ಒಟ್ಟು 7945 ಕಡೆಗಳಲ್ಲಿ , 134 ದಾಸರು , 4583 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ನಾಚಿಸಿದೆಯ ದೇವಯನ್ನ ಎಲ್ಲಈ ಚರಾಚರ ತುಂಬಿಹ ವ್ಯುತ್ಪನ್ನ ಪ ಶ್ರೀಗಿರಿ ನೋಡುವೆನೆಂದು ನಾಸಾಗಿ ಪಯಣಗೊಂಡು ಬಂದುರಾಗವುದಿಸಿ ಮನಕಿಂದು ಮುಂದೆಭೋಗ ತರದ ಮನ ತೂರಿತು ನಿಂದು 1 ಮಧ್ಯಾಹ್ನ ಬಿಸಿಲೊಳು ನಡೆಯೆ ನಾನುಅದ್ವಯವಿಲ್ಲದೆ ಹಾದಿ ನೀರ್ಗುಡಿಯೆಇದ್ದ ಚೈತನ್ಯ ತಾ ನುಡಿಯೆ ಇಂತುಹೊದ್ದ ಶರೀರ ಬಳಲಿ ನೆಲಕೆಡೆಯೆ 2 ಧರಣಿಯ ಸುರರೂಪ ತಾಳಿ ನೋಡೆವರಣ ವರಣ ರುದ್ರಾಕ್ಷಿ ಚಾಳಿಚರಣ ಕಿರಣದಲ್ಲಿ ಹೂಳಿ ನಾನುಗುರುವೆ ಎಂದು ನುಡಿವುದ ಕೇಳಿ 3 ಎಲ್ಲಿ ಪೋಗುವೆ ಎಂದು ಕೇಳೆಮಲ್ಲಿಕಾರ್ಜುನನ ನೋಡಿಯೇ ಬಹೆನೆಂದುಸೊಲ್ಲುಡುಗಲು ನಾನಿತ್ತೆಂದು ಗುರುಸುಳ್ಳು ಆದನೆ ಸರ್ವ ಪೂರಿತನಿಂದು 4 ಸರ್ವರೂಪದು ಮೃಷೆಯಾಯ್ತು ಎಲ್ಲಸರ್ವಜನರಿಗೆ ಬೋಧಿಸುವಡೇನಾಯ್ತುಸರ್ವತಾನೆನಿಪುದೇನಾಯ್ತು ಎಲ್ಲಸರ್ವರನುಳಿದು ಬಂದಿಹುದೊಳಿತಾಯ್ತು 5 ಇಂತು ಬುದ್ಧಿಗಳಿಂದ ಝಡಿಯೆ ಎಲ್ಲಅಂತು ಕೇಳುತ ನೀವು ಆರೆಂದು ನುಡಿಯೆನಿಂತಲ್ಲಿ ದೃಶ್ಯವ ಪಡೆಯೆ ಕಂಡುಸಂತೋಷದಿಂ ನಾ ಸಾಷ್ಟಾಂಗವೆರಗೆ 6 ಆನಂದ ತೊರೆಯೊಳು ಮುಳುಗಿ ಚಿ-ದಾನಂದ ಗುರುವ ಕಾಣದೆ ಮನಮರುಗಿಧ್ಯಾನದಿ ಕಂಗಳು ತಿರುಗಿ ನೋಡಿತಾನೇ ತಾನಾದ ಘನದಿ ಮನ ಕರಗಿ7
--------------
ಚಿದಾನಂದ ಅವಧೂತರು
