ಒಟ್ಟು 5908 ಕಡೆಗಳಲ್ಲಿ , 129 ದಾಸರು , 4329 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಚ ವೃಂದಾವನದಿ ಮೆರೆಯುತಿರುವಾ ||ಪಂಚಾಸ್ಯ ಸಂದಿಷ್ಟ ವೈಭವವ ಕೇಳಿ ಪ ವಿಪುಲ ಮತಿ ಪದಕರ್ಹ ಕಪಿಪ ರಾಮನ ಭಂಟಸ್ವಪನದಾಖ್ಯಾನವನೆ ಶಪಥ ಪೂರ್ವಕದೀ |ವಿಪ್ರಗೋಸುಗವಾಗಿ ಸುಪ್ರಕಟ ಗೈದಿಹರು ಅಪ್ರತಿಮ ಹಯಮೊಗನ ಸುಪ್ರೇಮ ಪಿಡಿದೂ 1 ಆಖ್ಯಾನ ಪೆಟ್ಟಿಗೆಯು ಅಂಧಕಾರದಲಿದ್ದುವ್ಯಾಖ್ಯಾತೃ ವೇದನಿಧಿ ಜನ್ಮತಾಳುತಲೀ |ವ್ಯಾಖ್ಯಾನ ಗೈದಾಗ್ಯು ಭಾವ ತಿಳಿಯದಲೇವೆಪ್ರಖ್ಯಾತಿ ಪಡೆಯದಲೆ ಬೀಗ ಮುದ್ರಿತದೀ 2 ಅಂಧ ಭಾವದೊಲೊಬ್ಬ ಪಂಗು ಭಾವದಲೊಬ್ಬ ಇಂದಿರೇಶನ ಮಹಿಮೆ ಪ್ರಕಟ ಗೈಯ್ಯುವಲೀ|ಅಂಧ ಪಂಗುನ್ಯಾಯ ಆಶ್ರಯಿಸಿ ಪ್ರಕಟಿಸುವಮಂದ ಜನರುದ್ಧಾರ ಕಾರ್ಯ ಗೈಸುತಲೀ 3 ಅನುಮಾನ ತೀರಥರ ಶಾಸ್ತ್ರವನೆ ಮಥಿಸುತ್ತತನುಮನ ಧನಧಾನ್ಯ ತೃಣವೆಂಬ ಕೀಲಿಯಲೀ |ಜ್ಞಾನ ಪೆಟ್ಟಿಗೆ ಬೀಗ ಮುದ್ರೆಯನೆ ತೆರೆಯುತ್ತ ಮನದ ಪಾತ್ರಿಯಲುಣ್ಣಿ ಆಖ್ಯಾನದನ್ನಾ 4 ಸಂತ ಸಂಗದಲಿಂದ ಮಂಥಿಸಲು ತತ್ವಗಳಅಂತ ರಂಗದ ಕದವು ತೆರೆದಂತರಾತ್ಮನನುಕಂತು ಪಿತನಾದ ಗುರು ಗೋವಿಂದ ವಿಠಲನ್ನಅಂತರಂಗದಿ ಕಾಂಬ ಪಂಥವಿತ್ತವರಾ 5
--------------
ಗುರುಗೋವಿಂದವಿಠಲರು
ಪಂಚೀಕರಣಮಾಡಿ ತಾ ಸಂಚರಿಸುವ ಪ ಪಂಚೀಕರಣತಿಳಿಯದೆ ಪ್ರಪಂಚದೊಳು ಮುಳುಗಿ ನಾ ವಂಚಿತನಾದೆ ವಿರಿಂಚಿಭಕ್ತಿಗೆ ಅ.ಪ ಸಚ್ಚಿದಾನಂದ ರೂಪ ವ್ಯಾಪ್ತರೂಪಿ ನಾರಾಯಣ ಅಪ- ಅಚ್ಯುತ ತನ್ನಿಚ್ಛೆಯಿಂದ ವೈಕೃತಾಕಾಶಕ್ಕೆ ಅಂಭ್ರಣಿದೇವಿಯರನೆ ಮುಖ್ಯ ಮಾಡಿದಾ 1 ಗುಣರಾಶಿಯೊಳು ಸತ್ವಕ್ಕೆ ಶ್ರೀದೇವಿಯರು ಮುಖ್ಯ ರಜಕೆ ಭೂದೇವಿ ತಮಕೆ ದುರ್ಗಾದೇವೇರು ಸತ್ಯಜ್ಞಾನಾನಂದದಯೆ ಮೌನಪಂಚೇಂದ್ರಿಯ ಜಯ ಅಕ್ರೌರ್ಯಗುರು ಸೇವೆಯೇ ಸತ್ವಕಾರ್ಯವು2 ತಮಕ್ರೋಧ ಅಹಂಕಾರ ಮದೋನ್ಮಾದ ಚಪಲೋದ್ಯೋಗ ಡಂಭ ಸ್ವಚ್ಛಂದರಜದ ಕಾರ್ಯವು ತಮದ ಕಾರ್ಯ ಅಜ್ಞಾನ ಮೋಹ ನಿದ್ರಾಲಸ್ಯ ಬುದ್ಧಿಶೂನ್ಯ ತಾಪವಾದಿ ಹಿಂಸಾಕಾರ್ಯವು 3 ಸತ್ವಪ್ರಾಚುರ್ಯದಿ ಮದ ಗುಣತ್ರಯವೈಷಮ್ಯಹೊಂದಿ ಶ್ರೇಷ್ಠಕಾರ್ಯಕೆ ಮಹತ್ತತ್ವವಾಯಿತು ಸಾತ್ವತಾಂಪತಿಯ ಇಚ್ಛೆಯಿಂದ ಮಹತ್ತತ್ವದಿ ಅಹಂಕಾರ ತತ್ವವೆಂಬುದೇರ್ಪಟ್ಟಿತು 4 ತೈಜಸ ತಾಮಸ ಅಹಂಕಾರ ವೆನುತಲಿ ಮೂರಹಂ- ಕಾರದಿ ಮೂರು ರುದ್ರರೂಪಗಳು ಬ್ರಹ್ಮವಾಯು ಶೇಷರಿಂದುದಯಿಸಿದರು5 ವೈಕಾರಿಕ ಅಹಂಕಾರದಿ ದೇವತಾ ದೇಹ ಮನಸು ತೈಜಸದಿಂದ ದಶೇಂದ್ರಿಯ ಹುಟ್ಟಿತು ತಾಮಸಾಹಂಕಾರದಿಂದುತ್ಪನ್ನವಾದುವು6 ಸರ್ವ ಮಿಳಿತಮಾಡಿ ಬ್ರಹ್ಮಾಂಡವನೆ ಸೇರಿ ಹರಿಯು