ಒಟ್ಟು 12179 ಕಡೆಗಳಲ್ಲಿ , 134 ದಾಸರು , 5885 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜ್ಞಾನಕಿದೇ ನಡಿ ಕುರುಹು | ಶ್ರೀ ರಮಾನಾಥಾಂಘ್ರಿಯ ಕಾಣುವದರಿತು ಪ ಕೋಪ ತಾಪವ ಬಿಡಬೇಕು ಪಶ್ಚಾ | ತ್ತಾಪದಿ ವೈರಾಗ್ಯ ಘನ ಬಲಿಬೇಕು | ಪಾಪವಿರಹಿತಾಗಬೇಕು | ಗತಿ | ಸೋಪಾನವಾದಾ ಶಾಂತಿಯ ಜಡಿಬೇಕು 1 ಕರುಣ ಮೂರುತಿ ಆಗಬೇಕು ಸರ್ವ | ಧರೆಯು ಜನಕ ಪ್ರಿಯವಾಗಿರಬೇಕು | ನೆರೆ ಲೋಭವನು ಜರಿಬೇಕು ತನ್ನ | ತೆರನರಿ ತನ್ನವ ನೀಡಲಿಬೇಕು 2 ದುರಿತ ಭಯವ ಬಿಡಬೇಕು | ದುಃಖ | ದುರ್ವಾಣಿಯಲಿ ತಾ ಬಳಲದಿರಬೇಕು | ಹರಿಭಕ್ತಿ ದೃಢಗೊಳ್ಳಬೇಕು ಗುರು | ಬೋಧ ನಿಜವೆನಬೇಕು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜ್ಞಾನಪ್ರದ ನರಸಿಂಹ ವಿಠಲ ನೀ ಸಲಹೊ ಪ ಧೇನು ವತ್ಸದ ಧ್ವನಿಗೆ ತಾನೇವೆ ಬರುವಂತೆ ಅ.ಪ. ಕರ್ಮ ಪೂರ್ವಾರ್ಜಿತವ ನಿರ್ಮಲವ ಗೊಳಿಸುತ್ತಭರ್ಮ ಗರ್ಭನ ಜನಕ ಪೇರ್ಮೆಯಲಿ ಇವನಧರ್ಮ ಮಾರ್ಗದಿ ನಡೆಸು ಸುಜ್ಞಾನ ಮತಿಯಿತ್ತುಕರ್ಮನಾಮಕ ಹರಿಯೆ ಶರಣಜನ ಧೊರೆಯೆ 1 ಹರಿಯು ಸರ್ವೋತ್ತಮನು ಶಿರಿಯು ಆತನರಾಣಿಗುರು ವಾಯು ಸುರರೆಲ್ಲ ಹರಿಭೃತ್ಯರೆಂಬವರಮತಿಯನಿತ್ತವಗೆ ಸಂಸ್ಕøತಿಯ ಕ್ಲೇಶಗಳಪರಿಹರಿಸಿ ಪಾಲಿಪುದು ಪರಮ ಕರುಣಿಕಾ 2 ಪತಿ ಇರುವೆ ಮೂಕ ಪುರುಷರ ನೀನು ವಾಕ್ಪತಿಯ ಮಾಳ್ಪೆನಾಕೇಳ್ಪುದರಿದೇನೊ ಪಂಚ ಮುಖ ಭವವಂದ್ಯತೋಕನಿವ ಶರಣಗಿಹ ವ್ಯಾಕುಲವ ಕಳೆಯೋ 3 ಮಗುವಿನೊಚನವ ಕೇಳಿ ಜಿಗಿವೆ ಕಂಬದಲಿಂದನಗೆ ಮೊಗನೆ ತರಳೆಯಾ ಹಗರಣವ ಕಳೆದೇಖಗವರಧ್ವಜ ನಿನ್ನ ಬಗೆಬಗೆಯ ಲೀಲೆಗಳಮಿಗಿಲಾಗಿ ತೋರಿವಗೆ ನಗಧರನೆ ಹರಿಯೇ 4 ನಿತ್ಯತವ ಸ್ಮøತಿಯಿತ್ತು ಭೃತ್ಯನತಿ ಕಷ್ಟಗಳಕಿತ್ತೊಗೆದು ಮಧ್ವಮತ ತತ್ವ ತಿಳಿಸುತ್ತಾಗುಪ್ತ ಮಹಿಮನೆ ಗುರುಗೋವಿಂದ ವಿಠ್ಠಲನೆಭಕ್ತನುದ್ಧರಿಸೆಂದು ಪ್ರಾರ್ಥಿಸುವೆ ನಿನ್ನಾ 5
--------------
ಗುರುಗೋವಿಂದವಿಠಲರು
ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ ಪ ನಾನು ಎಂಬುದ ಬಿಟ್ಟ ಮೇಲೆ ನರಕವ್ಯಾತಕೆ ಅ.ಪ. ಮೃತ್ತಿಕೆ ಶೌಚ ಮಾಡದವನ ಆಚಾರವ್ಯಾತಕೆಸತ್ಯವಾದಿ ಆಗದವನ ನಂಬಿಗೆ ಯಾತಕೆ ||ಚಿತ್ತಶುದ್ಧಿ ಇಲ್ಲದವನ ವೈರಾಗ್ಯವ್ಯಾತಕೆಉತ್ತಮ ಹಿರಿಯರಿಲ್ಲದಂಥ ಸಭೆಯು ಯಾತಕೆ 1 ಪತಿಯ ಆಜ್ಞೆ ಮೀರಿದವಳ ವ್ರತಗಳ್ಯಾತಕೆಸತಿಗೆ ಅಳುಕಿ ನಡಿಯುವವನ ಸಾಹಸವ್ಯಾತಕೆ ||ಯತಿಯ ನಿಂದೆ ಮಾಡುವವನ ಮತಿಯು ಯಾತಕೆಅತಿ ವಿರೋಧ ಬಡಿಸುವಂಥ ಅಣ್ಣನ್ಯಾತಕೆ 2 ಹರಿಕಥೆಯ ಕೇಳದವನ ಕಿವಿಯು ಯಾತಕೆಮುರಹರನ ಮೂರ್ತಿಯ ನೋಡದಂಥ ಕಂಗಳ್ಯಾತಕೆ ||ಮರುತ ಮತವ ಪೊಂದದವನ ಬಾಳ್ವೆ ಯಾತಕೆಎರಡಾರು ನಾಮವಿಡದ ಶರೀರವೇತಕೆ3 ತಂದೆ ತಾಯಿ ಮಾತು ಕೇಳದ ಮಕ್ಕಳ್ಯಾತಕೆಬಂಧು ಬಳಗ ಉಳ್ಳದವನ ಭಾಗ್ಯವ್ಯಾತಕೆ ||ಬಂದ ಅತಿಥಿಗನ್ನವನಿಕ್ಕದ ಸದನವೇತಕೆ ಗೋ-ವಿಂದನಂಘ್ರಿ ಸ್ಮರಿಸದಂಥ ನಾಲಿಗ್ಯಾತಕೆ 4 ಮಕ್ಕಳನ್ನ ಮಾರಿಕೊಂಬ ತಂದೆಯಾತಕೆರೊಕ್ಕಕಾಗಿ ಬಡಿದಾಡುವ ತಮ್ಮನ್ಯಾತಕೆ ||ಕಕ್ಕುಲಾತಿ ಬಡುವ ಸಂನ್ಯಾಸವ್ಯಾತಕೆಠಕ್ಕು ಭಕುತಿ ಮಾಡುವಂಥ ದಾಸನ್ಯಾತಕೆ 5 ಆಗಿ ಬರದವರ ಅನ್ನ ಉಣ್ಣಲ್ಯಾತಕೆರೋಗವಾದ ನರಗೆ ಹೆಣ್ಣಿನ ಭೋಗವ್ಯಾತಕೆ ||ಯೋಗಿಯಾದ ಮೇಲೆ ದ್ರವ್ಯದ ಆಶೆಯಾತಕೆಭಾಗೀರಥಿಯ ಮಿಂದ ಮೇಲೆ ಪಾಪವ್ಯಾತಕೆ 6 ವೇದವನ್ನು ಓದದಂಥ ವಿಪ್ರನ್ಯಾತಕೆಕಾದೊ ರಣಕೆ ಅಂಜುವಂಥ ಕ್ಷತ್ರಿಯನ್ಯಾತಕೆ ||ವಾದವನ್ನು ಮಾಡುವಂಥ ಬಂಟನ್ಯಾತಕೆಸಾಧುಗಳಿಗೆ ಎರಗದವನ ಶಿರವಿದ್ಯಾತಕೆ 7 ಯಾತ್ರೆ ತೀರ್ಥ ಮಾಡದಂಥ ಪಾದವ್ಯಾತಕೆಪಾತ್ರರ ಸಂಗವಾಗದವನ ಜನ್ಮವ್ಯಾತಕೆ ||ಸ್ತೋತ್ರಕೆ ಮರುಳಾಗುವವಗೆ ಸಾಧನ್ಯಾತಕೆಪಾರ್ಥ ಸಖನ ತಿಳಿಯದವನ ಜ್ಞಾನವ್ಯಾತಕೆ 8 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆಅರಿತು ವಿದ್ಯ ಪೇಳದ ಉಪಾಧ್ಯನ್ಯಾತಕೆ ||ಹರುಷವನ್ನು ತಾಳದಂಥ ಜ್ಞಾನಿ ಯಾತಕೆಕರಣ ಶುದ್ಧಿ ಇಲ್ಲದವನ ಸ್ನೇಹವ್ಯಾತಕೆ 9 ಗಾಣ ಕಟ್ಟಿದೆತ್ತಿಗೆ ಗೆಜ್ಜೆಯಾತಕೆ ||ರಾಣಿ ಇಲ್ಲದವನು ಮಾಡುವ ಬದುಕು ಯಾತಕೆತಾನು ಉಣ್ಣದೆ ಪರರಿಗಿಕ್ಕದ ಧನವಿದ್ಯಾತಕೆ 10 ಧರ್ಮವಿಲ್ಲದೆ ರಾಜ್ಯ ಆಳುವ ಪ್ರಭುವಿದ್ದ್ಯಾತಕೆಮರ್ಮವರಿತು ನಡೆಯದಂಥ ಹೆಣ್ಣು ಯಾತಕೆ ||ನಿರ್ಮಲಾಂಗನಾದ ಮೋಹನ ವಿಠಲನ ಗುಣಕರ್ಮ ಕ್ರಿಯಾ ತಿಳಿದ ಮ್ಯಾಲೆ ನಿರ್ಣಯವ್ಯಾತಕೆ 11