ನಾಟಕ ರಂಗದಲಿ ನಟಶಿರೋಮಣಿಯೊಬ್ಬ ಪಟುತನದಿ ವಿಧವಿಧನ ನಟನೆಗಳ ತೋರುವನು ಪ ಅಘಟನಾಘಟನ ಶಕ್ತನ ಕಪಟನಾಟಕವು ಘಟಕರಲ್ಲದ ಜನಕೆ ಎಟುಕದಾನೋಟ ಅ.ಪ ಮುಖ್ಯಪಾತ್ರವು ನಮ್ಮ ರುಕ್ಮಿಣಿ ರಮಣನದು ಮುಖ್ಯತಾರೆಯು ಲೋಕ ಜನನಿ ಲಕುಮಿ ಇಕ್ಕಿದನು ಗೋರೂಪ ಚತುರಾನನನು ಮುದದಿ ಮುಖ್ಯಪ್ರಾಣನೆ ತುರಗ ಮುಕ್ಕಣ್ಣ ಕರುವಾದ 1 ಸುಖಸಾರನನು ಪಡೆದು ಧನ್ಯಳಾದ ಯಶೋದೆ ಬಕುಳೆಯೆ ತಾನಾದಳೀ ನಾಟಕದಲಿ ಅಕಳಂಕ ಮಹಿಮನನು ಅಗಲದಿದ್ದ ಸತಿಯು ಮುಖನೋಡಿ ಕೋಪದಲಿ ಕಲ್ಲುಗಳನೆಸೆದಳು 2 ಸರ್ವತ್ರ ವ್ಯಾಪ್ತನಿಗೆ ಇರಲು ಜಗವು ಸಿಗದೆ ಕಿರಿದ ತಾ ಹಲ್ಲುಗಳ ವರಹನಲ್ಲಿ ಹರನ ತಾತನು ತಾನು ಸ್ಮರನ ಬಾಣದಿ ನೊಂದ ಸುರಮೋಹಿನಿಯು ಇಂಥ ಕೊರವಂಜಿಯಾದಳು3 ಹುಟ್ಟಿಸುವ ಬೊಮ್ಮನನು ಪುಟ್ಟಶಿಶುವನೆ ಮಾಡಿ ಹೊಟ್ಟೆಗಿಲ್ಲದೆ ಬಹಳ ಬಾಡಿ ಇರಲು ಮೃಷ್ಟಾನ್ನವನು ಚಿನ್ನ ತಟ್ಟೆಯಲಿ ತಂದಿಡಲು ಶ್ರೇಷ್ಠವಿದು ಜನನಿಗೆನ್ನುತ ತಿಂದು ತೇಗಿದಳು 4 ಬಡುಕನೆದೆಗೊದೆಯಲವನಡಿಗಳಿಗೆ ಶರಣೆಂದ ಕಡು ಕೋಪಿ ಗೋವಳನ ಕೊಡಲಿಗೊಡ್ಡಿದ ಶಿರವ ಹಿಡಿ ಮಣ್ಣು ಪಿಂಡಗಳನಿತ್ತ ಚಂಡಾಲನಿಗೆ ಸಡಗರದಿ ಲಕುಮಿಯನೇ ಕರದಲಿತ್ತ ಪ್ರಸನ್ನ 5
--------------
ವಿದ್ಯಾಪ್ರಸನ್ನತೀರ್ಥರು
ನಾಡ ದೈವಗಳ ಪೂಜೆಯನು ಮಾಡಿದರೆ | ಕೇಡಲ್ಲದೆ ಮತ್ತೆ ಕೈವಲ್ಯವುಂಟೇ ಪ ಕೊಳಚಿ ನೀರನು ದಾಟಲರಿಯದ ಮನುಜಗೆ ನಿಲವುದ್ದ ದ್ರವ್ಯ ಕೊಡುವೆ ಎನ್ನ ನಾ- | ಜಲನಿಧಿಯ ಉತ್ತರಿಸಿಕೊಂಡು ಎಂದರೆ ಅವನು | ಅಳಿಯದಂತೆ ದಡಕೆ ತರಬಲ್ಲನೇ 1 ಕತ್ತಲೆಗಂಜುವನ ಕರೆತಂದು ಶೃಂಗರಿಸಿ | ಉತ್ತಮದ ವಾಜಿವಾಹನವ ಮಾಡಿ || ಕತ್ತಿಯನು ಕರದಲ್ಲಿ ಕೊಟ್ಟು ರಿಪುಪರಿವಾರ- | ದತ್ತ ಒಂದಡಿಯಿಟ್ಟು ಬರಬಲ್ಲ್ಲನೇ 2 ತನಗೆ ಬಂದಾವಸ್ತು ಪರಿಹರಿಸಿಕೊಳ್ಳದೆ ಪರ- | ಮನ ವಿಡಿದು ಭಜಿಸಿದರೆ ಏನಾಗದೊ || ಬಿನಗು ದೈವರಗಂಡ ಶ್ರೀ ವಿಜಯವಿಠ್ಠಲನ | ವನಜಪದ ನೆನೆದರೆ ಮುಕುತಿಯುಂಟು 5
