ಒಟ್ಟು 4045 ಕಡೆಗಳಲ್ಲಿ , 127 ದಾಸರು , 2776 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನಾಥ ರಕ್ಷಕ ಆಪದ್ಬಾಂಧವ ಶ್ರೀಪತಿ ಕೇಶವ ಮಾಧವನೆ ಪ ಮದನ ಗೋಪಾಲನೆ ಮಾತರಿಶ್ವಪ್ರಿಯ ಹರಿ ಶ್ರೀಶ ಅ.ಪ ಬಿಟ್ಟ ಕಂಗಳ ಮುಚ್ಚದೆ ತಿರುಗುವ ಬೆಟ್ಟವ ಬೆನ್ನಿನೊಳಾಂತಿರುವ ಗಟ್ಟಿನೆಲವ ಕೆದರುತ ಬೇರರಸುವ ಹೊಟ್ಟೆಯ ಕರುಳನೆ ಬಗೆದಿರುವ1 ಪೊಡವಿಯ ಬೇಡುತ ಕೊಡಲಿಯ ಪಿಡಿಯುತ ಪೊಡವಿಪರೆಲ್ಲರ ಗೆಲಿದವನೆ ಮಡದಿಯನರಸುತ ಕಡಲನು ಕಟ್ಟುತ ಕಡಹಲ್ದ ಮರನೇರ್ದ ಮೃಡಸಖನೆ2 ಬುದ್ಧನಾಗಿ ತ್ರಿಪುರರ ಗೆಲಿದವನೆ ಶುದ್ಧ ಹಯವನೇರಿ ಮೆರೆದವನೆ ಹದ್ದುವಾಹನವೇರುತ ನಲಿದಾಡುವ ಪದ್ಮನಾಭ ಪುರುಷೋತ್ತಮನೆ3 ಅಗಣಿತ ಮಹಿಮನೆ ಖಗವರವಾಹನ ನಿಗಮವೇದ್ಯ ನಿರ್ಮಲಚರಿತ ಬಗೆಬಗೆಯಿಂದಲಿ ಭಜಿಸುವ ಭಕುತರ ಅಘನಾಶನ ಸುಜನರ ಪ್ರಿಯ 4 ಸೌಮ್ಯ ವತ್ಸರದಿ ಸುಂದರಶ್ಯಾಮನ ಸಾಮಗಾನಲೋಲನ ಭಜಿಸಿ ಕಾಮ್ಯಕರ್ಮಗಳ ತ್ಯಜಿಸಲು ಹರುಷದಿ ಕಮಲನಾಭ ವಿಠ್ಠಲ ಒಲಿವ 5
--------------
ನಿಡಗುರುಕಿ ಜೀವೂಬಾಯಿ
ಅನಿಲ ಹೃತ್ಕಮಲಸ್ಥ | ಮುನಿ ವೇದವ್ಯಾಸಎನಗಿನ್ನು ತವಧ್ಯಾನ | ಸುಖವೀಯೊ ಶ್ರೀಶಾ ಪ ಚಿದಚಿದ್ವ ಲಕ್ಷಣನೆ | ಚಿತ್ರ ಚಾರಿತ್ರನೇಚತುರಾಸ್ಯ ಪಿತ ನೀನು | ಸುರ ಚಕ್ರವರ್ತೀ |ಚತುರ ರೂಪವ ಧರಿಸಿ | ಚತುರ ವ್ಯೂಹವ ರಚಿಸಿಚತುರ ವಿಧ ಸೃಷ್ಟಿಯನು | ಚತುರ ವಿರಚಿಸಿದೇ1 ಮುನಿ ಪರಾಶರ ತನುಜ | ಶ್ರೀನಿಕೇತನ ಹರಿಯೆಎನಗರುಹು ವೇದಾರ್ಥ | ವೇದವೇದ್ಯಾ |ಘನ ಮಹಿಮ ಕೋಟಿ | ನಿಖಿಲಾಂಡ ನಾಯಕನೆಅನಘ ನೀ ಸಲಹಯ್ಯ | ಕಪಿಲ ರೂಪಾತ್ಮ 2 ಸಚ್ಛಾಸ್ತ್ರ ಕರ್ತೃ ಸತ್ | ಸೂತ್ರಗಳ ನಿರ್ಮಾತೃಸಚ್ಛಾಸ್ತ್ರ ಭಾವಗಳ | ಅರುಹೆ ವಿಬುಧರಿಗೇ |ಮತ್ಸ್ಯಾದಿ ರೂಪನಿ | ನ್ನಿಚ್ಛೆಯಿಂದಲಿ ಪೊಂದಿವತ್ಸರ್ಗೆ ಭೋದಿಸಿದೆ | ಸಚ್ಚಿದಾನಂದಾ 3 ಮೂಲ ಪ್ರಕೃತಿಯ ಮಾನಿ | ಮಹಾಲಕ್ಷ್ಮಿ ನಿನ್ನಯಶೀಲಗಳನನುಸರಿಸಿ | ಸೇವಿಸುವಳೂ |ಪ್ರಲಯ ಕಾಲದಿ ನಿನ್ನ | ಒಲುಮೆಗೋಸುಗ ವಟದಎಲೆಯ ರೂಪದಿ | ಮಲಗಲನು ವಾದಳಯ್ಯ 4 ಮೂರ್ತಿ | ಬದರಿ ಕ್ಷೇತ್ರದಿ ಪೂರ್ಣಭೋದರ ಸುಸೇವೆಯನೆ | ಸತತ ಕೊಳುತಾ |ಮೋದ ಗುಣ ಪೂರ್ಣ ಗುರು | ಗೋವಿಂದ ವಿಠ್ಠಲನೆಹೇ ದಯಾಂಬುಧೆ ನಿನ್ನ | ಪಾದಾಬ್ಜ ತೋರೋ 5
--------------
ಗುರುಗೋವಿಂದವಿಠಲರು
ಅನಿಲ ಹೃತ್ಕುಮುದೇಂದು | ವೇದ ವ್ಯಾಸಾಎನಗಿನ್ನು ತವ ಧ್ಯಾನ | ಸುಖವೀಯೊ ಶ್ರೀಶಾ ಪ ಚಿದ ಚಿದ್ವಿಲಕ್ಷಣನೆ | ಚಿತ್ರ ಚಾರಿತ್ರನೇಚತುರಾಸ್ಯ ಪಿತ ನೀನು | ಸುರ ಚಕ್ರವರ್ತೀ | ಚತುರ ರೂಪವ ಧರಿಸಿ | ಚತುರ ವ್ಯೂಹವ ರಚಿಸಿಚತುರ ವಿಧ ಸೃಷ್ಟಿಯನು | ಚತುರ ವಿರಚಿಸಿದೇ 1 ಮುನಿ ಪರಾಶರ ತನುಜ | ಶ್ರೀನಿಕೇತನ ಹರಿಯಎನಗರುಹು ವೇದಾರ್ಥ | ವೇದ ವೇದ್ಯಾ |ಘನ ಮಹಿಮಕೋಟಿ | ನಿಖಿಲಾಂಡ ನಾಯಕನೆಅನಘ ನೀ ಸಲಹಯ್ಯ | ಕಪಿಲ ರೂಪಾತ್ಮಾ 2 ಸಚ್ಛಾಸ್ತ್ರ ಕರ್ತೃಸತ್ | ಸೂತ್ರಗಳ ನಿರ್ಮಾತೃಸಚ್ಛಾಸ್ತ್ರ ಭಾವವರುಹೆ | ಬುಧ ಜನರಿಗೇ |ಮತ್ಸ್ಯಾದಿ ರೂಪ ನಿ | ನ್ನಿಚ್ಛೆಯಿಂದಲಿ ಪೊಂದಿವತ್ಸರ್ಗೆ ಬೋಧಿಸಿದೆ | ಸಚ್ಚಿದಾನಂದಾ 3 ಮೂಲ ಪ್ರಕೃತಿಯ ಮಾನಿ | ಮಹಲಕ್ಷ್ಮೀ ನಿನ್ನಯಶೀಲಗಳನನುಸರಿಸಿ | ಸೇವಿಸುವಳೂ |ಪ್ರಳಯ ಕಾಲದಿ ನಿನ್ನ | ಒಲುಮೆಗೋಸುಗ ವಟದಎಲೆಯ ರೂಪದಿ ಮಲ | ಗಲನುವಾದಳಯ್ಯ 4 ಮೂರ್ತಿ | ಬದರಿ ಕ್ಷೇತ್ರದಿ ಪೂರ್ಣಬೋಧರ ಸುಸೇವೆಯನು | ಸ್ವೀಕರಿಸುವೇ |ಮೋದಗುಣ ಪೂರ್ಣ ಗುರು | ಗೋವಿಂದ ವಿಠಲನೇಹೇ ದಯಾಂಬುಧೇ ನಿನ್ನ | ಪಾದಾಬ್ಜ ತೋರೋ 5