ಪದ್ಮನಾಭರೂಪದಿಂದ ಶಯನಗೈದನು ಸರ್ವಲೋಕೋದ್ಧಾರ ಹರಿಯು ನಾಭಿಯೊಳು ಪದ್ಮ ತೋರಿ ಪದುಮದಲ್ಲಿ ಪದ್ಮಸಂಭವನಾಸೃಜಿಸಿದ 7 ಸರ್ವರಂತರ್ಯಾಮಿ ಸಕಲಜೀವರನ್ನು ಸೃಷ್ಟಿಗೈಸಿ ಜೀವಯೋಗ್ಯತಾ ಕಾರ್ಯ ನಡೆಸುತಿರುವನು ಸರ್ವಜೀವಕಾರ್ಯವು ಪಂಚವಿಂಶತಿತತ್ವ ಈ- ಶರಿಂದಲೆ ಕಾರ್ಯನಡೆಯತಿರುವುದು8 ಶಬ್ದತನ್ಮಾತ್ರದಿಂದ ಆಕಾಶ ಹುಟ್ಟಿತು ವಾಯುಹುಟ್ಟಿತು ಸ್ಪರ್ಶತನ್ಮಾತ್ರದಿ ರೂಪತನ್ಮಾತ್ರದಿ ಅಗ್ನಿಭೂತ ಹುಟ್ಟಿತು ಆಗ ರಸತನ್ಮಾತ್ರದಿ ಅಷ್ಟು ಹುಟ್ಟಿತು 9 ಈ ಪರಿವಿರಾಟದಿಂದುಯಿಸಿದವು ಆಕಾಶ ಕೊಂದೆ ಶಬ್ದಗುಣವು ಮಾತ್ರ ಇರುವುದು ಅಹುದು ವಾಯವಿಗೆ ಶಬ್ದ ಸ್ಪರ್ಶವೆರಡುಗುಣಗಳು10 ತೋರುತಿರ್ಪುದಗ್ನಿ ಶಬ್ದಸ್ಪರ್ಶರೂಪ ಗುಣಗಳು ಗುಣ ಶಬ್ದ ಸ್ಪರ್ಶ ರೂಪ ರಸ ಗಂಧವೈದು ಪರಿ ಭೂತಪಂಚಕಗಳ ಅರಿವುದು 11 ಪಂಚಭೂತಗಳು ತಮ್ಮ ಸ್ವಾಂಶಗಳ ಭಾಗಗೈಸಿ ಪ್ರ- ಪಂಚ ಕಾರ್ಯಕಿತ್ತ ಪರಿಯದೆಂತೆನೆ ಆಕಾಶ ದರ್ಧಭಾಗ ಭೂತ ಪ್ರೇತ ಪಿಶಾಚಿಗಳಿಗೂ ಉಳಿ ಪಾದ ಪಾದವೆನ್ನೆ ಜೀವಕೋಟಿಗೂ12 ವಾಯು ತನ್ನರ್ಧಭಾಗ ಪಕ್ಷಿ ಪನ್ನಗಾದಿಳಿಗೂ ಪಾದ ಭಾಗ ಜೀವಕೋಟಿಗೂ ಅಗ್ನಿತನ್ನರ್ಧಭಾಗ ದೇವ ಋಷಿಗಳಿಗೂ ಮಿಕ್ಕಧರ್Àದೊಳ್ ಪಾದಭಾಗ ಜೀವಕೋಟಿಗೂ13 ಅಪ್ಪುತನ್ನರ್ಧಂಶ ಜಲಚರಪ್ರಾಣಿಗಳಿಗು ಮಿಕ್ಕರ್ಧದೊಳು ಪಾದಭಾಗ ಜೀವಕೋಟಿಗೂ ಪೃಥ್ವಿ ತನ್ನರ್ಧಂಶ ಜಡಜೀವಕೋಟಿಗೂ ಮಿಕ್ಕ ರ್ಧದೊಳ್ ಪಾದಭಾಗ ಜೀವಕೋಟಿಗೂ14 ಪೃಥ್ವಿ ಅಪ್ಪು ತೇಜೋ ವಾಯು ಆಕಾಶಗಳು ಸೂಕ್ಷ್ಮರೂಪದಿಂದೆರಡೆರಡಾದವು ಆಕಾಶತನ್ನರ್ಧಾಂಶದಲ್ಲಿ ವಾಯ್ವಗ್ನಿ ಅಪ್ಪು ಪೃಥ್ವಿಗಳಿ ಗೆ ಕೊಟ್ಟು ಸ್ವಾಂಶ ಅಂತಃಕರಣವೆನಿಸಿತು 15 ವಾಯು ಸ್ವಾಂಶದಿಂದುದಾನವೆಂದೆನಿಸಿ ಮಿಕ್ಕ ಪೃಥ್ವೈ ಪ್ತೇಜಾಕಾಶಗಳಿಗೆ ತನ್ನ ಚಲನ ಕೊಟ್ಟಿತು ಅಗ್ನಿ ತನ್ನಸ್ವಾಂಶದಿಂದ ಚಕ್ಷುಸೇಂದ್ರಿಯ ವೆನಿಸಿ ವಾಯ್ವಾಕಾಶಅಪ್ಪು ಪೃಥ್ವಿಗುಷ್ಣ ಕೊಟ್ಟಿತು 16 ಅಪ್ಪು ತನ್ನ ಸ್ವಾಂಶದಿಂ ರಸವೆಂದೆನಿಸಿ ಮಿಕ್ಕ ವಾಯ್ವಾಕಾಶಾಗ್ನಿ ಪೃಥ್ವಿಗೆ ದ್ರವವ ಕೊಟ್ಟಿತು ಪೃಥ್ವಿತನ್ನ ಸ್ವಾಂಶದಿಂ ಗಂಧವೆಂದೆನಿಸಿ ಮಿಕ್ಕ ಅಪ್ತೇಜವಾಯ್ವಾಕಾಶಕೆ ಕಠಿಣ ಕೊಟ್ಟಿತು 17 ಭೂತಪಂಚಕಗಳಿಗೆ ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ ರೂಪವು ಅಧಿಷ್ಠಾನರಾಗಿ ಅವರಂತರ್ಯಾಮಿಯಾಗಿ ಅನಿರುದ್ಧಾದಿ ಐದು ಭಗವನ್ಮೂರ್ತಿ ಇರುವುದು 18 ನಾಮರೂಪ ವರ್ಣಗುಣ ಸ್ವಭಾವ ತೇಜ ಸುಮುಖ ದೇವರಶಕ್ತಿ ಅಕ್ಷರ ಕ್ರಿಯಾ ಎಂಬೀ ಹತ್ತು ಗುಣಗಳು ಭೂತ ಒಂದಕ್ಕೆ ತಿಳಿದು ಉಪಾಸನ ಮಾಳ್ಪಾದೂ ಬುಧರು ಎಲ್ಲರು 19 