ಒಟ್ಟು 1256 ಕಡೆಗಳಲ್ಲಿ , 87 ದಾಸರು , 859 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಕರುಣವಾರಿಧಿಯೆ ಮೊರೆ ಕೇಳೋ ಹರಿಯೆ ಪ ಶರಣರಿಗೆ ಜರಾಮರಣರಹಿತವಹ ಪರ ವಿದೇಹ ಅ.ಪ ಇನಕುಲಭೂಷಣನೆನಿಪ ರಾಮ 1 ಹಿಡಿಯವಲಕ್ಕಿಯ ಬಡಬ್ರಾಹ್ಮಣ ಕೊಡ- ಲೊಡನೆ ಒಲಿದು ಸೌಭಾಗ್ಯವಿತ್ತು 2 ಸ್ವಾಮಿ ಕಾಯೊ ಗುರುರಾಮವಿಠಲಾ 3
--------------
ಗುರುರಾಮವಿಠಲ
ಕರುಣಾ ತೋರದದೇನೊ ನರಹರಿಯೆ ನಿನ್ನ ಕರುಣೆ ತೋರದೆ ಇರುವ ಪರಿಯೆನ್ಹರಿಯೇ ನಿನ್ನಯ ಕಮಲ ಸ್ಮರಣೆಯ ಇಹಪರಕೆ ಗತಿಯಂ ದಿರುವ ಮನಜರಿಗ್ಹರುಷದಿಂದಲಿ ಪ ಸುಸಾಮಗಾನಪ್ರಿಯ ನರಸಿಂಗ ದೈತ್ಯಾರಿ ಭಕ್ತಾಧೀನ ಗರುಡತುಂಗ ಕರುಣಾಂತರಂಗ ಶೌರಿ ಪುರಾಣಪುರುಷ ದಾನವಾಂತಕ ಶ್ರೀನಿವಾಸನೆ ಶರಪಾಣೆ ವಿಷ್ಟಕ್ಸೇನವರ ಗೀರ್ವಾಣವಂದಿತ ಜಾನಕೀಧರ ನೀನೇ ಸಲಹೆನೇ 1 ಸಂಯಮಿ ವೃಂದನುತ ಮುಚ- ಪಾಲನ ಕೃಪಾಸಿಂಧು ಶ್ರೀ ಗೋವಿಂದ ಇಂದಿರಾನಂದ ನಂದ ಗೋಪಿಯಾನಂದ ನಾಚ್ಯುತ ಮಂದರಧರ ಮಾಪತೆ ಕಂಬುಕಂಧರ ಇಂದು ಮುಖ ಶ್ರೀ ಸುಂದರಾಂಗನೆ ರೂಪದಿ ಬಂದು ಸ್ತಂಭದಿ ರಕ್ಷಿಸೆಂದೆನಲು ಹರಿ 2 ತ್ರಿಜಗದ್ಭರಿತ ಕೌಸ್ತುಭಹಾರ ನರಮೃಗಾಕಾರ ಮಂಗಳಕರ ಮಹಿಮಾ ಶರಣು ಭಾಸುರ ಕಿರೀಟನೆ ನಿರತದಲಿ `ಹೆನ್ನೆಪುರ ನಿಲಯ' ಸಿರಿಯರಸ ನಿನ್ನಯ ಮೊರೆಯ ಹೊಕ್ಕರೆ ತ್ವರದಲಿ ನೀ 3
--------------
ಹೆನ್ನೆರಂಗದಾಸರು
ಕರುಣಾಳುವೈ ನಿಂನ ಭಜನೆಯೊಂದೇ ಸಾಕು ಭರದಲಿ ಪಾಪಿಯ ಶುದ್ಧ ಮಾಡಲಿಲೇ ಪ ಅಜಮಿಳ ಜನ್ಮದಿ ಘೋರ ಪಾಪವ ಗೈದು ಭಜನೆ ಮಾಡಲು ತನುನೀಗು ಕಾಲದಲೀ ಭಜಕರ ಲೋಲನೆ ಹೀನನಿಗೊಲಿದು ನೀ ಕುಜನನ ಪರೆದು ಮೋಕ್ಷವನಿತ್ತೆ ಹರಿಯೇ1 ದುರುಳ ವಾಲ್ಮೀಕನು ಹೀನ ಕೃತ್ಯವಗೈದು