--------------
ವಿಜಯದಾಸ
ನಾಥದೀನಾನಾಥ ಸದ್ಗತಿ|ದಾತ ನೋಡಿರೋ|ಭವ| ಭೀತರ ಪತಿತರೆ ಪುನೀತಮಾಡುವ ನೀತನೆ|ರಘು| ಪ ಹವಣದಿ ತಾನಾರೆ ಸವಿಧ್ಹಣ್ಣುಗಳನ್ನು| ತವಕದಿ ಜಾನಕಿಧಮಗರ್ಪಿತವೆನೆ| ಅವನಿಲಿ ಶಬರಿಗೆ ಘವಿಘವಿಸುತ್ತಿಹ| ಅವಿರಳ ಪದದನುಭವ ನೀಡಿದ|ರಘು...... 1 ದಾವನ ಶ್ರುತಿಗಳು ಭಾವಸಿ ನುಡಿಯಲು| ದೇವನ ಹಿತಕುಜ ಕೇವಲ ವನಜರ| ಜೀವರೊಳಾಡುತ ಸೇವೆಗೆ ನಲಿಯುತ| ಕೈವಿಡಿದಿತ್ತನು ಕೈವಲ್ಯವ|ರಘು...... 2 ಕುಂದದೆ ಬಾಂಧವ ನಿಂದಿಸಿ ನೂಕಲು| ನೊಂದುವಿಭೀಷಣ ಬಂದರೆ ಶರಣವ| ತಂದೆ ಮಹೀಪತಿ ನಂದನ ಪ್ರಭು ಆ| ನಂದದ ಸ್ಥಿರಪದ ಹೊಂದಿಸಿದಾ|ರಘು..... 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾದವ ಕೇಳುತ ನಿದ್ರೆಯ ಮಾಡುತ ಬ್ರಹ್ಮವು ತಾನಾಗಿನಾದವ ಕೇಳುತ ನಾನಾ ಗುಣಗಳು ಹೋದವು ತಾವಾಗಿ ಪ ಕೂಡಿತು ದೃಷ್ಟಿ ಪರಬ್ರಹ್ಮದಿ ತಾ ಅನುದಿನದಲಿ ಬಾಗಿಮನ ಇಂದ್ರಿಯಗಳು ಹುಡುಕಿದರಿಲ್ಲ ಹೋದವು ತಾವಾಗಿ1 ನಾನಾ ವರ್ಣದ ಛಾಯೆಯ ನೋಡುತ ನಿದ್ರೆಯ ಮಾಡಿದೆನೋಭಾನು ಕೋಟಿ ಛಾಯೆಯ ನೋಡುತ ನಿದ್ರೆಯ ಮಾಡಿದೆನೋ 2 ಕಾಣದ ರೂಪದ ಕಾಣುತಲೆ ನಾ ಕಾಮಿಸಿ ಮಲಗಿದೆನೋಬೋಧ ಚಿದಾನಂದ ಸದ್ಗುರು ನಾಥನ ಧ್ಯಾನವ ಮಾಡಿದೆನೊ 3
--------------
ಚಿದಾನಂದ ಅವಧೂತರು
ನಾದವಾದನು ನಾದದ ಮನೆಯಿದ್ದ ಅಚ್ಚರಿ ನೋಡಿವಾದಿಗಳನು ಗೆದ್ದು ಜಯವ ತಾ ಮಾಡಿ ನಾದವಾದನು ಪ ಸುಮನಸವೆಂದೆಂಬ ಕುದುರೆಯ ಹತ್ತಿಅಮಲವೆನಿಪ ಧೈರ್ಯದ ಕತ್ತಿಯ ಹಿಡಿದುಭ್ರಮಣೆಯಲ್ಲದ ವಿವೇಕ ಫೇರಿಯಿಂದವಿಮಲಾನಂದದಿ ದುಮುಕಿಸುತಿರುತಿಪ್ಪ ನಾದವಾದನು1 ಅಷ್ಟ ಆನೆಗಳ ತಲೆಗಳ ಹೊಡೆದುಷಷ್ಟರಧಿಕರ ಸಾಲನು ಕಡಿದುದುಷ್ಟಕುದುರೆಗಳ ಏಳರ ಕಾಲನು ಉಡಿದುಕಷ್ಟರೂಪದ ಚೋರರೈವರನು ದೂಡಿದ ನಾದವಾದನು 2 ಈಷಣತ್ರಯ ಪ್ರಧಾನರ ಜೀವವ ಕಳೆದುವಾಸನೆ ದಳವಾಯ್ಗಳೀರ್ವರ ನೆರೆ ತುಳಿದುಮೋಸಗಾರರ ದೊರೆ ನಾಲ್ವರನಳಿದುಏಸು ನುಡಿಯಲಿ ತಾನೊಬ್ಬನೇ ಉಳಿದು ನಾದವಾದನು 3 ದೋಷಕರೆಲ್ಲರ ದೇಶ ಬಿಟ್ಟೋಡಿಸೆನಾದವಾದರು ಎಲ್ಲರು ಕೊನೆಗೆ ಉಳಿದವರೆಲ್ಲಾಸಾಷ್ಟಾಂಗ ವೆರಗಿದರುವಾಸಿ ಪಂಥವ ಬಿಟ್ಟು ಕೊಂಡಾಡುತ ನಾದವಾದನು 4 ಇಂತು ರಣವ ಮಾಡಲು ಕೈಯ ಸುರಗಿಸಂತೋಷವೆಂಬ ಮೃತದಿ ತಾ ಮುಳುಗಿಶಾಂತನಾಗಿಯೆ ಚಿದಾನಂದ ಗುರುವಿಗೆರಗಿನಿಂತು ನೋಡಿಯೆ ಕಂಡನಾತನೆ ತಿರುಗಿ ನಾದವಾದನು 5
--------------
ಚಿದಾನಂದ ಅವಧೂತರು
ನಾದಾನಂದದಿ ಮುಳುಗಾಡೋ ಪ ಇಲ್ಲವೆಂಬುದು ಸಲ್ಲ ಗುರುಎಲ್ಲಾ ಪೂರಿತನಹುದಲ್ಲ ಇದ ಬಲ್ಲವರು ಬಲ್ಲರೆಲ್ಲತಾನೆಲ್ಲ ತಿಳಿಯೆ ನೀ ಸಾಕ್ಷಿಕನಹುದಲ್ಲ 1 ಮತಿಯಿಂದ ತಿಳುಕೋ ವಿಚಾರ ಈಗತಿಯಲ್ಲಿ ಆತ್ಮನು ಪೂರಗತಿಗೆ ಕೇಡಿಲ್ಲ ಇದು ಸ್ಥಿರ ಮಹದತಿ ಸೌಖ್ಯ ಪದಕೆ ರಾಜ ನೀನೆ ಉದಾರ 2 ಭೇದ ಭೇದವು ನಿನಗೇತಕೆ ನೀವಾದ ದೂರನು ಪರಕೆ ಈವಾದ ಸಂವಾದಗಳ್ಯಾತಕೆ ಮಹದಾದಿ ಪುರುಷನು ನೀನಹುದು ಬಿಡು ಜೋಕೆ 3 ಸತ್ಯ ಸಂವಿದ್ರೂಪ ಆತ್ಮ ನೋಡೆಪ್ರತ್ಯಾಗಾತ್ಮ ಪರಕತೀತ ಆರಿಂದಲಾದುದುಖ್ಯಾತ ಸುನಾದವರಿದನೇ ನಿರ್ಭೀತ ಮಹಾನಾದ ಚಿದಾನಂದನ ಕೂಡಿದನಾತ4
--------------
ಚಿದಾನಂದ ಅವಧೂತರು
