ಒಟ್ಟು 7653 ಕಡೆಗಳಲ್ಲಿ , 132 ದಾಸರು , 4671 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬಿದೆ ನಾನಿನ್ನ ಚರಣವನಂಬಿಗ ಅಂಬೆಗಳ ಸುತನೆ ಕೋ ಬ್ಯಾಗಂಬಿಗ ಪ ಇಂಬಾಗಿ ದಡ ಸೇರಿಸೆನ್ನನೇನಂಬಿಗ ತುಂಬಿ ನದಿ ಸೂಸುತಲಿದೆ ನೋಡಂಬಿಗ ಅ.ಪ. ಕರ್ಮವೆಂಬ ಪ್ರವಾಹವ ನೀ ನೋಡಂಬಿಗ ಚರ್ಮದಿಂದೇಳು ಹೊದ್ದಿಕಿ ಅಂಬಿಗ ಮರ್ಮ ಒಂಭತ್ತು ರಂಧ್ರ ಉಂಟಂಬಿಗ ಶರ್ಮವಿದಕೆ ಕಾಯದ್ಹರಿಗೋಲಂಬಿಗ 1 ಆಳ ಬಹಳ ಗೊತ್ತಾಗದಂಬಿಗ ಶೆಳವು ಘನ ಉಳ್ಳುಹುದು ನೋಡಂಬಿಗ ಸುಳಿಗಾಳಿಗೆ ಸಿಗಿಸದಿರೊ ಅಂಬಿಗ ಬಳಸಿ ಕೊಂಡೊಯ್ಯೋದು ಒಳ್ಳೇದೆ ಅಂಬಿಗ 2 ಸಂಚಿತಾಪ್ತಿ ಇವರೊಳುಂಟಂಬಿಗ ಭಾರ ಜಡಿಯೋದು ನೀ ನೋಡಂಬಿಗ ವಂಚಕ ಮಾತು ರಾಗವು ಹೆಚ್ಚಂಬಿಗ ಚಂಚಲಗೊಂಡು ಭ್ರಮಿಸೋದು ಕಾಣಂಬಿಗ 3 ಆಶಾಜಲ ಮೇಲೆ ಮೇಲೆ ಬರುವುದಂಬಿಗ ಮೋಸ ಮಾಡುವುದೇನೊ ಕೊನೆಗೆ ಅಂಬಿಗ ಪೊಸ ಪೊಸ ಕಾಮತೆರೆ ತುಂಬಾಯಿತಂಬಿಗ ಲೇಶವಾದರು ಬತ್ತದು ನೋಡಂಬಿಗ4 ಅಷ್ಟ ಆನೇ ಒಳಗಿಟ್ಟುಕೊಂಡಿಹುದಂಬಿಗ ಹುಟ್ಟು ಹಾಕೋದು ಬಿಟ್ಟು ಜಲ್ಲೆ ಕೊಳ್ಳಂಬಿಗ ಬೆಟ್ಟ ಆರಕ್ಕೆ ಸಿಕ್ಕಿಸದೆ ನೋಡಂಬಿಗ ನೆಟ್ಟ ನಡುವಿನ ಪಥದಿ ಒಯ್ಯೋ ಅಂಬಿಗ 5 ಸುತ್ತ ಕಾರ್ಮುಗಿಲು ಬಂತಲ್ಲೊ ಅಂಬಿಗ ಹತ್ತು ಹನಿಗಳು ಬಿತ್ತು ನೋಡಂಬಿಗ ಎತ್ತಿ ನಡೆಸೋದು ಶಕ್ತಿ ನಿನ್ನದು ಕಾಣಂಬಿಗ ಹತ್ತಿಸೊ ಭಕ್ತಿದಡಕಿನ್ನಂಬಿಗ 6 ಮರಕಟಿ ಸೇರಿಹದಿದರೊಳಗಂಬಿಗ ಕರೆಕರೆಗೆ ಗುರಿ ಮಾಡೊದಿದೆ ಅಂಬಿಗ ಸರಿಯಾಗಿ ನಡೆಸೊ ಇನ್ನಾದರಂಬಿಗ ವರದವಿಜಯ ರಾಮಚಂದ್ರವಿಠಲ ನೀನಂಬಿಗ 7
--------------
ವಿಜಯ ರಾಮಚಂದ್ರವಿಠಲ