ಸುರಮುನಿಯಾಜÉ್ಞಯಿಂ ನಾಮವಭಜಿಸೇ ದುರಳನ ಸರಸದ ಭಕ್ತಿಗೆ ವಲಿಯುತ ಪರಮ ಙÁ್ಞನವನು ನೀ ನಿತ್ತೆ ಶ್ರೀಹರಿಯೆ 2 ತರಳ ದಾಸರುಕೂಡಿ ಹರಿ ನಿಂನ ಸ್ತುತಿಸಲು ನಿರುತ ಭಕ್ತರಿಗೆ ನೀನೊಲಿದೆ ಶ್ರೀಕಾಂತಾ ಪರಮ ಆದರದಿಂದ ಹರಿಯಂನ ಮನವನ್ನು ಪರಿ ಶುದ್ಧಮಾಡಿ ದೀನನ ಸೇರೋ ಹರಿಯೇ 3 ರಂಗನ ಮಹಿಮೆಯ ನುಡಿಯಲಾರೆನು ನಾನು ಅಂಗಜ ಪಿತನಾದ ದಶರೂಪಧರನ ನಿತ್ಯ ದೂರ್ವಾಪುರದಿನಿತ್ತುಮಂಗಳ ಪದವೀವ ಚೆನ್ನಕೇಶವನೆ 4
--------------
ಕರ್ಕಿ ಕೇಶವದಾಸ
ಕರುಣಿಸಿ ಕೇಳು ಕಂದನ ಮಾತಗರುಡವಾಹನನೆ ಗಂಗೆಯ ಪೆತ್ತ ಹರಿಯೆಪ. ಇತ್ತ ಬಾರೆಂಬುವರಿಲ್ಲ ಇರವ ಕೇಳುವರಿಲ್ಲಹತ್ತಿಲಿ ಕುಳ್ಳಿರು ಎಂಬ ದಾತರಿಲ್ಲತತ್ತರಗೊಳ್ಳುತಲಿದೆ ತಾವರೆಯೆಲೆಯೊಳನೀರಿನಂತೆಹತ್ತು ನೂರಾರು ನಾಮವುಳ್ಳ ಶ್ರೀಹರಿಯ ನೀ ಕೇಳೊ1 ಇಂದು ಬಂಧನವಿಲ್ಲ ಇದ್ದವ ಕೇಳುವುದಿಲ್ಲಒಂದು ಸುತ್ತಿಗೆ ಬಟ್ಟೆಯಾದರೂ ಇಲ್ಲ ಈಬೆಂದೊಡಲಿಗೆ ಒಬ್ಬ ಅಯ್ಯೋ ಎಂಬುವನಿಲ್ಲಬಿಂದು ಮಾತ್ರದಲ್ಲಿ ಸುಖವ ಕಾಣೆ ಹರಿಯೆ 2 ಎಲ್ಲಿಯೂ ಧಾರಣೆಗೊಂದು(?)ನೆರಳನು ಕಾಣೆ[ಅಲ್ಲವÀÀತಿಂದಿಲಿಯಂತೆ]ಬಳಲುತಿದ್ದೆಫುಲ್ಲಲೋಚನ ಪೂರ್ಣ ಹಯವದನ[ಸಲ್ಲುವ]ನಾಣ್ಯವ ಮಾಡಿ ಸಲಹೋ ಎನ್ನ ಹರಿಯೆ 3
--------------
ವಾದಿರಾಜ
ಕರುಣಿಸು ಹರಿಯೆ ಕರುಣನಿಕರ ಎನ್ನ ಕರುಣದಿ ನೀನೀಗ ತರಳನ್ನ ಮೊರೆಕೇಳಿ ಪ ಭವತಾಪಶರಧಿಯ ಬವಣೆಯ ತಡೆಯದೆ ಭವಹರ ನೀನೆಂದು ಬಂದು ಮರೆಯಬಿದ್ದೆ 1 ಹಿಂದಾರು ಎನಗಿಲ್ಲ ಮುಂದಾರು ಗತಿಯಿಲ್ಲ ತಂದೆ ನೀ ಬಿಟ್ಟರೆ ಬಂಧ ಕಳೆಯುವರಿಲ್ಲ 2 ನೀನಿಗತಿ ಎನಗಿನ್ನು ಕಾಣೆ ಮತ್ತಾರನ್ನು ಮಾಣದೆ ಸಲಹಯ್ಯ ಪ್ರಾಣೇಶ ಶ್ರೀರಾಮ 3
--------------
ರಾಮದಾಸರು
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರೆಯೆ ಯಶೋದ ಕೃಷ್ಣನ ಕರೆಯೆ ಪ ನರಹರಿಯೆ ನಂದಗೋಪನ ಮರೆಯೆ ಮಾತಲಿ ಮಹಾ ದೊರೆಯೆ ಇವನ ಗುಣ- ವರಿಯೆವು ನೋಡಲಾಶ್ಚರ್ಯವಾಗೋದು ನಿ- ನ್ನರಮನೆಗೀತನ ಕರೆಯೆ 1 ನೋಡೆ ಈತಗೆ ಇನ್ಯಾರೀಡೇ ಕೋಪವ ಮಾಡಬ್ಯಾಡೆ ಮಾತಿಗೆ ಮಾತ- ನಾಡಿಂದಿರಾಪತಿ ಗಾಡಿಕಾರನೆಂದಾಡಿಕೊಂಬೆವೆ ನಮ್ಮ ಕಾಡುವೋದುಚಿತವೆ 2 ಬಾಲಗೋಪಾಲ ಕೃಷ್ಣ ಲೀಲೆಮಾಡುವೊ ದೊಡ್ಡಿ ್ವ ಶಾಲ ಉದರಕ್ಕೆ ಬೆಣ್ಣೆ ಪಾಲುಕುಡಿದು ನಮ್ಮಾಲಯದೊಳು ಬಂದು ಕಾಲಂದಿಗೆ ಧ್ವನಿ ಆಲಿಸಿ ಕೃಷ್ಣನ 3 ರೂಪನೋಡಿದರೆ ಸಣ್ಣ ಪೋರನೆನಿಸುವ ಅಪಾರಮಹಿಮ ಕೃಷ್ಣನ ವ್ಯಾಪಾರವ ನಾನಾಪರಿಯಿಂದಲಿ ಗೋಪನ ಮುಂದ್ಹೇ- ಳೀಪುರ ಬಿಡುವೆವೆ 4 ತುರುವ ಕಾಯುತ ಭಾಳಾತುರ ವಾರಿಜಾಕ್ಷ ನಮ್ಮ ತುರುವ ಪಿಡಿದು ನಿಂತ ತುರುವ ಭಾರಕೆ ಸೀರೆ ಜರಿದು ಬೀಳುತಲೆ ಸರಿಜನರೊಳು ಮಾನ ತೊರೆದಂತಾಯಿತು 5 ಕಾಂತರಿದ್ದಂಥ ಏಕಾಂತದೊಳಗೆ ಬಂದು ನಿಂತರಿಬ್ಬರೊಳಗ- ಭೃಂತರ ತಿಳಿಯದೆ ಭ್ರಾಂತಳಾದೆ ಎನ್ನ ಕಾಂತನೋ ಇವ ಶ್ರೀಕಾಂತನೊ ತಿಳಿಯದು 6 ನಂದನಂದನ ನಿನ್ನ ಕಂದ ಮಾಡುವೋದು ಬಾ- ಯಿಂದ ಹೇಳಿದರೆನ್ನ ಬಂಧು ಜನರು ಭೀಮೇಶಕೃಷ್ಣಗೆ - ನ್ನೊ ್ಹಂದಿಸಿಬಿಡುವೋರು ಸಂದೇಹವಿಲ್ಲದೆ 7
--------------
ಹರಪನಹಳ್ಳಿಭೀಮವ್ವ
ಕರ್ಮನಾಮಕ ಧರ್ಮಕಾರಿ ಪ ನಿರ್ಮಮನ ಮಾಡೆನ್ನ ನಿರ್ಮಮರ ದೊರೆ ಹರಿಯೆ ಅ.ಪ ಸೂರ್ಯ ಸುಂದರಮೂರ್ತಿ ಭೂರಿ ಕರುಣಿ ಮೀರಿಹ ಅಹಂಜ್ಞಾನ ತಿಮಿರವನು ಪರಿಹರಿಸು ಮಾರಮಣ ಮಾಂ ರಕ್ಷ ರಕ್ಷಿಸು ದಯವನಧಿ 1 ಅಜ ರುದ್ರ ಸುರರೆಲ್ಲ ವಂದಿಸಲು ಬಧಿರರಂತಿರುವರಯ್ಯ ಹಿಂದು ಮುಂದೆಂದೆಂದು ಎನ್ನಲ್ಲಿ ನೀ ಕುಣಿಸಿ ದಂದದಲಿ ನಾ ಕುಣಿದೆ ಅರ್ಪಿತವಾಗಲಿ ನಿನಗೆ 2 ಮೋಚಕನೆ ಜಯೇಶವಿಠಲನೆ ವಿಧಿವಂದ್ಯ ಯಾಚಿಪೆನು ವಿಜ್ಞಾನ ಕರುಣಿಸೆಂದು ಊಚುನೀಚದಿ ನಿನ್ನ ಪೂರ್ಣ ಮೂರ್ತಿಯ ಮಹಿಮೆ ಗೋಚರಕೆ ಬರುವಂತೆ ಆಚರಿಸು ಎನ್ನಲ್ಲಿ3