ನಾನಾ ಚಿಂತನೆ ಎನಗಿಲ್ಲ ಹರಿ ನಿನ್ನ ಚಿಂತನೆ ಎನಗನುಗಾಲ ಪ ಮಾನಾಪಮಾನದ ಭಯವಿಲ್ಲೆನಗೆ ತವ ಧ್ಯಾನವೊಂದೆ ನೀಡು ಬಹು ಮಿಗಿಲ ಅ.ಪ ಉಪವಾಸಬಿದ್ದರೆ ಆಡ್ಡಿಯಿಲ್ಲ ಎನ ಗಪರೂಪ ಊಟಾದರ್ಹಿಗ್ಗಿಲ್ಲ ಕಪಟದಿ ಬೈದರೆ ಅಹಿತಿಲ್ಲ ಜನ ನಿಪುಣನೆಂದರೆ ಎನಗ್ಹಿತವಿಲ್ಲ ಸುಪಥದಿ ನಡೆಸೆನ್ನ ಸಫಲನೆನಿಸಿ ನಿಮ್ಮ ಗುಪಿತ ಮಂತ್ರ ಮಾಡನುಕೂಲ 1 ಪರಮ ಬಡತನವಿರೆ ಪರವಿಲ್ಲ ಬಲು ಸಿರಿ ಸಂಪದವಿರೆ ಹರುಷಿಲ್ಲ ಸಿರಿವರ ನಿಮ್ಮಯ ಚರಣ ಸ್ಮರಣೆವೊಂದೆ ಸ್ಥಿರಮಾಡು ಮರೀದಂತೆ ಗೋಪಾಲ 2 ಕಾಮಿನಿಯರ ಪ್ರೇಮ ನಿಜವಿಲ್ಲ ಮತ್ತು ಹೇಮ ಮುತ್ತು ರತ್ನ ಇರೋದಲ್ಲ ಭೂಮಿಸೀಮೆಯ ಸುಖವಿಲ್ಲ ಇದು ನೇಮವಲ್ಲೊಂದಿನ ಬಟ್ಟಬೈಲ ಕ್ಷೇಮಮಂದಿರ ಭಕ್ರಪ್ರೇಮದಿ ಕೊಡು ಶ್ರೀರಾಮ ನಿಮ್ಮಡಿ ಭಕ್ತಿ ನುತಪಾಲ 3
--------------
ರಾಮದಾಸರು
ನಾನಿನ್ನ ತೆಗಳಿದೆನೇ ರಂಗಯ್ಯ ನಾನಿನ್ನ ಮಹಿಮೆಯ ಹೊಗಳಿದೆನಲ್ಲವೆ ಪ ನೀನೇತಕೆನ್ನೊಳು ದಯತೋರದಿರುವೆ ನಾನಿನ್ನ ಚರಣವ ದೃಢದಿ ನಂಬಿರುವೆ ಅ.ಪ ಮೀನಾಗಿ ನಾಲ್ಕುಮಕ್ಕಳ ಹೊತ್ತು ತಂದೆ ನೀನೇ ಕಮಠನಾಗಿ ನಗವೆತ್ತಿ ನಿಂದೆ ದಾನವ ಸಂಹಾರಕಾಗಿ ಸೂಕರನಾದೆ ನೀನೇ ನರಹರಿಯೆಂದು ನುತಿಸಿದೆನಲ್ಲದೆ 1 ಭೂಮಿಯನಳೆದವನೆಂದೆ ನೀನೇ ಭೂಮಿಪರನು ಕೊಂದೆ ಎಂದೆ ಭೂಮಿಜೆಯರಸ ರಾವಣವೈರಿಯೆಂದೆ ಕಾಮಪಾಲನು ಹಲಧರನೆಂದೆನಲ್ಲದೆ 2 ತರುಣಿದ್ರೌಪದಿಗಾಗಿ ಕುರುಕುಲವಿರಿದೆ ತುರಗವನೇರಿ ದುಷ್ಟರನೆಲ್ಲ ತರಿದೆ ಶರಣ ಜನರಿಗಾಗಿ ಹರಿಹರ ನೀನಾದೆ ವರದ ಮಾಂಗಿರಿರಂಗ ನೀನೆಂದೆನಲ್ಲದೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾನೀಯದಿದ್ದರೆ ನೀನೇನನೀವೆ ಪ ನಾನು ಎಂಬುದು ಮಾತ್ರ ನಾ ನಿನಗಿತ್ತರೆ ಏನನೀಯುವೆ ರಂಗ ದೀನದಯಾಳು ಅ.