--------------
ಗುರುಗೋವಿಂದವಿಠಲರು
ಅನುಜ ಭಾವಿ ಮುಖ್ಯಪ್ರಾಣನೆ ಪ ಚರಣಭಕ್ತರಲ್ಲಿ ಮುನ್ನ ಇರಿಸಿ ಸಲಹೊ ಕರುಣಶರಧಿಯೆ ಅ.ಪ. ಹರಿಯಮುಂದೆ ನಿಂದು ಸೇರಿ ಸ್ತುತಿಸೆ ದಿವಿಜವೃಂದ ಧೀರ ಲಾತವ್ಯ ಬಂದೆ ಹಾ ಚಾರು ಯುಕ್ತಿಮಲ್ಲಿಕಾದಿ ಸಾರಗ್ರಂಥರಾಶಿ ಇತ್ತು ಈರಮತವ ಮೆರೆಸಿ ಮೆರೆದ ಶೂರ ನಿನ್ನ ಪೊಗಳಬಲ್ಲೆವೆ 1 ಎರಡು ಹತ್ತು ಮೇಲೆ ನೂರುವರುಷ ಪೊರೆದು ಶಿಷ್ಯಸಂಘ ಕಾಯ ಕುಳಿತೆ ಭರದಿ ವೃಂದಾವನದಲೀ ತೊರೆಯಲಾಗದೇನೆ ನಿನ್ನ ತುರಗವದನ ರಾಮಕೃಷ್ಣ ಅರವಿದೂರ ವೇದವ್ಯಾಸ ಪೊರೆವರೆಲ್ಲ ಸೇವೆಕೊಳ್ಳುತಾ 2 ಸುರರು ಎಲ್ಲ ಮಣಿದು ಕುಣಿದು ನಿನ್ನ ಸಹಿತ ಮಣಿದು ಹರಿಯ ಭಜಿಸುತಿಹರು ತನುವ ಕೆಡಹಿ ರಾಗದಿಂದ ನೆನೆದು ನಿನ್ನ ನೋಡೆಸದನ ಜನುಮ ಜನುಮ ದೋಷ ಕಳೆವ ಘನ ಮಹಾತ್ಮೇಗೀಡುಕಾಣೆ 3 ಎರಡು ಕಮ್ಮಿ ಎರಡುನೂರು ವರವಿರಂಚಿ ಕಲ್ಪಗಳಲಿ ನಿಮ್ಮ ಮಹಿಮೆಗೇನೆಂಬೆ ಸುರರು ವಿವಿಧ ಬಲಿಗಳಿತ್ತು ಚರಣ ಪಿಡಿದು ನಡೆವರೆನಲು ನರನು ಪೊಗಳಬಲ್ಲನೇನು ಹರನಗುರುವೆ ಶಿರವ ಬಾಗುವೆ 4 ವರವಿಮಾನದಲ್ಲಿ ಕುಳಿತು ಚರಿಸುತಿರಲು ಒಮ್ಮೆಯೇನೆ ಸುರರು ಎಲ್ಲ ಕರೆಯೆನಿನ್ನ ಧರಿಸಿ ರೂಪ ನಿಚಯ ನಡೆದೆಯಾ ವರವಿಶೇಷಪೂಜೆಕೊಂಡು ಸ್ಥಿರವಗೈದು ಪದವಿಗಳನು ಕರೆದು ಹರುಷ ದಿವಿಜಗಣಕೆ ಪೊರೆದ ನಿನಗೆ ತುಲ್ಯ ಕಾಣೆವೈ5 ಸಿರಿಯಪತ್ರ ಹರಿಗೆ ಇತ್ತು ಮರುತನಂತೆ ಪಡೆದು ವರವ ಕೊಂಡು ಭುವಿಯಲಿ ಧರಿಸಿನಿಂದು ದಂಡ ಕಾಷ್ಠ ದುರುಳವಾದಿಗಜಗಳಳಿದು ಚರಿಸಿ ದೇಶವೆಲ್ಲ ಕೊನೆಗೆ ಕುರುಹು ತೋರಿನಿಂತ ಸ್ವಾದಿಲಿ6 ಏನು ನಿಮ್ಮ ಮಹಿಮೆ ಗುರುವೆ ತಾನೆ ಬಂದು ವಾಜಿವದನ ಸಾನುರಾಗದಿಂದ ಕೊಂಬ ಹೂರ್ಣಭಕ್ಷ್ಯವೆಲ್ಲ ಪೂರ್ಣ ಪೂರ್ಣನೀನು ಜೀವಗಣದಿ ಪೂರ್ಣತನ್ನ ಕಂದನೆಂದು ದಾನಗೈದ ನಿನ್ನ ಸತಿಗೆ ಜ್ಞಾನಪೂರ್ಣಬಲನು ನೀನ ಹೋ 7 ಚಾರು ಭ್ರಾತೃನಿನ್ನ ಬದಿಲಿ ಮೀರಿ ಇಹುದು ಯಾವುದಿಲ್ಲ ಮೂರುಜಗದಿ ಸತ್ಯಸತ್ಯವೋ ಮೂರುಕಣ್ಣಿನಾತ ಮುಂದೆ ಭಾರಿಭೂತರಾಜ ನಿಮ್ಮ ಸಾರ ಚರಣ ಪಿಡಿದು ಭಜಿಪ ಯಾರು ಸಾಟಿ ಇಲ್ಲ ಸಾರುವೆ8 ಗಂಗೆಮೊದಲು ಎಲ್ಲ ತೀರ್ಥ ತಂಗಿ ಧವಳಗಂಗೆಯಲ್ಲಿ ತುಂಗ ಮಹಿಮ ನಿನ್ನ ಯಜಿಸಿ ಹಿಂಗಿಸುವರು ತಮ್ಮ ಶಮಲ ಭಂಗ ಸತ್ಯಸರ್ವಪಾಪ ಸುರರು ಕೈವಶ 9 ನಿನ್ನ ನಿಲಯ ಸುತ್ತ ನೃತ್ಯ ವನ್ನು ಗೈದು ಭಜಿಸೆ ಹರಿಯ ಘನ್ನ ಜ್ಞಾನ ಚೆನ್ನ ಪಡೆದು ಸನ್ನು ತಾಂಗ ನೆಡೆಯಕಾಣುವ ಅನ್ನಸತ್ರ ನಿನ್ನ ಕ್ಷೇತ್ರ ಅನ್ನಪತಿಯ ತೋರ್ಪನಿನಗೆ ಇನ್ನು ಸರಿಯೆ ಕಾಮಧೇನು ಚಿಣ್ಣನೆಂದು ಪಿಡಿಯೊ ಶರಣನ 10 ಹತ್ತು ಐದು ನಾಲ್ಕು ಆರು ಹತ್ತು ಐದು ಸಹಿತ ಒಂದು ಹತ್ತು ಹತ್ತು ಮತ್ತೆ ಒಂದು ಹತ್ತುನೂರು ಹಾಗನಂತ ನಿತ್ಯ ನಿತ್ಯನುತಿಪೆ ಬೃಹತಿಯಿಂದ ಸತ್ಯಪದವಿಸಿದ್ಧ ನಿನಗೆಲೈ 11 ಗಿರಿಗಳರಸು ಮಗಳ ಸಹಿತ ಕರೆದು ನಿಮ್ಮ ರತ್ನರಾಶಿ ಸುರಿದು ಶಿರದಿ ಪೂಜೆಗೈದು ಪರಮ ಧನ್ಯನಾದ ತಾನಹೋ ತರಣಿ ಜನರು ಮಾರ್ಜನಾದಿ ಪರವಿಶೇಷ ಸೇವೆಗೈದು ಕೊಡುವೆ ಕಾಮಿತಾರ್ಥವ 12 ದೀಪಸಾಲು ಹಚ್ಚಿ ಭಜಿಸೆ ಪೋಪುದೈಯ್ಯ ಭವದ ತಾಪ ಆ ಪರೇಶ ಒಲಿದು ಜ್ಞಾನ ದೀಪ ವಿಡುವ ಹೃದಯಕಮಲದಿ ತಾಪ ದೂರನಾಗಿ ಶ್ರೀಪತಿಯ ದಾಸನಾಗಿ ಕೂಪ ದಾಟ ಪೋಪ ಬೇಗಹೋ13 ಯಮನ ಪುರವ ಸಾರಿ ನೀನು ವಿಮಲರೂಪ ತೋರಿ ಹಾಗೆ ಅಮರ ಜ್ಞಾನ ಬೋಧೆಯಿತ್ತು ಯಮನ ರಾಜ್ಯ ಬರಿದುಗೈದೆಹೊ ಕಮಲೆಕಂದ ಕಾಮಕೊರಗಿ ನಮಿಪ ನಿನ್ನ ರೂಪ ನೋಡಿ ಶ್ರಮವು ಆಯ್ತುಕಾಮನಿಂದ ಅಮರಸ್ತ್ರೀವೃಂದಕ್ಕೆಲ್ಲ ವೈ14 ದುಃಖಕೊಡದ ನಿನ್ನ ಅಸ್ಥಿ ಶಂಖಚಕ್ರ ಮಯವು ಹೌದು ಪಂಕಜಾಕ್ಷ ಅಂಗದಲ್ಲೆ ಅಂಕೆರಹಿತ ಸುಖವು ನುಂಬೆಹೊ ಸೂತ್ರ ತಾನು ಕಿಂಕಿಣೀ ಸುರಾವದಿಂದ ಶಂಕೆ ಕೊಡದೆ ಸಾರುತಿಹನು ಬಿಂಕವಾಗಿ ಪದವಿಬರ್ಪುದ15 ಮೇರುಗಿರಿಯ ಶಿಖರದಲ್ಲಿ ಕ್ರೂರಮದನ ತಾಪದಿಂದ ಚಾರುಕನ್ಯೆಯೊಬ್ಬಳಿನ್ನು ತೋರೆ ಸ್ವಾಂಗ ನಿನ್ನ ಬಯಸುತ ಧೀರನೀನು ಕದಲದಿರಲು ಕ್ರೂರ ತಪದಿ ಹರಿಯ ಒಲಿಸಿ ನೀರೆ ಪಡೆದ ಲೈಯ ನಿನ್ನ ಸೇರಿ ಸುಖಿಪ ಭಾಗ್ಯಮುಂದಕೆ 16 ಗರುಡನೇರಿ ನಿನ್ನ ಸಹಿತ ಹರಿಯು ತೋರಿಸಕಲಲೋಕ ಅಮೃತ ಕರದಿ ಕುಡಿಸಿ ಅರವಿ ದೂರ ನಿನ್ನ ತಬ್ಬಿದ ಮರುತನಂತೆ ವ್ಯಾಜರಹಿತ ಚರಣಭಜರ ನಿನಗೆ ತಾನೆ ಕರೆದು ಕೊಟ್ಟ ವಾಯುಪದವಿ ತುರಗವದನ ಪ್ರಥಮ ಭಕ್ತಹೋ17 ಗೆದ್ದು ವೀರಶೈವಗುರುವ ಗದ್ದುಗೆಯನು ಏರಿ ಮೆರೆದೆ ಮೆದ್ದು ಗರವ ಸುಖದಿ ನಿಂದೆ ತಿದ್ದಪಾಟು ತೋರ್ದೆ ಉಡುಪಿಲಿ ಬದ್ಧನಾದ ವಿಠಲ ನಿನಗೆ ಬಿದ್ದ ನೃಪನ ಗೇಸಿ ಕಾಯ್ದೆ ಶುದ್ಧ ವಿಷ್ಣುಭಕಿÀ್ತ ತೋರಿ ಮಧ್ವಸುತರ ಪೊರೆದ ದಾನಿಹೋ 18 ನೂರುನೂರು ಆನೆಮೀರಿ ಭಾರಿಬಲದ ಮೆರೆವ ಶಕ್ತ ನೇರನಿಲಿಸಿ ಧ್ವಜದಸ್ತಂಭ ದೂರಗೈದೆ ಶಿಷ್ಯಕಳವಳ ಭಾರ ಹೌರ ಸ್ಥೂಲಸೂಕ್ಷ್ಮ ತೋರಬಲ್ಲೆ ಇಚ್ಛೆಯಂತೆ ಮೇರೆ ಇರದ ಮಹಿಮನೆಂದು ಸಾರಿಸಾರಿ ನುತಿಪೆ ಜೀಯನೆ 19 ಗಂಗೆಪಡೆದ ರಂಗನನ್ನು ಅಂಗನಿಂದ ತರಿಸಿ ನೆಟ್ಟು ತುಂಗವಿಭವದಿಂದ ಯಜಿಸಿ ಕಂಗಳಿಂದ ನೋಡಿ ಉತ್ಸವ ಅಂಗಮರೆತು ನಂದ ಕುಡಿದೆ ಸಂಗದಿಂದ ಕಂಡ ಜನಕೆ ಭಂಗವಾಯ್ತು ಸಕಲ ಬಂಧ ಕೊಂಗಿ ಖಳರ ಬಿಟ್ಟು ಸತ್ಯವೈ 20 ಬರಿಯ ಕವನವಲ್ಲ ಕೇಳಿ, ಗುರುವೆ ದ್ವಿಜನ ಸ್ವಪ್ನದಲ್ಲಿ ಅರುಹಿ ತನ್ನ ಚರಿತೆಯನ್ನು ಬರೆಸಿ ಇಹನು ಪೊರೆಯೆ ಶಿಷ್ಯರ ಅರಸಿ ನೋಡಿ ಧನ್ಯರಾಗಿ ಒರೆಸಿ ಕಾಮಕ್ರೋಧವೆಲ್ಲ ಚರಣಪಿಡಿಯೆ ಭಕ್ತಿಯಿಂದ ಗುರುವು ಬಿಡನು ನಿಮ್ಮನೆಂದಿಗು 21 ಸುಧೆಯ ಕರ್ತ ಜಯಮುನೀಂದ್ರ ಹೃದಯವಾಸಿ ವಾಯುವಂದ್ಯ ಪದುಮೆ ರಮಣ ಕೃಷ್ಣವಿಠಲ ಸದರದಿಂದ ಮುಕ್ತಿ ನೀಡುವ ಸದನ ವಾಜಿವಕ್ತ್ರಗೆರಗಿ ಬದರಿನಿಲಯ ನನ್ನ ನೆನೆದು ಪದವನಿದನು ಪಠಿಪ ಭಕ್ತಗೆ22
--------------
ಕೃಷ್ಣವಿಠಲದಾಸರು
ಅನುದಿನವು ಶ್ರವಣಮನನಾದಿ ಸಾಧನ ಮಾಡು ಇನ್ನು ಸಂಶಯವ್ಯಾತಕೊ ಪ. ಏನು ಶಪಥವ ಮಾಡಲಿ ಮತವು ಹಿರಿದೆಂದು ಜ್ಞಾನಿಗಳ ಸಮ್ಮತವೊ ಅ.ಪ. ಗುರುಮಧ್ವಶಾಸ್ತ್ರವೆ ಸಕಲ ಶಾಸ್ತ್ರಧಿಕೆಂದು ಶಿರವರಿದು ಮುಂದಿರಿಸಲೆ ಪರಮತಜಾಲವೆಲ್ಲ ವೇದವಿರುದ್ಧವೆಂದು ಶರಧಿಯನು ನಾ ದಾಟಲೆ1 ಭಾಗವತಶಾಸ್ತ್ರವೆ ಬಹು ಭಾಗ್ಯವೆಂತೆಂದು ನೆಗಹಿ ಪರ್ವತವ [ನಿಲಿಸಲೆ] ಭಾಗವತ ನಿಂದಕಗೆ ಬಹು ನರಕವೆಂತೆಂದು ಪರ್ವ- ತಾಗ್ರದಿಂ ಧುಮುಕಲೆ 2 ವಿದಿತ ದೈವರೊಳಗೆ ವಿಷ್ಣು ಉತ್ತಮನೆಂದು ವೇದಂಗಳ ಒಡನುಡಿಸಲೆ ಅಧಿಕಾರಿಗಳೊಳಗೆ ಅಂಬುಜಸಂಭವನೆಂದು [ಕಾದೆಣ್ಣೆ]ಯೊಳು ಮುಣುಗ [ಲೆ] 3 ಪರಲೋಕಸಾಧನಕೆ ತಾರತಮ್ಯಮತವೆಂದು ಗರಳವನು ಕುಡಿಯಲೆ ಹರಿದಿನಕೆ ಮರುದಿನಕೆ ಸರಿಯಿಲ್ಲವೆಂತೆಂದು ಹರಿವ ಹಾವನು ಹಿಡಿಯಲೆ 4 ಗುರುಮಧ್ವರಾಯರೆ ಆತ್ಮರಕ್ಷಕರೆಂದು ಅನಲವ ಕೈ ಪಿಡಿಯಲೆ ಅಮಿತ ಗುಣಪೂರ್ಣನೆಂದು ಅ- ಶರೀರವನು ನುಡಿಸಲೆ 5
--------------
ವಾದಿರಾಜ
ಅನುಭಾವದ ನಿಗೂಢ ಮುಂಡಿಗೆಗಳು ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ ಪ ಪರಂಜ್ಯೋತಿ ಪರಬ್ರಹ್ಮ ಪರಮಪುರುಷ ಓಂ ಎಂದುಅ ಹುಟ್ಟು ಬಣ್ಣ ಒಂದರೊಳಗೆ ಕಟ್ಟು ಬಣ್ಣ ಒಂದು ಮಾಡಿಕಟ್ಟಿ ಕುಟ್ಟಿ ಕಾಸಿ ಕರಗಿ ಮೂರು ಬಣ್ಣವಮುಟ್ಟಿ ಮಾಡಿ ನಾಲ್ಕು ಬಣ್ಣ ಒಪ್ಪವಿಕ್ಕಿ ಅದರ ಮೇಲೆಗಟ್ಟಿಯಾಗಿ ನೆಲೆಗೆ ನಿಂತವೈದು ಬಣ್ಣವುಸೃಷ್ಟಿಯಾರೇಳು ಬಣ್ಣ ಎಂಟು ಒಂಬತ್ತರೊಳಗೆ ನೆಟ್ಟನೆ ಹತ್ತು ಹನ್ನೊಂದು ಹನ್ನೆರಡು ತೋರುವಘಟ್ಟಿ ಹದಿಮೂರು ಹದಿನಾಲ್ಕು ಹದಿನೈದರಿಂದಕಟ್ಟಕಡೆಗೆ ನಿಂದ ಹದಿನಾರು ಬಣ್ಣ ಓಂ ಎಂದು 1 ಭದ್ರಕಂಬ ಒಂದರೊಳಗೆ ಉದ್ದವಾದ ಕೊನೆಯ ಮೇಲೆಸಿದ್ಧಿಯಾದ ಚಿಗುರು ಹೂವು ಕಾಯಿ ಹಣ್ಣನುಮೆದ್ದು ಹೋದ ಪಕ್ಷಿ ಬಂದು ಹದ್ದು ಹಿಡಿದು ಉದ್ದಕೆತ್ತಿಬುದ್ಧೀ ಹೀನನಾಗಿ ಬೆಳೆದು ಧರೆಗೆ ಬಿದ್ದುದಕದ್ದು ಮತ್ತೊಬ್ದ ತರುತಿದ್ದ ದಾರಿಯನ್ನು ಕಟ್ಟಿಒದ್ದು ಹಿಡಿದು ಗುದ್ದಿ ನೂಕಿ ಸೆಳೆದುಕೊಂಡುದ ಸಾಧ್ಯವಾಯಿತೆಂದು ತನ್ನ ಮನೆಗೆ ತಂದು ಸತಿಗೆ ಕೊಡಲುಶುದ್ಧವಾಗಿ ಸುಟ್ಟು ಮಡಗಲೆದ್ದು ಹಾರಿ ಹೋಯಿತೆಂದು 2 ತಿಳಿಯುತಿಹುದು ತಿಳಿಯದಿಹುದು ಬೆಳೆಯುತಿಹುದು ಬೆಳೆಯದಿಹುದುಹೊಳೆಯುತಿಹುದು ಹೊಳೆಯದಿಹುದು ಸುಳಿಯದಿಹುದುತಿಳಿದು ನಾಲ್ಕು ದಿಕ್ಕಿನಲ್ಲಿ ಹೊಳೆದು ಎಂಟು ದಿಕ್ಕ ತೋರಿಬಳಸಿ ಸುತ್ತ ತಿರುಗುತಿಹುದು ಬಳಲಿ ಬಳಲದೆಒಳಗೆ ಹೊರಗೆ ತೋರುತಿಹುದು ಅಳಿದ ವಸ್ತು ಮುಟ್ಟದಿಹುದುಕಳವಳಂಗೆ ಎರಡು ಗುಣವ ತೋರಿ ಮೆರೆವುದುತಿಳಿದು ನೋಡೆ ಕೈಗೆ ಸಿಕ್ಕಿ ಒಳಗೆ ಬಯಲ ತೋರುತಿಹುದುಪ್ರಣವ ಒಂದು ಕೋಟಿ ನುಂಗಿ ಉಗುಳಿತಿಪ್ಪುದೋಂ ಎಂದು 3 ತತ್ತಿಯಾದ ಬ್ರಹ್ಮನೀಗೆ ದಿಕ್ಕು ಅಖಿಲಾಂಡವೆಲ್ಲಹೆತ್ತ ತಂದೆಗಾದವನೆ ನಿತ್ಯವುಳ್ಳವ ಸತ್ತು ಹುಟ್ಟಲಿಲ್ಲವೆಂದು ಅತ್ತ ನೋಡಿ ಇತ್ತ ತಿರುಗೆ ತತ್ತಿಯೊಳಗೆ ಬೆಳೆದವೆಲ್ಲ ಸತ್ತವೆನ್ನುತಸತ್ತು ಹೋದ ದೀಪದಂತೆ ಉತ್ಪತ್ತಿಯಾದವಗೆಸತ್ತು ಸತ್ತು ಹುಟ್ಟುವುದು ತಪ್ಪದೆನ್ನುತಎತ್ತಿ ಜಗವ ನುಂಗಿ ತನ್ನ ಹೊಟ್ಟೆಯೊಳಿಂಬಿಟ್ಠುಕೊಂಡುಕತ್ತಲೆಗೆ ಕರ್ತೃವೆಂಬ ಜಗವಸತ್ಯ ಕೇಳಿರೋ ಎಂದು | 4 ಪಂಕಜನ ತಾಯಿ ಸುತನ ಅಂಕದಲ್ಲಿ ಹುಟ್ಟಿ ಜಗವಮಂಕು ಮಾಡುತಿಪ್ಪ ಮಾಯೆ ಹತ್ತು ಶಂಕೆಯಶಂಕೆಕಾರ ಶತ್ರುಮಿತ್ರರಿಬ್ಬರಿಗಾಧಾರವೆಂದುಕುಂಕರದಿಪ್ಪತ್ತೊಂದು ಕೋಟಿ ಪಾಶವುಓಂಕಾರದೊಳಗೆ ಪುಟ್ಟಿ ಓಂಕಾರದೊಳಗೆ ಬೆಳೆದುಓಂಕಾರದೀ ಜಗವ ಎತ್ತಿ ಮೆರೆವುದೋ ಎಂದು 5 ಪ್ರಣವ ಒಂದರೊಳಗೆ ಒಂದು ಕೋಟಿಯನ್ನು ತೋರಿ ಪಡೆಯ (ಕಡೆಯ ?)ಕುಣಿಕೆಯೊಳಗೆ ಎಂಟು ಕೋಟಿಯನ್ನು ತೋರುತತೃಣವ ಹಿಡಿದು ಬರೆಯುತಿಪ್ಪ ಒಂದು ರೋಮ ಕೂಪದಲ್ಲಿಕುಣಿಕೆಯೊಳಗೆ ಜಗದ ಜೀವರಾಶಿ ಎಲ್ಲವಸುಳಿದ ವಿಷ್ಣು ಬ್ರಹ್ಮನೆಂಬ ಹಣೆಯ ಕಣ್ಣ ರುದ್ರನೆಂಬ ಮಣೆಯಗಾರರೆಪ್ಪತ್ತೇಳು ಕೋಟಿ ಸಂಖ್ಯೆಯುಹಣೆಯ ಕಾಣದವರ ಕೀಲಿನೆಣಿಕೆಯಲ್ಲಿ ಹೊಲಬುದಪ್ಪಿಪ್ರಣವ ಒಂದು ಕೇಳುತಿಪ್ಪ ಪರಬ್ರಹ್ಮ ಓಂ ಎಂದು 6 ಸುಳಿ ಕಮಲ ಪಾದ ಮೇಲೆ ಮಸ್ತಕವುತೊಳಲಿ ಕಾಣೆ ವೇದವೆಂದು ಬಳಲಿ ಬಳಲದೆಪ್ರಳಯ ಕೋಟಿ ಪ್ರಾಣಿಗಳಿಗೆ ಹೊಳವುಗಾಣಲೀಸದಂತೆಬೆಳೆದು ಹೋಗುವ ಗತಿಯೆಂಬುದಿತ್ತಲರಿಸುತಕಳವಿನವರು ಬಂದು ಇಳೆಯ ಮೇಲೆ ನಿಂದುಬಿಳಿಗಿರಿವಾಸ ತಿರುಮಲೇಶ ಆದಿಕೇಶವ ತಾನೆಯೆಂದು 7
--------------
ಕನಕದಾಸ
ಅನ್ಯಾಯದ ಮಾತುಗಳಾಡದಿರಿ ನೀವುಹೆಣ್ಣುಗಳಿರ ಕೇಳಿಪುಣ್ಯವಂತರಾದ ಕಾರಣ ಕೃಷ್ಣನಕಣ್ಣಿಂದ ನೋಡಿದಿರಿ ಪ. ವಾರಿಜಭವಾದ್ಯರ[ಸೇರದಿರುವವ]ಸೇರೋನೆ ಸಣ್ಣವರಸೂರ್ಯನಂತೆ ತೇಜದವ ಬಂದು ನಿಶಿಯಲಿಸೂರಿಲಿ ನಿಂತಾನೇನೆ 1 ಕ್ಷೀರಸಾಗರಶಾಯಿ ಆಗಿದ್ದವನು ಪಾಲುಸೋರೆ ಕದ್ದದ್ದು ನಿಜವೆನಾರೇರೆಂದರೆ ಮನಕೆ ತಾರದ ಸ್ವರಮಣಪೋರೇರ ನೆರೆದಾನೇನೆ2 ಕಾಲಯವನನ ಕೂಡ ಕಲಹ ಕೊಟ್ಟವ ನಿಮ್ಮಬಾಲರ ಬಡಿವನೇನೆಮೂಲೋಕವನೆಲ್ಲ ಭಾರಹೊತ್ತ ಹರಿ ತಾನುಆಳುಗಳೇರುವನೇನೆ 3 ವಾಲಯದಿ ಸುರರಿಗೆ ಸುಧೆಯನಿತ್ತ ಗೋಪಾಲಮೊಲೆಯನುಂಬುವನೇನೆಪೇಳಲಿನ್ನೇನು ದನುಜಕುಲಾಂತಕÀ ಹರಿಮೂಲೆಯಲಡಗುವನೇನೆ 4 ಸುರರು ಸ್ತುತಿಸೆ ತುಟಿ ಮಿಸುÀದವ ತಾನು[ಬಿರು]ಮಾತನಾಡುವನೆಕರಿರಾಜ ಕ[ರೆ]ದರೆ ಓಡಿ ಬಂದವ ನೀವುಕರಿಯೆ ಬಾರದಿಪ್ಪನೆ 5 ಸ್ಥಿರವಾದ ವೈಕುಂಠದರ¸ನೆನಿಸುವ ಸ್ವಾಮಿಕೆರೆಭಾವಿ ತಿರುಗುವನೆಗರುಡವಾಹನನಾಗಿ ಮುರಹರ[ಕರುಗಳ]ಏರುವನೆ6 ಪುಣ್ಯ ಪ್ರೇರಿಸುವ ದೇವರ ದೇವನು ಪರ-ಹೆ[ಣ್ಣ]ನಪ್ಪಿಕೊಂಬನೆಉಣ್ಣಲಿತ್ತ ಎಡೆ ಒಲ್ಲ ನಿತ್ಯತೃಪ್ತಬೆಣ್ಣೆಯ ಮೆಲುವÀನೇನೆ7 ಕಣ್ಣಿಗೆ ಕಾಣದ ಚಿನ್ಮಯ ಸರ್ವದಾ ನಿ-ಮ್ಮನೆಯೊಳಿಪ್ಪನೇನೆಚೆನ್ನರ ಚೆಲುವ ಕಾಮನಪಿತ ನಿಮ್ಮನುಆಣಕಿಸಿ ಆಡುವನೆ 8 ಮೃದುವಾದ ಉರಗತಲ್ಪನು ಹಸಿಬಾಣಂತಿಯಅದಟ ಮಂಚದೊಳಿ[ಪ್ಪ]ನೆಎದೆಯಲಿ ಶ್ರೀವತ್ಸ ಘಮಘಮಿಸುವ ದೇವಮದಬೆಕ್ಕು ಒಯ್ದ್ದನೇನೆ 9 ಮದನಾರಿಗೆ ತಾನು ಅದ್ಭುತ ಮಾಡಿದವಇದು ಆತನ ಲೀಲೆಯೆಪದುಮಾಕ್ಷ ಸಿರಿಹಯವದನರಾಯನ ಭಜಿಸಿಮುದದಿಂದ ನೀವು ಬಾಳಿರೆ 10
--------------
ವಾದಿರಾಜ
ಅಪರಾಧವೆಣಿಸದಲೆ ಕೃಪೆಮಾಡು ತಂದೆಅಪಣಾರ್ಯಕೃತ ಸ್ತೋತ್ರಪ್ರಿಯ ರಾಘವೇಂದ್ರ ಪವರ್ಣಾಶ್ರಮಕೆ ಉಚಿತ ಧರ್ಮಕರ್ಮವ ಬಿಟ್ಟುಹೊನ್ನು ಹೆಣ್ಣು ಮಣ್ಣಿಗಾಗಿ ಧಡಪಡಿಸಿಮನ್ನಿಸದೆ ಗುರು'ರಿಯರನು 'ೀಯಾಳಿಸಿಕಣ್ಣು ನೆತ್ತಿಯ ಮೇಲೆ ಬಂದು ನಾ ಮೆರೆದೆ 1ಹಂದಿಯಂದದಿ ಕಂಡ ಕಂಡಲ್ಲಿ ಬಾಯೊಳಗೆತಿಂಡಿ ತಿನಿಸು ತುರುಕಿ ಹೆಂಡಮದವೇರಿಖಂಡವನು ಬೆಳಸಿ ಮುಸಗಾಡುತ ಕೋಣನ ತೆರದಿಕಂಡದ್ದು ಮಾಡಿ ನಾ ದಣಕೊಂಡೆ ನಾ ತಂದೆ 2ದೇಹ ಕುಗ್ಗಿತು ಈಗ ದೇಹ ಹಾಳಾುತುಆ ಹರೆಯ ಮಬ್ಬಳಿದು ಮುದಿ ಮಂಗನಾದೆಶ್ರೀಹರಿ ಭೂಪತಿ'ಠ್ಠಲನು ನೆನಪಾದಕರುಣದಿಂದ ಕೈಪಿಡಿದು ಉದ್ಧರಿಸು ತಂದೆ 3
--------------
ಭೂಪತಿ ವಿಠಲರು
ಅಪ್ಪ ಕೇಳೋ ಬೇಡಿಕೊಂಬೆ ನಿನ್ನ ತಿಳಿಯಪ್ಪಒಪ್ಪಿ ಮಾತನ್ನಾಡಿಸಿದರೆ ನೀನೆ ಜಗದಪ್ಪ ಪ ನಾನದಾರು ಬಂದೆನೆಲ್ಲಿಗೆ ಎನ್ನುತ ನೀನಪ್ಪನಾನು ಹೋಗುವೆ ಎಲ್ಲಿಗೆ ಎಂದು ಚಿಂತಿಸು ನೀನಪ್ಪನೀನು ಸುಳಿಗಾಳಿಯ ಶಾವದ ತೆರದಂದದಿ ಇಹೆಯಪ್ಪನಾನಾ ಭವವಾಚರಿಸುತಿಹೆ ಆದಿ ಅಂತ್ಯವಿಲ್ಲಪ್ಪತನುವ ನೆಚ್ಚಬೇಡ ಮೊದಲಿನ ತನುವದೇನಾಯಿತಪ್ಪತನಯ ಸತಿಯರನೆಲ್ಲ ಬಿಟ್ಟುಬಂದೆ ನೀನುಮನೆ ಕಟ್ಟುವೆ ನೀನು ಮೊದಲಿನ ಮನೆ ಏನಾಯಿತಪ್ಪಾನಿನಗೆ ಕುಲವು ಎಷ್ಟಾದವು ಎಣಿಸಿಕೊಳ್ಳಪ್ಪ2 ಹಿಂದೆ ಮುಂದೆ ಕಾಣದಂತೆ ತಿರುಗಿ ತಿರುಗಿ ಅಪ್ಪಬೆಂದು ಬೆಂದು ಓಡಾಡುತಿಹೆ ಸ್ವರ್ಗ ನರಕಕಪ್ಪಎಂದೆಂದಿಗೂ ಅರಿವಾಗದ ಮರೆವು ಮುಚ್ಚಿ ಅಪ್ಪಅಂಧಕಾರ ಸಂಸಾರದಿ ಕಳವಳಿಸುತ ಅಪ್ಪ3 ಕಣ್ಣುಯಿದ್ದು ಕಣ್ಣಿಗೀಗ ಬೀಳಬೇಡವಪ್ಪನಿನ್ನ ನರಿವುದಕ್ಕೆ ಮನುಜ ಜನ್ಮ ಸಾಧನವಪ್ಪಹೊನ್ನು ಹೆಣ್ಣು ಮಣ್ಣು ಎನಗೆ ಬೇಡ ಬೇಡಪ್ಪಎನ್ನ ಬೋಧೆ ಕೇಳದಿರಲು ಕೆಟ್ಟುಹೋದೆಯಪ್ಪ 4 ವಾಸನದಿಂದ ತಿರುಗುವೆ ರಾಟಾಳರಂತಪ್ಪದೇಶಿಕ ಸದ್ಗುರು ಹೊಂದು ದೇವನಹೆಯಪ್ಪನಾಶವಹವು ನಾನಾ ಗುಣಗಳು ಜೀವನ ತನುವು ಅಪ್ಪಈಶ ಚಿದಾನಂದನಹೆ ಜನ್ಮವಳಿದು ಅಪ್ಪ 5
--------------
ಚಿದಾನಂದ ಅವಧೂತರು
ಅಂಬಾ ಮೈದೋರು ಶಾರದಾಂಬಾನಂಬಿದೆ ನಿನ್ನ ಅಂಬಾ ಮೈದೋರು ಶಾರದಾಂಬಾಪತಾಯೆ ಕಮಲಾಸನಜಾಯೆ ನ'ುಸಿದೆ ನಿನ್ನತಾಯೆ ಬಿಡದೆನ್ನನಸೂಯೆ ರಾಗಾದಿಗಳಿಂನೋಯೆ ನೋಡದಿಹರೆ ಮಾಯೆ ಬೇಡಿದವರ'ೀಯೆ ಪಾಪಕರ್ಮಗಳು ಬೇಯೆ ದಾರಿದ್ರವುಸೀಯೆ ಸರ್ವಲೋಕಪ್ರಿಯೆ ಕೃಪಾಲಯೆ 1ಮರತು ನಿನ್ನ ಧ್ಯಾನವ ಬೆರತು ಸತಿಸುತರೊಳು ಕರ್ಮಕಾಮ್ಯವ ಮಾಡಿ ಮರೆತು ಪೋಗಿ ಸುಖವುನರತು ಮೈಯೆಲ್ಲ ಮೋಹತೊರದ ನೊಂದೆನಿದಕೆಹೊರತು ನಾನಿನಿಸು ಪಾಪ ಬರತು ಪೋಗಲಿದರಿತು ಭಕ್ತಿಯ ಭಕ್ತ ಸರಿತೂಕದವನೆ ನೀನು2ಬಂದು ಚಿಕನಾಗಪುರದಿ ನಿಂದು ವರವೆಂಕಟಗಿರಿಚಿಬಂಧು ವಾಸುದೇವಾರ್ಯನೆಂದು ಜನರ ದುರಿತದಂದುಗವಳಿದು ಬಾರೆಂದು ಕರೆದು ಜ್ಞಾನಸಿಂಧು'ನೊಳು ಗೀತಾರ್ಥ'ದೊಂದು ನಿನಗೆ ಸಾಕೆಂದು ಧನ್ಯತೆಯನು ಹೊಂದುಯೆನಿಸಲೆಂದೆಂದೂ 3
--------------
ತಿಮ್ಮಪ್ಪದಾಸರು
ಅಬ್ಬಬ್ಬ ಈ ವರನ ಅದ್ಭುತಾಕೃತಿ ನೋಡಿ ಉಬ್ಬುಸವು ಮಿಗಿಲಾಯ್ತು ಸಹಿಪೆನೆಂತು ಕೆಮ್ಮೀಸೆ ಕೆಂಗಣ್ಣು ಕೆಂಪಾದ ರೋಮಗಳು ಹೆಮ್ಮಾರಿಯಂದದೊಳು ಮೊರೆವಮಿಗಿಲು ಕೆನ್ನೀರು ಪಾನದಿಂದುನ್ಮತ್ತನಂದದಿಂ ಘನ್ನಘಾತಕನಾಗಿ ಮೆರೆವ ಬೀಗಿ ಕರುಳ ಮಾಲೆಯ ಧರಿಸಿ ಮೆರೆಯುತಿಹನೀ ಸಹಸಿ ತರತರದಿ ಸುರನರರು ನಡುಗುತಿಹರು ಸ್ತಂಭವಿದೆ ಜನ್ಮಸ್ಥಲವಾಯಿತಿವಗೆ ಕುಂಭಿಣೀಯಂಬರಕೆ ಮಧ್ಯದೊಳಗೆ ಸಂಭ್ರಮದಿ ನೆಲಸಿಹನೆ ಪಡಿಯಮೇಲೆ ನಂಬಿದೆನು ಶೇಷಗಿರಿವರನ ಲೀಲೆ
--------------
ನಂಜನಗೂಡು ತಿರುಮಲಾಂಬಾ
ಅಭಯವನಿತ್ತು ಕಾಯೊ ರಂಗಯ್ಯ ನಿನ್ನಡಿಗೆರಗುವೆನು ನಾನು ಪ ಭಾಷ್ಯಕಾರರಿಗೆರಗಿ ಶ್ರೀವೇದಾಂತ ಗುರುಗಳಿಗೆ ವಂದಿಸಿ ಪತಿಯ ಪಾದಾರವಿಂದಕೆ ನಮಸ್ಕರಿಸಿ ಲಕ್ಷ್ಮೀಪತಿ ನಿಮ್ಮ ಕರಗಳ ಸ್ತುತಿಸಿ ಬೇಡುವೆ ನಾನು 1 ಮತ್ಸ್ಯಾವತಾರನಾಗಿ ವಾರಿಧಿಯೊಳಗಿರ್ಪ ದೈತ್ಯನ ಕೊಂದು ಹೆಚ್ಚಿನ ವೇದವ ಅಜನಿಗೆ ತಂದಿತ್ತೆ ಭಕ್ತವತ್ಸಲ ನಿಮ್ಮ ಕರಕಮಲಗಳಿಂದ 2 ದೇವದೈತ್ಯರ ಮಧ್ಯದೀ ವಾರಿಧಿಯನ್ನು ವೇಗದಿಂದಲೆ ಮಥಿಸೇ ಆವಸುರರು ಅಪಹರಿಸಿದ ಅಮೃತವ ಸಾಧುಜನಗಿತ್ತ ಆ ವಿನೋದದ ಕರಗಳಿಂದ 3 ಕ್ರೋಢರೂಪವ ಧರಿಸಿ ಹಿರಣ್ಯಾಕ್ಷನ ಕೋರೆಯಿಂದಲೆ ಕೊಂದು ಧಾರುಣಿಯನು ತಂದು ಆದಿಮಾನವಗಿತ್ತ ವಾರಿಜಾಕ್ಷನೆ ನಿಮ್ಮ ಧೀರಹಸ್ತಗಳಿಂದ 4 ಕರುಳ ಬಗೆದ ವನಮಾಲೆಯ ಧರಿಸಿದೆ ಶ್ರೀಪರಮಪಾವನ ನಿಮ್ಮ ಕರುಣಹಸ್ತಗಳಿಂದ 5 ತಟ್ಟನೆ ಯಜ್ಞಶಾಲೆಗೆ ಬಂದು ದಾನವ ಪುಟ್ಟ ಕರಗಳಿಂದ ಅರ್ತಿಯಲಿ ಬೇಡಿದ 6 ಅಂದು ಕ್ಷತ್ರಿಯರ ಕುಲವ ಕೊಡಲಿ ಪಿಡಿದುದ್ದಂಡ ದಿಂದಲಿ ಕಡಿದು ತಂದೆಯ ನುಡಿ ಕೇಳಿ ತಾಯಿ ಶಿರವನರಿದೆ ಇಂದಿರಾಪತಿ ನಿಮ್ಮ ಆನಂದ ಕರದಿಂದ 7 ಶಶಿಮುಖಿ ಸೀತೆಗೋಸ್ಕರ ಧನುವನು ಮುರಿದ ಅಸಮಸಾಹಸ ನಿಮ್ಮ ಕುಶಲಹಸ್ತಗಳಿಂದ 8 ಘೋರ ಪ್ರಳಯಸುರನ ಸಂಹರಿಸಿದೆ ವಾರಿಜಾಕ್ಷನೆ ನಿಮ್ಮ ಧೀರಹಸ್ತಗಳಿಂದ 9 ಮಧುರೆಯೊಳಗೆ ಜನಿಸಿ ಗೋಕುಲಕೈತಂದು ಲೀಲೆಯ ತೋರಿ ಮುದದಿಂದ ಪಾಲಬೆಣ್ಣೆ ಕದ್ದು ಗೋಪಿಯರಲ್ಲಿ ಪಿ ಡಿದೆಳೆದೆ ಉಡುರಾಜನನು ಶ್ರೀಕರದೊಳು 10 ಪತಿವ್ರತೆಯ ವ್ರತವ ಭಂಗವ ಮಾಡಿ ಚಪಳಚಾರನಾಗಿ ಅತಿಶಯವಾದ ರಾಕ್ಷಸರ ಸಂಹರಿಸಿದೆ ಪೃಥವಿ ಪಾಲಿಪ ನಿಮ್ಮ ಚತುರಹಸ್ತಗಳಿಂದ 11 ಕಲ್ಯ್ಕಾವತಾರನಾಗಿ ಕುದುರೆ ಏರಿ ಸಂಹರಿಸುತಲೆ ಬಹು ಮಲಕರಗಳಿಂದ ದೇವ ಪರಮಪುರುಷ 12 ಕಂದ ಧ್ರುವ ತಾನಡವಿಯಲಿ ನಿಂದು ತಪ ಮಾಡಲು ಚಂದದಿ ಮಾಡಲು ಬಂದು ಸೇವೆಯನಿತ್ತು ಮತಿಗಾಗಿ [ಅಂದು] ಶಂಖವನೊತ್ತಿದ ಕರದೊಳು 13 ಕಾಲ ಪಿಡಿಯೆ ಗಜೇಂದ್ರ ನಿಮ್ಮ ಸ್ತುತಿಸೆ ಚಕ್ರ ಬಂದ ಕರುಣಹಸ್ತಗಳಿಂದ 14 ಅಂದು ಸುಧಾಮ ತಾನು ಶ್ರೀಹರಿಯ ಮಂದಿರಕೆ ಬರಲು ಚಂದದಿಂದಲೆ ಆತಿಥ್ಯ ಮಾಡಿ ಅವ ಕೊಂಡ ಕರಗಳಿಂದ 15 ದುರುಳ ದುಶ್ಯಾಸನ ಸಭೆಯೊಳು ದ್ರೌಪದಿಯ ಸೀರೆಯೆಳೆಯು ತಿರುವಾಗ ಹಾ ಕೃಷ್ಣ ದ್ವಾರಕಾವಾಸ ಯೆಂದು ಮೊರೆಯಿಡೆ ಕೇಳಿ ಅಕ್ಷಯವೆನುತ ನೆಚ್ಚವನೆಚ್ಚ ಕರದೊಳು 16 ಗ್ರಾಸವ ಬೇಡಲು ಪರಮಪುರುಷ ನೀನೇ ಗತಿಯೆಂದು ದ್ರೌಪದಿ ಮೊರೆಯಿಡೆ ಅಕ್ಷಯವ ಮಾಡಿದ ಕರದೊಳು * 17 ಮಂದಮತಿಯು ಜ್ಞಾನವೂ ನಿಮ್ಮ ಮಹಿಮೆ ಒಂದು ತಿಳಿಯದು ಇಂದಿರೆ ರಮಣ ಶ್ರೀರಂಗನ ದಯದಿಂದ ವಂದಿಸಿ ಬೇಡಿದೆ ಆನಂದಕರಗಹಳನ್ನು 18 ವೇದಶಾಸ್ತ್ರಗಳನ್ನು ಅರಿಯದ ಪಾಮರಸ್ತ್ರೀಜನ್ಮವು ಕಾಮ ಕ್ರೋಧವು ಲೋಭ ಮೋಹದಿಂದಲೆ ಬಿಡಿಸಿ ನಿಮ್ಮ ಪಾದದೊಳಿರಿಸೆನ್ನ ಶ್ರೀನಿವಾಸನೆ ಅಭಯವನಿತ್ತು ಕಾಯೊ 19
--------------
ಯದುಗಿರಿಯಮ್ಮ
ಅಭಾಗ್ಯಾದ ಲಕ್ಷ್ಮಿ ಹೋಗಮ್ಮ ದೊಡ್ಡಮ್ಮ ನೀ ಪ ಪೀಡೆಕಾಲುಗಳ ಮುಚ್ಚುತ ನೀವೋ ಡÉೂೀಡಿ ಪೋಗುತಲಿ ನಿಲ್ಲದೆ ವ್ಯಾಜ್ಯಗ- ಳಾಡುವ ಸ್ಥಳದಲಿ ನೆಲೆಯಾಗುತ ಹಾಳ ಗೋಡೆಯೊಳಿರುತಿಹ ಕತ್ತೆಯಂತೆ 1 ದೀಪದ ನೆರಳಲಿ ಕೋಪಿಯಮನದಲಿ ಲೋಪವಾದಕರ್ಮದಿ ಸಂತತವು ನಾಪರನೆಂಬುವ ಮಾಢನಲ್ಲಿ ನಿ- ವ್ರ್ಯಾಪಾರಿಯ ಚಿತ್ತದಿ ಯಾವಾಗಲು 2 ಪಾದ ಗದರಿಸುತಾಡುವ ಬಿರುನುಡಿಯಲಿ ನಿಂ- ದ್ಯದ ಮಾತಾಡುವವರÀ ಬಾಯಲಿನೀ ಮುದದೊಳಿದ್ದು ಅಜ್ಞಾನವ ಪಾಲಿಸೆ 3 ಪ್ರತಿದಿನದಲಿ ಅಳುತಿಹ ಸಂಸಾರದಿ ನೀ ಪತಿಯೊಡನವರೊಳಿರುತ ಮೂರ್ಖರಲಿಯ- ನೃತವಾಡಿಸಿ ನರಕವ ಪೊಂದಿಸಲು 4 ಮರವೆ ಸುಷುಪ್ತಿಯು ಬಹುವಿಧ ಮೋಹವು ನೆರೆನಂಬಿದವರಿಗೀವುತ ನೀಹಗ- ಲಿರುಳು ಕಲಿಯೊಡನೆ ಯೆಡೆಬಿಡದಲ್ಲಿಗೆ 5 ಹಾಳುಮಾಡಿಕೊಂಬುವ ಜನಗಳು ನಿ- ವೂಳಿಗವನು ಕೈಕೊಳ್ಳುತ ಬಿಡದೆ 6 ಗುರುರಾಮ ವಿಠಲನ ಶರಣ ಜನರ ಕ- ಣ್ದೆರದು ನೋಡದಿರು ಬೇಡುವೆ ನಿನ್ನನು ನಿರುತವು ನಿರ್ದಯ ಮಾಡುತ ದುರುಳರ ಪರಮ ಕೃಪಾದೃಷ್ಟಿಯಲಿ ನೋಡಲು 7
--------------
ಗುರುರಾಮವಿಠಲ
ಅಭಿಮಾನ ಕಳೆವಂಥ | ಸುಲಭ ಮಾರ್ಗವನೇ |ಪ್ರಭುವೆ ಹರಿ ನಿನ್ನ ಸ್ಮøತಿ | ಸರ್ಬದಲಿ ಈಯೋ ಪ ಕರ್ಮ | ಸೃಷ್ಟಿ ನಡೆಸುವಲಿ |ಇಷ್ಟು ತತ್ವೇಶರನು | ಸುಷ್ಠು ಕರ್ಮವ ನಡೆಸೆಭ್ರಷ್ಟ ಎನ್ನಿಂದೆಂಬ | ಕರ್ತೃತ್ವದಲ್ಲಿರುವಾ 1 ಕರ್ಮ ಕರ್ಮ ನಾಮಕನೇ 2 ತನುನಿಷ್ಠ ತತ್ವೇಶರ | ಗಣಿತದ ಕರ್ಮಗಳತನು ತಮ್ಮ ಇಂದ್ರಿಯದಿ | ಅನುನಯದಿ ಗೈಯ್ಯೋ |ಎನ ತನುವು ಇಂದ್ರಿಯವೆ | ಕಾರಣವು ಎಂಬಂಥಹೀನ ಕಾರಕ ಸ್ವಾಮ್ಯ | ಮಾನವೆಂಬಂಥಾ 3 ಹಲವು ತತ್ವರು ದೇಹ | ದಲಿ ನಿಂತು ಕರ್ಮಗಳಹಲವು ಗೈಯುತ ಹರಿಗೆ | ಒಲಿದು ಅರ್ಪಿಸುತಿರೇ |ಫಲವು ಹಂಚಿಪ ಹರಿಯ | ಫಲಸ್ವಾಮ್ಯ ತಿಳಿಯದಿಹತಿಳಿಗೇಡಿ ಯೆನ್ನ ಭ್ರಮ | ಒಲಿದು ನೀ ಕಳೆಯೋ 4 ಅಹಿಕ ಪಾರತ್ರಿಕವು | ವಿಹಿತ ಸುಖವೆರಡರಲಿಅಹಿಕ ದುಃಖದ ವಿರಲು | ಬಹುದು ಮೋಕ್ಷೆರಿ ಬಾ |ಅಹಿತ ಮತಿ ಕಳೆಯುತ | ಶ್ರೀಹರಿಯೆ ನಿನ್ವೊಲಿಮೆಮಹಿತ ಮೋಕ್ಷದವೆಂಬ | ವಿಹಿತ ಮತಿ ಈ ಯೋ 5 ವಿಷಯದಲಿ ಮೈ ಮೆರೆತು | ವಿಷಯೋಪ ಭೋಗಗಳೆಅಸಮ ಪುರುಷಾರ್ಥಗಳ | ಲೇಸು ಪ್ರದವೆಂಬಾ |ವಿಷಯಾಭಿಮಾನಗಳು | ನಶಿಪಂತೆ ನೀ ಮಾಡಿವಿಷಯಾದಿಗಳಿಗೆಲ್ಲ | ಈಶ ನೀವೆನೆ ತಿಳಿಸೋ 6 ಕಕ್ಕಸದ ಅಭಿಮಾನ | ಷಟ್ಕಗಳ ನೀ ಕಳೆದುಅಕ್ಕರದಿ ತಾಯ್ತನ್ನ | ಮಕ್ಕಳನು ಪೊರೆವಂತೇ |ಲೆಕ್ಕಿಸದಲೆನ್ನಯ | ಲಕ್ಷ ಅಪರಾಧಗಳ ಕ್ಷಮಿಸಿಚೊಕ್ಕ ಗುರು ಗೋವಿಂದ | ವಿಠ್ಠಲನೆ ಸಲಹೋ 7
--------------
ಗುರುಗೋವಿಂದವಿಠಲರು
ಅಮೃತ ಗಜಾನನ ಯನ್ನಾಲಯದಿ ತಗದಾ ಆನನಾ ಪ ತನುಜನ ತನ್ವೀ ತನುವಿನ ಘನತರ ಬಾಧೆಯು ಅನುದಿನಾದವರಾ ತೊಳಲಿಸೆ ಅನಷ್ಟೇಕದಂತ ತನು ರಕ್ಷಿಸಿ ತನ್ನ ಜನರೆಂದೆಣಿಸೆಮ್ಮ ಮನದಿ ನೆಲಸೀದಾ 1 ಸಂತತಾನಂತ ಚೀಂತೆಯು ಅಂತರ ದುಗುಡವು ಎಂತು ಕಂಗೆಡಿಸಿ ನೋಳ್ಪವು ಸುತಗಜಾನನ ಸಂತ ಮಹಿಮ ಎನ್ನಂತ ತಿಳಿದು ತಾ ಚಿಂತೆಯ ತವಿಸಿದಾ 2 ಶಿರಿಯನ್ನಾ ಗುರುತಾವರಿಯಳು ಮೆರದಿ ಹರನು ಬಂದು ನಿರುತ ನಿನ್ನನಾ ಸ್ತುತಿಪೆನು ಪರಿಪರಿನುತಿಪುದ ನರಿತು ಗಜಮುಖನು ನರಸೀಂಹವಿಠ್ಠಲಗೆರಗಿ ಹರಸೀದಾ 3
--------------
ನರಸಿಂಹವಿಠಲರು