ನಾಮವೇ ಆಕಾಶ ರೂಪ ಒಟ್ಟು ಭಾವ ಬಯಲು ವರ್ಣ ಕಪ್ಪು ಗುಣಶಬ್ದ ಕ್ರಿಯ ಅನುಗ್ರಹ ಮುಖವೇ ಈಶಾನ ದೇವತೆ ಪರಶಿವಶಕ್ತಿ ಪರಾಶಕ್ತಿ ಅಕ್ಷರವೇ ನಾದವು20 ನಾಮ ವಾಯುರೂಪ ಷಟ್ಕೋಣ ವರ್ಣನೀಲ ಮುಖ ತತ್ಪುರುಷ ದೇವತೆ ಸದಾಶಿವ ಶಕ್ತಿ ಅಕ್ಷರ ಬಿಂದುವೆನಿಪುದು 21 ನಾಮ ಅಗ್ನಿರೂಪ ಮುಕ್ಕೋಣವರ್ಣ ರಕ್ತವರ್ಣ ಮುಖ ಅಘೋರ ದೇವತೆ ರುದ್ರಶಕ್ತಿ ಪಾರ್ವತಿ ಅಕ್ಷರ ಮಕಾರ 22 ನಾಮ ಅಪ್ಪುರೂಪ ಅಧರ್Éೀಂದು ಶ್ವೇತವರ್ಣ ಸ್ವಭಾವದ್ರವ ಗುಣ ಮಾಧುರ್ಯ ವಿಷ್ಣುಶಕ್ತಿ ಅಕ್ಷರಉಕಾರ ಎಂದು ಪೇಳ್ವರು 23 ನಾಮವೇ ಪೃಥ್ವಿರೂಪ ಚತುಷ್ಕೋಣ ವರ್ಣ ಹೇಮ ಸ್ವಭಾವವೇಕಠಿಣ ಕ್ರಿಯ ಸೃಷ್ಟಿ ಗುಣವೆ ಗಂಧವು ಮುಖಸದ್ಯೋಜಾತ ದೇವತೆ ಬ್ರಹ್ಮಶಕ್ತಿ ಸರಸ್ವತಿ ಅಕ್ಷರ ಅಕಾರವು 24 ಉಕ್ತರೀತಿ ಹತ್ತು ಗುಣಗಳೊಳ್ ಭೂತ ಒಂದ- ಕ್ಕೆತಿಳಿದು ಈ ಜ್ಞಾನೇಂದ್ರಿಯಗಳೆಂತಾದವು ಎಂದರಿವುದು ಆಕಾಶಸಮಾನಾಂಶ ಅಗ್ನಿಯು ಮುಖ್ಯಾಂಶದಿರೆ ಶ್ರೋತ್ರೇಂದ್ರಿಯ ಹುಟ್ಟಿ ತೋರುತಿರುವುದು25 ವಾಯುಸಮಾನಾಂಶ ಬಂದು ಅಗ್ನಿ ಮುಖ್ಯಾಂಶದಿರೆ ತ್ವಗೇಂದ್ರಿಯವು ತಾನೆ ತೋರುತಿರುವುದು ಜಿಹ್ವೇಂದ್ರಿಯವು ತೋರುತಿರುವುದು26 ಘ್ರಾಣೇಂದ್ರಿಯವು ತಾನೆ ತೋರುತಿರುವುದು ಅಗ್ನಿ ಸ್ವಾಂಶದಿಂದ ಚಕ್ಷುಷೇಂದ್ರಿಯವೆಂದು ಹಿಂದೆಯೇ ಈ ವಿವರ ಪೇಳಿರುವುದು27 ಪೃಥ್ವಿಸಮಾನಾಂಶದೊಡನೆ ಆಕಾಶ ಸಮಾಂಶಸೇರೆ ವಾಗೇಂದ್ರಿಯವೆ ತಾನೆ ತೋರುತಿರುವುದು ಪೃಥ್ವಿ ಮುಖ್ಯಾಂಶದೊಡನೆ ವಾಯು ಸಮಾಂಶಸೇರೆ ಘ್ರಾಣೇಂದ್ರಿಯವು ತಾನೆ ತೋರುವುದು 28 ಪೃಥ್ವಿಮುಖ್ಯಾಂಶದೊಡನೆ ಅಗ್ನಿ ಸಮಾಂಶಸೇರೆ ಪಾದೇಂದ್ರಿಯವು ತಾನೆತೋರುತಿರ್ಪದು ಪೃಥ್ವಿ ಮುಖ್ಯಾಂಶರೊಡನೆ ಅಪ್ಪು ಸಮಾವಾಂಶ ಸೇರೆ ಪಾಯೇಂದ್ರಿಯವೆಂದು ತೋರುತಿರ್ಪುದು29 ಪೃಥ್ವಿಸ್ವಾಂಶವೇ ಗುಹ್ಯೇಂದ್ರಿಯವೆಂದು ಪೂ ರ್ವೋಕ್ತ ರೀತಿಗಣನೆ ತರುವುದು ಈ ರೀತಿ ಕರ್ಮೇಂದ್ರಿಯಗಳೆಲ್ಲ ಪೃಥ್ವಿ ತತ್ವದಿಂದಲೇ- ರ್ಪಟ್ಟು ಬೆಳಗುತಿರುವುದು30 ಆಕಾಶ ಸಮಾನಾಂಶ ಅಪ್ಪು ಮುಖ್ಯಾಂಶದಿರೆ ಶಬ್ದ ವಾಯು ಸ್ವಯಾಂಶದಿ ಅಪ್ಪು ಮುಖ್ಯಾಂಶದಿ ಸ್ಪರ್ಶತೋರ್ಪುದು ಅಗ್ನಿ ಸಮಾನಾಂಶ ಅಪ್ಪು ಮು ಅಪ್ಪು ಮುಖ್ಯಾಂಶದಿಂದಲೆ31 ಅಪ್ಪುಸ್ವಯಾಂಶವೇ ರಸವು ಎಂದೆನಿಸಿತು ತನ್ಮಾತ್ರಪಂಚಕಕ್ಕೆ ಮೂಲ ಅಪ್ಪುತತ್ವವು ಪ್ರಾಣಾದಿಪಂಚಗಳ ಮುಂದೆ ವಿವರಿಸಿಹುದು ವಾಯುತತ್ವವೇ ಅದಕೆ ಮುಖ್ಯಕಾರಣ32 ವಾಯು ಮುಖ್ಯಾಂಶದೊಳು ಆಕಾಶ ಸಮಾನಾಂಶ ಸೇರೆ ಸಮಾನ ವಾಯುವೆಂತೆಂದೇರ್ಪಟ್ಟಿತು ವ್ಯಾನ ವಾಯು ಎಂತೆಂದೇರ್ಪಟ್ಟಿತು 33 ವಾಯು ಮುಖ್ಯಾಂಶದೊಳು ಅಪ್ಪು