಳಗೆ ಮೇಲು | ಬಾಗಿಲ ಸಾರುವ ವೇಗವನೀಯೋ 1 ನಿತ್ಯ ಪ್ರವಾಸ ರೂಪಾ | ವ್ಯಕ್ತಿ ಜ್ಞಾನ ಪ್ರತಾಪಾ | ಸುತ್ತು ತುಂಬಿದೆ ಕೀರ್ತಿ ಇತ್ತು ಸಂತತಾ | ಸ್ಛೂರ್ತಿ ಕಿತ್ತಿ ಬಿಸಾಟು ಪಂಕಾ | ನಿಷ್ಕಲಂಕಾ | ರಿಪುಬಲ | ಕತ್ತರಿಸಿದಿ ಭೀಮಾ | ಉತ್ತಮನೆಂಬೋದೀ ಉತ್ತರ ಬರಲಿ2 ದುರುಳ ಸಮೂಹವೆಂಬೋ | ಸ್ಮರನಾ ನಿನ್ನಯ ಮೈಗೆ ಈ ಕೈಗೆ | ಭರದಿಂದ ಸೋಂಕಲು | ವರಗಲ್ಲಿನ ಮೇಲೆ ವರಸಿದಂತಾಗುವದೊ ಇದಹುದೋ | ಅರುಹಿದ ಆನಂದ | ವರ ಮುನಿಯೇ ವಿ | ಸ್ತರ ಕರುಣಾಂಬುಧಿ ವಿಜಯವಿಠ್ಠಲನ್ನ ಚರಣವ ತೋರಿಸಿ ತೊರೆಯಯ್ಯಾ ಪ್ರಾಣಾ 3
--------------
ವಿಜಯದಾಸ
(ಎ) ಹರಿದಾಸವರ್ಗ ಏನು ಸುಖವೊ ಎಂಥಾ ಸುಖವೊ ಹರಿಯಧ್ಯಾನ ಮಾಡುವರ ಸಂಗ ಪ ತಂಬೂರಿ ಮೀಟುತ ದ್ವಯಅಂಬಕದಿ ಬಾಷ್ಪ ಬಿಂದುತುಂಬಿ ಆನಂದದಿಂದಸಂಭ್ರಮವಾಗಿಹರ ಸಂಗ 1 ಗೆಜ್ಜೆಯ ಕಾಲಲ್ಲಿ ಕಟ್ಟಿಲಜ್ಜೆಬಿಟ್ಟು ಹರಿಯ ನಾಮಗರ್ಜನೆ ಮಾಡುತ್ತ ಅಘ-ವರ್ಜಿತರಾಗಿಪ್ಪರ ಸಂಗ 2 ಪುಷ್ಪದಿ ಸುಗಂಧ ಹ್ಯಾಗೆಇಪ್ಪುದೊ ತದ್ವತು ಜಗ-ದಪ್ಪ ಬ್ರಹ್ಮಾದಿಗಳೊಳಗಿಪ್ಪನೆನ್ನುವರ ಸಂಗ 3 ತುಚ್ಛ ವಿಷಯವ ತೊರೆದುನಿಶ್ಚಲ ಭಕುತಿಯಿಂದಅಚ್ಯುತಾನಂತನ ಪಾದಮೆಚ್ಚಿಸಿದವರ ಸಂಗ4 ದರ್ವಿಯಂತೆ ಜೀವವನ್ನುಸರ್ವತ್ರ ತಿಳಿದು ಶೇಷಪರ್ವತವಾಸನ ಕಂಡುಉರ್ವಿಯೋಳಿಹರ ಸಂಗ 5 ನಡೆವುದು ನುಡಿವುದುಕೊಡುವುದು ಕೊಂಬುವುದುಒಡೆಯನ ಪ್ರೇರಣೆಯೆಂದುನುಡಿದು ಹಿಗ್ಗುವರ ಸಂಗ 6 ಸಿರಿ ಕೃಷ್ಣ-ಗಿಷ್ಟರಾಗಿಪ್ಪರ ಸಂಗ7
--------------
ವ್ಯಾಸರಾಯರು