ಒಟ್ಟು 5271 ಕಡೆಗಳಲ್ಲಿ , 121 ದಾಸರು , 3265 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವ ಪಾಶದಲಿ ನಾನು ಹರಿಯೆ ಕಿಲಿಕಿಲಿ ನಗುವರೆ ಸಲಹುವದು ದೊರೆಯೆ ಪ ಕೆಲರ ಮಾತಿಗೆ ಪೋಗಿ ಬಲವಾಗಿ ಅವರ ಕೆಲಸ ಮಾಡುವೆ ನಿಜ ಕೆಲಸವ ಮರೆದೆ ನಾ 1 ಧರಣಿಯ ಪತಿಯೇವೆ ಶರಣೆಂದು ತಿಳಿದು ಪಾದ ಸಿರಿಯ ರಮಣನೆ2 ಉದರಗೋಸುವಾಗಿ ಮರೆದವರ ವಶದಿ ಹದನವ ಕಳಕೊಂಡು ಮದಡ ನಾನಾದೆನೊ 3 ಉಣವೆನೊ ಪರರನ್ನ ದಣಿವೆನೊ ಅದಕ್ಕೆ ಕುಣಿವೆನೊ ಅವರಂತೆ ಗುಣವೇನು ಎನಗೆ 4 ಈಸು ಪರಿಯಲೆನ್ನ ಶ್ರೀಶ ದಾಸರ ವಶದಿ ವಾಸವಿತ್ತು ಬದುಕಿಸೊ ವಾಸುದೇವವಿಠಲ 5
--------------
ವ್ಯಾಸತತ್ವಜ್ಞದಾಸರು
ಭವ ಬಂಧನ-ದೊಳಗವರೆಂದಿಗೂ ಸಿಗರು ಪ ಪದ್ಮ ಪತ್ರದಂತೆ ಅಲಿಪ್ತ ಇಲ್ಲಿರುವರು | ನಮ್ಹಾಂಗತೋರರು ಜಗದೊಳಗ ಹಮ್ಮುನಳಿದು ಬೇಗ | ಶರಣು ಹೊಕ್ಕವರಿಗೆ ಸುಮ್ಮನೆ ಚನ್ನಾಗಿ ದಯ ಮಾಡುವರು1 ಎಳ್ಳಿನೊಳಗೆ ಎಣ್ಣೆ ಇಂತಿಹರಂಥ ಬಲ್ಲವರಿವರು ಭುವನದಲ್ಲಿ | ಬಲಸ್ತನದ ಬಡಿವಾರವ ಮಿಗಿವಲ್ಲೆ ಸ್ವಾನಂದ ಸುಖದಿಂದ ಲೋಲ್ಯಾಡುವರು 2 ಏನನರಿಯದೆ ಮರುಳರಂತೆ ಜಗದೊಳು |ತನುವಿನ ಹಂಬಲ ಹರಿದಿಹರು |ಅನುದಿನದಲ್ಲಿ ಜ್ಞಾನಬೋಧನ ಪ್ರಿಯರುಚಿನುಮಯ ರೂಪದಲಿ ಎಲ್ಲ ಬೆರೆದ ದೊರೆಯರು 3
--------------
ಜ್ಞಾನಬೋದಕರು
ಭವ ಬಂಧವೂ ಪಗಂಗಾಜನಕ ಖಗೊತ್ತುಂಗ ತುರಗನೆ ದೇವ ರಂಗಾಪುರಾಗಾರನೆ ಸ್ವಾ'ು ಅ.ಪದುರಿತ ಕೋಟಿಗಳ ಪರಿಹರಿಸಿ ರಕ್ಷಿಪ ನಿನ್ನ ಬರಿನಾಮಸ್ಮರಣೆಯೊಂದುಪರಿಪರಿಯ ಭವದ ಕೋಟಲೆಯ ಬಿಡಿಸುವ ನಿನ್ನ ಚರಿತೆಯ ಶ್ರವಣವೊಂದುಅರಿತರಿಯದೆಸಗಿದಘರಾಶಿಯ ದ'ಸಿ ನಿನ್ನ ಶರಣಜನ ಸಂಗವೊಂದುಇರಲಿವನು ಬಯಸಿ ಬೇಡುವೆನೆಂದು ನಿನ್ನ ಸಿರಿಚರಣದೆಡೆಗೈದಿ ಸಂತಸದಳೆದುನಿಂದೂ 1ಆವಜನ್ಮಾರ್ಜಿತದ ಸುಕೃತ ಪರಿಪಾಕವೊ ದೇವ ನಿನ್ನಯ ಕರುಣವೋಸಾವಧಾನದಿ ನಿನ್ನ ನೆನೆದು ಪೂಜಿಸಿ ನುತಿಪ ಸೇವಕರ ಪ್ರೇಮದೊಲವೋಜೀವರಾಶಿಗಳೊಳುದುಸಿ ಮಡಿಯೆ ಪುಟ'ಟ್ಟ ಭಾವಬಂದೀ ಬಣ್ಣವೋಆವುದನು ತಿಳಿಯದಜ್ಞನನು ನಿನ್ನವರೊಯ್ದು ಪಾವನಕ್ಷೇತ್ರವನು ಪೊಗಿಸಿದತಿಶಯವೋ 2ಗುರು ವಾಸುದೇವಾರ್ಯನಾಗಿ ಚಿಕನಾಗಾಖ್ಯಪುರದಿ ಮ'ಮೆಯ ತೋರ್ದೆಯೈಕರೆದಜ್ಞರಜ್ಞತೆಯ ಪರಿದು ಸುಜ್ಞಾನ ಸುಧೆಯೆರೆದು ನೀನೆ ಪೊರೆದೆಯೈಪರದೇಸಿ ವೇಷದಿಂ ಮೂಢ ಜನರಿಗೆ ಭಕ್ತಿುರವ ಕೈಸಾರಿಸಿದೆಯೈಮರೆಯೊಕ್ಕೆ ನಾನು ತಿಮ್ಮದಾಸ ದೇವ ಪರಾಕು ಕರ'ಡಿದು ಕಾಯಬೇಕೆನ್ನ ವೆಂಕಟರಮಣ 3
--------------
ತಿಮ್ಮಪ್ಪದಾಸರು
ಭವ ಬಿಡಿಸಯ್ಯ ಹರಿ ನಿನ್ನ ನಾಮ ದೃಢವಾಗಿ ನುಡಿಸಯ್ಯ ಬಿಡದೆ ಸನ್ಮಾರ್ಗದಿ ನಡೆಸಯ್ಯ ದೇವ ಗಡ ನಿನ್ನ ಕೃಪಾಕವಚ ತೊಡಿಸಯ್ಯ ಪ ಹಾಳು ಭ್ರಾಂತಿಗಳೆಲ್ಲ ಕೆಡಿಸಯ್ಯ ಎನ್ನ ಕೀಳುಯೋಚನೆ ಸರ್ವ ಕಡಿಸಯ್ಯ ಜಾಳು ಪ್ರಪಂಚದಾಸೆ ತಿಳಿಸಯ್ಯ ಸ್ವಾಮಿ ಮೂಳಮಾನವರ ಮಾತು ಮರೆಸಯ್ಯ 1 ನಿತ್ಯ ಸುಜನರೊಳಿರಿಸಯ್ಯ ಎನ್ನ ಸತ್ಯ ಶರಣರೊಳಾಡಿಸಯ್ಯ ಅರ್ತಿಯಿಂ ತತ್ವರ್ಥ ತಿಳಿಸಯ್ಯ ಎನ್ನ ಮಿಥ್ಯಗುಣಂಗಳನ್ನು ಹರಿಸಯ್ಯ 2 ಕೋಪತಾಪಂಗಳ ವಧಿಸಯ್ಯ ಎನ್ನ ಪಾಪ ಮಾಫಿಗೊಳಿಸೆನ್ನಯ್ಯ ಕೋಪಿ ಪಾಪಿಗಳಿಂದುಳಿಸಯ್ಯ ನಿನ್ನ ಗೌಪ್ಯದ ಧ್ಯಾನ ಮುನ್ನ ತಿಳಿಸಯ್ಯ 3 ಭೂತಪ್ರೇತದಂಜಿಕ್ಹರಿಸಯ್ಯ ತಂದೆ ಜಾತಿಭೀತಿ ಮೊದಲ್ಹಾರಿಸಯ್ಯ ನೀತಿಶಾಂತಿ ಸ್ಥಿರ ನಿಲ್ಲಿಸಯ್ಯ ಎನ್ನ ತಾತ ಮಾತೆ ನೀನೆ ನಿಜವಯ್ಯ 4 ನರರಿಗೆ ಎರಗಿಸದಿರಯ್ಯ ಎನ್ನ ಶಿರ ನಿನ್ನ ಚರಣದಿ ಇರಿಸಯ್ಯ ಪರಲೋಕಸಾಧನ ತೋರಿಸಯ್ಯ ಎನ್ನ ಶರಣ ನೀನಾಗು ಶ್ರೀರಾಮಯ್ಯ 5
--------------
ರಾಮದಾಸರು
ಭವ ಭಯ ಪರಿಹರಾ ಪ ಸನಕಾದಿ ಮುನಿವಂದ್ಯ | ಕನಕ ಗರ್ಭಜ ಜನಕಅನುನಯದಿ ಗೀತೆ ಫ | ಲ್ಗುಣಗೆ ಭೋಧಿಸಿದೇಎಣೆಯೆ ತವ ಕರುಣ | ಘನವರ್ಷಣಕೆ ಹರಿಅನಘ ನಿನ್ನಡಿ ನೆಳಲ | ನಾಶ್ರಯಿಪೆ ಎಂದೆಂದೂ 1 ಭುವನ ಮೋಹನ ದೇವ | ಭವಗು ಮೋಹಿಪ ಭಾವದಿವಿಭವರು ತವರೂಪ | ಯುವಗಳಿಕ್ಕದಲೇ |ಸುವನ ತ್ರಯದಲಿ ಕಂಡು | ಪವನಾಂತರಾತ್ಮಮಾಧವನೆ ಹಿಗ್ಗುತಲಿ | ಹವಿಷನರ್ಪಿಪರೋ 2 ಸರ್ವಶಬ್ಧಾಭಿಧನೆ | ಸರ್ವ ದೇವೋತ್ತಮನೆಪರ್ವ ಪರ್ವದಿ ಇದ್ದು | ಪರ್ವ ವಾಚ್ಯಾ |ದರ್ವಿಯಂದದಲಿಪ್ಪ | ಜೀವನ್ನ ಪೊರೆಯುವಸರ್ವಭಾರವು ನಿನ್ನದೊ | ಶರ್ವನೊಡೆಯಾ 3 ಇಂಬು ಅರಿ ತುಂಬಿ ಎನ್ನೊಳು ನೀನುಸಂಭ್ರಮದಿ ಕಾಯುವುದು | ಕುಂಭಿಣಿಯ ರಮಣಾ 4 ವಿಶ್ವ ತೈಜಸ ಪ್ರಾಜ್ಞ | ತ್ರೈಯವಸ್ಥೆ ಪ್ರವರ್ತಕನೆವಿಶ್ವ ವ್ಯಾಪಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಭವ ಭಯಂಕರ ಪ ಶಂಕರ ತ್ವತ್ಪದ ಪಂಕಜದಲಿ ಮನ ಶಂಕೆಯಿಲ್ಲದೆ ಕೊಟ್ಟು ಕಿಂಕರನನು ಪೊರೆ 1 ಮೃತ್ಯುಪಾಶಕೆ ಸಿಕ್ಕಿ ತತ್ತರಿಸುತಲಿದ್ದ ಭಕ್ತನ ಸಲಹಿದ ಮೃತ್ಯುಂಜಯ ಸಲಹೆನ್ನ 2 ವಿಷವು ಆವರಿಸಲು ತ್ರಿದಶರು ಬೇಡಲು ನಸುನಗುಗಲಿ ವಿಷ ಧರಿಸಿದ ಸದಾಶಿವ 3 ಶಿವಶಿವಾವಲ್ಲಭ ಭವಾಭವ ಪ್ರಭವನೆ ಭುವನ ಪವಿತ್ರನೆ ಭವಹರ ಸಲಹೆನ್ನ 4 ಅಂಬಿಕನಾಥನೆ ನಂಬಿದೆ ನಿನ್ನನೆ ಶಂಭುವೆ ಭಕ್ತನ ಬೆಂಬಿಡದೆಲೆ ಪೊರೆ 5 ಅಷ್ಟ ವಿಭೂತದ ಅಷ್ಟಮೂರ್ತಿಯೆ ಪದ ಮುಟ್ಟಿ ಭಜಿಪ ಮನ ಕೊಟ್ಟು ರಕ್ಷಿಸು 6 ದಿಗಂಬರ ದಯಾಕರ ಭಗೀರಥ ಹಿತಕರ ಅಘಹರ ಮೃಗಧರ ಹಗರಣಗೊಳಿಸಿದೆ 7 ವಿಘ್ನಪ ಜನಕನೆ ಅಜ್ಞತೆ ಬಿಡಿಸಯ್ಯ ಸುಜ್ಞನೆ ಭವಾಂಬುಧಿ ಮಗ್ನನನುದ್ಧರಿಸಯ್ 8 ಲಕುಮಿಕಾಂತನ ಪ್ರಿಯಸÀಖನೆ ಶ್ರೀಕಂಠನೆಭಕುತಿ ಭಾಗ್ಯವನೀಯೊ ಶಕುತ ಬಿಡದೆ ಕಾಯೊ 9
--------------
ಲಕ್ಷ್ಮೀನಾರಯಣರಾಯರು
ಭವ ಭಯದಾ ಕೊಳೆ ತೊಳೆÉದಾನಂದವೀವ ಸಾರಂಸಂಸಾರ ಸಾರಂ ಪ. ಸುಳಿದು ಯಮಭಟರೆಳೆಯುವ ಕಾಲದಿ ಪರಿ ಸಾರ ಮನುಜರು ಅ.ಪ. ಅಳಿದವರಾರು ಝಳಝಳ ಮನದಿಂ ಕಳೆಗೊಟ್ಟಿಹ ಪುರುಷನಾರುಂ ಸಲೆ ನಾರದರಲ್ಲದೆ ಯಿದನಂ ಸೆಳೆದುರೆ ಭಕ್ತಿಯೊಳ್ ಹರಿಯಂ ಅಳವಲ್ಲದಾನಂದದಿಂ ಹರಿ ಸುಳಿವ ಪೊಳೆವ ಮನದೊಳಗಿಹನೆನುತಂ ಸಾರಿ ಹರಿದನಂ ಸಾರಂ ಸಂಸಾರಂ 1 ಅರ್ಣವದೊಳು ಭವಾರ್ಣ ನಿರ್ಮಾಣನ ಕರ್ನದೊಳಾಲಿಸಿ ಧ್ವನಿಮಾಡಿ ನಿರ್ಣಯದಲಿ ಸ್ವರ್ಣರೂಪನ ಜೀರ್ಣಿಪ ವೀಣಾನಾದದೀ ಸಾರಂ ಕರ್ಣಾನಂದದಿ ಹಾಡಿದನಾರುಂ ವರ್ಣಾಶ್ರಮ ಧರ್ಮ ಮರ್ಮವರಿತು ಚರ್ಮಸುಖವಳಿದು ಪೂರ್ಣಜ್ಞಾನದ ಪುರಂದರದಾಸರಲ್ಲಿದೆ ಈ ಸಾರಂ ಸಂಸಾರಂ 2 ತರಲಾನಂದದಿಂ ಸರಿಗಮ ಪದನಿಸ ಸನಿದಪ ಮಗರಿಸ ಶೋಡಷಕ್ಷರದಿಂ ತರಲಾ ಸಂಗೀತಕೆ ಸರಳಾಗಿಹ ಹರಿ ನಾಮಾಮೃತವಂ ಧರಿಶಿದ ಪುರಂದರರಂ ಶರಣ ಭರಣ ಕರುಣ ಪಡೆವುದು ನಿರುತ ಹರಿ ಶರಣರೆನುತ ಅರುಹಿದ ಸಂಗೀತವೀ ಸಾರಂ ಸಂಸಾರಂ 3 ಈ ತೆರ ಭಜಿಸಿದಗ್ಯಾತರ ಭಯ ಪಾತಕಹರ ಜಗದೀಶ ಮಾನಸ ದಾತುರದೊಳು ಹರಿ ದಾತನೆಂದರಿತು ನೀತಾಚಾರದಿ ಯಾವಾತ ಸ್ತುತಿಸಲು ಜ್ಯೋತಿ ಪ್ರಕಾಶದಿ ತನುಜಾತನಾಗಿ ಬಹ ಪ್ರೀತಿಗೊಡುತ ಖ್ಯಾತ ಭಕ್ತ ಪಾರಿಜಾತನೆಂದು ತಿಳಿದಾತಗೆ ಇದು ಸಾರಂ ಸಂಸಾರಂ 4 ಭಗವಂತನ ಧ್ಯಾನಿಪನ ಪುಡುಕುತ ಮಿಗೆ ಸಂಚರಿಸುತಲಿಹರೀಗಲು ಭಾಗವತರಿದು ಸತ್ಯಂ ಜಗಕೆ ಜಗದೀಶ ಶ್ರೀ ಶ್ರೀನಿವಾಸನೆಂದು ಮಿಗೆ ಜಗದಾನಂದ ಪುಳಕಿತ ತನುವಿನ ಜೀವರ ಸೊಗವಿಲಿ ನಾಲ್ಮೊಗನೈಯ್ಯನು ಸಿಗುವ ಪರಿಯಗೊಡುತಗಣಿತ ಮಹಿಮರು ಕರುಣಿಸಿದೀ ಸಾರಂ ಸಂಸಾರಂ 5
--------------
ಸರಸ್ವತಿ ಬಾಯಿ
ಭವ ಸಂಕಟ ಪರಿಹರಿಸೊ ಕಿಂಕರನೆಂದೆನಿಸೊ ಪ ಶಂಕೆಯಿಲ್ಲದೆ ಪಾದಪಂಕಜ ಪೂಜಿಸಲೂಮಂಕುಮತಿಯ ಕಳೆವಾ ಅಕಳಂಕನೆಂದೆನಿಸುವಾ ಅ.ಪ. ಕಲಿಯುಗದೊಳು ಕಲಿ ಬಾಧೆಗೆ ಒಳಗಾಗಿ ಬಹುವಿಧವಾಗಿಒಲಿಸದೆ ವರಗುರು ಹಿರಿಯರ ನಿಂದಿಸುತಾ ವೇಳೆಗಳೆಯುತಾಗಳಿಸಿದೆ ಪಾಪವ ಚರಿಸುತ ಧರೆಯೊಳಗೆ ತೊಳಲುವೆ ತಮದೊಳಗೇಘಳಿಲನೆ ರಕ್ಷಿಸೊ ಬಾಲಕರನು ದೇವಾ ಎನ್ನಯ ಕುಲದೈವಾ 1 ಸಾಧನೆಗೋಸುಗ ಮೇದಿನಿಗೆ ಬಂದು ಸಾಧಿಸದೆ ಬಂದುಶೋಧಿಸುವೆನು ಪುರುಷಾರ್ಥದ ಮಾರ್ಗವನು ಮೋದವ ಪೊಂದುವೆನುಭೇದವ ತಿಳಿಯದೆ ಹಾದಿಯ ತಪ್ಪಿರುವೆ ಖೇದವ ಪುಡುತಿರುವೆಸಾದರದಲಿ ತವ ಪಾದದಿ ಧ್ಯಾನವನು ಒದಗಿಸಬೇಕಿನ್ನು 2 ಮಂದ ತಾಪ ಬಿಡಿಸೊ ಕರುಣವ ತೋರಿಸೊಆರು ಮೂರು ವಿಧ ಭಕ್ತಿಯನೆ ಈಯೋ ಕರಪಿಡಿದು ಕಾಯೋಸಾರುವ ಭಕುತರ ಧೀರ ವೃಂದದೊಳಗೆ ಸೇರಿಸೊ ಜವದೊಳಗೆಧಾರುಣೀಶ ತಂದೆವರದವಿಠಲನೆ ಶರಣೆಂಬೆನು ನಾನೇ 3
--------------
ಸಿರಿಗುರುತಂದೆವರದವಿಠಲರು
ಭವ ಹರಣ ನತ ಶರಣ ಪ ಲೀಲಾ ವಿನೋದದಲಿ ಮೂಜಗವ ಸೃಜಿಸಿ ಪಾಲಿಸುವೆ ನಿನ್ನ ವ್ಯಾಪಾರವನುಸರಿಸಿ ಕಾಲಕಾಲಾರ್ಚಿತನೆ ಕಲುಷಹರನೆಂದು ನೀಲಾಹಿವೇಣಿಯರು ನಿನ್ನ ತೂಗುವರು 1 ಶೇಷ ಪರಿಯಂಕದಲಿ ಶ್ರೀ ಸಮೇತದಲಿ ತೋಷದಿಂ ಪವಡಿಸುವೆ ಪ್ರಳಯ ವಾರಿಯಲಿ ಭಾಷಾಪತಿಯ ಪಡದೆ ನಾಭಿ ಕಮಲದಲಿ ಪೋಷಿಸುವೆ ಜೀವರನು ಸರ್ವಕಾಲದಲಿ 2 ಶ್ರೀರಾಮ ಮಾಧವಾಶ್ರಿತಜನೋದ್ಧಾರಾ ನಾರಾಯಣಾಚ್ಚುತಾನಂತಾವತಾರ ವಾರಿಜಾಯತ ನೇತ್ರ ಗುರುರಾಮವಿಠಲಾ 3
--------------
ಗುರುರಾಮವಿಠಲ
ಭವ ಶರಧಿ ತಾರಕನೇ - ನಾಕರವಾ ಮುಗಿವೆ - ಎನ್ನ ಕರುಣದಲ್ಲಿ ನೋಡೋ ಪ ಎರಡು ಭಾಗದಿ ಶ್ರೀ ಧರಣೇರಿಂದೊಪ್ಪುತತ್ವರಿತದಿ ದಯಮಾಡು ಉರಗಾಗಿರಿ ವೆಂಕಟ ಅ.ಪ. ತೇರಿನೊಳಿಪ್ಪ ಶೃಂಗಾರ ಪುರುಷನೆ ಬಂ-ಗಾರ ಮಾಣಿಕದಲಂಕಾರವ ಧರಿಸಿದಮಾರಮಣನೆ ವನಜಾರಿವದನ ಬಲು-ಶೂರ ಸಮರಧೀರ ನಾರಾಯಣ ಕಂಸಾರೇ ||ನರ ಕಂಠೀರವ ಕಮಲನಾಭನಾರದ ಮುನಿ ಪ್ರಿಯ ಚಾರು-ಚರಿತ ಪನ್ನಗಾರಿಗಮನ ಮದ-ನಾರಿಯ ಸಲಹಿದ ಧೀರ ಮುರಾರಿ 1 ನಿಂದರೆ ಬಪ್ಪುದು ಸಿಂಧುಶಯನ ದಯ-ದಿಂದ ಎನ್ನನು ನೋಡು-ಕಣ್ದೆರೆದೀಕ್ಷಿಸಿ |ಕಂದಗೊಲಿದು ಕಂಬದಿಂದ ಬಂದಸುರನಕೊಂದು ಕರುಳಹಾರ ಕಂಧರದಿ ತಾಳಿದೇ ||ಮಂದಮತಿವನೆಂದಲೇ ಗೋ-ವಿಂದ ಗೋವಳ ವೃಂದದೊಡನೆ ಕಾ-ಳಿಂದಿಯ ಧುಮುಕಿ-ಫಣೀಂದ್ರನ ಶಿರದಲಿಧಿಂ ಧಿಮಿ ಧಿಮಿಕೆಂದು ಕುಣಿದ ಹರಿ 2 ಜಲದೊಳ ಪೊಕ್ಕು ಆ ಇಳೆಯ ತಸ್ಕರನು ದುಂ-ಬಲಗೊಂಡು ಮಡುಹಿ ನಂಬಿದ ಪ್ರಹ್ಲಾದ ಹಂ-ಬಲಿಸೆ ಧರ್ಮದಿ ಕಾಯ್ದೆ ಸಲೆ ಕ್ಷತ್ರಿಯಕುಲವನಳಿದೆ-ನಿನ್ನೊಳು ನೀನೇ ಕಾಯ್ದೆ ||ಮಲೆತ ಮಾವನ ಕೊಂದೆ ಸಲೆಖಳ ತ್ರಿಪುರನ ಗೆದ್ದು ಕಲಿಯ ಸಂಹರಿಸಿದೆಸುಲಭ ಮೂರುತಿ ಮೋಹನವಿಠ್ಠಲಚೆಲುವ ತಿರುವೇಂಗಳ 3
--------------
ಮೋಹನದಾಸರು
ಭವ ಶರಧಿಯ ದಾಟಿ | ಸ್ಥಿರ ಭಾಗ್ಯವುಣ್ಣೀ ಪ ಸಾರ ಮುಖದೊಳಗಾನಂದವಾಗಿ ತೋರುವದೂ 1 ಗುರು ಪದ ಭಕ್ತಿ ತನ್ನೊಳು ತಾನೆ ಪುಟ್ಟುವದೂ 2 ಭವ ರೋಗ ಗುಣವಾಗಿ ಸುಖವು ಹೊಂದುವದೂ | ಲೋಕಾತ್ಮಕ ಶ್ರೀನಿವಾಸ ಸದಾನಂದವಹುದೂ 3
--------------
ಸದಾನಂದರು
ಭವ ಸಂಸಾರ ಶರಧಿಯ ಗುರು ಅಂಬಿಗ ದಾಟಿಸಿದಶಿವನ ಮಾಡುತಲೆನ್ನ ಮುಕ್ತಿಗೇರಿಸಿದ ಪ ಬಯಕೆಗಳೆಂಬ ತೆರೆಯು ತಾಪತ್ರಯಗಳೆ ಲಹರಿಯುಪ್ರಿಯಗಳೆಂಬುವೆ ನೊರೆಯು ಕ್ಲೇಶವೆಂಬುದೆ ಹರಿಯು 1 ತಿಳಿವು ಇಲ್ಲದ ಮಡುವು ಕಸಿವಿಸಿ ಎಂಬುದೆ ದಡವುಬಲು ಅವಿವೇಕವೆ ಗುಡುಗು ಸುಖದುಃಖಗಳೆಂಬುವು ತೆರೆಯು 2 ಸುಳಿ 3 ಸಂದಣಿಯೆಂಬುವು ಜಲಚರವು ಸಡಗರವೆಂಬುದೆ ತಳವುಹೊಂದಿಹ ಚಿಂತೆಯೆ ದಡವು ಸ್ಥಿರವಿಲ್ಲದುದೇ ಗಡುವು 4 ಜ್ಞಾನದ ನಾವೆಗಳಿಂದ ಪ್ರಣವದ ಹುಟ್ಟುಗಳಿಂದದಾಟಿಸಿದ ಚಿದಾನಂದ ಅಂಬಿಗ ಛಲದಿಂದ 5
--------------
ಚಿದಾನಂದ ಅವಧೂತರು
ಭವಗಳನು ಖಂಡಿಸೆಂದು ಬಂದು ಬೇಡಿದೆ ಪ ಅರುಹಿನೊಳಗೆ ಇರಿಸಿಯೆನ್ನ ಮರವೆಯನ್ನು ಅಳಿಸೊಮುನ್ನಾ ಪರಮ ನೀನೆಯಾಗಿಯಾ ನಿಜದರುಹ ತೋರಿಸೈ 1 ಅಣುವಿನೊಳಗೆ ಅಣುವೆಯಾದ ಪ್ರಣವ ಜ್ಯೋತಿಯನ್ನು ತೋರೊ ತ್ರಿಣೆಯ ನೀನೆಯಾದಡೆ ನಾಂ ಪ್ರಣಿತನಾಗುವೇ 2 ಮೂರು ಐದರಿವುಗಳನ್ನು ಮೀರಿಹೋಗುವಂಥ ಮನವಾ ನಾರಿಕೈಯೊಳ್ ಕೋಟ್ಯಾತಕಿಂತು ನಟಿಸುತಿರುವಿಯೋ 3 ಪಾರುಗಾಣಿಸಯ್ಯ ನೀ ಸಂಸಾರ ಶರಧಿಯನ್ನು ಶಂಭು ಕೋರಿಕೆ ಈಡೇರಿಸಯ್ಯ ಅಪಾರಲಿಂಗವೇ 4 ಪರಮ ತತ್ವೋಕ್ತಾಧಿಕಾರಿ ಸುರಮುನೀಂದ್ರಾಕಾಶಪತಿ ಗುರುವು ತುಲಶಿರಾಮನೆ ತ್ವಚ್ಚರಣ ಶರಣಯ್ಯ5
--------------
ಚನ್ನಪಟ್ಟಣದ ಅಹೋಬಲದಾಸರು
ಭವಭಯಹರ ಶ್ರೀ ಮುಕ್ಕುಂದ ಭವರೋಗಕ್ವೈದ್ಯ ಶ್ರೀ ಗೋವಿಂದ ಪ ಧ್ರುವ ದ್ರುಪದತನುಜಾತೆಯೊರೆದ ಹರಿ ಶಿವನುತ ಸಚ್ಚಿತ್ತಾನಂದ ಅ.ಪ ಪಂಕಜಾನಪಿತ ಗೋವಿಂದ ಕಿಂಕರಾಶ್ರಿತ ಗೋವಿಂದ ಶಂಖಧಾರಣ ಸಿರಿಗೋವಿಂದ ಶಂಖಾಸುರನ ಹರ ಗೋವಿಂದ ಮಂಕು ದನುಜಕುಲ ಬಿಂಕ ಮುರಿದ ಅಕ ಳಂಕಮಹಿಮ ಮಹ ಗೋವಿಂದ1 ಸ್ಮರಿಪ ನೆರೆವಾಸ ಗೋವಿಂದ ದುರುಳರ ಕುಲನಾಶ ಗೋವಿಂದ ದುರಿತ ನಿವಾರಣ ಗೋವಿಂದ ಶರಣಜನರಪ್ರಾಣ ಗೋವಿಂದ ತರಳನೋದ್ಧಾರಣ ಕರಿರಾಜವರದನ ತರುಣೆಯ ರಕ್ಷಣ ಗೋವಿಂದ 2 ಜಗದಾಧಾರನೆ ಗೋವಿಂದ ಸುಗಣಗುಣಾಂತರಂಗ ಗೋವಿಂದ ರಘುಕುಲಪಾವನ ಗೋವಿಂದ ಖಗಪತಿವಾಹನ ಗೋವಿಂದ ನಿಗಮಕೆ ಸಿಲುಕದ ಅಗಾಧ ಮಹಿಮ ಜಗತ್ರಯ ಮೋಹನ ಗೋವಿಂದ 3 ನೀಲಮೇಘಶ್ಯಾಮ ಗೋವಿಂದ ಕಾಲಕಾಲಹರ ಗೋವಿಂದ ಪಾಲಸಾಗರಶಾಯಿ ಗೋವಿಂದ ಲೋಲ ವಿಶ್ವರೂಪ ಗೋವಿಂದ ಪಾಲಭಜಕ ಭವ ಜಾಲಹರಣ ಸರ್ವ ಮೂಲಮಂತ್ರ ಹರಿ ಗೋವಿಂದ 4 ಭೂಮಿಜಾತೆಪತಿ ಗೋವಿಂದ ಕಾಮಜನಕ ಶ್ರೀಶ ಗೋವಿಂದ ಕೋಮಲಾಂಗ ರಂಗ ಗೋವಿಂದ ಸ್ವಾಮಿ ಪುಣ್ಯನಾಮ ಗೋವಿಂದ ಶಾಮವರ್ಣನುತ ಪ್ರೇಮಮಂದಿರ ಶ್ರೀ ರಾಮ ದಾಮೋದರ ಗೋವಿಂದ 5
--------------
ರಾಮದಾಸರು
ಭಾಗಣ್ಣಾ | ಗುರು ನಿನ್ನ ಪೊಗಳುವೆನಯ್ಯಾಕರುಣದಿ ಪಿಡಿಕೈಯ್ಯಾ | ಮುರಹರ ಕುವರಯ್ಯಾ ಪ ನಗಧರ ಮೊಮ್ಮಗ ಮಗನೀ ಯೆನ್ನನುಖಗವರ ವಹ ಪ್ರಿಯ ಪಾಲಿಸೊ ಜೀಯಾ ಅ.ಪ. ಜ್ಞಾನ ಸದ್ಭಕ್ತಿ ವಿರಕ್ತಿಯ ಮೂರ್ತೀ | ಸಾರುವೆ ತವಕೀರ್ತೀಗಾನ ಲೋಲನ ಸೇವಿಸೆ ಜಾಗರ್ತೀ | ಮಾಡುವೆ ಶರಣಾರ್ತೀ |ಘನ್ನ ಮಹಿಮ ಕಾರುಣ್ಯ ಮೂರುತೀಎನ್ನವ ಗುಣ ಮರೆದು ಸಲಹೊ ವಿಶ್ವಂಭರ 1 ಜಲಧಿ ವಿಹಾರನೆಸುಲಭದಿ ಸಾಧನ ಪಾಲಿಸೋ ಜೀಯ 2 ಅರುಹಲೇತಕೊ ಎನದುರಿತ ಸಮೂಹ | ನೀನಲ್ಲವೆ ದುರಿತಹರತುರು ತನ್ನ ಕರುವನೆ ಮರೆವುದೆ ಆಹಾ | ಪಾಲಿಸು ತವನೇಹಾಸಿರಿಪತಿ ಗುರುಗೋವಿಂದ ವಿಠಲನಚರಣಾಂಬುಜದೊಳು ನಿಲಿಸೆಲೊ ಮನವಾ 3
--------------
ಗುರುಗೋವಿಂದವಿಠಲರು