ಒಟ್ಟು 460 ಕಡೆಗಳಲ್ಲಿ , 74 ದಾಸರು , 413 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮಿಪೆ ನದಿ ದೇವತೆಗಳೇ | ನಿಮಗೆ ಪ. ನಮಿಪೆ ನದಿ ದೇವತೆಗಳೇ ನಿಮ್ಮ ಚರಣಕ್ಕೆ ಕಮನೀಯ ಗಾತ್ರೆಯರೆ ಕಂಜದಳ ನೇತ್ರೆಯರೆ ಸುಮನರ ವಂದಿತರೆ ಸುಗುಣ ಸಂಪನ್ನೆಯರೆ ಅಘ ಹರೆಯರೇ ಕಮಲನಾಭನ ಅಂಗೋಪಾಂಗ ಸಂಜಾತೆಯರೇ ಅಮರ ಭೂ ಪಾತಾಳ ಲೋಕ ಸಂಚರೆಯರೆ ನಮಿಸಿ ಸ್ನಾನವಗೈವ ನರರ ಪಾವನಗೊಳಿಪ ಅಮಿತ ಪಾವಿತ್ರತರರೇ 1 ಗಂಗೆ ಗೋದಾವರಿ ಯಮುನೆ ಸರಸ್ವತಿ ಸಿಂಧು ಮಂಗಳಾಂಗೆ ಕೃಷ್ಣ ಭೀಮರಥಿ ಪಲ್ಗುಣಿ ಸಂಗಮ ತ್ರೀವೇಣಿ ಸರಯು ಗಂಡಿಕಿ ಸೀತ ತುಂಗಭದ್ರಾ ನಾಮರೇ ಅಂಗ ಮಾಲಾಪಾರಿ ಕಾವೇರಿ ಕಪಿಲೆ ನರ ರಂಗ ಪಾವನ ಗೈವ ಪುಷ್ಕರಗಳಭಿಮಾನಿ ಅಂಗನೆಯರೆÀಲ್ಲರಿಗೆ ಅಭಿವಂದಿಸುವೆ ಅಘವ ಹಿಂಗಿಸುವುದೆಂದು ಮುದದೀ 2 ಬಂದು ಸ್ವಪ್ನದಿ ಮಾಘ ಶುದ್ಧ ನವಮೀ ಭರಣಿ ಸಂಯೋಗದ ಪರ್ವವೆಂದು ಭದ್ರೆಲಿ ಸ್ವಾನ ವಿಂದು ಗೈದೆವು ಎಂದು ಮುಂದೆ ಕುಳ್ಳಿರೆ ನಾನಾ ನಂದದಿಂ ಕಂಡು ನಿಮ್ಮಾ ಸುಂದರಿಯರೇ ನಿಮ್ಮ ಸಂದರ್ಶನದಿ ಫಲವು ಬಂದುದೆನಗೆಂದು ನಾನಂದ ವಚನಕೆ ನಲಿದು ಒಂದು ಅರಿಯದ ಎನಗೆ ತಂದು ಕೊಟ್ಟಿರಿ ಸ್ನಾನ ದಿಂದ ಬಹು ಪುಣ್ಯ ಫಲವಾ 3 ಹರದಿಯರೆ ಕಂಡೆ ನಿಮ್ಮರವಿಂದ ಮುಖ ಶುಭ್ರ ಸರಿತು ದೇವತೇಗಳೇ ಗುರು ಕೃಪೆಯ ಬಲದಿಂದ ಸಿರಿ ನದಿಗಳೇ ಜಗದಿ ಭರದಿಂದ ಪರಿದು ಸಾಗರವ ಕೂಡುವ ತ್ವರದಿ ಪರಿಪರಿಯ ಜಲ ಜಂತು ಸಂಸಾರಿ ಸಂಗೆಯರೆ ನರರು ಬಣ್ಣಿಸಲಳವೆ ಕರುಣಿ ನಿಮ್ಮಯ ಮಹಿಮೆ ಸಿರಿಕಾಂತ ಪ್ರಿಯಸುತೆಯರೇ 4 ಶ್ರೇಷ್ಟನದಿ ಅಭಿಮಾನಿ ಸತಿಯರೇ ಎನ್ನ ಅಘ ಸುಟ್ಟು ನಿರ್ಮಲ ಭಾವ ಕೊಟ್ಟು ಹೃತ್ಪದದಲಿ ವಿಷ್ಣು ಮೂರ್ತಿಯ ಕಾಂಬ ಶ್ರೇಷ್ಟ ಜ್ಞಾನದ ಮಾರ್ಗ ಕೊಟ್ಟು ಸದ್ಭಕ್ತಿ ಭರದೀ ಚಿಟ್ಟನೇ ಚೀರಿ ದಾಸ್ಯದ ಭಾವದಲಿ ಕುಣಿದು ಶ್ರೇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲನ ಪದ ಮುಟ್ಟುವೊ ವಿಜ್ಞಾನ ಪ್ರವಹ ರೂಪದಿ ವಲಿದುದಿಟ್ಟಿಯರ ಸಂತೈಸಿರಿ 5
--------------
ಅಂಬಾಬಾಯಿ
ನಮೋ ನಮೋ ಗುರು ಸುಶೀಲೇಂದ್ರ | ಶ್ರೀ ಸಂ ಯಮಿ ಕುಲೋತ್ತಮ ಮಧ್ವಮತ ಸುಮತಾಬ್ಧಿ ಚಂದ್ರ ಪ ಶ್ರೀ ಸುವೃತೀಂದ್ರ ಕುಮಾರ | ಜಿತ ಪೂತರ ಭಾಸುರ ಚರಿತ ಉದಾರ ಭೂಸುರ ಸೇವಿತಧೀರ | ಮೂಲ ದಾಶರಥಿಯ ಪಾದಾಂಭೋಜಭಾರ 1 ಶ್ರೀರಾಘವೇಂದ್ರ ಪ್ರಿಯ ಗುರುವರದ ತೀರ ಶೋಭಿಪರಿತ್ತಿ ಸುಕ್ಷೇತ್ರ ನಿಲಯ ಭವ | ದೂರ ದಯಾಂಬುಧಿ ದ್ವಿಜಕುಲ ಪರಿಯ 2 ಶಮಸುಂದರ ದಾಸಾಗ್ರಣಿಯೆ | ಬುಧ ಸ್ತೋಮವಂದಿತ ಪದನತ ಸುರಮಣಿಯೆ ಈ ಮಹಿಯೊಳು ನಿನಗೆಣೆಯೆ | ಮಮ ಸ್ವಾಮಿ ಕುಮತ ಕುಲತಮಗೆ ದ್ಯುಮಣಿಯೆ 3
--------------
ಶಾಮಸುಂದರ ವಿಠಲ
ನಮೋ ನಮೋ ನರಹರಿಪ್ರಿಯಾನರಸಿಂಹಾರ್ಯ ಪಗಲಗಲಿ ಶ್ರೀ ನರಸಿಂಹಾರ್ಯ ಕರುಣದಿಪೊರೆಸದ್ಗುರುವರ್ಯಾ ಶರಣು ಬಂದೆನು ತಂದೆಮಾಡೊ ದಯಾ ತಂದೆ ಮಾಡೊ ದಯಾಪುನರ್ಜನ್ಮ'ತ್ತ ಮಹಾರಾಯಾ 1ನಿಮ್ಮ ಚರಿತ್ರವೆನಗೆ ಸ್ಪೂರ್ತಿನಿಮ್ಮ ಸ್ಮರಣೆ ಜ್ಞಾನದ ಜ್ಯೋತಿನಿಮ್ಮ ಅನುಗ್ರಹವೆ ಕೀರ್ತಿನಿಮ್ಮ ಪಾದವೇ ಎನಗೆ ಗತಿ 2ನಿ'್ಮುಂದಲೇ ಗಾಲವ ಕ್ಷೇತ್ರನಿಮ್ಮ ಮನೆಯು ಸದಾ ಅನ್ನಛತ್ರನಿಮ್ಮ ಆಶ್ರಯವೇ ಜ್ಞಾನ ಸತ್ರನಿಮ್ಮ ಸಂಚಾರವೇ ಮಹಾಯಾತ್ರಾ 3ಅಷ್ಟೋತ್ರ ಶತಕುಂಭ ಸ್ನಾನಾ ನಿತ್ಯ ಅಷ್ಟೋತ್ರರ ಶತ ಕುಂಭಸ್ನಾನಾಕೃಷ್ಣಾ ಭಾಗೀರಥಿ ನನ್ನಿಧಾನಾ ಸೀತಾರಾಮ ಪ್ರತಿಮಾರ್ಚನಾನಿತ್ಯ ರಾತ್ರಿ ಸುಭೋಜನಾ 4ಮುದ್ಗಲಾರ್ಯ ಬಾಬಾರ್ಯನಮೋ ಸದ್ಗುರು ನರಸಿಂಹಾರ್ಯ ನಮೋಸದ್ಭಕ್ತಪ್ರಿಯ ಭೂಪತಿ'ಠ್ಠಲ ಗಲಗಲಿ ನರಹರಿತೊರ'ಯ ನರಹರಿ ಶೂರ್ಪಾಲಿಯ ನರಹರಿ ನಮೋ ನಮೋ 5
--------------
ಭೂಪತಿ ವಿಠಲರು
ನಮೋ ನಮೋ ನಾರಾಯಣ ಸನ್ನುತ ಸುಗುಣ ಗುಣಾರ್ಣವ ಸುಮನಪತಿ ಶ್ರೀ ಭೂದುರ್ಗಾರಮಣ ಮಾಂಪಾಹಿ ಪ ಲೋಕೇಶ ವಿಧಾತಜನಕ ರ ತ್ನಾಕರಮಥನ ಜಗದಾಘಪಹ ಶ್ರೀಕಂಠ ಪಿತಾಮಹ ಮದನನೇಕ ಸುಲಾವಣ್ಯ ಆಕಾಶ ತರಂಗಿಣಿ ಪಿತ ಕರುಣಾಕರ ಕೌಮೋದಕಿಧರ ಧರಣಿ ಕುವರಾಂತಕ ಕರುಣದಿ ಚಿತ್ತೈಸು ನೀ ಹಸಿಗೆ ಶೋಭಾನೆ 1 ಅರದೂರಾಬ್ಜ ಭವಾಂಡೋದರ ಶರಣಾಗತ ಸವಿ ಪಂಜರ ಅಂ ಬರ ಭೂ ಪಾತಾಳದಿ ವ್ಯಾಪ್ತಾ ಜರಮೃತ್ಯು ವಿದೂರ ಕರಿವರ ಪ್ರಭಂಜನ ಪೀತಾಂ ಬರಧರ ಖಳಕುಲವನ ವೈಶ್ವಾ ನರ ನಾರದನುತ ಮಹಿಮನೆ ಚಿತ್ತೈಸು [ಹಸೆಗೆ] 2 ಸತ್ವರಜಸ್ತಮ ಜೀವರ ತತ್ ಸಾಧನವರಿತವರಗತಿ ಗ ಳಿತ್ತು ಪೊರೆವ ವಿಬುಧವರದ ವರಸತ್ಯವತಿ ಸೂನು ಉತ್ತಮ ಪುರುಷನೆ ಚೇತನ ಜಡದ ತ್ಯಂತವಿಭಿನ್ನ ವಿಜಯ ಸಖ ಸತ್ಯಸುಕಾಮ ಕಮಲನಯನನೆÉ ಚಿತ್ತೈಸೊ [ಹಸೆಗೆ]3 ವಾಸವತನುಸಂಭವ ಸಾರಥಿ ವೀಶುದ್ಭುಜ ವಿಧೃತ ಸುದರ್ಶನ ದಶಾರ್ಹ ದಿವಕರನಿಭ ಸಂಕಾಶÀ ಸುಭದ್ರಾತ್ಮಾ ವಾಸುಕಿ ಪರ್ಯಂಕಶಯನ ಹರಿ ವ್ಯಾಸಕಪಿಲ ದತ್ತಾತ್ರಯ ಮಹಿದಾಸ ವೃಷಭರೂಪ ರಮೆಯರಸ ಚಿತ್ತೈಸು [ಹಸೆಗೆ]4 ಪಾಂಡವ ಸಖ ಪತಿತ ಸುಪಾವನ ಚಂಡಾಂಶು ನಿಶಾಕರ ಪಾವಕ ಮಂಡಲದೊಳಗತಿ ಬೆಳಗುವ ಕೋದಂಡ ಧೃತ ಕರಾಬ್ಜ ಕುಂಡಲ ಮಂಡಿತ ಗಂಡಸ್ಥಳ ಖಂಡಮಹಿಮ ಖೇಚರ ಪುರಹರ ಗಂಡುಗಲಿ ಜಗನ್ನಾಥ ವಿಠಲ ಚಿತ್ತೈಸೋ [ಹಸೆಗೆ]5
