ಒಟ್ಟು 284 ಕಡೆಗಳಲ್ಲಿ , 57 ದಾಸರು , 267 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ. ಯಾಕೆ ಪಂಥ ಲೋಕೈಕನಾಥ ದಿ- ವಾಕರಕೋಟಿಪ್ರಭಾಕರ ತೇಜನೇ ಅ.ಪ. ಪೂರ್ವಾರ್ಜಿತ ಕರ್ಮದಿಂದಲಿ ಇರ್ವೆನು ನರಜನ್ಮ ಧರಿಸುತ ಗರ್ವದಿಂದ ಗಜರಾಜನಂತೆ ಮತಿ ಮರ್ವೆಯಾಯ್ತು ನಿನ್ನೋರ್ವನ ನಂಬದೆ ಗರ್ವಮದೋನ್ಮತ್ತದಿ ನಡೆದೆನು ಉರ್ವಿಯೊಳೀ ತೆರದಿ ಇದ್ದೆನಾದರೂ ಸರ್ವಥಾ ಈಗ ನಿಗರ್ವಿಯಾದೆಯಹ ಪರ್ವತವಾಸ ಸುಪರ್ವಾಣ ವಂದಿತ 1 ಯಾರಿಗಳವಲ್ಲ ಮಾಯಾ ಕಾರ ಮಮತೆ ಸಲ್ಲ ಸಂತತ ಸಾರಸಾಕ್ಷ ಸಂಸಾರಾರ್ಣವದಿಂದ ಪಾರಗೈದು ಕರುಣಾರಸ ಸುರಿವುದು ನತ ಮಮ ಕಾರ ಹೋಯ್ತೆ ಕಡೆಗೆ ಏನಿದು ಭಾರಿ ಭಾರಿ ಶ್ರುತಿ ಸಾರುವುದೈ ದಯ ವಾರಿಧಿ ನೀನಿರಲ್ಯಾರಿಗುಸುರುವುದು 2 ಬಾಲತ್ವದ ಬಲೆಗೆ ದ್ರವ್ಯದ ಶೀಲವಿತ್ತೆ ಎನಗೆ ಆದರೂ ಪಾಲಿಸುವರೆ ನಿನಗಾಲಸ್ಯವೆ ಕರು- ಸಾಲದೆರಡು ಮೂರು ನಿನ್ನಯ ಮೂಲ ಸಹಿತ ತೋರು ಮುನಿಕುಲ ಪಾಲ ಶ್ರೀಲಕ್ಷ್ಮೀನಾರಾಯಣ ಗುಣ ಶೀಲ ಕಾರ್ಕಳ ನಗರಾಲಯವಾಸನೇ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾರಿಗೆ ಹೋಲುವೆ ನಿನ್ನ ಯಾರಲ್ಲಿ ಸಲ್ಲಾಪಿಸಲಿ ಮಾರನೋ ಮದನನ ಪಡೆದ ಕೇಶವನೋ ಪ ಸಾರಸವದನನು ವಾರಿಧಿಶಯನನು ಅ.ಪ ಆಹವ ಭೀಮನೋ | ಸಾಹಸ ಮಲ್ಲನೋ ಬಹು ಸುದೀರ್ಘನು ಮೋಹಮಂದಿರನು ಮಹಿಜೆಯರಸನೋ ಅಹಿಯ ಶಯನನೋ ಬಹುಗುಣಾನ್ವಿತ ವೆಂಕಟೇಶನೋ ಮಹಿತ ಮಹಿಮನು ಸಾಹಸ ಶೀಲನು ಪಾಹಿರಘು ಕುಲಪತಿ ಚೆನ್ನ ಚೆಲುವನು 1 ಉರಗ ಭೂಷಣನೋ | ಸರಸಿಜ ಭವನೋ ಧರಣಿಯ ಅಳೆದ ಪರಮಪುರುಷನೋ ಗರುಡಗಮನನೋ | ಕರುಣ ಭಜಿಪನೋ ನರಪಸುತ ಕೋದಂಡಧರನೋ ಮೆರೆವ ಕಾಂಚೀಪುರದ ವರದನೋ ನಿರುತ ವಂದಿತ ಮಾಂಗಿರೀಶನೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ರಂಗ ಬಾರೈಯ್ಯ ದೇವೋತ್ತುಂಗ ದಯಾಂತರಂಗ | ಅಂಗಜನಯ್ಯ ನರಶಿಂಗಾ ಸಾರಸಾಪಾಂಗ || ಮಂಗಳ ಮಹಿಮಾ ವಿಹಂಗ ಘೋರ ಭವಭಂಗರಹಿತ ರಣರಂಗ ವಿಜಯ || ಸನ್ನುತ ಶೃಂಗಾರಾಂಗ ರಮಾಂಗನಾಸಂಗ ಪ ಶತಕೋಟಿ ಭಾಸ್ಕರ ಯುತತೇಜ ಮರುತಾಂತರ್ಗತ | ಹರಿಮೃದು ಭಾಷಣ | ಕೌಸ್ತು ಭಾಭರಣ | ಜಿತದಿತಿಸುತಬಾಲ | ಶ್ರಿತಭಕ್ತ ಮಂದಾರ | ಪತಿತ ಪಾವನ ಶ್ರೀರಾಮ ಪಟ್ಟಾಭಿರಾಮ | ಅತುಲಿತ ಚರಿತ ಕಾಮಿತ ಫಲದಾಯಕ | ಶತ ಧೃತಿ ಜನಕಾಚ್ಯುತ ಸರ್ವೋತ್ತಮ | ಸತತವು ನೀನೇ ಗತಿಯೆಂದೆನುತಲಿ | ಹಿತದಿ ನಾನು ನಿಮ್ಮ ಸ್ತುತಿಸುತಲಿರುವೆನು 1 ನಂದನಂದನ ವೇಣುನಾದ ವಿನೋದ ಜಗದ್ವಂದ್ಯ ಶ್ರೀವತ್ಸಲಾಂಛನ ವಾಸುಕಿಶಯನ | ಮಂದಹಾಸ ಮುಚುಕುಂದವರದ ರಾಕೇಂದುವದನ | ಗೋವಿಂದ ಇಂದಿರಾನಂದ ಸಿಂಧು ಗಂಭೀರಾ | ಮುಕುಂದ ಧರಣೀಧರ ಕುಂದರದನ ಕಾಳಿಂದಿರಮಣ ಗಜೇಂದ್ರನ ಸಲಹಿದ ಛೆಂದದೆನ್ನ ಮೊರೆಯಿಂದಿಗೆ ಲಾಲಿಸೊ ಪರಮಾತ್ಮ ಸರಸಿಚೋದರ ಸಕಲಾಣುರೇಣು ಪರಿಪೂರ್ಣ 2 ನಿರುಪಮಧೀರ ಶರಣಾಗತ ರಕ್ಷಣ ಮಧುಸೂದನ ಸುರವರ ಪೂಜಿತ ಚರಣಾಂಭೋರುಹ ಕೃಪಾಕಾರ ಹರುಷದಲಿ 3
--------------
ಹೆನ್ನೆರಂಗದಾಸರು
ರಂಗವಲಿದ ರಾಯರ ಪಾಡಿರೆ ಪ ಸಲೆನಂಬಿದವರ ಕಲುಷಗಳೋಡಿಸಿ ಸಲುಹಲು ಸ್ತಂಭದಿ ನೆಲೆಸಿದಂಥ ರಾಯರ 1 ಬಾಗಿ ನಮಿಸಿ ಮುಂ ನವ್ಯಾತಕೆ ತವ ಸೂಸು ನಾನಲ್ಲವೆ | ಮಾನವಿ ನಿಲಯ 1 ದಾಸವರ್ಯನೆ | ಭಾಸುರಸ್ತಂಭ ನಿವಾಸ ಧೀರನೆ ಈ ಸಮಯಿದಿ ಷಡ್ದ್ವೇಷಿಗಳೆನ್ನತಿ ಘಾನಿಗೊಳಿಸುವರುದಾಸೀನ ಮಾಡದೆ 2 