ಒಟ್ಟು 556 ಕಡೆಗಳಲ್ಲಿ , 77 ದಾಸರು , 506 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಲಿದಾಡಿದಳ್ ನಳಿನಾಂಬಕಿ ಒಲಿದೆಮ್ಮನು ಸಲಹಲೋಸುಗ ಪ. ಸುಲಲಿತ ವೀಣಾಪಾಣಿ ಮಣಿ ಸುಗುಣಿ ಅ.ಪ. ಕೃತೀಶಸುತೆ ಕೃಪಾನ್ವಿತೆ ಶ್ರುತಿಸಮ್ಮತಗೀತೆ ಪ್ರತಿರಹಿತೆ ಸತಿಪೂಜಿತೆ ರತಿಯಾಮಿತ ಶೋಭಿತಳೆ ಧೃತಿ ಸಂಭೃತೆ ಮತಿದಾಯಕಿ 1 ಇಭೇಂದ್ರಗಮೆ ವಿಧುಮಂಡಲ- ನಿಭಮುಖಿ ಶಿಖಿಯಾನೆ ಅಭಯಪ್ರದೆ ಅಖಿಳೇಶ್ವರಿ ಸುಭಜೆ ಶುಭದೆ ವಿಬುಧೆ ಅಭವೆ ಸದ್‍ವಿಭವಾಸ್ಪದೆ 2 ಪರಾಂಬರಿಸು ಪದಾಶ್ರಿತನ ಪ್ರಭಾಕರಶತಾಭೆ ಹರಿ ಲಕ್ಷ್ಮೀನಾರಾಯಣ- ಶರಣೆ ರತುನಾಭರಣೆ ಕರುಣಾರಸವರುಣಾಲಯೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಲಿದೈತಾರೆಂಬೆ ಹೇ ಜಗದಂಬೆ ನಾಂ ಬೇಡಿಕೊಂಬೆ ಪ. ಒಲಿದೈತರೆ ನೀ ನಲವೇರುತ ನಾ ನಲಿದಾರಾಧಿಪೆ ಎನ್ನೊಲಿದಂಬೇ ಅ.ಪ. ಸಿಂಧುನಂದನೆ ಅರವಿಂದನಯನೆ ಇಂದುಸೋದರಿ ಸಿಂಧುರಗಮನೆ ಸುಗುಣಾಭರಣೆ ವಂದಿಪೆ ಶರದಿಂದುವದನೆ ಸುರ ವಂದಿತಚರಣೆ 1 ಅಂದಿಗೆ ಕಾಲುಂಗುರ ಘಲಿರೆನೆ ಇಂದಿರೆ ತವಪದದ್ವಂದ್ವವ ತೋರಿ ವಂದಿಸುವೆನ್ನೀಮಂದಿರ ಮಧ್ಯದಿ ಎಂದೆಂದಿಗು ನೆಲೆಸಿರು ನಂದಿನೀ ಜನನೀ 2 ಕ್ಷೀರಾಂಬುಧಿ ತನಯೆ ಸೌಭಾಗ್ಯದ ನಿಧಿಯೆ ಕ್ಷೀರಾಬ್ಧಿಶಯನನ ಜಾಯೆ ಸಾರಸನಿಲಯೆ ವಂದಿಪೆ ತಾಯೆ ಬಾರೆಂದು ಕೈಪಿಡಿದೆಮ್ಮನು ಕಾಯಿ 3 ಸರಸಿಜಾಸನೆ ಸ್ಮರಮುಖ ಜನನಿಯೆ ಸುರನರಪೂಜಿತೆ ನಾರದ ಗೇಯೆ ಸಾರಗುಣಭರಿತೆ ಸರಸಿಜಪಾಣಿಯೆ ಶ್ರೀರಮಣೀ ಪರಿಪಾಲಿಸು ಜನನಿ 4 ಸೆರಗೊಡ್ಡಿ ಬೇಡುವೆ ಶ್ರೀನಾರೀ ನಿನ್ನೆಡೆ ಸಾರೀ ಪರತರ ಸುಖ ಸಂಪದವನು ಕೋರೀ ಪೊರೆ ಮೈದೋರಿ 5 ಪರಿಪರಿ ವಿಧದಾ ಸಿರಿಸಂಪತ್ತಿಯೋಳ್ ಗುರುದೈವಂಗಳ ಸೇವಾವೃತ್ತಿಯೋಳಿರೆ ಕರುಣಿಸು ದೃಢತರ ಭಕ್ತಿಯನೆಮಗೀಗಳ್ ವರಶೇಷಗಿರೀಶನ ಮಡದಿಯೆ ಮುದದೋಳ್ 6
