ಒಟ್ಟು 432 ಕಡೆಗಳಲ್ಲಿ , 80 ದಾಸರು , 356 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪನ್ನಗಾಚಲ ವಾಸ - ಪದುಮಿನೀಶಾ ಪ ಬನ್ನ ಬಡಿಸುವ ರೋಗವನ್ನು ಕಳೆ ಶ್ರೀಶಾ ಅ.ಪ. ತನುವ ರಥವನೆ ಮಾಡಿ ತತ್ಸೂತ ನೀನೆನಿಸೀಮನ ಆದಿ ಕರಣವೆಂಬಶ್ವಗಳ ಬಿಗಿಸೀ ||ಗುಣವೆನಿಪ ವಾಗಭಿ - ಮಾನಿಯನೆ ಬಂಧಿಸೀಚನ್ನ ರಥವನು ಚರಿಪೆ ಜೀ | ವನ್ನ ಕುಳ್ಳಿರಿಸೀ 1 ಸೂತ್ರಾಂತರಾತ್ಮಕನೆ | ಸೂತ್ರಧಾರಿಯೆ ನೀನುಮಾತ್ರಾದಿ ಸುಖ ದುಃಖ | ಸಮವೆಂದು ತಿಳಿಸೋ ||ಧಾತೃ ಪಿತ ನೀನಹುದೊ | ಮಾತರಿಶ್ವ ಪ್ರಿಯನೆಗಾತ್ರ ಬಳಲಿಸ ಬೇಡ | ಪ್ರಾರ್ಥಿಸುವ ನಿನ್ನಾ 2 ಘನ್ನ ಮಹಿಮನೆ ನಿನ್ನ | ಏನು ಬೇಡಲಿ ನಾನುನಿನ್ನ ನಾಮ ಸ್ಮರಣೆ | ಅನ್ನಂತ ವೀಯೋನಿನ್ನೊಲಿಮೆ ಉಳ್ಳನಕ | ಇನ್ಯಾವ ಭಯವಯ್ಯಪನ್ನಂಗ ಶಯನ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಪವಮಾನ-ಪಾವನಮೂರ್ತಿಯು ನೀನು ಕಾವುದೆಮ್ಮನು ಪ ಭುವನ ಚತುರ್ದಶದಲ್ಲಿಹ ಜೀವರ ಜೀವನ ನಿನ್ನದೋ ದೇವವರೇಣ್ಯಅ.ಪ ತೃಣಜೀವರಾದಿ ಸರ್ವರೊಳು ನಿಂತು ಗುಣಕಾಲಕರ್ಮಕ್ಕನುಗುಣನಾಗಿಹ ಫಲವ ನೀನಿತ್ತು ಕ್ಷಣ ಬಿಡದೆಲೆ ನೀನಗಣಿತ ಕಾರ್ಯವ ದಣಿಯದೆ ಮಾಡಿಸಿ ಧಣಿಗರ್ಪಿಸುವಿಯೊ1 ಶ್ರೀ ಜಗದ್ಗುರುವರೇಣ್ಯನೆ ನೀನು ಋಜುಸಾರ್ವಭೌಮ ನಿಜ ಪಾದಾಂಬುಜವ ತೋರಿಸೊ ಇನ್ನು ಈ ಜಗ ಕಾರ್ಯ ನಿವ್ರ್ಯಾಜದಿ ಮಾಡುತ ನೀ ಜಯಾಪತಿಗರ್ಪಿಸಿ ಅಜಪದ ಪಡೆದೆಯೊ2 ಕೋಟಿತ್ರಯರೂಪನೆ ಕಾಯುವುದಯ್ಯ ದಾಟಿಸು ಭವಶರಧಿಯಾ ಪಾಟುಪಟ್ಟದ್ದೆಲ್ಲ ನೀನರಿಯಾ ಸಾಟಿಯುಂಟೆ ಲಲಾಟನೇತ್ರ ಬೆ ನ್ನಟ್ಟಿ ಬರಲು ಕೇದಾರಕೆ ಅಟ್ಟಿದೆ 3 ಮರಣ ಜನುಮಂಗಳು ಬಂದರೆ ಬರಲಿ ಹರಿಗುರುಗಳಲಿ ಸ್ಮರಣೆಯು ತಪ್ಪದೆ ನಿಶ್ಚಲವಿರಲಿ ಉರುತರ ಹರಿಸರ್ವೋತ್ತಮವೆಂಬುವ ತರತಮ ಭೇದವು ನಿರುತವು ಇರಲಿ 4 ಶ್ರವಣ ಮನನಾದಿ ಭಕುತಿಯನ್ನು ಪವಮಾನ ನೀ ಕೊಡು ಅನುಮಾನಿಸಬೇಡವೋ ನೀ ಇದಕ್ಕಿನ್ನು ಭವಮೋಚಕ ಶ್ರೀ ವೇಂಕಟೇಶ ಇನ್ನೊಳಹೊರಗಿಹನೆಂಬುವುದನು ತೋರೋ 5
--------------
ಉರಗಾದ್ರಿವಾಸವಿಠಲದಾಸರು
ಪಾದ - ಮೋದದಿ ಭಜಿಸಿದ ಮನುಜನೆ ಬಲು ಧನ್ಯನೋ ಪ ಬೋಧ ಪಾದ ಸೇವಕರಾದ ಮಹಸುಸ್ವಾದಿ ಪುರದೊಳು | ವೇದ ವಿನುತನ ಸ್ತುತಿಸಿ ಮೋದಿಪ ಅ.ಪ. ವಾಗೀಶ ಮುನಿಪ ಸದಾಗಮಜ್ಞನ ವರ | ವೇಗದಿಂದಲಿ ಫಲಿಸಲುಜಾಗು ಮಾಡದೆ ಗೌರಿ ತತ್ಪತಿ | ರಾಗ ರಹಿತರು ನಿನ್ನನೊಪ್ಪಿಸೆ |ರೋಗಹರ ಹಯವದನ ಪದವನು | ರಾಗದಿಂದಲಿ ಭಜಿಪ ಯತಿ 1 ತಿಮಿರ ತಾಮರಸ ಬೋಧ ಶಾಸ್ತ್ರವ | ಪ್ರೇಮದಿಂದಲಿ ಪೇಳ್ದಯತಿವರ 2 ಮೂರ್ತಿ ಪ | ರಾಕ್ರಮನಿಂ ತರಿಸೀಚಕ್ರಿಯನೆ ನಿಲಿಸ್ಯುತ್ಸವದಿ ಸುರಪನ | ವಿಕ್ರಮದ ಆಳ್ಬಂದು ಕರೆಯಲು |ಉತ್ಕ್ರಮಣ ತೊರೆದವರ ಕಳುಹುತ | ವಿಕ್ರಮನ ಪದಕೆರಗಿನಿಂದ3 ನಿಗಮವೇದ್ಯನ ಬಗೆಬಗೆಯಲಿ ಸಂಸ್ಕøತ | ಮಿಗಿಲು ಪ್ರಾಕೃತ ಪದ್ಯದೀಸುಗುಣಮಣಿಮಯ ಮಾಲೆಗಳ ಪ | ನ್ನಗನಗೇಶನ ಕೊರಳೂಳರ್ಪಿಸಿ |ಚಿಗಿ ಚಿಗಿದು ಆನಂದದಿಂದಲಿ | ದೃಗು ಜಲದಿ ಹರಿಪದವ ತೊಳೆದ 4 ಸುರನದಿ ನದಿಧರರಾದಿ ಸ್ಥಾಪಿಸುತಲ್ಲಿ | ಎರಡೆರಡೊಂದು ವೃಂದಾವನವಾ | ಸ್ಥಿರಪಡಿಸಿ ಶ್ರೀವ್ಯಾಸ ಸಮ್ಮುಖ | ವರ ನರೇಯಣ ಭೂತಬಲದಲಿಇರಿಸಿ ಗುರು ಗೋವಿಂದ ವಿಠಲನ | ನಿರುತ ಧ್ಯಾನಾನಂದಮಗ್ನ5
--------------
ಗುರುಗೋವಿಂದವಿಠಲರು