ಸಾಧು ಶೀಲನೆ ಪ್ರಹ್ಲಾದ ನನುಜ ಸÀಹ್ಲಾದ ಶಲ್ಯನೆ ವಾದಿರಾಜ ಶತಮೇಧ ನಾಮಾರ್ಯರ ಪಾದಾರಾಧಕ ಭೇದ | ಬೋಧಕ 3 ಭಾರತಿವರ ಕೃತ ಶಾಸ್ತ್ರಮರ್ಮವಿಚಾರ ಬಂಧೂರ ಸಾರಸಭವ ಪಿತ | ಶ್ರೀರಮಾಪತಿ ಸಾರ ವಕ್ತಾರ 4 ಪ್ರೇಮಸಾಗರ ನೀ ಮರೆದರೆ ಈ ಪಾಮರನಿಗೆ ಯಮ ಧಾಮವೆ ಗತಿ ನಿಜ ಹೇ ಮಮ ಸ್ವಾಮಿ 5
--------------
ಶಾಮಸುಂದರ ವಿಠಲ
ರಘುರಾಮ ನೀನೆನ್ನ ಪಾಲಿಸೈ ಜಗನ್ನಾಯಕ ಜಾನಕೀಪತೇ ಪ. ಸಾಗರಶಯನ ಸಾರಸನಯನ ನಾಗವೈರಿಗಮನ ಬಾಗಿ ನಮಿಪೆನಾ 1 ಯಾಜ್ಞಸೇನಿಯಂದು ಯಾಚಿಸಲೈನಿಂದು ಅಕ್ಷಯವಸ್ತ್ರದಿಂ ರಕ್ಷಿಸಿದ ಬಂಧು 2 ವಸುದೆಯೊಳು ಬಂದು ಅಸುರರನ್ನೆ ಕೊಂದು ವಾಸುದೇವನೆಂದು ಪೆಸರನಾಂತೆಯಂದು 3 ಪಾಹಿರಾಮರಾಮ ಪಾಹಿಪೂರ್ಣಕಾಮ ತ್ರಾಹಿ ಸತ್ಯ ಪ್ರೇಮ ತ್ರಾಹಿರಂಗಧಾಮ 4 ಶೇಷಶೈಲನಿಲಯವಾಸ ವಾದಿಗೇಯ ವಾಸುದೇವ ಸದಯ ಶ್ರೀಸತೀಪ್ರಿಯ 5
--------------
ನಂಜನಗೂಡು ತಿರುಮಲಾಂಬಾ
ರಾಮ ನಿನ್ನ ಭಜನೆಗೈಯುವೆ ಕಾಮಾರಿಮಿತ್ರ ರಾಮ ನಿನ್ನ ಭಜನೆಗೈಯುವೆ ಪ ರಾಮ ನಿನ್ನ ಭಜನೆಯನ್ನು ಪ್ರೇಮದಿಂದ ಮಾಳ್ಪ ಜನಕೆ ಕಾಮಿತಾರ್ಥವಿತ್ತು ಸುಖವ ಪ್ರೇಮದಿಂದಕರುಣಿಸುವವನೆ 1 ಜಾನಕಿಯರಮಣ ನಿನ್ನ ಧ್ಯಾನಮಾಳ್ಪೆನಯ್ಯ ಸತತ ಸಾನುರಾಗದಿಂದ ಸಲಹು ಭಾನುವಂಶ ಜಲಧಿಚಂದ್ರ 2 ಇಂದಿರೇಶ ನಿನ್ನ ಪಾದವಿಂದು ಪೂಜೆಗೈವೆ ನಾನು ತಂದೆ ಸಲಹೊ ರಾಗದಿಂದ ಸುಂದರಾಂಗ ಸುಪ್ರಸನ್ನ 3 ಹಾರ ಕುಂಡಲಾದಿಭೂಷ ಚಾರುಮಕುಟಧರಸುಶೋಭ ಸಾರಸಾಕ್ಷ ರವಿಜವರದ ತೋರೋ ಮುಖವ ರಾಘವೇಂದ್ರ 4 ರಾವಣಾದಿ ಸಕಲದನುಜ ಜೀವಹರಣ ರಘುಕುಲೇಶ ಪಾವಮಾನಿ ಪೂಜಿತಾಂಘ್ರಿ ಧೇನುಪುರನಿವಾಸ ದೇವ 5
--------------
ಬೇಟೆರಾಯ ದೀಕ್ಷಿತರು