--------------
ಜಯೇಶವಿಠಲ
ಕಾಮದೇವ ನೀನೆಂದು ನಂಬಿದೆ ಆವಾವುದೆನಗಾಗಬೇಕೊ ಕಾಣೆ ಪ ಈವುದೆಲ್ಲವಿತ್ತು ಪದವಿ ಪಾಲಿಸಯ್ಯ ಅ.ಪ ಶರಣೆನ್ನುವರ ದುರಿತಹರನೆ ಹರಿಯೆ ಹಸ್ತ ನೀಡಿ ಕಾಪಾಡುವೈ ಪರಮ ಕೃಪಾಳುವು ನೀನಲ್ಲವೆ ನರರ ಜಾಜಿಪಟ್ಟಣವಾಸ ಶ್ರೀನಿವಾಸ 1
--------------
ಶಾಮಶರ್ಮರು
ಕಾಯ ಬೇಕಿವಳಾ ಪ ಪದುಮನಾಭನೆ ನಿನ್ನ ಸೇವೆ ಕಾತುರಳಾ ಅ.ಪ. ಸುಕೃತ ರಾಶಿಗೇ ಫಲರೂಪದಾಸದೀಕ್ಷೆಯ ವಹಿಸೆ ಆಶಿಸುತ್ತಿಹಳೊ |ಕೇಶವನೆ ಹೃದಯಾಬ್ಜವಾಸ ತವ ಸೇವೆಯನುಲೇಸಾಗಿ ಕೊಟ್ಟು ಮನದಾಶೆ ಪೂರೈಸೋ 1 ನಯವಿನಯ ಗುಣಯುಕ್ತೆ ಕನ್ಯೆ ಬಹು ಭಕ್ತಿಯುತೆವಯಸು ಕಾರಣವಲ್ಲ ಪ್ರಿಯ ನಿನ್ನ ಭಜಿಸೆ |ದಯತೋರಿ ಈ ಶಿಶುವ ಹಯಮೊಗನೆ ಉದ್ಧರಿಸೊವಯನಗಮ್ಯನೆ ಹರಿಯೆ ಭಿನ್ನಯಿಪೆ ನಿನಗೇ 2 ಮರುತ ಮತದಲಿ ದೀಕ್ಷೆ ಹರಿಗುರೂ ಸದ್ಭಕ್ತಿನೆರೆ ಬಂಧು ಜನ ಪ್ರೇಮ ಮರಳಿ ಆಧಮರಲಿಕರುಣೆಯನು ಮಾಳ್ಪಂಥ ವರಮತಿಯ ಕರುಣಿಪುದುಗರುಡವಾಹನದೇವ ಸರ್ವಾಂತರಾತ್ಮ 3 ಘೋರಭವ ಶರನಿಧಿಗೆ ತಾರಕವು ತವನಾಮವಾರವಾರಕೆ ನುಡಿಸು ಮರುತಾಂತರಾತ್ಮತಾರತಮ್ಯ ಜ್ಞಾನ ಸಾರವನೆ ತಿಳಿಸುತ್ತತೋರೋ ತವರೂಪವನೆ ಹೃದ್ಗುಹದಿ ಹರಿಯೇ 4 ಕಾಲ ಸರ್ವಗುಣಪೂರ್ಣಸರ್ವಜ್ಞ ಹರಿ ಎನ್ನ ಭಿನ್ನಪವ ಸಲಿಸೆಂದುಸರ್ವಗುರು ಗೋವಿಂದ ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಕಾಯ ಇಂದಿರೆ ರಮಣ ಆಗಲೂ ನೀ ಕಾಯಬೇಕೋ ಅರವಿಂದ ನಯನ ಪ. ಈಗ ಈ ಜನ್ಮದಲ್ಲಿ ಭವ ದಾಟುವಲ್ಲಿ ಅ.ಪ. ಮಾನವ ನಾನಾಗಿ ಪುಟ್ಟಿ ಕಾಲ ಕಳೆದು ದೀನನಾಗೀಗ ಇನ್ನು ನೀನೆ ಗತಿಯೋ ಎನಲು ಶ್ರೀನಾಥ ನಿನ್ನ ನಾಮ ಎನ್ನ ನಾಲಗೆಯಲಿ ನುಡಿಸಿ 1 ಮಾಯಾಪತಿಯೆ ಕೇಳೋ ಆ ಯಮಭಟರು ಎಳೆದು ನೋಯಿಸುತ್ತಿರಲು ಎನ್ನ ಬಾಯಬಿಡುತಲಿ ತೋಯಜಾಂಬಕನೆ ಎನ್ನ ಕಾಯೋ ಎಂದೆನುತ ಒದರೆ ಆ ಯಮಬಾಧೆ ಬಿಡಿಸಿ ಸಾಯದಾ ಸೌಖ್ಯವನಿತ್ತು 2 ವೈಷ್ಣವ ಜನ್ಮವ ನೀನು ಇತ್ತುದು ಪಿರಿಯದಲ್ಲೊ ವೈಷ್ಣವ ಜ್ಞಾನವ ನೀಡೊ ಸುಭಕ್ತಿ ಸಹಿತ ಕೃಷ್ಣಮೂರುತಿಯೆ ನೀನು ಅಷ್ಟದಳÀ ಪದ್ಮದಲಿ ನಿಂತು ಉಷ್ಣ ಶೀತ ದ್ವಂದ್ವ ಸಹಿಷ್ಣುತೆ ವಿರಕ್ತಿಯೊಡನೆ 3 ತ್ರಿಗುಣದಿಂದ ಬದ್ಧವಾದ ವಿಗಡದೇಹ ತೊಲಗುವಂತೆ ಬಗೆಬಗೆಯ ನಿನ್ನ ಲೀಲೆ ಅಂತರದಿ ತಿಳಿಸಿ ಜಗದಾವರಣ ತೊಲಗುವಾಗ ಬಗೆಬಗೆಯ ಲಯದ ಚಿಂತೆ ತಗಲಿ ಮನಕೆ ನಿನ್ನ ಮಹಿಮೆ ಆನಂದವಾಗುವಂತೆ 4 ಗೋಪಾಲಕೃಷ್ಣವಿಠಲ ನೀ ಪರದೈವನೆನಿಸಿ ಆಪಾದಮೌಳಿ ನಿನ್ನ ರೂಪವ ತೋರಿ ಅಪವರ್ಗದಲಿ ಎನಗೆ ಶ್ರೀಪಾದಾಸ್ಥಾನವಿತ್ತು ಈ ಪರಿಯಿಂದ ಉಭಯ ವ್ಯಾಪಾರದಲ್ಲಿ ಹರಿಯೆ 5
--------------
ಅಂಬಾಬಾಯಿ
ಕಾಯ ಸತ್ಯ ಸತ್ಯ ಸರ್ವ ಜೀವರನಿಟ್ಟುಕೊಂಡು ವಿಸ್ತಾರವಾದೊಂದಾಲದೆಲೆಯಲ್ಲಿ ಮಲಗಿದ್ದು ಅ.ಪ. ಹರಿ ಹ್ಯಾಗೆ ನಿತ್ಯನೊ ಹಾಗೆ ಜೀವನು ನಿತ್ಯ ಹರಿಯೆಂಬೋ ಧಣಿಗೆ ಈ ಜೀವನು ಭೃತ್ಯ ಹರಿ ಜೀವರೊಳಗೆ ಹೀಗೆ ತಿಳಿದವನು ಧರೆಯೊಳಗೆಂದೆಂದಿಗು ಕೃತಕೃತ್ಯನು 1 ಹರಿಯೆಂಬೊ ರಾಜಗೆ ಗುರುಮೂರುತಿ ಮಂತ್ರಿ ಪರಿವಾರ ಇವರಯ್ಯ ಜೀವಂಗಳು ಅರಿತು ಈ ವಿಧದಲ್ಲಿ ನಿರುತ ಪಾಡುವರಿಗೆ ಪರಲೋಕದಲಿ ದಿವ್ಯಭೋಗಂಗಳು 2 ಭಿನ್ನ ಭಿನ್ನ ಜೀವ ಭಿನ್ನ ಭಿನ್ನ ಕರ್ಮ- ವೆನ್ನುವುದೆ ಘನ್ನತತ್ವಂಗಳು ಅನ್ಯಥಾನುಡಿಯಲ್ಲ ಇನ್ನು ಸಂಶಯವಿಲ್ಲ ಎನ್ನೊಡೆಯ ಹಯವದನ ಬಲ್ಲ 3
--------------
ವಾದಿರಾಜ
ಕಾಯಬೇಕೆನ್ನ ಕರುಣದಲಿ ಧನ್ವಂತ್ರಿ ಶ್ರೀಯರಸ ನರಹರಿಯೆ ಪ್ರಾರ್ಥಿಸುವೆ ನಿನ್ನ ಪ. ಸುರರಿಗೆ ಮರಣ ಕಾಲವು ಪ್ರಾಪ್ತವಾಗಲು ಗಿರಿಯಿಂದ ಶರಧಿಯನು ಮಥಿಸೆ ಪೇಳಿ ಕರುಣದಿಂದಮೃತ ಕರದಿಂದ ಸುರರಿಗೆ ಎರೆದು ಜರೆ ಮೃತ್ಯು ಬಿಡಿಸಿದಗೆ ಇದು ಒಂದು ಘನವೆ 1 ಸಕಲ ನಾಡಿಗಳಲ್ಲಿ ಚೇಷ್ಟಪ್ರದ ನೀನಾಗಿ ಸಕಲ ವ್ಯಾಪಾರಗಳ ನಡೆಸುತಿರಲು ಯುಕುತಿಯಿಂದಲಿ ನಾಡಿ ನೋಡಿ ತಿಳಿಯುವನ್ಯಾರೊ ಮುಕುತಿದಾಯಕ ನಿನಗೆ ಇದು ಒಂದು ಘನವೆ 2 ಅನಾದಿಯಿಂದ ಅಪಥ್ಯದಲಿ ನರಳುವೆನೊ ಈಗ ಪಥ್ಯವ ಮಾಳ್ಪ ಬಗೆ ಯಾವುದೊ ಶ್ರೀನಿವಾಸನೆ ನಿನ್ನ ಧ್ಯಾನವೆ ಔಷಧವೊ ಶ್ರೀ ಗುರುಗಳಾಜ್ಞೆಯೆ ಪಥ್ಯವೆನಗಿನ್ನು 3 ಭಕ್ತಪ್ರಹ್ಲಾದನನು ಯುಕ್ತಿ ಶಕ್ತಿಗಳಿಂದ ಮುಕ್ತಿಮಾರ್ಗವ ತೋರಿ ಸಲಹಲಿಲ್ಲೇ ಭಕ್ತಿಹೀನರನೆ ಕಂಡು ಎನ್ನ ರಕ್ಷಿಸದಿರಲು ಯುಕ್ತವೇ ನಿನಗಿನ್ನು ಭಕ್ತಪಾಲಕನೆ 4 ನಿನ್ನ ದಾಸತ್ವದಲಿ ನೆಲಸಬೇಕಾದರೆ ಬಿನ್ನಣದ ರೋಗಗಳ ಪರಿಹರಿಸಿ ಸಲಹೊ ನಿನ್ನವರಾದ ಮೇಲಿನ್ನು ಕಾಯದೆ ಇಹರೆ ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಕಾಯಯ್ಯ ರಘುರಾಮ ದೀನಜನೋದ್ದಾರಿ ರಘುರಾಮ ಧ್ರುವ ಕೈವಲ್ಯಾವನ ಮೂರುತಿ ನೀನು ಕೇವಲ ಘನ ಅಪರಾಧಿಯುನಾನು ದೇವನೆ ಕರುಣಾಸಾಗರ ನೀನು 1 ಭಾವ ಭಕುತಿಕೀಲವ ನಾನರಿಯೆ ವಿವೇಕಾಮೃತ ನೀಡುವ ದೊರೆಯೆ ಅವಾಗ ವಿಷಯಾಸಕ್ತನು ಹರಿಯೆ ಕಾವ ದೈವ ನೀನೆ ಶ್ರೀ ಹರಿಯೆ 2 ಚರಣವೆ ಗತಿಯೆಂದಾತನ ತಂದೆ ತರಳನ ಕುಂದನಾರಿಸದಿರು ತಂದೆ ತರಳ ಮಹಿಪತಿ ಪ್ರಭು ನಮೋ ಎಂದೆ ಶರಣ ರಕ್ಷಕ ನೀನಿಹುದೆಂದೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು