ಒಟ್ಟು 8337 ಕಡೆಗಳಲ್ಲಿ , 130 ದಾಸರು , 4215 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಸೇರಿದೆ ಮಹಾಲಿಂಗ ಎನ- ಗಿನ್ಯಾರು ಗತಿ ಕಾಣೆ ಕರುಣಾಂತರಂಗ ಪಾರ್ವತಿ ಮೋಹನಾಂಗ ಪ. ನಿನ್ನಂತೆ ಕೊಡುವ ಉದಾರ ತ್ರಿಭು- ವನ್ನದೊಳಿಲ್ಲದಕ್ಯಾವ ವಿಚಾರ ಮುನ್ನ ಮಾರ್ಕಾಂಡೇಯ ಮುನಿಯ ಭಯ ವನ್ನು ಪರಿಹರಿಸಿದೆಯೊ ಸದುಪಾಯ ನಮೋ ಶಿವರಾಯ 1 ಸರ್ವಾಪರಾಧವ ಕ್ಷಮಿಸು ಮಹಾ- ಗರ್ವಿತರಾಶ್ರಯಕ್ಕೊಲ್ಲದು ಮನಸು ಶರ್ವರೀಶಭೂಷ ನಿನ್ನ ಹೊರ- ತೋರ್ವರಿಲ್ಲ ರಣಮಲ್ಲ ಮುಕ್ಕಣ್ಣ ಕಾಯೊ ಸುಪ್ರಸನ್ನ 2 ಅಂತರಂಗದ ದಯದಿಂದ ಯುದ್ಧ- ಮಂ ತೊಡಗಿದೆ ಪಾರ್ಥನೊಳತಿಚಂದ ಪಂಥದ ನೆಲೆಯನ್ನು ತಿಳಿದು ಸರ್ವ- ದೊಡ್ಡದು ನಿನ್ನ ಬಿರುದು 3 ಸಿದ್ಧಿಸು ಸರ್ವಸಂಕಲ್ಪ ಅಡ್ಡ- ಬಿದ್ದು ಬೇಡುವೆ ನಿನಗ್ಯಾವದನಲ್ಪ ಹೊದ್ದಿದವರಿಗಿಲ್ಲೆಂದಿಗು ಕೇಡು ದುಷ್ಟರದ್ಯಾವ ಪಾಡು4 ಅಂಜಿಕೆ ಬಿಡಿಸಯ್ಯ ಹರನೆ ಪಾ- ವಂಜಾಖ್ಯವರಸುಕ್ಷೇತ್ರಮಂದಿರನೆ ಸಂಜೀವನ ತ್ರಿಯಂಬಕನೆ ನವ- ಸಲಹೊ ಪಂಚಮುಖನೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಿನ್ನ ಸೇವೆಯನೊಂದನಿತ್ತು ಸಲಹೋಎನ್ನ ಮನ ನಿನ್ನಲ್ಲಿ ನಿಲುವಂತೆ ಮಾಡಿ ಪ ಅನ್ನವನು ಬೇಡಿಕೊಂಬುವದೆಂತು ವಿಪುಳ ವಿಷವನ್ನು ಕುಡಿದಿಹ ನೀಲಕಂಠನೊಡನೆಸನ್ನುತಾಂಬರವ ಬೇಡುವುದೆಂತು ಕರಿಚರ್ಮ-ವನ್ನು ಪೊದೆದಿಹ ದಿಗಂಬರನೊಡನೆ ಶಂಭೋ 1 ಮಿರುಗುವಾಭರಣಗಳ ಬೇಡಿಕೊಂಬುದೆಂತುಉರಗಕುಂಡಲಹಾರ ವಲಯನೊಡನೆಪರಮ ಭಾಗ್ಯವ ಬೇಡಿಕೊಂಡೆ ನಾನೆಂತು ವಿಧಿಶಿರದಿ ಭಿಕ್ಷವ ಬೇಡಿ ತಿರಿದುಂಡನೊಡನೆ 2 ಕರಿತುರಗ ಮುಖ್ಯವಾಹನವ ಬೇಡುವುದೆಂತುನಿರುತ ಬಸವನ ಮೇಲೆ ಚರಿಪನೊಡನೆಕರುಣದಿಂದೆನಗೆ ಕೊಡಲೇನುಂಟೊ ಕೆಳದಿಪುರ-ದೆರೆಯ ರಾಮೇಶ ಶ್ರೀಕರ ಪಾರ್ವತೀಶ 3
--------------
ಕೆಳದಿ ವೆಂಕಣ್ಣ ಕವಿ
ನಿನ್ನ ಸ್ವಹಿತ ಮಾಡೋ ಪ್ರಾಣಿ | ನಿನ್ನ ಸ್ವಹಿತ ಮಾಡೋ ಪ ಶರಣರ ಕೂಡಿ ಸ್ಥಿರ ಮನಮಾಡಿ | ಹರಿಯ ಕೊಂಡಾಡಿ ಪರಗತಿ ಬೇಡಿ | ಮರೆದು ಈಡ್ಯಾಡೀ 1 ಹಳೆಯ ದುಃಸಂಗಾ ಕಳೆದಂತರಂಗಾ | ದೊಳು ಧ್ಯಾನದಂಗಾ ಬಲಿಯಲು ರಂಗಾ | ಹೊಳೆವ ಕೃಪಾಂಗಾ 2 ಸಂದೇಹಲಿಂದು ಧರೆಯೊಳು ಬಂದು | ಮರೆವದು ಕಂಡು ಗುರುಮಹಿಪತೆಂದು ಗುರುತಕ ಹೊಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನದೇ ಸಕಲ ಸೌಭಾಗ್ಯ ಸಾಧನವು ಹರಿಯೆ ಪ ನಿನ್ನದೆಂಬಭಿಮಾನ ಲವಲೇಶ ಸಲ್ಲದಯ್ಯಾ ಅ.ಪ. ನಿನ್ನ ಪ್ರೇರಣೆ ಹೊರತು ತೃಣವೊಂದು ಚಲಿಸದು ನಿನ್ನಿಚ್ಛೆಗನುಸಾರ ಸಕಲ ಜಗವು ನಿನ್ನ ಚಿತ್ತಕೆ ಬಾರದಿಹುದೇನು ನಡೆಯುವುದೋ ನಿನ್ನ ನಂಬಿದವರನು ನೀನಾಗೆ ಸಲಹುವೆಯೊ 1 ಸರ್ವತಂತ್ರ ಸ್ವತಂತ್ರ ಸರ್ವಾಂತರಾತ್ಮಕನೆ ಸರ್ವಜಗದಾಧಾರ ಸರ್ವೇಶನೆ ಅಘ ದೂರ ಸರ್ವಕಾಲದಲೆನ್ನ ಗರ್ವರಹಿತನ ಮಾಡೊ 2 ಸತ್ಯಚಿತ್ತನೆ ನಿನ್ನ ಚಿತ್ತವೆನ್ನಯ ಭಾಗ್ಯ ಕರ್ತೃತ್ವದಭಿಮಾನ ಕಳೆದು ಕಾಯೊ ಮತ್ತೇನು ಬೇಡುವೆನು ಪರತಂತ್ರ ನಾನಯ್ಯ ಮುಕ್ತಿದಾಯಕ ಶ್ರೀಶ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ನಿನ್ನನಗಲಿ ಪೋಗಲಾರೆವೋ ನೀರಜಾಕ್ಷ ನಿನ್ನ ಸೇರಿ ಸುಖಿಸ ಬಂದೆವೊ ಪ ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೊ ಕೃಷ್ಣ ಅ ಐದುವದಕೆ ಶಕ್ಯವಲ್ಲದ ಅಪ್ರಮೇಯ ಆದಿಪುರುಷ ಅಮರಸನ್ನುತ ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರವ- ರಾದರೇನು ನಿನ್ನ ಶರಣರಾದ ಮೇಲೆ ಬಿಡುವುದುಂಟೆ1 ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ ನಿಂದ್ಯವೆಂದು ಶಾಸ್ತ್ರ ಪೇಳ್ವುದು ಎಂದೆಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ ಇಂದು ಹೋಗಿರೆಂಬೆ ನೀನು2 ಶಮದಮಾದಿ ಗುಣಗಳಿಂದಲಿ ಸಜ್ಜನರು ಮೂರ್ತಿ ಮನದಲಿ ಮಮತೆಯಿಂದ ಪೂಜಿಸುತ್ತ ಗಮಿಸುವರೊ ನಿನ್ನ ಪುರಕೆ ನಮಗೆ ಮಾತ್ರ ಪತಿಸುತಾದ್ಯರಮಿತ ಸುಖವ ಕೊಡುವರೇನೊ 3 ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ ಪಕ್ಷ ವಹಿಸಿದಂತೆ ನಮ್ಮನು ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ ಲಕ್ಷ್ಮೀದೇವಿ ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ 4 ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ ತನುವು ಮನವು ನಿನಗೆ ಅರ್ಪಿಸಿ ಜನನ ಮರಣದಿಂದ ಜನರು ದಣಿವರೇನೂ ಕಾಂತ ನಮ್ಮ ಮನಸಿನಂತೆ ಒಲಿದು ಸಲಹೊ ವನಜನಾಭ ವಿಜಯವಿಠ್ಠಲ 5
--------------
ವಿಜಯದಾಸ
ನಿನ್ನನಲ್ಲದೆ ಯಾರ ಸನ್ನುತಿಸಿ ಫಲವೇನೋ ಪನ್ನಗಾದ್ರಿನಿವಾಸ ಶ್ರೀವೆಂಕಟೇಶ ಪ ಮನ್ನಣೆಯು ಬೇಡಯ್ಯ ಎನ್ನ ತಪ್ಪುಗಳನ್ನು ಮನ್ನಿಸೆಂದೊರಲುವೆನು ಶ್ರೀವೆಂಕಟೇಶ ಅ.ಪ ತಪ್ಪುಹಾದಿಯ ಹಿಡಿದು ಬೆಪ್ಪನಾಗಿರುವೆನ್ನ ಒಪ್ಪಿ ಪರಿಪಾಲಿಸುವ ಅಪ್ಪ ನೀನೋ ತಪ್ಪೊಪ್ಪುಗಳನೆಲ್ಲಾ ಒಪ್ಪಿಸಿದೆ ನಿನಗೆ ತಿಮ್ಮಪ್ಪ ಮಾಂಗಿರಿವಾಸ ಕೈಹಿಡಿದು ಕಾಯೋ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನ್ನನೆ ನಮೊ ಎಂಬೆವ ಇಂದಿರಾ ದೇವಿನಿನ್ನನೆ ನಮೊ ಎಂಬೆವ ಬಿನ್ನಹ ಲಾಲಿಸುಪನ್ನಗ ಶಯನನ ಘನ್ನ ಪಟ್ಟದ ರಾಣಿ ಪ. ಇಂದಿರೆ ನಿನ್ನ ಕಾಲಿಗೆ ವಂದಿಸಿ ಜಾಲಗಾರುತಿಯರ ಸೋಲಿಸಬೇಕೆಂದು 1 ಇಂದಿರೆ ನಿನ್ನ ಹೆಜ್ಜೆ ಹೆಜ್ಜೆಗೆ ನಮಿಸಿಅರ್ಜುನನ ಮಡದಿಯರ ಲಜ್ಜೆಗೈಸೆವೆಂದು2 ನಿತ್ಯ ಮುಕ್ತಳೆ, ನಿನ್ನ ಅತ್ಯಂತ ಬಲಗೊಂಬೆ ಉನ್ಮತ್ತೆಯರ ಗರವು ಒತ್ತಿಬಂದೆವೆಂದು 3 ವ್ಯಾಲಾಶಯನನ ರಾಣಿ ಬಹಳೆವಂದಿಸಿಗೈಯ್ಯಾಳಿಯರ ಮುಯ್ಯಾ ನಿವಾಳಿಸಬೇಕೆಂದು 4 ಪ್ರಾಣೇಶ ನರಸಿಯ ಕಾಣುತ ವಂದಿಸಿಜಾಣಿಯರ ಮನೆಗ್ಹೋಗಿ ಆಣಿ ಬಿಡಿಸೇವೆಂದು5 ಜರದ ಕುಪ್ಪುಸಸೀರೆ ಸರಿಗೆ ದೋರೆಯನಿಟ್ಟುಕರಗಳ ಮುಗಿದೆವ ವರಗಳ ಪಾಲಿಸು6 ಥೋರ ಮುತ್ತಿನ ದಿವ್ಯಹಾರ ಭಾರವನಿಟ್ಟುನಾರಿಯರ ಗೆಲಿಸುವ ಭಾರವ ರಾಮೇಶಗೆ ವಹಿಸೆಂದು7
--------------
ಗಲಗಲಿಅವ್ವನವರು
ನಿನ್ನನೇ ನಂಬಿಹೆನೋ ಶ್ರೀನಿವಾಸಾಪನ್ನಗ ನಗಧೀಶ ಉದಯಾದ್ರಿ ವಾಸಾ ಪ ನಿತ್ಯ ನೂತನ ಮಹಿಮ ಎತ್ತ ನೋಡಿದರತ್ತ ಮುಕ್ತ ಜನ ಸೇವ್ಯಾ |ಕೀರ್ತಿ ಭವ್ಯ ವಿಶಾಲ ವರ್ತಿಪುದು ಸದಾಕಾಲಆರ್ತವರಿಗಪವರ್ಗ ಮೋಕ್ಷಮಾರ್ಗಾ 1 ಸೇವ್ಯ ಸೇವಕ ಭಾವ ದಿವ್ಯ ಸುಜ್ಞಾನವನುಪ್ರೀತಿಯಿಂದೆನಗಿತ್ತು ಕಾಯಬೇಕೋ |ಪ್ರೇರ್ಯ ಪ್ರೇರಕ ನೀನೇ ಕಾರ್ಯ ಕಾರಣ ಕರ್ತೃಭಾರ್ಯರಿಂದೊಡಗೂಡಿ ವೀರ್ಯಪ್ರದನಾಗೋ 2 ಸೃಷ್ಠಿ ಸ್ಥತಿ ಸಂಹಾರ ಅಷ್ಟಕರ್ತೃಸ್ವಾಮಿನಷ್ಟ ಗೈಸಜ್ಞಾನ | ಇಷ್ಟ ಮೂರ್ತೇದಿಟ್ಟ ಗುರು ಗೋವಿಂದ | ವಿಠಲನೆ ಮದ್ ಹೃದಯಅಷ್ಟ ಕಮಲದಿ ತೋರೋ | ಶಿಷ್ಟಜನಪಾಲಾ 3
--------------
ಗುರುಗೋವಿಂದವಿಠಲರು
ನಿನ್ನನೇನು ಮರೆಹೊಕ್ಕೆನು ಪ ನಿನ್ನನೇ ನಾ ಬೇಡ್ವೆನುಅ.ಪ ದುರಿತ ಶರಧಿ ನಿತ್ಯಾನಂದನೆ 1 ಕೃತ್ತಿಕೆಯೊಳುದಿಸಿದನೆ ಪರಮ ಪ-ವಿತ್ರನೇ ಸುರವಂದ್ಯನೆ ಉತ್ತಮೋತ್ತಮ ದೇವಸೇನೆಯ ಚಿತ್ತಹಾರಿಯೆ ಶರಜನೇ 2 ಮಾರ ತ್ರೈಜಗದೊಡೆಯನೆ | ಘೋರ ಶಾಪದಿ ಗಾರುಗೆಟ್ಟಿಹ ನಾರಿರನ್ನೆಯ ಕಾಯ್ದನೆ 3 ಮುಷ್ಟಿಕಾರಿಯ ಮಿತ್ರನೆ ಪರ- ಮೇಷ್ಟಿ ವಂದ್ಯನೆ ಪೂಜ್ಯನೆ | ದುಷ್ಟ ಪದ್ಮನ ಕುಟ್ಟಿ ಸುರಪತಿ ಇಷ್ಟವನು ಕರುಣಿಸಿದನೆ 4 ಭಾವಜಾರಿಯ ಪುತ್ರನೆ ಸದಾ ಭಾವಜನ ಪ್ರತಿರೂಪನೆ | ಭಾವ ಭಕ್ತಿಯೊಳ್ ಭಜಿಪ ದಾಸರ ಕಾವ ಪಾವಂಜೇಶನೆ 5
--------------
ಬೆಳ್ಳೆ ದಾಸಪ್ಪಯ್ಯ
ನಿನ್ನನ್ನೆ ನಂಬಿದೆನೊ ಪನ್ನಂಗಶಾಯಿ ಎನ್ನ ನೀ ಕಾಯಬೇಕೊ ಪ ದೀನದಯಾಳು ದೇವ ನೀನೆ ಕಾಯದೆ ಬಿಟ್ಟ ರಿನ್ನಾರು ಕಾಯ್ವರು ಎನ್ನನೀ ಜಗದೊಳುಅ.ಪ ಉನ್ನತ ಹೃದಯನೆ ಮುನ್ನ ನಾ ಮಾಡಿದ ಗನ್ನಗತಕತನವನ್ನು ದಯದಿ ಕ್ಷಮಿಸು ಇನ್ನೀಭವದಿ ಎನಗೆ ನಿನ್ನಯ ಸನ್ನುತಿ ಯನ್ನು ಪಾಲಿಸಿ ಸತತ ಬನ್ನಬಡಿಸದೆ ಕಾಯೊ 1 ಶರಣಾಗತರಕ್ಷಣಾನಾಥಜನಬಂಧುವೇ ಕರುಣದಿ ನಿಮ್ಮಂಥ ದೇವರನುಕಾಣೆ ದುರಿತದೂರನೆ ಎನ್ನ ದುರಿತದುರ್ಗಣವನ್ನು ಪರಿಹರಿಸಿ ಸಲಹಯ್ಯ ಶರಣುಜನರ ಪ್ರೀಯ 2 ಕೈಯ ಪಿಡಿದು ಪೊರೆಯೊ ಬಿಡದೆನಮ್ಮಯ್ಯ ಜಗ ದಯ್ಯ ಶ್ರೀರಾಮ ವಿಜಯವಿಠಲರಾಯ ಕೈಯ ಮುಗಿದು ಮರೆಹೊಕ್ಕು ಬೇಡುವೆಯ್ಯ ಜೀಯ ದಯದಿ ಕಾಯೊ ಪಂಢರಿರಾಯ 3
--------------
ರಾಮದಾಸರು
ನಿನ್ನಪಾದ ದೊರಕುವುದು ಎಂತೆನಗೆ ರಂಗ ಗನ್ನಗತಕ ನಾನು ಪುಣ್ಯದ್ಹಾದ್ಯರಿಯೆ ಪ ಕಳ್ಳನಾಗಿ ಜೀವಿಸಿದೆ ಸುಳ್ಳನಾಡಿ ನಾ ದಣಿದೆ ತಳ್ಳಿಕೋರತನದನ್ಯರ್ಹಾಳು ಮಾಡಿದೆನೊ ಖುಲ್ಲತನದಿಂ ಪರರ ನಲ್ಲೆಯರೋಳ್ಮನಸಿಟ್ಟು ಕ್ಷುಲ್ಲಕನಾದೆ ನಾನೆಲ್ಲಿ ನೋಡಲವ 1 ಅನ್ನಕೊಟ್ಟವರಿಗೆ ಅನ್ಯಾಯಯೋಚಿಸಿದೆ ಬನ್ನ ಬಡಿಸಿದೆನಯ್ಯ ನನ್ನನಂಬಿದವರ ಎನ್ನ ಪಡೆದವರನ್ನು ಮನ್ನಿಸಿನೋಡಿಲ್ಲ ನಿನ್ನ ಧ್ಯಾನದ ಖೂನವನ್ನರಿಯೆ ದೇವ 2 ಗುರುಹಿರಿಯರನು ಜರಿದೆ ಪರಿಪರಿಯಲಿ ನಾನು ಪರರಿಗೊಂದಿಕ್ಕಿ ನಾನುಂಡಿರುವೆನೊಂದು ಧರೆಯೊಳೆಣೆಯಿಲ್ಲದ ದುರಿತವನು ಗಳಿಸಿರುವೆ ಕರುಣಾಳು ಶ್ರೀರಾಮ ನೀನೆ ಪೊರಿಬೇಕೊ 3
--------------
ರಾಮದಾಸರು
ನಿನ್ನವ ನಾನಲ್ಲವೇ ರಂಗಯ್ಯ ನನ್ನವ ನೀನಲ್ಲವೇ ಪ ನಿನ್ನವ ನಾನಲ್ಲವೆಂದರೆ ಬಿಡಲೊಲ್ಲೆ ಎನ್ನ ಕೈಬಿಡಲೊಲ್ಲೆ ಎಂಬುದ ನಾ ಬಲ್ಲೇ ಅ.ಪ ಧನವನು ಕೊಡಬೇಕೇ ರಂಗಯ್ಯ ಮನೆಮಠಗಳು ಬೇಕೇ ಕನಕಲಕ್ಷ್ಮಿ ವೈಕುಂಠವಿರಲ್ಕೆ ಧನ ಮನೆ ಮಠಗಳ ಯೋಚನೆಯೇಕೆ 1 ಜನಕನು ನೀನಲ್ಲವೇ ರಂಗಯ್ಯ ತನಯನು ನಾನಲ್ಲವೇ ತನುಮನಧನಗಳು ನಿನಗೇ ಸಲ್ಲವೇ ಎನಗಿರ್ಪುದು ನಿನ್ನ ಭಜನೆಯೊಂದಲ್ಲವೇ 2 ನನ್ನದೇನಿಹುದಯ್ಯ ರಂಗಯ್ಯ ನಿನ್ನದೇ ನಿಜವಯ್ಯ ನಿನ್ನ ಕೈಗೊಂಬೆ ನಾನಾಗಿಹೆನಯ್ಯಾ ಎನ್ನವ ನೀ ಮಾಂಗಿರಿಯ ರಂಗಯ್ಯ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನ್ನವರ ಸಂಗ ಎಂತಹದಯ್ಯಾ ಅನಂತ ಜನ್ಮದ ಪಾಪ ಪುಂಜರ ನಾನು ಪ ಬಾರೆ ಸುಜನರ ಮನಕೆ ತಾರೆ ಗಂಗೋದಕವ ಸೇರೆ ನಿನ್ನಡಿಗಳಲಿ ಸಾರೆ ಉತ್ತಮರ ಕೀರ್ತಿ ಬೀರೆ ನಿನ್ನಯ ಮಹಿಮೆ ಕೋರೆ ನಿರ್ಮಳ ದಾರಿಯಾ ನೀರೆಯರ ಶಶಿಬಿಂಬ ಮೋರೆ ಬಣ್ಣಕೆ ಮೆಚ್ಚಿ ಕಾರ್ಯ ಕಾರಣ ಜರಿದು ಭಾರಿ ತಿರುಗವನಿಗೆ1 ಏಕಾದಶಿ ದಿನ ಬೇಕೆಂದು ಮನವಿಟ್ಟು ಪಾಕನ್ನ ಮಾಡಿಸುವನೊ ನೇಕಪರಿ ಮಾಡಿಸುವನೊ ಪೋಕತನದಲ್ಲಿ ವಿವೇಕ ರÀಹಿತನಾಗಿ ಗೋಕುಲವ ಹಳಿದು ಕೋ ವಾರೆವಿದ್ದವನಿಗೆ2 ಪರರ ವಡವೆಯ ನೋಡಿ ಧರಿಸಲಾರದೆ ಮನ ಮರಗಿ ನಿಷ್ಠುರನಾಡಿ ಇರಳು ಹಗಲೂತ್ತ- ಮರ ಬೈದು ಪಾಪಕ್ಕೆ ಗುರಿಯಾಗಿ ನಸುನಗುತ ಪಿರಿದು ದುರ್ವಿಷಯದೊಳು ಹೊರಳಿ ಹಕ್ಕಲನಾಗಿ ಮರಳಿ ಜನಗಳಲ್ಲಿ ಜನಮವಾಗುವನಿಗೆ 3 ಅತಿಥಿ ಅಭ್ಯಾಗತರ ಕಂಡು ಸ್ಮರಿಸದೆ ಮತಿಹೀನವಾಗಿ ಭ- ಕುತಿ ಲೇಸ ತಾ ತಾ ಕೊಂಬೆನಯ್ಯಾ ಆರನಾರನಾದರು ಕರಿಯೆ ಚತುರೋಕ್ತಿಯಲಿ ನೆನೆಸಿ ಪ್ರತಿ ಯಾರು ನಿನಗೆಂದು ಗರ್ವದಲ್ಲಿದ್ದವನಿಗೆ 4 ಆದಿಯಲಿ ಬಂದದ್ದು ಅಂತ್ಯದಲಿ ಪೋಗುವ ಹಾದಿಯನು ತಿಳಿತಿಳಿದು ಕ್ರೋಧವನು ಬಿಡದೆ ಕಾದುವೆನು ಹಲ್ಲು ಕಡಿದು ಸಾಧುಗಳ ನೋಡದಲೆ ವೇದಾರ್ಥಗಳ ಓದಿ ಶೋಧಿಸಿ ಕೇಳಿ ವಾದವನು ಮಾಡಿ ಸಂಪಾದಿಸುವ ದುರ್ಧರನಿಗೆ5 ದುರ್ಧನಕೆ ಕೈಕೊಡುವೆ | ಮೊದಲೆ ಕನಸಿನೊಳಗಾದರೂ ಗುಣಿಸುವೆ ಪರರ ಹಿಂಸೆಯನು ಬಿಡೆ ಕ್ಷಣವಾದರು ತನುವಿನ ಕ್ಲೇಶದಲಿ ದಿನವ ಹಾಕಿದೆ ವ್ಯರ್ಥ ದಣಿದಣಿದು ಈ ಪರಿಯನು ಮಾಡಿದವನಿಗೆ 6 ಹುಟ್ಟಿದಾರಭ್ಯವಾಗಿ ಶಿಷ್ಟಾಚಾರವ ತೊರೆದು ಕೆಟ್ಟ ಬಾಳಿದೆ ಧರಣೀಲೀ ಸುಟ್ಟ ಸಂಸಾರದೊಳು ಸಟಿಯಾಡಿ ಗುಟ್ಟಗುಂದಿದೆ ವಿಜಯವಿಠ್ಠಲ ನಿನ್ನ ನೆರೆ ಮರೆದು ಕೆಟ್ಟು ನರಕಕ್ಕೆ ಮನಮುಟ್ಟಿ ಬೀಳುವವನಿಗೆ 7
--------------
ವಿಜಯದಾಸ
ನಿನ್ನಾಜ್ಞದವನೊ ನಾನೆನ್ನನೊಪ್ಪಿಸದೆಬಿನ್ನಹ ಚಿತ್ತೈಸಿ ಎನ್ನ ಪಾಲಿಸೊ ಕೃಷ್ಣ ಪ ಏಳು ಸುತ್ತಿನಕೋಟೆ ಯಮನಾಳು ಮುತ್ತಿಕೊಂಡುಪಾಳು ಮಾಡೇವೆಂದು ಪೇಳುತಿರಲುಆಳು ಸಾಮಗ್ರಿಯ ಅಪಾರ ಬಲಮಾಡಿಕೋಳುಹೋಗದ ಮುನ್ನ ಕೋಟೆ ರಕ್ಷಿಸಬೇಕು 1 ಆರು ಮೂರರ ಬಾಧೆ ಆರು ಎಂಟರ ಬಾಧೆಕ್ರೂರರೈವರ ಬಾಧೆ ಹೋರುತಲಿದಕೋಆರಿಂದ ನಿರ್ವಾಹವಾಗದು ಇವರನುಮೇರೆಲಿಡುವನೊಬ್ಬ ಧೀರನ್ನ ಬಲಮಾಡೊ2 ಲಕ್ಷ ಎಂಭತ್ತು ನಾಲ್ಕು ಜೀವರಾಶಿಗಳೊಳುಸೂಕ್ಷ್ಮದ ಕೋಟೆಂದುಪೇಕ್ಷಿಸದೆಪಕ್ಷಿವಾಹನ ನೀನು ಪ್ರತ್ಯಕ್ಷ ನಿಂತರೆಅಕ್ಷಯ ಬಲವೆನಗೆ ರಕ್ಷಿಸೊ ಸಿರಿಕೃಷ್ಣ 3
--------------
ವ್ಯಾಸರಾಯರು
ನಿನ್ನೊರತು ಇನ್ನಿಲ್ಲ ಹನುಮಾ ಜಯ ಭೀಮಾ ಗುರುಮಧ್ವರಾಯಾ ಪ ಅನ್ನವಸ್ತ್ರವ ಕೊಟ್ಟು ಅನ್ಯರಿಗೆ ಬೇಡಿಸದೆ ಅನುಗಾಲವೂ ಕಾಯೋ ಅನುಪಮ ಚಿಂತನ 1 ಬಂದ ಬಂದ ಕಂಟಕವನ್ನು ಬಂದು ಬಂದೂ ಬಯಲು ಮಾಡಿ ಎಂದೆಂದಿಗೂ ಕಾಯೋ ಸುಂದರ ಮೂರುತಿಯೇ 2 ಕದರೂರು ಹನುಮೇಶ ಹಸನ್ಮುಖವಿಠಲನ ಮುದದಿಂದಲಿ ಒಲಿಸಿದ ಚದುರ ಮೂರುತಿಯೆ 3
--------------
ಮಹಾನಿಥಿವಿಠಲ