ಸಮಾನಾಂಶ ಸೇರೆ ಅಪಾನವಾಯುವೆಂತೆಂದೇರ್ಪಟ್ಟಿತು ವಾಯು ಮುಖ್ಯಾಂಶದೊಡನೆ ಪೃಥ್ವಿಸಮಾನಾಂಶ ಸೇರಲು ಪ್ರಾಣ ವಾಯು ಉತ್ಪನ್ನವಾಯಿತು34 ವಾಯುವಿನ ಸ್ವಯಾಂಶವೇ ಉದಾನವಾಯುವೆನಿಸಿತು ಮುಂದೆ ವಿವರಿಸುವುದು ಜ್ಞಾನ ಪಂಚಕ ಈ ಜ್ಞಾನ ಪಂಚಕಕ್ಕೆ ಆಕಾಶ ತತ್ವವೇ ಮುಖ್ಯಕಾರಣವೆಂದು ಬುಧರು ಪೇಳ್ವರು35 ಆಕಾಶ ಮುಖ್ಯಾಂಶದಿ ವಾಯು ಸಮಾನಾಂಶ ಸೇರಿ ದಾಗಲೆ ಮನಸು ಎಂಬುವುದು ಹುಟ್ಟಿತು ಆಕಾಶ ಮುಖ್ಯಾಂಶದಿ ಅಗ್ನಿ ಸಮಾನಾಂಶ ಸೇರಿ ದಾಗಲೆ ಬುದ್ಧಿ ಎಂಬುದು ಗೋಚರವಾಯಿತು 36 ಸೇರೆ ಚಿತ್ತವೆಂಬುದು ವ್ಯಕ್ತವಾಯಿತು ಆಕಾಶ ಮುಖ್ಯಾಂಶದೊಳು ಪೃಥ್ವಿಸಮಾನಾಂಶ ಸೇರಿ ಅಹಂಕಾರವೆಂಬುದೇರ್ಪಟ್ಟಿತು 37 ಆಕಾಶ ಸ್ವಾಂಶವೇ ಕತೃತ್ವವೆಂದೆನಿಸಿತು ಈಪರಿಯ ತಿಳಿವುದು ಜ್ಞಾನಪಂಚಕ ಜ್ಞಾನೇಂದ್ರಿಯ ಕರ್ಮೇಂದ್ರಿಯ ಪಂಚತನ್ಮಾ ತ್ರಗಳಿಗೆ ಆಧ್ಯಾತ್ಮಿಕಾದಿಭೌತಿಕದೇವತೆಗಳ ತಿಳಿವುದು 38
--------------
ಉರಗಾದ್ರಿವಾಸವಿಠಲದಾಸರು
ಪಂಢರಿನಾಥ ವಿಠಲ | ತೊಂಡನನು ಸಲಹೊ ಪ ಅಂಡಜಾದಿಪತುರಗ | ಕುಂಡಲಿಯ ಶಯನಾ ಅ.ಪ. ಭವ ಸಮುದ್ರಕೆ ಪೋತ | ತವಪಾದವಾಶ್ರಯಿಸಿಬವಣೆಗಳ ಕಳೆವೆನೆನೆ | ತವಕದಿಂದಿರುವಾ |ಇವನ ಕೈ ಪಿಡಿಯುತ್ತ | ಧೃವವರದ ಸಲಹೋಮಾಧವನೆ ಭಿನ್ನವಿಪೆ ಶ್ರೀ | ಪವನ ವಂದಿತನೇ 1 ಅಂತರಂಗದ ದೈತ್ಯ | ಸಂತತಿಯು ಕೊಡುತಿಪ್ಪಸಂತಾಪ ಹರಿಸಿ ಮ | ಧ್ವಾಂತರಾತ್ಮಾ ಹರಿಯೆಸಂತತವು ತವನಾಮ | ಚಿಂತೆಯಲ್ಲಿರಿಸುತ್ತಸಂತಸವ ಬಡಿಸೊ ಶ್ರೀ | ಕಂತುಹರಸಖನೇ 2 ಇಂದು | ಆಶಿಸುತ್ತಿಹನೇ |ಲೇಸಾದ ಸತ್ಪಂಥ | ದಾಶಯವ ತಿಳಿಸುತ್ತದಾಸನಾಗೆಂದೆನುತ | ಆಶಿಷವನೀವೇ 3 ಹರಿಗುರೂ ಸದ್ಭಕ್ತಿ | ಪರತತ್ವ ಸುಜ್ಞಾನಮರುತ ಮತ ದೀಕ್ಷೆಯನು | ವಿಷಯ ವೈರಾಗ್ಯ |ಕರುಣಿಸುತ ತರಳನ್ನು | ಪೊರೆಯೆಂದು ಬಿನ್ನೈಪೆಕರಿವರದ ಕಮಲಾಕ್ಷ | ಕಾರುಣ್ಯ ನಿಧಿಯೇ 4 ಗಾನಲೋಲನೆ ಇವಗೆ | ಧ್ಯಾನ ಸಾಧನ ಕೊಟ್ಟುಕಾಣಿಸೋ ಹೃದ್ಗುಹದಿ | ಮೌನಿಜನವಂದ್ಯ |ಜಾಣಗುರೂಗೋವಿಂದ | ವಿಠಲ ಮಧ್ಭಿನ್ನತವನೀನಾಗಿ ಸಲಿಸೆಂದು | ಆನಮಿಸಿ ಬೇಡ್ವೆ5
--------------
ಗುರುಗೋವಿಂದವಿಠಲರು
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪತಿ ಎನಿಸಿ | ವೀಣೆಯನು ಪಿಡಿಯುತ್ತಲೀ ||ಕ್ಷೋಣಿ ಬೆಳಗಾವಿ ಬ್ರಾಹ್ಮಣ | ಶ್ರೇಣಿಯಲಿ ನೀ ನಿಂತೆಯೋ ||ಕಾಣೆನೊ ನಿನಗೆಣೆಯ | ಕಾಣೆ ಕರುಣಿಗಳರಸ ಜ್ಞಾನಿ ಜನ ಮನೊವಾಂಛಿತಾ |ಮಾಣದಲೆ ನೀ ನೀವೆ | ಪ್ರಾಣ ಪದಕನೆ ಹನುಮಜ್ಞಾನ ಭಕುತಿಯ ಬೇಡುವೇ 1 ವಾತ ವ್ರಾತ ಕಿನ್ನಣೆಯುಂಟೆಮಾತುಳಾರಿಯ ದೂತ ಜಯೆ ಜಾತಾ ||ಸೋತು ಬಲು ಭವದೊಳಗೆ | ಆರ್ತನಾಗುತ ನಿನ್ನ ಕಾತುರೆತಲಿಂ ಪ್ರಾರ್ಥಿಪೇ 2 ವೃಂದಾವನಾರ್ಯರಿಂದ್ವಂದಿತವು ಎಂದೆನಿಪ ವೃಂದಾವನಿಲ್ಲಿ ಇಹುದೂ |ವೃಂದಾರ ಕೇಂದ್ರ ಜನ | ಬಂದಿಲ್ಲಿ ರಾಜರ |ವೃಂದಾವನರ್ಚಿಸುವರೋ |ನಂದನನು ದಶರಥಗೆ | ನಂದನನು ದೇವಕಿಗೆ | ನಂದನನು ಸತ್ಯವತಿಗೇ |ಒಂದೊಂದು ಹಯಶೀರ್ಷ | ಅಂದರೂಪಗಳಿಂದ ನಂದನನು ಭಕ್ತ ಜನಕೇ 3 ಜೀವಾಂತರಂಗದಲಿ | ಜೀವಾಂತರಾತ್ಮನನ ದ್ವೈವಿಧ್ಯ ರೂಪ ಸೇವಾ |ತಾವಕದಿ ನೀ ಮಾತರಿಶ್ವಾಖ್ಯನೆಂದೆನಿಸಿ ಸೇವಿಸುವೆ ಘರ್ಮೋಕ್ತದಿ ||ಜೀವ ಸಕಲೋತ್ತಮನೆ | ದಾವ ಶಿಖಿ ಭವವನಕೆದೇವ ಬಲಿಭುಜ ಮಾರುತೀ |ದೇವಾದಿ ವಂದ್ಯ ಗುರು | ಗೋವಿಂದ ವಿಠ್ಠಲನಭಾವದಲಿ ತೋರಿ ಪೊರೆಯೊ 4
--------------
ಗುರುಗೋವಿಂದವಿಠಲರು
ಪತಿ ತನಯೇ ಪ ಆರು ನಿನಗೆ ಸರಿ ಮೂರು ಲೋಕದೊಳುವೃತ್ರಾರಿಗಳಿಂದಾರಾಧಿತಳೇ ಅ.ಪ. ಅಗಜೆ ಎನ್ನ ವದನಾ | ಮಾಡಲಿ | ನಗಧ5ಗುಣಸ್ತವನಾಖಗ ವಹ ಸಖ ಶಿವ | ಮೃಗ ಪಾಣಿಯ 5iÉುಹಗಲಿರುಳಲಿ ಹರಿ ಗಾಯನ ಮಾಡಿಸೇ 1 ಮನಸಿಜಾರಿಯ ಜಾಯೇ | ಮನ್ಮನ | ಚಪಲ ಬಿಡಿಸು ತಾಯೇಕನಸಿಲಿ ಮನಸಿಲಿ ಘನ ವಿಷಯಂಗಳನೆನೆವ ಕೊಡದೆ ಹರಿ ಧ್ಯಾನವನೀಯೇ 2 ಲೋಕ ಪಾವನ ಮೂರ್ತೇ | ಪಾಲಿಸು | ಏಕದಂತನ ಮಾತೇನೋಕನೀಯ ಗುರು ಗೋವಿಂದ ವಿಠಲನಜೋಕೆಯಿಂದ ನೆನೆ ನೆನೆಯುವ ಮಾತೇ 3
--------------
ಗುರುಗೋವಿಂದವಿಠಲರು
ಪತಿ ತನುಜ ಕರುಣಿಸೋ ಹರಿ ನಿನ್ನವ ನೆನಿಸೋ | ಸಿರಿಪತಿ ತವ ನಾಮಾಮೃತ ಫಲನುಣಿಸೋ ಪ ನಿನ್ನ ದಾಸರ ಸಂಗವನುದಿನ ಬಲಿಸೋ | ಘನ ವಿಚಾರಕ ಮನವೆನ್ನ ನಿಲಿಸೋ 1 ಮಂಗಳಂಘ್ರಿಯ ಕುಂಬ ಕಂಗಳದೆರಿಸೋ | ರಂಗಭಕುತಿ ಅಂತರಂಗ ದೆಚ್ಚರಿಸೋ 2 ಜನುಮಕ ಬಹಭವ ಪರಿಹರಿಸೋ | .........................................3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪತಿ ಪಾಹಿ | ರುದ್ರದೇವ ಪ ರುದ್ರದೇವ ಅದ್ರಿಜೆ ರಮಣನೆ | ಭದ್ರವ ಕೊಟ್ಟುದ್ದರಿಸೆನ್ನ ಅ.ಪ. ಭುಜಗ ಪಾವನಿ | ಗಂಗಾಧರನೇ 1 ದಿನಮಣಿ ಸೋಮ | ಅನಲೇಕ್ಷಣನೆಮನುಜ ಸಿಂಹಾಂಕಿತ | ಅನಘನ ಸೇವಿಪ2 ರಾಮ ತಾರಕ | ಆ ಮಹ ಮಂತ್ರವಭಾಮಿನಿ ಗಿರಿಜೆಗೆ ಪ್ರೇಮದಿಂದೊರೆದೆ 3 ಕುಸುಮ ಕುಸುಮ 5ಭೃಂಗ 4 ಸುರವರೇಣ್ಯ ಗುರು |5ೂೀವಿಂದ ವಿಠಲನಕರುಣವ ದೊರಕಿಸು | ಹರ ಮಹದೇವ 5
--------------
ಗುರುಗೋವಿಂದವಿಠಲರು