ಪಾದ ಪದ್ಮದಲಿಮಾಯೆ ದಾಟಿತು ಮಹಿಮಳೇ ದೇವಿ ಪಕಾಯ ಕರ್ಮಗಳೆಂಬ ಕಾತ್ಯ ಸಮುದಾಯವನುದಾಯದಿಂದಳವಡಿಸಿದೆ ದೇವಿ ಅ.ಪಆಜಸುರಾದಿಗಳಿಂಗೆ ಅಮರಿಸಿಹೆ ಭಾಗ್ಯವನುಭಜಿಸುತಿಹರನವರತವೂ ದೇವಿನಿಜದಿರವನೂ ಕೊಟ್ಟು ನಿಲಿಸಿರಲು ನೀನವರತ್ರಿಜಗ ವಂದಿತರಾದರು ದೇವಿಸುಜನ ವಂದಿತನಾದ ಶ್ರೀಹರಿಯೆ ನೀನಾಗಿರುಜುಕರದಲಾಳುತಿರುವೆ ದೇವಿಕುಜನನಾದರು ನಾನು ಕರವಿಡಿದು ನೀ ಕಾಯ್ದುದ್ವಿಜಜನ್ಮದೆಣಿಕೆದೋರ್ದೆ ದೇವಿ 1ಅಣುಮಾತ್ರವಿರಲಿಲ್ಲ ವಿಷಯ ಭೋಗಕೆ ಬೀಜದಣಿಸಿದುದು ದಾರಿದ್ರವು ದೇವಿಕಣುಗಾಣದಿದ್ದವಗೆ ಕೊಟ್ಟಿಯನ್ನವ ನೀನೆಮಣಿವದನು ಮಾಡ್ದೆ ನೀನೆ ದೇವಿಪ್ರಣತ ರಕ್ಷಾಮಣಿಯೆ ಪರತತ್ವವನ್ನಿತ್ತೆಎಣಿಪುದೆಂತೀ ಮಹಿಮೆಯಾ ದೇವಿಕ್ಷಣಮಾತ್ರ ಪೂಜೆಯನು ಕ್ರಮದಿ ಮಾಡ್ದವನಲ್ಲಭಣಿತೆುದ ಬಗೆವರಾರು ದೇವಿ 2ಪರಿತೃಪ್ತಳಾಗಿರುವೆ ಪರಮಭಾಗ್ಯವನೀವೆನೆರೆ ನೀನೆ ನಿರ್ಮಿಸಿರಲು ದೇವಿಇರಿಸಿದಂತಿರುವರಿಂದೇನಹುದು ಕೊಡುವದಕೆಅರಿಯಲಖಿಳವು ನಿನ್ನದೇ ದೇವಿಮರುಗಿ ನೀನೇ ಕಾಯ್ವೆ ಮಾತೃ ರೂಪಹುದಾಗಿಸುರತರುವಿನುಪಮಾನಳೇ ದೇವಿವರದ ತಿರುಪತಿ ವಾಸ ವೆಂಕಟೇಶನ ರೂಪಧರಿಸಿಹಳೆ ದಿವ್ಯ ಲಕ್ಷ್ಮೀದೇವಿ 3ಕಂ||ಸ್ಥಿರವಾರವಿಂದು ಕೇಶವಸ್ಥಿರವಹುದಿತ್ತಭಯವೆನಗೆ ಭಯವನು ಬಿಡಿಸೈಸ್ಥಿರವಲ್ಲದ ಸಂಸಾರವಸ್ಥಿರವೆಂದೇ ನೊಂದೆನೈಯ ವೆಂಕಟರಮಣಾಓಂ ನಾರಾಯಣಾಯ ನಮಃ
--------------
ತಿಮ್ಮಪ್ಪದಾಸರು
ಪಾದವನು ನಂಬಿದೆನೊ ಪರಮಪುರುಷಾ ಪಾವನನ ಮಾಡೆನ್ನ ಶ್ರೀರಂಗನಾಥ ಪ ಪಾದ ಪಾದ ಬಲಿಯ ಪಾದ ಪಾದ 1 ಪಾದ ಪಾದ ಪಾದ ಪಾದ 2 ಪಾದ ಪಾದ ಪಾದ 3 ಪಾದ ಪಾದ ಪಾದ ಪಾದ 4 ದುರುಳ ಕಂಸಾಸುರನ ಎದೆಯ ತುಳಿದ ಪಾದ ಮುಚುಕುಂದಗೆ ಮುಕ್ತಿಯನಿತ್ತ ಪಾದ ಕಿಚ್ಚು ಬಳಸಲು ಪರ್ವತವನೆತ್ತಿದ ಪಾದ5 ಶಿಲೆಯಾದ ಆಹಲ್ಯೆಯನು ಕಾಯ್ದ ಪಾದ ಪಾದ ಹರನ ಧನುವನು ಮುರಿದು ಜಾನಕಿಯ ತಂದ ಪಾದ ಪಾದ 6 ಪಾದ ಪಾದ ಸೇತುಬಂಧನ ಮಾಡಿ ಸೀತೆಯನು ತಂದ ಪಾದ ಪಾದ 7 ಪಾದ ಪಾದ ಪಾದ 8 ರಾಜಸೂಯಾಗದಲಿ ಪೂಜೆಗೊಂಡ ಪಾದ ಪಾದ ದಂತವಕ್ರಾದಿಗಳನು ಸೆಳೆದುಕೊಂಡ ಪಾದ ಪಾದ 9 ಕÀುರುಪಾಂಡವರಿಗೆ ಸಂಧಿಗೈತಂದ ಪಾದ ವಿದುರನಾ ಮನೆಯಲ್ಲಿ ಭೋಜನಗೈದ ಪಾದ ಪಾದ ದುರುಳ ದುರ್ಯೋಧನನ ಉರುಳಿಸಿದ ಶ್ರೀಪಾದ 10 ರಣದೊಳಗೆ ಅರ್ಜುನಗೆ ಸಾರಥಿಯಾದ ಪಾದ ದೊರೆ ಧರ್ಮಾದಿಗಳ [ನು] ಒಲಿದ ಪಾದ ಪಾದ ಪಾದ 11 ಪಾದ ಇಕ್ಷ್ವಾಕು ಶ್ರೀರಾಮರಾರಾಧಿಸಿದ ಪಾದ ಧರ್ಮವರ್ಮಾದಿ ಚೋಳೇಂದ್ರ ಪೂಜಿತ ಪಾದ ಪಾದ 12 ತೊಂಡಮಾನ್ ಚಕ್ರವರ್ತಿಗೊಲಿದು ಬಂದ ಪಾದ ಶೇಷಾದ್ರಿಗಿರಿಯಲ್ಲಿ ನೆಲೆಸಿರ್ಪ ಪಾದ ಪಾದ ಪಾದ 13 ಅಜನ ಯಜ್ಞಕುಂಡದೊಳಗುದಿಸಿ ಬಂದ ಪಾದ ಪಾದ ವ್ಯಾಧರೂಪಿನಲ್ಲಿ ನಡೆತಂದ ಶ್ರೀಪಾದ ಪಾದ 14 ಪಾದ ಯಾದವಾಗಿರಿಯಲ್ಲಿ ನೆಲೆಸಿರ್ಪ ಪಾದ ವರಸಂಧಿಗೃಹದಲ್ಲಿ ವಾಸವಾಗಿಹ ಪಾದ ಪಾದ 15 ಕರುಣದಿಂದರ್ಜುನಿಗೆ ಸಾರಥಿಯಾದ ಪಾದ ಕೈರವಿಣೀ ತೀರದಲಿ ನೆಲೆಸಿರ್ಪ ಪಾದಾ ರುಕ್ಮಿಣೀ ಬಲಭದ್ರರೊಡನೆ ಒಪ್ಪಿದ ಪಾದ ಕರುಣ ವೆಂಕಟಕೃಷ್ಣನೆಂಬೊ ಬಿರುದರಳ್ಳ ಪಾದಾ 16
--------------
ಯದುಗಿರಿಯಮ್ಮ
ಪಾಲಿಸು ಪಾಲಿಸು ಪಾರ್ವತಿ ತನಯನೆ ಫಾಲಚಂದ್ರಯುತನೆ ಕಾಲ ಸಂಭಾವನಲೋಲುಪ ವಾರಿಜಾಸ್ಯನುತನೆ ಪ ಸುಜನ ಗಜವದನಾ ಸುರಕುವಲಯ ದಿನಕರ ಧೂರ್ಜಟಿಸುತ ಗಣಪ 1 ಕಾಮಿತ ಫಲಗಳ ಪಡೆಯಲು ಸುಜನರು ನೇಮದಿ ಪೂಜಿಪರು ಸಾಮಜ ವದನನೆ ಭಕ್ತರಭೀಷ್ಟವÀ ಪ್ರೇಮದಿ ಕರುಣಿಸುತ 2 ಗಾನಲೋಲ ವರತಾಂಡವ ಪ್ರೀತನೆ ಕೋಮಲಾಂಗ ಸತತಂ ಧೇನುನಗರ ಸಂರಕ್ಷಣ ದಕ್ಷನೆ ಸಾನುರಾಗದಲನಿಶಂ 3 ಇಂದ್ರಾದಿ ದಿವಿಜರೆಲ್ಲ ಕುಂದುತ್ತ ದೈತ್ಯ ಭಯದಿಂ ಸುಂದರಿ ನಿನ್ನ ಭಜಿಸೆ ನಿಂದೆಲ್ಲರನ್ನು ಪೊರೆದೆÀ 4 ಕಮಲಾಕ್ಷಿ ವಿಮಲಪಾಣಿ ಕಮಲಾಪ್ತ ಮುಖ್ಯರಮಣೆ ಸುಮಶೋಭಮಾನವೇಣಿ ಕಮನೀಯ ದಿವ್ಯಪಾಣಿ 5 ಶಾಕಿನಿರೂಪೆ ದೇವಿ ಲೋಕೈಕ ವೀರ್ಯ ಧೈರ್ಯ ಬೇಕಾದ ವರಗಳಿತ್ತು ಶ್ರೀಕಾರ ಶಕ್ತಿಯೆನ್ನ 6 ಜ್ಞಾನವು ಮೌನ ಜಯವುಂ ಧ್ಯಾನ ಸುಮಂಗಲತ್ವಂಮಾನ ಸುಪುತ್ರ ಹಿತಮಂ ಧೇನು ಪುರೀಶೆ ಕೊಟ್ಟು 7
--------------
ಬೇಟೆರಾಯ ದೀಕ್ಷಿತರು
ಪುಂಡರೀಕಾಂಬಕ ಪರಮದಯಾಳೊ ಬ್ರ- ಹ್ಮಾಂಡರರಸನಾಥ ಬಿನ್ನಹ ಕೇಳೊ ಪ. ನಂಬಿದವನು ಬಲ್ಲೆ ನಿನ್ನ ಪಾದವನು ಇಂಬಾಗಿ ಸಲಹುವಿ ಎನ್ನ ಮಾನವನು ಕುಂಬಾರ ಜನರೆಂಬ ಕುಹಕದ ನುಡಿಯ ಶಂಭುವಂದಿತ ತಾಳಲಾರೆ ಎನ್ನೊಡೆಯ 1 ಅಜ ಭವೇಂದ್ರಾದಿ ಲೋಕೇಶರು ನಿನ್ನ ಭಜಿಸಿ ಪೊಂದಿಹರತ್ಯಧಿಕ ಭಾಗ್ಯವನ್ನು ಕುಜನರು ಕುತ್ಸಿತಾಹಂಕಾರವನ್ನು ತ್ಯಜಿಸುವಂದದಿ ಎನ್ನೊಳಾಗು ಪ್ರಸನ್ನ 2 ಗರುಡಗಮನ ಗಜರಾಜನ ಪೊರೆದಂತೆ ತ್ವರೆಯಿಂದೆನ್ನನು ಕಾಯ್ದರಹುದು ನಿಶ್ಚಿಂತೆ ಉರಗರಾಜೇಂದ್ರ ಶಿಖರ ಸನ್ನಿವಾಸ ಸಿರಿಯರಮಣ ಶುಭಕರ ಶ್ರೀನಿವಾಸ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪೂಜಾನುಷ್ಠಾನವ ಯೋಚಿಸಿ ಮನದೊಳುಪೂಜೆ ಷೋಡಶಗಳ ಮಾಜದೆ ಮಾಡಿರೋ ಪ ಉಷಃ ಕಾಲದಲೆದ್ದು | ಝಷಕೇತು ಪಿತ ನಾಮಉಸುರು ತಿಪ್ಪುದೇ ಪೂಜೆಯೋ 1 ಶೌಚ ಬಾಹ್ಯವು ಮೃತ್ತು ಶೌಚ ಮಾಡಿಕೊಂಡುಶುಚಿಷತ್ತು ನಿನ ನಾಮ ಉಚ್ಚರಿಪುದೆ ಪೂಜೆಯೋ2 ತುಲಸಿ ಮೃತ್ತಿಕೆ ಹಚ್ಚಿ | ತುಲಸಿ ವಂದನೆ ಮಾಡಿಅಲಸಾದೆ ಕೃಷ್ಣನ ವಲಿಸೂವುದೇ ಪೂಜೆಯೋ 3 ಗೋವನೆ ಬಳಸುತ್ತ ಗೋಪುಚ್ಛ ಪಿಡಿಯುತ್ತಗೋವ ವಂದಿಪುದೆಲ್ಲ ಗೋಪಾಲ ನಿನ ಪೂಜೆಯೋ4 ಸ್ನಾನ ಸಂಧ್ಯಾನ ಮೇಣೂಧ್ರ್ವ ಪುಂಡ್ರವ ಧರಿಸಿಭಾನುಗಘ್ರ್ಯವ ನೀಯೆ ಶ್ರೀನಿವಾಸ ಪೂಜೆಯೋ 5 ಪಾದ ತೀರ್ಥ ಸೇವನೆ ಪೂಜೆಯೋ 6 ಅಷ್ಟ ಮಹಾಮಂತ್ರ ಶಿಷ್ಪನಾಗುತ ಹೃದಯಅಷ್ಟ ಕಮಲದಲ್ಲಿ ಧ್ಯಾನ ಮಾಳ್ಪುದೆ ಪೂಜೆಯೋ 7 ಮಂಟಪೋತ್ತಮ ಪೂಜೆ ಸುಷ್ಠು ಕಲಶ ಪೂಜೆಶ್ರೇಷ್ಠ ಪಂಚಾಮೃತ ಪೀಠ ಶಂಖ ಪೂಜೆಯೋ 8 ಘಂಟನಾದಾ ಅಖಂಡ ಶ್ರೇಷ್ಠ ದೀವಿಗೆ ಪೂಜೆಪೀಠಾವರಣ ಹೃತ್ಪೀಠ ಚಿಂತನೆ ಪೂಜೆಯೋ 9 ಮೂರ್ತಿ ಗುರುಮೂತ್ರ್ವೆಕ್ಯವೆ ಪೂಜೆಯೋ || ಚಿಂತಿಸಿ ಸ್ವಾಂತಸ್ಥ ಬಿಂಬನೋಳೈಕ್ಯವಚಿಂತಿಸುತ್ತಾನೇಕ ಗೈವ ವೈಭವ ಪೂಜೆಯೋ 11 ಹೃತ್ಪುಂಡರೀಕಗೆ ಕಲ್ಪ ತರುವನೆ ಬೇಡುತ್ತಪ್ರೀತ್ಯಾದ ಮಾನಸ ಪದಾರ್ಥಗಳ ಪೂಜೆಯೋ 12 ಪೂರ್ಣ ಶೃತಿಯ ಭಾವ ಚೆನ್ನಾಗಿ ಗ್ರಹಿಸುತ್ತಪೂರ್ಣನ ಕಳೆಯೊಂದು ಪ್ರತಿಮಾದಲ್ಲಿರಿಸೋ 13 ನಿಷುಸೀದ ಶ್ರುತಿಯಂತೆ ವಸುದೇವ ಕೃಷ್ಣನೆಅಸಮ ಪೂಜಕ ಪೂಜ್ಯ ಅವನೇವೆ ತಿಳಿಯೊ 14 ಬಾಹ್ಯದರ್ಚನೆಗಳು ಶ್ರೀ ಹಸ್ತದಿಂದಲಿವ್ಯಾಹರಣೆಂಬೋದೆ ಹರಿ ಪೂಜೆಯೋ 15 ಆವಾಹನಭಿಷೇಕ ನೈವೇದ್ಯಾದಿ ಪೂಜೆದೇವಗಾರುತಿ ಶಂಖ ಭ್ರಮಣಾದಿ ಪೂಜೆಯೋ 16 ಸರ್ವವನರ್ಪಿಸಿ ಅಸ್ವಾತಂತ್ರ್ಯವ ಗ್ರಹಿಸಿಶರ್ವಾದಿ ವಂದ್ಯ ಬಿಂಬಗೆ ಸರ್ವ ಪೂಜೆಯೋ 17 ಸರ್ವಾಪರಾಧವ ಸರ್ವೇಶನಲಿ ಪೇಳಿವೈಶ್ವ ದೇವಾದಿಗಳ್ ಸತ್ಕರ್ಮಗಳೆ ಪೂಜೆಯೋ 18 ಯತಿಗಳರ್ಚನೆಯನ್ನು ಮತಿಯಿಂದ ಗೈಯುತ್ತಸುತ ವಿಪ್ರಾದಿಯ ಸಹ ಹುತಶೇಷ ಮೆಲ್ಲೋದೆ ಪೂಜೆಯೋ 19 ಪ್ರಾಣಾಗ್ನಿ ಹೋತ್ರಾನು ಸಂಧಾನದಲಿ ಮದ್ದುಪ್ರಾಣನ ಪ್ರಾಣ ವೈಶ್ವಾನರಗೀಯೋದೆ ಪೂಜೇ 20 ಅಂತರಂಗದ ಪೂಜೆಗೊಲಿದ ಸಂತತ ಹರಿಕಂತು ಪಿತನು ಗುರು ಗೋವಿಂದ ವಿಠಲಾ 21