--------------
ಮೋಹನದಾಸರು
ಜ್ಞಾನವನ್ನೇ ತಿಳಿದುಕೋ ಮನುಜ ಜ್ಞಾನವನ್ನೇ ತಿಳಿದುಕೋ ಪ ಸತ್ತು ಹುಟ್ಟಿಯೇ ಸತ್ತು ಮುಂದಣ ಜನ್ಮಕು ಮತ್ತುಮತ್ತು ಗಳಿಸಿಕೊಂಡು ವಿಪತ್ತು ಮತ್ತೆ ಬಂದಿದೆ ಮೃತ್ಯು 1 ಹಾದಿಯಿದೆ ಸಾಪು ಕಾಣದೆ ಬಿಡುವೆ ಆಪುಬಯಕೆ ಯೋನಿಯ ಕೂಪು ಹಾಕಿ ಹಾಕಿ ಭಾಪು 2 ಹಸಿವು ಬಿಡೋ ಹಸಿವು ಯಾಕೆ ಆದಿ ಪಶುವುಬಗುಳ ಬೇಡ ಹುಸಿಯು ನಾಚುತಿದೆ ಬಸಿರು3 ಹೆಚ್ಚ ಬೇಡ ಹೆಚ್ಚು ಅಹಂಕಾರ ಮುಚ್ಚುಓದಿಗೆ ಬೆಂಕಿಯ ಹಚ್ಚು ಮಾಡಿಕೊಂಡೆಯ ಕಿಚ್ಚು4 ಜ್ಞಾನವ ತಿಳಿಯಿನ್ನು ಯಮಗೆ ಕೊಡಬೇಡ ಬೆನ್ನುಆರುತಾನಿಹನೆನ್ನು ಚಿದಾನಂದನೆ ಎನ್ನ5
--------------
ಚಿದಾನಂದ ಅವಧೂತರು
ಜ್ಞಾನವಾವುದು ಅಜ್ಞಾನವಾವುದು ಮಾನವಾವುದು ದುಮ್ಮಾನವಾವುದು ಪ ಹರಿಯ ಸ್ಮರಣೆಯಿರಲದೊಂದು ಜ್ಞಾನವಲ್ಲವೆ ಕೊರಳ ಸೆರೆಯ ಕಾಣದಿಪ್ಪುದಜ್ಞಾನವಲ್ಲವೆ ಪರರ ಸತಿಯ ತೊರೆವುದೊಂದು ಮಾನವಲ್ಲವೆ ಪರರ ಸೇವೆಗಿರುವದವಮಾನವಲ್ಲವೆ 1 ಧನ್ಯರನ್ನು ಮನ್ನಿಸುವುದು ಜ್ಞಾನವಲ್ಲವೆ ಹೊನ್ನ ಹುದಿದು ಅನ್ನ ತೊರೆವುದಜ್ಞಾನವಲ್ಲವೆ ಅನ್ಯರೊಡವೆ ಕಳುವುದವಮಾನವಲ್ಲವೆ 2 ಹಸಿದವರನು ಕಂಡು ಯಿಕ್ಕಲು ಜ್ಞಾನವಲ್ಲವೆ ಹುಸಿಕನಾಗಿ ಅಸತ್ಯ ಮಾಳ್ಪುದು ಅಜ್ಞಾನವಲ್ಲವೆ ಹಸನವಾಗಿ ನಡೆವ ಕೃತ್ಯ ಮಾನವಲ್ಲವೆ ಎಸೆವ ಜೂಜು ತಪ್ಪಲವಮಾನವಲ್ಲವೆ 3 ಸ್ಥಿರವಿದಲ್ಲವೆಂಬ ಜೀವಿ ಜ್ಞಾನಿಯಲ್ಲವೆ ನರಕ ಭಯವ ಮರೆವ ಜಡನಜ್ಞಾನಿಯಲ್ಲವೆ ಹಿರಿಯರಿಂದ ಅನಿಸಿಕೊಂಬುದು ಮಾನವಲ್ಲವೆ ಬರಿಯ ಕ್ಷುದ್ರವೆಸಗಲವಮಾನವಲ್ಲವೆ 4 ಕ್ರೋಧವನ್ನು ತೊರೆದ ಮನುಜ ಜ್ಞಾನಿಯಲ್ಲವೆ ವೇದವನ್ನು ಜರೆದ ನರನಜ್ಞಾನಿಯಲ್ಲವೆ ಸೋದರರು ಕೂಡಿಯಿರಲು ಮಾನವಲ್ಲವೆ ಮಾದಿಗರ ಸಂಗವದವಮಾನವಲ್ಲವೆ 5 ಗುರು-ಹಿರಿಯರನುಸರಿಸೆ ಜ್ಞಾನವಲ್ಲವೆ ಸಿರಿಯ ವೇಶ್ಯಸ್ತ್ರೀಗೆ ಕೊಡಲಜ್ಞಾನವಲ್ಲವೆ ದೊರೆಯು ಕರೆದು ಉಚಿತವೀಯೆ ಮಾನವಲ್ಲವೆ ತಿರುಕರಂತೆ ತಿರಿವುದು ಅವಮಾನವಲ್ಲವೆ 6 ವರಾಹತಿಮ್ಮಪ್ಪ ಒಲಿದರದು ಜ್ಞಾನವಲ್ಲವೆ ಮರೆದು ಕ್ಲೇಶಕೆರಗುವುದಜ್ಞಾನವಲ್ಲವೆ ಕರೆದು ಪರರಿಗಿಕ್ಕುವುದು ಮಾನವಲ್ಲವೆ ಕರೆಕರೆಯ ಮಾತು ಅವಮಾನವಲ್ಲವೆ 7
--------------
ವರಹತಿಮ್ಮಪ್ಪ
ಜ್ಞಾನವೆಂಬುದಕೇನು ಕ್ಷಣ ನಡಿಯು ಕಠಿಣ ಅನುಭವದ ನಿಜಖೂನ ಅಗಮ್ಯ ಸ್ನಾನ ಧ್ರುವ ಅಹಂ ಬ್ರಹ್ಮಾಸ್ಮಿ ಎಂಬ ಸೋಹ್ಯ ತಿಳುವದೆ ಗುಂಭ ಬಾಹ್ಯ ರಂಜನದೆ ಡಂಭ ದೇಹದಾರಂಭ ಸೋಹ್ಯ ತಿಳಿದುಕೊಂಬ ಗುಹ್ಯಗುರುತದ ಇಂಬ ಮಹಾಮಹಿಮೆಲೆ ಉಂಬ ಸಹಸ್ರಕೊಬ್ಬ 1 ಮೂರ್ತಿ ಶ್ರೀಪಾದ ಬೋಧ ಆದಿತತ್ವದ ಭೇದಿಸದಲ್ಲದ ಭೇದ ಮದಮತ್ಸರದ ಕ್ರೋಧ ಹಾದಿ ತಿಳಿಯದು ವಸ್ತುದ ಉದಯಸ್ತಿಲ್ಲದ 2 ಜ್ಞಾನಕ ಜ್ಞಾನೊಡಮೂಡಿ ಖೂನಕ ಬಾವ್ಹಾಂಗ ಮಾಡಿ ನಾ ನೀನೆಂಬುದು ಈಡಾಡಿ ಅನುಭವ ನೋಡಿ ಮನೋನ್ಮದ ನಡಿ ಅನುದಿನವೆ ಕೊಂಡಾಡಿಘನಕ ಮಹಿಪತಿ ನೀ ಕೂಡಿ ನೆನಿಯೊ ಬೆರೆದಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜ್ಞಾನಶೂನ್ಯಗಾತ್ಮದನುಭವವ್ಯಾಕೆ ಹೀನ ಸಂಸಾರಿಗೆ ಪರದ ಸುದ್ದ್ಯಾಕೆ ಪ ಕತ್ತೆಗೆ ಬೆಲೆಯುಳ್ಳ ಉತ್ತಮ ಜೀನ್ಯಾಕೆ ಕೃತ್ರಾಮಗೆ ಸತತ ಸತ್ಪಥದ ಬೋಧ್ಯಾಕೆ ತೊತ್ತಿಗ್ಹೋಗುವಗರಸೊತ್ತಿಗಧಿಕಾರವ್ಯಾಕೆ ಮಿಥ್ಯೆಮತಿಗ್ಯಾತಕ್ಕೆ ಉತ್ತಮರ ನೆರೆಯು 1 ನಂಬಿಗಿಲ್ಲದವಗ್ಯಾಕೆ ಗುಂಭದ ಮಾತುಗಳು ಜಂಬಕೊಚ್ಚುವವಗ್ಯಾಕೆ ಗಂಭೀರತನವು ಅಂಬುಜಾಕ್ಷನ ಚರಿತ ಡಂಭನಿಗ್ಯಾತಕ್ಕೆ ಗೊಂಬೆಯಾಟಗಾರಗ್ಯಾಕೆ ತಂಬೂರಿ ತಬಲ 2 ದಾನಧರ್ಮದ ಮಹಿಮೆ ಜೀನನಿಗೆ ಏತಕ್ಕೆ ಗೋಣು ಮುರಿವವಗ್ಯಾಕೆ ದೈನ್ಯಮಾತುಗಳು ನಾನಾ ಬಯಕೆಯುಳ್ಳ ಮಾನವಗೆ ಭಕ್ತಜನ ಪ್ರಾಣ ಶ್ರೀರಾಮ ನಿಮ್ಮ ಧ್ಯಾನವಿನ್ಯಾಕೆ 3
--------------
ರಾಮದಾಸರು
ಜ್ಞಾನಾನಂದ ಸ್ವರೂಪ ಭಾನುಕೋಟಿ ಪ್ರದೀಪ ನಾನಾದೋಷ ನೀರ್ಲೇಪ ಮೀನ ರೂಪ ಪ ಏನು ಅರಿಯದ ದೀನ ಭಕುತನಿಗೆ ಸಾನುರಾಗದಿ ಜ್ಞಾನವನೀಯೋ ಅ.