ಪತಿ ವಿಠಲ | ಉದ್ದರಿಸೊ ಇವಳ ಪ ಮೋದದಾಯಕನಾಗಿ | ಶ್ರೀದ ಶ್ರೀಹರಿಯೇ ಅ.ಪ. ದಾಸರಾಯರ ಕರುಣ | ವಾಶ್ರಯಿಸಿ ದಿನದಿನದಿಲೇಸು ಕೊಂಡಾಡುತಲಿ | ಮೇಶ ದಾಸರನೂಭಾಸುರ ಸುಗಾನ ಉ | ಲ್ಲಾಸದಲಿ ಮೈಮರೆದುಕೇಶವನ ಗುಣವನಧಿ | ಈಸುವಂತೆಸಗೋ 1 ವ್ಯಾಜ ಕರುಣೀಮಾಜದಲೆ ವೆಂಕಟನ | ನೈಜ ರೂಪವ ಕಂಡವ್ಯಾಜದಲ್ಲಿಂಕಿತಳು | ವಾಜಿ ಮುಖ ಹರಿಯೇ 2 ವಲ್ಲಭೆಯು ಶ್ರೀ ತುಳಸಿ | ಚೆಲ್ವಶಿಲೆ ಸುತ್ತುತಲಿನಲ್ಲ ಹರಿಪರಿ ಪೂರ್ಣ | ಎಲ್ಲೆಡೆಯಲೆಂಬಾಸೊಲ್ಲನಿವಳಿಗೆ ತೋರಿ | ಸಲ್ಲಿಸಿಹ ಹರಿಸೇವೆಬಲ್ಲವರ ಬಲ್ಲರೋ | ಘುಲ್ಲಕರಿಗಲ್ಲಾ 3 ಹರಿಗುರೂ ಸದ್ಭಕ್ತಿ | ಗುರು ಹಿರಿಯರ ಸೇವೆ ಕರುಣಿಸುತ ಕನ್ಯೆಯನು | ಪೊರೆಯುವುದು ಸತತಗಿರಿಜೆ ದರ್ಶನ ಫಲಕೆ | ಸರುವ ಮಂಗಳವಿತ್ತುನಿರುತ ಸಲಹೆಂದಿವಳ | ಪ್ರಾರ್ಥಿಸುವೆ ಹರಿಯೇ 4 ಮಧ್ವರಾಯರ ಮತದಿ | ಶುದ್ಧ ಬುಧಿಯನಿತ್ತುಮಧ್ವೇಶ ಹರಿಪಾದ | ಹೃದ್ಗುಹದಿಕಾಂಬಅಧ್ಯಾನಲ್ಲಿವಳ | ಬದ್ಧಳನೆ ಮಾಡಿ ಪೊರೆಮಧ್ವಾಂರಾತ್ಮ ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಪತಿ ವಿಠಲ | ರಕ್ಷಿಸೊ ಇವಳಾ ಪ ಪಕ್ಷೀಂದ್ರ ವಹ ಹರಿಯೆ | ಅಕ್ಷಯ್ಯ ಫಲದಾ ಅ.ಪ. ಮೋದ ತೀರ್ಥರ ಪ್ರೀಯಬೋಧಿಸೀ ತತ್ವ ಸಂ | ಧಾನವನೆ ಈಯೋ 1 ಫಣಿ ಶಾಯಿ | ಪ್ರಹ್ಲಾದ ವರದಾ 2 ಭವ ಭಂಗ ಕಳೆಯಲು ಸುಜನಸಂಗವನೆ ಕೊಟ್ಟು ಹರಿ | ಕಾಪಾಡ ಬೇಕೋಸಂಗರದಿ ಮೈದುನನ | ಭಂಗವಿಲ್ಲದೆ ಕಾಯ್ದೆಸಂಗೀತ ಲೋಲ ಸುಖ | ಶೃಂಗಾರ ಮೂರ್ತೇ 3 ಜ್ಞಾನಾನು ಸಂಧಾನ | ಸಾನು ಕೂಲಿಸಿ ಇವಳಪ್ರಾಣ ಪ್ರಾಣನು ನಿನ್ನ | ಧ್ಯಾನ ಮಾಳ್ಪಂತೇಮಾನಸಾದಲಿ ನಿಂತು | ಚೊದನೆಯ ಗೈಯ್ಯುತ್ತಗಾನ ಮಾಡಿಸೊ ದೇವ | ನಿನ್ನ ಮಹಿಮೆಗಳು4 ಪಾವನಾತ್ಮಕ ದೇವ | ಪಾವನ್ನ ತವ ಮಹಿಮೆಆವಾಗಲೂ ತುತಿಪ | ಭಾವವನೆ ಇತ್ತೂ |ಶ್ರೀವರ ಶ್ರೀ ಗುರೂ | ಗೋವಿಂದ ವಿಠ್ಠಲನೆಕಾವುದಿವಳನು ಎಂದು | ಪ್ರಾರ್ಥಿಸುವೆ ನಿನ್ನಾ 5
--------------
ಗುರುಗೋವಿಂದವಿಠಲರು
ಪತಿ ಪೋದನೆಂದು ಶೋಕಿಸುವುದ್ಯಾಕೆ ಶ್ರೀ - ಪತಿಯು ಇರಲಾಗಿ ಮರುಳೆ ಪ ಪ್ರತಿ ಪ್ರತಿ ಜನ್ಮದಿ ಜತೆ ಮಾಡಿದ ಪಂಚ - ಕಾಯ ಸತ್ಯ ಸ್ಥಿರವಲ್ಲವೇ ಮರುಳೆ ಅ.ಪ ನೋತ ಪುಣ್ಯಾಪುಣ್ಯದ ಫಲ ವ್ರಾತ ಸುಖ ಸುಖವಿತ್ತು ಬರಿದಾಗುವುದು ನಿತ್ಯವಾಗಿ ಸುಖವೆ ಇರಲೆಂದು ಬೇಡಿದರೆ ವ್ಯರ್ಥಧಾವತೆ ಅಲ್ಲದೆ ಸಾರ್ಥಕೆಲ್ಲಿ ಮರುಳೆ 1 ಸೃಷ್ಟಿಯಲಿ ಎಲ್ಲರೂ ನಷ್ಟವಾಗುವರಲ್ಲದೆ ಶ್ರೇಷ್ಠರಾಗಿ ಬಾಳುವರೊಬ್ಬರಿಲ್ಲ ಎಷ್ಟು ಶೋಕಿಸಿದರು ಪೋದ ಕಾಷ್ಠ ಬರಲರಿಯದು ಎ- ಳ್ಳಷ್ಟು ಲಾಭ ಇದರಿಂದ ಇಲ್ಲ ಮರುಳೆ2 ಮುಟ್ಟಿ ಕಟ್ಟಿದ ತಾಳಿಯ ಸಂಬಂಧ ಕೊಟ್ಟ ಹರಿ ತಾ ತಟ್ಟನೆ ಒಯ್ದ ಮೇಲೆ ದುಷ್ಟವೆನ್ನದಲೆ ಇಷ್ಟವೆಂದೆಣಿಸಲು