--------------
ನಂಜನಗೂಡು ತಿರುಮಲಾಂಬಾ
ನವನೀತ ಚೋರಾ ಪ ಸಹೋದರಿ ಮಾನಸ ಚಕೋರ ಚಂದ್ರ ಚಂದ್ರ ಕುಲಚಂದ್ರ ಚಂದ್ರಮುಖ ಅ.ಪ ಸೂರಿಜನಪ್ರಿಯ ಸುಗುಣನಿಲಯ ಪಾ- ಕಾರಿಗರ್ವಹರ ಕರುಣಾ ಜಲಧೇ1 ಸದ್ವಿಹಾರ ದೇವ ದ್ವಿಜ ಪೋಷಕ 2 ರಾಮಾನುಜ ಭೃಗು ರಾಮತ್ರಿಜಗದಭಿರಾಮಪಾಹಿ ಗುರುರಾಮವಿಠಲ ಜಯ3
--------------
ಗುರುರಾಮವಿಠಲ
ನಳಿನನಾಭ ಸುಂದರ ಸುಗುಣಾಕರ ಕಮಲೇಶ ಜಗದೀಶ ಪ ಚಲಿಸಬಲ್ಲರೇ ನಿನ್ನ ಬಲವಿಲ್ಲದಿರಲು ಸಕಲ ಸುರನರರು ಅ.ಪ ಬ್ರಹ್ಮಾದಿಗಳು ನಿನ್ನ ಸಮ್ಮತಿಯಲಿ ಈ ಬ್ರಹ್ಮಾಂಡದಲಿ ತಮ್ಮ ಕರ್ಮರಚಿಸಿ ನಿನ್ನ ಮರ್ಮವನರಿಯಲು ತಮ್ಮ ಕಾಲವ ಕಳೆಯುವರು 1 ಅಜ್ಞಾನದೂರನೆ ಸುಜ್ಞಾನ ಮೂರುತಿ ಯಜ್ಞನಾಮಕ ಪರಮಾತ್ಮ ನಿನ್ನ ಜಿಜ್ಞಾಸದಿಂ ಸುಪ್ರಜ್ಞೆಯ ಪೊಂದದ ಅಜ್ಞಾನಿ ಇದನರಿಯುವನೇ 2 ಸರ್ವತ್ರ ವ್ಯಾಪ್ತನೆ ಸರ್ವಾಗಮಾರ್ಥನೆ ಸರ್ವ ಪ್ರೇರಕ ಸರ್ವೇಶ ಗರ್ವ ತೊರೆದು ನೀನೋರ್ವ ಸ್ವತಂತ್ರನೆಂ ದರಿವ ಜನಕೆ ಸುಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ನಾಗವೇಣಿ ಶುಕವಾಣಿ ಸಖಿ ಪ ಭೋಗ ಭಾಗ್ಯ ಬಯಸುವ | ಕು ಯೋಗ ಕುತ್ಸಿತಳಲಿ ಅ.ಪ. ಅಗಣಿತ ಗುಣಾರ್ಣವಗೆ ಸುಗುಣನೆಂದರಿತು ನಾ ಮಣಿಯಲರಿಯೆ ಬಗೆ ಬಗೆ ಕುಸುಮಂಗಳನು ಸೊಗಸಿನಿಂದಲಂಕರಿಸಿ ನಗಧರನ ಸ್ತುತಿಸಲರಿಯದವಳಲ್ಲಿ 1 ರಮಾಭಿಮಾನ್ಯನಂತಾಸನ ಸದನಗೆ ಕಮಲಾಸನವಿತ್ತು ಪ್ರೇಮ ಮಾಡಲರಿಯೆ ಸೋಮ ಸೂರ್ಯನಂತರುಧಾಮದಿ ಬೆಳಗುತ್ತಿರೆ ನೇಮದಿಂದ ದೀಪದಾರತಿಯ ಮಾಡುವಳಲ್ಲಿ 2 ಸಿರಿಭವಾದ್ಯರೆ ಆಭರಣ ಉಳ್ಳವಗೆ ಕರಗುವ ಕನಕ ತೊಡಿಸಲರಿಯೆ ಕರಿವರದ ವಿಜಯ ರಾಮಚಂದ್ರವಿಠಲನ್ನ ಅರಿತು ಒಲಿಸಲರಿಯದವಳಲ್ಲಿ 3
--------------
ವಿಜಯ ರಾಮಚಂದ್ರವಿಠಲ
ನಾಗವೇಣಿಯೆ ಕರೆದು ತಾರೆ ನಾಗಶಯನನಾ ಪ ನಗಧರ ಪ್ರಿಯನೆನಿಪ ನಾಗವರದನಾ ಅ.ಪ ಜಲವಪೊಕ್ಕು ತಮ ನಲಿದ ಜಲರುಹಾಕ್ಷನಾ ಜಲಧಿ ಮಥನವನ್ನು ಗೈದ ಚೆಲುವರರಸನಾ 1 ಧರಣಿಪೊಯ್ದ ಖಳನ ಸೀಳ್ದ ನಳಿನನಾಭನಾ ಭರದಿ ಹೊಳೆವ ಕಂಬದಲ್ಲಿ ತರಳಗೊಲಿದನಾ 2 ಧರಣಿ ಈರಡಿಯ ಮಾಡಿ ಸುರರ ಪೊರೆದನಾ ಧರಣಿಪಾಲಕುಲವ ತರಿದ ಪರಶುರಾಮನಾ 3 ಧರಣಿಸುತೆಯನೊಯ್ದ ಖಳನ ಶಿರವನರಿದನಾ ತರಳತನದಿ ವೊರಳನೆಳೆದ ತರಳ ಕೃಷ್ಣನಾ 4 ತರುಣಿಯರ ವ್ರತವನಳಿದು ಪುರವಗೆಲಿದನಾ ಹರುಷದಿಂದ ತುರಗವೇರಿ ನಲಿವ ಸುಗುಣನಾ 5 ಸುರಪುರದಿ ನಲಿವಿನಿಂದ ನೆರೆದು ನಿಂದನಾ ಶರಣರಕ್ಷ ಲಕ್ಷ್ಮಿಯರಸ ಪರಮಪುರುಷನಾ 6
--------------
ಕವಿ ಲಕ್ಷ್ಮೀಶ
ನಾನ್ಯಾಕೆ ಚಿಂತಿಸಲಿ ನಾನ್ಯಾಕೆ ಧೇನಿಸಲಿ ತಾನಾಗಿ ಶ್ರೀರಾಘವೇಂದ್ರಯತಿ ಒಲಿದ ಪ ಪೋರತನದವನು ಎರೆಡು ತೆರೆಗಳಲ್ಲಿ ದೂರಾಗಿ ಮೊರೆಯು ಅಲ್ಲವೆಂದು ಕಾರುಣ್ಯದಿಂದ ತಮ್ಮಯ ಗುರುತುಗಳ ತೋರಿ ಧೀರ ತಾ ಕರವನು ಪಿಡಿದ ಬಳಿಕ 1 ಜಗದೊಳಗೆ ಪದಾರ್ಥಗಳು ಗುಣದಿ ಭುಂಜಿಸುವಂಗೆ ಅಗದಂಕರನು ತಾನು ಬಳಿಗೆ ಬಂದು ಬಗೆಬಗೆಯಿಂದಲಿ ಸುರಸ ಪದಾರ್ಥಗಳು ಸೊಗಸಾಗಿ ಉಣಿಸಲು ಚಿಂತೆಯುಂಟೆ2 ಪೂರ್ಣಜಲ ಹರಿವ ವಾಹಿನಿ ಕಂಡು ಬೆದರುವಗೆ ಕರ್ಣಧಾರನು ತಾನೆ ಬಂದು ನಿಂದು ತೂರ್ಣದಲಿ ಕರಪಿಡಿದು ಹರಿಗೋಲ ಒಳಗಿಟ್ಟು ಫೂರ್ಣಿಸಲು ಅವನಿಗೆ ಚಿಂತೆಯುಂಟೆ 3 ತನ್ನಯ ಹಿತವು ತಾ ವಿಚಾರಿಸಲವಂಗೆ ಚನ್ನಾಗಿ ಪರಮ ಗುರು ತಾನೆ ಬಂದು ಸನ್ಮಾರ್ಗವನು ತಾನೆ ಪೇಳುವೆನೆನಲು ಇನ್ನು ಆಯಾಸವುಂಟೆ ಅವನಿಗೆ 4 ಏಸು ಜನ್ಮದಲಿ ಅರ್ಚಿಸಿದೆನೊ ನಾ ಇನ್ನು ಪಾದ ಪದುಮ ಲೇಸಾಗಿ ಈ ಸುಕೃತದಿಂದೆನ್ನ ಹರಿದಾಸ ಈ ಸುಗುಣ ಗುರುರಾಯ ಎನಗೆ ಒಲಿದ 5
--------------
ವ್ಯಾಸತತ್ವಜ್ಞದಾಸರು
ನಾರಗಾ ಎನುತಂದು ಸಾರಲಾ ನುಡಿಕೇಳಿ ಆರಯ್ದು ಕಯ್ವಿಡಿದು ಕಾಯ್ದೆ ದ್ವಿಜನ ಗೋವಿಂದ ಪೊರೆ ಎಂದು ಗೋಳಿಟ್ರಗಜರಾಜಗಾ ದಿವ್ಯದರ್ಶನಾನಂದಮಾಯ್ತು ಅಕ್ಷಯನೆ ಕಾಪಿಡೆಂದಾಕ್ಷಣವೆ ಪಾಂಚಾಲಿ ಗಕ್ಷಯಾಂಬರಗಳಿಂ ರಕ್ಷೆಯಾಯ್ತು ಪಾರ್ಥಸೂತನೆ ನಿನ್ನನರ್ಥಿಯಿಂ ಕೆಲಸಾರ್ದು ಪ್ರಾರ್ಥಿಸುತ್ತಿರ್ಪೆನೈ ಪರಮಪುರುಷ ವರಶೇಷಗಿರಿನಿಲಯ ಸುಗುಣವಲಯ ಶರದಿಂದು ನಿಭವದನ ಚತುರವಚನ ದಮನ ಗರುಡಗಮನ ಪರಿಪಾಹಿ ಮಮದೇವ ಸುಪ್ರಭಾವ
--------------
ನಂಜನಗೂಡು ತಿರುಮಲಾಂಬಾ
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರಾಯಣ ರಕ್ಷಿಸೋ ನಮ್ಮನು ಲಕ್ಷ್ಮೀ ನಾರಾಯಣ ರಕ್ಷಿಸೋ ಪ ಪಾರರಹಿತ ಭವಪಾರಾವಾರದಿ ಬಲು ಘೋರತಾಪವು ಮೀರಿತೋ ಭವದೂರ ನಿತ್ಯೋದಾರ ಕರುಣದಿ ಅ.ಪ ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖ ಕಳತ್ರ ನಿವೇಶ ತನುಜ ಮಾಯಾ ಪಾಶದೊಳಗೆ ಶಿಲ್ಕಿ ಗಾಸಿಯಾದೆನು ಜಗದೀಶ ನಿಖಿಲಸು ರೇಶ ಕಮಲಫಲಾಶನಯನ ದಿ ನೇಶಶತ ಸಂಕಾಶ ವ್ಯಾಘ್ರಗಿರೀಶ ಭವಭಯ ಪಾಶ ಹರಪರಮೇಶ ವಂದಿತ 1 ದೇಹಾಭಿಮಾನದಲ್ಲಿ ತೀವಿದ ಭೂತ ಸೋಹಮೆಂಬುವ ಬಲು ಮೋಹದಿ ಸಿಲುಕಿ ದಾ ಸೋಹಮೆನ್ನದೆ ದೈವ ದ್ರೋಹಿಯಾದೆನು ವಿದೇಹಜಾವರಿ ಗೂಹ ನೋಚಿತದೇಹ ವಿಜಿತ ವಿ ದೇಹ ಖಗವರವಾರಶುಭಪರಿವಾಹ ನಿಖಿಲ ನಿ ರೀಹ ಲೋಕವಿಮೋಹನಾಚ್ಯುತ 2 ಗುರುಹಿರಿಯರ ಮರೆದು ಗರ್ವದಿ ಧರ್ಮಾವ ಚರಣೆಯ ನೆರೆತೊರೆದು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮಪುರುಷ ಪಾವನ ಚರಣ ಸುಗುಣಾ ಭರಣ ದೀನೋ ಭವ ಸಂಹರಣವಿಶ್ವಂ ಭರಣ ಪುಲಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ನಾರಾಯಣಾ ಹರಿನಾರಾಯಣಾ ಕೃಷ್ಣಾ ನಾರಾಯಣಾ ಸ್ವಾಮಿ ನಾರಾಯಣಾ 1 ಅಚ್ಯುತಾನಂತ ಗೋವಿಂದ ಪರಬ್ರಹ್ಮ ಸಚ್ಚಿದಾನಂದ ಶ್ರೀ ನಾರಾಯಣಾ 2 ಭಕ್ತವತ್ಸಲ ದೇವಾ ಪಂಡವಾಪಕ್ಷಕಾ ಮುಕ್ತಿ ದಾಯಕ ಶ್ರೀ ನಾರಾಯಣಾ 3 ನಂದನಂದನ ಆನಂದ ಶಂಕರ ಪ್ರೀಯಾ ವಂದಿತಾ ಮುನಿಜನರ ನಾರಾಯಣ 4 ಇಂದಿರಾರಮಣ ಮುಕುಂದ ಮುರಹರಿ ಮಂದರಧರ ಹರಿನಾರಾಯಣ 5 ದ್ರೌಪದಿ ರಕ್ಷಕಾ ದಾನವಾ ಶಿಕ್ಷಕಾ ಕವಿಜನ ಪೋಷಕ ನಾರಾಯಣಾ 6 ರಾವಣ ಮರ್ದನಾ ಆಜೀವಲೋಚನಾ ಯದುಕುಲಾಬ್ದಿ ಚಂದ್ರ ನಾರಾಯಣಾ 7 ಅಕ್ರೂರವರದಾ ನಿಜಾನಂದ ಮೂರುತಿ ಚಕ್ರಧರ ಹರಿ ನಾರಾಯಣಾ 8 ಭವ ನಾಯಕ ವಿಷ್ಣು ನಾರಾಯಣಾ 9 ಗಂಗಜನಕ ದೇವೋತ್ತುಂಗ ಮಹಾನುಭಾವ ಶೃಂಗಾರ ಮೂರುತಿ ನಾರಾಯಣಾ 10 ಅಂಬುಜಾದಳ ನೇತ್ರಾ ಅಜಮಿಳಾರಕ್ಷಕ ಪತಿ ನಾರಾಯಣ 11 ಪಕ್ಷಿವಾಹನ ಜಗದೃಕ್ಷಾ ಸುಲಕ್ಷಣಾ ಲಕ್ಷ್ಮೀರಮಣ ಶ್ರೀ ನಾರಾಯಣಾ 12 ಕಮಲಸಂಭವಪಿತಾ ಕರುಣಪಯೋನಿಧಿ ಅಮಿತ ಪರಾಕ್ರಮ ನಾರಾಯಣಾ 13 ಮೂರ್ತಿ ಪೂಜಿತ ಸರ್ವತ್ರಾ ಪೂತನ ಸಂಹಾರ ನಾರಾಯಣಾ 14 ದಿನಕರಾ ಕುಲದೀಪಾ ದೀನ ದಯಾಪರ ಅನಿಮಿತ್ತ ಬಂಧು ದೇವಾ ನಾರಾಯಣಾ 15 ಕಾಲಿಯಾ ಮರ್ದನಾ ಗಂಗಾಧರಾರ್ಚಿತ ಕಲ್ಮಷರಹಿತ ಶ್ರೀನಾರಾಯಣಾ 16 ಪಾಲಿತಾ ಸುರಮುನಿ ಪಾಪವಿನಾಶನಾ ವಾಲಿ ಸಂಹಾರಕಾ ನಾರಾಯಣ 17 ದಶರಥನಂದನ ಧರಣಿರಕ್ಷಕಾ ಲವ ಕುಶಪಿತಾ ಶ್ರೀಹರಿನಾರಾಯಣಾ 18 ವೇದಗೋಚರ ನಿಗಮಾಗಮ ವೇದ್ಯ ಸು- ನಾದ ವಿನೋದ ಶ್ರೀನಾರಾಯಣ 19 ಕೋಟಿದರ್ಪಕ ರೂಪಲಾವಣ್ಯ ಭಕ್ತ ಸಂಕಟ ಪರಿಹಾರ ನಾರಾಯಣಾ 20 ವಾರಿಧಿ ಬಂಧನಾ ವನಚರ ಪಾಲನಾ ವೈಕುಂಠ ಶ್ರೀನಾರಾಯಣಾ 21 ಗಜರಾಜ ವರದಾ ಕಾಮಿತಫಲದಾಯಕಾ ಅಜಭವ ಪೂಜಿತಾ ನಾರಾಯಣಾ 22 ಸಾಧುಜನ ಪ್ರಿಯಾ ಸಾಮಗಾನವೇಣು ನಾದ ಲೋಲ ಕೃಷ್ಣ ನಾರಾಯಣಾ 23 ಯಾದವ ಕುಲದೀಪಾ ಯಶೋದಾನಂದನಾ ಯಜ್ಞರಕ್ಷಕಾ ಹರಿನಾರಾಯಣಾ 24 ಕೇಶವಾ ಮಾಧವಾ ಕೃಷ್ಣ ದಾಮೋದರಾ ವಾಸುದೇವ ಹರಿನಾರಾಯಣ 25 ಸುಂದರ ವಿಗ್ರಹಾಸುಗುಣ ವಿಲಾಸ ಆನಂದ ನಿಲಯಾ ಹರಿನಾರಾಯಣಾ 26 ವ್ಯಾಸಾಂಬರೀಷ ವಾಲ್ಮೀಕ ನಾರದಾ ಪಾರಾಶರ ವಂದಿತ ನಾರಾಯಣ 27 ದೋಷದೂರಾ ನಿರ್ದೋಷಾ ಪರಮಪುರಷ ಪೋಷಿತ ಜಗತ್ರಯ ನಾರಾಯಣಾ 28 ಮಕರಕುಂಡಲಧರಾ ಮಹಿಮಾ ಚರಾಚರಾ ಸಕಲಂತರ್ಯಾಮಿ ನಾರಾಯಣ 29 ಲೋಕನಾಯಕಾ ವಿಲಾಸ ಮೂರುತಿ ತ್ರೀಲೋಕ ವಂದ್ಯ ಹರಿನಾರಾಯಣಾ 30 ವಿಶ್ವವ್ಯಾಪಕಾ ಘನ ವಿಶ್ವರೂಪಾ ಮಹಾ ವಿಶ್ವೇಶ್ವರಾ ಹರಿನಾರಾಯಣಾ 31 ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ದೇವ ಸಕಲ ಕರ್ತ ನೀನೆ ನಾರಾಯಣಾ 32 ಆಪನ್ನ `ಹೆನ್ನೆ ವಿಠ್ಠಲ ' ನಾರಾಯಣಾ 33
--------------
ಹೆನ್ನೆರಂಗದಾಸರು
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನಿಖಿಲಾತ್ಮ ನಿಖಿಲಾತ್ಮ ಅಖಿಲಬ್ರಹ್ಮಾಂಡಪತಿ ಸಲಹು ಸರ್ವೋತ್ತಮ ಪ ಮಂದರಧರ ಎನ್ನ ಮಂದಮತ್ಯಳಿದಾ ನಂದ ಮತಿಯಿತ್ತು ಚೆಂದದಿಂ ರಕ್ಷಿಸು 1 ನಿತ್ಯನಿರುಪಮ ಸತ್ತು ಚಿತ್ತ ನಿಮ್ಮ ಭಕ್ತಿ ಭಜನೆ ಎನ್ನ ಚಿತ್ತಕ್ಕೆ ದಯಮಾಡು 2 ಬಗೆದು ಎನ್ನಂತರಂಗzಗಲದೆ ನಿಂತು ನಿಜ ಸುಗುಣವಿತ್ತು ಪೊರೆ ಸುಗುಣಾಂಬುಧಿ 3 ಕಾಮಿತಜನಕಲ್ಪ ಕಾಮಧೇನು ಎನ್ನ ಕಾಮ ಪೂರೈಸಿ ನಿನ್ನ ನಾಮವಿತ್ತು ಕಾಯೊ 4 ಭಕ್ತಿದಾಯಕ ನಿನ್ನ ಭಕ್ತಿಯಿಂ ಭಜಿಸುವೆ ಸತ್ಯ ಶ್ರೀರಾಮ ನಿತ್ಯಮುಕ್ತಿಯಿತ್ತು ಪೊರೆ 5
--------------
ರಾಮದಾಸರು
ನಿಜ ದೇವನೇ ಕೇಶವಾ ತ್ರಿಜಗಧೀಶಾ ಭಜಿಸುವೆ ತರಳ ದಾಸಾ ಪ ಅಜಸುರಾರ್ಚಿತ ಸುಗುಣರೂಪನೇ ನಿಜ ಶ್ರೀ ಲಕ್ಷ್ಮೀ ಸೇವಿತ ಹರಿಯೆ 1 ಸುಜನ ಪಾಕನಿಂದ ಚರಣವ ಭಜಿಸುವೆನು ಶ್ರೀ ಜಾನ್ಹಕಿ ರಮಣಾ 2 ನಿರುತ ದಾಸರ ಕಾಯೋಪಿತನೇ ಸಿರಿ ಚನ್ನಕೇಶವ ಮಾದವನೇ 3
--------------
ಕರ್ಕಿ ಕೇಶವದಾಸ
ನಿಂದೆ ಮಾಡುವಿ ಯಾತಕೋ | ಮಂದಮಾನವ ಶ್ರೀಗೋವಿಂದ ದಾಸಾರ್ಯರನ್ನ ಎಂದೆಂದಿಗೀಮಾತು | ಇಂದಿರೇಶನ ಭಕುತ ವೃಂದ ಮೆಚ್ಚುವದಿಲ್ಲವೋ ಮೂಢ ಪ ಬಾಲತನದಾರಭ್ಯ ಶೀಲ ಸದ್ಭಕುತಿಯಲಿ ತಾಳ ತಂಬೂರಿ ಪಿಡೆದು | ಶ್ರೀಲೋಲ ಹರಿನಾಮ ಹೇಳುತಲಿ ಸತತ | ಗೋಪಾಳ ವೃತ್ತಿಯ ಮಾಡಿ ಕಾಲವನು ಕಳೆದವರು 1 ಕುಸುಮಶರನಟ್ಟುಳಿಗೆ ವಶವಾಗದಿರಿ ಎಂದು ಉಸುರುತಲಿ ಶಿಷ್ಯಗಣಕೆ | ಅಸುರಾರಿ ಮಹಿಮೆಯನು ರಸವತ್ ಕವಿತೆಯಲಿಂದ ನಿಶಿ ಹಗಲು ವರ್ಣಿಸಿದ ಅಸಿಫ್ಯಾಳು ನಿಲಯರನು 2 ಕ್ಲೇಶ ಸುಖ ಸಮ ತಿಳಿದು ಲೇಸಾಗಿ ಗುರುಸೇವೆಗೈದು ವಾಸಸ್ಥಾನಕೆ ತೆರಳಿದೀ ಸುಗುಣರನು ವ್ಯರ್ಥ ನಿಂದೆ ಮಾಡುವಿ ಯಾಕೋ 3
--------------
ಶಾಮಸುಂದರ ವಿಠಲ