--------------
ಗುರುಗೋವಿಂದವಿಠಲರು
ಪೌರಾಣಿಕ ಕಥನ ಸೃಷ್ಟಿಯಲಿ ಕಡು ದುಷ್ಟ ರಾವಣ ಕಟ್ಟಳೆಯ ಕಂಗೆಡಿಸಲು ಅಷ್ಟರೊಳು ಭಯಪಟ್ಟು ದಿವಿಜರು ಒಟ್ಟುಗೂಡುತ ಸ್ತುತಿಸಲು ಥಟ್ಟನೆ ದಯವಿಟ್ಟು ದಶರಥಪಟ್ಟಮಹಿಷಿಯೊಳುದಿಸಲು ದಿಟ್ಟ ಕೌಶಿಕನಿಷ್ಟಿಯನು ಕೈಗೊಟ್ಟು ಸಲಹಿದ ಶ್ರೇಷ್ಠಧನುಜಘರಟ್ಟಗಾರತಿಯ ಬೆಳಗಿದರು1 ಪಾದರಜದಿಂ ಪೊರೆಯುತ ಸಾಧಿಸಿದ ಧನು ಭೇದಿಸುತ ಹಿತಳಾದ ಸೀತೆಯ ಒಲಿಸುತ ಕ್ರೋಧದಿಂದೆದುರಾದ ಪರಶುವನಾ ದಯಾನಿಧಿ ಗೆಲ್ಲುತ ಸಾಧುಮಾರ್ಗವಿನೋದ ಸೀತಾಹ್ಲಾದ ಪಾಪವಿರೋಧ ದಾನವಸೂದನಗಾರತಿಯ ಬೆಳಗಿದರು 2 ಚಿಕ್ಕ ತಾಯಿಯ ಸೊಕ್ಕುನುಡಿಗತಿಸೌಖ್ಯವನು ಹೋಗಾಡುತ ಘಕ್ಕನನುಜನ ನಿಜಸತಿಯತಾ ಸೌಖ್ಯದಿಂದೊಡಗೂಡುತ ವನಕ್ಕೆ ತಾ ಸಂಚರಿಸುತ ಮಿಕ್ಕಿ ಬಂದಾ ರಕ್ಕಸಿಯ ಕುಚದಿಕ್ಕೆಲವ ಖಂಡಿಸಿದ ಪ್ರಭುಗೆ ಮಾಣಿಕ್ಯದಾರತಿಯ ಬೆಳಗಿದರು 3 ಧೂರ್ತ ಖರತ್ರಿಶಿರಾದಿ ದಾನವ ಮೊತ್ತವನು ಸಂಹರಿಸುತ ದೈತ್ಯಮಾಯಾವೃತ್ತಿಮೃಗವನು ಮತ್ತಕಾಶಿನಿ ಬೇಡುತ ಸತ್ತ್ವನಿಧಿ ಬೆನ್ನಟ್ಟಿ ಸೀತೆಯ ದೈತ್ಯಪತಿ ಕೊಂಡೋಡುತ ಮತ್ತೆ ಕಾಣದೆ ಕೋಪದಿಂದರಸುತ್ತ ಬಂದ ಮಹಾತ್ಮ ರಾಮಗೆ ಮುತ್ತಿನಾರತಿಯ ಬೆಳಗಿದರು 4 ತೋಯಜಾಕ್ಷಿಯ ಸುದ್ದಿ ಪೇಳ್ದ ಜಟಾಯುವಿಗೆ ಗತಿ ತೋರುತ ವಾಯುತನುಜಸಹಾಯದಿಂ ಕಪಿರಾಯ ಸಖ್ಯವ ಮಾಡುತ ನ್ಯಾಯಗರ್ಭಿತ ಸಾಯಕದಿ ಮಹಕಾಯ ವಾಲಿಯ ಕೊಲ್ಲುತ ಪ್ರಾಯಶದಿ ಗಿರಿಯೊಡ್ಡಿ ಶರಧಿಗುಪಾಯದಿಂ ಬಂಧಿಸಿದ ಜಾನಕೀಪ್ರಿಯಗಾರತಿಯ ಬೆಳಗಿದರು 5 ಮನವಿವೇಕವ ನೆನೆದು ಬಂದಾ ಧನುಜಪತಿ ಸೋದರನಿಗೆ ಇನಶಶಿಗಳುಳ್ಳನಕ ಲಂಕಾವನಿಯ ಪಾಲಿಸುತ ಮಿಗೆ ರಣದಿ ರಾವಣಕುಂಭಕರ್ಣರ ಹನನಗೈಯುತ ಲೋಕಕೆ ಸೀತೆಯ ವಿನಯ ಗೈದಗೆ ಮೇರುಗಿರಿನಿಭ ಇಂದ್ರಪುಷ್ಪಕಾವೇರಿ ತಾ ಸಾಕೇತಕೆ ಸೇರಿ ಸಾನುಜರಿಂದ ಧರ್ಮದ ಮೇರೆದಪ್ಪದೆ ಸುಜನಕೆ ಸಾರಸಂಪದವಿತ್ತು ಲೋಕೋದ್ಧಾರನಾಗುತ್ತಖಿಳಕೆ ನೀರಜೇಕ್ಷಣ ಕರುಣಪಾರಾವಾರ ಶರಧೀಗಂಭೀರ ಲಕ್ಷುಮೀ ನಾರಾಯಣ ರೂಪ ಜಯ ಜಯ 7
--------------
ತುಪಾಕಿ ವೆಂಕಟರಮಣಾಚಾರ್ಯ
ಪ್ರದ್ಯುಮ್ನ ವಿಠಲ ನೀನಿವಳ ಸಲಹಬೇಕೋ ಪ ವಿದ್ಯಾಯು ಸಂಪತ್ತು | ಭಕ್ತ್ಯಾದಿಗಳನಿತ್ತುಉದ್ಧರಿಸ ಬೇಕಿವಳ | ಮಧ್ವಾಂತರಾತ್ಮಾ ಅ.ಪ. ಹರಿದಾಸ್ಯ ಕಾಂಕ್ಷಿತಳು | ಹಿರಿದಾಗಿ ಬೇಡಿಹಳುವರತೈಜ ಸಾಖ್ಯಹರಿ | ವರದ ನಾಗಿರುವೇಕರುಣನಿಧಿ ತವನಾಮ | ಸ್ಮರಿಪ ಸನ್ಮಾರ್ಗವನುಅರುಹಿ ಮಹ ಭವನಿಧಿಯ | ತರಣ ತಿಳಿಸಿರುವೇ 1 ಕಂಸಾರಿ ತವಪಾದಪಾಂಸುವನೆ ಶಿರದಿ ಅ | ಸಂಶಯದಿ ಧರಿಸೀಮಾಂಸಧಾತುಕ ಸಪ್ತ | ಹೇಸಿಕೆಯ ದೇಹವು - ವಿಪಾಂಸಗನಿಗಧಿಷ್ಠಾನ | ವೆಂಬುದನೆ ತಿಳಿಸೋ2 ಪಂಚಬೇದಾತ್ಮಕ ಪ್ರ | ಪಂಚವು ಸದಾ ಸತ್ಯಅಂಚೆವಹ ಸುರರಾದಿ | ತರತಮ್ಯದಾಸಂಚಿಂತನೆಯ ಕೊಟ್ಟು | ವಾಂಛಿತಾರ್ಥದ ಹರಿಯೆಮಿಂಚಿನಂದದಿ ಪೊಳೆಯೊ | ಹೃತ್ಪಂಕಜದ ನಡುವೆ3 ಮತೆ ಈ ಯುಗದಲ್ಲಿ | ಕೃತ್ಯ ವ್ರತನೇಮಾದಿಸತ್ವ ರಹಿತವು ಆಗಿ | ನಿತ್ಯಫಲರಹಿತಾಎತ್ತ ನೋಡಿದ ರತ್ತ | ಕತ್ತಲೆಯು ಕವಿದಿಹುದುಹತ್ತಿರವೆ ಇರುವಂಥ | ಭಕ್ತವತ್ಸಲ ಸಲಹೋ 4 ದಾವಾಗ್ನಿ ಕುಡಿದವನೆ | ಪಾವಿನಾಮದ ಹರನೆಗೋವುಗಳೊಳುದ್ಗೀಥ | ದೇವಾದಿದೇವಾಕಾವುದಿವಳನು ಎಂಬ | ಭಾವ ಬಿನ್ನಪ ಸಲಿಸೊಮಾವಿನೋದಿಯೆ ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ವೇದವ್ಯಾಸ ಪ್ರಥಮ ಆಧ್ಯಾಯ ಪ್ರಾದುರ್ಭಾವಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ನಾರಾಯಣ ಸರ್ವ ಉರು ಗುಣಾರ್ಣವ ನಮೋ ಪಾರತಂತ್ರ್ಯಾದ್ಯಖಿಲ ದೋಷಾತಿ ದೂರ ಪರ ಬ್ರಹ್ಮ ಶ್ರೀ ರಮಣ ವಿಷ್ಣು ಸರ್ವೋತ್ತಮನೇ ಸೂರಿ ಜ್ಞಾನ ಪ್ರಾಪ್ಯ ನಿಗಮೈಕ ವೇದ್ಯ 1 ವಾಸುದೇವ ವೈಕುಂಠ ನಮೋ ತುರ್ಯ ಸಂಕರ್ಷಣ ಪ್ರದ್ಯುಮ್ನಾನಿರುದ್ಧ ತುರಗಾಸ್ಯ ಕಾರ್ದಮ ನಾಭಿಜಾತ್ರೇಯನೇ ಪರಮಾತ್ಮ ಉದ್ದಾಮ ಹರಿ ಶ್ರೀನಿವಾಸ 2 ಕೂರ್ಮ ಕ್ರೋಢ ನರಸಿಂಹ ವಾಮನ ಮುನಿಜ ರಾಘವ ಕೃಷ್ಣ ವನಜ ಕಲ್ಕೀಶ ಆನಂದ ಜ್ಞಾನಾದಿ ಗುಣಮಯ ರೂಪಗಳು ನಿತ್ಯ 3 ವಾರಿಜ ಭವಾಂಡವ ಸೃಜಿಸಿ ಅದರೊಳು ಪೊಕ್ಕು ಕೃತಿ ನಡೆಸಿ ಮೂರು ವಿಧ ಅಧಿಕಾರಿಗಳಿಗೆ ಗತಿ ಇತ್ತು ಮೂರು ವಿಧ ಜೀವರಿಗೆ ಯೋಗ್ಯ ಫಲವೀವಿ 4 ಯದಾ ಯದಾಹಿ ಸದ್ಧರ್ಮಕ್ಕೆ ಹಾನಿಯೋ ಅಧರ್ಮಕ್ಕೆ ವೃದ್ಧಿಯೋ ಆದಾಗ ಅವತರಿಪಿ ಸಾಧುಗಳ ಉದ್ಧಾರ ಪಾಪಿಗಳ ಪತನಕ್ಕೆ ಸದ್ಧರ್ಮ ಸ್ಥಾಪನೆಗೆ ಶ್ರೀಶ ಮುಕುಂದ 5 ಕಲಿಯ ಚಟುವಟಿಕೆಯಲಿ ವೈದಿಕ ಜ್ಞಾನ ಇಳೆಯಲಿ ಸುಜನರಲಿ ಕಡಿಮೆ ಆಗಿ ಶೀಲ ಗೌತಮ ಸಹ ನಿಧಾನ ತಪ್ಪಿ ಶಪಿಸೆ ಬೆಳೆಯಿತು ಅಜ್ಞಾನ ಕಲಿ ವಿಷ ಏರಿತು 6 ದೇವತೆಗಳಿದು ನಿನ್ನಲಿ ಪೇಳಿ ಪಾಥಿರ್üಸಲು ದೇವ ದೇವೋತ್ತಮ ನೀ ಅಭಯವನಿತ್ತು ಭುವಿಯಲಿ ಪರಾಶರ ಸತ್ಯವತಿ ಸುತನೆಂದು ಅವತಾರ ಮಾಡಿದಿ ಸಜ್ಜನೋದ್ಧಾರ 7 ವೃತತಿಜಾಸನ ಸುತ ವಸಿಷ್ಠ ಋಷಿಗಳ ಮಗ ಶಕ್ತಿ ಋಷಿಗಳ ಪುತ್ರ ಪರಾಶರ ಋಷಿಯು ಆ ತಪೋಧನ ನಿನ್ನ ಕುರಿತು ತಪಶ್ಚರಿಸಿದರು ಅಜ ನೀ ತನ್ನಲವತರಿಸು ಎಂದು 8 ವೇದ ವೇದಾಂಗ ಕೋವಿದ ಪರಾಶರರ ಶ್ರದ್ಧೆ ಶೀಲತ್ವವ ಮೆಚ್ಚಿ ನೀನು ಪೇಳ್ದಿ ವಸುರಾಜನ ಸುತೆ ಸತ್ಯವತಿಯ ಸುತನೆನಿಸಿ ಅವತಾರ ಮಾಡುವಿ ಎಂದು 9 ವಸುರಾಜ ಅಡವಿಯಲಿ ಬೇಟೆಯಾಡುವಾಗ ಇಚ್ಚೈಸಿ ಮಗ ತನ್ನ ರಾಣಿಯ ನೆನೆಯೇ ವಿಸರ್ಜನೆ ಆಯಿತು ರೇತಸ್ಸು ಅದನ್ನ ತನ್‍ಸತಿಗೆ ಕಳುಹಿಸಿದ ಪಕ್ಷಿ ಮೂಲಕ 10 ಶೇನಪಕ್ಷಿ ಅದನ್ನ ಕುಂಡದಲಿ ಹಿಡಕೊಂಡು ರಾಣಿಯ ಪಟ್ಟಣಕೆ ಹೋಗುವ ಮಾರ್ಗದಲಿ ಯ- ಶೇನಪಕ್ಷಿ ತಡೆದು ಯುದ್ಧ ಮಾಡಿತು 11 ಆಗ ವಸುರಾಜ ಕೊಟ್ಟ ಪೊಟ್ಟಣ ನೀರೊಳು ಬಿದ್ದು ಬಿದ್ದ ವೇಗದಲಿ ಎರಡಾಗಿ ಆಗ ಗಂಗೆಮಾತೆಯು ಪ್ರಸನ್ನಳಾಗಿ ಸಣ್ಣದರೋಳ್ ಆವಿಷ್ಟಳಾದಳು ಅದನ್ನ ಹೆಣ್ಣು ಮೀನೊಂದು ನುಂಗಿ ಗರ್ಭ ಧರಿಸಿತು 12 ಸರ್ವೋತ್ತಮನೇ ನಿನ್ನ ಅವತಾರ ಕಾಲದಲಿ ಗಂಗಾಧರಾದಿ ದೇವತೆಗಳು ತಪಸ್ ಮಾಡಿ ವರಗಳ ಹೊಂದುವುದು ಅನುಚಿತವೂ ಅಲ್ಲ ಆಶ್ಚರ್ಯವೂ ಅಲ್ಲ ಗಂಗಾಧರನೂ ತಪವಾಚರಿಸಿ ನಿನ್ನನುಗ್ರಹದಿಂ ಪುತ್ರನಾದ ಶುಕನಾಗಿ 13 ಮತ್ಸದ ಗರ್ಭವು ವರ್ಧಿಸಿತು ಆಗ ಬೆಸ್ತರು ಆ ಮೀನ ಹಿಡಿದು ಸೀಳೆ ಅದರ ಉದರದಿ ಎರಡು ಶಿಶುಗಳ ಕಂಡರು ಒಂದು ಹೆಣ್ಣು ಮತ್ತೊಂದು ಮಗು ಗಂಡು 14 ತಮ್ಮ ನಾಯಕ ದಾಸರಾಜನಲಿ ಪೋಗಿ ಆ ಮೀನುಗಾರರು ಶಿಶುಗಳ ಕೊಡಲು ಆ ಮತಿವಂತನು ವಸುರಾಜನಲಿ ಪೋಗಿ ಸಮಸ್ತವ ಪೇಳಿ ಮಕ್ಕಳ ಮುಂದೆ ಇಟ್ಟ 15 ವಸುರಾಜನು ವಿಷಯವ ಚೆನ್ನಾಗಿ ಅರಿತು ಶಿಶುಗಳು ತನ್ನದೇ ಎಂದು ತಿಳಿದು ಭಾಸ್ಕರೋಜ್ವಲ ಗಂಡು ತಾನು ಇಟ್ಟುಕೊಂಡು ಶಶಿಕಾಂತಿಯ ಮಾತ್ಸೇಯ ದಾಸನಿಗೆ ಕೊಟ್ಟ 16 ಶೀಲತ್ವ ಸುಗುಣತ್ವದಲಿ ಪ್ರಕಾಶಿಸುತ ಬೆಳೆಯುತಿಹಳು ದಾಸರಾಜನ ಗೃಹದಿ ಬಾಲೆ ಇವಳಿಗೆ ಸತ್ಯವತೀ ಎಂಬ ನಾಮವು ಬಲು ಪುಣ್ಯವಂತಳು ಸುಶುಭ ಲಕ್ಷಣಳು 17 ದಾಸನಾಯಕನ ಮನೆಯಲ್ಲಿ ಬೆಳೆವ ಕಾರಣ ದಾಸನು ನಾವಿಗನು ಆದ್ದರಿಂದ ಸುಶೀಲೆ ಈ ಸತ್ಯವತಿಯು ನಾವೆ ನಡೆಸುವಳು ವಸುರಾಜಪುತ್ರಿ ಇವಳಿಗೆ ಗರ್ವವಿಲ್ಲ 18 ಸಮುದ್ರ ಕುರಿತು ಪ್ರವಹಿಸುವ ಸೂರ್ಯಾತ್ಮಜ ಯಮುನೆಯ ದಾಟಲು ಹಡಗಿನಲ್ಲಿ ಕುಳಿತ ಆ ಮುನಿ ಪರಾಶರರಿಗೆ ಒದಗಿದಳು ಕಾಲ 19 ಶ್ರೀಶ ನಿನ್ನಯ ಮಾತು ನೆನೆದು ಪರಾಶರರು ಆ ಸತ್ಯವತಿಯನ್ನ ಮದುವೆ ಆಗಲು ಒಪ್ಪಲು ವಸಿಷ್ಠರು ಯಾಜ್ಞವಲ್ಕ್ಯಾದಿ ಮುನಿ ಸಭೆಯಲಿ ವಸುರಾಜನು ಧಾರೆ ಎರೆದಿತ್ತ ಮಗಳ 20 ನಾರದರ ವೀಣೆ ಸಂಗೀತ ಗಾಯನವು ಸುರ ಗಂಧರ್ವರ ಸುಸ್ವರ ಗಾನ ಸುರನಾರಿ ನರ್ತಕರ ಆನಂದ ನರ್ತನವು ಸರಸಿಜಾಸನ ಮುಖ ಸುರರ ಸ್ತೋತ್ರಗಳು 21 ನೀಲ ಮೇಘ ಶ್ಯಾಮ ಇಂದಿರಾಪತಿಯು ಕಲಿ ವಿದಾರಕ ವಿಜ್ಞಾನ ಭೋದಕನು ಇಳೆಯಲಿ ವ್ಯಾಸ ಅವತಾರ ಸಮಯವೆಂದು ಸುರರು ಕೂಡಿ ತುಂಬಿದರು 22 ನಿಮೇರ್ಘ ಹಿಮ ಆಗಲಿ ದೇಶ ಪ್ರಕಾಶಿಸಿತು ಮರಗದ ವರ್ಣದಲಿ ಜ್ವಲಿಸುವ ರೂಪ ಉರು ಸ್ವಕಾಂತಿ ಸಹಸ್ರ ಲಕ್ಷ ಕೋಟ್ಯಮಿತ ಸೂರ್ಯತೇಜಃ ಪುಂಜ ಅವತಾರ ಮಾಡಿದಿ 23 ಶೋಣಿತ ಸಂಬಂಧ ಇಲ್ಲವೇ ಇಲ್ಲ ಅಪ್ರಾಕೃತ ಚಿದಾನಂದ ಕಾಯ ಚಿಕ್ಕ ಬಾಲಗೆ ಅಂದು ಒಲಿದು ಕಂಬದಿ ಬಂದ ಶ್ರೀಕಾಂತ ನರಸಿಂಹ ಅವತಾರದಂತೆ 24 ತಂದೆ ತಾಯಿಲ್ಲದೆ ಪುಂ ಸ್ತ್ರೀ ಕೂಡದೆ ಅಂದು ಕಂಬದಿಂದ ಸ್ವೇಚ್ಛದಿ ಬಂದಿ ಇಂದು ಸ್ವತಂತ್ರದಿ ಸತ್ಯವತಿ ಋಷಿ ಮುಂದೆ ಬಂದು ಪ್ರಕಟಿಸಿದಿ ವ್ಯಾಸ ಅವತಾರ 25 ಶೋಣಿತ ರಹಿತ ಅಲೌಕಿಕವಾದರೂ ನೀ ಲೋಕ ರೀತಿಯಲಿ ಪುಟ್ಟಿದ ತೆರದಿ ಕಲಿ ಕಲಿ ಪರಿವಾರ ದುರ್ಜನ ಮೋಹಕ್ಕೆ ಮಾಲೋಲ ನೀ ವಿಡಂಬನ ಮಾಡಿ ತೋರ್ದಿ 26 ಅಂಕುಶ ಅಬ್ಜ ಧ್ವಜ ಚಕ್ರ ರೇಖ ಪದಯುಗ ಪದ್ಮ ಸುಖಜ್ಞಾನಮಯ ಜ್ಞಾನ ಸುಖದ ಧ್ಯಾನಿಪರ್ಗೆ ತಟಿತ್ ಪ್ರಭಾ ಜಟಾಮಕುಟ ಶಿರವು ಪ್ರಕಾಶಿಸುವ ಕಸ್ತೂರಿ ತಿಲಕ ಲಲಾಟ 27 ಸೃಷ್ಟ್ಯಾದಿಕರ್ತ ನಿನ್ನ ಭೃ ಚೆಂದ ನಿಖಿಳ ಇಷ್ಟಪ್ರದ ಅನಿಷ್ಟ ನಿವಾರಕ ನೋಟ ಕರ್ಣ ಕುಂಡಲದ್ವಯವು ಶ್ರೇಷ್ಠತಮ ತುಳಸೀ ದಳಗಳು ಕಿವಿಯೋಳ್ 28 ಸುಧಾರಸ ಸುರಿಸುವ ಶಶಿಕೋಟಿ ನಿಭ ಮುಖ ಸಂದರ್ಶನ ಸುಖ ಸಂದೋಹ ಈವುದು ಮಂದಹಾಸವು ನತಜನ ಶೋಕ ಕಳೆವುದು ಶುಭ ಲೋಹಿತೋಷ್ಟ್ರಗಳು 29 ಸುಂದರ ರೇಖಾತ್ರಯಯುತ ಕುಂಬುಗ್ರೀವದಿ ಕೌಸ್ತುಭ ಮಣಿಯು ಶ್ರೀ ದೇವಿಗಾಶ್ರಯ ವಿಶಾಲ ವಕ್ಷ ಸ್ಥಳದಿ ಚಿದ್ದಮಲ ಮೋದಮಯ ಶ್ರೀವತ್ಸ ಅಂಕ 30 ಪೊಳೆವ ರತ್ನದ ಹಾರಗಳು ಉರದೇಶದಲಿ ವಲಿತ್ರಯಾಂಕಿತ ಉಳ್ಳ ಉದರ ಸುಂದರವು ಕೀಲಾಲಜ ಭವಾಂಡವ ಪಡೆದ ನಾಭಿಯು ಬೆಳಗುತಿದೆ ಮೌಂಜಿಯು ಸುಪ್ರಕಾಶದಲಿ 31 ಸುಪವಿತ್ರ ಜ್ಞಾನ ತೇಜ ಕೃಷ್ಣಾಜಿನವು ಶ್ರೀಪ ನಿನ್ನಯ ದಿವ್ಯ ಯೋಗ ಅಸನವು ಉಪಮವಿಲ್ಲದ ಸುಂದರ ಕಟಿಜಾನು 32 ಉರು ಜಂಘಾ ಗುಲ್ಫ ಪದ್ಮಾಂಘ್ರಿ ಸೌಂದಂiÀರ್i ಉರು ಸುಶುಭ ಲಕ್ಷಣ ವರ್ಣಿಸಲಶಕ್ಯ ವಜ್ರನಖಗಳ ದ್ಯುತಿ ಶಶಿ ಕೋಟ್ಯಮಿತವು ಶುಭ್ರತಮ ಯಜÉ್ಞೂೀಪವೀತ ಧರಿಸಿರುವಿ 33 ತಿಮಿರ ಮಾರ್ತಾಂಡ ನೀ ರವಿ ಕೋಟಿ ಅಮೃತ ಇಂದು ಕೋಟಿ ಅತ್ಯಧಿಕ ತೇಜ ಈ ದಿವ್ಯ ಸುರೂಪದಿ ಶ್ರೀಯಃಪತಿಯೇ ಪ್ರಾದುರ್ಭವಿಸಿದಿ ಸ್ವಾಮಿ 34 ನೀ ಪ್ರಾರ್ದುರ್ಭವಿಸಿ ದಿನ ಏಳೊಳಗೆ ಉಪನಯನ ರೂಪ ಪೂಜೆ ಪರಾಶರರು ಮಾಡಿದರು ಉಪನಯನ ಸಂಸ್ಕಾರ ಲೀಲಾ ಮಾತ್ರವು ನಿನಗೆ ಆ ಪರಾಶರ ಸತ್ಯವತಿಗೆ ಮುದಕರವು 35 ಸತ್ಯವತೀ ಪರಾಶರರ ಸುತನೆಂದು ನೀ ಕೀರ್ತಿ ಅವರಿಗೆ ಜಗತ್ತಲ್ಲಿ ಇತ್ತಿ ಸಾತ್ಯವತೇಯ ಪರಾಶರ್ಯ ನಾಮದಿಂ ಸತ್ ಸೃಷ್ಟಿ ಸುಖಜ್ಞಾನ ಪವಿತ್ರತ್ವಜÉ್ಞೀಯ 36 ಯಾವ ಯಾವಾಗ ಸತ್ಯವತಿ ಪರಾಶರರು ದೇವತಾ ಸಾರ್ವಭೌಮನೇ ವ್ಯಾಸ ನಿನ್ನ ತಾವು ನೋಡಲು ಇಚ್ಛೈಸಿ ನೆನೆಯುವರೋ ಆವಾಗ ತೋರುವಿ ಎಂದಿ ಮಾತೆಗೆ 37 ವ್ಯಾಸ ಅವತಾರದ ಕಾರ್ಯೋನ್ಮುಖನಾಗಿ ನಗ ಮೇರುಗಿರಿಗೆ ಬಿಸಜಭವ ಮೊದಲಾದ ದೇವರು ಹಿಂಬಾಲಿಸುತ ಶ್ರೀಶ ನೀ ಹೊರಟೆ ಪ್ರಣತಾರ್ತಿಹರ ಅಜಿತ 38 ಜ್ಞಾನ ಸುಖಪೂರ್ಣ 'ಪ್ರಸನ್ನ ಶ್ರೀನಿವಾಸ' ಪೂರ್ಣ ಪ್ರಜ್ಞರ ಹೃತ್‍ಸ್ಥ ವನಜ ಭವತಾತ ಸ್ವರ್ಣಾಂಡ ಬಹಿರಂತವ್ರ್ಯಾಪ್ತ ತೇಜಃಪುಂಜ ಆ ನಮಿಪೆ ಬದರೀಶ ಜ್ಞಾನಮುದ ಧನದ 39 - ಇತಿ ಪ್ರಥಮಾದ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ರಾಜ ರಾಜೇಶ್ವರನೇ ರಾಜೀವಾಲಯ ಪತೇ ರಾಜೀವಭವ ಭವಾದ್ಯಮರ ವಿನುತ ರಾಜೀವ ಪದಯುಗಗಳ್ಗೆ ಶರಣಾದೆ ನಿನ್ನಲಿ ರಾಜೀವನಯನ ಔದಾರ್ಯ ಕರುಣಾಬ್ಧಿ 1 ಸೃಷ್ಟಿ ಕಾಲದಲಿ ನೀ ಪರಮೇಷ್ಟಿರಾಯನಿಗೆ ಶ್ರೇಷ್ಟ ನಿಗಮಾದಿಗಳ ಬೋಧಿಸಿದ ತೆರದಿ ಕೃಷ್ಣ ದ್ವೈಪಾಯನನೆ ಸುರಮುನಿಗಳಿಗೆ ಈಗ ಉತ್ಕøಷ್ಟ ಉಪದೇಶ ಮಾಡಿದಿ ಮೇರುವಿಲಿ 2 ಸಮಸ್ತ ಶಾಸ್ತ್ರಾರ್ಥ ನಿದರ್ಶನಾತ್ಮಕವಾದ ವಿಮಲ ಶಾಸ್ತ್ರೋತ್ತಮ ಮಹಾ ಭಾರತವನು ಸುಮಹಾ ವೇದಾರ್ಥ ನಿರ್ಣಯಕವಾದ ಬ್ರಹ್ಮ ಸೂತ್ರಂಗಳ ವಿರಚಿಸಿದಿ ವ್ಯಾಸ 3 ಹರಿ ವ್ಯಾಸ ಕೃಷ್ಣದೈಪಾಯನ ನಿನ್ನ ಅಮಿತ ಬಲಯುತ ಶರದಿಂ ರುದ್ರಾದಿಗಳ ಮನೋಗತವಾಗಿ ಇರುತ್ತಿದ್ದ ಕ್ರೂರ ಕಲಿಮೃತನಾದವನಂತೆ ಆದ 4 ಸಾತ್ಯವತೇ ವ್ಯಾಸ ನಿನ್ನಯ ಮುಖಾಂಬುಧಿಯಿಂದ ಉದ್ಭೂತವಾದ ಉತ್ತಮ ಜ್ಞಾನ ರೂಪ ಸುಧೆಯ ದೇವತೆಗಳು ಭುಂಜಿಸಲು ಆಗ ವಿದೂರರಾದರು ಕಲಿಯ ಕಲ್ಮಷದಿಂದ 5 ವಿಧಿ ವಾಯು ಎಂದೆಂದೂ ಕಲಿಕಲುಷ ವಿದೂರರು ಬಂದ ರುದ್ರಾದಿಗಳು ಮುಂದೆ ಕುಳಿತು ಶ್ರೀದ ನೀ ಬೋಧಿಸಿದ ಮಹಾಭಾರತ ಬ್ರಹ್ಮ- ಸೂತ್ರಾದಿ ಅಮೃತವ ಪಾನ ಮಾಡಿದರು 6 ಮನುಷ್ಯೋತ್ತಮರೊಳು ಇದ್ದ ಕಲಿ ಭಂಜನಕೆ ದೀನ ದಯಾಳು ನೀ ದಿಗ್ವಿಜಯಗೈದಿ ಮಂದಾಧಿಕಾರಿಗಳ ಉಪಕಾರಕಾಗಿ ನೀ ನಿಗಮ ವಿಭಾಗ ಮಾಡಿದಿಯೋ 7 ಯಾವ ಯಾವ ಸಜ್ಜನರು ಅಜ್ಞಾನ ಪೂರಿತರೋ ಅವರು ವಾಸಿಸುವ ಸ್ಥಳಗಳಿಗೆ ಪೋಗಿ ದಿವ್ಯ ಸಜ್ಞಾನವ ಬೋಧಿಸಿ ಕಲಿ ವಿಷ ನಿವಾರಣ ಮಾಡಿದಿ ಕರುಣಾಂಬು ನಿಧಿಯೇ 8 ಪರಮಾರ್ಥ ಭಾಷ್ಯಾರ್ಥ ಐಹಿಕಾಮುಷ್ಮಿಕ ಸರ್ವಾರ್ಥ ಒದಗಿಸುವ ಮುಖ್ಯ ನಿಯಂತೃ ಪರಮಾತ್ಮ ವ್ಯಾಸ ನೀ ದಿಗ್ವಿಜಯ ಮಾರ್ಗದಲಿ ಮರವಟ್ಟ ಕ್ರಿಮಿಗೆ ಔದಾರ್ಯದಲಿ ಒಲಿದಿ 9 ಹರಿಯ ಅಪರೋಕ್ಷ್ಯವು ಲಭಿಸಿದವರಿಗೂ ಸಹ ಕರ್ಮ ನಿಮಿತ್ತ ನರ ನರೇತರ ಜನ್ಮ ಅಸಂಭವವು ಅಲ್ಲವು ಈ ಕ್ರಿಮಿ ಜನ್ಮ ಸಹ ಪ್ರಾರಬ್ಧ ನಿಮಿತ್ತ 10 ಶೂದ್ರನು ಲೋಭಿಯು ಪೂರ್ವ ಜನ್ಮದೀ ಕ್ರಿಮಿಯು ಈ ದೇಹವ ಬಿಡು ರಾಜನಾಗಿ ಹುಟ್ಟಿಸುವೆ ಎಂದು ನೀ ಪೇಳಲು ದೇಹದಾಶೆ ಪ್ರಕಟಿಸಿತು ಆದರೂ ಆ ಕ್ರಿಮಿಗೆ ರಾಜಪದವಿತ್ತಿ 11 ಆ ಕ್ರಿಮಿಯಿಂದ ನೀ ರಾಜ್ಯವ ಆಳಿಸಿ ಜಗದೇಕ ಸ್ವಾಮಿಯು ಸ್ವತಂತ್ರ ಸಚ್ಛಕ್ತ ಭಕ್ತೇಷ್ಟ ಸಿದ್ಧಿದ ಸತಾಂಗತಿ ನೀನೆಂದು ಜಗತ್ತಿಗೆ ವ್ಯಕ್ತ ಮಾಡಿದಿ ದೇವ ದೇವ 12 ಅಗಣಿತ ಗುಣಾರ್ಣವನೇ ವ್ಯಾಸ ಕೃಷ್ಣನೇ ನಿನ್ನ ಮಗನೆಂದು ತಾ ಜನಿಸಿ ಸೇವಿಸಬೇಕೆಂದು ಗಂಗಾಧರ ನಿನ್ನ ಕುರಿತು ಮಹತ್ತಪಸ್ ಮಾಡಿ ಹಾಗೆ ನಿನ್ನಿಂದ ವರ ಪಡೆದು ಮಗನಾದ 13 ಯಥಾರ್ಥ ಹೀಗಿರಲು ನೀನು ಸಹ ತಪಸ್ ಮಾಡಿ ರುದ್ರಗೆ ವರವಿತ್ತು ಅಧಮರ ಮೋಹಿಸಿದಿ ಒಂದೊಂ