ಪ ಅವಲಕ್ಕಿಯನು ತಂದವಗೆ ಭಾಗ್ಯವನಿತ್ತೆ ನವಫಲವನಿತ್ತವಳಿಗೆ ಒಲಿದೆ ನವನೀತವಿತ್ತರ್ಗೆ ಸುವಿಲಾಸಗಳನಿತ್ತೆ ಭುವಿಯೆಲ್ಲವಿತ್ತಂಥವನ ಬಾಗಿಲಕಾಯ್ದೆ 1 ಗಜರಾಜನಂದು ಪಂಕಜವೊಂದನಿತ್ತಂದು ಅಜಗರನನು ಕೊಂದು ಸೌಜನ್ಯವನಿತ್ತೆ ಭುಜದ ಮೇಲೆ ನಿನ್ನನಂಗಜ ಪೊತ್ತು ತಿರುಗಲು ರಜತಪದವಿಯನಿತ್ತು ವಿಜಯ ನೀ ಗೈದೆ 2 ಮಡದಿಮಣಿಯು ತಾನುಟ್ಟ ಪೀತಾಂಬರ ದೆಡ್ಡೆಯ ಹರಿದು ನಿನ್ನ ಅಡಿಗೆ ಕಟ್ಟಲ್ಕೆ ಮಡದಿಗೆ ಅಕ್ಷಯದುಡುಗೆಯ ನೀನಿತ್ತೆ ಮೃಡನು ತಾನೇನು ಕೊಡಲೋ ಗೋವಿಂದಾ 3 ಜಗಜಟ್ಟಿ ಹನುಮನು ಬಗೆದು ನಿನ್ನಯ ದುಗುಡವ ಬಿಡಿಸಿದ ಬಗೆಯ ನೀನÀರಿತೂ ಜಗದೊಳು ಸರಿಯಾದುಡುಗರೆಯಿಲ್ಲದೆ ನಗುತ ನಿನ್ನನು ನೀನೆ ಸೊUಸಿನಿಂದಿತ್ತೆ 4 ನಾನೆಂಬುದಲ್ಲದೆ ಏನುಂಟು ಎನ್ನೊಳು ನೀನೀವೆನಿದ ಮಾತ್ರ ಶ್ರೀನಾಯಕೇಶ ಏನನಾದರೂ ಸರಿ ನೀನೀಯೋ ಮುರವೈರಿ ನಾನು ನನ್ನದು ನಿನ್ನಧೀನ ಮಾಂಗಿರಿರಂಗ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾನು ನಿನ್ನ ಸೇವಕ ಏನಾದರೂ ಬರಲಿ ನಿನ್ನ ಬಿಡುವನೆ ರಂಗಾ ಪ ಅಪತ್ತೆ ಬರಲಿ ಅತಿಶಯದ ಕ್ಲೇಶವೇ ಬರಲಿ ಕೋಪ ಕಾಮಾದಿಗಳು ವೆಗ್ಗಳಿಸಲಿ ಪಾಪದ ರಾಶಿಗಳು ಬಂದು ಬೆನ್ನಟ್ಟಲಿ ಶ್ರೀಪತಿ ನಿನ ಪಾದವನು ಬಿಡಬಲ್ಲನೆ 1 ಬಟ್ಟೆ ಅತಿ ಕಠಿಣವಾಗಲಿ ಯಮನಾಳು ಬಲು ಭಯಂಕರರಾಗಲಿ ಯಮನು ದಂಡಿಸಿ ತೀವ್ರ ನಿರಯದೊಳಗೆ ಇಡಲಿ ಕಮಲನಾಭನೆ ನಿನ್ನ ಪಾದವನು ಬಿಡಬಲ್ಲನೆ2 ಲೋಕದೊಳಗಿದ್ದ ಜನರಿಗೆ ಬಪ್ಪ ದೋಷಗಳು ಏಕವಾಗಿ ಎನಗೆ ಬರಲಿ ಇಂದೆ ನಾ ಕಳವಳಿಸಿದರು ನಿನ್ನಂಘ್ರಿಯಗಳಾಣೆ ಶ್ರೀಕಾಂತ ವಿಜಯವಿಠ್ಠಲರಂಗ ಕೇಳೊ3
--------------
ವಿಜಯದಾಸ
ನಾನೆ ಭ್ರಮಿಸಿದೆನೊ ವಿಷಯದಿ ಮಮತೆ ನೀನೆ ಸೃಜಿಸಿದೆಯೊ ಪ. ಅನಾದಿ ನಿಧಾನ ನೀನೆ ತಿಳಿದು ನೋಡೊ ಅ.ಪ. ಬನ್ನ ಬಡಿಸುತಿದೆಕೈವಲ್ಯದರಸನೆ ನೀ ವಿಚಾರಿಸಿ ಕಾಯೊ 1 ಸ್ವತಂತ್ರ ನೀನು ಅಸ್ವತಂತ್ರ ನಾನು ದೂತನ್ನ ಈ ತೆರಕಾತುರಗೊಳಿಪುದು ಏತರಘನವೊ ಇದರಿಂದಖ್ಯಾತೇನುಫಲವೊ ಎನ್ನೊಳು ನಿನಗೇತಕೀ ಛಲವೊ ಭವದಿ ಕೈ-ಸೋತು ಬಿನ್ನೈಸುವೆ ಮಾತುಮನ್ನಿಸಿ ಕಾಯೊ2 ಕಕ್ಕಸ ಭವದೊಳು ಠಕ್ಕಿಸಿ ಸಿಗಹಾಕಿ ಸಿಕ್ಕುಬಿಡಿಸದೆ ನೀ-ನಕ್ಕು ಸುಮ್ಮನಿರಲು ದಿಕ್ಕ್ಯಾರೊ ಎನಗೆ ದಣಿದು ಮೊರೆ-ಯಿಕ್ಕುವೆ ನಿನಗೆ ಬಂದು ಬೇಗ ನೀ ತಕ್ಕೊನೀ ಕೈಗೆ ಎನ್ನವಗುಣ ಲೆಕ್ಕಿಸದಲೆ ಕಾಯ್ಯಬೇಕಯ್ಯ ಕೊನೆಗೆ 3 ಪ್ರಿಯ ನೀನೆನಗೆಂದು ಅಯ್ಯ ನಿನ್ನ ನಂಬಲು ಮಯ್ಯ ಮರೆಸಿ ವಿ-ಷಯದುಯ್ಯಾಲೆಗೊಪ್ಪಿಸಿದೆ ಸಯ್ಯಲೊ ದೊರೆಯೆ ಇಂಥವನೆಂದುಅಯ್ಯೊ ಮುನ್ನರಿಯೆ ಕರುಣಿ ಎಂಬೊ ಹಿಯ್ಯಳಿ ಸರಿಯೆ ಇನ್ನಾದರುಕಯ್ಯ ಪಿಡಿಯಲು ಕೀರ್ತಿ ನಿನಗೆಲೊ ಹರಿಯೆ4 ಮೊದಲೆಮ್ಮಾರ್ಯರು ನಿನ್ನ ಪದನಂಬಲವರಘ ಸದೆದು ಸಮ್ಮುದದಿಸಂ-ಪದವ ನೀಡಿದೆಯಂತೆ ಅದನು ಮರೆದೆಯೊ ಶಕುತಿಯು ಸಾಲದಲೆ ಜ-ರಿದೆಯೊ ಜನರು ಪೇಳಿದ ಮಾತು ಪುಸಿಯೊ ನಿಜ ತೋರಲು ಬುಧನುತ ಗೋಪಾಲವಿಠಲ ಕೀರುತಿಯೊ 5
--------------
ಗೋಪಾಲದಾಸರು
ನಾನೇ ಭ್ರಮಿಸಿದೆನೋ ವಿಷಯ ಸಂಗ ನೀನೇ ನಲಿದಿತ್ತೆಯೋ ಪ. ಗಾನಲೋಲನೆ ಕೃಷ್ಣ ಏನೆಂಬುದರಿಯೆನೊ ಮೌನಿ ಜನಪ್ರಿಯ ಧ್ಯಾನಗಮ್ಯನೆ ರಂಗ ಅ.ಪ. ನೂಕುತ ದಿನ ಕಳೆದೆ ಕಾಕು ಯುಕುತಿಯಲ್ಲಿ ವ್ಯಾಕುಲ ಮನಕಿಲ್ಲ ಶ್ರೀಕಾಂತ ನಿನ್ನಿಚ್ಛೆ ಸುಖದುಃಖ ನಿಕರವ 1 ಆಟ ಪಾಟ ನೋಟವೂ ಊಟ ಕೂಟ ಕಾಟ ಕರ್ಮಗಳೆಲ್ಲವೂ ಹಾಟಕಾಂಬರ ನಿನ್ನಾಟವÉನ್ನಲುಭವ ದಾಟಿಸುವವೊ ತೆರೆ ಏಟಿಗೆ ಕೊಡುವುವೋ 2 ನರಕಕೆ ಕಾರಣವೋ ಹೇ ಶ್ರೀನರ ಹರಿ ನಿನ್ನ ಪ್ರೀತಿ ಕರವೋ ಸಂಚಿತ ಕರ್ಮ ಹರಿಸುತ ವರ ಸುಖ ಪಾಲಿಪ ಗುರುತಿನ ಪರಿಯೋ 3 ದೇಹಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 4 ಪಾಪಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 5 ಪಾಪಕ್ಕೆ ಕಾರಣವೋ ಈ ಕರ್ಮಗಳ ಳಾಪದುದ್ಧಾರಕವೋ ಗೋಪಾಲಕೃಷ್ಣವಿಠ್ಠಲನೆ ಮದ್ಗುರು ಬಿಂಬ ವ್ಯಾಪಾರದ್ವಯ ನಿಂದು ನೀ ಪ್ರೀತನಾಗಲೊ 6
--------------
ಅಂಬಾಬಾಯಿ
ನಾನೇನಂದನೆ ಭಾವಕಿ ಒಳ್ಳೆಆನಂದಮಯ ಹರಿಹರ ಮುನಿದಿತ್ತಬಾರ ಪ ರಮಣಿ ಕುಚ ಕುಂಕುಮಾಂಕಿತ ವಕ್ಷವಾರಿಧಿಶಯನ ಶ್ರೀವಾಸವಾರ್ಚಿತನಾರದನುತ ಪಂಕಜದೈತ್ಯ ಸಂ-ಹಾರ ಶ್ರೀ ಹರಿಹರನೆಂದೆನಲ್ಲದೆಮಾರಮರ್ಧನನೆಂದೆನೆ ಮೆರೆವ ಸರ್ಪಹಾರ ಕುಂಡಲನೆಂದೆನೆ ಶೋಭಿಸುವ ವೈಯ್ಯಾರ ವಿಭೂಷಣ ಶಂಕರನೆಂದೆನಲ್ಲದೆ 1 ಮಡದಿಯೋರ್ವಳ ನುಡಿ ಕಳ್ಳನೆಂದೆನಲ್ಲದೆ ಮಿಗೆಜಡೆದಲೆಯವನೆಂದನೆ ಪುಲಿದೊಗಲದೃಢದಿ ಹೊದ್ದಿಹನೆಂದೆನೆ ತ್ರೈಲೋಕ್ಯದೊಡೆಯ ಮುರಾರಿ ಮಹದೇವನೆಂದೆನಲ್ಲದೆಧರೆಯನಳೆದು ಕ್ಷತ್ರಿಯರ ಕೊಂದು ಶರಧಿಯನಿರದೆ ಕಟ್ಟಿದ ಕೃಷ್ಣ ಬಹುರೂಪವರಕವಿಗುರುವ ಕರದಿ ಪಿಡಿದು ರಕ್ಷಿಪಬಿರುದಿನ ರಾಯ ರಾವುತನೆಂದೆನಲ್ಲದೆ2 ಗಿರಿಜಾರಮಣನೆಂದೆನೆ ಗುಹಾರಣ್ಯವಾಸಎರಡು ರೂಪದಲಿರುವ ಮೂರುತಿಯೆಂದೆ ನಾ ನಂಬಿದ-ವರಪೊರೆವ ಶ್ರೀಹರಿಹರಲಿಂಗನೆಂದನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