--------------
ಜಗನ್ನಾಥದಾಸರು
ನಮ್ಮ ಗುರುರಾಯಾ | ಪೊಡವಿಗೆ ನಡೆ ತಂದನು ಪ ಪೊಡವಿಗೆ ನಡೆ ತಂದನು| ಎಡ ಬಲದಲಿ ಭಾಗವತರ ಮೇಳದಿಂದಲಿ | ಪರಿ ಪರಿಯಾಟವ | ಆಡುತ ಪಾಡುತ ನಲಿದಾಡುತಲಿ 1 ಭವ ರೋಗಿಗಳೆಲ್ಲರು | ತ್ವರಿತದಿ ಬನ್ನಿರೋ ಯನುತಲಿ ಹರಿನಾಮಾ | ಭೇರಿಯ ಹೊಯ್ಸುತ ತತ್ವೋಪದೇಶದ | ಕರದಲಿ ಔಷಧವನೆ ಹಿಡಕೊಂಡು2 ಬಂದವರಿಗೆಲ್ಲ ಬೇಡಿದ್ದು ಕೊಡುತಲಿ | ಮಂದ ಮತಿಗಳವಗುಣವನೆ ಬಿಡಿಸುತ | ಸಾರಥಿ | ಎಂದೆಂದು ಶರಣರಿಗಾಧಾರಿಯಾಗಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರಹರಿ ಬಂದು ಮೂಡಿದಾ ಶರಣಗದಯವಾ ಮಾಡಿದಾ ಪ ಛಟ ಛಟ ಶಬ್ಧವ ತೋರುತಾ ಪಟ ಪಟ ತಾರೆಗಳಾರಲು ತಾ 1 ಗುಡ ಗುಡ ಗುಟ್ಟಿಬಾಯಾಳಗಗ್ನಿಯ ಧಡ ಧಡ ಕಿಡಿಗಳನುಗುಳುತಾ ಗಡ ಬಡಿಸಲು ಸಮುದ್ರಗಳೆಲ್ಲವು ಬುಡು ಬುಡು ಗುಳ್ಳೆಗಳೇಳಲು ತಾ2 ಫಳ ಫಳ ಭೂಮಿಯು ಬಿಚ್ಚಿತು ಗಿರಿಗಳು ಹಳ ಹಳ ಕಲ್ಲುಗಳುದುರಿದವು ಭಳ ಭಳ ಭಾಸಮ ಗಡಿಶತ ತೇಜನ ಥಳ ಥಳ ಮಿಂಚುಗಳಾಡಿದವು 3 ಮಾಗ್ಗಿತು ಧನಿಯನು ಕೇಳುತ ಕೇಳವು ಮುಗ್ಗಿತು ಕಂಗಾಣದೆ ಹಲವು ಅಗ್ಗಳ ದೈತ್ಯರು ದೂರದಿ ಬಿಸುಟರು ನುಗ್ಗಾದವು ಅವರಾಯುಧವು 4 ಭವ ಭವ ಸುರಮುನಿ ಇಂದ್ರರು ಇರದೆವೆ ಮುರಿಯನು ಸಾರಿದಿರು ಗುರುವರ ಮಹಿಪತಿ ನಂದನಸಾರಥಿ ಶರಣಿಂದೆನುತಲಿ ಹೊಗಳಿದನು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರಹರಿಯೆ ಪಾಲಿಸೈ ಪ ನರಹರಿಯೆ ಪಾಲಿಸೈ ಕರಿವರದನೆ ಕಲುಷಾಂತಕವರ ಅ.ಪ ಕರಚರಣಗಳೆರಡರ ಪರಮೊದಗಿರೆ ಹರಿಹರಿ ನಿನಗಿದ ನೊರೆವೆಹುದೊ 1 ಭಜಿಪ ಭಜಕ ನಿಜದ್ವಿಜಗುಣಮಣಿ ಹಯಧ ಸಾರಥಿ 2 ಸಿರಿಧರ ಮುರಹರ ಮುನಿಜನ ಭಯ ಹರ ಕರುಣ ತುಲಸೀರಾಮಾ ಗುರುವೆ ತಾನಾದ 3
--------------
ಚನ್ನಪಟ್ಟಣದ ಅಹೋಬಲದಾಸರು
ನಾ ನಿಮ್ಮ ದಾಸರ ದಾಸಈ ನರರ ಪಾಡೇನೆರಡು ದಿನದ ಸಂಸಾರ ಪ ಕರೆಸು ಕಂಬದಿ ಎಂದು ವಾದಿಸಿದವ ಕೆಟ್ಟಪರಹೆಣ್ಣಿಗಾಸೆ ಪಟ್ಟು ಕೀಚಕ ಕೆಟ್ಟಬರಿದೆ ದ್ರೌಪದಿಗಾಗಿ ದುರ್ಯೋಧನ ಕೆಟ್ಟಉರಿ ಹಸ್ತವ ಬೇಡಿ ಭಸ್ಮಾಸುರ ಕೆಟ್ಟ 1 ಆಡಿದ ಮಾತಿಗೆ ಬಲಿ ನೀಡಲಾಗಿ ಕೆಟ್ಟಮಾಡುವ ದಾನ ತಡೆದು ಶುಕ್ರನು ಕೆಟ್ಟಕೂಡಿದ ಶಿರವರಿದು ರೂಢಿಗೀಶ್ವರ ಕೆಟ್ಟಬೇಡಲು ಗುಂಡಿಗೆ ಸೀಳಿ ಕರ್ಣನು ಕೆಟ್ಟ 2 ಎರಡೆಂಟಾಡೆನೆಂದು ಹರಿಶ್ಚಂದ್ರ ಕೆಟ್ಟನೆರೆ ಪಗಡೆಯನಾಡಿ ಧರ್ಮಜನು ಕೆಟ್ಟಹರಿದು ಬಾಣವ ತೊಟ್ಟು ದಶರಥನು ಕೆಟ್ಟಹರಿಯ ಮೊರೆ ಸೇರಿದರ್ಗೆ ಸ್ಥಿರ ಪಟ್ಟ 3 ಹಮ್ಮನಾಡಿ ಮುನ್ನ ಬ್ರಹ್ಮ ತಾ ಕೆಟ್ಟಅಮ್ಮನ ನುಡಿ ಕೇಳದೆ ಹನುಮಂತ ಕೆಟ್ಟತಮ್ಮನ ನುಡಿ ಕೇಳದೆ ರಾವಣನು ಕೆಟ್ಟನಿಮ್ಮ ನೋಯಿಸಿದ ಮೈರಾವಣನು ಕೆಟ್ಟ 4 ಭಾಗೀರಥಿಯ ತಂದೆ ಬಹುದೈತ್ಯರ ಕೊಂದೆಭೋಗಿಶಯನ ಶ್ರೀ ಲಕ್ಷ್ಮೀಕಾಂತನೆಭಾಗವತ ಪ್ರಿಯ ಭವಭಯಹರಕಾಗಿನೆಲೆಯಾದಿಕೇಶವಗೆ ನಮೊ ನಮೋ 5
--------------
ಕನಕದಾಸ