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣ ಸಂಕರುಷಣಭವ ಜಗತ್ರಾಣ ಮುಖ್ಯಪ್ರಾಣ ಪ ತೃಣಜೀವರಾದಿ ಜಂಗಮಜಡದೊಳು ಪೂರ್ಣನಹುದೊ ಶ್ರೀಹರಿಪ್ರೇರಣೆಯಿಂದ ಅ.ಪ ಪ್ರಾಣ ನಿನ್ನಿಂದಲೆ ಸರ್ವರತ್ರಾಣ ಪ್ರವೃತ್ತಿಯೂ ನಿನ್ನಯ ಆಣತಿಯಂತಿರ್ಪುದಯ್ಯಾ ಮುಖ್ಯ ಪ್ರಾಣನೆ ತ್ರಿವಿಧಜೀವರೊಳನವರತದಿ ನೀ ನೆಲೆಸಿ ಏನೇನು ಮಾಳ್ಪಕರ್ಮಂಗಳೆಲ್ಲವು ನಿನ್ನಿಂದೈಯ್ಯಾ ಪ್ರಾಣೋಪಾನವ್ಯಾನೋದಾನಸಮಾನರ ತ್ರಾಣ ನಿನ್ನದೊ ಮುಖ್ಯಪ್ರಾಣದೇವನೆ ಪ್ರಾಣಿಗಳಲಿ ಪಂಚಪ್ರಾಣರೂಪದಲಿಹೆ ಪ್ರಾಣಿಕಾರ್ಯಕ್ಕೆಲ್ಲ ನೀನಾಧಾರನೋ 1 ಸ್ಥೂಲಶರೀರದೊಳು ಪಾಯೂಪಸ್ಥದಿ ಸ ಕಲಮಲಗಳಾದ್ಯಪಸರಣಾದಿಗಳಿಂದ ರಕ್ಷಣೆ ಎಲ್ಲಪಾನನಿಂದಲಿ ಮಾಡಿಸಬಲ್ಲೆ ಮುಖನಾಸಿಕನೇತ್ರದಿ ಎಲ್ಲಶ್ವಾಸಾದಿಗಳಾಡಿಸಬಲ್ಲೆ ಕಾಲಕಾಲಕುಶ್ವಾಸಪ್ರಣಯದಿಂದಲಿ ಎಲ್ಲಕಾಲದೊಳು ಪ್ರಾಣನೆಂಬರೋ ಎಲ್ಲ ಜೀವರೊಳು ನಿಂತು ನಡೆವೆ ಶ್ರೀ- ನಲ್ಲನಾಜ್ಞೆಯಂತನುವರ್ತಿಸುವೆಯೊ 2 ಎಪ್ಪತ್ತೆರಡು ಸಾವಿರವಿಹ ನಾಡಿ ಒಡಗೂಡಿ ಅನುದಿನ ಇಪ್ಪ ಈ ಜಡದೇಹವನೇ ನೋಡಿ ವ್ಯಾಪಿಸಿ ವ್ಯಾನನಿಂದ ರಸಗಳಾ ನಾಡಿಗೆ ಕೊಂಡೋಡಿ ತಪ್ಪದೆ ನಾಡಿಕಾರ್ಯವನೆಲ್ಲ ಕ್ರಮದಿ ಮಾಡಿ ಒಪ್ಪೆ ಉದಾನಸುಷುಮ್ನನಾಡಿಯೊ ಒಪ್ಪಿಸುವೆ ಸುಖದುಃಖಫಲವನು ಪಾಪಪುಣ್ಯದಂತೆ ಜೀವರಿಗೆ ಲೋಕವ ಪ್ರಾಪಿಸಿಕೊಡುವಿಯೊ ಆಜ್ಞೆಯಿಂ 3 ಭುಕ್ತವಾದನ್ನವೆ ಮೊದಲಾದ್ದೆಲ್ಲ ತತ್ತಸ್ಥಳಗಳಿಗೊಯ್ವಪ್ರಯುಕ್ತ ಪ್ರಾಣಾಪಾನರಮಧ್ಯಪ್ರಾದೇಶವಾದ ನಾಡಿಯಲಿದ್ದ ಸಮಾನವಾಯುವಿಂ ಶಕ್ತಿಯಸಕಲಾವಯವಕೀವ ಶಕ್ತಿಯಿಲ್ಲದತ್ಯಲ್ಪಜೀವರಿಗೆ ಶಕ್ತಿಯಿತ್ತು ಜ್ಞಾನೇಂದ್ರಿಯ ವೃತ್ತಿಯ ವ್ಯಕ್ತಮಾಡಿ ಫಲವಿತ್ತು ಪೊರೆವೆಯೋ ಮುಕ್ತರೊಡೆಯನಿಗೆ ಅತ್ಯಂತ ಹಿತಕರ 4 ಪ್ರಾಣಾ ನೀ ಬಾಹ್ಯಾದಿತ್ಯನೊಳಿದ್ದು ಅಧ್ಯಾತ್ಮನೆನಿಸಿ ಕಣ್ಣೀನೊಳಾದಿತ್ಯನಲಿ ಬಂದು ಅಧಿಭೂತನೆನಿಸಿ ಕಣ್ಣೀನಭಿಮಾನಿಪ್ರಾಣನ ಸೇರಿ-ಅಧಿದೈವವೆಂದು ಎಣಿಪರೊ ಈ ವಿಧ ತ್ರಯಗತನೆಂದು ತೃಣ ಮೊದಲಾದ ಸರ್ವಜೀವರ ಪ್ರಾಣಪಂಚರೊಳು ಮುಖ್ಯಪ್ರಾಣನೆ ಫಣಿಗಿರೀಶ ಶ್ರೀ ವೆಂಕಟೇಶನ- ಪ್ಪಣೆಯಂತೆ ನೀ ನಿಯಾಮಕನಾಗಿಹೆ 5
--------------
ಉರಗಾದ್ರಿವಾಸವಿಠಲದಾಸರು
ಪ್ರಾಣದೇವ ನೀ ಕಾಯೊ ಕರುಣಿ ಸತತ ಪಾಲಿಸು ಸುಖದಾತ ಪ. ಪ್ರಣಾಪಾನವ್ಯಾನೊದಾನತೋಷ ಭಾರತೀಶ ಅ.ಪ. ತ್ರಿವಿಧ ಜೀವರ ಶ್ವಾಸ ನಿಯಾಮಕನೆ ಶ್ರೀ ಹರಿ ಸೇವಕ ನೀನೆ ಭವ ಇಂದ್ರಾದಿಗಳಿಂದಲಿ ವಂದಿತನೆ ಭಾರತಿಗತಿ ಪ್ರಿಯನೆ ತ್ರಿವಿಧ ಶ್ವಾಸ ಜಪ ನಿರ್ಲಿಪ್ತದಿ ಜಪಿಸಿ ಜೀವರ ಗತಿಗೈಸಿ ನವವಿಧ ಭಕ್ತಿಯ ಹರಿಚರಣದಿ ನಿರುತ ಚರಿಸುವ ಮತಿದಾತ 1 ತತ್ವಾಧೀಶರ ಪ್ರೇರಕ ಮಹಪ್ರಾಣ ಜೀವರ ಸುತ್ರಾಣ ವ್ಯಾಪ್ತಜಗದಿ ಶ್ರೀ ಹರಿ ಲಕುಮಿಯ ಸಹಿತ ಬಳಿತ್ಥಾ ಸೂಕ್ತ ಸ್ತುತ ಸತ್ವ ಗುಣದ ಜೀವರ ಸದ್ಗತಿದಾತ ಸುಜ್ಞಾನ ಪ್ರದಾತ 2 ತ್ರೇತೆಯಲ್ಲಿ ಶ್ರೀ ರಾಮದಾಸ್ಯ ಚರಿಸಿ ದಶಶಿರನನು ಮುರಿಸಿ ಮಾತೆ ಕೊಟ್ಟ ಭಿಕ್ಷಾನ್ನ ಉಂಡು ಸುಖಿಸಿ ಬಕ ಹಿಡಿಂಬಕರೊರಸಿ ಪಾತಕಿ ಮಾಯವಾದಿ ಜೈಸಿ ಸದ್ಗ್ರಂಥವ ರಚಿಸಿ ಖ್ಯಾತ ಗೋಪಾಲಕೃಷ್ಣವಿಠ್ಠಲ ಪ್ರಿಯ ನಮೋ ಚಳ್ಳಕೆರೆನಿಲಯ 3
--------------
ಅಂಬಾಬಾಯಿ