ಒಟ್ಟು 464 ಕಡೆಗಳಲ್ಲಿ , 78 ದಾಸರು , 421 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧನ್ಯ ಧನ್ಯ ರಾಯ ಮಾನ್ಯ ಮಾನ್ಯವೀತ ಮುನ್ನಾರು ಸರಿಯಿಲ್ಲಮುನ್ನೆಲ್ಲ ಕೆಲದಿ ಕೃಷ್ಣನ ಪ್ರಿಯ ಪ. ಕಾಮ ಕ್ರೋಧಗಳೆಲ್ಲ ಸೀಮೆಯ ದಾಟಿಸಿಭೂಮಿಯನಾಳುವನೆಪ್ರೇಮದಿರಾಯ 1 ಚಲ್ವನರಾಜ್ಯದಿ ಇಲಿಗೆ ಬೆಕ್ಕಿಗೆ ಹಿತ ಹುಲಿಗೆ ಮೊಲಕೆ ಹಿತ ಬಲು ಕೌತುಕವ2 ಅಪ್ಪನ ರಾಜ್ಯದಿ ಸರ್ಪಕಪ್ಪೆಗೆ ಹಿತ ತಪ್ಪು ಗುಣಗಳೆಲ್ಲ ಒಪ್ಪರು ಕೆಲದಿ 3 ಮಾನ್ಯನ ರಾಜ್ಯದಿ ಆನೆ ಸಿಂಹಕೆ ಹಿತ ಏನೆಂಬ ಸವತೆಯರ ಹೀನತೆ ಇಲ್ಲ4 ಮುನ್ನ ಕಲಿಯಕಟ್ಟಿ ಚನ್ನರಾಮೇಶನಅನಂತ ದಯಪಡೆದ ಉನ್ನತಿ ನೋಡ 5
--------------
ಗಲಗಲಿಅವ್ವನವರು
ಧ್ಯಾನಿಸು ಮನವೆ ನೀ ಧ್ಯಾನಿಸು ಪ. ಧ್ಯಾನಿಸು ಮನವೆ ಶ್ರೀಹರಿಯ ಪಾದಧ್ಯಾನನಿರುತ ಈ ಪರಿಯ ಆಹಾಪ್ರಾಣಾಪಾನವ್ಯಾನೋದಾನಸಮಾನರ್ಗೆ ಪ್ರಾಣನಾಗಿಪ್ಪ ಮುಖ್ಯ ಪ್ರಾಣಾಂತರ್ಗತನ ನೀ ಅ.ಪ. ಪರಮಾಣು ಪ್ರದೇಶದಲ್ಲಿ ಪ್ರಾಣರಾಶಿ ಅನಂತುಂಟಲ್ಲಿ ಹೀಗೆಒರಲುತಿದೆ ವೇದದಲ್ಲಿ ದೃಷ್ಟಾಂತವ ಪೇಳ್ವೆ ಕೇಳು ದೃಢದಲ್ಲಿ ಆಹಾಪರಮಸೂಕ್ಷ್ಮ ವಟಮರನಾಗಿ ಅದರಲ್ಲಿಪರಿಮಿತಿಲ್ಲದರ ಫಲದಬೀಜವನರಿತು ನೀ 1 ನಿರುತ ಸುವರ್ಣಬ್ರಹ್ಮಾಂಡದಲ್ಲಿ ಹರಿ ಪೂರ್ಣವ್ಯಾಪ್ತ ಅಖಂಡನಾಗಿಮಿರುವುತಲಿಪ್ಪ ಮಾರ್ತಾಂಡ ತೇಜೋಕಿರಣದಂತಿರುವ ಪ್ರಚಂಡ ಆಹಾಹೊರಗೆ ಒಳಗೆ ಸರ್ವತ್ತರದಲ್ಲಿ ಹರಿಮಯ-ವರಿತು ನಿನಗೆ ಎಲ್ಲಿ ದೊರಕಿದ ಸ್ಥಳದಿಂದ 2 ಸಲಿಲಭೂಗಿರಿಲತೆ ನಾನಾವೃಕ್ಷಫಲಖಗಮೃಗ ಕಾನನತೃಣ ಪೊಳೆವಪಾವಕತರುಪವನ ಮುಕ್ತಸ್ಥಳ ಅವ್ಯಾಕೃತ ಗಗನ ಆಹಾಒಳಗೆ ಹೊರಗೆ ಹರಿ ಚಲಿಸದೆ ಇರುತಿಪ್ಪಸ್ಥಳದ ನಿಲುವಿನಂತೆ ತಿಳಿದು ನೀ ಅದರಂತೆ 3 ತೈಜಸ ನಿತ್ಯ 4 ಸಪ್ತಾವರಣ ಶರೀರದಿ ದಶಸಪ್ತದ್ವಿಸಹಸ್ರ ನಾಡಿಯಲಿ ದಶ-ಸಪ್ತದ್ವಿಸಹಸ್ರ ರೂಪದಲ್ಲಿ ಹರಿವ್ಯಾಪ್ತ ನಿರ್ಲಿಪ್ತಸ್ಥಾನದಲ್ಲಿ ಆಹಾಆಪ್ತನಂತಿರುವ ಸುಷುಪ್ತಿ ಸ್ವಪ್ನ ಜಾಗ್ರದಿತಪ್ತಕಾಂಚನದಂತೆ ದೀಪ್ತಿಸುತಿಪ್ಪನ 