ಪ ನಿಗಮಗಳೆಲ್ಲವು ಬಗೆ ಬಗೆಯಿಂದ ನಿನ್ನ ಅಗಣಿತ ಗುಣಗಳ ಪೊಗಳುತಲಿದ್ದರು ಸಿಗದ ನಿನ್ನ ನಾನು ಪೊಗಳಲಳವೆ ಪೇಳೊ ಸಿರಿಯರಸನೆ ನಿನ್ನ ಚರಣಕಮಲದಲಿ ಪರತರ ಭಕುತಿಯ ದೊರಕಿಸೆಲೊ ಸರಸಿಜ ಜನಕನೆ ಮರೆತಪರಾಧವ ಕರುಣದಿಂದಲಿ ಎನ್ನ ಕರಗಳ ಪಿಡಿಯೋ 1 ಒಂದು ದಿನವು ಸುಖ ಗಂಧವನರಿಯದೆ ಭವ ಸಿಂಧುವದನನೆ ತೊಂದರೆ ಪಡುತಿಹೆ ಸುಂದರ ವದನನೆ ತಂದೆ ಎನಗೆ ನೀನೆ ಬಂಧುವೆನಗೆ ನೀನೆ ಮಂದ ಬುದ್ಧಿಯಲಿ ನಿಂದ್ಯನಾದೆನಗೆ ಕುಂದು ಸಹಸ್ರವು ಸಂಧಿಸಿತು ಇಂದು ಮನಕೆ ಆದ ತಂದುಕೊಳ್ಳದೆಲೆ ಮಂದಹಾಸದಲಿ ಬಂದೆನ್ನ ಪೊರೆಯೋ 2 ಹಿತವೆಂದು ಭವವನು ಅತಿ ಮೋಸಹೋದೆನು ಮತಿಗೆಟ್ಟು ನಿನ್ನನು ಸ್ತುತಿಸಲಿಲ್ಲವೊ ನಾನು ಮಿತಿಮೀರುತಿರಲೆನ್ನ ಸ್ಥಿತಿಯ ನೀನರಿಯುತ ಮತಿ ಬೇರೆ ಮಾಡಿ ಮರೆತೆಯೇನೊ ಶ್ರೀಪತೆ ಕ್ಷಿತಿಯೊಳೆನಗೆ ಗತಿ ಇತರರ ಕಾಣೆನÉೂೀ ಪತಿ ನೀನಿರೆ ವಸುಮತಿಯೊಳಗೆ ಪತಿತಪಾವನನೆ ಪ್ರಸನ್ನನಾಗಿ ದಿವ್ಯ ಸತತ ಸುಖಕೆನಗೆ ಪಥವನು ತೋರೊ 3
--------------
ವಿದ್ಯಾಪ್ರಸನ್ನತೀರ್ಥರು
ಝಣ ಝಣ ಝಣರೆಂದು ಕುಣಿವುದ ನೋಡೆ ಫಣಿಪತಿ ಶಯನನು ಕಾಣುವ ನೋಡೆ |ನಾಡೆ ಪ ಕಿಣಿ ಕಿಣಿ ಕಿಂಕಿಣಿ ಕಿಣಿರವ ಕೇಳೇ ಮಣಿ ಮಣಿದಾತನ ನಾಮವ ಪಾಡೇ ಅ.ಪ ನೋಡುವ ನಲಿಯುವ ಹೊಂಗೊಳಲೂದುವ ಪಾಡುವ ಕರೆಯುವ ನಗಿಸುವ ನಗುವಾ ಮಾಡೆ ವಂದನೆಗಳ ಸಂತಸಗೊಳುವಾ ಬೇಡುವರಿಷ್ಟವ ಕರುಣದಿ ಕೊಡುವಾ 1 ಬೃಂದಾವನದಾನಂದದ ನೋಟಾ ಮಂದಗಮನೆಯರ ನಲವಿನ ಕೂಟಾ ಇಂದಿರೆಯರಸ ಮಾಂಗಿರಿಪತಿಯಾಟಾ ಸಂದಪುದೆಮಗೆ ಬಾ ಕೃಷ್ಣನೊಳಾಟಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಟೀಕಾಕೃತ್ಪಾದ ಕರುಣಾಕರ ಗುರು ಶ್ರೀಕಾರಸರಿತವಾಸ ನಾಕಾಧಿಪನೆ ಮನಶೋಕಾ ಹರಿಸಿ ನಿತ್ಯ 1 ಪೂರ್ಣಬೋಧರ ಮತಾರ್ಣವಚಂದಿರ ನಿರ್ಣಯಿಸಿದೆ ಟೀಕಾರ್ಣವದೊಳು ಸುಧ ಉಣ್ಣಿಸಿದೆಯೊ ಗ್ರಂಥ ವರ್ಣಿಸಿಇರುವೆ ಸತ್ಯ 2 ಮಿಥ್ಯಾವಾದಿಗಳ ಸತ್ಯ ತತ್ತ್ವವೆಲ್ಲ ಕತ್ತರಿಸಿದೆ ನಿತ್ಯ ದೈತ್ಯೋನ್ಮತ್ತರನೆಲ್ಲಾ ಸದೆದೆ3 ನಾಕಾಪತಿಗೆ ದೈತ್ಯಲೋಕಗಳಾ ಬಾಧೆ ತಾ ಕಳೆಯಲು ನಿತ್ಯ ಶ್ರೀಕರದಮೃತವ ಶ್ರೀಕಾಂತನಿತ್ತಂತೆ ನೀ ಸುಧೆಯನು ತಂದೆ 4 ದಶಪ್ರಮತಿಸುಶಾಸ್ತ್ರಶರಧಿಯೊಳು ವಾಸಿಸುವೆಯೊ ನಿತ್ಯ ಮೀಸಲಮನ ಕೊಟ್ಟೆನ್ನಾಸೆಯ ಹ ರಿಸಿ ಪದಸೇವೆಯ ಕೊಡೊ ನಿತ್ಯ5 ಪಾಕಶಾಸನ ಸುಖ ಬೇಕಾಗಿ ತೊರೆದು ನೀ ನೇಕಾಂತದಲಿ ನಿಂತೇ ಲೋಕಸುಖದಿ ಭವಶೋಕದಲ್ಲಿಹ ಎ ನ್ನ ಕಾಪಾಡುವುದು ನಿತ್ಯ6 ಶೇಷಾವೇಶ ಆವೇಶಾಮಹಿಮ ಎನ್ನ ದೋಷರಾಶಿಯ ಕಳೆದು ಶೋಷಿಸು ಮನಕಲ್ಮಷವಿಷವನೆಲ್ಲ ನಿ ಶ್ಶೇಷವ ಮಾಡಿ ಸಲಹೊ 7 ಹಲವು ವಿಷಯದ ಹಂಬಲದಿಂದ ಎನ್ನ ಜ್ಞಾನ ಹೊಲಬುಗೆಟ್ಟುದು ನಿತ್ಯ ಅಲವಬೋಧರ ತತ್ತ್ವ ಲವಮಾತ್ರವಾದರು ನೀ ಎನಗೆ ಪಾಲಿಸೊ8 ಮುಕ್ತಿಮಾರ್ಗಕೆ ಜ್ಞಾನಭಕ್ತಿವೈರಾಗ್ಯಗುರು ಭಕ್ತಿಯೆ ಮುಖ್ಯಕಾರಣ ಯುಕ್ತಶಾಸ್ತ್ರ ಪ್ರಸಕ್ತಿ ಇಲ್ಲದ ತ್ವ ದ್ಭಕ್ತನಾದೆನ್ನ ಸಲಹೊ9 ಅಕ್ಷೋಭ್ಯ ಕಟಾಕ್ಷದಿ ಯತಿ ಹ ರ್ಯಕ್ಷನಾಗಿಹೆ ದೀಕ್ಷಾ ಶಿಕ್ಷೆಮಾಡಿ ಪರಪಕ್ಷವಾದಿಗಳನ್ನು ಸ ತ್ಶಿಕ್ಷಕನಾಗಿ ಮೆರೆದೆ10 ಮರುತಾಂತರ್ಗತ ಶ್ರೀ ವೇಂಕಟೇಶನ ಪಾದ ಚರಣಕಮಲಮಧುಪ ನಿರುತ ನೀ ಕರುಣಿಸು ಉರಗಾದ್ರಿವಾಸವಿಠಲನ ನಿಜದಾಸ 11
--------------
ಉರಗಾದ್ರಿವಾಸವಿಠಲದಾಸರು
ಟೀಕಾಚಾರ್ಯರ ಸ್ತೋತ್ರ ದಯದಿ ಪಾಲಿಸೋ ಜಯತೀರಥ ರಾಯಾ | ಅಕ್ಷೋಭ್ಯರ ತನಯಾ ಪ ಅತ್ಯಂತ್ಹರುಷದಿ ಎತ್ತಾಗಿರುತಿರಲೂ ಶ್ರೀ |ಆನಂದ ತೀರಥರೂನಿತ್ಯ ಪಠಿಸುವೋ ಪುಸ್ತಕ ಹೊರುತಿರಲೂ |ಗುರುರಾಯರು ಪೇಳಿದತತ್ವ ಗ್ರಂಥವನೆ ಕಿವಿಯಲಿ ಕೇಳುತಲೀ | ತಲೆಯನು ತೂಗುತಲೀಮತ್ತೆ ಪುಟ್ಟಿದ್ಯೋ ಮಂಗಳವೇಡೆಯಲೀ | ಅತಿ ಮತಿವಂತರಲೀ 1 ದೇಶಪಾಂಡೆರಾ ಕೂಸಾಗಿ ಜನಿಸೀ | ಘನ ರಾವುತನೆನಿಸೀದೇಶ ದೇಶದೋಳ್ ಸೈನ್ಯವನೇ ಚರಿಸೀ | ಹಣವನ್ನೇ ಗಳಿಸೀವಾಸುಕಿಯೆಂಬೋ ಗುರುತನೆ ತಪ್ಪಿಸೀ | ನದಿಗೇ ನೀರಡಿಸೀಶ್ರೀಶನಾಜ್ಞೆಯೊಳಿವರನೆ ಕರೆತರಿಸೀ |ಶಿಖೆ ಸೂತ್ರವ ತೆಗೆಸೀ2 ಹಿಂಡು ಜನ ಅಂಡಲಿಯುತ ಬದೂ | ಅಕ್ಷೋಭ್ಯ ತೀರಥರಾಕಂಡು ಭೇಟಿಯಾ ಮಾಡುತಲೇ ನಿಂದೂ | ಧೋಂಡೋ ರಘುನಾಥನಹೆಂಡತಿ ಗಂಡನ ಕೂಡಿಸಬೇಕೆಂದೂ | ಸುಮ್ಮನೆ ಕರೆತಂದೂ - ಪ್ರಚಡ ಸರ್ಪನಾ ರೂಪವ ತಾಳ್ದಂದೂ ಭಯವ ಪಟ್ಟರಂದೂ 3 ಮಧ್ವ ಶಾಸ್ತ್ರಗಳನುದ್ಧರಿಸುತಲದನಾ | ಟೀಕೆಯನೇ ಮಾಡೀವಿದ್ವಜ್ಜನರಿಗೆ ತಿದ್ದಿಯೆ ಪೇಳುತಲೀ |ನಾನಾ ಬಗೆಯಿಂದಲಿಪದ್ಧತಿ ತಿಳಿಸಿದ ಗುರುರಾಯರು ನೀವು | ಯತಿವರ ಸುರಧೇನುಅದ್ವೈತರ ಗುರು ವಿದ್ಯಾರಣ್ಯರ | ಗೆದ್ದ ಸಿಂಹ ನೀನೂ 4 ಆಷಾಢ ಬಹುಳ ಪಂಚಮಿಯೂ ಬರುತಾ ಕಳೆಬರವನೆ ಬಿಡುತಾವ್ಯಾಸ ವಿಠ್ಠಲನ ಪಾದದಲೇ ನಿರುತಾ | ಮಳಖೇಡದೊಳುವಾಸಿಪನೆಂಬೋ ಬಲು ಪ್ರಖ್ಯಾತಾ |ನಿಜಗುಣ ಗಣನೀತಾಬ್ಯಾಸರದಲೆ ಕೊಂಡಾಡಿದರೆ ನಿತ್ಯಾ | ಇಷ್ಟಾರ್ಥವನಿತ್ತಾ 5
--------------
ವ್ಯಾಸವಿಠ್ಠಲರು
ಡಂಕವ ಸಾರಿದನೋ ಯಮ ತನ್ನ ನಗರದಿ ಘಂಟೆಯ ನುಡಿಸಿದನು ಪ ಡಂಕಸಾರಿದ ತನ್ನ ತುಂಟದೂತರಿಗ್ವೊ ಯ್ಕುಂಠನ ದಾಸರ ತಂಟೆಯು ಬೇಡೆಂದು ಅ.ಪ ಕಾಲಕಾಲದಿ ಹರಿಯಕಥೆ ಕೀರ್ತ ನಾಲಿಸುವರ ನೆರೆಯು ತಾಳದಮ್ಮಡಿ ಸಮ್ಮೇಳದೊಡನೆ ಆ ನೀಲಶ್ಯಾಮನ ಭಜಿಪರಾಳಿನಾಳನುಕಂಡು ಕಾಲನಾಲುಗಳೆಂದ್ಹೇಳದೆ ಬನ್ನಿರೆಂದು 1 ಮಂದಿರಂಗಳದಿ ವೃಂದಾವನ ದಂದ ಕಂಡಾಕ್ಷಣದಿ ಸಿಂಧುಶಯನ ಬಂಧುಭಕ್ತರ ಮಂದಿರವಿದೆಂದು ಹಿಂದಕ್ಕೆ ನೋಡದೆ ಸಂದ್ಹಿಡಿದೋಡಿ ಪುರ ಬಂದು ಸೇರಿರೆಂದು 2 ಪರರಂಗನೆಯರ ಸ್ಮರಿಸುವ ಪರಮ ನೀಚರನ್ನು ನರಹರಿ ಸ್ಮರಣೆಯ ಅರಿಯದ ಆಧಮರ ಕರುಣಿಸದೆ ತುಸುಮುರಿದು ಮುಸುಕಿಕಟ್ಟಿ ದರದರನೆಳೆತಂದು ಉರಿಯೊಳ್ಪೊಯಿರೆಂದು 3 ಪರದ್ರವ್ಯವಪಹರಿಸಿ ಲಂಚದಿಂದ ಸರುವ ತನ್ನದೆನಿಸಿ ನಿರುತ ಮಡದಿಮಕ್ಕಳೊರೆವ ದುರಾತ್ಮನರ ಗುರುತಳನೆಳತಂದು ಕರಿಗಿದಸೀಸಬಾಯೊಳ್ ವೆರಸಿ ಜನಕಕೊಂಡದುರುಳಿಸಿಬಿಡಿರೆಂದು 4 ವೇಣು ಕರದಿ ಪಿಡಿದು ಬಾಣಾರಿ ಧ್ಯಾನದೊಳಗೆ ಬರೆದು ಜಾನಕೀಶನ ಲೀಲೆ ಗಾನದಿಂ ಪಾಡುತ ಆನಂದಿಪ ಮಹಜ್ಞಾನಿಗಳನು ಕಂಡು ಕಾಣದಂತೆ ಸಿಕ್ಕ ಜಾಣ್ಣುಡಿದೋಡಿರೆಂದು 5 ಇಂದಿರೇಶನದಿನದಿ ಅನ್ನವನು ತಿಂದ ಮೂಢರ ಭರದಿ ತಂದು ಒದೆದು ಮಹಗಂಧಮದು ರ್ಗಂಧನಾರುವ ಮಲತಿಂದು ಬದುಕಿರೆಲೊ ಎಂದು ಮನೆಹೊರಗಿನ ಮಂದಿರದಿಡಿರೆಂದು 6 ವಿಮಲ ತುಳಸೀಮಣಿಯ ಧರಿಸಿ ಅಮಿತ ಮಹಿಮನ ಚರಿಯ ವಿಮಲಮನಸರಾಗಿ ಕ್ರಮದಿ ಬರುವ ಶ್ರೀ ರಾಮದಾಸರ ಪಾದಕಮಲಗಳನು ಕಂಡು ಯಮದೂತರೆನ್ನದೆ ನಮಿಸಿ ಬನ್ನಿರೆಂದು 7
--------------
ರಾಮದಾಸರು
ಡಂಭ ತೋರಿದರೆ ಬಂತೆ ಇಂಬವಾಗದ ಗುಂಭಗುರುತ ಪಥ 1 ಶಬ್ದ ಜ್ಞಾನದಿಂದ ನಿಗಗೇನು ಲಬ್ಧ ಲಬ್ಧಾ ಲಬ್ಧ ತಿಳಿಯಗೊಡುದು ನಿನ್ನ ಪ್ರಾರಬ್ಧ ಧ್ರುವ ನೀರ ಕಡಿದರೆ ಬಂತೆ ಸಾರಸದ ನವನೀತ ಮಾರಪೀತನಂಘ್ರಿ ಗುರುತಾಗುದೇ ಹಿತ 2 ಹರಿವ ಮೃಗಜಲವಾಯಿತೆ ಅರಿತುಕೊಂಬಗೆ ಗಂಗಾಮೃತ ಅಮೃತ ಹಸ್ತ 3 ಮಣಿ ಆದೀತೆ ರಾಜಿಸುವ ನವರತ್ನ ನಿಜತತ್ವ ತಿಳಿಯುದೊಂದೇ ವಾಜಿಯ ಯತ್ನ 4 ಹೊಂದಿ ಬದುಕಿರೊ ಮಹಿಪತಿ ತಂದೆಯ ಗುರುಪಾದ ಬೋಧ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆಎಂದಿಗಿದ್ದರೊಂದು ದಿನ ಸಾವು ತಪ್ಪದು ಪ ಬಟ್ಟೆ ಕಾಣದು1 ಹತ್ತು ಎಂಟು ಲಕ್ಷ ಗಳಿಸಿ ಮತ್ತೆ ಸಾಲದೆಂದು ಪರರಅರ್ಥಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರುಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ 2 ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲಅಣ್ಣತಮ್ಮ ತಾಯಿ ತಂದೆ ಬಯಸಲಾಗದುಅನ್ನ ವಸ್ತ್ರ ಭೋಗಕಾಗಿ ತನ್ನ ಸುಖವ ಕಾಣಲಿಲ್ಲಮಣ್ಣುಪಾಲು ಆದಮೇಲೆ ಯಾರಿಗಾಹುದೊ 3 ಬೆಳ್ಳಿ ಬಂಗರಿಟ್ಟುಕೊಂಡು ಒಳ್ಳೆ ವಸ್ತ್ರ ಹೊದ್ದುಕೊಂಡುಅಳ್ಳಾಚಾರಿ ಗೊಂಬೆಯಂತೆ ಆಡಿ ಹೋಯಿತುಹಳ್ಳ ಹರಿದು ಹೋಗುವಾಗ ಗುಳ್ಳೆ ಬಂದು ಒಡೆಯುವಂತೆಉಳ್ಳೆ ಪೊರೆಯಂತೆ ಕಾಣೊ ಸಂಸಾರದಾಟವು 4 ವಾರ್ತೆ ಕೀರ್ತಿಯೆಂಬುವೆರಡು ಸತ್ತ ಮೇಲೆ ಬಂದವಯ್ಯವಸ್ತು ಪ್ರಾಣನಾಯಕನು ಎಲ್ಲಿ ದೊರಕ್ಯಾನುಕರ್ತೃ ಕಾಗಿನೆಲೆಯಾದಿಕೇಶವನ ಚರಣಕಮಲನಿತ್ಯದಲ್ಲಿ ಭಜಿಸಿ ಸುಖಿಯಾಗಿ ಬಾಳೆಲೊ 5
--------------
ಕನಕದಾಸ
ಡೀ ಡೀ ಅಡೋನೆ ರಂಗ ಡೀ ಡೀ ಆಡೋನೆ | ಓಡಿ ಓಡಿ ಬಂದು ತಲಿಗೆ ನೀ ಡೀ ಡೀ ಡೀ ಎಂದು ಪ ವಜ್ರ | ಹರಳು ತೆತ್ತಿಸಿದ ದ್ಯುಮಣಿ || ಸರಿ ಸರಿ ಸರಿ ಸರಿ ಹಾಯಿದು 1 ಚಂದ್ರಶೇಖರ ಹಂಸವಾಹನ| ಇಂದ್ರಾದ್ಯರಾಕಾಶದಲಿ ಧುಂ ಧುಂ || ಧುಂ ಧುಂ ದುಂದುಭಿ ನುಡಿಸೆ | ಬಂದೆ ಇಕ್ಕೋ ಬಂದೆ ಬಂದೆನುತ 2 ಪಿಂತಿರುಗಿ ಪೋಗಿ ನೀನು | ಅಂತರಿಸಿ ದೂರದಿಂದ || ನಿಂತು ವಿಜಯವಿಠ್ಠಲರೇಯಾ |ಇತ್ತಿಂ ತ್ತಿಂ ತ್ತಿಂ ತ್ತಿಂ ತ್ತಿಂ ತ್ತೆನುತಲಿ 3
--------------
ವಿಜಯದಾಸ