ನಾ ಬೇಡುವೆನೋ ನಿನ್ನ ಸೌಭಾಗ್ಯಸಾಗರ ಶ್ರೀ ಭೂ ನೀಳಾವರ ಭಾಗವತೋದ್ಧಾರ ಪ ಯಾವಾಗಲು ನಿನ್ನ ಬಳಿಯೊಳು ನಾನಿದ್ದು ಭಾವಿಸಿ ಕುಶಲದ ಮಾತನಾಡೀ ದೇವ ನಿನ್ನಯ ಪಾದಯುಗಳವನೊತ್ತುತೆ ಸೇವಿಸಿ ಸುಖಿಪಂತೆ ಕರುಣಿಸು ಮುರಹರ1 ಮುಂಗಡೆ ಕುಣಿ ಕುಣಿದಾಡಿ ಸ್ತೋತ್ರವ ಮಾಡಿ ಕಂಗಳೊಳಾನಂದಭಾಷ್ಪಗೂಡೀ ಅಂಗವ ಮರೆತೆನ್ನ ಕಂಠಗದ್ಗದವಪ್ಪ ಮಂಗಳಕರ ಭಕ್ತಿ ಕೃಪೆ ಮಾಡು ಶ್ರೀರಂಗ 2 ಹೆಜ್ಜಾಜಿಯ ಚೆನ್ನಕೇಶವ ಮಾಧವ ಹೆಜ್ಜೆ ಹೆಜ್ಜೆಗೆ ನಿನ್ನ ಸ್ಮರಣಿಯಿತ್ತು ಸಜ್ಜುಗೊಳಿಸಿ ಎನ್ನ ಹೃದಯಪೀಠದಿ ಕೂಡೊ ಅರ್ಜುನಸಾರಥಿ ಶ್ರೀಕೃಷ್ಣ ಪರಮಾತ್ಮ 3
--------------
ಶಾಮಶರ್ಮರು
ನಾನೇನು ಬೇಡಿದೆನೋ ರಂಗಯ್ಯ ನೀನೆನ್ನ ನೋಡವಲ್ಲ್ಯಾಕೋ ಪ ಹಾನಿ ಮಾಡೆ ಮಹಹೀನಭವಸಾಗರ ಮಾನದಿಂ ಗೆಲಿಸೆಂದು ನಾನಿಷ್ಟೇ ಬೇಡುವೆ ಅ.ಪ ನಿಗ್ರಹಿಸಿ ಸ್ಥಿರಪದನುಗ್ರಹಿಸಿ ಪೊರೆಯೆಂದೆನೆ ಸುಗ್ರೀವನಂತೆನ್ನ ಆಗ್ರಜನ ಕೊಂದು ಕಪಿ ದುರ್ಗಕ್ಕಧಿಪತಿಯೆನಿಸೆಂದಾಗ್ರಬಟ್ಟೆನೊ ನಿನಗೆ 1 ಕುಲವ ನಿರ್ಮೂಲ ಮಾಡಿ ಇಳೆ ಪಟ್ಟಕ್ಕೆ ಸ್ಥಿರವಾಗಿ ನಿಲಿಸು ಎನಗೆಯೆಂದು ಸುಲಭದಿಂ ಬೇಡಿದೆನೆ ಒಲಿದು ಸಾರಥಿಯಾಗಿ ಕುಲದವರ ಸವರೆಂದು ನಳಿನಾಕ್ಷ ತವಪಾದದೊಳು ಬೇಡಿದೆನೇನೋ 2 ಚಿತ್ತಜಪಿತ ನಿನ್ನ ಸತ್ಯ ಬಿರುದುಗಳು ನಿತ್ಯ ನಿತ್ಯದಿ ಬಿಡದೆ ಶಕ್ತಿಯಿಂ ಪೊಗಳುವೆ ಭಕ್ತಿದಾಯಕ ನಿನ್ನ ಯುಕ್ತ್ಯಾರುಬಲ್ಲರು ಮುಕ್ತಿ ದಯಮಾಡೆಂದು ಪ್ರಾರ್ಥಿಪೆ ಶ್ರೀರಾಮ 3
--------------
ರಾಮದಾಸರು
ನಾನೇನು ಮಾಡಲಯ್ಯ ಎನ್ನಯ ಮನ ನಿನ್ನ ಧ್ಯಾನಿಸಲೊಲ್ಲದೂ ಪ ಶ್ರೀನಿವಾಸನ ದಯ ಕಾಣುವೋಧ್ಹ್ಯಾಂಗಿನ್ನು ನೀನೆ ದಯಮಾಡೋ ಗುರು ರಾಘವೇಂದ್ರ ಅ.