5 ಜೀವರಿಂದತ್ಯಂತ ಭೇದ ಪ್ರತಿಜೀವಾಂತರದಲಿ ಪ್ರಮೋದನಾಗಿಆವಾಗ ಚರಿಸುವ ವೇದ ಪೇಳುವುದು ಸತ್ಯಂಭಿದಾ ಆಹಾಈ ವೇದಾರ್ಥವು ಸಾವಧಾನದಿ ತಿಳಿದುಶ್ರೀವಾಯುಮತವ ಕೋವಿದರೊಡಗೂಡಿ6 ಶ್ರೀ ಕೇಶವನೆ ಮೂಲಾಸಿ ಶ್ರುತಿ ಏಕೋನಾರಾಯಣಾಸಿ ನಾನಾಲೋಕ ಸೃಷ್ಟಿಪದ ತಾನಾಸಿ ತಾರಕಮಂತ್ರ ಉಪದೇಶಿ ಆಹಾನೀ ಕೇಳು ನಿಗಮಾರ್ಥ ನೀಕರಿಸು ಸಂಶಯಏಕಮೇವಾದ್ವಿತೀಯನೆಂಬೊ ಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉತ್ತುಂಗಗುಣಗಣತರಂಗ ಕಾ-ಳಿಂಗಸರ್ಪನ ಮದಭಂಗ ಭುಜಂಗಶಯನ ಅಮಲಾಂಗ ಆಹಾಪಿಂಗಳ ಇಡಾ ಮಂಗಳ ಸುಷುಮ್ನ ಸುಸಂಗಮ ಮಧ್ಯದಿ ತಿಮಿಂಗಿಲಂತಿಪ್ಪನ 8 ಮೂರ್ತಿ ಬಲು ಅದುಭುತದಿವ್ಯಕೀರ್ತಿಅದೆ ಪದುಮಜಾಂಡದಿ ಪರಿಪೂರ್ತಿ ದೊರೆವುದಕೆ ಬೇಕು ವಾಯುಸಾರ್ಥಿ ಆಹಾಅದೆ ಬಿಂಬಮೂರ್ತಿ ಜೀವದಾಕಾರವಾಗಿ ತಾಪದುಮಜಾಂಡದಲಿಪ್ಪ ಸದಮಲಾತ್ಮಕನ 9 ಧರೆಯನಳೆದ ದಿವ್ಯಚರಣ ಅದು ಮೆರವುತಿಪ್ಪುದು ಕೋಟಿ ಅರುಣನಂತೆಪರಿಪೂರ್ಣಭರಿತವು ಕಿರಣ ತನ್ನ ಸ್ಮರಿಸುವರಿಗೆ ಮಾಳ್ಪ ಕರುಣ ಆಹಾತರುಣಿಯಂದದಿ ನಖದಿ ಸುರನದಿಯ ಪೆತ್ತ ನೂ-ಪುರ ಗೆಜ್ಜೆಪೆಂಡೆಯ ಎರಡೈದು ಬೆರಳನು 10 ಹರಡು ಜಂಘೆಯುಗಜಘನ ಸುರುಚಿರ ರೇಖಧ್ವಜವಜ್ರ ನಾನಾ ದಿವ್ಯ ವರರೇಖೆಯಿಂದಲೊಪ್ಪುವನ ಜಾನು ಪರಮಶೋಭಿಸುವ ಸುಂದರನ ಆಹಾಉರುಟುಕದಳಿಸ್ತಂಭದಂತಿರುವೊ ಊರುದ್ವಯಸರಿಗಾಣೆ ಹರಿ ಉಟ್ಟ ವರಪೀತಾಂಬರವನು 11 ಕುಕ್ಷಿ ನಿಜ ಸುಖಪೂರ್ಣನ 12 ವೈಜಯಂತಿ ಮಂದಾರವನ್ನು ಮುದದಿಂದ ಧರಿಸಿದ ಧೀರ ಆಹಾಪದುಮಜಭವರಿಂದ ತ್ರಿದಶರು ತಿಳಿದಿನ್ನುಸದಾಕಾಲ ಧೇನಿಪರು ಹೃದಯಾಂಬರದಲ್ಲಿ 13 ಕಂಬುಕಂಧರ ಅತಿಗುರುತರ ಭುಜವು ಚತುರ ಆಹಾಮರಿ ಆನೆ ಸೊಂಡಿಲಂತಿರುವ ಬಾಹುಕೀರ್ತಿ ಕೇತಕಿಬೆರಳು ನಕ್ಷತ್ರದರಸಿನಂದದಿ ನಖ14 ಸಿರಿ ಭುಜಕೀರುತಿ15 ಕಂಬು ಅಗಣಿತ ಮಹಿಮನ16 ಮುಗುಳು ಮಲ್ಲಿಗೆ ಮೊಗ್ಗೆ ದಂತಪಂಕ್ತಿ ಜಗವಮೋಹಿಸುವ ಸುಶಾಂತ ಜಿಹ್ವೆನಿಗಮಕ್ಕೆ ವೇದ್ಯವಾದಂಥ ಬಹು ಬಗೆಯಲ್ಲಿ ಮೆರೆವ ಸುಪಂಥ ಆಹಾನಗುವ ವದನ ಝಗಝಗಿಸುವ ಕುಂಡಲಕರ್ಣಮಿಗೆ ಕೂರ್ಮಕದಪು ಸಂಪಿಗೆನಾಸಿಕವನ್ನು 17 ಕರುಣಶಾಂತಶುಭನೋಟ ಕಂಗಳೆರಡರ ಚೆಲ್ವಿಕೆ ಮಾಟ ಇನ್ನುಅರವಿಂದದಳವೆನ್ನು ದಿಟ ಇನ್ನು ತರಣಿಚಂದ್ರಮರ ಕೂಟ ಆಹಾಶರಣಜನರ ಮನೋಹರ್ಷವಾರ್ಧಿಗೆ ಚಂದ್ರದುರುಳ ದಿತಿಜತಿಮಿರಕ್ಕೆ ಭಾಸ್ಕರನ 18 ಚಾಪ ತಲೆಯ ತಗ್ಗಿಸುವಂಥಾ ರಚನಾಫಾಲದಲಿಟ್ಟ ತಿಲಕ ಸುಂದರ ಲೋಕ ಕಳವಳಗೊಳಿಸುವ ಸುಗುಣ ಆಹಾನಳಿನವದನದಲ್ಲಿ ಅಳಿಗಳಂತೊಪ್ಪುವಸುಳಿಗುರುಳಿನ ಮ್ಯಾಲೆ ಒಲೆವ ಅರಳೆಲೆಯನ್ನು 19 ನಿತ್ಯ ನಖ ಲಲಾಟ ಪರಿಯಂತ್ರನೋಟದಿಂದಲಿ ಈಶಕೋಟಿ ಸಹಿತನ 20 ನಿತ್ಯ 21
--------------
ಗೋಪಾಲದಾಸರು
ನಂದಗೋಪನ ಕಂದ ನಾನುವೃಂದಾರಕೇಂದ್ರ ಖಳಕುಲ ಮರ್ದನಪ. ಎಂದೆಂದು ಎನ್ನ ನಂಬಿದ ಭಕುತರಿಗೆ ಸುತ್ತಿಂದಬಂದ ಕ್ಲೇಶಗಳನ್ನೆಲ್ಲ ಖಂಡಿಸಿತಂದೆ ಮಕ್ಕಳ ಪೊರೆವಂತೆ ಪಾಲಿಸುತಿಹೆಕಂದರ್ಪನಾಣೆ ಇದು ಎನಗೆ ಬಿರುದು 1 ಅಂದಂದು ಅವರು ಬೇಡಿದ ಇಷ್ಟಂಗಳನಿತ್ತೆಸಂದೇಹವಿಲ್ಲ ಸಂತತ ಸಲಹುವೆಮಂದಜನರೊಡನಾಡಿ ಮರುಳುಗೊಳದಿರು ಮನುಜ ಚೆಂದದಿಂದೆನ್ನ ಪೂಜೆಯನು ಮಾಡು 2 ಇಂದ್ರ ಗರ್ವಿಸಲವಗೆ ಸಾಂದ್ರ ಸುರತರುವ ಆನಂದನವನವನು ಪೊಕ್ಕು ಕಿತ್ತುತರಲುಒಂದಾಗಿ ರಣಕೆ ಬಂದು ನಿಂದಮರರನು ಕರುಣದಲಿಅಂದು ಪಾಲಿಸಿದೆ ಭಕ್ತರ ಬಂಧುವೆನಿಸಿ 3 ಇಂದುಮುಖಿ ಸಭೆಯಲ್ಲಿ ಕರೆಯಲಾಕ್ಷಣದೊಳಗೆಬಂದವಳ ಅಭಿಮಾನವನು ಕಾಯ್ದೆಇಂದುಧರ ಭಸ್ಮನುಪದ್ರದಲಿ ಬಳಲುತಿರೆಬಂದೊದಗಿ ಶಿವನÀ ಕಾಯಿದವನರಿಯಾ4 ಅಂಧಂತಮವ ದಾಟಿ ಅನಂತಾಸನಕೆ ಪೋಗಿಒಂದು ನಿಮಿಷದೊಳಗೆ ದ್ವಿಜನ ಸುತನ ತಂದೆಸಿಂಧುವಿನೊಳಗೆ ದೈತ್ಯನ ಕೊಂದು ಸಾಂದೀಪ -ನಂದನನÀ ಯಮನಪುರದಿಂದ ತಂದೆ 5 ನೃಪರ ಬಹುಬಲ ಜರಾ -ಸಂಧನ ಗಧೆಯ ಗಾಯದಿ ಕೊಲಿಸಿಅಂದವನ ದೆಸೆಯಿಂದ ನೊಂದ ನೃಪರನು ಬಿಡಿಸಿಕುಂದದುಡುಗೊರೆಯ ನಾ ಕೊಡಿಸಿ ಮೆರೆದೆ6 ಹಿಂದಾಗಜೇಂದ್ರನಿಗೊದಗಿದವನಾರು ಪಿತನಿಂದನೊಂದ ಪ್ರಹ್ಲಾದನ್ನ ಕಾಯ್ದವರದಾರುಮಂದರಗಿರಿಯನೆತ್ತಿ ಸುರರಿಗಮೃತ ಉಣಿ-ಸಿಂದಿರೆಯನಾಳ್ದ ಹಯವದನನರಿಯಾ7
--------------
ವಾದಿರಾಜ
ನಮೋ ನಮೋ ಮಾತೇ ಎನ್ನಯ ಶ್ರಮಾವ ಕÀಳಿ ದ್ಯೋತೆ ಪ ಕ್ಷಮಾತಳದಿ ನಿ ಸುಮಾಹಕಲ್ಪ ದೃಮೋಪಮಾಗಿಹೆ ಸಮಾನ ಸೋತ್ತಮೆ ಅ.ಪ ರಮಾಧವನರಾಣೀ ನೀ ತಮೋರೂಪ ಕಲ್ಯಾಣೀ ನಮಿಪೆ ನಿನ್ನನು ಕ್ಷಮಾದಿಪತ್ಯವ ಮಮೈವ ಪಾಲಿಸು ವಿಮಾನ ನಿಲಯಳೆ 1 ಧರಾತಳದಿ ಬಂದೂ ನೀ ದುರಾಳ ತತಿ ಕೊಂದೂ ಭರಾದಿ ಲೋಕದಿ ಮೆರಾದ ನಿನ್ನನು ಶಿರಾದಿ ನಮಿಸಿದೆ ವರಾವ ಪಾಲಿಸು 2 ಪಿತಾಮಹನ ಮಾತೇ ನೀ ವಿತಾತ ಗುಣ ಖ್ಯಾತೇ ದಾತಾ ಗುರುಜಗ - ನ್ನಾಥಾ ವಿಠಲನ್ನ ಪ್ರೀತಿಯ ಮಾನಿನಿ ದೂತಾನ ಪೊರೆವೋದು 3
--------------
ಗುರುಜಗನ್ನಾಥದಾಸರು
ನರನಾದ ಮ್ಯಾಲ ಹರಿನಾಮ ಜಿವ್ಹೆದಲಿರಬೇಕು ಪ ಗುರುವಿನ ಬರಣಕ ನಂಬಿರಬೇಕು| ತರಣೋಪಾಯವನರಿಯಲಿ ಬೇಕು| ವಿರತಿಯ ಮಾರ್ಗದಿ ನಡೆಬೇಕು 1 ಪರ ಬೇಕು| ಪಾತಕ ತನವನು ಜರಿಯಲಿಬೇಕು| ಮಾತು ಮಾತಿಗೆ ಹರಿಯೆನಬೇಕು 2 ಶಾಂತಿಯ ಶಮೆದಮೆ ಹಿಡಿಯಲಿಬೇಕು| ಭ್ರಾಂತಿಯ ಕ್ರೋಧವ ನಳಿಯಲಿಬೇಕು| ಸಂತರ ಸಂಗದಲಿರಬೇಕು 3 ತಂದೆ ಮಹಿಪತಿ ದಯ ಪಡಿಬೇಕು| ಬಂದದನುಂಡು ಸುಖದಿರಬೇಕು| ಎಂದೆಂದು ಭಕ್ತಿ ಬಲಿಬೇಕು4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಳಿನನಾಭ ಸುಂದರ ಸುಗುಣಾಕರ ಕಮಲೇಶ ಜಗದೀಶ ಪ ಚಲಿಸಬಲ್ಲರೇ ನಿನ್ನ ಬಲವಿಲ್ಲದಿರಲು ಸಕಲ ಸುರನರರು ಅ.ಪ ಬ್ರಹ್ಮಾದಿಗಳು ನಿನ್ನ ಸಮ್ಮತಿಯಲಿ ಈ ಬ್ರಹ್ಮಾಂಡದಲಿ ತಮ್ಮ ಕರ್ಮರಚಿಸಿ ನಿನ್ನ ಮರ್ಮವನರಿಯಲು ತಮ್ಮ ಕಾಲವ ಕಳೆಯುವರು 1 ಅಜ್ಞಾನದೂರನೆ ಸುಜ್ಞಾನ ಮೂರುತಿ ಯಜ್ಞನಾಮಕ ಪರಮಾತ್ಮ ನಿನ್ನ ಜಿಜ್ಞಾಸದಿಂ ಸುಪ್ರಜ್ಞೆಯ ಪೊಂದದ ಅಜ್ಞಾನಿ ಇದನರಿಯುವನೇ 2 ಸರ್ವತ್ರ ವ್ಯಾಪ್ತನೆ ಸರ್ವಾಗಮಾರ್ಥನೆ ಸರ್ವ ಪ್ರೇರಕ ಸರ್ವೇಶ ಗರ್ವ ತೊರೆದು ನೀನೋರ್ವ ಸ್ವತಂತ್ರನೆಂ ದರಿವ ಜನಕೆ ಸುಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ನಾ ಮಾಡಿದತಿಶಯ ಅಪರಾಧ ಅಹಾ ಸ್ವಾಮಿದ್ರೋಹವೆ ಮಾಡಿದೆ ಪ ನೇಮವಿಲ್ಲದೆ ಪಾಪ ಕಾಮಿಸಿ ಮಾಡಿ ಹರಿ ಪ್ರೇಮಕ್ಕೆ ದೂರಾದೆ ಪಾಮರತನದಿ ಅ.