ಸೃಷ್ಟಿಪತಿಯು ತುಷ್ಟನಾಗುವ ಮರುಳೆ 3 ಸರಿಯಲ್ಲಾ ಬರಿದೆ ಚಿಂತಿಸುವುದು ನಿನಗೆ ಕರೆಕರೆಯು ಹೆಚ್ಚುವುದು ಮುಂದೆ ಬಹಳ ಹರಿಕಥೆಯ ಕೇಳು ಹರಿದಾಸರೊಳ್ ಬೀಳು ಹರಿಗೆ ಪೇಳು ನಿನ್ನಯ ಗೋಳು 4 ಇನ್ನಾದರೂ ನೀನು ಹರಿಯ ಸಂಕಲ್ಪವಿದೆಂದು ನಿನ್ನ ಮನದೊಳು ತಿಳಿದುಕೊಂಡು ಘನ್ನ ಮಹಿಮಾ ವಿಜಯ ರಾಮಚಂದ್ರವಿಠಲನ್ನ ಸನ್ನುತಿಸಲು ಮುನ್ನೆ ಹತಿಯಾಗುವುದು ಮರುಳೆ 5
--------------
ವಿಜಯ ರಾಮಚಂದ್ರವಿಠಲ
ಪತಿತ ಪಾವನರಂಗ ಸತತ ಕಾಯೊ ಗತಿಯಾರು ನಿನ್ನುಳಿದು ಶ್ರುತಿವಿನುತ ಗೋಪಾಲ ಪ ಆದಿಮೂಲನು ನೀನು ಆದಿರಹಿತನೆ ಸ್ವಾಮಿ ಸೇವ್ಯ ಸೇವಕನ ಕೃಷ್ಣ ಭಾದ್ಯ ಭಾಧಕ ರಮಾರಾಧ್ಯ ಚಿತ್ಸುಖ ಸುಖ ಸಿಂಧು ಕಾದುಕೋ ನಿನ್ನವನ ಆದಿರೋಗವÀ ಕಳೆದೂ 1 ನಾರಿ ದ್ರೌಪದಿ ಮಾನ ಕಾಯ್ದ ವಿಖ್ಯಾತನೆ ಶೌರಿ ಕ್ರೂರ ನಕ್ರನ ಕೊಂದು ಕರಿಯ ಪೊರೆದೆ ಹಾರಿ ಹಾವಿನ ಹೆಡೆಯ ಮೆಟ್ಟಿ ನರ್ತನಗೈದೆ ಸನ್ನುತ ಪಾಹಿ 2 ಪೋತಧ್ರುವ ಪ್ರಹ್ಲಾದ ಪುಂಡರೀಕರ ಪಾಲ ಖ್ಯಾತ ಅಜಮಿಳನ ವಿಜಯಸೂತ ಭೀತಿ ರಹಿತನ ಮಾಡು ಮಾಶತರೀಶ್ವನ ದೇವ ದಾತ ಜಯೇಶವಿಠಲ ನೀ ಅಭಯ ಪಾಲಿಸೊ ದೊರೆಯೆ 3
--------------
ಜಯೇಶವಿಠಲ
ಪತಿಮಂದಿರದಲಿ ನೀ ಸುಖವಾಗಿ ಬಾಳು ನಿನ್ನ ಪತಿಗಹಿತಕರ ಸಂಗ ತ್ಯಜಿಸಮ್ಮ ಮಗಳೆ ಪ ಉದಯ ಪೂರ್ವಕೆ ಎದ್ದು ಹರಿಯ ಸ್ಮರಣೆಯ ಮಾಡು ಮುದದಿ ಗುರುಹಿರಿಯರಿಗೆ ವಂದನೆಯ ಮಾಡು ಮದನನಯ್ಯನ ಭಜಕರನು ಕಂಡು ನಲಿದಾಡು ಪದುಮನಾಭಗೆ ಪಟ್ಟದರಸಿಯಾಗಮ್ಮ1 ರತ್ನಾಕರನು ತಂದೆ ಎನುತ ಗರ್ವಿಸಬೇಡ ಮತ್ತೆನಗೆ ಸರಿಯಾರು ಎಂದೆನಲು ಬೇಡ ಚಿತ್ತಜನಯ್ಯನ ಮನವರಿತು ನಡೆಯಮ್ಮ ಹೊತ್ತು ಹೊತ್ತಿಗೆ ಪತಿಯ ಸೇವೆ ನಿರತಳಾಗಿ2 ಬಿಟ್ಟಕಂಗಳು ಮುಚ್ಚದವನು ಎಂದೆನಬೇಡ ಬೆಟ್ಟ ಬೆನ್ನಿಲಿ ಪೊತ್ತನೆನಲು ಬೇಡ ಗಟ್ಟಿ ನೆಲವನು ಕೆದರಿ ಅಲಸಿದನೆನಬೇಡ ಹೊಟ್ಟೆಯ ಕರುಳನು ಬಗೆದವ ನೆನೆಬೇಡ 3 ಕಡುಲೋಭಿದಾನ ಬೇಡಿದನು ಎಂದೆನಬೇಡ ಪೊಡವಿಪಾಲಕರ ಕೆಡಹಿದನು ಎನಬೇಡ ಮಡದಿಯ ತಂದ ಕಪಿವಡೆಯನು ಎನಬೇಡ ತುಡುಗತನದಿ ಪಾಲ್ಬೆಣ್ಣೆ ಚೋರನೆಂದೆನಬೇಡ 4 ಉಡಿಗೆ ಉಡದ ಮಾನಗೇಡಿ ಇವನೆನಬೇಡ ತುಡಗತನದಿ ರಾಹುತನಾದನೆನಬೇಡ ಕಡಲಶಯನ ಕಮಲನಾಭ ವಿಠ್ಠಲನ ಗುಣ ಒಡೆದು ಪೇಳದೆ ಗುಟ್ಟಾಗಡಗಿಸಿ ನಡೆಯಮ್ಮ 5
--------------
ನಿಡಗುರುಕಿ ಜೀವೂಬಾಯಿ
ಪತಿಯ ಮಂದಿರದಲಿ ಸುಖವಾಗಿ ಬಾಳಮ್ಮ ಮತಿವಂತೆ ಎನಿಸಿ ಸನ್ಮತಿ ಪಡೆದು ಪ ಚತುರಳೆ ನಿನ್ನ ಸಖಿಯರೆಲ್ಲರು ಅತಿಶಯದಿ ನಿನ್ನ ಪತಿಯ ಗುಣಗಾನ ಕಥನ ಮಾಡುತ ನಿನ್ನೆದುರಿನಲಿ ಸ್ತುತಿಸಿ ಹಿಗ್ಗಿ ಪೊಗಳುವರೆ ಪಾರ್ವತಿ ಅ.ಪ ವಸತಿ ಇಲ್ಲದೆ ಸ್ಮಶಾನದಲಿ ವಾಸಿಪನೆಂದು ಅಪಹಾಸ್ಯ ಮಾಡುವರೆ ವಸನ ಪೀತಾಂಬರವನುಡುವುದನರಿಯದೆ ಹಸಿಯ ಚರ್ಮವನುಡುತಿಹನೆಂಬರೆ ಅಸನಕಿಲ್ಲದೆಗರಳ ವಿಷವನುಂಬುವನೆಂದು ಗುಸುಗುಸು ನುಡಿಯುವರೆ ಅಸಮನೇತ್ರನು ಭಸುಮ ಲೇಪಿಸಿ ವೃಷಭರಾಜನ ಏರಿ ಬರುವನು ಶಶಿಮುಖಿಯೆ ನೀನರಿಯದಲೆ ಈ ಪಶುಪತಿಗೆ ಸತಿಯಾದೆ ಎಂಬರು 1 ಸರಿಸವತಿಯ ತನ್ನ ಸಿರಮೇಲಿರಿಸಿದಿ ಗಿರಿಜೆ ತರವಲ್ಲ ಕೇಳೆ ಪರಿಪರಿ ರತ್ನಾಭರಣಂಗಳರಿಯದೆ ಉರಗಗಳ ಭೂಷಿತನಾದ ನಮ್ಮ ಗÀರಳ ಕಂಠನಿಗೆ ನೀನರಿಯದೆ ಸತಿಯಾದೆ ಎಂದು ತರಳರೆಲ್ಲರು ಹಾಸ್ಯ ಮಾಡುವರೆ ಸರಸವಾಡುತ ನೋಡು ಕಂಠದಿ ಸಿರದ ಮಾಲೆಯ ಧರಿಸಿಕೊಂಡಿಹ ಪರಮ ಆಶ್ಚರ್ಯದಲಿ ನಾವೆಲ್ಲ ಅರುಹಲೀಗ ಬಂದಿಹೆವು ಎನುವರು 2 ಅಂದು ಮೋಹಿನಿ ರೂಪವ ಕಂಡು ಪರಶಿವನು ಇನ್ನೊಮ್ಮೆ ನೋಡಲು ಬೇಡೆ ಪರಮಾತ್ಮನಾ ಸುಂದರಾಕೃತಿಯ ನೋಡುತ ಪಿಡಿಯಲು ಪೋಗಿ ನಂದ ಕಂದನ ರೂಪ ನೋಡಿದನು ಹಿಂದೆ ಮೂಕಾಸುರನೆಂಬ ದೈತ್ಯನ ಕೊಲಿಸಿದ ಇಂದಿರೇಶನಿಗೆ ಸೇವಕನಾದ ಶಿವನು ಇಂದು ಶಿವನನು ನಿಂದಿಸಿದೆವೆಂದೆನಲು ಬೇಡ ಶ್ರೀ- ತಂದೆ ಕಮಲನಾಭ ವಿಠ್ಠಲನ ಚಂದದಲಿ ಭಜಿಸುವನು ಎನುವರು3
--------------
ನಿಡಗುರುಕಿ ಜೀವೂಬಾಯಿ
ಪದಯುಗಳಂ ಪ ರಾಮಸುಂದರ ಘನ ಶ್ಯಾಮರಘೂದ್ವಹ ಅ.ಪ. ದಶರಥ ಹೃದಯಾನಂದಕರಂ ತ್ರಿದಶಗಣಚಿತ್ತಾಮೋದಕರಂ 1 ಪೂರಿತ ಕೌಶಿಕಯಜನಂ ಸಂತಾರಿತಗೌತಮ ಲಲನಾಂ 2 ಖಂಡಿತ ಶಂಕರ ಚಾಪಂ ಪರಿ-ದಂಡಿತ ಭಾರ್ಗವ ಕೋಪಂ 3 ಪಾತಕ ನಿಚಯಂ 4 ಮುನಿಜನ ಸ್ತುತಿರಚನಂ5 ಭಾರದ್ವಾಜಾರ್ಪಿತ ಭೋಜ್ಯಂ 6 ಉದ್ದಂಡ ವಿರಾಧಪಾತಕ ಹರಣಂ 7 ನಿರ್ಜಿತರಾಕ್ಷಸಷಂಡಂ8 ಧೃತಜಗದುಲ್ಲಾಸಂ 9 ವಿವಿಧಾಯುಧಜಾಲಂ 10 ಶೂರ್ಪನಖಾಂಗಂ 11 ನರವರಮುನಿಗಣ ಪರಿಪಾಲಂ12 ಮಾಯಾಮೃಗಾರ್ಪಿತ ಬಾಣವರಂ- ಜಟಾಯುಸಂಪಾದಿತ ಲೋಕವರಂ 13 ರಾವಣಹೃತ ನಿಜ ಪತ್ನೀಕಂ ಲೋಕಾವನಗತ ಕೋಪೋದ್ರೇಕಂ 14 ಬಂಧನ ಮೋಚನ ಚತುರಂ 15 ವಾತತನೂಭವ ಕೃತಸ್ತೋತ್ರಂ-ಪಂಪಾತಟಿನಿರ್ಮಿತ ಸುಕ್ಷೇತ್ರಂ16 ಶಿಕ್ಷಿತ ಸಂಕ್ರಂದನ ತನುಜಂ-ಸಂರಕ್ಷಿತ ಚಂಡ ಕಿರಣ ತನುಜಂ17 ಸೀತಾಲೋಕನ ಕೃತಕಾಮಂ-ನಿಜಧೂತಾಮೋದನ ಸುಪ್ರೇಮಂ18 ಯವನಾಲಯ ಪರಿವಾರಂ19 ಧೂತಾಹೃತ ಶುಭದೃಷ್ಟಾಂತಂ-ವಿಜ್ಞಾತನಿಜಸ್ತ್ರೀ ವೃತ್ತಾಂತಂ20 ಭೀಷಣ ಜಲನಿಧಿ ಬಂಧಕರಂ-ವಿಭೀಷಣ ಸಂರಕ್ಷಣ ಚತುರಂ21 ಶೋಷಿತ ರಾವಣ ಜಲದಿಂ-ಸಂತೋಷಿತ ದೈವತ ಪರಿಧಿಂ22 ಪಾತಕ ನಿಜ ನಾಮಾಂಕಂ 23 ಸ್ವೀಕೃತ ಸಾಕೇತವಾಸಂ-ಅಂಗೀಕೃತ ಮಾನುಷ್ಯ ವಿಲಾಸಂ24 ವಿಠಲಮತಿಶಯರುಚಿರಂ25
--------------
ಸರಗೂರು ವೆಂಕಟವರದಾರ್ಯರು