ಒಟ್ಟು 3520 ಕಡೆಗಳಲ್ಲಿ , 121 ದಾಸರು , 2542 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕುಮೀಶ ನಿನಗಾರತಿ ಭಕುತಿಯಿಂದೆತ್ತುವೆ ಸಕಲರ ಸುಖಕರ ಭಕ್ತರಿಗೊಲಿಯುವ ರುಕ್ಮಿಣಿಯರಸನೆ ಪ. ರಮಾಪತಿ ನಿನ್ನನು ನಮಿಸಿ ನುತಿಸುತ್ತಿರ್ಪೆನು ಕಮಲಾಂಘ್ರಿಯ ಭ್ರಮರವೆಂದಮಲನೆ ಕೈಪಿಡಿ ರಮಣನೆ ನುಡಿ ನುಡಿ1 ಇನಕುಲಮಂಡನ ವನರುಹಲೋಚನ ಜನಕಜಾ ಸುಪ್ರೇಮನೆ ಚಿನ್ಮಯರೂಪನೆ ಮನುಮುನಿ ಸೇವ್ಯನೆ 2 ಸುರನರ ಪೂಜಿತ ಸರಸಿಜ ಭವಪಿತ ಕರುಣಾಕರ ನರಕೇಸಂ ಮರೆಹೊಕ್ಕೆನು ಪೊರೆ ವರಶೇಷಗಿರಿದೊರೆ 3
--------------
ನಂಜನಗೂಡು ತಿರುಮಲಾಂಬಾ
ಲಕ್ಷ್ಮೀ ದೇವಿ ಕಾದಿರುವಳು ರುಕ್ಮಿಣಿ ಕೃಷ್ಣ ಬರುವನೆಂದು ಪ. ಕರವ ಪಿಡಿವನೆಂದು ಅ.ಪ. ವಿಪ್ರನ್ನ ಕಳುಹಿರುವೆನು ಕ್ಷಿಪ್ರದೊಳು ಗುಡಿಯೊಳಿಹೆನು ಅಪ್ರಮೇಯ ನಿನ್ನಡಿಗಳನ್ನು ಸುಪ್ರಕಾಶ ನಂಬಿರುವೆನೆಂದು 1 ಶಿಶುಪಾಲನೊಲ್ಲೆನೆಂದು ವಸುಧೀಶ ನೀನೆ ಗತಿಯೆಂದು ಹಸುಳೇಯ ಸಲಹು ಎಂದು ಬೆಸಸಿಹೆನು ಪತ್ರವೆಂದು 2 ರಥವೇರಿ ಬರುತಲಿಹನೊ ಪಥದೊಳು ಕಾದಿರುವನೊ ರತಿಪತೀ ಪಿತನ ಪದವ ಅತಿಶಯದಲಿ ಕಾಣುವ ತವಕದಿ 3 ಶಂಕಾತುರಂಗಳಿಂದ ಶಂಕರೀಯಪೂಜೆಗೈದು ಕಿಂಕಿಣಿಯ ನಾದದಿಂದ ಶಂಕರಾದಿವಂದ್ಯ ಬರುವ ಪಥದಿ ಬಂದು 4 ಬಂದಾನೋ ಬಾರನೋ ಎನುತಾ ಇಂದಿರೆಯ ಅರಸನ್ಹೊರತು ಪೊಂದಲಾರೆನನ್ಯರನೆನುತ ಸುಂದರೀಮಣಿ ಕೃಷ್ಣನಾಗಮ ನೋಡುತ 5 ದ್ವಾರಕಿಯಾ ನಾಥ ಬಂದು ಪಾರುಗಾಣಿಸುವನೆಂದು ಚಾರುಕರದೊಳೆತ್ತಿ ಎನ್ನ ದ್ವಾರಕೆಗೊಯ್ವ ಶ್ರೀ ಶ್ರೀನಿವಾಸನೆಂದು 6
--------------
ಸರಸ್ವತಿ ಬಾಯಿ
ಲಕ್ಷ್ಮೀ ದೇವಿಯ ಗಂಡ ಹರಧನುರ್ಭಂಗಾ ರುಕ್ಮಾಂಗ ಧನಪಾಲಾ ಕರುಣಾಂತರಂಗಾ ಪ ಪೂಜಿಸಿದವರಿಗಭೀಷ್ಟವ ಕೊಡುವಾ ಪೂಜಿಪ ದಾಸರ ಕಷ್ಟವ ತರಿವಾ ಸಜ್ಜನರಿರುವಲ್ಲಿ ನಿರುತನಾಗಿರುವಾ 1 ಸ್ಮಾರನನ್ನು ಪಡೆದ ಮನೋಹರ ಮೂರ್ತಿ ಶರಣು ಬಂದವರಿಗೆ ವರ ಚಕ್ರವರ್ತಿ ಧರೆಯಲ್ಲಿ ಪೊಗಳುವೆ ಶ್ರೀಹರಿ ಕೀರ್ತಿ ಅರಿಯದ ದಾಸಗೆ ಸುಖಗಳ ಭರತೀ 2 ಪನ್ನಗಶಯನ ಶ್ರೀದಾಸರ ಪೋಷಾ ಸನ್ನುತ ಕಾವ ಶ್ರೀ ದೂರ್ವಾಪೂರೇಶಾ ಮನ್ನಿಸಿ ರಕ್ಷಿಸೊ ಭಜಕರ ಪೋಷಾ ಚನ್ನಿಗ ಕೇಶವದಾಸನಧೀಶಾ3
--------------
ಕರ್ಕಿ ಕೇಶವದಾಸ
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ಸ್ತುತಿಗಳು ಆರೋಗಿಸು ತಾಯೇ ಮೋದದಿ ಕ್ಷೀರಾಂಬುಧಿ ತನಯೆ ಪ. ಸಾರಸನಯನೆ ಮದವಾರಣಗಮನೆ ಸಾರಿ ಚೀಡುವೆ ಸರಾಗದೊಳೀಕ್ಷಿಸು ಅ.ಪ. ಉಪ್ಪು ಉಪ್ಪಿನಕಾಯಿಕೋಸುಂಬರಿ ಹಪ್ಪಳ ಸಂಡಿಗೆಯ ತಪ್ಪದೆ ತಂದೊಪ್ಪಿಸುತಿಹೆ ಎನ್ನಪ್ಪನೊಡನೊಪ್ಪದಿ ವ ುಂಡಿಸಿ 1 ಚಕ್ಕುಲಿ ಕರಜಿಕಾಯಿ ಅತಿರಸ ಸಕ್ಕರೆ ಹೋಳಿಗೆಯಂ ನಲಿಯುತ 2 ದಧಿ ನವನೀತ ಘೃತ ಮಧುಸಾರವೆನಿಪ ಪರಮಾನ್ನ ಕ್ಷೀರಶರಧಿಸುತೆ ನೀ ನೀರಸ ಸಹಿತಾಪಾರ ಕೃಪಾಪಾಯದೊಳೀಕ್ಷಿಸಿ3 ಸವಿನೋಡುತೆ ನಲಿದು4 ನಿಗಮಾಗಮ ವಿನುತೇ ನಮಿಸುವೆ ನಗಧರ ಸುಪ್ರೀತೆ ಗುಣಗಳ ಬಗೆಗೊಳಿಸುತ್ತಲಿ 5
--------------
ನಂಜನಗೂಡು ತಿರುಮಲಾಂಬಾ
ಲಕ್ಷ್ಮೀದೇವಿ 13 ಭಾಗ್ಯವ ಕೊಡು ತಾಯೆ ಪ ಭಾರ್ಗವಿ ನಿನ್ನಯ| ಪದಯುಗಕೆರಗುವೆ| ಭಾಗ್ಯದ ಲಕ್ಷ್ಮೀ ಸೌ| ಭಾಗ್ಯದ ನಿಧಿಯೇ ಅ. ಪ ಸಾಗರಸಂಜಾತೆ| ದೇವಿ| ನಾಗವರದಪ್ರೀತೆ || ಯೋಗಿಜನಾವಳಿ| ಮಾನಸಪೂಜಿತೆ | ಅಗಣಿತಗುಣಮಣಿ| ತ್ರಿಜಗದ್ವಂದಿತೆ 1 ಸುರುಚಿರಸುಮಗಾತ್ರೆ | ದೇವಿ| ಹಿಮಕರನಿಭವಕ್ತ್ರೆ || ಕಿನ್ನರ | ಸುರಮುನಿ ಪೂಜಿತೆ | ಕಾಮಿತವೀಯುವ || ಕರುಣಾಕರೆಯೆ 2 ಜನನಿಯೆ ನಿರತವು ನೀ | ಪ್ರೇಮವ | ನಿರಿಸುತಲೆನ್ನೊಳು ನೀ | ಕನಕದ ವೃಷ್ಟಿಯ | ಕರೆಯುತಲನುದಿನ | ಮನ್ಮನದಿಷ್ಟವು | ಸಿದ್ಧಿಸುವಂದದ 3 ಅಹಿಪತಿ ಶಯನನಿಗೆ | ಮೋಹದ | ಮಹಿಷಿಯು ನೀನಾಗೆ || ಮಹಿಮಾಕರೆ ನೀ | ಮಹಿಯೊಳಗನಿಶವು | ಇಹಪರ ಸುಖವನು | ಭವಿಸುವ ತೆರದಾ 4 ಅಜಭವಸುರವಿನುತೆ | ದೇವಿ | ಸುಜನಾವಳಿಪ್ರೀತೆ || ಗಜವಾಹಿನಿ ವರ | ಮದಗಜಗಮನೆಯೆ | ವಿಜಯವಿಠಲಪ್ರಿಯೆ ಶ್ರೀ ಗಜಲಕ್ಷ್ಮಿಯೆ 5 ಶುಭ | ಮಂಗಳೆ ಸುಪವಿತ್ರೆ || ಮಂಗಳಾಂಗಿ ನರ | ಸಿಂಗನ ರಮಣಿಯೆ | ಮಂಗಳಕಾರ್ಯಗ | ಳನುದಿನವೆಸಗುವ 6 ಪಂಕಜದಳನೇತ್ರೆ | ದೇವಿ | ಕಿಂಕರನುತಿಪಾತ್ರೆ || ಶಂಖಚಕ್ರಾಂಕಿತ | ಶ್ರೀ ವೈಕುಂಠನ |ಅಂಕದಿ ಮೆರೆವಖಿ | ಳಾಂಕ ಮಹಿಮಳೇ 7
--------------
ವೆಂಕಟ್‍ರಾವ್
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು
ಲಕ್ಷ್ಮೀದೇವಿ ಜನನಿ ಬ್ರಹ್ಮನ ರಾಣಿ | ಪುಸ್ತಕಪಾಣಿ ಪ. ಫಣಿರಾಜನಿಭವೇಣಿ | ವರವೀಣಾಪಾಣಿ || ಘನವಿದ್ಯಾದಾಯಿನಿ | ಪರಮಕಲ್ಯಾಣಿ1 ಶರದಿಂದುನಿಭವಕ್ತ್ರೆ | ಅರವಿಂದದಳನೇತ್ರೆ || ಪರಮಕೋಮಲಗಾತ್ರೆ | ಸುರಮುನಿನುತಿಪಾತ್ರೆ 2 ನೃತ್ಯವಿನೋದಿನಿ | ಸ್ತೋತ್ರ ಸುಪ್ರೀತೆ ನೀ ಭೃತ್ಯೌಘಪಾಲಿನಿ | ನಿತ್ಯಕಲ್ಯಾಣೀ 3
--------------
ವೆಂಕಟ್‍ರಾವ್
ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀರಮಣನೆ ರಕ್ಷಿಸೆನ್ನನು ಅಧೋಕ್ಷಜ ಹರಿ ಪ ಮಂದ ಬಿಡಿಸಿ ಸಲಹೋ ದೇವ ಇಂದು ಮುಂದು ಎನಗೆ ನೀ ಗತಿ ಎಂದು ನಂಬಿದೆ ಮಂದರಧರ ಗೋವಿಂದ ಮುಕುಂದ1 ಗರುಡಗಮನ ವಾಸುದೇವ ನಿರುತ ನಿನ್ನ ಭಜಿಪ ಭಕ್ತರ ಸ್ಮರಣೆ ಪಾಲಿಸೊ ಪರಮಪುರುಷ ಹರಿ ಶರಧಿಶಯನ2 ದೇಶದೇಶ ತಿರುಗಿ ಬಹಳ ಬೇಸರದಲೆ ಬಳಲಿದವರ ಕ್ಲೇಶಗಳನೆ ಕಳೆದು ಪರಮೋಲ್ಲಾಸ ನೀಡಿದ ಸಾಸಿರನಾಮದ ಒಡೆಯನೆ ವೆಂಕಟ 3 ಕ್ಷೀರವಾರಿಧಿ ಶಯನದೇವ ಮಾರಪಿತ ಮಹಾನುಭಾವ ಶರಧಿ ಪಾರುಗಾಣಿಸೋ ಪರಿಸರ ನೊಡೆಯನÉ ಉರಗಶಯನ 4 ಶಂಖು ಚಕ್ರಧಾರಿ ಶ್ರೀಹರಿ ಪಂಕಜಾಕ್ಷರೊಳು ವಿಹಾರಿ ಶೌರಿ ಶಂಕರಾನುತ ಪಂಕಜಲೋಚನ ವೆಂಕಟರಮಣ 5 ಕಪಟ ಸೂತ್ರಧಾರಿ ಚಪಲ ಬುದ್ಧಿಯ ಬಿಡಿಸೊ ಶೌರೀ ಅಪರಿಮಿತ ಮಹಿಮೆಗಳ ತೋರಿ ನಟಿಸಿ ಮೆರೆವ ಸಟೆಯಲ್ಲವೊ ನಾರದ ಮುನಿ ಸೇವಿತ 6 ಕಮಲಾಪತೆ ಪ್ರಿಯ ಜೀಯ ಕಮಲಸಂಭವ ಜನಕದೇವ ಕಮಲನಾಭ ವಿಠ್ಠಲ ಕಾಯೋ ಶ್ರಮವ ಹರಿಸೊಸುಮನಸರೊಡೆಯನೆ ಸುರಮುನಿ ಸೇವಿತ 7
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀವಲ್ಲಭ ವಿಠಲ | ಪೊರೆಯ ಬೇಕಿವಳಾ ಪ ಅಕ್ಷಯ್ಯ ಫಲದ ಕೃ | ಪೇಕ್ಷಣದಿ ನೋಡಿಅ.ಪ. ಸಂಸಾರ ವಿರಸತರ | ಅಂಶವನೆ ತಿಳಿಸೊ ಹರಿಕಂಸಾರಿ ನಿನ್ನ ಪದ | ಪಾಂಸು ಭಜಿಸುತ್ತಾ ಸಂಶಯ ರಹಿತ ಹರಿ | ಹಂಸನಾಮಕ ಸೇವೆಶಂಸಾರ್ಯ ಸರ್ವಧಿಕ | ಸವೋತ್ತಮೆನುತಾ 1 ಹರಿನಾಮ ಕವಚವನು | ಸರ್ವದಾ ಧರಿಸುತ್ತಾದುರಿತನಾಳುಟ್ಟಳಿಯ | ಪರಿಹಾರ ಮಾರ್ಗಅರಿವಿನಿಂದಲಿ ಹರಿಯ | ವರನಾಮ ಸ್ಮರಿಸುತ್ತಕರಗತವು ಆಗಲಿಯೊ | ವರಮುಕ್ತಿಪಥವು 2 ಎರಡು ಮಾರ್ಭೇದಗಳು | ಅರಿವಾಗಲೀಕೆಗೇತರತಮಂಗಳು ಮನಕೆ | ಬರುತಿರಲಿ ಸರ್ವದಾಸಿರಿವಾಯು ಮತ ದೀಕ್ಷೆ | ಗೆರಗಲೀಕೆಯ ಮನಸುಹರಿಯ ಮಮ ಕುಲದೈವ | ಉದ್ದರಿಸೊ ಇವಳಾ 3 ಸಾಧನಕೆ ಸತ್ಸಂಗ | ನೀದಯದಿ ಕೊಟ್ಟಿವಳಮೋದ ಬಡಿಪದು ದೇವ | ಆದಿ ಮೂರುತಿಯೇ |ಮಾಧವನೆ ಬಿನೈಸೆ | ಆದರಿಸುತಿವಳೀಗೆಕಾದುಕೊ ಬಿಡದಲೆ | ಹೇ ದಯಾ ಪೂರ್ಣ 4 ದೇವದೇವೊತ್ತಮನೆ | ಕಾವದೇವನೆ ಹರಿಯಭಾವದಲಿ ಮೈದೋರಿ | ಪೊರೆಯೊ ಇವಳಾಕಾವ ಕರುಣೆಯ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಿಲ್ಲ | ಈ ವಾಣಿ ಬಲುಸತ್ಯ 5
--------------
ಗುರುಗೋವಿಂದವಿಠಲರು
ಲಘುವಾವುದೆಂಬುದನು ನಿಜವಾಗಿ ನುಡಿಯುವೆನು ಸುಗುಣವಂತರು ಕೇಳಿ ವಿನಯದಲಿ ಬೇಡುವೆನು ಪ ಲಘುತೃಣವು ತಾನಲ್ಲದಿಟವೆ ಸರಿ ಈ ಮಾತು ಲಘುತೃಣವ ತಾವುಂಡು ಪಾಲ್ಕೊಡವೆ ಗೋವುಗಳು ಅ.ಪ. ನಾರಿಯನು ಸಾಕುವೆಡೆ ಕೈಲಾಗದ ಲಘುವು ಭಾರಿಸಿರಿಯನು ಪತಿಗೆ ತಾರದಾ ಸೊಸೆ ಲಘುವು ನಾರಿಯರ ಕೈಗೊಂಬೆಯಾಗಿರುವ ನರ ಲಘುವು ಸಿರಿವಂತ ನೆಂಟರಲಿ ಬಡವ ಸೇರಲು ಲಘುವು 1 ವಿತ್ತವಿಲ್ಲದ ಪಿತನು ಪುತ್ರನಿಲ್ಲಿರೆ ಲಘುವು ಪುತ್ರವತಿಯರ ನಡುವೆ ಸವತಿ ಬಂಜೆಯು ಲಘುವು ಅತ್ತಿಗೆಗೆ ಬಹು ಲಘುವು ರಿತ್ತ ಮೈದುನ ಮಂದಿ ಭತ್ರ್ಯತಾನತಿ ಲಘುವು ಶ್ರೀಮಂತ ಕನ್ನಿಕೆಗೆ 2 ಮೋದತೀರ್ಥರ ಮತಕೆ ಮಿಕ್ಕುದೆಲ್ಲವು ಲಘುವು ವೇದನುತ “ಶ್ರೀಕೃಷ್ಣವಿಠಲ”ನ ನೆನೆಯದವ ಶುದ್ಧಲಘು ತಮನೈಯ ವೃದ್ಧ ಸಮ್ಮತ ಹೌದು 3
--------------
ಕೃಷ್ಣವಿಠಲದಾಸರು
ಲಜ್ಜೆ ಲಜ್ಜೆ ನಿನ್ನ ನಂಬಿ ಕೆಟ್ಟೆನಾನು ಮಾಡೊದೇನು ಪ ಗೆಜ್ಜೆ ಕಟ್ಟಿದ್ದೊರೆ ಕೃಷ್ಣ ಭಜನೆಯಲ್ಲಿ ಮಾನದಲ್ಲಿ ಅ.ಪ. ಆರು ವಲಿದು ಮಾಡೊದೇನು ಆರುಮುನಿದು ಮಾಡೊದೇನು ಚಾರು ಚಾರು ಮೆಚ್ಚಲೇನು ಭಾರಿದೇವ ವಿಶ್ವಜನಕೆ ಹರಿಯದಾಸನೆಂದು ಇನ್ನು ಈರ ಮತವ ಸಾರಿಸಾರಿನಲಿದು ನಲಿದು ಸುಖಿಪುದಕ್ಕೆ 1 ದುಡ್ಡು ಕಾಸುಬೇಡ ನಮಗೆ ದೊಡ್ಡತನವು ಬೇಡ ಹಾಗೆ ಹೆಡ್ಡತನನ ಬಿಟ್ಟು ಪಿರಿಯಕೃಷ್ಣನನ್ನು ಭಜಿಸಲಿಕ್ಕೆ ಅಡ್ಡಿಏನು ಕುರುಡು ಮನವೆ ನೆನೆದುನೆನೆದು ನೋಡುನೀನೆ ದೊಡ್ಡತನವೆ ಸತ್ಯವೀದು ದಡ್ಡತನವೆ ದುರಭಿಮಾನ 2 ಹರಿಯದಾಸದೀಕ್ಷೆ ಪಡೆಯೆ ಸುಲಭವಲ್ಲ ಸುಲಭವಲ್ಲ ದುರಿತ ರಾಶಿಪೋಗಿ ಶುದ್ಧ ಚಿನ್ನದಂತೆ ಆಗದೇನೆ ಹಿರಿದು ಕಾಣೊ ಇಂಥಾ ಜನ್ಮ ಬರಿಯ ಮಾತಿಗೊಲಿಯದೇವ ಅರಿವಿನಂತೆ ನಡೆಯದಿರಲು ತೊರೆದು ಎಲ್ಲ ದುರಭಿಮಾನ 3 ಗೆಜ್ಜೆಕಟ್ಟಿ ಕುಣಿದು ಕುಣಿಯೆ ಲಜ್ಜೆನಾಶವಾಹುದೈಯ್ಯ ಲಜ್ಜೆನಾಶವಾಗಿ ಭಕ್ತಿಯುಕ್ತಿ ಉಕ್ಕಿಹರಿಯುತಿರಲು ಅಬ್ಜಪೀಠ ಪಿತನುತಾನೆ ಅಪ್ಪಿಕೊಂಡು ನಲಿದುನಲಿವ ಅಬ್ಜನಾಭ ನಲಿದು ವಲಿಯೆ ಹೆಚ್ಚುಉಂಟೆ ಅದರಕ್ಕಿಂತ 4 ಮೆರೆಯುತಿರಲು ದುಷ್ಟಕಲಿಯು ಅನ್ಯಮಾರ್ಗ ಸಾಧ್ಯವಿಲ್ಲ ಹರಿಯ ಭಜನೆ ಒಂದೇ ದಾರಿ ಹರಿಯ ವಲಿಸೆ ಸಿದ್ಧವೀದು ಜರಿದು ವಿಷಯ ಬೆರಸಿ ಭಕ್ತಿ ಸಿರಿಯ ರಮಣ “ಕೃಷ್ಣವಿಠಲ” ಚರಣ ಯುಗವ ಭಜಿಸಿ ನೀನು ಮಾನ್ಯನಾಗೋ ಧನ್ಯನಾಗೊ 5
--------------
ಕೃಷ್ಣವಿಠಲದಾಸರು
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ
ಲಾತವ್ಯ - ಲಾತವ್ಯ ಪ ಖ್ಯಾತಾಗ್ರೇಸರ | ಭೂತರಾಜನುತ ಅ.ಪ. ಸ್ವಪ್ನದ್ರಷ್ಟ್ರುವು | ವಿಪ್ರನ ಮುಖದಿಂಸ್ವಾಪ್ನಾಖ್ಯಾನವ | ಸುಪ್ರಕಟಿಸಿದೆ 1 ವ್ಯಾಸರ ಸಮ್ಮುಖ | ವಾಸಿಸುತಿಹ ಸುವಿಶೇಷ ಮಹಿಮ ಗುರು | ದೈಶಿಕರೊಡೆಯನೆ2 ಆಖಂಡಲ ಮುಖ | ಮಂಡಿತ ಚರಣನೆಪಾಖಂಡರ ಮತ | ಖಂಡಿಸಿ ಮೆರೆದಾ 3 ಭಯವಿದೂರ ತವ | ದಯವನು ಪ್ರಾರ್ಥಿಪೆಹಯವದನನ ಪದ ಪ್ರಿಯ ಭಜಕಾಗ್ರಣಿ4 ಭಾವಜ ಪಿತ ಗುರು | ಗೋವಿಂದ ವಿಠಲನಭಾವದಿ ಕಾಣಿಸು | ಭಾವಿ ಮರುತ ಗುರು 5
--------------
ಗುರುಗೋವಿಂದವಿಠಲರು