ಪ ಕೀರ್ತಿಸದೆ ನಿನ್ನ ವ್ಯರ್ಥ ಚಿಂತೆಯ ಮಾಡಿ ಪಾರ್ಥಸಾರಥಿ ಮಾರ್ಗಕ್ಹೊರ್ತಾದೆ ನಾ ಮರ್ತೆ ನಿಜಸೌಖ್ಯವನು ಬೆರ್ತೆ ಅನ್ಯರ ಸತಿಯ ಸಾರ್ಥಕಾಗದೇ ಪೋಯಿತೆನ್ನ ಆಯು 1 ಮಾಂಸದಾಸೆಗೆ ಮೀನು ಹಿಂಸೆಪಡುತಿರುವಂತೆ ಕಂಸಾರಿ ಪ್ರಿಯ ಹಂಸರೊಂದಿತ ಎನ್ನ ಸಂಶಯವ ಪರಿಹರಿಸಿ ಸಂಶಾಂತ ಮತಿ ನೀಡೋ ಸಂಶಯ ದೂರನೇ 2 ಎಷ್ಟು ಪೇಳಲಿ ಎನ್ನ ದುಷ್ಟ ಕರ್ಮಗಳನ್ನು ಜೇಷ್ಟ ದೂತನೆ ಎನ್ನ ಕಷ್ಟ ಬಿಡಿಸೋ ವೃಷ್ಣಿಸಖಪ್ರಿಯ ಮನ ತೃಷ್ಣಗಳನೆ ಕಳೆದು ಶ್ರೇಷ್ಠಾ ನರಹರಿ ಚರಣಾಭೀಷ್ಟವ ನೀಡೋ 3
--------------
ಪ್ರದ್ಯುಮ್ನತೀರ್ಥರು
ನಾರಾಯಣ ಹರಿಗೋವಿಂದ ನಾರದವರದ ಮುಕ್ಕುಂದಾ ಪ ಸುಜ್ಞಾನಿಗಳಾದವರ ಮಾನಸಾಂತರದಿ ಮಹಿಮೆಯು ತೋರುತ ನಾನಾಪರಿಯಲಿ ನಟನೆಯು ಮಾಡುವಾ 1 ಸುಂದರ ವಿಗ್ರಹ ಸುಜನರ ಪೋಷಕನಂದನಂದನ ವಂದಿತ ಮುನಿಜನಾಮಂದರಧರ ಮಾನದ ಜಗದ್ಭರಿತಾ ಅಮಿತ ಪರಾಕ್ರಮ ಮೂರ್ತಿ ಆಗರ ದ್ವಾರಕ ಹರಿಪುರ ಸ್ಥಳವು ಭಾಗೀರಥಿಪಿತ ಭವ ವಿಮೋಚನ ಕೃಷ್ಣ ನಾಗಶಯನ ಶ್ರೀನಿಲಯನ 2 ಪುಂಡರೀಕಾಕ್ಷ ಶ್ರೀ ಪಾಂಡವ ಪಕ್ಷಕ ಪಂಡಿತ ರಕ್ಷಕ ಪರಮಾತ್ಮನೆ ಹಿಂಡೂ ದೈತ್ಯರ ಕುಲ ಚಂಡಾನೆ ಭೇರಿಸಿ ಭೂಮಂಡಲವನಾ ಳ್ವಂಥ ಮಹಿಮ ಪ್ರಕಾಶ 3 ಅಗಣಿತ ಚರಿತ ಅನಂತನಿನ್ನಾ ಬಗೆಬಗೆಯಿಂದಲಿ ಭಜಿಸುವ ಭಕುತರ ಆಘಗಳ ಖಂಡಿಸುವಾ ಹರಿ 'ಹೊನ್ನವಿಠ್ಠಲ ' 4
--------------
ಹೆನ್ನೆರಂಗದಾಸರು
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನಿಂತ ಕಾರಣ ಪೇಳು ಹಣುಮಂತರಾಯಾ ಪ ಶಾಂತನಾಗಿ ವಿಶ್ರಾಂತಿಯಗೋಸುಗಕಂತುಪಿತನ ಮಹಮಂತ್ರವ ಜಪಿಸುತಅ.