ಪ ಗುರುನಿಂದೆ ಮಾಡಿದೆ ಸ್ಮರಿಸಿದೆನನುದಿನ ಸ್ಮರಿಸಬಾರದ ಸ್ತ್ರೀಯರ ಶರಣಜನರು ಕಂಡು ಶಿರವ ಬಾಗದೆ ಮಹ ಗರುವದಿಂ ಚರಿಸಿದೆ ಪರಿಪರಿ ಜಗದಿ 1 ಲಕ್ಷಿಸದೆ ಪರರರ್ಥ ಭಕ್ಷಿಸಿ ಇಲ್ಲೆನುತ ಪಕ್ಷಿಗಮನನ ಸಾಕ್ಷಿಟ್ಟು ಲಕ್ಷದಶಶತಪಾಪ ಲಕ್ಷ್ಯವಿಲ್ಲದೆ ಗೈದು ಶಿಕ್ಷೆಗೆ ಗುರಿಯಾದೆ ಮೋಕ್ಷವನರಿಯದೆ 2 ಪಿತಮಾತೆಯರ ನೂಕಿ ಇತರರ ಜತೆಯೊಳು ಮತಿಗೆಟ್ಟು ಮಮತಿಟ್ಟಿಹೆ ಮಿತಿಯಿಲ್ಲದನೃತ ಕ್ಷಿತಿಯೊಳು ಸರಿಧರ್ಮ ಹಿತಚಿಂತನಿನಿತಿಲ್ಲದತಿಭ್ರಷ್ಟನಾದೆ 3 ಮಣಿದು ದೈನ್ಯೆಂಬರಿಗೆ ಘನಹಾಸ್ಯಗೈಯುತ ಮನವ ನೋಯ್ಸಿದೆ ಬೆನ್ನ್ಹಚ್ಚಿ ಕನಿಕರೆಂಬುದು ಎನ್ನ ಕನಸಿನೊಳಿನಿತಿಲ್ಲ ಮನಸಿನಂತ್ವರ್ತಿಸಿ ಘನಕರ್ಮಿಯಾದೆ 4 ಇಂತು ಪಾಪಿಗೆ ಸುಖವೆಂತು ತ್ರಿಜಗದೊಳು ಕಂತುಜನಕ ಶ್ರೀರಾಮ ಭಕ್ತವತ್ಸಲ ನೆಂಬ ಬಿರುದು ವಹಿಸಿದಿ ಎನ್ನ ದೆಂಥ ತಪ್ಪಿರೆ ಕ್ಷಮಿಸಿ ಸಂತಸದಿಂ ಪೊರೆ 5
--------------
ರಾಮದಾಸರು
ನಾಗವೇಣಿಯೆ ಕರೆದು ತಾರೆ ನಾಗಶಯನನಾ ಪ ನಗಧರ ಪ್ರಿಯನೆನಿಪ ನಾಗವರದನಾ ಅ.ಪ ಜಲವಪೊಕ್ಕು ತಮ ನಲಿದ ಜಲರುಹಾಕ್ಷನಾ ಜಲಧಿ ಮಥನವನ್ನು ಗೈದ ಚೆಲುವರರಸನಾ 1 ಧರಣಿಪೊಯ್ದ ಖಳನ ಸೀಳ್ದ ನಳಿನನಾಭನಾ ಭರದಿ ಹೊಳೆವ ಕಂಬದಲ್ಲಿ ತರಳಗೊಲಿದನಾ 2 ಧರಣಿ ಈರಡಿಯ ಮಾಡಿ ಸುರರ ಪೊರೆದನಾ ಧರಣಿಪಾಲಕುಲವ ತರಿದ ಪರಶುರಾಮನಾ 3 ಧರಣಿಸುತೆಯನೊಯ್ದ ಖಳನ ಶಿರವನರಿದನಾ ತರಳತನದಿ ವೊರಳನೆಳೆದ ತರಳ ಕೃಷ್ಣನಾ 4 ತರುಣಿಯರ ವ್ರತವನಳಿದು ಪುರವಗೆಲಿದನಾ ಹರುಷದಿಂದ ತುರಗವೇರಿ ನಲಿವ ಸುಗುಣನಾ 5 ಸುರಪುರದಿ ನಲಿವಿನಿಂದ ನೆರೆದು ನಿಂದನಾ ಶರಣರಕ್ಷ ಲಕ್ಷ್ಮಿಯರಸ ಪರಮಪುರುಷನಾ 6
--------------
ಕವಿ ಲಕ್ಷ್ಮೀಶ
ನಾದವನಾಲಿಸೋ ನಿತ್ಯದಿ ನಾದದೊಳಗಿನ ನಾದ ಸುನಾದಓಂಕಾರ ನಾದವನರಿವನೆ ಧನ್ಯ ಯೋಗೀಶ ಪ ನಾದದಿಂದಲಿ ಅಷ್ಟಪಾಶವಿಕ್ಕಡಿಯಹುದುನಾದದಿಂದಲಿ ಮದಗಳೆಂಟುಡುಗಿ ಹೋಗುವವುನಾದದಿಂದಲಿ ಅರಿಗಳರುವರೂ ತೊಲಗುವರುನಾದದಿಂದಲಿ ಕರ್ಮವು ದೂರಹುದುನಾದದಿಂದಲಿ ಧರ್ಮವು ವೃದ್ಧಿಪುದುನಾದದಿಂದಲಿ ಬ್ರಹ್ಮವು ಯೋಗೀಶ 1 ನಾದದಿಂದಲಿ ಮೌನ ತನಗೆ ತಾನಾಗುವುದುನಾದದಿಂದಲಿ ಚತುಸ್ಸಾಧನವು ದೊರಕುವುದುನಾದದಿಂದಲಿ ಸಪ್ತ ಭೂಮಿಕೆಗಳಾಗಿಹವುನಾದದಿಂದಲಿ ಜ್ಞಾನವು ಸ್ಥಿರವಹುದುನಾದದಿಂದಲಿ ಚಿತ್ರವಚಲವಹುದುನಾದದಿಂದಲಿ ಸರ್ವರು ಯೋಗೀಶ 2 ನಾದದಿಂದಲಿ ಬುದ್ಧಿ ನಿರ್ಮಲವಾಗುವುದುನಾದದಿಂದಲಿ ಮನವು ಹಿಡಿತದಲಿರುತಿಹುದುನಾದದಿಂದಲಿ ದೃಕ್‍ದೃಶ್ಯ ಸಾಧನವಹುದುನಾದವೆ ಬ್ರಹ್ಮವಹುದುಚಿದಾನಂದನಾದವನ ತೋರಲು ಬಹುದು ಅವನಲಿಭೇದವಿಲ್ಲದೆ ಕೂಡಲುಬಹುದು ಯೋಗೀಶ 3
--------------
ಚಿದಾನಂದ ಅವಧೂತರು
ನಾನೆಲ್ಲಿ ಜ್ಞಾನಿಯು ನಾನೆಲ್ಲಿ ಸುಜನನು ಹೀನ ವಿಷಯಗಳುಂಬ ಶ್ವಾನನಂತಿರುವೆ ಪ ಗಾತ್ರ ಬಳಲಿಸಿ ಮದನಸೂತ್ರ ಬೊಂಬೆಯು ಎನಿಸಿ ನೇತ್ರದಿಂದಪಾತ್ರದವರನು ನೋಡಿ ಸ್ತೋತ್ರಮಾಡುತ ಹಿಗ್ಗಿರಾತ್ರೆ ಹಗಲು ಕೆಟ್ಟ ವಾರ್ತೆಯಲ್ಲಿರುವೆ 1 ಧನದಾಸೆ ಘನವಾಗಿ ಅಣು ಮಹತ್ಕಾರ್ಯದೊಳುತಣಿಸಿ ದಣಿಯಲು ತೃಣವು ದೊರೆಯದಿರಲುಮನೆ ಮನೆಗೆ ಬಾಯ್ದೆರೆದು ಶುನಕನಂತೆ ದಿನಗಳೆವೆಮನುಜ ಪಶುವಿಗೆ ಇನ್ನು ಮುನಿಯೆಂಬಿರೆಂತೋ2 ನಾಲಗೆಯ ರುಚಿಯಿಂದ ಸಾಲದಾಯಿತು ಬಯಕೆಕಾಲ ಕಾಲಕೆ ನೆನಸಿ ಹಾಳಾದರೂಶೀಲಗಳ ಕಳಕೊಂಡು ಚಾಲುವರಿಯುತ ಪರರಆಲಯದ ಉಚ್ಚಿಷ್ಠ ಮೇಲಾದ ಸವಿಯ3 ಸ್ನಾನಧ್ಯಾನವನರಿಯೆ ಸಾನುರಾಗದಿ ಭಕ್ತಿಕೂನ(ಗುರುತು)ವಿಲ್ಲದೆ ಡಂಭ ಮೌನಿಯೆನಿಸಿನಾನಾ ವಿಷಯ ಮನದಿ ನಾ ನೆನೆಸುವೆ ನಿತ್ಯಏನಾದರೂ ಕಷ್ಟ ಕಾಣದಂತಿರುತಿಪ್ಪೆ 4 ಪತಿತರೊಳು ಎನ್ನಂಥ ಪತಿತರೊಬ್ಬರ ಕಾಣೆಗತಿಯು ನೀನಲ್ಲದೆ ಅನ್ಯರಿಲ್ಲಪತಿತ ಪಾವನನೆಂಬೊ ಬಿರುದುಂಟುಮಾಡುವಕ್ಷಿತಿಪತಿ ಶ್ರೀಕೃಷ್ಣರಾಯ ನೀನಹುದೋ5
--------------
ವ್ಯಾಸರಾಯರು
ನಾರಾಯಣ ಉದಿಸುವನೆಂದು ಆ ಪೂರ್ವಾಂತರ್ಯಾಮಿ ಅವರ ಸಲಹಲು ಸರ್ವದಾ ಅಪೂರ್ವ ತೇಜೋವಂತನಾಗಿ ಅವರ ಹೃದಯದಿ ಸೂರ್ಯತೇಜದಿ ಮೆರೆಯುತಿರುವ ಸರ್ವದಾ ಎಂದು ಅಪೂರ್ವ ಜ್ಞಾನದಿ ನೆನಯುತಿರಿ ಹರಿಭಕ್ತರು 1 ಎದ್ದು ಮುಖ ತೊಳೆದು ನಿಮ್ಮಲ್ಲಿದ್ದ ಕಲ್ಮಷ ತೊಳೆದು ನಿಮ್ಮ ಶುದ್ಧ ಮನದಲಿ ನೆನೆದು ನಿಲಿಸಿ ಹರಿ ಧ್ಯಾನದಿ ಸ್ನಾನಾನ್ಹೀಕಬದ್ಧಕಂಕಣರಾಗಿ ಬ್ರಾಹ್ಮೀಮುಹೂರ್ತದಲಿ ಗೈಯೆ ನಿಮ್ಮಲ್ಲಿದ್ದ ಕಲ್ಮಶವೆಲ್ಲ ಕಳೆದತಿ ಹರ್ಷವೀವ ನಿಮ್ಮ ಶುದ್ಧಾಚರಣೆಗೆ ಮೆಚ್ಚಿ ನಿಮ್ಮ ಭಕ್ತಿಗೆ ನಿತ್ಯ ಬದ್ಧ ಕಂಕಣರಾಗಿ ಸ್ತುತಿಸೆ ನಿತ್ಯ ಹರಿ ಭಕ್ತರು 2 ಮಾಧ್ಯಾನ್ಹಿಕಾದಿಗಳಾಚರಿಸುತ ಹರಿಯ ಮಧ್ಯವರ್ತಿಯನೆನಿಸಿ ಆ ಸೂರ್ಯನಂತರ್ಯಾಮಿ ನಾರಾಯಣನಿ- - ಗಘ್ರ್ಯಪಾದ್ಯವನಿತ್ತು ಸುಭೋಜನವ ಮಾಡಿ ನಿಮ್ಮ ಪೂರ್ವಜರನುಗ್ರಹದಿ ಮಜ್ಜನ್ಮಸಾರ್ಥಕವೆಂದಾವನರಿವನೋ ಅವನ ಹೃದಯ ಮಧ್ಯವರ್ತಿಯಾಗಿದ್ದು ಕಾವ ಸದ್ಗುಣೋಪೇತ ಭಕ್ತರ ಕೈ ಬಿಡ ಮಧ್ವಾಂತರ್ಗತ ಶ್ರೀ ಶ್ರೀನಿವಾಸ ಅವನ ಮನದಿ ನೆನೆಯಿರಿ ಹರಿ ಭಕ್ತರು 3 ಜವÀನ ಬಾಧೆಯು ಇಲ್ಲ ಹರಿ ಭಕ್ತರಿಗೆ ಯವನ ರೂಪದ ಕಲ್ಕಿ ಹರಿಯ ನೆನೆವರಿಗೆ ಜವದಿ ಯಮನಾಳ್ಗಳು ಮುಟ್ಟಲಂಜುವರು ಹರಿಭಕ್ತರನು ಕವಿ ನಾರಾಯಣನ ಧ್ಯಾನಿಪರಿಗೆ ಅವನಿಯೊಳು ಭಯವಿಲ್ಲ ಅವರಿಗೆ ಸಮನಿಲ್ಲ ಅವರಲ್ಲಿ ಹರಿಯಿದ್ದ ಕಾರಣದಿ ಜವದಿ ಹರಿ ದಾಸರೆಲ್ಲ ಶ್ರೀ ಶ್ರೀನಿವಾಸನ ಭಕ್ತರ ಸಂಗದೊಳಿರಿ ಹರಿಭಕ್ತರು 4 ಯಾರ ಭಯವಿಲ್ಲ ಹರಿ ನಾಮಕೆ ದಾರಿ ಹೋಕರು ಬಾರರಿದಕೆ ಭಾರವಿಲ್ಲವು ಮನಕೆ ಸಂಸಾರಭಯವಿಲ್ಲವರಿಗೆ ಹರಿ ಎಂಬುದನೆ ಸಕಲ ಕಾರ್ಯವ ನಿರ್ವಹಿಸುವನೆಂದರಿತವರಿಗೆ ಯುಕುತಿ ಬುದ್ಧಿಯು ಯಾತಕೆ ಯಾರ ಭಯವೇಕೆ ಹರಿಸಖರಾಗಿರಲವರಿಗೆ ಅಂಜಿಕೆಯಾಕೆ ಯಾರನಾಶ್ರಯಿಸುವ ಶ್ರಮವಿಲ್ಲ ಇದನರಿತು ಹರಿಭಕ್ತರು ಶಕುನ ಅಪಶಕುನವೆನ್ನರು ಮನದಿ ಯುಕುತಿಯ ಮಾಡರು ಪರರ ಬೇಡೆ ಶ್ರೀ ಶ್ರೀನಿವಾಸ ಭಕ್ತರು ಅವರ ಮತ ಹಿಡಿದು ಬದುಕಿ ಹರಿಭಕ್ತರು 5 ಜತೆ ಕರುಣಾಕರ ಹರಿಭಕ್ತರಭಿಮಾನಿ ವರದಭಯ ಹಸ್ತವ ಕೊಡುವ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ನಾರಾಯಣ ಹರಿ ನಾಮವ ಭಜಿಪಗೆ ನರಕದ ಭಯವುಂಟೆ ನಾರದ ಸನಕ ಸನಂದನ ಸುರನರ ಪಾಲಿತ ಕರುಣಾಕರನರಹರಿ ಎಂದು ಪ ಖಗರಾಜಗಳುಕದ ಉರಗನುಂಟೆ ದೊಡ್ಡ ಮೃಗರಾಜ ಗಳುಕದ ಆನೆಯುಂಟೆ ನಿತ್ಯ ಜಗದುದರನೆ ಜಗದೊಡೆಯ ಜಾಹ್ನವಿಪಿತ ತ್ರಿಗುಣ ನಿರ್ಗುಣನೆಂದು1 ತ್ರಯಂಬಕ ನುರಿಗಣ್ಣ ಲುಳಿದವರುಂಟೆ ಬಲಿಬಂಧನ ನರಹರಿ ಎಂದು 2 ಕುಳಿಶಕಳುಕದ ಪರ್ವತವುಂಟೆ ಚಲುವ ನಳಿನ ಮಿತ್ರನ ಮುಂದೆ ತಮವುಂಟೆ ಕಾಮ ಚೆಲುವ ಜಲಜಮಿತ್ರ ಕುಲಲಲಾಮನೆ ಎಂದು 3 ಹರಿಯೆ ರಕ್ಷಿಸಲು ಕೊಂದವರುಂಟೆ ಮನ ಮುರಿದು ಕೊಂದರೆ ಕಾವವರುಂಟೆ ಮುರಹರ ನಾರಾಯಣ ನರಹರಿ ಕರಿವರದ ಪಾಲಿತ ಸುರನರರ ಸೇವಿತನೆಂದು 4 ಹುತಾಶನನಿಗಳುಕದ ಕಾನನವುಂಟೆ ವನರುಹಾಂಬಕ ವಾಯುತನಯ ಕೋಣೆಯ ಲಕ್ಷ್ಮಿರಮಣ ಸನಕ ಸುತ ಚಿನುಮಯಾತ್ಮಕನೆಂದು 5
--------------
ಕವಿ ಪರಮದೇವದಾಸರು
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಾರಾಯಣಾ ಕರುಣಾ ಘನಚರಣಕ್ಕೆರಗುವೇ ಸ್ಮರಣೆಯೊಳಗೆ ಮನ ಒಲಿಯಿಸಿ ಪ್ರೇರಣೆ ಮಾಡುವಾ ಪ ನನ್ನ ನಿಜವನರಿಯದೆ ನಾ ಅನ್ಯ ಯೋನಿಯೊಳಗೆ ತಿರುಗಿ ಬನ್ನ ಬಡುವುದನ್ನು ತಿಳಿದು ನಿನ್ನ ಬಿಡೆನೆನ್ನೆ 1 ಭಾವಭಕ್ತಿಯಿಂದ ಪಿಡಿದು ನೋಯದಂತರದೊಳಗಿಳಿದು ಸಾವಧಾನದಿ ಸೇವೆಮಾಳ್ಪೆ ಭಾವ ಬಲಿದು ನಾ 2 ಎಲ್ಲಿಯೂ ಪರಿಪೂರ್ಣ ನೀನೆ ಸೊಲ್ಪಗೊಡಲಶಕ್ಯ ನಾನೈ ಬಲ್ಲಿದವರಿಂದೆಲ್ಲಾ ಅರಿಶ ಘುಲ್ಲನಾಭನೇ 3 ನಾದದ ಮೊದಲಿನ ಮೂಲದಿ ಭೇದಭಾವವೆಲ್ಲ ಅಳಿದು ಆದಿಶಾಂತಿ ಸುಖವನೀವ ನಾದಿ ಶ್ರೀಗುರು 4
--------------
ಶಾಂತಿಬಾಯಿ
ನಾರಾಯಣೆನು ಮನವೆ ನರಹರಿಯ ನೆನೆ ಮನವೆಘೋರ ದುರಿತಗಳ ಬೆದರಿಸಿ ಓಡಿಸುವುದು ಪ ಗುರುವಿನುಪದೇಶದಲ್ಲಿ ಪರಮ ರಹಸ್ಯವನರಿತುಮರೆಯದಲೆ ಅಲ್ಲಿ ಅಧಿಕಾರಿಯಾಗೊತಿರುಮಂತ್ರವನು ಜಪಿಸು ತಿರುಲಾಂಛನವ ಧರಿಸುಪರಮ ವೈಷ್ಣವರ ಪಂಕ್ತಿಯ ಸೇರು ಮನವೆ 1 ನಿತ್ಯ ಸುಖಿಯಾಗೋ 2 ಶೇಷವಿಶೇಷವೆಂದೆನಿಪ ಪರಮಾರ್ಥದೊಳುಮೀಸಲಳಿಯದ ಪಾಪರಹಿತನಾಗುವಾಸಾಧಿಪತಿ ಕಾಗಿನೆಲೆಯಾದಿಕೇಶವನದಾಸಾನುದಾಸರಿಗೆ ದಾಸ ನೀನಾಗೊ 3
--------------
ಕನಕದಾಸ