ನಂಬಿದೆ ನಾನಿನ್ನ ನಾರಾಯಣ ವಿಶ್ವಂಭರ ಮೂರುತಿಯೇ ಕಂಬುಧರ ಕಮಲಾಂಬಕ ಶ್ರೀಹರಿ ಪಾರ್ಥನ ಸಾರಥಿಯೇ ಪ ವಾರಿಜನಾಭನೆ ಪಾರುಗಾಣಿಸೊ ಸಂ- ಮಾರಮಣನೆ ಮೊರೆಹೊಕ್ಕೆ ಲಾಲಿಸೊ ಮುರಹರ ಗೋವಿಂದ 1 ಪುಣ್ಯುಪುರುಷ ಲಾವಣ್ಯ ನಿಧಿಯೆ ಕಾ- ವನಜಾಪ್ತವಂಶ ಚಂದ್ರ 2 ಕಾಮ ಜನಕ ಸುತ್ರಾಮವಿನುತ ಶುಭ- ನಾಮಸುಜನಪ್ರೇಮಿ ತಾಮಸದೂರ ಸುಧಾಮವರದ ಗುರು- ರಾಮವಿಠಲಸ್ವಾಮಿ 3
--------------
ಗುರುರಾಮವಿಠಲ
ನಂಬಿದೆ ನಿಂನನು ಅಂಬುಜಲೋಚನ ಅಂಬುಜೋದ್ಭವ ಪಿತ ಅಂಬುಜ ರಮಣಾ ಪ ಹಲವು ಯೋನಿಗೆ ಬಿದ್ದು ಬಲೆ ದಾಟಿ ಬಂದೇ ಬಳಲುತ್ತ ಪರಿಪರಿ ದುಃಖಗಳಿಂದ ಬಲ್ಲವಿಲ್ಲ ಸಹಿಸಲು ಭವರೋಗ ವೈದ್ಯನೇ ವಲಿದೆನ್ನ ಪಾಲಿಸೋ ಸಾನುರಾಗದಲೀ 1 ಏನು ಮಾಡಲಿ ನಿಂನ ಚರಣ ಸೇರಲಿಕೇ ಹೀನ ಪಥವ ಪಿಡಿದು ಕಡು ನೊಂದೆನಯ್ಯ ಗಾನ ಲೋಲನೆ ಭಜಿಪ ಭಾಗ್ಯವ ಕೊಡಬೇಕು ನೀನೇ ಗತಿಯೆಂದು ಯಾದವ ಪತಿಯೇ 2 ಕತ್ತಲೆಯಾವರಿಸಿತು ದೇಶವೆಲ್ಲವ ಬತ್ತಲೆಯಾಗಿ ನಿಂತರು ಮೂಢಜನರು ಮೃತ್ಯು ತುತ್ತಿಗೆಯಂನ ಕೊಡದೆ ಕತ್ತಲೆ ನೀಗಿಆತ್ಮ ಜ್ಞಾನವ ನೀಡೋ ಚನ್ನಕೇಶವನೇ3
--------------
ಕರ್ಕಿ ಕೇಶವದಾಸ
ನಂಬಿದೆ ನಿನಪಾದ ಅಂಬುಜಾಕ್ಷನ ಪ್ರಿಯಬೆಂಬಿಡದಲೆ ಯೆನ್ನ | ಕಾಯೋ |ಬೆಂಬಿಡದಲೆ ಯನ್ನ ಕಾಯೆಂದು ನಿನ್ನನುಹಂಬಲಿಸೂವೆ ಮೋಹನ್ನರಾಯಾ ಪ ದೋಷರಾಶಿಯನೀಗಿ | ದಾಸನ್ನ ಮಾಡಿದಋಷ್ಯಂಶರಾಗಿಹ ನಿಮ್ಮಾ |ಋಷ್ಯಂಶರು ವಿಜಯ ದಾಸರ ಪ್ರೇಮಕ್ಕೆಆಶ್ರಯನಾಗಿಪ್ಪ ಮೋಹನ್ನ 1 ಹೆಮ್ಮೆಯ ಪಡುವೆ ನಾ ನಿಮ್ಮವರವನೆಂದುದುರ್ಮಮತೆಯ ನೀಗೋ ಎನ್ನಾ |ದುರ್ಮಮತೆಯು ನೀಗಿ | ಭರ್ಮಗರ್ಭನ ಪಿತನಪೇರ್ಮೆ ದೊರಕಿಸೊ ಎನಗೆ ಮುನ್ನಾ 2 ಅಂಬುಜಾಂಬನಂಘ್ರಿ | ಅಂಬುಜ ತೋರೆಂದುಹಂಬಲಿಸಿ ಬೇಡುವೆ ನಿನಗೆ |ಹಂಬಲಿಸಿ ಬೇಡುವೆ | ಶಂಬರಾರಿಯ ತೇಜನಂಬಿ ಬಂದಿಹೆ ನಿನ್ನ ಅಡಿಗೇ 3 ವಿಷಯಧುಯ್ಯಲಿನಿಂದ | ಕ್ಲೇಶವಧಿಕವಯ್ಯ ವಿಷದಂತೆ ಕಾಣಿಸೊ ಜೀಯ |ವಿಷದಂತೆ ಕಾಣಿಸಿ | ಶೇಷವಿಲ್ಲಾಧಾಂಗೆ |ದೋಷವಳಿಸಿ ಕಾಯೊ ಜೀಯಾ 4 ನಿನ್ನ ವಂಶಜನಾಗಿ | ನಿನ್ನವರವನಾಗಿಉನ್ನಂತ ಮಹಿಮ ಶ್ರೀಹರಿಯಾ |ಉನ್ನಂತ ಮಹಿಮನು | ಅನ್ನಂತನ ಪಾದಕಾಣದಿದ್ದವನಿರೆ ವ್ಯರ್ಥ 5 ಪಂಚಾಶದ್ವತ್ಸರ | ಹಂಚಿಪೋಗುವ ಮುನ್ನಪಂಚರೂಪಾತ್ಮಕ ಹರಿಯಾ |ಪಂಚರೂಪಾತ್ಮ ವಿ | ರಿಂಚಿಪಿತನ ಪಾದಹಂಚಿಕಿಂದಲಿ ತೋರೊ ಮೋಹನ್ನ 6 ಉರುಗಾದ್ರಿವಾಸ ವಿಠಲಾತ್ಮಕನು ಶಿರಿಗುರುಗೋವಿಂದ ವಿಠ್ಠಲನ |ಗುರಗೋವಿಂದ ವಿಠಲನ ಚರಣಾರವಿಂದವತೋರಿ ಪೊರೆ ನಮ್ಮ ಹಿರಿಯಾ 7
--------------
ಗುರುಗೋವಿಂದವಿಠಲರು
ನಂಬಿದೆ ನಿನ್ನ ಪಾದವ ಕಾಣಬೇಕೆಂದು ಹಂಬಲಿಸಿದೆ ಮಾಧವ ಬೆಂಬಲವಾಗು ಪೀತಾಂಬರಧರ ಕುಟುಂಬಿ ಪಾಲಾ ಕಮಲಾಂಬಕ ರಂಗಾ ಪ ಚಂದಿರಹಾಸ ಸರ್ವೇಶ ಚಂಡ ಪ್ರಕಾಶಾ ಇಂದಿರಾ ಮನೋವಿಲಾಸ ವೃಂದಾರಕರ ನಿಜಕೋಶಾ ಮಂದರಧರ ವಸುಂಧರಪತಿ ಪುರಂದರ ವಂದಿತ ಸುಂದರಾಂಗ ಕಂಬು ಇಂದೀಗ ತೊಂದರೆಕಿಡದಿರು 1 ತಂದಿತಾಯಿಗಳವರಾರೊ ತಾವಳಿದು ಸತಿ ನಂದನರೊ ಬಂಧುಬಳಗ ಮತ್ತಾರೊ ಬರಿದೆ ಊರು ಪೊಂದದೆನಲೊ ಇಳಿಜಾರು ಎಂದೆಂದಿಗಿದರ ಗಂಧದೊಳಗೆ ನಾ ಬಂದು ಬಳಲಿ ಸಂ ಬಂಧದೊಳುರಳಿದೆ ಮುಂದಾದರು ದಾರಿ ಒಂದಾದರು ಕಾಣೆ ತಂದೆ ತಾಯಿ ಸರ್ವಂದವು ನೀನೆ 2 ನೊಂದೆನೊ ನಾನಾ ಜೀವಿಲಿ ನೋಡು ನೋವಿನಲಿ ಕುಂದಿದೆ ಎಲ್ಲ ಕಾವಿಲಿ ಬೆಂದೆನೋ ಬಲು ಕೋವಿಲಿ ಅಂದದರ್ಚನೆಯಿಂದ ಮಾಡಿದ ಪಾಪಗೊಂದಿಗೆಳೆದು ಎನ್ನ ಇಂದು ಚರಣರವಿಂದವ ತೋರಿಸುವ ಬಂಧು ವಿಜಯವಿಠ್ಠಲೆಂದಹುದೆಂದು 3
--------------
ವಿಜಯದಾಸ
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ- ರಂಭಸೂತ್ರಳೆ ಇಂಬುದೋರಿನ್ನು ಪ. ಅಂಬುಜಾಂಬಕಿ ಶುಂಭಮರ್ದಿನಿ ಕಂಬುಗ್ರೀವೆ ಹೇರಂಬ ಜನನಿ ಶೋ- ಣಾಂಬರಾವೃತೆ ಶಂಭುಪ್ರಿಯೆ ದಯಾ- ಲಂಬೆ ಸುರನಿಕುರುಂಬಸನ್ನುತೆ ಅ.ಪ. ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ- ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ- ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ- ಗಾರೆ ರಿಪುಸಂಹಾರೆ ತುಂಬುರು ನಾರದಾದಿಮುನೀಂದ್ರ ನುತಚರ- ಸೂರಿಜನ ಸುಮನೋರಥಪ್ರದೆ 1 ವಿಶಾಲಸುಗುಣಯುತೆ ಮುನಿಜನ- ಲೋಲತರುಣಮರಾಳೆ ಸಚ್ಚರಿತೆ ನವಮಣಿ ಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ- ಬಾಲೆ ನೀಲತಮಾಲವರ್ಣೆ ಕ- ರಾಳಸುರಗಿ ಕಪಾಲಧರೆ ಸುಜ- ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ2 ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ- ಪರಾಕು ಶರಣಜನೈಕಹಿತದಾತೆ ಸುರನರ- ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ- ವಾಕುಕಾಯದಿಂದ ಗೈದಾ ನೇಕ ದುರಿತವ ದೂರಗೈದು ರ- ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3 ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ- ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ- ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ- ಲ್ಲಾಸೆ ಯೋಗೀಶಾಶಯಸ್ಥಿತೆ ವಾಸವಾರ್ಚಿತೆ ಶ್ರೀಸರಸ್ವತಿ ದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ4 ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ- ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ- ವಾಮಭಾಗ ಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯ ಶ್ರೀಮಹಾಲಕ್ಷ್ಮಿ ನಾರಾಯಣಿ ರಾಮನಾಮಾಸಕ್ತೆ ಕವಿಜನ- ಸೋಮಶೇಖರಿ5
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬಿದೆನೇ ನಿನ್ನ ಅಂಬುಜನಯನೆ ನಂಬಿದೆ ನಿನ್ನ ಪ. ನಂಬಿದೆ ನಿನ್ನನು ಅಂಬುಧಿಶಯನನೆನ್ನ ಡಿಂಬದಿ ನಿಲುವಂಥ ಸಂಭ್ರಮ ಕೊಡು ತಾಯೆ ಅ.ಪ. ಆರು ಮೂರೆರಡೊಂದು ಮೇರೆ ಇಲ್ಲದೈದು ಜಾರರು ಸೇರಿದರೆ ತಾಯಿ ತೋರುತ ಕರುಣವ ಬೀರುತ ವರ ಸಂಗ ದೂರಮಾಡಿಸಿ ಪಾರುಗಾಣಿಸು ತಾಯೇ 1 ಅಗಣಿತ ಮಹಿಮನ ಬಗೆಬಗೆ ಪೂಜಿಸಿ ಜಗದಾಖ್ಯಾನ ನೀ ಮಿಗೆ ವಲಿಸಿಹೆ ತಾಯೆ ಮಗುವೆಂದು ಭಾವಿಸಿ ಚಿಗಿದು ಕಂಬದಿ ಬಂದ ನಗಧರ ನರಹರಿ ಸಿಗುವ ಪರಿಯ ತೋರೆ2 ಕಲಿಯುಗದಲಿ ಶ್ರೀ ಶ್ರೀನಿವಾಸನ ಜ್ಹಾಯೆ ವಲಿದು ಭಕ್ತರ ಕೊಲ್ಹಾಪುರ ಮೆರೆಸಿಹೆ ತಾಯೆ ಕಲಿಮಲ ಕಳೆದು ನಲಿದು ಭಕ್ತರ ಕಾಯೆ ಛಲವ್ಯಾಕೆ ಹರಿ ಸಹ ನÀಲಿಯುತೆ ಬಾರೆ 3
--------------
ಸರಸ್ವತಿ ಬಾಯಿ
ನಂಬಿದೆನೊ ನಂಬಿದೆನೊ ಅಂಬುಜಾಕ್ಷ ತೊಂಬಲಿಗೆ ಹಂಬಲಿಸಿ ಹಾರೈಸಿದೆ ನಿನ್ನ ಪ ಮೊದಲುಂಡ ಪಾಪದಲಿ ಕಳೆಗುಂದಿ ಕಳೆಗುಂದಿ ಮುದದಿಂದ ನಿತ್ರಾಣನಾದೆನಯ್ಯಾ ಪದುಮನಾಭನೆ ನಿನ್ನಭಯದೊಂಬಲನಿತ್ತು ವದನ ಚೇತನನಾಗುವಂತೆ ದಯಮಾಡೊ 1 ವಿಷವ ಸೇವಿಸಿದ ತರುಣನಂತೆ ಮೆಲವು ಭಾವಿಸದೆ ಬೀಳುತೀ ನೀ ನೆಲೆಗಾಣದೆ ಬಿಸಿಜಾಕ್ಷ ನೀನೆ ಕೃಪಾಳು ಎಂದೆಂದಿಗೆ ರಸ ಸುರಿವ ಸುರಿವ ಬಾಯದೊಂಬಲಾನಿತ್ತು ಸಲಹೊ2 ಆವದಾದರುವಲ್ಲೆ ಅನಿಮಿತ್ತ ಬಂಧು ಕೇಳು ಜೀವವೇ ನಿನ್ನ ಪಾದದಾಧೀನವೋ ಶ್ರೀವಧುರಮಣ ನಮ್ಮ ವಿಜಯವಿಠ್ಠಲ ನೀನೆ ದೇವ ಯನಗ ಹುದು ತೊಂಬಲನಿತ್ತು ಪೊರಿಯೊ 3
--------------
ವಿಜಯದಾಸ
ನಂಬಿದೆನೊ ನಿನ್ನ ಅಂಬುಜನಯನ ಕೃ ಪಾಂಬುಧೆ ದೃಢದಲಿ ಪ ಸಂಭ್ರಮದಲಿ ಕಿವಿ ತುಂಬುತಿರುವ ಆ ಡಂಬರ ವಚನಕೆ ಮುಂಬರಗೊಳ್ಳುತ ಅ.ಪ ನವ ಘನ ನಿಭಕಾಯ ನಿನ್ನಯ ಕರುಣಮಯ ಸಹಾಯ ವಿಲ್ಲದೆ ಬಿಗಿಯುತಿರುವ ಮಾಯಾ ಪಾಶವ ತೊರೆಯಲಳವೆ ಜೀಯಾ ನಿನ್ನಯ ದಯವ ಪಡೆದ ಪರಿಯನರುಹುವ ಯತಿವರೇಣ್ಯ ಗುರುಮಧ್ವರಾಯರ ಪರಮ ಸಮಯ ಸಾರಗಳನು ಸಂತತ ಶ್ರವಣ ಮನನ ಧ್ಯಾನಗಳಿಂದ ಪರಿಚಯ ಪಡೆದು ದು ಷ್ಟ ವಿಷಯಗಳಲಿ ಮತಿಯನು ಮುರಿಯುವಂತೆ ಕರುಣಿಸೋ ಸುಗುಣಾಲಯ 1 ನೀರಜದಳ ನೇತ್ರ ವರ ಸುಖ ಚಿನ್ಮಯೈಕ ಗಾತ್ರ ಸುಜನ ಮಿತ್ರ ಸುರವರ ಸರಸಿಜಭವ ಪುತ್ರ ರುಚಿರರ ಮುಕುಟಾಕ್ಷಪಾತ್ರ ನಿನ್ನಯ ವಿವಿಧ ಲೀಲೆಗಳು ಚಿತ್ರವಿಚಿತ್ರವು ಅರಿತೆನೆಂದು ತಿಳಿದು ಮೆರೆಯುತಲಿರುವ ನರರ ಮದವ ಮುರಿದು ದೈನ್ಯದಿಂದಲಿ ಮರೆತೆನೆಂದು ದಿನದಿನದಲಿ ಭಜಿಪರ ಪೊರೆವ ಪರಮ ಕರುಣಾರಸಮಯನೆ 2 ದೀನಭಕುತರನ್ನು ಪೊರೆಯುವ ದಾಸಿಯೆಂದು ನಿನ್ನ ಪೊಗಳುವ ಮಾನತತಿಗಳನ್ನು ಸಂತತ ಧ್ಯಾನ ಮಾಡಿ ಎನ್ನ ಕ್ಲೇಶವ ಮೌನದಿಂದ ಇನ್ನೂ ಸಹಿಸುತ ಜಾನಕೀಶ ತವ ಪಾದಕಮಲದ ರೇಣುವನ್ನು ಶಿರದಿ ಧರಿಸುತಲಿ ಅನು ಮಾನವನ್ನು ತೊರೆದು ಮುದದಿ ಸುವಿಮಲ ಜ್ಞಾನಮೂರ್ತೆ ಜ್ಞಾನಿವರ ಪ್ರಸನ್ನನೆ ನೀನೆ ಎನ್ನ ರಕ್ಷಕನೆಂದರಿಯುತ 3
--------------
ವಿದ್ಯಾಪ್ರಸನ್ನತೀರ್ಥರು
ನಂಬಿದೆನೊ ನಿನ್ನ ಪಾದಾರವಿಂದಾ ಇಂಬು ಈವದು ಎನಗೆ ವೈಕುಂಠಪುರದೊಳಗೆ ಪ ಮಲಭಾಂಡದಲ್ಲಿ ಪೊಕ್ಕು ನೆಲೆಗಾಣದಲೆ ಸಿಕ್ಕು ಸಲೆ ಸೊರಗಿ ತಿರುಗಿದೆನೊ ಬಳಲಿ ಮರುಗಿ ಉಳಿವದಕುಪಾಯವನು ಒಂದರೆ ಕಾಣೆನೊ ಎಲೊ ಬಲುದೈವ ನೀನೆ ದಯಾಳು ಎಂದೂ 1 ಕೈವಲ್ಯ ಕೊಡುವಲ್ಲಿ ಮಂಡಲದೊಳು ಎಣಿಯಾರು ನಿನಗೆ ಭಂಡಕಾಯವ ತೆತ್ತು ಬರಲಾರೆ ನಿನ್ನ ತೊತ್ತು ನಿತ್ಯ ಎಳೆನೋಟದಲಿ ನೋಡು 2 ಯದುಕುಲಲಲಾಮ ಸುರಸಾರ್ವಭೌಮ ಮಹಿಮ ಮದನಪಿತ ಕಾಳಿಂಗಭಂಗ ರಂಗಾ ಮಧುಸೂದನ ವಿಜಯವಿಠ್ಠಲ ಲಕುಮಿನಲ್ಲಾ ಹೃದಯದೊಳು ಪೊಳೆವ ಬಲು ವಿಚಿತ್ರ ಚಲುವಾ 3
--------------
ವಿಜಯದಾಸ
ನಂಬಿದೆನೊ ರಂಗ ಗೋವಿಂದ ರಂಗ ಪ. ಇಳೆಸೃಷ್ಟಿಗಾಧಾರನೆಂಬ ಬಿರುದುಳ್ಳಡೆ ಜಗನ್ಮಯನೆ ಚಿನ್ಮಯರೂಪ ರಂಗ ನೀನಾದ್ಯಯ್ಯ ರಂಗ 1 ಸುಜನಮಂದಾರ ಸರಸಿಜಭವಪಿತ ನಿನ್ನ ಪ್ರಜೆಗಳು ಪೊಗಳುತ್ತಿಹರೆ ರಂಗ ಮುರಹರನೆ ರಂಗ 2 ಸುಜನರೊಳಗೆನ್ನ ಕುಹಕವ ಮಾಡದೆ ನಿನ್ನ ಭಜಕನೆಂದಿರಲಾಗಿ ರಂಗ ಭುಜಗೇಂದ್ರಶಯನ ಶ್ರೀರಂಗ 3 ಧಾತ್ರಿಗಾಧಾರ ಅನಾಥರಕ್ಷಕನೆ ದಯವ್ಯಾತಕೆನ್ನೊಳಿಲ್ಲ ರಂಗ ಕಡೆಹಾಯಿಸೊ ರಂಗ 4 ನೋಡೆ ಶ್ರೀ ಹರಿಯೆ ನೀನಲ್ಲದನ್ಯತ್ರ ದಾತ್ರರಿಲ್ಲವೊ ರಂಗ ಮಹಿಮ ಶ್ರೀರಂಗ 5 ಕೋಪವನು ಬಿಡು ಎನ್ನ ಕುಂದನೆಣಿಸದಿರಯ್ಯ ಆಪತ್ಬಂಧು ಶ್ರೀರಂಗ ಸಲಹಯ್ಯ ರಂಗ 6
--------------
ಹೆಳವನಕಟ್ಟೆ ಗಿರಿಯಮ್ಮ
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಂಬು ದಯಾನಿಧಿ ರಾಮನಾ ಪ ಶಬರಿಯ ಭಾವಕೆ ಮೆಚ್ಚಿ ಉಂಡನು ಬದರಿ ಫಲಾ| ವಿಭು ನೀಡಿದನು ಪದಾಚಲಾ 1 ತೃಣ ಪಶು ಪಿಪ್ಪೀಲಿಕಾ ನಗಾದಿಗಳಾ| ಸುಗತಿಗೆ ವೈದನು ಘನ ನೀಲಾ 2 ಗುರು ಮಹಿಪತಿ ಪ್ರಭು ನೀರೊಳು ತಾರಿಸಿದ ಶಿಲಾ| ಚರಿತವ ದೋರಿದ ಸಿರಿಲೋಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬು ನಂಬು ಶ್ರೀನರಹರಿ ಪಾದವÀ ನರನೇ ಪಾಮರನೆ ಪಾತಕ ಕೃಷ್ಣಾ ಮೂರ್ತಿಯನ್ನೇ ಪ ಸಾಧು ಸಜ್ಜನ ಸಂತರ ಸಲಹುವ ಸಕಲ ಲೋಕ ಕರ್ತನಾ ಮೇದಿನಿ ಭಕ್ತರ ಮನದಲಿ ಚರಿಸುವ ಮಂಗಳ ಮಹಿಮನ ಆದಿಮೂರುತಿ ಆನೇಕ ಚರಿತಾ ಅನಂತ ಅವತಾರನಾ ಅನುದಿನ ಮರೆಯದೆ ನೀ ಯಿನ್ನಾ 1 ಶ್ರೀನಿವಾಸ ಆಶ್ರಿತ ಜನಪೋಷಕ ಶಾಶ್ವತನಾಗಿಹನಾ ಗಾನಲೋಲ ಶ್ರೀವೇಣುನಾದನ ಕರಿರಾಜ ವರದನ ದಾನವಾಂತಕನ ದಶರಥತನಯನ ದೇವಾದಿದೇವನ್ನ ಮಾನವ ಮದನ ಜನಕನಾದನಾ 2 ಭೂಸುರ ನಾಯಕನ ಮಾಧವ ಗೋವಿಂದನ ಮುಕ್ಕುಂದನಾದ ಅವನಾ 'ಹೆನ್ನೆವಿಠ್ಠಲನಾ’ 3
--------------
ಹೆನ್ನೆರಂಗದಾಸರು
ನಂಬು ನಂಬೆಲೆ ಮನ ಗಿರಿಧರನ ನಿನ ಗಿಂಬುಗೊಡುವ ಭಕ್ತ ಸಂಜೀವನ ಪ ಕತ್ತೆಯಂತೆ ಕೂಗಿ ಕೆಡಬೇಡ ಪರ ಮಾರ್ಥತತ್ತ್ವದ ಹಾದಿ ತಿಳಿ ಮೂಢ ಸತ್ಯರ ಪಾದದಿ ಮನನೀಡೋ ನಿತ್ಯ ಉತ್ತಮರೊಳಗಾಡಿ ನಿಜ ನೋಡೋ 1 ಕೋತಿಯಂತೆ ಕುಣಿಯಲುಬೇಡೋ ಮಹ ನೀತಿವಚನ ಮೀರಿ ನಡಿಬೇಡೋ ಮಾತುಮಾತಿನ ಸಂಶಯಬೇಡೋ ಮುಂದೆ ಪಾತಕದೊಳು ಬಿದ್ದು ಕೆಡಬೇಡೋ 2 ಸಾರಸಂಸಾರ ಮಿಥ್ಯವೆಂದು ತಿಳಕೋ ನೀನು ಧೀರ ಶ್ರೀರಾಮನ ಅಡಿಗ್ಹೊಂದಿಕೋ ಗಂ ಭೀರ ಮೋಕ್ಷಪದವನೆ ಪಡಕೋ 3
--------------
ರಾಮದಾಸರು