ಪ. ದಾಶರಥಿಯ ದೂತಾ ದಶಮುಖಪುರವಸ್ವಾಹೇಶಗೆ ದಾತಾ ಗುರುತು ಕೊಟ್ಟು ದಾತನ ಎದುರಿಗೆ ಬಂದು1 ಶಂಖ ಕುಲದಲಿ ಜನಿಸಿ ನಿಃಶಂಖದಿ ಖಳರನು ವರಿಸಿ ಶಂಕರಾದಿನುತ ಪದ ಶಂಬಧರನ ಕಾಜಲ್ಕದಿ ಸ್ಮರಿಸುತ 2 ಮೂರನೇ ರೂಪವ ಧರಿಸಿ ಧರೆಯೊಳು ಬಂದು ಅವತರಿಸಿ ಬೋಧಿಸಿ ಮಾರ್ಗವ ತೋರಿಸಿ ತಂದೆವರದಗೋಪಾಲವಿಠ್ಠಲನಸೇವಿಸಿ 3
--------------
ತಂದೆವರದಗೋಪಾಲವಿಠಲರು
ನಿತ್ಯ ಮಂದಾರ ತರುವಂತೆಕುಂದದಲ ಭೀಷ್ಟಗಳ ಗರೆವ | ಸುರ ತರುವಾ ಪ ವಾಗೀಶ ಕರಜಾತ | ನಿಗಮಾರ್ಥ ಕೋವಿದರಭೋಗಿಶಯನನ ಭಕುತ | ಭಾಗ್ಯ ದಾತೃಗಳ |ಯೋಗಿ ಕುಲವರ್ಯ ಹೃ | ದ್ರೋಗ ನೀಗುವರಜಾಗು ಮಾಡದೆ ಭಜಿಪ | ಭಕ್ತರನು ಪೊರೆವರನು 1 ಭವ ಭವಣೆ ಹರಿಸು ವರ |ನವ ನವ ಸ್ತೋತ್ರಗಳ | ಕವನ ರೂಪದಿ ಪೇಳಿಪವನಾಂತರಾತ್ಮಕನ | ಪರಿತೋಷ ಗೈದವರಾ 2 ಗರಳ ಅಂಘ್ರಿ ಕಮಲಂಗಳನುನೆರೆನಂಬಿ ಸುಖಿಸುವರ | ಸುರವ ಭಯ ವಿರಹಿತರ 3 ಉಕ್ತಿಯನು ಸ್ವಪ್ನದಲಿ | ಶಕ್ತಹಯಮುಖಪೇಳೆಯುಕ್ತಿಮಲ್ಲಿಕೆ ಮಾಲೆ | ಮೌಕ್ತಿಕವ ನಿತ್ತವರ |ಭಕ್ತಿಪಥ ತೋರಿ | ಕು | ಯುಕ್ತಿಗಳನೇ ಕಳೆದುಮುಕ್ತಿ ಮಾರ್ಗವ ತೋರ್ವ | ಭಕ್ತಿಯೋಗಿಗಳಾ 4 ಮಾಯಿ ಶೈವರು ಶಾಕ್ತ್ಯ | ಅನ್ಯಮತಗಳಗೆದ್ದುಜಯ ಪತ್ರ ಘಂಟೆಗಳ | ವಿಜಯ ಸಾರಥಿಗಿತ್ತು |ಭಯ ವಿನಾಶನು ನಮ್ಮ | ತೋಯಜಾಂಬಕ ಸಿರಿಹಯ ವದನನರ್ಚಿಸುವ | ವಾದಿರಾಜರನೂ 5 ಅದ್ವೈತ ತಮ ಸೂರ್ಯಮೇದಿನೀ ಸುರವಂದ್ಯ | ಶ್ರೀವಾದಿರಾಜರನೂ 6 ಭಾವಿ ಮಾರುತಿಯ | ದಿನ ದಿನದಿ ಪ್ರಾರ್ಥಿಪರಭಾವ ಕೊಲಿಯುತ ತೋರ್ವ | ಹಯ ಮುಖಾತ್ಮಕನು |ಭಾವ ಜನಯ್ಯ ಗುರು | ಗೋವಿಂದ ವಿಠ್ಠಲನಭವ್ಯ ರೂಪವ ಹೃದಯ | ದವಕಾಶದೊಳಗೇ 7
--------------
ಗುರುಗೋವಿಂದವಿಠಲರು