ರಾಮ ರಮಾರಮ ರಾಮ ಶ್ರೀರಾಮ ಪ ರಾಮ ಸೀತಾರಾಮ ರಾಮ ಜಯರಾಮ ಅ.ಪ. ಶ್ರೀ ರಘುವಂಶ ಲಲಾಮನೆ ರಾಮ ತಾರಕ ಮಂಗಳ ರಾಮನೆ ರಾಮ ನೀರದ ನಿರ್ಮಲ ಶ್ಯಾಮನೆ ರಾಮ ಸಾರಸಲೋಚನ ಸೌಮ್ಯನೆ ರಾಮ 1 ಕೌಸಲ್ಯದೇವಿ ಕುಮಾರಕ ರಾಮ ಕೋಸಲ ದೇಶಾನಂದಕ ರಾಮ ಆಸುರೀ ತಾಟಕ ಶಿಕ್ಷಕ ರಾಮ ಕೌಶಿಕ ಯಜ್ಞ ಸಂರಕ್ಷಕ ರಾಮ 2 ಮುನಿಪತಿ ಶಾಪ ವಿಮೋಚಕ ರಾಮ ಕಾರ್ಮುಕ ಭಂಜಕ ರಾಮ ಜನಕ ಸುತಾನಂದ ವರ್ಧಕ ರಾಮ ಅನುಪಮ ಲೀಲಾದ್ಯೋತಕ ರಾಮ 3 ಸತ್ಯಪರಾಕ್ರಮ ಸಾತ್ವಿಕ ರಾಮ ಪಿತೃವಾಕ್ಯ ಪರಿಪಾಲಕ ರಾಮ ಉತ್ತಮ ಚರಿತಾದರ್ಶಕ ರಾಮ ಚಿತ್ರಕೂಟಾದ್ರಿ ನಿವಾಸಕ ರಾಮ 4 ಕಾಕುತ್ಥವಂಶ ಸುಧಾರಕ ರಾಮ ಲೋಕೇಶ ಲೋಕ ಮನೋಹರ ರಾಮ ಶ್ರೀಕರಾಶ್ರಿತ ಜನ ಮಂದಾರ ರಾಮ ಶ್ರೀ ಕರಿಗಿರೀಶ ಸುಂದರ ರಾಮ 5
--------------
ವರಾವಾಣಿರಾಮರಾಯದಾಸರು
ರಾಮಚಂದ್ರ ಪ್ರೇಮದಿ ಬಾ ಜನಕ ಪ ಕೋಮಲಾಂಗನೆ ಕಾಮಿತದಾತನೆ ಕರುಣಾವಾರಿಧಿ ರಾಮ 1 ಸಾರಸಾಕ್ಷನೆ ತೋರಿಸು ಚರಣವ ಪೂರೈಸೆನ್ನ ಮನ ಸುರಾಮ 2 ಶ್ರೀನಿವಾಸನೆ ಭವ ಕಾನನಾನಲಹನುಪಮ 3
--------------
ಪ್ರದ್ಯುಮ್ನತೀರ್ಥರು
ರಾಮಚಂದ್ರನು ಶೋಭಿಪನಿಂದು ಸದ್ಭಕ್ತಬಂಧು ಪ ಸಾರಸಾಕ್ಷನು ಸಾಮಜವರದನು ಭೂರಿಫಲಪ್ರದ ಭೂಮಿಜೆಯುತನು ಅ.ಪ ಧರೆಯಭಾರವ ತಾಕಳೆಯಬಂದು ಕಾರುಣ್ಯಸಿಂಧು ನರರೂಪವ ಧರಿಸುತ್ರ ನಿಂದು ಕೋದಂಡವ ಪಿಡಿದು ದುರುಳ ದೈತ್ಯರ ಶಿರವನೆ ತರಿದು ಪರಿಪರಿ ವಿಧದಲಿ ಶರಣರಿಗೊಲಿಯುತ ದುರಿತ ಸಂಕುಲವ ಪರಿಹರಿಸಿ ಪೊರೆವ ಶ್ರೀ 1 ಸೂರ್ಯಸುತನ ಸೈನ್ಯದವರ ಸುಮನಸರ ಧೈರ್ಯದಿಂ ಸಮರಗೈದವರ ವೀರಾಧಿವೀರರ ಕಾರ್ಯವ ಸಾಧಿಸಿದಾ ವಾನÀರರ ಪಾರವಶ್ಯರನು ಪರಮೇಷ್ಠಿಯಿಂದ ಧಾರೆಯನೆರೆದಮೃತದಿ ಬದುಕಿಸಿದ ಶ್ರೀ 2 ಘನವಂತ ವಿಭೀಷಣಂಗೆ ಅನುವನು ತೋರಿ ಸಾರಿ ಅನುಜಾತ ಭಕುತಂಗೆ ಅನುಗ್ರಹಬೀರಿ ಆನಂದವೇರಿ ಜನನಿಯರಾಶೀರ್ವಚನವ ಪಡೆದು ಸನುಮತದಿಂ ಪುರಜನರೊಲುಮೆಯೊಳು ದಿನಕರಪ್ರಕಾಶ ಜಾನಕಿನಂದ ಜಾಜೀಶ್ರೀಶ ಶ್ರೀ 3
--------------
ಶಾಮಶರ್ಮರು
ರಾಮಾನುಜಾಚಾರ್ಯ ಮೌನಿವರ್ಯ ನೇಮದಿಂದಲಿ ಗೈದೆ ನೀಂ ಸ್ವಾಮಿ ಕಾರ್ಯ ಪ ಆದಿಯೊಳು ನೀನಾದಿಶೇಷನು ಹರಿಶಯ್ಯೆ ಮೋದಕರ ಪ್ರಹ್ಲಾದ ಎಂದೆನಿಸಿದೆ ಸೋದರದಿ ಸೌಮಿತ್ರಿ ಸಂಕರ್ಷಣನು ಆದೆ ನಾಥ ಯಾಮಾನ ಪಥದಿ ಅರಿಗಳನು ಗೆಲ್ದೆ 1 ಗೀತ ಸೂತ್ರಕೆ ಭಾಷ್ಯಕಾರ ನೀನಾಗಿರುವೆ ಖ್ಯಾತಿಸಿದೆ ವ್ಯಾಸ ಪರಾಶರರ ಹೆಸರ ಪೂತ ಆಳುವಾರುಗಳ ಶ್ರೀಸೂಕ್ತಿ ಪ್ರಕಟಿಸಿದೆ ಮಾತೆವೊಲು ಉಭಯವೇದಗಳ ಪೊರೆದೆ 2 ನೂರೆಂಟು ತಿರುಪತಿಯ ಯಾತ್ರೆಗಳ ಮಾಡುತ್ತ ದಾರಿತೋರಿದೆ ಹರಿಯ ಸೇವಿಸುವ ಪರಿಯ ಪರಮಾರ್ಥಿಕರಾಗಿ ಪರಮವೈಷ್ಣವರಿರಲು ಸಾರಸುಖ ಪದತೋರ್ದೆ ಯತಿಸಾರ್ವಭೌಮ 3 ಎಂದೆಂದು ಮರೆಯದ ಕೂರೇಶರಾ ಸಖ್ಯ ಅಂದು ಬೋಧೆಯ ಕೊಟ್ಟ ಪೂರ್ಣಾರ್ಯರ ನೊಂದಕಾಲವ ನೆನೆದು ಕಣ್ಣೀರ ಕರೆಯುವೆನು ತಂದೆ ಗುರುವಿನ ಗುರುವೆ ದೇವಮಾನ್ಯ 4 ಯಾದವನ ಚೋಳನ ಕೃತ್ರಿಮದ ಕೋಟೆಗಳು ಮಾಧವನ ಡೆಲ್ಲಿಯಿಂ ಕರೆತಂದುದು ಬಾಧಿಸದೆ ಬ್ರಹ್ಮಪೀಡೆಗಳು ಓಡಿದುದು ಈ ಧರೆಯ ಕೀರ್ತಿಗೆ ಮೊದಲಾದವು 5 ರಾಮಚಂದ್ರನ ಕಾಡವಾಸವಂ ನೆನಪೀವ ಸ್ವಾಮಿಯರು ಗಿರಿಸೇರ್ದ ಗುರಿ ಎಲ್ಲವೂ ತಾಮಸರು ಸಾವಿರರ ಒಂದೆ ವಾರದಿ ಗೆಲ್ದ ಮಾಮೈಮೆ ಯಾರಿಗಿದೆ ಭೋಗಿರಾಜಾ 6 ಸಿರಿರಂಗ ತಿರುಪತಿ ಕಂಚಿ ಯದುಶೈಲಗಳ ಪರಮಪದಕೂ ಮಿಗಿಲು ವೈಭವವ ಗೈದೆ ನಿರುತ ತಮ್ಮವರಿಂಗೆ ಸಕಲ ಪಾಪವ ಸುಟ್ಟು ಹರಿಯ ಭರವಸೆ ಪಡೆದೆ ಮೋಕ್ಷ ಕೊಡುವಂತೆ 7 ನಿನ್ನಂತೆ ನಡೆವ ಪ್ರಪನ್ನರೇ ಧನ್ಯರು ಮನ್ನಣೆಯ ಪಡೆದಿರವ ಶ್ರೀಮಂತರು ಎನ್ನ ಬಿನ್ನಪ ಕೇಳಿ ನಿನ್ನವನ ಮಾಡಿಕೋ ಮೂರ್ತಿ ಜಾಜೀಶ ಕೀರ್ತಿ 8
--------------
ಶಾಮಶರ್ಮರು
ರುದ್ರದೇವರು ಗಂಗಾಧರ ಮಹಾದೇವ ಶಂಭೊಶಂಕರ ಪ. ಗಂಗಾಧರಾ ನಿನ್ನ ನಂಬಿದ ಭಕ್ತರಘ ದ್ಹಂಬ ಕಡಿದು ಹರಿ ಇಂಬ ತೋರೆ ಜಗ ಕಂಬಾರಮಣ ನಿನ್ನ ಸಂಭ್ರಮದಿ ಸ್ತುತಿಪೆ ಅ.ಪ. ಚಾರು ಚರ್ಮಾಂಬರ ಧೀರ ಧರಿಶಿ ಮೆರೆವ ಚಾರು ಭೂತಗಣ ಸಂಚಾರ ಭಸ್ಮಧರಾ ಹಾರ ಕೇಯೂರ ಮಧ್ಯ ಥೋರ ಸರ್ಪ ಭೂಷ ನಿನ್ನ ಚಾರು ರೂಪ ವರ್ಣಿಸಲಳವೆ ಸಾರಸಾಕ್ಷ ಪಾರ್ವತಿಪ್ರಿಯ ಕರುಣಾಕರಸ ದೊರಕದೆ ಶ್ರೀರಮಣನು ಸಿಗ ಕೋರೆ ಹರಿಯ ನಿನ್ನ ಪಾದಪಂಕಜ ಹಾರೈಸುವೆ ಸಂಸಾರ ಶರಧಿಂ 1 ಪರಮಪುರುಷ ಶ್ರೀ ರಾಮನ ತಾರಕ ವರಮಂತ್ರ ಜಪಿಸುವ ವರ ಪಾರ್ವತಿಗರುಹಿ ಧರೆಯೊಳು ಮನುಜರ ವರಮನ ಪರಿಪರಿ ಬೇಡುವೆ ಹರಿಸ್ಮರಣೇಯ ಎನಗೀಯೋ ಕರುಣದಿ ಮಾರ್ಕಂಡೇಯಗೆ ವರವಿತ್ತು ಚಿರಂಜೀವತ್ವವ ಪರಿಪಾಲಿಸಿದಂತೆ ಪರಿಪರಿ ಭಕ್ತರ ಪೊರೆದಂತೆ ಪೊರೆಯೆನ್ನ ಪರಿ ಇತ್ತು 2 ಪಾಶಾಂಕುರಧರ ಪರಮಪವಿತ್ರನೆ ಈಶ ಭಕ್ತರ ಭವಪಾಶದಿಂದುದ್ಧರಿಪೆ ಶ್ರೀಶ ಶ್ರೀ ಶ್ರೀನಿವಾಸನಾಸಕ್ತಿಯಲಿ ಭಜಿಪ ದೋಷರಹಿತ ಮನ ಭಾಸಿ ಪಂಥದಿ ಈವೆ ಕಾಶೀಶ್ವರ ನಿನ್ನ ಲೇಸು ಭಕ್ತಿಲಿ ಸ್ತುತಿಪಾ ದಾಸ ಸಂಗದೊಳಿರಲು ಲೇಸು ಮನವ ಕೊಡು ವಾಸುಕಿಶಯನ ಸುತನ ಸುತನೆ ನಿನ್ನ ಏಸು ದಿನದಿ ಸ್ತುತಿಸುತ ಹಾರೈಸುವೆ 3
--------------
ಸರಸ್ವತಿ ಬಾಯಿ
ಲಕ್ಷ್ಮೀ ಸ್ತುತಿಗಳು ಆರೋಗಿಸು ತಾಯೇ ಮೋದದಿ ಕ್ಷೀರಾಂಬುಧಿ ತನಯೆ ಪ. ಸಾರಸನಯನೆ ಮದವಾರಣಗಮನೆ ಸಾರಿ ಚೀಡುವೆ ಸರಾಗದೊಳೀಕ್ಷಿಸು ಅ.ಪ. ಉಪ್ಪು ಉಪ್ಪಿನಕಾಯಿಕೋಸುಂಬರಿ ಹಪ್ಪಳ ಸಂಡಿಗೆಯ ತಪ್ಪದೆ ತಂದೊಪ್ಪಿಸುತಿಹೆ ಎನ್ನಪ್ಪನೊಡನೊಪ್ಪದಿ ವ ುಂಡಿಸಿ 1 ಚಕ್ಕುಲಿ ಕರಜಿಕಾಯಿ ಅತಿರಸ ಸಕ್ಕರೆ ಹೋಳಿಗೆಯಂ ನಲಿಯುತ 2 ದಧಿ ನವನೀತ ಘೃತ ಮಧುಸಾರವೆನಿಪ ಪರಮಾನ್ನ ಕ್ಷೀರಶರಧಿಸುತೆ ನೀ ನೀರಸ ಸಹಿತಾಪಾರ ಕೃಪಾಪಾಯದೊಳೀಕ್ಷಿಸಿ3 ಸವಿನೋಡುತೆ ನಲಿದು4 ನಿಗಮಾಗಮ ವಿನುತೇ ನಮಿಸುವೆ ನಗಧರ ಸುಪ್ರೀತೆ ಗುಣಗಳ ಬಗೆಗೊಳಿಸುತ್ತಲಿ 5
--------------
ನಂಜನಗೂಡು ತಿರುಮಲಾಂಬಾ
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು
ಲಕ್ಷ್ಮೀಶ ಹರಿ ವಿಠಲ ರಕ್ಷಿಸೋ ಇವಳಾ ಪ ಕುಕ್ಷಿಯೊಳಗನ್ಯರೆನೆ | ರಕ್ಷಕರ ಕಾಣೇ ಅ.ಪ. ಮಧ್ವ ಮತದಲ್ಲಿಹಳು | ಶ್ರದ್ಧೆ ಭಕ್ತೇಯುತಳುಪದ್ಧತಿಗಳಲವಡಿಸಿ | ಶುದ್ಧ ಸಾಧನದಾ |ಅಧ್ಯಾನ ಕಳೆ ತಂದು | ಬದ್ಧಳನ ಮಾಡುತ್ತಉದ್ಧರಿಸೋ ಶ್ರೀ ಹರಿಯೆ | ಪದ್ಮನಾಭಾಖ್ಯಾ 1 ಸಿರಿ ಭವ ಹಾರೀ 2 ಸಾರ ಸಾಧನಕೇ |ಚಾರು ನಿನ್ನಯ ನಾಮ | ಸಾರಸದಿ ಸವಿದುಂಬಭರಣಿಯಲಿರಿಸಯ್ಯ | ಮಾರಪಿತ ಹರಿಯೇ 3 ಕರ್ಮಗಳ ಮಾಳ್ಪವಲಿ | ಮರ್ಮಗಳ ತಿಳಿಸಯ್ಯನಿರ್ಮಮತೆ ನೀಡುತ್ತ | ಧರ್ಮ ಸಾಧನಕೇ |ಕರ್ಮ ನಾಮಕ ಹರಿಯೆ | ಪೇರ್ಮೆಯಲಿ ಇವಳನ್ನಕ್ರಮ್ಮಿಸೋ ಕರ್ಮದಲಿ | ಧರ್ಮಗುಪ್‍ಧರ್ಮೀ 4 ಧಾವಿಸೀ ಬಂದಿಹಳು | ದೇವ ತವ ದಾಸ್ಯವನೆ ಭಾವುಕಳಿಗಿತ್ತಿಹೆನೋ | ಓವಿ ಉಪದೇಶಾಗೋವಳರ ಪ್ರೀಯ ಗುರು | ಗೋವಿಂದ ವಿಠ್ಠಲನೆನೀವೊಲಿದು ಪೊರೆ ಇವಳ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು