ಒಟ್ಟು 7932 ಕಡೆಗಳಲ್ಲಿ , 127 ದಾಸರು , 4530 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನಂದಿವಾಹನಾ ಪಾಲೀಸೊ ನೀ | ಕಂದ ನೆಂದನಾ ಪ ಕಂದು ಗೊರಳ ಮೌ | ಳೆಂದು ಶಿಖರ ಅಮರೇಂದ್ರ ಮುಖರು ಸುರ | ವೃಂದ ವ್ಯಂದ್ಯ ಪದಅ.ಪ. ನಂದ - ನಂದನಾ - ಪ್ರಿಯ ಸಖ | ಮಂದಜಾಸನಾಕಂದ ನೆನಿಸಿ ದುರ್ | ವೃಂದ ತ್ಯಜಿಸಿ ತವತಂದೆ ಯಾಜ್ಞೆಯಲಿ | ನಿಂದು ಸರಿದ ಹರ 1 ದಿತಿಸುತ | ಸ್ತೋಮ - ಪ್ರೀಯನೇ ||ಶಾಮ ಸುಂದರ ಹರಿ | ಪ್ರೇಮಾನ್ವಿತ ಸುತಕಾಮಾರಿಯೆ ಹರ | ಸಾಮಜವಾಸಾ 2 ಸೇವ್ಯ ನಂಘ್ರಿ ದಶದಿವ್ಯ ಕಲ್ಪ ತಪ | ಗೈಯ್ಯೆ ಶಯ್ಯನಾದೆ 3 ಯೋಗಿ ರೂಪ ಭವರೋಗ ವೈದ್ಯ ಹೃ | ದ್ರೋಗ ಕಳೆಯೊ ಶಿವ4 ಗೌರಿ ಮನೊ - ಹರಾ - ಕೈಲಾಸವಾಸ | ಕೈರಾತಾ ಕೃತಿಧರಾ ||ಗಿರಿ ಇಂದ್ರ ಕೀಲದಿ | ಘೋರ ತಪಸಿ ನರಸಾರೆ ನಿನ್ನ ಪದ | ಶೂರ ಪಡೆದ ಶರ 5 ಶುಕ | ಲಿಂಗಾಕಾರನೇ ||ತುಂಗ ಮಹಿಮ ನಿ | ಸ್ಸಂಗ ಹರಿಯ ದ್ವಿತಿಯಂಗ ಡಮರು ಶೂ | ಲಿಂಗಳ ಪಿಡಿದಿಹ 6 ತೈಜಸ - ತಾಮಸ | ಸಾಕಾರಿ - ಓಜಸಾ ||ನೀ ಕುಶಾಸ್ತ್ರದಲಿ | ಭೀಕರರನು ಅವಿವೇಕರ ಮಾಡ್ದೆ | ಪಿ | ನಾಕಿ ಧರ ಹರ 7 ರುಂಡ - ಮಾಲನೇ - ಮುನಿಜ ಮೃ | ಕಂಡ - ಪಾಲನೇ ||ಅಂಡಜ ಮಹ ಬ್ರ | ಹ್ಮಾಂಡ ದೊಡೆಯ ಪದಪುಂಡರೀಕದೊಳು | ಬಂಡುಣಿ ಎನಿಸಿಹೆ 8 ಶಂಭೊ - ಶಂಕರ - ಧೂರ್ಜಟೆಯೆ | ಅಂಚೆ - ಮನೋಹರಾ ||ಕಂಬು ಪಾಣಿ ಪದ | ಹಂಬಲಿಸುವೆ ಹೃದಯಾಂಬರದೊಳು ಎನ | ಬಿಂಬನ ತೋರಿಸು 9 ಸೋಮರ್ಕಾನಲ - ಈಕ್ಷಣಾ | ಭೀಮ - ಕೈಕಪಾಲ ||ಭೀಮ ಭವಾಟವಿ | ಧೂಮಕೇತು ಸಿರಿರಾಮ ಪದಾಶ್ರಿತ | ವೈಮನ ಕಳೆಯೊ 10 ಭಾವ - ಜಾರಿಯೇ - ಮುರುಹರ | ರಾವಣಾದಿ - ಪ್ರಿಯಾ ||ಸಾವಧಾನದೊಳು | ಭಾವ ಶುದ್ಧಿಸುತತೋರ್ವುವೆನಗೆ ಗುರು | ಗೋವಿಂದ ವಿಠಲನ 11
--------------
ಗುರುಗೋವಿಂದವಿಠಲರು
ನದೀಸ್ತೋತ್ರವು ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ ಸಿಂಧು ಸರಯು ನೇತ್ರಾವತಿ ಕುಮದ್ವತೀ ಭಾಗೀರಥೀ ಭೋಗವತಿ ಜಾಹ್ನವೀ ಜಯಮಂಗಲಿ ತ್ರಿಜಗತ್ವಾವನೀ ವಿಷ್ಣು ಪಾದೋದ್ಭವೆ ದೇವಿ ಕೃಷ್ಣವೇಣಿ ಅಘನಾಶಿನೀ ಗಂಗಾ ಯಮುನಾ ತ್ರಿವೇಣೀ ದಕ್ಷಿಣ ಪಿನಾಕಿನೀ ನರ್ಮದಾ ಸಾವಿತ್ರೀ ಗಾಯತ್ರೀ ಸರಸ್ವತೀ ಸೀತಾ ಮಾಲತೀ ಚಮಲಾಪಹ ವಾರಾಹೀ ವೈಷ್ಣವೀ ಸುಜ್ಯೋತಿ ಶಿವಗಂಗಾ ಪಂಚಗಂಗೀ ತ್ರಿಪದಗಾಮಿನೀ ಬ್ರಹ್ಮಪುತ್ರಾ ತುಂಗಭದ್ರಾ ಭೀಮರಥೀ ಗೋಮತೀ ಶರಾವತೀ ಸ್ವಾಮಿ ಪುಷ್ಕರಿಣೀ ವರಹ ಪುಷ್ಕರಿಣಿ ಪಾಂಡುತೀರ್ಥ ಪಾಪನಾಶಿನೀ ಆಕಾಶಗಂಗಾಧವಳ ಗಂಗಾ ಶಾಲ್ಮಲೀ ಲೋಕಪಾವನೀ ಕುಮಾರ ತೀರ್ಥ ವಿಷ್ಣುತೀರ್ಥ ನಾರಾಯಣತೀರ್ಥ ಕೌಮೋದಕೀ ಕಪಿಲತೀರ್ಥ ಅಲಕನಂದ ವರದಾ ಪಶ್ಚಿಮವಾಹಿನೀ ಸಿಂಧು ನದಿ ಶೋಣನದಿ ಚಂದ್ರಭಾಗ ಅರ್ಕಾವತೀ ಸುವರ್ಣ- ಮುಖರೀ ಗೋಗರ್ಭ ಶಿಂಶಾಕಾಗಿನೀ ಮಂದಾಕಿನೀ ಪ್ರಾತ:ಕಾಲೇ ಪಠÉೀನ್ನಿತ್ಯಂ ದು:ಖದಾರಿದ್ರನಾಶನಂ ಸ್ಮರಾಮಿ ನಿತ್ಯಂ ಭವದುಃಖ ದೂರಾ ಶ್ರಿ ಕಮಲನಾಭ ವಿಠ್ಠಲೋ ವಿಜಯತೇ ಶುಭಂ
--------------
ನಿಡಗುರುಕಿ ಜೀವೂಬಾಯಿ
ನನಗಾವ ಬಲವಿಲ್ಲ ನಿರುಪಮನೆ ಹೇಳೈಯ ವನಜ ಸಂಭವ ಜನಕ ತವ ಚರಣ ವಲ್ಲದಲೆ ಪ ಮಣಿದು ಬೇಡುವೆನೈಯ ಪ್ರಣತಾರ್ಥಿ ಹರಕೃಷ್ಣ ಜನುಮಗಳ ಹರಿಸುತಲಿ ಭವಬಂಧ ಬಿಡಿಸೈಯಅ.ಪ ನರರ ನಂಬಿದೆ ನೈಯ ಸಿರಿಯುರಿಗೆ ಬಾಯ್ಬಿಟ್ಟೆ ಅರಿಯದೆಲೆ ತವ ಮಹಿಮೆ ಬರಿದೆ ಬಳಲಿದೆಭವದಿ ಧೊರೆ ತನವು ಸವಿಯಹುದೆ ತವ ಸವಿಯ ಕಂಡವಗೆ ಜರಿಯ ದಲೆ ಬಡವನನು ಕರೆದು ಪಾಲಿಸು ತಂದೆ 1 ಹಣ ವನಿತೆ ಭೂ ವಿಷಯ ಉಂಡುಂಡು ಬೆಂಡಾದೆ ತನುಜ ಕರಣಗಳಿನ್ನು ಶತ್ರುಗಳ ಸಮವಿಹವು ಗುಣ, ಪೂರ್ಣ ಬಿಂಬನನು ನೆನೆಯ ಗೊಡದಲೆ ನಿತ್ಯ ಇನಸುತನ ಪುರದೆಡೆಗೆ ಸೆಳೆಯುತಿಹವೋ ಸ್ವಾಮಿ 2 ಸುರರು ಸುರರಿಗಾಶ್ರಯ ನೀರ ಮರುತಗಾಶ್ರಯ ಸಿರಿಯು ಸಿರಿರಮಣನೀನಿರಲು ಚರಣ ಸೇವಕ ನೆನ್ನ ನರರಿಗೊಡ್ಡುವರೇನೊ ಸರ್ವೇಶ ಅಕ್ಷರನೆ ಮೊರೆ ಹೊಕ್ಕೆ ಸಲಹೈಯ 3 ದೇವ ದೇವರ ದೇವ ದೇವತ್ವ ನೀಡುವನೆ ಕಾವ ಜೀವರ ನಿಚಯ ಸಾರ್ವಭೌಮನು ನೀನು ನೀವಲಿದು ಪೊರೆಯದಿರೆ ಆಗುವುದೆ ಸುಖಮುಕ್ತಿ ನಾವಿಕನು ನೀನೆಂದು ನಂಬಿದೆನು ಕೈಪಿಡಿಯೊ 4 ಅಗಲಿ ಬದುಕಿರಲಾರೆ ಗೋಪ ಪುರುಷನೆ ನಿನ್ನ ಸುಗಮ ಮಾಡಿಸು ಪಥವ ಸರ್ವಜ್ಞ ತವಪುರಕೆ ನಗವೈರಿ ಜಯತೀರ್ಥ ವಾಯು ವಂತರದಿರ್ಪನಗೆ ಮೊಗದ ಶ್ರೀಕಾಂತ ಕೃಷ್ಣವಿಠಲನೆ ಬೇಗ 5
--------------
ಕೃಷ್ಣವಿಠಲದಾಸರು
ನನ್ನಿಂದ ನಾನೇ ಜನಿಸಿ ಬಂದೆನೆ ದೇವಎನ್ನ ಸ್ವತಂತ್ರವು ಲೇಶವಿದ್ದರು ತೋರು ಪ ನಿನ್ನ ಪ್ರೇರಣೆಯಿಂದ ನಡೆದು ನುಡಿದ ಮೇಲೆನಿನ್ನದು ತಪ್ಪೋ ನನ್ನದು ತಪ್ಪೋ ಪರಮಾತ್ಮಅ ಜನನಿಯ ಜಠರದಲಿ ನವಮಾಸ ಪರಿಯಂತಘನದಿ ನೀ ಪೋಷಿಸುತಿರೆ, ನಾನುಜನಿಸಲಾರೆನು ಎನೆ ಜನಿಸೆಂದಿಕ್ಕಳದಿಂದವನಜಾಕ್ಷ ನೂಕಿದವನು ನೀನಲ್ಲವೆ 1 ಎಲವುಗಳ ಜಂತೆ ಮಾಡಿ ನರಗಳ ಹುರಿಯಿಂಹೊಲಿದು ಚರ್ಮವ ಹೊದಿಸಿ ದೇಹದೊಳುಮಲಮೂತ್ರಕೆ ಹೊರದಾರಿ ನಿರ್ಮಿಸಿ ಹೃದಯದಲಿನೆಲಸಿ ಚೇತನವನಿತ್ತವ ನೀನಲ್ಲವೆ 2 ಜನಿಸಿದಾರಭ್ಯದಿಂದ ಇಂದಿನ ಪರಿಯಂತಘನಘನ ಪಾಪ ಸುಕರ್ಮಂಗಳನುಮನಕೆ ಬೋಧಿಸಿ ಮಾಡಿಸಿ ಮುಂದೆ ಇದನೆಲ್ಲಅನುಭವಿಸುವುದು ಜೀವನೊ ನೀನೊ ದೇವ 3 ಅಂಧಕನ ಕೈಲಿ ಕೋಲಿತ್ತು ಕರೆದೊಯ್ಯುವಾಮುಂದಾಳು ತಪ್ಪಿ ಗುಂಡಿಗೆ ಕೆಡಹಲುಅಂಧಕನ ತಪ್ಪೊ ಅದು ಮುಂದಾಳಿನ ತಪ್ಪೊಹಿಂದಾಡಬೇಡ ಎನ್ನೊಳು ತಪ್ಪಿಲ್ಲವೊ 4 ಕಂದನ ತಾಯಿ ಆಡಿಸುವಾಗ ಅದು ಪೋಗಿಅಂದಿ ಬಾವಿಯ ನೋಡುವುದನು ಕಂಡುಬಂದು ಬೇಗನೆ ಬಾಚಿ ಎತ್ತಿಕೊಳ್ಳದಿದ್ದರದುಕಂದನ ತಪ್ಪೊ ಮಾತೆಯ ತಪ್ಪೊ ಪರಮಾತ್ಮ 5 ಭಾರ ನಿನ್ನದೊ ದೂರು ನಿನ್ನದೊ ಕೃಷ್ಣನಾರಿ ಮಕ್ಕಳು ತನುಮನ ನಿನ್ನದಯ್ಯಕ್ಷೀರದೊಳಗದ್ದು ನೀರೊಳಗದ್ದು ಗೋವಿಂದಹೇರನೊಪ್ಪಿಸಿದ ಮೇಲೆ ಸುಂಕವೆ ದೇವ 6 ನ್ಯಾಯವಾದರೆ ದುಡುಕು ನಿನ್ನದೊ, ರಂಗ, ಮತ್ತ-ನ್ಯಾಯವಾದರೆ ಪೇಳುವರಾರುಮಾಯಾರಹಿತ ಕಾಗಿನೆಲೆಯಾದಿಕೇಶವಕಾಯಯ್ಯ ತಪ್ಪನೆಣಿಸದೆ ದೇವ 7
--------------
ಕನಕದಾಸ
ನಂಬಬೇಡಿ ಸಿರಿಯ ತನ್ನದೆ ? ಪ ನಂಬಬೇಡಿ ಸಿರಿಯು ತನ್ನದೆಂಬ ನಿಮಿಷದೊಳಗೇನಹುದೊಡಂಬತನವಿದೇಕೆ ಹರಿಯ ಪಾ-ದಾಂಬುಜವನು ಭಜಿಸಿ ನರರು ಅ ಜಲಧಿಯನ್ನು ಪೀರ್ದ ಮುನಿಯಜನನಿ ಪೆಸರ್ಗೆ ಕಿವಿಯನಾಂತಖಳನ ಬಲವ ನಂಬಲಾತುತಲೆಯ ತವಿಸಿದವನ ಸಿರಿಯುಗಳಿಗೆಯೊಳಗೆ ಕೀಲು ಸಡಿಲದೆ - ಎಣಿಕೆ ಇಲ್ಲದದಳವು ಯಮನನಗರಿಗೈದದೆ - ದೈವಕೃಪೆಯುತೊಲಗಲೊಡನೆ ದಾಳಿವರಿಯದೆ - ಕೇಳಿ ಜನರೆ 1 ಇಭ ನೃಪತಿ ಶೌರಿ ಮುನಿಯಲಂದು ಅವನ ಪದವು ಮುರಿಯದೆ - ಕೇಳಿ ಜನರೆ2 ಧರಣಿಯ ಮುನ್ನಾಳ್ದ ನಹುಷಸಗರರೆನಿಪ ಭೂಪತಿಗಳುಸಿರಿಯ ಜಯಿಸಲಿಲ್ಲ - ಮಿಕ್ಕನರರ ಪಾಡಿದೇನು ನೀವುಬರಿದೆ ಭ್ರಾಂತರಾಗಬೇಡಿರೊ - ಎಂದಿಗಾದರುಸ್ಥಿರವಿದಲ್ಲವೆಂದು ತಿಳಿಯಿರೊ - ಶ್ರೀ ಕಾಗಿನೆಲೆಯವರದ ಕೇಶವನನು ಭಜಿಸಿರೊ - ಕೇಳಿ ಜನರೆ 3
--------------
ಕನಕದಾಸ
ನಂಬಿ ಕೆಟ್ಟವರಿಲ್ಲವೊ, ರಂಗೈಯನನಂಬದೆ ಕೆಟ್ಟರೆ ಕೆಡಲಿ ಪ ಅಖಿಳ ಲೋಕೇಶನಕಂಬು ಕಂಧರ ಕೃಷ್ಣ ಕರುಣಾ ಸಾಗರನಅ.ಪ ತÀರಳ ಪ್ರಹ್ಲಾದ ಸಾಕ್ಷಿ ಸರಸಿಯೊಳಿದ್ದಕರಿರಾಜನೊಬ್ಬ ಸಾಕ್ಷಿ ಮರಣಕಾಲದಿ ಅಜಾಮಿಳ ಮಗನನು ಕರೆಯೆಗರುಡನೇರಿ ಬಂದ ಗರುವ ರಹಿತನ ದೊರೆಯೂರು ಯೇರಬಂದ ಪುತ್ರನನ್ನುಕೊರಳಿÀ್ಹಡಿದ್ಹೊರಡಿಸಲು ಅರಣ್ಯದೊಳಗವನಿದ್ದ ಸ್ಥಳದಲ್ಲಿಭರದಿಂದೋಡಿ ಬಂದ ಭಕ್ತವತ್ಸಲನ್ನ ಸಿರಿ
--------------
ವ್ಯಾಸರಾಯರು
ನಂಬಿ ತುತಿಸಿರೋ ರಾಘವೇಂದ್ರ ಧ್ವರಿಯಾ ಸನ್ಮುನಿ ಕುಲವರಿಯಾ ಪ ಅಂಬುಜನಾಭನಿಗತಿ ಪ್ರೀಯಾ ಸಜ್ಜನರಿಗೆ ಸಹಾಯ ಅ.ಪ ಕನಕಶಯ್ಯನ ತನುಜನಾಗಿ ಜನಿಸಿ ನರಹರಿಯನ್ನೆ ಒಲಿಸಿ ಅನುಜರಿಗನುದಿನ ತತ್ತ್ವವ ತಾಕಲಿಸಿ ಮನದಲಿ ಶ್ರೀಹರಿ ಪದವನ್ನೇ ಭಜಿಸಿ ವರ ಕರುಣವನೇ ಸಲಿಸಿ ವನಜಭವಾಂಡದಿ ಬಹು ಬಲ್ಲಿದನೆನಿಪ ನತಜನರಿಗೆ ಸುರÀ 1 ಕಾಮಧೇನು ಸುರತರುವಿಗೆ ಸಮನೀತ ಕಾಮಿತ ಫಲ ದಾತಾ ರಾಮ ನರಹರಿ ಕೃಷ್ಣರ ಪದ ದೂತ ಲೋಕದಿ ಬಹು ಖ್ಯಾತ ಕಾಮಿನಿ ಸುತ ಧನ ಧಾನ್ಯದ ವ್ರಾತ ನೀಡುವೊನತಿ ಪ್ರೀತ ಪ್ರೇಮದಿ ನಿಜಜನಸ್ತೋಮಕೆ ಬಹು ದಾತ ಯತಿವರ ಕುಲನಾಥ 2 ಪಾತಕವನಕುಲ ವೀತಿಹೋತ್ರನೆನಿಸಿ ಭೂತಪ್ರೇತ ಮಹ ಭೀತಿಯನೇ ಬಿಡಿಸಿ ರೋಗವಪರಿಹರಿಸಿ ಮಾತಪಿತರ ತೆರ ದೂತರ ರಕ್ಷಿಸಿ ಮನೋಚಿಂತೆಯನೆ ಬಿಡಿಸಿ ದಾತಗುರುಜಗನ್ನಾಥವಿಠÀಲ ಪದದೂತ ದಾತ 3
--------------
ಗುರುಜಗನ್ನಾಥದಾಸರು
ನಂಬಿ ಭಜಿಸಿರೋ _ ಜನರೆಲ್ಲರೂ _ ನಂಬಿ ಭಜಿಸಿರೊ ಪ ಅಂಬುಜಾಕ್ಷ ಪ್ರಿಯಾ _ ನಮ್ಮ ಜಯರಾಯರಾ ಅ.ಪ ಕ್ಲೇಶ ಯಾತಕೇ ಕಾಸು ಕಳಕೊಂಡು _ ಅತಿಘಾಸಿ ಯಾತಕೇ ಶ್ರೀಶನಂಘ್ರಿ ಭಜಕರಾದ _ ವಾಸವಾವೇಶರಿವರ ಪಾದ ಆಶೆಯಿಂದ ಭಜಿಸಲೂ _ ವಾಸುದೇವನೊಲಿವನು 1 ನೇಮ ಯಾತಕೇ _ ನಿಷ್ಠೆ ಯಾತಕೇ ಹೋಮ ಯಾತಕೇ _ ಕಷ್ಟಯಾತಕೇ ಪ್ರೇಮದಿಂದಲೀ _ ಇವರ ಭಜಿಸಲೂ ತಾಮಸಗುಣ _ ತಾನೇ ಓಡೋದು 2 ಮಧ್ವಶಾಸ್ತ್ರದ _ ಚಂದ್ರರಿವರು ಅದ್ವೈತವಾದವ _ ಗೆದ್ದಸಿಂಹರು ಮಧ್ವರಾಯರಾ _ ಮುದ್ದುಮೊಮ್ಮಗ ಸಿದ್ಧಸೇವ್ಯರು _ ಸುಧೆಯ ಕರ್ತರು 3 ಇವರ ಧ್ಯಾನವೂ _ ಜ್ಞಾನದಾಯಕಾ ಇವರ ಪೂಜೆಯೂ _ ಪಾಪನಾಶನ ಇವರ ಸ್ಮರಣೆ _ ಕಲಿವಿ ಭಂಜನೆ ಇವರ ಸೇವೆಯು _ ಮುಕ್ತಿಸೋಪಾನ 4 ಶ್ರೀಕಳತ್ರನಾ _ ಆಜ್ಞೆಯಿಂದಲಿ ನಾಕದಿಂದಲೀ _ ಇಲ್ಲಿ ಬಂದರು ಏಕಮನದಿ _ ಶರಣು ಹೋಗಲು ಪಾಪನಾಶನ _ ಪುಣ್ಯವೆಗ್ಗಳಾ 5 ಮಳಖೇಡದೀ _ ನೆಲಸಿ ಇಪ್ಪರೂ ನಳಿನನಾಭನ _ ಒಲಿಸುತನುದಿನಾ ನಲಿಸಿ ಮನದೊಳು _ ಒಲಿಸುವಾತನೆ ಶೀಲವಂತನು _ ಧನ್ಯ ಮಾನ್ಯನು6 ನರನ ವೇಷದಿ _ ಸುರರ ಒಡೆಯನೊ ಹರಿಯ ಕರುಣದಿ _ ಮೆರೆಯುತಿರ್ಪರು ಶರಣಜನರ _ ದುರಿತರಾಶಿಯ ತರಿದು ಶೀಘ್ರದಿ _ ಪೊರೆಯುತಿಪ್ಪರು7 ಎತ್ತಿನ್ವೇಷದಿ _ ವಾತದೇವನ ಪ್ರೀತಿ ಪಡೆದು _ ಖ್ಯಾತಿಆದರು ಮತ್ತೆ ಯತಿಯಾಗಿ _ ಕೀರ್ತಿಯಿಂದಲಿ ಬಿತ್ತರಿಸಿದರು, ತತ್ತ್ವಶಾಸ್ತ್ರವ 8 ಕಾಗಿನೀನದೀ _ ತೀರವಾಸರು ವಿಗತರಾಗರು _ ನಿತ್ಯತೃಪ್ತರು ಜಾಗರೂಕದಿ _ ಪೊಗಳಿ ಪಾಡಲು ನಿಗಮವೇದ್ಯನು _ ಬೇಗ ಪೊರೆಯುವ 9 ಶೇಷಾವೇಷದಿ _ ವಾಸಿಸುವರು ಶೇಷಶಯನನ _ ದಾಸರೀವರು ಬೆಸರಿಲ್ಲದೆ _ ಆಸೆ ತೊರೆದು ದಾಸನೆನ್ನಲು _ ಪೋಷಿಸೂವರು 10 ಕೆರೆಯ ಏರಿಯು _ ಬಿರಿದು ಪೋಗಲು ಮೊರೆಯ ಇಟ್ಟರು _ ಇವರ ಅಡಿಗೆ ಭರದಿ ಕರುಣದಿ ಹರಿಯ ಸ್ತುತಿಸಿ ಕರದಿ ಮುಟ್ಟಲು _ ಏರಿ ನಿಂತಿತು 11 ಯರಗೋಳದ _ ಗುಹೆಯ ಒಳಗೆ ಮರುತದೇವನ _ ಕರುಣದಿಂದಲಿ ಪರಿಪರಿಯಲಿ _ ಬರೆದು ಟೀಕೆಯ ಕರೆದು ಸುರಿದರು _ ತತ್ತ್ವಕ್ಷೀರವ 12 ಇವರ ನಾಮವು _ ವಿಜಯ ಸೂಚಕ ಇವರ ಕೀರ್ತನೆ _ ಭವಕೆ ಔಷಧ ಇವರ ಕರುಣದಿ _ ಅನಿಲನೊಲಿವನು ಇವರ ಶಿಷ್ಯರೇ _ ಅವನಿಶ್ರೇಷ್ಠರು 13 ಸರ್ವಕ್ಷೇತ್ರದ _ ಯಾತ್ರೆಯಾ ಫಲ ಸರ್ವದಾನವ _ ಮಾಡಿದ ಫಲ ಇವರ ಪಾದವ _ ನಂಬಿ ಭಜಿಸಲು ತವಕದಿಂದಲಿ _ ತಾನೇ ಬರುವುದು 14 ಜಯತೀರ್ಥರ _ ಹೃದಯವಾಸಿಯು ವಾಯುಹೃದಯಗ _ ಕೃಷ್ಣವಿಠ್ಠಲನು ದಯದಿ ನುಡಿಸಿದಾ _ ಪರಿಯು ಪೇಳಿದೆ ಜೀಯ ಕೃಷ್ಣನೆ _ ಸಾಕ್ಷಿ ಇದಕ್ಕೆ15
--------------
ಕೃಷ್ಣವಿಠಲದಾಸರು
ನಂಬಿದೆ ತವ ಚರಣ ಸಲಹೋ | ಅಂಬುಧಿಸುತೆ ರಮಣ ವಿನುತ ಮನ | ದ್ಹಂಬಲವನು ಸಲಿಸೆಂದು ನಿರುತ ನೆರೆ ಪ ತಾವರೆದಳನಯನಾ ಭವಹರಣ ತವಕದಿ ಸುಜ್ಞಾನವಗರೆಯೋ 1 ತಂದೆ ನಾ ಜನಿಸುತ ಭೂಸುರ ಜನ್ಮದಿ ಹಿಂದಿನ ಸುಕೃತದಲಿ ಬಂದೆನೊ ಭುವಿಯೊಳ್ ನೊಂದೆನೋ ಕರುಣಿಸು 2 ಹೇಸಿ ಸಂಸಾರದ ಪಾಶÀವ ಬಿಡಿಸುತ ಶ್ರೀಶಾಮಸುಂದರವಿಠಲನೆ ದೋಷವ ನೋಡದೆ | ಪೋಷಿಸು ಮರೆಯದಲೆ ವಾಸುಕಿಶಯನನೆ 3
--------------
ಶಾಮಸುಂದರ ವಿಠಲ
ನಂಬಿದೆ ನಾಗರಾಜ ಹರಿಯ ಪಾ- ದಾಂಭೋಜಭಕ್ತಿಭಾಜ ಪ. ಶಂಭುಶಕ್ರಾದ್ಯರು ಹಂಬಲಿಪರು ನಿನ್ನ ತುಂಬಿದ ಜೀವಕದಂಬಾಭಿಮಾನಿಯೆ ಅ.ಪ. ಸಾವಿರ ಜಿಹ್ವೆಯೊಳು ಹರಿಯ ಸ್ತುತಿ ಗೈವೆ ನಿರತ ಕೃಪಾಳು ಶ್ರೀವಾಸುದೇವನ ಕರುಣ ನಿನ್ನಲ್ಲೆಷ್ಟು ದೇವೇಶನಾದರು ಯಾವನು ಬಣ್ಣಿಪ ಶ್ರೀವಧೂವರನ ಕಮಲಪದ ರಾ- ಜೀವ ಸೌಂದರ್ಯವನು ತನ್ನಯ ಸಾವಿರಾಕ್ಷಿಗಳಿಂದ ಕಾಣುತ ಕೇವಲಾನಂದಾಬ್ಧಿ ಮಗ್ನನೆ 1 ಶಿರವೊಂದರಲಿ ಬ್ರಹ್ಮಾಂಡ ಸಾಸವೆಯಂತೆ ಧರಿಸಿದೆ ಸುಪ್ರಚಂಡ ವರ ರಘುರಾಮನಾವರಜ ಲಕ್ಷ್ಮಣನಾದೆ ಹರಿ ಕೃಷ್ಣರಾಯನ ಪಿರಿಯನಾಗಿ ಅವ- ತರಿಸಿ ಭೂಭಾರವನುರೆ ಸಂ- ಹರಿಸಿ ವೇದ ಪುರಾಣ ತತ್ತ್ವವ ಶರಣಜನರಿಗೆ ಬೋಧಿಸುವ ಮಹಾ ಕರುಣಿ ಕಮಲಾಕಾಂತನ ಭಕ್ತನೆ 2 ಲಕ್ಷ್ಮೀನಾರಾಯಣನ ನಿದ್ರಾಸ್ಪದ ರಕ್ಷಿಸು ಕೃಪೆಯಿಂದೆನ್ನ ಸಾಕ್ಷಾದಚಲರೂಪ ನಿನ್ನೊಳು ನೆಲಸಿದ ಪಕ್ಷಿವಾಹನ ಜಗದಧ್ಯಕ್ಷ ಶ್ರೀನಿವಾಸ ಮೋಕ್ಷ ಮಾರ್ಗಪ್ರದರ್ಶಿ ಸತತ ಮು- ಮುಕ್ಷು ಜನಮನಹರ್ಷ ನಿರ್ಜರ- ಪಕ್ಷ ಸುಫಲಪ್ರದ ಸದಾ ನಿರ- ಪೇಕ್ಷ ಗುರುವರ ರಾಕ್ಷಸಾಂತಕ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ- ರಂಭಸೂತ್ರಳೆ ಇಂಬುದೋರಿನ್ನು ಪ. ಅಂಬುಜಾಂಬಕಿ ಶುಂಭಮರ್ದಿನಿ ಕಂಬುಗ್ರೀವೆ ಹೇರಂಬ ಜನನಿ ಶೋ- ಣಾಂಬರಾವೃತೆ ಶಂಭುಪ್ರಿಯೆ ದಯಾ- ಲಂಬೆ ಸುರನಿಕುರುಂಬಸನ್ನುತೆ ಅ.ಪ. ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ- ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ- ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ- ಗಾರೆ ರಿಪುಸಂಹಾರೆ ತುಂಬುರು ನಾರದಾದಿಮುನೀಂದ್ರ ನುತಚರ- ಸೂರಿಜನ ಸುಮನೋರಥಪ್ರದೆ 1 ವಿಶಾಲಸುಗುಣಯುತೆ ಮುನಿಜನ- ಲೋಲತರುಣಮರಾಳೆ ಸಚ್ಚರಿತೆ ನವಮಣಿ ಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ- ಬಾಲೆ ನೀಲತಮಾಲವರ್ಣೆ ಕ- ರಾಳಸುರಗಿ ಕಪಾಲಧರೆ ಸುಜ- ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ2 ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ- ಪರಾಕು ಶರಣಜನೈಕಹಿತದಾತೆ ಸುರನರ- ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ- ವಾಕುಕಾಯದಿಂದ ಗೈದಾ ನೇಕ ದುರಿತವ ದೂರಗೈದು ರ- ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3 ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ- ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ- ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ- ಲ್ಲಾಸೆ ಯೋಗೀಶಾಶಯಸ್ಥಿತೆ ವಾಸವಾರ್ಚಿತೆ ಶ್ರೀಸರಸ್ವತಿ ದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ4 ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ- ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ- ವಾಮಭಾಗ ಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯ ಶ್ರೀಮಹಾಲಕ್ಷ್ಮಿ ನಾರಾಯಣಿ ರಾಮನಾಮಾಸಕ್ತೆ ಕವಿಜನ- ಸೋಮಶೇಖರಿ5
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬಿದೆನೊ ನಂಬಿದೆನೊ ಅಂಬುಜಾಕ್ಷ ತೊಂಬಲಿಗೆ ಹಂಬಲಿಸಿ ಹಾರೈಸಿದೆ ನಿನ್ನ ಪ ಮೊದಲುಂಡ ಪಾಪದಲಿ ಕಳೆಗುಂದಿ ಕಳೆಗುಂದಿ ಮುದದಿಂದ ನಿತ್ರಾಣನಾದೆನಯ್ಯಾ ಪದುಮನಾಭನೆ ನಿನ್ನಭಯದೊಂಬಲನಿತ್ತು ವದನ ಚೇತನನಾಗುವಂತೆ ದಯಮಾಡೊ 1 ವಿಷವ ಸೇವಿಸಿದ ತರುಣನಂತೆ ಮೆಲವು ಭಾವಿಸದೆ ಬೀಳುತೀ ನೀ ನೆಲೆಗಾಣದೆ ಬಿಸಿಜಾಕ್ಷ ನೀನೆ ಕೃಪಾಳು ಎಂದೆಂದಿಗೆ ರಸ ಸುರಿವ ಸುರಿವ ಬಾಯದೊಂಬಲಾನಿತ್ತು ಸಲಹೊ2 ಆವದಾದರುವಲ್ಲೆ ಅನಿಮಿತ್ತ ಬಂಧು ಕೇಳು ಜೀವವೇ ನಿನ್ನ ಪಾದದಾಧೀನವೋ ಶ್ರೀವಧುರಮಣ ನಮ್ಮ ವಿಜಯವಿಠ್ಠಲ ನೀನೆ ದೇವ ಯನಗ ಹುದು ತೊಂಬಲನಿತ್ತು ಪೊರಿಯೊ 3
--------------
ವಿಜಯದಾಸ
ನಂಬಿದೆನೊ ನಿನ್ನ ಅಂಬುಜನಯನ ಕೃ ಪಾಂಬುಧೆ ದೃಢದಲಿ ಪ ಸಂಭ್ರಮದಲಿ ಕಿವಿ ತುಂಬುತಿರುವ ಆ ಡಂಬರ ವಚನಕೆ ಮುಂಬರಗೊಳ್ಳುತ ಅ.ಪ ನವ ಘನ ನಿಭಕಾಯ ನಿನ್ನಯ ಕರುಣಮಯ ಸಹಾಯ ವಿಲ್ಲದೆ ಬಿಗಿಯುತಿರುವ ಮಾಯಾ ಪಾಶವ ತೊರೆಯಲಳವೆ ಜೀಯಾ ನಿನ್ನಯ ದಯವ ಪಡೆದ ಪರಿಯನರುಹುವ ಯತಿವರೇಣ್ಯ ಗುರುಮಧ್ವರಾಯರ ಪರಮ ಸಮಯ ಸಾರಗಳನು ಸಂತತ ಶ್ರವಣ ಮನನ ಧ್ಯಾನಗಳಿಂದ ಪರಿಚಯ ಪಡೆದು ದು ಷ್ಟ ವಿಷಯಗಳಲಿ ಮತಿಯನು ಮುರಿಯುವಂತೆ ಕರುಣಿಸೋ ಸುಗುಣಾಲಯ 1 ನೀರಜದಳ ನೇತ್ರ ವರ ಸುಖ ಚಿನ್ಮಯೈಕ ಗಾತ್ರ ಸುಜನ ಮಿತ್ರ ಸುರವರ ಸರಸಿಜಭವ ಪುತ್ರ ರುಚಿರರ ಮುಕುಟಾಕ್ಷಪಾತ್ರ ನಿನ್ನಯ ವಿವಿಧ ಲೀಲೆಗಳು ಚಿತ್ರವಿಚಿತ್ರವು ಅರಿತೆನೆಂದು ತಿಳಿದು ಮೆರೆಯುತಲಿರುವ ನರರ ಮದವ ಮುರಿದು ದೈನ್ಯದಿಂದಲಿ ಮರೆತೆನೆಂದು ದಿನದಿನದಲಿ ಭಜಿಪರ ಪೊರೆವ ಪರಮ ಕರುಣಾರಸಮಯನೆ 2 ದೀನಭಕುತರನ್ನು ಪೊರೆಯುವ ದಾಸಿಯೆಂದು ನಿನ್ನ ಪೊಗಳುವ ಮಾನತತಿಗಳನ್ನು ಸಂತತ ಧ್ಯಾನ ಮಾಡಿ ಎನ್ನ ಕ್ಲೇಶವ ಮೌನದಿಂದ ಇನ್ನೂ ಸಹಿಸುತ ಜಾನಕೀಶ ತವ ಪಾದಕಮಲದ ರೇಣುವನ್ನು ಶಿರದಿ ಧರಿಸುತಲಿ ಅನು ಮಾನವನ್ನು ತೊರೆದು ಮುದದಿ ಸುವಿಮಲ ಜ್ಞಾನಮೂರ್ತೆ ಜ್ಞಾನಿವರ ಪ್ರಸನ್ನನೆ ನೀನೆ ಎನ್ನ ರಕ್ಷಕನೆಂದರಿಯುತ 3
--------------
ವಿದ್ಯಾಪ್ರಸನ್ನತೀರ್ಥರು
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು